Tag: ಚಂಡೀಗಡ

  • ಪಂಜಾಬ್ ರಾಜ್ಯದ ಐಕಾನ್ ಆದ್ರು ಸೋನು ಸೂದ್

    ಪಂಜಾಬ್ ರಾಜ್ಯದ ಐಕಾನ್ ಆದ್ರು ಸೋನು ಸೂದ್

    ಚಂಡೀಗಡ: ಬಾಲಿವುಡ್ ನಟ ಸೋನು ಸೂದ್ ಅವರನ್ನು ಪಂಜಾಬ್ ರಾಜ್ಯದ ಐಕಾನ್ ಆಗಿ ಚುನಾವಣಾ ಆಯೋಗ ನೇಮಿಸಿದೆ.

    ಜಗತ್ತಿನಾದ್ಯಂತ ಕೊರೊನಾ ಲಾಕ್ ಡೌನ್ ಇರುವ ಸಮಯದಲ್ಲಿ ಸೋನುಸೂದ್ ಮಾಡಿದ ಸಹಾಯವನ್ನು ಮನದಲ್ಲಿರಿಸಿಕೊಂಡಿದ್ದ ಪಂಜಾಬ್ ಚುನಾವಣಾ ಅಧಿಕಾರಿ ಎಸ್ ಕರುಣಾ ರಾಜ್, ಭಾರತೀಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಅದಕ್ಕೆ ಅನುಮೋದನೆ ನೀಡಿದೆ ಎಂದು ಟ್ವೀಟ್ ಮೂಲಕವಾಗಿ ತಿಳಿಸಿದ್ದಾರೆ.

    ಪಂಜಾಬ್‍ನ ಮುಖ್ಯ ಚುನಾವಣಾ ಅಧಿಕಾರಿ ಈ ಬಗ್ಗೆ ಟ್ವಿಟ್ಟರ್‍ನಲ್ಲಿ ಘೋಷಣೆ ಮಡಿದ್ದಾರೆ. ಜನರ ರಿಯಲ್ ಹೀರೋ ಸೋನು ಸೂದ್ ಈಗ ಪಂಜಾಬ್ ರಾಜ್ಯದ ಐಕಾನ್ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ. ಇದನ್ನು ಓದಿ: ಪ್ರಕಟವಾಗಲಿದೆ ಸೋನುಸೂದ್ ಲಾಕ್‍ಡೌನ್ ಅನುಭವದ ಪುಸ್ತಕ

    ಸೋನು ಸೂದ್ ವಿವಿಧ ಸ್ಥಳಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ತಮ್ಮ ಮನೆಗಳಿಗೆ ಸಾರಿಗೆ ಸೌಲಭ್ಯಗಳನ್ನು ಏರ್ಪಡಿಸಿದ್ದರು. ಅವರ ಮಾನವೀಯ ಕಾರ್ಯಕ್ಕೆ ಸಮಾಜದ ಎಲ್ಲಾ ವರ್ಗದವರು ಮೆಚ್ಚುಗೆ ಸೂಚಿಸಿದ್ದರು. ನಟ ಸೋನು ಸೂದ್ ಅವರು ತಾವು ಮಾಡಿರುವ ಒಳ್ಳೆಯ ಕೆಲಸಗಳಿಂದ ಎಲ್ಲಾ ಲಾಕ್ ಡೌನ್ ಸಮಯದಲ್ಲಿ ಸುದ್ದಿಯಲ್ಲಿದ್ದರು. ಇದೀಗ ಈ ನಟ ಪಂಜಾಬ್ ರಾಜ್ಯದ ಐಕಾನ್ ಎಂದು ಭಾರತದ ಚುನಾವಣಾ ಆಯೋಗ ಎಂದು ಅಧಿಕೃತವಾಗಿ ತಿಳಿಸಿದೆ.

  • ಪ್ರತಿದಿನ ಪತಿ ಮೊಟ್ಟೆ ತಂದುಕೊಡಲಿಲ್ಲ ಎಂದು ಪ್ರಿಯಕರನ ಜೊತೆ ಓಡಿಹೋದ್ಳು

    ಪ್ರತಿದಿನ ಪತಿ ಮೊಟ್ಟೆ ತಂದುಕೊಡಲಿಲ್ಲ ಎಂದು ಪ್ರಿಯಕರನ ಜೊತೆ ಓಡಿಹೋದ್ಳು

    ಚಂಡೀಗಡ: ಪ್ರತಿದಿನ ಪತಿ ಮೊಟ್ಟೆ ತಂದುಕೊಡಲಿಲ್ಲ ಎಂದು ಹೇಳಿ ಪತ್ನಿ ಪ್ರಿಯಕರನ ಜೊತೆ ಓಡಿ ಹೋದ ಘಟನೆ ಹರಿಯಾಣದ ಗೋರಖ್‍ಪುರ್ ನಲ್ಲಿ ನಡೆದಿದೆ.

    ಗೋರಖ್‍ಪುರದ ಕ್ಯಾಂಪಿಯರ್ ಗಂಜ್ ನಿವಾಸಿಯಾಗಿರುವ ಮಹಿಳೆ ಪತಿ ದಿನ ತಿನ್ನಲು ಮೊಟ್ಟೆ ತಂದು ಕೊಡುತ್ತಿರಲಿಲ್ಲ ಎಂದು ಪ್ರಿಯಕರನ ಜೊತೆ ಓಡಿ ಹೋದಳು. ನಾಲ್ಕು ತಿಂಗಳ ಹಿಂದೆ ಕೂಡ ಮಹಿಳೆ ತನ್ನ ಪ್ರಿಯಕರನ ಜೊತೆ ಓಡಿ ಹೋಗಿದ್ದಳು. ಮನೆಗೆ ಹಿಂದಿರುಗಿ ಬಂದಾಗ ಪೊಲೀಸರ ಬಳಿ ಇದೇ ಕಾರಣವನ್ನು ನೀಡಿದ್ದಳು.

    ಒಂದು ವರ್ಷಗಳಿಂದ ಮಹಿಳೆ ಮನೆಯ ಹತ್ತಿರದಲ್ಲೇ ವಾಸಿಸುವ ಯುವಕನ ಜೊತೆ ಅನೈತಿಕ ಸಂಬಂಧ ಹೊಂದಿದ್ದಾಳೆ. ಪತ್ನಿ ಯುವಕನ ಜೊತೆ ಓಡಿ ಹೋದ ಬಳಿಕ ಆಕೆಯ ಪತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಮಹಿಳೆ ಮೊಟ್ಟೆಯನ್ನು ತುಂಬಾನೇ ಇಷ್ಟ ಪಡುತ್ತಿದ್ದಳು. ಒಂದು ಮೊಟ್ಟೆ ತಿಂದ ಬಳಿಕ ಮತ್ತೊಂದು ಮೊಟ್ಟೆ ಕೊಡಲಿಲ್ಲ ಎಂದು ಆಕೆ ಓಡಿ ಹೋಗಿದ್ದಳು. ಇತ್ತ ಆ ಯುವಕ ಕೂಡ ಮನೆಯಲ್ಲಿ ಇರದ ಕಾರಣ ಆತನ ಜೊತೆ ಓಡಿ ಹೋಗಿರಬಹುದು ಎಂದು ಪತಿ ಅನುಮಾನ ವ್ಯಕ್ತಪಡಿಸಿದ್ದನು.

    ಮಹಿಳೆ ತನ್ನ ಜೊತೆ ಎಂಟನೇ ತರಗತಿಯಲ್ಲಿ ಓದುತ್ತಿದ್ದ ನಾದಿನಿಯನ್ನು ಕೂಡ ತನ್ನ ಜೊತೆ ಕರೆದುಕೊಂಡು ಹೋಗಿದ್ದಳು. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ದಂಪತಿ ಮದುವೆಯಾಗಿದ್ದರು.

    ಮೊಟ್ಟೆ ವಿಷಯಕ್ಕಾಗಿ ಪತಿ-ಪತ್ನಿ ನಡುವೆ ಯಾವಾಗಲೂ ಜಗಳ ನಡೆಯುತ್ತಿತು. ಈ ನಡುವೆ ಮಹಿಳೆಗೆ ಮೊಟ್ಟೆ ಇಷ್ಟ ಎಂಬ ವಿಷಯವನ್ನು ಪ್ರಿಯಕರ ತಿಳಿದಿದ್ದನು. ಹಾಗಾಗಿ ಆತ ಪ್ರತಿದಿನ ಆಕೆಗೆ ಮೊಟ್ಟೆ ತಂದು ಕೊಡುತ್ತಿದ್ದನು.

  • ಕಪಿಲ್ ಶರ್ಮಾ ಶೋದಿಂದ ಸಿಧು ಔಟ್

    ಕಪಿಲ್ ಶರ್ಮಾ ಶೋದಿಂದ ಸಿಧು ಔಟ್

    ಚಂಡೀಗಢ: ಪುಲ್ವಾಮಾ ದಾಳಿಯ ವಿಚಾರವಾಗಿ ಪಾಕಿಸ್ತಾನ ಪರವಾಗಿ ಹೇಳಿಕೆ ನೀಡಿದ್ದ ಪಂಜಾಬ್‍ನ ಕಾಂಗ್ರೆಸ್ ಮಂತ್ರಿ ನವಜೋತ್ ಸಿಂಗ್ ಸಿಧುಗೆ ಸಂಕಷ್ಟ ಎದುರಾಗಿದ್ದು, ಖ್ಯಾತ ಕಪಿಲ್ ಶರ್ಮಾ ಶೋದಿಂದ ಅವರನ್ನು ಹೊರಹಾಕಲಾಗಿದೆ.

    ಶೋ ಆರಂಭವಾದ ದಿನದಿಂದಲೂ ಸಿಧು ಅಲ್ಲಿ ಪ್ರಮುಖ ಆಕರ್ಷಣೆಯಾಗಿದ್ದರು. ಆದರೆ ಪುಲ್ವಾಮಾ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ್ದ ಸಿಧು, ಭಯೋತ್ಪಾದನೆಗೆ ಯಾವುದೇ ದೇಶ, ಧರ್ಮ ಅಂತಿಲ್ಲ. ಭಾರತ, ಪಾಕಿಸ್ತಾನದ ಜೊತೆ ಮಾತನಾಡಬೇಕು. ಕೆಲವರು ಮಾಡಿದ ತಪ್ಪಿಗೆ ದೇಶವನ್ನೇ ದ್ವೇಷಿಸುವುದು ಸರಿಯಲ್ಲ ಅಂತ ಹೇಳಿದ್ದರು. ಇದನ್ನೂ ಓದಿ: ಪಾಕಿಸ್ತಾನಕ್ಕೆ ಕ್ಲೀನ್‍ಚಿಟ್ ಕೊಟ್ಟು ಮಾತುಕತೆಯಿಂದ ಸಮಸ್ಯೆ ಪರಿಹಾರ ಎಂದ ಸಿಧು

    ಈ ಹೇಳಿಕೆ ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೆ ಬಾಯ್ಕಾಟ್ ಸಿಧು ಎಂಬ ಹ್ಯಾಷ್ ಟ್ಯಾಗ್ ಬಳಸಿ ಸಾಕಷ್ಟು ಜನ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಇದರಿಂದ ಎಚ್ಚೆತ್ತ ಟಿವಿ ಚಾನೆಲ್ ನಿರ್ಮಾಣ ಸಂಸ್ಥೆ, ಸಿಧು ಅವರನ್ನು ಕಾರ್ಯಕ್ರಮದಿಂದ ಕಿತ್ತು ಹಾಕುವಂತೆ ಸೂಚನೆ ನೀಡಿದೆ.

    ಸಿಧು ಮಾತ್ರ ತನ್ನ ಹೇಳಿಕೆಯಲ್ಲಿ ಕೆಲವನ್ನು ಮಾತ್ರವೇ ಆರಿಸಿ ವಿಕೃತಿ ಮೆರೆಯಲಾಗಿದೆ ಅಂತ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಇನ್ನು ಬಿಸಿಸಿಐ ಅಂಗಸಂಸ್ಥೆ ಸಿಸಿಐ ತನ್ನ ರೆಸ್ಟೋರೆಂಟ್‍ನಲ್ಲಿದ್ದ ಮಾಜಿ ಕ್ರಿಕೆಟಿಗ, ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರವನ್ನು ಮುಚ್ಚುವ ಮೂಲಕ ಪುಲ್ವಾಮಾ ದಾಳಿಗೆ ವಿನೂತನವಾಗಿ ಪ್ರತಿಭಟಿಸಿದೆ.

    ಪುಲ್ವಾಮಾ ದಾಳಿ ನಡೆದ ಸಂದರ್ಭದಲ್ಲಿ ನವಜೋತ್ ಸಿಂಗ್, ದಾಳಿಯಲ್ಲಿ ನಡೆಸಿದವರಿಗೆ ಕಠಿಣ ಶಿಕ್ಷೆ ಆಗಬೇಕೆಂದು ಹೇಳಿದ್ದರು. ಆದರೆ ಯಾರೋ ಮಾಡಿದ ಕೃತ್ಯಕ್ಕೆ ಯಾವುದೇ ದೇಶದ ಮೇಲೆ ಆರೋಪ ಮಾಡುವುದು ಸರಿಯಲ್ಲ. ಇವುಗಳಿಗೆಲ್ಲ ಶಾಂತಿ ಮಾತುಕತೆ ಒಂದೇ ಪರಿಹಾರ ಎಂದು ಹೇಳುವ ಮೂಲಕ ಕೃತ್ಯದಲ್ಲಿ ಪಾಕಿಸ್ತಾನದ ಪಾತ್ರದ ಕುರಿತು ಪರೋಕ್ಷವಾಗಿ ಕ್ಲೀನ್‍ಚಿಟ್ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಣ್ಣನನ್ನೇ ಮದ್ವೆಯಾದ ತಂಗಿ – ರೊಚ್ಚಿಗೆದ್ದ ಅಮ್ಮನಿಂದ ಚಾಕು ಇರಿತ

    ಅಣ್ಣನನ್ನೇ ಮದ್ವೆಯಾದ ತಂಗಿ – ರೊಚ್ಚಿಗೆದ್ದ ಅಮ್ಮನಿಂದ ಚಾಕು ಇರಿತ

    ಚಂಡೀಗಢ: ಸಹೋದರಿಯೊಬ್ಬಳು ಸಂಬಂಧದಲ್ಲಿ ಅಣ್ಣನಾದ ವ್ಯಕ್ತಿಯನ್ನು ಮದುವೆಯಾಗಿದ್ದು, ಇದರಿಂದ ರೊಚ್ಚಿಗೆದ್ದ ಯುವತಿಯ ತಾಯಿ ಕುಟುಂಬದವರ ಜೊತೆ ಸೇರಿ ಆಕ್ರೋಶಗೊಂಡು ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಹರ್ಯಾಣದ ಪಾಣಿಪಾತ್‍ನಲ್ಲಿ ನಡೆದಿದೆ.

    ಅಮಂದೀಪ್ ಕೌರ್ ಹಲ್ಲೆಗೊಳಗಾದ ಯುವತಿ. ಈಕೆ ನಾನ್ಯೂಲ ಗ್ರಾಮದಲ್ಲಿ ವಾಸಿಸುತ್ತಿದ್ದಳು. ಕುಟುಂಬದವರು ಹಲ್ಲೆ ಮಾಡಿದ ತಕ್ಷಣ ನೆರೆಹೊರೆಯವರು ಬಂದು ಆಕೆಯನ್ನು ಸಮೀಪದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವೈದ್ಯರು ಆಕೆಯ ಸ್ಥಿತಿ ತುಂಬಾ ಗಂಭೀರವಾಗಿದ್ದು, ಆಕೆಯನ್ನು ಚಂಡೀಗಢಕ್ಕೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಚಂಡೀಗಢದ ಧಾನಾಸ್ ಪ್ರದೇಶದ ನಿವಾಸಿ ಅಮಂದೀಪ್ ಕೌರ್ 2018ರ ಮಾರ್ಚ್ 21ರಂದು ಪಟಿಯಾಲಾ ನಿವಾಸಿ ಜಸ್ವಿಂದರ್ ಸಿಂಗ್‍ನನ್ನು ಮದುವೆಯಾಗಿದ್ದಳು. ಮದುವೆಯ ನಂತರ ಇಬ್ಬರು ನಾನ್ಯೂಲ ಗ್ರಾಮದಲ್ಲಿ ಒಟ್ಟಿಗೆ ಸಂತೋಷದಿಂದ ವಾಸಿಸುತ್ತಿದ್ದರು. ಪತಿ ಸಿಂಗ್ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಕುಟುಂಬದ ವಿರೋಧದ ನಡುವೆಯೂ ಅಮಂದೀಪ್ ಮತ್ತು ಜಸ್ವಿಂದರ್ ಇಬ್ಬರು ಮದುವೆಯಾಗಿದ್ದರು.

    ಕೊಲೆಗೆ ಪ್ಲ್ಯಾನ್
    ಜನವರಿ 9 ರಂದು ಸಂಜೆ ಕೌರ್ ಮನೆಯಲ್ಲಿ ಒಬ್ಬಳೇ ಇದ್ದಳು. ಈ ವೇಳೆ ಕೌರ್ ನ ತಾಯಿ ಪರಮಜಿತ್ ಕೌರ್, ಸಹೋದರ ಪ್ರದೀಪ್ ಸಿಂಗ್, ಜಸ್ಮನ್ಪ್ರೀತ್, ಸೋದರ ಸಂಬಂಧಿ ಕಮಲ್ಜೀತ್ ಸಿಂಗ್, ಅವರ ಸ್ನೇಹಿತ ಸುಖ್‍ದೀಪ್ ಸಿಂಗ್ ಮತ್ತು ಚಿಕ್ಕಪ್ಪ ಕಾಕಾ ಸಿಂಗ್ ಸೇರಿದಂತೆ ಕೆಲವು ಮಂದಿ ಮನೆಗೆ ಹೋಗಿದ್ದಾರೆ. ಆಗ ಏಕಾಏಕಿ ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ. ತಾಯಿ ಹಿಂದಿನಿಂದ ಬಂದು ಕೌರ್ ನ ಕುತ್ತಿಗೆಯನ್ನು ಹಿಡಿದಿದ್ದು, ಇತ್ತ ಪ್ರದೀಪ್ ಸಿಂಗ್ ಮತ್ತು ಜಸ್ಮನ್ಪ್ರೀತ್ ಆಕೆಯ ಕೈ-ಕಾಲುಗಳನ್ನು ಹಿಡಿದಿದ್ದರು. ಬಳಿಕ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ.

    ಮದುವೆ ಆದಾಗಿನಿಂದಲೂ ಅಮಂದೀಪ್ ಕುಟುಂಬಸ್ಥರು ಬೆದರಿಕೆ ಹಾಕುತ್ತಿದ್ದರು. ಕುಟುಂಬದಿಂದ ದೂರ ಉಳಿದುಕೊಂಡಿದ್ದ ನಮ್ಮ ಸಂಸಾರ ಚೆನ್ನಾಗಿತ್ತು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಈ ಹಿಂದೆ ಅಮಂದೀಪ್ ಕುಟುಂಬಸ್ಥರು ನಮ್ಮ ಮೇಲೆ ಹಲ್ಲೆಗೆ ಯತ್ನಿಸಿದ್ದರು ಎಂದು ಜಸ್ವಿಂದರ್ ಸಿಂಗ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮನೆಯಲ್ಲಿ ಮೂವರು, ಚಲಿಸುತ್ತಿದ್ದ ಆಟೋದಲ್ಲಿ ಇಬ್ಬರಿಂದ ಮಹಿಳೆಯ ಮೇಲೆ ಗ್ಯಾಂಗ್‍ರೇಪ್

    ಮನೆಯಲ್ಲಿ ಮೂವರು, ಚಲಿಸುತ್ತಿದ್ದ ಆಟೋದಲ್ಲಿ ಇಬ್ಬರಿಂದ ಮಹಿಳೆಯ ಮೇಲೆ ಗ್ಯಾಂಗ್‍ರೇಪ್

    – ಚಲಿಸುತ್ತಿದ್ದ ಆಟೋದಲ್ಲಿಯೇ ಗ್ಯಾಂಗ್ ರೇಪ್
    – ಫ್ಲೈ ಓವರ್ ಮೇಲೆ ಸಂತ್ರಸ್ತೆಯನ್ನ ಎಸೆದು ಪರಾರಿ

    ಚಂಡೀಗಢ: 42 ವರ್ಷದ ಮಹಿಳೆಯನ್ನು ಮನೆ ಮತ್ತು ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಎರಡು ಕಡೆ ಐವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

    ಮೊದಲಿಗೆ ಗುರುಗ್ರಾಮ್‍ನ ಭಂಗೊಲೋ ಗ್ರಾಮದ ಮನೆಯಲ್ಲಿ ಮೂವರು ಅತ್ಯಾಚಾರ ಮಾಡಿದ್ದು, ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಇಬ್ಬರು ಸಂತ್ರಸ್ತೆಯನ್ನು ಅತ್ಯಾಚಾರ ಮಾಡಿದ್ದಾರೆ.

    ಏನಿದು ಪ್ರಕರಣ?
    ಸಂತ್ರಸ್ತೆ ದೆಹಲಿಯ ನಿವಾಸಿಯಾಗಿದ್ದು, 2013 ರಲ್ಲಿ ಪತಿ ಮೃತಪಟ್ಟಿದ್ದರು. ಪತಿ ಕೆಲಸ ಮಾಡುತ್ತಿದ್ದ ಸಂಸ್ಥೆಯಲ್ಲಿ ಆರ್ಥಿಕ ವಿವಾದವೊಂದನ್ನು ಪರಿಹರಿಸಲು ಗುರುಗ್ರಾಮಕ್ಕೆ ಹೋಗಿದ್ದರು. ಸಂತ್ರಸ್ತೆ ಶನಿವಾರ ಅಂದರೆ ಡಿಸೆಂಬರ್ 29 ರಂದು ಮಧ್ಯಾಹ್ನ ಸುಮಾರು 2.30 ಗಂಟೆಗೆ ನಖ್ರೋಲಾ ಚೌಕ್ ರಾಷ್ಟ್ರೀಯ ಹೆದ್ದಾರಿ 8ರಲ್ಲಿ ಆಟೋ-ರಿಕ್ಷಾಗೆ ಹತ್ತಿದ್ದಾರೆ. ಆದರೆ ಆಟೋ ಚಾಲಕ ಅಂಕಿತ್ ಸಂತ್ರಸ್ತೆಯನ್ನು ಈಎಮ್‍ಟಿ ಮನೇಸಾರ್ ಸ್ಥಳಕ್ಕೆ ಕರೆದುಕೊಂಡು ಹೋಗುವ ಬದಲು ಅವರನ್ನು ಭಾಂಗ್ರೋಲಾದಲ್ಲಿ ಒಂದು ಮನೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಆಟೋ ಚಾಲಕ ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಅಷ್ಟೇ ಅಲ್ಲದೇ ಕಾಮುಕರು ಅಂದು ರಾತ್ರಿಯೇ ಸಂತ್ರಸ್ತೆಯನ್ನು ಇಬ್ಬರು ಆಟೋ ಚಾಲಕರಿಗೆ ಒಪ್ಪಿಸಿದ್ದಾರೆ. ನಂತರ ಅವರಿಬ್ಬರು ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಚಲಿಸುತ್ತಿದ್ದ ಆಟೋದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಳಿಕ ಮಧ್ಯರಾತ್ರಿ ರಾಂಪುರಾ ಫ್ಲೈಓವರ್ ಸಮೀಪದ ಫುಡ್ ಸ್ಟಾಲ್ ಬಳಿ ಸಂತ್ರಸ್ತೆಯನ್ನು ಎಸೆದು ಪರಾರಿಯಾಗಿದ್ದಾರೆ.

    ದಾರಿಹೋಕರು ಮಹಿಳೆಯನ್ನು ನೋಡಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಮಹಿಳೆ ಗುರುಗ್ರಾಮ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಅಂಕಿತ್ ಮತ್ತು ಆತನ ಸಹಚರರನ್ನು ಬಂಧಿಸಿದ್ದಾರೆ.

    ಆರೋಪಿಗಳನ್ನು ದೀಪಕ್, ಮಹೀಪಾಲ್, ಅಜಿತ್ ಮತ್ತು ಸುನ್ನ ಎಂದು ಗುರುತಿಸಲಾಗಿದೆ. ಇತರ ಇಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ. ಸದ್ಯಕ್ಕೆ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಸಾಜ್ ಮಾಡುವಾಗ ಆಂಟಿಯನ್ನೇ ರೇಪ್ ಮಾಡಿದ ಯುವಕ

    ಮಸಾಜ್ ಮಾಡುವಾಗ ಆಂಟಿಯನ್ನೇ ರೇಪ್ ಮಾಡಿದ ಯುವಕ

    ಚಂಡೀಗಢ: 28 ವರ್ಷದ ಮಸಾಜ್ ಮಾಡುವ ಯುವಕ 54 ವರ್ಷದ ವಿದೇಶಿ ಮಹಿಳೆಯನ್ನು ಅತ್ಯಾಚಾರ ಮಾಡಿರುವ ಘಟನೆ ಹರಿಯಾಣದ ಐಟಿ ಪಾರ್ಕ್ ನಲ್ಲಿರುವ ಪಂಚತಾರಾ ಹೋಟೆಲ್ ನಲ್ಲಿ ನಡೆದಿದೆ.

    ಸಂತ್ರಸ್ತೆ ಡಿಸೆಂಬರ್ 27 ರಂದು ಪೊಲೀಸರಿಗೆ ಈ ಬಗ್ಗೆ ದೂರು ಕೊಟ್ಟಿದ್ದು, ತಾನು ಪಾದದ ಮಸಾಜ್ ಮಾಡಿಸಿಕೊಳ್ಳುವಾಗ ಸ್ಪಾದಲ್ಲಿ ಅತ್ಯಾಚಾರ ಮಾಡಿದ್ದಾನೆ ಎಂದು ದೂರಿದ್ದಾರೆ. ಸದ್ಯಕ್ಕೆ ಆರೋಪಿ ತಲೆ ಮರೆಸಿಕೊಂಡಿದ್ದು, ಆತನು ಉತ್ತರ ಪ್ರದೇಶದ ಬಿಜ್ನೋರ್ ನಿವಾಸಿ ಅಂತ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ವಿದೇಶಿ ಮಹಿಳೆ ಡಿಸೆಂಬರ್ 19 ರಂದು ತನ್ನ ಪಾಟ್ನರ್ ಜೊತೆ ಪ್ರವಾಸಿ ವೀಸಾದಲ್ಲಿ ಚಂಡೀಗಢಕ್ಕೆ ಬಂದಿದ್ದರು. ಬಳಿಕ ಚಂಡೀಗಢದ ಐಟಿ-ಪಾರ್ಕ್ ನ ಸ್ಟಾರ್ ಹೋಟೆಲೊಂದರಲ್ಲಿ ತಂಗಿದ್ದರು. ಮಹಿಳೆ ಅಲ್ಲಿನ ಸ್ಪಾದಲ್ಲಿ ಮಸಾಜ್ ಗೆಂದು ಹೋಗಿದ್ದಾಗ ಆರೋಪಿ ಅಸಭ್ಯವಾಗಿ ಮುಟ್ಟಿ, ನನ್ನ ಜೊತೆ ಕೆಟ್ಟದ್ದಾಗಿ ವರ್ತಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

    ಅದೇ ದಿನ ಮಹಿಳೆ ಹೋಟೆಲ್ ಆಡಳಿತ ಮಂಡಳಿಗೆ ಈ ಬಗ್ಗೆ ತಿಳಿಸಿದ್ದಾರೆ. ಆದರೆ ಡಿಸೆಂಬರ್ 27 ರಂದು ಶಿಮ್ಲಾದ ಪ್ರವಾಸಕ್ಕೆ ಹೋಗಿ ಅಲ್ಲಿಂದ ವಾಪಸ್ ಬಂದ ಬಳಿಕ ಪೊಲೀಸ್ ಠಾಣೆಗೆ ಬಂದು ದೂರನ್ನು ದಾಖಲಿಸಿದ್ದಾರೆ. ಅದೇ ದಿನ ಹೋಟೆಲ್ ಆಡಳಿತ ಮಂಡಳಿ ಆರೋಪಿಯನ್ನು ಕೆಲಸದಿಂದ ವಜಾ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸಂತ್ರಸ್ತೆ ಸ್ಥಳೀಯ ಸಂಪ್ರದಾಯಗಳ ಬಗ್ಗೆ ತಿಳಿದುಕೊಳ್ಳಲು ಭಾರತಕ್ಕೆ ಭೇಟಿ ಕೊಡುತ್ತಿದ್ದರು. ಸದ್ಯಕ್ಕೆ ಆರೋಪಿ ತಲೆ ಮರೆಸಿಕೊಂಡಿದ್ದು, ಆತನಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಸಂತ್ರಸ್ತೆಗೆ ಈಗಾಗಲೇ ವೈದ್ಯಕೀಯ ಪರೀಕ್ಷೆಯನ್ನು ಮಾಡಿಸಲಾಗಿದೆ. ಅಷ್ಟೇ ಅಲ್ಲದೇ ಸಂತ್ರಸ್ತೆಯ ಹೇಳಿಕೆಯನ್ನು ಮಾಜಿಸ್ಟ್ರೇಟ್ ಅವರು ರೆಕಾರ್ಡ್ ಮಾಡಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧೀಕ್ಷಕ ನೀಲಾಂಬರಿ ಜಗ್ದಾಲೆ ತಿಳಿಸಿದ್ದಾರೆ.

    ಐಟಿ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಈ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಶಿರಚ್ಛೇದವಾಗಿದ್ದ ಮಹಿಳೆ, ಮಕ್ಕಳಿಬ್ಬರ ಮೃತದೇಹ ಡ್ರಮ್‌ನಲ್ಲಿ ಪತ್ತೆ..!

    ಶಿರಚ್ಛೇದವಾಗಿದ್ದ ಮಹಿಳೆ, ಮಕ್ಕಳಿಬ್ಬರ ಮೃತದೇಹ ಡ್ರಮ್‌ನಲ್ಲಿ ಪತ್ತೆ..!

    ಚಂಡೀಗಡ: ಹರಿಯಾಣದ ಭಿವಾನಿ ಜಿಲ್ಲೆಯ ರಸ್ತೆಯಲ್ಲಿ ಬಿದ್ದಿದ್ದ ಡ್ರಮ್‍ನೊಳಗೆ ತಲೆ ಇಲ್ಲದ ಮೂರು ಮೃತ ದೇಹಗಳು ಕಂಡುಬಂದಿವೆ.

    ಖಾರಕ್ ಗ್ರಾಮದ ರೋಹ್ಟಕ್-ಭಿವಾನಿ ರಸ್ತೆಯಲ್ಲಿ ಶುಕ್ರವಾರ ಒಂದು ಡ್ರಮ್ ಪತ್ತೆಯಾಗಿದೆ. ಆದರೆ ಅದರೊಳಗೆ ಮಹಿಳೆ ಮತ್ತು ಇಬ್ಬರು ಮಕ್ಕಳ ಮೃತದೇಹ ಕಂಡು ಬಂದಿದ್ದು, ಮೃತಪಟ್ಟಿದ್ದ ಮೂವರ ತಲೆಯೂ ಕಟ್ ಆಗಿತ್ತು.

    32 ವರ್ಷ ವಯಸ್ಸಿನ ಮಹಿಳೆ, 12 ವರ್ಷ ವಯಸ್ಸಿನ ಬಾಲಕಿ ಮತ್ತು ಎರಡು ವರ್ಷದ ಬಾಲಕ ಎಂದು ತಿಳಿದು ಬಂದಿದೆ. ಮೃತರಿಗೆ ತಲೆ ಇಲ್ಲದ ಕಾರಣ ಅವರ ಗುರುತುಗಳನ್ನು ಪತ್ತೆ ಮಾಡಲು ತುಂಬಾ ಕಷ್ಟಕರವಾಗಿದೆ ಎಂದು ಎಸ್‍ಪಿ ಗಂಗಾ ರಾಮ್ ಪುನಿಯಾ ಹೇಳಿದ್ದಾರೆ.

    ದೆಹಲಿ, ರಾಜಸ್ಥಾನ್ ಮತ್ತು ಪಂಜಾಬ್ ಪೊಲೀಸರು ಕಾಣೆಯಾದ ವ್ಯಕ್ತಿಗಳ ಬಗ್ಗೆ ಯಾರಾದರೂ ದೂರು ಸಲ್ಲಿಸಿದ್ದಾರೆಯೇ ಎಂದು ವಿಚಾರಣೆ ನಡೆಸಲಾಗುತ್ತಿದೆ. ಹಾಗೆಯೇ ನಾಪತ್ತೆಯಾದವರು ಹಾಗೂ ನಮಗೆ ಸಿಕ್ಕಿರುವ ಮೃತ ದೇಹಗಳು ಮ್ಯಾಚ್ ಆಗುತ್ತವೆಯಾ ಎಂದು ತನಿಖೆ ಮಾಡುತ್ತಿದ್ದೇವೆ ಎಂದು ಎಸ್‍ಪಿ ತಿಳಿಸಿದ್ದಾರೆ.

    ಸದ್ಯಕ್ಕೆ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಗುರುತು ಮಾತ್ರ ಇನ್ನೂ ಪತ್ತೆಯಾಗಿಲ್ಲ. ಯಾರೋ ಮೂವರ ಶಿರಚ್ಛೇದನ ಮಾಡಿ, ಬಳಿಕ ಮೃತ ದೇಹಗಳನ್ನು ಡ್ರಮ್ ನಲ್ಲಿ ತುಂಬಿ ರಸ್ತೆಯಲ್ಲಿ ಬಿಸಾಡಿದ್ದಾರೆ ಎಂದು ಹೇಳಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಸ್ತೆಬದಿ ಮಲಗಿದ್ದವರ ಮೇಲೆಯೇ ಹರಿದ ಕಾರು: ಐವರ ಸಾವು, 9 ಮಂದಿ ಗಾಯ

    ರಸ್ತೆಬದಿ ಮಲಗಿದ್ದವರ ಮೇಲೆಯೇ ಹರಿದ ಕಾರು: ಐವರ ಸಾವು, 9 ಮಂದಿ ಗಾಯ

    ಚಂಡೀಗಢ: ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆಬದಿ ಮಲಗಿದ್ದವರೇ ಮೇಲೆ ಹರಿದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಹರಿಯಾಣದ ಹಿಸ್ಸಾರ್ ಜಿಲ್ಲೆಯಲ್ಲಿ ನಡೆದಿದೆ.

    ಮಂಗಳವಾರ ಹಿಸ್ಸಾರ್ ಜಿಲ್ಲೆಯ ಜಿಂದಾಲ್ ಸ್ಟೀಲ್ ಪ್ಲಾಂಟ್ ಸೇತುವೆಯ ಕೆಳಗೆ ಕೂಲಿ ಕಾರ್ಮಿಕರು ಎಂದಿನಂತೆ ಮಲಗಿದ್ದರು. ನಸುಕಿನ 2 ಗಂಟೆ ಸುಮಾರಿಗೆ ವೇಗವಾಗಿ ಬಂದ ಕಾರು ಮಲಗಿದ್ದವರ ಮೇಲೆಯೇ ಹರಿದಿದೆ. ಪರಿಣಾಮ ಐವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟರೆ, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದಾರೆ.

    ಜಿಂದಾಲ್ ಸ್ಟೀಲ್ ಪ್ಲಾಂಟ್ ಬಳಿ ಸೇತುವೆ ದುರಸ್ಥಿ ನಡೆಯುತ್ತಿದ್ದ ಕಾರಣ, ಕಾರ್ಮಿಕರು ರಾತ್ರಿಯಾಗುತ್ತಿದ್ದಂತೆ ಪಕ್ಕದ ಪಾದಾಚಾರಿ ಮಾರ್ಗದಲ್ಲೇ ಮಲಗಿಕೊಳ್ಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ಅವರ ಮೇಲೆ ಹರಿದಿದೆ. ಮೃತರನ್ನು ಬಿಹಾರದ ಸಹರ್ಸಾ ಮತ್ತು ಖಗಾರಿಯಾ ಜಿಲ್ಲೆಯವರೆಂದು ಗುರುತಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದ್ದು, ಬ್ರೇಕ್ ಹಾಕಿದ ರಭಸಕ್ಕೆ ಕಾರು ಸೇತುವೆಯ ತಡೆಗೋಡೆಯನ್ನು ಒಡೆದು, 50 ಅಡಿ ಕೆಳಕ್ಕೆ ಬಿದ್ದಿದೆ. ಘಟನೆಯಲ್ಲಿ ಕಾರು ಚಾಲಕನೂ ಸಹ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದೇವೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಟಾಟಾ ಸ್ಟೀಲ್ಸ್ ಮ್ಯಾನೇಜರ್‌ನನ್ನು ಗುಂಡಿಕ್ಕಿ ಕೊಂದ ಮಾಜಿ ನೌಕರ

    ಟಾಟಾ ಸ್ಟೀಲ್ಸ್ ಮ್ಯಾನೇಜರ್‌ನನ್ನು ಗುಂಡಿಕ್ಕಿ ಕೊಂದ ಮಾಜಿ ನೌಕರ

    ಚಂಡೀಗಡ್: ಟಾಟಾ ಸ್ಟೀಲ್ ಮ್ಯಾನೇಜರ್ ಒಬ್ಬರನ್ನು ಅದೇ ಕಂಪನಿಯ ಮಾಜಿ ನೌಕರ ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹರಿಯಾಣದ ಫರಿದಾಬಾದ್‍ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಅರಿಂದಾಲ್ ಪಾಲ್ (40) ಮೃತ ದುರ್ದೈವಿ. ಶುಕ್ರವಾರ ಮಧ್ಯಾಹ್ನ ಫರಿದಾಬಾದಿನ ಹಾರ್ಡ್ ವೇರ್ ರಸ್ತೆಯಲ್ಲಿರುವ ಟಾಟಾ ಸ್ಟೀಲ್ ತಯಾರಿಕಾ ಘಟಕದಲ್ಲಿ, ಎಂದಿನಂತೆ ಮ್ಯಾನೇಜರ್ ಅರಿಂದಾಲ್ ತನ್ನ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕಚೇರಿಗೆ ನುಗ್ಗಿದ ವ್ಯಕ್ತಿಯೊಬ್ಬ ಏಕಾಏಕಿ ಅವರ ಮೇಲೆ 4-5 ಬಾರಿ ಗುಂಡಿನ ದಾಳಿ ನಡೆಸಿ, ಪರಾರಿಯಾಗಿದ್ದನು.

    ರಕ್ತದ ಮಡುವಿನಲ್ಲಿ ಬಿದ್ದಿದ್ದ ಪಾಲ್ ರನ್ನು ಕಚೇರಿಯ ಸಿಬ್ಬಂದಿ ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಅವರು ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆಂದು ವೈದ್ಯರು ದೃಢಪಡಿಸಿದ್ದರು. ಆಸ್ಪತ್ರೆಯಿಂದ ಮ್ಯಾನೇಜರ್ ಹತ್ಯೆ ಮಾಡಿರುವ ವಿಷಯ ತಿಳಿಯುತ್ತಿದ್ದಂತೆ, ನಾನು ಆಸ್ಪತ್ರೆಗೆ ಕಡೆ ಹೊರಟೆ, ಆದರೆ ನಾನು ತಲುಪುವಷ್ಟರಲ್ಲಿ ಅರಿಂದಾಲ್ ಪಾಲ್ ಮೃತಪಟ್ಟಿದ್ದರೆಂದು ಮುಜೆಶರ್ ಪೊಲೀಸ್ ಠಾಣಾ ಅಧಿಕಾರಿ ಅಶೋಕ್ ಕುಮಾರ್ ಹೇಳಿದ್ದಾರೆ.

    ಮ್ಯಾನೇಜರ್ ಪಾಲ್‍ಗೆ ಗುಂಡಿನ ದಾಳಿ ನಡೆಸಿದ್ದು, ಅದೇ ಸಂಸ್ಥೆಯ ಮಾಜಿ ನೌಕರ 32 ವರ್ಷದ ವಿಶ್ವಾಸ್ ಪಾಂಡೆಯಾಗಿದ್ದಾನೆ. ಆರೋಪಿ ಪಾಂಡೆ ಟಾಟಾ ಕಂಪನಿಯಲ್ಲಿ ಕಳೆದ 4 ವರ್ಷಗಳಿಂದ (2015-2018) ಕೆಲಸ ನಿರ್ವಹಿಸಿತ್ತಿದ್ದ. ಅಲ್ಲದೇ ಕಳೆದ ಆಗಸ್ಟ್ ತಿಂಗಳಿನಲ್ಲಿ ಆರೋಪಿಯನ್ನು ಕೆಲಸದಿಂದ ಹೊರಹಾಕಲಾಗಿತ್ತು. ಘಟನೆ ಸಂಬಂಧ ಆರೋಪಿ ವಿಶ್ವಾಸ್ ಪಾಂಡೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ನಾಪತ್ತೆಯಾಗಿರುವ ಪಾಂಡೆಗಾಗಿ ತೀವ್ರ ಶೋಧ ನಡೆಸುತ್ತಿದ್ದೇವೆ. ಸದ್ಯ ಪಾಲ್ ರವರ ಮೃತ ದೇಹವನ್ನ ಫರಿದಾಬಾದ್‍ನ ಬಾದ್‍ಷಾ ಖಾನ್ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಭಾನುವಾರ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಅಶೋಕ್ ತಿಳಿಸಿದ್ದಾರೆ.

    ಮ್ಯಾನೇಜರ್ ಅರಿಂದಾಲ್ ಪಾಲ್ ಹತ್ಯೆಯ ಕುರಿತು ಟಾಟಾ ಸ್ಟೀಲ್ಸ್ ಪ್ರೋಸೆಸಿಂಗ್ ಮತ್ತು ಡಿಸ್ಟ್ರಿಬ್ಯೂಶನ್ ಕಂಪನಿ ಸಂತಾಪ ಸೂಚಿಸಿದೆ. ಪಾಲ್ ಅವರು ಹೆಂಡತಿ, ಮಗಳು ಮತ್ತು ತಂದೆ-ತಾಯಿಯನ್ನ ಅಗಲಿದ್ದಾರೆ. ಮೃತ ಕುಟುಂಬಕ್ಕೆ ಎಲ್ಲಾ ರೀತಿಯ ಸಹಾಯ ಮತ್ತು ಸಹಕಾರ ನೀಡಲಿದೆ ಎಂದು ಕಂಪನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಒಂದೇ ರಾತ್ರಿ, ಬೇರೆ ಬೇರೆ ಸ್ಥಳದಲ್ಲಿ 10 ಮಂದಿ ಕಾಮುಕರಿಂದ ಗ್ಯಾಂಗ್‍ರೇಪ್

    ಒಂದೇ ರಾತ್ರಿ, ಬೇರೆ ಬೇರೆ ಸ್ಥಳದಲ್ಲಿ 10 ಮಂದಿ ಕಾಮುಕರಿಂದ ಗ್ಯಾಂಗ್‍ರೇಪ್

    -ಆಶ್ರಯ ನೀಡಿದ್ದ ಗೆಳೆಯನು ರೇಪ್ ಮಾಡ್ದ

    ಚಂಡೀಗಢ: 24 ವರ್ಷದ ಯುವತಿ ಮೇಲೆ ಆಕೆಯ ಸ್ನೇಹಿತ ಸೇರಿದಂತೆ ಒಂದೇ ದಿನ ಹತ್ತು ಮಂದಿ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಪಂಜಾಬ್ ನಲ್ಲಿ ನಡೆದಿದೆ.

    ಈ ಘಟನೆ ಅಕ್ಟೋಬರ್ 10 ರಂದು ಪಂಜಾಬ್ ನ ಕಪುರ್ಥಾಲಾ ಜಿಲ್ಲೆಯ ಲಖನ್ಪುರ್ ಖೊಲೆ ಮತ್ತು ದಯಾಲ್ಪುರ್ ಗ್ರಾಮಗಳಲ್ಲಿ ಎರಡು ಕಡೆ ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಕುರಿತಂತೆ ನಾವು ಸಾಮೂಹಿಕ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದೇವೆ. 10 ಮಂದಿ ಆರೋಪಿಗಳಲ್ಲಿ ನಾಲ್ವರನ್ನು ಬಂಧಿಸಿದ್ದೇವೆ. ಉಳಿದವರು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ತಂಡಗಳನ್ನು ರಚಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿ ಸತ್ನಾಮ್ ಸಿಂಗ್ ತಿಳಿಸಿದ್ದಾರೆ.

    ಏನಿದು ಪ್ರಕರಣ
    5 ತಿಂಗಳ ಹಿಂದೆ ಸಂತ್ರಸ್ತೆ ಭೋಲು ಎಂಬ ವ್ಯಕ್ತಿಯನ್ನು ಭೇಟಿಯಾಗಿದ್ದಾರೆ. ಆತ ಡ್ರಗ್ ವ್ಯಸನಿಯಾಗಿದ್ದನು ಎಂದು ದೂರಿನಲ್ಲಿ ತಿಳಿಸಿದ್ದಾರೆ. ದಿನಕಳೆದಂತೆ ಆಕೆಯೂ ಡ್ರಗ್ ತೆಗೆದುಕೊಳ್ಳಲು ಪ್ರಾರಂಭಿಸಿದ್ದರು. ಭೋಲು ಸೋನು ಎಂಬಾತನ್ನು ಪರಿಚಯಿಸಿದ್ದಾನೆ. ಆತ ಸಂತ್ರಸ್ತೆಯನ್ನು ಪ್ರತಿದಿನ ಭೇಟಿ ಮಾಡಲು ಪ್ರಾರಂಭಿಸಿದ್ದನು. ಸೋನು ಸ್ನೇಹಿತ ಸಿರಿಯಿಂದ ಸಂತ್ರಸ್ತೆ ಬಾಡಿಗೆಗೆ ಮನೆ ತೆಗೆದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಅಕ್ಟೋಬರ್ 10 ರಂದು ಸಿರಿ ತನ್ನ ಹುಟ್ಟುಹಬ್ಬದ ಆಚರಣೆಗಾಗಿ ತನ್ನ ಸ್ನೇಹಿತರನ್ನು ಆಹ್ವಾನಿಸಿದ್ದನು. ಅಂದಿನ ದಿನವೇ ಸಂತ್ರಸ್ತೆಯನ್ನು ಸಮೀಪದ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಆರು ಮಂದಿ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಕಾಮುಕರು ಅತ್ಯಾಚಾರ ಮಾಡುವಾಗ ಸಂತ್ರಸ್ತೆಯ ಕೂಗಿನ ಶಬ್ದ ಯಾರಿಗೂ ಕೇಳಬಾರದು ಎಂದು ಜೋರಾಗಿ ಮ್ಯೂಜಿಕ್ ಹಾಕಿದ್ದರು ಎಂದು ಪೊಲೀಸರು ಹೇಳಿದ್ದಾರೆ.

    ನಂತರ ಸಂತ್ರಸ್ತೆ ಅಲ್ಲಿಂದ ತಪ್ಪಿಸಿಕೊಂಡು ದಯಾಲ್ಪುರ್ ಗ್ರಾಮದಲ್ಲಿ ತನ್ನ ಪರಿಚಯಸ್ಥನಾದ ಸತ್ಪಾಲ್ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಆದರೆ ಅದೇ ದಿನ ಸತ್ಪಾಲ್ ಸ್ನೇಹಿತೆ ಎಂದು ನೋಡದೇ ತನ್ನ ಮೂವರು ಸ್ನೇಹಿತರಾದ ಸುಖ್ವಿಂದರ್ ಸಿಂಗ್, ರವೀಂದರ್ ಸಿಂಗ್ ಮತ್ತು ಕುಲ್ವಿಂದರ್ ಸಿಂಗ್ ಜೊತೆ ಸೇರಿ ಸಂತ್ರಸ್ತೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಇವರೆಲ್ಲರೂ ಸ್ಥಳೀಯ ಕೈಗಾರಿಕಾ ಘಟಕದ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

    ಸಂತ್ರಸ್ತೆ ಅಕ್ಟೋಬರ್ 11ರಂದು ಬೆಳಗ್ಗೆ ತನ್ನ ಬಾಡಿಗೆ ಮನೆಗೆ ಬಂದಿದ್ದಾರೆ. ಅಲ್ಲಿ ನಡೆದ ಘಟನೆಯ ಬಗ್ಗೆ ಆರೋಪಿ ಹಿರಿಯ ಅಜ್ಜಿ ಮತ್ತು ಚಿಕ್ಕಮ್ಮನ ಬಳಿ ಹೇಳಿಕೊಂಡಿದ್ದಾರೆ. ಆದರೆ ಸಂತ್ರಸ್ತೆಗೆ ಸಹಾಯ ಮಾಡುವ ಬದಲು ಆಕೆಯ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರ ಹಾಕಿದ್ದಾರೆ. ಕೊನೆಗೆ ನೊಂದ ಸಂತ್ರಸ್ತೆ ಸುಭಾನ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಸಂತ್ರಸ್ತೆಯನ್ನು ಸ್ಥಳೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ದೃಢವಾಗಿದೆ. ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾವು 10 ಮಂದಿ ಆರೋಪಿಗಳಲ್ಲಿ ನಾಲ್ವರನ್ನು ಬಂಧಿಸಿದ್ದು, ಉಳಿದವರಿಗಾಗಿ ಬಲೆ ಬೀಸಿದ್ದೇವೆ ಎಂದು ಸತ್ನಾಮ್ ಸಿಂಗ್ ಅವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv