Tag: ಚಂದ್ರಶೇಖರ್

  • ಕುಂಟು ನೆಪ ಹೇಳಿ ಕರ್ನಾಟಕ ಐಪಿಎಸ್ ಕೇಡರ್‌ನಲ್ಲಿ ವಿಲೀನ: ಚಂದ್ರಶೇಖರ್‌ ಅಮಾನತಿಗೆ ಜೆಡಿಎಸ್‌ ದೂರು

    ಕುಂಟು ನೆಪ ಹೇಳಿ ಕರ್ನಾಟಕ ಐಪಿಎಸ್ ಕೇಡರ್‌ನಲ್ಲಿ ವಿಲೀನ: ಚಂದ್ರಶೇಖರ್‌ ಅಮಾನತಿಗೆ ಜೆಡಿಎಸ್‌ ದೂರು

    ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ವಿರುದ್ದ ಅವಹೇಳನಕಾರಿ ಪದ ಬಳಕೆ ಹಿನ್ನೆಲೆಯಲ್ಲಿ ಲೋಕಾಯುಕ್ತ ಐಜಿಪಿ, ಐಪಿಎಸ್‌ ಅಧಿಕಾರಿ ಚಂದ್ರಶೇಖರ್ (Chandrashekar) ವಿರುದ್ದ ಜೆಡಿಎಸ್ (JDS) ಶಾಸಕಾಂಗ ನಾಯಕ ಸುರೇಶ್ ಬಾಬು (Suresh Babu) ನೇತೃತ್ವದ ನಿಯೋಗ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದೆ.

    ದೂರಿನಲ್ಲಿ ಏನಿದೆ?
    ಭ್ರಷ್ಟಾಚಾರ, ದುರ್ನಡತೆ ಮತ್ತು ಸುಲಿಗೆ ಮುಂತಾದ ಕ್ರಿಮಿನಲ್ ಕೇಸುಗಳಲ್ಲಿ ಭಾಗಿಯಾಗಿರುವ ಕರ್ನಾಟಕ ಲೋಕಾಯುಕ್ತ (Lokayukta) ವಿಶೇಷ ತನಿಖಾದಳ ಮುಖ್ಯಸ್ಥ ಎಡಿಜಿಪಿ ಎಂ. ಚಂದ್ರಶೇಖರ್ ಅವರನ್ನು ಕೂಡಲೇ ಭಾರತೀಯ ಸೇವೆಯಿಂದ ಅಮಾನತುಗೊಳಿಸಬೇಕು. ಉನ್ನತ ಮಟ್ಟದ ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಕೇಡರ್ ಸೆಂಟ್ರಲ್ ಪ್ರಾಧಿಕಾರಿಯಾಗಿರುವ ಕೇಂದ್ರ ಗೃಹ ಸಚಿವಾಲಯಕ್ಕೆ ಸೂಕ್ತ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರದ ಶಿಫಾರಸ್ಸಿನೊಂದಿಗೆ ಕಳುಹಿಸಬೇಕು. ಇದನ್ನೂ ಓದಿ: ಜನಾರ್ದನ ರೆಡ್ಡಿಗೆ ಸುಪ್ರೀಂ ರಿಲೀಫ್ – ಬಳ್ಳಾರಿ ಪ್ರವೇಶಕ್ಕೆ ಗ್ರೀನ್‌ಸಿಗ್ನಲ್‌

    ಭಾರತೀಯ ಪೊಲೀಸ್ ಸೇವೆಗೆ ಸೇರಿರುವ ಚಂದ್ರಶೇಖರ್ ಕರ್ನಾಟಕ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೂಲತಃ ಹಿಮಾಚಲ ಪ್ರದೇಶ (Himachal Pradesh) ಐಪಿಎಸ್‌ ಕೇಡರ್‌ಗೆ ಸೇರಿದವರಾಗಿದ್ದಾರೆ. ತದನಂತರ ತನ್ನ ಪತ್ನಿಯ ಅನಾರೋಗ್ಯ ಮತ್ತು ಹಿಮಾಚಲ ಪ್ರದೇಶದ ವಾತಾವರಣ ಮತ್ತು ಹವಾಗುಣ ಹೊಂದುವುದಿಲ್ಲ ಎನ್ನುವ ಕುಂಟು ನೆಪ ಹೇಳಿ ಮತ್ತು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಹಾಗೂ ರಾಜಕೀಯ ಪ್ರಭಾವ ಬೀರಿ ಕರ್ನಾಟಕ ರಾಜ್ಯಕ್ಕೆ ವರ್ಗಾವಣೆಗೊಂಡು, ತದನಂತರ ಕರ್ನಾಟಕ ಐಪಿಎಸ್ ಕೇಡರ್‌ನಲ್ಲಿ ವಿಲೀನಗೊಂಡಿದ್ದಾರೆ.

    ಚಂದ್ರಶೇಖರ್‌ ವಿರುದ್ಧ ಹಲವಾರು ಕೋರ್ಟ್ ಪ್ರಕರಣಗಳಲ್ಲಿ ಇವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ. ಚಂದ್ರಶೇಖರ್‌ ಅವರೇ ಆಗಸ್ಟ್‌ 21 ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಶ್ರೀಧರ್ ವಿರುದ್ಧ ಕೇಸು ದಾಖಲಿಸಿ ಮಧ್ಯಂತರ ಆದೇಶ ಪಡೆದಿದ್ದಾರೆ.

     

    ರಾಜ್ಯದ ಪೊಲೀಸ್ ಅಧಿಕಾರಿಯ ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರ ಏನು ಕ್ರಮಕೈಗೊಂಡಿದೆ ಮತ್ತು ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ಯಾವ ವರದಿಯನ್ನು ಸಲ್ಲಿಸಿದೆ ಎನ್ನುವುದನ್ನು ಇದುವರೆಗೂ ಯಾರಿಗೂ ತಿಳಿದಿಲ್ಲ. ಹೀಗಾಗಿ ಎಂ.ಚಂದ್ರಶೇಖರ್ ರವರ ವಿರುದ್ಧ ಈ ಮೇಲೆ ತಿಳಿಸಿದಂತೆ ದಾಖಲಾಗಿರುವ ದೂರುಗಳು ಎಫ್‌ಐಆರ್‌ ಕೋರ್ಟ್ ಪ್ರಕರಣಗಳು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ರವರ ವಿರುದ್ಧ ಅವಾಚ್ಯ, ಅಸಭ್ಯ ಮತ್ತು ಅವಹೇಳನಕಾರಿ ಪದಬಳಕೆ ಮಾಡಿ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದಾರೆ. ಹೀಗಾಗಿ ಚಂದ್ರಶೇಖರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ಪೊಲೀಸ್ ಸೇವೆಯಿಂದ ಅಮಾನತುಗೊಳಿಸಿ ಇವರ ವಿರುದ್ದ ಉನ್ನತ ಮಟ್ಟದ ತನಿಖೆ ನಡೆಸಲು ಅಗತ್ಯವಿರುವ ದಾಖಲಾತಿಗಳೊಂದಿಗೆ ಭಾರತೀಯ ಪೊಲೀಸ್ ಸೇವೆಗಳ ವೃಂದದ ಪ್ರಾಧಿಕಾರವಾಗಿರುವ ಕೇಂದ್ರ ಗೃಹ ಮಂತ್ರಾಲಯಕ್ಕೆ ಪ್ರಸ್ತಾವನೆಯನ್ನು ಸೂಕ್ತ ಶಿಫಾರಸ್ಸಿನೊಂದಿಗೆ ಕಳುಹಿಸಬೇಕೆಂದು ಒತ್ತಾಯಿಸುತ್ತೇವೆ.

     

  • Valmiki Scam | ಜೈಲಿಗೆ ಹೋಗೋ ಭಯಕ್ಕೆ ಚಂದ್ರಶೇಖರ್‌ ಆತ್ಮಹತ್ಯೆ

    Valmiki Scam | ಜೈಲಿಗೆ ಹೋಗೋ ಭಯಕ್ಕೆ ಚಂದ್ರಶೇಖರ್‌ ಆತ್ಮಹತ್ಯೆ

    ಬೆಂಗಳೂರು/ಶಿವಮೊಗ್ಗ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಲೆಕ್ಕ ಪರಿಶೋಧಕ ಚಂದ್ರಶೇಖರ್ (Chandrashekar) ಆತ್ಮಹತ್ಯೆಗೆ ಆಡಳಿತ ನಿರ್ದೇಶಕ ಪದ್ಮನಾಭ್ (Padmanabh) ಮತ್ತು ಲೆಕ್ಕಾಧಿಕಾರಿ ಪರುಶರಾಮ್ (Parashuram) ಕಾರಣ ವಿಶೇಷ ತನಿಖಾ (SIT) ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.

    ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ (Shivamogga) ಜಿಲ್ಲಾಸತ್ರ ನ್ಯಾಯಾಲಯಕ್ಕೆ ಎಸ್‌ಐಟಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಆರೋಪ ಪಟ್ಟಿಯಲ್ಲಿ ನಿಗಮದ ಹಗರಣದಲ್ಲಿ ಒಂದಷ್ಟು ಹಣವನ್ನು ಚಂದ್ರಶೇಖರ್ ಪಡೆದಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಮೀಡಿಯಾ, ಸಾರ್ವಜನಿಕರು ಬೈದ್ರೂ ನೀರಿನ ದರ ಏರಿಸಿಯೇ ಏರಿಸುತ್ತೇವೆ: ಡಿಕೆಶಿ

    ಚಾರ್ಜ್‌ಶೀಟ್‌ನಲ್ಲಿ ಏನಿದೆ?
    ಚಂದ್ರಶೇಖರ್ ಅವರನ್ನು ಗೋವಾ ಮತ್ತು ಹೈದರಾಬಾದ್‌ಗೆ ಕರೆದುಕೊಂಡು ಹೋಗಿ ಪದ್ಮನಾಭ್ ಮತ್ತು ಪರಶುರಾಮ್‌ ಒತ್ತಡ ಹಾಕಿದ್ದರು. ನೀನು ಹಣವನ್ನು ಪಡೆದುಕೊಂಡಿದ್ದಿ. ಪ್ರಕರಣ ಬೆಳಕಿಗೆ ಬಂದರೆ ನೀನೊಬ್ಬನೇ ಜೈಲಿಗೆ ಹೋಗಬೇಕಾಗುತ್ತದೆ. ನಿನ್ನ ವಿರುದ್ಧ ನಾವೇ ದೂರು ಕೊಡುತ್ತೇನೆ ಎಂದು ಭಯಬೀಳಿಸಿದ್ದರು. ಜೈಲಿಗೆ ಹೋಗಬಹುದು ಎಂಬ ಭಯಕ್ಕೆ ಬಿದ್ದು ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅಂಶವನ್ನು ಉಲ್ಲೇಖಿಸಲಾಗಿದೆ.

    300 ಪುಟಗಳ ದೋಷಾರೋಪ ಪಟ್ಟಿಗೆ ಚಂದ್ರಶೇಖರ್‌ ಪತ್ನಿ ಮತ್ತು ನಿಗಮದ ಅಧಿಕಾರಿಗಳನ್ನು ಎಸ್ ಐಟಿ ಸಾಕ್ಷ್ಯವನ್ನಾಗಿ ಮಾಡಿದೆ. ಈ ಪ್ರಕರಣದಲ್ಲೂ ನಾಗೇಂದ್ರ ಅವರ ಹೆಸರನ್ನು ಎಸ್‌ಐಟಿ ಕೈ ಬಿಟ್ಟಿದೆ.

     

  • ಪವಿತ್ರಾ ಜಯರಾಮ್‌ ಸಾವಿನ ಬಳಿಕ ಖಿನ್ನತೆಗೆ ಒಳಗಾಗಿದ್ರಾ ಚಂದ್ರಕಾಂತ್‌?

    ಪವಿತ್ರಾ ಜಯರಾಮ್‌ ಸಾವಿನ ಬಳಿಕ ಖಿನ್ನತೆಗೆ ಒಳಗಾಗಿದ್ರಾ ಚಂದ್ರಕಾಂತ್‌?

    ತೆಲುಗು ನಟ ಚಂದ್ರಶೇಖರ್ (Actor Chandrashekar) ಮತ್ತು ಪವಿತ್ರಾ ಜಯರಾಮ್ (Pavithra Jayaram) ಅವರದ್ದು 5 ವರ್ಷಗಳ ಗೆಳತನ. ಅದು ಕೇವಲ ಗೆಳತನವಾಗಿ ಉಳಿದಿರಲಿಲ್ಲ. ಅಲ್ಲೊಂದು ಸಂಬಂಧವಿತ್ತು. ಮನೆಯವರ ವಿರೋಧವಿತ್ತು. ಕಾರಣ, ಇಬ್ಬರಿಗೂ ಒಂದೊಂದು ಸಂಸಾರ. ಎರಡೆರಡು ಮಕ್ಕಳು. ಇದೆಂಥ ಸಂಬಂಧ ನೈತಿಕವಾ? ಅನೈತಿಕವಾ? ಏನೇ ಇರಲಿ. ಈಗ ಆ ಸಂಬಂಧ ಹೆಣವಾಗಿದೆ. ನಟಿ ಪವಿತ್ರಾ ಜಯರಾಮ್ ಹೆಣದ ಮುಂದೆ ಕೂತು ಎದೆ ಎದೆ ಬಡಿದುಕೊಂಡಿದ್ದ ಚಂದ್ರು ಅಲಿಯಾಸ್ ಚಂದ್ರಕಾಂತ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪವಿತ್ರಾನ ಮರೆಯೋಕೆ ಆಗ್ತಿಲ್ಲ ಅಂತ ನೇಣಿಗೆ ಕೊರಳೊಡ್ಡಿದ್ದಾರೆ. ಈ ಸಾವು ಸಾವಿರ ಅನುಮಾನಗಳಿಗೆ ಕಾರಣವಾಗಿದೆ. ಸಾವಿನ ಹಿಂದಿರೋ ರಹಸ್ಯವೂ ಬಯಲಾಗಿದೆ.

    ಕನ್ನಡದ ನಟಿ ಪವಿತ್ರಾ ಜಯರಾಮ್ ಆಕ್ಸಿಡೆಂಟ್‌ನಲ್ಲಿ (Accident) ಸತ್ತಾಗ ಆಕೆಯ ಜೊತೆ ಟ್ರಾವೆಲ್ ಮಾಡ್ತಿದ್ದೋನು ಇದೇ ಚಂದ್ರು. ಅದೊಂದು ಭಯಾನಕ ಆಕ್ಸಿಡೆಂಟ್. ಕಾರಿನ ಹಿಂಬಂದಿ ಸೀಟ್‌ಲ್ಲಿ ಕೂತಿದ್ದ ಚಂದ್ರು ಬದುಕಿದ್ದ, ಪಕ್ಕದಲ್ಲೇ ಕೂತಿದ್ದ ಪವಿತ್ರಾ ಉಸಿರು ಚೆಲ್ಲಿದ್ದಳು. ನನಗಾದ ಗಾಯಕಂಡು ಪವಿತ್ರಾ ಶಾಕ್ ಆಗಿದ್ದಳು. ಸಡನ್ನಾಗಿ ಸ್ಟ್ರೋಕ್ ಆಗಿರಬೇಕು. ಅಂಬ್ಯುಲೆನ್ಸ್ ಬರೋದು ತಡವಾಯಿತು. ಬದುಕಲಿಲ್ಲ ಅಂತ ಇದೇ ಚಂದ್ರು ಹೇಳಿದ್ದ. ಪವಿತ್ರಾ ಸಾವಿಗೆ ನಾನೇ ಕಾರಣ ಅಂತ ಚಂದ್ರುಗೆ ಏನಾದ್ರೂ ಅನಿಸ್ತಾ. ಅದೇ ಆತ್ಮಹತ್ಯೆಗೆ ಕಾರಣ ಆಯ್ತಾ?

    ಪವಿತ್ರಾನ ಚಂದ್ರು ಅದೆಷ್ಟು ಪ್ರೀತಿಸ್ತಾ ಇದ್ದ ಅನ್ನೋಕೆ ಅವರೇ ಪೋಸ್ಟ್ ಮಾಡಿರೋ ವಿಡಿಯೋಗಳು ಸಾಕ್ಷಿ ಆಗುತ್ತವೆ. ಶೂಟಿಂಗ್ ಸೆಟ್, ಹೋಟೆಲ್, ಪಾರ್ಕ್, ಮನೆ ಹೀಗೆ ಸಿಕ್ಕ ಸಿಕ್ಕ ಕಡೆಯಲ್ಲ ಆತ್ಮೀಯ ಆಗಿರೋ ವಿಡಿಯೋ ಮಾಡಿದ್ದಾರೆ. ತಮ್ಮಿಬ್ಬರ ಮಧ್ಯ ಹೆಸರಿಡಲಾಗದ ಒಂದು ಸಂಬಂಧ ಇದೆ ಅಂತ ತರ‍್ಸಿದ್ದಾರೆ. ಈ ತೋರಿಕೆಯ ಹಿಂದೆಯೂ ಒಂದು ಟ್ರ್ಯಾಜಿಡಿ ಕಹಾನಿ ಇದೆ. ಅದು ಅಂತಿಂಥ ಕಹಾನಿಯಲ್ಲ, ಎರಡು ಮಕ್ಕಳ ಭವಿಷ್ಯ. ತನ್ನನ್ನೇ ನಂಬಿಕೊಂಡಿರೋ ಪತ್ನಿ. ಈಗ ಕಣ್ಣೀರು ಹಾಕ್ತಿದ್ದಾರೆ. ಇದನ್ನೂ ಓದಿ:ಚಂದ್ರಕಾಂತ್, ಪವಿತ್ರಾ ಮದುವೆ ರೂಮರ್ಸ್ ಬಗ್ಗೆ ಸ್ಪಷ್ಟನೆ ನೀಡಿದ ಪುತ್ರ

    ಚಂದ್ರುಗೆ ಈಗಾಗಲೇ ಮದುವೆ ಆಗಿತ್ತು. ಬರೋಬ್ಬರಿ ಇಪ್ಪತ್ತು ವರ್ಷಗಳ ಪ್ರೀತಿ, ಒಂಬತ್ತು ವರ್ಷಗಳ ದಾಂಪತ್ಯ. ಈ ಸಾಂಗತ್ಯಕ್ಕೆ ಜೊತೆಯಾಗಿದ್ದು ಎರಡು ಮುದ್ದಾದ ಮಕ್ಕಳು. ಪವಿತ್ರಾಗೂ ಮದುವೆ ಆಗಿದೆ. ಎರಡು ಮಕ್ಕಳಿದ್ದಾರೆ. ಗಂಡನಿಂದ ದೂರವಿದ್ದಾಕೆ ಚಂದ್ರುಗೆ ಹತ್ತಿರವಾಗೋಕೆ ಕಾರಣ ಆ ಸೀರಿಯಲ್. ಪ್ರೇಕ್ಷಕರ ಸೆಳೆಯಲು ಧಾರಾಹಿಯಲ್ಲಿ ಟ್ವಿಸ್ಟು-ಟರ್ನ್ ಇರತ್ತೆ ಸರಿ. ಆದರೆ, ಅದನ್ನೇ ಜೀವನ ಅನ್ಕೊಂಡ್ರೆ ಹೇಗೆ? ಪಾತ್ರಧಾರಿ ಆಗಬೇಕೆ ಹೊರತು ಪಾತ್ರ ಆಗಬಾರದು ಅಲ್ಲವಾ? ನಟ-ನಟಿ ಆಗಿದ್ದೋರು, ಸ್ನೇಹಿತರಾಗ್ತಾರೆ. ಆ ಸ್ನೇಹ ಒಟ್ಟಾಗಿ ಇರುವಂತೆ ಮಾಡತ್ತದೆ. ಇತ್ತ ಚಂದ್ರು ಹೆಂಡ್ತಿ, ಮಕ್ಕಳನ್ನು ತೊರೆದರೆ. ಪವಿತ್ರಾ ಕೂಡ ಒಂದೇ ಮನೆಯಲ್ಲಿ ಇರೋಕೆ ಒಪ್ಪುತ್ತಾರೆ. ಅಲ್ಲಿಂದ ಹೊಸ ಜರ್ನಿ ಶುರು ಮಾಡ್ತಾನೆ ಚಂದ್ರು.

    ಮೋಹವೇ ಹಾಗೆ.. ಅದೊಂದು ರೀತಿ ಯಡವಟ್ಟು. ಇಲಿ ಮೇಲೆ ಆನೆ ಸವಾರಿ ಮಾಡೋ ಕನಸು. ಇದು ಸಾಧ್ಯವಾ? ತಿಳಿಸಿ ಹೇಳೋರು ಯಾರು? ಆದ್ರೂ, ಹೇಳಿದ್ದಾರೆ. ನೀನು ಹೋಗ್ತಾ ಇರೋ ದಾರಿ ಸರಿ ಇಲ್ಲ ಅಂತ ತಾಯಿ ಗದರಿದ್ದಾಳೆ. ನನ್ನ ಗಂಡನ್ನ ನನಗೆ ಬಿಟ್ಟು ಕೊಡಿ ಅಂತ ಚಂದ್ರು ಹೆಂಡ್ತಿ ಉಡಿಯೊಡ್ಡಿದ್ದಾಳೆ. ತಾಯಿ ಮಾತನ್ನು ಚಂದ್ರು ಕೇಳಿಲ್ಲ. ಚಂದ್ರು ಹೆಂಡ್ತಿ ಮಾತನ್ನು ಪವಿತ್ರಾ ಕಿವಿಹಾಕ್ಕೊಂಡಿಲ್ಲ. ಈಗ ಆಗಿದ್ದೆಲ್ಲ ದುರಂತ.

     

    View this post on Instagram

     

    A post shared by Pavithra Jayaram (@pavithra_jayram_)

    ಚಂದ್ರುನ ಸರಿ ದಾರಿಗೆ ತರೋಕೆ ಏನೆಲ್ಲ ಪ್ರಯತ್ನ ಪಟ್ಟಿದ್ದಾಳೆ ಪತ್ನಿ ಶಿಲ್ಪಾ. ಐದು ವರ್ಷದಿಂದ ಕಾದಿದ್ದಾಳೆ. ಗಂಡ ಬಾರದೇ ಇದ್ದಾಗ ಪವಿತ್ರಾಗೆ ವಾರ್ನ್ ಕೂಡ ಮಾಡಿದ್ದಾಳೆ. ಏನೇ ಮಾಡಿದರೂ ಗಂಡ ಜಗ್ಗಿಲ್ಲ.. ಪವಿತ್ರಾ ಕೇರ್ ಮಾಡಿಲ್ಲ. ಈ ಜಗಳ ಅತಿರೇಕಕ್ಕೆ ಹೋದಾಗ ಪವಿತ್ರಾನೇ ನನ್ನ ಸರ್ವಸ್ವ ಅಂದಿದ್ದಾನೆ ಚಂದ್ರು. ಪವಿತ್ರಾ ಜೊತೆ ಮದುವೆ ಆಗೋದಾಗಿ ಹೇಳಿದ್ದಾನೆ. ಅಷ್ಟರ ಮಟ್ಟಿಗೆ ಈ ಸಂಬಂಧ ಗಟ್ಟಿಯಾಗಿದೆ. ಪವಿತ್ರಾ-ಚಂದ್ರು ಐದು ವರ್ಷದಿಂದ ಜೊತೆಯಲ್ಲೇ ಇದ್ದಾರೆ. ಒಂದೇ ನೆರಳಿನಲ್ಲಿ ಬದುಕ್ತಿದ್ದಾರೆ. ಕಷ್ಟ ಸುಖದಲ್ಲಿ ಭಾಗಿಯಾಗಿದ್ದಾರೆ. ಒಟ್ಟೊಟ್ಟಿಗೆ ಜರ್ನಿ ಮಾಡಿದ್ದಾರೆ. ಜಗತ್ತು ಈ ಬದುಕಿಗೊಂದು ಹೆಸರು ಕೊಟ್ಟಿದೆ. ಅದೇ ಇವತ್ತು ಚಂದ್ರು ಸಾವಿಗೆ ಕಾರಣ ಆಯ್ತಾ? ಗೊತ್ತಿಲ್ಲ. ಚಂದ್ರು ಮಾತ್ರ ಬಾರದ ಲೋಕಕ್ಕೆ ಹೋಗಿದ್ದಾನೆ. ಪವಿತ್ರಾ ಸಾವಿನ ಶಾಕ್‌ನಲ್ಲಿದ್ದವನು ಎರಡೇ ದಿನದಲ್ಲಿ ನಿನ್ನ ಬಂದು ಸರ‍್ಕೋತೀನಿ ಮಮ್ಮು ಅಂತ ಪೋಸ್ಟ್ ಮಾಡಿ ನೇಣಿಗೆ ಶರಣಾಗಿದ್ದಾನೆ.

    ಪವಿತ್ರಾ ಸಾವಿನ ನಂತರ ಚಂದ್ರು ಖಿನ್ನತೆಗೆ ಜಾರಿದ್ದ ಅಂತ ಹೇಳ್ತಿದ್ದಾರೆ ಅವರ ತಾಯಿ. ದಿನವೂ ಕುಡ್ಕೊಂಡ್ ರ‍್ತಿದ್ನಂತೆ.. ಎರಡು ದಿನದಿಂದ ಯಾರ ಫೋನ್‌ಗೂ ಸಿಕ್ಕಿಲ್ಲ. ಪವಿತ್ರಾ ಜೊತೆಗಿನ ಫೋಟೋ ಶೇರ್ ಮಾಡಿದ್ದಾನೆ. ಸಾವಿನ ಮುನ್ಸೂಚನೆ ಕೊಟ್ಟಿದ್ದಾನೆ. ಯಾವ ಮನೆಯಲ್ಲಿ ಪವಿತ್ರಾ ಜೊತೆ ವಾಸವಿದ್ನೋ.. ಅದೇ ಮನೆಯಲ್ಲಿ ಉಸಿರು ಚೆಲ್ಲಿದ್ದಾನೆ. ಮಕ್ಕಳು ಅನಾಥ ಆಗಿವೆ. ಹೆಂಡತಿ, ತಾಯಿ, ತಂಗಿ ಬೀದಿಗೆ ಬಂದಿದ್ದಾರೆ. ಪ್ರೀತಿ ಅಂದರೆ ಸಾಯೋದಲ್ಲ. ಬದುಕೋದು ಚಂದ್ರು ನಟಿಸ್ತಿದ್ದ ಯಾವ ಸೀರಿಯಲ್‌ನಲ್ಲೂ ಈ ಡೈಲಾಗ್ ಇರಲಿಲ್ಲವಾ? ಅಥವಾ ಅದು ಬರೀ ಡೈಲಾಗ್ ಅಂತ ಹೇಳ್ಬಿಟ್ಟು ಮರೆತು ಬಿಟ್ಟರಾ? ಪಾತ್ರಧಾರಿಗಳು ಪಾತ್ರವಾದ್ಮೇಲೆ. ಪ್ರೀತಿ ಅಂದರೆ ಏನು ಅಂತಾನೂ ನೆನಪಿಡಬೇಕಲ್ಲವಾ? ಇಟ್ಟಿದ್ದರೆ ಚಂದ್ರು ಬದುಕರ‍್ತಿದ್ದ ಪತ್ನಿ ಶಿಲ್ಪಾ ಕಾಯುವಿಕೆಗೆ ಅಂತ್ಯನಾದ್ರೂ ಸಿಕ್ಕಿರೋದು ಅಲ್ವೇ.

  • ಮೂವತ್ತು ಕೋಟಿ ವೆಚ್ಚದಲ್ಲಿ ತಯಾರಾಗಲಿದೆ ‘ಮದರ್ ತೆರೇಸಾ’ ವೆಬ್ ಸರಣಿ

    ಮೂವತ್ತು ಕೋಟಿ ವೆಚ್ಚದಲ್ಲಿ ತಯಾರಾಗಲಿದೆ ‘ಮದರ್ ತೆರೇಸಾ’ ವೆಬ್ ಸರಣಿ

    ಡವರು ಹಾಗೂ ದೀನದಲಿತರ ಸೇವೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದ ಮಹಿಳೆ, ಪದ್ಮಶ್ರೀ ಪುರಸ್ಕೃತೆ, ಶಾಂತಿಗಾಗಿ ನೋಬೆಲ್ ಪ್ರಶಸ್ತಿ ಪಡೆದ  ಮದರ್ ತೆರೇಸಾ (Mother Teresa)  ಅವರ ಜೀವನ ಚರಿತ್ರೆ ಇದೀಗ  ವೆಬ್ ಸರಣಿಯಲ್ಲಿ (Web Series) ಮೂಡಿಬರಲಿದೆ.  ಸಾಹಿತಿ, ಚಿತ್ರಕಥೆಗಾರ ದಿ. ಜಾನ್‌ ಪಾಲ್ ಪುತ್ತುಸ್ಸೆರಿ, ಹಾಗೂ ನಿರ್ದೇಶಕ ಪಿ. ಚಂದ್ರಕುಮಾರ್‌ ಸೇರಿ ಮೂರು ವರ್ಷಗಳಿಂದ ಇವರ ಬಗ್ಗೆ ಮಾಹಿತಿ ಕಲೆಹಾಕಿ ಈ ಸೀರೀಸ್ ಮಾಡುತ್ತಿದ್ದಾರೆ. ಮದರ್ ತೆರೇಸಾ ವೆಬ್ ಸರಣಿಯ ಶೀರ್ಷಿಕೆ ಹಾಗೂ ಬ್ಯಾನರ್ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.  ಈಗಾಗಲೇ ಮಲಯಾಳಂ ಚಿತ್ರರಂಗದಲ್ಲಿ ದೊಡ್ಡ  ಹೆಸರುವ  ಮಾಡಿರುವ  ಚಂದ್ರಶೇಖರ್ ಅವರು ಹಿಂದಿ. ಕನ್ನಡ ಸೇರಿದಂತೆ   ಬಹುಭಾಷೆಗಳಲ್ಲಿ ತಯಾರಾಗಲಿರುವ ಈ ಪ್ಯಾನ್ ಇಂಡಿಯಾ ವೆಬ್ ಸೀರೀಸ್ ನ್ನು ಸುಮಾರು 30 ಕೋಟಿ ರೂ.ಗಳ‌ ಬಿಗ್ ಬಜೆಟ್ ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ವಿಶೇಷವಾಗಿ ಈ ವೆಬ್ ಸರಣಿಯಲ್ಲಿ ಹಿರಿಯನಟ ಮಿಥುನ್ ಚಕ್ರವರ್ತಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    ಮದರ್ ತೆರೇಸಾ ಅವರ ಬಾಲ್ಯ, ಹರೆಯದ ಜೀವನ ಹೇಗಿತ್ತು. ಹಾಗೂ ಅವರ ಹಿರಿಯ ವಯಸಿನಲ್ಲಿ ನಡೆದ ಘಟನೆಗಳು, ಸಮಾಜಸೇವೆ  ಇದನ್ನೆಲ್ಲ ಈ ಪ್ಯಾನ್ ಇಂಡಿಯಾ ವೆಬ್ ಸೀರೀಸ್ ಮೂಲಕ ನಿರ್ದೇಶಕ ಚಂದ್ರಶೇಖರ್ ಹೇಳಹೊರಟಿದ್ದಾರೆ. ಮದರ್ ತೆರೇಸಾ  ಅವರು ಎಲ್ಲೆಲ್ಲಿ ಹೋಗಿದ್ದರು, ಅವರು ಹೆಜ್ಜೆ ಇಟ್ಟ ನೆಲದಲ್ಲೇ ಶೂಟಿಂಗ್ ಮಾಡಲಾಗುತ್ತಿದೆ. ಅವರು ನೆಲೆಸಿದ್ದ ರೋಮ್. ಜೆರುಸಲೆನಿಯಂ, ಟೆಥ್‌ಲೆಹೆಮ್, ಮ್ಯಾಸಿಡೋನಿಯಾ. ಯುಕೆ. ಮತ್ತು ಇಟಲಿಯಂತಹ  ಸ್ಥಳಗಳ ಜೊತೆಗೆ ಮದರ್ ತೆರೇಸಾ ಅವರ ಜೀವನದ ಮೇಲೆ ಪ್ರಭಾವ ಬೀರಿದ ಪಶ್ಚಿಮ ಬಾಂಗಾಳ, ಬಾಂಗ್ಲಾದೇಶ, ಮುಂಬೈ, ಕೇರಳ. ಬಿಹಾರ. ಕರ್ನಾಟಕ ಮುಂತಾದ ಪ್ರಮುಖ ಸ್ಥಳಗಳಲ್ಲೆ ಚಿತ್ರೀಕರಣ ನಡೆಯಲಿದೆ. ತನ್ನ19ನೇ ವಯಸಿನಲ್ಲೇ  ಚಿತ್ರರಂಗಕ್ಕೆ ಬಂದ ನಿರ್ದೇಶಕ ಪಿ. ಚಂದ್ರಕುಮಾರ್ ಅವರು ಈಗಾಗಲೇ 150ಕ್ಕೂ ಹೆಚ್ಚು ಚಲನಚಿತ್ರಗಳನ್ನು ನಿರ್ದೇಶಿಸಿ, ರಾಜ್ಯಪ್ರಶಸ್ತಿ, ರಾಷ್ಟ್ರಪ್ರಶಸ್ತಿಗಳನ್ನು ಗಳಿಸಿದ್ದಾರೆ.

    ಅವರು  ಚಿತ್ರದ ಕುರಿತಂತೆ ಮಾತನಾಡುತ್ತ  ಮದರ್ ತೆರೇಸಾ ಅವರ  ಹುಟ್ಟು,ಬಾಲ್ಯದಿಂದ ಆರಂಭಿಸಿ,ಅವರು ಭಾರತಕ್ಕೆ ಬಂದ ಮೇಲೆ ಏನೆಲ್ಲ‌ ಆಯಿತು ಅವರ ಸೋಷಿಯಲ್ ಸರ್ವೀಸ್ ಇದನ್ನೆಲ್ಲ ಇಟ್ಟುಕೊಂಡು ಸ್ಕ್ರಿಪ್ಟ್ ಹೆಣೆಯಲಾಗಿದೆ‌. ಪ್ರತಿ ಎಪಿಸೋಡಿಗೆ ಒಂದು ಕೋಟಿ ಬಜೆಟ್ ಹಾಕಿಕೊಂಡಿದ್ದೇವೆ.  ಅವರ ಹರೆಯದ ಪಾತ್ರಕ್ಕಾಗಿ ಹೊಸ ಪ್ರತಿಭೆಗಳ ಹುಡುಕಾಟ ನಡೆಯುತ್ತಿದ್ದು, ರಾಜ್ಯದಲ್ಲೂ  ಅಡಿಶನ್‌ ಮಾಡಲಾಗುತ್ತದೆ. ಹೆಸರಾಂತ ಕಲಾವಿದೆಯನ್ನು ಹಾಕಿಕೊಳ್ಳುವ ಸಲಹೆ ಬಂದರೂ ಅಂಥವರಲ್ಲಿ ತೆರೆಸಾ ಅವರನ್ನು ಕಾಣಲು ಸಾಧ್ಯವಿಲ್ಲ ಎಂದು ಹೊಸ ಮುಖಗಳನ್ನೇ ಹುಡುಕುತ್ತಿದ್ದೇವೆ. ಅವರು ಡಾರ್ಜಿರ್ಲಿಂಗ್ ನಲ್ಲಿ ಶಿಕ್ಷಕರಾಗಿ ಹೆಚ್ಚು ಕಾಲ ಕಳೆದಿದ್ದಾರೆ. ಅಲ್ಲದೆ ಅವರ ಬಗ್ಗೆ ಸಾಕಷ್ಟು ಕಾಂಟ್ರವರ್ಸಿ ಇದ್ದು, ಅದನ್ನೆಲ್ಲ ಈ  ಕಥೆಯಲ್ಲಿ ತಂದಿದ್ದೇವೆ. ತುಂಬಾ ನೈಜವಾಗಿ ಈ ಸೀರೀಸ್ ಮೂಡಿ ಬರಲಿದೆ ಎಂದರು.

     

    ನಿರ್ಮಾಪಕ ಚಂದ್ರಶೇಖರ್ ಮಾತನಾಡುತ್ತ ಈಗಾಗಲೇ ಮಲಯಾಳಂ, ತಮಿಳು, ತೆಲುಗು, ಹಿಂದಿಯಲ್ಲಿ ಹಲವಾರು  ಸಿನಿಮಾ‌ಗಳನ್ನು ನಿರ್ಮಿಸಿದ್ದು ಕನ್ನಡದಲ್ಲಿ  ಮೊದಲಬಾರಿಗೆ ಮಾಡುತ್ತಿದ್ದೇವೆ. ಯಂಗ್ ತೆರೇಸಾ ಪಾತ್ರಕ್ಕಾಗಿ ಹುಡಕಾಟ ನಡೆದಿದೆ. ನಾಲ್ಕು ವರ್ಷದ ಹಿಂದೆಯೇ ಇದರ  ಪ್ಲ್ಯಾನ್ ಮಾಡಿದ್ದೆವು. ಮೂರು ಸೀಜನ್ ನಲ್ಲಿ ಒಟ್ಟು 30 ಎಪಿಸೋಡ್ ಗಳಲ್ಲಿ ಮದರ್ ತೆರೇಸಾ ಅವರ  ಕಥೆ ಮೂಡಿಬರಲಿದೆ. ಮುಂದಿನ ತಿಂಗಳು ಚಿತ್ರೀಕರಣ ಪ್ರಾರಂಭಿಸುತ್ತಿದ್ದೇವೆ. ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಈ ಸೀರೀಸ್  ರಿಲೀಸಾಗಲಿದ್ದು, ಈ ಬಗ್ಗೆ ಮಾತುಕತೆ ಕೂಡ  ನಡೆಯುತ್ತಿದೆ. ಪತ್ರಕರ್ತರೊಬ್ಬರ ದೃಷ್ಟಿಕೋನದಲ್ಲಿ  ಮದರ್ ತೆರೆಸಾ ಅವರ ಜೀವನಗಾಥೆ  ಮೂಡಿಬರಲಿದೆ ಎಂದು ಹೇಳಿದರು. ಪಿ.ಸುಕುಮಾರ್ ಅವರ  ಛಾಯಾಗ್ರಹಣ, ಜರೀ ಅಮರದೇವ ಅವರ ಸಂಗೀತ ಇದ್ದು, ಅನಿತಾ ಮೆನ್ನನ್, ತನಿಮಾ ಮೆನ್ನನ್,  ಸಾಪಿಕೌರ್, ಜೋಷಿ ಜೋಸೆಫ್ ಪ್ರಮುಖ ತಾರಾಗಣದಲ್ಲಿದ್ದಾರೆ.

  • ಅಮೆರಿಕ ಅಧ್ಯಕ್ಷೀಯ ರೇಸ್‌ನಿಂದ ಹೊರಗುಳಿದ ಭಾರತೀಯ ಮೂಲದ ವಿವೇಕ್‌ – ಟ್ರಂಪ್‌ಗೆ ಬೆಂಬಲ

    ಅಮೆರಿಕ ಅಧ್ಯಕ್ಷೀಯ ರೇಸ್‌ನಿಂದ ಹೊರಗುಳಿದ ಭಾರತೀಯ ಮೂಲದ ವಿವೇಕ್‌ – ಟ್ರಂಪ್‌ಗೆ ಬೆಂಬಲ

    ನವದೆಹಲಿ: ಭಾರತೀಯ-ಅಮೆರಿಕನ್ ವಾಣಿಜ್ಯೋದ್ಯಮಿ ವಿವೇಕ್ ರಾಮಸ್ವಾಮಿ (Vivek Ramaswamy) ಅವರು ಯುಎಸ್ ಅಧ್ಯಕ್ಷೀಯ (US Presidential Election) ರೇಸ್‌ನಿಂದ ಹೊರಗುಳಿದಿದ್ದಾರೆ. ಇದೇ ವರ್ಷ ಯುಎಸ್‌ ಅಧ್ಯಕ್ಷೀಯ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

    ಅಯೋವಾ ರಿಪಬ್ಲಿಕನ್ ಸಭೆ ನಂತರ ಡೊನಾಲ್ಡ್ ಟ್ರಂಪ್‌ಗೆ (Donald Trump) ತಮ್ಮ ಬೆಂಬಲ ಘೋಷಿಸಿದ್ದಾರೆ. ರಾಮಸ್ವಾಮಿ ಅವರು ಫೆಬ್ರವರಿ 2023 ರಲ್ಲಿ ಯುಎಸ್‌ ಅಧ್ಯಕ್ಷೀಯ ಸ್ಥಾನಕ್ಕೆ ಸ್ಪರ್ಧಿ ಎನ್ನುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದರು. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು – ಪಾಕಿಸ್ತಾನದಲ್ಲಿ 1 ಮೊಟ್ಟೆಯ ಬೆಲೆ 33 ರೂ. – ಈರುಳ್ಳಿ ಪ್ರತಿ ಕೆಜಿಗೆ 250 ರೂ.

    ತಮ್ಮ ನಿಲುವುಗಳ ಮೂಲಕ ರಿಪಬ್ಲಿಕನ್‌ ಮತದಾರರು ಮತ್ತು ಬೆಂಬಲಿಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು. ಅವರ ಪ್ರಚಾರ ಕಾರ್ಯತಂತ್ರವು ಮಾಜಿ ಅಧ್ಯಕ್ಷ ಟ್ರಂಪ್ ಅವರ ನೀತಿಯನ್ನು ನಿಕಟವಾಗಿ ಪ್ರತಿಬಿಂಬಿಸುತ್ತದೆ. ಹಿಂದಿನ ಚುನಾವಣೆಗಳಲ್ಲಿ ಟ್ರಂಪ್ ಅವರನ್ನು ಯಶಸ್ಸಿನತ್ತ ಮುನ್ನಡೆಸಿದ್ದ ಸಂಪ್ರದಾಯವಾದಿ ವಲಯದ ಗಮನ ಸೆಳೆಯಲು ರಾಮಸ್ವಾಮಿ ಪ್ರಯತ್ನಿಸಿದ್ದರು.

    ಓಹಿಯೋ ಮೂಲದ ರಾಮಸ್ವಾಮಿ, ಕೇರಳದಿಂದ ವಲಸೆ ಹೋಗಿದ್ದ ಕುಟುಂಬವೊಂದರ ಪುತ್ರ. ಟ್ರಂಪ್ ಅವರ ಖ್ಯಾತಿಯಿಂದ ಹೆಚ್ಚು ಪ್ರಾಬಲ್ಯ ಹೊಂದಿರುವ ರಿಪಬ್ಲಿಕನ್ ಕ್ಷೇತ್ರದಲ್ಲಿ ಅನಿರೀಕ್ಷಿತ ಸ್ಪರ್ಧಿಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದರು. ಇದನ್ನೂ ಓದಿ: ಮೇಯರ್‌ ಚುನಾವಣೆ : ಮಾಲ್ಡೀವ್ಸ್‌ ಆಡಳಿತ ಪಕ್ಷಕ್ಕೆ ಹೀನಾಯ ಸೋಲು – ಭಾರತದ ಪರ ಪಕ್ಷಕ್ಕೆ ಭರ್ಜರಿ ಜಯ

    ಅಯೋವಾದಲ್ಲಿ ರಾಮಸ್ವಾಮಿ ಅವರ ವಿರುದ್ಧದ ಅಲೆಯಿದೆ. ಅಯೋವಾದಲ್ಲಿ ಇವರು ನಾಲ್ಕನೇ ಸ್ಥಾನ ಗಳಿಸಿದ್ದಾರೆ. ಸುಮಾರು 7.7% ಮತಗಳನ್ನು ಪಡೆದಿದ್ದಾರೆ.

  • ದೇಶಕ್ಕೆ ಕ್ಯಾ. ಅಬ್ದುಲ್ ಹಮೀದ್ ಅವರಂಥವರು ಬೇಕು, ಜಿನ್ನಾ ಅಲ್ಲ: ನಿತ್ಯಾನಂದ್ ರೈ

    ದೇಶಕ್ಕೆ ಕ್ಯಾ. ಅಬ್ದುಲ್ ಹಮೀದ್ ಅವರಂಥವರು ಬೇಕು, ಜಿನ್ನಾ ಅಲ್ಲ: ನಿತ್ಯಾನಂದ್ ರೈ

    ನವದೆಹಲಿ: ದೇಶಕ್ಕೆ ಕ್ಯಾಪ್ಟನ್ ಅಬ್ದುಲ್ ಹಮೀದ್ ( Captain Abdul Hamid) ಅವರಂತಹವರು ಬೇಕು, ಅಫ್ಜಲ್ ಗುರು (Afzal Guru) ಮತ್ತು ಮೊಹಮ್ಮದ್ ಅಲಿ ಜಿನ್ನಾ (Mohammad Ali Jinnah) ಅಲ್ಲ ಎಂದು ಕೇಂದ್ರ ಸಚಿವ ನಿತ್ಯಾನಂದ್ ರೈ ಹೇಳಿದ್ದಾರೆ.

    ಜನವರಿ 22ರ ರಾಮಮಂದಿರ ಶಂಕುಸ್ಥಾಪನೆ ಸಮಾರಂಭದಲ್ಲಿ ಶಿಕ್ಷಣ ಸಚಿವ ಚಂದ್ರಶೇಖರ್ ಅವರ ವಿವಾದಾತ್ಮಕ ಹೇಳಿಕೆಯ ಕುರಿತು ಬಿಜೆಪಿ ಇಂದು ಕಿಡಿಕಾರಿದೆ. ಚಂದ್ರಶೇಖರ್ (Minister Chandrashekhar) ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವರು, ಪದೇ ಪದೇ ವಿರೋಧಿಸಲು ಭಗವಾನ್ ರಾಮ ಮತ್ತು ರಾಮ ಮಂದಿರದ ಮೇಲೆ ಅವರಿಗೆ ಯಾವ ದ್ವೇಷವಿದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಅವರು ಬಾಬರ್ ಮತ್ತು ಅಫ್ಜಲ್ ಗುರುಗಳ ಚಿತ್ರಗಳನ್ನು ನೇತುಹಾಕಿ ಪೂಜಿಸುತ್ತಾರೆ. ದೇಶಕ್ಕೆ ಅಶ್ಫಾಕುಲ್ಲಾ ಖಾನ್ ಮತ್ತು ಕ್ಯಾಪ್ಟನ್ ಹಮೀದ್ ಅಗತ್ಯವಿದೆಯೇ ಹೊರತು ಬಾಬರ್, ಅಫ್ಜಲ್ ಗುರು ಅಥವಾ ಜಿನ್ನಾ ಅಲ್ಲ. ಇಲ್ಲಿ ಭಗವಾನ್ ರಾಮನ ಸಮಗ್ರತೆ ಅಗತ್ಯವಿದೆ ಎಂದು ಅವರು ಹೇಳಿದರು.

    ಇಂದು ಬೆಳಗ್ಗೆ ಬಿಹಾರ ಶಿಕ್ಷಣ ಸಚಿವ ಮತ್ತು ಆರ್‌ಜೆಡಿ ನಾಯಕ ಚಂದ್ರಶೇಖರ್, ದೇಶದಲ್ಲಿ ದೇವಾಲಯಗಳಿಗಿಂತ ಹೆಚ್ಚಿನ ಶಾಲೆಗಳ ಅಗತ್ಯವಿದೆ ಎಂದು ಹೇಳಿದರು. ಇದೇ ವೇಳೆ ಈ ತಿಂಗಳ ಕೊನೆಯಲ್ಲಿ ಅಯೋಧ್ಯೆಯಲ್ಲಿ ನಡೆಯಲಿರುವ ಸಮಾರಂಭವನ್ನು ಉಲ್ಲೇಖಿಸಿದ ಅವರು, ಗಾಯಗೊಂಡರೆ ನೀವು ಮೊದಲು ಎಲ್ಲಿಗೆ ಹೋಗುತ್ತೀರಿ? ದೇವಸ್ಥಾನ ಅಥವಾ ಆಸ್ಪತ್ರೆಯಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ದೇವಸ್ಥಾನದ ಹಾದಿ ಮಾನಸಿಕ ಗುಲಾಮಗಿರಿಯ ಹಾದಿ – ರಾಮಮಂದಿರ ಕುರಿತು ಶಿಕ್ಷಣ ಸಚಿವ ವಿವಾದಾತ್ಮಕ ಹೇಳಿಕೆ

    ನಿಮಗೆ ಶಿಕ್ಷಣ ಬೇಕು. ಅಧಿಕಾರಿ, ಶಾಸಕರು ಅಥವಾ ಸಂಸದರಾಗಲು ಬಯಸಿದರೆ, ನೀವು ದೇವಸ್ಥಾನ ಹೋಗುತ್ತೀರಾ ಅಥವಾ ಶಾಲೆಗೆ ಹೋಗುತ್ತೀರಾ?
    ದೇವಸ್ಥಾನಕ್ಕೆ ಹೋಗುವ ಹಾದಿ ಮಾನಸಿಕ ಗುಲಾಮಗಿರಿಯ ಹಾದಿಯಾಗಿದೆ. ಶಾಲೆಗಳಿಗೆ ಹೋಗುವ ಹಾದಿ ಮಾತ್ರವೇ ಬೆಳಕಿನ ಹಾದಿಯನ್ನು ಸುಗಮಗೊಳಿಸುತ್ತವೆ ಎಂದು ಹೇಳಿ, ಇದನ್ನು ನಾನು ಹೇಳಿಲ್ಲ, ಸಾವಿತ್ರಿ ಬಾಯಿ ಫುಲೆ ಅವರು ಹೇಳಿದ್ದು ಎಂದಿದ್ದಾರೆ.

    ಭಗವಾನ್ ರಾಮನು ನಮ್ಮಲ್ಲಿ ಪ್ರತಿಯೊಬ್ಬರಲ್ಲೂ ಮತ್ತು ಎಲ್ಲೆಡೆ ನೆಲೆಸಿರುವಾಗ, ಅವನನ್ನು ಹುಡುಕಲು ನೀವು ಎಲ್ಲಿಗೆ ಹೋಗುತ್ತೀರಿ ಎಂದು ಚಂದ್ರಶೇಖರ್‌ ಪ್ರಶ್ನಿಸಿದರು.

  • 1 ವರ್ಷದ ಬಳಿಕ ರೇಣುಕಾಚಾರ್ಯ ಅಣ್ಣನ ಮಗ ಸಾವು ಪ್ರಕರಣ ಮುಕ್ತಾಯ; ಅಪಘಾತದಿಂದಲೇ ಸಾವು ಎಂದು ವರದಿ

    1 ವರ್ಷದ ಬಳಿಕ ರೇಣುಕಾಚಾರ್ಯ ಅಣ್ಣನ ಮಗ ಸಾವು ಪ್ರಕರಣ ಮುಕ್ತಾಯ; ಅಪಘಾತದಿಂದಲೇ ಸಾವು ಎಂದು ವರದಿ

    ದಾವಣಗೆರೆ: ಹೊನ್ನಾಳಿ (Honnalli) ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ(MP Renukacharya) ಸಹೋದರನ ಪುತ್ರನ ಸಾವು ಪ್ರಕರಣ ಕೊನೆಗೂ ಫೈನಲ್‌ ಟಚ್‌ ಪಡೆದುಕೊಂಡಿದೆ.

    ಸುದೀರ್ಘ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಫೈನಲ್ ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ. ಇದರಿಂದ ಒಂದು ವರ್ಷಗಳ ಹಿಂದೆ ದಾವಣಗೆರೆಯಲ್ಲಿ ನಡೆದಿದ್ದ ಘಟನೆ ಕೊನೆಗೂ ಅಂತ್ಯಕಂಡಿದೆ.

    ದಾವಣಗೆರೆಯ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳ ತಂಡ ವರದಿ ಸಲ್ಲಿಕೆ ಮಾಡಿದ್ದು, ಇದು ಕೊಲೆಯಿಂದ ಸಂಭವಿಸಿರೋ ಸಾವಲ್ಲ. ಅಪಘಾತದಿಂದ ಸಂಭವಿಸಿರೋ ಸಾವು ಎಂದು ಸಿಐಡಿ ವರದಿಯಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಹಸುಗೂಸುಗಳ ಮಾರಾಟ ದಂಧೆ – ಬೃಹತ್ ಜಾಲ ಭೇದಿಸಿದ ಸಿಸಿಬಿ, 8 ಮಂದಿ ಅರೆಸ್ಟ್

    ಕಳೆದ ನವೆಂಬರ್‌ ತಿಂಗಳಲ್ಲಿ ರೇಣುಕಾಚಾರ್ಯರ ಸಹೋದರನ ಮಗ ಚಂದ್ರು ಅಲಿಯಾಸ್ ಚಂದ್ರಶೇಖರ್ (Chandrashekhar) ನಾಪತ್ತೆಯಾದ್ದರು. ಅದಾದ ಕೆಲ ದಿನಗಳಲ್ಲೇ ಚಂದ್ರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿತು. ಆಗ ರೇಣುಕಾಚಾರ್ಯ ಇದೊಂದು ಕೊಲೆ, ಉದ್ದೇಶ ಪೂರಕ ಘಟನೆಯಂತ ಹೆಚ್ಚಿನ ತನಿಖೆಗೆ ಕೇಳಿ ಪ್ರಕರಣ ಸಿಐಡಿಗೆ ನೀಡಲಾಗಿತ್ತು. ಬಳಿಕ ಸುದೀರ್ಘ ತನಿಖೆ ನಡೆಸಿದ ಸಿಐಡಿ ಪ್ರಕರಣದ ಅಂತಿಮ ಹಂತದ ವರದಿಯನ್ನು ಸಲ್ಲಿಕೆ ಮಾಡಿದೆ.

    ಎಫ್‌ಎಸ್‌ಎಲ್ ಮತ್ತು ತಾಂತ್ರಿಕ ಸಾಕ್ಷ್ಯಗಳು ಇದೊಂದು ಅಪಘಾತ ಎಂದು ವರದಿ ನೀಡಿದ್ದು, ಪ್ರಕರಣ ಸ್ಪಷ್ಟ ಕಾರಣದೊಂದಿಗೆ ಮುಕ್ತಾಯಗೊಳಿಸಿದೆ. ಇದನ್ನೂ ಓದಿ: ಅಪ್ರಾಪ್ತ ಮಗಳ ಮೇಲೆಯೇ ರೇಪ್ ಮಾಡಲು ಪ್ರೇಮಿಗೆ ಅವಕಾಶ ಕೊಟ್ಟ ಮಹಿಳೆಗೆ 40 ವರ್ಷ ಜೈಲು ಶಿಕ್ಷೆ

  • ಸೌದಿಯಲ್ಲಿ 11 ತಿಂಗಳ ಜೈಲುವಾಸದ ಬಳಿಕ ಯುವಕ ತಾಯ್ನಾಡಿಗೆ ವಾಪಸ್

    ಸೌದಿಯಲ್ಲಿ 11 ತಿಂಗಳ ಜೈಲುವಾಸದ ಬಳಿಕ ಯುವಕ ತಾಯ್ನಾಡಿಗೆ ವಾಪಸ್

    ಮಂಗಳೂರು: ತಾನು ಮಾಡದ ತಪ್ಪಿಗೆ ಸೌದಿ ಅರೇಬಿಯಾ (Saudi Arabia) ಜೈಲಿನಲ್ಲಿ 11 ತಿಂಗಳ ಕಾಲ ಸೆರೆವಾಸ ಅನುಭವಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಚಂದ್ರಶೇಖರ್ (Chandrashekhar Kadaba) ಇಂದು ತಾಯ್ನಾಡಿಗೆ ಮರಳಿದ್ದಾರೆ.

    ಕೆಲಸಕ್ಕಾಗಿ ತೆರಳಿ ಸೌದಿಯಲ್ಲಿ ನೆಲೆಸಿರುವ ಚಂದ್ರಶೇಖರ್ ಸಿಮ್ ಖರೀದಿಸಿದ್ದ ವೇಳೆ ಅವರ ಬ್ಯಾಂಕ್ ಖಾತೆ ಹ್ಯಾಕ್ ಆಗಿತ್ತು. ಹ್ಯಾಕ್ ಆಗಿದ್ದ ಖಾತೆಗೆ ಮಹಿಳೆಯೊಬ್ಬರ ಖಾತೆಯಿಂದ 22 ಸಾವಿರ ರಿಯಲ್ ಹಣ ವರ್ಗಾವಣೆ ಆಗಿತ್ತು. ಈ ವರ್ಗಾವಣೆ ಚಂದ್ರಶೇಖರ್ ಅವರೇ ಮಾಡಿದ್ದರು ಎಂದು ಅವರನ್ನು ಸೌದಿ ಅರೇಬಿಯಾ ಪೊಲೀಸರು ಬಂಧಿಸಿ ಜೈಲಿಗೆ ಹಾಕಿದ್ದರು.

    ಬಳಿಕ ಭಾರತೀಯ ವಿದೇಶಾಂಗ ಇಲಾಖೆ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ (MP Nalin Kumar Kateel) ಸೇರಿದಂತೆ ಹಲವರ ಪ್ರಯತ್ನದಿಂದ ಇದೀಗ 11 ತಿಂಗಳ ಬಳಿಕ ಚಂದ್ರಶೇಖರ್ ಬಿಡುಗಡೆಗೊಂಡಿದ್ದಾರೆ. ಇಂದು ರಿಯಾದ್ ನಿಂದ ಮುಂಬೈಗೆ ಬಂದು ಅಲ್ಲಿಂಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಹೊರಬರುತ್ತಿದ್ದಂತೆ ಚಂದ್ರಶೇಖರ್ ಭಾವುಕರಾಗಿದ್ದರು. ಈ ವೇಳೆ ಅವರ ತಾಯಿ ಹೇಮಾವತಿ ಮಗನನ್ನು ಅಪ್ಪಿ ಹಿಡಿದು ಆನಂದ ಭಾಷ್ಪ ಹರಿಸಿದರು. ಇದನ್ನೂ ಓದಿ: ಮುಸ್ಲಿಂ ಸ್ಪೀಕರ್ ಬಗೆಗಿನ ಜಮೀರ್ ಹೇಳಿಕೆಗೆ ಖಾದರ್ ಆಕ್ಷೇಪ

  • ‘ಡಾನ್ ಕುಮಾರ’ ಹೆಸರಿನಲ್ಲಿ ಮತ್ತೊಂದ ಭೂಗತ ಕಥೆ

    ‘ಡಾನ್ ಕುಮಾರ’ ಹೆಸರಿನಲ್ಲಿ ಮತ್ತೊಂದ ಭೂಗತ ಕಥೆ

    ಭೂಗತ ಲೋಕದ ಚಿತ್ರಗಳು ಸಾಕಷ್ಟು ತೆರೆಕಂಡಿವೆ. ಆ ಸಾಲಿಗೆ ’ಡಾನ್ ಕುಮಾರ’ (Don Kumar) ಸಿನಿಮಾ ಹೊಸದಾಗಿ ಸೇರ್ಪಡೆಯಾಗಿದೆ. ಈ ಚಿತ್ರಕ್ಕೆ ರಿಯಲ್ ಸ್ಟೋರಿ, ರಿಯಲ್ ಡಾನ್ ಎನ್ನುವ ಅಡಬರಹವಿದ್ದು, ಎನ್.ನಾಗೇಶ್‌ಕುಮಾರ್ (Nagesh Kumar) ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮಗನ ಸಲುವಾಗಿ ತಂದೆ ಡಿ.ಎಂ.ನರಸೇಗೌಡರು ಬಂಡವಾಳ ಹೂಡಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಟ್ರೈಲರ್  (Trailer)ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

    ನಿರ್ದೇಶಕರು ಹೇಳುವಂತೆ, ‘ನಮ್ಮ ಸಿನಿಮಾವು ರೆಗ್ಯುಲರ್ ತರಹ ಇರಲ್ಲ. ನಿರೂಪಣೆ ಎಲ್ಲವೂ ವಿಶೇಷವಾಗಿರುತ್ತದೆ. 15 ಸಾಹಸ ದೃಶ್ಯಗಳಿವೆ. ಎಲ್ಲವು ರಿಯಲ್ ಫೈಟ್ಸ್ ಆಗಿದ್ದು, ಸಾಮಾನ್ಯ ಮನುಷ್ಯ ಜಗಳವಾಡಿದರೆ ಹೇಗಿರುತ್ತೋ ಅದೇ ರೀತಿಯಲ್ಲಿ, ನಾಟಕೀಯದಂತೆ ಇರದೆ  ಸಂಯೋಜನೆ ಮಾಡಲಾಗಿದೆ. ಭೂಗತ ಲೋಕದ ಸನ್ನಿವೇಶಗಳು ಇದ್ದರೂ, ಲವ್, ರೋಮ್ಯಾನ್ಸ್, ತಂದೆ ತಾಯಿ ಸೆಂಟಿಮೆಂಟ್ ಎಲ್ಲವು ಇರಲಿದೆ. ರೌಡಿಸಂ ಯಾಕೆ ಆಗುತ್ತೆ. 1990-2000 ನಡೆದಂತಹ ಒಂದಷ್ಟು ಘಟನೆಗಳನ್ನು ಬಳಸಲಾಗಿದೆ. ಆದರೆ ಯಾವುದೇ ವ್ಯಕ್ತಿಗೆ ಅನ್ವಯಿಸುವುದಿಲ್ಲ’ ಎನ್ನುತ್ತಾರೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್

    ಶೀರ್ಷಿಕೆ ಹೆಸರಿನಲ್ಲಿ ಚಂದ್ರಶೇಖರ್ (Chandrasekhar) ನಾಯಕ. ಸಹನಾ (Sahana) ಮತ್ತು ಪ್ರಕೃತಿ (Prakruti) ನಾಯಕಿಯರು. ಐಟಂ ಹಾಡಿಗೆ ನಮೃತಾಮಲ್ಲ ಹೆಜ್ಜೆ ಹಾಕಿದ್ದಾರೆ. ಉಳಿದಂತೆ ಮಿಮಿಕ್ರಿಗೋಪಿ ಅಲ್ಲದೆ ಹೊಸ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಆರವ್‌ ಋಷಿಕ್ ಸಂಗೀತದ ಐದು ಗೀತೆಗಳಿಗೆ ಅನಿರುದ್‌ ಶಾಸ್ತ್ರಿ, ಅನುರಾಧ ಭಟ್, ನಿಮಿಕಾ ರತ್ನಾಕರ್, ಅವಿನಾಶ್‌ ಛಬ್ಬಿ ಕಂಠದಾನ ಮಾಡಿದ್ದಾರೆ.

     

    ಆನಂದ್‌ ದಿಂಡವಾರ್ ಛಾಯಾಗ್ರಹಣ, ಧನುಕುಮಾರ್ ನೃತ್ಯ, ಶ್ರೀನಿವಾಸ.ಪಿ.ಬಾಬು ಸಂಕಲನವಿದೆ. ಬೆಂಗಳೂರು, ಮೈಸೂರು, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಹಾಗೂ ಸಿಂಗಾಪುರ್ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಾಕ್ವೆಲಿನ್ ವಿದೇಶ ಪ್ರವಾಸಕ್ಕೆ ಕೋರ್ಟ್ ಅನುಮತಿ

    ಜಾಕ್ವೆಲಿನ್ ವಿದೇಶ ಪ್ರವಾಸಕ್ಕೆ ಕೋರ್ಟ್ ಅನುಮತಿ

    ಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ  ನಟಿ ಜಾಕ್ವೆಲಿನ್ ಫೆರ್ನಾಂಡಿಸ್ (Jacqueline Fernandez) ಸದ್ಯ ಜಾಮೀನ ಮೇಲೆ ಆಚೆ ಇದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರ ಮೇಲೆಯೂ ಎಫ್.ಐ.ಆರ್ ದಾಖಲಾಗಿತ್ತು. ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗವು ಜಾಕ್ವೆಲಿನ್ ಬಾಯ್ ಫ್ರೆಂಡ್ ಎಂದು ಹೇಳಲಾದ ಚಂದ್ರಶೇಖರ್ (Chandrasekhar) ನನ್ನು ಬಂಧಿಸಿ, ಜಾಕ್ವೆಲಿನ್ ಮೇಲೆಯೂ ಆರೋಪ ಮಾಡಿದ್ದರು.

    ಇದೊಂದು ಬಹುಕೋಟಿ ವಂಚನೆ ಆರೋಪವಾಗಿದ್ದರಿಂದ ವಿದೇಶಕ್ಕೆ (Abroad) ತೆರಳ ಬಾರದು ಎನ್ನುವ ಷರತ್ತೂ ಸೇರಿದಂತೆ ಹಲವು ಷರತ್ತುಗಳನ್ನು ಹಾಕಿ ಜಾಕ್ವೆಲಿನ್ ಗೆ ಜಾಮೀನು ನೀಡಿತ್ತು. ಅಲ್ಲದೇ ಪಾಸ್ ಪೋರ್ಟ್ ಕೂಡ ವಶಪಡಿಸಿಕೊಳ್ಳಲಾಗಿತ್ತು. ಇದೀಗ ಜಾಕ್ವೆಲಿನ್ ಐಐಎಫ್ಎ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹಾಜರಾಗಲು ಅಭುದಾಬಿಗೆ ಪ್ರವಾಸ ಮಾಡಬೇಕಿದೆ. ಹಾಗಾಗಿ ಅವರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ:ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಹೊಯ್ಸಳ’ ಬಲಿ- ಫ್ಯಾನ್ಸ್‌ಗೆ ಸಿಕ್ತು ಸಿಹಿಸುದ್ದಿ

    ಜಾಕ್ವೆಲಿನ್ ಮನವಿಯನ್ನು ಪುರಸ್ಕರಿಸಿರುವ ದೆಹಲಿ ನ್ಯಾಯಾಲಯವು ಮೇ 25 ರಿಂದ ಜೂನ್ 12ರವರೆಗೆ ವಿದೇಶ ಪ್ರವಾಸ ಮಾಡಲು ಅನುಮತಿ ನೀಡಿದೆ. ಈ ಸಮಯದಲ್ಲಿ ಜಾಕ್ವೆಲಿನ್ ಅಬುಧಾಬಿಯಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಇಟಲಿಯ ಮಿಲನ್ ನಲ್ಲಿ ನಡೆಯುವ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.