Tag: ಚಲುವನಾರಾಯಣಸ್ವಾಮಿ

  • ಮೇಲುಕೋಟೆಯಲ್ಲಿ ಪೊಂಗಲ್, ತುಳಸಿ ಪ್ರಸಾದ ಸ್ವೀಕರಿಸಿದ ನಟಿ ರಚಿತಾ ರಾಮ್

    ಮೇಲುಕೋಟೆಯಲ್ಲಿ ಪೊಂಗಲ್, ತುಳಸಿ ಪ್ರಸಾದ ಸ್ವೀಕರಿಸಿದ ನಟಿ ರಚಿತಾ ರಾಮ್

    ಟಿ ರಚಿತಾ ರಾಮ್ (Rachita Ram) ಮೇಲುಕೋಟೆಗೆ (Melukote) ತೆರಳಿ ತಮ್ಮ ಮನೆದೇವರು ಚೆಲುವನಾರಾಯಣಸ್ವಾಮಿ (Chaluvanarayanaswamy) ದರ್ಶನ ಪಡೆದಿದ್ದಾರೆ. ನಿನ್ನೆ ಮೇಲುಕೋಟೆಗೆ ಆಗಮಿಸಿದ್ದ ಅವರು ದೇವರ ದರ್ಶನ ಪಡೆದು ಪೊಂಗಲ್ ಮತ್ತು ತುಳಸಿ ಪ್ರಸಾದ ಸ್ವೀಕರಿಸಿದ್ದಾರೆ. ಹಲವು ಕಾಲ ದೇವಸ್ಥಾನದಲ್ಲೇ ಇದ್ದು, ಪ್ರಾರ್ಥಿಸಿದ್ದಾರೆ.

    ಈ ವೇಳೆಯಲ್ಲಿ ಮಾತನಾಡಿರುವ ಅವರು ಏಪ್ರಿಲ್ ನಲ್ಲಿ ನಡೆಯುವ ವೈರಮುಡಿ ಜಾತ್ರೆ ಮಹೋತ್ಸವದಲ್ಲಿ ಭಾಗಿಯಾಗಿ ತಮ್ಮ ಕೈಲಾದ ಸೇವೆಯನ್ನು ಮಾಡುವುದಾಗಿ ತಿಳಿಸಿದ್ದಾರೆ. ಹತ್ತು ದಿನಗಳ ಕಾಲ ನಡೆಯುವ ವೈರಮುಡಿ ಜಾತ್ರಾ ಮಹೋತ್ಸವದಲ್ಲಿ ಒಂದು ದಿನ ಬರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಜೊತೆ ಜೊತೆಯಲಿ’ ಶಿಲ್ಪಾ ಅಯ್ಯರ್

    ದೇವರ ದರ್ಶನ ಮುಗಿಸಿ ಆಚೆ ಬರುತ್ತಿದ್ದಂತೆಯೇ ಅಭಿಮಾನಿಗಳು ಅವರ ಸುತ್ತುವರೆದು ಫೋಟೋ ತಗೆಸಿಕೊಂಡು ಸಂಭ್ರಮಿಸಿದರು.  ದೇವರ ದರ್ಶನದ ನಂತರ ಕಲ್ಯಾಣಿಗೂ ಅವರು ತೆರಳಿ ನಾಮಹಾಕಿಸಿಕೊಂಡು ರಾಜಗೋಪುರ ದರ್ಶನ ಮಾಡಲು ತೆರಳಿದರು. ಈ ಸಂದರ್ಭದಲ್ಲಿ ಅರ್ಚಕರಾದ ನಾರಾಯಣ ಪ್ರಸಾದ್ ಭಟ್ಟರ್ ಹಾಗೂ ಇತರರು ಉಪಸ್ಥಿತರಿದ್ದರು. ದೇವಾಲಯದ ಪರಿಚಯವನ್ನು ರಚಿತಾಗೆ ಮಾಡಿಸಿದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಂದು ಮೇಲುಕೋಟೆಯ ಐತಿಹಾಸಿಕ ವೈರಮುಡಿ ಉತ್ಸವ

    ಇಂದು ಮೇಲುಕೋಟೆಯ ಐತಿಹಾಸಿಕ ವೈರಮುಡಿ ಉತ್ಸವ

    ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ಚಲುವನಾರಯಣಸ್ವಾಮಿಯ ಐತಿಹಾಸಿಕ ವೈರಮುಡಿ ಉತ್ಸವ ಇಂದು ಕೊರೊನಾ ಹಿನ್ನೆಲೆ ಸರಳವಾಗಿ ಜರುಗಲಿದೆ. ಹೀಗಾಗಿ ಇಂದು ಬೆಳಗ್ಗೆ ಮಂಡ್ಯದ ಜಿಲ್ಲಾ ಖಜಾನೆಯಿಂದ ವಜ್ರ ಖಚಿತ ವೈರಮುಡಿ ಕಿರೀಟವನ್ನು ಮೇಲುಕೋಟೆಗೆ ಬಿಗಿ ಪೊಲೀಸ್ ಭದ್ರತೆಯೊಂದಿಗೆ ರವಾನೆ ಮಾಡಲಾಗಿದೆ.

    ಜಿಲ್ಲಾಧಿಕಾರಿ ಅಶ್ವಥಿ, ಎಸ್‍ಪಿ ಅಶ್ವಿನಿ, ಚಲುವನಾರಯಣಸ್ವಾಮಿ ದೇವಾಲಯದ ಸ್ಥಾನಿಕರ ಸಮ್ಮುಖದಲ್ಲಿ ಮೊದಲಿಗೆ ಆಭರಣಗಳ ಪರಿಶೀಲನೆ ಮಾಡಲಾಯಿತು. ಬಳಿಕ ಸಂಪ್ರದಾಯದಂತೆ ಜಿಲ್ಲಾಧಿಕಾರಿ ಅವರು ಪೂಜೆ ಸಲ್ಲಿಸಿದರು. ನಂತರ ವಾಡಿಕೆಯಂತೆ ಮಂಡ್ಯದ ಲಕ್ಷ್ಮಿ ಜನಾರ್ಧನ ದೇವಾಲಯದಲ್ಲೂ ಪೂಜೆ ಸಲ್ಲಿಸಲಾಯಿತು. ಮೇಲುಕೋಟೆಗೆ ಹೋಗುವ ಮಾರ್ಗ ಮಧ್ಯದಲ್ಲಿ ಬರುವ ಎಲ್ಲಾ ಗ್ರಾಮದ ಗ್ರಾಮಸ್ಥರು ಪೂಜೆ ಸಲ್ಲಿಸುವುದು ವಾಡಿಕೆ. ಸಂಜೆಯ ವೇಳೆಗೆ ಮೇಲುಕೋಟೆಗೆ ಕಿರೀಟ ತಲುಪಲಿದೆ.

    ರಾತ್ರಿ 8.30 ಕ್ಕೆ ಚಲುವನಾರಾಯಣಸ್ವಾಮಿಗೆ ಕಿರೀಟ ಧಾರಣೆ ಮಾಡಿ ವೈರಮುಡಿ ಉತ್ಸಚವನ್ನು ಆರಂಭ ಮಾಡಲಾಗುತ್ತದೆ. ಮಧ್ಯರಾತ್ರಿ 12.30ರ ವರೆಗೆ ರಾಜ ಬೀದಿಯಲ್ಲಿ ಐತಿಹಾಸಿಕ ಉತ್ಸವ ಜರುಗಲಿದೆ. ಕೊರೊನಾ ಅಟ್ಟಹಾಸ ಇರುವ ಕಾರಣ ಈ ಬಾರಿಯ ಉತ್ಸವಕ್ಕೆ ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯದ ಭಕ್ತರಿಗೆ ನಿಷೇಧ ವಿಧಿಸಲಾಗಿದೆ. ಸ್ಥಳೀಯರು ಮಾತ್ರ ಈ ಉತ್ಸವದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪಾಲ್ಗೊಳ್ಳಬೇಕೆಂದು ಹೀಗಾಗಲೇ ಜಿಲ್ಲಾಡಳಿತ ಸೂಚನೆ ನೀಡಲಾಗಿದೆ.

    ಉತ್ಸವದಲ್ಲಿ ಪಾಲ್ಗೊಳ್ಳದೇ ಇರುವ ಭಕ್ತರು ನಿರಾಶೆಯಾಗಬಾರದೆಂದು ಜಿಲ್ಲಾಡಳಿತ ಯು ಟೂಬ್ ಲೈವ್‍ನಲ್ಲಿ https://youtu.be/O7Y3Q2Oqk_8 ವೈರಮುಡಿ ಉತ್ಸವನ್ನು ಕಣ್ತುಂಬಿಕೊಳ್ಳಲು ವ್ಯವಸ್ಥೆ ಮಾಡಿದೆ.

  • ವೈರಮುಡಿ ಮಹೋತ್ಸವಕ್ಕೂ ತಟ್ಟುತ್ತಾ ಕೊರೊನಾ ಬಿಸಿ – ಭಕ್ತರಲ್ಲಿ ಆತಂಕ

    ವೈರಮುಡಿ ಮಹೋತ್ಸವಕ್ಕೂ ತಟ್ಟುತ್ತಾ ಕೊರೊನಾ ಬಿಸಿ – ಭಕ್ತರಲ್ಲಿ ಆತಂಕ

    ಮಂಡ್ಯ: ಮೇಲುಕೋಟೆಯ ಪ್ರಸಿದ್ಧ ಚಲುವನಾರಾಯಣಸ್ವಾಮಿಯ ವೈರಮುಡಿ ಮಹೋತ್ಸವಕ್ಕೂ ಕೊರೊನಾ ವೈರಸ್ ಭೀತಿ ತಟ್ಟುತ್ತಾ ಎಂಬ ಆತಂಕ ಭಕ್ತರಲ್ಲಿ ಕಾಡುತ್ತಿದೆ.

    ಏಪ್ರಿಲ್ 2ರಂದು ಮೇಲುಕೋಟೆಯ ವಿಶ್ವ ಪ್ರಸಿದ್ಧ ಚಲುವನಾರಾಯಣಸ್ವಾಮಿಯ ವೈರಮುಡಿ ಮಹೋತ್ಸವ ನಡೆಸಲು ಈಗಾಗಲೇ ಮಂಡ್ಯ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆದರೆ ಇತ್ತ ರಾಜ್ಯ ಸೇರಿದಂತೆ ದೇಶಾದ್ಯಂತ ಕೊರೊನಾ ವೈರಸ್‍ನ ಭೀತಿ ಎದುರಾಗಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಸರ್ಕಾರ 1 ವಾರಗಳ ಕಾಲ ಸೀಮಿತ ವಲಯಗಳಿಗೆ ಬಂದ್‍ನ್ನು ಸಹ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯಾದ್ಯಂತ ಯಾವುದೇ ಜಾತ್ರಾ ಮಹೋತ್ಸವಗಳು ಜರುಗದಂತೆ ಆದೇಶವನ್ನೂ ಹೊರಡಿಸಲಾಗಿದೆ.

    ಕೊರೊನಾ ವೈರಸ್ ಭೀತಿ ಒಂದು ವೇಳೆ ನಿಲ್ಲದಿದ್ದರೆ ಏಪ್ರಿಲ್ 2ರಂದು ನಡೆಯುವ ವೈರಮುಡಿ ಮಹೋತ್ಸವಕ್ಕೂ ಕೊರೊನಾ ಬಿಸಿ ತಟ್ಟಲಿದೆ. ವೈರಮುಡಿ ಮಹೋತ್ಸವ ಇನ್ನೂ 15 ದಿನಗಳು ಇರುವ ಕಾರಣ ವೈರಮುಡಿ ಮಹೋತ್ಸವಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಪ್ರತಿ ವರ್ಷ ಈ ಮಹೋತ್ಸವಕ್ಕೆ ಲಕ್ಷಾಂತರ ಜನರು ಬರುತ್ತಿದ್ದರು. ಆದರೆ ಈ ಬಾರಿ ವೈರಮುಡಿ ಮಹೋತ್ಸವ ನಡೆದರು ಸಹ ಕೊರೊನಾ ವೈರಸ್ ಭೀತಿಯಿಂದ ಜನರು ಕಡಿಮೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

    ಇತಿಹಾಸದಲ್ಲೇ ವೈರಮುಡಿ ಮಹೋತ್ಸವ ಒಂದು ಬಾರಿಯೂ ಸಹ ನಿಂತಿಲ್ಲ. ವೈರಮುಡಿ ಮಹೋತ್ಸವ ನಿಲ್ಲುವ ಸಾಧ್ಯತೆ ಕಡಿಮೆ ಇದೆ. ಮಹೋತ್ಸವಕ್ಕೆ 15 ದಿನಗಳು ಇರುವ ಕಾರಣ ಈ ಬಗ್ಗೆ ಸಚಿವರು ಹಾಗೂ ಅರ್ಚಕರ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಮಂಡ್ಯ ಜಿಲ್ಲಾಧಿಕಾರಿ ವೆಂಕಟೇಶ್ ಅವರು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

  • ಚೆಲುವನಾರಾಯಣ ಸ್ವಾಮಿ  ಮೆರವಣಿಗೆಯಲ್ಲಿ ಅಪಶಕುನ- ಉತ್ಸವದ ವೇಳೆ ಮುರಿದು ಬಿದ್ದ ಬೊಂಬು

    ಚೆಲುವನಾರಾಯಣ ಸ್ವಾಮಿ ಮೆರವಣಿಗೆಯಲ್ಲಿ ಅಪಶಕುನ- ಉತ್ಸವದ ವೇಳೆ ಮುರಿದು ಬಿದ್ದ ಬೊಂಬು

    ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ  ಅಂದರೆ ಮೈಸೂರು ರಾಜರಿಗೆ ವಿಶೇಷವಾದ ಭಕ್ತಿ, ನಂಬಿಕೆ ಇದೆ. ಚೆಲುವನಾರಾಯಣ ಸ್ವಾಮಿ  ದೇವಾಲಯದ ಅಭಿವೃದ್ಧಿಗೆ ಮೈಸೂರು ಮಹಾರಾಜರ ಕೊಡುಗೆ ಅಪಾರ. ಹೀಗಾಗಿ ಕೆಲವು ವಿಶೇಷ ಸಂದರ್ಭಗಳಲ್ಲಿ ಚೆಲುವನಾರಾಯಣ ಸ್ವಾಮಿಗೆ ಮೈಸೂರು ಮಹಾರಾಜರ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಗುತ್ತೆ. ಅದೇ ರೀತಿ ವಿಜಯದಶಮಿಯ ದಿನ ಚೆಲುವನಾರಾಯಣ ಸ್ವಾಮಿ ಉತ್ಸವ ಮೂರ್ತಿಗೆ ರಾಜರ ವೇಷ ಧರಿಸಿ ಮೆರವಣಿಗೆ ಮಾಡುವಾಗ ಅಪಶಕುನ ಜರುಗಿ ಹೋಗಿದೆ.

    ಶುಕ್ರವಾರ ವಿಜಯದಶಮಿ ಆದ್ದರಿಂದ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಗೆ ಅಶ್ವವಾಹನೋತ್ಸವ ಸಂಭ್ರಮದಿಂದ ಜರುಗುತ್ತಿತ್ತು. ಮಹಾರಾಜರ ಅಲಂಕಾರದಲ್ಲಿದ್ದ ಚೆಲುವನಾರಾಯಣ ಸ್ವಾಮಿ ಉತ್ಸವ ಮೂರ್ತಿಯನ್ನು ಆಂಜನೇಯಸ್ವಾಮಿ ದೇವಾಲಯದ ಬಳಿಯಿರುವ ಬನ್ನಿ ಮಂಟಪದವರೆಗೂ ಹೊತ್ತುಕೊಂಡು ಬರಲಾಯಿತು. ಆ ನಂತರ ಬನ್ನಿ ಪೂಜೆ ನೆರವೇರಿಸಿ ದೇವಾಲಯಕ್ಕೆ ಮರಳಿ ಬರಲಾಗುತ್ತಿತ್ತು. ಈ ವೇಳೆ ರಾಜ ಬೀದಿಯಲ್ಲಿ ಇದ್ದಕ್ಕಿದ್ದಂತೆ ಅಪಶಕುನ ನಡೆದು ಹೋಯಿತು. ಭಕ್ತಾದಿಗಳು ನೋಡು ನೋಡುತ್ತಿದ್ದಂತೆ, ಅಶ್ವಾರೋಹಿಯಾಗಿದ್ದ ಚೆಲುವನಾರಾಯಣ ಸ್ವಾಮಿಯನ್ನು ಹೊತ್ತಿದ್ದ ಮರದ ಬೊಂಬು ಮುರಿದು ಹೋಯಿತು. ಇನ್ನೇನು ದೇವರ ವಿಗ್ರಹ ನೆಲಕ್ಕೆ ಬಿತ್ತು ಎನ್ನುವಷ್ಟರಲ್ಲಿ ಸುತ್ತಲೂ ನೆರೆದಿದ್ದ ಭಕ್ತರು ಚೆಲುವನಾರಾಯಣ ಸ್ವಾಮಿ ವಿಗ್ರಹ ನೆಲಕ್ಕೆ ಬೀಳದಂತೆ ಹಿಡಿದುಕೊಂಡರು.

    ಈ ಘಟನೆ ನಡೆಯುತ್ತಿದ್ದಂತೆಯೇ ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ಭಕ್ತರು ಇದೇನು ಅಪಶಕುನದ ಮುನ್ಸೂಚನೆಯಾ ಎಂದು ಮಾತನಾಡಲು ಆರಂಭಿಸಿದ್ದಾರೆ. ಹಿಂದೆಲ್ಲ ಮೈಸೂರು ಮಹಾರಾಜರೇ ಮುಂದೆ ನಿಂತು ಚೆಲುವನಾರಾಯಣ ಸ್ವಾಮಿಯ ಅಶ್ವವಾಹನೋತ್ಸವ ನಡೆಸುತ್ತಿದ್ದರು. ಇತಿಹಾಸದಲ್ಲಿ ಒಮ್ಮೆಯೂ ಕೂಡ ಉತ್ಸವದ ವೇಳೆ ಈ ರೀತಿ ಅವಘಡ ಸಂಭವಿಸಿರಲಿಲ್ಲ. ಮೈಸೂರು ಅರಮನೆಯಲ್ಲಿ ಸೂತಕದ ಛಾಯೆ ಇರುವಾಗಲೇ ಇದೇ ಮೊದಲ ಬಾರಿಗೆ ಈ ರೀತಿ ಅವಘಡ ಸಂಭವಿಸಿದೆ. ಈ ರೀತಿಯ ಘಟನೆಗಳನ್ನು ಶಕುನ ಅಪಶಕುನದ ರೀತಿ ನೋಡುತ್ತೇವೆ. ಇದು ಊರಿಗೆ ದೇವರಿಗೆ ಆಗುವ ಅಪಚಾರದ ಮುನ್ಸೂಚನೆ ಇರಬಹುದು. ಮಹಾರಾಜರಿಗೆ ಸಂಕಟ ಆಗುವ ಸಮಸ್ಯೆಗಳು ಹೆಚ್ಚಾಗುವ ಮುನ್ಸೂಚನೆಯೂ ಇರಬಹುದು ಎಂದು ಮೇಲುಕೋಟೆ ಸ್ಥಾನಾಚಾರ್ಯರಾದ ಶ್ರೀನಿವಾಸನ್ ನರಸಿಂಹನ್ ಗುರೂಜಿ ಹೇಳುತ್ತಾರೆ.

    ಉತ್ಸವ ನಡೆಯುವಾಗ ಅಶ್ವಾರೋಹಿಯಾದ ಚೆಲುವನಾರಾಯಣ ಸ್ವಾಮಿಯನ್ನು ಹೊತ್ತಿದ್ದ ಬೊಂಬು ಮುರಿಯಲು ದೇವಾಲಯದ ಆಡಳಿತ ಮಂಡಳಿಯ ನಿರ್ಲಕ್ಷ್ಯ ಕಾರಣ ಎಂಬ ಮಾತು ಕೇಳಿ ಬರುತ್ತಿದೆ. ಉತ್ಸವ ಮೂರ್ತಿ ಹೊರುವ ಬೊಂಬು ಗಟ್ಟಿಯಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸದ ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧವೂ ಅಸಮಾಧಾನ ಕೇಳಿ ಬರುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜ್ಯಾದ್ಯಂತ ಶ್ರೀರಾಮನವಮಿ ಸಂಭ್ರಮ – ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ

    ರಾಜ್ಯಾದ್ಯಂತ ಶ್ರೀರಾಮನವಮಿ ಸಂಭ್ರಮ – ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ

    ಬೆಂಗಳೂರು/ಮಂಡ್ಯ: ರಾಜ್ಯಾದ್ಯಂತ ಇಂದು ಶ್ರೀರಾಮನವಮಿಯನ್ನ ಶ್ರದ್ಧಾಭಕ್ತಿಯಿಂದ ಆಚರಿಸಲಾಗ್ತಿದೆ. ಮುಂಜಾನೆಯೇ ದೇವಾಲಯಗಳಲ್ಲಿ ಭಕ್ತರು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸ್ತಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ, ಬಳ್ಳಾರಿ, ಕಲಬುರಗಿಯಲ್ಲಿ ಜನ ಈ ಬೇಸಿಗೆಯಲ್ಲಿ ಪಾನಕ, ನೀರುಮಜ್ಜಿಗೆ, ಕೋಸಂಬರಿಯನ್ನ ಸಿದ್ಧ ಮಾಡ್ತಿದ್ದಾರೆ.

    ಮಂಡ್ಯದ ಪಾಂಡವಪುರದ ಮೇಲುಕೋಟೆಯಲ್ಲಿ ಐತಿಹಾಸಿಕ ಚಲುವನಾರಾಯಣಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಮನೆ ಮಾಡಿದೆ. ಉತ್ಸವಕ್ಕೆ ಸಾವಿರಾರು ಜನರು ದೇಶದ ನಾನಾ ಭಾಗಗಳಿಂದ ಆಗಮಿಸಲಿದ್ದಾರೆ. ಚಲುವನಾರಾಯಣನಿಗೆ ವೈರಮುಡಿ ಕಿರೀಟಧಾರಣ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಮಂಡ್ಯ ಜಿಲ್ಲಾ ಖಜಾನೆಯಲ್ಲಿರೋ ವೈರಮುಡಿ ಮತ್ತು ಆಭರಣವನ್ನ ಅಧಿಕಾರಿಗಳ ಸಮ್ಮುಖದಲ್ಲಿ ಹೊರ ತೆಗೆಯಲಾಗುತ್ತೆ. ನಂತರ ವಿಶೇಷ ಪೂಜೆ ಬಳಿಕ ಬಿಗಿ ಭದ್ರತೆಯಲ್ಲಿ ರವಾನೆಯಾಗೋ ವೈರಮುಡಿ ಸಂಜೆ ವೇಳೆಗೆ ಮೇಲುಕೋಟೆಗೆ ತಲುಪಲಿದೆ.

    ಮೇಲುಕೋಟೆಗೆ ಕೊಂಡೊಯ್ಯೋ ದಾರಿಯುದ್ದಕ್ಕೂ ಗ್ರಾಮಸ್ಥರು, ಭಕ್ತರು ವೈರಮುಡಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ವೈರಮುಡಿ ಕಿರೀಟ ಧಾರಣೆಯೊಂದಿಗೆ ಬ್ರಹ್ಮೋತ್ಸವ ನಡೆಯಲಿದೆ.