Tag: ಚಂದ್ರಯಾನ

  • ಮಂಗಳೂರಿಗೆ ಬಂದ ಚಂದ್ರಯಾನಿ- ವಿಡಿಯೋ ವೈರಲ್

    ಮಂಗಳೂರಿಗೆ ಬಂದ ಚಂದ್ರಯಾನಿ- ವಿಡಿಯೋ ವೈರಲ್

    ಮಂಗಳೂರು: ಗುಂಡಿ ಬಿದ್ದ ರಸ್ತೆಗಳನ್ನು ನೋಡಿ ರೋಸಿ ಹೋದ ತಂಡವೊಂದು ಮಂಗಳೂರಿನಲ್ಲಿ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿದೆ.

    ಚಂದ್ರನಲ್ಲಿ ಮಾನವ ಹೆಜ್ಜೆ ಇಟ್ಟ ರೀತಿಯಲ್ಲಿ ಬಾಲಕಿಯೊಬ್ಬಳು ರಾತ್ರಿ ಹೊತ್ತಿನಲ್ಲಿ ಮಾಡಿರುವ ಈ ಪ್ರತಿಭಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ಪಡೆದಿದೆ. ಆರನೇ ತರಗತಿ ವಿದ್ಯಾರ್ಥಿನಿ ಆಡ್ಲಿನ್ ಡಿಸಿಲ್ವಳನ್ನು ಚಂದ್ರಯಾನಿಗಳ ರೀತಿಯಲ್ಲಿ ಬಟ್ಟೆ ತೊಟ್ಟು ಗುಂಡಿ ಬಿದ್ದ ರಸ್ತೆಗಳಲ್ಲಿ ಪುಟ್ಟ-ಪುಟ್ಟ ಹೆಜ್ಜೆ ಇಡುವಂತೆ ಮಾಡಲಾಗಿದೆ.

    ಮಳೆಯಿಂದಾಗಿ ನಗರದ ಬಹುತೇಕ ರಸ್ತೆಗಳು ಹಾಳಾಗಿವೆ. ಆದರೂ ಮಹಾನಗರ ಪಾಲಿಕೆ ರಸ್ತೆ ದುರಸ್ತಿಗೆ ಮುಂದಾಗಿಲ್ಲ. ಇದನ್ನು ಪ್ರತಿಭಟಿಸಿ ಮತ್ತು ಸಾರ್ವಜನಿಕ ಜಾಗೃತಿಗಾಗಿ ಮಂಗಳೂರಿನ ಸಿವಿಕ್ ಗ್ರೂಪಿನ ಅರ್ಜುನ್ ಮಸ್ಕರೇನಸ್ ಮತ್ತು ಅಜಯ್ ಡಿಸಿಲ್ವ ಸೇರಿ ಈ ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ.

    ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆಯ ಬಳಿಯ ಗುಂಡಿ ಬಿದ್ದ ರಸ್ತೆಗಳಲ್ಲಿ ರಾತ್ರಿ 10ರ ಸುಮಾರಿಗೆ ಚಂದ್ರಯಾನದ ಹೆಜ್ಜೆಗಳನ್ನು ಮೂಡಿಸಿ ಚಿತ್ರೀಕರಣ ಮಾಡಲಾಗಿದೆ. ಮಂಗಳೂರಿಗೆ ಬಂದ ಚಂದ್ರಯಾನಿ ಎಂಬ ತಲೆಬರಹದಡಿ ಈ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.

  • ಮತ್ತೆ ಲ್ಯಾಂಡರ್ ಜೊತೆ ಸಂಪರ್ಕ – ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ

    ಮತ್ತೆ ಲ್ಯಾಂಡರ್ ಜೊತೆ ಸಂಪರ್ಕ – ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ

    ನವದೆಹಲಿ: ಇಸ್ರೋ ವಿಜ್ಞಾನಿಗಳು ಮತ್ತೆ ವಿಕ್ರಂ ಲ್ಯಾಂಡರ್ ಜೊತೆ ಸಂಪರ್ಕ ಸಾಧಿಸುತ್ತಾರೆ ಎಂದು ಖ್ಯಾತ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ.

    ಈ ಹಿಂದೆ ಹಲವು ವಿಚಾರಗಳನ್ನು ಮೊದಲೇ ಊಹಿಸಿ ಪ್ರಸಿದ್ಧಿ ಪಡೆದಿರುವ ಅನಿರುದ್ಧ ಕುಮಾರ್ ಮಿಶ್ರಾ ಅವರು ಈ ಭವಿಷ್ಯವನ್ನು ನುಡಿದಿದ್ದಾರೆ. ನನ್ನ ಲೆಕ್ಕಾಚಾರದ ಪ್ರಕಾರ ಸೆ.20ರ ವರೆಗೆ ವಿಕ್ರಂ ಲ್ಯಾಂಡರ್ ಜೊತೆ ಮತ್ತೆ ಸಂವಹನ ಸಾಧಿಸುವ ಸಾಧ್ಯತೆ ಹೆಚ್ಚಿದೆ. ಇಸ್ರೋ ವಿಜ್ಞಾನಿಗಳು ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯನಿರತರಾಗಿದ್ದಾರೆ. ಇವರಿಗೆ ನನ್ನ ಶುಭ ಹಾರೈಕೆಗಳು ಎಂದು ಟ್ವೀಟ್ ಮಾಡಿದ್ದಾರೆ.

    ಇವರ ಟ್ವೀಟ್ ಅನ್ನು 1 ಸಾವಿರಕ್ಕೂ ಹೆಚ್ಚು ಜನ ರೀ ಟ್ವೀಟ್ ಮಾಡಿದ್ದರೆ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಲೈಕ್ ಮಾಡಿದ್ದಾರೆ.

    https://twitter.com/Anirudh_Astro/status/1170217193809817601

    ನಿಜವಾದ ಭವಿಷ್ಯಗಳು:
    ಅಮೆರಿಕದ ದೊಡ್ಡ ಮಟ್ಟದಲ್ಲಿ ಚಂಡಮಾರುತ ಆಗಸ್ಟ್ ಕೊನೆಯಲ್ಲಿ ಬೀಸಲಿದೆ ಎಂದು ಜೂನ್ 28 ರಂದು ಭವಿಷ್ಯ ನುಡಿದಿದ್ದರು. ಈ ಭವಿಷ್ಯ ನಿಜವಾಗಿದೆ ಎಂದು ತೋರಿಸಲು ಬಹಾಮ ದ್ವೀಪದ 50 ಸಾವಿರ ಮನೆಗಳ ಪೈಕಿ ಶೇ.70 ರಷ್ಟು ಮನೆಗಳು ಜಲಾವೃತಗೊಂಡಿದೆ ಎಂಬುದನ್ನು ಬ್ಲೂಮ್ ಬರ್ಗ್ ವರದಿ ಮಾಡಿದೆ ಎಂದು ಸೆ.5 ರಂದು ಟ್ವೀಟ್ ಮಾಡಿದ್ದರು.

    ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದು ಸೋನಿಯಾ ಗಾಂಧಿ ಅವರನ್ನು ಹಂಗಾಮಿಯಾಗಿ ಮತ್ತೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಆದರೆ ಅನಿರುದ್ಧ ಕುಮಾರ್ ಅವರು 2017ರ ಅಕ್ಟೋಬರ್ ನಲ್ಲಿ, ಕಾಂಗ್ರೆಸ್ ಸದ್ಯದ ಸ್ಥಿತಿ ನೋಡಿದರೆ ಮಹಿಳೆಯರು ಅಧ್ಯಕ್ಷರಾಗುವ ಸಾಧ್ಯತೆಯಿದೆ. ನನ್ನ ಪ್ರಕಾರ ಸೋನಿಯಾ ಗಾಂಧಿಯವರೇ ಮೂರು ವರ್ಷಗಳ ಕಾಲ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು 2017ರ ಅಕ್ಟೋಬರ್ ನಲ್ಲೇ ತಿಳಿಸಿದ್ದರು.

    https://twitter.com/Anirudh_Astro/status/1160491776945221632

    ಈ ವರ್ಷದ ಜೂನ್ ತಿಂಗಳಿನಲ್ಲಿ ಅಮಿತ್ ಶಾ ಅವರ ಬಗ್ಗೆ ಭವಿಷ್ಯ ನುಡಿದಿದ್ದ ಅವರು, ಜೂನ್ 2019 ರಿಂದ ಮಾರ್ಚ್ 2020ರ ಅವಧಿ ಒಳಗಡೆ ಅಮಿತ್ ಶಾ ಪಶ್ಚಿಮ ಬಂಗಾಳ, ಕಾಶ್ಮೀರ, ನಕ್ಸಲ್ ಸಮಸ್ಯೆ ಬಗ್ಗೆ ಬಹಳ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದರು.

    https://twitter.com/Anirudh_Astro/status/1158418640523448320

    ಸದ್ಯ ಈಗ ಭಾರತದ ಆರ್ಥಿಕತೆ ಕುಸಿಯುತ್ತಿದ್ದರೂ ನವೆಂಬರ್ ಬಳಿಕ ಚೇತರಿಕೆ ಕಾಣಲಿದೆ. 2025ರ ವರೆಗೆ ಭಾರತ ಉತ್ತಮ ಪ್ರಗತಿಯನ್ನು ಕಾಣಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

    2019ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ ಪ್ರಧಾನಿಯಾಗಲಿದ್ದಾರೆ. ಬಿಜೆಪಿ ಏಕಾಂಗಿಯಾಗಿ 300ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಅನಿರುದ್ಧ ಕುಮಾರ್ ಮಿಶ್ರಾ ಭವಿಷ್ಯ ನುಡಿದಿದ್ದರು. ಆದರೆ ಈ ಬಾರಿಯ ಐಪಿಎಲ್ ಬಗ್ಗೆ ಹೇಳಿದ್ದ ಭವಿಷ್ಯ ಸುಳ್ಳಾಗಿತ್ತು. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದರು.

    https://twitter.com/Anirudh_Astro/status/1131881712055726080

    ರಾತ್ರಿ ಏನಾಯ್ತು?
    1.39ಕ್ಕೆ ಲ್ಯಾಂಡರ್ ಚಂದ್ರನತ್ತ ಇಳಿಯುವ ಕೊನೆಯ ಸಿದ್ಧತೆ ಆರಂಭಗೊಂಡಿತ್ತು. ಇಸ್ರೋ ನಿಗದಿ ಪಡಿಸಿದ ಪಥದಲ್ಲೇ ಲ್ಯಾಂಡರ್ ಚಲಿಸುತಿತ್ತು. 1.48 ಕೇವಲ 6.ಕಿ.ಮೀ ದೂರದಲ್ಲಿತ್ತು. ಕೊನೆಯ ಹಂತದಲ್ಲಿ ಲ್ಯಾಂಡರ್ ವೇಗೋತ್ಕರ್ಷವನ್ನು ಕಳೆದುಕೊಂಡಿತು. ದೊಡ್ಡ ಪರದೆಯಲ್ಲಿ ಕೆಂಪು ಬಣ್ಣದ ರೇಖೆ ಸಾಗಬೇಕಾದ ದಾರಿ ತೋರಿಸುತ್ತಿದ್ದರೆ ಹಸಿರು ಬಣ್ಣ ಟ್ರಾಜೆಕ್ಟರಿ ರೇಖೆ ಕೆಂಪು ಬಣ್ಣದ ಮೇಲೆಯೇ ಹೋಗುತಿತ್ತು. 1.55ಕ್ಕೆ ಹಸಿರು ಬಣ್ಣದ ಟ್ರಾಜೆಕ್ಟರಿ ರೇಖೆ ಕೆಂಪು ಬಣ್ಣವನ್ನು ಬಿಟ್ಟು ಬೇರೆ ಕಡೆ ಹೋಗುವುದನ್ನು ನೋಡುತ್ತಿದ್ದ ವಿಜ್ಞಾನಿಗಳು ಆಂತಕಕ್ಕೆ ಒಳಗಾದರು. ಅಲ್ಲಿಯವರೆಗೆ ಸಂಭ್ರಮದಲ್ಲೇ ಇದ್ದ ವಿಜ್ಞಾನಿಗಳು ಲ್ಯಾಂಡರಿನಿಂದ  ಬರುತ್ತಿರುವ ಸಿಗ್ನಲ್ ನೋಡಿ ಮುಖದಲ್ಲಿದ್ದ ಸಂಭ್ರಮ ಮರೆಯಾಗಿ ಆತಂಕ ಹೆಚ್ಚಾಯಿತು. ಏನು ನಡೆಯುತ್ತಿದೆ ಎನ್ನುವುದು ಯಾರಿಗೂ ತಿಳಿಯಲಿಲ್ಲ. ಕೊನೆಗೆ 2.17 ಕ್ಕೆ ಇಸ್ರೋ ಅಧ್ಯಕ್ಷ ಶಿವನ್ 2.1 ಕಿ.ಮೀ ದೂರದಲ್ಲಿದ್ದಾಗ ವಿಕ್ರಮ್ ಸಂಪರ್ಕ ಕಡಿತಗೊಂಡಿದೆ ಎಂದು ಬಹಳ ಗದ್ಗದಿತವಾಗಿ ಪ್ರಕಟಿಸಿ, ಸಂಪರ್ಕ ಸಾಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.

     

  • ತಡರಾತ್ರಿಯಿಂದ ಬೆಳಗ್ಗೆ 10 ಗಂಟೆಯವರೆಗೆ ಸಂಪರ್ಕ ಸಾಧಿಸಲು ವಿಜ್ಞಾನಿಗಳ ಶತಪ್ರಯತ್ನ

    ತಡರಾತ್ರಿಯಿಂದ ಬೆಳಗ್ಗೆ 10 ಗಂಟೆಯವರೆಗೆ ಸಂಪರ್ಕ ಸಾಧಿಸಲು ವಿಜ್ಞಾನಿಗಳ ಶತಪ್ರಯತ್ನ

    ಬೆಂಗಳೂರು: ಐತಿಹಾಸಿಕ ಸಾಧನೆ ಮಾಡಲು ಹೊರಟ್ಟಿದ್ದ ಇಸ್ರೋ ವಿಜ್ಞಾನಿಗಳು ತಡರಾತ್ರಿಯಿಂದ ಬೆಳಗ್ಗೆ 10 ಗಂಟೆಯವರೆಗೆ ಕೇಂದ್ರದಿಂದ ಕದಲದೇ ಸಂಪರ್ಕ ಸಾಧಿಸಲು ಕಸರತ್ತು ನಡೆಸುತ್ತಿದ್ದರು.

    ಹೌದು. 3.84 ಲಕ್ಷ ಕಿ.ಮೀ ಕ್ರಮಿಸಿ ಚಂದ್ರನ ಅಂಗಳ ತಲುಪಬೇಕಿದ್ದ ಲ್ಯಾಂಡರ್ ನಿಗದಿತ ಪಥದಲ್ಲೇ ಸಾಗುತಿತ್ತು. ಕೌಂಟ್ ಡೌನ್ ಆರಂಭಗೊಂಡ ಬಳಿಕ ಲ್ಯಾಂಡರ್ ನಿಗದಿತ ಪಥದಲ್ಲಿ ಹೋಗುವುದನ್ನು ಗಮನಿಸಿದ ವಿಜ್ಞಾನಿಗಳು ಸಂತೋಷದಲ್ಲಿದ್ದರು. ಆದರೆ 1.50ರ ವೇಳಗೆ ಚಂದ್ರನ ದಕ್ಷಿಣ ಧ್ರುವದಿಂದ 2.1 ಕಿ.ಮೀ ಎತ್ತರದಲ್ಲಿದ್ದಾಗ ಸಂಪರ್ಕ ಕಳೆದುಕೊಂಡಿತು.

    ತಡರಾತ್ರಿ 1.50ಕ್ಕೆ ಸಂಪರ್ಕ ಕಳೆದುಕೊಂಡರೂ ಬೆಳಗ್ಗೆ 10 ಗಂಟೆಯವರೆಗೆ ವಿಜ್ಞಾನಿಗಳು ಕೇಂದ್ರವನ್ನು ಬಿಟ್ಟು ತೆರಳದೇ ಹೇಗಾದರೂ ಮಾಡಿ ವಿಕ್ರಂ ಲ್ಯಾಂಡರ್ ಸಂಪರ್ಕ ಸಾಧಿಸಲು ಶತಪ್ರಯತ್ನ ನಡೆಸುತ್ತಿದ್ದರು. ಮುಖ್ಯವಾಗಿ ಇಸ್ರೋ ಅಧ್ಯಕ್ಷ ಕೆ. ಶಿವನ್ ಮತ್ತು ಯೋಜನಾ ನಿರ್ದೇಶಕಿ ಎಂ ವನಿತಾ, ಮಿಷನ್ ನಿರ್ದೇಶಕಿ ರಿತು ಕರಿಧಾಲ್ ಕಂಟ್ರೋಲ್ ಕೊಠಡಿಯಲ್ಲೇ ಆಶಾಭಾವನೆಯಿಂದ ಪ್ರಯತ್ನ ನಡೆಸುತ್ತಿದ್ದರು.

    ನಡೆದಿದ್ದು ಏನು?
    1.39ಕ್ಕೆ ಲ್ಯಾಂಡರ್ ಚಂದ್ರನತ್ತ ಇಳಿಯುವ ಕೊನೆಯ ಸಿದ್ಧತೆ ಆರಂಭಗೊಂಡಿತ್ತು. ಇಸ್ರೋ ನಿಗದಿ ಪಡಿಸಿದ ಪಥದಲ್ಲೇ ಲ್ಯಾಂಡರ್ ಚಲಿಸುತಿತ್ತು. 1.48 ಕೇವಲ 6.ಕಿ.ಮೀ ದೂರದಲ್ಲಿತ್ತು. ಕೊನೆಯ ಹಂತದಲ್ಲಿ ಲ್ಯಾಂಡರ್ ವೇಗೋತ್ಕರ್ಷವನ್ನು ಕಳೆದುಕೊಂಡಿತು. ದೊಡ್ಡ ಪರದೆಯಲ್ಲಿ ಕೆಂಪು ಬಣ್ಣದ ರೇಖೆ ಸಾಗಬೇಕಾದ ದಾರಿ ತೋರಿಸುತ್ತಿದ್ದರೆ ಹಸಿರು ಬಣ್ಣ ಟ್ರಾಜೆಕ್ಟರಿ ರೇಖೆ ಕೆಂಪು ಬಣ್ಣದ ಮೇಲೆಯೇ ಹೋಗುತಿತ್ತು. 1.55ಕ್ಕೆ ಹಸಿರು ಬಣ್ಣದ ಟ್ರಾಜೆಕ್ಟರಿ ರೇಖೆ ಕೆಂಪು ಬಣ್ಣವನ್ನು ಬಿಟ್ಟು ಬೇರೆ ಕಡೆ ಹೋಗುವುದನ್ನು ನೋಡುತ್ತಿದ್ದ ವಿಜ್ಞಾನಿಗಳು ಆಂತಕಕ್ಕೆ ಒಳಗಾದರು. ಅಲ್ಲಿಯವರೆಗೆ ಸಂಭ್ರಮದಲ್ಲೇ ಇದ್ದ ವಿಜ್ಞಾನಿಗಳು ಲ್ಯಾಂಡರಿನಿಂದ ಬರುತ್ತಿರುವ ಸಿಗ್ನಲ್ ನೋಡಿ ಮುಖದಲ್ಲಿದ್ದ ಸಂಭ್ರಮ ಮರೆಯಾಗಿ ಆತಂಕ ಹೆಚ್ಚಾಯಿತು. ಏನು ನಡೆಯುತ್ತಿದೆ ಎನ್ನುವುದು ಯಾರಿಗೂ ತಿಳಿಯಲಿಲ್ಲ. ಕೊನೆಗೆ 2.17 ಕ್ಕೆ ಇಸ್ರೋ ಅಧ್ಯಕ್ಷ ಶಿವನ್ 2.1 ಕಿ.ಮೀ ದೂರದಲ್ಲಿದ್ದಾಗ ವಿಕ್ರಮ್ ಸಂಪರ್ಕ ಕಡಿತಗೊಂಡಿದೆ ಎಂದು ಬಹಳ ಗದ್ಗದಿತವಾಗಿ ಪ್ರಕಟಿಸಿ, ಸಂಪರ್ಕ ಸಾಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.

    ವಿಡಿಯೋ ವೈರಲ್: ಮಂಗಳಯಾನ ಗುರಿ ಮುಟ್ಟದಕ್ಕೆ ಬೇಸರದಲ್ಲಿದ್ದ ಶಿವನ್ ಅವರನ್ನು ಪ್ರಧಾನಿ ಮೋದಿ ಸಮಾಧಾನ ಪಡಿಸುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಇಸ್ರೋ ಕಚೇರಿಯಿಂದ ಹೊರ ಬರುತ್ತಲೇ ಪ್ರಧಾನಿ ಮೋದಿ ಅವರನ್ನು ನೋಡಿ ಇಸ್ರೋ ಮುಖ್ಯಸ್ಥ ಕೆ.ಶಿವನ್ ಕಣ್ಣೀರಿಟ್ಟರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಶಿವನ್ ಅವರನ್ನು ಅಪ್ಪಿ ಬೆನ್ನು ತಟ್ಟಿ ಸಮಾಧಾನ ಪಡಿಸಿದರು.

    ನಿಮ್ಮ ಜೊತೆ ಭಾರತವಿದೆ: ಬೆಳಗ್ಗೆ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕಳೆದ ಕೆಲವು ದಿನಗಳಿಂದ ಇಸ್ರೋ ವಿಜ್ಞಾನಿಗಳು ನಿದ್ದೆ ಮಾಡಿಲ್ಲ ಎಂದು ಎಲ್ಲರಿಗೂ ಗೊತ್ತು. ಬೆಳಗ್ಗಿನ ಜಾವ ನಿಮ್ಮ ಮುಖದಲ್ಲಿ ಬೇಸರ ಭಾವ ನೋಡಿದಾಗ ಹೆಚ್ಚು ಕಾಲ ನಾನು ಅಲ್ಲಿ ಉಳಿಯಲಿಲ್ಲ. ದಿಢೀರ್ ಅಂತ ಸಂಪರ್ಕ ಕಡಿತಗೊಂಡಾಗ ನಿಮ್ಮೆಲ್ಲರ ಮುಖದಲ್ಲಿ ನಿರಾಸೆ ಮೂಡಿತು. ನಾನು ನಿಮ್ಮೆಲ್ಲರ ಮನಸ್ಸು ಅರ್ಥ ಮಾಡಿಕೊಂಡಿದ್ದೇನೆ. ಇಂದು ನಮಗೆ ಕೊನೆ ಹಂತದಲ್ಲಿ ಸಣ್ಣದೊಂದು ಅಡೆಯುಂಟಾಗಿದೆ. ಚಂದ್ರಯಾನ ಚಂದ್ರನನ್ನ ಅಪ್ಪಿಕೊಳ್ಳುವ ನಮ್ಮ ಇಚ್ಛಾಶಕ್ತಿ ಮತ್ತಷ್ಟು ಪ್ರಬಲಗೊಂಡಿದೆ. ಸಣ್ಣದೊಂದು ಅಡೆ ತಡೆಯಿಂದ ನಾವು ಹಿಂಜರಿಯದೇ ಅದರ ಪರಿಹಾರಕ್ಕಾಗಿ ಮುಂದಿನ ದಿನ ಕೆಲಸ ಮಾಡಬೇಕಿದೆ. ಕವಿಗಳು ಚಂದ್ರನ ಬಗ್ಗೆ ಹಲವು ಕವಿತೆಗಳನ್ನು ಬರೆದಿದ್ದಾರೆ. ಮುಂದಿನ ದಿನಗಳಲ್ಲಿ ಚಂದ್ರಯಾನದ ಬಗ್ಗೆ ಕವನಗಳನ್ನು ಬರೆಯಲಿದ್ದಾರೆ. ಇಸ್ರೋ ವಿಜ್ಞಾನಿಗಳ ಸಾಧನೆಯ ಬಗ್ಗೆ ನಮಗೆಲ್ಲರಿಗೂ ಇದೆ. ಚಂದ್ರನನ್ನ ಮುಟ್ಟುವ ಆಸೆ ಇನ್ನಷ್ಟು ಹೆಚ್ಚಾಗಿದೆ ಎಂದರು.

    ನಿಮ್ಮ ಕಠಿಣ ಪರಿಶ್ರಮ ಎಲ್ಲರಿಗೂ ಗೊತ್ತಿದೆ. ಹಾಗಾಗಿ ಇಡೀ ಭಾರತ ನಮ್ಮ ಇಸ್ರೋ ವಿಜ್ಞಾನಿಗಳೊಂದಿಗೆ ಇದೆ. ಅಡೆತಡೆಗಳಿಂದ ನಿಮ್ಮ ಉತ್ಸಾಹ ಹೆಚ್ಚಾಗಿದೆ. ತೊಂದರೆಗಳು ಎದುರಾಗಿವೆ ಎಂದು ಧೃತಿಗಡೆಬಾರದು. ಸತತ ಪರಿಶ್ರಮಕ್ಕೆ ಪ್ರತಿಫಲ ಸಿಗಲಿದೆ. ವಿಫಲತೆಗೆ ಎದೆಗುಂದದೆ, ಗುರಿ ತಲುಪವಲ್ಲಿ ನಮ್ಮ ಕೆಲಸ ಆರಂಭವಾಗಬೇಕಿದೆ. ನೀವು ಮಾಡಿದ್ದನ್ನು, ಇದೂವರೆಗೂ ಯಾರು ಮಾಡಿಲ್ಲ. ನಿನ್ನೆ ರಾತ್ರಿಯೂ ಹೇಳಿದಂತೆ ನಾನು ನಿಮ್ಮೊಂದಿಗಿದ್ದೇನೆ ಎಂದು ಹೇಳಲು ಇಷ್ಟಪಡುತ್ತೇನೆ ಎಂದು ಹೇಳಿದರು.

    ಪ್ರತಿ ಸೋಲು ಹೊಸದೊಂದನ್ನು ಕಲಿಸಿಕೊಡುತ್ತದೆ. ವಿಜ್ಞಾನದಲ್ಲಿ ಎಂದು ವಿಫಲತೆ ಆಗುವುದಿಲ್ಲ. ಎಲ್ಲ ಪ್ರಯೋಗಗಳು ನಮಗೆ ಹೊಸ ವಿಷಯವನ್ನು ಕಲಿಸಿಕೊಡುತ್ತೇವೆ. ಚಂದ್ರಯಾನದ ಕೊನೆಯ ಯಾನ ನಮ್ಮ ಯೋಜನೆಯಂತೆ ನಡೆಯಲಿಲ್ಲ ಎಂದು ನಿರಾಸೆಗೊಳ್ಳಬೇಡಿ. ನಮ್ಮ ಆರ್ಬಿಟರ್ ಚಂದ್ರನ ಕಕ್ಷೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಘರ್ಷ, ಸಂಕಷ್ಟಗಳೇ ಹೊಸ ಅವಿಷ್ಕಾರಕ್ಕೆ ನಾಂದಿಯಾಗಲಿದೆ. ನಿಮ್ಮೆಲ್ಲರ ದಶಕಗಳ ಪರಿಶ್ರಮದಿಂದ ಇಂದು ಸ್ಪೇಸ್ ಸೈನ್ಸ್ ನಲ್ಲಿ ನಾವು ಮೊದಲಿಗರಾಗಿದ್ದೇವೆ. ಚಂದ್ರಯಾನ-2 ಮಿಷನ್ ಕೊನೆ ಹಂತ ಬೇಸರ ತಂದಿರಬಹುದು. ಆದ್ರೆ ನಮ್ಮ ಚಂದ್ರಯಾನದ ಪ್ರಯಾಣ ಅದ್ಧೂರಿಯಾಗಿತ್ತು. ಜ್ಞಾನಕ್ಕಿಂತ ದೊಡ್ಡ ಶಿಕ್ಷಣ ವಿಜ್ಞಾನ. ಮುಂದಿನ ಎಲ್ಲ ಯೋಜನೆಗಳಿಗೆ ಶುಭವಾಗಲಿ ಎಂದು ಪ್ರಧಾನಿಗಳು ಹಾರೈಸಿದರು.

    ನನಗಿಂತ ನಿಮ್ಮ ಸಂಕಲ್ಪ ದೊಡ್ಡದಿದೆ. ಇಂದು ಬೆಳ್ಳಂಬೆಳಗ್ಗೆ ನಿಮ್ಮನ್ನು ನೋಡುವ ಮೂಲಕ ಪ್ರೇರಣೆ ಪಡೆದುಕೊಳ್ಳಲು ಬಂದಿದ್ದೇನೆ. ನಿಮ್ಮೆಲ್ಲರಿಂದ  ಪಡೆದ ಪ್ರೇರಣೆ ನಾನು ಮರೆಯಲಾರೆ. ನಿಮ್ಮ ಸಂಕಲ್ಪ, ಕೆಲಸ ಹೀಗೆ ಮುಂದುವರಿಯಲಿ ಎಂದು ಶುಭಕೋರಿದರು.

  • ಚಂದ್ರಯಾನ ವಿಶೇಷ – ಗಣೇಶನಾದ ಇಸ್ರೋ ಅಧ್ಯಕ್ಷ ಕೆ. ಶಿವನ್

    ಚಂದ್ರಯಾನ ವಿಶೇಷ – ಗಣೇಶನಾದ ಇಸ್ರೋ ಅಧ್ಯಕ್ಷ ಕೆ. ಶಿವನ್

    ಬೆಂಗಳೂರು: ನಾಡಿನೆಲ್ಲೆಡೆ ವಿಘ್ನ ವಿನಾಶಕ ವಿಘ್ನೇಶ್ವರನ ಆರಾಧನೆ ಜೋರಾಗಿ ನಡೆಯುತ್ತಿದೆ. ನಗರದಲ್ಲಿ ಒಂದಕ್ಕಿಂತ ಒಂದು ವಿಶೇಷ, ವಿಭಿನ್ನವಾದ ಗಣೇಶಗಳು ಕಣ್ಮನ ಸೆಳೆಯುತ್ತಿವೆ.

    ಅದರಲ್ಲೂ ಬೆಂಗಳೂರಿನ ಕಬ್ಬನ್ ಪೇಟೆಯ ಲಕ್ಕಿ ಬಾಯ್ಸ್ ಗಣೇಶೋತ್ಸವ ಮಂಡಳಿ ವತಿಯಿಂದ ವಿಶೇಷವಾದ ವಿನಾಯಕನನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಇಸ್ರೋದ ಮಹತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನದ ಪ್ರತಿರೂಪವಾದ ಗಣೇಶನನ್ನು ಪ್ರತಿಷ್ಠಾಪನೆ ಮಾಡಲಾಗಿದೆ.

    ಇಸ್ರೋ ಅಧ್ಯಕ್ಷ ಕೆ.ಶಿವನ್ ಗಣೇಶನ ರೂಪದಲ್ಲಿ ಕಂಗೊಳಿಸುತ್ತಿದ್ದಾರೆ. ಜೊತೆಗೆ ಚಂದ್ರನತ್ತ ಧಾವಿಸಿರುವ ಉಪಗ್ರಹವನ್ನು ಇಡಲಾಗಿದೆ. ಇದರ ಸುತ್ತ ಚಂದ್ರಯಾನದ ವಿವಿಧ ಹಂತಗಳನ್ನು ಫೋಟೋಗಳ ಮೂಲಕ ಸೆರೆ ಹಿಡಿಯಲಾಗಿದೆ. ಚಂದ್ರಯಾನಕ್ಕೆ ಯಾವುದೇ ವಿಘ್ನಗಳು ಬಾರದೇ, ಯಶಸ್ವಿಯಾಗಲೆಂದು ಗಣೇಶನ ಮೂಲಕ ಶುಭ ಹಾರೈಸುತ್ತೇವೆ ಎನ್ನುತ್ತಾರೆ ಆಯೋಜಕರು.