Tag: ಗ್ವಾಲಿಯರ್

  • ಸಾರ್ವಜನಿಕ ಸಭೆಯಲ್ಲೇ ಸರ್ಕಾರಿ ಅಧಿಕಾರಿಗೆ ಮಹಿಳೆಯಿಂದ ಚಪ್ಪಲಿ ಏಟು

    ಸಾರ್ವಜನಿಕ ಸಭೆಯಲ್ಲೇ ಸರ್ಕಾರಿ ಅಧಿಕಾರಿಗೆ ಮಹಿಳೆಯಿಂದ ಚಪ್ಪಲಿ ಏಟು

    ಭೋಪಾಲ್: ಸಾರ್ವಜನಿಕ ಸಭೆಯಲ್ಲೇ ಮಹಿಳೆಯೊಬ್ಬಳು ಸರ್ಕಾರಿ ಅಧಿಕಾರಿಗೆ ಚಪ್ಪಲಿ ಏಟು ಕೊಟ್ಟ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.

    ಗ್ವಾಲಿಯರ್ ನಲ್ಲಿ ಪ್ರಧಾನ್ ಮಂತ್ರಿ ಆವಾಸ್ ಯೋಜನೆ ಅಡಿ ಫಲಾನುಭವಿಗಳಿಗೆ ಮನೆ ಹಂಚಿಕೆ ನಡೆದಿತ್ತು. ಸಾರ್ವಜನಿಕ ಸಭೆಗೆ ಆಗಮಿಸಿದ್ದ ಫಲಾನುಭವಿ ಮಹಿಳೆ, ತನಗೆ ಸಿಗಬೇಕಾದ ಮನೆಯನ್ನು ಅಧಿಕಾರಿಗಳು ಬೇರೆಯವರಿಗೆ ಹಸ್ತಾಂತರ ಮಾಡಿದ್ದಾರೆ ಎಂದು ಅಧಿಕಾರಿಗಳ ಜೊತೆಗೆ ವಾಗ್ವಾದಕ್ಕೆ ಇಳಿದಿದ್ದಳು. ಈ ವೇಳೆ ಕೈಯಲ್ಲಿ ಚಪ್ಪಲಿ ಹಿಡಿದು ಅಧಿಕಾರಿಗೆ ಹೊಡೆದಿದ್ದಾಳೆ.

    ಸಭೆಯಲ್ಲಿ ಸೇರಿದ್ದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮಹಿಳೆಯನ್ನು ತಡೆಯಲು ಪ್ರಯತ್ನಿಸಿದರು. ಆದರೆ ಮಹಿಳೆ ಮಾತ್ರ ಎಲ್ಲರನ್ನೂ ತಳ್ಳಿ ನಾಲ್ಕೈದು ಬಾರಿ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದಿದ್ದಾಳೆ. ಅಷ್ಟೇ ಅಲ್ಲದೆ ಅಧಿಕಾರಿ ಮೇಲಿನ ಹಲ್ಲೆಯನ್ನು ತಡೆಯಲು ಬಂದ ವ್ಯಕ್ತಿಯನ್ನು ಎಳೆದಾಡಿದ್ದಾಳೆ.

    ಘಟನೆಯಿಂದಾಗಿ ಸಭೆಯಲ್ಲಿ ಗದ್ದಲದ ವಾತಾವರಣ ಉಂಟಾಯಿತು. ಈ ದೃಶ್ಯವನ್ನು ಸಭೆಯಲ್ಲಿ ಸೇರಿದ್ದ ಸ್ಥಳೀಯ ಮಾಧ್ಯಮಗಳು ಹಾಗೂ ಸಾರ್ವಜನಿಕರು ತಮ್ಮ ಕ್ಯಾಮೆರಾ, ಮೊಬೈಲ್‍ನಲ್ಲಿ ಸೆರೆ ಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

  • ಸಂಭ್ರಮಾಚರಣೆಯ ವೇಳೆ ಗುಂಡೇಟಿಗೆ 7ರ ಬಾಲಕಿ ಬಲಿ

    ಸಂಭ್ರಮಾಚರಣೆಯ ವೇಳೆ ಗುಂಡೇಟಿಗೆ 7ರ ಬಾಲಕಿ ಬಲಿ

    ಭೋಪಾಲ್: ಇತ್ತೀಚಿನ ದಿನಗಳಲ್ಲಿ ಮದುವೆ ಮನೆಯಲ್ಲಿ ನಡೆಯುವ ಗುಂಡು ಹಾರಿಸಿ ಸಂಭ್ರಮಾಚರಿಸುವುದಕ್ಕೆ ಹಲವಾರು ಮಂದಿ ಬಲಿಯಾಗುತ್ತಿದ್ದಾರೆ. ಇಂತಹದ್ದೇ ಘಟನೆಯೊಂದು ಇದೀಗ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.

    ಹೌದು. ಮದುವೆ ಸಂಭ್ರಮಾಚರಣೆಯ ವೇಳೆ ನಡೆಸಿದ ಗುಂಡೇಟಿಗೆ 7 ವರ್ಷದ ಬಾಲಕಿ ಸೆಜಲ್ ಜಾದೌನ್ ಎಂಬಾಕೆ ಬಲಿಯಾಗಿದ್ದಾಳೆ. ಇದನ್ನೂ ಓದಿ: ವಧುವಿನ ತಂದೆ ಹಾರಿಸಿದ ಗುಂಡಿಗೆ ಟೆರೇಸ್ ಮೇಲಿದ್ದ ನೆರೆಮನೆಯ ಯುವತಿ ಬಲಿ!

    ಸಂಬಂಧಿಕರ ಮನೆಯಲ್ಲಿನ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಬಾಲಕಿ ತನ್ನ ತಂದೆಯ ಜೊತೆ ತೆರಳಿದ್ದಳು. ಎಲ್ಲರೂ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ಈ ವೇಳೆ ಬಾಲಕಿ ತನ್ನ ತಂದೆ ಸತೇಂದ್ರ ಜಾದೌನ್ ಜೊತೆ ನಿಂತಿದ್ದಳು. ಸಂಭ್ರಮಚಾಚರಣೆಯಲ್ಲಿ ಭಾಗಿಯಾಗಿದ್ದವರು ಸಂಭ್ರಮವನ್ನು ಇಮ್ಮಡಿಗೊಳಿಸಲು ಗುಂಡು ಹಾರಿಸಿದ್ದಾರೆ. ಈ ವೇಳೆ ಅವುಗಳಲ್ಲಿ ಒಂದು ಗುಂಡು ಬಾಲಕಿ ಹೊಟ್ಟೆಗೆ ಬಂದು ಬಿದ್ದಿದೆ.

    ಘಟನೆ ನಡೆದ ಕೂಡಲೇ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಅದಾಗಲೇ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ ಎಂಬುದಾಗಿ ವರದಿಯಾಗಿದೆ. ಈ ಕುರಿತು ಸೊಂಡ ಕೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ. ಇದನ್ನೂ ಓದಿ: ಬ್ಯಾಚುಲರ್ ಪಾರ್ಟಿಯಲ್ಲಿ ವರನ ಮರ್ಮಾಂಗಕ್ಕೆ ಗೆಳೆಯನಿಂದ್ಲೇ ಬಿತ್ತು ಗುಂಡೇಟು!


    ಕೆಲ ದಿನಗಳ ಹಿಂದೆಯಷ್ಟೇ 28 ವರ್ಷದ ಯೋಧರೊಬ್ಬರು ತನ್ನ ಗೆಳೆಯನ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ ವೇಳೆ ಗುಂಡೇಟು ತಗುಲಿ ಗಂಭೀರ ಗಾಯಗೊಂಡಿದ್ದರು.

  • ಹಸ್ತಾಕ್ಷರವಿರೋ ಸಾವಿರ ಸ್ಯಾನಿಟರಿ ಪ್ಯಾಡ್‍ಗಳನ್ನು ಮೋದಿಗೆ ರವಾನಿಸಲಿದ್ದಾರೆ ವಿದ್ಯಾರ್ಥಿಗಳು!

    ಹಸ್ತಾಕ್ಷರವಿರೋ ಸಾವಿರ ಸ್ಯಾನಿಟರಿ ಪ್ಯಾಡ್‍ಗಳನ್ನು ಮೋದಿಗೆ ರವಾನಿಸಲಿದ್ದಾರೆ ವಿದ್ಯಾರ್ಥಿಗಳು!

    ಭೋಪಾಲ್: ಸ್ಯಾನಿಟರಿ ಪ್ಯಾಡ್ ಮೇಲೆ 12% ಜಿಎಸ್‍ಟಿ ತೆರಿಗೆಯನ್ನು ಹಿಂಪಡೆಯುವಂತೆ ವಿದ್ಯಾರ್ಥಿಗಳು ಮೋದಿ ವಿರುದ್ಧ ವಿಶಿಷ್ಠವಾಗಿ ಪ್ರತಿಭಟನೆ ಆರಂಭಿಸಿದ್ದಾರೆ.

    ಹೌದು, ಮಹಿಳೆಯರಿಗೆ ಅತ್ಯವಶ್ಯಕವಾಗಿರೋ ಸ್ಯಾನಿಟರಿ ಪ್ಯಾಡ್ ಇದೀಗ ಜಿಎಸ್‍ಟಿ ವ್ಯಾಪ್ತಿಗೆ ಬರುತ್ತಿದೆ. ಹೀಗಾಗಿ ಜಿಎಸ್‍ಟಿ ತೆರಿಗೆಯನ್ನು ಪೂರ್ಣವಾಗಿ ತೆಗೆದು ಹಾಕುವಂತೆ ಮಧ್ಯಪ್ರದೇಶ ಗ್ವಾಲಿಯಾರ್ ವಿದ್ಯಾರ್ಥಿಗಳು ಹಸ್ತಾಕ್ಷರವಿರುವ ಸುಮಾರು 1 ಸಾವಿರ ಸ್ಯಾನಿಟರಿ ಪ್ಯಾಡ್ ಗಳನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳಹಿಸಲು ನಿರ್ಧರಿಸಿದ್ದಾರೆ.

    ಈ ಕುರಿತು ವಿದ್ಯಾರ್ಥಿನಿಯರು ಜನವರಿ 4 ರಿಂದ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭ ಮಾಡಿದ್ದು, ಇದಕ್ಕೆ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಹಾಗೂ ಅವರ ಶ್ರೇಯೋಭಿವೃದ್ಧಿಯ ಸಲುವಾಗಿ ವಿದ್ಯಾರ್ಥಿಗಳು ಈ ಅಭಿಯಾನ ಆರಂಭಿಸಿರುವುದಾಗಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸ್ಯಾನಿಟರಿ ಪ್ಯಾಡ್ ಮೇಲೆ ಜಿಎಸ್‍ಟಿ ಯಾಕೆ?: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

    ಆದರೆ ಈ ಅಭಿಯಾನ ಕೇವಲ ಗ್ವಾಲಿಯಾರ್ ಮಹಿಳೆಯರಿಗೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ ಇಡೀ ದೇಶದ ಮಹಿಳೆಯರಿಗೂ ಇದರ ಅಗತ್ಯತೆ ಇದೆ. ಹೀಗಾಗಿ ಸ್ಯಾನಿಟರಿ ಪ್ಯಾಡ್ ಮೇಲೆ ವಿಧಿಸಿರೋ ಜಿಎಸ್‍ಟಿ ತೆರಿಗೆಯನ್ನು ಹಿಂಪಡೆಯಲು ನಾಯಕ ಪ್ರಧಾನಿ ನರೇಂದ್ರ ಮೋದಿಯವರಿಂದ ಮಾತ್ರ ಸಾಧ್ಯ. ಈ ಹಿನ್ನೆಲೆಯಲ್ಲಿ ಸಮಾಜದ ಮಹಿಳೆಯರ ಹಿತ ಕಾಯುವ ದೃಷ್ಟಿಯಿಂದ ಪ್ಯಾಡ್ ಮೇಲೆ ಬರೆದು ಕಳುಹಿಸಲಾಗುವುದು ಎಂಬುದಾಗಿ ವಿದ್ಯಾರ್ಥಿಗಳು ಹೇಳಿದ್ದಾರೆ.

    ಹಳ್ಳಿಪ್ರದೇಶದ ಮಹಿಳೆಯರು ಸ್ಯಾನಿಟರಿ ಪ್ಯಾಡ್ ಗಳನ್ನು ಬಳಸದೇ ತಮ್ಮ ಸಂಪ್ರದಾಯದಂತೆ ಪ್ಯಾಡ್ ಬದಲು ಪರ್ಯಾಯ ಮಾರ್ಗ ಕಂಡುಕೊಂಡಿರುತ್ತಾರೆ. ಇದರಿಂದ ಅವರು ಕೆಲ ರೋಗಗಳಿಗೆ ತುತ್ತಾಗುತ್ತಾರೆ. ಈ ಹಿನ್ನೆಲೆಯಲ್ಲಿ ಹಳ್ಳಿಗಾಡಿನ ಮಹಿಳೆಯರು ಕೂಡ ಸ್ಯಾನಿಟರಿ ಪ್ಯಾಡ್ ಗಳನ್ನು ಖರೀದಿಸುವಂತೆ ಅವುಗಳ ಮೇಲೆ ಹೇರಿರುವ ಜಿಎಸ್‍ಟಿ ತೆರಿಗೆಯನ್ನು ಹಿಂಪಡೆಯುವ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ನಾವು ಈ ಅಭಿಯಾನ ಆರಂಭ ಮಾಡಿದ್ದೇವೆ ಅಂತ ವಿದ್ಯಾರ್ಥಿ ಮೋಹನ್ ಹೇಳಿದ್ದಾರೆ.

    ಒಟ್ಟಿನಲ್ಲಿ ಸ್ವಚ್ಛ ಭಾರತದ ಹೆಸರು ಹೇಳುತ್ತಿರೋ ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರ ಸ್ವಚ್ಛತೆಯ ಕಡೆ ಹಾಗೂ ಅವರ ಆರೋಗ್ಯದ ಕಡೆ ಗಮನ ಹರಿಸಬೇಕಾಗಿದೆ. ಮಾರ್ಚ್ 3 ರೊಳಗೆ ಸುಮಾರು 1 ಸಾವಿರ ಪ್ಯಾಡ್‍ಗಳನ್ನು ಪ್ರಧಾನಿಗೆ ಕಳುಹಿಸಲು ವಿದ್ಯಾರ್ಥಿಗಳು ನಿರ್ಧರಿಸಿದ್ದಾರೆ.

  • ಕ್ಯಾನ್ಸರ್‍ಪೀಡಿತ ವ್ಯಕ್ತಿಯ ಮನವಿಗೆ ಮೊಬೈಲ್ ಟವರ್ ಬಂದ್ ಮಾಡಲು ಸುಪ್ರೀಂ ಆದೇಶ

    ಕ್ಯಾನ್ಸರ್‍ಪೀಡಿತ ವ್ಯಕ್ತಿಯ ಮನವಿಗೆ ಮೊಬೈಲ್ ಟವರ್ ಬಂದ್ ಮಾಡಲು ಸುಪ್ರೀಂ ಆದೇಶ

    ನವದೆಹಲಿ: ಮೊಬೈಲ್ ಟವರ್‍ನ ವಿದ್ಯುತ್ಕಾಂತೀಯ ವಿಕಿರಣದಿಂದ ನಾನು ಕ್ಯಾನ್ಸರ್‍ಗೆ ತುತ್ತಾಗಿದ್ದೇನೆ ಎಂದು 42 ವರ್ಷದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬಳಿಕ ಮೊಬೈಲ್ ಟವರ್ ಬಂದ್ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಇಂತಹದ್ದೊಂದು ಆದೇಶ ನೀಡಿದೆ ಎಂದು ವರದಿಯಾಗಿದೆ.

    2002ರಲ್ಲಿ ತಮ್ಮ ಪಕ್ಕದ ಮನೆಯ ಛಾವಣಿಯ ಮೇಲೆ ಅಕ್ರಮವಾಗಿ ಅಳವಡಿಕೆ ಮಾಡಲಾದ ಮೊಬೈಲ್ ಟವರ್ ಬಂದ್ ಮಾಡುವಂತೆ ಕೋರಿ ಮಧ್ಯಪ್ರದೇಶದ ಗ್ವಾಲಿಯರ್‍ನ ದಾಲ್ ಬಜಾರ್ ಪ್ರದೇಶದಲ್ಲಿ ಕೆಲಸ ಮಾಡುತ್ತಿರುವ ಹರೀಶ್ ಚಂದ್ ತಿವಾರಿ ಕಳೆದ ವರ್ಷ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಕಳೆದ 14 ವರ್ಷಗಳಿಂದ ಈ ಮೊಬೈಲ್ ಟವರ್‍ನ ಹಾನಿಕಾರಕ ವಿಕರಣಗಳಿಂದ ತೊಂದರೆ ಪಡುತ್ತಿದ್ದೇವೆ ಎಂದು ಹರೀಶ್ ಹೇಳಿದ್ದರು.

    ದೀರ್ಘ ಕಾಲದಿಂದ ವಿಕರಣಕ್ಕೆ ಒಡ್ಡಿಕೊಂಡಿದ್ದರಿಂದ ಹಾಡ್ಕಿನ್ಸ್ ಲಿಮ್ಫೋಮಾ(ಕ್ಯಾನ್ಸರ್)ಗೆ ತುತ್ತಾಗಿದ್ದೇನೆ ಎಂದು ಹೇಳಿ ಸ್ಥಳೀಯ ವಕೀಲೆ ನಿವೇದಿತಾ ಶರ್ಮಾ ಅವರ ಸಹಾಯ ಪಡೆದು ಹರೀಶ್ ಅವರು ಅರ್ಜಿ ಸಲ್ಲಿಸಿದ್ದರು.

    ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸಂಜನ್ ಗೋಗಿ ಹಾಗೂ ನ್ಯಾ. ನವೀನ್ ಸಿನ್ಹಾ ನೇತೃತ್ವದ ಪೀಠ, 7 ದಿನಗಳ ಒಳಗಾಗಿ ಮೊಬೈಲ್ ಟವರ್ ಬಂದ್ ಮಾಡುವಂತೆ ಸೂಚಿಸಿದೆ.