Tag: ಚರಣ್

  • ‘ಮ್ಯಾಕ್ಸ್’ ನಂತರ ಚರಣ್‍ ಚಿತ್ರಕ್ಕೆ ಕಾಲ್‍ ಶೀಟ್ ಕೊಟ್ಟ ಸುದೀಪ್

    ‘ಮ್ಯಾಕ್ಸ್’ ನಂತರ ಚರಣ್‍ ಚಿತ್ರಕ್ಕೆ ಕಾಲ್‍ ಶೀಟ್ ಕೊಟ್ಟ ಸುದೀಪ್

    ಮ್ಯಾಕ್ಸ್ (Max) ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗ್ತಿದ್ದಂತೆ.. ‘ಮುಂದಿನ ಚಿತ್ರ ಯಾವುದು ಬಾಸ್’ ಅಂತಿದ್ದಾರೆ ಕಿಚ್ಚನ ಫ್ಯಾನ್ಸ್. ಸುದೀಪ್ (Sudeep) ಕೈಯಲ್ಲಿ ಸದ್ಯ ನಾಲ್ಕೈದು ಚಿತ್ರಗಳಿವೆ. ಅವುಗಳು ಲೈನ್‌ಅಪ್ ಕೂಡ ಆಗಿವೆ. ಆದರೆ, ಮ್ಯಾಕ್ಸ್ ನಂತರ ಯಾವ ಚಿತ್ರದ ಶೂಟಿಂಗ್‌ಗೆ ಸುದೀಪ್ ಹೋಗಲಿದ್ದಾರೆ ಅನ್ನೋದು ಅಭಿಮಾನಿಗಳ ಕಾತರಕ್ಕೆ ಕಾರಣವಾಗಿದೆ.

    ಮ್ಯಾಕ್ಸ್ ಚಿತ್ರೀಕರಣ ಮುಗಿದಿದೆ. ಪೋಸ್ಟ್ಪ್ರೊಡಕ್ಷನ್ ಕೆಲ್ಸನೂ ಆಲ್‌ಮೋಸ್ಟ್ ಕಂಪ್ಲೀಟ್ ಆಗಿದೆ. ಇನ್ನೇನಿದ್ದರೂ ರಿಲೀಸ್ ಮಾಡಿ ಹಬ್ಬ ಮಾಡ್ಬೇಕು ಅಷ್ಟೆ. ಮ್ಯಾಕ್ಸ್ ಮುಗೀತಿದ್ದಂತೆ ಅನೂಪ್ ಭಂಡಾರಿ ಚಿತ್ರದಲ್ಲಿ ಕಿಚ್ಚ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಐದಾರು ವರ್ಷಗಳ ಹಿಂದೆಯೇ ಅನೌನ್ಸ್ ಆಗಿರೋ ಬಿಲ್ಲಾ ರಂಗಾ ಬಾಷಾ ಚಿತ್ರವನ್ನು ಕೈಗೆತ್ತಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ, ಸದ್ಯಕ್ಕೆ ಅನೂಪ್ ಜೊತೆ ಸಿನಿಮಾ ಇಲ್ಲ ಅಂತಿದೆ ಸೋರ್ಸ್.

    ವಿಕ್ರಾಂತ್ ರೋಣಗಿಂತ ಮುಂಚೆಯೇ ಬಿಲ್ಲಾ ರಂಗಾ ಬಾಷಾ ಸೆಟ್ಟೇರಬೇಕಿತ್ತು. ಪೋಸ್ಟರ್ ರಿಲೀಸ್ ಕೂಡ ಆಗಿತ್ತು. ಆದರೆ, ಅದು ಬಿಗ್ ಬಜೆಟ್ ಮೂವ್ಹಿ ಆಗಿರೋದ್ರಿಂದ ಮುಂದಕ್ಕೆ ಹಾಕಬೇಕಾಯಿತಂತೆ. ಅಂದಾಜಿನ ಪ್ರಕಾರ ಇನ್ನೂರು ಕೋಟಿಗೂ ಅಧಿಕ ಬಜೆಟ್ ಬೇಡುವಂಥ ಚಿತ್ರವಂತೆ ಅದು. ಹಾಗಾಗಿ, ತಮಿಳು ನಿರ್ದೇಶಕ ಚರಣ್ (Charan) ಜೊತೆಗಿನ ಚಿತ್ರ ಮುಗಿದ ಮೇಲೆ ಅನೂಪ್ ಚಿತ್ರಕ್ಕೆ ಕೈಹಾಕಲಿದ್ದಾರಂತೆ ಕಿಚ್ಚ. ಅಲ್ಲಿಗೆ ಸುದೀಪ್ ಅವರ ಮುಂದಿನ ಚಿತ್ರವನ್ನು ಚರಣ್ ನಿರ್ದೇಶನ ಮಾಡೋದು ನಿಕ್ಕಿಯಾಗಿದೆ.

  • ಕಿರಣ್ ರಾಜ್ ‘ಮೇಘ’ ಚಿತ್ರಕ್ಕೆ ಚರಣ್ ನಿರ್ದೇಶನ

    ಕಿರಣ್ ರಾಜ್ ‘ಮೇಘ’ ಚಿತ್ರಕ್ಕೆ ಚರಣ್ ನಿರ್ದೇಶನ

    ನ್ನಡತಿ ಧಾರಾವಾಹಿ ಮೂಲಕ ಕನ್ನಡಿಗರ ಮನ ಗೆದ್ದಿರುವ ನಟ ಕಿರಣ್ ರಾಜ್ (Kiran Raj) ನಾಯಕನಾಗಿ ನಟಿಸಿರುವ, ಚರಣ್ ನಿರ್ದೇಶನದ “ಮೇಘ” (Megha) ಚಿತ್ರದ ಟೀಸರ್ (Teaser) ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ಗೀತರಚನೆಕಾರ ವಿ.ನಾಗೇಂದ್ರ ಪ್ರಸಾದ್ ಮೇಘ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮೇಘ ಚಿತ್ರದ ಕುರಿತು ಮಾತನಾಡಿದರು.

    ನಾನು ಮೂಲತಃ ಐಟಿ ಉದ್ಯೋಗಿ. ಕೋವಿಡ್ ನಂತರ ಐಟಿ ಕೆಲಸ ಬಿಟ್ಟು ವಿ.ನಾಗೇಂದ್ರಪ್ರಸಾದ್ ಅವರ ಬಳಿ ಸಿನಿಮಾ ಕೆಲಸ ಕಲಿಯಲು ಆರಂಭಿಸಿದೆ. ಇನ್ನು ಮೇಘ ನನ್ನ ಮೊದಲ ನಿರ್ದೇಶನದ ಚಿತ್ರ. ಮೇಘಗಳು ಆಕಾಶದಲ್ಲಿ ಯಾವಾಗಲೂ ಒಟ್ಟಾಗೆ ಚಲಿಸುತ್ತದೆ. ಆದರೆ ಮಳೆಯನ್ನು ಎಲ್ಲೋ ಸುರಿಸುತ್ತದೆ. ಇದನ್ನೇ ಇಟ್ಟುಕೊಂಡು ಪ್ರೇಮ ಕಥೆ ಸಿದ್ದಮಾಡಿಕೊಂಡೆ. ನಮ್ಮ ಸಿನಿಮಾದಲ್ಲಿ ಮೇಘ ಎಂದರೆ ಪ್ರೀತಿ ಅಂತ. ಕಿರಣ್ ರಾಜ್ ಹಾಗೂ ಕಾಜಲ್ ಕುಂದರ್ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ರಾಜೇಶ್ ನಟರಂಗ ಸೇರಿದಂತೆ ಅನೇಕ ಹಿರಿಯ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಪ್ರೀತಿ, ಸ್ನೇಹ, ಸೆಂಟಿಮೆಂಟ್ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಜೋಯಲ್ ಸಕ್ಕರಿ ಸಂಗೀತ ಸಂಯೋಜಿಸಿರುವ ಐದು ಸುಮಧುರ ಹಾಡುಗಳು ಈ ಚಿತ್ರದಲ್ಲಿದ್ದು, ಎರಡು ಹಾಡುಗಳನ್ನು ಗುರುಗಳಾದ ನಾಗೇಂದ್ರ ಪ್ರಸಾದ್ ಅವರು, ಬಾಕಿ ಮೂರು ಹಾಡುಗಳನ್ನು ನಾನು ಬರೆದಿದ್ದೇನೆ. ಯತೀಶ್ ಹೆಚ್ ಆರ್ ಅವರು ನಿರ್ಮಾಣ ಮಾಡಿದ್ದಾರೆ.  ಚಿತ್ರ ಬಿಡುಗಡೆಯ ಹಂತದಲ್ಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

    ನನಗೆ ಸಿನಿಮಾ ರಂಗ ಹೊಸತು. ನಿರ್ಮಾಪಕರಾದ ಎಂ.ಜಿ.ರಾಮಮೂರ್ತಿ ಹಾಗೂ ತ್ರಿವಿಕ್ರಮ ಸಾಫಲ್ಯ ಅವರ ಮಾರ್ಗದರ್ಶನದಲ್ಲಿ ಕೃಷಿ ಪ್ರೊಡಕ್ಷನ್ಸ್ ಮೂಲಕ ಈ ಚಿತ್ರವನ್ನು ನಿರ್ಮಿಸಿರುವುದಾಗಿ ನಿರ್ಮಾಪಕ ಯತೀಶ್ ಹೆಚ್ ಆರ್ ಹೇಳಿದರು. ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಮೇಘ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಪ್ರೇಮ ಕಥಾನಕವಾಗಿದ್ದರೂ ಚಿತ್ರದ ಎಮೋಷನ್  ಎಲ್ಲರ ಗಮನ ಸೆಳೆಯುತ್ತದೆ. ಉದಾಹರಣೆಗೆ ನಾನು ಈ ಚಿತ್ರದ ಕಥೆ ಕೇಳಿ, ನನ್ನ ಅಪ್ಪನಿಗೆ ಬುಲೆಟ್ ಕೊಡಿಸಿದ್ದೇನೆ. ಈಗಿನ ಪೀಳಿಗೆಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ ಎಂದರು ನಾಯಕ ಕಿರಣ್ ರಾಜ್.

    ಈ ಚಿತ್ರದ ವಿಶೇಷವೆಂದರೆ ನನ್ನ ಹಾಗೂ ನಾಯಕ ಇಬ್ಬರ ಹೆಸರು ಮೇಘ ಎಂದು. ಉತ್ತಮ ಕಥೆಯ ಈ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಾಯಕಿ ಕಾಜಲ್ ಕುಂದರ್.  ಚಿತ್ರದ ಛಾಯಾಗ್ರಾಹಕ ಮತ್ತು ಸಂಕಲನಕಾರ ಗೌತಮ್ ನಾಯಕ್, ನಟಿ ಶ್ರೀವಿದ್ಯ ಹಾಗೂ ತ್ರಿವಿಕ್ರಮ ಸಾಫಲ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

  • ‘ಸೋಮು ಸೌಂಡ್ ಇಂಜಿನಿಯರ್’ ಟೈಟಲ್ ಟ್ರ್ಯಾಕ್ :  ಸೂರಿ ಶಿಷ್ಯನ ಚೊಚ್ಚಲ ಪ್ರಯತ್ನ

    ‘ಸೋಮು ಸೌಂಡ್ ಇಂಜಿನಿಯರ್’ ಟೈಟಲ್ ಟ್ರ್ಯಾಕ್ : ಸೂರಿ ಶಿಷ್ಯನ ಚೊಚ್ಚಲ ಪ್ರಯತ್ನ

    ತ್ತರ ಕರ್ನಾಟಕದ ಸೊಗಡಿನ ಸಿನಿಮಾ ‘ಸೋಮು ಸೌಂಡ್ ಇಂಜಿನಿಯರ್’ (Somu Sound Engineer) ಸುಕ್ಕ ಸೂರಿ ಗರಡಿಯಲ್ಲಿ ಪಳಗಿರುವ ಅಭಿ ಚೊಚ್ಚಲ ಹೆಜ್ಜೆ ಇದು. ವಿಭಿನ್ನ ಶೀರ್ಷಿಕೆ ಜೊತೆಗೆ ವಿಭಿನ್ನ ಕಥಾಹಂದರ ಹೊಂದಿರುವ ಸೋಮು ಸೌಂಡ್ ಇಂಜಿನಿಯರ್ ಸಿನಿಮಾದ ಮೊದಲ ಗಾನಲಹರಿ ಅನಾವರಣಗೊಂಡಿದೆ. ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ.

    ಧನಂಜಯ್ ರಂಜನ್ ಕ್ಯಾಚಿ ಮ್ಯಾಚಿ ಸಾಹಿತ್ಯದ ಹಾಡಿಗೆ ಸ್ವರೂಪ್ ಖಾನ್ ಧ್ವನಿಯಾಗಿ, ಚರಣ್ ರಾಜ್ ಟ್ಯೂನ್ ಹಾಕಿದ್ದಾರೆ. ನಾಯಕ ಸೋಮು ಹಾವ-ಭಾವ, ವರ್ತನೆಯನ್ನು ಈ ಹಾಡಿನಲ್ಲಿ ಸೊಗಸಾಗಿ ಕಟ್ಟಿಕೊಡಲಾಗಿದೆ.  ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿಬಂದಿರುವ ಹಾಡಿಗೆ ಚರಣ್ ಅದ್ಭುತವಾದ ಮ್ಯೂಸಿಕ್ ಟಚ್ ಕೊಟ್ಟಿದ್ದು, ಶ್ರೇಷ್ಠ ಅಭಿನಯ ಅಮೋಘವಾಗಿದೆ.  ಸಲಗದ ಕೆಂಡ ಖ್ಯಾತಿಯ ಶ್ರೇಷ್ಠ ನಾಯಕನಾಗಿ, ಶೃತಿ ಪಾಟೀಲ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಜಹಾಂಗೀರ್, ಅಪೂರ್ವ,ಯಶ್ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಇದನ್ನೂ ಓದಿ:ಕೈಯಲ್ಲಿ ಎದೆಮುಚ್ಚಿಕೊಂಡು ಸೋನು ಪೋಸ್- ಮತ್ಸ್ಯ ಕನ್ಯೆ ಅಂದ್ರು ಫ್ಯಾನ್ಸ್‌‌

    ವೈದ್ಯರಾಗಿರುವ ಕ್ರಿಸ್ಟೋಪರ್ ಕಿಣಿ ಸೋಮ ಸೌಂಡ್ ಇಂಜಿನಿಯರ್ ಗೆ ಹಣ ಹಾಕಿದ್ದು, ಮಾಸ್ತಿ ಮಾತು ಪೋಣಿಸಿದ್ದಾರೆ. ಶಿವಸೇನಾ ಕ್ಯಾಮೆರಾ ಕೈಚಳಕ, ಚರಣ್ ಸಂಗೀತದ ಪುಳಕ ಚಿತ್ರದ ಪ್ಲಸ್‌ ಪಾಯಿಂಟ್. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಇಳಕಲ್ ಗಂಜಿಹಾಳ ಕೂಡಲಸಂಗಮದ ಭಾಗದಲ್ಲಿ ಚಿತ್ರೀಕರಣ ನಡೆಸಲಾಗಿದೆ.

    ಕಡ್ಡಿಪುಡಿ, ಕೆಂಡಸಂಪಿಗೆ, ದೊಡ್ಡಮನೆ ಹುಡುಗ, ಟಗರು ಚಿತ್ರಗಳಿಗೂ ಡೈರೆಕ್ಟರ್ ಅಭಿ ಸಹ ನಿರ್ದೇಶಕರಾಗಿ ದುಡಿದಿದ್ದ ಅಭಿ (Abhi) ಈ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿಸಿರುವ ಸೋಮು ಸೌಂಡ್ ಇಂಜಿನಿಯರ್ ಬಳಗ ರೀ ರೆಕಾರ್ಡಿಂಗ್ ಕೆಲಸದಲ್ಲಿ ಬ್ಯುಸಿಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಿಚ್ಚ ಸುದೀಪ್ ಸಿನಿಮಾ ಮೂಲಕ ಕನ್ನಡಕ್ಕೆ ಬರಲಿದ್ದಾರಾ ನಿರ್ದೇಶಕ ಚರಣ್

    ಕಿಚ್ಚ ಸುದೀಪ್ ಸಿನಿಮಾ ಮೂಲಕ ಕನ್ನಡಕ್ಕೆ ಬರಲಿದ್ದಾರಾ ನಿರ್ದೇಶಕ ಚರಣ್

    ಮೂರು ಕಥೆಗಳನ್ನು ಒಪ್ಪಿಕೊಂಡಿರುವುದಾಗಿ ಮೊನ್ನೆಯಷ್ಟೇ ಕಿಚ್ಚ ಸುದೀಪ್ (Kichcha Sudeep) ಹೇಳಿದ್ದರು. ಈ ಮಾತಿನ ಬೆನ್ನಲ್ಲೇ ರಾಷ್ಟ್ರ ಪ್ರಶಸ್ತಿ ತಮಿಳು ನಿರ್ದೇಶಕ ಚರಣ್ (Charan)  ಕನ್ನಡಕ್ಕೆ ಬರುತ್ತಿರುವುದಾಗಿ ಸುದ್ದಿ ಆಗಿದೆ. ಕಿಚ್ಚನಿಗಾಗಿ ಸಿನಿಮಾ ಮಾಡಲು ಕನ್ನಡದ ಇಬ್ಬರು ನಿರ್ದೇಶಕರು ರೆಡಿಯಾಗಿದ್ದಾರೆ. ಅವರು ಹೆಸರು ಕೂಡ ಬಹಿರಂಗವಾಗಿದೆ ಮತ್ತು ಅವರು ಸಿನಿಮಾ ಮಾಡುವ ಕುರಿತು ಹೇಳಿಕೊಂಡಿದ್ದಾರೆ. ಇದೀಗ ಮತ್ತೊಂದು ಅಚ್ಚರಿಯ ಹೆಸರು ಕೇಳಿ ಬಂದಿದೆ.

    ವಿಕ್ರಾಂತ್ ರೋಣ ಚಿತ್ರದ ನಂತರ ಕಿಚ್ಚನಿಗಾಗಿ ಸಿನಿಮಾ ಮಾಡುತ್ತಿರುವುದಾಗಿ ಅನೂಪ್ ಭಂಡಾರಿ (Anoop Bhandari) ಈ ಹಿಂದೆಯೇ ಹೇಳಿಕೊಂಡಿದ್ದಾರೆ. ಅವರಿಗಾಗಿಯೇ ಕಥೆ ಬರೆಯುತ್ತಿರುವುದಾಗಿಯೂ ತಿಳಿಸಿದ್ದರು. ಅಲ್ಲದೇ, ನಂದಕಿಶೋರ್ (Nandakishore) ಕೂಡ ಕಿಚ್ಚನಿಗಾಗಿ ಸಿನಿಮಾವೊಂದನ್ನು ಮಾಡಲಿದ್ದಾರೆ. ಆ ಕಥೆಯೂ ಲಾಕ್ ಆಗಿದೆ. ಇದೀಗ ಚರಣ್ ಹೆಸರು ಕೇಳಿ ಬಂದಿದೆ.  ಇದನ್ನೂ ಓದಿ:ನಯನತಾರಾ ಬಗ್ಗೆ ಕನ್ನಡದ ‘ಗೂಳಿ’ ನಟಿ ಶಾಕಿಂಗ್ ಹೇಳಿಕೆ

    ಚರಣ್ ತಮಿಳಿನಲ್ಲಿ ಹಿಟ್ ಚಿತ್ರಗಳನ್ನು ಕೊಟ್ಟವರು. ತಮ್ಮ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಅವರು ಪಡೆದಿದ್ದಾರೆ. ಸುದೀಪ್ ಗಾಗಿ ಪ್ಯಾನ್ ಇಂಡಿಯಾ ಸಿನಿಮಾವನ್ನು ಅವರು ಮಾಡಲಿದ್ದಾರಂತೆ. ಅಧಿಕೃತವಾಗಿ ಈ ವಿಷಯವನ್ನು ಚರಣ್ ಆಗಲಿ ಅಥವಾ ಸುದೀಪ್ ಆಗಲಿ ಹೇಳದೇ ಇದ್ದರೂ ಗಾಂಧಿನಗರದಲ್ಲಂತೂ ಈ ಸುದ್ದಿ ಭರ್ಜರಿಯಾಗಿ ಸೇಲ್ ಆಗುತ್ತಿದೆ.

    ಸದ್ಯ ಸುದೀಪ್ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರು ಹೇಳಿದ ಅಭ್ಯರ್ಥಿಗಳ ಪರ ಅವರು ಪ್ರಚಾರ ಮಾಡಲಿದ್ದಾರೆ. ಶಿಗ್ಗಾಂವಿಯಿಂದ ಶುರುವಾದ ಪ್ರಚಾರ ರಾಜ್ಯಾದ್ಯಂತ ಮುಂದುವರೆಯಲಿದೆ. ಚುನಾವಣೆ ನಂತರವೇ ಅವರು ತಮ್ಮ ಸಿನಿಮಾಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

  • ದೂರು ನೀಡಿದರೂ ಕಿಚ್ಚ ಸುದೀಪ್ ಕುರಿತಾದ ಅವಹೇಳನ ನಿಲ್ಲಿಸಿಲ್ಲ ‘ಅಹೋರಾತ್ರ’  ಶಿಷ್ಯ ಚರಣ್

    ದೂರು ನೀಡಿದರೂ ಕಿಚ್ಚ ಸುದೀಪ್ ಕುರಿತಾದ ಅವಹೇಳನ ನಿಲ್ಲಿಸಿಲ್ಲ ‘ಅಹೋರಾತ್ರ’ ಶಿಷ್ಯ ಚರಣ್

    ಕಿಚ್ಚ ಸುದೀಪ್ ಅವರನ್ನು ಸಮಾಜಿಕ ಜಾಲತಾಣದಲ್ಲಿ ಸತತವಾಗಿ ನಿಂದಿಸುತ್ತಿರುವ ಲೇಖಕ, ಧಾರ್ಮಿಕ ಚಿಂತಕ ಅಹೋರಾತ್ರ ಮತ್ತು ಈತನ ಶಿಷ್ಯ ಚರಣ್ ಸೇವಕ ಎನ್ನುವವರ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಸುದೀಪ್ ಪರವಾಗಿ ಬೆಂಗಳೂರಿನ ಸಹಾಯಕ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದರು. ದೂರು ಸಲ್ಲಿಸಿದರೂ, ಸುದೀಪ್ ಅವರನ್ನು ನಿಂದಿಸುವುದನ್ನು ಮಾತ್ರ ಚರಣ್ ನಿಲ್ಲಿಸಿಲ್ಲ. ನಿನ್ನೆ ಮತ್ತೆ ಫೇಸ್ ಬುಕ್ ಲೈವ್ ಗೆ ಬಂದಿರುವ ಚರಣ್, ಮತ್ತೆ ಸುದೀಪ್ ಮತ್ತು ಅಭಿಮಾನಿಗಳನ್ನು ಬಾಯಿಗೆ ಬಂದಂತೆ ನಿಂದಿಸಿದ್ದಾರೆ. ಹೀಗಾಗಿ ಕಠಿಣ ಕ್ರಮಕ್ಕಾಗಿ ಅಭಿಮಾನಿಗಳು ಒತ್ತಾಯಿಸಿದ್ದಾರೆ.

    ಆನ್ ಲೈನ್ ಆಟಕ್ಕೆ ಸಂಬಂಧಿಸಿದಂತೆ ಕಳೆದೊಂದು ವರ್ಷದಿಂದ ನಟ ಕಿಚ್ಚ ಸುದೀಪ್ ಅವರನ್ನು ನಿಂದಿಸುತ್ತಾ ಬಂದಿದ್ದಾರೆ ಅಹೋರಾತ್ರ. ಇತ್ತೀಚೆಗಷ್ಟೇ ತಾವು ಅಹೋರಾತ್ರನ ಶಿಷ್ಯ ಎಂದು ಹೇಳಿಕೊಂಡಿರುವ ಚರಣ್ ಕೂಡ ಅದೇ ಹಾದಿಯನ್ನು ತುಳಿದಿದ್ದಾರೆ. ಹಾಗಾಗಿ ಇವರ  ಮೇಲೆ ಕಾನೂನು ಕ್ರಮ ತಗೆದುಕೊಳ್ಳಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಸಹಾಯಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಇದನ್ನೂ ಓದಿ: ಸೋನಮ್ ಕಪೂರ್ ಗ್ರ್ಯಾಂಡ್ ಬೇಬಿ ಶವರ್‌ಗೆ ದಿನಗಣನೆ: ಗೆಸ್ಟ್ ಲಿಸ್ಟ್ ಔಟ್

    ಭಾರತೀಯ ಚಲನಚಿತ್ರ ರಂಗದಲ್ಲಿ ಹೆಸರಾಂತ ಕಲಾವಿದ ಕಿಚ್ಚ ಸುದೀಪ್ ಎಂದೇ ಪ್ರಖ್ಯಾತರಾಗಿರುವ ಶ್ರೀ ಸುದೀಪ್ ಅವರ ವಿರುದ್ಧ ಅಹೋರಾತ್ರ ಮತ್ತು ಚರಣ್ ಎಂಬುವವರು ಸಾಮಾಜಿಕ ಜಾಲತಾಣಗಳ್ಲಲಿ ಅವಾಚ್ಯ, ಅವಹೇಳನಕಾರಿಯಾಗಿ ಪದಬಳಕೆ ಮಾಡುವ ಮೂಲಕ ಕನ್ನಡ ಚಿತ್ರರಂಗ ಹಾಗೂ ಸುದೀಪ್ ಅವರ ಘನತೆ, ಗೌರವಕ್ಕೆ ಚ್ಯುತಿ ತರುವಂತಹ ಹೇಳಿಕೆ ನೀಡಿರುವುದು ಬೇಸರ ಸಂಗತಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ, ಅಹೋರಾತ್ರ ಮತ್ತು ಚರಣ್ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಚಿತ್ರರಂಗದ ಹಾಗೂ ಕಲಾವಿದರ ಬೆಳವಣಿಗೆಗೆ ಯಾವುದೇ ರೀತಿ ಚ್ಯುತಿ ಬರದಂತೆ ಸಹಕರಿಸಬೇಕೆಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ ಹರೀಶ್ ಇಂದು ದೂರು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಹೋರಾತ್ರ ಮತ್ತು ಶಿಷ್ಯ ಚರಣ್ ವಿರುದ್ಧ ಕ್ರಮಕ್ಕಾಗಿ ಸುದೀಪ್ ಪರ ದೂರು ದಾಖಲಿಸಿದ ಫಿಲ್ಮ್ ಚೇಂಬರ್

    ಅಹೋರಾತ್ರ ಮತ್ತು ಶಿಷ್ಯ ಚರಣ್ ವಿರುದ್ಧ ಕ್ರಮಕ್ಕಾಗಿ ಸುದೀಪ್ ಪರ ದೂರು ದಾಖಲಿಸಿದ ಫಿಲ್ಮ್ ಚೇಂಬರ್

    ನ್ ಲೈನ್ ಆಟಕ್ಕೆ ಸಂಬಂಧಿಸಿದಂತೆ ಕಳೆದೊಂದು ವರ್ಷದಿಂದ ನಟ ಕಿಚ್ಚ ಸುದೀಪ್ ಅವರನ್ನು ನಿಂದಿಸುತ್ತಾ ಬಂದಿರುವ ಲೇಖಕ, ಧಾರ್ಮಿಕ ಚಿಂತಕ ಅಹೋರಾತ್ರ ಮತ್ತು ಈತನ ಶಿಷ್ಯ ಚರಣ್ ಮೇಲೆ ಕಾನೂನು ಕ್ರಮ ತಗೆದುಕೊಳ್ಳಬೇಕು ಎಂದು ಸುದೀಪ್ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಸಹಾಯಕ ಪೊಲೀಸ್ ಆಯುಕ್ತರು ಬೆಂಗಳೂರು ನಗರ ಇವರಿಗೆ ದೂರು ನೀಡಿದ್ದಾರೆ.

    ಭಾರತೀಯ ಚಲನಚಿತ್ರ ರಂಗದಲ್ಲಿ ಹೆಸರಾಂತ ಕಲಾವಿದ ಕಿಚ್ಚ ಸುದೀಪ್ ಎಂದೇ ಪ್ರಖ್ಯಾತರಾಗಿರುವ ಶ್ರೀ ಸುದೀಪ್ ಅವರ ವಿರುದ್ಧ ಅಹೋರಾತ್ರ ಮತ್ತು ಚರಣ್ ಎಂಬುವವರು ಸಾಮಾಜಿಕ ಜಾಲತಾಣಗಳ್ಲಲಿ ಅವಾಚ್ಯ, ಅವಹೇಳನಕಾರಿಯಾಗಿ ಪದಬಳಕೆ ಮಾಡುವ ಮೂಲಕ ಕನ್ನಡ ಚಿತ್ರರಂಗ ಹಾಗೂ ಸುದೀಪ್ ಅವರ ಘನತೆ, ಗೌರವಕ್ಕೆ ಚ್ಯುತಿ ತರುವಂತಹ ಹೇಳಿಕೆ ನೀಡಿರುವುದು ಬೇಸರ ಸಂಗತಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ:ಸೀರೆಯಲ್ಲಿ ಮಿಂಚಿದ ಉರ್ಫಿ ಜಾವೇದ್: ಹೀಗೂ ಸೀರೆ ಉಡಬಹುದಾ ಎಂದ ಫ್ಯಾನ್ಸ್

    ಅಲ್ಲದೇ, ಅಹೋರಾತ್ರ ಮತ್ತು ಚರಣ್ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಚಿತ್ರರಂಗದ ಹಾಗೂ ಕಲಾವಿದರ ಬೆಳವಣಿಗೆಗೆ ಯಾವುದೇ ರೀತಿ ಚ್ಯುತಿ ಬರದಂತೆ ಸಹಕರಿಸಬೇಕೆಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ ಹರೀಶ್ ಇಂದು ದೂರು ನೀಡಿದ್ದಾರೆ.  ಸುದೀಪ್ ಫ್ಯಾನ್ಸ್ ಮತ್ತು ಅಹೋರಾತ್ರ ನಡುವೆ ಹಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಮಾಡುವಂತಹ ಅನೇಕ ಪೋಸ್ಟ್ ಗಳು ಸಿಗುತ್ತವೆ. ಆದರೆ, ಸುದೀಪ್ ಈ ಕುರಿತು ಒಂದೇ ಒಂದು ಪ್ರತಿಕ್ರಿಯೆ ಕೂಡ ನೀಡಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಎಸ್‍ಪಿಬಿ ಆರೋಗ್ಯದಲ್ಲಿ ಚೇತರಿಕೆ- ಕುಳಿತುಕೊಳ್ತಾರೆ, ಊಟ ಮಾಡ್ತಾರೆ ಗಾನ ಗಾರುಡಿಗ

    ಎಸ್‍ಪಿಬಿ ಆರೋಗ್ಯದಲ್ಲಿ ಚೇತರಿಕೆ- ಕುಳಿತುಕೊಳ್ತಾರೆ, ಊಟ ಮಾಡ್ತಾರೆ ಗಾನ ಗಾರುಡಿಗ

    – ಇನ್ನೂ ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಮುಂದುವರಿಕೆ

    ಚೆನ್ನೈ: ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು, ಸ್ವಲ್ಪ ಮಟ್ಟಿಗೆ ಕುಳಿತುಕೊಳ್ಳುವುದು ಹಾಗೂ ಸ್ವಲ್ಪ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ಅವರ ಪುತ್ರ ಚರಣ್ ತಿಳಿಸಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ಮಾಹಿತಿ ನೀಡಿದ್ದು, ಆಪ್ಪನ ಆರೋಗ್ಯ ಸ್ಥಿರವಾಗಿದ್ದು, ವೆಂಟಿಲೇಟರ್‍ನಲ್ಲೇ ಇದ್ದಾರೆ. ಉಳಿದೆಲ್ಲ ವರದಿಗಳು ನಾರ್ಮಲ್ ಆಗಿದ್ದು, ಯಾವುದೇ ಇನ್ಫೆಕ್ಷನ್ ಕಂಡು ಬಂದಿಲ್ಲ. ಆದರೆ ಶ್ವಾಸಕೋಶ ಹಾಗೂ ಉಸಿರಾಟದಲ್ಲಿ ಇನ್ನೂ ಹೆಚ್ಚಿನ ವೃದ್ಧಿಯಾಗಬೇಕಿದೆ. ಇದೀಗ ಅವರು ಕುಳಿತುಕೊಳ್ಳುತ್ತಿದ್ದು, ವೈದ್ಯರ ಸಹಾಯದ ಮೇರೆಗೆ ಪ್ರತಿ ದಿನ 20 ನಿಮಿಷಗಳ ಕಾಲ ಕುಳಿತುಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ಇದು ಅವರಿಗೆ ಒಂದು ರೀತಿಯ ಸವಾಲಾಗಿದ್ದು, ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆ ಅವರಿಗೆ ಶಕ್ತಿ ತುಂಬಿದೆ. ಎಂಜಿಎಂ ಆಸ್ಪತ್ರೆಯ ವೈದ್ಯರು ಹಾಗೂ ನರ್ಸ್‍ಗಳ ತಂಡ ತುಂಬಾ ಕಾಳಜಿ ವಹಿಸಿ ಚಿಕಿತ್ಸೆ ನೀಡುತ್ತಿದೆ ಹಾಗೂ ನೋಡಿಕೊಳ್ಳುತ್ತಿದೆ. ನಮ್ಮ ತಂದೆಗೆ ಹಾಗೂ ಕುಟುಂಬಕ್ಕೆ ತುಂಬಾ ಸಹಕಾರ ನೀಡುತ್ತಿದ್ದಾರೆ ಎಂದು ವಿವರಿಸಿದ್ದಾರೆ.

     

    View this post on Instagram

     

    A post shared by S. P. Charan/Producer/Director (@spbcharan) on

    ಖುಷಿಯ ವಿಚಾರವೆಂದರೆ ನಿನ್ನೆಯಿಂದ ಆಹಾರ ಸೇವಿಸುತ್ತಿದ್ದು, ಇದು ಅವರಿಗೆ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ನಿಮ್ಮೆಲ್ಲರ ಪ್ರೀತಿ ಹಾಗೂ ಪ್ರಾರ್ಥನೆಗೆ ಮತ್ತೊಮ್ಮೆ ಧನ್ಯವಾದ ಅರ್ಪಿಸುತ್ತೇನೆ ಎಂದು ವಿಡಿಯೋದಲ್ಲಿ ಅವರು ತಿಳಿಸಿದ್ದಾರೆ.

    ಕಳೆದ ಆಗಸ್ಟ್ 5ರಂದು ಎಸ್‍ಪಿಬಿ ಅವರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಅವರ ಆರೋಗ್ಯ ಗಂಭೀರವಾದ ಕಾರಣ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೈದ್ಯರ ತಂಡಗಳು ಎಸ್‍ಬಿಪಿಗೆ ಚಿಕಿತ್ಸೆ ನೀಡಿದ್ದವು. ಕಳೆದ 19 ದಿನಗಳಿಂದ ಎಸ್‍ಪಿಬಿಯವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಎಂಟು ದಿನಗಳಿಂದ ಅವರ ಆರೋಗ್ಯ ಪರಿಸ್ಥಿತಿ ತುಂಬಾ ಹದಗೆಟ್ಟಿದ್ದು, ಅವರನ್ನು ಐಸಿಯುವಿನಲ್ಲಿಟ್ಟು ಚಿಕಿತ್ಸೆ ಕೊಡಲಾಗಿತ್ತು. ಕೊರೊನಾ ವೈರಸ್‍ನಿಂದ ಶ್ವಾಸಕೋಶಗಳು ತೀವ್ರವಾಗಿ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ರಕ್ತಸ್ರಾವ ಹೆಚ್ಚಾಗಿದೆ. ಆದ್ದರಿಂದ ಎಕ್ಮೋ ಮೆಷಿನ್ ಅಳವಡಿಸಿ ಚಿಕಿತ್ಸೆ ಮಾಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದರು. ಅಲ್ಲದೆ ಆಗಸ್ಟ್ 24ರಂದು ಅವರಿಗೆ ಕೊರೊನಾ ನೆಗೆಟಿವ್ ಬಂದಿತ್ತು.