Tag: ಚಂದನ್ ಶೆಟ್ಟಿ

  • ಎರಡನೇ ಮದುವೆ ಬಗ್ಗೆ ಮೌನ ಮುರಿದ ನಿವೇದಿತಾ ಗೌಡ

    ಎರಡನೇ ಮದುವೆ ಬಗ್ಗೆ ಮೌನ ಮುರಿದ ನಿವೇದಿತಾ ಗೌಡ

    ಸೋಶಿಯಲ್ ಮೀಡಿಯಾ ಸೆನ್ಸೇಷನ್, ನಟಿ ನಿವೇದಿತಾ ಗೌಡ (Niveditha Gowda) ಸದ್ಯ ಏಕಾಂಗಿ ಬದುಕಿನ ಯಾನದಲ್ಲಿದ್ದಾರೆ. ರ‍್ಯಾಪರ್ ಚಂದನ್ ಶೆಟ್ಟಿ (Chandan Shetty) ಜೊತೆಗಿನ ಪ್ರೇಮವಿವಾಹ ಮುರಿದುಬಿದ್ದು ವರ್ಷ ಕಳೆದಿದೆ. ಸಿನಿಮಾಗಳಲ್ಲೂ ಹೆಚ್ಚು ಅವಕಾಶಗಳಿಲ್ಲ. ರೀಲ್ಸ್ ಹಾಗೂ ವಿದೇಶ ಪ್ರವಾಸದಲ್ಲಿ ಬ್ಯುಸಿ ಇರುವ ನಿವೇದಿತಾ ಗೌಡ ಎರಡನೇ ಮದುವೆ (Second Marrigae) ಕುರಿತು ಮನಬಿಚ್ಚಿದ್ದಾರೆ.

    ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ದಂಪತಿ 2014ರ ಜೂನ್ ತಿಂಗಳಲ್ಲಿ ಪರಸ್ಪರ ಒಪ್ಪಿಗೆ ಸೂಚಿಸಿ ವಿಚ್ಛೇದನ ಪಡೆದುಕೊಂಡಿದ್ದರು. ಬಳಿಕ ಸಿನಿಮಾ ಕೆರಿಯರ್ ಕಡೆ ಇಬ್ಬರ ಗಮನ ಇರುತ್ತದೆ ಎಂದು ಆ ಸಂದರ್ಭದಲ್ಲಿ ಹೇಳಿಕೊಂಡಿದ್ದರು. ಆದರೆ ನಿವೇದಿತಾ ಸಿನಿಮಾಗಳಲ್ಲೂ ಹೆಚ್ಚಾಗಿ ಕಾಣಿಸಿಕೊಳ್ತಿಲ್ಲ. ಹೀಗಾಗಿ ಇನ್ನೊಂದು ಮದುವೆಯಾಗಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ಈ ಹಿನ್ನೆಲೆ ಕೇಳಲಾದ ಪ್ರಶ್ನೆಗೆ ನಿವೇದಿತಾ ಗೌಡ ಇದೀಗ ಮೌನ ಮುರಿದಿದ್ದಾರೆ. ಇದನ್ನೂ ಓದಿ: ಖ್ಯಾತ ಗಾಯಕಿ ಜೊತೆ ಗಾಯಕ ರಘು ದೀಕ್ಷಿತ್ ಎರಡನೇ ವಿವಾಹಕ್ಕೆ ರೆಡಿ

    ಇನ್ನೊಂದು ಮದುವೆ ಕುರಿತು ಪಬ್ಲಿಕ್ ಟಿವಿ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿರುವ ನಿವೇದಿತಾ, ಭವಿಷ್ಯದಲ್ಲಿ ಒಳ್ಳೆ ಹುಡುಗ ಸಿಕ್ಕರೆ, ಅರ್ಥಮಾಡಿಕೊಳ್ಳುವ ಹುಡುಗ ಸಿಕ್ಕರೆ ಕುಟುಂಬ ಮುಂದುವರೆಸಲು ಇಷ್ಟ ಪಡ್ತೀನಿ ಎಂದಿದ್ದಾರೆ. ಸದ್ಯಕ್ಕಂತೂ ಮದುವೆ ಟಾಪಿಕ್ ಬಂದರೆ ಭಯ. ನನ್ನ ಚೆನ್ನಾಗಿ ನೋಡಿಕೊಳ್ತೀನಿ ಎಂದು ಹೇಳುವ ಹುಡುಗ ಬಂದ್ರೆ ಮದುವೆಯಾಗುತ್ತೇನೆ ಎಂದಿದ್ದಾರೆ. ಇದನ್ನೂ ಓದಿ:  ಎಷ್ಟೇ ಕೆಟ್ಟ ಕಾಮೆಂಟ್ಸ್ ಬಂದ್ರೂ ಡೋಂಟ್ ಕೇರ್ ಎಂದ ನಿವೇದಿತಾ ಗೌಡ

    ಸದ್ಯಕ್ಕೆ ಮದುವೆ ವಿಷಯ ಬಂದರೆ ಭಯ. ಭವಿಷ್ಯದಲ್ಲಿ ಯಾರಾದ್ರೂ ತುಂಬಾ ಇಷ್ಟ ಪಟ್ಟು, ಚೆನ್ನಾಗಿ ನೋಡಿಕೊಳ್ಳುತ್ತೇನೆ ಅಂದರೆ ನಾನು ಕುಟುಂಬ ಮುಂದುವರೆಸಲು ಇಷ್ಟ ಪಡುತ್ತೇನೆ ಎಂದು ಹೇಳಿದರು.

  • ಚಂದನ್ ಶೆಟ್ಟಿ ಜೊತೆ ಹಸೆಮಣೆ ಏರಿದ ‘ಸೀತಾ ವಲ್ಲಭ’ ನಟಿ ಸುಪ್ರೀತಾ

    ಚಂದನ್ ಶೆಟ್ಟಿ ಜೊತೆ ಹಸೆಮಣೆ ಏರಿದ ‘ಸೀತಾ ವಲ್ಲಭ’ ನಟಿ ಸುಪ್ರೀತಾ

    ‘ಸೀತಾ ವಲ್ಲಭ’ ಸೀರಿಯಲ್ ನಟಿ ಸುಪ್ರೀತಾ ಸತ್ಯನಾರಾಯಣ್ (Supritha Sathyanarayan) ಇಂದು (ಮೇ 9) ಬಹುಕಾಲದ ಗೆಳೆಯ ಚಂದನ್ ಶೆಟ್ಟಿ ಜೊತೆ ಹಸೆಮಣೆ ಏರಿದ್ದಾರೆ. ಇದನ್ನೂ ಓದಿ:‘ಆಪರೇಷನ್ ಸಿಂಧೂರ’ ಟೈಟಲ್‌ಗೆ ಬೇಡಿಕೆ- ರಿಜಿಸ್ಟರ್ ಮಾಡಲು ಮುಗಿಬಿದ್ದ ನಿರ್ಮಾಪಕರು

    ಇಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಚಂದನ್ ಶೆಟ್ಟಿ ಜೊತೆ ಸುಪ್ರೀತಾ ಮದುವೆಯಾಗಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಚಂದನ್ ಅವರನ್ನು ನಟಿ ಪ್ರೀತಿಸುತ್ತಿದ್ದರು. ಗುರುಹಿರಿಯರ ಒಪ್ಪಿಗೆ ಪಡೆದು ಚಂದನ್ ಅವರೊಂದಿಗೆ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದಾರೆ ಸುಪ್ರೀತಾ. ಇವರ ಮದುವೆಗೆ ನೇಹಾ ಗೌಡ, ರಶ್ಮಿಕಾ ಪ್ರಭಾಕರ್, ಸುಜಾತಾ ಅಕ್ಷಯ್ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.

    ಇತ್ತೀಚೆಗಷ್ಟೇ ಚಂದನ್ ಜೊತೆ ಎಂಗೇಜ್‌ಮೆಂಟ್ ಮಾಡಿಕೊಳ್ಳುವ ಮೂಲಕ ಫ್ಯಾನ್ಸ್‌ಗೆ ಶುಭ ಸುದ್ದಿ ನೀಡಿದ್ದರು. ಮಾರ್ಚ್ 12ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದನ್ನೂ ಓದಿ:ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ

    ಡಿಜಿಟಲ್ ಕ್ರಿಯೇಟರ್, ಸಾಫ್ಟ್‌ವೇರ್ ಉದ್ಯೋಗಿ ಚಂದನ್ ಶೆಟ್ಟಿ ಅವರನ್ನು ನಟಿ ಮದುವೆಯಾಗಿದ್ದಾರೆ. ಕೊಡಗು ಮೂಲದ ಚಂದನ್ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

  • ಶಾರ್ಟ್‌ ಡ್ರೆಸ್‌ ಧರಿಸಿ ನಿವೇದಿತಾ ಹೊಸ ರೀಲ್ಸ್-‌ ಕಾಲೆಳೆದ ನೆಟ್ಟಿಗರು

    ಶಾರ್ಟ್‌ ಡ್ರೆಸ್‌ ಧರಿಸಿ ನಿವೇದಿತಾ ಹೊಸ ರೀಲ್ಸ್-‌ ಕಾಲೆಳೆದ ನೆಟ್ಟಿಗರು

    ‘ಬಿಗ್ ಬಾಸ್’ ಖ್ಯಾತಿಯ ನಿವೇದಿತಾ ಗೌಡ (Niveditha Gowda) ಅವರು ಡಿವೋರ್ಸ್ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮತ್ತಷ್ಟು ಬೋಲ್ಡ್ ಮತ್ತು ಆ್ಯಕ್ಟೀವ್ ಆಗಿದ್ದಾರೆ. ಇದೀಗ ಶಾರ್ಟ್ ಡ್ರೆಸ್ ಧರಿಸಿ ಸಿನಿಮಾ ಹಾಡೋದಕ್ಕೆ ಸಖತ್ ಆಗಿ ಸೊಂಟ ಬಳುಕಿಸಿದ್ದಾರೆ. ಇದನ್ನೂ ಓದಿ:ಭಾವಿ ಪತಿ ಜೊತೆ ವೈಷ್ಣವಿ ರೊಮ್ಯಾಂಟಿಕ್ ಡಿನ್ನರ್ ಡೇಟ್- ಸೂಪರ್‌ ಜೋಡಿ ಎಂದ ಫ್ಯಾನ್ಸ್

    ದಿನದಿಂದ ದಿನಕ್ಕೆ ನಿವೇದಿತಾ ಬೋಲ್ಡ್ ಅವತಾರ ತಾಳುತ್ತಿದ್ದಾರೆ. ಸದಾ ಒಂದಲ್ಲಾ ಒಂದು ರೀಲ್ಸ್ ಹಾಗೂ ಫೋಟೋಶೂಟ್ ಮೂಲಕ ಅವರು ಚರ್ಚೆಗೆ ಗ್ರಾಸವಾಗುತ್ತಲೇ ಇರುತ್ತಾರೆ. ಈಗ ಶಾರ್ಟ್ ಆಗಿರೋ ಬಟ್ಟೆ ಧರಿಸಿ ರೊಮ್ಯಾಂಟಿಕ್ ಹಾಡೋದಕ್ಕೆ ಹೆಜ್ಜೆ ಹಾಕಿದ್ದಾರೆ.

    ‘ಕೆಂಪೇಗೌಡ’ ಸಿನಿಮಾದ ‘ತರ ತರ ಹಿಡಿಸಿದೆ ಮನಸ್ಸಿಗೆ ನೀನು’ ಎಂಬ ಹಾಡು ಮಸ್ತ್ ಆಗಿ ಕುಣಿದಿದ್ದಾರೆ. ಈ ವಿಡಿಯೋ ನೋಡಿ ನೆಟ್ಟಿಗರು ಮತ್ತೆ ಲವ್ ಆಯ್ತಾ ಎಂದೆಲ್ಲಾ ನಟಿಗೆ ಕಾಲೆಳೆದಿದ್ದಾರೆ. ಇದನ್ನೂ ಓದಿ:18ನೇ ಆ್ಯನಿವರ್ಸರಿ ಸಂಭ್ರಮ: ಪತಿಯೊಂದಿಗಿನ ಫೋಟೋ ಹಂಚಿಕೊಂಡ ಐಶ್ವರ್ಯಾ ರೈ

    ಮಾಜಿ ಪತಿ ಚಂದನ್ ಶೆಟ್ಟಿ (Chandan Shetty) ಜೊತೆಗಿನ ‘ಮುದ್ದು ರಾಕ್ಷಸಿ’ (Muddu Rakshasi) ಸಿನಿಮಾವನ್ನು ನಿವೇದಿತಾ ಶೂಟಿಂಗ್ ಮುಗಿಸಿ ಕೊಟ್ಟಿದ್ದಾರೆ. ಸದ್ಯದಲ್ಲೇ ಚಿತ್ರತಂಡ ರಿಲೀಸ್ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದೆ.

  • ಚಂದನ್ ಶೆಟ್ಟಿ, ಸುಪ್ರೀತಾ ಸತ್ಯನಾರಾಯಣ್ ಎಂಗೇಜ್‌ಮೆಂಟ್ ಫೋಟೋಸ್

    ಚಂದನ್ ಶೆಟ್ಟಿ, ಸುಪ್ರೀತಾ ಸತ್ಯನಾರಾಯಣ್ ಎಂಗೇಜ್‌ಮೆಂಟ್ ಫೋಟೋಸ್

    ‘ಸೀತಾ ವಲ್ಲಭ’ ಸೀರಿಯಲ್ ನಟಿ ಸುಪ್ರೀತಾ ಸತ್ಯನಾರಾಯಣ್ (Supritha Sathyanarayan) ಇತ್ತೀಚೆಗೆ ಚಂದನ್ ಶೆಟ್ಟಿ (Chandan Shetty) ಜೊತೆ ಎಂಗೇಜ್ ಆಗಿರೋದಾಗಿ ಅಧಿಕೃತವಾಗಿ ತಿಳಿಸಿದ್ದರು. ಇದೀಗ ಅವರ ಎಂಗೇಜ್‌ಮೆಂಟ್ ಫೋಟೋವನ್ನು ಹಂಚಿಕೊಂಡಿದ್ದಾರೆ.

    ಇದೇ ಮಾರ್ಚ್ 12ರಂದು ಚಂದನ್ ಶೆಟ್ಟಿ ಜೊತೆ ನಟಿ ಅದ್ಧೂರಿಯಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಮರೂನ್ ಬ್ಲೌಸ್‌ಗೆ ಇರುವ ಹಸಿರು ಬಣ್ಣದ ಸೀರೆಯುಟ್ಟು ಸುಪ್ರೀತಾ ಸತ್ಯನಾರಾಯಣ್ ಮಿಂಚಿದ್ದಾರೆ.  ಮರೂನ್‌ ಕಲರ್ ಶೆರ್ವಾನಿಯಲ್ಲಿ ವರ ಚಂದನ್ ಶೆಟ್ಟಿ ಧರಿಸಿದ್ದಾರೆ. ಇದನ್ನೂ ಓದಿ: ಉಡುಪಿ| ಹೊಸ ಮಾರಿಗುಡಿಗೆ ಬಾಲಿವುಡ್‌ ಖ್ಯಾತ ನಟ ಸುನೀಲ್‌ ಶೆಟ್ಟಿ ಭೇಟಿ

    ಹಲವು ವರ್ಷಗಳ ಪ್ರೀತಿಗೆ ಉಂಗುರದ ಮುದ್ರೆ ಒತ್ತಿದ್ದಾರೆ. ಸದ್ಯದಲ್ಲೇ ಇಬ್ಬರು ಹಸೆಮಣೆ ಏರಲಿದ್ದಾರೆ. ಸದ್ಯ ಹೊಸ ಜೋಡಿಗೆ ಫ್ಯಾನ್ಸ್ ಶುಭಕೋರುತ್ತಿದ್ದಾರೆ. ಇದನ್ನೂ ಓದಿ:ಚಂದನ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ‘ಸೀತಾ ವಲ್ಲಭ’ ನಟಿ

    ಹೊಸ ಚಾಪ್ಟರ್ ಇಲ್ಲಿಂದ ಶುರು. ಹಲೋ ಎನ್ನುವ ನಿನ್ನ ಧ್ವನಿಯಿಂದಲೇ ಪ್ರೀತಿ ಶುರುವಾದ ಬಗ್ಗೆ ಹೇಳಲಾ ಅಥವಾ ನಿನ್ನ ನಗು ನೋಡಿದಾಗ ನನ್ನ ಹೊಟ್ಟೆಯೊಳಗಡೆ ಚಿಟ್ಟೆ ಹಾರಾಟ ಮಾಡೋ ಬಗ್ಗೆ ಹೇಳಲಾ? ನಿನ್ನ ನಗು ಅಂದ್ರೆ ನನಗೆ ತುಂಬ ಇಷ್ಟ. ಆ ನಗುಗೋಸ್ಕರ ನಾನು ಏನು ಬೇಕಿದ್ರೂ ಮಾಡುವೆ. ಖುಷಿಗೋಸ್ಕರ ನಾನು ದೇವರ ಬಳಿ ಪ್ರಾರ್ಥಿಸಿದೆ. ಅವನು ನನಗೆ ನಿಮ್ಮನ್ನು ಕೊಟ್ಟ. ನನ್ನ ಜೀವನಕ್ಕೆ ಬಂದಿದ್ದಕ್ಕೆ, ನಿಜವಾದ ಲವ್ ಏನು ಎಂದು ಅರ್ಥ ಮಾಡಿಸಿದ್ದಕ್ಕೆ, ನನ್ನ ಜೀವನವನ್ನು ಸುಂದರ ಮಾಡಿದ್ದಕ್ಕೆ ಥ್ಯಾಂಕ್ಯೂ ಎಂದು ಇತ್ತೀಚೆಗೆ ಭಾವಿ ಪತಿಯೊಂದಿನ ಫೋಟೋ ಹಾಕಿ ಬರೆದುಕೊಂಡಿದ್ದರು ಸುಪ್ರೀತಾ.

    ನಿನ್ನ ನಗು, ಶಾಂತಿ, ಖುಷಿಗೋಸ್ಕರ ನಾನು ಪ್ರಾಮೀಸ್ ಮಾಡುವೆ. ನಿನ್ನ ಜೀವನದುದ್ದಕ್ಕೂ ಇರುವೆ ಎಂದು ಮಾತುಕೊಡ್ತೀನಿ. ಇಬ್ಬರೂ ಒಟ್ಟಿಗೆ ಜೀವನ ಕಳೆಯೋಣ. ಐ ಲವ್ ಯೂ ಕಂದ. ನನ್ನ ಹೃದಯ ನಿನ್ನದು. ನನ್ನ ಎದೆಯಾಳೋ ಧಣಿ ನೀನೇ, ನಿನ್ನ ಸಹಚಾರಿಣಿ ನಾನೇ ಎಂದು ನಟಿ ಪೋಸ್ಟ್ ಮಾಡಿದ್ದರು.

    ಡಿಜಿಟಲ್ ಕ್ರಿಯೇಟರ್, ಸಾಫ ಉದ್ಯೋಗಿ ಚಂದನ್ ಶೆಟ್ಟಿ ಅವರನ್ನು ಮದುವೆಯಾಗಲು ನಟಿ ಸಜ್ಜಾಗಿದ್ದಾರೆ. ಕೊಡಗು ಮೂಲದ ಚಂದನ್ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

  • ಚಂದನ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ‘ಸೀತಾ ವಲ್ಲಭ’ ನಟಿ

    ಚಂದನ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ‘ಸೀತಾ ವಲ್ಲಭ’ ನಟಿ

    ಕಿರುತೆರೆಯ ಜನಪ್ರಿಯ ‘ಸೀತಾ ವಲ್ಲಭ’ (Seetha Vallabha) ನಟಿ ಸುಪ್ರೀತಾ ಸತ್ಯನಾರಾಯಣ್ (Supritha Sathyanarayan) ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಚಂದನ್ ಶೆಟ್ಟಿ (Chandan Shetty) ಜೊತೆ ಎಂಗೇಜ್ ಆಗಿರುವ ಕುರಿತು ನಟಿ ಸೋಷಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದನ್ನೂ ಓದಿ:ಬ್ಯಾಂಕ್‌ ಜನಾರ್ಧನ್ ಸಾವಿನ ಸುದ್ದಿ ಕೇಳಿ ಶಾಕ್ ಆಯ್ತು: ಧ್ರುವ ಸರ್ಜಾ

    ಹೊಸ ಚಾಪ್ಟರ್ ಇಲ್ಲಿಂದ ಶುರು. ಹಲೋ ಎನ್ನುವ ನಿನ್ನ ಧ್ವನಿಯಿಂದಲೇ ಪ್ರೀತಿ ಶುರುವಾದ ಬಗ್ಗೆ ಹೇಳಲಾ ಅಥವಾ ನಿನ್ನ ನಗು ನೋಡಿದಾಗ ನನ್ನ ಹೊಟ್ಟೆಯೊಳಗಡೆ ಚಿಟ್ಟೆ ಹಾರಾಟ ಮಾಡೋ ಬಗ್ಗೆ ಹೇಳಲಾ? ನಿನ್ನ ನಗು ಅಂದ್ರೆ ನನಗೆ ತುಂಬ ಇಷ್ಟ. ಆ ನಗುಗೋಸ್ಕರ ನಾನು ಏನು ಬೇಕಿದ್ರೂ ಮಾಡುವೆ. ಖುಷಿಗೋಸ್ಕರ ನಾನು ದೇವರ ಬಳಿ ಪ್ರಾರ್ಥಿಸಿದೆ. ಅವನು ನನಗೆ ನಿಮ್ಮನ್ನು ಕೊಟ್ಟ. ನನ್ನ ಜೀವನಕ್ಕೆ ಬಂದಿದ್ದಕ್ಕೆ, ನಿಜವಾದ ಲವ್ ಏನು ಎಂದು ಅರ್ಥ ಮಾಡಿಸಿದ್ದಕ್ಕೆ, ನನ್ನ ಜೀವನವನ್ನು ಸುಂದರ ಮಾಡಿದ್ದಕ್ಕೆ ಥ್ಯಾಂಕ್ಯೂ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಮನೆಗೆ ನುಗ್ಗಿ, ಕಾರು ಸ್ಫೋಟಿಸಿ ಕೊಲೆ ಮಾಡುವುದಾಗಿ ನಟ ಸಲ್ಮಾನ್‌ ಖಾನ್‌ಗೆ ಬೆದರಿಕೆ

    ನಿನ್ನ ನಗು, ಶಾಂತಿ, ಖುಷಿಗೋಸ್ಕರ ನಾನು ಪ್ರಾಮೀಸ್ ಮಾಡುವೆ. ನಿನ್ನ ಜೀವನದುದ್ದಕ್ಕೂ ಇರುವೆ ಎಂದು ಮಾತುಕೊಡ್ತೀನಿ. ಇಬ್ಬರೂ ಒಟ್ಟಿಗೆ ಜೀವನ ಕಳೆಯೋಣ. ಐ ಲವ್ ಯೂ ಕಂದ. ನನ್ನ ಹೃದಯ ನಿನ್ನದು. ನನ್ನ ಎದೆಯಾಳೋ ಧಣಿ ನೀನೇ, ನಿನ್ನ ಸಹಚಾರಿಣಿ ನಾನೇ ಎಂದು ನಟಿ ಪೋಸ್ಟ್ ಬರೆದುಕೊಂಡಿದ್ದಾರೆ. ಭಾವಿ ಪತಿ ಜೊತೆಗಿನ ಫೋಟೋ ಶೇರ್ ಮಾಡಿ, ಈ ವರ್ಷ ಮಾರ್ಚ್ 12ರಂದು ಎಂಗೇಜ್ ಆಗಿರೋದಾಗಿ ರಿವೀಲ್ ಮಾಡಿದ್ದಾರೆ.

    ಡಿಜಿಟಲ್ ಕ್ರಿಯೇಟರ್, ಸಾಫ್ಟ್‌ವೇರ್ ಉದ್ಯೋಗಿ ಚಂದನ್ ಶೆಟ್ಟಿ ಅವರನ್ನು ಮದುವೆಯಾಗಲು ನಟಿ ಸಜ್ಜಾಗಿದ್ದಾರೆ. ಕೊಡಗು ಮೂಲದ ಚಂದನ್ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

  • ಚಂದನ್ ಶೆಟ್ಟಿ ಜೊತೆಗಿನ ‘ಮುದ್ದು ರಾಕ್ಷಸಿ’ ಶೂಟಿಂಗ್ ಮುಗಿಸಿದ ನಿವೇದಿತಾ ಗೌಡ

    ಚಂದನ್ ಶೆಟ್ಟಿ ಜೊತೆಗಿನ ‘ಮುದ್ದು ರಾಕ್ಷಸಿ’ ಶೂಟಿಂಗ್ ಮುಗಿಸಿದ ನಿವೇದಿತಾ ಗೌಡ

    ಮಾಜಿ ಪತಿ ಚಂದನ್ ಶೆಟ್ಟಿ (Chandan Shetty) ಜೊತೆಗೆ ನಟಿಸಿರುವ ‘ಮುದ್ದು ರಾಕ್ಷಸಿ’ (Muddu Rakshasi) ಚಿತ್ರದ ಶೂಟಿಂಗ್ ಅನ್ನು ನಿವೇದಿತಾ ಗೌಡ (Niveditha Gowda) ಮುಗಿಸಿ ಕೊಟ್ಟಿದ್ದಾರೆ. ‘ಮುದ್ದು ರಾಕ್ಷಸಿ’ ಸಿನಿಮಾ ಕಂಪ್ಲೀಟ್ ಆಗಿರುವ ಬಗ್ಗೆ ನಟಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

    ಯಶಸ್ವಿಯಾಗಿ ‘ಮುದ್ದು ರಾಕ್ಷಸಿ’ ಸಿನಿಮಾ ಚಿತ್ರೀಕರಣ ಮುಗಿಸಿದ್ದೇವೆ. ಈ ಚಿತ್ರತಂಡವನ್ನು ಮಿಸ್ ಮಾಡಿಕೊಳ್ಳುತ್ತೇನೆ ಎಂದು ನಿವೇದಿತಾ ಗೌಡ ಇನ್ಸ್ಟಾಗ್ರಾಂ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಸಮಾಜ ಇರೋದೇ ಹೀಗೆ.. ಹೆಣ್ಣು ಮಕ್ಕಳನ್ನೇ ದೂಷಿಸ್ತಾರೆ – ಕೆಟ್ಟ ಟ್ರೋಲ್‌ ಬಗ್ಗೆ ನಿವಿ ಖಡಕ್‌ ಮಾತು


    ‘ಮುದ್ದು ರಾಕ್ಷಸಿ’ ಎಂಬ ಸೈಕೋ ಥ್ರಿಲ್ಲರ್ ಕಥಾಹಂದರವಿರುವ ಈ ಸಿನಿಮಾದಲ್ಲಿ ಚಂದನ್ ಶೆಟ್ಟಿಗೆ ಪ್ರೇಮಿಯಾಗಿ ಲೀಡ್ ರೋಲ್‌ನಲ್ಲಿ ನಿವೇದಿತಾ ನಟಿಸಿದ್ದಾರೆ. ಇದನ್ನೂ ಓದಿ: ಲೈಫ್‌ಲ್ಲಿ ಏನೇನೋ ಒಂದಷ್ಟು ಆದ್ಮೇಲೆ ನಾನು ಇಷ್ಟು ಗಟ್ಟಿಯಾಗಿರೋಕೆ ತಂದೆಯೇ ಕಾರಣ- ನಿವೇದಿತಾ ಭಾವುಕ

    ಸಿನಿಮಾಗೆ ಪುನೀತ್ ಶ್ರೀನಿವಾಸ್ ಅವರು ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಶ್ರೀ ಚೌಡೇಶ್ವರಿ ಸಿನಿ ಕಂಬೈನ್ಸ್ ಮೂಲಕ ಮೋಹನ್ ಕುಮಾರ್ ನಿರ್ಮಿಸಿದ್ದಾರೆ. ಶೂಟಿಂಗ್ ಪೂರ್ಣಗೊಂಡಿದ್ದು, ಮುಂದಿನ ದಿನಗಳಲ್ಲಿ ಅಭಿಮಾನಿಗಳಿಗೆ ಹೆಚ್ಚಿನ ಅಪ್‌ಡೇಟ್ ಸಿಗಲಿದೆ.

    ಡಿವೋರ್ಸ್‌ಗೂ (Divorce) ಮುನ್ನ ಈ ಚಿತ್ರ ಸೆಟ್ಟೇರಿತ್ತು. ಆದರೆ ಕೆಲ ಭಾಗದ ಶೂಟಿಂಗ್ ಬಾಕಿ ಇದೆ ಎನ್ನುವಾಗ ಚಂದನ್ ಹಾಗೂ ನಿವೇದಿತಾ ತಮ್ಮ ವೈವಾಹಿಕ ಜೀವನಕ್ಕೆ ಫುಲ್ ಸ್ಟಾಪ್ ಇಟ್ಟರು. ಆದರೆ ವೈಯಕ್ತಿಕ ಜೀವನದ ಏರಿಳಿತಗಳ ಪರಿಣಾಮ ತಮ್ಮ ವೃತ್ತಿಜೀವನದ ಮೇಲೆ ಬೀರದಂತೆ ನೋಡಿಕೊಂಡಿದ್ದಾರೆ. ಸಿನಿಮಾ ಮೇಲಿರುವ ಶ್ರದ್ಧೆಯಿಂದ ಬಾಕಿ ಉಳಿದಿದ್ದ ಶೂಟಿಂಗ್ ಅನ್ನು ಪೂರ್ಣಗೊಳಿಸಿದ್ದಾರೆ. ಇತ್ತೀಚೆಗೆ ಇಬ್ಬರೂ ಚಿತ್ರೀಕರಣದಲ್ಲಿ ಭಾಗಿ ಆಗಿರೋ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

  • ಲೈಫ್‌ಲ್ಲಿ ಏನೇನೋ ಒಂದಷ್ಟು ಆದ್ಮೇಲೆ ನಾನು ಇಷ್ಟು ಗಟ್ಟಿಯಾಗಿರೋಕೆ ತಂದೆಯೇ ಕಾರಣ- ನಿವೇದಿತಾ ಭಾವುಕ

    ಲೈಫ್‌ಲ್ಲಿ ಏನೇನೋ ಒಂದಷ್ಟು ಆದ್ಮೇಲೆ ನಾನು ಇಷ್ಟು ಗಟ್ಟಿಯಾಗಿರೋಕೆ ತಂದೆಯೇ ಕಾರಣ- ನಿವೇದಿತಾ ಭಾವುಕ

    ‘ಬಿಗ್ ಬಾಸ್’ (Bigg Boss Kannada 5) ಖ್ಯಾತಿಯ ನಿವೇದಿತಾ ಗೌಡ (Niveditha Gowda) ಶೋವೊಂದರಲ್ಲಿ ಜೀವನದಲ್ಲಿ ನಡೆದ ಸಂಕಷ್ಟದ ದಿನಗಳನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ನನ್ನ ಲೈಫ್‌ನಲ್ಲಿ ಏನೇನೋ ಒಂದಷ್ಟು ಆದ್ಮೇಲೆ ನಾನು ಇಷ್ಟು ಗಟ್ಟಿ ಆಗಿರೋಕೆ ನನ್ನ ತಂದೆಯೇ ಕಾರಣ ಎಂದು ನಿವೇದಿತಾ ಭಾವುಕರಾಗಿದ್ದಾರೆ. ಇದನ್ನೂ ಓದಿ:ಹುಟ್ಟುಹಬ್ಬ ಆಚರಿಸಿಕೊಳ್ಳಲು ವಿದೇಶಕ್ಕೆ ಹಾರಿದ ನ್ಯಾಷನಲ್‌ ಕ್ರಶ್‌ – ಈ ನಟನೊಂದಿಗೆ ರಶ್ಮಿಕಾ ಸೆಲೆಬ್ರೇಷನ್‌!

    ಚಂದನ್ ಶೆಟ್ಟಿ ಜೊತೆಗಿನ ಡಿವೋರ್ಸ್ ಬಳಿಕ ‘ಬಾಯ್ಸ್ ವರ್ಸಸ್ ಗರ್ಲ್ಸ್’ ಶೋನಲ್ಲಿ ಸ್ಪರ್ಧಿಯಾಗಿ ನಿವೇದಿತಾ ಆ್ಯಕ್ಟೀವ್ ಆಗಿದ್ದಾರೆ. ಡಿವೋರ್ಸ್ ಆದ್ಮೇಲೆ ಜೀವನದಲ್ಲಿ ಎದುರಿಸುತ್ತಿರುವ ಸವಾಲುಗಳ ಬಗ್ಗೆ ನಟಿ ಮಾತನಾಡಿದ್ದಾರೆ. ಈ ಶೋನಲ್ಲಿ ನಿವೇದಿತಾ ಹಾಗೂ ಧನರಾಜ್ ಆಚಾರ್ ಇಬ್ಬರೂ ತಂದೆ-ಮಗಳ ಬಾಂಧವ್ಯದ ಕುರಿತ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಆ ವೇಳೆ ನಿವೇದಿತಾ ಸಖತ್‌ ಎಮೋಷನಲ್‌ ಆಗಿ ಮಾತನಾಡಿದ್ದಾರೆ. ಇದನ್ನೂ ಓದಿ:L2: ಎಂಪುರಾನ್‌ ನಿರ್ದೇಶಕ ಪೃಥ್ವಿರಾಜ್‌ಗೆ ಐಟಿ ನೋಟಿಸ್‌ – ಸಂಭಾವನೆ ವಿವರ ನೀಡುವಂತೆ ಸೂಚನೆ

    ನನ್ನ ಲೈಫ್‌ನಲ್ಲಿ ಏನೇನೋ ಒಂದಷ್ಟು ಆದ್ಮೇಲೆ ನಾನು ಇಷ್ಟು ಗಟ್ಟಿ ಆಗಿರೋಕೆ ನನ್ನ ತಂದೆಯೇ ಕಾರಣ. ನಾನು ನಿನ್ನ ಜೊತೆಗೆ ಇದೀನಿ, ತಲೆ ಕೆಡಿಸಿಕೊಳ್ಳಬೇಡ ಅಂತ ಹೇಳುತ್ತಾರೆ. ಇದು ಅವರಿಗೆ ನಿಜಕ್ಕೂ ಕಷ್ಟ ಎಂದು ನಿವೇದಿತಾ ಅವರು ಹೇಳಿದ್ದಾರೆ. ನಿವೇದಿತಾ ಮಾತು ಕೇಳಿ ಐಶ್ವರ್ಯಾ, ಅನುಪಮಾ ಗೌಡ, ರಜತ್ ಕಣ್ಣೀರಿಟ್ಟಿದ್ದಾರೆ.

    ಆಗ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದ ನೆನಪಿರಲಿ ಪ್ರೇಮ್ ಮಾತನಾಡಿ, ಪ್ರಪಂಚದಲ್ಲಿ ತಂದೆ ಅನ್ನೋ ಜೀವನೇ ಹಾಗೆ. ವಿಶೇಷವಾಗಿ ಹೆಣ್ಣು ಮಕ್ಕಳು ಏನಾದರೂ ಕೇಳಿದಾಗ ಜೀವ ಬಿಟ್ಟು, ಏನು ಬೇಕಿದ್ರೂ ತಂದುಕೊಡ್ತಾರೆ ಎಂದು ಹೇಳಿದ್ದಾರೆ.

    ಡಿವೋರ್ಸ್‌ಗೂ ಮುನ್ನ ಒಪ್ಪಿಕೊಂಡಿದ್ದ ಚಂದನ್ ಶೆಟ್ಟಿ ಜೊತೆಗಿನ ‘ಮುದ್ದು ರಾಕ್ಷಸಿ’ (Muddu Rakshasi) ಸಿನಿಮಾವನ್ನು ಇತ್ತೀಚೆಗೆ ನಿವೇದಿತಾ ಗೌಡ ಮುಗಿಸಿಕೊಟ್ಟರು.

  • ಬಾತ್‌ರೂಮ್‌ನಲ್ಲಿ ರೀಲ್ಸ್ ಮಾಡಿದ ನಿವೇದಿತಾಗೆ ಕಾಲೆಳೆದ ನೆಟ್ಟಿಗರು

    ಬಾತ್‌ರೂಮ್‌ನಲ್ಲಿ ರೀಲ್ಸ್ ಮಾಡಿದ ನಿವೇದಿತಾಗೆ ಕಾಲೆಳೆದ ನೆಟ್ಟಿಗರು

    ‘ಬಿಗ್ ಬಾಸ್’ ಖ್ಯಾತಿಯ (Bigg Boss) ನಿವೇದಿತಾ ಗೌಡ (Niveditha Gowda) ಡಿವೋರ್ಸ್ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಟ್ರೋಲಿಗರ (Troll) ಕಾಟದ ನಡುವೆಯೂ ಹೊಸದೊಂದು ರೀಲ್ಸ್‌ವೊಂದನ್ನು ನಟಿ ಹಂಚಿಕೊಂಡಿದ್ದಾರೆ. ಬಾತ್‌ರೂಮ್‌ನಲ್ಲಿ ರೀಲ್ಸ್ ಮಾಡಿರೋ ನಿವೇದಿತಾಗೆ ನೆಟ್ಟಿಗರು ಕಾಲೆಳೆದಿದ್ದಾರೆ. ಇದನ್ನೂ ಓದಿ:ಟ್ರೋಲ್‌ಗೆ ಡೋಂಟ್ ಕೇರ್ ಎನ್ನುತ್ತಾ ಹೊಸ ರೀಲ್ಸ್ ಹಂಚಿಕೊಂಡ ನಿವೇದಿತಾ ಗೌಡ

    ಬ್ಲ್ಯಾಕ್ & ವೈಟ್ ಉಡುಗೆ ಧರಿಸಿ ರೀಲ್ಸ್‌ವೊಂದಕ್ಕೆ ನಿವೇದಿತಾ ಹೆಜ್ಜೆ ಹಾಕಿದ್ದಾರೆ. ಬೋಲ್ಡ್ ಡ್ರೆಸ್‌ನಲ್ಲಿ ಕಾಣಿಸಿಕೊಂಡು ರೀಲ್ಸ್ ಮಾಡಿದಕ್ಕೆ ಬಗೆ ಬಗೆಯ ಕಾಮೆಂಟ್‌ಗಳು ನಿವೇದಿತಾ ಪೋಸ್ಟ್‌ಗೆ ಹರಿದು ಬರುತ್ತಿವೆ. ಮೊದಲು ನೀನು ರೀಲ್ಸ್ ಮಾಡೋದನ್ನು ಬಿಡಮ್ಮ ಎಂದೆಲ್ಲಾ ನಟಿಗೆ ನೆಟ್ಟಿಗರು ಟೀಕಿಸಿದ್ದಾರೆ. ಇದನ್ನೂ ಓದಿ:ಸಮಾಜ ಇರೋದೇ ಹೀಗೆ.. ಹೆಣ್ಣು ಮಕ್ಕಳನ್ನೇ ದೂಷಿಸ್ತಾರೆ – ಕೆಟ್ಟ ಟ್ರೋಲ್‌ ಬಗ್ಗೆ ನಿವಿ ಖಡಕ್‌ ಮಾತು


    ಇತ್ತೀಚೆಗೆ ಚಂದನ್ ಶೆಟ್ಟಿ ಜೊತೆಗಿನ ‘ಮುದ್ದು ರಾಕ್ಷಸಿ’ ಚಿತ್ರದ ಸುದ್ದಿಗೋಷ್ಠಿಯಲ್ಲಿ ನಿವೇದಿತಾ ಕೆಟ್ಟ ಟ್ರೋಲ್‌ಗಳ ಬಗ್ಗೆ ಮಾತನಾಡಿದ್ದರು. ಈ ಸಮಾಜನೇ ಹೀಗೆ ಸದಾ ಹೆಣ್ಣು ಮಕ್ಕಳನ್ನ ದೂಷಿಸುತ್ತಾರೆ. ಎಷ್ಟಾದ್ರೂ ಸೊಸೈಟಿ ಬದಲಾಗಲ್ಲ ಹುಡುಗಿಯರನ್ನೇ ಬ್ಲೇಮ್ ಮಾಡುತ್ತಾರೆ. ಮಾತನಾಡೋಕೆ ಅವಕಾಶ ಇದೆ ಅಂತ ಮಾಡ್ತೀರಾ ಮಾಡಿ ಪರವಾಗಿಲ್ಲ. ನನಗೇನು ಬೇಜಾರಾಗಲ್ಲ, ನೋವು ಆಗಲ್ಲ, ನಾನು ಟ್ರೋಲ್ ಬಗ್ಗೆ ಕೇರ್ ಮಾಡಲ್ಲ. ಮತ್ತಷ್ಟು ಟ್ರೋಲ್ ಮಾಡಿ ಸುಮ್ಮನೆ ನೋಡ್ತೀನಿ ಅಷ್ಟೇ. ಇದರ ಬಗ್ಗೆ ತಲೆ ಕೆಡಿಸಿಕೊಳ್ಳೋದಿಲ್ಲ ಎಂದು ಬೋಲ್ಡ್ ಆಗಿ ನಿವೇದಿತಾ ಹೇಳಿಕೆ ನೀಡಿದ್ದರು.

    ಸದ್ಯ ನಿವೇದಿತಾ ಗೌಡ ಅವರು ಚಂದನ್ ಶೆಟ್ಟಿಗೆ ನಾಯಕಿಯಾಗಿ ‘ಮುದ್ದು ರಾಕ್ಷಸಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಕಿರುತೆರೆಯ ‘ಬಾಯ್ಸ್ ವರ್ಸಸ್ ಗರ್ಲ್ಸ್’ ಸ್ಪರ್ಧಿಯಾಗಿದ್ದಾರೆ.

  • ಟ್ರೋಲ್‌ಗೆ ಡೋಂಟ್ ಕೇರ್ ಎನ್ನುತ್ತಾ ಮಿನಿ ಡ್ರೆಸ್‌ನಲ್ಲಿ ಮಿಂಚಿದ ನಿವೇದಿತಾ ಗೌಡ

    ಟ್ರೋಲ್‌ಗೆ ಡೋಂಟ್ ಕೇರ್ ಎನ್ನುತ್ತಾ ಮಿನಿ ಡ್ರೆಸ್‌ನಲ್ಲಿ ಮಿಂಚಿದ ನಿವೇದಿತಾ ಗೌಡ

    ‘ಬಿಗ್ ಬಾಸ್’ ಬೆಡಗಿ (Bigg Boss Kannada 5) ನಿವೇದಿತಾ ಗೌಡ (Niveditha Gowda) ಟ್ರೋಲ್‌ಗೆ ಡೋಂಟ್ ಕೇರ್ ಎನ್ನುತ್ತಾ ಮತ್ತೊಂದು ಬೋಲ್ಡ್ ಆಗಿರೋ ವಿಡಿಯೋವನ್ನು ಶೇರ್ ಮಾಡಿದ್ದಾರೆ. ಮಿನಿ ಡ್ರೆಸ್ ಧರಿಸಿ ಮಿಂಚಿದ ನಿವೇದಿತಾ ಮೈಮಾಟಕ್ಕೆ ಫ್ಯಾನ್ಸ್‌ ಫಿದಾ ಆಗಿದ್ದಾರೆ.

    ಡಿವೋರ್ಸ್ (Divorce) ಬಳಿಕ ನಿವೇದಿತಾ ಮತ್ತಷ್ಟು ಹಾಟ್ & ಬೋಲ್ಡ್ ಆಗಿ ಕಾಣಿಸಿಕೊಳ್ತಿದ್ದಾರೆ. ಸದಾ ಟ್ರೋಲಿಗರ ಬಾಯಿಗೆ ಆಹಾರವಾಗೋ ನಿವೇದಿತಾ ಮತ್ತೊಂದು ಬೋಲ್ಡ್ ವಿಡಿಯೋ ಹಂಚಿಕೊಂಡು ಪಡ್ಡೆಹುಡುಗರ ಹುಬ್ಬೇರುವಂತೆ ಮಾಡಿದ್ದಾರೆ.

    ಮಿನಿ ಡ್ರೆಸ್ ಧರಿಸಿ ನಿವೇದಿತಾ ಸೊಂಟ ಬಳುಕಿಸಿದ್ದಾರೆ. ರೀಲ್ಸ್‌ವೊಂದಕ್ಕೆ ಅವರು ಹೆಜ್ಜೆ ಹಾಕಿದ್ದಾರೆ. ಕ್ಯೂಟ್ ಆಗಿ ಕಾಣಿಸಿಕೊಂಡಿರೋ ನಿವಿನ ನೋಡಿ ಪಡ್ಡೆಹುಡುಗರು ಗೊಂಬೆ ಎಂದು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ:ರೀಲ್ಸ್ ವಿವಾದ: ನಮಗೆ ಪೊಲೀಸರ ದಿಕ್ಕು ತಪ್ಪಿಸೋ ಉದ್ದೇಶವಿಲ್ಲ ಎಂದ ವಿನಯ್ ಗೌಡ

    ಇತ್ತೀಚೆಗೆ ಚಂದನ್ ಶೆಟ್ಟಿ ಜೊತೆಗಿನ ‘ಮುದ್ದು ರಾಕ್ಷಸಿ’ ಚಿತ್ರದ ಸುದ್ದಿಗೋಷ್ಠಿಯಲ್ಲಿ ನಿವೇದಿತಾ ಕೆಟ್ಟ ಟ್ರೋಲ್‌ಗಳ ಬಗ್ಗೆ ಮಾತನಾಡಿದ್ದರು. ಈ ಸಮಾಜನೇ ಹೀಗೆ ಸದಾ ಹೆಣ್ಣು ಮಕ್ಕಳನ್ನ ದೂಷಿಸುತ್ತಾರೆ. ಎಷ್ಟಾದ್ರೂ ಸೊಸೈಟಿ ಬದಲಾಗಲ್ಲ ಹುಡುಗಿಯರನ್ನೇ ಬ್ಲೇಮ್ ಮಾಡುತ್ತಾರೆ. ಮಾತನಾಡೋಕೆ ಅವಕಾಶ ಇದೆ ಅಂತ ಮಾಡ್ತೀರಾ ಮಾಡಿ ಪರವಾಗಿಲ್ಲ. ನನಗೇನು ಬೇಜಾರಾಗಲ್ಲ, ನೋವು ಆಗಲ್ಲ, ನಾನು ಟ್ರೋಲ್ ಬಗ್ಗೆ ಕೇರ್ ಮಾಡಲ್ಲ. ಮತ್ತಷ್ಟು ಟ್ರೋಲ್ ಮಾಡಿ ಸುಮ್ಮನೆ ನೋಡ್ತೀನಿ ಅಷ್ಟೇ. ಇದರ ಬಗ್ಗೆ ತಲೆ ಕೆಡಿಸಿಕೊಳ್ಳೋದಿಲ್ಲ ಎಂದು ಬೋಲ್ಡ್ ಆಗಿ ನಿವೇದಿತಾ ಹೇಳಿಕೆ ನೀಡಿದ್ದರು.


    ಸದ್ಯ ನಿವೇದಿತಾ ಗೌಡ ಅವರು ಚಂದನ್ ಶೆಟ್ಟಿಗೆ (Chandan Shetty) ನಾಯಕಿಯಾಗಿ ‘ಮುದ್ದು ರಾಕ್ಷಸಿ’ (Muddu Rakshasi) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಕಿರುತೆರೆಯ ‘ಬಾಯ್ಸ್ ವರ್ಸಸ್ ಗರ್ಲ್ಸ್’ ಸ್ಪರ್ಧಿಯಾಗಿದ್ದಾರೆ.

  • ಸಂಜನಾ ಆನಂದ್ ಜೊತೆಗಿನ 2ನೇ ಮದುವೆ ವದಂತಿಗೆ ತೆರೆ ಎಳೆದ ಚಂದನ್‌ ಶೆಟ್ಟಿ

    ಸಂಜನಾ ಆನಂದ್ ಜೊತೆಗಿನ 2ನೇ ಮದುವೆ ವದಂತಿಗೆ ತೆರೆ ಎಳೆದ ಚಂದನ್‌ ಶೆಟ್ಟಿ

    ರ‍್ಯಾಪರ್ ಚಂದನ್ ಶೆಟ್ಟಿ (Chandan Shetty) ಅವರು ನಿವೇದಿತಾ (Niveditha Gowda) ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ್ಮೇಲೆ ಸಂಜನಾ ಜೊತೆ ಹೆಸರು ಸದ್ದು ಮಾಡಿತ್ತು. ‘ಸಲಗ’ ನಟಿ ಸಂಜನಾ (Sanjana Anand) ಜೊತೆ ಚಂದನ್ 2ನೇ ಮದುವೆ ಆಗ್ತಾರೆ ಎಂದೇ ಸುದ್ದಿ ಹರಿದಾಡಿತ್ತು. ಅದಕ್ಕೆಲ್ಲಾ ಈಗ ಚಂದನ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಈ ಗಾಸಿಪ್‌ ಹೇಗೆ ಶುರುವಾಯ್ತು ಗೊತ್ತಿಲ್ಲ. ಈ  ವಿಚಾರ ಸುಳ್ಳು ಎಂದಿದ್ದಾರೆ.

    ಸಂಜನಾ ಆನಂದ್ ಜೊತೆ 2ನೇ ಮದುವೆ ಆಗ್ತಾರೆ ಎಂದು ಹರಿದಾಡುತ್ತಿದ್ದ ಸುದ್ದಿ ಬಗ್ಗೆ ಚಂದನ್ ಶೆಟ್ಟಿ ಮಾತನಾಡಿ, ಈ ರೀತಿ ಸುದ್ದಿ ಹರಿದಾಡೋದು ಕಾಮನ್. ಯಾರು ಗಾಸಿಪ್ ಶುರು ಮಾಡಿದ್ರು ಗೊತ್ತಿಲ್ಲ. ಈಗಿನ ಸೋಶಿಯಲ್ ಮೀಡಿಯಾ ಆ ರೀತಿ ಇದೆ. ಏನು ಮಾಡೋಕೆ ಆಗಲ್ಲ. ಯಾರೋ ಏನೋ ಒಂದು ಪೋಸ್ಟ್ ಹಾಕಿದ್ರೆ, ಅದನ್ನೇ ನಿಜ ಎಂದು ಜನ ನಂಬುತ್ತಾರೆ. ಆದರೆ ಈ ವಿಚಾರ ನನ್ನ ವೈಯಕ್ತಿಕ ಜೀವನಕ್ಕೆ ಅಷ್ಟಾಗಿ ಪರಿಣಾಮ ಬೀರಲಿಲ್ಲ. ಪಬ್ಲಿಕ್ ಫಿಗರ್ ಅಂದಾಗ ಹೀಗೆ ಸುದ್ದಿ ಹಬ್ಬೋದು ಕಾಮನ್, ಈ ವಿಚಾರ ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:‘ಪುಷ್ಪ 2’ ನಿರ್ದೇಶಕನ ಜೊತೆ ಶಾರುಖ್ ಖಾನ್ ಸಿನಿಮಾ

    ಇತ್ತ ಸಂಜನಾ ಆನಂದ್ ಕೂಡ ಮಾತನಾಡಿ, ಎಲ್ಲರೂ ಕಾಲ್ ಮಾಡಿ, ಚಂದನ್ ಜೊತೆ ಮದುವೆನಾ? ಎಂದೆಲ್ಲಾ ಕೇಳುತ್ತಿದ್ದರು. ಆ ರೀತಿ ನಮ್ಮ ನಡುವೆ ಏನಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಅಂದಹಾಗೆ, ‘ಸೂತ್ರಧಾರಿ’ ಸಿನಿಮಾದಲ್ಲಿ ಚಂದನ್ ಶೆಟ್ಟಿ ಜೊತೆ ಸಂಜನಾ ಸೊಂಟ ಬಳುಕಿಸಿದ್ದಾರೆ. ‘ಡ್ಯಾಶ್’ ಎಂಬ ಸ್ಪೆಷಲ್ ಹಾಡಿಗೆ ಅವರು ಹೆಜ್ಜೆ ಹಾಕಿದ್ದಾರೆ. ಈ ಸಾಂಗ್ ರಿಲೀಸ್ ಆಗ್ತಿದ್ದಂತೆ ಚಂದನ್ ಮತ್ತು ಸಂಜನಾ ಮದುವೆ ಆಗ್ತಾರೆ ಎಂದೆಲ್ಲಾ ಸುದ್ದಿ ಹಬ್ಬಿತ್ತು. ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಅದಕ್ಕೆಲ್ಲಾ ನಟ ಸ್ಪಷ್ಟನೆ ನೀಡಿದ್ದಾರೆ.