Tag: ಚಲುವರಾಯಸ್ವಾಮಿ

  • ಬಿಜೆಪಿಯವರು ಮದ್ದೂರು ಬಂದ್ ಮಾಡಿದ್ದೇ ಶಾಂತಿ ಕದಡೋಕೆ: ಚಲುವರಾಯಸ್ವಾಮಿ

    ಬಿಜೆಪಿಯವರು ಮದ್ದೂರು ಬಂದ್ ಮಾಡಿದ್ದೇ ಶಾಂತಿ ಕದಡೋಕೆ: ಚಲುವರಾಯಸ್ವಾಮಿ

    ಬೆಂಗಳೂರು: ಮದ್ದೂರು (Maddur) ಈಗ ಶಾಂತವಾಗಿದೆ. ಬಿಜೆಪಿ (BJP) ಅವರು ಬಂದ್ ಮಾಡಿದ್ದೇ ಶಾಂತಿ ಕದಡೋಕೆ ಎಂದು ಸಚಿವ ಚಲುವರಾಯಸ್ವಾಮಿ (Chaluvarayaswamy) ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

    ಮದ್ದೂರು ಗಲಾಟೆ (Maddur Stone Pelting) ವಿಚಾರಕ್ಕೆ ವಿಧಾನಸೌಧದದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈಗ ಎಲ್ಲವೂ ಶಾಂತವಾಗಿದೆ. ಆರಂಭದಲ್ಲಿ ಆದ ಘಟನೆ ಬಗ್ಗೆ ನಾವು ಕ್ರಮ ತೆಗೆದುಕೊಂಡಿದ್ದೇವೆ. ಘಟನೆಗೆ ಕಾರಣರಾದವರನ್ನು ಬಂಧಿಸಲಾಗಿದೆ. ಯಾವುದೇ ಮುಲಾಜಿಲ್ಲದೇ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಆದರೂ ಬಿಜೆಪಿಯವರು ಬಂದ್ ಮಾಡಿದ್ದಾರೆ. ಅವರು ವಾತಾವರಣವನ್ನು ಕಲುಷಿತ ಮಾಡಲು ಹೀಗೆ ಮಾಡಿದ್ರಾ? ಇವರ ಉದ್ದೇಶ ಕೋಮು ಸಂಘರ್ಷ ಸೃಷ್ಟಿ ಮಾಡೋಕೆ ಮಾಡಿದ್ರಾ ಅಂತಾ ಅವರೇ ಯೋಚನೆ ಮಾಡಲಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಂಗಮೇಶ್ ಈ ಜನ್ಮದಲ್ಲೇ ಇಸ್ಲಾಂಗೆ ಹೋಗಿಬಿಡಲಿ: ಯತ್ನಾಳ್ ತರಾಟೆ

    ನಾವು ಕ್ರಮ ತೆಗೆದುಕೊಳ್ಳಲು ನಿಧಾನ ಮಾಡಿದ್ರೆ ಅವರು ಮಾಡಿದ್ದರಲ್ಲಿ ಅರ್ಥ ಇದೆ. ಕ್ರಮ ತೆಗೆದುಕೊಂಡ ಮೇಲೂ ಬಾಯಿಗೆ ಬಂದ ಹಾಗೆ ವೇದಿಕೆಯಲ್ಲಿ ನಿಂತು ಮಾತನಾಡುತ್ತಿದಾರೆ ಅಂದ್ರೆ ಮಂಡ್ಯ ಜಿಲ್ಲೆಯ ಶಾಂತಿ ಕದಡಲು ತಾನೇ?ಮಳವಳ್ಳಿ ಬಂದ್ ಏನಾಗಿದೆ? ಒಂದು ಅಂಗಡಿ ಮುಚ್ಚಿಲ್ಲ. ಬಿಜೆಪಿ ಅವರು ಮಂಡ್ಯಗೆ ಇಂತಹ ವಿಷಯಕ್ಕೆ ಬರಬೇಡಿ. ಇಂತಹ ವಿಷಯಗಳನ್ನ ಇಟ್ಟುಕೊಂಡು ಅಶಾಂತಿ ನಿರ್ಮಾಣ ಮಾಡೋಕೆ ಬರಬೇಡಿ ಎಂದು ಹರಿಹಾಯ್ದರು. ಇದನ್ನೂ ಓದಿ: ಸಿ.ಟಿ ರವಿ ದ್ವೇಷ ಭಾಷಣ ಮಾಡಿದ್ದಕ್ಕೆ FIR ದಾಖಲು – ರಾಮಲಿಂಗಾರೆಡ್ಡಿ ಸಮರ್ಥನೆ

    ಸಿ.ಟಿ ರವಿ ಮೇಲೆ ಎಫ್‌ಐಆರ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿ.ಟಿ ರವಿ ಮಂತ್ರಿ ಆಗಿದ್ದವರು. ಕಾಲು ಮುರಿಯುತ್ತೀವಿ, ಕೈ ಮುರಿತೀವಿ ಅಂದರೆ ಹೇಗೆ? ಸಿ.ಟಿ ರವಿ ಇನ್ನು ಕಲಿಯೋ ಹಾಗೇ ಕಾಣುತ್ತಿಲ್ಲ. ಕಾನೂನು ಇರೋದು ಕ್ರಮ ತೆಗೆದುಕೊಳ್ಳೋಕೆ. ಘಟನೆ ಆಗಿರೋದು ಸತ್ಯ, ಕ್ರಮ ಆಗಿದೆ. ಇದು ಪೂರ್ವ ನಿಯೋಜನೆನಾ ಅಲ್ಲವಾ ಎಂದು ತನಿಖೆ ಆಗಬೇಕು. ನಮ್ಮ ಹುಡುಗರ ಮೇಲೆ ಕ್ರಮ ಆಗಲಿ ಅಂತ ಆ ಸಮುದಾಯದವರು ಹೇಳಿದ್ದಾರೆ. ಬುಧವಾರ ಗಣೇಶ ವಿಸರ್ಜನೆಯಲ್ಲಿ ಎಲ್ಲರೂ ಸಹಕಾರ ಕೊಟ್ಟಿದ್ದಾರೆ. ಮಸೀದಿ ಮುಂದೆಯೇ ಹೋಗಿದ್ದಾರೆ ಎಂದರು. ಇದನ್ನೂ ಓದಿ: Forest Martyrs Day | ಹುತಾತ್ಮರಿಗೆ 50 ಲಕ್ಷ ರೂ. ಪರಿಹಾರ: ಈಶ್ವರ್ ಖಂಡ್ರೆ

  • 21 ಜನರನ್ನು ಬಂಧಿಸಲಾಗಿದೆ, ಮಸೀದಿ ಕಡೆಯಿಂದ ಕಲ್ಲು ಎಸೆದ ಬಗ್ಗೆ ಮಾಹಿತಿ ಇದೆ: ಚಲುವರಾಯಸ್ವಾಮಿ

    21 ಜನರನ್ನು ಬಂಧಿಸಲಾಗಿದೆ, ಮಸೀದಿ ಕಡೆಯಿಂದ ಕಲ್ಲು ಎಸೆದ ಬಗ್ಗೆ ಮಾಹಿತಿ ಇದೆ: ಚಲುವರಾಯಸ್ವಾಮಿ

    – ಅಶೋಕ್ ಸೇರಿದಂತೆ ಬಿಜೆಪಿ ನಾಯಕರ ಕುಮ್ಮಕ್ಕಿನಿಂದ ಇದೆಲ್ಲ ಆಗ್ತಿದೆ
    – ಈ ಹಿಂದೆ ಮಂಗಳೂರಿನಿಂದ ಪಾಂಡವಪುರಕ್ಕೆ ಬಂದು ಏನು ನಡೆಸಿದ್ರು ಗೊತ್ತಿದೆ

    ಬೆಂಗಳೂರು: ಮೆರವಣಿಗೆ ನಡೆಯುವ ಸಂದರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲುಗಳು ಎಸೆದ ಬಗ್ಗೆ ಮಾಹಿತಿ ಇದೆ. ವಿಚಾರಣೆ ನಡೆಸಿ ನಂತರ 21 ಜನರನ್ನು ಬಂಧಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ (N Chaluvaraya Swamy) ಹೇಳಿದ್ದಾರೆ.

    ಮದ್ದೂರಿನಲ್ಲಿ (Maddur) ಗಣೇಶ ವಿಸರ್ಜನೆ ಮೆರವಣಿಗೆ (Ganesha Procession) ವೇಳೆ ಕಲ್ಲು ತೂರಾಟದ (Stone Pelting) ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವ ಹಿಂದೂಗಳ ಮೇಲೂ ಕೇಸ್ ದಾಖಲಾಗಿಲ್ಲ. ಇಷ್ಟು ಬೇಗ ಕ್ರಮ ತೆಗೆದುಕೊಂಡ ಪ್ರಕರಣ ಬೇರೆ ಯಾವುದೂ ಇಲ್ಲ. ಆದರೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಚೋದಿಸುತ್ತಿದ್ದಾರೆ. ಇನ್ನಷ್ಟು ಬಿಗಿಕ್ರಮಗಳನ್ನು ತೆಗೆದುಕೊಳ್ಳಲು ಹೇಳಬಹುದಿತ್ತು. ಅದು ಬಿಟ್ಟು ಕೋಮುಗಲಭೆಗೆ ಪ್ರಚೋದನೆ ಕೊಡುವುದು ಸರಿಯಲ್ಲ ಎಂದರು. ಇದನ್ನೂ ಓದಿ: ಧರ್ಮಸ್ಥಳ, ಚಾಮುಂಡೇಶ್ವರಿ ಆಯ್ತು ಈಗ ಮದ್ದೂರು: ಅಶೋಕ್ ಕಿಡಿ

    ಮದ್ದೂರಿನಲ್ಲಿ ಹಿಂದೆ ಎಂದೂ ಈ ರೀತಿ ನಡೆದಿರಲಿಲ್ಲ. ಹೊರಗಡೆಯಿಂದ ಬಂದು ಯಾರೋ ಗಲಭೆ ಮಾಡಿರಬಹುದು ಎಂಬುದನ್ನೂ ವಿಚಾರಣೆ ಮಾಡುತ್ತಿದ್ದೇವೆ. ಯಾವುದೇ ಸಮಾಜವಿದ್ದರೂ ಅವರ ಮೇಲೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಬಿಜೆಪಿ, ಜೆಡಿಎಸ್‌ನವರು ರಾಜಕೀಯವಾಗಿ ನಮ್ಮನ್ನು ಎದುರಿಸಲು ಆಗದೇ ಪ್ರಚೋದನೆ ಮಾಡುತ್ತಿದ್ದಾರೆ. ನಾವು ಯಾರ ಓಲೈಕೆಯನ್ನ ಕೂಡ ಮಾಡುತ್ತಿಲ್ಲ. ಹಾಗಿದ್ರೆ ಯಾಕೆ 21 ಜನರ ಬಂಧನ ಮಾಡುತ್ತಿದ್ದೆವು? ಇದು ಪೂರ್ವನಿಯೋಜಿತ, ನಮಗೆ ಎಲ್ಲ ಗೊತ್ತಿದೆ. ಈ ಹಿಂದೆ ಮಂಗಳೂರಿನಿಂದ ಪಾಂಡವಪುರಕ್ಕೆ ಬಂದು ಏನು ನಡೆಸಿದ್ರು ಗೊತ್ತಿದೆ ನಮಗೆ. ನಾಗಮಂಗಲದಲ್ಲೂ ನಡೆಸಿದ್ರು, ಈ ಸಲ ಎಚ್ಚರಿಕೆ ವಹಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಒತ್ತಡಕ್ಕೆ ಮಣಿದರೆ ನಾನೇ ಮದ್ದೂರಿಗೆ ಬರಬೇಕಾಗುತ್ತೆ – ಮಂಡ್ಯ ಎಸ್ಪಿಗೆ ಹೆಚ್‌ಡಿಕೆ ಖಡಕ್ ವಾರ್ನಿಂಗ್

    ಇದು ಪೂರ್ವನಿಯೋಜಿತವಾಗಿ ನಡೆದಿದೆ. ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಿದ್ದಾರೆ. ಅಶೋಕ್ ಸೇರಿದಂತೆ ಬಿಜೆಪಿ ನಾಯಕರ ಕುಮ್ಮಕ್ಕಿನಿಂದ ಇದೆಲ್ಲ ಆಗುತ್ತಿದೆ. ನನಗೂ ಕೆಲವು ಸಂಘಟನೆಗಳ ಮುಖಂಡರು ಕರೆ ಮಾಡಿ ಮಾತನಾಡಿದ್ದಾರೆ. ಅವರ ಹೆಸರನ್ನ ಈಗ ಹೇಳಲು ಬಯಸುವುದಿಲ್ಲ. ಬಿಜೆಪಿ ನಾಯಕರೇ ಸಂಘಟನೆಗಳ ಮುಖಂಡರಿಗೆ ಕರೆ ಮಾಡಿ ಪ್ರಚೋದನೆ ಕೊಡುತ್ತಿದ್ದಾರೆ. ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಹಿಸಲು ಆಗುತ್ತಿಲ್ಲ. ವಿಧಾನಸಭೆಯಲ್ಲಿ ನಮ್ಮನ್ನು ಎದುರಿಸಲು ಅವರಿಗೆ ಆಗಿಲ್ಲ. ಹಾಗಾಗಿ ಇಂತಹ ಘಟನೆಗಳು ನಡೆದಾಗ ಪ್ರಚೋದನೆ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮದ್ದೂರಿನಲ್ಲಿ ಗಲಾಟೆ ಮಾಡಿದವರ ಬಂಧನ ಆಗಿದೆ: ಪರಮೇಶ್ವರ್

    ಇನ್ನು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಚಲುವರಾಯಸ್ವಾಮಿ, ತಪ್ಪಿತಸ್ಥರ ವಿರುದ್ಧ ಕಠಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆಯ ವೇಳೆ ಕಲ್ಲು ತೂರಾಟ ನಡೆದಿರುವುದು ವಿಷಾದನೀಯ. ಈ ಬಗ್ಗೆ ಸಮರ್ಪಕ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಇನ್ನು ಮುಂದೆ ಇಂತಹ ದುರ್ವರ್ತನೆ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲು ತಿಳಿಸಲಾಗಿದೆ. ಸಾರ್ವಜನಿಕರು ಈ ದಿಶೆಯಲ್ಲಿ ಸಹಕರಿಸಬೇಕು ಹಾಗೂ ಇಂತಹ ಯಾವುದೇ ರೀತಿಯ ಅಹಿತಕರ ಘಟನೆಗೆ ಎಡೆ ಮಾಡಿಕೊಡಬಾರದು ಎಂದು ಎಕ್ಸ್‌ನಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನಿಗೆ ಕಲ್ಲು – ಪ್ರತಿಭಟಿಸಿದ ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್‌

  • ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯ ಉಳಿಸಿ: ಅಶೋಕ್

    ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು, ರಾಜೀನಾಮೆ ಕೊಟ್ಟು ರಾಜ್ಯ ಉಳಿಸಿ: ಅಶೋಕ್

    – ಅನುದಾನ ವಿಚಾರವಾಗಿ ಟೀಕೆ

    ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ (Siddaramaiah) ಇನ್ನೆಷ್ಟು ಸಿನ ಈ ಭಂಡ ಬಾಳು, ರಾಜೀನಾಮೆ (Resign) ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ (R Ashok) ಟೀಕಿಸಿದ್ದಾರೆ.

    ಅನುದಾನಕ್ಕಾಗಿ (Grant) ಸಚಿವ ಚಲುವರಾಯಸ್ವಾಮಿ (Chaluvarayaswamy) ಸಿಎಂಗೆ ಮನವಿ ವಿಚಾರದ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರದ ಕೃಷಿ ಸಚಿವರು, ನಾಲ್ಕನೇ ಬಾರಿಗೆ ಶಾಸಕರಾಗಿ ಆರಿಸಿ ಬಂದಿರುವವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡಗಳ ಕಾಲೋನಿ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿ ಅನುದಾನ ಪಡೆಯಲು ಮುಖ್ಯಮಂತ್ರಿಗಳ ಬಳಿ ಅಂಗಲಾಚಬೇಕು ಅಂದರೆ ಕರ್ನಾಟಕ ಸರ್ಕಾರ ಎಷ್ಟು ದಿವಾಳಿ ಆಗಿದೆ ಅನ್ನುವುದನ್ನ ನೀವೇ ಊಹಿಸಿಕೊಳ್ಳಿ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಯುವತಿಯನ್ನು ಪ್ರೀತಿಸಿ, ಮದುವೆಯಾಗಿ ಕಿರುಕುಳ ಆರೋಪ – ಮಾಜಿ ಕಾರ್ಪೊರೇಟರ್ ದಂಪತಿ, ಪುತ್ರನ ವಿರುದ್ಧ FIR

    ಎಕ್ಸ್‌ನಲ್ಲಿ ಏನಿದೆ?
    ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅವರು ‘ಅನುದಾನಕ್ಕಾಗಿ ಮುಖ್ಯಮಂತ್ರಿಗಳ ಕಾಲಿಗೆ ಬೀಳಬೇಕು’ ಎನ್ನುತ್ತಾರೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರಾದ ಬಸವರಾಜ ರಾಯರೆಡ್ಡಿ ಅವರು ‘ನಿಮಗೆ ರಸ್ತೆ ಬೇಕಾದ್ರೆ ಗ್ಯಾರೆಂಟಿ ಯೋಜನೆ ಬಂದ್ ಮಾಡ್ತೀವಿ’ ಎನ್ನುತ್ತಾರೆ. ಶಾಸಕ ಗವಿಯಪ್ಪನವರಂತೂ ಪಾಪ ಒಂದು ಹೆಜ್ಜೆ ಮುಂದೆ ಹೋಗಿ ‘ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ವಿಧಾನಸೌಧದ ಮುಂದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ’ ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಸಹೋದರಿ ಮೇಲೆ ಮೊಟ್ಟೆ ಎಸೆತ

    ಇನ್ನು ಶಾಸಕರಾದ ಬಿ.ಆರ್. ಪಾಟೀಲರು, ರಾಜು ಕಾಗೆ ಅವರು ಸೇರಿದಂತೆ ಅನೇಕ ಶಾಸಕರು ಅನುದಾನವಿಲ್ಲದೆ ತಮ್ಮ ಕ್ಷೇತ್ರಗಳಲ್ಲಿ ತಲೆ ಎತ್ತಿಕೊಂಡು ಓಡಾಡಲೂ ಆಗುತ್ತಿಲ್ಲ ಅಂತಾರೆ. ಈ ಬಗ್ಗೆ ಸೂಪರ್ ಸಿಎಂ ಸುರ್ಜೆವಾಲಾ ಅವರಿಗೆ ದೂರು ಕೊಟ್ಟಿರುವುದನ್ನ ಮಾಧ್ಯಮಗಳು ಬಿತ್ತರಿಸಿವೆ. ಇನ್ನೆಷ್ಟು ದಿನ ಸಿಎಂ ಸಿದ್ದರಾಮಯ್ಯನವರೇ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮುಂಬೈನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ – ನೋಯ್ಡಾದಲ್ಲಿ ಆರೋಪಿ ಅರೆಸ್ಟ್

  • ಮಂಡ್ಯ | ಸೆ.25ರಿಂದ ನಾಲ್ಕು ದಿನ ಶ್ರೀರಂಗಪಟ್ಟಣ ದಸರಾ

    ಮಂಡ್ಯ | ಸೆ.25ರಿಂದ ನಾಲ್ಕು ದಿನ ಶ್ರೀರಂಗಪಟ್ಟಣ ದಸರಾ

    ಮಂಡ್ಯ: ಈ ಬಾರಿ ಸೆಪ್ಟೆಂಬರ್ 25 ರಿಂದ 28 ರಿಂದ 4 ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ (Srirangapatna Dasara) ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಗಳು ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಸಚಿವ ಎನ್.ಚಲುವರಾಯಸ್ವಾಮಿ (Chaluvaraya Swamy) ತಿಳಿಸಿದ್ದಾರೆ.

    ಇಂದು ಮಂಡ್ಯ (Mandya) ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮದ ಮೆರವಣಿಗೆಗೆ ಸೆಪ್ಟೆಂಬರ್ 25 ರಂದು ಮಧ್ಯಾಹ್ನ 3 ಗಂಟೆಗೆ ಚಾಲನೆ ನೀಡಲಾಗುವುದು. ಕಾರ್ಯಕ್ರಮಗಳು ಶ್ರೀ ರಂಗನಾಥ ದೇವಸ್ಥಾನದ ಮುಂಭಾಗದ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

    ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಿ
    ಶ್ರೀರಂಗಪಟ್ಟಣ ದಸರಾ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಕಾರ್ಯಕ್ರಮಗಳಲ್ಲಿ ನಮ್ಮ ಇತಿಹಾಸ ಹಾಗೂ ಸಂಸ್ಕೃತಿಗಳ ಹಿನ್ನೆಲೆ ಹೊಂದಿರಲಿದೆ. ಮಹಿಳೆಯರು, ಮಕ್ಕಳು, ಯುವಕರು, ವೃದ್ಧರು ಸೇರಿದಂತೆ ವಿವಿಧ ವಯೋಮಿತಿಗಳ ಜನರು ಭಾಗವಹಿಸುವ ರೀತಿ ಕಾರ್ಯಕ್ರಮಗಳನ್ನು ಅಧಿಕಾರಿಗಳು ವೈವಿದ್ಯಮಯವಾಗಿ ರೂಪಿಸಿ ದಸರಾ ಕಾರ್ಯಕ್ರಮಗಳನ್ನು ಯಾವುದೇ ಲೋಪವಿಲ್ಲದಂತೆ ಅಚ್ಚುಕಟ್ಟಾಗಿ ಸಂಘಟಿಸಿ ಎಂದು ಹೇಳಿದರು.

    ಮೆರವಣಿಗೆಗೆ ಚಾಲನೆ ನೀಡುವ ಕಿರಂಗೂರು ಬನ್ನಿಮಂಟಪದಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಕೈಗೊಂಡು ಸಿದ್ಧತೆಗಳನ್ನು ಪ್ರಾರಂಭಿಸಿ. ಯೋಗ ದಸರಾದಲ್ಲಿ ಯೋಗ ಪ್ರದರ್ಶನದೊಂದಿಗೆ ಯೋಗ ಸ್ಪರ್ಧೆಗಳನ್ನು ಸಹ ಆಯೋಜಿಸಿ. ಶಿಕ್ಷಣ ಇಲಾಖೆ ಅವರು ಯೋಗ ಸ್ಪರ್ಧೆಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಶಾಲಾ ಕಾಲೇಜುಗಳಿಗೆ ಮಾಹಿತಿ ನೀಡಿ ಎಂದರು.

  • ಬಾಗಲಕೋಟೆಯ ತೋಟಗಾರಿಕೆ ವಿವಿ ಮುಚ್ಚೋದಿಲ್ಲ- ಚೆಲುವರಾಯಸ್ವಾಮಿ

    ಬಾಗಲಕೋಟೆಯ ತೋಟಗಾರಿಕೆ ವಿವಿ ಮುಚ್ಚೋದಿಲ್ಲ- ಚೆಲುವರಾಯಸ್ವಾಮಿ

    ಬೆಂಗಳೂರು : ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯವನ್ನು (Bagalkote Horticulture University) ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ (Chaluvaraya Swamy) ಸ್ಪಷ್ಟಪಡಿಸಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಹನುಮಂತ ನಿರಾಣಿ ಪ್ರಶ್ನೆ ಕೇಳಿದ್ರು. ಸರ್ಕಾರ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯವನ್ನ ಸಮಗ್ರ ವಿವಿ ಮಾಡಲು ಸರ್ಕಾರ ಹೊರಟಿದೆ .ಮಂಡ್ಯದಲ್ಲಿ ಸಮಗ್ರ ವಿವಿ ಮಾಡಲು ಸರ್ಕಾರ ಹೊರಟಿದೆ. ಈ ಮೂಲಕ ಬಾಗಲಕೋಟೆ ವಿವಿ ಮುಚ್ಚುವ ಹುನ್ನಾರ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಬಾಗಲಕೋಟೆ ತೋಟಗಾರಿಕೆ ವಿವಿಯನ್ನು ಮುಚ್ಚಬಾರದು, ಮಂಡ್ಯಗೆ ಬದಲಾವಣೆ ಮಾಡಬಾರದು ಅಂತ ಒತ್ತಾಯ ಮಾಡಿದರು.  ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌| ಯಾರದ್ದೋ ಫೋಟೋ ತೋರಿಸಿ ಪುತ್ರಿ ಎಂದು ಸುಳ್ಳು ಹೇಳಿದ ಸುಜಾತ ಭಟ್‌!

     

    ಇದಕ್ಕೆ ಸಚಿವ ಚೆಲುವರಾಯಸ್ವಾಮಿ ಉತ್ತರ ನೀಡಿ, ಸಮಗ್ರ ವಿವಿ ಮಾಡುವ ಹಿನ್ನೆಲೆಯಲ್ಲಿ ವಿಜಯ್ ಭಾಸ್ಕರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ‌. ಇನ್ನು ವರದಿ ಬಂದಿಲ್ಲ. ವರದಿ ಬಂದ ಮೇಲೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಬಾಗಲಕೋಟೆ ತೋಟಗಾರಿಕೆ ವಿವಿಯನ್ನ ಮುಚ್ಚುವುದಿಲ್ಲ ಮತ್ತು ವಿಲೀನ ಮಾಡುವುದಿಲ್ಲ. ಯಾವುದೇ ಕಡೆ ಶಿಫ್ಟ್ ಕೊಡೋದು ಇಲ್ಲ ಎಂದು ಹೇಳಿದರು.

  • ಬೆಂಗಳೂರಿನಲ್ಲಿ ಆ.5ರ ಪ್ರತಿಭಟನೆಗೆ ಮಂಡ್ಯದಿಂದ 5 ಸಾವಿರ ಜನ: ಚಲುವರಾಯಸ್ವಾಮಿ

    ಬೆಂಗಳೂರಿನಲ್ಲಿ ಆ.5ರ ಪ್ರತಿಭಟನೆಗೆ ಮಂಡ್ಯದಿಂದ 5 ಸಾವಿರ ಜನ: ಚಲುವರಾಯಸ್ವಾಮಿ

    ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಮತಗಳ್ಳತನ ನಡೆದಿರುವ ಸಂಬಂಧ ಆಗಸ್ಟ್ 5ರಂದು ಕಾಂಗ್ರೆಸ್ (Congress) ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಷ್ಟ್ರಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳಲಾಗಿದೆ. ಈ ಪ್ರತಿಭಟನೆಗೆ ಮಂಡ್ಯ (Mandya) ಜಿಲ್ಲೆಯಿಂದ 5 ಸಾವಿರ ಜನರು ಬರಬೇಕೆಂದು ಸಚಿವ ಎನ್.ಚಲುವರಾಯಸ್ವಾಮಿ (Chaluvarayaswamy) ತಿಳಿಸಿದ್ದಾರೆ.

    ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ (Rahul Gandhi) ಅವರು ಮತಗಳ್ಳತನವಾಗಿರುವ ಸಂಬಂಧ ಈಗಾಗಲೇ ಅಭಿಪ್ರಾಯ ವ್ಯಕ್ತಪಡಿಸಿ, ಉದಯಪುರ ಲೋಕಸಭಾ ಕ್ಷೇತ್ರದಲ್ಲಿ ಮತದಾನದ ಸಂಶೋಧನೆ ನಡೆಸಲಾಗಿ ಸಾಬೀತಾದ ಕಾರಣದಿಂದ ಪ್ರತಿಭಟನೆಯ ಮೂಲಕ ರಾಷ್ಟ್ರವ್ಯಾಪಿ ಜಾಗೃತಿ ಮೂಡಿಸಲಾಗುವುದು ಎಂದರು. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಬಜಪೆ, ಸುರತ್ಕಲ್‌ನ 14 ಕಡೆ ಎನ್‌ಐಎ ದಾಳಿ

    ಉದಯಪುರ ಲೋಕಸಭಾ ಕ್ಷೇತ್ರದಲ್ಲಿ ಮತದಾನದ ಸಂಶೋಧನೆ ಆಧಾರದ ಮೇಲೆ ಚುನಾವಣಾ ಆಯೋಗಕ್ಕೆ ದೂರು ನೀಡಿದರೂ ದೂರು ಸ್ವೀಕರಿಸದ ಕಾರಣ ಪ್ರತಿಭಟನೆಯ ಮೂಲಕ ಚುನಾವಣಾ ಆಯೋಗದ ವೈಫಲ್ಯ ಹಾಗೂ ಕೇಂದ್ರಾಡಳಿತದ ಬಿಜೆಪಿ ಚುನಾವಣಾ ಆಯೋಗದ ದುರುಪಯೋಗವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಅಶ್ಲೀಲ ಮೆಸೇಜ್ ಮಾಡಿದ್ದ ಮೂವರು ಅರೆಸ್ಟ್ – ಬೆಂಗ್ಳೂರು ಪೊಲೀಸರ ಕಾರ್ಯಕ್ಕೆ ನಟಿ ರಮ್ಯಾ ಮೆಚ್ಚುಗೆ

    ಆರ್‌ಸಿಬಿ ಕಾಲ್ತುಳಿತದ ಪ್ರಕರಣದ ಹಿನ್ನೆಲೆ ರ‍್ಯಾಲಿ ನಡೆಸಲು ಹೈಕೋರ್ಟ್ ನಿರ್ಬಂಧ ಹೇರಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶ ನಡೆಸಲಾಗುತ್ತಿದೆ. ಬೆಂಗಳೂರಿನ ಅನಂತ್‌ರಾವ್ ವೃತ್ತದಿಂದ ಫ್ರೀಡಂ ಪಾರ್ಕ್‌ವರೆಗೂ ಸಂಚಾರದ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ತಿಳಿಸಿದರು. ಇದನ್ನೂ ಓದಿ: ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ: ಬಿ.ಕೆ ಹರಿಪ್ರಸಾದ್‌ ಬಾಂಬ್‌

    ಮಂಡ್ಯ ಜಿಲ್ಲೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಸೇರಿ 5 ಸಾವಿರ ಮಂದಿ ಪಾಲ್ಗೊಳ್ಳಬೇಕಾಗಿದೆ. ಅಂದು ಬೆಳಿಗ್ಗೆ 10 ಗಂಟೆಯೊಳಗೆ ಎಲ್ಲರೂ ಫ್ರೀಡಂ ಪಾರ್ಕ್ ಸೇರುವಂತೆ ಮನವಿ ಮಾಡಿದ ಅವರು, ರಾಷ್ಟ್ರೀಯ ನಾಯಕ ರಾಹುಲ್‌ಗಾಂಧಿ ಅವರು ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕೈಚಳಕದ ಬಗ್ಗೆ, ಮಹಾರಾಷ್ಟ್ರದಲ್ಲಿಯೂ ಇದೇ ರೀತಿ ಬಿಜೆಪಿ ಕೈಚಳಕ ತೋರಿರುವ ಅನುಮಾನವಿದ್ದು, ಎಲ್ಲದರ ಮಾಹಿತಿ ಹಂಚಿಕೊಳ್ಳಲಿದ್ದಾರೆ. 50ರಿಂದ 70 ಸಾವಿರ ಮಂದಿ ಭಾಗವಹಿಸುಲಿದ್ದಾರೆಂದು ಅಂದಾಜಿಸಲಾಗಿದ್ದು, 1 ಲಕ್ಷ ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಹಿಮಾಚಲ ಪ್ರದೇಶ | ಭಾರೀ ಮಳೆಯಿಂದ ನೀರಿನ ಮಟ್ಟ ದಿಢೀರ್‌ ಏರಿಕೆ – ಡ್ಯಾಂ ಕುಸಿತ

    ಮತಗಳ್ಳತನವೆಂದರೆ ಮತ ಪೆಟ್ಟಿಗೆಯಿಂದ ಮತಗಳ ಸೇರ್ಪಡೆ, ಮತ ತೆಗೆಯುವ ಕ್ರಿಯೆಯಾಗಿದೆ. ಬೆಂಗಳೂರಿನ ಮಹದೇವಪುರದಲ್ಲಿಯೂ 52 ಸಾವಿರ ಮತಗಳ ಅದಲಿ ಬದಲಿಯಾಗಿರುವ ಸಂಶಯವನ್ನು ರಾಹುಲ್‌ಗಾಂಧಿ ಪ್ರಾರಂಭದಲ್ಲಿಯೇ ವ್ಯಕ್ತಪಡಿಸಿದ್ದರು. ರಾಜ್ಯದಲ್ಲಿ ನಮ್ಮ ಸರ್ಕಾರವಿದ್ದರೂ ಈ ರೀತಿಯಾಗಲಿಕ್ಕೆ ಚುನಾವಣೆಯಲ್ಲಿ ಮೋಸ ಮಾಡಲಾಗದೆಂಬ ಉದಾಸೀನತೆಯೇ ಕಾರಣವಾಗಿದೆ. ಕೇಂದ್ರ ಸರ್ಕಾರ ಇಡಿ, ಐಟಿ ದುರುಪಯೋಗ ಮಾಡಿಕೊಂಡಂತೆ ಚುನಾವಣಾ ಆಯೋಗವನ್ನು ದುರುಪಯೋಗ ಮಾಡಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ

  • ಕೇಂದ್ರದಿಂದ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ: ಚಲುವರಾಯಸ್ವಾಮಿ

    ಕೇಂದ್ರದಿಂದ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ: ಚಲುವರಾಯಸ್ವಾಮಿ

    ಬೆಂಗಳೂರು: ಕೇಂದ್ರ ಸರ್ಕಾರದಿಂದ (Central Government) ಯೂರಿಯಾ ಪೂರೈಕೆಯಲ್ಲಿ ಕೊರತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿತರಣೆಯಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿಭಾಯಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗೊಂದಲಗಳು ಬಗೆಹರಿಯಲಿವೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ (N Chaluvarayaswamy) ಸ್ಪಷ್ಟಪಡಿಸಿದ್ದಾರೆ.

    ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 2 ವರ್ಷಗಳಲ್ಲಿ 3 ಮುಂಗಾರು ಹಂಗಾಮಿನಲ್ಲಿ ಇದೇ ಸರ್ಕಾರ ಅಧಿಕಾರದಲ್ಲಿದೆ. ನಾನೇ ಕೃಷಿ ಸಚಿವನಾಗಿ ಇದ್ದೇನೆ. ಈವರೆಗೆ ಉಂಟಾಗದ ಸಮಸ್ಯೆ ಈಗೇಕೆ ಎಂಬುದನ್ನು ವಿಶ್ಲೇಷಿಸಬೇಕಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಗೆ 10 ಹೊಸ ಮೆಮು ರೈಲು ಸಂಚಾರ ಆರಂಭಿಸಿ: ಜೋಶಿ ಮನವಿ

    ರಾಜ್ಯಕ್ಕೆ ಪೂರೈಕೆಯಾಗಬೇಕಾಗಿದ್ದ ಯೂರಿಯಾ ರಸಗೊಬ್ಬರದಲ್ಲಿ ಈ ಬಾರಿ 1.36 ಲಕ್ಷ ಮೆಟ್ರಿಕ್ ಟನ್ ಕೊರತೆಯಾಗಿದೆ. ಇದೇ ಈ ಎಲ್ಲಾ ಸಮಸ್ಯೆ ಹೆಚ್ಚಾಗಲು ಪ್ರಮುಖ ಕಾರಣವಾಗಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ನ್ಯಾ. ವರ್ಮಾ ನಡೆ ವಿಶ್ವಾಸ ಮೂಡಿಸುವುದಿಲ್ಲ; ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

    ಈ ಬಾರಿ ಮುಂಗಾರು ಬೇಗ ಪ್ರಾರಂಭವಾಗಿ ಉತ್ತಮ ಮಳೆಯಾಗಿದ್ದು, 2 ಲಕ್ಷ ಹೆಕ್ಟೇರ್ ಹೆಚ್ಚುವರಿ ಮುಸುಕಿನ ಜೋಳ ಬಿತ್ತನೆ ಕೂಡ ಯೂರಿಯಾ ಬೇಡಿಕೆಯ ಹಠಾತ್ ಏರಿಕೆಗೆ ಕಾರಣವಾಗಿದೆ ಎಂದಿದ್ದಾರೆ.

    ರಾಜ್ಯದಲ್ಲಿ ಅಕ್ರಮ ಸಾಗಾಟ, ಯೂರಿಯಾ (Urea) ದುರ್ಬಳಕೆ ಬಗ್ಗೆ ವಿಲಕ್ಷಣ ದಳ ಚುರುಕಾಗಿ ಕಾರ್ಯನಿರ್ವಹಿಸುತ್ತಿದ್ದು, ಅಕ್ರಮಗಳಿಗೆ ಕಡಿವಾಣ ಹಾಕಿದೆ. ವಿರೋಧ ಪಕ್ಷದ ಮುಖಂಡರು ಮಾಧ್ಯಮಕ್ಕೆ ತಿಳಿಸಿರುವಂತೆ ಕರ್ನಾಟಕ ರಾಜ್ಯವು ನೆರೆ ದೇಶಗಳಾದ ಶ್ರೀಲಂಕಾ ಮತ್ತು ಬಾಂಗ್ಲಾದೇಶದೊಂದಿಗೆ ಯಾವುದೇ ಗಡಿಯನ್ನು ಹಂಚಿಕೊಂಡಿರುವುದಿಲ್ಲ. ಈ ಹೇಳಿಕೆಯು ಹಾಸ್ಯಾಸ್ಪದವಾಗಿದೆ. ವಿರೋಧ ಪಕ್ಷದ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತದ ಮೇಲೆ ಟ್ರಂಪ್‌ ತೆರಿಗೆ ಸಮರ : ಆ.1 ರಿಂದಲೇ 25% ಸುಂಕ

    ರಸಗೊಬ್ಬರಗಳ ಪೂರೈಕೆ ಕಾಪು ದಾಸ್ತಾನಿಗೆ ಇರಿಸಲಾಗಿದ್ದ ಗ್ಯಾರಂಟಿ ಹಣ ಕಡಿತಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಆದರೆ ಈ ಹಿಂದೆ ಇದ್ದದ್ದು ಬಿಜೆಪಿ ಸರ್ಕಾರ, ಅವರೇ ನಿಗದಿಪಡಿಸಿದ್ದ 400 ಕೋಟಿ ರೂ. ಹಣವನ್ನು ನಾವು ಯಥಾಸ್ಥಿತಿಯಲ್ಲಿ ಮುಂದುವರೆಸಿದ್ದೇವೆ. ಇನ್ನೂ 600 ಕೋಟಿ ರೂ. ಹೆಚ್ಚುವರಿ ಹಣ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ. ಪ್ರತಿಯಾಗಿ ಬಿಜೆಪಿ ನಾಯಕರು ಗೊಬ್ಬರ ಒದಗಿಸಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

    ರಾಜ್ಯದಲ್ಲಿ ದಾವಣಗೆರೆ, ಗದಗ, ಕೊಪ್ಪಳ, ಧಾರವಾಡ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಯೂರಿಯಾ ಕೊರತೆ ಸ್ವಲ್ಪ ಕಂಡುಬಂದಿರುವುದು ನಿಜ. ಆದರೆ ಅದನ್ನು ನಿಭಾಯಿಸಲಾಗುತ್ತಿದೆ. ಹೆಚ್ಚುವರಿ ದಾಸ್ತಾನು ಬೇರೆ ಜಿಲ್ಲೆಗಳಿಂದ ವರ್ಗಾವಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ದೀಪಾವಳಿ ಧಮಾಕ, ಕಾಂಗ್ರೆಸ್‌ನಲ್ಲಿ ಕ್ರಾಂತಿ : ವಿಜಯೇಂದ್ರ

    ರಸಗೊಬ್ಬರ ಅದರಲ್ಲೂ ಮುಖ್ಯವಾಗಿ ಯೂರಿಯಾ ಮತ್ತು ಡಿಎಪಿ ಪೂರೈಕೆ ಕೋರಿ ಜುಲೈ 7ರಂದು ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಆ ನಂತರ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸಹ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಲಾಗಿದೆ ಎಂದಿದ್ದಾರೆ.

    ಕೇಂದ್ರ ರಸಗೊಬ್ಬರ ಖಾತೆ ಸಚಿವರ ಭೇಟಿಗಾಗಿ ಸಮಯಾವಕಾಶ ಕೋರಿ ಪತ್ರ ಬರೆಯಲಾಗಿದೆ. ಅವಕಾಶ ಸಿಕ್ಕರೆ ಭೇಟಿ ಮಾಡಿ, ರಾಜ್ಯದ ಪರಿಸ್ಥಿತಿ ವಿವರಿಸಿ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.

  • ಬಿಜೆಪಿಯವರಿಗೆ ಧಮ್ಮು-ತಾಕತಿದ್ರೆ ಕೇಂದ್ರದಿಂದ ಯೂರಿಯಾ ಕೊಡಿಸಲಿ – ಚಲುವರಾಯಸ್ವಾಮಿ

    ಬಿಜೆಪಿಯವರಿಗೆ ಧಮ್ಮು-ತಾಕತಿದ್ರೆ ಕೇಂದ್ರದಿಂದ ಯೂರಿಯಾ ಕೊಡಿಸಲಿ – ಚಲುವರಾಯಸ್ವಾಮಿ

    ಬೆಂಗಳೂರು: ರಾಜ್ಯದಲ್ಲಿ ಯೂರಿಯಾ ಕೊರತೆ ಆಗದಂತೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿದೆ. ಬಿಜೆಪಿಯವರು ರಾಜಕೀಯ ಮಾಡೋದು ಬಿಟ್ಟು ಧೈರ್ಯವಿದ್ದರೆ ಕೇಂದ್ರ ಸರ್ಕಾರದಿಂದ (Central Govt) ಯೂರಿಯಾ ಕೊಡಿಸಲಿ ಎಂದು ಬಿಜೆಪಿ (BJP) ನಾಯಕರ ವಿರುದ್ಧ ಕೃಷಿ ಸಚಿವ ಚಲುವರಾಯಸ್ವಾಮಿ (Chaluvarayaswamy) ವಾಗ್ದಾಳಿ ನಡೆಸಿದರು.

    ರಾಜ್ಯದಲ್ಲಿ ಯೂರಿಯಾ ಕೊರತೆ ಅಂತ ಬಿಜೆಪಿ ಪ್ರತಿಭಟನೆ ಮಾಡ್ತಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಬಹಳ ಸ್ಪಷ್ಟವಾಗಿ ಎಲ್ಲೆಲ್ಲಿ ಯೂರಿಯಾ ಸರಬರಾಜು ಆಗಿದೆ ಎಂದು ಹೇಳಿದ್ದೇನೆ. ಡಿಸಿ, ಸೆಕ್ರೆಟರಿ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಬಿಜೆಪಿಯವರಿಗೆ ಮಾತಡೋಕೆ ಬೇರೆ ವಿಷಯ ಇಲ್ಲ ಅದಕ್ಕೆ ಪ್ರತಿಭಟನೆ ಅಂತಿದ್ದಾರೆ. ಇವರಿಗೆ ಕೇಂದ್ರಕ್ಕೆ ಹೋಗಿ ಹೇಳೋ ಧಮ್ ಇಲ್ಲ. ನಾನು ಎಲ್ಲ ಎಂಪಿಗಳಿಗೆ ಹಾಗೂ ಕೇಂದ್ರ ಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದೇನೆ. ಸಿಎಂ ಅವರು ಕೂಡ ಪತ್ರ ಬರೆದಿದ್ದಾರೆ. ಇನ್ನೂ ಏನು ಮಾಡಬೇಕಂತೆ ವಿಜಯೇಂದ್ರ, ಅಶೋಕ್‌ಗೆ ತಿರುಗೇಟು ನೀಡಿದರು.ಇದನ್ನೂ ಓದಿ:ಚೆಸ್‌ ವಿಶ್ವಕಪ್‌ | ಅನುಭವಿ ಕೊನೆರು ಹಂಪಿಗೆ ಸೋಲು, 19ರ ದಿವ್ಯಾ ದೇಶಮುಖ್‌ ಚಾಂಪಿಯನ್‌

    ಕೇಂದ್ರವೇ ನಮಗೆ ಯೂರಿಯಾ ಒದಗಿಸುತ್ತದೆ. ಹೀಗಾಗಿ ನಾವು ಇದರಲ್ಲಿ ರಾಜಕೀಯ ಮಾಡಲು ಹೋಗಿರಲಿಲ್ಲ. ಇವರು ರಾಜಕೀಯವಾಗಿ ಮಾತಾಡಿದ್ರೆ ನಾವೇನು ಮಾಡೋಕೆ ಆಗಲ್ಲ. ರಾಜ್ಯದ ಒಬ್ಬ ಮಂತ್ರಿಗಾದರೂ ಕೇಂದ್ರಕ್ಕೆ ಪತ್ರ ಬರೆಯುವ ಧಮ್ ಇದ್ಯಾ? ರಾಜ್ಯದ ರೈತರಿಗೆ ರಸಗೊಬ್ಬರ ಕೊಡುತ್ತಿದ್ದೇವೆ. ಕೊಪ್ಪಳದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜೊತೆಗೆ ಮಾತಾಡಿದ್ದೇನೆ. ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ನೋಡಿಕೊಳ್ಳುತ್ತಿದ್ದಾರೆ. ರೈತರ ಸಮಸ್ಯೆಗಳ ಮೇಲೆಯೂ ರಾಜಕಾರಣ ಮಾಡ್ತಿದ್ದಾರೆ. ಇದಕ್ಕೆ ಏನೂ ಮಾಡಲು ಆಗಲ್ಲ. ರೈತರ ಪರ ನಾವಿದ್ದೇವೆ. ಕೇಂದ್ರದಿಂದ ಬರಬೇಕಾದ ಬಾಕಿ ಯೂರಿಯಾ ಬರಲು ಎಲ್ಲಾ ಪ್ರಯತ್ನ ಮಾಡ್ತಿದ್ದೇವೆ. ಬಿಜೆಪಿಯವರಿಗೆ ಧಮ್ಮು, ತಾಕತ್ತಿದ್ರೆ ಕೇಂದ್ರದ ಮೇಲೆ ಒತ್ತಡ ಹಾಕಲಿ ಅಂತ ಕಿಡಿಕಾರಿದರು.

    ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಆಗ್ತಿದೆ ಎಂಬ ಬಿಜೆಪಿ ಅರೋಪಕ್ಕೆ ತಿರುಗೇಟು ಕೊಟ್ಟ ಅವರು, ಇಲ್ಲದೆ ಇರೋದನ್ನ ಹೇಳಿದ್ರೆ ನಾವು ಏನು ಮಾಡೋಕೆ ಆಗಲ್ಲ. ವಿಜಿಲೆನ್ಸ್ ಇದೆ, ಸಾವಿರಾರು ರೀಟೈಲ್ ಸೆಂಟರ್ ಇವೆ. ಇಂತಹದ್ದು ಕಂಡು ಬಂದ್ರೆ ಬ್ಲಾಕ್ ಲಿಸ್ಟ್ಗೆ ಸೇರಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

    ಕೇಂದ್ರ ಸರ್ಕಾರ ಎಂಟು ಮೆಟ್ರಿಕ್ ಟನ್ ಯೂರಿಯಾ ಕೊಟ್ಟಿದೆ. ಆರು ಮೆಟ್ರಿಕ್ ಟನ್ ಎಲ್ಲಿ ಹೋಯ್ತು ಎಂಬ ವಿಜಯೇಂದ್ರ ಆರೋಪಕ್ಕೆ ತಿರುಗೇಟು ಕೊಟ್ಟ ಅವರು, ವಿಜಯೇಂದ್ರಗೆ ಬುದ್ಧಿ ಇದ್ಯಾ? ಹಳೆಯ ಬ್ಯಾಲೆನ್ಸ್ ಯಾವುದು ಇದೆ ಅಂತ ವಿಜಯೇಂದ್ರಗೆ ಗೊತ್ತಿಲ್ಲ. ಪಾಪ ಅವರಿಗೆ ಅನುಭವದ ಕೊರತೆ ಇದೆ. ನಮ್ಮ ಅಶೋಕಣ್ಣನಿಗೆ ಎಲ್ಲಾ ಗೊತ್ತಿದೆ. ಅಧಿಕಾರ ಮಾಡಿದ ಅನುಭವ ಇದೆ. ಪಾಪ ಅವರಿಗೆ ಮಾತಾಡೋಕೆ ಬರಲ್ಲ. ಎಂಟೂವರೇ ಲಕ್ಷದಲ್ಲಿ ಆರು ಲಕ್ಷ ಯೂರಿಯಾ ಬಂದಿದೆ. ಇನ್ನೂ ಒಂದೂವರೇ ಲಕ್ಷ ಯೂರಿಯಾ ಬರಬೇಕಿದೆ. ನಾನು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಜೊತೆ ಮಾತಾಡಿದ್ದೇನೆ. ಇಲ್ಲಿ ಇರೋರಿಗೆ ಅದರ ಬಗ್ಗೆ ಗೊತ್ತಿಲ್ಲ. ಕೇಂದ್ರದ ಜೊತೆ ಮಾತನಾಡಿ ಬಾಕಿ ಇರುವ ಯೂರಿಯಾವನ್ನ ಕೊಡಿಸಲಿ ಎಂದು ವಿಜಯೇಂದ್ರಗೆ ಸವಾಲ್ ಹಾಕಿದರು.ಇದನ್ನೂ ಓದಿ: ಮಜಾವಾದಿ ಸಿದ್ದರಾಮಯ್ಯ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು – ಜೆಡಿಎಸ್

  • ಕೇಂದ್ರದಿಂದ 1.50 ಲಕ್ಷ ಟನ್‌ ರಸಗೊಬ್ಬರ ಕೊರತೆಯಾಗಿದೆ – ಸಚಿವ ಚಲುವರಾಯಸ್ವಾಮಿ

    ಕೇಂದ್ರದಿಂದ 1.50 ಲಕ್ಷ ಟನ್‌ ರಸಗೊಬ್ಬರ ಕೊರತೆಯಾಗಿದೆ – ಸಚಿವ ಚಲುವರಾಯಸ್ವಾಮಿ

    ಬೆಂಗಳೂರು: ನಮಗೆ ಒಟ್ಟು 6 ಲಕ್ಷದ 88 ಸಾವಿರ ಟನ್ ರಸಗೊಬ್ಬರ (Fertiliser) ಸಪ್ಲೈ ಆಗಬೇಕಿತ್ತು. ಅದರಲ್ಲಿ 5 ಪಕ್ಷದ 27 ಸಾವಿರ ಟನ್ ಸಪ್ಲೈ ಆಗಿದೆ. ಉಳಿದ 1 ಲಕ್ಷದ 50 ಸಾವಿರ ಟನ್ ಬರಬೇಕಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ (Chaluvaraya Swamy) ಹೇಳಿದರು.

    ಕಳೆದ ಒಂದೂವರೆ ತಿಂಗಳಿಂದ ಮಳೆ ಚೆನ್ನಾಗಿ ಆಗ್ತಿದೆ ಮುಂಗಾರು ಬೇಗ ಆರಂಭವಾಗಿದೆ ಡ್ಯಾಮ್‌ಗಳು ಬೇಗ ತುಂಬಿದ್ದರಿಂದ ಸ್ವಲ್ಪ ಸಮಸ್ಯೆ ಆಗಿದೆ. ಜೊತೆಗೆ 2 ಲಕ್ಷ ಹೆಕ್ಟೇರ್ ಜಾಸ್ತಿ ಬೇಸಾಯದ ಏರಿಯಾ ಜಾಸ್ತಿ ಆಗಿದೆ. ಈ ಕಾರಣಗಳಿಂದ ರಸಗೊಬ್ಬರಕ್ಕೆ (Fertiliser) ಬೇಡಿಕೆ ಹೆಚ್ಚಾಗಿದೆ. ಟೀಕೆ ಟಿಪ್ಪಣಿಗಿಂತ ಹೆಚ್ಚಾಗಿ ರೈತರ ಸಮಸ್ಯೆ ಬಗೆಹರಿಸಬೇಕು ಅಂತ ಮುಖ್ಯಮಂತ್ರಿಗಳಿಗೆ ನಾನೇ ಮನವಿ ಮಾಡಿದೆ ಪತ್ರ ಬರೆಯಿರಿ ಅಂತ ಹೇಳಿದೆ. ಆದರೆ ಈ ಸಂದರ್ಭವನ್ನು ಉಪಯೋಗಿಸಿಕೊಂಡು ಜೋಶಿಯವರು ಮಾತನಾಡುತ್ತಿದ್ದಾರೆ ಅಂತ ಅಸಮಾಧಾನ ಹೊರಹಾಕಿದ್ರು.

    ಇರಾನ್‌ನ ಯುದ್ಧದ ಕಾರಣಕ್ಕೆ ಯೂರಿಯಾ ಸಪ್ಲೈ ಬರ್ತಿಲ್ಲ
    ನಾನೇ ಜೋಶಿಯವರಿಗೆ (Pralhad Joshi) ಪತ್ರ ಬರೆದಿದ್ದೇನೆ. ರಾಜ್ಯದ ಎಲ್ಲಾ ಸಂಸದರಿಗೂ ಹಾಗೂ ರಾಜ್ಯ ಪ್ರತಿನಿಧಿಸುವ ಸಚಿವರಿಗೆ ಪತ್ರ ಬರೆದಿದ್ದೇನೆ. ಆದ್ರೆ ಅದರ ಕಡೆ ಗಮನ ಹರಿಸದೇ ಸಿದ್ದರಾಮಯ್ಯರ ಬಗ್ಗೆ ಟೀಕೆ ಮಾಡಿದ್ದಾರೆ. ಜೋಶಿಯವರು ಕೃಷಿ ವಿಚಾರದಲ್ಲಿ ಹೀಗೆಲ್ಲಾ ರಾಜಕಾರಣ ಮಾಡ್ತಾರೆ ಅಂತ ನಾನು ಅಂದುಕೊಂಡಿರಲಿಲ್ಲ. ರಸಗೊಬ್ಬರವನ್ನ ಟೈಮ್ ಟು ಟೈಮ್ ಕೊಡ್ತಾರೆ. ನಾವು ಕಳೆದ ಬಾರಿ ಹೆಚ್ಚು ದಾಸ್ತಾನು ಮಡಿಕೊಳ್ಳುತ್ತಿದ್ದೆವು. ಆದರೆ ಕೇಂದ್ರ ಸರ್ಕಾರದಲ್ಲಿ 2-3 ಪ್ರಾಬ್ಲಂ ಇದೆ. ಇರಾನ್‌ನ ಯುದ್ಧದ ಕಾರಣಕ್ಕೆ ಯೂರಿಯಾ ಸಪ್ಲೈ ಬರ್ತಿಲ್ಲ, ಚೀನಾದಿಂದ ಸಂಪೂರ್ಣ ಸ್ಥಗಿತವಾಗಿದೆ. ರಾಷ್ಟ ಮಟ್ಟದಲ್ಲಿ ಉತ್ಪಾದನೆ ಕಡಿಮೆ ಆಗಿದೆ. ಇದೆಲ್ಲ ಕೇಂದ್ರ ಸರ್ಕಾರದವರೆ ಕೊಡಬೇಕು ಅಂತ ಹೇಳಿದರು. ಇದನ್ನೂ ಓದಿ: ಬೆಂಗಳೂರಿನ ಧನುಷ್ ಬಾಬುಗೆ ಏಷ್ಯನ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ

    ನಾವು ಟೀಕೆ ಟಿಪ್ಪಣಿಗೆ ಹೋಗಲಿಲ್ಲ. ಹಳೇ ಬ್ಯಾಲೆನ್ಸ್ ಸೇರಿ ತಗೆದುಕೊಂಡು ರೈತರಿಗೆ ಕೊಡುವ ಪ್ರಯತ್ನ ಮಾಡುತ್ತಿದ್ದೇವೆ. ರೈತರಿಗೆ ನ್ಯಾನೋ ಯೂರಿಯಾ ಬಳಸಲು ಸಹಾ ಹೇಳಿದ್ದೇವೆ. ಅವರು ಸಹ ಹೋಗಿ ನಡ್ಡಾ ಅವರ ಜೊತೆ ಕುಳಿತು ಎಷ್ಟು ಸಾಧ್ಯವೋ ಅಷ್ಟು ಬೇಗ ಸಪ್ಲೈ ಕೊಡಿ ಅಂತ ಹೇಳೋದು ಬಿಟ್ಟು ಟೀಕೆ ಟಿಪ್ಪಣಿ ಮಾಡಿದರೆ ಹೇಗೆ? ಅಂತ ಪ್ರಶ್ನಿಸಿದರು. ಇದನ್ನೂ ಓದಿ: ಶಿವಲಿಂಗೇಗೌಡ್ರು ನಮ್ಮನೆಗೆ, ಸಿಎಂ ಮನೆಗೆ ತಿರುಗಿ 4 ಜೊತೆ ಚಪ್ಪಲಿ ಸವೆಸಿದ್ದಾರೆ: ಡಿ.ಕೆ ಶಿವಕುಮಾರ್

    ನನಗೂ ರಾಜಕೀಯವಾಗಿ 35 ವರ್ಷ ಆಗಿದೆ. ನಾನು ಟೀಕೆ ಮಾಡಬಹುದು, ಆದ್ರೆ ನನ್ನದು ರೈತರ ಇಲಾಖೆ ಟೀಕೆ ಮುಖ್ಯ ಅಲ್ಲ ರೈತರ ಸಮಸ್ಯೆ ಬಗೆಹರಿಸಬೇಕು. ರೈತರು ಆತಂಕ ಪಡಬೇಕಿಲ್ಲ. ಯಾವ್ಯಾವಾಗ ಏನು ಬೇಕೋ ಅದನ್ನ ತಲುಪಿಸುತ್ತೇವೆ. ಎಲ್ಲರೂ ಸಮಾಧಾನದಿಂದ ಇರಿ, 2 ದಿನ ಬರುವುದು ತಡವಾದ್ರೆ 3ನೇ ದಿನ 4ನೇ ದಿನ ತರಿಸಿಕೊಡ್ತೇವೆ. ಜೊತೆಗೆ ನ್ಯಾನೋ ಯೂರಿಯಾ ಸಹ ಇಳುವರಿಗೆ ಒಳ್ಳೆಯದು ರೈತರು ಯಾವುದೆ ಘರ್ಷಣೆ ಮಾಡಿಕೊಳ್ಳುವುದು ಬೇಡ ಅಂತ ಸಲಹೆ ನೀಡಿದರು. ಇದನ್ನೂ ಓದಿ: ನಾವು ಬಿಜೆಪಿಯವರಿಗಿಂತ ಜಾಸ್ತಿ ಕೆಲಸ ಮಾಡಿದ್ದೇವೆ – ಪುತ್ರನ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

  • ಸ್ವಾಮೀಜಿಗಳು ಹೇಳಿಕೆ‌ ನೀಡುವುದು ಅವರ ವೈಯಕ್ತಿಕ ಅಭಿಪ್ರಾಯ – ರಂಭಾಪುರಿ ಶ್ರೀ ಹೇಳಿಕೆಗೆ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ

    ಸ್ವಾಮೀಜಿಗಳು ಹೇಳಿಕೆ‌ ನೀಡುವುದು ಅವರ ವೈಯಕ್ತಿಕ ಅಭಿಪ್ರಾಯ – ರಂಭಾಪುರಿ ಶ್ರೀ ಹೇಳಿಕೆಗೆ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ

    ನವದೆಹಲಿ: ಸ್ವಾಮೀಜಿಗಳು ಹೇಳಿಕೆ‌ ನೀಡುವುದು ಅವರ ವೈಯಕ್ತಿಕ ಅಭಿಪ್ರಾಯ, ಅರ್ಶಿವಾದ ಮಾಡುವುದಾಗಲಿ ಅಥವಾ ಅಭಿಪ್ರಾಯ ತಿಳಿಸುವುದು ಅದು ಅವರ ವೈಯಕ್ತಿಕವಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ (Chaluvarayaswamy) ಹೇಳಿದರು.

    ಡಿಕೆ ಶಿವಕುಮಾರ್ (D.K.Shivakumar) ಮುಖ್ಯಮಂತ್ರಿಯಾಗಲಿ ಎಂದು ರಂಭಾಪುರಿ ಶ್ರೀ (Rambhapuri Swamiji) ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷದಲ್ಲಿ ಆ ರೀತಿ ಪ್ರಶ್ನೆಯೇ ಇಲ್ಲ‌. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಬಹಳ ಅನ್ಯೋನ್ಯವಾಗಿದ್ದಾರೆ. ಬಹಳ ಕಷ್ಟ ಪಟ್ಟು ಪಕ್ಷ ಅಧಿಕಾರಕ್ಕೆ ತಂದಿದ್ದಾರೆ. ನಾನು ಕೂಡ ನೋಡಿದ್ದೇನೆ. ಅವರು ಪ್ರತಿ ಹಂತದಲ್ಲೂ ಮತ್ತೆ ಸರ್ಕಾರ ತರಬೇಕು. ಜನಪರ ಕೆಲಸ ಮಾಡಬೇಕು ಎಂದು ಕೆಲಸ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಬಿಹಾರ ಮತದಾರರ ಪಟ್ಟಿ ನವೀಕರಣ: ಜುಲೈ 10 ರಂದು ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

    ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಏನೇ ತೀರ್ಮಾನ ಆದರೂ ಹೈಕಮಾಂಡ್ ಜೊತೆಗೆ ಮಾತಾಡಿ ತೀರ್ಮಾನ ಮಾಡೋ ಥರ ಇಟ್ಟುಕೊಂಡಿದ್ದಾರೆ. ಸ್ವಾಮಿಜಿ ಅವರ ಅಭಿಪ್ರಾಯ ಅದು ಅವರ ವೈಯಕ್ತಿಕ. ಬಹಳ ಹಿಂದಿನಿಂದಲೂ ಬಹಳಷ್ಟು ಜನರು ಅಭಿಪ್ರಾಯ ಹೇಳಿದ್ದಾರೆ. ನೀವು ಯಾಕೆ ಹೇಳಿದ್ದೀರಿ ಅಂತಾ ನಾವು ಕೇಳಲು ಆಗುತ್ತಾ? ಡಿಕೆ ಶಿವಕುಮಾರ್ ಕೇಳಲು ಆಗುತ್ತಾ ಅಥವಾ ಸಿದ್ದರಾಮಯ್ಯನವರನ್ನು ಕೇಳಲು ಆಗುತ್ತಾ? ಸ್ವಾಮೀಜಿಗಳು ನಮಗೆ ಗುರುಗಳ ಸ್ಥಾನದಲ್ಲಿ ಇದ್ದಾರೆ. ಅವರ ಅಭಿಪ್ರಾಯ ಅಷ್ಟೇ ಇದು. ಹೆಚ್ಚು ಚರ್ಚೆ ಅಗತ್ಯ ಇಲ್ಲ ಎಂದು ತಿಳಿಸಿದರು.

    ಗ್ಯಾರಂಟಿ ಬೇಕಾ ರಸ್ತೆ ಬೇಕಾ ಎಂಬ ಬಸವರಾಜ್ ರಾಯರೆಡ್ಡಿ ಹೇಳಿಕೆ ವಿಚಾರವಾಗಿ ಮಾತನಾಡಿ, ಗ್ಯಾರಂಟಿನೂ ಆಗುತ್ತೆ ರಸ್ತೆನೂ ಆಗುತ್ತೆ. ಅದ್ಯಾಕೆ ಅವರು ಮಾತಾಡಿದ್ದಾರೋ ನನಗೆ ಗೊತ್ತಿಲ್ಲ. ಮೊನ್ನೆ 50 ಕೋಟಿ ಕೊಟ್ಟಿದ್ದಾರೆ. ಅಲ್ಲದೇ, ಇಲಾಖೆಗಳಲ್ಲೂ ಅನುದಾನ ಕೊಟ್ಟಿದ್ದಾರೆ. ಆರ್‌ಡಿಪಿಆರ್ PWD ಇಲಾಖೆಯಲ್ಲೂ ಕೊಟ್ಟಿದ್ದಾರೆ. ರಾಯರೆಡ್ಡಿ ಹಿರಿಯ ಶಾಸಕರು. ಅವರು ಯಾಕೆ ಹೀಗೆ ನನಗೆ ಗೊತ್ತಿಲ್ಲ. ಹೈಕಮಾಂಡ್ ಸೂಚನೆ ಮೇರೆಗೆ ಸುರ್ಜೇವಾಲ ಸಭೆ ನಡೆಸುತ್ತಿದ್ದಾರೆ. ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಖಲಿಸ್ತಾನಿ ಭಯೋತ್ಪಾದಕ ಹ್ಯಾಪಿ ಪಾಸಿಯಾ ಭಾರತಕ್ಕೆ ಹಸ್ತಾಂತರ ಪ್ರಕ್ರಿಯೆ ಶುರು