Tag: ಗ್ರಾಮ

  • ಅಥಣಿ ಕ್ಷೇತ್ರದ ಅಭಿವೃದ್ಧಿಗೆ ರಮೇಶ್ ಜಾರಕಿಹೊಳಿ ಕೊಡುಗೆ ಅಪಾರ: ಕುಮಟಳ್ಳಿ

    ಅಥಣಿ ಕ್ಷೇತ್ರದ ಅಭಿವೃದ್ಧಿಗೆ ರಮೇಶ್ ಜಾರಕಿಹೊಳಿ ಕೊಡುಗೆ ಅಪಾರ: ಕುಮಟಳ್ಳಿ

    ಚಿಕ್ಕೋಡಿ: ಅಥಣಿ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಅವರ ಕೊಡುಗೆ ಅಪಾರವಾಗಿದೆ. ನೀರಾವರಿ ಇಲಾಖೆಯಡಿ ಅವರು ಅನೇಕ ಅಭಿವೃದ್ದಿ ಕಾರ್ಯಗಳಿಗೆ ಅನುದಾನ ನೀಡಿಲು ಸಹಕಾರ ನೀಡಿದ್ದಾರೆ. ಅವರ ಬೆಳವಣಿಗೆ ಸಹಿಸದೇ ರಾಜಕೀಯ ಷಡ್ಯಂತ್ರದಿಂದ ಈ ಎಲ್ಲ ಬೆಳವಣಿಗೆಗಳು ನಡೆದಿವೆ. ಆದಷ್ಟು ಬೇಗನೆ ಅವರು ಆರೋಪ ಮುಕ್ತರಾಗಲಿದ್ದಾರೆಂದು ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ್ ಕುಮಟಳ್ಳಿ ಅಭಿಪ್ರಾಯಾಪಟ್ಟಿದ್ದಾರೆ.

    ನಂದೇಶ್ವರ-ಜನವಾಡ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೆರಿಸಿ ಮಾತನಾಡಿದ ಮಹೇಶ್ ಕುಮಟಳ್ಳಿ ಅವರು, ಅಥಣಿ ಮತಕ್ಷೇತ್ರದಲ್ಲಿ ಶಿಕ್ಷಣ, ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿ ಸುಧಾರಣೆ ಕೈಗೊಳ್ಳಲಾಗುತ್ತಿದೆ. ಮುಂಬರುವ ದಿನಗಳಲ್ಲಿ ನದಿ ದಂಡೆಯ ಗ್ರಾಮಗಳಿಗೆ ಶಾಪವಾಗಿರುವ ಸವಳು, ಜವಳು ಸಮಸ್ಯೆ ಹೋಗಲಾಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೂ ಆದ್ಯತೆ ನೀಡಿ ಅಭಿವೃದ್ಧಿ ಪಡಿಸಲಾಗುವುದೆಂದು ಹೇಳಿದರು. ಇದನ್ನೂ ಓದಿ: ಹತ್ತು ದಿನಗಳಲ್ಲಿ ನನ್ನ ಮುಂದಿನ ರಾಜಕೀಯ ನಿರ್ಣಯ: ರಮೇಶ್ ಜಾರಕಿಹೊಳಿ

    ಕೊರೊನಾ ನಿಯಂತ್ರಣಕ್ಕೆ ಬಂದಿದೆ ಎಂದು ಯಾರು ನಿರ್ಲಕ್ಷ್ಯ ಮಾಡಬೇಡಿ, ಯಾವ ರೂಪದಲ್ಲಿ ಬರುತ್ತದೆ ಎಂಬುದು ಗೊತ್ತಾಗುವುದಿಲ್ಲ, ಕುಟುಂಬದ ಮುಖ್ಯಸ್ಥರು, ಮನೆಯಲ್ಲಿರುವ ಹಿರಿಯರು ಮತ್ತು ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕೆಂದು ಮನವಿ ಮಾಡಿಕೊಂಡರು.

    ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡ ರಮೇಶ್ ಗೌಡ ಪಾಟೀಲ್, ವಿರುಪಾಕ್ಷ ಹಿರೇಮಠ, ರಾಮಣ್ಣ ದೇವಣ್ಣವರ, ಬಾಳಾಸಾಹೇಬ ಪಾಟೀಲ್, ಪಿ.ಕೆ.ಪಿ.ಎಸ್ ಅಧ್ಯಕ್ಷ ಬಸಪ್ಪ ಮುಧೋಳ, ಶಿವಾನಂದ ಪಾಟೀಲ್, ಬಸಪ್ಪ ಚಂಡಕಿ, ಮಹೇಶಗೌಡ ಪಾಟೀಲ್, ಶ್ರೀಧರ, ಷಣ್ಮುಖ ಲಾಲಸಿಂಗಿ, ಕೆಂಚಪ್ಪ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

  • ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಲು ಅಡ್ಡಿ – ಗ್ರಾಮ ಪಂಚಾಯತ್ ಮುಂದೆಯೇ ಅಂತ್ಯಕ್ರಿಯೆ

    ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಲು ಅಡ್ಡಿ – ಗ್ರಾಮ ಪಂಚಾಯತ್ ಮುಂದೆಯೇ ಅಂತ್ಯಕ್ರಿಯೆ

    ಹಾವೇರಿ: ಜಿಲ್ಲೆಯ ಗ್ರಾಮದಲ್ಲಿ ಯಾರೇ ನಿಧನ ಹೊಂದಿದರೂ ಅವರನ್ನು ಗ್ರಾಮದ ಬಳಿ ಎರಡು ಎಕರೆ ಜಮೀನಿನಲ್ಲಿರುವ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಿಕೊಂಡು ಬರಲಾಗುತ್ತಿತ್ತು. ಆದರೆ ಇಂದು ಮೃತ ಮಹಿಳೆಯೊಬ್ಬರನ್ನು ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಲು ಗ್ರಾಮದ ವ್ಯಕ್ತಿಯೋರ್ವ ಅಡ್ಡಿಪಡಿಸಿದ ಕಾರಣಕ್ಕೆ ಪಂಚಾಯತ್ ಮುಂದೆ ಶವ ಸುಡಲು ಮೃತಳ ಕುಂಟುಂಬದವರು ಮುಂದಾಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಹರನಗಿರಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಹನುಮವ್ವ ಅಣ್ಣಿಗೇರಿ(45) ಎಂಬವರು ಇಂದು ಮೃತಪಟ್ಟಿದ್ದರು. ಬಳಿಕ ಅಂತ್ಯಸಂಸ್ಕಾರಕ್ಕೆ ಮೃತಳ ಸಂಬಂಧಿಕರು ಸಿದ್ಧತೆ ಮಾಡಲು ಸ್ಮಶಾನಕ್ಕೆ ಕಟ್ಟಿಗೆ ತಗೆದುಕೊಂಡು ಹೋಗುತ್ತಿದ್ದರು. ಆಗ ವ್ಯಕ್ತಿಯೋರ್ವ ಮೃತಳ ಕುಟುಂಬದವರಿಗೆ ಅಡ್ಡಿಪಡಿಸಿದ್ದಾರೆ. ಅಲ್ಲದೆ ಸ್ಮಶಾನ ನಮ್ಮ ಹೆಸರಿನಲ್ಲಿದೆ, ನೀವು ಇಲ್ಲಿ ಅಂತ್ಯಸಂಸ್ಕಾರ ಮಾಡಬಾರದು ಎಂದು ತಡೆಯೊಡ್ಡಿದ್ದಾರೆ. ಇದರಿಂದ ಕಂಗಾಲಾದ ಮೃತಳ ಕುಟುಂಬಸ್ಥರು ಗ್ರಾಮ ಪಂಚಾಯತ್ ಮುಂದೆ ಅಂತ್ಯಸಂಸ್ಕಾರ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ: ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ – ಬಯಲಾಯ್ತು ಮರ್ಡರ್ ರಹಸ್ಯ

    ಹನುಮವ್ವ ಅಣ್ಣಿಗೇರಿಯ ಅಂತ್ಯಸಂಸ್ಕಾರ ಮಾಡಲು ಕುಟುಂಬಸ್ಥರು ಸಿದ್ಧತೆ ಮಾಡುತ್ತಿರುವ ವಿಷಯ ತಿಳಿದ ಗ್ರಾಮದ ವ್ಯಕ್ತಿಯೊಬ್ಬ ದಾರಿಗೆ ದೊಡ್ಡದಾದ ಗುಂಡಿ ತೋಡಿ, ಗುಂಡಿಗೆ ನೀರು ತುಂಬಿಸಿ ಅಡ್ಡಿ ಮಾಡಿದ್ದಾನೆ. ಹೀಗಾಗಿ ಮೃತಳ ಕುಟುಂಬದವರು ಗ್ರಾಮ ಪಂಚಾಯತ್ ಕಚೇರಿ ಮುಂದೆ ಕಟ್ಟಿಗೆ ಇಟ್ಟು ಅಂತ್ಯಸಂಸ್ಕಾರ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕಂದಾಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳು ಹಾಗೂ ಪೋಲಿಸರು ಮೃತಳ ಕುಟುಂಬಸ್ಥರು ಹಾಗೂ ಅಡ್ಡಿಪಡಿಸಿದ ವ್ಯಕ್ತಿಗೆ ಪಂಚಾಯತ್ ಮುಂದೆ ಅಂತ್ಯಸಂಸ್ಕಾರ ಮಾಡದಂತೆ ಮತ್ತು ಸ್ಮಶಾನದಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವಂತೆ ಮನವೊಲಿಸಿದ್ದಾರೆ.

  • ಅನಧಿಕೃತ ಕಲ್ಲುಕ್ವಾರಿಯಲ್ಲಿ ಸ್ಫೋಟ – 50ಕ್ಕೂ ಹೆಚ್ಚು ಮನೆಗಳಲ್ಲಿ ಬಿರುಕು

    ಅನಧಿಕೃತ ಕಲ್ಲುಕ್ವಾರಿಯಲ್ಲಿ ಸ್ಫೋಟ – 50ಕ್ಕೂ ಹೆಚ್ಚು ಮನೆಗಳಲ್ಲಿ ಬಿರುಕು

    ಕಾರವಾರ: ಜೋಯಿಡಾ ತಾಲೂಕಿನ ರಾಮನಗರದಲ್ಲಿರುವ ಕಲ್ಲುಕ್ವಾರಿಯಲ್ಲಿ ಈ ಹಿಂದೆ ಕಲ್ಲು ಗಣಿಗಾರಿಕೆಗೆ ಅನುಮತಿ ಪಡೆದಿದ್ದ ಡಿ.ಬಿ.ಎಲ್ ಕಂಪನಿ ಜೂನ್ ಮತ್ತು ಜುಲೈ ತಿಂಗಳಲ್ಲಿ ಕಲ್ಲು ಗಣಿಯಲ್ಲಿ ಸ್ಫೋಟ ನಡೆಸಲು ನಿಷೇಧವಿದ್ದರೂ ಕಲ್ಲು ಗಣಿಗಾರಿಕೆ ಮಾಡುತ್ತಿದೆ. ಇದರಿಂದ 50ಕ್ಕೂ ಹೆಚ್ಚು ಮನೆಗಳು ಬಿರುಕು ಬಿಟ್ಟಿದೆ.

    ಸ್ಫೋಟದಿಂದಾಗಿ ರಾಮನಗರದ 50ಕ್ಕೂ ಹೆಚ್ಚು ಮನೆಗಳಲ್ಲಿ ಗೋಡೆಗಳು ಬಿರುಕು ಬಿಟ್ಟಿವೆ. ಈ ಕುರಿತು ರಾಮನಗದ ನಿವಾಸಿಗಳು ರಾಮನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅನಧಿಕೃತವಾಗಿ ಬ್ಲಾಸ್ಟಿಂಗ್ ನಡೆಸುತ್ತಿರುವ ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ರಾಮನಗರದ ಹಲವು ಗಣಿ ಭೂಮಿಯಲ್ಲಿ ಬ್ಲಾಸ್ಟಿಂಗ್ ನಡೆಸುತ್ತಿದೆ ಎಂಬ ಆರೋಪವಿದೆ. ಇದನ್ನೂ ಓದಿ: ಗಾಳಿಪಟದ ದಾರದಿಂದ ವ್ಯಕ್ತಿಗೆ ಗಾಯ, ನೆಲಕ್ಕೆ ಚಿಮ್ಮಿದ ನೆತ್ತರು

    ಕಳೆದ ಮೂರು ವರ್ಷದ ಹಿಂದ ರಾಮನಗರದಲ್ಲಿ ನಿಗದಿ ಪಡಿಸಿದ ಜಾಗದ ಜೊತೆ ಸರ್ಕಾರಿ ಭೂಮಿಯಲ್ಲೂ ಸಹ ಕಲ್ಲು ಗಣಿಗಾರಿಕೆ ಯನ್ನು ಅಕ್ರಮವಾಗಿ ನಡೆಸಲಾಗುತಿತ್ತು. ಇದರಿಂದಾಗಿ ರಾಮನಗರದ ಸುತ್ತಮುತ್ತಲ ಕೃಷಿ ಭೂಮಿ ಧೂಳಿನಿಂದ ತುಂಬಿ ಕೃಷಿ ಚಟುವಟಿಕೆಗೆ ತೊಂದರೆಯಾಗಿತ್ತು. ಈ ಕುರಿತು ಪಬ್ಲಿಕ್ ಟಿವಿ ವರದಿ ಮಾಡಿತ್ತು. ಸುದ್ದಿ ಪ್ರಸಾರವಾಗುತಿದ್ದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಪರಿಸರ ಇಲಾಖೆ ಗಣಿ ಮಾಲೀಕರಿಗೆ ನೋಟಿಸ್ ನೀಡುವ ಜೊತೆ ಅಕ್ರಮ ಗಣಿಗಾರಿಕೆ ನಡೆಸುವವರ ವಿರುದ್ಧ ಕ್ರಮ ಕೈಗೊಂಡಿತ್ತು.

    ಈಗ ರಾಮನಗರದಲ್ಲಿ ಗಣಿಗಾರಿಕೆ ಪುನಃ ಪ್ರಾರಂಭವಾಗಿದ್ದು, ಸರ್ಕಾರದ ನಿಯಮದ ಪ್ರಕಾರ ಗಣಿಗಾರಿಕೆ ನಡೆಸಬೇಕಿದ್ದ ಗುತ್ತಿಗೆ ಪಡೆದ ಕಂಪನಿಗಳು ಹೆಚ್ಚು ಲಾಭಕ್ಕಾಗಿ ಇದೀಗ ಮಳೆಗಾಲದಲ್ಲೂ ಹೆಚ್ಚಿನ ಮಟ್ಟದ ಬ್ಲಾಸ್ಟಿಂಗ್ ನಡೆಸುತ್ತಿದೆ. ಇದರಿಂದ ಸುತ್ತಮುತ್ತಲ ಪ್ರದೇಶದಲ್ಲಿರುವ ಮನೆಗಳು ಬಿರುಕು ಬಿಟ್ಟಿದೆ. ಇದರಿಂದಾಗಿ ಸ್ಥಳೀಯ ನಿವಾಸಿಗಳು ಭಯದಲ್ಲೇ ದಿನ ದೂಡುವಂತೆ ಮಾಡಿದೆ.

    ಇನ್ನು ಅಕ್ರಮ ಬ್ಲಾಸ್ಟಿಂಗ್ ಮಾಡುತ್ತಿರುವ ಕುರಿತು ದೂರು ದಾಖಲಾದ ಹಿನ್ನಲೆಯಲ್ಲಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಕಂದಾಯ ಇಲಾಖೆಯಾಗಲಿ, ಪರಿಸರ ಇಲಾಖೆಯಾಗಲಿ ದೂರು ನೀಡಿದರೂ ಇತ್ತ ಬಾರದೇ ಜಾಣ ಮೌನ ವಹಿಸಿದೆ. ಈ ಭಾಗದಲ್ಲಿ ಬ್ಲಾಸ್ಟಿಂಗ್ ಹೆಚ್ಚಾದಲ್ಲಿ ಸ್ಥಳೀಯ ಗ್ರಾಮದ ಹಲವು ಮನೆಗಳು ಬೀಳುವ ಆತಂಕ ಸಹ ಇದೆ.

  • ಪಾನಮತ್ತ ವ್ಯಕ್ತಿಯ ಕಿತಾಪತಿ – ಮಹಿಳೆಯರ ಮುಂದೆ ಬೆತ್ತಲೆ ಪ್ರದರ್ಶನ

    ಪಾನಮತ್ತ ವ್ಯಕ್ತಿಯ ಕಿತಾಪತಿ – ಮಹಿಳೆಯರ ಮುಂದೆ ಬೆತ್ತಲೆ ಪ್ರದರ್ಶನ

    ಚಾಮರಾಜನಗರ: ನರೇಗಾ ಕಾಮಗಾರಿಯಲ್ಲಿ ನಿರತರಾಗಿದ್ದ ಮಹಿಳೆಯರ ಮುಂದೆ ಅಶ್ಲೀಲ ವರ್ತನೆ ಮಾಡಿ, ಬೆತ್ತಲೆಯಾಗಿ ಪಾನಮತ್ತ ವ್ಯಕ್ತಿಯೊಬ್ಬ ಕಿತಾಪತಿ ಮಾಡಿದ ಘಟನೆ ಚಾಮರಾಜನಗರ ತಾಲೂಕು ಪುಣಜನೂರು ಗ್ರಾಮದಲ್ಲಿ ವರದಿಯಾಗಿದೆ.

    ಅಶ್ಲೀಲವಾಗಿ ವರ್ತನೆ ಮಾಡಿದ ವ್ಯಕ್ತಿಯನ್ನು ಚಾಮರಾಜನಗರ ತಾಲೂಕು ಪುಣಜನೂರು ಗ್ರಾಮದ ತಾಂಡವಮೂರ್ತಿ ಎಂದು ಗುರುತಿಸಲಾಗಿದೆ. ತಾಂಡವಮೂರ್ತಿ ಗ್ರಾಮದಲ್ಲಿ ನರೇಗಾ ಯೋಜನೆಯಡಿಯಲ್ಲಿ ಮಹಿಳೆಯರು ಕೆಲಸ ನಿರ್ವಹಿಸುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ತಗಾದೆ ತೆಗೆದು ಜಗಳವಾಡಿದ್ದಾನೆ. ಕುಡಿದ ಮತ್ತಿನಲ್ಲಿದ್ದ ತಾಂಡವಮೂರ್ತಿ ಜಗಳವಾಡಿ ಬಳಿಕ ಬೆತ್ತಲೆಯಾಗಿ ಮಹಿಳೆಯರಿಗೆ ಮುಜುಗರವಾಗುವಂತೆ ನಡೆದುಕೊಂಡಿದ್ದಾನೆ. ಇದನ್ನೂ ಓದಿ: ದಯಾಮರಣ ಕೋರಿ ಧರಣಿ ಕುಳಿತ ರೈತ ಕುಟುಂಬ

    ತಾಂಡವಮೂರ್ತಿ ಬೆತ್ತಲೆಯಾಗಿ ಓಡಾಡುತ್ತಿದ್ದನ್ನು ನೋಡಿದ ಸ್ಥಳೀಯರು ವೀಡಿಯೋ ಮಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದರಿಂದ ಕುಪಿತಗೊಂಡ ತಾಂಡವಮೂರ್ತಿಯ ಮಕ್ಕಳಾದ ಮಹೇಂದ್ರ ಮತ್ತು ಸಂತೋಷ್ ಪೊಲೀಸರಿಗೆ ಒಪ್ಪಿಸಿದ ಗ್ರಾಮದ ಮೂವರ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದ್ದಾರೆ. ಬಳಿಕ ಗ್ರಾಮಸ್ಥರು ಹಲ್ಲೆಗೊಳದ ಮೂವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಶ್ಲೀಲವಾಗಿ ವರ್ತಿಸಿದ ತಾಂಡವಮೂರ್ತಿ ಮತ್ತು ಆತನ ಮಕ್ಕಳಾದ ಮಹೇಂದ್ರ, ಸಂತೋಷ್‍ನ್ನು ಪೊಲೀಸರು ಬಂಧಿಸಿದ್ದು, ಚಾಮರಾಜನಗರ ಪೂರ್ವ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ನೊಣಗಳ ಹಾವಳಿಗೆ ಜನ ಸುಸ್ತೋ ಸುಸ್ತು – ನೊಣಕ್ಕಂಜಿ ಊರು ತೊರೆಯಲಾರಂಭಿಸಿದ ಸಾರ್ವಜನಿಕರು

    ನೊಣಗಳ ಹಾವಳಿಗೆ ಜನ ಸುಸ್ತೋ ಸುಸ್ತು – ನೊಣಕ್ಕಂಜಿ ಊರು ತೊರೆಯಲಾರಂಭಿಸಿದ ಸಾರ್ವಜನಿಕರು

    ಗದಗ: ತಾಲೂಕಿನ ಹರ್ತಿ ಗ್ರಾಮದ ಜನರ ಜೀವನ ದುಸ್ತರವಾಗಿದೆ. ಗ್ರಾಮೀಣ ಭಾಷೆಐಲ್ಲಿ ಹೇಳುವುದಾದರೆ, ದಂಡಿನ ಗುಂಡಿಗೆ ಹೆದರಲಿಲ್ಲಾ, ದಾಳಿಗೆ ಹೆದರಲಿಲ್ಲಾ, ಆದರೆ ನೊಣಗಳ ಹಿಂಡಿಗೆ ಹೆದರುವಂತಾಗಿದೆ.

    ಈ ಗ್ರಾಮದ ಜನ ಏನು ತಪ್ಪು ಮಾಡಿರುವರೋ ಗೊತ್ತಿಲ್ಲ. ಈ ಹಳ್ಳಿಗೆ ವೈರಿಗಳ ದಂಡೊಂದು ಲಗ್ಗೆ ಇಟ್ಟು ನಿತ್ಯ ಕಾಟ ಕೊಡುತ್ತಿವೆ. ಆ ವೈರಿಗಳ ಕಾಟಕ್ಕೆ ಇಲ್ಲಿನ ಜನ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಮನೆ ಒಳಗೆ, ಹೊರಗೆ ಎಲ್ಲಿ ಕೂತರು ಸಮಾಧಾನವೇ ಇಲ್ಲದಂತಾಗಿದೆ. ಊಟ, ನಿದ್ರೆ, ವಿಶ್ರಾಂತಿಗೂ ಬಿಡಲ್ಲಾ. ವೈರಿಗಳ ಆಟೋಟಪಕ್ಕೆ ಊರಿನ ಜನ ಬೇಸತ್ತು ಹೋಗಿದ್ದಾರೆ.

    ಹರ್ತಿ ಗ್ರಾಮದ ಜನರ ಪರಸ್ಥಿತಿ ನಾಲ್ಕೈದು ತಿಂಗಳು ಹೇಳ ತೀರದಾಗಿದೆ. ಕಾರಣ ಊರ ಪಕ್ಕದ ಕೋಳಿ ಫಾರ್ಮ್ ನಿಂದ ಲಗ್ಗೆ ಇಟ್ಟ ಈಗಗಳ ದಂಡುಪಾಳ್ಯ, ಈ ಜನರ ನೆಮ್ಮದಿ ಹಾಳು ಮಾಡಿದೆ. ಒಂದಡೆ ಕೊರೊನಾ ಹಾವಳಿ, ಮತ್ತೊಂದಡೆ ನೊಣಗಳ ಹಾವಳಿಯಿಂದ ಅನಾರೋಗ್ಯಕ್ಕೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡಿದ್ದಾರೆ. ಮಾವು, ಬೇವು ಹಣ್ಣಿನ ಸೀಜನ್‍ನಲ್ಲಿ ನೊಣಗಳು ಹೆಚ್ಚು ಇರುತ್ತವೆ. ಆದರೆ ಮಳೆಗಾಲದಲ್ಲೂ ಎಲ್ಲಿ ಕುಂತರೂ ಸಮಾಧಾನ ಆಗುವುದಿಲ್ಲ. ಅಡಿಗೆ ಮಾಡಿ ಊಟ ಮಾಡಲಿಕ್ಕೂ ಆಗುತ್ತಿಲ್ಲಾ, ನೀರು ಕುಡಿಯಲು ಆಗುತ್ತಿಲ್ಲ. ಅಂಗಡಿ, ಹೋಟೆಲ್ ನವರ ಪರಸ್ಥಿತಿ ನೋಣ ಹೊಡೆಯುವುದೇ ಕಾಯಕವಾಗಿದೆ.

    ಮಕ್ಕಳು, ವೃದ್ಧರ ಪರಸ್ಥಿತಿ ಕೇಳತೀರದು. ಜಾನುವಾರುಗಳ ಮೇಲು ಜೇನು ಹುಳುವಿನಂತೆ ಕೂಡಿರುತ್ತವೆ. ಇದರಿಂದ ಗ್ರಾಮದಲ್ಲಿ ಅನೇಕರು ವಾಂತಿ, ಬೇಧಿ, ಜ್ವರ ಹೀಗೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಬೇಸಿಗೆಯಲ್ಲಿ ಗಾಳಿ ಬೀಸಿಕೊಂಡಂತೆ ಮಳೆಗಾಲದಲ್ಲೂ ನೊಣಗಳ ಕಾಟಕ್ಕೆ ಗಾಳಿ ಬೀಸಿಕೊಳ್ಳಬೇಕಾದ ಪರಿಸ್ಥಿತಿ ಇವರದ್ದಾಗಿದೆ. ಕೊರೊನಾ ಸಂದರ್ಭದಲ್ಲಿ ಮಕ್ಕಳನ್ನು ಕಟ್ಟಿಕೊಂಡು ವಾಸಿಸದೇ ಊರು ತೊರೆಯುವ ಸಂದರ್ಭ ಬಂದಿದೆ. ಅಧಿಕಾರಿಗಳು ಇತ್ತಕಡೆ ಗಮನ ಹರಿಸಿ, ಕೋಳಿ ಫಾರ್ಮ್‍ಗಳನ್ನು ಬಂದ್ ಮಾಡಿ, ಜನರ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮ ಹಾಗೂ ತೊಂದರೆಗಳನ್ನು ತಪ್ಪಿಸಬೇಕು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

    ಈ ಕೋಳಿ ಫಾರ್ಮ್ ಆಗಿ ನಾಲ್ಕೈದು ವರ್ಷಗಳಿಂದ ಆಗಾಗ ಇದೇ ಸಮಸ್ಯೆ ಎದುರಿಸುತ್ತಿದೆ. ಆದರೆ ಇತ್ತೀಚಿಗೆ ನೊಣಗಳ ಹಾವಳಿ ತುಂಬಾನೆ ಆಗಿದ್ದು, ನೊಣಗಳ ಕಾಟಕ್ಕೆ ಜನ ಸುಸ್ತಾಗಿದ್ದಾರೆ. ಊರಾಚೆಯ ಆಂಧ್ರ ಪ್ರದೇಶ ಮೂಲದ ಪ್ರಭಾವಿ ಗುತ್ತಿಗೆದಾರ ಸುಬ್ಬಾರೆಡ್ಡಿ ಸಂಬಂಧಿಗಳ ಈ ಕೋಳಿ ಫಾರ್ಮ್ ನಲ್ಲಿ ಸ್ವಚ್ಛತೆ, ಔಷಧ ಸಿಂಪಡಣೆ, ತ್ಯಾಜ್ಯ ವಿಲೇವಾರಿ ಸರಿಯಾದ ನಿರ್ವಹಣೆ ಇಲ್ಲದ ಕಾರಣ ನೊಣಗಳು ಹೆಚ್ಚಾಗಿ ಹರ್ತಿ ಜನರನ್ನು ಕಾಡತೊಡಗಿವೆ. ಸತ್ತ ಕೋಳಿಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಾರೆ ಎಂಬ ಆರೋಪಿಸಿದ್ದಾರೆ.

    ಇತ್ತೀಚಿಗೆ ಅತೀ ಹೆಚ್ಚು ನೊಣಗಳು ಉದ್ಭವಿಸಿ ಜನರ ನಿದ್ದೆಗೆಡಿಸಿದೆ. ಪಿಡಿಓ, ಅಧ್ಯಕ್ಷರು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಎಲ್ಲರಿಗೂ ಹೇಳಿದರೂ ನೊಣಗಳು ಕಡಿಮೆ ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇದು ಪ್ರಭಾವಿಯೊಬ್ಬರ ಫಾರ್ಮ್ ಆಗಿದ್ದರಿಂದ ಯಾರು ಇವರ ಗೋಜಿಗೆ ಹೊಗುತ್ತಿಲ್ಲ. ಗ್ರಾಮ ಪಂಚಾಯತ ನಿಂದ ಕೋಳಿ ಫಾರ್ಮ್‍ಗೆ ಕೇವಲ ಸೂಚನೆ ನೀಡ್ತಾರೆ, ಆದ್ರೆ ಯಾವುದೆ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಜನ್ರಿಗೆ ಮಾರಕವಾಗುವ ಈ ಕೋಳಿ ಫಾರ್ಮ್‍ಗಳನ್ನ ಬಂದ್ ಮಾಡಬೇಕು. ಕೊರೊನಾ ಸಂದರ್ಭದಲ್ಲಿ ಜನ-ಜಾನುವಾರಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ ಎಂಬುದು ಎಲ್ಲರ ಬೇಡಿಕೆಯಾಗಿದೆ. ಇದನ್ನೂ ಓದಿ: ಸಿಎಂ ಖುರ್ಚಿಗಾಗಿ ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ಈಗಲೇ ಕುಸ್ತಿ ಶುರುವಾಗಿದೆ: ಕಾರಜೋಳ

  • ಅಂಬುಲೆನ್ಸ್ ಚಾಲಕನ ಅಜಾಗರೂಕತೆಗೆ ವ್ಯಕ್ತಿ ಬಲಿ – ಸಂಬಂಧಿಕರಿಂದ ಆರೋಪ

    ಅಂಬುಲೆನ್ಸ್ ಚಾಲಕನ ಅಜಾಗರೂಕತೆಗೆ ವ್ಯಕ್ತಿ ಬಲಿ – ಸಂಬಂಧಿಕರಿಂದ ಆರೋಪ

    ಧಾರವಾಡ: ಅಂಬುಲೆನ್ಸ್ ಚಾಲಕನ ಅಜಾಗರೂಕತೆಯಿಂದ ರೋಗಿಯೊಬ್ಬರು ಸಾವನ್ನಪ್ಪಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

    ಧಾರವಾಡ ತಾಲೂಕಿನ ಕೋಟೂರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಖುತಬುದ್ದಿನ್ ನನ್ನೆಸಾಬನವರ (50) ಮೃತಪಟ್ಟ ವ್ಯಕ್ತಿ. ಕಳೆದ ರಾತ್ರಿ ಖುತಬುದ್ದಿನರಿಗೆ ಎದೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಕೋಟೂರು ಗ್ರಾಮದಿಂದ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುತ್ತಿರುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

    ಮೃತ ವ್ಯಕ್ತಿಯ ಕುಟುಂಬದವರು ವೀಡಿಯೋವೊಂದನ್ನು ಮಾಡಿ, ಅಂಬುಲೆನ್ಸ್ ಚಾಲಕ ಆಕ್ಸಿಜನ್ ನೀಡದೇ ಅಜಾಗರೂಕತೆ ತೋರಿಸಿದ್ದಾನೆ. ಅಲ್ಲದೇ ಅಂಬುಲನ್ಸ್‍ನಲ್ಲಿ ಚಾಲಕನೊಬ್ಬನೇ ರೋಗಿಗೆ ಆಕ್ಸಿಜನ್ ಹಾಕಿದ್ದ, ಅಂಬುಲನ್ಸ್‍ನಲ್ಲಿ ನರ್ಸ್ ಕೂಡಾ ಇರಲಿಲ್ಲ ಎಂದು ಆರೋಪಿಸಿದ್ದಾರೆ. ಜಿಲ್ಲಾ ಆಸ್ಪತ್ರೆಗೆ ಬರುತಿದ್ದಂತೆಯೇ ಅಂಬುಲನ್ಸ್ ಚಾಲಕ ವಾಹನ ನಿಲ್ಲಿಸಿ ಪರಾರಿಯಾದ್ದಾನೆ ಎಂದು ತಿಳಿಸಿದ್ದಾರೆ.

    ಆಸ್ಪತ್ರೆಗೆ ದಾಖಲಿಸಲು ರೋಗಿಯನ್ನು ಗ್ರಾಮದಿಂದ ಅರ್ಧ ದಾರಿಗೆ ಟಮ್ ಟಮ್ ವಾಹನದಲ್ಲಿ ಮನೆಯವರೇ ಕರೆದೊಯ್ದಿದ್ದರು. ನಂತರ ಅರ್ಧ ದಾರಿಗೆ ಬಂದ ಮೇಲೆ ಅಂಬುಲನ್ಸ್ ಬಂದಿತ್ತು. ಇದನ್ನೂ ಓದಿ: ಡ್ರೋನ್ ಮೂಲಕ ಔಷಧಿಗಳ ರವಾನೆಯ ಪರೀಕ್ಷಾರ್ಥ ಹಾರಾಟ

  • ಭಾರೀ ಮಳೆಯಿಂದ ರಸ್ತೆಗೆ ಬಂದ ಮರದ ದಿನ್ನೆಗಳ ರಾಶಿ- ಗ್ರಾಮಸ್ಥರಿಗೆ ತೊಂದರೆ

    ಭಾರೀ ಮಳೆಯಿಂದ ರಸ್ತೆಗೆ ಬಂದ ಮರದ ದಿನ್ನೆಗಳ ರಾಶಿ- ಗ್ರಾಮಸ್ಥರಿಗೆ ತೊಂದರೆ

    ಧಾರವಾಡ: ಧಾರವಾಡ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಕಂಬಾರಗಣವಿ ಗ್ರಾಮದ ರಸ್ತೆ ಸಂಪರ್ಕ ಕಡಿತಗೊಂಡಿದೆ. ರಸ್ತೆಯ ಮೇಲ್ಭಾಗದಲ್ಲಿ ಮರದ ದಿನ್ನೆಗಳು ಸಾಕಷ್ಟು ಬಂದು ನಿಂತುಕೊಂಡಿದೆ. ಇದರಿಂದ ಗ್ರಾಮಸ್ಥರು ತೊಂದರೆಗೊಳಗಾಗಿದ್ದಾರೆ.

    ಅಳ್ನಾವರ ತಾಲೂಕಿನ ಕಂಬಾರಗಣವಿ ಗ್ರಾಮದ ಈ ರಸ್ತೆ ಅರಣ್ಯದ ಮಧ್ಯದಲ್ಲಿದ್ದು, ಈ ರಸ್ತೆ ಗ್ರಾಮಕ್ಕೆ ಹೋಗಲು ಇರುವಂತಹ ಒಂದೇ ಒಂದು ರಸ್ತೆಯಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಇದೀಗ ರಸ್ತೆ ಮಧ್ಯದ ಹಳ್ಳದ ಸೇತುವೆ ಮುಳುಗಡೆಗೊಂಡಿದೆ. ಇದರಿಂದ ಗ್ರಾಮಸ್ಥರು ಯಾರೂ ಹೊರಗೆ ಬರದಂತಾಗಿದೆ. ಇದನ್ನೂ ಓದಿ: ಧಾರವಾಡ ಜಿಲ್ಲೆಯಲ್ಲಿ ಮಳೆ – ಕೆರೆಯ ಕಟ್ಟೆ ಒಡೆದು ನೂರಾರು ಎಕರೆ ಜಮೀನು ಜಲಾವೃತ!

    ಹಳ್ಳದ ನೀರಿನೊಂದಿಗೆ ದೊಡ್ಡ ದೊಡ್ಡ ಮರದ ದಿನ್ನೆಗಳು ತೇಲಿ ಬಂದಿವೆ. ಹೀಗಾಗಿ ಸೇತುವೆ ಮೇಲೆ ನೀರು ನಿಲ್ಲುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರೇ ಹಣ ಸಂಗ್ರಹಿಸಿ ದಿನ್ನೆ ತೆರವುಗೊಳಿಸಿದ್ದಾರೆ. ಅಲ್ಲದೆ ಸಾಕಷ್ಟು ಮಣ್ಣ ಕೂಡ ಸೇತುವೆ ಮೇಲೆ ನಿಂತಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅರಣ್ಯದಿಂದ ನೀರು ಇಲ್ಲಿಗೆ ಹರಿದು ಬರುತಿದ್ದು, ಜನರು ಟ್ರ್ಯಾಕ್ಟರ್ ಮೂಲಕ ಸೇತುವೆ ದಾಟುವಂತ ಪರಿಸ್ಥಿತಿ ಬಂದಿದೆ.

  • ಕಾಡಾನೆ ಹಿಂಡನ್ನು ಕಾಡಿಗಟ್ಟುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ

    ಕಾಡಾನೆ ಹಿಂಡನ್ನು ಕಾಡಿಗಟ್ಟುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ

    ಮಡಿಕೇರಿ: ಕಳೆದ ಹಲವು ದಿನಗಳಿಂದ ಜಿಲ್ಲೆಯಲ್ಲಿ ಹಲವರು ಪ್ರಾಣ ಕಳೆದುಕೊಳ್ಳಲು ಕಾರಣವಾಗಿದ್ದ, 20 ಕಾಡಾನೆಗಳ ಹಿಂಡನ್ನು ಮೀಸಲು ಅರಣ್ಯಕ್ಕೆ ಸೇರಿಸುವಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದೆ.

    ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ತಿತಿಮತಿ ಆರ್.ಆರ್.ಟಿ ತಂಡ ಮತ್ತು ಅನೆಚೌಕೂರು ವನ್ಯಜೀವಿ ವಲಯ ಜಂಟಿ ಕಾರ್ಯಾಚರಣೆ ನಡೆಸಿತು. ಸುಮಾರು 20 ಆನೆಗಳ ಹಿಂಡನ್ನು ನೊಕ್ಯ ಗ್ರಾಮಕ್ಕೆ ಸೇರಿದ ರಾಮನಕಟ್ಟೆಯಲ್ಲಿನ ರೈಲ್ವೆ ಬ್ಯಾರಿಕೇಡ್ ಗೇಟ್ ಮೂಲಕ ನಾಗರಹೊಳೆ ಉದ್ಯಾನವನದ ಅನೆಚೌಕೂರು ವಲಯ ವ್ಯಾಪ್ತಿಯ ಮೂಲಕ ಅರಣ್ಯಕ್ಕೆ ಸೇರಿಸಲಾಯಿತು. ಇದನ್ನೂ ಓದಿ : ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಕಾರು ಡಿಕ್ಕಿ

    ಆನೆಗಳ ಹಿಂಡು ಈ ಹಿಂದೆ ಮಾಯಮುಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬುಕೋಟೆ ಎಂಬಲ್ಲಿ ಸೇರಿಕೊಂಡಿತ್ತು. ಶುಕ್ರವಾರ ಸಂಜೆವರೆಗೂ ನಡೆದ ಕಾರ್ಯಾಚರಣೆಯಲ್ಲಿ ನೊಕ್ಯ ಗ್ರಾಮದ ಚೆಪ್ಪುಡೀರ ಕುಟುಂಬದ ಸ್ಕಾಲರ್‍ಶಿಪ್ ಗದ್ದೆವರೆಗೆ ಅಟ್ಟಲಾಗಿತ್ತು. ಶನಿವಾರ ಮುಂಜಾನೆಯಿಂದ ನಡೆಸಿದ ಕಾರ್ಯಾಚರಣೆಯಲ್ಲಿ ಕಾಡು ಸೇರಿಸಲಾಯಿತು. ಇದೀಗ ಆನೆಗಳು ಮೀಸಲು ಅರಣ್ಯ ಪ್ರದೇಶ ಸೇರಿದ್ದು, ಜನರು ನಿಟ್ಟುಸಿರುವ ಬಿಡುವಂತಾಗಿದೆ. ಸುಮಾರು 15 ಅರಣ್ಯ ಇಲಾಖೆ ಸಿಬ್ಬಂದಿ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

  • ಕೊರೊನಾ ತೊಲಗಲು ಮಾರಮ್ಮ ದೇವಿಗೆ ಕುರಿ, ಕೋಳಿ ಬಲಿ

    ಕೊರೊನಾ ತೊಲಗಲು ಮಾರಮ್ಮ ದೇವಿಗೆ ಕುರಿ, ಕೋಳಿ ಬಲಿ

    ಮಂಡ್ಯ: ಇಡೀ ವಿಶ್ವವ್ಯಾಪಿ ವ್ಯಾಪಕವಾಗಿ ಹರಡಿರುವ ಕೊರೊನಾ ಮಹಾಮಾರಿ ತೊಲಗಲಿ ಎಂದು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಚನ್ನಪಿಳ್ಳೆಕೊಪ್ಪಲು ಗ್ರಾಮದ ಗ್ರಾಮಸ್ಥರು 20ಕ್ಕೂ ಹೆಚ್ಚು ಮೇಕೆ,ಕುರಿ ಮತ್ತು ಕೋಳಿಗಳನ್ನು ಬಲಿ ನೀಡಿದ್ದಾರೆ.

    ಚೆನ್ನಪಿಳ್ಳೆಕೊಪ್ಪಲು ಗ್ರಾಮದ ಗ್ರಾಮಸ್ಥರು ಸುಜ್ಜಲೂರು ಮಾರಮ್ಮ ದೇವಿಗೆ ಮೇಕೆ, ಕುರಿ, ಕೋಳಿಗಳನ್ನು ಬಲಿ ಕೊಡುವ ಮೂಲಕ ಕೊರೊನಾ ಮಹಾಮಾರಿ ತೊಲಗಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಗ್ರಾಮದ ಬೀದಿ ಬೀದಿಗೆ ತೋರಣ ಕಟ್ಟಿ ಗ್ರಾಮ ದೇವತೆಯ ಹಬ್ಬದ ರೀತಿ ಆಚರಣೆ ಮಾಡುವ ಮೂಲಕ ಕೊರೊನಾ ಬರದೆ ಇರಲಿ ಎಂದು ಮಾರಮ್ಮಾ ದೇವಿಯೊಂದಿಗೆ ಭಕ್ತಿಯಿಂದ ಬೇಡಿಕೊಂಡಿದ್ದಾರೆ. ಇದನ್ನೂ ಓದಿ: ಕೊರೊನಾಗೆ ಹೆದರಿ ಊರು ಬಿಟ್ಟು ಗುಡಿಸಲಲ್ಲಿ ಕುಟುಂಬ ಜೀವನ

    ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಂಡು ಗ್ರಾಮದ ಜನರು ಈ ರೀತಿ ಆಚರಣೆ ಮಾಡಿದ್ದಾರೆ. ಈ ಹಿಂದೆ ಗ್ರಾಮಗಳಿಗೆ ಸಾಂಕ್ರಾಮಿಕ ರೋಗಗಳು ಬಂದಾಗ ಇದೇ ರೀತಿ ಹಬ್ಬಗಳನ್ನು ಮಾಡಿದ್ದೇವೆ, ಈ ಸಂದರ್ಭ ರೋಗಗಳು ವಾಸಿಯಾಗಿವೆ. ಅದೇ ರೀತಿ ಈಗಲೂ ಸಹ ಆಚರಣೆ ಮಾಡಿದ್ದೇವೆ ಕೊರೊನಾ ಆದಷ್ಟು ಬೇಗ ತೊಲಗಲಿದೆ ಎಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ.

  • ಒಂದೇ ದಿನ ಮಂಡ್ಯದ ಗ್ರಾಮವೊಂದರ 25 ಮಂದಿಗೆ ಕೊರೊನಾ ದೃಢ

    ಒಂದೇ ದಿನ ಮಂಡ್ಯದ ಗ್ರಾಮವೊಂದರ 25 ಮಂದಿಗೆ ಕೊರೊನಾ ದೃಢ

    ಮಂಡ್ಯ: ಜಿಲ್ಲೆಯ ಪಾಂಡಪುರ ತಾಲೂಕಿನ ಎರೇಗೌಡನಕೊಪ್ಪಲು ಗ್ರಾಮದ 25 ಮಂದಿಗೆ ಒಂದೇ ದಿನ ಕೊರೊನಾ ಸೋಂಕು ದೃಢಪಟ್ಟಿದ್ದು ಇದರಿಂದ ಗ್ರಾಮದ ಜನರಲ್ಲಿ ಆತಂಕ ಎದುರಾಗಿದೆ.

    ಎರೇಗೌಡನಕೊಪ್ಪಲು ಗ್ರಾಮದ ಜನರಿಗೆ ಕಳೆದ ಎರಡು ಮೂರು ದಿನಗಳಿಂದ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದೆ. ಹೀಗಾಗಿ ಗ್ರಾಮದ 30 ಮಂದಿ ಸ್ಥಳೀಯ ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದಾರೆ. ಇದೀಗ 30 ಮಂದಿಯ ಪೈಕಿ 25 ಮಂದಿಗೆ ಕೊರೊನಾ ದೃಢಪಟ್ಟಿದೆ. ಸುಮಾರು 500 ಮಂದಿ ಇರುವ ಈ ಗ್ರಾಮದಲ್ಲಿ 25 ಮಂದಿಗೆ ಕೊರೊನಾ ಸೋಂಕು ತಗುಲಿರುವುದರಿಂದ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಇದನ್ನೂ ಓದಿ: ಸಿನಿಮಾ ಆಗಲಿದೆ ರೋಹಿಣಿ ಸಿಂಧೂರಿ ಜೀವನ ಕಥೆ

    ಗ್ರಾಮದಲ್ಲಿ 25 ಮಂದಿಗೆ ಕೊರೊನಾ ದೃಢಪಟ್ಟಿರುವ ಮಾಹಿತಿ ತಿಳಿದ ಶಾಸಕ ಪುಟ್ಟರಾಜು ಹಾಗೂ ತಹಶೀಲ್ದಾರ್ ಪ್ರಮೋದ್ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ, ಯಾರು ಕೂಡ ಭಯ ಭೀತರಾಗಬೇಡಿ, ಎಲ್ಲರೂ ಮನೆಯಲ್ಲಿ ಇರಿ, ಕೊರೊನಾ ನಿಯಮಗಳನ್ನು ಪಾಲಿಸಿ. ಪಾಸಿಟಿವ್ ಬಂದಿರುವವರಿಗೆ ಸೂಕ್ತ ಚಿಕಿತ್ಸೆ ನೀಡುತ್ತೇವೆ ಎಂದು ಧೈರ್ಯ ತುಂಬಿದ್ದಾರೆ. ಇದಲ್ಲದೇ ಈ ವೇಳೆ ಕೊರೊನಾ ಲಸಿಕೆ ಹಾಕಿಸಿಕೊಳ್ಳದವರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.