Tag: ಗ್ರಾಮ ಪಂಚಾಯ್ತಿ

  • ಮಕ್ಕಳ ಶೌಚವನ್ನು ಚೀಲದಲ್ಲಿ ಸಂಗ್ರಹಿಸಿಟ್ಟು ಶೌಚಾಲಯಕ್ಕಾಗಿ ಪ್ರತಿಭಟಿಸಿದ ಮಹಿಳೆಯರು

    ಮಕ್ಕಳ ಶೌಚವನ್ನು ಚೀಲದಲ್ಲಿ ಸಂಗ್ರಹಿಸಿಟ್ಟು ಶೌಚಾಲಯಕ್ಕಾಗಿ ಪ್ರತಿಭಟಿಸಿದ ಮಹಿಳೆಯರು

    ತುಮಕೂರು: ಚಿಕ್ಕಮಕ್ಕಳ ಶೌಚವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸಂಗ್ರಹಿಸಿಟ್ಟು ಶೌಚಾಲಯ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ.

    ತುಮಕೂರಿನ ಶಿರಾ ತಾಲೂಕು ಪಟ್ಟನಾಯಕನಹಳ್ಳಿಯ ದೊಡ್ಡಬಾಣಗೆರೆ ಗ್ರಾಮದ ದಲಿತ ಕಾಲೋನಿಯಲ್ಲಿ ಈ ಪ್ರತಿಭಟನೆ ಮಾಡಲಾಗಿದೆ. ಕಾಲೋನಿಯಲ್ಲಿ ಶೌಚಾಲಯ ಇಲ್ಲದೆ ಸುಮಾರು 120 ಕುಟುಂಬ ತೊಂದರೆ ಅನುಭವಿಸುತ್ತಿವೆ. ಆದ್ದರಿಂದ ಮಹಿಳೆಯರು ರಾತ್ರಿ ಹೊತ್ತು ಮಾತ್ರ ಬಯಲಿಗೆ ಹೋಗುವ ಅನಿವಾರ್ಯತೆ ಇದ್ದು, ಶೌಚಾಲಯ ನಿರ್ಮಾಣಕ್ಕಾಗಿ ಆಗ್ರಹಿಸಿ ಚಿಕ್ಕಮಕ್ಕಳ ಶೌಚವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸಂಗ್ರಹಿಸಿಟ್ಟು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.

    ಬೆಳಗಿನ ಜಾವ ಚಿಕ್ಕಮಕ್ಕಳು ಮಾಡಿದ ಶೌಚವನ್ನ ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿಟ್ಟು ರಾತ್ರಿ ವೇಳೆ ಅದನ್ನು ವಿಲೇವಾರಿ ಮಾಡುವ ಪರಿಸ್ಥಿತಿಯನ್ನು ಈ ಭಾಗದ ಜನ ಎದುರಿಸುತ್ತಿದ್ದಾರೆ. ದೊಡ್ಡಬಾಣಗೆರೆ ಗ್ರಾಮ ಪಂಚಾಯ್ತಿ ನಿರ್ಲಕ್ಷ್ಯಕ್ಕೆ ಈ ಕಾಲೋನಿಗೆ ಈ ದುರ್ಗತಿ ಬಂದಿದೆ ಎಂದು ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದರು. ಸೋಮವಾರ ರಾತ್ರಿ ಪ್ರತಿಭಟನೆ ಮಾಡಿ ಗ್ರಾಮ ಪಂಚಾಯ್ತಿ ವಿರುದ್ಧ ಹರಿಹಾಯ್ದರು.

    ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನಹರಿಸಿ, ಆದಷ್ಟು ಬೇಗ ಈ ಕಾಲೋನಿ ಜನರಿಗೆ ಶೌಚಾಲಯ ನಿರ್ಮಿಸಿ ಕೊಡಬೇಕು. ಜೊತೆಗೆ ನಿರ್ಲಕ್ಷ್ಯ ತೋರಿದ ಗ್ರಾಮ ಪಂಚಾಯ್ತಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.

  • ಗ್ರಾಮ ಪಂಚಾಯ್ತಿ ಎಡವಟ್ಟು – ಒಂದೇ ಶವಕ್ಕೆ ಎರಡೆರಡು ಬಾರಿ ಅಂತ್ಯಸಂಸ್ಕಾರ

    ಗ್ರಾಮ ಪಂಚಾಯ್ತಿ ಎಡವಟ್ಟು – ಒಂದೇ ಶವಕ್ಕೆ ಎರಡೆರಡು ಬಾರಿ ಅಂತ್ಯಸಂಸ್ಕಾರ

    ಮಡಿಕೇರಿ: ಹಿಂದೂ ಸಂಪ್ರದಾಯದ ಪ್ರಕಾರ ಯಾರೇ ಸತ್ತರೂ ಆ ಮೃತದೇಹಕ್ಕೆ ಒಮ್ಮೆ ಶವಸಂಸ್ಕಾರ ಮಾಡಿ ಮುಕ್ತಿ ಕಾಣಿಸಲಾಗುತ್ತೆ. ಆದರೆ ಮಡಿಕೇರಿ ತಾಲೂಕಿನ ನಾಪೋಕ್ಲಿನಲ್ಲಿ ಮಾತ್ರ ಒಂದೇ ಶವಕ್ಕೆ ಎರಡೆರಡು ಬಾರಿ ಅಂತ್ಯಸಂಸ್ಕಾರ ಮಾಡಲಾಗಿದೆ.

    ಹೌದು. ಇದನ್ನು ಬಗ್ಗೆ ತಿಳಿದರೆ ವಿಚಿತ್ರ ಅನಿಸುತ್ತೆ. ಎರಡೆರಡು ಬಾರಿ ಯಾಕೆ ಶವಸಂಸ್ಕಾರ ಮಾಡಿದರು ಎಂಬ ಪ್ರಶ್ನೆ ಕೂಡ ತಲೆಗೆ ಬರುತ್ತೆ. ಅಸಲಿಗೆ ಇದಕ್ಕೆ ಕಾರಣ ಗ್ರಾಮ ಪಂಚಾಯ್ತಿಯ ಎಡವಟ್ಟು. ಕಳೆದ ಗುರುವಾರವಷ್ಟೇ ನಾಪೋಕ್ಲು ಗ್ರಾಮ ಪಂಚಾಯ್ತಿ ಆಡಳಿತ ಮಂಡಳಿ ಗ್ರಾಮದ ಕಸವಿಲೇವಾರಿ ಮಾಡುವುದಕ್ಕಾಗಿ ಹಿಂದೂ ರುದ್ರ ಭೂಮಿಯಲ್ಲಿ ಬೃಹತ್ ಗುಂಡಿ ತೆಗೆದಿತ್ತು. ಈ ವೇಳೆ ಭೂಮಿಯಲ್ಲಿ ಸಿಕ್ಕ ಶವಗಳನ್ನು ಗುಂಡಿತೆಗೆದ ಮಣ್ಣಿನಡಿಯಲ್ಲಿ ಹಾಕಿ ಮುಚ್ಚಲಾಗಿತ್ತು.

    ಪಂಚಾಯತ್ ವಿರುದ್ಧ ಪ್ರಕರಣ ದಾಖಲಾಗಿ ಆ ಗುಂಡಿಯನ್ನು ಪುನಃ ಮುಚ್ಚುವ ಸಂದರ್ಭದಲ್ಲಿ ಮಣ್ಣಿನಡಿಯಲ್ಲಿ ಒಂದು ಶವದ ಇಡೀ ಅಸ್ಥಿಪಂಜರ ದೊರೆತಿತ್ತು. ಹೀಗಾಗಿ ಆ ಅಸ್ಥಿಪಂಜರಕ್ಕೆ ಪುನಃ ಇಂದು ಹಿಂದೂ ಸಂಪ್ರದಾಯಂತೆ ಶವಸಂಸ್ಕಾರ ನೆರವೇರಿಸಲಾಯಿತು. ಆದರೆ ಒಂದೇ ಶವಕ್ಕೆ ಎರಡೆರಡು ಬಾರಿ ಸಂಸ್ಕಾರ ಮಾಡುವಂತೆ ಮಾಡಿದ ಪಂಚಾಯ್ತಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮ್ಮ ತಪ್ಪಿಗೆ ರುದ್ರ ಭೂಮಿಯಲ್ಲಿವ ಶವವನ್ನು ಹೊರತೆಗೆದರಲ್ಲ ಎಂದು ಕಿಡಿಕಾರಿದ್ದಾರೆ.

  • ಕೃಷಿ ಹೊಂಡ ಕಳೆದುಹೋಗಿದೆ ಹುಡುಕಿಕೊಡಿ – ಪೊಲೀಸ್ ಠಾಣೆ ಮೆಟ್ಟಿಲೇರಿದ ರೈತ

    ಕೃಷಿ ಹೊಂಡ ಕಳೆದುಹೋಗಿದೆ ಹುಡುಕಿಕೊಡಿ – ಪೊಲೀಸ್ ಠಾಣೆ ಮೆಟ್ಟಿಲೇರಿದ ರೈತ

    ರಾಯಚೂರು: ಕೃಷಿ ಹೊಂಡ ಕಳೆದುಹೋಗಿದೆ ಹುಡುಕಿಕೊಡಿ ಎಂದು ರಾಯಚೂರಿನ ಸಿರವಾರ ತಾಲೂಕಿನ ಹಿರೇಹಣಗಿ ಗ್ರಾಮದ ರೈತರೊಬ್ಬರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

    ರೈತ ಪ್ರವೀಣಕುಮಾರ್ ತನ್ನ ಜಮೀನಿನಲ್ಲಿರುವ ಕೃಷಿಹೊಂಡ ಹುಡುಕಿ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ದಾಖಲೆಗಳ ಪ್ರಕಾರ ತನ್ನ ತಂದೆ ವೀರನಗೌಡ ಹೆಸರಿನಲ್ಲಿರುವ ಸರ್ವೆ ನಂ.3ಎ 6 ಎಕರೆ ಬೀಳುಬಿದ್ದ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣವಾಗಿದೆ. ಆದರೆ ಜಮೀನಿನಲ್ಲಿ ಕೃಷಿ ಹೊಂಡ ಇಲ್ಲ. ಹೀಗಾಗಿ ಕೃಷಿ ಹೊಂಡ ಹುಡುಕಿಕೊಡಿ ಎಂದು ಜಿಲ್ಲಾ ಪಂಚಾಯ್ತಿ ಸಿಇಓಗೆ ಮತ್ತು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಲಾಗಿದೆ ಎಂದು ಫೆಬ್ರವರಿ 2019 ರಲ್ಲಿ 14 ಜನ ಕೂಲಿ ಕಾರ್ಮಿಕರ ಹೆಸರಿನಲ್ಲಿ 41,860 ರೂಪಾಯಿ ಹಣ ಬಿಡುಗಡೆಯಾಗಿದೆ. ಆದರೆ ಜಮೀನಿನಲ್ಲಿ ಕೃಷಿಹೊಂಡ ಮಾತ್ರ ನಿರ್ಮಾಣ ಮಾಡಿಲ್ಲ. ಕೃಷಿಹೊಂಡಕ್ಕಾಗಿ ರೈತ ಅರ್ಜಿಹಾಕದಿದ್ದರು ಅವರ ಹೊಲದಲ್ಲಿ ಕೃಷಿ ಹೊಂಡ ನಿರ್ಮಿಸಲಾಗಿದೆ ಎಂದು ಬಿಲ್ ಮಂಜೂರು ಮಾಡಲಾಗಿದೆ. ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮಹೇಶ್ ದಾಖಲೆಗಳನ್ನು ಸೃಷ್ಟಿಸಿ ಹಣ ಲಪಟಾಯಿಸಿದ್ದಾರೆ ಎಂದು ರೈತ ಪ್ರವೀಣ್ ಕುಮಾರ್ ಆರೋಪಿಸಿದ್ದಾರೆ.

    ಪಂಚಾಯ್ತಿ ಅಧಿಕಾರಿಗಳು ಕೇವಲ ದಾಖಲೆಗಳಲ್ಲಿ ಕೃಷಿ ಹೊಂಡ ನಿರ್ಮಿಸಿ ಅನುದಾನ ದುರ್ಬಳಕೆ ಮಾಡಿಕೊಂಡಿರುವುದು ಬಯಲಾಗಿದೆ. ಆದರೆ ಅಧಿಕಾರಿಗಳು ಮಾತ್ರ ಸ್ಥಳ ಪರಿಶೀಲಿಸದೆ ಬೇರೆಡೆ ಕೃಷಿ ಹೊಂಡ ನಿರ್ಮಿಸಲಾಗಿದೆ. ಹಣ ದುರ್ಬಳಕೆ ಮಾಡಿಕೊಂಡಿಲ್ಲ ಎಂದು ನುಣುಚಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಕೃಷಿಹೊಂಡ ನಿರ್ಮಾಣದ ಬಗ್ಗೆ ವರದಿ ನೀಡುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿರುವ ಜಿಪಂ ಸಿಇಓ ಲಕ್ಷ್ಮಿಕಾಂತ್ ರೆಡ್ಡಿ ವರದಿ ಬಂದ ಬಳಿಕ ಕ್ರಮ ಕೈಗೊಳುವುದಾಗಿ ಹೇಳಿದ್ದಾರೆ.

    ರೈತರ ಹೆಸರಲ್ಲಿ ಅಧಿಕಾರಿಗಳು ಅನುದಾನ ನುಂಗಿಹಾಕಿರುವುದು ದಾಖಲೆಗಳಿಂದ ಬೆಳಕಿಗೆ ಬಂದಿದೆ. ಹೀಗಾಗಿ ಅಧಿಕಾರಿಗಳ ಅಕ್ರಮ ಬಯಲಿಗೆಳೆಯಲು ರೈತ ನನ್ನ ಜಮೀನಿನಲ್ಲಿರುವ ಕೃಷಿ ಹೊಂಡ ಹುಡುಕಿಕೊಡಿ ಎಂದು ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ.

  • ಡೆಂಗ್ಯೂನಿಂದ ವ್ಯಕ್ತಿ ಸೇರಿ ಇಬ್ಬರು ಮಕ್ಕಳು ದುರ್ಮರಣ

    ಡೆಂಗ್ಯೂನಿಂದ ವ್ಯಕ್ತಿ ಸೇರಿ ಇಬ್ಬರು ಮಕ್ಕಳು ದುರ್ಮರಣ

    ಬೆಳಗಾವಿ: ಒಂದು ಕಡೆ ಮಳೆ ಇಲ್ಲದೆ ಉತ್ತರ ಕರ್ನಾಟಕದ ಜನ ತತ್ತರಿಸಿ ಹೋಗಿದ್ದಾರೆ. ಈಗ ಬರದ ಜೊತೆಗೆ ಈ ಭಾಗದಲ್ಲಿ ಡೆಂಗ್ಯೂ ರೋಗ ತಾಂಡವವಾಡುತ್ತಿದೆ.

    ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಖಿಳೇಗಾಂವ ಗ್ರಾಮದಲ್ಲಿ ಡೆಂಗ್ಯೂ ರೋಗದಿಂದ ಇಬ್ಬರು ಮಕ್ಕಳು ಹಾಗೂ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾರೆ. ಅಲ್ಲದೆ 20ಕ್ಕೂ ಹೆಚ್ಚು ಮಂದಿ ಪಕ್ಕದ ಮಹಾರಾಷ್ಟ್ರದ ಮೀರಜ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಶೇಜಲ ಸಂಗಪ್ಪ ರೇವಾಗೋಳ (9), ಅಂಕಿತಾ ಅನಿಲ್ ಮಠಪತಿ (5) ಹಾಗೂ ಧರೆಪ್ಪ ಎಂಬವರು ಡೆಂಗ್ಯೂ ರೋಗಕ್ಕೆ ಬಲಿಯಾಗಿದ್ದಾರೆ. ಗ್ರಾಮ ಪಂಚಾಯ್ತಿ ನಿರ್ಲಕ್ಷ್ಯದಿಂದಲೇ ಈ ಭಾಗದಲ್ಲಿ ಡೆಂಗ್ಯೂ ತಾಂಡವವಾಡುತ್ತಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

    ಸುಪ್ರಸಿದ್ಧ ಖಿಳೇ ಗಾಂವ ಬಸವಣ್ಣ ದೇವಸ್ಥಾನ ಹೊಂದಿರುವ ಈ ಗ್ರಾಮದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಹೀಗಾಗಿ ಅಧಿಕಾರಿಗಳು ಈಗಲಾದರೂ ಡೆಂಗ್ಯೂ ಇಲ್ಲಾ ಎನ್ನುವ ಮೊಂಡು ವಾದವನ್ನು ಬಿಟ್ಟು ಈ ಭಾಗದಲ್ಲಿ ಡೆಂಗ್ಯೂ ರೋಗ ಇನ್ನಷ್ಟು ಜನರನ್ನು ಬಲಿ ತೆಗೆದುಕೊಳ್ಳದಂತೆ ಎಚ್ಚರ ವಹಿಸಬೇಕಿದೆ.

  • ಕಲ್ಲಿನ ಕ್ವಾರಿಯಲ್ಲಿ ಬಟ್ಟೆ ತೊಳೆಯಲು ಹೋಗಿ ಮಹಿಳೆ ಸಾವು

    ಕಲ್ಲಿನ ಕ್ವಾರಿಯಲ್ಲಿ ಬಟ್ಟೆ ತೊಳೆಯಲು ಹೋಗಿ ಮಹಿಳೆ ಸಾವು

    ಬೆಂಗಳೂರು: ಗ್ರಾಮದಲ್ಲಿ ನೀರಿನ ಅಭಾವ ಉಂಟಾದ ಕಾರಣಕ್ಕೆ ಬಟ್ಟೆ ತೊಳೆಯಲು ಕಲ್ಲಿನ ಕ್ವಾರಿಗೆ ಹೋಗಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ನೆಲಮಂಗಲ ಸಮೀಪದ ಕಂಬದಕಲ್ ಗ್ರಾಮದಲ್ಲಿ ನಡೆದಿದೆ.

    ಕಂಬದಕಲ್ ಗ್ರಾಮದ ನಿವಾಸಿ ಮಂಜುಳ (42) ಮೃತ ದುರ್ದೈವಿ. ಗ್ರಾಮದಲ್ಲಿ ನೀರಿನ ಬವಣೆ ಇದ್ದ ಕಾರಣಕ್ಕೆ ಕಲ್ಲಿನ ಕ್ವಾರಿಯೊಂದರಲ್ಲಿ ಬಟ್ಟೆ ತೊಳೆಯಲು ಮಹಿಳೆ ಹೋಗಿದ್ದಾಗ ಈ ಅವಘಡ ಸಂಭವಿಸಿದೆ. ಕ್ವಾರಿಯಲ್ಲಿ ಬಟ್ಟೆ ತೊಳೆಯುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಮಹಿಳೆ ಸಾವಿಗೆ ಗ್ರಾಮ ಪಂಚಾಯ್ತಿಯೇ ಕಾರಣ ಎಂದು ಆರೋಪಿಸಿದ್ದಾರೆ. ಅಲ್ಲದೆ ಬಿಟ್ಟಸಂದ್ರ ಗ್ರಾಮ ಪಂಚಾಯ್ತಿಗೆ ಮುತ್ತಿಗೆ ಹಾಕಿ ಪೀಠೋಪಕರಣ ಧ್ವಂಸ ಮಾಡಿ, ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸೂಕ್ತ ನೀರಿನ ಸರಬರಾಜು ಮಾಡದೆ ಗ್ರಾಮ ಪಂಚಾಯ್ತಿ ನಿರ್ಲಕ್ಷ್ಯ ತೋರಿದೆ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಅಲ್ಲದೆ ಪಂಚಾಯ್ತಿಯ ವಾಟರ್ ಮ್ಯಾನ್ ವಿರುದ್ಧ ಗ್ರಾಮಸ್ಥರು ಹಿಡಿ ಶಾಪ ಹಾಕುತ್ತಿದ್ದಾರೆ.

  • ಮನೆ ದಾಖಲಾತಿ ಕೇಳಿದ್ದಕ್ಕೆ ಮಂಚಕ್ಕೆ ಕರೆದ ಗ್ರಾ.ಪಂ ಸದಸ್ಯ…!

    ಮನೆ ದಾಖಲಾತಿ ಕೇಳಿದ್ದಕ್ಕೆ ಮಂಚಕ್ಕೆ ಕರೆದ ಗ್ರಾ.ಪಂ ಸದಸ್ಯ…!

    ಮೈಸೂರು: ಮನೆಯ ಡಾಕ್ಯುಮೆಂಟ್ ಮಾಡಿಸಿಕೊಡಲು ಕೇಳಿದ್ದಕ್ಕೆ ಮಹಿಳೆಯನ್ನು ಮಂಚಕ್ಕೆ ಕರೆದಿರುವ ಆರೋಪವೊಂದು ಗ್ರಾಮ ಪಂಚಾಯ್ತಿ ಸದಸ್ಯನ ವಿರುದ್ಧ ಕೇಳಿಬಂದಿದೆ.

    ಮೈಸೂರಿನ ಧನಗಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಪಿ.ಲಿಂಗರಾಜು ವಿರುದ್ಧ ನೊಂದ ಮಹಿಳೆ ದೂರು ನೀಡಿದ್ದಾರೆ. ಮೈಸೂರಿನ ಧನಗಳ್ಳಿ ಪಂಚಾಯ್ತಿಯಲ್ಲಿ ಇಂತಹ ಹೆಣ್ಣುಬಾಕ ಸದಸ್ಯನಿದ್ದಾನೆ.

    ಮನೆಗೆ ಸಂಬಂಧಿಸಿದ 9/11 ದಾಖಲಾತಿ ಕೊಡಿಸಿ ಎಂದು ಮಹಿಳೆ ಕೇಳಿದ್ದಾರೆ. ನಾನು ದಾಖಲಾತಿ ಕೊಡಿಸುತ್ತೇನೆ ಇವತ್ತು ರಾತ್ರಿ ಬಾ ಮನೆಗೆ ಬಾ ಎಂದ ಕರೆದ ಲಿಂಗರಾಜು, ನೀನಾದ್ರೂ ಓಕೆ ಇಲ್ಲ ನಿನ್ ಫ್ರೆಂಡ್ಸ್ ಆದ್ರೂ ಓಕೆ ಎಂದಿದ್ದಾನೆ. ಈ ಬಗ್ಗೆ ಕಾಮುಕ ಲಿಂಗರಾಜುನನ್ನು ಮಹಿಳೆ ಪ್ರಶ್ನಿಸಿದ್ದಕ್ಕೆ ತನ್ನ ಸಹಚರರ ಜೊತೆ ಸೇರಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದಾರೆ.

    ಹೀಗಾಗಿ ಗ್ರಾ.ಪಂ ಸದಸ್ಯ ಲಿಂಗರಾಜು ಸೇರಿ 5 ಮಂದಿ ವಿರುದ್ಧ ಜಯಪುರ ಪೊಲೀಸ್ ಠಾಣೆಯಲ್ಲಿ ನೊಂದ ಮಹಿಳೆ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿಗಳು ನಾಪತ್ತೆಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹುತಾತ್ಮ ಯೋಧ ಗುರು ಕುಟುಂಬಕ್ಕೆ ಗ್ರಾಮ ಪಂಚಾಯ್ತಿಯಿಂದ 10 ಲಕ್ಷ ರೂ. ಧನಸಹಾಯ!

    ಹುತಾತ್ಮ ಯೋಧ ಗುರು ಕುಟುಂಬಕ್ಕೆ ಗ್ರಾಮ ಪಂಚಾಯ್ತಿಯಿಂದ 10 ಲಕ್ಷ ರೂ. ಧನಸಹಾಯ!

    ಚಿಕ್ಕಬಳ್ಳಾಪುರ: ಗುರುವಾರದಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಗುರು ಅವರ ಕುಟುಂಬಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಣ್ಣೇಶ್ವರ ಗ್ರಾಮ ಪಂಚಾಯ್ತಿಯಿಂದ ಧನಸಹಾಯ ನೀಡಲು ನಿರ್ಧರಿಸಲಾಗಿದೆ.

    ಮಂಡ್ಯ ಜಿಲ್ಲೆಯ ಕೆ.ಎಂ ದೊಡ್ಡಿಯ ಗುಡಿಗೆರೆ ಗ್ರಾಮದ ವೀರ ಯೋಧ ಗುರು ಅವರು ಪುಲ್ವಮಾ ಉಗ್ರರ ದಾಳಿಯಲ್ಲಿ ವೀರಮರಣವನ್ನಪ್ಪಿದ್ದಾರೆ. ಆದ್ದರಿಂದ ಹುತಾತ್ಮ ಯೋಧ ಗುರು ಕುಟುಂಬಕ್ಕೆ ಅಣ್ಣೇಶ್ವರ ಗ್ರಾಮ ಪಂಚಾಯ್ತಿ 10 ಲಕ್ಷ ರೂ. ಹಣ ನೀಡಲು ಮುಂದಾಗಿದೆ. ಪರಿಹಾರಧನ ನೀಡಲು ಸರ್ಕಾರ ಸಹ ಅನುಮೋದನೆ ನೀಡುವಂತೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಲಕ್ಷ್ಮಿ ಮನವಿ ಮಾಡಿದ್ದಾರೆ. ಅಲ್ಲದೆ ಗ್ರಾಮ ಪಂಚಾಯ್ತಿ ಜನಪ್ರತಿನಿಧಿಗಳು ಧನಸಹಾಯ ಮಾಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

    ಅಣ್ಣೇಶ್ವರ ಗ್ರಾಮ ಪಂಚಾಯ್ತಿ ಸದಸ್ಯರು ಅನ್ಯಾಯವಾಗಿ ಪಾಪಿ ಉಗ್ರರ ದಾಳಿಗೆ ಬಲಿಯಾದ ಯೋಧರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಹುತಾತ್ಮ ಯೋಧನ ಕುಟುಂಬಕ್ಕೆ 10 ಲಕ್ಷ ಧನಸಹಾಯ ಮಾಡಲು ಸಿದ್ಧ ಎಂದು ಹೇಳಿ ದೇಶಭಕ್ತಿ ಮೆರೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚಿತ್ರ ವೀಕ್ಷಣೆಗಾಗಿ ರಜೆ ಕೇಳಿದ ಗ್ರಾಮ ಪಂಚಾಯ್ತಿ ನೌಕರ

    ಚಿತ್ರ ವೀಕ್ಷಣೆಗಾಗಿ ರಜೆ ಕೇಳಿದ ಗ್ರಾಮ ಪಂಚಾಯ್ತಿ ನೌಕರ

    ಬಾಗಲಕೋಟೆ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಬಹುನಿರೀಕ್ಷಿತ ‘ನಟಸಾರ್ವಭೌಮ’ ಚಿತ್ರ ವೀಕ್ಷಿಸಲು ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ರಜೆ ಕೋರಿ ಪತ್ರ ಬರೆದಿದ್ದಾರೆ.

    ಅನಿಲ್ ಚೌಹಾನ್ ರಜೆ ಪತ್ರ ಕಳುಹಿಸಿದ ನೌಕರ. ಅನಿಲ್ ಬಾಗಲಕೋಟೆ ತಾಲೂಕಿನ ಸೀಗಿಕೇರಿ ಪಂಚಾಯ್ತಿ ಬಿಲ್ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅನಿಲ್, ಪುನೀತ್ ರಾಜ್‍ಕುಮಾರ್ ಅವರ ಕಟ್ಟಾ ಅಭಿಮಾನಿ ಆಗಿದ್ದು, ಗುರುವಾರ ಬಿಡುಗಡೆ ಆಗುತ್ತಿರುವ ನಟಸಾರ್ವಭೌಮ ಚಿತ್ರ ವೀಕ್ಷಿಸಲು ರಜೆ ಕೋರಿದ್ದಾರೆ.

    ಅನಿಲ್ ಅವರು ಪಂಚಾಯ್ತಿ ಪಿಡಿಓ ಹಿರೇಮಠ್ ಅವರಿಗೆ ವಾಟ್ಸಪ್ ಮೂಲಕ ರಜೆ ಪತ್ರ ಕಳುಹಿಸಿದ್ದಾರೆ. ಅನಿಲ್ ಅವರ ರಜೆ ಕೋರಿಕೆಗೆ ಪಿಡಿಓ ಹಿರೇಮಠ್ ಅವರು ರಜೆ ನೀಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ನೆಚ್ಚಿನ ನಟನ ಸಿನಿಮಾ ನೋಡಲು ರಜೆ ಪತ್ರ ಬರೆದ ವಿದ್ಯಾರ್ಥಿನಿ

    ಪತ್ರದಲ್ಲಿ ಏನಿದೆ?
    ನಟಸಾರ್ವಭೌಮ ಚಿತ್ರ ಬಾಗಲಕೋಟೆಯಲ್ಲಿ ಫೆ. 7ರಂದು ನೋಡಲು ರಾಜ್ಯಾದ್ಯಂತ ಈ ಚಿತ್ರವು ಬಿಡುಗಡೆ ಆಗಲಿದೆ. ಈ ಚಿತ್ರ ಕುಟುಂಬದ ಎಲ್ಲಾ ಸದಸ್ಯರು ಹಾಗೂ ಎಲ್ಲಾ ವಯಸ್ಸಿನವರು ನೋಡುವಂತಹ ಒಳ್ಳೆಯ ಚಿತ್ರವಾಗಿದ್ದು ಹಾಗೂ ಚಿತ್ರದ ನಟ ನಮ್ಮ ರಾಜಕುಮಾರ ಅವರ ಹೆಮ್ಮೆಯ ತೃತೀಯ ಮಗನಾದ ಪುನೀತ್ ರಾಜ್‍ಕುಮಾರ್ ಅವರಾಗಿದ್ದು, ಹಾಗಾಗಿ ನಾನು ನಟಸಾರ್ವಭೌಮ ಚಿತ್ರ ನೋಡಲು ದಿನಾಂಕ 7ರಂದು ಆನ್‍ಲೈನ್‍ನಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಿರುವುದರಿಂದ ನಾನು ಒಂದು ದಿನದ ರಜೆಯನ್ನು ಕೋರಿರುತ್ತೇನೆ. ಆದ್ದರಿಂದ ನನಗೆ ಕಾರ್ಯಾಲಯಕ್ಕೆ ಹಾಜರಾಗಲು ಆಗುವುದಿಲ್ಲ ಎಂದು ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಸಿನಿಮಾ ನೋಡಲು ರಜೆ ಕೇಳಿದ ಮೈಸೂರು ವಿದ್ಯಾರ್ಥಿನಿಗೆ ಪುನೀತ್ ಸಲಹೆ

    ನಟಸಾರ್ವಭೌಮ ಚಿತ್ರದಲ್ಲಿ ಪುನೀತ್ ರಾಜ್‍ಕುಮಾರ್ ಜೊತೆ ಡಿಂಪಲ್ ಬೆಡಗಿ ರಚಿತಾ ರಾಮ್, ಅನುಪಮಾ ಪರಮೇಶ್ವರ್, ಸಾಧುಕೋಕಿಲಾ, ಬಿ. ಸರೋಜಾ ದೇವಿ, ಚಿಕ್ಕಣ್ಣ, ರವಿಶಂಕರ್ ನಟಿಸಿದ್ದಾರೆ. ಈ ಚಿತ್ರವನ್ನು ರಾಕ್‍ಲೈನ್ ವೆಂಕಟೇಶ್ ಅವರು ನಿರ್ಮಿಸಿದ್ದು, ಪವನ್ ಒಡೆಯರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. `ರಣವಿಕ್ರಮ’ ಸಿನಿಮಾದ ಬಳಿಕ ಪುನೀತ್ ರಾಜ್‍ಕುಮಾರ್ ಹಾಗೂ ಪವನ್ ಒಡೆಯರ್ ಒಂದಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದ್ದು, ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರ ಆಸ್ಟ್ರೇಲಿಯಾ, ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಬಿಡುಗಡೆಯಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭ್ರಷ್ಟಾಚಾರ ಬಯಲು ಮಾಡಿದಕ್ಕೆ ಮಾರಣಾಂತಿಕ ಹಲ್ಲೆ!

    ಭ್ರಷ್ಟಾಚಾರ ಬಯಲು ಮಾಡಿದಕ್ಕೆ ಮಾರಣಾಂತಿಕ ಹಲ್ಲೆ!

    ದಾವಣಗೆರೆ: ಗ್ರಾಮ ಪಂಚಾಯ್ತಿಯಲ್ಲಿನ ಭ್ರಷ್ಟಾಚಾರ ಬಯಲಿಗೆಳೆದ ಹಿನ್ನೆಲೆ, ಭ್ರಷ್ಟಾಚಾರ ವಿರೋಧಿ ವೇದಿಕೆ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ.

    ಕುಂದೂರು ಗ್ರಾಮ ಪಂಚಾಯ್ತಿಯಲ್ಲಿ ನಡೆದ ಭ್ರಷ್ಟಾಚಾರವನ್ನು ಬಯಲು ಮಾಡಿದಕ್ಕೆ ಹಲ್ಲೆ ಮಾಡಲಾಗಿದೆ. ಭ್ರಷ್ಟಾಚಾರ ವಿರೋಧಿ ವೇದಿಕೆ ಮುಖಂಡ ಪ್ರಸನ್ನ ಕುಮಾರ್ ಮೇಲೆ ಪಂಚಾಯ್ತಿಯ ಕೆಲ ಸದಸ್ಯರು ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಪ್ರಸನ್ನ ಅವರನ್ನು ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಪ್ರಸನ್ನ ಕುಮಾರ್ ಅವರು ಕುಂದೂರು ಗ್ರಾಮ ಪಂಚಾಯ್ತಿಯಲ್ಲಿ ನಡೆಯುತ್ತಿದ್ದ ಲಕ್ಷಾಂತರ ರೂಪಾಯಿ ಹಗರಣ ಬಯಲಿಗೆಳೆದಿದ್ದರು. ಅಲ್ಲದೆ ಭ್ರಷ್ಟಾಚಾರ ಬಯಲಿಗೆಳೆದು ಗ್ರಾಮ ಪಂಚಾಯತಿ ಉಪಾಧ್ಯಕ್ಷನ ಸ್ಥಾನವನ್ನು ವಜಾಗೊಳಿಸಿದ್ದರು. ಇದರಿಂದಾಗಿ ಪ್ರಸನ್ನ ಅವರ ಮೇಲೇ ಪಂಚಾಯ್ತಿಯ ಕೆಲ ಸದಸ್ಯರಿಗೆ ದ್ವೇಷ ಹುಟ್ಟಿಕೊಂಡಿತ್ತು. ಆದರಿಂದ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜಮ್ಮ ಹಾಗೂ ಅವರ ಪತಿ, ಮಾಜಿ ಅಧ್ಯಕ್ಷೆ ಗೌರಮ್ಮ ಹಾಗೂ ಅವರ ಮಗ ಮತ್ತು ಕೊಮ್ರಿ ಮಂಜುನಾಥ ಹಾಗೂ ಆಂಜನೇಯ ಎಂಬವರು ಪ್ರಸನ್ನ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

    ಘಟನೆ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮನೆ ಕಟ್ಟಲು ಬೋರ್ ವೆಲ್ ಕಟ್ ಮಾಡಿ ಮುಚ್ಚಿದ!

    ಮನೆ ಕಟ್ಟಲು ಬೋರ್ ವೆಲ್ ಕಟ್ ಮಾಡಿ ಮುಚ್ಚಿದ!

    ಬೆಂಗಳೂರು: ಆನೇಕಲ್‍ನಲ್ಲಿ ವ್ಯಕ್ತಿಯೊಬ್ಬ ಬೋರ್ ವೆಲ್ ಕಟ್ ಮಾಡಿ ಮುಚ್ಚಿದ್ದಾನೆ. ಇಲ್ಲಿನ ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊನ್ನಕಳಸಾಪುರ ಗ್ರಾಮದ ಗೋಮಾಳ ಜಾಗದಲ್ಲಿ ಹಲವು ಬಡವರು ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದಾರೆ.

    1999ರಲ್ಲಿ ಇಲ್ಲಿನ ನೀರಿನ ಸಮಸ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಇದೇ ಸರ್ಕಾರಿ ಜಾಗದಲ್ಲಿ ಬೋರ್ ವೆಲ್ ಕೊರೆಸಿ ಅದಕ್ಕೆ ಹ್ಯಾಂಡ್ ಪಂಪ್ ಹಾಕಿಸಲಾಗಿತ್ತು. ಆದ್ರೆ ಇದೇ ಜಾಗದಲ್ಲಿ ಆನಂದ್ ಎಂಬಾತ ಮನೆ ಕಟ್ಟುತ್ತಿದ್ದು ಬೋರ್ ವೆಲ್ ಕಟ್ ಮಾಡಿ ಮುಚ್ಚಿ ಹಾಕಿದ್ದಾನೆ. ಇವನಿಗೆ ಪಂಚಾಯ್ತಿಯ ಕೆಲವರ ಬೆಂಬಲವಿದ್ದು, ನ್ಯಾಯ ಕೇಳೋಕೆ ಹೋದ್ರೆ ಜನರನ್ನು ಬೆದರಿಸ್ತಿದ್ದಾನಂತೆ.

    20 ವರ್ಷಗಳಿಂದ ಈ ಜಾಗದಲ್ಲಿ ವಾಸವಿರುವ ಜನ 94 ಸಿ ಅಡಿ ಅರ್ಜಿ ಹಾಕಿಕೊಂಡಿದ್ದಾರೆ. ಆದ್ರೆ ಈತ ಯಾವುದೇ ದಾಖಲೆಯಿಲ್ಲದೆ ಮನೆ ಕಟ್ಟುತ್ತಿದ್ದು, ಜನರ ಕುಡಿಯುವ ನೀರಿಗೂ ಕಂಟಕವಾಗಿದ್ದಾನೆ. ದೂರು ನೀಡಿದ ಬಳಿಕ ಸ್ಥಳಕ್ಕೆ ಬಂದ ಪಿಡಿಓ ಗಂಗಾಧರ್ ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳೋದಾಗಿ ತಿಳಿಸಿದ್ರು.