Tag: ಚಂಬಲ್

  • ಹೆಬ್ಬುಲಿಯನ್ನು ಕೊಂದ ಕಥೆ ಹೇಳುತ್ತಲೇ ಬೆವರಾಡಿಸುತ್ತೆ ಚಂಬಲ್!

    ಹೆಬ್ಬುಲಿಯನ್ನು ಕೊಂದ ಕಥೆ ಹೇಳುತ್ತಲೇ ಬೆವರಾಡಿಸುತ್ತೆ ಚಂಬಲ್!

    ಬೆಂಗಳೂರು: ಐಎಎಸ್ ಅಧಿಕಾರಿ ಡಿಕೆ ರವಿ ಸಾವು ಕೊಲೆಯಲ್ಲ ಆತ್ಮಹತ್ಯೆ ಅಂತ ಸರ್ಕಾರಿ ಫರ್ಮಾನು ಹೊರ ಬಿದ್ದು ವರ್ಷಗಳೇ ಕಳೆದಿವೆ. ಆದರೂ ಈ ನೆಲದ ಜನಸಾಮಾನ್ಯರು, ರವಿಯವರನ್ನು ಹತ್ತಿರದಿಂದ ಬಲ್ಲವರು ಮಾತ್ರ ಅದೊಂದು ಆತ್ಮಹತ್ಯೆ ಅನ್ನೋದನ್ನು ಈ ಕ್ಷಣಕ್ಕೂ ಒಪ್ಪಿಕೊಂಡಿಲ್ಲ. ಹೀಗೆ ಜನಸಾಮಾನ್ಯರ ಗುಮಾನಿಗಳಿಗೆ ತಕ್ಕುದಾಗಿಯೇ ಅದ್ಭುತವಾದೊಂದು ಕಥಾನಕ ಹೊಂದಿರೋ ಜೇಕಬ್ ವರ್ಗೀಸ್ ನಿರ್ದೇಶನದ ಚಂಬಲ್ ತೆರೆ ಕಂಡಿದೆ. ಈ ಮೂಲಕವೇ ಸಿನಿಮಾದಾಚೆಗಿನ ಸತ್ಯವೊಂದಕ್ಕೆ ಸೀಮಿತ ಚೌಕಟ್ಟಿನಲ್ಲಿಯೇ ಕನ್ನಡಿ ಹಿಡಿಯೋ ಪರಿಣಾಮಕಾರಿ ಪ್ರಯತ್ನಕ್ಕೆ ಪ್ರೇಕ್ಷಕರು ಫಿದಾ ಆಗಿದ್ದಾರೆ.

    ಆತ ಯಾವ ಊರಿಗೇ ಅಧಿಕಾರಿಯಾಗಿ ಹೋದರೂ ಜನರ ನಡುವೆಯೇ ಬೆರೆತು, ಜನರ ಒಳಿತನ್ನೇ ಉಸಿರಾಡೋ ಅಪರೂಪದ ಅಧಿಕಾರಿ. ಅವರ ಪ್ರಾಮಾಣಿಕತೆಗೆ ಆಯಾ ಭಾಗದ ಸಾಮಾನ್ಯ ಜನರೂ ಬೆರಗಾಗುತ್ತಾರೆ. ಭ್ರಷ್ಟಾಚಾರವನ್ನ ಬುಡ ಸಮೇತ ಕಿತ್ತು ಹಾಕಿ ಜನಸಾಮಾನ್ಯರ ಜೀವನವನ್ನ ಹಸನಾಗಬೇಕೆನ್ನೋದು ಆತನ ಗುರಿ. ಆದರೆ ಅಧಿಕಾರಸ್ಥರು, ಅವರ ಚೇಲಾಗಳು ಈ ಅಧಿಕಾರಿಯ ವಿರುದ್ಧವೇ ಗುರಾಣಿಯ ಗುರಿಯಿಡುತ್ತಾರೆ. ಅದರ ಫಲವಾಗಿ ಪದೇ ಪದೇ ವರ್ಗಾವಣೆಯ ಅಸ್ತ್ರವೂ ಈ ಅಧಿಕಾರಿಯ ಮೇಲೆ ಪ್ರಯೋಗವಾಗುತ್ತಿರುತ್ತೆ.

    ಅದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಈ ಅಧಿಕಾರಿ ಎಲ್ಲಿಗೇ ಹೋದರೂ, ಯಾವ ಇಲಾಖೆಗೇ ವರ್ಗಾವಣೆ ಆದರೂ ಜನಪರತೆಯನ್ನೇ ಉಸಿರಾಡುತ್ತಾನೆ. ಕಡೆಗೂ ಒಂದಿನ ಈತ ರೇಡು ಮಾಡಿದ ದಾಖಲೆಗಳನ್ನು ಕದಿಯಲು ನಡೆಯೋ ಅಧಿಕಾರಸ್ಥರ ಸಾಹಸ, ಅದಕ್ಕೆ ಸಾಥ್ ನೀಡೋ ಕಿರಾತಕರು… ಅಲ್ಲೊಂದು ಭೀಕರ ಕೊಲೆ ಮತ್ತು ಅದನ್ನು ಆತ್ಮಹತ್ಯೆ ಅಂತ ನಿರೂಪಿಸೋ ಸರ್ಕಸ್ಸು…

    ಇದು ಡಿಕೆ ರವಿ ಸಾವಿನ ಸುತ್ತಲಿನ ಕಥೆ ಅನ್ನೋದಕ್ಕೆ ಇದಕ್ಕಿಂತಲೂ ಯಾವ ಪುರಾವೆಯೂ ಬೇಕಿಲ್ಲ. ಜೇಕಬ್ ವರ್ಗೀಸ್ ರವಿ ಸಾವಿನ ಸುತ್ತಲಿನ ಇಂಚಿಂಚು ಮಾಹಿತಿಯನ್ನು ಕಲೆ ಹಾಕಿ ಈ ಕಥೆ ಸಿದ್ಧಪಡಿಸಿದ್ದಾರೆ. ಯಾವ ಅಬ್ಬರವೂ ಇಲ್ಲದೆ ತಣ್ಣಗೆ ನಿರೂಪಿಸಿದ್ದಾರೆ. ನೀನಾಸಂ ಸತೀಶ್ ಅಂತೂ ಡಿ.ಕೆ.ರವಿಯವರನ್ನೇ ಆವಾಹಿಸಿಕೊಂಡು ನಟಿಸಿದ್ದಾರೆ. ಸೋನು ಗೌಡ ಸೇರಿದಂತೆ ಎಲ್ಲ ಪಾತ್ರಗಳೂ ಕಾಡುವಂತೆ ಮೂಡಿ ಬಂದಿವೆ. ಕಡೆಯ ಕೆಲ ಸೀನುಗಳಲ್ಲಂತೂ ಅವರು ನಟನಾಗಿ ವಿಜೃಂಭಿಸಿದ್ದಾರೆ.

    ಒಟ್ಟಾರೆಯಾಗಿ ಒಂದು ಕಹಿ ಸತ್ಯವನ್ನ ಜೇಕಬ್ ಈ ಸಿನಿಮಾ ಮೂಲಕ ಜಾಹೀರು ಮಾಡಿದ್ದಾರೆ. ಈ ಮೂಲಕ ಸಿನಿಮಾ ಮಾಧ್ಯಮದ ಶಕ್ತಿ ಏನೆಂಬುದನ್ನೂ ಜಾಹೀರು ಮಾಡಿದ್ದಾರೆ. ಈ ಕಾರಣದಿಂದಲೇ ಈ ಸಿನಿಮಾ ಜನರಿಗಿಷ್ಟವಾಗೋದರಲ್ಲಿ ಯಾವ ಅನುಮಾನವೂ ಇಲ್ಲ.

    ರೇಟಿಂಗ್: 4/5 

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚಂಬಲ್: ಸೋನುಗೆ ಇದೆಂಥಾ ಅನ್ಯಾಯ?!

    ಚಂಬಲ್: ಸೋನುಗೆ ಇದೆಂಥಾ ಅನ್ಯಾಯ?!

    ಬೆಂಗಳೂರು: ಚಂಬಲ್ ಚಿತ್ರದಲ್ಲಿ ನೀನಾಸಂ ಸತೀಶ್ ಜೊತೆ ಸೋನು ಗೌಡ ನಾಯಕಿಯಾಗಿ ನಟಿಸಿರೋದು ಗೊತ್ತೇ ಇದೆ. ತನಗೆ ಸಿಗೋ ಪಾತ್ರಗಳೆಲ್ಲ ಸವಾಲಿನವುಗಳೇ ಆಗಿರಲಿ ಅನ್ನೋ ಮನಸ್ಥಿತಿ ಹೊಂದಿರುವ ಸೋನು ಚಂಬಲ್ ಬಗ್ಗೆ, ತಮ್ಮ ಪಾತ್ರದ ಬಗ್ಗೆ ಮತ್ತು ನಿರ್ದೇಶಕರ ಬಗ್ಗೆ ಒಂದಷ್ಟು ವಿಚಾರಗಳನ್ನ ಹಂಚಿಕೊಂಡಿದ್ದಾರೆ.

    ನಿರ್ದೇಶಕ ಜೇಕಬ್ ವರ್ಗೀಸ್ ಸಿನಿಮಾ ಅಂದ ಮೇಲೆ ವಿಶೇಷವಾಗಿಯೇ ಇರುತ್ತೆ. ಆ ನಂಬಿಕೆ ಹೊಂದಿರೋ ಸೋನುಗೆ ಅವರ ಕಡೆಯಿಂದಲೇ ನಟಿಸೋ ಆಫರ್ ಬಂದಾಗ ಥ್ರಿಲ್ ಆಗಿತ್ತಂತೆ. ಆದರೆ ಕಥೆ ಕೇಳಿದರೂ ಕೂಡಾ ಒಂದಷ್ಟು ವಿಚಾರಗಳ ಜೊತೆಗೆ ಇದು ಯಾವ ಬಗೆಯ ಸಿನಿಮಾ ಅನ್ನೋದೇ ಅರ್ಥ ಆಗಿರಲಿಲ್ಲವಂತೆ.

    ಸೋನು ಗೌಡಗೆ ಚಂಬಲ್ ಚಿತ್ರದ ಅಂತರಾಳ ಅರ್ಥವಾದದ್ದು ಚಿತ್ರೀಕರಣದ ಹಂತದಲ್ಲಿಯೇ. ಈ ಚಿತ್ರದಲ್ಲಿ ಅವರು ಸರಳ ಸಹಜ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ನಿರ್ದೇಶಕರು ಮೇಕಪ್ಪನ್ನು ಮುಖಕ್ಕೆ ಸೋಕಿಸಲೂ ಬಿಟ್ಟಿಲ್ಲವಂತೆ. ಹಾಗೆ ಮಾಡಿದರೆ ಈ ಪಾತ್ರದ ಸಹಜ ಗ್ಲಾಮರ್ ಗೆ ಘಾಸಿಯಾಗುತ್ತೆ ಅನ್ನೋದು ಜೇಕಬ್ ವರ್ಗೀಸ್ ಕಾಳಜಿಯಾಗಿತ್ತು.

    ಒಟ್ಟಾರೆಯಾಗಿ ಚಂಬಲ್ ಒಂದು ವಿಶೇಷವಾದ ಚಿತ್ರವಾಗಿ ದಾಖಲಾಗೋದರ ಜೊತೆಗೇ ಭಾರೀ ಗೆಲುವನ್ನೂ ತನ್ನದಾಗಿಸಿಕೊಳ್ಳುತ್ತೆ ಅನ್ನೋ ಭರವಸೆ ಸೋನು ಗೌಡ ಅವರಿಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚಂಬಲ್ ನಲ್ಲಿ ಹಳ್ಳಿ ಹೈದ ಸತೀಶ ಸಿಗೋದಿಲ್ಲ!

    ಚಂಬಲ್ ನಲ್ಲಿ ಹಳ್ಳಿ ಹೈದ ಸತೀಶ ಸಿಗೋದಿಲ್ಲ!

    ನೀನಾಸಂ ಸತೀಶ್ ಪಾಲಿಗೆ ಅಯೋಗ್ಯ ಚಿತ್ರ ದೊಡ್ಡ ಮಟ್ಟದಲ್ಲಿ ಬ್ರೇಕ್ ನೀಡಿರೋದು ಗೊತ್ತೇ ಇದೆ. ಈ ದೆಸೆಯಿಂದಲೇ ಅವರೀಗ ಬೇರೆ ಭಾಷೆಗಳಲ್ಲಿಯೂ ಮಿಂಚುತ್ತಿದ್ದಾರೆ. ಇಂಥಾದ್ದೊಂದು ಗೆಲುವಿನ ಶಕೆಯನ್ನು ಮುಂದುವರೆಸೋ ಸ್ಪಷ್ಟ ಸೂಚನೆಯೊಂದಿಗೆ ಬಿಡುಗಡೆಯೇ ತಯಾರಾಗಿರೋ ಚಿತ್ರ ಚಂಬಲ್.

    ಈ ಸಿನಿಮಾವನ್ನು ನಿರ್ದೇಶಕ ಜೇಕಬ್ ವರ್ಗೀಸ್ ಎಂದಿನಂತೆಯೇ ವಿಶಿಷ್ಟವಾಗಿ ರೂಪಿಸಿದ್ದಾರೆ. ಇದು ಟ್ರೈಲರ್ ಮೂಲಕವೇ ಸ್ಪಷ್ಟವಾಗಿದೆ. ಈ ಕಾರಣದಿಂದಲೇ ಭಾರೀ ಕುತೂಹಲಕ್ಕೆ ಕಾರಣವಾಗಿರುವ ಚಂಬಲ್ ನೀನಾಸಂ ಸತೀಶ್ ಅವರ ಈವರೆಗಿನ ಚಿತ್ರಗಳಿಗಿಂತ ತುಂಬಾ ಭಿನ್ನವಾದದ್ದು. ಈ ಹಿನ್ನೆಲೆಯಲ್ಲಿ ಚಂಬಲ್ ನೀನಾಸಂ ಸತೀಶ್ ಪಾಲಿಗೆ ಬಹು ಮುಖ್ಯವಾದ ಚಿತ್ರ.

    ಇದುವರೆಗೂ ನೀನಾಸಂ ಸತೀಶ್ ಪ್ರಸಿದ್ಧಿ ಪಡೆದಿದ್ದೇ ಮಂಡ್ಯ ನೆಲದ ಮಣ್ಣಿನ ಘಮಲು ಹೊಂದಿರೋ ಭಾಷಾ ಸೊಗಡಿನಿಂದ. ಆದರೆ ಚಂಬಲ್ ಚಿತ್ರದಲ್ಲಿ ಅವರು ನಿಷ್ಠಾವಂತ ಅಧಿಕಾರಿ. ಅವರ ಭಾಷೆ, ಹಾವಭಾವಗಳೆಲ್ಲವೂ ಚಂಬಲ್ ನಲ್ಲಿ ಬದಲಾಗಿದೆ.

    ಈ ಸಿನಿಮಾ ತನ್ನ ವೃತ್ತಿ ಬದುಕಲ್ಲಿ ತುಂಬಾ ವಿಶಿಷ್ಟವಾಗಿದೆ ಅಂತ ಖುದ್ದು ಸತೀಶ್ ಅವರೇ ಹೇಳಿಕೊಂಡಿದ್ದಾರೆ. ಆರಂಭದಲ್ಲಿ ಚಂಬಲ್ ಆಫರ್ ಬಂದಾಗ ಸತೀಶ್ ಒಪ್ಪಿಕೊಂಡಿದ್ದೇ ಬೆರಗಾಗಿಸುವಂಥಾ ಚಿತ್ರಕಥೆ ನೋಡಿಯಂತೆ. ಚಂಬಲ್ ಚಿತ್ರದಲ್ಲಿ ತನಗೆ ತಾನೇ ಹೊಸಬ ಅನ್ನಿಸುವಂಥಾ ಪಾತ್ರಕ್ಕೆ ಸತೀಶ್ ಜೀವ ತುಂಬಿದ್ದಾರಂತೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಂತೆ ನೋಡಲು ಬಂದ ದಾರಿಹೋಕ ‘ಕಳೆದೇ ಹೋದ’- ಭಾವನಾ ಲೋಕಕ್ಕೆ ಕರೆದೊಯ್ಯುತ್ತೆ ಚಂಬಲ್ ಹಾಡು

    ಸಂತೆ ನೋಡಲು ಬಂದ ದಾರಿಹೋಕ ‘ಕಳೆದೇ ಹೋದ’- ಭಾವನಾ ಲೋಕಕ್ಕೆ ಕರೆದೊಯ್ಯುತ್ತೆ ಚಂಬಲ್ ಹಾಡು

    – ಬದುಕನ್ನ ಅರಿಸುತ್ತ ಬಂದವ ತನ್ನಲ್ಲಿಯೇ ಕಳೆದು ಹೋದ

    ಬೆಂಗಳೂರು: ಚಂಬಲ್ ನಟ ನೀನಾಸಂ ಸತೀಶ್ ಚಂದನವನದ ಬಹುನಿರೀಕ್ಷಿತ ಚಿತ್ರ. ಇಂದು ಚಂಬಲ್ ಸಿನಿಮಾದ ಕಳೆದೇ ಹೋದೆ ನಾನು’ ಲಿರಿಕಲ್ ಹಾಡು ಸಂಜೆ ಬಿಡುಗಡೆಯಾಗಿದ್ದು, ಭಾವನಾ ಜೀವಿಗಳನ್ನು ಮಾಯಾ ಲೋಕಕ್ಕೆ ಕರೆದೊಯ್ಯುವಲ್ಲಿ ಯಶಸ್ವಿಯಾಗಿದೆ.

    ‘ಕಳೆದೇ ಹೋದೇ ನಾನು’ ಹಾಡಿನ ಸಾಹಿತ್ಯದ ಪ್ರತಿ ಸಾಲು ವಿಶೇಷ ಅರ್ಥವನ್ನು ಒಳಗೊಂಡಿದೆ. ದಕ್ಷ ಅಧಿಕಾರಿಯಾಗಿ ನೀನಾಸಂ ಸತೀಶ್ ಕಾಣಿಸಿಕೊಂಡಿದ್ದು, ಪ್ರಾಮಾಣಿಕತೆಗೆ ಯಾವೆಲ್ಲ ತೊಂದರೆಗಳು ಎದುರಾಗುತ್ತದೆ. ತನಗೆ ಎದುರಾದ ತೊಂದರೆಗಳನ್ನು ನಾಯಕ ನಟ ಹೇಗೆ ಎದುರಿಸುತ್ತಾನೆ ಎನ್ನುವುದು ಚಿತ್ರ ಬಿಡುಗಡೆಯಾದಾಗ ಉತ್ತರ ಸಿಗುತ್ತದೆ. ಈ ವೇಳೆ ನಾಯಕನ ಮನಸ್ಥಿತಿ ಹೇಗಿರುತ್ತೆ ಎಂಬುದನ್ನು ಪದಪುಂಜಗಳಲ್ಲಿ ಹೇಳುವಲ್ಲಿ ಸಾಹಿತಿ ಜಯಂತ್ ಕಾಯ್ಕಿಣಿ ಯಶಸ್ವಿಯಾಗಿದ್ದಾರೆ. ತಮ್ಮ ಹಾಡುಗಳ ಮೂಲಕ ಭಾವನಾರಹಿತ ಜೀವಿಯನ್ನು ಭಾವನಾ ಲೋಕಕ್ಕೆ ಕರೆದೊಯ್ಯುವಲ್ಲಿ ಕಾಯ್ಕಿಣಿ ಅವರ ಲೇಖನಿ ಏಣಿಯಾಗಿ ಬದಲಾಗಿದೆ.

    ಜಯಂತ್ ಕಾಯ್ಕಿಣಿ ಅವರ ಪದಪುಂಜಗಳಿಗೆ ಪೂರ್ಣಚಂದ್ರ ತೇಜಸ್ವಿ ಅವರ ಕೋಮಲ ಸಂಗೀತದಲ್ಲಿ ಉದಿತ್ ಹರಿತಾಸ್ ತಮ್ಮ ಕಂಠದ ಮೂಲಕ ಜೀವವನ್ನು ನೀಡಿದ್ದಾರೆ. ನೀನಾಸಂ ಸತೀಶ್ ಗೆ ಜೊತೆಯಾಗಿ ಸೋನುಗೌಡ ಕಾಣಿಸಿಕೊಂಡಿದ್ದು, ಸಾಮಾಜಿಕ ಕಥೆಯೊಂದನ್ನು ನಿರ್ದೇಶಕರು ಥ್ರಿಲ್ಲರ್ ವಿಧಾನದಲ್ಲಿ ಹೇಳಲು ಹೊರಟಿರುವ ಸುಳಿವು ಸಿಕ್ಕಿದೆ.

    ನೈಜ ಘಟನೆಯ ಆಧಾರಿತ ಸಿನಿಮಾ ಎಂದು ಚಿತ್ರದ ಟ್ರೇಲರ್ ಹೇಳಿತ್ತು. ಐಎಎಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ನೀನಾಸಂ ಸತೀಶ್ ತಾನು ಕೇವಲ ಹಾಸ್ಯ ಪಾತ್ರಗಳಿಗೆ ಸೀಮಿತ ಅಲ್ಲ ಎಂಬುದನ್ನು ಚಂಬಲ್ ಟ್ರೇಲರ್ ಮೂಲಕ ಹೇಳಿದ್ದಾರೆ. ವಿಭಿನ್ನ ಅನ್ನೋದಕ್ಕಿಂತ ಸಿನಿಮಾ ಯಾರ ಜೀವನಾಧರಿತ ಕಥೆ ಎಂಬುದನ್ನು ಚಿತ್ರ ಸ್ಪಷ್ಟಪಡಿಸಿಲ್ಲ. ಕೇವಲ ಓರ್ವ ಐಎಎಸ್ ಅಧಿಕಾರಿಯ ಜೀವನದ ಎಳೆಯ ಮೇಲೆ ಸಿನಿಮಾ ಮಾಡಲಾಗಿದೆ ಎಂಬುದನ್ನ ಹೇಳಿಕೊಂಡಿದೆ. ಇನ್ನು ಟ್ರೇಲರ್ ನೋಡಿದ ಜನರು ಮಾತ್ರ ಇದು ದಕ್ಷ ಅಧಿಕಾರಿ ಡಿ.ಕೆ.ರವಿ ಅವರ ಕಥೆ ಅಂತಾನೇ ಹೇಳುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚಂಬಲ್ ಸಿನಿಮಾ ವಿರುದ್ಧ ಫಿಲಂ ಚೇಂಬರ್‍ಗೆ ಡಿ.ಕೆ ರವಿ ತಾಯಿ ದೂರು

    ಚಂಬಲ್ ಸಿನಿಮಾ ವಿರುದ್ಧ ಫಿಲಂ ಚೇಂಬರ್‍ಗೆ ಡಿ.ಕೆ ರವಿ ತಾಯಿ ದೂರು

    ಬೆಂಗಳೂರು: ಚಂದನವನದಲ್ಲಿ ಕುತೂಹಲ ಹುಟ್ಟು ಹಾಕಿರುವ ನೀನಾಸಂ ಸತೀಶ್ ನಟನೆಯ ‘ಚಂಬಲ್’ ಚಿತ್ರದ ವಿರುದ್ಧ ದಿ. ಐಎಎಸ್ ಅಧಿಕಾರಿ ಡಿ.ಕೆ.ರವಿ ತಾಯಿ ಫಿಲಂ ಚೇಂಬರ್‍ಗೆ ದೂರು ಸಲ್ಲಿಸಿದ್ದಾರೆ.

    ನನ್ನ ಮಗನ ಜೀವನ ಕಥೆಯನ್ನು ಚಂಬಲ್ ಸಿನಿಮಾದಲ್ಲಿ ಬಳಸಲಾಗಿದೆ. ಈ ಕುರಿತು ಕುಟುಂಬದ ಸದಸ್ಯರ ಕಡೆಯಿಂದ ಚಿತ್ರತಂಡ ಯಾವುದೇ ಅನುಮತಿ ಪಡೆದಿಲ್ಲ. ಬಿಡುಗಡೆಗೆ ಮುನ್ನ ನನಗೆ ಸಿನಿಮಾ ತೋರಿಸಬೇಕು. ಒಂದು ವೇಳೆ ಚಿತ್ರದಲ್ಲಿ ಸತ್ಯಕ್ಕೆ ದೂರವಾದ ಅಂಶಗಳಿದ್ರೆ ದೂರು ಕೊಡಲು ಸಿದ್ಧಳಾಗಿದ್ದೇನೆ ಎಂದು ಡಿ.ಕೆ.ರವಿ ತಾಯಿ ಗೌರಮ್ಮ ವಾಣಿಜ್ಯ ಮಂಡಳಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ದೂರಿನಲ್ಲಿ ಏನಿದೆ?
    ಮಾನ್ಯರೇ,
    ದಿವಂಗತ ಡಿ ಕೆ ರವಿ ಅವರ ತಾಯಿ ಗೌರಮ್ಮನಾದ ನಾನು ನಿಮ್ಮ ಗಮನಕ್ಕೆ ತರಬಯಸುವುದೇನೆಂದರೆ, ಇತ್ತೀಚೆಗೆ ಬಿಡುಗಡೆಯಾದ ಚಂಬಲ್ ಟ್ರೇಲರ್ ನಲ್ಲಿ ನನ್ನ ಮಗನ ಕಥೆ, ಸಂಭಾಷಣೆ ಹಾಗು ಜೀವನ ಶೈಲಿಯನ್ನು ನಮ್ಮ ಅನುಮತಿ ಇಲ್ಲದೆ ಚಿತ್ರೀಕರಣ ಮಾಡಲಾಗಿದೆ. ಆದ ಕಾರಣ ಈ ಚಿತ್ರ ಬಿಡುಗಡೆಯ ಮುನ್ನ ಒಮ್ಮೆ ವೀಕ್ಷಿಸಲು ಇಚ್ಛಿಸುತ್ತೇನೆ. ಚಿತ್ರದಲ್ಲಿ ಸತ್ಯಕ್ಕೆ ದೂರವಾದ ಅಂಶಗಳಿದ್ದಲ್ಲಿ ಚಿತ್ರಕ್ಕೆ ತಡೆತರುವ ಬಗ್ಗೆ ಮತ್ತು ಸರಿಯಿಲ್ಲದಿದ್ದಲ್ಲಿ ಚಿತ್ರದ ನಿರ್ಮಾಪಕರು (ಎನ್ ದಿನೇಶ್ ರಾಜಕುಮಾರ್ ಮತ್ತು ಮಾಥ್ಯೂ ವರ್ಗಿಸ್) ಹಾಗು ನಿರ್ದೇಶಕರು (ಜೇಕಬ್ ವರ್ಗಿಸ್) ಆದ ಇವರ ವಿರುದ್ಧ ಕಾನೂನು ಕ್ರಮಕೈಗೊಂಡು ಕುಟುಂಬಸ್ಥರಿಗೆ ರಾಯಲ್ಟಿ ಪಾವತಿಸಬೇಕಾಗಿ ಕೋರುತ್ತಿದ್ದೇನೆ.

    ತಮ್ಮ ವಿಶ್ವಾಸಿ,
    ಗೌರಮ್ಮ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ‘ಚಂಬಲ್’ನಲ್ಲಿ ಅಡಗಿದ್ಯಾ ಡಿ.ಕೆ.ರವಿ ಸಾವಿನ ರಹಸ್ಯ – ಸತೀಶ್ ನೀನಾಸಂ ಹೇಳಿದ್ದೇನು?

    ‘ಚಂಬಲ್’ನಲ್ಲಿ ಅಡಗಿದ್ಯಾ ಡಿ.ಕೆ.ರವಿ ಸಾವಿನ ರಹಸ್ಯ – ಸತೀಶ್ ನೀನಾಸಂ ಹೇಳಿದ್ದೇನು?

    ಬೆಂಗಳೂರು: ನಟ ಸತೀಶ್ ನೀನಾಸಂ ಅಭಿನಯದ ‘ಚಂಬಲ್’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರು ಇದು ದಕ್ಷ, ಪ್ರಾಮಾಣಿಕ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಜೀವನದ ಕಥೆ ಆಧಾರಿತ ಸಿನಿಮಾವಾಗಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ನಟ ಸತೀಶ್ ನೀನಾಸಂ ಮಾತನಾಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ನಟ ಸತೀಶ್ ನೀನಾಸಂ, ‘ಚಂಬಲ್’ ಸಿನಿಮಾ ಒಬ್ಬ ಐಎಎಸ್ ದಕ್ಷ ಅಧಿಕಾರಿ ಕಥೆಯಾಗಿದೆ. ನಾನು ಈ ಸಿನಿಮಾದಲ್ಲಿ ಸುಭಾಶ್ ಎಂಬ ಪಾತ್ರ ಮಾಡುತ್ತಿದ್ದೇನೆ. ನಾನು ಮಾಡಿದ ಸಿನಿಮಾದಲ್ಲಿ ನನಗೆ ಶಿಕ್ಷಣ ಇರುತ್ತಿರಲಿಲ್ಲ. ಆದರೆ ಈ ಸಿನಿಮಾದಲ್ಲಿ ಒಳ್ಳೆಯ ಶಿಕ್ಷಣ ಇದ್ದು, ಐಎಎಸ್ ಅಧಿಕಾರಿಯಾಗಿದ್ದೇನೆ. ನಾನು ಎಸ್‍ಎಸ್‍ಎಲ್‍ಸಿ ಮಾಡಿ, ಡಿಪ್ಲೋಮಾ ಮಾಡಿದ್ದೇನೆ. ಆದರೆ ಈ ಸಿನಿಮಾದಲ್ಲಿ ನಾನು ಓದಿರುವುದಕ್ಕೂ, ಇದಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ತುಂಬಾ ಕಷ್ಟಪಟ್ಟು ಸಿನಿಮಾ ಮಾಡಿದ್ದೇವೆ ಎಂದು ತಿಳಿಸಿದ್ರು.

    ಚಿತ್ರದ ಕಥೆಗಾಗಿ ಕೆಲವು ಅಧಿಕಾರಿಗಳಿಂದ ಸ್ಪೂರ್ತಿ ಪಡೆದುಕೊಂಡಿದ್ದೇವೆ. ಆದರೆ ಯಾರು ಏನು ಎಂದು ಹೇಳಲು ಸಾಧ್ಯವಿಲ್ಲ. ಆದರೆ ಇದು ಒಬ್ಬ ಐಎಎಸ್ ಅಧಿಕಾರಿಯ ಕಥೆಯಾಗಿದೆ. ನಮ್ಮಲ್ಲಿ ಒಳ್ಳೆಯ ಅಧಿಕಾರಿಗಳಿದ್ದು, ಕೆಲಸ ಮಾಡಿದ್ದಾರೆ. ಆದ್ದರಿಂದ ಈ ಸಿನಿಮಾ ಮಾಡಿದ್ದೇವೆ. ಲೂಸಿಯಾ ನಂತರ ಇದು ಒಂದೊಂದು ಅದ್ಭುತವಾದ ಸಿನಿಮಾವಾಗಿದೆ. ನಾವು ಕಾಣುವ ಸತ್ಯಕ್ಕಿಂತ, ನೀವು ಕಾಣುವ ಸತ್ಯವೇ ಮುಖ್ಯವಾಗಿದೆ. ಟ್ರೇಲರ್ ನೋಡಿ, ಬಳಿಕ ಸಿನಿಮಾ ನೋಡಿ ಎಂದು ಸತೀಶ್ ಹೇಳಿದ್ದಾರೆ.

    ಚಂಬಲ್ ಅನ್ನೋ ಹೆಸರಿನ ಸುತ್ತಾ ನಾನಾ ನಿಗೂಢಗಳು ಅಡಗಿಕೊಂಡಿವೆ. ಒಂದಷ್ಟು ಕ್ರೈಮುಗಳ ಸರಣಿಯೂ ಕಣ್ಮುಂದೆ ಸುಳಿದಾಡುತ್ತೆ. ಅದೇ ಹೆಸರನ್ನು ಶೀರ್ಷಿಕೆಯಾಗಿಸಿಕೊಂಡಿರೋ ಚಂಬಲ್ ಚಿತ್ರದ ಬಗ್ಗೆ ನಾನಾ ಕುತೂಹಲಗಳಿವೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಈ ಚಿತ್ರದ ಟೃಲರ್ ಬಿಡುಗಡೆ ಮಾಡಿದ್ದಾರೆ.

    ಸತೀಶ್ ನೀನಾಸಂ ಈ ಚಿತ್ರದಲ್ಲಿ ಭ್ರಷ್ಟಾಚಾರಿಗಳನ್ನ ಕಂಡ್ರೆ ಬೆಂಕಿಯುಂಡೆಯಂತಾಡೋ ಖಡಕ್ ಅಧಿಕಾರಿಯಾಗಿ ನಟಿಸಿರೋದರ ಸುಳಿವೂ ಕೂಡಾ ಸಿಕ್ಕಿದೆ. ಪ್ರತೀ ಹಂತದಲ್ಲಿಯೂ ಪ್ರೇಕ್ಷಕರನ್ನ ನಿಗಿ ನಿಗಿಸೋ ಕ್ಯೂರಿಯಾಸಿಟಿಯ ಕೆಂಡದ ಮೇಲೆ ತಂದು ಕೂರಿಸುವಂತೆ ಇಡೀ ಚಿತ್ರ ಮೂಡಿ ಬಂದಿದೆ ಎಂಬುದಕ್ಕೆ ಈ ಟ್ರೇಲರ್ ಸಾಕ್ಷಿಯೊದಗಿಸುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಚಂಬಲ್ ಟ್ರೈಲರ್: ಇದು ಭ್ರಷ್ಟಾಚಾರ ಸಿಡಿದೇಳೋ ಸಿಡಿಗುಂಡಿನ ಕಥೆಯಾ?

    ಚಂಬಲ್ ಟ್ರೈಲರ್: ಇದು ಭ್ರಷ್ಟಾಚಾರ ಸಿಡಿದೇಳೋ ಸಿಡಿಗುಂಡಿನ ಕಥೆಯಾ?

    ಬೆಂಗಳೂರು: ಚಂಬಲ್ ಅನ್ನೋ ಹೆಸರಿನ ಸುತ್ತಾ ನಾನಾ ನಿಗೂಢಗಳು ಅಡಗಿಕೊಂಡಿವೆ. ಒಂದಷ್ಟು ಕ್ರೈಮುಗಳ ಸರಣಿಯೂ ಕಣ್ಮುಂದೆ ಸುಳಿದಾಡುತ್ತೆ. ಅದೇ ಹೆಸರನ್ನು ಶೀರ್ಷಿಕೆಯಾಗಿಸಿಕೊಂಡಿರೋ ಚಂಬಲ್ ಚಿತ್ರದ ಬಗ್ಗೆ ನಾನಾ ಕುತೂಹಲಗಳಿದ್ದವು. ಇದೀಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಿಡುಗಡೆ ಮಾಡಿರೋ ಈ ಚಿತ್ರದ ಟೃಲರ್ ಒಂದು ಚಿತ್ರಣವನ್ನ ಕಟ್ಟಿ ಕೊಟ್ಟಿದೆ.

    ನೀನಾಸಂ ಸತೀಶ್ ಈ ಚಿತ್ರದಲ್ಲಿ ಭ್ರಷ್ಟಾಚಾರಿಗಳನ್ನ ಕಂಡ್ರೆ ಬೆಂಕಿಯುಂಡೆಯಂತಾಡೋ ಖಡಕ್ ಅಧಿಕಾರಿಯಾಗಿ ನಟಿಸಿರೋದರ ಸುಳಿವೂ ಕೂಡಾ ಸಿಕ್ಕಿದೆ. ಪ್ರತೀ ಹಂತದಲ್ಲಿಯೂ ಪ್ರೇಕ್ಷಕರನ್ನ ನಿಗಿ ನಿಗಿಸೋ ಕ್ಯೂರಿಯಾಸಿಟಿಯ ಕೆಂಡದ ಮೇಲೆ ತಂದು ಕೂರಿಸುವಂತೆ ಇಡೀ ಚಿತ್ರ ಮೂಡಿ ಬಂದಿದೆ ಎಂಬುದಕ್ಕೆ ಈ ಟ್ರೈಲರ್ ಸಾಕ್ಷಿಯೊದಗಿಸುತ್ತಿದೆ.

    ಅಂತೂ ಈವರೆಗೂ ಕಾಣಿಸಿಕೊಳ್ಳದಿದ್ದ ಗೆಟಪ್ಪಿನಲ್ಲಿ ನೀನಾಸಂ ಸತೀಶ್ ಇಲ್ಲಿ ಕಾಣಿಸಿಕೊಂಡಿದ್ದಾರೆ. ಬಿಡುಗಡೆಯಾಗಿ ಕ್ಷಣಗಳಲ್ಲಿಯೇ ಕೇಳಿ ಬರುತ್ತಿರೋ ಭರಪೂರ ಮೆಚ್ಚುಗೆಗಳೇ ಎಲ್ಲವನ್ನೂ ಹೇಳುತ್ತಿವೆ. ಥ್ರಿಲ್ಲರ್ ವಿಧಾನದಲ್ಲಿ ಸಾಮಾಜಿಕ ಕಥೆಯೊಂದನ್ನ ನಿರ್ದೇಶಕರು ಚಂಬಲ್ ಮೂಲಕ ಹೇಳ ಹೊರಟಿದ್ದಾರೆಂಬ ಸುಳಿವೂ ಸಿಕ್ಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಚಂಬಲ್ ಟ್ರೈಲರ್ ಲಾಂಚ್ ಮಾಡಲಿದ್ದಾರೆ ಪವರ್ ಸ್ಟಾರ್!

    ಚಂಬಲ್ ಟ್ರೈಲರ್ ಲಾಂಚ್ ಮಾಡಲಿದ್ದಾರೆ ಪವರ್ ಸ್ಟಾರ್!

    ಬೆಂಗಳೂರು: ನೀನಾಸಂ ಸತೀಶ್ ಖುಷಿಯ ಸುದ್ದಿಯೊಂದನ್ನು ಜಾಹೀರು ಮಾಡಿದ್ದಾರೆ. ಅವರು ನಟಿಸಿರುವ ಚಂಬಲ್ ಚಿತ್ರದ ಬಗ್ಗೆ ಪ್ರೇಕ್ಷಕರು ಕಾತರಗೊಂಡಿರುವಾಗಲೇ ಟ್ರೈಲರ್ ಹೊರಬರುವ ಸಂಗತಿಯನ್ನವರು ಹೇಳಿಕೊಂಡಿದ್ದಾರೆ. ಪ್ರತಿಭಾವಂತ ನಿರ್ದೇಶಕ ಜೇಕಬ್ ವರ್ಗೀಸ್ ನಿರ್ದೇಶನದ ಈ ಚಿತ್ರದ ಟ್ರೈಲರ್ ಇದೇ ತಿಂಗಳ 31ರಂದು ಬಿಡುಗಡೆಯಾಗಲಿದೆ.

    ಇದೇ ಗುರುವಾರ ಸಂಜೆ 6 ಗಂಟೆಗೆ ಚಂಬಲ್ ಟ್ರೈಲರ್ ಅನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬಿಡುಗಡೆಗೊಳಿಸಲಿದ್ದಾರೆ. ಈ ಮೂಲಕ ಪುನೀತ್ ಚಂಬಲ್ ಚಿತ್ರ ತಂಡಕ್ಕೆ ಹೊಸಾ ಹುಮ್ಮಸ್ಸು ತುಂಬಲಿದ್ದಾರೆ.

    ಓರ್ವ ಭಿನ್ನವಾಗಿ ಆಲೋಚಿಸುವ ಪ್ರತಿಭಾವಂತ ನಿರ್ದೇಶಕನ ಚಿತ್ರಗಳ ಬಗ್ಗೆ ಪ್ರೇಕ್ಷಕರಲ್ಲೊಂದು ಕುತೂಹಲ ಇದ್ದೇ ಇರುತ್ತದೆ. ಜೇಕಬ್ ವರ್ಗೀಸ್ ಈ ಹಿಂದೆ ಸವಾರಿ ಚಿತ್ರದ ಮೂಲಕ ಚಿತ್ರರಂಗದಲ್ಲಿ ಟಾಕ್ ಕ್ರಿಯೇಟ್ ಮಾಡಿದ್ದವರು. ಆ ಬಳಿಕ ಪೃಥ್ವಿ ಎಂಬ ರಿಯಲಿಸ್ಟಿಕ್ ಚಿತ್ರದ ಮೂಲಕ ಯಶದ ಯಾನ ಮುಂದುವರೆಸಿದ್ದ ಜೇಕಬ್, ಸವಾರಿ-2 ಚಿತ್ರದಲ್ಲಿಯೂ ಪ್ರೇಕ್ಷಕರನ್ನು ಸಂತೃಪ್ತಗೊಳಿಸಿದ್ದರು. ಇಂಥಾ ಜೇಕಬ್ ವರ್ಗೀಸ್ ಅವರ 4ನೇ ಚಿತ್ರ ಚಂಬಲ್. ಈ ಹೆಸರು ಕೇಳಿದರೇನೇ ಚಂಬಲ್ ಕಣಿವೆ ನೆನಪಾಗುತ್ತೆ. ಅಲ್ಲಿನ ಮಾರಾಮಾರಿ ಮತ್ತು ಗ್ಯಾಂಗ್‍ಸ್ಟರ್‍ಗಳು ಕಣ್ಮುಂದೆ ಬರುತ್ತಾರೆ. ಈ ಕಥೆಯೂ ಅಂಥಾದ್ದೇ ಆಂತರ್ಯ ಹೊಂದಿದೆಯಾ ಅಥವಾ ಈ ಹೆಸರಿಗೆ ಹತ್ತಿರವಾದ ಬೇರೊಂದು ಕಥೆ ಹೇಳಿದ್ದಾರಾ ಎಂಬ ಪ್ರಶ್ನೆಯಂತೂ ಪ್ರೇಕ್ಷಕರಲ್ಲಿ ಇದ್ದೇ ಇದೆ.

    ಇನ್ನುಳಿದಂತೆ ಚಂಬಲ್ ಚಿತ್ರದ ಮೋಷನ್ ಪೋಸ್ಟರಿನಲ್ಲಿ ನೀನಾಸಂ ಸತೀಶ್ ಅವರ ಲುಕ್ ಗಮನ ಸೆಳೆದಿತ್ತು. ಈ ಹಿಂದಿನ ಯಾವ ಚಿತ್ರದಲ್ಲಿಯೂ ಕಾಣಿಸಿಕೊಳ್ಳದ ಗೆಟಪ್ಪಿನಲ್ಲಿ ಸತೀಶ್ ಮಿಂಚಿದ್ದಾರೆ. ಅದುವೇ ಈ ಚಿತ್ರದಲ್ಲಿ ನೀನಾಸಂ ಪಾತ್ರ ತೀರಾ ಭಿನ್ನವಾಗಿದೆ ಎಂಬ ಸುಳಿವನ್ನೂ ರವಾನಿಸಿತ್ತು. ಇದೀಗ ಟ್ರೈಲರ್ ಮೂಲಕ ಚಂಬಲ್ ಬಗ್ಗೆ ಮತ್ತೊಂದಷ್ಟು ವಿಚಾರಗಳೂ ಹೊರ ಬೀಳಲಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv