Tag: ಚಂದ್ರಪ್ರಭಾ

  • ಬಿಗ್‌ಬಾಸ್ ಮನೆಯಲ್ಲಿ ವಿವಾದಿತ ಸ್ಪರ್ಧಿಗಳು!

    ಬಿಗ್‌ಬಾಸ್ ಮನೆಯಲ್ಲಿ ವಿವಾದಿತ ಸ್ಪರ್ಧಿಗಳು!

    ವಿವಾದಾತ್ಮಕವಾಗಿ ಗುರುತಿಸಿಕೊಂಡವರಿಗೆ ಬಿಗ್‌ಬಾಸ್‌ನಲ್ಲಿ (Bigg Boss) ಮಣೆ ಹಾಕಲಾಗುತ್ತದೆ ಅನ್ನೋದು ಬಿಗ್‌ಬಾಸ್ ಕಾರ್ಯಕ್ರಮದ ವಿರುದ್ಧ ಜನರ ಒಂದು ಅಸಮಾಧಾನ. ಅದರಂತೆ ಈ ಬಾರಿಯೂ ವಿವಾದವನ್ನ ಬೆನ್ನಿಗೆ ಕಟ್ಟಿಕೊಂಡ ಅನೇಕರು ಬಿಗ್ ಮನೆಯೊಳಗೆ ಎಂಟ್ರಿ ಪಡೆದಿರುವುದು ಚರ್ಚೆಗೆ ಕಾರಣವಾಗಿದೆ.

    ಧ್ರುವಂತ್

    ಧ್ರುವಂತ್
    ಮುದ್ದುಲಕ್ಷ್ಮಿ ಧಾರಾವಾಹಿ ನಟ ಧ್ರುವಂತ್ ನಟನಾಗಷ್ಟೇ ಅಲ್ಲ, ಲೈಂಗಿಕ ಕಿರುಕುಳ ಆರೋಪಿ ಕೂಡ. ವರ್ಷದ ಹಿಂದೆ ಧ್ರುವಂತ್ (Dhruvanth) ಮೇಲೆ ಆರ್‌ಆರ್‌ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಬಿಗ್‌ಬಾಸ್ ಮನೆಗೆ ಎಂಟ್ರಿ ಪಡೆದುಕೊಂಡಿದ್ದಾರೆ. ಇದನ್ನೂ ಓದಿ:  ಒಂಟಿಯಾಗಿ ಬಿಗ್‌ಬಾಸ್ ಮನೆಗೆ ಕಾಲಿಟ್ಟ ನಿರೂಪಕಿ ಜಾನ್ಹವಿ, ಗೀತಾ ಧಾರಾವಾಹಿಯ ಧನುಷ್

     ಸತೀಶ್

     ಸತೀಶ್
    50 ಕೋಟಿ ರೂ. ನಾಯಿ ಖರೀದಿಸಿದ್ದೇನೆ ಎಂದು ಬಿಲ್ಡಪ್ ಕೊಟ್ಟಿದ್ದ ಬೆಂಗಳೂರಿನ ಉದ್ಯಮಿ ಸತೀಶ್ (Satish) ಕೂಡ ಬಿಗ್‌ಬಾಸ್ ಹೌಸ್‌ಗೆ ಆಶ್ಚರ್ಯಕರ ಎಂಟ್ರಿ ಪಡೆದುಕೊಂಡಿದ್ದಾರೆ. ಬಿಲ್ಡಪ್ ಕೊಟ್ಟಿದ್ದಕ್ಕೆ ಇಡಿ ಶಾಕ್ ಕೊಟ್ಟಿತ್ತು. ಸತೀಶ್ ಮೇಲೆ ಇಡಿ ರೇಡ್ ನಡೆದಿತ್ತು. ವುಲ್ಫ್ ಡಾಗ್ ನಾಯಿಗೆ 50 ಕೋಟಿ ಕೊಟ್ಟು ಖರೀದಿಸಿದ್ದೇನೆ ಎಂದು ಬಿಲ್ಡಪ್ ಶೋ ಕೊಟ್ಟಿದ್ದ ವ್ಯಕ್ತಿಯ ಸುಳ್ಳನ್ನ ಇಡಿ ಬಯಲುಮಾಡಿತ್ತು.

    ಚಂದ್ರಪ್ರಭ

    ಚಂದ್ರಪ್ರಭ
    ಹಾಸ್ಯನಟ ಚಂದ್ರಪ್ರಭ (Chandra Prabha) ಜನಪ್ರಿಯತೆ ಗಳಿಸಿದ್ದು ಗಿಚ್ಚಿಗಿಲಿಗಿಲಿ ಕಾರ್ಯಕ್ರಮದ ಮೂಲಕವೇ ಆಗಿದ್ದರೂ ಇವರ ಮೇಲೆ ಆಕ್ಸಿಡೆಂಟ್ ಮಾಡಿರೋ ಆರೋಪವಿದೆ. ಚಿಕ್ಕಮಗಳೂರಿನಲ್ಲಿ ಕಾರನ್ನು ಓಡಿಸುವಾಗ ಬೈಕ್‌ಗೆ ಕಾರು ಗುದ್ದಿದ್ದಲ್ಲವೇ ಹಿಟ್ & ರನ್ ಮಾಡಿರುವ ಆರೋಪ ಹೊತ್ತಿದ್ದವರು. ಬಳಿಕ ಸ್ಟೇಷನ್‌ಗೂ ತೆರಳಿದ್ದ ಚಂದ್ರಪ್ರಭ ಬೇಲ್ ಪಡೆದುಕೊಂಡಿದ್ರು. ತಮ್ಮ ಹಾಸ್ಯಪ್ರಜ್ಞೆ ಹಾಗೂ ಅಭಿನಯದ ಜೊತೆಗೆ ಕ್ರೈಂಸ್ಟೋರಿಯಲ್ಲೂ ಹೆಡ್‌ಲೈನ್‌ನಲ್ಲಿ ಬಂದವ್ರು ಹಾಸ್ಯನಟ ಚಂದ್ರಪ್ರಭ. ಇದನ್ನೂ ಓದಿ:  ಬಿಗ್‌ಬಾಸ್‌ನಲ್ಲಿ ʻಮಾತಿನ ಮಲ್ಲಿ ಮಲ್ಲಮ್ಮನ’ ಪವಾಡ!

     ಅಶ್ವಿನಿ ಗೌಡ

     ಅಶ್ವಿನಿ ಗೌಡ
    ನಟಿ ಅಶ್ವಿನಿ ಗೌಡ (Ashwini Gowda) ಅನೇಕ ಸಿನಿಮಾಗಳಲ್ಲಿ ಪ್ರತಿಭೆ ತೋರಿಸಿರುವ ನಟಿ. ಅನೇಕ ಧಾರಾವಾಹಿಗಳನ್ನ ಅಭಿನಯದ ಮೂಲಕ ಕನ್ನಡಿಗರ ಮನಸ್ಸು ಗೆದ್ದ ನಟಿ. ಜೊತೆಗೆ ರಾಜಕೀಯವಾಗಿಯೂ ಸಮಾಜದಲ್ಲಿ ಗುರುತಿಸಿಕೊಂಡ ಕನ್ನಡಪರ ಹೋರಾಟಗಾರ್ತಿ ಅಶ್ವಿನಿ ಗೌಡ. ಕೌಟುಂಬಿಕವಾಗಿ ಹಾಗೂ ಸಾಮಾಜಿಕವಾಗಿ ಇವರ ಮೇಲೆ ಅನೇಕ ಆರೋಪಗಳಿವೆ. ಅನೇಕ ಕೇಸ್‌ಗಳ ವಿಚಾರವಾಗಿ ಅಶ್ವಿನಿ ಗೌಡ ಕೋರ್ಟು, ಕಛೇರಿ, ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದಾರೆ.

    ಹೀಗೆ ವಿವಾದದಿಂದ ಗುರುತಿಸಿಕೊಂಡು ದೊಡ್ಮನೆಗೆ ಹೋದವರು ತಮ್ಮ ಮೇಲಿನ ಆರೋಪದಿಂದ ಇತರರಿಂದ ಸಪರೇಷನ್ ಭಯವನ್ನೂ ಅನುಭವಿಸಿಸಬಹುದು ಅಥವಾ ಸಿಂಪತಿಯನ್ನೂ ಗಿಟ್ಟಿಸಿಕೊಳ್ಳುವ ಚಾನ್ಸ್ ಇರುತ್ತೆ. ಇಷ್ಟೇ ಅಲ್ಲ ಮೈಗೆ ಅಂಟಿಕೊಂಡಿರುವ ವಿವಾದ ಶಮನ ಮಾಡಿಕೊಳ್ಳುವ ಅಥವಾ ವಿವಾದ ಹೆಚ್ಚಿಸಿಕೊಳ್ಳುವ ಅವಕಾಶವೂ ಅವರ ವರ್ತನೆಯಲ್ಲಿ ಸಾಧ್ಯವಾಗುವ ಸಂಭವ ಇರುತ್ತೆ.

  • ಹಿಟ್ & ರನ್ ಕೇಸ್: ಅಪಘಾತದ ಬಗ್ಗೆ ತಪ್ಪೊಪ್ಪಿಕೊಂಡ ನಟ ಚಂದ್ರಪ್ರಭಾ

    ಹಿಟ್ & ರನ್ ಕೇಸ್: ಅಪಘಾತದ ಬಗ್ಗೆ ತಪ್ಪೊಪ್ಪಿಕೊಂಡ ನಟ ಚಂದ್ರಪ್ರಭಾ

    ‘ಗಿಚ್ಚಿ ಗಿಲಿಗಿಲಿ’ (Gichchi Gili Gili) ವಿನ್ನರ್ ಚಂದ್ರಪ್ರಭಾ (Chandraprabha) ಕಳೆದ ಎರಡ್ಮೂರು ದಿನಗಳಿಂದ ಸುದ್ದಿಯಲ್ಲಿದ್ದಾರೆ. ಹಿಟ್ & ರನ್ ಕೇಸ್ ವಿಚಾರವಾಗಿ ಚಂದ್ರಪ್ರಭಾ ಚಿಕ್ಕಮಗಳೂರು ನಗರದ ಸಂಚಾರಿ ಠಾಣೆಗೆ ಹಾಜರಾಗಿದ್ದಾರೆ. ಸೆ.4ರಂದು ಯುವಕ ಮಾಲ್ತೇಶ್‍ಗೆ ಅಪಘಾತ ಮಾಡಿ ಚಂದ್ರಪ್ರಭಾ ಎಸ್ಕೇಪ್ ಆಗಿದ್ದರು. ಸದ್ಯ ಅಪಘಾತಕ್ಕೀಡಾದ ಯುವಕನಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಚಂದ್ರಪ್ರಭಾ ಹಿಟ್ & ರನ್ ಕೇಸ್ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದಂತೆ ಆಕ್ಸಿಡೆಂಟ್ ಆಗಿರುವ ಯುವಕನನ್ನು ಆಸ್ಪತ್ರೆಗೆ ಸೇರಿಸಿದ್ದೇನೆ ಎಂದು ಚಂದ್ರಪ್ರಭಾ ಸುಳ್ಳು ಹೇಳಿಕೆ ನೀಡಿದ್ದರು. ಅಂದು ಒಂದು ಹೇಳಿ ಇಂದು ಚಂದ್ರಪ್ರಭಾ ಯೂಟರ್ನ್ ಹೊಡೆದಿದ್ದಾರೆ. ಅಪಘಾತದ ಬಗ್ಗೆ ಇದೀಗ ಚಿಕ್ಕಮಗಳೂರು ಠಾಣೆಯ ಎದುರು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ:ಬಾಲಿವುಡ್‌ನತ್ತ ರಿಷಬ್ ಶೆಟ್ಟಿ- ಐತಿಹಾಸಿಕ ಪಾತ್ರದಲ್ಲಿ ಕಾಂತಾರ ಶಿವ

    ನಾನು ಮಾಡಿದ ಕೆಲಸ ತಪ್ಪಾಯ್ತು ಎಲ್ಲರಿಗೂ ಕ್ಷಮೆ ಕೇಳುತ್ತೇನೆ. ಆತ ಕುಡಿದಿದ್ದ ಎಂದು ಹೇಳಿದ್ದೆ, ಮಾಲ್ತೇಶ್ ಕುಡಿದಿರಲಿಲ್ಲ. ಅಂದು ಅಪಘಾತದ ಬಳಿಕ ಯುವಕನ ಯೋಗಕ್ಷೇಮ ವಿಚಾರಿಸಬೇಕಿತ್ತು. ಈ ವಿಚಾರವಾಗಿ ಕ್ಷಮೆ ಕೇಳುತ್ತೇನೆ. ನಾನು ಬಡವ, ತಂದೆ ಸತ್ತು 11 ವರ್ಷವಾಗಿದೆ. ಆಸ್ಪತ್ರೆಗೆ ಹೋಗಿ ಯುವಕನ ಯೋಗಕ್ಷೇಮ ವಿಚಾರಿಸುತ್ತೇನೆ. ಮಾಲ್ತೇಶ್ ಆಸ್ಪತ್ರೆಯ ಖರ್ಚಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ ಎಂದು ಚಂದ್ರಪ್ರಭಾ ಮಾಧ್ಯಮಕ್ಕೆ ಮಾತನಾಡಿದ್ದಾರೆ.

    ಸೆ.4ರಂದು ಚಂದ್ರಪ್ರಭಾ ಅವರು ಯುವಕ ಮಾಲ್ತೇಶ್‍ಗೆ ಅಪಘಾತ ಮಾಡಿ ಗಾಡಿ ನಿಲ್ಲಿಸದೇ ಪರಾರಿಯಾಗಿದ್ದರು. ಅಪಘಾತಕ್ಕೀಡಾದ ಮಾಲ್ತೇಶ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಮಾನವೀಯತೆಗೂ ಚಂದ್ರಪ್ರಭಾ, ಅಪಘಾತದ ಸ್ಥಳದಲ್ಲಿ ಯುವಕನಿಗೆ ಏನಾಯ್ತು ಎಂದು ನೋಡಲು ಸಹ ಬಂದಿರಲಿಲ್ಲ. ಚಿಕ್ಕಮಗಳೂರಿನ ಸ್ಥಳಿಯ ಪೊಲೀಸ್ ಠಾಣೆಯಲ್ಲಿ ಚಂದ್ರಪ್ರಭಾ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಇಂದು (ಸೆ.8) ಚಿಕ್ಕಮಗಳೂರಿನ ಪೊಲೀಸರ ಸೂಚನೆಯ ಮೇರೆಗೆ ಅಪಘಾತವಾದ ಕಾರಿನ ಜೊತೆಯೇ ಚಂದ್ರಪ್ರಭಾ ಬಂದಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಾನವೀಯತೆಗೂ ಕಾರು ನಿಲ್ಲಸದೇ ಕಾಲ್ಕಿತ್ತ ಚಂದ್ರಪ್ರಭಾ ಬಗ್ಗೆ ಯುವಕನ ತಾಯಿ ಅಸಮಾಧಾನ

    ಮಾನವೀಯತೆಗೂ ಕಾರು ನಿಲ್ಲಸದೇ ಕಾಲ್ಕಿತ್ತ ಚಂದ್ರಪ್ರಭಾ ಬಗ್ಗೆ ಯುವಕನ ತಾಯಿ ಅಸಮಾಧಾನ

    ‘ಗಿಚ್ಚಿ ಗಿಲಿ ಗಿಲಿ’ ವಿನ್ನರ್ ಚಂದ್ರಪ್ರಭಾ (Chandraprabha) ಅವರು ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪ್ರಕರಣದ ವಿಚಾರವಾಗಿ ಸವಾರ ಮಾಲ್ತೇಶ್ ತಾಯಿ ಗಂಗಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಅಪಘಾತದ ಬಳಿಕ ಮಾನವೀಯತೆಗೂ ಕಾರು ನಿಲ್ಲಿಸದೇ ಚಂದ್ರಪ್ರಭಾ ಎಸ್ಕೇಪ್ ಆಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ನಗರದ KSRTC ನಿಲ್ದಾಣದ ಬಳಿ ಹಿಟ್ & ರನ್ ಅಪಘಾತ(Accident) ಸಂಭವಿಸಿದೆ. ಇದೀಗ ಗಂಭೀರ ಸ್ಥಿತಿಯಲ್ಲಿರುವ ಯುವಕ ಮಾಲ್ತೇಶ್ (Malthesh) ಬಗ್ಗೆ ತಾಯಿ ಕಣ್ಣೀರಿಟ್ಟಿದ್ದಾರೆ.

    ಅಪಘಾತಕ್ಕೆ ಒಳಗಾಗಿರುವ ಮಾಲ್ತೇಶ್ ಅವರ ತಾಯಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಚಿಕ್ಕಮಗಳೂರಿನ ಬಟ್ಟೆ ಅಂಗಡಿಯಲ್ಲಿ ಕಳೆದ 3 ವರ್ಷಗಳಿಂದ ಮಗ ಕೆಲಸ ಮಾಡುತ್ತಾನೆ. ಸೆ.4ರಂದು ರಾತ್ರಿ 11 ಗಂಟೆಗೆ ಚಂದ್ರಪ್ರಭಾ ಕಾರಿನಲ್ಲಿ ಮಗನ ಬೈಕ್‌ಗೆ ಗುದ್ದಿ ಹೋಗಿದ್ದಾರೆ. ಮಾನವೀಯತೆಗೂ ಏನಾಗಿದೆ ನೋಡಲು ಇದುವೆರೆಗೂ ಬಂದಿಲ್ಲ ಎಂದು ಮಾಲ್ತೇಶ್ ತಾಯಿ ಕಣ್ಣೀರಿಟ್ಟಿದ್ದಾರೆ. ಮಗ ಮಾತಾನಾಡೋಲ್ಲ, ಸದ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಾಧ್ಯಮದ ಮುಂದೆ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ:ಸನಾತನ ಧರ್ಮದ ಕುರಿತಾಗಿ ಉದಯ್‌ನಿಧಿ ಸ್ಟಾಲಿನ್‌ ಹೇಳಿಕೆಗೆ ಪ್ರಥಮ್‌ ಕಿಡಿ

    ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಚಿಕ್ಕಮಗಳೂರು ಸಮೀಪದ ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂಬುವವರು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮುಗಿಸಿ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಮಾಲ್ತೇಶ್‌ಗೆ ಏನಾಯಿತು ಎಂದು ನೋಡುವ ಸೌಜನ್ಯ ಕೂಡ ತೋರಿಲ್ಲ. ಈ ಕಾರು ಚಂದ್ರಪ್ರಭಾ ಅವರಿಗೆ ಸೇರಿದ್ದಾಗಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಸದ್ಯ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮಾಲ್ತೇಶ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರ ಆಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುಡಿದು ಬೈಕ್ ಸವಾರನೇ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ: ಚಂದ್ರಪ್ರಭಾ

    ಕುಡಿದು ಬೈಕ್ ಸವಾರನೇ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ: ಚಂದ್ರಪ್ರಭಾ

    ಚಿಕ್ಕಮಗಳೂರಿನ ಹಿಟ್ & ರನ್ ಕೇಸ್ ಬಗ್ಗೆ ಕಾಮಿಡಿ ನಟ ಚಂದ್ರಪ್ರಭಾ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಶೂಟಿಂಗ್ ಮುಗಿಸಿಕೊಂಡು ಬರುತ್ತಿದ್ದೆ, ಕುಡಿದು ಬೈಕ್ ಸವಾರನೇ ನನ್ನ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ನಾನೇ ಅವರನ್ನು ಆಸ್ಪತ್ರೆಗೆ ದಾಖಲಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ‘ಗಿಚ್ಚಿ ಗಿಲಿ ಗಿಲಿʼ (Gichchi Gili Gili Winner) ವಿನ್ನರ್ ಚಂದ್ರಪ್ರಭಾ (Chandraprabha) ಅವರು ಹಿಟ್ & ರನ್ ಕೇಸ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಅಪಘಾತ ಮಾಡಿ ಮಾನವೀಯತೆಗೂ ಕಾರು ನಿಲ್ಲಿಸದೇ ನಟ ಪರಾರಿಯಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಈ ಅಪಘಾತ ಪ್ರಕರಣ ನಡೆದಿದ್ದು, ಬೈಕ್‌ನಲ್ಲಿದ್ದ ಯುವಕ ಮಾಲ್ತೇಶ್‌ಗೆ ಗುದ್ದಿ ನಟ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿತ್ತು.

    ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಚಿಕ್ಕಮಗಳೂರು ಸಮೀಪದ ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂಬವರು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮುಗಿಸಿ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಮಾಲ್ತೇಶ್‌ಗೆ ಏನಾಯಿತು ಎಂದು ನೋಡುವ ಸೌಜನ್ಯ ಕೂಡ ತೋರಿಲ್ಲ ಎಂದು ಹೇಳಲಾಗಿತ್ತು. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ:ಸೀರಿಯಲ್ ನಿರ್ದೇಶನದತ್ತ ‌’ಚಮಕ್‌’ ಡೈರೆಕ್ಟರ್ ಸಿಂಪಲ್ ಸುನಿ

    ಸದ್ಯ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮಾಲ್ತೇಶ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರ ಆಗಿದೆ. ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಗಿಚ್ಚಿ ಗಿಲಿಗಿಲಿ’ ವೇದಿಕೆಯಲ್ಲಿ ಚಂದ್ರಪ್ರಭಾ ಮತ್ತೆ ಮದುವೆ- ಕಣ್ಣೀರಿಟ್ಟ ನಟ

    ‘ಗಿಚ್ಚಿ ಗಿಲಿಗಿಲಿ’ ವೇದಿಕೆಯಲ್ಲಿ ಚಂದ್ರಪ್ರಭಾ ಮತ್ತೆ ಮದುವೆ- ಕಣ್ಣೀರಿಟ್ಟ ನಟ

    ಜಾಭಾರತ, ಗಿಚ್ಚಿ ಗಿಲಿಗಿಲಿ ಶೋ ಮೂಲಕ ಮನೆ ಮಾತಾದ ನಟ ಚಂದ್ರಪ್ರಭಾ (Chandraprabha) ಅವರು ಇತ್ತೀಚಿಗೆ ಸೈಲೆಂಟ್‌ ಆಗಿ ಹಸೆಮಣೆ ಏರಿದ್ದರು. ತಮ್ಮ ಮದುವೆ (Wedding) ಬಗ್ಗೆ ಎಲ್ಲೂ ಹೇಳದೇ ಮುಚ್ಚಿಟ್ಟಿದ್ದಾರೆ ಎಂದು ನೆಟ್ಟಿಗರ ಕೆಂಗಣ್ಣಿಗೆ ನಟ ಗುರಿಯಾಗಿದ್ದರು. ಈಗ ತಮ್ಮ ಮದುವೆ ಬಗ್ಗೆ ಚಂದ್ರಪ್ರಭಾ ಅವರು ಮಾತನಾಡಿದ್ದಾರೆ. ‘ಗಿಚ್ಚಿ ಗಿಲಿಗಿಲಿ’ 2 (Gicchi Giligili 2) ವೇದಿಕೆಯಲ್ಲಿ ನಟ ಮತ್ತೆ ಮದುವೆಯಾಗಿದ್ದಾರೆ.

    ಕಾಮಿಡಿ ಶೋ ಕಾರ್ಯಕ್ರಮದ ಮೂಲಕ ಸ್ಪರ್ಧಿಯಾಗಿ ಅಭಿಮಾನಿಗಳನ್ನ ನಗೆಗಡಲಲ್ಲಿ ತೇಲಿಸಿದ ನಟ ಚಂದ್ರಪ್ರಭಾ ಅವರು ಕೆಲ ದಿನಗಳ ಹಿಂದೆ ಭಾರತಿ ಎಂಬುವವರನ್ನ ಮದುವೆಯಾಗಿದ್ದರು. ಸರಳವಾಗಿ ಆಪ್ತರ ಸಮ್ಮುಖದಲ್ಲಿ ಚಂದ್ರಪ್ರಭಾ ಮದುವೆ ನೆರವೇರಿತ್ತು. ಆದರೆ ತಮ್ಮ ಮದುವೆ ಬಗ್ಗೆ ಎಲ್ಲೂ ಕೂಡ ನಟ ಪೋಸ್ಟ್ ಹಾಕಿರಲಿಲ್ಲ. ಮದುವೆ ಆಗಿರುವ ಬಗ್ಗೆ ಎಲ್ಲೂ ಸುಳಿವು ನೀಡಿರಲಿಲ್ಲ. ಈ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಚಂದ್ರಪ್ರಭಾ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.

     

    View this post on Instagram

     

    A post shared by Chandraprabha G (@chandra_prabha_g)

    ಇದೀಗ ‘ಗಿಚ್ಚಿ ಗಿಲಿಗಿಲಿ 2’  ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಚಂದ್ರಪ್ರಭಾ ಅವರು ಮತ್ತೆ ಮಡದಿ ಭಾರತಿ ಪ್ರಿಯಾ (Bharathi Priya) ಜೊತೆ ಮದುವೆಯಾಗಿದ್ದಾರೆ. ನಾನು ಇಷ್ಟಪಟ್ಟ ಹುಡುಗಿ ಎಂದು ಹೇಳುವುದ್ದಕ್ಕಿಂತ, ನನ್ನನ್ನು ಹೆಚ್ಚಿಗೆ ಇಷ್ಟಪಡುತ್ತಿರುವ ವ್ಯಕ್ತಿ ಎಂದು ಹೇಳಲು ಖುಷಿಯಾಗುತ್ತದೆ. ಆಕೆಯನ್ನು ಕಣ್ಣೀರು ಹಾಕಿಸದಂತೆ ನೋಡಿಕೊಳ್ಳಬೇಕು ಅನ್ನೋದು ನನ್ನ ಆಸೆ ಎಂದು ಚಂದ್ರಪ್ರಭಾ ಮಾತನಾಡಿದ್ದಾರೆ. ಇದನ್ನೂ ಓದಿ:ಶಕುನಿ ಪಾತ್ರಧಾರಿ ಗೂಫಿ ಆರೋಗ್ಯ ಸ್ಥಿತಿ ಗಂಭೀರ

    ನಮ್ಮ ತಂದೆ ಇರಬೇಕಿತ್ತು ನನ್ನ ಮದುವೆ ನೋಡಬೇಕಿತ್ತು. ನನ್ನ ಮದುವೆ ನೋಡಿ ಸಾಯಬೇಕು ಎಂಬುದು ನನ್ನ ತಂದೆಯ ಆಸೆಯಾಗಿತ್ತು ಎಂದು ಚಂದ್ರಪ್ರಭಾ ವೇದಿಕೆಯಲ್ಲಿ ಕಣ್ಣೀರಿಟ್ಟಿದ್ದಾರೆ. ಈ ವಾಹಿನಿಯ ‘ಗಿಚ್ಚಿ ಗಿಲಿಗಿಲಿ 2’ ವಾರಾಂತ್ಯದ ಚಂದ್ರಪ್ರಭಾ ಪ್ರೋಮೋ ಇದೀಗ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಹೊಸ ಜೋಡಿಗೆ ಫ್ಯಾನ್ಸ್‌ ಶುಭಕೋರುತ್ತಿದ್ದಾರೆ.

  • ಗುಟ್ಟಾಗಿ ಹಸೆಮಣೆ ಏರಿದ ‘ಗಿಚ್ಚಿ ಗಿಲಿಗಿಲಿ’ ನಟ ಚಂದ್ರಪ್ರಭಾ

    ಗುಟ್ಟಾಗಿ ಹಸೆಮಣೆ ಏರಿದ ‘ಗಿಚ್ಚಿ ಗಿಲಿಗಿಲಿ’ ನಟ ಚಂದ್ರಪ್ರಭಾ

    ಕಿರುತೆರೆ ಜನಪ್ರಿಯ ಮಜಾಭಾರತ(Majabharatha), ಗಿಚ್ಚಿ ಗಿಲಿಗಿಲಿ, ಗಿಚ್ಚಿ ಗಿಲಿಗಿಲಿ 2, ಸೇರಿದಂತೆ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಯಾಗಿದ್ದ ಚಂದ್ರಪ್ರಭಾ (Chandraprabha) ಅವರು ಇದೀಗ ಗುಟ್ಟಾಗಿ ಮದುವೆ (Wedding) ಆಗಿದ್ದಾರೆ. ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಪ್ರಸ್ತುತ ‘ಗಿಚ್ಚಿ ಗಿಲಿಗಿಲಿ’ ಶೋನಲ್ಲಿ ಚಂದ್ರಪ್ರಭಾ ಆಕ್ಟೀವ್ ಆಗಿದ್ದಾರೆ. ವೀಕೆಂಡ್ ಮೂಡ್‌ನಲ್ಲಿರುವ ಪ್ರೇಕ್ಷಕರಿಗೆ ತಮ್ಮ ಹಾಸ್ಯದ ಮೂಲಕ ಮನರಂಜನೆ ನೀಡುತ್ತಾರೆ. ಶೋನಲ್ಲಿ ಮದುವೆಯಾಗಿಲ್ಲ ಹೆಣ್ಣು ಕೊಡಿ, ಹುಡುಗಿ ಬೇಕು ಎಂದು ಆಗಾಗ ಹೇಳುತ್ತಿದ್ದರು. ಇದನ್ನೇ ಟಾಪಿಕ್ ಆಗಿ ಮಾತನಾಡಿದ್ದರು. ಈಗ ಅವರು ಸೈಲೆಂಟ್ ಹಸೆಮಣೆ ಏರಿರೋದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ:ಕಂಗನಾ ಸಿನಿಮಾ ನೋಡಿ ಕಣ್ಣೀರಿಟ್ಟ ರಾಜಮೌಳಿ ತಂದೆ

    ಕೆಲ ದಿನಗಳ ಹಿಂದೆ ಚಂದ್ರಪ್ರಭಾ ಅವರು ಭಾರತಿ ಪ್ರಿಯಾ ಎಂಬುವವರನ್ನು ಮದುವೆಯಾಗಿದ್ದಾರೆ. ಆದರೆ ಈ ಬಗ್ಗೆ ನಟ ಯಾವುದೇ ಅಪ್‌ಡೇಟ್ ನೀಡಿಲ್ಲ. ಮದುವೆಯಾಗಿರೋದನ್ನ (Wedding) ಯಾಕೆ ಮುಚ್ಚಿಟ್ರಿ? ಹೆಂಡತಿ ಸುಂದರವಾಗಿದ್ರೂ ಯಾಕೆ ಹೆಣ್ಣು ಬೇಕು ಅಂತೀರಾ ಎಂದು ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಿಡಿಕಾರಿದ್ದಾರೆ.

    ಗುರುಹಿರಿಯರು-ಆಪ್ತರ ಸಮ್ಮುಖದಲ್ಲಿ ನಟ ಚಂದ್ರಪ್ರಭಾ ಮತ್ತು ಭಾರತಿ ಪ್ರಿಯಾ ಮದುವೆಯಾಗಿದ್ದಾರೆ. ಮದುವೆಯಾಗಿ ಒಂದು ವಾರ ಕಳೆದಿದೆ ಎಂದು ಹೇಳಲಾಗುತ್ತಿದೆ. ಎಲ್ಲದಕ್ಕೂ ಚಂದ್ರಪ್ರಭಾ ಉತ್ತರ ನೀಡುವವರೆಗೂ ಕಾದುನೋಡಬೇಕಿದೆ.