Tag: ಚಂಡೀಗಢ

  • ದೀಪಾವಳಿ ಗಿಫ್ಟ್‌ – ದುಬಾರಿ ಕಾರುಗಳನ್ನೇ ನೀಡಿ ಹೃದಯ ಶ್ರೀಮಂತಿಕೆ ಮೆರೆದ ಉದ್ಯಮಿ

    ದೀಪಾವಳಿ ಗಿಫ್ಟ್‌ – ದುಬಾರಿ ಕಾರುಗಳನ್ನೇ ನೀಡಿ ಹೃದಯ ಶ್ರೀಮಂತಿಕೆ ಮೆರೆದ ಉದ್ಯಮಿ

    ಚಂಡೀಗಢ: ಉದ್ಯೋಗಿಗಳ ಕಾರ್ಯಗಳನ್ನು ಗುರುತಿಸುವ ವಿನೂತನ ಮಾದರಿಯನ್ನು ಕಳೆದ ಕೆಲ ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿರುವ ಔಷಧ ತಯಾರಿಕಾ ಕಂಪನಿಯ ಮಾಲೀಕ ಎಂ.ಕೆ. ಭಾಟಿಯಾ, ಈ ದೀಪಾವಳಿಗೂ (Deepavali) ಕಂಪನಿ ನೌಕರರಿಗೆ ಭರ್ಜರಿ ಉಡುಗೊರೆಯನ್ನೇ ನೀಡಿದ್ದಾರೆ. ಬೋನಸ್, ಸ್ವೀಟ್ ಬದಲಿಗೆ ದುಬಾರಿ ಕಾರುಗಳನ್ನೇ ಉಡುಗೊರೆಯಾಗಿ (Diwali Festive Gift) ನೀಡಿ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ.

    ಹರಿಯಾಣದ ಖ್ಯಾತ ಉದ್ಯಮಿ ಹಾಗೂ ಮಿಟ್ಸ್ ಕಾರ್ಟ್ ಸಂಸ್ಥೆಯ ಮಾಲೀಕ ಎಂ.ಕೆ ಭಾಟಿಯಾ (MK Bhatia) ನೌಕರರಿಗೆ ಈ ಬಾರಿಯೂ ದುಬಾರಿ ಕಾರು ಗಿಫ್ಟ್ ಮಾಡೋ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ 12 ಜನ ನೌಕರರಿಗೆ ವಿವಿಧ ಬಣ್ಣದ ಟಾಟಾ ಪಂಚ್ ಕಾರುಗಳನ್ನ ಉಡುಗೊರೆಯಾಗಿ ನೀಡಿದ್ದಾರೆ. ಇದನ್ನೂ ಓದಿ: ಶ್ರೀರಾಮನಗರಿಯಲ್ಲಿ ಝಗಮಗಿಸಿದ ದೀಪೋತ್ಸವ – 26 ಲಕ್ಷ ದೀಪಗಳಿಂದ ಕಂಗೊಳಿಸಿದ ಅಯೋಧ್ಯೆ

    ಈವರೆಗೂ 51 ನೌಕರರಿಗೆ ಎಸ್‌ಯುವಿ ಕಾರುಗಳ ಉಡುಗೊರೆ ನೀಡಿದ್ದಾರೆ. ಉದ್ಯಮದೊಂದಿಗೆ ಸಾಮಾಜಿಕ ಕಾರ್ಯಕರ್ತರಾಗಿಯೂ ಗುರುತಿಸಿಕೊಂಡಿರುವ ಭಾಟಿಯಾ ಹರಿಯಾಣದ ಪಂಚಕುಲಾದಲ್ಲಿ ಮಿಟ್ಸ್‌ ಕಾರ್ಟ್‌ ಎಂಬ ಕಂಪನಿ ಹೊಂದಿದ್ದಾರೆ. ಪ್ರತಿ ಸಲ ದೀಪಾವಳಿ ಸಂದರ್ಭದಲ್ಲಿ ತಮ್ಮ ಉದ್ಯೋಗಿಗಳಿಗೆ ಭರ್ಜರಿ ಉಡುಗೊರೆ ನೀಡ್ತಾ ಬಂದಿದ್ದಾರೆ. ಇದನ್ನೂ ಓದಿ: ಬೆಳಕಿನ ಹಬ್ಬ ಎಲ್ಲರ ಜೀವನವನ್ನು ಸಾಮರಸ್ಯ, ಸಂತೋಷ, ಸಮೃದ್ಧಿಯಿಂದ ಬೆಳಗಲಿ – ದೀಪಾವಳಿಗೆ ಮೋದಿ ವಿಶ್

    ಅದೇ ರೀತಿ ಈ ಬಾರಿಯೂ ಉದ್ಯೋಗಿಗಳನ್ನು ಕಾರ್ ಶೋರೂಮ್‌ಗೆ ಕರೆದೊಯ್ದು ಹೊಸ ಕಾರುಗಳನ್ನ ಉಡುಗೊರೆಯಾಗಿ ಕೊಟ್ಟಿದ್ದಾರೆ. ಕಾರು ಸ್ವೀಕರಿಸಿದ ಸಿಬ್ಬಂದಿ ಶೋರೂಮ್‌ನಿಂದ ಕಚೇರಿವರೆಗೂ ಕಾರು ಓಡಿಸುತ್ತಾ ಬಂದು ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಐಎನ್‌ಎಸ್‌ ವಿಕ್ರಾಂತ್‌ ಪಾಕ್‌ಗೆ ನಿದ್ರೆಯಿಲ್ಲದಂತೆ ಮಾಡಿತು, ಬ್ರಹ್ಮೋಸ್‌ ತನ್ನ ಸಾಮರ್ಥ್ಯ ತೋರಿತು – ನರೇಂದ್ರ ಮೋದಿ

  • ಪಂಜಾಬ್‌ | ಗರೀಬ್ ರಥ ಎಕ್ಸ್‌ಪ್ರೆಸ್ ರೈಲು ಬೋಗಿಗೆ ಬೆಂಕಿ – ಧಗಧಗಿಸಿದ ಜ್ವಾಲೆ; ಪ್ರಯಾಣಿಕರು ಸೇಫ್‌

    ಪಂಜಾಬ್‌ | ಗರೀಬ್ ರಥ ಎಕ್ಸ್‌ಪ್ರೆಸ್ ರೈಲು ಬೋಗಿಗೆ ಬೆಂಕಿ – ಧಗಧಗಿಸಿದ ಜ್ವಾಲೆ; ಪ್ರಯಾಣಿಕರು ಸೇಫ್‌

    ಚಂಡೀಗಢ: ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ ರೈಲಿನಲ್ಲಿ (ರೈಲು ಸಂಖ್ಯೆ 12204) (Garib Rath Express) ಏಕಾಏಕಿ ಬೆಂಕಿ (fire) ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿಉರಿದ ಪಂಜಾಬ್‌ನಲ್ಲಿ ನಡೆದಿದೆ. ಓರ್ವ ಮಹಿಳಾ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದೆ, ಗಾಯಾಳು ಮಹಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆಯ ಸಮಯದಲ್ಲಿ ರೈಲು ಅಮೃತಸರದಿಂದ (Amritsar) ಪ್ರಯಾಣಿಸುತ್ತಿತ್ತು. ಆದ್ರೆ ಪ್ರಯಾಣಿಕರಿಗೆ ಯಾವುದೇ ಹಾನಿಯಾಗದೇ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಘಟನೆ ಬಳಿಕ ಭಯದ ವಾತಾವರಣ ಮೂಡಿದೆ. ಇದನ್ನೂ ಓದಿ: ಲಿಂಗಾಯತ ಧರ್ಮದ ಬಗ್ಗೆ ಅವಹೇಳನ; ಬಾಗಲಕೋಟೆ ತೊರೆಯುವಂತೆ ಕನ್ನೇರಿ ಶ್ರೀಗಳಿಗೆ ನೊಟೀಸ್!

    ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯ ಪ್ರಕಾರ, ಬೆಂಕಿ ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾಗಿದೆ. ಪಂಜಾಬ್‌ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಬೆಳಗ್ಗೆ 7:30ರ ಸುಮಾರಿಗೆ ರೈಲು ಸಂಖ್ಯೆ 12204 ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್‌ನ ಕೋಚ್‌ಗೆ ಬೆಂಕಿ ಹೊತ್ತಿಕೊಂಡಿದೆ. ರೈಲಿನ 2-3, ಜಿ -19 ಎಸಿ ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಪ್ರಯಾಣಿಕರೊಬ್ಬರು ಕೂಡಲೇ ಸರಪಳಿ ಎಳೆದು ರೈಲನ್ನು ನಿಲ್ಲಿಸಿದರು. ತಕ್ಷಣ, ಪೈಲಟ್ (ಚಾಲಕ) ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಇಳಿಯುವಂತೆ ಕೇಳಿಕೊಂಡರು ಮತ್ತು ಬೆಂಕಿಯ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು. ಸದ್ಯ ಕೋಚ್‌ನಲ್ಲಿದ್ದ ಪ್ರಯಾಣಿಕರನ್ನ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

    ಮಾಹಿತಿ ತಿಳಿದ ತಕ್ಷಣ ರೈಲ್ವೆ ನಿಲ್ದಾಣದ ಅಧಿಕಾರಿಗಳು, ನೌಕರರು, ಜಿಆರ್‌ಪಿ, ಆರ್‌ಪಿಎಫ್ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ತಲುಪಿದವು. ಅಗ್ನಿಶಾಮಕ ದಳದವರನ್ನೂ ಸಹ ಘಟನಾ ಸ್ಥಳಕ್ಕೆ ತಂದು ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

    ಗೊಂದಲದಲ್ಲಿ ರೈಲಿನಿಂದ ಇಳಿಯಲು ಪ್ರಯತ್ನಿಸುವಾಗ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದನ್ನೂ ಓದಿ: ಮುಂದಿನ ಸಿಎಂ ಸತೀಶಣ್ಣನೇ ಆಗ್ಲಿ – ಜಾರಕಿಹೊಳಿ ಪರ ಬ್ಯಾಟ್ ಬೀಸಿದ ರಾಜು ಗೌಡ

  • ಮನೆಯಲ್ಲಿ ಗುಂಡು ಹಾರಿಸಿಕೊಂಡು ಎಡಿಜಿಪಿ ಆತ್ಮಹತ್ಯೆ – ಜಪಾನ್‌ ಪ್ರವಾಸದಲ್ಲಿರೋ ಪತ್ನಿ ಐಎಎಸ್‌ ಅಧಿಕಾರಿ

    ಮನೆಯಲ್ಲಿ ಗುಂಡು ಹಾರಿಸಿಕೊಂಡು ಎಡಿಜಿಪಿ ಆತ್ಮಹತ್ಯೆ – ಜಪಾನ್‌ ಪ್ರವಾಸದಲ್ಲಿರೋ ಪತ್ನಿ ಐಎಎಸ್‌ ಅಧಿಕಾರಿ

    ಚಂಡೀಗಢ: ಹಿರಿಯ ಐಪಿಎಸ್ ಅಧಿಕಾರಿ ವೈ. ಪೂರ್ಣ್ ಕುಮಾರ್ (Y. Poorn Kumar) ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಚಂಡೀಗಢದ ಸೆಕ್ಟರ್ -11 ರಲ್ಲಿರುವ ತಮ್ಮ ಸರ್ಕಾರಿ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಂಡೀಗಢ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕುಮಾರ್‌ ಅವರು ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ಬಿಹಾರ ವಿಧಾನಸಭೆ ಚುನಾವಣೆ; ಎನ್‌ಡಿಎ-ಇಂಡಿಯಾ ಒಕ್ಕೂಟದ ನಡುವೆ ಸೀಟು ಹಂಚಿಕೆ ಲೆಕ್ಕಾಚಾರ

    ವೈ. ಪೂರ್ಣ್ ಕುಮಾರ್ ಎಡಿಜಿಪಿ ಶ್ರೇಣಿಯ ಅಧಿಕಾರಿಯಾಗಿದ್ದರು. ಅವರನ್ನು ಸೆ.29 ರಂದು ರೋಹ್ಟಕ್‌ನ ಸುನಾರಿಯಾ ಜೈಲಿಗೆ ವರ್ಗಾಯಿಸಲಾಗಿತ್ತು. ಸಾಧ್ವಿಗಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ರಾಮ್ ರಹೀಮ್ ಶಿಕ್ಷೆ ಅನುಭವಿಸುತ್ತಿರುವುದು ಇದೇ ಜೈಲಿನಲ್ಲಿ.

    ವೈ. ಪೂರ್ಣ್ ಕುಮಾರ್ ಅವರ ಪತ್ನಿ ಅಮನ್ ಪಿ. ಕುಮಾರ್ ಕೂಡ ಐಪಿಎಸ್ ಅಧಿಕಾರಿ. ಅ.5 ರಂದು ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಮತ್ತು ಇತರ ಅಧಿಕಾರಿಗಳೊಂದಿಗೆ ಜಪಾನ್ ಪ್ರವಾಸಕ್ಕೆ ಹೋಗಿದ್ದರು. ಅವರು ನಾಳೆ ಸಂಜೆ ಭಾರತಕ್ಕೆ ಮರಳಲಿದ್ದಾರೆ. ಇದನ್ನೂ ಓದಿ: ಕೆಮ್ಮಿನ ಸಿರಪ್‌ ಸೇವಿಸಿ ಮಕ್ಕಳ ಸಾವು ಪ್ರಕರಣ – ಸುಪ್ರೀಂಕೋರ್ಟ್‌ಗೆ ಪಿಐಎಲ್

    ಕಳೆದ ವರ್ಷ ವೈ. ಪೂರ್ಣ್ ಕುಮಾರ್ ಅವರು ಕೆಲವು ಐಪಿಎಸ್ ಅಧಿಕಾರಿಗಳ ಬಡ್ತಿ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಈ ಅಧಿಕಾರಿಗಳು 1991, 1996, 1997 ಮತ್ತು 2005 ರ ಬ್ಯಾಚ್‌ಗಳಿಗೆ ಸೇರಿದವರಾಗಿದ್ದರು. ಈ ಬಡ್ತಿಗಳನ್ನು ಅನುಚಿತವಾಗಿ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿಗೆ ಪತ್ರ ಬರೆದಿದ್ದರು. ಹಣಕಾಸು ಇಲಾಖೆಯು ಗೃಹ ಸಚಿವಾಲಯದ ನಿಯಮಗಳನ್ನು ನಿರ್ಲಕ್ಷಿಸಿ ಬಡ್ತಿಗಳನ್ನು ಸ್ವಂತವಾಗಿ ಅನುಮೋದಿಸಿದೆ ಎಂದು ಆಪಾದಿಸಿದ್ದರು.

  • ಹರಿಯಾಣ | ಎರಡು ಕಾರುಗಳು ಮುಖಾಮುಖಿ ಡಿಕ್ಕಿ – ದಂಪತಿ ಸೇರಿ ಸ್ಥಳದಲ್ಲೇ ಪ್ರಾಣಬಿಟ್ಟ ಐವರು

    ಹರಿಯಾಣ | ಎರಡು ಕಾರುಗಳು ಮುಖಾಮುಖಿ ಡಿಕ್ಕಿ – ದಂಪತಿ ಸೇರಿ ಸ್ಥಳದಲ್ಲೇ ಪ್ರಾಣಬಿಟ್ಟ ಐವರು

    – ಐವರ ಸ್ಥಿತಿ ಗಂಭೀರ

    ಚಂಡೀಗಢ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿದ ಘಟನೆ ಹರಿಯಾಣದ (Hariyana) ಕುರುಕ್ಷೇತ್ರ-ಕೈತಾಲ್ ರಸ್ತೆಯಲ್ಲಿ ನಡೆದಿದೆ.

    ಮೃತರನ್ನು ಪ್ರವೀಣ್, ಪವನ್, ಅವರ ಪತ್ನಿ ಉರ್ಮಿಳಾ, ರಾಜೇಂದ್ರ ಹಾಗೂ ಸುಮನ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಟ್ ಅಂಡ್‌ ರನ್‌ಗೆ ಬಿ.ಕಾಂ ಪದವೀಧರೆ ಬಲಿ

    ಸೋಮವಾರ (ಸೆ.29) ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಐವರು ಟಾಟಾ ಹ್ಯಾರಿಯರ್ ಕಾರಿನಲ್ಲಿ ಅಂಬಾಲಾ ಕಡೆಗೆ ಹೋಗುತ್ತಿದ್ದರು. ಇದೇ ಸಮಯಕ್ಕೆ ಯಮುನಾನಗರ HR 13F 3611 ನೋಂದಣಿ ಸಂಖ್ಯೆ ಹೊಂದಿದ್ದ ಮಾರುತಿ ಸ್ವಿಫ್ಟ್ ಕಾರೊಂದು ಎದುರಿಗೆ ಬಂದಿದ್ದು, ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಎರಡು ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿವೆ.

    ಕೂಡಲೇ ಸ್ಥಳೀಯರು ಕಾರಿನಲ್ಲಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಅತೀ ವೇಗದಿಂದ ಕಾರು ಚಲಾಯಿಸಿದ್ದಕ್ಕೆ ಅಪಘಾತ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.ಇದನ್ನೂ ಓದಿ: ಬೆಂಗಳೂರು | ಮೂರೇ ದಿನದಲ್ಲಿ 37 ದರೋಡೆ – 6 ಜನ ಅಪ್ರಾಪ್ತರ ಗ್ಯಾಂಗ್ ಅರೆಸ್ಟ್

  • ಮಿಗ್ -21 ತ್ರಿವರ್ಣ ಧ್ವಜದ ಗೌರವ ಹೆಚ್ಚಿಸಿದೆ: ರಾಜನಾಥ್ ಸಿಂಗ್

    ಮಿಗ್ -21 ತ್ರಿವರ್ಣ ಧ್ವಜದ ಗೌರವ ಹೆಚ್ಚಿಸಿದೆ: ರಾಜನಾಥ್ ಸಿಂಗ್

    – ಇದು ಫೈಟರ್‌ಜೆಟ್ ಅಲ್ಲ, ನಮ್ಮ ಕುಟುಂಬದ ಸದಸ್ಯ
    – ಯುದ್ಧ ವಿಮಾನಕ್ಕೆ ಭಾವನಾತ್ಮಾಕ ವಿದಾಯ ಹೇಳಿದ ರಕ್ಷಣಾ ಸಚಿವ

    ಚಂಡೀಗಢ: ಭಾರತೀಯ ವಾಯುಸೇನೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿರುವ ಮಿಗ್-21 (MiG-21) ಯುದ್ಧ ವಿಮಾನ (Fighter Jet) ಹಲವಾರು ವೀರ ಕಾರ್ಯಗಳಿಗೆ ಸಾಕ್ಷಿಯಾಗಿದೆ. 1971ರ ಯುದ್ಧ, ಕಾರ್ಗಿಲ್ ಯುದ್ಧ, ಬಾಲಕೋಟ್ ವೈಮಾನಿಕ ದಾಳಿ ಮತ್ತು ಆಪರೇಷನ್ ಸಿಂಧೂರದಲ್ಲಿಯೂ ಸಹ ಫೈಟರ್ ಜೆಟ್ ನಿರ್ಣಾಯಕ ಪಾತ್ರ ವಹಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೇಳಿದರು.

    ಮಿಗ್-21 ಯುದ್ಧ ವಿಮಾನದ ವಿದಾಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಿಗ್ 21 ನಮ್ಮ ಸಶಸ್ತ್ರ ಪಡೆಗಳಿಗೆ ಅಗಾಧ ಶಕ್ತಿಯನ್ನು ಒದಗಿಸದ ಒಂದು ಕ್ಷಣವೂ ಇರಲಿಲ್ಲ. ಐತಿಹಾಸಿಕ ಕಾರ್ಯಾಚರಣೆಗಳು ನಡೆದಾಗಲೆಲ್ಲಾ, ಮಿಗ್ -21 ತ್ರಿವರ್ಣ ಧ್ವಜದ ಗೌರವವನ್ನು ಹೆಚ್ಚಿಸಿದೆ. ಆದ್ದರಿಂದ, ಈ ವಿದಾಯವು ನಮ್ಮ ಸಾಮೂಹಿಕ ನೆನಪುಗಳು, ನಮ್ಮ ರಾಷ್ಟ್ರೀಯ ಹೆಮ್ಮೆ ಮತ್ತು ಧೈರ್ಯ, ತ್ಯಾಗ ಮತ್ತು ಶ್ರೇಷ್ಠತೆಯ ಕಥೆಯನ್ನು ಬರೆದ ಆ ಪ್ರಯಾಣದ ಬಗ್ಗೆಯೂ ಆಗಿದೆ ಎಂದರು. ಇದನ್ನೂ ಓದಿ: ಬಿಹಾರ ಚುನಾವಣೆಗೂ ಮುನ್ನವೇ ಭರ್ಜರಿ ಗಿಫ್ಟ್‌ – 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ. ವರ್ಗಾವಣೆ

    ಮಿಗ್-21 ದೇಶದ ನೆನಪುಗಳು ಮತ್ತು ಭಾವನೆಗಳಲ್ಲಿ ಆಳವಾಗಿ ಹುದುಗಿದೆ. 1963ರಲ್ಲಿ ಸೇನೆಗೆ ಸೇರ್ಪಡೆಯಾದಾಗಿನಿಂದ ಈ ವಿಮಾನವು ಆರು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದೆ. ನಮಗೆಲ್ಲರಿಗೂ ಇದು ಕೇವಲ ಫೈಟರ್ ಜೆಟ್ ಅಲ್ಲ, ಬದಲಾಗಿ ನಾವು ಆಳವಾದ ಬಾಂಧವ್ಯ ಹೊಂದಿರುವ ಕುಟುಂಬ ಸದಸ್ಯ. ಮಿಗ್-21 ನಮ್ಮ ವಿಶ್ವಾಸವನ್ನು ರೂಪಿಸಿದೆ, ನಮ್ಮ ಕಾರ್ಯತಂತ್ರವನ್ನು ಬಲಪಡಿಸಿದೆ ಮತ್ತು ಜಾಗತಿಕ ವೇದಿಕೆಯಲ್ಲಿ ನಮ್ಮನ್ನು ನಾವು ಸ್ಥಾಪಿಸಿಕೊಳ್ಳಲು ಸಹಾಯ ಮಾಡಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: MiG-21 Retires | 6 ದಶಗಳ ಸೇವೆಗೆ ವಿದಾಯ – ʻಹಾರುವ ಶವಪೆಟ್ಟಿಗೆʼ ಮಿಗ್‌-21ಗೆ ಗುಡ್‌ಬೈ ಹೇಳಿದ ಭಾರತ

  • ಭಾರತ-ಪಾಕ್ ಯುದ್ಧ ಭೀತಿ; ಚಂಡೀಗಢ ಸರ್ಕಾರದಿಂದ 2 ತಿಂಗಳು ಪಟಾಕಿ ಬ್ಯಾನ್

    ಭಾರತ-ಪಾಕ್ ಯುದ್ಧ ಭೀತಿ; ಚಂಡೀಗಢ ಸರ್ಕಾರದಿಂದ 2 ತಿಂಗಳು ಪಟಾಕಿ ಬ್ಯಾನ್

    -ರಾಜಸ್ಥಾನದ ಜೈಸಲ್ಮೇರ್‌ನಲ್ಲೂ ಪಟಾಕಿ ಮಾರಾಟ, ಖರೀದಿ ನಿಷೇಧ

    ಚಂಡೀಗಢ: ಭಾರತ ಮತ್ತು ಪಾಕಿಸ್ತಾನದ (India-Pakistan) ನಡುವಿನ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಚಂಡೀಗಢ ಸರ್ಕಾರ (Chandigarh Government) 2 ತಿಂಗಳುಗಳ ಕಾಲ ಪಟಾಕಿ ನಿಷೇಧಿಸಿದೆ.

    ಪಹಲ್ಗಾಮ್ ದಾಳಿಯ (Pahalgam Terrorist Attack) ಬಳಿಕ ಭಾರತ ಹಾಗೂ ಪಾಕ್ ನಡುವಿನ ಕಾದಾಟ ಹೆಚ್ಚಾಗುತ್ತಿದೆ. ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ `ಆಪರೇಷನ್ ಸಿಂಧೂರ’ದಡಿಯಲ್ಲಿ (Operation Sindoor) ಭಾರತೀಯ ಸೇನೆ ಪಾಕ್ ಮೇಲೆ ವಾಯುದಾಳಿ ನಡೆಸಿತ್ತು. ಬಳಿಕ ಗುರುವಾರ ರಾತ್ರಿ ಪಾಕಿಸ್ತಾನ ನಡೆಸಿದ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತವು ತಕ್ಕ ಉತ್ತರ ನೀಡಿದೆ.ಇದನ್ನೂ ಓದಿ: ನಮ್ಮ ನಾಯಕ ಹೇಡಿ.. ಮೋದಿ ಹೆಸರು ಹೇಳುವುದಕ್ಕೂ ಹೆದರುತ್ತಿದ್ದಾರೆ: ತಮ್ಮ ಪ್ರಧಾನಿ ವಿರುದ್ಧವೇ ಗುಡುಗಿದ ಪಾಕ್ ಸಂಸದ

    ಉಭಯ ದೇಶಗಳ ನಡುವೆ ಹೆಚ್ಚುತ್ತಿರುವ ಯುದ್ಧ ಭೀತಿ ಹಿನ್ನೆಲೆ ಇದೀಗ ಚಂಡೀಗಢ ಸರ್ಕಾರ ಎರಡು ತಿಂಗಳುಗಳ ಪಟಾಕಿ ನಿಷೇಧಿಸಿದೆ. ಮದುವೆ, ಶುಭ ಸಮಾರಂಭಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿದೆ. ಇನ್ನೂ ರಾಜಸ್ಥಾನದ ಜೈಸಲ್ಮೇರ್‌ನಲ್ಲಿಯೂ (Jaisalmer) ಪಟಾಕಿ ಸಿಡಿಸುವುದರ ಜೊತೆಗೆ ಮಾರಾಟ ಹಾಗೂ ಖರೀದಿಯನ್ನು ನಿಷೇಧಿಸಿಲಾಗಿದೆ.

    ಈ ಕುರಿತು ಚಂಡೀಗಢ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿಶಾಂತ್ ಕುಮಾರ್ ಯಾದವ್ ಮಾತನಾಡಿ, 2023ರ ಬಿಎನ್‌ಎಸ್ (BNS) ಸೆಕ್ಷನ್ 163ರ ಅಡಿಯಲ್ಲಿ 2025ರ ಮೇ 09 ರಿಂದ ಜುಲೈ 7ರವರೆಗೆ ಪಟಾಕಿ ನಿಷೇಧಿಸಲಾಗಿದೆ ಎಂದು ಆದೇಶಿಸಿದ್ದಾರೆ.

    ಮದುವೆ, ಶುಭ ಸಮಾರಂಭ ಹಾಗೂ ಧಾರ್ಮಿಕ ಹಬ್ಬಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಕಾರಣ ಯುದ್ಧ ಭೀತಿಯ ಸಂದರ್ಭದಲ್ಲಿ ಈ ರೀತಿ ಪಟಾಕಿ ಶಬ್ದವು ಡ್ರೋನ್ ಹಾಗೂ ಕ್ಷಿಪಣೆ ದಾಳಿಯ ಭ್ರಮೆಯನ್ನು ಸೃಷ್ಟಿಸಿ, ಸಾರ್ವಜನಿಕರಲ್ಲಿ ಭಯ ಉಂಟು ಮಾಡುತ್ತದೆ. ಹೀಗಾಗಿ ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಎಲ್‌ಒಸಿಯಲ್ಲಿ ಭಾರತ-ಪಾಕ್ ಸಂಘರ್ಷ; ಭಾರತೀಯ ಯೋಧ ಹುತಾತ್ಮ

  • ಪಾಕ್‌ನಿಂದ ಸಂಭಾವ್ಯ ದಾಳಿ ಮುನ್ಸೂಚನೆ – ಚಂಢೀಗಡದಲ್ಲಿ ಸೈರನ್ ಮೊಳಗಿಸಿ ಎಚ್ಚರಿಕೆ

    ಪಾಕ್‌ನಿಂದ ಸಂಭಾವ್ಯ ದಾಳಿ ಮುನ್ಸೂಚನೆ – ಚಂಢೀಗಡದಲ್ಲಿ ಸೈರನ್ ಮೊಳಗಿಸಿ ಎಚ್ಚರಿಕೆ

    ಚಂಡೀಗಢ: ಪಾಕಿಸ್ತಾನ(Pakistan) ಸೇನೆ ದಾಳಿ ಮಾಡುವ ಮುನ್ಸೂಚನೆ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ವಾಯು ಸೇನೆಯ ಸೂಚನೆಯಂತೆ ಚಂಢೀಗಡದಲ್ಲಿ(Chandigarh) ಸೈರನ್ ಮೊಳಗಿಸಲಾಗಿದೆ. ಜನರು ರಸ್ತೆಗಳಲ್ಲಿ ಓಡಾಡದಂತೆ, ಬಾಲ್ಕನಿಗಳಲ್ಲೂ ಕಾಣಿಸಿಕೊಳ್ಳದಂತೆ ಸೂಚನೆ ನೀಡಲಾಗಿದೆ.

    ಗುರುವಾರ ರಾತ್ರಿ ಪಂಜಾಬ್, ಚಂಡೀಗಢದ ಹಲವು ಪ್ರದೇಶಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋನ್, ಕ್ಷಿಪಣಿ ದಾಳಿ ನಡೆಸಿತ್ತು. ಈ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಭಾರತೀಯ ಸೇನೆ ಪಾಕಿಸ್ತಾನದ ಕ್ಷಿಪಣಿ, ಡ್ರೋನ್‌ಗಳನ್ನು ಹೊಡೆದುರುಳಿಸಿತ್ತು. ಇದನ್ನೂ ಓದಿ: ಭಾರತ ಮಿಸೈಲ್‌ ದಾಳಿಗೆ ಪಾಕ್‌ ತತ್ತರ – ಭಿಕ್ಷೆ ಬೇಡುತ್ತಿದೆ ʻಭಿಕಾರಿಸ್ತಾನʼ

    ಪಂಜಾಬ್ ಮತ್ತು ಹರಿಯಾಣದ ರಾಜಧಾನಿ ಚಂಡೀಗಢದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಗಡಿ ಪ್ರದೇಶದಲ್ಲಿರುವ ಮೊಹಾಲಿಯಲ್ಲೂ ಜನತೆಗೆ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಭಾರತ-ಪಾಕ್ ಉದ್ವಿಗ್ನ ಸ್ಥಿತಿ – ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ಹೈಅಲರ್ಟ್

    ಉಧಂಪುರ, ಸಾಂಬಾ, ಜಮ್ಮು, ಅಖ್ನೂರ್, ನಾಗ್ರೋಟಾ ಮತ್ತು ಪಠಾಣ್‌ಕೋಟ್ ಪ್ರದೇಶಗಳಲ್ಲಿ ಭಾರತೀಯ ಸೇನೆಯ ವಾಯು ರಕ್ಷಣಾ ಘಟಕಗಳು ನಡೆಸಿದ ದೊಡ್ಡ ಪ್ರಮಾಣದ ಪ್ರತಿ ಡ್ರೋನ್ ಕಾರ್ಯಾಚರಣೆಯಲ್ಲಿ 50 ಕ್ಕೂ ಹೆಚ್ಚು ಡ್ರೋನ್‌ಗಳನ್ನು ಯಶಸ್ವಿಯಾಗಿ ತಟಸ್ಥಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

  • ಹರ್ಯಾಣ | ಇಟ್ಟಿಗೆ ಗೂಡು ಕುಸಿದು 4 ಮಕ್ಕಳ ದುರ್ಮರಣ

    ಹರ್ಯಾಣ | ಇಟ್ಟಿಗೆ ಗೂಡು ಕುಸಿದು 4 ಮಕ್ಕಳ ದುರ್ಮರಣ

    ಚಂಡೀಗಢ: ಹರ್ಯಾಣದ (Haryana) ಹಿಸ್ಸಾರ್‌ನ ಬುಡಾನಾ ಗ್ರಾಮದಲ್ಲಿ ಮಲಗಿದ್ದ ವೇಳೆ ಇಟ್ಟಿಗೆ ಗೂಡು (Brick Kiln) ಕುಸಿದು ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಾಳೆ.

    ಮೃತರನ್ನು ನಿಶಾ (3 ತಿಂಗಳು), ಸೂರಜ್ (9), ನಂದಿನಿ (5) ಮತ್ತು ವಿವೇಕ್ (9) ಎಂದು ಗುರುತಿಸಲಾಗಿದೆ. ನಾರ್ನಾಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಈ ದುರ್ಘಟನೆ ನಡೆದಿದೆ.

    ಮಕ್ಕಳು ಮತ್ತು ಕೆಲವು ಕಾರ್ಮಿಕರು ಇಟ್ಟಿಗೆ ಭಟ್ಟಿಯ ಗೋಡೆಯ ಬಳಿ ಮಲಗಿದ್ದಾಗ, ಗೋಡೆ ಅವರ ಮೇಲೆ ಕುಸಿದಿದೆ. ಪರಿಣಾಮ ಸೂರಜ್, ನಂದಿನಿ ಮತ್ತು ವಿವೇಕ್ ಸ್ಥಳದಲ್ಲೇ ಮೃತಪಟ್ಟರೆ, ನಿಶಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ.

    ಗೌರಿ (5) ಎಂಬ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ. ಆಕೆ ಹಿಸ್ಸಾರ್ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಎಲ್ಲಾ ಐವರು ಮಕ್ಕಳು ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಬಧವ್ ಗ್ರಾಮದವರು. ಉತ್ತರ ಪ್ರದೇಶದ (Uttar Pradesh) ಅನೇಕ ಕೂಲಿ ಕಾರ್ಮಿಕರು ಬುಡಾನಾದ ಇಟ್ಟಿಗೆ ಗೂಡುಗಳಲ್ಲಿ ಕೆಲಸ ಮಾಡುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆಯ ನಂತರ ಎಸ್ಪಿ ಮೀನಾ ಅವರು ಹಿಸ್ಸಾರ್ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ಬಳಿಕ ಮಾಹಿತಿ ನೀಡಿ, ಸಂತ್ರಸ್ತರ ಕುಟುಂಬಗಳು ಈ ಬಗ್ಗೆ ಯಾವುದೇ ಲಿಖಿತ ದೂರು ನೀಡಿಲ್ಲ. ದೂರು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

  • ಚಿಕನ್ ನೀಡದ್ದಕ್ಕೆ ಹೋಟೆಲ್ ಸಪ್ಲೈಯರ್‌ನನ್ನು ಹತ್ಯೆಗೈದ ಯುವಕರು!

    ಚಿಕನ್ ನೀಡದ್ದಕ್ಕೆ ಹೋಟೆಲ್ ಸಪ್ಲೈಯರ್‌ನನ್ನು ಹತ್ಯೆಗೈದ ಯುವಕರು!

    ಚಂಡೀಗಢ: ಚಿಕನ್‌ ನೀಡಿಲ್ಲ ಎಂದು ಹೋಟೆಲ್‌ನ ಸಪ್ಲೈಯರ್‌ನನ್ನು ಯುವಕರ ಗುಂಪೊಂದು ಹತ್ಯೆಗೈದ ಘಟನೆ ಚಂಡೀಗಢದಲ್ಲಿ (
    Chandigarh) ನಡೆದಿದೆ.

    ಹತ್ಯೆಗೀಡಾದ ವ್ಯಕ್ತಿಯನ್ನು ಜಸ್ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಹೋಟೆಲ್‌ನ ಮತ್ತೋರ್ವ ಸಿಬ್ಬಂದಿಗೆ ಗಾಯಗೊಂಡಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಆಕಾಶ್ ಎಂದು ಗುರುತಿಸಲಾಗಿದೆ. ನಾಲ್ವರು ಯುವಕರು ರಾತ್ರಿ 11 ಗಂಟೆ ಸುಮಾರಿಗೆ ಹೋಟೆಲ್‌ಗೆ ಬಂದಿದ್ದರು. ಈ ವೇಳೆ ಚಿಕನ್ ಬೇಕು ಎಂದು ಕೇಳಿದ್ದು, ಹೋಟೆಲ್‌ ಮುಚ್ಚುವ ಸಮಯವಾಯ್ತು ಎಂದು ಅವರಿಗೆ ಹೋಟೆಲ್‌ ಸಿಬ್ಬಂದಿ ಹೇಳಿದ್ದಾರೆ. ಈ ವೇಳೆ ಗಲಾಟೆ ನಡೆಸಿ ಗುಂಪು ಅಲ್ಲಿಂದ ತೆರಳಿದೆ.

    ಸುಮಾರು 45 ನಿಮಿಷಗಳ ನಂತರ ಯುವಕರ ಗುಂಪು, ಕ್ರಿಕೆಟ್ ವಿಕೆಟ್ ಮತ್ತು ಹರಿತವಾದ ಆಯುಧಗಳನ್ನು ತಂದು ಹೋಟೆಲ್‌ನಲ್ಲಿದ್ದ ಜಸ್ಪ್ರೀತ್ ಮತ್ತು ಆಕಾಶ್ ಮೇಲೆ ದಾಳಿ ನಡೆಸಿದ್ದಾರೆ. ಇದರಿಂದ ಇಬ್ಬರೂ ತೀವ್ರ ಗಾಯಗೊಂಡಿದ್ದಾರೆ. ಬಳಿಕ ಆಕಾಶ್ ಹೋಟೆಲ್‌ ಮಾಲೀಕರ ಮಗನಿಗೆ ಕರೆ ಮಾಡಿದ್ದು, ಆತ ಬಂದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆಸ್ಪತ್ರೆಯಲ್ಲಿ ಜಸ್ಪ್ರೀತ್‌ ಸಾವಿಗೀಡಾಗಿದ್ದಾನೆ ಎಂದು ಪೊಲೀಸರು (Police) ತಿಳಿಸಿದ್ದಾರೆ.

    ಈ ಸಂಬಂಧ ಅಪ್ರಾಪ್ತ ಬಾಲಕ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಧಿತರನ್ನು ಸಾಗರ್, ಜೋಗಿಂದರ್, ಗುರ್ಮೀತ್, ವೀರು ಮತ್ತು ರಾಜಿ ಎಂದು ಗುರುತಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

  • ವಿಮಾನ ಪತನಗೊಂಡ 56 ವರ್ಷಗಳ ಬಳಿಕ 4 ಮೃತದೇಹಗಳು ಪತ್ತೆ

    ವಿಮಾನ ಪತನಗೊಂಡ 56 ವರ್ಷಗಳ ಬಳಿಕ 4 ಮೃತದೇಹಗಳು ಪತ್ತೆ

    ನವದೆಹಲಿ: 56 ವರ್ಷಗಳ ಹಿಂದೆ ಸಂಭವಿಸಿದ್ದ ವಿಮಾನ ಅಪಘಾತವೊಂದರಲ್ಲಿ (Plane Crash) ನಾಪತ್ತೆಯಾಗಿದ್ದ ಮೃತದೇಹಗಳಲ್ಲಿ ನಾಲ್ಕು ಮೃತ ದೇಹಗಳು ಪತ್ತೆಯಾಗಿದೆ.

    ಇದೀಗ ಹಿಮಭರಿತ ಭೂಪ್ರದೇಶದಲ್ಲಿ ಹುದುಗಿಹೋಗಿದ್ದ ವಿಮಾನದ ಅವಶೇಷಗಳು ದೊರೆತಿದ್ದು, ಪತ್ತೆಯಾದ ಮೃತ ದೇಹಗಳಲ್ಲಿ ಮೂವರ ಗುರುತನ್ನು ಪತ್ತೆ ಹಚ್ಚಲಾಗಿದ್ದು, ಸೇನೆಯ ವಿವಿಧ ವಲಯದಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಸೈನಿಕರು ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಪ್ರಜ್ವಲ್‌ ಪ್ರಕರಣಕ್ಕೆ ಭವಾನಿಯನ್ನು ಎಳೆ ತಂದಾಗ ಸರಿ ಅನ್ನಿಸಿತ್ತಾ: ಕಾಂಗ್ರೆಸ್‌ಗೆ ಟೀಕೆಗೆ ಅಶೋಕ್‌ ಪ್ರಶ್ನೆ

    ನಾಲ್ಕು ಶವಗಳ ಪೈಕಿ ಮೂರು ಮೃತದೇಹಗಳು ಮಲ್ಖಾನ್ ಸಿಂಗ್, ಸಿಪಾಯಿ ನಾರಾಯಣ್ ಸಿಂಗ್ ಮತ್ತು ಕುಶಲಕರ್ಮಿ ಥಾಮಸ್ ಚರಣ್ ಅವರದ್ದಾಗಿದೆ ಹಾಗೂ ಉಳಿದೊಂದು ಮೃತ ದೇಹದಿಂದ ವಶಪಡಿಸಿಕೊಂಡ ದಾಖಲೆಗಳು ವ್ಯಕ್ತಿಯನ್ನು ನಿರ್ಣಾಯಕವಾಗಿ ಗುರುತಿಸಿಲ್ಲ. ಆದರೆ, ಅವರ ಸಂಬಂಧಿಕರ ವಿವರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಕುರಿತು ಸೇನಾ ಅಧಿಕಾರಿಗಳು ಮಾತನಾಡಿ, ಭಾರತೀಯ ಸೇನೆಯ ಡೋಗ್ರಾ ಸ್ಕೌಟ್ಸ್ ಮತ್ತು ತಿರಂಗಾ ಮೌಂಟೇನ್ ರೆಸ್ಕ್ಯೂ ಸಿಬ್ಬಂದಿಯನ್ನು ಒಳಗೊಂಡ ಜಂಟಿ ತಂಡವು ಕಾರ್ಯಾಚರಣೆಯನ್ನು ನಡೆಸಿದೆ. ಇದರಲ್ಲಿ 4 ಶವಗಳನ್ನು ಪತ್ತೆ ಮಾಡಿದೆ. ಸಿಬ್ಬಂದಿಗಳಿಂದ ನಡೆಸಲಾದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯು ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂದು ತಿಳಿಸಿದ್ದಾರೆ.

    ಏನಿದರ ಹಿನ್ನೆಲೆ:
    1968ರಲ್ಲಿ 56 ವರ್ಷಗಳ ಹಿಂದೆ ಭಾರತೀಯ ವಾಯುಪಡೆಯ A-12 ಎಂಬ ವಿಮಾನವು ಹಿಮಾಚಲ ಪ್ರದೇಶದ ರೋಹ್ಟಾಂಗ್ ಪಾಸ್‌ನಲ್ಲಿ (Rohtang Pass) ಅಪಘಾತಕ್ಕೀಡಾಗಿತ್ತು. ಫೆಬ್ರವರಿ 7, 1968 ರಂದು 102 ಜನರನ್ನು ಹೊತ್ತಿದ್ದ ಅವಳಿ-ಎಂಜಿನ್ ಟರ್ಬೊಪ್ರಾಪ್ ಸಾರಿಗೆ ವಿಮಾನವು ಚಂಡೀಗಢದಿಂದ ಲೇಹ್‌ಗೆ ಹಾರುತ್ತಿದ್ದಾಗ ನಾಪತ್ತೆಯಾಗಿತ್ತು.

    ಅಪಘಾತಕ್ಕೀಡಾದ ವಿಮಾನದಲ್ಲಿ ಈ ಹಿಂದೆ 2003ರಲ್ಲಿ ಮೊದಲ ಬಾರಿಗೆ ಅಟಲ್ ಬಿಹಾರಿ ವಾಜಪೇಯಿ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್‌ನ (Atal Bihari Vajpayee Institute of Mountaineering) ಪರ್ವತಾರೋಹಿಗಳು ಅವಶೇಷಗಳನ್ನು ಪತ್ತೆಹಚ್ಚಲಾಗಿತ್ತು. ಅದಾದ ಬಳಿಕ 2005, 2006, 2013, ಮತ್ತು 2019ರಲ್ಲಿ ಡೋಗ್ರಾ ಸ್ಕೌಟ್ಸ್ (Dogra Scouts) ವಿವಿಧ ಕಾರ್ಯಾಚರಣೆಗಳನ್ನು ನಡೆಸಿತ್ತು.

    2019ರಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಐದು ಮೃತ ದೇಹಗಳನ್ನು ಹೊರ ತೆಗೆಯಲಾಗಿತ್ತು. ಇದೀಗ ಚಂದ್ರಭಾಗ ಮೌಂಟೇನ್ ಎಕ್ಸ್ಪೆಡಿಶನ್ (Chandra Bhaga Mountain Expedition) ಇನ್ನೂ ನಾಲ್ಕು ದೇಹಗಳನ್ನು ವಶಪಡಿಸಿಕೊಂಡಿದೆ. ಇದು ಭಾರತದ ದೀರ್ಘಾವಧಿಯ ಶೋಧ ಕಾರ್ಯಾಚರಣೆಯಲ್ಲಿ ಗಮನಾರ್ಹ ಯಶಸ್ಸನ್ನು ತಂದಿದೆ.ಇದನ್ನೂ ಓದಿ: ಮುಡಾ ಸೈಟ್ ವಾಪಸ್ ನೀಡಿರುವುದು ಒಳ್ಳೆಯ ನಿರ್ಧಾರ – ಪರಮೇಶ್ವರ್