Tag: ಚಂದ್ರಶೇಖರ ಕಂಬಾರ

  • ಚಂದ್ರಶೇಖರ ಕಂಬಾರರ ಹೆಸರಿನಲ್ಲಿ ವಂಚನೆಗೆ ಯತ್ನ, ದೂರು ದಾಖಲು

    ಚಂದ್ರಶೇಖರ ಕಂಬಾರರ ಹೆಸರಿನಲ್ಲಿ ವಂಚನೆಗೆ ಯತ್ನ, ದೂರು ದಾಖಲು

    ಬೆಂಗಳೂರು:  ಕಾದಂಬರಿಕಾರ, ನಾಟಕಕಾರ, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕ, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿ ಡಾ.ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಂಚನೆಗೆ ಯತ್ನ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ.

    ಚಂದ್ರಶೇಖರ ಕಂಬಾರ ಹೆಸರಿನಲ್ಲಿ ವಾಟ್ಸಪ್‌ ಸಂದೇಶ ಕಳಿಸುತ್ತಿರುವ ಅಪರಿಚಿತರು ಧನ ಸಹಾಯ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಈ ಸಂಬಂಧ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್‌ ಅಪರಾಧ ವಿಭಾಗಕ್ಕೆ ಚಂದ್ರಶೇಖರ ಕಂಬಾರ ದೂರು ನೀಡಿದ್ದಾರೆ.  ಇದನ್ನೂ ಓದಿ: 1 ಲೀಟರ್ ಅಡುಗೆ ಎಣ್ಣೆ 555 ರೂ., ಕೆಜಿ ತುಪ್ಪ 605 ರೂ.ಗೆ ದಿಢೀರ್ ಏರಿಕೆ

    ದೂರಿನಲ್ಲಿ ಏನಿದೆ?
    ನನ್ನ ಹೆಸರು ಮತ್ತು ಫೋಟೋ ಬಳಸಿ ನನಗೆ ಧನ ಸಹಾಯ ಮಾಡಿ ಎಂದು ವಿವಿಧ ಕಡೆ ವಾಟ್ಸಪ್‌ನಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಇದನ್ನು ಸಾರ್ವಜನಿಕರು ನಂಬಬಾರದು. ಈ ರೀತಿ ನನ್ನ ಹೆಸರು ದುರುಪಯೋಗವಾಗದಂತೆ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

  • ಕಂಬಾರ ಪತ್ನಿ ನಿಧನ- ಕಂಬನಿ ಮಿಡಿದ ಬೊಮ್ಮಾಯಿ

    ಕಂಬಾರ ಪತ್ನಿ ನಿಧನ- ಕಂಬನಿ ಮಿಡಿದ ಬೊಮ್ಮಾಯಿ

    ಬೆಂಗಳೂರು: ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರರ ಪತ್ನಿ ಸತ್ಯಭಾಮ ಚಂದ್ರಶೇಖರ್ ಕಂಬಾರರವರು ಇಂದು ನಿಧನ ಹೊಂದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ  ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರ ಧರ್ಮ ಪತ್ನಿ ಶ್ರೀಮತಿ ಸತ್ಯಭಾಮ ಕಂಬಾರ ಅವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಸತ್ಯಭಾಮ ಅವರು ಚಂದ್ರಶೇಖರ ಕಂಬಾರ ಅವರ ಪ್ರೇರಣಾ ಶಕ್ತಿಯಾಗಿದ್ದು, ಅವರಿಗೆ ಅಪಾರವಾದ ಓದಿನ ಹವ್ಯಾಸವಿತ್ತು. ಹೀಗಾಗಿ ಅವರು ಸಾಹಿತ್ಯ ಕ್ಷೇತ್ರದಲ್ಲಿನ ಬೆಳವಣಿಗೆ ಕುರಿತು ಆಸಕ್ತಿ ಹೊಂದಿದ್ದರು. ಅವರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕಂಬಾರ ಕುಟುಂಬದ ಸದಸ್ಯರಿಗೆ ನೀಡಲಿ ಅಂತ ಕೋರುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ.

    ಚಂದ್ರಶೇಖರ್ ಕಂಬಾರ್ ಪತ್ನಿ ಸತ್ಯಭಾಮ (76) ಇಂದು ಬೆಳಿಗ್ಗೆ 6:15ಕ್ಕೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸತ್ಯಭಾಮ ಕಳೆದ ಜನವರಿ 3 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

  • ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿಯ ದೃಷ್ಟಿ ತೆಗೆದ ಮಂಜಮ್ಮ ಜೋಗತಿ!

    ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿಯ ದೃಷ್ಟಿ ತೆಗೆದ ಮಂಜಮ್ಮ ಜೋಗತಿ!

    ನವದೆಹಲಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕರ್ನಾಟಕದ ಹಲವರಿಗೆ ಮಂಗಳವಾರ 2021ನೇ ಸಾಲಿನ ಪದ್ಮಶ್ರೀ, ಪದ್ಮವಿಭೂಷಣ, ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೋಗತಿ ನೃತ್ಯದ ಮೂಲಕ ಮನೆಮಾತಾಗಿರುವ ಮಂಜಮ್ಮ ಜೋಗತಿ ಅವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ದೃಷ್ಟಿ ತೆಗೆದು ಗಮನ ಸೆಳೆದರು.

    ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರು ದೃಷ್ಟಿ ತೆಗೆಯುವಾಗ ರಾಷ್ಟ್ರಪತಿಗಳು ಸಂತೋಷದಿಂದ ನಗೆ ಬೀರಿದರು. ನಂತರ ಮಂಜಮ್ಮ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದನೆ ತಿಳಿಸಿದರು. ಪದ್ಮಶ್ರೀ ಪ್ರಶಸ್ತಿ ಪಡೆದ ಮೊದಲ ತೃತೀಯಲಿಂಗಿ ಎಂಬ ಹೆಗ್ಗಳಿಕೆಗೂ ಮಂಜಮ್ಮ ಜೋಗತಿ ಪಾತ್ರರಾಗಿದ್ದಾರೆ. ಇದನ್ನೂ ಓದಿ: ನ.11 ಕ್ಕೆ ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆಗೆ ಸರ್ಕಾರ ಆದೇಶ

    2021ರ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ ದೆಹಲಿಯ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‍ನಲ್ಲಿ ನಡೆಯಿತು. ಕರ್ನಾಟಕದ ಖ್ಯಾತ ವೈದ್ಯ ಡಾ. ಬಿ.ಎಂ.ಹೆಗ್ಡೆ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಗಾಯಕ ದಿವಂಗತ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರ ಪದ್ಮವಿಭೂಷಣ ನೀಡಲಾಯಿತು. ಪ್ರಶಸ್ತಿಯನ್ನು ಎಸ್‌ಪಿಬಿ ಪರವಾಗಿ ಪುತ್ರ ಚರಣ್‌ ಸ್ವೀಕರಿಸಿದರು. ಇದನ್ನೂ ಓದಿ: ಹಾಟ್ ಬೆಡಗಿ ಪೂನಂ ಪಾಂಡೆ ಆಸ್ಪತ್ರೆಗೆ ದಾಖಲು

    ಸಾಹಿತಿ ಚಂದ್ರಶೇಖರ ಕಂಬಾರರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಹಿತ್ಯ ಮತ್ತು ಸಮಾಜ ಸೇವೆಗಾಗಿ ಎಲ್‌.ಎಸ್.ಕಶ್ಯಪ್ ಅವರಿಗೂ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿಗಳು ಪ್ರದಾನ ಮಾಡಿದರು.

  • ಚಂದ್ರಶೇಖರ್ ಕಂಬಾರ ಅವರಿಗೆ ಸಿಎಂ ಬಿಎಸ್‍ವೈ ಸನ್ಮಾನ

    ಚಂದ್ರಶೇಖರ್ ಕಂಬಾರ ಅವರಿಗೆ ಸಿಎಂ ಬಿಎಸ್‍ವೈ ಸನ್ಮಾನ

    ಬೆಂಗಳೂರು: ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚಂದ್ರಶೇಖರ್ ಕಂಬಾರ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅಭಿನಂದಿಸಿ ಸನ್ಮಾನಿಸಿದರು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ರಾಜ್ಯದ 5 ಮಂದಿ ಸೇರಿದಂತೆ ಒಟ್ಟು 119 ಮಂದಿಗೆ ಪದ್ಮ ಪ್ರಶಸ್ತಿ ಸಿಗಲಿದೆ. ಖ್ಯಾತ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರು ಮರಣೋತ್ತರ ಪದ್ಮ ವಿಭೂಷಣ ಗೌರವಕ್ಕೆ ಪಾತ್ರವಾಗಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಬಿಎಂ ಹೆಗ್ಡೆ ಅವರಿಗೆ ಪದ್ಮವಿಭೂಷಣ ಸಾಹಿತ್ಯ ರಂಗದಲ್ಲಿ ಚಂದ್ರಶೇಖರ್ ಕಂಬಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ. ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಎಸ್‍ಪಿಬಿ ಸೇರಿದಂತೆ ಒಟ್ಟು 10 ಗಣ್ಯರಿಗೆ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ.

    ಮಂಜಮ್ಮ ಜೋಗತಿ(ಕಲೆ), ರಂಗಸ್ವಾಮಿ ಲಕ್ಷ್ಮಿ ನಾರಾಯಣ ಕಶ್ಯಪ( ಸಾಹಿತ್ಯ ಮತ್ತು ಶಿಕ್ಷಣ), ಕೆವೈ ವೆಂಕಟೇಶ್(ಕ್ರೀಡೆ ) ಅವರು ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ. ಸಾರ್ವಜನಿಕ ವ್ಯವಹಾರಗಳ ವಿಭಾಗದಲ್ಲಿ ಪ್ರಶಸ್ತಿ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಸಿಕ್ಕಿದೆ. ಒಟ್ಟು 7 ಮಂದಿಗೆ ಪದ್ಮ ವಿಭೂಷಣ, 10 ಮಂದಿಗೆ ಪದ್ಮಭೂಷಣ, 102 ಮಂದಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಈ ಬಾರಿ ನೀಡಲಾಗುತ್ತದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಂದಿನ ದಿನಗಳಲ್ಲಿ ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಈ ಪ್ರಶಸ್ತಿಯನ್ನು ಸಾಧಕರಿಗೆ ನೀಡಿ ಗೌರವಿಸಲಿದ್ದಾರೆ.

  • ಡಾ. ಬಿಎಂ ಹೆಗ್ಡೆಗೆ ಪದ್ಮ ವಿಭೂಷಣ, ಕಂಬಾರಗೆ ಪದ್ಮಭೂಷಣ – ರಾಜ್ಯದ 5 ಮಂದಿಗೆ ಪದ್ಮ ಪ್ರಶಸ್ತಿ

    ಡಾ. ಬಿಎಂ ಹೆಗ್ಡೆಗೆ ಪದ್ಮ ವಿಭೂಷಣ, ಕಂಬಾರಗೆ ಪದ್ಮಭೂಷಣ – ರಾಜ್ಯದ 5 ಮಂದಿಗೆ ಪದ್ಮ ಪ್ರಶಸ್ತಿ

    ನವದೆಹಲಿ: ಗಣರಾಜ್ಯೋತ್ಸವದ ಹಿನ್ನಲೆ ರಾಜ್ಯದ 5 ಮಂದಿ ಸೇರಿದಂತೆ ಒಟ್ಟು 119 ಮಂದಿಗೆ ಪದ್ಮ ಪ್ರಶಸ್ತಿ ಸಿಗಲಿದೆ. ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರು ಮರಣೋತ್ತರ ಪದ್ಮ ವಿಭೂಷಣ ಗೌರವಕ್ಕೆ ಪಾತ್ರವಾಗಿದ್ದಾರೆ.

    ಕೇಂದ್ರ ಗೃಹ ಸಚಿವಾಲಯ ಇಂದು ರಾತ್ರಿ ಸಾಧಕರ ಪಟ್ಟಿಯನ್ನು ಪ್ರಕಟ ಮಾಡಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಬಿಎಂ ಹೆಗ್ಡೆ ಅವರಿಗೆ ಪದ್ಮವಿಭೂಷಣ ಸಾಹಿತ್ಯ ರಂಗದಲ್ಲಿ ಚಂದ್ರಶೇಖರ್‌ ಕಂಬಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ.

    ಮಂಜಮ್ಮ ಜೋಗತಿ(ಕಲೆ), ರಂಗಸ್ವಾಮಿ ಲಕ್ಷ್ಮಿ ನಾರಾಯಣ ಕಶ್ಯಪ( ಸಾಹಿತ್ಯ ಮತ್ತು ಶಿಕ್ಷಣ), ಕೆವೈ ವೆಂಕಟೇಶ್(ಕ್ರೀಡೆ ) ಅವರು ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ.

    ಸಾರ್ವಜನಿಕ ವ್ಯವಹಾರಗಳ ವಿಭಾಗದಲ್ಲಿ ಪ್ರಶಸ್ತಿ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಸಿಕ್ಕಿದೆ. ಒಟ್ಟು 7 ಮಂದಿಗೆ ಪದ್ಮ ವಿಭೂಷಣ, 10 ಮಂದಿಗೆ ಪದ್ಮಭೂಷಣ, 102 ಮಂದಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಈ ಬಾರಿ ನೀಡಲಾಗುತ್ತದೆ.

    ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಮುಂದಿನ ದಿನಗಳಲ್ಲಿ ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಈ ಪ್ರಶಸ್ತಿಯನ್ನು ಸಾಧಕರಿಗೆ ನೀಡಿ ಗೌರವಿಸಲಿದ್ದಾರೆ.

  • ನೆಹರು, ಮನಮೋಹನ್ ಸಿಂಗ್ ಸಿಎಎ ಪರ ಮಾತಾಡಿದ್ರು: ಚಂದ್ರಶೇಖರ ಕಂಬಾರ

    ನೆಹರು, ಮನಮೋಹನ್ ಸಿಂಗ್ ಸಿಎಎ ಪರ ಮಾತಾಡಿದ್ರು: ಚಂದ್ರಶೇಖರ ಕಂಬಾರ

    ಬೆಂಗಳೂರು: ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್,  ಜವಾಹರ‌ಲಾಲ್ ನೆಹರು ಸಿಎಎ ಪರವಾದ ನಿಲುವು ಹೊಂದಿದ್ದರು. ಈ ಬಗ್ಗೆ ಮನಮೋಹನ್ ಸಿಂಗ್ ಮಾತನಾಡಿದ್ರು ಈ ಬಗ್ಗೆ ಎಲ್ಲರೂ ಚಿಂತಿಸಬೇಕಾದ ಅವಶ್ಯಕತೆಯಿದೆ. ಇವರು ಕಾಯ್ದೆ ಜಾರಿ ಮಾಡಿರೋದರಿಂದ ಇಷ್ಟೊಂದು ಮಹತ್ವ ಬಂದಿದೆ ಎಂದು ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರ ಅಭಿಪ್ರಾಯಪಟ್ಟಿದ್ದಾರೆ.

    ಇಂದು ಬಿಜೆಪಿ ಹಮ್ಮಿಕೊಂಡಿದ್ದ ಸಿಎಎ ಬಗ್ಗೆ ಮನೆ ಮನೆ ಸಂಪರ್ಕ ಅಭಿಯಾನದಲ್ಲಿ ಡಿಸಿಎಂ ಅಶ್ವಥ್ ನಾರಾಯಣ್ ಪಾಲ್ಗೊಂಡಿದ್ದರು. ಕತ್ರಿಗುಪ್ಪೆಯ ಕಂಬಾರರ ನಿವಾಸಕ್ಕೆ ಭೇಟಿ ನೀಡಿ, ಸಿಎಎ ಕಾಯ್ದೆ ಬಗ್ಗೆ ಹೇಳಿದರು. ಇದನ್ನ ರಾಜಕೀಯಕ್ಕೋಸ್ಕರ ಕೆಲವರು ವಿರೋಧಿಸುತ್ತಿದ್ದಾರೆ. ಇಂತಹ ಕಾಯ್ದೆಯ ಬಗ್ಗೆ ಮನೆ ಮನೆಗೆ ತಿಳಿಪಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಡಿಸಿಎಂ ತಿಳಿಸಿದರು.

    ಕಂಬಾರರ ಮನೆಯಷ್ಟೇ ಅಲ್ಲದೇ, ನಟಿ ಗಿರಿಜಾ ಲೋಕೇಶ್, ಪ್ರದೇಶ್ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್ ಸೇರಿದಂತೆ ಹತ್ತಾರು ಮನೆಗಳಿಗೆ ತೆರಳಿ, ಸಿಎಎ ಕಾಯ್ದೆ ಜಾರಿಯ ಬಗ್ಗೆ ಹೇಳಿದರು.

  • ಗಮನಿಸಿ, ಮತದಾನದ ಅವಧಿ 1 ಗಂಟೆ ವಿಸ್ತರಣೆ

    ಗಮನಿಸಿ, ಮತದಾನದ ಅವಧಿ 1 ಗಂಟೆ ವಿಸ್ತರಣೆ

    ಬೆಂಗಳೂರು: ಮೇ 12 ರಂದು ನಡೆಯುವ ವಿಧಾನಸಭಾ ಚುನಾವಣೆಗೆ ಸಂಜೆ 6 ಘಂಟೆವರೆಗೂ ಮತದಾನಕ್ಕೆ ಅವಕಾಶ ಇರಲಿದೆ ಎಂದು ಸುದ್ದಿಗೋಷ್ಠಿ ನಡೆಸಿದ ರಾಜ್ಯ ಚುನಾವಣಾ ಆಯುಕ್ತ ಸಂಜೀವ್‍ಕುಮಾರ್ ಹೇಳಿದ್ದಾರೆ.

    ಬೆಳಗ್ಗೆ 7 ಘಂಟೆಯಿಂದ ಸಂಜೆ 6 ಘಂಟೆವರೆಗೂ ಮತದಾನಕ್ಕೆ ಅವಕಾಶ ಇರಲಿದೆ. ಈ ಹಿಂದಿನ ಚುನಾವಣೆಗಳಲ್ಲಿ ಸಂಜೆ 5 ಘಂಟೆಗೆ ಮತದಾನ ಪ್ರಕ್ರಿಯೆ ಮುಕ್ತಾಯವಾಗುತಿತ್ತು ಎಂದು ತಿಳಿಸಿದರು.

    ಮತದಾನದ ಜಾಗೃತಿಗೆ ಸಾಹಿತಿ ಚಂದ್ರಶೇಖರ ಕಂಬಾರ, ನಟ ಪುನೀತ್, ನಟಿ ಪ್ರಣಿತ ಅವರನ್ನ ಚುನಾವಣಾ ರಾಯಭಾರಿಯಾಗಿ ಆಯ್ಕೆ ಮಾಡಿರೋದಾಗಿ ತಿಳಿಸಿದರು.

    ಇದುವರೆಗೆ 155 ನಾಮಪತ್ರ ಸಲ್ಲಿಕೆಯಾಗಿದೆ. ರಾಜ್ಯದ ವಿವಿಧೆಡೆ 34 ಕೋಟಿ ರೂ. ಹಣವನ್ನು ಸೀಜ್ ಮಾಡಲಾಗಿದೆ. ಇವತ್ತು ದೇವನಹಳ್ಳಿಯಲ್ಲಿ 52 ಲಕ್ಷ, ಹೂವಿನಹಡಗಲಿ ಬಳಿ 10 ಲಕ್ಷ ಮೌಲ್ಯದ ಬಂಗಾರ ಹಾಗೂ 1.58 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ ಎಂದು ವಿವರಿಸಿದ್ದಾರೆ.

  • ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ ಆಯ್ಕೆ

    ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ ಆಯ್ಕೆ

    ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಚಂದ್ರಶೇಖರ ಕಂಬಾರ ಅವರು ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಕಂಬಾರ ಅವರು ಆಯ್ಕೆಯಾದರು.

    ಚಲಾವಣೆಯಾದ ಒಟ್ಟು 89 ಮತಗಳಲ್ಲಿ ಕಂಬಾರರು 56 ಮತ ಗಳಿಸಿದರೆ, ಒರಿಯಾ ಸಾಹಿತಿ ಪ್ರತಿಭಾ ರಾಯ್ ಅವರಿಗೆ 29 ಮತ ಹಾಗೂ ಮಹಾರಾಷ್ಟ್ರದ ಸಾಹಿತಿ ಬಾಲಚಂದ್ರ ನೆಮಾಡೆ ಅವರಿಗೆ 4 ಮತಗಳು ಬಿದ್ದವು.

    ಉಪಾಧ್ಯಕ್ಷರಾಗಿ ಮಾಧವ ಕೌಶಿಕ್ ಆಯ್ಕೆಯಾಗಿದ್ದಾರೆ. ಚುನಾಯಿತರ ಆಡಳಿತ ಅವಧಿ ಐದು ವರ್ಷಗಳಾಗಿರುತ್ತದೆ.