Tag: ಗ್ರಾಮ ಪಂಚಾಯಿತಿ

  • ಫಲಾನುಭವಿಗಳ ಹಣವನ್ನು ತಂದೆ-ಸಹೋದರನ ಖಾತೆಗೆ ಹಾಕಿದ ಡಾಟಾ ಎಂಟ್ರಿ ಆಪರೇಟರ್!

    ಫಲಾನುಭವಿಗಳ ಹಣವನ್ನು ತಂದೆ-ಸಹೋದರನ ಖಾತೆಗೆ ಹಾಕಿದ ಡಾಟಾ ಎಂಟ್ರಿ ಆಪರೇಟರ್!

    ಮೈಸೂರು: ಜನರಿಗೆ ನೀಡಬೇಕಿದ್ದ ಸ್ವಚ್ಛಭಾರತ್ ಮಿಷನ್ ಯೋಜನೆಯ ಹಣವನ್ನು ಡಾಟಾ ಎಂಟ್ರಿ ಆಪರೇಟರ್, ತನ್ನ ತಂದೆ ಹಾಗೂ ಸಹೋದರನ ಖಾತೆಗೆ ಜಮಾ ಮಾಡಿರುವ ಪ್ರಕರಣ ಮೈಸೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

    ನಂಜನಗೂಡು ತಾಲೂಕಿನ ವರುಣಾ ಕ್ಷೇತ್ರ ವ್ಯಾಪ್ತಿಯ ಹೊರಳವಾಡಿ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮ ನಡೆದಿದೆ. ಗ್ರಾಮ ಪಂಚಾಯಿತಿಯ ಡಾಟಾ ಎಂಟ್ರಿ ಆಪರೇಟರ್ ಚಾಂದಿನಿ, ಫಲಾನುಭವಿಗಳಿಗೆ ತಲುಪಬೇಕಾದ ಪ್ರೋತ್ಸಾಹ ಧನವನ್ನು ತನ್ನ ತಂದೆ ಹಾಗೂ ಸಹೋದರನ ಖಾತೆಗೆ ವರ್ಗಾಯಿಸಿದ್ದಾರೆ. ಚಾಂದಿನಿ ಇದುವರೆಗೂ ತನ್ನ ತಂದೆ ಖಾತೆಗೆ 27 ಸಾವಿರ ಹಾಗೂ ಸಹೋದರನ ಖಾತೆಗೆ 36 ಸಾವಿರ ಹಣ ವರ್ಗಾವಣೆ ಮಾಡಿದ್ದಾರೆ.

    ಈ ಸಂಬಂಧ ಡಾಟಾ ಆಪರೇಟರ್ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಒಟ್ಟು 63 ಸಾವಿರ ಹಣ ದುರುಪಯೋಗ ಆಗಿರುವುದು ಬೆಳಕಿಗೆ ಬಂದಿದೆ.

  • ಪಂಚಾಯ್ತಿಯತ್ತ ಸುಳಿಯದ ಪಿಡಿಓಗಾಗಿ ಗ್ರಾಮಸ್ಥರಿಂದ ಹುಡುಕಾಟ!

    ಪಂಚಾಯ್ತಿಯತ್ತ ಸುಳಿಯದ ಪಿಡಿಓಗಾಗಿ ಗ್ರಾಮಸ್ಥರಿಂದ ಹುಡುಕಾಟ!

    ಕಲಬುರಗಿ: ಜಿಲ್ಲೆಯ ಸೇಂಡ ತಾಲೂಕಿನ ರಂಜೋಳ ಗ್ರಾಮದ ಗ್ರಾಮಸ್ಥರು ಪಂಚಾಯ್ತಿ ಕಡೆಗೆ ಸುಳಿಯದ ಪಿಡಿಓಗಾಗಿ ವಿನೂತನ ಪ್ರತಿಭಟನೆ ಕೈಗೊಂಡಿದ್ದಾರೆ.

    ರಂಜೋಳ ಗ್ರಾಮ ಪಂಚಾಯ್ತಿ ಪಿಡಿಓ ವಿದ್ಯಾಶ್ರೀಯವರು ಹಲವು ತಿಂಗಳುಗಳಿಂದ ಗ್ರಾಮದತ್ತ ಸುಳಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಿಡಿಓ ನಾಪತ್ತೆಯಾಗಿದ್ದರೆಂದು ಭಿತ್ತಿ ಪತ್ರ ಹಂಚಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ.

    ಪಿಡಿಓ ನಾಪತ್ತೆಯಾಗಿದ್ದಾರೆಂದು ಭಿತ್ತಿ ಪತ್ರ ಸಿದ್ಧಪಡಿಸಿ ರಂಜೋಳ ಗ್ರಾಮ ಪಂಚಾಯ್ತಿ ಸೇರಿದಂತೆ, ಸೇಡಂ ತಾಲೂಕು ಪಂಚಾಯ್ತಿ ಹಾಗೂ ಹಲವು ಕಡೆ ಪೋಸ್ಟರ್ ಅಂಟಿಸಿದ್ದಾರೆ. ಪೋಸ್ಟರ್ ನಲ್ಲಿ ರಂಜೋಳ ಗ್ರಾಮ ಗಬ್ಬೆದ್ದು ಹೋದರು ಪಿಡಿಓ ನಾಪತ್ತೆ ಎಂದು ನಮೂದು ಮಾಡಿದ್ದಾರೆ. ಅಲ್ಲದೇ ಪಿಡಿಓ ಅವರನ್ನು ಎಲ್ಲಾದ್ರೂ ಕಂಡರೆ ರಂಜೋಳ ಗ್ರಾಮಸ್ಥರಿಗೆ, ಇಲ್ಲವೆ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿ ಎಂದು ತಮ್ಮ ಆಕ್ರೊಶ ವ್ಯಕ್ತಪಡಿಸಿದ್ದಾರೆ.

  • ತಾಲೂಕು ಕಚೇರಿಯನ್ನೂ ನಾಚಿಸ್ತಿದೆ ಗ್ರಾಮ ಪಂಚಾಯಿತಿ ಕಟ್ಟಡ – ಆಡಳಿತಕ್ಕಾಗಿ ಜನರೇ ನಿರ್ಮಿಸಿಕೊಂಡ ಬಿಲ್ಡಿಂಗ್

    ತಾಲೂಕು ಕಚೇರಿಯನ್ನೂ ನಾಚಿಸ್ತಿದೆ ಗ್ರಾಮ ಪಂಚಾಯಿತಿ ಕಟ್ಟಡ – ಆಡಳಿತಕ್ಕಾಗಿ ಜನರೇ ನಿರ್ಮಿಸಿಕೊಂಡ ಬಿಲ್ಡಿಂಗ್

    ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಹಳ್ಳಿಸಲಗರ ಗ್ರಾಮದಲ್ಲಿರುವ ಗ್ರಾಮ ಪಂಚಾಯ್ತಿ ಕಟ್ಟಡವನ್ನು ಸ್ವತಃ ಗ್ರಾಮಸ್ಥರೇ ನಿರ್ಮಾಣ ಮಾಡಿಕೊಂಡಿದ್ದು, ಇದೀಗ ಎಲ್ಲರಿಗೂ ಮಾದರಿಯಾಗಿದ್ದಾರೆ.

    ಈ ಕಟ್ಟಡ ತಾಲೂಕು ಕಚೇರಿಯನ್ನು ನಾಚಿಸುವಂತಿದೆ. 2015-16ರ ನರೇಗಾ ಯೋಜನೆಯಡಿ ಈ ವ್ಯವಸ್ಥಿತ ಕಟ್ಟಡ ನಿರ್ಮಿಸಿದ್ದಾರೆ. ಗ್ರಾಮಸ್ಥರ ಈ ಕಾರ್ಯಕ್ಕೆ ಅಂದಿನ ಜಿಲ್ಲಾ ಪಂಚಾಯತ್ ಸಿಇಓ ಅನಿರುದ್ಧ ಶ್ರವಣ್ ಸಾಥ್ ನೀಡಿದ್ದಾರೆ. ಕಟ್ಟಡ ನಿರ್ಮಾಣ ಮಾಡಲು 30 ಲಕ್ಷ ರೂ. ಖರ್ಚು ಮಾಡಲಾಗಿದ್ದು, ಗ್ರಾಮಮಸ್ಥರೆಲ್ಲರೂ ಪಕ್ಷಬೇಧ ಮರೆತು ಈ ಕಾರ್ಯಕ್ಕೆ ಸಾಥ್ ನೀಡಿದ್ದಾರೆ.

    ಗ್ರಾಮ ಪಂಚಾಯತ್ ಅಧ್ಯಕ್ಷ ಈ ಕುರಿತು ಮಾತನಾಡಿ, ತಮ್ಮ ಊರಿಗೆ ಸುವ್ಯವಸ್ಥಿತ ಕಾರ್ಯಾಲಯ ನಿರ್ಮಾಣ ಮಾಡಲು ಎಲ್ಲಾ ಗ್ರಾಮಸ್ಥರ ಸಹಕಾರ ನೀಡಿದ್ದಾರೆ. ಅಲ್ಲದೇ ಸರ್ಕಾರದ ನರೇಗಾ ಯೋಜನೆಯನ್ನು ನಿರ್ಮಾಣ ಮಾಡಲಾಗಿದೆ. ಇದಕ್ಕೂ ಮುನ್ನ ಕೆರೆಯ ಅಭಿವೃದ್ಧಿ ಹಾಗೂ ಇತರೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾಗಿ ಹೇಳಿದ್ದಾರೆ.

    ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯ ಮಾಡಲು ಯಾವುದೇ ಪಕ್ಷ ಬೇಧ ಮಾಡುವುದಿಲ್ಲ. ಅಲ್ಲದೇ ಸರ್ಕಾರದ ಅಧಿಕಾರಿಗಳು ಸಹ ಇದಕ್ಕೆ ಸಾಥ್ ನೀಡಿದ್ದಾರೆ. ಕೇವಲ ಗ್ರಾಮದಲ್ಲಿ ಕಟ್ಟಡ ನಿರ್ಮಾಣ ಮಾಡಲಷ್ಟೇ ಸಿಮೀತವಾಗಿಲ್ಲ. ಒಂದು ಉತ್ತಮ ಕಾರ್ಯ ನಡೆದರೆ ಮತ್ತಷ್ಟೂ ಅನುದಾನ ಪಡೆದು ಗ್ರಾಮದ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಎಂದು ಗ್ರಾಮಸ್ಥ ವಸಂತ ರಾವ್ ಪಾಟೀಲ್ ಹೇಳಿದ್ದಾರೆ.

    https://www.youtube.com/watch?v=Wo19bNxXB7M

     

  • ಗ್ರಾಮ ಪಂಚಾಯಿತಿಯಲ್ಲೇ ಮಹಿಳಾ ಸಿಬ್ಬಂದಿಯೊಂದಿಗೆ ಪಿಡಿಓ ಕುಚ್..! ಕುಚ್..!

    ಗ್ರಾಮ ಪಂಚಾಯಿತಿಯಲ್ಲೇ ಮಹಿಳಾ ಸಿಬ್ಬಂದಿಯೊಂದಿಗೆ ಪಿಡಿಓ ಕುಚ್..! ಕುಚ್..!

    ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ಪಿಡಿಓ ಅನಂತ ಪದ್ಮನಾಭ್ ನಾಯಕ್ ಮಹಿಳಾ ಸಿಬ್ಬಂದಿಯ ಜೊತೆ ರಾಸಲೀಲೆ ನಡೆಸಿದ ದೃಶ್ಯಗಳು ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿದೆ.

    ಅನಂತ ಪದ್ಮನಾಭ ನಾಯಕ್ ಒಂದು ವರ್ಷದಿಂದ ನಾಲ್ಕೂರು ಗ್ರಾಮ ಪಂಚಾಯತ್ ನಲ್ಲಿ ಪಿಡಿಓ ಆಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಕರ್ತವ್ಯದ ವೇಳೆ ಸರ್ಕಾರಿ ಕಚೇರಿಯಲ್ಲೆ ಕಾಮದಾಟ ನಡೆಸಿರುವುದು ಬೆಳಕಿಗೆ ಬಂದಿದೆ. ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವಿವಾಹಿತ ಯುವತಿಯನ್ನು ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಾನೆ.

    ಮಹಿಳಾ ಸಿಬ್ಬಂದಿಯ ಜೊತೆ ಅಸಭ್ಯ ವರ್ತನೆ ನಡೆಸಿರುವುದಲ್ಲದೇ ಕಾನೂನು ಬಾಹಿರ ಚಟುವಟಿಕೆ, ಭ್ರಷ್ಟಚಾರದಲ್ಲಿ ಭಾಗಿಯಾಗಿರುವ ಆರೋಪ ಕೂಡ ಈತನ ಮೇಲಿದೆ. ಮಾಜಿ ಮಿಲಿಟರಿ ಅಫೀಸರ್ ಅಗಿರುವ ಈತ ಸರ್ಕಾರಿ ಕಚೇರಿಯಲ್ಲಿ ಯುವತಿಯನ್ನು ಬಳಸಿಕೊಂಡಿರುವುದನ್ನು ಸಮತಾ ಸೈನಿಕ ದಳ ಖಂಡಿಸಿದೆ.

    ಪಿಡಿಓ ಅನಂತ ಪದ್ಮನಾಭ ನಾಯಕ್ ವಿರುದ್ಧ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ನೀಡಿದೆ. ಯುವತಿಯನ್ನು ಆತ್ಯಾಚಾರ ಹಾಗೂ ಕರ್ತವ್ಯ ಲೋಪ ನಡೆಸಿರುವುದರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು, ಕೂಡಲೇ ಕೆಲಸದಿಂದ ವಜಾ ಮಾಡಬೇಕು ಅಂತ ಕುಂದಾಪುರದ ಸಮತಾ ಸೈನಿಕ ದಳ ಒತ್ತಾಯಿಸಿದೆ.

  • ಸಿಸಿಟಿವಿ ಹಾಕಿ ಅಂದ್ರೆ ಗಲಾಟೆ ಮಾಡಿದ್ರು – ಗ್ರಾಮ ಪಂಚಾಯ್ತಿ ಸದಸ್ಯನ ಕಿವಿ ಕಚ್ಚಿ ಪೀಸ್ ಪೀಸ್

    ಸಿಸಿಟಿವಿ ಹಾಕಿ ಅಂದ್ರೆ ಗಲಾಟೆ ಮಾಡಿದ್ರು – ಗ್ರಾಮ ಪಂಚಾಯ್ತಿ ಸದಸ್ಯನ ಕಿವಿ ಕಚ್ಚಿ ಪೀಸ್ ಪೀಸ್

    ತುಮಕೂರು: ಸಿಸಿಟಿವಿ ಹಾಕಿ ಎಂದು ಗಲಾಟೆ ನಡೆದಿದ್ದು, ಮಾತಿಗೆ ಮಾತು ಬೆಳೆದು ಗ್ರಾಮ ಪಂಚಾಯ್ತಿ ಸದಸ್ಯನ ಕಿವಿ ಕಚ್ಚಿ ಪೀಸ್ ಪೀಸ್ ಮಾಡಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಶೆಟ್ಟಿಕೆರೆ ಗ್ರಾಮದಲ್ಲಿ ನಡೆದಿದೆ.

    ಗ್ರಾಮ ಪಂಚಾಯ್ತಿ ಸದಸ್ಯ ಜಗದೀಶ್ ಅವರ ಕಿವಿ ತುಂಡು ತುಂಡಾಗಿದೆ. ಇವರು ಗ್ರಾಮ ಪಂಚಾಯ್ತಿಯಲ್ಲಿ ಸ್ಥಗಿತಗೊಂಡ ಸಿಸಿಟಿವಿಯನ್ನು ದುರಸ್ಥಿ ಮಾಡಿ ಎಂದು ಆಗ್ರಹಿಸಿದ್ದರು. ಆದರೆ ಇದಕ್ಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನಾಗಮಣಿ ಪತಿ ಪರಮೇಶ್ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿದೆ.

    ಅಧ್ಯಕ್ಷೆ ನಾಗಮಣಿ ಹಾಗೂ ಸದಸ್ಯ ಜಗದೀಶ್ ಇಬ್ಬರೂ ಜೆಡಿಎಸ್ ಬೆಂಬಲಿತ ಸದಸ್ಯರೇ ಆದರೂ ಅಷ್ಟಕ್ಕೇ ಸಿಟ್ಟಿಗೆದ್ದ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪತಿ, ಸದಸ್ಯ ಜಗದೀಶ್ ಕಿವಿಯನ್ನೇ ಕಚ್ಚಿ ತುಂಡು ಮಾಡಿದ್ದಾನೆ.

    ಶುಕ್ರವಾರ ಪಂಚಾಯ್ತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಗದೀಶ್ ಅವರು ಇನ್ನೊಮ್ಮೆ ಸಿಸಿಟಿವಿ ಅಳವಡಿಕೆಗೆ ಒತ್ತಾಯ ಮಾಡಿದಾಗ ಅಧ್ಯಕ್ಷೆ ನಾಗಮಣಿ ಪತಿ ಪರಮೇಶ್, ಜಗದೀಶ್ ಮನೆಗೆ ನುಗ್ಗಿ ಜಗಳವಾಡಿ ಕಿವಿ ಕಚ್ಚಿದ್ದಾನೆ. ಕಚ್ಚಿದ ರಭಸಕ್ಕೆ ಜಗದೀಶ್ ಅವರ ಕಿವಿ ತುಂಡಾಗಿದ್ದು, ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆ ವೇಳೆ ಸದಸ್ಯನೇ ಅಪಹರಣ

    ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆ ವೇಳೆ ಸದಸ್ಯನೇ ಅಪಹರಣ

    ತುಮಕೂರು: ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನದ ಚುನಾವಣೆ ಸಂದರ್ಭದಲ್ಲಿ ಸದಸ್ಯರನ್ನೇ ಅಪಹರಣ ಮಾಡಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹುತ್ರಿದುರ್ಗದಲ್ಲಿ ನಡೆದಿದೆ.

    ಕಾಂಗ್ರೆಸ್ ಸದಸ್ಯ ಶಿವಾನಂದ್ (40) ಕಳೆದ ಐದು ದಿನದಿಂದ ಕಣ್ಮರೆಯಾಗಿದ್ದಾರೆ. ಇಂದು ಅಧ್ಯಕ್ಷ ಚುನಾವಣೆ ನಡೆಯಬೇಕಿದ್ದು, ಉದ್ದೇಶ ಪೂರ್ವಕವಾಗಿಯೇ ಶಿವಾನಂದ್ ಅವರನ್ನು ಅಪಹರಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

    ಶಿವಾನಂದ್ ಕಣ್ಮರೆಯಾದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಅಧ್ಯಕ್ಷ ಚುನಾವಣೆಯನ್ನು ಕುಣಿಗಲ್ ತಹಶೀಲ್ದಾರ್ ನಾಗರಾಜು ಅವರು ಮುಂದೂಡಿದ್ದಾರೆ. ಆದರೆ ಇದರಿಂದ ಆಕ್ರೋಶಗೊಂಡ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಇಂದು ಚುನಾವಣೆ ನಡೆಸಬೇಕೆಂದು ಪಟ್ಟು ಹಿಡಿದಿದ್ದರು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿ ಗಲಾಟೆಯಾಗುವ ಸನ್ನಿವೇಶ ನಿರ್ಮಾಣವಾಗಿತ್ತು.

    ಅಷ್ಟೇ ಅಲ್ಲದೇ ಚುನಾವಣೆ ನಡೆಸುವಂತೆ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ತಹಶೀಲ್ದಾರ್ ಅವರನ್ನು ತಡೆದಿದ್ದಾರೆ. ಆದರೆ ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.