Tag: ಗ್ರಾಮ ಪಂಚಾಯ್ತಿ ಸದಸ್ಯರು

  • ಅಳಿವಿನಂಚಿನಲ್ಲಿರುವ ಗ್ರಾಮೀಣ ರಂಗಕಲೆಗೆ ಜೀವ ತುಂಬಿದ ಜನಪ್ರತಿನಿಧಿಗಳು

    ಅಳಿವಿನಂಚಿನಲ್ಲಿರುವ ಗ್ರಾಮೀಣ ರಂಗಕಲೆಗೆ ಜೀವ ತುಂಬಿದ ಜನಪ್ರತಿನಿಧಿಗಳು

    ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೋಡಿಗೆ ಒಳಗಾಗಿರುವ ಯುವಕರನ್ನು ಪೌರಾಣಿಕತೆ ಕಡೆಗೆ ಮುಖಮಾಡಲು ನೆಲಮಂಗಲದ ಗ್ರಾಮಪಂಚಾಯತ್ ಸದಸ್ಯರ ತಂಡವೊಂದು ವಿಭಿನ್ನ ಪ್ರಯತ್ನ ಮಾಡಿದೆ.

    ಅಳಿವಿನಂಚಿನಲ್ಲಿರುವ ಗ್ರಾಮೀಣ ಪೌರಾಣಿಕ ರಂಗಕಲೆಗೆ ಯುವಕರು ಒತ್ತು ನೀಡಿದ್ದಾರೆ. ಅಲ್ಲದೆ ಮಹಾಭಾರತದ ನೀತಿಸಾರುವ ಕುರುಕ್ಷೇತ್ರ ಪೌರಾಣಿಕ ನಾಟಕವನ್ನು ಅಭಿನಯಿಸಿದ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ನಾಟಕದ ನಡುವೆಯು ಶಿಕ್ಷಣದ ಮಹತ್ವ ಸಾರಿದ್ದಾರೆ. ಹಾಗೆಯೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಗ್ರಾಮೀಣ ಪ್ರತಿಭೆಗೆ ಸನ್ಮಾನ ಮಾಡಿ ಪ್ರೋತ್ಸಾಹಿಸಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಅರೇಬೊಮ್ಮನಹಳ್ಳಿ ಗ್ರಾಮ ಪಂಚಾಯತಿ ಸದಸ್ಯರು ಕುರುಕ್ಷೇತ್ರ ನಾಟಕ ಅಭಿನಯಿಸಿದ್ದಾರೆ. ರಾಮಾಯಣ ಮತ್ತು ಮಹಾಭಾರತವನ್ನು ಯುವಜನತೆಗೆ ತಿಳಿಸಲು ಈ ಮೂಲಕ ಪ್ರಯತ್ನ ಮಾಡಿದ್ದಾರೆ. ಅದರಲ್ಲೂ ಎಲ್ಲಾ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿ ಸೇರಿ ನಾಟಕ ಪ್ರದರ್ಶನ ಮಾಡಿದ್ದು ವಿಶೇಷವಾಗಿತ್ತು.

    ಈ ಬಗ್ಗೆ ಮಾತನಾಡಿದ ಗ್ರಾಮ ಪಂಚಾಯತಿ ಸದಸ್ಯರು, ಆಡಳಿತ ವ್ಯವಸ್ಥೆಯ ಮೂಲವಾದ ಗ್ರಾಮ ಪಂಚಾಯತಿಯ ಆಡಳಿತದ ಜೊತೆಗೆ, ಬಿಡುವಿನ ವೇಳೆಯಲ್ಲಿ ಕಲೆಯನ್ನು ಕಲಿತಿದ್ದು ಸಂತಸವಾಗಿದೆ ಎಂದರು. ಕಲೆಯ ಜೊತೆಗೆ ಶಿಕ್ಷಣಕ್ಕೂ ಪ್ರೋತ್ಸಾಹ ನೀಡುವ ಉದ್ದೇಶದಿಂದ, ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.98 ರಷ್ಟು ಫಲಿತಾಂಶ ಪಡೆದ ಗ್ರಾಮೀಣ ಪ್ರತಿಭೆ ಸಿಂಚನಾಳನ್ನು ಸನ್ಮಾನಿಸಿ ನಾಟಕ ಮಂಡಳಿಯವರು ಪ್ರಶಂಸೆಗೆ ಪಾತ್ರವಾದರು.

    ದಿನನಿತ್ಯದ ಕೆಲಸದ ಜೊತೆಗೆ ಗ್ರಾಮ ಪಂಚಾಯತಿಯಲ್ಲಿ ರಾಜಕೀಯವನ್ನು ಮರೆತು ಕೌರವ ಮತ್ತು ಪಾಂಡವರಾಗಿ ಸದಸ್ಯರು ಅಭಿನಯಿಸಿದರು. ಯುವಜನತೆ ಮೊಬೈಲನ್ನು ಅತೀಯಾಗಿ ಬಳಕೆ ಮಾಡುತ್ತಿರುವುರಿಂದ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆ ಕಡಿಮೆ ಮಾಡುವ ಸಲುವಾಗಿ ಈ ಕಲೆಯನ್ನು ಪ್ರದರ್ಶಿಸಿದ್ದೇವೆ. ನಮ್ಮ ಮುಂದಿನ ಪೀಳಿಗೆ ಈ ಬಯಲುಸೀಮೆ ಕಲೆಯನ್ನು ನೋಡಿ ಈಗ ಕಲಿಯಲು ಮುಂದಾಗಿರುವುದು ಹೆಮ್ಮೆಯ ವಿಚಾರ ಎಂದು ಪಾತ್ರಧಾರಿಗಳು ಸಂತಸ ವ್ಯಕ್ತಪಡಿಸಿದರು.

  • ಈ ಕಾರಣಕ್ಕಾಗಿ 1,618 ಗ್ರಾ.ಪಂ. ಸದಸ್ಯರ ಸದಸ್ಯತ್ವ ರದ್ದು ಮಾಡಲು ಮುಂದಾದ ಬಳ್ಳಾರಿ ಜಿಲ್ಲಾ ಪಂಚಾಯತ್

    ಈ ಕಾರಣಕ್ಕಾಗಿ 1,618 ಗ್ರಾ.ಪಂ. ಸದಸ್ಯರ ಸದಸ್ಯತ್ವ ರದ್ದು ಮಾಡಲು ಮುಂದಾದ ಬಳ್ಳಾರಿ ಜಿಲ್ಲಾ ಪಂಚಾಯತ್

    ಬಳ್ಳಾರಿ: ಜಿಲ್ಲೆಯಲ್ಲಿ ಸಾವಿರಾರು ಗ್ರಾಮ ಪಂಚಾಯತ್ ಸದಸ್ಯರ ಸದಸ್ಯತ್ವಕ್ಕೆ ಇದೀಗ ಕುತ್ತು ಬಂದಿದೆ. ಕಾರಣ ಇವರ್ಯಾರೂ ಹಗರಣ ಮಾಡಿಲ್ಲ. ಆದ್ರೆ ಟಾಯ್ಲೆಟ್ ಕಟ್ಟಿಕೊಂಡಿಲ್ಲ.

    ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಯಲು ಶೌಚ ಮುಕ್ತ ಗ್ರಾಮಕ್ಕೆ ಪಣ ತೊಟ್ಟಿದೆ. ಗ್ರಾಮ ಪಂಚಾಯ್ತಿ ಮಟ್ಟದಲ್ಲೇ ಇದರ ಅರಿವು ಮೂಡಿಸಬೇಕು ಅಂತಾ ಬೊಬ್ಬೆ ಹೊಡೀತಿವೆ. ಆದರೆ ಬಳ್ಳಾರಿ ಜಿಲ್ಲೆಯಲ್ಲಿ ಮಾತ್ರ ಗ್ರಾಮ ಪಂಚಾಯ್ತಿ ಸದಸ್ಯರ ಮನೆಗಳಲ್ಲಿ ಟಾಯ್ಲೆಟ್ ಕಟ್ಟಿಕೊಂಡಿಲ್ಲ. ಬರೋಬ್ಬರಿ 1,618 ಗ್ರಾಮ ಪಂಚಾಯತ್ ಸದಸ್ಯರ ಮನೆಗಳಲ್ಲೇ ಶೌಚಾಲಯಗಳೇ ಇಲ್ಲ.

    ಹೀಗಾಗಿ ಶೌಚಾಲಯವಿಲ್ಲದ ಸದಸ್ಯರ ಸದಸ್ಯತ್ವವನ್ನೇ ರದ್ದು ಮಾಡಲು ಬಳ್ಳಾರಿ ಜಿಲ್ಲಾ ಪಂಚಾಯತ್ ಮುಂದಾಗಿದೆ. ಇದಕ್ಕಾಗಿ 1 ತಿಂಗಳ ಗಡುವು ನೀಡಲಾಗಿದೆ. ನೋಟಿಸ್ ಕೂಡಾ ಜಾರಿ ಮಾಡಲಾಗಿದೆ.

    ಪಂಚಾಯತ್ ರಾಜ್ಯ ನಿಯಮದ ಪ್ರಕಾರ ಪಂಚಾಯತ್ ಸದಸ್ಯರು ಆಯ್ಕೆಯಾದ ಆರು ತಿಂಗಳಲ್ಲಿ ಕಡ್ಡಾಯವಾಗಿ ಶೌಚಾಲಯ ನಿರ್ಮಾಣ ಮಾಡಿಕೊಳ್ಳಬೇಕು. ಆಮೇಲೆ ಮುಚ್ಚಳಿಕೆ ಬರೆದುಕೊಡಬೇಕು. ಇಲ್ಲದೇ ಹೋದಲ್ಲಿ ಸದಸ್ಯತ್ವ ರದ್ದು ಮಾಡುವ ಅಧಿಕಾರ ಸರ್ಕಾರಕ್ಕಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ರಾಜೇಂದ್ರ ಹೇಳಿದ್ದಾರೆ.