Tag: ಚಂದ್ರಶೇಖರ್

  • ಬಿಹಾರ ಶಿಕ್ಷಣ ಸಚಿವರ ನಾಲಿಗೆ ತಂದವರಿಗೆ 10 ಕೋಟಿ ಬಹುಮಾನ – ಅಯೋಧ್ಯೆ ಸ್ವಾಮೀಜಿ

    ಬಿಹಾರ ಶಿಕ್ಷಣ ಸಚಿವರ ನಾಲಿಗೆ ತಂದವರಿಗೆ 10 ಕೋಟಿ ಬಹುಮಾನ – ಅಯೋಧ್ಯೆ ಸ್ವಾಮೀಜಿ

    ಲಕ್ನೋ: ಹಿಂದೂ ಧಾರ್ಮಿಕ ಪಠ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ (Chandra Shekhar) ವಿರುದ್ಧ ಅಯೋಧ್ಯೆ ಸ್ವಾಮೀಜಿಗಳು, ಅರ್ಚಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಂದ್ರಶೇಖರ್‌ ನಾಲಿಗೆ ತಂದವರಿಗೆ 10 ಕೋಟಿ ರೂ. ಬಹುಮಾನ ನೀಡಲಾಗುವುದು ಎಂದು ತಪಸ್ವಿ ಚಾವ್ನಿಯ ಮಹಂತ ಪರಮಹಂಸ ದಾಸ್‌ (Mahant Paramhans Das) ತಿಳಿಸಿದ್ದಾರೆ.

    ಬುಧವಾರ ಕಾರ್ಯಕ್ರಮವೊಂದರಲ್ಲಿ ಸಚಿವ ಚಂದ್ರಶೇಖರ್‌, ಹಿಂದೂ ಗ್ರಂಥಗಳ ವಿರುದ್ಧ ಹೇಳಿಕೆ ನೀಡಿದ್ದರು. ರಾಮಚರಿತಮಾಸ (Ramcharitmanas) ಮತ್ತು ಮನುಸ್ಮೃತಿ (Manusmriti) ಸಮಾಜವನ್ನು ವಿಭಜಿಸುವ ಮತ್ತು ದ್ವೇಷವನ್ನು ಹರಡುವ ಗ್ರಂಥಗಳಾಗಿವೆ ಎಂದು ಚಂದ್ರಶೇಖರ್‌ ಮಾತನಾಡಿದ್ದರು. ಇದನ್ನೂ ಓದಿ: ರಾಮಚರಿತಮಾನಸ ಸಮಾಜದಲ್ಲಿ ದ್ವೇಷವನ್ನು ಹರಡುತ್ತದೆ – ಶಿಕ್ಷಣ ಸಚಿವ ಚಂದ್ರಶೇಖರ್ ವಿವಾದಾತ್ಮಕ ಹೇಳಿಕೆ

    ಸಚಿವರ ಹೇಳಿಕೆಗೆ ಅಯೋಧ್ಯೆ ಸ್ವಾಮೀಜಿ ದಾಸ್‌ ಅವರು ಕಿಡಿ ಕಾರಿದ್ದಾರೆ. ಚಂದ್ರಶೇಖರ್ ಅವರ ನಾಲಿಗೆ ತಂದವರಿಗೆ 10 ಕೋಟಿ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಿಸಿದ್ದಾರಲ್ಲದೇ, ಅಂತಹ ಸಚಿವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

    ಸಚಿವರ ಹೇಳಿಕೆಗೆ ರಾಮಜನ್ಮಭೂಮಿ ದೇವಸ್ಥಾನದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಯಾರೂ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: 50 ದಿನ ಟ್ರಿಪ್‌, 27 ನದಿ ಮಾರ್ಗವಾಗಿ ಯಾನ, 5 ಸ್ಟಾರ್‌ ಹೋಟೆಲ್‌ ಸಿಸ್ಟಮ್‌ – ʼಎಂವಿ ಗಂಗಾ ವಿಲಾಸ್‌ʼ ವೈಶಿಷ್ಟ್ಯ ಗೊತ್ತಾ?

    ಜಗದ್ಗುರು ಪರಮಹಂಸ ಆಚಾರ್ಯ ಅವರು ಮಾತನಾಡಿ, ಚಂದ್ರಶೇಖರ್‌ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಸಚಿವರ ಹೇಳಿಕೆಯಿಂದ ಇಡೀ ದೇಶಕ್ಕೆ ನೋವಾಗಿದೆ ಎಂದು ಬೇಸರಿಸಿದ್ದಾರೆ. ಅಲ್ಲದೇ, ರಾಮಚರಿತಮಾನಸ ಗ್ರಂಥವು ಜನಪರ ಮತ್ತು ಮಾನವೀಯತೆ ಪ್ರತಿಪಾದಿಸುವ ಆಶಯಗಳನ್ನು ಒಳಗೊಂಡಿದೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಮಚರಿತಮಾನಸ ಸಮಾಜದಲ್ಲಿ ದ್ವೇಷವನ್ನು ಹರಡುತ್ತದೆ – ಶಿಕ್ಷಣ ಸಚಿವ ಚಂದ್ರಶೇಖರ್ ವಿವಾದಾತ್ಮಕ ಹೇಳಿಕೆ

    ರಾಮಚರಿತಮಾನಸ ಸಮಾಜದಲ್ಲಿ ದ್ವೇಷವನ್ನು ಹರಡುತ್ತದೆ – ಶಿಕ್ಷಣ ಸಚಿವ ಚಂದ್ರಶೇಖರ್ ವಿವಾದಾತ್ಮಕ ಹೇಳಿಕೆ

    ಪಾಟ್ನಾ: ರಾಮಾಯಣವನ್ನು ಆಧರಿಸಿ ರಚಿತವಾದ ಹಿಂದೂ ಧಾರ್ಮಿಕ ಗ್ರಂಥ ರಾಮಚರಿತಮಾನಸವು (Ramcharitmanas) ಸಮಾಜದಲ್ಲಿ ದ್ವೇಷವನ್ನು ಹರಡುತ್ತದೆ ಎಂದು ಬಿಹಾರದ (Bihar) ಶಿಕ್ಷಣ ಸಚಿವ (Education Minister) ಚಂದ್ರಶೇಖರ್ (Chandra Shekhar) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ನಳಂದ ಮುಕ್ತ ವಿಶ್ವವಿದ್ಯಾನಿಲಯದ 15ನೇ ಘಟಿಕೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡುವ ವೇಳೆ ಚಂದ್ರಶೇಖರ್ ಈ ಹೇಳಿಕೆ ನೀಡಿದ್ದು, ಹೊಸ ವಿವಾದ ಹುಟ್ಟು ಹಾಕಿದೆ. ಸಮಾಜದ ಕೆಳವರ್ಗದವರು ಶಿಕ್ಷಣ ಪಡೆದರೆ ವಿಷಕಾರಿಯಾಗುತ್ತಾರೆ ಎಂದು ರಾಮಚರಿತಮಾನಸ ಹೇಳುತ್ತದೆ. ರಾಮಚರಿತಮಾನಸ, ಮನುಸ್ಮೃತಿ ಮತ್ತು ಎಂಎಸ್ ಗೋಲ್ವಾಲ್ಕರ್ ಅವರ ಚಿಂತನೆಗಳ ಪುಸ್ತಕಗಳು ಸಾಮಾಜಿಕ ವಿಭಜನೆಯನ್ನು ಸೃಷ್ಟಿಸಿವೆ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದರು. ಇದನ್ನೂ ಓದಿ: ಸ್ಮೂಕಿಂಗ್ ಝೋನ್ ನಿರ್ಮಿಸದ ಬೆಂಗ್ಳೂರಿನ 378 ಹೋಟೆಲ್‌ಗಳಿಗೆ BBMP ನೋಟಿಸ್‌

    ಪ್ರೀತಿ ಮತ್ತು ವಾತ್ಸಲ್ಯದಿಂದ ರಾಷ್ಟ್ರವು ಶ್ರೇಷ್ಠವಾಗುತ್ತದೆ. ರಾಮಚರಿತಮಾನಸ, ಮನುಸ್ಮೃತಿ ಮತ್ತು ಬಂಚ್ ಆಫ್ ಥಾಟ್ಸ್‌ನಂತಹ ಪುಸ್ತಕಗಳು ದ್ವೇಷ ಮತ್ತು ಸಾಮಾಜಿಕ ವಿಭಜನೆಯ ಬೀಜಗಳನ್ನು ಬಿತ್ತಿದವು. ದಲಿತರು, ಹಿಂದುಳಿದವರು ಮತ್ತು ಮಹಿಳೆಯರ ಶಿಕ್ಷಣದ ವಿರುದ್ಧ ಮಾತನಾಡುವ ರಾಮಚರಿತಮಾನದ ಭಾಗಕ್ಕೆ ಜನರು ಮನುಸ್ಮೃತಿಯನ್ನು ಸುಟ್ಟುಹಾಕಲು ಮತ್ತು ಅಪವಾದವನ್ನು ತೆಗೆದುಕೊಳ್ಳಲು ಇದೇ ಕಾರಣ, ಅವರು ಹೇಳಿದರು. ಇದನ್ನೂ ಓದಿ: ರಜಾ ದಿನಗಳಲ್ಲಿ ಸಹೋದ್ಯೋಗಿಗೆ ತೊಂದರೆ ನೀಡಿದ್ರೆ 1 ಲಕ್ಷ ದಂಡ..!

    ಸಚಿವರ ವಿವಾದಾತ್ಮಕ ಹೇಳಿಕೆಗೆ ಭಾರತೀಯ ಜನತಾ ಪಕ್ಷ ಪ್ರತಿಕ್ರಿಯಿಸಿದ್ದು, ಪಕ್ಷದ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ, ಇದು ಸಂಯೋಗ ಅಲ್ಲ ವೋಟ್‍ಬ್ಯಾಂಕ್ ಕಾ ಉದ್ಯೋಗ ಎಂದು ವ್ಯಂಗ್ಯವಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚಂದ್ರುವಿನ ದೇಹದ ಮೇಲೆ ಹಲ್ಲೆಯ ಗಾಯವಿಲ್ಲ- ರೇಣುಕಾ ತಮ್ಮನ ಮಗ ಅಪಘಾತದಲ್ಲೇ ಸಾವು?

    ಚಂದ್ರುವಿನ ದೇಹದ ಮೇಲೆ ಹಲ್ಲೆಯ ಗಾಯವಿಲ್ಲ- ರೇಣುಕಾ ತಮ್ಮನ ಮಗ ಅಪಘಾತದಲ್ಲೇ ಸಾವು?

    ದಾವಣಗೆರೆ: ಶಾಸಕ ಎಂ.ಪಿ ರೇಣುಕಾಚಾರ್ಯ (MP Renukacharya) ಸಹೋದರನ ಪುತ್ರ ಸಾವನ್ನಪ್ಪಿ 15 ದಿನ ಕಳೆಯುತ್ತಿದ್ದರೂ, ಆತನ ಸಾವಿನ ಸುತ್ತ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಸರ್ಕಾರದ ಕ್ಯಾಬಿನೆಟ್ (Cabinet) ದರ್ಜೆಯಲ್ಲಿ ಇದ್ದುಕೊಂಡು ಪೊಲೀಸರ ತನಿಖೆ ಮೇಲೆ ಅನುಮಾನ ವ್ಯಕ್ತಪಡಿಸಿ ಪೊಲೀಸರ ವಿರುದ್ಧವೇ ಸಿಡಿದಿದ್ದಾರೆ. ಚಂದ್ರುವಿನ ಮರಣೋತ್ತರ ಪರೀಕ್ಷೆ ಹಾಗೂ ಎಫ್‍ಎಸ್‍ಎಲ್ (FSL) ವರದಿಯನ್ನು ಎರಡೆರಡು ಬಾರಿ ತನಿಖೆ ನಡೆಸಿ ಅಂತಿಮ ವರದಿಗೆ ಇಡೀ ಪೊಲೀಸ್ ಇಲಾಖೆ ಕಾದು ಕುಳಿತಿದೆ.

    ಚಂದ್ರು ಸಾವು ಪೊಲೀಸ್ ಇಲಾಖೆಯ ನಿದ್ದೆಗೆಡಿಸಿದೆ. ಪ್ರಾಥಮಿಕ ತನಿಖೆಯಲ್ಲಿ ಅಪಘಾತ ಎಂದು ತಿಳಿದು ಬಂದಿದ್ದು, ಆದರೆ ರೇಣುಕಾಚಾರ್ಯ ಕುಟುಂಬಸ್ಥರು ಮಾತ್ರ ಇದು ಪೂರ್ವ ನಿಯೋಜಿತ ಕೊಲೆ ಎಂದು ಆರೋಪವನ್ನು ಮಾಡುತ್ತಿದ್ದಾರೆ. ಅಕ್ಟೋಬರ್ 30ರ ಸಂಜೆ ಹೊನ್ನಾಳಿಯ ನಿವಾಸದಿಂದ ಗೌರಿಗದ್ದೆಗೆ ಹೋಗಿ ವಿನಯ್ ಗುರೂಜಿ (Vinay Guruji) ಆಶೀರ್ವಾದ ಪಡೆದು ವಾಪಸ್ ಹೊನ್ನಾಳಿ ಕಡೆ ಹೊರಟಿದ್ದ. ಆದರೆ ಅವತ್ತೇ ನಾಪತ್ತೆಯಾಗಿದ್ದ.

    ನಾಲ್ಕು ದಿನಗಳ ನಂತರ ಹೊನ್ನಾಳಿ ಬಳಿ ಇರುವ ತುಂಗಾ ನಾಲೆಯಲ್ಲಿ ಚಂದ್ರುವಿನ ಕಾರು ಹಾಗೂ ಮೃತದೇಹ ಸಿಕ್ಕಿತು. ಆತನ ಮೃತದೇಹ ಹಿಂಬದಿ ಸೀಟ್ ನಲ್ಲಿ ಇದ್ದಿದ್ದು ಹಾಗೂ ಕೆಲ ಗಾಯದ ಗುರುತು ಇದ್ದ ಹಿನ್ನಲೆ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಹೇಳ್ತಿದ್ದಾರೆ. ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಕೂಡ ಆಗಮಿಸಿ ಪರಿಶೀಲನೆ ನಡೆಸಿ ಇದು ಪ್ರಾಥಮಿಕ ತನಿಖೆಯಲ್ಲಿ ಅಪಘಾತವಾಗಿದೆ ಎಂದು ಮಾಹಿತಿ ನೀಡಿದ್ರು. ಡಯಾಟಮ್ ಟೆಸ್ಟ್, ಎಫ್‍ಎಸ್‍ಎಲ್ ವರದಿ, ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ಮಾಹಿತಿ ಅಪಘಾತ ಎಂದು ಬಂದಿದೆ.

    ಕೈಗಳನ್ನು ಕಟ್ಟಿರೋ ಸುಳಿವಿಲ್ಲ: ಚಂದ್ರುವಿನ ತಲೆಗೆ ಬಲವಾದ ಆಯುಧದಿಂದ ಹೊಡೆದಿದ್ದಾರೆ. ಕೈ ಕಾಲುಗಳನ್ನಯ ಹಗ್ಗದಿಂದ ಕಟ್ಟಿದ್ದಾರೆ. ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಎಂದು ರೇಣುಕಾಚಾರ್ಯ ಸೇರಿದಂತೆ ಅವರ ಕುಟುಂಬಸ್ಥರು ಆರೋಪ ಮಾಡಿದ್ದರು. ಹೊನ್ನಾಳಿ ಠಾಣೆ (Honnalli Police Station) ಯಲ್ಲಿ ಐಪಿಸಿ 302 ಹಾಗೂ 201 ಅಡಿಯಲ್ಲಿ ಕೇಸ್ ಕೂಡ ದಾಖಲಾಗಿತ್ತು. ಪ್ರಾಥಮಿಕ ವರದಿಯಲ್ಲಿ ಇದು ಅಪಘಾತವೇ ಹೊರತು ಕೊಲೆ ಅಲ್ಲ. ಚಂದ್ರುವಿನ ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಅಲ್ಲದೆ ಕೈಗಳಿಗೆ ಹಗ್ಗ ಕಟ್ಟಿಲ್ಲ, ಎನ್ನುವ ಮಾಹಿತಿ ಪಬ್ಲಿಕ್ ಟಿವಿಗೆ ಉನ್ನತ ಮೂಲಗಳಿಂದ ಲಭ್ಯವಾಗಿದೆ. ಇನ್ನೊಂದು ವಾರದೊಳಗೆ ಪಿಎಂ ವರದಿ ಸೇರಿದಂತೆ ಚಂದ್ರು ಸಾವಿನ ತನಿಖಾ ವರದಿ ಸಿಗಲಿದೆ.

    ಒಟ್ಟಿನಲ್ಲಿ ಪೊಲೀಸರ ವಾದವೇ ಒಂದಾದ್ರೆ, ರೇಣುಕಾಚಾರ್ಯ ಕುಟುಂಬಸ್ಥರ ಆರೋಪವೇ ಇನ್ನೊಂದು. ವಾರದೊಳಗೆ ಪೊಲೀಸರ ಕೈಗೆ ಮರಣೋತ್ತರ ಪರೀಕ್ಷೆಯ ವರದಿ ಕೈ ಸೇರಲಿದ್ದು, ಎಲ್ಲ ಗೊಂದಲಗಳಿವೆ ತೆರೆ ಬೀಳಲಿದೆ.

    Live Tv
    [brid partner=56869869 player=32851 video=960834 autoplay=true]

  • ದಯವಿಟ್ಟು ಭಾವೋದ್ವೇಗದಿಂದ ಮಾತನಾಡಬೇಡಿ – ರೇಣುಕಾಚಾರ್ಯಗೆ ಆರಗ ಜ್ಞಾನೇಂದ್ರ ಮನವಿ

    ದಯವಿಟ್ಟು ಭಾವೋದ್ವೇಗದಿಂದ ಮಾತನಾಡಬೇಡಿ – ರೇಣುಕಾಚಾರ್ಯಗೆ ಆರಗ ಜ್ಞಾನೇಂದ್ರ ಮನವಿ

    ಬೆಂಗಳೂರು: ದಯವಿಟ್ಟು ಭಾವೋದ್ವೇಗದಿಂದ ಮಾತನಾಡಬೇಡಿ. ನೀವು ದೊಡ್ಡವರು, ಮಂತ್ರಿಯಾಗಿದ್ದವರು. ಶಾಸಕರಾಗಿ ಬಹಳ ವರ್ಷ ಕೆಲಸ ಮಾಡಿದವರು. ಇಂತಹ ದುಃಖದ ಮನೆಗಳಿಗೆ ಹೋಗಿ ಸಾಕಷ್ಟು ಬಾರಿ ಸಾಂತ್ವನ ಹೇಳಿದ್ದೀರಿ. ಭಾವೋದ್ವೇಗ ಬೇಡ ಎಂದು ಚಂದ್ರು ಅನುಮಾನಾಸ್ಪದ ಸಾವು ಪ್ರಕರಣ (Chandru Case)  ತನಿಖೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಹೊನ್ನಾಳಿ ಶಾಸಕ ರೇಣುಕಾಚಾರ್ಯ (Renukacharya) ಹೇಳಿಕೆಗೆ ಆರಗ ಜ್ಞಾನೇಂದ್ರ (Araga Jnanendra)  ಮನವಿ ಮಾಡಿಕೊಂಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಗ ತೀರಿಕೊಂಡಾಗ ಸಹಜವಾಗಿಯೇ ಭಾವಕರಾಗಿದ್ದಾರೆ. ನಾನು ಅವರ ಮನೆಗೆ ಭೇಟಿ ಕೊಟ್ಟಿದ್ದೆ. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಪೊಲೀಸರು ಪ್ರಾಮಾಣಿಕವಾಗಿ ತನಿಖೆ ಮಾಡುತ್ತಿದ್ದಾರೆ. ಪೋಸ್ಟ್ ಮಾರ್ಟಂ ರಿಪೋರ್ಟ್ ಬರಬೇಕು. ತನಿಖೆ ನಿಷ್ಪಕ್ಷಪಾತವಾಗಿ, ಪ್ರಾಮಾಣಿಕವಾಗಿ ಆಗುತ್ತದೆ. ರಿಪೋರ್ಟ್ ಬಂದ ಮೇಲೆ ಎಲ್ಲಾ ತಿಳಿಯಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಚಂದ್ರಶೇಖರ್ ಸಾವಿನ ಪ್ರಕರಣ- ಇಂದು ಹೊರಬೀಳುತ್ತಾ ಪೋಸ್ಟ್‌ ಮಾರ್ಟಂ ರಿಪೋರ್ಟ್?

    ರೇಣುಕಾಚಾರ್ಯ ಅವರು ಭಾವೋದ್ವೇಗಕ್ಕೆ ಒಳಗಾಗಿದ್ದಾರೆ. ಆ ರೀತಿ ಭಾವೋದ್ವೇಗಕ್ಕೆ ಒಳಗಾಗೋದು ಸಹಜ. ಹಾಗಂತ ಏನೇನೋ ಆಗೋದು ಬೇಡ. ಪೊಲೀಸ್ ತನಿಖೆ ಸರಿಯಾಗಿಯೇ ನಡೀತಿದೆ. ನಾನೂ ಕೂಡಾ ರೇಣುಕಾಚಾರ್ಯ ಜೊತೆ ಮಾತನಾಡುದ್ದೇನೆ. ಈ ಪ್ರಕರಣಕ್ಕೆ ಸರ್ಕಾರ ಬಹಳ ಮಹತ್ವ ಕೊಟ್ಟಿದೆ. ಎಡಿಜಿಪಿ (ADGP) ಸ್ಥಳಕ್ಕೆ ಹೋಗಿದ್ದರು. ಯಾವುದನ್ನೂ ಅವಗಣನೆ ಮಾಡಿಲ್ಲ. ರೇಣುಕಾಚಾರ್ಯ ಜಾಗದಲ್ಲಿ ಯಾರೇ ಇದ್ರೂ ಭಾವೋದ್ವೇಗಕ್ಕೆ ಹೋಗ್ತಾರೆ. ತನಿಖೆ ವಿಚಾರದಲ್ಲಿ ಯಾವುದೇ ಸಂದೇಹ ಬೇಡ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಚಂದ್ರು ದೇಹದಲ್ಲಿ ಒಳ ಉಡುಪು ಇರಲಿಲ್ಲ – ಸ್ನೇಹಿತರ ಸಲಿಂಗಕಾಮಕ್ಕೆ ಬಲಿಯಾದ್ರಾ ಯುವ ನಾಯಕ?

    ಪೊಲೀಸರು ಯಾವುದನ್ನೂ ಮುಚ್ಚಿಡ್ತಿಲ್ಲ. ಮುಚ್ಚಿಡೋದ್ರಿಂದ ಯಾರಿಗೇನು ಪ್ರಯೋಜನ ಇದೆ ಹೇಳಿ? ಯಡಿಯೂರಪ್ಪನವರೂ ಭೇಟಿ ಕೊಟ್ಟಿದ್ದರು. ಸಿಎಂ ಸಹ ಅವರ ಮನೆಗೆ ಭೇಟಿ ಕೊಡಬಹುದು. ತನಿಖೆಯ ವರದಿ ಬಂದ ಬಳಿಕ ಸತ್ಯಾಂಶ ಗೊತ್ತಾಗುತ್ತೆ ಎಂದು ತಿಳಿಸಿದ್ದಾರೆ.

    ಬಂಡೆ ಮಠದ ಸ್ವಾಮೀಜಿ (Bande Mutt Swamiji)  ಆತ್ಮಹತ್ಯೆ ಕೇಸ್ ವಿಚಾರವಾಗಿ ಮಾತನಾಡಿ, ಡೆತ್‍ನೋಟ್‍ನಲ್ಲಿ ಪ್ರಭಾವಿಗಳ ಹೆಸರು ಉಲ್ಲೇಖ ಹಿನ್ನೆಲೆ. ಪ್ರಕರಣದಲ್ಲಿ ಎಲ್ಲಾ ರೀತಿಯಿಂದಲೂ ಆಳವಾದ ತನಿಖೆ ನಡೀತಿದೆ. ತನಿಖೆಯಿಂದ ಎಲ್ಲವೂ ಹೊರಗೆ ಬರುತ್ತೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಂದ್ರು ಸಾವು ಪ್ರಕರಣದ ತನಿಖೆ ಚುರುಕು- ತನಿಖಾ ತಂಡದಿಂದ ವಿನಯ್ ಗುರೂಜಿ ಭೇಟಿ

    ಚಂದ್ರು ಸಾವು ಪ್ರಕರಣದ ತನಿಖೆ ಚುರುಕು- ತನಿಖಾ ತಂಡದಿಂದ ವಿನಯ್ ಗುರೂಜಿ ಭೇಟಿ

    ಚಿಕ್ಕಮಗಳೂರು: ಹೊನ್ನಾಳಿ ಶಾಕ ಎಂ.ಪಿ ರೇಣುಕಾಚಾರ್ಯ (MP Renukacharya) ಸಹೋದರನ ಪುತ್ರ ಚಂದ್ರಶೇಖರ್ (Chandashekhar) ಸಾವಿಗೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು, ಸಾಕಷ್ಟು ಅನುಮಾನಗಳು ಎದ್ದಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವರದಿ ಕೇಳಿದ್ದಾರೆ.

    ಸಿಎಂ ವರದಿ ಬೆನ್ನಲ್ಲೇ ತನಿಖೆ ಚುರುಕುಗೊಂಡಿದ್ದು, ತನಿಖಾ ತಂಡ ಈಗಾಗಲೇ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿರುವ ಗೌರಿಗದ್ದೆಯ ವಿನಯ್ ಗುರೂಜಿ (Vinay Guruji) ಆಶ್ರಮಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದೆ. ಚನ್ನಗಿರಿ ಪಿಎಸ್‍ಐ ನೇತೃತ್ವದ ನಾಲ್ವರ ತಂಡ ಆಶ್ರಮಕ್ಕೆ ಭೇಟಿ ಕೊಟ್ಟಿದೆ. ಪ್ರಕರಣ ಸಂಬಂಧ ಈವರೆಗೂ 4 ಬಾರಿ ಪೊಲೀಸರು ಭೇಟಿ ನೀಡಿದ್ದಾರೆ. ಆಶ್ರಮದ ಸಿಬ್ಬಂದಿ, ಉಸ್ತುವಾರಿ ವಹಿಸಿರುವ ಭಕ್ತರ ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಚಂದ್ರಶೇಖರ್ ಸಾವಿನ ಪ್ರಕರಣ- ಇಂದು ಹೊರಬೀಳುತ್ತಾ ಪೋಸ್ಟ್‌ ಮಾರ್ಟಂ ರಿಪೋರ್ಟ್?

    ಇತ್ತ ಚಂದ್ರು ಸಾವಿಗೆ ನಿಖರವಾದ ಕಾರಣ ಇಂದು ಹೊರಬೀಳುವ ಸಾಧ್ಯತೆ ಇದೆ. ಈಗಾಗಲೇ ಇದು ಕೊಲೆಯಲ್ಲ, ಅಪಘಾತದಿಂದ ಉಂಟಾದ ಸಾವು ಎಂಬುದು ಪೊಲೀಸ್ ಹಾಗೂ ಎಫ್‍ಎಸ್‍ಎಲ್ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗುತ್ತಿದೆ. ಆದರೆ ರೇಣುಕಾಚಾರ್ಯ ಕುಟುಂಬಸ್ಥರು ಮಾತ್ರ ಇದೊಂದು ಪೂರ್ವನಿಯೋಜಿತ ಕೊಲೆ ಅಂತ ಆರೋಪ ಮಾಡಿರೋದೇ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿರೋದು. ಇಂದು ಚಂದ್ರು ಪೋಸ್ಟ್‍ಮಾರ್ಟಂ ವರದಿ ಹಾಗೂ ಎಫ್‍ಎಸ್‍ಎಲ್ ರಿಪೋರ್ಟ್ ಪೊಲೀಸರ ಕೈ ಸೇರುವ ಸಾಧ್ಯತೆ ಇದೆ.

    ಈಗಾಗಲೇ ಘಟನೆ ಸಂಬಂಧ ಹೊನ್ನಾಳಿ ಪೊಲೀಸ್ ಠಾಣೆ (Honnalli Police Station) ಯಲ್ಲಿ 302 ಹಾಗೂ 201 ಕೇಸ್ ಕೂಡ ದಾಖಲಾಗಿದೆ. ಚಂದ್ರುವಿನ ಕೊಲೆಯಾಗಿದೆ, ಅಲ್ಲದೆ ಆತನನ್ನು ಕೊಲೆ ಮಾಡಿ ಸಾಕ್ಷಿ ನಾಶ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇತ್ತ ಎಫ್‍ಎಸ್‍ಎಲ್ ಅಧಿಕಾರಿಗಳ ಎರಡು ತಂಡ ಅಪಘಾತ ನಡೆದ ಹೊನ್ನಾಳಿ ಬಳಿ ಇರುವ ತುಂಗಾ ಮೇಲ್ದಂಡೆ ಕಾಲುವೆ ಬಳಿ ಪರಿಶೀಲನೆ ಮಾಡಿ ಎವಿಡೆನ್ಸ್ ಕಲೆಕ್ಟ್ ಮಾಡಿದ್ದಾರೆ. ಪೊಲೀಸರು ಕೂಡ ಟೆಕ್ನಿಕಲ್ ಎವಿಡೆನ್ಸ್ ಕೂಡ ಕಲೆಕ್ಟ್ ಮಾಡಿಲಾಗಿದ್ದು, ಇದೊಂದು ಅಪಘಾತ, ಓವರ್ ಸ್ಪೀಡ್‍ನಲ್ಲಿ ಬಂದ ಹಿನ್ನೆಲೆ ಚಾನಲ್ ನಲ್ಲಿ ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಚಂದ್ರಶೇಖರ್ ಸಾವಿನ ಪ್ರಕರಣ- ಇಂದು ಹೊರಬೀಳುತ್ತಾ ಪೋಸ್ಟ್‌ ಮಾರ್ಟಂ ರಿಪೋರ್ಟ್?

    ಚಂದ್ರಶೇಖರ್ ಸಾವಿನ ಪ್ರಕರಣ- ಇಂದು ಹೊರಬೀಳುತ್ತಾ ಪೋಸ್ಟ್‌ ಮಾರ್ಟಂ ರಿಪೋರ್ಟ್?

    ದಾವಣಗೆರೆ: ಶಾಸಕ ರೇಣುಕಾಚಾರ್ಯ (Renukacharya) ಸಹೋದರನ ಪುತ್ರನ ಸಾವು ನಾನಾ ಅನುಮಾನಗಳನ್ನು ಹುಟ್ಟಿಹಾಕಿವೆ. ಅದರಲ್ಲಿ ಆತನ ಸಾವು ಆತ್ಮಹತ್ಯೆಯೋ, ಕೊಲೆಯೋ, ಇಲ್ಲ ಆಕ್ಸಿಡೆಂಟ್ ಎನ್ನುವ ಪ್ರಶ್ನೆಗಳೇ ಹೆಚ್ಚು, ಆದರೆ ರೇಣುಕಾಚಾರ್ಯ ಸೇರಿದಂತೆ ಅವರ ಕುಟುಂಬಸ್ಥರು ಇದೊಂದು ಪೂರ್ವನಿಯೋಜಿತ ಕೊಲೆ ಎಂದು ಆರೋಪ ಮಾಡಿದ್ದಾರೆ. ಏನೇ ಆಗಲಿ ವರದಿ ಬಂದ ನಂತರ ಸತ್ಯಾಸತ್ಯತೆ ತಿಳಿಯಲಿದ್ದು. ಇಂದು ವರದಿ ಬರುವ ಸಾಧ್ಯತೆ ಇದ್ದು, ಏನಾದ್ರು ಅಪಘಾತ ಬಂತು ಎಂದರೆ ಹೆಚ್ಚಿನ ತನಿಖೆಗೆ ಒತ್ತಾಯಿಸುವ ಸಾಧ್ಯತೆ ಹೆಚ್ಚಿದೆ.

    ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರು (Chandrashekhar) ಸಾವಿನ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದೆ. ಚಂದ್ರು ಸಾವಿಗೆ ನಿಖರವಾದ ಕಾರಣ ಇಂದು ಹೊರಬೀಳುವ ಸಾಧ್ಯತೆ ಇದೆ. ಈಗಾಗ್ಲೇ ಇದು ಕೊಲೆಯಲ್ಲ, ಅಪಘಾತದಿಂದ ಉಂಟಾದ ಸಾವು ಎಂಬುದು ಪೊಲೀಸ್ ಹಾಗೂ ಎಫ್‍ಎಸ್‍ಎಲ್ (FSL) ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗುತ್ತಿದೆ. ಆದರೆ ರೇಣುಕಾಚಾರ್ಯ ಕುಟುಂಬಸ್ಥರು ಮಾತ್ರ ಇದೊಂದು ಪೂರ್ವನಿಯೋಜಿತ ಕೊಲೆ ಅಂತ ಆರೋಪ ಮಾಡಿರೋದೇ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿರೋದು. ಇಂದು ಚಂದ್ರು ಪೋಸ್ಟ್‍ಮಾರ್ಟ್‍ಂ ವರದಿ ಹಾಗೂ ಎಫ್‍ಎಸ್‍ಎಲ್ ರಿಪೋರ್ಟ್ ಪೊಲೀಸರ ಕೈ ಸೇರುವ ಸಾಧ್ಯತೆ ಇದೆ. ಇದನ್ನೂ ಓದಿ: ಚಂದ್ರು ದೇಹದಲ್ಲಿ ಒಳ ಉಡುಪು ಇರಲಿಲ್ಲ – ಸ್ನೇಹಿತರ ಸಲಿಂಗಕಾಮಕ್ಕೆ ಬಲಿಯಾದ್ರಾ ಯುವ ನಾಯಕ?

    ಈಗಾಗಲೇ ಘಟನೆ ಸಂಬಂಧ ಹೊನ್ನಾಳಿ ಪೊಲೀಸ್ ಠಾಣೆ (Honnalli Police Station) ಯಲ್ಲಿ 302 ಹಾಗೂ 201 ಕೇಸ್ ಕೂಡ ದಾಖಲಾಗಿದೆ. ಚಂದ್ರುವಿನ ಕೊಲೆಯಾಗಿದೆ, ಅಲ್ಲದೆ ಆತನನ್ನು ಕೊಲೆ ಮಾಡಿ ಸಾಕ್ಷಿ ನಾಶ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇತ್ತ ಎಫ್‍ಎಸ್‍ಎಲ್ ಅಧಿಕಾರಿಗಳ ಎರಡು ತಂಡ ಅಪಘಾತ ನಡೆದ ಹೊನ್ನಾಳಿ ಬಳಿ ಇರುವ ತುಂಗಾ ಮೇಲ್ದಂಡೆ ಕಾಲುವೆ ಬಳಿ ಪರಿಶೀಲನೆ ಮಾಡಿ ಎವಿಡೆನ್ಸ್ ಕಲೆಕ್ಟ್ ಮಾಡಿದ್ದಾರೆ. ಪೊಲೀಸರು ಕೂಡ ಟೆಕ್ನಿಕಲ್ ಎವಿಡೆನ್ಸ್ ಕೂಡ ಕಲೆಕ್ಟ್ ಮಾಡಿಲಾಗಿದ್ದು, ಇದೊಂದು ಅಪಘಾತ, ಓವರ್ ಸ್ಪೀಡ್‍ನಲ್ಲಿ ಬಂದ ಹಿನ್ನೆಲೆ ಚಾನಲ್ ನಲ್ಲಿ ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

    ಶಾಸಕ ರೇಣುಕಾಚಾರ್ಯ ಮಾತ್ರ ಇದೊಂದು ಪ್ರೀ ಪ್ಲಾನ್ ಮರ್ಡರ್ ಎಂದು ಆರೋಪ ಮಾಡುತ್ತಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ಇದನ್ನು ಅಪಘಾತ ಎಂದು ಪರಿಗಣಿಸಿದ್ದು, ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ತನಿಖೆ ನಡೆಸುವವರು ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕು. ಅದನ್ನು ಬಿಟ್ಟು ತನಿಖೆ ಪ್ರಗತಿಯಲ್ಲಿ ಇರುವಾಗ ಮಾಧ್ಯಮಗಳ ಮುಂದೆ ಇದೊಂದು ಅಪಘಾತ ಆಗಿರಬಹುದು ಎಂದು ಹೇಳಿದ್ದಾರೆ. ಇದರಿಂದ ಆರೋಪಿಗಳನ್ನು ತಪ್ಪಿಸುವ ಕೆಲಸ ಮಾಡುತ್ತಿದ್ದರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ಮರಣೋತ್ತರ ಪರೀಕ್ಷಾ ವರದಿಯಲ್ಲಿ ಅಪಘಾತ ಎಂದು ಬಂದರೆ, ಉನ್ನತ ತನಿಖೆಗೆ ಒತ್ತಾಯಿಸುವ ಎಲ್ಲಾ ಸಿದ್ಧತೆಯನ್ನು ರೇಣುಕಾಚಾರ್ಯ ಕುಟುಂಭಸ್ಥರು ಹಾಗೂ ಅವರ ಆಪ್ತರು ಮಾಡಿಕೊಂಡಿದ್ದಾರೆ.

    ಒಟ್ಟಾರೆಯಾಗಿ ಚಂದ್ರು ಸಾವಿಗೆ ಕಾರಣ ಏನು ಎಂಬುದು ಪೋಸ್ಟ್ ಮಾರ್ಟಂ ವರದಿ ಬಂದ ನಂತರ ಗೊತ್ತಾಗಲಿದೆ. ಇಂದು ಸಂಜೆಯೊಳಗೆ ಮರಣೋತ್ತರ ಪರೀಕ್ಷಾ ವರದಿ ಪೊಲೀಸರ ಕೈ ಸೇರೋ ಸಾಧ್ಯತೆ ಇದೆ. ಅ ವರದಿಯ ಮೇಲೆ ರೇಣುಕಾಚಾರ್ಯರ ನಡೆ ತೀರ್ಮಾನಗೊಂಡಿದೆ.

    Live Tv
    [brid partner=56869869 player=32851 video=960834 autoplay=true]

  • ತಾಕತ್ ಇದ್ರೆ ನನ್ನನ್ನು ಮುಟ್ಟಿ, ಅದನ್ನು ಬಿಟ್ಟು ನನ್ನ ಮಗನನ್ನು ಬಲಿ ಪಡೆದಿದ್ದು ಸರಿಯಲ್ಲ – ರೇಣುಕಾಚಾರ್ಯ

    ತಾಕತ್ ಇದ್ರೆ ನನ್ನನ್ನು ಮುಟ್ಟಿ, ಅದನ್ನು ಬಿಟ್ಟು ನನ್ನ ಮಗನನ್ನು ಬಲಿ ಪಡೆದಿದ್ದು ಸರಿಯಲ್ಲ – ರೇಣುಕಾಚಾರ್ಯ

    ದಾವಣಗೆರೆ: ತಾಕತ್ ಇದ್ರೆ ನನ್ನನ್ನು ಮುಟ್ಟಿ, ಅದನ್ನು ಬಿಟ್ಟು ನನ್ನ ಮಗನನ್ನು ಬಲಿ ಪಡೆದಿದ್ದು ಸರಿಯಲ್ಲ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ (MP Renukacharya) ವಾಗ್ದಾಳಿ ನಡೆಸಿದರು.

    ಚಂದ್ರು (Chandrashekar) ಸಾವಿನ ಪ್ರಕರಣ ದಿನೇ ದಿನೇ ರೋಚಕ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ತಾಕತ್ ಇದ್ದರೆ ನನ್ನನ್ನು ಮುಟ್ಟಿಕೊಳ್ಳಿ, ಅದನ್ನು ಬಿಟ್ಟು ನನ್ನ ಮಗನನ್ನು ಬಲಿ ಪಡೆದುಕೊಳ್ಳುವುದು ಸರಿಯಲ್ಲ. ನನ್ನ ಹಿಂದೆ ಸರ್ಕಾರ, ನನ್ನ ಕ್ಷೇತ್ರದ ಜನರು ಇದ್ದಾರೆ. ನನ್ನ ಕ್ಷೇತ್ರದ ಜನರು ವಜ್ರದ ಕವಚದಂತೆ ಇದ್ದಾರೆ. ನನಗೆ ಕೊಲೆ ಬೆದರಿಕೆ ಬಂದಿರುವ ಆಡಿಯೋ ಇದೆ. ನಂಬರ್ ಸಹಿತ ದೂರು ಕೂಡ ನೀಡಿದ್ದೆ. ಆದರೆ ನಾನು ನಿನ್ನೆ ಮಾಧ್ಯಮಗಳಲ್ಲಿ ಹೇಳಿದ ಕೂಡಲೇ ವಿಚಾರಣೆಗೆ ತೆರೆದಿದ್ದಾರೆ ಎಂದು ಕಿಡಿಕಾರಿದರು.

    ಮಾಧ್ಯಮಗಳಲ್ಲಿ ಮಾತನಾಡಿದಾಗ ತನಿಖೆ ಕೈಗೆತ್ತುಕೊಂಡಿದ್ದಾರೆ. ಇದರಲ್ಲೇ ಗೊತ್ತಾಗುತ್ತೆ ಎಷ್ಟು ವೈಫಲ್ಯ ಇದೆ ಎಂದು. ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲದ ಕಡೆ ಜನರಿಗೆ ಯಾವ ರಕ್ಷಣೆ ಇದೆ ಎಂದು ಜನರು ಕೇಳ್ತಾರೆ. ಪಂಚನಾಮೆ ಮಾಡುವಾಗ ಕುಟುಂಬಸ್ಥರನ್ನು ಕರೆಯಬೇಕಿತ್ತು. ಇದು ಪೊಲೀಸರ ನಿರ್ಲಕ್ಷ್ಯಕ್ಕೆ ಒಂದು ಉದಾಹರಣೆಯಾಗಿದೆ ಎಂದು ಆರೋಪಿಸಿದರು.

    ತನಿಖೆ ಪ್ರಗತಿಯಲ್ಲಿರುವಾಗ ಉನ್ನತ ಮಟ್ಟದ ಅಧಿಕಾರಿಗಳು ಗೌಪ್ಯತೆ ಕಾಪಾಡಬೇಕಿತ್ತು. ಆದರೆ ಗೌಪ್ಯತೆ ಕಾಪಾಡದೇ ಮಾತನಾಡಿದ್ದು ಜನರ ಅನುಮಾನಕ್ಕೆ ಕಾರಣವಾಗಿದೆ. ನನ್ನ ಸಹೋದರ ಹೇಳಿದ ಬಗ್ಗೆ ನಾನು ಮಾತನಾಡುವುದಿಲ್ಲ. ತನಿಖೆ ನಡೆಯುತ್ತಿದೆ, ಅದರ ಸತ್ಯಾಸತ್ಯತೆ ತಿಳಿಯಲಿದೆ. ನಮ್ಮ ಮಗ ಆತ್ಮಹತ್ಯೆ ಮಾಡಿಕೊಳ್ಳುವ ಯುವಕನಲ್ಲ ಎಂದರು. ಇದನ್ನೂ ಓದಿ: ಸಾವಿಗೂ ಮುನ್ನ ಕ್ಲಾಸ್‍ಮೇಟ್‍ಗಳ ಭೇಟಿಗೆ ಹಾತೊರೆದಿದ್ದ ಚಂದ್ರಶೇಖರ್!

    ಇನ್ನರ್ ವೇರ್ ಇರ್ಲಿಲ್ಲ, ಆತನ ಕಿವಿ ಕಚ್ಚಿದ್ದಾರೆಂದು ಚಂದ್ರು ತಂದೆ ರಮೇಶ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಆ ರೀತಿ ಮಾತನಾಡಬಾರದು. ತನಿಖೆ ಪೂರ್ಣಗೊಂಡ ನಂತರ ಅದರ ಬಗ್ಗೆ ಮಾತನಾಡುತ್ತೇವೆ. ಕಿರಣ್‍ನನ್ನು ಸರಿಯಾದ ರೀತಿಯಲ್ಲಿ ತನಿಖೆ ನಡೆಸಿಲ್ಲ. ಬೇಕಾಬಿಟ್ಟಿ ವಿಚಾರಣೆ ನಡೆಸಿ ಬಿಟ್ಟು ಕಳಿಸಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಚಂದ್ರು ಕಾರು ಅಪಘಾತ ಆಗಿರೋದು ನಿಜ: FSL ತಜ್ಞ

    Live Tv
    [brid partner=56869869 player=32851 video=960834 autoplay=true]

  • ಸಾವಿಗೂ ಮುನ್ನ ಕ್ಲಾಸ್‍ಮೇಟ್‍ಗಳ ಭೇಟಿಗೆ ಹಾತೊರೆದಿದ್ದ ಚಂದ್ರಶೇಖರ್!

    ಸಾವಿಗೂ ಮುನ್ನ ಕ್ಲಾಸ್‍ಮೇಟ್‍ಗಳ ಭೇಟಿಗೆ ಹಾತೊರೆದಿದ್ದ ಚಂದ್ರಶೇಖರ್!

    – ಪೊಲೀಸರಿಗೆ ಶಾಸಕ ಕ್ಲಾಸ್

    ದಾವಣಗೆರೆ: ಚಂದ್ರಶೇಖರ್ (Chandrashekhar) ಸಾವಿಗೂ ಮುನ್ನ ತನ್ನ ಕ್ಲಾಸ್‍ಮೇಟ್‍ಗಳಾಗಿದ್ದ ಚರಣ್, ಸಂಜಯ್ ಭೇಟಿಗೆ ಹಾತೊರೆಯುತ್ತಿದ್ದ ಅನ್ನೋ ವಿಷಯವೂ ಬೆಳಕಿಗೆ ಬಂದಿದೆ.

    ಪಬ್ಲಿಕ್ ಟಿವಿ ಜೊತೆಗೆ ದೂರವಾಣಿ ಮೂಲಕ ಮಾತನಾಡಿದ ಚರಣ್ (Charan), ಚಂದ್ರು ನಮಗೆ ಕಾಲ್ ಮಾಡಿದ್ದಾಗ ಶಾಂತವಾಗೇ ಇದ್ದ, ಯಾವುದೇ ಒತ್ತಡದಲ್ಲಿ ಇರಲಿಲ್ಲ ಅಂದಿದ್ದಾರೆ. ಇದನ್ನೂ ಓದಿ: ನನ್ನ ಮಗನ ಮರ್ಮಾಂಗ ಊದಿಕೊಂಡಿತ್ತು, ಅದಕ್ಕೆ ಇಂಜೆಕ್ಷನ್ ಮಾಡಿದ್ದಾರೆ- ಮೃತ ಚಂದ್ರು ತಂದೆ ಗಂಭೀರ ಆರೋಪ

    ಶಿವಮೊಗ್ಗದ ಮತ್ತೋರ್ವ ಸ್ನೇಹಿತ ಉತ್ತಮ್ (Uttam) ಕೂಡ ಮಾತನಾಡಿದ್ದು, ಅ.30ರಂದು ಗೌರಿಗದ್ದೆಗೆ ನಾನೂ ಹೋಗಬೇಕಿತ್ತು. ಆದರೆ ಅನಾರೋಗ್ಯದಿಂದ ಹೋಗೋಕೆ ಆಗಲಿಲ್ಲ ಅಂತ ಚಂದ್ರು ಜೊತೆಗಿನ ಒಡನಾಟವನ್ನೂ ಹಂಚಿಕೊಂಡಿದ್ದಾರೆ. ಚಂದ್ರು ನಾಪತ್ತೆಯಾದ ಭಾನುವಾರ ರಾತ್ರಿ 11:30ರವರೆಗೆ ನಿರಂತರವಾಗಿ ಚಂದ್ರು ಫೋನ್‍ಗೆ ಒಂದೇ ನಂಬರ್ ನಿಂದ ಪದೇ ಪದೇ ಕರೆ, ಮೆಸೇಜ್ ಬಂದಿದೆ ಅಂತ ತಿಳಿದು ಬಂದಿದೆ. ಹಾಗಾಗಿ ಪೊಲೀಸರು ಈ ಬಗ್ಗೆಯೂ ತನಿಖೆ ನಡೆಸ್ತಿದ್ದಾರೆ.

    ಸಹೋದರನ ಪುತ್ರ ಚಂದ್ರಶೇಖರ್ ನಿಗೂಢ ಸಾವಿನಿಂದ ಭಾವುಕರಾಗಿದ್ದ ಮಾಜಿ ಸಚಿವ ರೇಣುಕಾಚಾರ್ಯ (MP Renukacharya) ಇದೀಗ ಪೊಲೀಸರ ಮೇಲೆ ಅನುಮಾನ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚಂದ್ರು ಕಾರು ಅಪಘಾತ ಆಗಿರೋದು ನಿಜ: FSL ತಜ್ಞ

    ಓವರ್ ಸ್ಪೀಡ್‍ನಿಂದ ಚಂದ್ರು ನಾಲೆಗೆ ಬಿದ್ದಿದ್ದಾನೆ ಅಂತ ಪೊಲೀಸರು ಹೇಳ್ತಿದ್ದಾರೆ. ಹಾಗಾದರೆ ಚಂದ್ರು ಕೈಗೆ ಹಗ್ಗ ಕಟ್ಟಿದ್ಯಾರು..? ಪೊಲೀಸರ ನಿರ್ಲಕ್ಷ್ಯ ಕಾಣ್ತಿದೆ. ಒಬ್ಬ ಶಾಸಕ ಮಗನಿಗೆ ಈ ರೀತಿಯಾದ್ರೆ ಸಾಮಾನ್ಯ ಜನರ ಗತಿ ಏನು..? ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ವೈಫಲ್ಯ ಕಾಣಿಸುತ್ತಿದೆ ಅಂತ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ವಿರುದ್ಧ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಅಲ್ಲದೆ ಚಂದ್ರು ಕಾರು ಬಿದ್ದಿದ್ದ ನ್ಯಾಮತಿ-ಹೊನ್ನಾಳಿ ಮಾರ್ಗದ ನಾಲೆ ಬಳಿ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ರು. ಫೋನ್ ಲೊಕೇಷನ್ ಹೇಳಿದ್ದೇ ಬೇರೆ, ಕಾರು ಸಿಕ್ಕಿದ್ದೇ ಬೇರೆ ಕಡೆ ಅಂತ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. ಬಳಿಕ ಹೊನ್ನಾಳಿ ಪೊಲೀಸ್ ಠಾಣೆ ಹಿಂಭಾಗ ಇರಿಸಲಾಗಿರುವ ಕಾರ್ ನೋಡಲು ಯತ್ನಿಸಿದರು. ತನಿಖೆ ಹಂತದಲ್ಲಿರೋ ಕಾರಣ ಟಾರ್ಪಲ್ ತೆರೆದು ತೋರಿಸಲು ನಿರಾಕರಿಸಿದ ಸಿಪಿಐ ಸಿದ್ದೇಗೌಡ ಮೇಲೆ ರೇಗಾಡಿದರು.

    ನಿಮ್ಮ ಅಲೋಕ್ ಕುಮಾರ್ ನಿನ್ನೇ ಬಂದು ನನ್ನನ್ನು ಮಾತನಾಡಿಸದೇ ಹಾಗೇ ಹೋಗಿದ್ದಾನೆ. ನನ್ನ ಸ್ಟೇಟ್‍ಮೆಂಟ್ ಏನಾದ್ರು ತಗೊಂಡ್ರಾ..? ಓವರ್ ಸ್ಪೀಡ್ ಅಂತ ಹೇಳಿದಾನೆ. ಅದು ಹೆಂಗೆ ಹೇಳಿದ ಅಂಥ ಕೂಗಾಡಿದ್ದಾರೆ. ಈ ಮಧ್ಯೆ, ರೇಣುಕಾಚಾರ್ಯ ಮನೆಗೆ ಕ್ಷೇತ್ರದ ಕೆಲ ಮಹಿಳೆಯರು ಭೇಟಿ ನೀಡಿ ಕೈತುತ್ತು ತಿನ್ನಿಸಿ ಸಮಾಧಾನ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಂದ್ರು ಕಾರು ಅಪಘಾತ ಆಗಿರೋದು ನಿಜ: FSL ತಜ್ಞ

    ಚಂದ್ರು ಕಾರು ಅಪಘಾತ ಆಗಿರೋದು ನಿಜ: FSL ತಜ್ಞ

    ಬೆಂಗಳೂರು/ದಾವಣಗೆರೆ: ಹೊನ್ನಾಳಿ ಚಂದ್ರಶೇಖರ್ (Honnalli Chandrashekhar) ನಿಗೂಢ ಸಾವಿನ ಪ್ರಕರಣ ಮತ್ತಷ್ಟು ಕಂಗಟ್ಟಾಗಿ ಮುಂದುವರಿದಿದೆ. ಇದು ಅಪಘಾತವೋ.. ಕೊಲೆಯೋ..? ಅನ್ನೋ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸ್ತಿದ್ದಾರೆ.

    ಚಂದ್ರಶೇಖರ್ ಕಾರು (Car) ಪತ್ತೆಯಾಗಿದ್ದ ದಾವಣಗೆರೆಯ ನ್ಯಾಮತಿ-ಹೊನ್ನಾಳಿ ಮಾರ್ಗದ ಸೊರಟೂರಿನ ತುಂಗಾ ಮೇಲ್ದಂಡೆ ಕಾಲುವೆ ಬಳಿ ಪೊಲೀಸರು ಮರುಸೃಷ್ಠಿ ನಡೆಸಿದರು. ಖಾಸಗಿ ವಿಧಿ ವಿಜ್ಞಾನ ತಜ್ಞರಾದ ಡಾ. ಫಣೀಂದ್ರ ಅವರು ಸ್ಥಳಕ್ಕೆ ಭೇಟಿ ಕೊಟ್ಟು ಮರುಸೃಷ್ಠಿ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಕೆಲವೊಂದು ಮಾಹಿತಿಯನ್ನು ಕೊಟ್ಟಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಖಾಸಗಿ ವಿಧಿ ವಿಜ್ಞಾನತಜ್ಞರಾದ ಡಾ. ಫಣೀಂದ್ರ, ಚಂದ್ರಶೇಖರ್ ಕಾರ್ ಅಪಘಾತ ಆಗಿರೋದು ನಿಜ. ಆದರೆ ಸಾವು ಅಪಘಾತಕ್ಕೋ.. ಮತ್ಯಾವುದಕ್ಕೆ ಆಗಿದೆ ಅನ್ನೋದು ತನಿಖೆಯಲ್ಲಿ ಗೊತ್ತಾಗಬೇಕು ಅಂತಿದ್ದಾರೆ. ಇದನ್ನೂ ಓದಿ: ನನ್ನ ಮಗನ ಮರ್ಮಾಂಗ ಊದಿಕೊಂಡಿತ್ತು, ಅದಕ್ಕೆ ಇಂಜೆಕ್ಷನ್ ಮಾಡಿದ್ದಾರೆ- ಮೃತ ಚಂದ್ರು ತಂದೆ ಗಂಭೀರ ಆರೋಪ

    100-120 ಕಿ.ಮೀ. ಸ್ಪೀಡ್‍ನಲ್ಲಿ ಕಾರ್ ಡ್ರೈವಿಂಗ್ ಮಾಡಲಾಗಿದೆ. ಚಂದ್ರು ಕಾರ್ ಟೈಯರ್ ಸ್ಫೋಟವಾಗಿದೆ. ಈ ವೇಳೆ ಮೊದಲು ಮೈಲುಗಲ್ಲಿಗೆ ಡಿಕ್ಕಿ ಹೊಡೆದು ನಂತರ ಕಾರಿನ ನಿಯಂತ್ರಣ ತಪ್ಪಿದೆ. ಸ್ಪೀಡ್ ಲಿಮಿಟ್ ಕಟ್ ಆದ ಬಳಿಕ ಕಾಂಕ್ರೀಟ್‍ನ ಹಂಪ್‍ಗೆ ಡಿಕ್ಕಿಯಾಗಿದೆ. ಬಳಿಕ ಕಾಲುವೆ ತಡೆಗೋಡೆಗೆ ಡಿಕ್ಕಿ ಹೊಡೆದು ನಾಲೆಗೆ ಕಾರು ಬಿದ್ದಿದೆ. ಕಾರಿನಲ್ಲಿ ಸಾಕಷ್ಟು ದೊಡ್ಡ ಡ್ಯಾಮೇಜ್ ಆಗಿದ್ದು, ಕಾರ್ ನಿಯಂತ್ರಣ ತಪ್ಪಿದ್ದರಿಂದ ಹಿಂಬದಿಗೂ ಡ್ಯಾಮೇಜ್ ಆಗಿದೆ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ನನ್ನ ಮಗನ ಮರ್ಮಾಂಗ ಊದಿಕೊಂಡಿತ್ತು, ಅದಕ್ಕೆ ಇಂಜೆಕ್ಷನ್ ಮಾಡಿದ್ದಾರೆ- ಮೃತ ಚಂದ್ರು ತಂದೆ ಗಂಭೀರ ಆರೋಪ

    ನನ್ನ ಮಗನ ಮರ್ಮಾಂಗ ಊದಿಕೊಂಡಿತ್ತು, ಅದಕ್ಕೆ ಇಂಜೆಕ್ಷನ್ ಮಾಡಿದ್ದಾರೆ- ಮೃತ ಚಂದ್ರು ತಂದೆ ಗಂಭೀರ ಆರೋಪ

    ದಾವಣಗೆರೆ: ನನ್ನ ಮಗನ  ಮರ್ಮಾಂಗ ಊದಿಕೊಂಡಿತ್ತು, ಅದಕ್ಕೆ ಇಂಜೆಕ್ಷನ್ ಮಾಡಿದ್ದಾರೆ. ನನ್ನ ಮಗನಿಗೆ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ ಎಂದು ಮೃತ ಚಂದ್ರಶೇಖರ್ (Chandrashekhar) ತಂದೆ ಎಂ.ಪಿ ರಮೇಶ್ (MP Rameh) ಗಂಭೀರ ಆರೋಪ ಮಾಡಿದ್ದಾರೆ.

    ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ನನ್ನ ಮಗನನ್ನು ಪ್ರೀ ಪ್ಲಾನ್ ಮಾಡಿ ಕೊಲೆ ಮಾಡಿದ್ದಾರೆ. ಆದರೆ ತನಿಖೆ ನಡೆಸುತ್ತಿದ್ದ ಪೊಲೀಸರು ಶುದ್ಧ ಸುಳ್ಳು ಹೇಳುತ್ತಿದ್ದಾರೆ. ನನ್ನ ಮಗನದ್ದು ವ್ಯವಸ್ಥಿತವಾಗಿ ಕೊಲೆ ಆಗಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ನನ್ನ ಮಗನ ಸಾವಿಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ: ರೇಣುಕಾಚಾರ್ಯ ಅನುಮಾನ

    ಮನೆಯಿಂದ ಹೋಗುವಾಗ ಒಳ ಉಡುಪು(ಚಡ್ಡಿ) ಇತ್ತು. ಆದರೆ ಮರಣೋತ್ತರ ಪರೀಕ್ಷೆ ಮಾಡುವಾಗ ಒಳ ಉಡುಪು ಇರಲಿಲ್ಲ. ಅಲ್ಲದೆ ಆತನ ಮರ್ಮಾಂಗ ಬಾತುಕೊಂಡಿತ್ತು, ಅದಕ್ಕೆ ಇಂಜೆಕ್ಷನ್ ಮಾಡಿದ್ದಾರೆ. ನನ್ನ ಮಗನಿಗೆ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ. ಕಾರ್ ಹಿಂಭಾಗದ ಇಂಡಿಕೇಟರ್ ಸಹ ಒಡೆಯದೇ ಕೇವಲ ಹಿಂಭಾಗ ಮಾತ್ರ ಗುದ್ದಿರುವ ಹಾಗೇ ಕಾರು ಸಿಕ್ಕಿದೆ. ಬೇರೆ ಕಡೆ ಚಿತ್ರ ಹಿಂಸೆ ಕೊಟ್ಟು ಕೊಲೆ ಮಾಡಿ ಹಾಕಿದ್ದಾರೆ ಎಂದು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ನನ್ನ ಮಗನಿಗೆ ಮಚ್ಚಿನಿಂದ ತಲೆ, ಬೆನ್ನಿಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾರೆ: ರೇಣುಕಾಚಾರ್ಯ

    ಗೌರಿಗದ್ದೆ ಗುರೂಜಿ (Vinay Guruji) ಹೇಳಿಕೆಗೂ ಚಂದ್ರು ಸ್ನೇಹಿತ ಕಿರಣ್ (Kiran) ಹೇಳಿಕೆಗೂ ಸಾಕಷ್ಟು ಗೊಂದಲ ಇದೆ. ಕಿರಣ್ ನೋಡಿದರೆ ಕ್ರೇಟಾ ಕಾರ್ ನಲ್ಲಿ ಆಶ್ರಮಕ್ಕೆ ಹೋಗಿದ್ದೆವು ಎಂದು ಹೇಳುತ್ತಾರೆ. ಗುರೂಜಿ ಮಾತ್ರ ಬೇರೆ ಕಾರಿನಲ್ಲಿ ಬಂದಿದ್ದರು ಎಂದು ಹೇಳುತ್ತಾರೆ. ಹೀಗೆ ಹಲವು ಗೊಂದಲದ ಹೇಳಿಕೆಗಳನ್ನು ಇಬ್ಬರು ಹೇಳುತ್ತಿದ್ದಾರೆ. ಪೋಲೀಸರು ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿಲ್ಲ ಎಂದರು.

    ನಮ್ಮ ಕಾರ್ಯಕರ್ತರೇ ಚಂದ್ರು ಕಾರನ್ನು ಪತ್ತೆ ಹಚ್ಚಿದ್ದು. ಪೊಲೀಸರು ಪ್ರಕರಣ ಪತ್ತೆ ಹಚ್ಚಿಲ್ಲ. ಯಾರದ್ದೋ ಪ್ರಭಾವಕ್ಕೆ ಒಳಗಾಗಿ ಪ್ರಕರಣದ ದಾರಿ ತಪ್ಪಿಸುತ್ತಿದ್ದಾರೆ. ಪ್ರಕರಣ ತನಿಖೆ ನಡೆಸಿ ಆರೋಪಿಗಳನ್ನ ಪತ್ತೆ ಹಚ್ಚಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಹೊನ್ನಾಳಿ ಚಂದ್ರು ಸಾವಿನ ಸುತ್ತ 5 ಅನುಮಾನ

    Live Tv
    [brid partner=56869869 player=32851 video=960834 autoplay=true]