Tag: ಚಂದನ್

  • ಅದ್ಧೂರಿಯಾಗಿ ಬೇಬಿ ಶವರ್‌ ಪಾರ್ಟಿ ಮಾಡಿದ ‘ಬಿಗ್‌ ಬಾಸ್‌’ ಖ್ಯಾತಿಯ ನೇಹಾ ಗೌಡ

    ಅದ್ಧೂರಿಯಾಗಿ ಬೇಬಿ ಶವರ್‌ ಪಾರ್ಟಿ ಮಾಡಿದ ‘ಬಿಗ್‌ ಬಾಸ್‌’ ಖ್ಯಾತಿಯ ನೇಹಾ ಗೌಡ

    ‘ಬಿಗ್ ಬಾಸ್’ ಖ್ಯಾತಿಯ ನೇಹಾ ಗೌಡ (Neha Gowda) ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದರ ನಡುವೆ ವೆಸ್ಟರ್ನ್ ಸ್ಟೈಲಿನಲ್ಲಿ ಬೇಬಿ ಶವರ್ (Baby Shower) ಫಂಕ್ಷನ್ ಜರುಗಿದೆ. ಇದರ ಸುಂದರ ವಿಡಿಯೋವೊಂದನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಕನ್ನಡಕ್ಕೆ ಬಂದ ‘ಕಲ್ಕಿ’ ಚಿತ್ರದ ಮ್ಯೂಸಿಕ್ ಡೈರೆಕ್ಟರ್

    ನಟಿ ನೇಹಾ ಹುಟ್ಟುಹಬ್ಬದ ಜೊತೆ ಬೇಬಿ ಶವರ್ ಫಂಕ್ಷನ್ ಗ್ರ್ಯಾಂಡ್‌ ಆಗಿ ನಡೆದಿದೆ. ಪತಿ ಚಂದನ್ ಜೊತೆ ಖುಷಿ ಖುಷಿಯಾಗಿ ಸೆಲೆಬ್ರೇಟ್ ಮಾಡಿಕೊಂಡಿದ್ದಾರೆ. ಲೈಟ್ ಬಣ್ಣದ ಡ್ರೆಸ್‌ನಲ್ಲಿ ನಟಿ ಮಿಂಚಿದ್ದಾರೆ. ಈ ವೇಳೆ, ಸಹೋದರಿ ಸೋನು ಗೌಡ, ಸ್ನೇಹಿತೆ ಅನುಪಮಾ ಗೌಡ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

     

    View this post on Instagram

     

    A post shared by Neha Ramakrishna (@neharamakrishna)

    ಅದಷ್ಟೇ ಅಲ್ಲ, ಇತ್ತೀಚೆಗೆ ಟ್ರೆಡಿನಲ್ ಆಗಿ ನೇಹಾ ಸೀಮಂತ ಶಾಸ್ತ್ರ ಕೂಡ ಜರುಗಿದೆ. ಸೀರೆಯುಟ್ಟು ಬೇಬಿ ಬಂಪ್ ತೋರಿಸುತ್ತಾ ಮುದ್ದಾಗಿ ನಟಿ ಕಾಣಿಸಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಿರಿಯ ನಟಿ ತಾರಾ, ಅನುಪಮಾ, ಚೈತ್ರಾ ವಾಸುದೇವನ್, ನಮ್ರತಾ ಗೌಡ, ಕವಿತಾ ಗೌಡ ಸೇರಿದಂತೆ ಅನೇಕರು ಭಾಗಿಯಾಗಿದ್ರು.

    ಇನ್ನೂ 2018ರಲ್ಲಿ ಬಾಲ್ಯದ ಸ್ನೇಹಿತ ಚಂದನ್ ಜೊತೆ ನೇಹಾ ಹಸೆಮಣೆ ಏರಿದರು. ಈಗ ಮೊದಲ ಮಗುವಿನ ಆಗಮನಕ್ಕಾಗಿ ಈ ಜೋಡಿ ಎದುರು ನೋಡ್ತಿದೆ.

  • ರಾಗಿಣಿ ನಟನೆಯ ‘ಬಿಂಗೊ’ ಸಿನಿಮಾದ ಶೂಟಿಂಗ್ ಮುಕ್ತಾಯ

    ರಾಗಿಣಿ ನಟನೆಯ ‘ಬಿಂಗೊ’ ಸಿನಿಮಾದ ಶೂಟಿಂಗ್ ಮುಕ್ತಾಯ

    ಹಿಂದೆ ಶಂಭೋ ಶಿವ ಶಂಕರ ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದ, ಆರ್.ಕೆ ಚಂದನ್ (Chandan) ಹಾಗೂ ರಾಗಿಣಿ ದ್ವಿವೇದಿ (Ragini Dwivedi)  ನಾಯಕ – ನಾಯಕಿಯಾಗಿ ನಟಿಸಿರುವ ‘ಬಿಂಗೊ’ (Bingo) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ.

    ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.  ಆರ್ ಕೆ ಚಂದನ್ ,  ರಾಗಿಣಿ ದ್ವಿವೇದಿ, ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್),  ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಸುಮಧುರವಾಗಿ ಮೂಡಿಬಂದಿದೆ. ಸದ್ಯದಲ್ಲೇ ಅದ್ದೂರಿ ಸಮಾರಂಭ ಆಯೋಜಿಸಿ ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

    ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಹಾಗೂ ವೆಂಕಿ udv ಸಂಕಲನ ಬಿಂಗೊ ಚಿತ್ರಕ್ಕಿದೆ.

  • ‘ಫ್ಲರ್ಟ್’ ಮಾಡಲು ರೆಡಿಯಾದ ನಟ ಚಂದನ್

    ‘ಫ್ಲರ್ಟ್’ ಮಾಡಲು ರೆಡಿಯಾದ ನಟ ಚಂದನ್

    ಕಿರುತೆರೆಯ ಯಶಸ್ವಿ ನಟ, ನಿರ್ಮಾಪಕ ಚಂದನ್ (Chandan) ಇದೀಗ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಕಿರುತೆರೆಯಲ್ಲಿ ಸಾಕಷ್ಟು ಧಾರಾವಾಹಿಗಳನ್ನು ಮಾಡಿರುವ ಮತ್ತು ಕೆಲ ಕನ್ನಡ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿರುವ ಚಂದನ್, ಇದೇ ಮೊದಲ ಬಾರಿಗೆ ನಿರ್ದೇಶನದ ಜೊತೆಗೆ ನಿರ್ಮಾಣ ವನ್ನೂ ಮಾಡಲಿದ್ದಾರೆ. ಜೊತೆಗೆ ಗೆಳೆಯರು ಇವರಿಗೆ ಸಾಥ್ ನೀಡಲಿದ್ದಾರೆ.

    ಚಂದನ್ ನಿರ್ದೇಶನದ ಮೊದಲ ಚಿತ್ರಕ್ಕೆ ‘ಫ್ಲರ್ಟ್’ (Flirt) ಎಂದು ಹೆಸರಿಡಲಾಗಿದ್ದು, ಈಗಾಗಲೇ ಪ್ರಿ ಪ್ರೊಡಕ್ಷನ್ ಕೆಲಸವನ್ನೂ ಅವರು ಮುಗಿಸಿದ್ದಾರೆ.  ಮೊನ್ನೆಯಷ್ಟೇ ಚಂದನ್ ಅವರ ಹುಟ್ಟು ಹಬ್ಬವಾಗಿದ್ದು, ಅಂದು ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ಸಿನಿಮಾದ ಫಸ್ಟ್ ಲುಕ್ ಕುತೂಹಲ ಮೂಡಿಸುತ್ತಿದೆ.  ಇದನ್ನೂ ಓದಿ:‘ರಣಹದ್ದು’ ಫಸ್ಟ್ ಲುಕ್ ರಿಲೀಸ್ ಮಾಡಿದ ಜಂಭದ ಹುಡುಗಿ

    ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ಮೂಡಿ ಬಂದ ಪ್ರೇಮ ಬರಹದಲ್ಲಿ ಚಂದನ್ ನಾಯಕನಾಗಿದ್ದರು. ಆನಂತರ ಅವರು ಯಾವುದೇ ಸಿನಿಮಾದಲ್ಲಿ ನಟಿಸಿರಲಿಲ್ಲ. ಇದೀಗ ಫ್ಲರ್ಟ್ ಸಿನಿಮಾದಲ್ಲಿ ನಟಿಸುವುದರ ಜೊತೆಗೆ ನಿರ್ಮಾಣ ಮತ್ತು ನಿರ್ದೇಶನವನ್ನೂ ಅವರು ಮಾಡಲಿದ್ದಾರೆ. ಸಿನಿಮಾದ ಬಗ್ಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿಯನ್ನು ಅವರು ನೀಡಲಿದ್ದಾರೆ.

     

    ಲಕ್ಷ್ಮಿ ಬಾರಮ್ಮ, ರಾಧಾ ಕಲ್ಯಾಣ ಸೇರಿದಂತೆ ಹಲವು ಯಶಸ್ವಿ ಧಾರಾವಾಹಿಗಳಿಗೆ ಚಂದನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕಿರುತೆರೆಯಲ್ಲಿ ಚಂದನ್ ಅವರಿಗೆ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಹಿರಿತೆರೆಯಲ್ಲೂ ಯಶಸ್ಸು ಕಾಣಲು ಚಂದನ್ ಹಲವಾರು ರೀತಿಯಲ್ಲಿ ಕಸರತ್ತು ಮಾಡುತ್ತಿದ್ದಾರೆ. ಫ್ಲರ್ಟ್ ಸಿನಿಮಾ ಅಂಥದ್ದೊಂದು ಯಶಸ್ಸು ತಂದುಕೊಡಲಿದೆಯಾ ಎಂದು ಕಾದು ನೋಡಬೇಕು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದನ್ ಶೆಟ್ಟಿ ಜೊತೆ ಹೆಜ್ಜೆ ಹಾಕಿದ ತುಪ್ಪದ ಬೆಡಗಿ ರಾಗಿಣಿ

    ಚಂದನ್ ಶೆಟ್ಟಿ ಜೊತೆ ಹೆಜ್ಜೆ ಹಾಕಿದ ತುಪ್ಪದ ಬೆಡಗಿ ರಾಗಿಣಿ

    ಷಾ ಗೋವಿಂದರಾಜು ನಿರ್ಮಾಣದ, ಸುಜಯ್ ಶಾಸ್ತ್ರಿ (Sujay Shastri) ನಿರ್ದೇಶನದಲ್ಲಿ ಚಂದನ್ ಶೆಟ್ಟಿ (Chandan) ನಾಯಕರಾಗಿ ನಟಿಸುತ್ತಿರುವ ‘ಎಲ್ರ ಕಾಲೆಳಿಯತ್ತೆ ಕಾಲ’ ಚಿತ್ರದ ಪ್ರಮೋಷನ್ ಸಾಂಗ್ ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು. ಈ ಹಾಡಿನಲ್ಲಿ ಚಂದನ್ ಶೆಟ್ಟಿ ಅವರ ಜೊತೆ ರಾಗಿಣಿ ದ್ವಿವೇದಿ (Ragini,) ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರೆ ಈ ಹಾಡನ್ನು ಬರೆದಿದ್ದು, ಮಂಗ್ಲಿ ಹಾಗೂ ಚಂದನ್ ಶೆಟ್ಟಿ ಹಾಡಿದ್ದಾರೆ. ಮುರಳಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಾಡಿಗೆ ಮಾತ್ರ ಚಂದನ್ ಶೆಟ್ಟಿ ಅವರೆ ಸಂಗೀತ ನೀಡಿದ್ದಾರೆ. ಪ್ರವೀಣ್ – ಪ್ರದೀಪ್ ಈ ಚಿತ್ರದ ಸಂಗೀತ ನಿರ್ದೇಶಕರು.

    ನಾನು ಕೆಂಪೇಗೌಡ ಚಿತ್ರದಿಂದಲೂ ರಾಗಿಣಿ ಅವರ ಅಭಿಮಾನಿ. ಈಗ ಅವರ ಜೊತೆ ಹಾಡೊಂದರಲ್ಲಿ ನಟಿಸಿರುವುದು ಸಂತೋಷವಾಗಿದೆ. ಹಾಡು ಹಾಗೂ ಚಿತ್ರ ಎಲ್ಲರ ಮನ ಗೆಲಲ್ಲಿದೆ.  ಇದು ನಾನು ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ . ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಚಂದನ್ ಶೆಟ್ಟಿ. ಇದನ್ನೂ ಓದಿ: ಕ್ರಿಕೆಟರ್ ಆಗುವ ಕನಸು ಕಂಡ ಬಡ ಹುಡುಗಿಗೆ ನಟ ಅರ್ಜುನ್ ಕಪೂರ್ ಸಾಥ್

    ಈ ಹಾಡು ಚೆನ್ನಾಗಿದೆ. ಚಂದನ್ ಶೆಟ್ಟಿ ಪ್ರತಿಭಾವಂತ. ಅವರು ಸಂಗೀತ ನೀಡಿ, ಹಾಡುವ ಹಾಡುಗಳು ನನಗೆ ಇಷ್ಟ‌. ಬಹಳ ದಿನಗಳಿಂದ ಅವರ ಜೊತೆ ನಟಿಸುವ ಕುರಿತು ಮಾತುಕತೆ ನಡೆಯುತ್ತಿತ್ತು. ಈಗ ಈ ಚಿತ್ರದ ಪ್ರಮೋಷನ್ ಸಾಂಗ್ ನಲ್ಲಿ ಒಟ್ಟಿಗೆ ಅಭಿನಯಿಸಿದ್ದೇವೆ ಎಂದು ತಿಳಿಸಿದ ನಟಿ ರಾಗಿಣಿ ದ್ವಿವೇದಿ ಚಿತ್ರಕ್ಕೆ ಶುಭ ಕೋರಿದರು.

    ಇದು 80/90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಈ ಕಥೆಯನ್ನು ಇಷ್ಟಪಟ್ಟು ನಿರ್ಮಾಣಕ್ಕೆ ಮುಂದಾದ ಗೋವಿಂದರಾಜು ಅವರಿಗೆ ಹಾಗೂ ಸಹಕಾರ ನೀಡಿದ ನನ್ನ ಇಡೀ ತಂಡಕ್ಕೆ ನನ್ನ ಧನ್ಯವಾದ. ಸದ್ಯದಲ್ಲೇ ನಿಮ್ಮ ಮುಂದೆ ಬರುತ್ತೇವೆ ಎಂದು ನಿರ್ದೇಶಕ ಸುಜಯ್ ಶಾಸ್ತ್ರಿ ತಿಳಿಸಿದರು.

    ನಿರ್ದೇಶಕರು ಹೇಳಿದ ಕಥೆ ಕೇಳಿ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಈ ಹಾಡು ಹಾಗೂ ಚಿತ್ರ ನೋಡಿ ಸಂತೋಷವಾಗಿದೆ. ನಾವು ಅಂದಕೊಂಡದಿಕ್ಕಿಂತ ಚಿತ್ರ ಚೆನ್ನಾಗಿ ಬಂದಿದೆ ಎಂದರು ನಿರ್ಮಾಪಕ ಗೋವಿಂದರಾಜು.

    ನಾಯಕಿ ಅರ್ಚನಾ ಕೊಟ್ಟಿಗೆ ಚಿತ್ರದಲ್ಲಿ ನಟಿಸಿರುವ ರಜನಿಕಾಂತ್, ರಾಕೇಶ್ ಪೂಜಾರಿ, ಕಥೆ ಬರೆದಿರುವ ರಾಜ್ ಗುರು, ಛಾಯಾಗ್ರಹಕ ವಿಶ್ವಜಿತ್ ರಾವ್ ಚಿತ್ರದ ಕುರಿತು ಮಾತನಾಡಿದರು. ಸಮಾರಂಭಕ್ಕೆ ಆಗಮಿಸಿದ್ದ ಚಿತ್ರರಂಗದ ಗಣ್ಯರು ಚಿತ್ರಕ್ಕೆ ಶುಭ ಕೋರಿದರು.

  • ರಾಗಿಣಿ ನಟನೆ ‘ಬಿಂಗೊ’ ಚಿತ್ರಕ್ಕೆ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯ

    ರಾಗಿಣಿ ನಟನೆ ‘ಬಿಂಗೊ’ ಚಿತ್ರಕ್ಕೆ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯ

    ಲಿತಾಸ್ವಾಮಿ ಮತ್ತು ಆರ್ ಪರಾಂಕುಶ ನಿರ್ಮಿಸುತ್ತಿರುವ, ಶಂಕರ್ ಕೋನಮಾನಹಳ್ಳಿ (Shankar Konamanahalli) ನಿರ್ದೇಶನದ ‘ಬಿಂಗೋ’ (Bingo) ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲಿ ಇಪ್ಪತ್ತಕ್ಕೂ ಅಧಿಕ ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಅರ್ ಕೆ ಚಂದನ್ (Chandan) (ನಾಯಕ) ರಕ್ಷಾ ನಿಂಬರ್ಗಿ (ನಾಯಕಿ), ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್),  ಮುರಳಿ ಪೂರ್ವಿಕ್, ಅಪೂರ್ವ, ಆಶಾ ಸುಜಯ್, ಶ್ರವಣ್ ಮುಂತಾದವರು ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

    ಈ ಚಿತ್ರದಲ್ಲಿ ರಾಗಿಣಿ ದ್ವಿವೇದಿ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎರಡು ಶೇಡ್ ಗಳಲ್ಲಿ ಅವರ ಪಾತ್ರವಿರುತ್ತದೆ. ಫೆಬ್ರವರಿಯಲ್ಲಿ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದ್ದು, ರಾಗಿಣಿ (Ragini) ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ. ಕಿರುತೆರೆ ಹಿನ್ನೆಲೆಯಿಂದ ಬಂದಿರುವ ಆರ್ ಕೆ ಚಂದನ್ ಈ ಚಿತ್ರದ ಮೂಲಕ ನಾಯಕನಾಗಿ ಹಿರಿತೆರೆ ಪ್ರವೇಶಿಸುತ್ತಿದ್ದಾರೆ. ರಕ್ಷ ನಿಂಬರ್ಗಿ ನಾಯಕಿ. ರಾಜೇಶ್ ನಟರಂಗ, ಮಜಾಟಾಕೀಸ್ ಪವನ್ ಅವರಂತಹ ಅನುಭವಿ ಕಲಾವಿದರು “ಬಿಂಗೋ” ಚಿತ್ರದಲ್ಲಿದ್ದಾರೆ ಎಂದು ನಿರ್ದೇಶಕ ಶಂಕರ್ ಕೋನಮಾನಹಳ್ಳಿ ತಿಳಿಸಿದ್ದಾರೆ. ಇದನ್ನೂ ಓದಿ: ರಾತ್ರಿ 2 ಗಂಟೆಗೆ ಅಸ್ಸಾಂ ಸಿಎಂಗೆ ಶಾರುಖ್‌ ಖಾನ್‌ ಫೋನ್‌ ಕಾಲ್‌

    ಹಿತನ್ ಹಾಸನ್ ಈ ಚಿತ್ರದ ಹಾಡುಗಳಿಗೆ ಸಂಗೀತ ನೀಡಿದ್ದಾರೆ ನಟರಾಜ್ ಮುದ್ದಾಲ್ ‘ಬಿಂಗೋ’ ಚಿತ್ರದ ಛಾಯಾಗ್ರಹಕರಾಗಿದ್ದಾರೆ. ಎರಡು ಹಂತದ ಶೂಟಿಂಗ್ ಮುಗಿಸಿರುವ ಸಿನಿಮಾ ತಂಡ ಸದ್ಯದಲ್ಲೇ ಮೂರನೇ ಹಂತರ ಚಿತ್ರೀಕರಣಕ್ಕೂ ರೆಡಿ ಮಾಡಿಕೊಳ್ಳುತ್ತಿದೆ. ಈ ಹಂತದ ಶೂಟಿಂಗ್ ನಲ್ಲಿ ಪ್ರಮುಖ ದೃಶ್ಯಗಳನ್ನು ಸೆರೆ ಹಿಡಿಯಲಾಗುತ್ತದೆ ಎಂದಿದ್ದಾರೆ ನಿರ್ದೇಶಕರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಬಿಂಗೊ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸ್ತಿದ್ದಾರೆ ರಾಗಿಣಿ ದ್ವಿವೇದಿ

    ‘ಬಿಂಗೊ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸ್ತಿದ್ದಾರೆ ರಾಗಿಣಿ ದ್ವಿವೇದಿ

    ರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ನಿರ್ಮಿಸುತ್ತಿರುವ, ಶಂಕರ್ ಕೋನಮಾನಹಳ್ಳಿ ನಿರ್ದೇಶನದಲ್ಲಿ ರಾಗಿಣಿ ದ್ವಿವೇದಿ ಹಾಗೂ ಆರ್ ಕೆ ಚಂದನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ “ಬಿಂಗೊ” ಚಿತ್ರದ ಮುಹೂರ್ತ ಸಮಾರಂಭ ನಾಗರಭಾವಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ನಟ ವಸಿಷ್ಠ ಸಿಂಹ ಆರಂಭಫಲಕ ತೋರಿದರು. ಸಚಿವ ವಿ.ಸೋಮಣ್ಣ ಅವರು ಕ್ಯಾಮೆರಾ ಚಾಲನೆ ಮಾಡಿದರು. ಸಚಿವರಾದ ಮುನಿರತ್ನ ಮುಂತಾದ ಗಣ್ಯರು ಚಿತ್ರತಂಡಕ್ಕೆ ಶುಭ ಕೋರಿದರು.

    “ಬಿಂಗೊ” ನನ್ನ ನಿರ್ದೇಶನದ ಎರಡನೇ ಚಿತ್ರ. ನನ್ನ ನಿರ್ದೇಶನದ ಮೊದಲ ಚಿತ್ರ “ಶಂಭೋ ಶಿವ ಶಂಕರ” ಸದ್ಯದಲ್ಲೇ ಬಿಡುಗಡೆಯಾಗಲಿದೆ. “ಬಿಂಗೊ” ಪದಕ್ಕೆ ಹಲವು ಅರ್ಥಗಳಿದೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಎಂದು ಹೇಳಬಹುದು. ಆರು ಮುಖ್ಯಪಾತ್ರಗಳಿರುತ್ತದೆ. ಅದರಲ್ಲಿ ಅತೀ ಮುಖ್ಯಪಾತ್ರದಲ್ಲಿ ರಾಗಿಣಿ ಅವರು ಅಭಿನಯಿಸುತ್ತಿದ್ದಾರೆ. ಅರ್ ಕೆ ಚಂದನ್ ನಾಯಕನಾಗಿ, ರಕ್ಷಾ ನಿಂಬರ್ಗಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್),  ಮುರಳಿ ಪೂರ್ವಿಕ್, ಅಪೂರ್ವ, ಆಶಾ ಸುಜಯ್, ಶ್ರವಣ್, ವಿದ್ಯಾ, ಕುಮಾರ್ ಮುಂತಾದ ಕಲಾವಿದರು “ಬಿಂಗೊ” ನಲ್ಲಿರುತ್ತಾರೆ. ಬೆಂಗಳೂರಿನಲ್ಲೇ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಶಂಕರ್ ಕೋನಮಾನಹಳ್ಳಿ ವಿವರಣೆ ನೀಡಿದರು.

    ಈ ಚಿತ್ರದ ಪಾತ್ರ ತುಂಬಾ ಚೆನ್ನಾಗಿದೆ. ಪಾತ್ರದ ಕುರಿತು ಹೆಚ್ಚು ಹೇಳುವ ಹಾಗಿಲ್ಲ. ಮುಂದೆ ನನ್ನ ಪಾತ್ರದ ಬಗ್ಗೆ ಮಾಹಿತಿ ನೀಡುತ್ತೀನಿ. ಒಟ್ಟಿನಲ್ಲಿ ನಾನು ಈ ಹಿಂದೆ ಮಾಡಿರುವ ಪಾತ್ರಗಳಿಗಿಂತ ಸ್ವಲ್ಪ ಭಿನ್ನ ಅಂತ ಹೇಳಬಹುದು. ಹೊಸ ನಿರ್ದೇಶಕರ ಜೊತೆ ಕೆಲಸ ಮಾಡಲು ಖುಷಿಯಾಗುತ್ತದೆ ಎಂದರು ನಟಿ ರಾಗಿಣಿ ದ್ವಿವೇದಿ. ಇದನ್ನೂ ಓದಿ:ಕಾಲಿವುಡ್‌ನತ್ತ ಕನ್ನಡದ ನಟ ಭರತ್ ಭೋಪಣ್ಣ

    ನಾನು ಧಾರಾವಾಹಿಯಲ್ಲಿ ಅಭಿನಯಿಸಬೇಕಾದರೆ, ಶಂಕರ್ ಅವರ ಪರಿಚಯವಾಯಿತು. ಈ ಚಿತ್ರದ ಕುರಿತು ಮಾತನಾಡಿದರು. ಇದೇ ಮೊದಲ ಬಾರಿಗೆ ಹಿರಿತೆರೆಯಲ್ಲಿ ನಾಯಕನಾಗಿ ನಟಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಾಯಕ ಆರ್ ಕೆ ಚಂದನ್. ಇದು‌ ನಮ್ಮ ನಿರ್ಮಾಣದ ಮೊದಲ ಚಿತ್ರ.  ಕಥೆ ಇಷ್ಟವಾಯಿತು‌. ನಿರ್ಮಾಣಕ್ಕೆ ಮುಂದಾದೆವು ಎನ್ನುತ್ತಾರೆ ನಿರ್ಮಾಪಕ ಪುನೀತ ಹಾಗೂ ಆರ್ ಪರಾಂಕುಶ್. ನಾಯಕಿ ರಕ್ಷಾ ನಿಂಬರ್ಗಿ, ಸಂಗೀತ ನಿರ್ದೇಶಕ ಹಿತನ್ ಹಾಸನ್, ಛಾಯಾಗ್ರಾಹಕ ನಟರಾಜ್ ಮುದ್ದಾಲ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

  • Exclusive-ಚಂದನ್ ಹಲ್ಲೆಗೆ ನಾನು ನ್ಯಾಯ ಕೇಳುತ್ತೇನೆ : ನಟಿ, ಚಂದನ್ ಪತ್ನಿ ಕವಿತಾ ಗೌಡ

    Exclusive-ಚಂದನ್ ಹಲ್ಲೆಗೆ ನಾನು ನ್ಯಾಯ ಕೇಳುತ್ತೇನೆ : ನಟಿ, ಚಂದನ್ ಪತ್ನಿ ಕವಿತಾ ಗೌಡ

    ತಿ, ನಟ ಚಂದನ್ ಮೇಲೆ ಆಗಿರುವ ಹಲ್ಲೆಗೆ ನಾನಂತೂ ನ್ಯಾಯ ಕೇಳುತ್ತೇನೆ. ಚಂದನ್ ಬರುತ್ತಾರೋ ಇಲ್ಲವೋ ಅದಕ್ಕಾಗಿ ನಾನು ಕಾಯುವುದಿಲ್ಲ. ನನ್ನ ಪತಿ ಮೇಲಿನ ಹಲ್ಲೆ ಎನ್ನುವುದಕ್ಕಿಂತ, ಒಬ್ಬ ಕಲಾವಿದನ ಮೇಲೆ ಆಗಿರುವ ಹಲ್ಲೆಗೆ ನಾನಂತೂ ನ್ಯಾಯ ಕೇಳುತ್ತೇನೆ ಎಂದು ನಟಿಯೂ ಆಗಿರುವ ಚಂದನ್ ಪತ್ನಿ ಕವಿತಾ ಗೌಡ ಹೇಳಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಅವರು, ಈ ವಿಷಯ ನಿನ್ನೆಯಷ್ಟೇ ನನಗೆ ತಿಳಿಯಿತು ಎಂದು ತಿಳಿಸಿದ್ದಾರೆ.

    ‘ನಾನು ಯಾರಿಗೂ ಹೊಡೆದಿಲ್ಲ. ಚಿಕ್ಕ ಹುಡುಗನ ಮೇಲೆ ಕೈ ಮಾಡುವವನೂ ನಾನಲ್ಲ. ಆ ಹುಡುಗನನ್ನು ಎಡಗೈಯಿಂದ ಜಸ್ಟ್ ತಟ್ಟಿದೆ. ಅದನ್ನೇ ಹೊಡೆದ್ರು ಅಂತ ಹೇಳ್ತಿದ್ದಾರೆ ಎಂದು ಚಂದನ್ ನನಗೆ ಹೇಳಿದರು. 10 ವರ್ಷದಿಂದ ಇರುವ ನಟನನ್ನ ಅವರು ಹಾಗೆ ಟ್ರೀಟ್ ಮಾಡಿದ್ದು ಸರಿ ಅಲ್ಲ. ಮೊದಲು ಅಲ್ಲಿ ಮೂರು ಜನ ಮಾತ್ರ ಇದ್ರಂತೆ. ಆಮೇಲೆ ಎಲ್ಲರನ್ನೂ ಕರೆಸಿ ಗಲಾಟೆ ಮಾಡಿದ್ದಾರೆ. ಇದು ಸರಿಯಾದ ಕ್ರಮವಲ್ಲ’ ಎನ್ನುತ್ತಾರೆ ಕವಿತಾ ಗೌಡ. ಇದನ್ನೂ ಓದಿ:ಡಿವೋರ್ಸ್‌ ನಂತರ ಮತ್ತೆ ಒಟ್ಟಿಗೆ ನಟಿಸಲಿದ್ದಾರೆ ನಾಗಚೈತನ್ಯ- ಸಮಂತಾ

    ನಡೆದಿರೋದು ನಡೆದೋಗಿದೆ. ಆದರೂ, ಯಾರೂ ಅಲ್ಲ ಸಂಯಮ ತಗೆದುಕೊಂಡಿಲ್ಲ. ಕೆಟ್ಟದ್ದಾಗಿಯೇ ಮಾತನಾಡುತ್ತಾ ಕೇಳೋ ಸ್ವಾರಿ ಕೇಳೋ ಅಂತ ಟ್ರೀಟ್ ಮಾಡಿದ್ದಾರೆ. ಆ ವಿಡಿಯೋ ನೋಡಿ ನನಗಂತೂ ಬೇಸರವಾಯಿತು. ಕೆಲವರು ಕನ್ನಡದವರೂ ಅಲ್ಲಿದ್ದರು. ಅವರು ಯಾರೂ ಸಹಾಯಕ್ಕೆ ಬಂದಿಲ್ಲ. ನಾನೂ ತೆಲುಗು ಸೀರಿಯಲ್ ನಲ್ಲಿ ಆಕ್ಟ್ ಮಾಡಿದ್ದೀನಿ. ಆದರೆ, ಇಂತಹ ಘಟನೆಯನ್ನು ಯಾವತ್ತೂ ಕಂಡಿಲ್ಲ ಎನ್ನುವುದು ಕವಿತಾ ಗೌಡ ಮಾತು.

    Live Tv
    [brid partner=56869869 player=32851 video=960834 autoplay=true]

  • Exclusive: ನಟ ಚಂದನ್ ಕಪಾಳಮೋಕ್ಷ ಪ್ರಕರಣ ನಿನ್ನೆಯಷ್ಟೇ ನಡೆದದ್ದು, ಹಳೆಯದ್ದಲ್ಲ

    Exclusive: ನಟ ಚಂದನ್ ಕಪಾಳಮೋಕ್ಷ ಪ್ರಕರಣ ನಿನ್ನೆಯಷ್ಟೇ ನಡೆದದ್ದು, ಹಳೆಯದ್ದಲ್ಲ

    ತೆಲುಗಿನ ‘ಸಾವಿತ್ರಮ್ಮಗಾರು ಅಬ್ಬಾಯಿ’ ಧಾರಾವಾಹಿಯ ಶೂಟಿಂಗ್ ವೇಳೆ ಕನ್ನಡದ ಹೆಸರಾಂತ ಕಿರುತೆರೆ ನಟ ಚಂದನ್ ಮೇಲಿನ ಹಲ್ಲೆಗೆ ಹೊಸ ತಿರುವು ಸಿಕ್ಕಿದ್ದು, ಇದೊಂದು ಪೂರ್ವ ನಿಯೋಜಿತ ಕೃತ್ಯ ಎನ್ನಲಾಗುತ್ತಿದೆ. ಈ ಕುರಿತು ಪಬ್ಲಿಕ್ ಟಿವಿ ಜೊತೆ ವಿಶೇಷವಾಗಿ ಮಾತನಾಡಿರುವ ಅವರು, ಇದು ತಿಂಗಳು ಹಿಂದೆ ನಡೆದ ಘಟನೆಯಲ್ಲ ನಿನ್ನೆಯಷ್ಟೇ ನಡೆದದ್ದು ಎಂದು ತಿಳಿಸಿದ್ದಾರೆ.

    ‘ನಿನ್ನೆ ನನ್ನ ಕಾಲ್ ಶೀಟ್ ಇರಲಿಲ್ಲ. ಆದರೂ, ಶೂಟಿಂಗೆಗೆ ಹೋಗಿದ್ದೆ. ಅದು ನನ್ನ ವೃತ್ತಿ ಬದ್ಧತೆ ಆಗಿತ್ತು. ನನ್ನ ತಾಯಿಗೆ ಹುಷಾರಿಲ್ಲ ಎಂದರೂ, ನಾನು ಚಿತ್ರೀಕರಣದಲ್ಲಿ ಭಾಗಿ ಆಗುವ ಮೂಲಕ ಒಬ್ಬ ನಟನಾಗಿ ಮಾಡಬೇಕಾದ ಕರ್ತವ್ಯ ಮಾಡಿದೆ. ಆದರೆ, ಅವರು ಅದನ್ನು ಉಳಿಸಿಕೊಳ್ಳಲಿಲ್ಲ. ನನ್ನ ಮೇಲಿನ ಘಟನೆಯು ಪ್ರೀಪ್ಲ್ಯಾನ್ಡ್ ಅನ್ಸುತ್ತೆ. ಘಟನೆ ಏನೇ ನಡೆದಿದ್ದರೂ, ಕುಳಿತು ಮಾತನಾಡಬಹುದಿತ್ತು. ಹಾಗೆ ಮಾಡಲಿಲ್ಲ. ಎಲ್ಲರೂ ಒಟ್ಟಾಗಿ ಸೇರಿ ನನ್ನ ಮೇಲೆ ದುರ್ವರ್ತನೆ ತೋರಿದ್ದಾರೆ. ಹೊಡೆದಿದ್ದು ಸರಿ ಇಲ್ಲ ಅಂತ ಅಲ್ಲಿ ಯಾರೊಬ್ಬ ತಂತ್ರಜ್ಞರೂ ಹೇಳಿಲ್ಲ. ಎಲ್ಲರೂ ಸುಮ್ಮನೆ ನೋಡುತ್ತಿದ್ದರು’ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ ಚಂದನ್. ಇದನ್ನೂ ಓದಿ:ಡಿವೋರ್ಸ್‌ ನಂತರ ಮತ್ತೆ ಒಟ್ಟಿಗೆ ನಟಿಸಲಿದ್ದಾರೆ ನಾಗಚೈತನ್ಯ- ಸಮಂತಾ

    ‘ನಿನ್ನೆ ಶೂಟಿಂಗ್ ಸಮಯದಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಬಂದು ಎದ್ದೇಳಿಸಿ ಏನೇನೋ ಮಾತನಾಡಿದ್ರು. ಹೋಗೋ ಬರ್ತೀನಿ ಅಂತ ತಳ್ಳಿದೆ ಅಷ್ಟೇ. ಆಮೇಲೆ ಆತ ಹೋಗಿ ಎಲ್ಲರನ್ನೂ ಸೇರಿಸಿ ಈ ರೀತಿ ವರ್ತಿಸಿದ್ದಾನೆ. ಧಾರಾವಾಹಿಯಲ್ಲಿ ನಟಿಸಲ್ಲ ಅಂತ ಹೇಳಿದಾಗಲೂ ಅವರೇ ನನ್ನನ್ನು ಕರೆದು ಆಕ್ಟ್ ಮಾಡಲು ಕೇಳಿಕೊಂಡಿದ್ದರು. ಹಾಗಾಗಿ ಹೋಗಿದ್ದೆ, ನಾನಾಗಿಯೇ ಅವಕಾಶ ಹುಡುಕಿಕೊಂಡು ಹೋಗಿಲ್ಲ. ಈ ಘಟನೆ ನಡೆದು ಬೆಂಗಳೂರಿಗೆ ವಾಪಸ್ ಬರಬೇಕು ಎಂದಾಗ ಮತ್ತೆ ಕಷ್ಟ ಕೊಟ್ಟರು. ಕ್ಯಾಬ್ ಬುಕ್ ಮಾಡಿಕೊಂಡು ಹೋಗೋಕೂ ಬಿಡಲಿಲ್ಲ. ರೂಮ್ ಕೊಡ್ಲಿಲ್ಲ’ ಎಂದು ಘಟನೆಯನ್ನು ವಿವರಿಸಿದರು ಚಂದನ್.

    Live Tv
    [brid partner=56869869 player=32851 video=960834 autoplay=true]

  • ನಟ ಚಂದನ್ ಮೇಲೆ ಹಲ್ಲೆ ಪ್ರಕರಣ: ನಟ ಕೊಡುವ ಸ್ಪಷ್ಟನೆ ಏನು?

    ನಟ ಚಂದನ್ ಮೇಲೆ ಹಲ್ಲೆ ಪ್ರಕರಣ: ನಟ ಕೊಡುವ ಸ್ಪಷ್ಟನೆ ಏನು?

    ತೆಲುಗಿನ ಸಾವಿತ್ರಮ್ಮಗಾರು ಅಬ್ಬಾಯಿ ಧಾರಾವಾಹಿ ಶೂಟಿಂಗ್ ವೇಳೆ ನಡೆದಿದೆ ಎನ್ನಲಾದ ಗಲಾಟೆಯ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ. ಒಂದು ತಿಂಗಳ ಹಿಂದೆ ನಟ ಚಂದನ್ ಮೇಲೆ ಹಲ್ಲೆ ಮಾಡುವ ಈ ವಿಡಿಯೋ ಬಗ್ಗೆ ನಾನಾ ರೀತಿಯ ಮಾತುಗಳು ಕೇಳಿ ಬಂದಿದ್ದವು. ಸ್ವತಃ ಚಂದನ್ ಅವರೇ ಧಾರಾವಾಹಿಯ ಕ್ಯಾಮೆರಾಮನ್ ಮತ್ತು  ಕ್ಯಾಮೆರಾಮನ್ ಸಹಾಯಕನಿಗೆ ಹೊಡೆದರು, ಆನಂತರ ಸೆಟ್ ನಲ್ಲಿ ಗಲಾಟೆ ನಡೆಯಿತು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಂದನ್ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

    ಗಲಾಟೆ ಆಗಿದ್ದು ನಿಜ ಎಂದು ಒಪ್ಪಿಕೊಂಡಿರುವ ಅವರು ಆದರೆ, ಅಲ್ಲಿ ಹೊಡೆದಾಟ ನಡೆದಿಲ್ಲ. ಯಾರೂ ಯಾರ ಮೇಲೂ ಹಲ್ಲೆ ಮಾಡಿಲ್ಲ ಎಂದಿದ್ದಾರೆ. ‘ಈ ಘಟನೆ ನಡೆದಾಗ ನನ್ನ ತಾಯಿಯು ಅನಾರೋಗ್ಯದಲ್ಲಿದ್ದರು. ನಾನು ಟೆನ್ಷನ್ ನಲ್ಲಿದ್ದೆ. ಈ ಸಮಯದಲ್ಲಿ ಕ್ಯಾಮೆರಾಮನ್ ಸಹಾಯಕ ನನ್ನ ಸಹಾಯಕನಿಗೆ ಏರು ಧ್ವನಿಯಲ್ಲಿ ಮಾತನಾಡಿದ್ದ. ನಾನು ಆ ಹುಡುಗನಿಗೆ ಹಾಗೆ ಮಾತನಾಡುವುದು ತಪ್ಪು ಎಂದು ತಳ್ಳಿದ್ದೆ. ಇದರ ಹೊರತಾಗಿ ಅಲ್ಲಿ ಏನೂ ನಡೆದಿಲ್ಲ ಎಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಇದನ್ನೂ ಓದಿ:ಮಗಳಿಗೆ ಮುದ್ದಾದ ಹೆಸರಿಟ್ಟ ಪ್ರಣಿತಾ ಸುಭಾಷ್

    ಆದರೆ, ವಿಡಿಯೋದಲ್ಲಿ ಇರುವುದು ಬೇರೆಯಾಗಿದೆ. ಶೂಟಿಂಗ್ ಸ್ಥಗಿತಗೊಳಿಸಿ ಚಂದನ್ ಅವರನ್ನು ಸುತ್ತುವರೆದಿದ್ದಾರೆ. ವಾತಾವರಣ ಬಿಸಿಯಾಗಿದೆ. ಚಂದನ್ ಮತ್ತು ಅಲ್ಲಿ ನೆರೆದಿದ್ದವರ ಮಧ್ಯ ಮಾತಿನ ಚಕಮಕಿ ಕೂಡ ನಡೆದಿದೆ. ಕ್ಷಮೆ ಕೇಳಲು ಕೆಲವರು ಚಂದನ್ ಅವರನ್ನು ಒತ್ತಾಯಿಸುತ್ತಾರೆ. ಈ ಮಧ್ಯೆ ಅಲ್ಲಿ ನಿಂತದ್ದ ಒಬ್ಬನು ಚಂದನ್ ಅವರ ಮುಖಕ್ಕೆ ಹೊಡೆಯುತ್ತಾನೆ. ಇಷ್ಟೆಲ್ಲ ವಿಡಿಯೋದಲ್ಲಿ ಸೆರೆಯಾಗಿದೆ. ಆ ವಿಡಿಯೋ ಇದೀಗ ವೈರಲ್ ಆಗಿದೆ.

    ಅಂದಹಾಗೆ ಚಂದನ್ ಅವರು ತೆಲುಗಿನ ‘ಸಾವಿತ್ರಮ್ಮಗಾರು ಅಬ್ಬಾಯಿ’ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ತೆಲುಗಿನಲ್ಲಿ ಮಾತ್ರವಲ್ಲ, ಕನ್ನಡದಲ್ಲೂ ಅವರು ಈ ಹಿಂದೆ ಲಕ್ಷ್ಮೀ ಬಾರಮ್ಮ, ‘ರಾಧಾ ಕಲ್ಯಾಣ’,  ‘ಸರ್ವ ಮಂಗಳ ಮಾಂಗಲ್ಯೇ’  ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ.  ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ ಲವ್ ಯು ಅಲಿಯಾ, ಅರ್ಜುನ್ ಸರ್ಜಾ ನಿರ್ದೇಶನದ “ಪ್ರೇಮ ಬರಹ” ಸೇರಿ ಕನ್ನಡದ ಕೆಲವು ಸಿನಿಮಾಗಳಲ್ಲೂ ನಟಿಸಿದ್ದಾರೆ.   ಸದ್ಯ ಸ್ಟಾರ್ ಸುವರ್ಣದಲ್ಲಿ ಪ್ರಸಾರ ಆಗುತ್ತಿರುವ’ ಮರಳಿ ಮನಸಾಗಿದೆ ‘ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತೆಲುಗು ಧಾರಾವಾಹಿ ಶೂಟಿಂಗ್ ಸೆಟ್‌ನಲ್ಲಿ ಕನ್ನಡದ ನಟ ಚಂದನ್‍ಗೆ ಕಪಾಳ ಮೋಕ್ಷ..!

    ತೆಲುಗು ಧಾರಾವಾಹಿ ಶೂಟಿಂಗ್ ಸೆಟ್‌ನಲ್ಲಿ ಕನ್ನಡದ ನಟ ಚಂದನ್‍ಗೆ ಕಪಾಳ ಮೋಕ್ಷ..!

    ನ್ನಡ ಕಿರುತೆರೆಯ ಸ್ಟಾರ್ ನಟ ಚಂದನ್ ಕುಮಾರ್‌ಗೆ ತೆಲುಗು ತಂತ್ರಜ್ಞರು ಕಪಾಳಮೋಕ್ಷ ಮಾಡಿರುವ ವೀಡಿಯೋ ಸೊಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಕನ್ನಡ ಮಾತ್ರವಲ್ಲದೇ ತೆಲುಗು ಧಾರಾವಾಹಿಗಳಲ್ಲಿ ಅಭಿನಯಿಸುವ ಮೂಲಕ ಚಂದನ್ ಕುಮಾರ್ ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಹೈದರಾಬಾದ್‍ನಲ್ಲಿ ಸಾವಿತ್ರಮ್ಮಗಾರು ಅಬ್ಬಾಯಿ ಧಾರಾವಾಹಿಯ ಶೂಟಿಂಗ್ ನಡೆಯುತ್ತಿತ್ತು. ಈ ಧಾರಾವಾಹಿಯಲ್ಲಿ ಮುಖ್ಯಪಾತ್ರದಲ್ಲಿ ಚಂದನ್ ಕುಮಾರ್ ಅಭಿನಯಿಸುತ್ತಿದ್ದಾರೆ. ಈ ಧಾರವಾಹಿ ಶೂಟಿಂಗ್ ಸೆಟ್‍ನಲ್ಲಿ ಅಲ್ಲಿನ ತಂತ್ರಜ್ಞರು ನಟ ಚಂದನ್ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ವಸತಿ ಶಾಲೆಯಲ್ಲಿ ‘ವಿಕ್ರಾಂತ್ ರೋಣ ‘ ಪೈರಸಿ ಸಿನಿಮಾ ವೀಕ್ಷಣೆ : ಕ್ರಮಕ್ಕೆ ಒತ್ತಾಯ

    ಶೂಟಿಂಗ್ ವೇಳೆ ಕ್ಯಾಮೆರಾಮೆನ್ ಹಾಗೂ ತಂತ್ರಜ್ಞರ ಜೊತೆ ಚಂದನ್ ಕುಮಾರ್ ಕಿರಿಕ್ ಮಾಡಿಕೊಂಡಿದ್ದು, ಕ್ಯಾಮೆರಾ ಅಸಿಸ್ಟೆಂಟ್‍ಗೆ ಮೊದಲು ಚಂದನ್ ಅವರೇ ಹಲ್ಲೆ ಮಾಡಿದ್ದಾರೆ ಎಂಬ ಆರೋಪಿಸಲಾಗಿದ್ದು, ಬಳಿಕ ತೆಲುಗು ತಂತ್ರಜ್ಞರು ಒಟ್ಟಾಗಿ ಚಂದನ್‍ಗೆ ನಿಂದಿಸಿದ್ದಾರೆ. ಸೀರಿಯಲ್ ತಂತ್ರಜ್ಞರ ಜೊತೆ ಮಾತಿಗೆ ಮಾತು ಬೆಳೆದು ಕನ್ನಡ ನಟ ಚಂದನ್‍ಗೆ ಅವರು ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ಒಂದು ತಿಂಗಳ ಹಿಂದೆ ಹಲ್ಲೆ ನಡೆದಿದ್ದು, ಇದೀಗ ಈ ವೀಡಿಯೋ ವೈರಲ್ ಆಗಿದೆ.

    ಚಂದನ್ ಹಿಂದೆ ಲಕ್ಷ್ಮೀ ಬಾರಮ್ಮ, ‘ರಾಧಾ ಕಲ್ಯಾಣ’, ‘ಸರ್ವ ಮಂಗಳ ಮಾಂಗಲ್ಯೇ’ ಧಾರವಾಹಿಗಳಲ್ಲಿ ನಟಿಸಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ ಲವ್ ಯು ಅಲಿಯಾ, ಅರ್ಜುನ್ ಸರ್ಜಾ ನಿರ್ದೇಶನದ “ಪ್ರೇಮ ಬರಹ” ಸೇರಿ ಕನ್ನಡದ ಕೆಲವು ಸಿನಿಮಾಗಳಲ್ಲೂ ಚಂದನ್ ಬಣ್ಣಹಚ್ಚಿದ್ದಾರೆ. ಸದ್ಯ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತಿರುವ’ ಮರಳಿ ಮನಸಾಗಿದೆ, ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಇದನ್ನೂ ಓದಿ: ನಾಡದೇವಿ ಚಾಮುಂಡೇಶ್ವರಿ ಹಬ್ಬಕ್ಕೆ ದಿನಗಣನೆ – ಮೈಸೂರು ದಸರಾಕ್ಕೆ ಬಹಿಷ್ಕಾರ ಹಾಕಿದ ಮಾವುತ ಕಾವಾಡಿಗಳು

    ಬಿಗ್ ಬಾಸ್‍ನಲ್ಲೂ ಕಾಣಿಸಿಕೊಂಡಿದ್ದ ಚಂದು, ನಟಿ ಕವಿತಾ ಗೌಡರನ್ನು ವಿವಾಹವಾಗಿದ್ದಾರೆ. ಚಂದನ್ ಕುಮಾರ್ ಒಡೆತನದಲ್ಲಿ ಬಿರಿಯಾನಿ ಹೋಟೆಲ್ ಕೂಡ ಇದ್ದು, ಇದರ ಜೊತೆಗೆ ಪ್ರೋಟೀನ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]