Tag: ಚಂದ್ರು ಕೊಲೆ

  • ಪೊಲೀಸ್ ಕಮಿಷನರ್ ಹುದ್ದೆಗೆ ಸುಳ್ಳುಗಾರ ಎಂದು ಹೇಳುವ ನಡೆ ಸರಿಯಲ್ಲ: ಭಾಸ್ಕರ್ ರಾವ್

    ಪೊಲೀಸ್ ಕಮಿಷನರ್ ಹುದ್ದೆಗೆ ಸುಳ್ಳುಗಾರ ಎಂದು ಹೇಳುವ ನಡೆ ಸರಿಯಲ್ಲ: ಭಾಸ್ಕರ್ ರಾವ್

    ಬೆಂಗಳೂರು: ಪೊಲೀಸ್ ಕಮಿಷನರ್ ಹುದ್ದೆಗೆ ಸುಳ್ಳುಗಾರ ಎಂದು ಹೇಳುವ ನಡೆ ಸರಿಯಲ್ಲ ಎಂದ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದು, ಬಿಜೆಪಿ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.

    ಪೊಲೀಸ್ ಕಮಿಷನರ್ ಕಮಲ್ ಪಂಥ್ ಸುಳ್ಳು ಹೇಳಿದ್ದಾರೆ. ಚಂದ್ರು ಸ್ನೇಹಿತ ಸೈಮನ್ ರಾಜನ್ ಹೇಳಿರುವುದೇ ಸತ್ಯ. ಚಂದ್ರು ಮನೆಯವರು ಹೇಳಿರುವಂತೆ ಉರ್ದು ಕಾರಣಕ್ಕಾಗಿಯೇ ಚಂದ್ರು ಕೊಲೆ ಆಗಿರುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎಂದು ಆರೋಪಿಸಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?: ಪೊಲೀಸ್ ಆಯುಕ್ತರು ಎಂದರೆ ಬೆಂಗಳೂರು 15 ಮಿಲಿಯನ್ ನಾಗರಿಕರನ್ನು ರಕ್ಷಿಸುವ ಸಂಸ್ಥೆಯಾಗಿದೆ. ಆಡಳಿತಾರೂಢ ರಾಜ್ಯ ಸರ್ಕಾರ ಮತ್ತು ಅಧಿಕಾರದಲ್ಲಿರುವ ಪಕ್ಷದ ರಾಜಕಾರಣಿಯೊಬ್ಬರು ಮಾಧ್ಯಮಗಳಲ್ಲಿ ಆಯುಕ್ತರನ್ನು ಸುಳ್ಳುಗಾರ ಎಂದು ಕರೆಯುವುದು ಮುಖ್ಯಮಂತ್ರಿ ಮತ್ತು ಸರ್ಕಾರವನ್ನು ಅವಮಾನಿಸುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪ್ರಧಾನಿ ತವರಲ್ಲೇ ಭೀಕರ ದುರಂತ – ಕೆಮಿಕಲ್ ಫ್ಯಾಕ್ಟರಿ ಸ್ಫೋಟಗೊಂಡು 6 ಮಂದಿ ಸಾವು

    ಇತ್ತೀಚೆಗಷ್ಟೇ ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ. ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷವನ್ನು ಸೇರಿದ್ದಾರೆ. ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ಆಪ್ ಪಕ್ಷದ ಧ್ವಜ ಹಿಡಿದರು. ಇದನ್ನೂ ಓದಿ: ಮುಸ್ಕಾನ್‍ರನ್ನು ತನಿಖೆ ನಡೆಸುವಂತೆ ಸಿಎಂಗೆ ಅನಂತ್‍ಕುಮಾರ್ ಹೆಗ್ಡೆ ಪತ್ರ

  • ಯಾರು ಸತ್ತರೂ ಹೆಣದ ಮೇಲೆ ಬಿಜೆಪಿಯವರು ರಾಜಕಾರಣ ಮಾಡ್ತಾರೆ: ತಂಗಡಗಿ

    ಯಾರು ಸತ್ತರೂ ಹೆಣದ ಮೇಲೆ ಬಿಜೆಪಿಯವರು ರಾಜಕಾರಣ ಮಾಡ್ತಾರೆ: ತಂಗಡಗಿ

    ಕೊಪ್ಪಳ: ಯಾರಾದರೂ ಸತ್ತರೆ ಅದು ದುಃಖ. ಆದರೆ ಆ ಹೆಣದ ಮೇಲೆ ಬಿಜೆಪಿಯವರು ರಾಜಕಾರಣ ಮಾಡುತ್ತಾರೆ. ಯಾರು ಎಲ್ಲೇ ಸತ್ತರೂ ಅದನ್ನೇ ಇಟ್ಟುಕೊಂಡು ಬಿಜೆಪಿಯವರು ದುಷ್ಟ ರಾಜಕಾರಣ ಮಾಡುತ್ತಾರೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಆಕ್ರೋಶ ಹೊರಹಾಕಿದರು.

    ಚಂದ್ರು ಕೊಲೆ ಪ್ರಕರಣ ಕುರಿತಾಗಿ ಕೊಪ್ಪಳದ ಕಾರಟಗಿಯಲ್ಲಿ ಮಾತನಾಡಿದ ತಂಗಡಗಿ, ಕಮಲ್ ಪಂಥ್ ಒಳ್ಳೆಯ ಆಡಳಿತಗಾರ. ಆದರೆ ಹೋಂ ಮಿನಿಸ್ಟರ್‌ಗೆ ನಾಚಿಕೆ, ಮಾನ ಇಲ್ಲ. ಕೊಲೆ ವಿಚಾರ ಅವರಿಗೆ ಗೊತ್ತಿರುತ್ತಾ ಅಥವಾ ಅಧಿಕಾರಿಗಳಿಗೆ ಗೊತ್ತಿರುತ್ತಾ? ಹೋಂ ಮಿನಿಸ್ಟರ್‌ಗೆ ಜ್ಞಾನ ಇದೆಯೋ ಇಲ್ಲವೋ ಎಂಬುದನ್ನು ಹುಡುಕಬೇಕಿದೆ. ಹೆಣದ ಮೇಲೆ ರಾಜಕಾರಣ ಮಾಡುವುದನ್ನು ಬಿಜೆಪಿ ನಾಯಕರು ಸಮರ್ಥನೆ ಮಾಡಿಕೊಳ್ಳುತ್ತಾರೆ. ಚುನಾವಣೆ ಬಂದ ತಕ್ಷಣ ಪಾಕಿಸ್ತಾನ, ಸೈನಿಕರು ಹಾಗೂ ಧರ್ಮ ನೆನಪಾಗುತ್ತದೆ ಎಂದು ತಂಗಡಗಿ ಗುಡುಗಿದರು. ಇದನ್ನೂ ಓದಿ: ಕಾಂಗ್ರೆಸ್‍ನವರು ಕೇಸರಿ ಶಲ್ಯ ಧರಿಸಿರೋದು ಒಳ್ಳೆಯ ಸಂಕೇತ: ಬೊಮ್ಮಾಯಿ

    ಕೇಸರಿ ಬಿಜೆಪಿಯವರ ಅಪ್ಪನ ಆಸ್ತಿ ಅಲ್ಲ. ಕೇಸರಿ ನನ್ನದು, ನಾನು ಹಿಂದೂ, ಬಿಜೆಪಿಯವರು ಕೆಟ್ಟ ಹಿಂದೂ ಹುಳಗಳು. ಕೇಸರಿ ತ್ಯಾಗದ ಸಂಕೇತ. ಆದರೆ ಇವರು ಕೇಸರಿ ಹಾಕಿಕೊಂಡು ಬೆಂಕಿ ಹಚ್ಚುತ್ತಾರೆ. ಕಾಳಿ ಸ್ವಾಮಿಗಳೇ ನಿಮಗೆ ಕೈ ಮುಗಿಯುತ್ತೇನೆ. ಕೇಸರಿ ಹಾಕೊಂಡು ಕೋಳಿ ಕಟ್ ಮಾಡಬೇಡಿ. ಕೇಸರಿಗೆ ಒಂದು ಶಕ್ತಿ ಇದೆ. ಕೇಸರಿ ಹಾಕಿಕೊಂಡು ಕೋಳಿ ಕೊಯ್ಯುತ್ತೇನೆ ಅಂದ್ರೆ ಏನ್ ರೀ ಎಂದು ಕಿಡಿಯಾದರು. ಇದನ್ನೂ ಓದಿ: ಬೊಮ್ಮಾಯಿ ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆ: ಸಿದ್ದರಾಮಯ್ಯ

    ರಾಜ್ಯದಲ್ಲಿ ನಡೆಯೋ ಘಟನೆಗಳ ಹಿಂದೆ ಬೊಮ್ಮಾಯಿ ಇದ್ದಾರೆ. ಇಡೀ ಸರ್ಕಾರದ ಬೆಳವಣಿಗೆ ಮಂತ್ರಿ ಮಂಡಲದಿಂದಲೇ ನಡೆಯುತ್ತಿದೆ. ಆದರೂ ರಾಜ್ಯದ ಮುಖ್ಯಮಂತ್ರಿ ಒಂದು ಮಾತು ಆಡುತ್ತಿಲ್ಲ. ಕಲ್ಲಂಗಡಿ ಕಿತ್ತು ಬಿಸಾಡುತ್ತಿದ್ದರೂ ಇವರದ್ದು ಎಂತಹ ಮನಸ್ಥಿತಿ? ಸರ್ಕಾರದ ಕುಮ್ಮಕ್ಕಿನಿಂದಲೇ ಇದೆಲ್ಲಾ ನಡೆಯುತ್ತಿದೆ. ಹೋಮ್ ಮಿನಿಸ್ಟರ್ ಇರುವುದೇ ವೇಸ್ಟ್ ಎಂದು ತಂಗಡಗಿ ಹರಿಹಾಯ್ದರು.

  • ಚಂದ್ರು ಕೊಲೆ ಪ್ರಕರಣ- ಜಮೀರ್ ಹೇಳಿಕೆ ಬೆನ್ನಲ್ಲೇ ಸೈಮನ್ ರಾಜ್ ಕಣ್ಮರೆ

    ಚಂದ್ರು ಕೊಲೆ ಪ್ರಕರಣ- ಜಮೀರ್ ಹೇಳಿಕೆ ಬೆನ್ನಲ್ಲೇ ಸೈಮನ್ ರಾಜ್ ಕಣ್ಮರೆ

    ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ಗಂಭೀರ ಆರೋಪದ ಬೆನ್ನಲ್ಲಿಯೇ ಚಂದ್ರು ಸ್ನೇಹಿತ ಸೈಮನ್ ರಾಜ್ ಕಣ್ಮರೆಯಾಗಿದ್ದಾನೆ. ಇದನ್ನೂ ಓದಿ: ಚಂದ್ರು ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್- ಘಟನೆಯ ಇಂಚಿಂಚು ಮಾಹಿತಿ ನೀಡಿದ ಸ್ನೇಹಿತ ಸೈಮನ್ ರಾಜ್

    ಬೆಂಗಳೂರಿನ ಜೆಜೆ ನಗರ ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರು ಸ್ನೇಹಿತ ಸೈಮನ್ ರಾಜ್ ಹೇಳಿಕೆ ಇದೀಗ ಭಾರೀ ವಿವಾದಕ್ಕೀಡಾಗಿದೆ. ನನ್ನ ಹುಟ್ಟಹಬ್ಬ ಇತ್ತು. ನಾನು ಮತ್ತು ಚಂದ್ರು ಚಿಕನ್ ರೋಲ್ ತಿನ್ನಲು ಹಳೆಗುಡ್ಡದಹಳ್ಳಿಗೆ ಹೋಗಿದ್ದೆವು. ಆದರೆ ಚಿಕನ್ ರೋಲ್ ಅಂಗಡಿ ಕ್ಲೋಸ್ ಆಗಿತ್ತು. ಬಳಿಕ ಅಲ್ಲಿದ್ದ ಬೇಕರಿಗೆ ಹೋಗುವ ವೇಳೆ ಬೈಕ್ ಟಚ್ ಆದ ವಿಚಾರವಾಗಿ ಸ್ಥಳೀಯ ಯುವಕರ ನಡುವೆ ಮಾತಿನ ಚಕಮಕಿ ನಡೆಯಿತು. ಆ ಬಳಿಕ ಮೂರು ಜನ ಬಂದು ಚಾಕು ತೆಗೆದಾಗ ನಾನು ಅವರನ್ನು ತಳ್ಳಿ ಓಡಿ ಹೋಗಿದ್ದೆ. ಚಂದ್ರುವನ್ನು ಓಡಲು ಹೇಳಿದ್ದೆ ಬಳಿಕ ಚಂದ್ರುಗೆ ಫೋನ್ ಮಾಡಿದಾಗ ಫೋನ್ ತೆಗೆದಿರಲಿಲ್ಲ. ನಂತರ ಘಟನಾ ಸ್ಥಳಕ್ಕೆ ವಾಪಸ್ ಬಂದಾಗ ಆತ ರಕ್ತದ ಮಡುವಿನಲ್ಲಿ ಬಿದ್ದಿದ್ದ ನಂತರ ಆಟೋದಲ್ಲಿ ಹಾಕಿಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ್ದೆ ಅಷ್ಟೋತ್ತಿಗೆ ಆತ ಮೃತಪಟ್ಟಿದ್ದ ಎಂದು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಘಟನೆಯ ಬಗ್ಗೆ ವಿವರಿಸಿದ್ದರು. ಇದನ್ನೂ ಓದಿ: ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ, ಚಂದ್ರು ಕೊಲೆಗೆ ಉರ್ದು ಕಾರಣ: ರವಿಕುಮಾರ್

    ಇತ್ತ ಚಂದ್ರ್ರು ಸ್ನೇಹಿತ ಸೈಮನ್‍ಗೆ ಆರ್‍ಎಸ್‍ಎಸ್‍ನಿಂದ 5 ಲಕ್ಷ ಹಣ ನೀಡಲಾಗಿದೆ ಎಂದು ಬಿಜೆಪಿ ವಿರುದ್ಧ ಜಮೀರ್ ಗಂಭೀರ ಆರೋಪ ಮಾಡಿದ್ದರು. ಜಮೀರ್ ಹೇಳಿಕೆ ಬೆನ್ನಲ್ಲೇ ಸೈಮನ್ ರಾಜ್ ಕಣ್ಮರೆಯಾಗಿದ್ದಾನೆ ಎಂಬ ಮಾಹಿತಿ ದೊರಕಿದೆ. ಸೈಮನ್‍ಗೆ ರಾಜಕೀಯ ಮುಖಂಡರ ಆಶ್ರಯ ಬಗ್ಗೆ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಸಿಕ್ಕಿದೆ. ನಿಜಕ್ಕೂ ಸೈಮನ್ ಹಣ ಪಡೆದೇ ಹೇಳಿಕೆ ಕೊಟ್ಟಿದ್ದಾ ಎಂಬ ಅನುಮಾನ ಇದೀಗ ಮೂಡಿದೆ. ಇದನ್ನೂ ಓದಿ: ನಾನು ಯಾವುದೇ ಸುಳ್ಳು ಹೇಳಿಲ್ಲ: ಕಮಲ್ ಪಂಥ್ ಸ್ಪಷ್ಟನೆ

    ಜಮೀರ್ ಹೇಳಿದ್ದೇನು..?
    ಪೊಲೀಸ್ ಆಯುಕ್ತ ಕಮಲ್ ಪಂತ್ ಅವರ ಕಾರ್ಯವೈಖರಿ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯವಿದೆ. ಅಷ್ಟಕ್ಕೂ ಅವರನ್ನು ನೇಮಿಸಿರುವುದು ನಿಮ್ಮ ಬಿಜೆಪಿ ಸರ್ಕಾರವೇ. ಇದೀಗ ನೀವೇ ಅವರ ಮೇಲೆ ಬೆರಳು ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ. ನೀವು ಸೈಮನ್‍ಗೆ ದುಡ್ಡು ಕೊಟ್ಟು ಸುಳ್ಳು ಹೇಳಿಸಿರುವುದು ನಮಗೇನೂ ಗೊತ್ತಿಲ್ಲ ಎಂದು ಕೊಂಡಿದ್ದೀರಾ ಮಾನ್ಯ ರವಿಕುಮಾರ್ ಅವರೇ? ನೀವು ಬಾಯಿಗೆ ಬಂದಂತೆ ಬಣ್ಣ ಹಚ್ಚಿ ಕಥೆ ಹೇಳಿದರೆ ಸತ್ಯ ಎಂದಿಗೂ ಸುಳ್ಳಾಗದು ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಬಿಜೆಪಿಯವರು ಸೈಮನ್‌ಗೆ ದುಡ್ಡು ಕೊಟ್ಟು ಸುಳ್ಳು ಹೇಳಿಸುತ್ತಿದ್ದಾರೆ: ಜಮೀರ್ ಅಹ್ಮದ್

  • ಬಿಜೆಪಿಯವರು ಸೈಮನ್‌ಗೆ ದುಡ್ಡು ಕೊಟ್ಟು ಸುಳ್ಳು ಹೇಳಿಸುತ್ತಿದ್ದಾರೆ: ಜಮೀರ್ ಅಹ್ಮದ್

    ಬಿಜೆಪಿಯವರು ಸೈಮನ್‌ಗೆ ದುಡ್ಡು ಕೊಟ್ಟು ಸುಳ್ಳು ಹೇಳಿಸುತ್ತಿದ್ದಾರೆ: ಜಮೀರ್ ಅಹ್ಮದ್

    ಬೆಂಗಳೂರು: ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರನ್ನು ಪ್ರಜ್ಞಾವಂತರು, ಅನುಭವಿಗಳು ಎಂದು ಭಾವಿಸಿದ್ದೆ. ಆದರೆ ಅವರು ಛಲವಾದಿಪಾಳ್ಯದ ಯುವಕ ಚಂದ್ರುವಿನ ಕೊಲೆ ಪ್ರಕರಣಕ್ಕೆ ಇಲ್ಲದ ಕಥೆಗಳನ್ನು ತಳುಕು ಹಾಕಿ ಇಷ್ಟು ಕೀಳುಮಟ್ಟದ ಹೇಳಿಕೆ ನೀಡುತ್ತಾರೆ ಎಂದು ಭಾವಿಸಿರಲಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿದರು.

    ಶನಿವಾರ ವಿಧಾನಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಜಮೀರ್, ಯಾವುದೇ ಪ್ರಕರಣದ ತನಿಖೆ ಮಾಡುವವರು ಪೊಲೀಸರು. ಬಿಜೆಪಿ ಅಥವಾ ಆರ್‌ಎಸ್‌ಎಸ್ ಅಲ್ಲ. ಇಂದು ಮನಬಂದಂತೆ ಕೀಳುಮಟ್ಟದ ಹೇಳಿಕೆ ನೀಡಿರುವ ಎಂಎಲ್‌ಸಿ ರವಿಕುಮಾರ್ ಅವರೂ ಅಲ್ಲ. ಏಪ್ರಿಲ್ 5 ರ ರಾತ್ರಿ ನಡೆದ ಘಟನೆ ಕುರಿತು ಸ್ವತಃ ಸೈಮನ್ ನೀಡಿರುವ ಹೇಳಿಕೆಯ ಎಫ್‌ಐಆರ್ ಪ್ರತಿಯನ್ನು ಹಿಡಿದು ಪೊಲೀಸ್ ಆಯುಕ್ತ ಕಮಲ್ ಪಂಥ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ ಎಂದರು. ಇದನ್ನೂ ಓದಿ: ಚಂದ್ರು ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್- ಘಟನೆಯ ಇಂಚಿಂಚು ಮಾಹಿತಿ ನೀಡಿದ ಸ್ನೇಹಿತ ಸೈಮನ್ ರಾಜ್

    ಎಫ್‌ಐಆರ್ ಪ್ರತಿಯಲ್ಲೇನಿದೆ?
    ಅಂದು ರಾತ್ರಿ ಛಲವಾದಿಪಾಳ್ಯದ ಮನೆಯಲ್ಲಿ ಹುಟ್ಟುಹಬ್ಬದ ಪ್ರಯುಕ್ತ ಕೇಕ್ ಕಟ್ ಮಾಡಿದ್ದೆವು. ಊಟಕ್ಕಾಗಿ ಚಾಮರಾಜಪೇಟೆ, ಸಿಟಿ ಮಾರ್ಕೆಟ್ ಎಲ್ಲಾ ಕಡೆ ಸುತ್ತಾಡಿದೆವು. ಎಲ್ಲೂ ಊಟ ಸಿಗಲಿಲ್ಲ. ಹಾಗಾಗಿ ಚಿಕನ್ ರೋಲ್ ತಿನ್ನಲು ಗುರದಹಳ್ಳಿ ಬಸ್ ನಿಲ್ದಾಣಕ್ಕೆ ಬಂದಾಗ ನಮ್ಮ ವಾಹನ ಶಾಹೀದ್ ವಾಹನಕ್ಕೆ ಡಿಕ್ಕಿ ಹೊಡೆಯಿತು.

    ಡಿಕ್ಕಿಯ ಪರಿಣಾಮ ಶಾಹೀದ್ ಮತ್ತು ಚಂದ್ರುವಿನ ನಡುವೆ ಮಾತಿಗೆ ಮಾತು ಬೆಳೆದು ಶಾಹೀದ್ ಚಂದ್ರುವಿನ ತೊಡೆಗೆ ಚುಚ್ಚಿದ. ನನಗೆ ಭಯವಾಗಿ ತಕ್ಷಣ ಅಲ್ಲಿಂದ ಓಡಿ ಹೋದೆ. ಪುನಃ ಬೆಳಗಿನ ಜಾವ 4 ಗಂಟೆಗೆ ವಾಪಸ್ ಬಂದು ನೋಡಿದಾಗ ಚಂದ್ರು ರಕ್ತಸ್ರಾವದಿಂದ ಒದ್ದಾಡುತ್ತಿದ್ದ. ತಕ್ಷಣ ಅವನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಿದೆ. ಆದರೂ ಆತ ಬದುಕುಳಿಯಲಿಲ್ಲ ಎಂದು ಚಂದ್ರುವಿನ ಗೆಳೆಯ ಸೈಮನ್ ಪೊಲೀಸರಿಗೆ ಮಾಹಿತಿ ನೀಡಿದ್ದ. ಈ ಬಗ್ಗೆ ಪೊಲೀಸ್ ಆಯುಕ್ತ ಕಮಲ್ ಪಂಥ್ ಟ್ವೀಟ್ ಕೂಡಾ ಮಾಡಿದ್ದಾರೆ. ಇದನ್ನೂ ಓದಿ: ನಾನು ಯಾವುದೇ ಸುಳ್ಳು ಹೇಳಿಲ್ಲ: ಕಮಲ್ ಪಂಥ್ ಸ್ಪಷ್ಟನೆ

    ಪೊಲೀಸ್ ಆಯುಕ್ತ ಕಮಲ್ ಪಂತ್ ಅವರ ಕಾರ್ಯವೈಖರಿ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯವಿದೆ. ಅಷ್ಟಕ್ಕೂ ಅವರನ್ನು ನೇಮಿಸಿರುವುದು ನಿಮ್ಮ ಬಿಜೆಪಿ ಸರ್ಕಾರವೇ. ಇದೀಗ ನೀವೇ ಅವರ ಮೇಲೆ ಬೆರಳು ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿರುವುದು ಖಂಡನೀಯ ಎಂದರು.

    ನೀವು ಸೈಮನ್‌ಗೆ ದುಡ್ಡು ಕೊಟ್ಟು ಸುಳ್ಳು ಹೇಳಿಸಿರುವುದು ನಮಗೇನೂ ಗೊತ್ತಿಲ್ಲ ಎಂದು ಕೊಂಡಿದ್ದೀರಾ ಮಾನ್ಯ ರವಿಕುಮಾರ್ ಅವರೇ? ನೀವು ಬಾಯಿಗೆ ಬಂದಂತೆ ಬಣ್ಣ ಹಚ್ಚಿ ಕಥೆ ಹೇಳಿದರೆ ಸತ್ಯ ಎಂದಿಗೂ ಸುಳ್ಳಾಗದು ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಆಕ್ರೋಶ ವ್ಯಕ್ತಪಡಿಸಿದರು.

  • ನಾನು ಯಾವುದೇ ಸುಳ್ಳು ಹೇಳಿಲ್ಲ: ಕಮಲ್ ಪಂಥ್ ಸ್ಪಷ್ಟನೆ

    ನಾನು ಯಾವುದೇ ಸುಳ್ಳು ಹೇಳಿಲ್ಲ: ಕಮಲ್ ಪಂಥ್ ಸ್ಪಷ್ಟನೆ

    ಬೆಂಗಳೂರು: ನಾನು ಯಾವುದೇ ಸುಳ್ಳು ಹೇಳಿಲ್ಲ, ನಮ್ಮ ತನಿಖೆ ಪ್ರಕಾರ ಬೈಕ್ ಟಚ್ ಆಗಿದ್ದಕ್ಕೆ ಚಂದ್ರು ಕೊಲೆ ನಡೆದಿದೆ ಎಂದು ಕಮಿಷನರ್ ಕಮಲ್ ಪಂಥ್ ಸ್ಪಷ್ಟನೆ ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆ.ಜೆ ನಗರ ಯುವಕ ಚಂದ್ರು ಕೊಲೆ ಪ್ರಕರಣದ ತನಿಖೆಯಲ್ಲಿ ಕಂಡುಕೊಂಡ ವಿಚಾರವನ್ನಷ್ಟೇ ಹೇಳಿದ್ದೇನೆ. ನಮ್ಮ ತನಿಖೆಯಲ್ಲಿ ಮೃತ ಚಂದ್ರು ಜೊತೆಗೆ ಘಟನೆ ವೇಳೆ ಇದ್ದ ಸೈಮನ್ ಹೇಳಿಕೆ ನೀಡಿದ್ದಾನೆ ಎಂದು ಮಾಹಿತಿ ನೀಡಿದರು.

    ನಮ್ಮ ತನಿಖೆ ವೇಳೆ ಬೈಕ್ ಟಚ್ ಆಗಿದ್ದರಿಂದಲೇ ಚಾಕುವಿನಿಂದ ಇರಿದಿದ್ದಾಗಿ ಸೈಮನ್ ಹೇಳಿಕೆ ನೀಡಿದ್ದಾನೆ. ಈ ಹಿನ್ನೆಲೆ ತನಿಖೆ ಮಾಡಿದ್ದ ಬಳಿಕ ಕಂಡುಕೊಂಡ ವಿಚಾರದ ಬಗ್ಗೆ ಮಾಹಿತಿ ನೀಡಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಇದನ್ನೂ ಓದಿ: ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ, ಚಂದ್ರು ಕೊಲೆಗೆ ಉರ್ದು ಕಾರಣ: ರವಿಕುಮಾರ್

    ಪೊಲೀಸ್ ಕಮಿಷನರ್ ಕಮಲ್ ಪಂಥ್ ಸುಳ್ಳು ಹೇಳಿದ್ದಾರೆ. ಚಂದ್ರು ಸ್ನೇಹಿತ ಸೈಮನ್ ರಾಜನ್ ಹೇಳಿರುವುದೇ ಸತ್ಯ. ಚಂದ್ರು ಮನೆಯವರು ಹೇಳಿರುವಂತೆ  ಉರ್ದು ಕಾರಣಕ್ಕಾಗಿಯೇ ಚಂದ್ರು ಕೊಲೆ ಆಗಿರುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಆರೋಪಿಸಿದ್ದರು. ಇದನ್ನೂ ಓದಿ: ಗ್ರಾಮ ಪಂಚಾಯಿತಿ ಅಧ್ಯಕ್ಷನ ಶೋಕಿ ಲೈಫ್ – ಸ್ವಂತ ಗಾಡಿಗೆ ಸರ್ಕಾರದ ಲೋಗೋ ಹಾಕಿ ಪ್ರವಾಸ

  • ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ, ಚಂದ್ರು ಕೊಲೆಗೆ ಉರ್ದು ಕಾರಣ: ರವಿಕುಮಾರ್

    ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ, ಚಂದ್ರು ಕೊಲೆಗೆ ಉರ್ದು ಕಾರಣ: ರವಿಕುಮಾರ್

    ಬೆಂಗಳೂರು: ಪೊಲೀಸ್ ಕಮಿಷನರ್ ಕಮಲ್ ಪಂಥ್ ಸುಳ್ಳು ಹೇಳಿದ್ದಾರೆ. ಚಂದ್ರು ಸ್ನೇಹಿತ ಸೈಮನ್ ರಾಜನ್ ಹೇಳಿರುವುದೇ ಸತ್ಯ. ಚಂದ್ರು ಮನೆಯವರು ಹೇಳಿರುವಂತೆ ಉರ್ದು ಕಾರಣಕ್ಕಾಗಿಯೇ ಚಂದ್ರು ಕೊಲೆ ಆಗಿರುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದರು.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ರವಿಕುಮಾರ್, ಬಿಜೆಪಿ ಈಗಲೂ ಸತ್ಯವನ್ನೇ ಹೇಳುತ್ತಿದೆ. ಗೃಹ ಸಚಿವರಿಗೆ ಮಾಹಿತಿ ಕೊರತೆ ಇತ್ತು. ಪ್ರಕರಣ ಗಂಭೀರವಾಗುತ್ತದೆ ಎಂಬ ಕಾರಣಕ್ಕೆ ಗೃಹ ಸಚಿವರಿಗೆ ತಪ್ಪು ಮಾಹಿತಿ ನೀಡಲಾಗಿದೆ. ಈ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ತನಿಖೆ ನಡೆಸಿ ಸತ್ಯಾಸತ್ಯತೆ ಹೊರಗೆ ಬರಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಬ್ರಿಟಿಷರಿಗೂ, ಬಿಜೆಪಿಗೂ ಯಾವುದೇ ವ್ಯತ್ಯಾಸವಿಲ್ಲ: ಹೆಚ್‍ಡಿಕೆ

    ಪೊಲೀಸ್ ಆಯುಕ್ತರು ಹೇಳಿದ್ದೇನು..?
    ಬೈಕ್ ತಾಗಿದ ವಿಚಾರದಲ್ಲಿ ಚಂದ್ರು ಹಾಗೂ ಶಾಹಿದ್ ಎಂಬಾತನೊಂದಿಗೆ ಜಗಳ ಏರ್ಪಟ್ಟಿತ್ತು. ಜಗಳ ವಿಕೋಪಕ್ಕೆ ತೆರಳಿ, ಚಂದ್ರುವಿನ ಬಲ ತೊಡೆಗೆ ಶಾಹಿದ್ ಚೂರಿಯಿಂದ ಇರಿದು ಪರಾರಿಯಾಗಿದ್ದ ಎಂದು ಪೊಲೀಸ್ ಆಯುಕ್ತ ಕಮಲ್ ಪಂಥ್ ಪ್ರತಿಕ್ರಿಯಿಸಿದ್ದರು. ಇದನ್ನೂ ಓದಿ: ಟಿಪ್ಪು ಜಯಂತಿ ಮಾಡಿ ಹತ್ತಾರು ಕೊಲೆಗಳಿಗೆ ದಾರಿ ಮಾಡ್ಕೊಟ್ಟಿದ್ದು ಸಿದ್ದರಾಮಯ್ಯ: ಪ್ರತಾಪ್ ಸಿಂಹ

    ಗೃಹಸಚಿವರ ಹೇಳಿಕೆ:
    ಚಂದ್ರು ಕೊಲೆ ವಿಚಾರವಾಗಿ ಗೃಹಸಚಿವ ಆರಗ ಜ್ಞಾನೇಂದ್ರ ಉರ್ದು ಭಾಷೆ ಬಾರದ ಕಾರಣ ಆತನ ಕೊಲೆ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಆದರೆ ಬಳಿಕ ತಮ್ಮ ಮಾತನ್ನು ತಪ್ಪಾಗಿ ಹೇಳಿದ್ದಾಗಿ ತಿಳಿಸಿ, ಚಂದ್ರು ಕೊಲೆಗೆ ಬೈಕ್ ಗಲಾಟೆಯೇ ಕಾರಣ ಎಂದಿದ್ದರು.