Tag: ಗ್ವಾಲಿಯರ್‌ ಪೊಲೀಸ್‌

  • 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ದೈಹಿಕ ಹಲ್ಲೆ ನಡೆಸಿ ವಿಕೃತಿ – ಅಪ್ರಾಪ್ತೆ ಜನನಾಂಗಕ್ಕೆ 28 ಹೊಲಿಗೆ

    5 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ದೈಹಿಕ ಹಲ್ಲೆ ನಡೆಸಿ ವಿಕೃತಿ – ಅಪ್ರಾಪ್ತೆ ಜನನಾಂಗಕ್ಕೆ 28 ಹೊಲಿಗೆ

    ಭೋಪಾಲ್:‌‌ 17 ವರ್ಷದ ಅಪ್ರಾಪ್ತನೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬಳಿಕ ದೈಹಿಕ ಹಲ್ಲೆ (Physical Assaults) ನಡೆಸಿ ವಿಕೃತಿ ಮೆರೆದಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ (Gwalior) ನಡೆದಿದೆ.

    ವಿಕೃತ ಕಾಮಿ ಅತ್ಯಾಚಾರ ಎಸಗಿದ್ದಲ್ಲದೇ ಬಾಲಕಿಯ ತಲೆಯನ್ನ ನೆಲಕ್ಕೆ ಗುದ್ದಿಸಿದ್ದಾನೆ. ಬಳಿಕ ಆಕೆಯ ಖಾಸಗಿ ಭಾಗವನ್ನು ಘಾಸಿಗೊಳಿಸಿದ್ದಾನೆ. ಇದನ್ನೂ ಓದಿ: ಮಹಾರಾಷ್ಟ್ರ ಸಿಎಂ ಫಡ್ನವಿಸ್ ಕಚೇರಿ ಮೇಲೆ ದಾಳಿ ನಡೆಸುವ ಬೆದರಿಕೆ – ಪಾಕ್‌ ಮೂಲದ ಸಂಖ್ಯೆಯಿಂದ ಕರೆ

    ಸದ್ಯ ಸಂತ್ರಸ್ತೆಯನ್ನ ಆಸ್ಪತ್ರೆಗೆ (Gwalior hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಾಲಕಿಯ ಖಾಸಗಿ ಭಾಗಗಳು ತೀವ್ರ ಹಾನಿಗೊಳಗಾಗಿವೆ. ಅಲ್ಲದೇ ಪ್ರಮುಖ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಬಾಲಕಿಯ ಜನನಾಂಗಗಳಿಗೆ 28 ಹೊಲಿಗೆ ಹಾಕಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | 3 ವರ್ಷದಲ್ಲಿ 100 ಬೈಕ್ ಕಳ್ಳತನ – ಆರೋಪಿ ಅರೆಸ್ಟ್ 

    ಘಟನೆ ನಡೆದಿದ್ದು ಯಾವಾಗ?
    ಫೆ.22ರಂದು ಅಪ್ರಾಪ್ತ ಯುವಕ ಬಾಲಕಿಯನ್ನ ಮನೆಯ ಮೇಲ್ಛಾವಣಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಆಕೆಯನ್ನ ಹತ್ಯೆ ಮಾಡುವ ಉದ್ದೇಶದಿಂದ ದೈಹಿಕ ಹಲ್ಲೆ ನಡೆಸಿದ್ದಾನೆ. ಆಕೆಯ ಖಾಸಗಿ ಭಾಗಗಳನ್ನ ಘಾಸಿಗೊಳಿಸಿದ್ದಾನೆ. ಇದರಿಂದ ಬಾಲಕಿ ಪ್ರಜ್ಞೆ ತಪ್ಪಿದ್ದಾಳೆ. ಮರಳಿ ಪ್ರಜ್ಞೆ ಬಂದ ಬಳಿಕ ಪೋಷಕರ ಮುಂದೆ ಘಟನೆ ವಿವರಿಸಿದ್ದಾಳೆ. ಬಳಿಕ ಪೊಷಕರು ದೂರು ದಾಖಲಿಸಿದ್ದ ಆರೋಪಿಯನ್ನು ಅಪ್ರಾಪ್ತ ಎಂದು ಪರಿಗಣಿಸದಂತೆ ಮನವಿ ಮಾಡಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿಸಿದ್ದಾರೆ.

    ಈ ಬೆನ್ನಲ್ಲೇ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ. ಇದನ್ನೂ ಓದಿ: ಮತ್ತೆರಡು ವಿಧೇಯಕ ವಾಪಸ್ – ರಾಜ್ಯಪಾಲರು vs ರಾಜ್ಯ ಸರ್ಕಾರದ ನಡುವೆ ಮುಂದುವರಿದ ಜಟಾಪಟಿ

  • ಮದುವೆಗೆ 4 ದಿನ ಬಾಕಿಯಿರುವಾಗಲೇ ಪೊಲೀಸರ ಮುಂದೆ ಮಗಳನ್ನ ಗುಂಡಿಕ್ಕಿ ಕೊಂದ ತಂದೆ

    ಮದುವೆಗೆ 4 ದಿನ ಬಾಕಿಯಿರುವಾಗಲೇ ಪೊಲೀಸರ ಮುಂದೆ ಮಗಳನ್ನ ಗುಂಡಿಕ್ಕಿ ಕೊಂದ ತಂದೆ

    – ತಾನಿಷ್ಟಪಟ್ಟ ಹುಡುಗನನ್ನ ಮದುವೆಯಾಗಲು ಮುಂದಾಗಿದ್ದಕ್ಕೆ ಹತ್ಯೆ

    ಗ್ವಾಲಿಯರ್‌: ಖುಷಿಯಾಗಿ ಹಸೆಮಣೆ ಏರಬೇಕಿದ್ದ ಮಗಳನ್ನ ಸ್ವತಃ ಅಪ್ಪನೇ ಮಸಣಕ್ಕೆ ಕಳುಹಿಸಿದ್ದಾನೆ. ಮದುವೆಗೆ (Marriage) ಇನ್ನೂ ನಾಲ್ಕು ದಿನ ಬಾಕಿಯಿರುವಾಗಲೇ 20 ವರ್ಷದ ಸ್ವಂತ ಮಗಳನ್ನು ಪೊಲೀಸರ ಮುಂದೆಯೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ (Gwalior) ನಡೆದಿದೆ.

    ಮಗಳು ತಾವು ನೋಡಿದ ಹುಡುಗನನ್ನು ಮದುವೆಯಾಗುವುದಕ್ಕೆ ಒಪ್ಪದೇ, ಬಹಿರಂಗವಾಗಿ ವಿರೋಧಿಸಿದ್ದಳು. ತಾನು ಇಷ್ಟಪಟ್ಟ ಬೇರೆ ಹುಡುಗನನ್ನು ಮದುವೆಯಾಗಲು ಮುಂದಾಗಿದ್ದರಿಂದ ಕೋಪದ ಕೈಗೆ ಬುದ್ಧಿಕೊಟ್ಟ ಅಪ್ಪ ತನ್ನ ಮಗಳನ್ನು ಹತ್ಯೆ ಮಾಡಿದ್ದಾನೆ. ತನು ಗುರ್ಜರ್‌ (20) ಕೊಲೆಯಾದ ಮಗಳು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ತಲೆ ಎಣಿಕೆ ಪಾಲಿಟಿಕ್ಸ್ – ಸಿಎಂ ಸ್ಥಾನಕ್ಕಲ್ಲ.. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ?

    ಮಂಗಳವಾರ ಸಂಜೆ 9 ಗಂಟೆ ಸುಮಾರಿಗೆ ನಗರದ ಗೋಲಾ ಕಾ ಮಂದಿರ ಪ್ರದೇಶದಲ್ಲಿ ಈ ಕೊಲೆ ನಡೆದಿದೆ. ಅದೇ ದಿನ ಬೆಳಗ್ಗೆ ತನ್ನ ಮಗಳು ಸಾಮಾಜಿಕ ಮಾಧ್ಯಮದಲ್ಲಿ (Social Media) ಪೋಸ್ಟ್ ಮಾಡಿದ ವೀಡಿಯೊದಿಂದ ಕೋಪಗೊಂಡ ತಂದೆ ಮಹೇಶ್ ಗುರ್ಜರ್ ದೇಶಿ ಬಂದೂಕಿನಿಂದ ಆಕೆಗೆ ಹತ್ತಿರದಿಂದ ಗುಂಡು ಹಾರಿಸಿದ್ದಾನೆ. ಈ ವೇಳೆ ತನುವಿನ ಸೋದರ ಸಂಬಂಧಿ ರಾಹುಲ್ ಮಹೇಶ್ ಗುರ್ಜರ್‌ನ ಈ ಕೆಲಸಕ್ಕೆ ಸಹಚರನಾಗಿ ಕಾರ್ಯನಿರ್ವಹಿಸಿದ್ದು, ಹೆಚ್ಚುವರಿ ಗುಂಡುಗಳನ್ನು ಹಾರಿಸಿ ಆಕೆಯ ಸಾವನ್ನು ಖಚಿತಪಡಿಸಿದ್ದಾನೆ.

    ತನ್ನ ಹತ್ಯೆಗೆ ಕೆಲವೇ ಗಂಟೆಗಳ ಮೊದಲು, ತನು ಗುರ್ಜರ್‌ ತನ್ನ ಕುಟುಂಬದವರು ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಗೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿ ಅದನ್ನು ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಳು. 52 ಸೆಕೆಂಡುಗಳ ವೀಡಿಯೊದಲ್ಲಿ, ತನ್ನ ತಂದೆ ಮಹೇಶ್ ಮತ್ತು ಇತರ ಕುಟುಂಬ ಸದಸ್ಯರು ತನ್ನ ಸಂಕಷ್ಟಕ್ಕೆ ಕಾರಣರೆಂದು ಹೇಳಿದ್ದು, ತನಗೆ ಜೀವಭಯವಿದೆ ಎಂದು ಹೇಳಿಕೊಂಡಿದ್ದಳು. ನಾನು ವಿಕ್ಕಿ ಎಂಬಾತನನ್ನ ಮದುವೆಯಾಗಲು ಬಯಸಿದ್ದೇನೆ. ನನ್ನ ಮನೆಯವರು ಆರಂಭದಲ್ಲಿ ಇದಕ್ಕೆ ಒಪ್ಪಿದ್ದರು, ನಂತರ ನಿರಾಕರಿಸಿದರು. ಅವರು ಪ್ರತಿದಿನ ನನ್ನನ್ನ ಹೊಡೆಯುತ್ತಾರೆ ಮತ್ತು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಾರೆ. ನನಗೆ ಏನಾದರೂ ಸಂಭವಿಸಿದರೆ, ನನ್ನ ಕುಟುಂಬವೇ ಜವಾಬ್ದಾರವಾಗಿರುತ್ತದೆ ಎಂದು ತನು ವಿಡಿಯೋನಲ್ಲಿ ಹೇಳಿಕೊಂಡಿದ್ದಳು.

    ಈಕೆ ವೀಡಿಯೋದಲ್ಲಿ ಉಲ್ಲೇಖಿಸಿದ ವಿಕ್ಕಿ ಎಂಬಾತ ಉತ್ತರ ಪ್ರದೇಶದ ಆಗ್ರಾ ನಿವಾಸಿಯಾಗಿದ್ದು, 6 ವರ್ಷಗಳಿಂದ ತನು ಜೊತೆ ಸಂಬಂಧ ಹೊಂದಿದ್ದ. ತನು ಗುರ್ಜರ್‌ನ ವೀಡಿಯೋ ವೈರಲ್ ಆದ ನಂತರ, ವರಿಷ್ಠಾಧಿಕಾರಿ ಧರ್ಮವೀರ್ ಸಿಂಗ್ ನೇತೃತ್ವದ ಪೊಲೀಸ್ ಅಧಿಕಾರಿಗಳು ತನುವಿನ ಪೋಷಕರು ಹಾಗೂ ಆಕೆಯೊಂದಿಗೆ ಮಧ್ಯಸ್ಥಿಕೆ ವಹಿಸಲು ತನು ಅವರ ಮನೆಗೆ ಧಾವಿಸಿದರು. ಸಮುದಾಯದ ಪಂಚಾಯತ್ ಕೂಡ ನಡೆಯುತ್ತಿದ್ದು, ವಿಷಯವನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದರು, ಮಾತುಕತೆ ನಡೆಯುತ್ತಿರುವ ಸಂದರ್ಭದಲ್ಲಿ ಗುಂಡು ಹಾರಿಸಿದ್ದಾನೆ.. ಇದನ್ನೂ ಓದಿ: ಮಂಗಳೂರು| ಹಳೆ ನಾಣ್ಯ ಖರೀದಿಸುವುದಾಗಿ ಹೇಳಿ ವ್ಯಕ್ತಿಗೆ 58 ಲಕ್ಷ ವಂಚನೆ

    ಇದೇ ಜನವರಿ 18ರಂದು ಮಗಳ ಮದುವೆ ನಡೆಯಬೇಕಿತ್ತು. ಅದಕ್ಕಾಗಿ ಸಕಲ ಸಿದ್ಧತೆಯೂ ಮಾಡಿಕೊಳ್ಳಲಾಗಿತ್ತು. ಸದ್ಯ ಗುಂಡಿಕ್ಕಿ ಹತ್ಯೆಗೈದ ತಂದೆ ಮಹೇಶ್‌ ಗುರ್ಜರ್‌ನನ್ನ ಪೊಲೀಸರು ಬಂಧಿಸಿದ್ದು, ಕೊಲೆಗೆ ಬಳಸಿದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿ ರಾಹುಲ್‌ ಬಂಧನಕ್ಕೆ ಪೊಲೀಸರು ಶೋಧ ನಡೆಸಿದ್ದಾರೆ. ಇದನ್ನೂ ಓದಿ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ – ಹರಿಯಾಣದ ಬಿಜೆಪಿ ಅಧ್ಯಕ್ಷ, ಗಾಯಕನ ವಿರುದ್ಧ ಎಫ್‌ಐಆರ್‌