Tag: ಚಲುವರಾಯಸ್ವಾಮಿ

  • ಪಾಪ ನಿಖಿಲ್ ಇನ್ನೂ ಯುವಕ, ಅವನಿಗೆ ವಿಚಾರ ಗೊತ್ತಿದ್ಯೋ, ಗೊತ್ತಿಲ್ವೋ?: ಚಲುವರಾಯಸ್ವಾಮಿ

    ಪಾಪ ನಿಖಿಲ್ ಇನ್ನೂ ಯುವಕ, ಅವನಿಗೆ ವಿಚಾರ ಗೊತ್ತಿದ್ಯೋ, ಗೊತ್ತಿಲ್ವೋ?: ಚಲುವರಾಯಸ್ವಾಮಿ

    ಮಂಡ್ಯ: `ಕಾಂಗ್ರೆಸ್ (Congress) ಕುಮಾರಣ್ಣಗೆ ನಾಲ್ಕು ಕಾಲುಗಳಿಲ್ಲದ ಕುದುರೆ ಕೊಟ್ರು’ ಎಂಬ ನಿಖಿಲ್ (Nikhil Kumaraswamy) ಹೇಳಿಕೆಗೆ ವ್ಯಂಗ್ಯವಾಡಿದ ಮಾಜಿ ಸಚಿವ ಚಲುವರಾಯಸ್ವಾಮಿ (N. Chaluvaraya Swamy), `ಪಾಪ ನಿಖಿಲ್ ಇನ್ನೂ ಯುವಕ, ಅವನಿಗೆ ವಿಚಾರ ಗೊತ್ತಿದ್ಯೋ, ಗೊತ್ತಿಲ್ವೋ? ಎಂದು ಕುಟುಕಿದ್ದಾರೆ.

    ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನ ಡಿ.ಕೋಡಿಹಳ್ಳಿಯಲ್ಲಿ ಮಾತನಾಡಿದ ಅವರು, 37 ಸೀಟು ಗೆದ್ದ ಕುಮಾರಸ್ವಾಮಿ (HD Kumaraswamy) ಅವರನ್ನ ನಾವು ಮುಖ್ಯಮಂತ್ರಿ ಮಾಡಿದ್ದೆವು. 37 ಸೀಟ್ ಗೆದ್ದರೂ ಅದೇ ಸಿಎಂ ಸೀಟು, 120 ಸೀಟ್ ಗೆದ್ದರೂ ಅದೇ ಸಿಎಂ ಸೀಟು. ಕಾಂಗ್ರೆಸ್‌ಗೆ ಬೇಕಾಗಿದ್ದು ಬಿಜೆಪಿಯನ್ನು (BJP) ದೂರವಿಡುವುದಷ್ಟೇ ಅದಕ್ಕಾಗಿ ಕುಮಾರಸ್ವಾಮಿ ಅವರನ್ನ ಕಾಂಗ್ರೆಸ್ ಮುಖ್ಯಮಂತ್ರಿ ಮಾಡಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಕುರಿತ ಹೇಳಿಕೆಗೆ ಅಶ್ವಥ್ ನಾರಾಯಣ್ ವಿಷಾದ

    5 ವರ್ಷಗಳೂ ಕುಮಾರಸ್ವಾಮಿ ಅವರೇ ಸಿಎಂ ಆಗಿ ಇರಬಹುದಿತ್ತು, ಒಳ್ಳೆಯ ಕೆಲಸ ಮಾಡಬಹುದಿತ್ತು. ಆದರೆ ಅವರ ಪಕ್ಷದ ಅಧ್ಯಕ್ಷರೇ ಪಕ್ಷ ಬಿಟ್ಟು ಹೋದರೆ ಅದಕ್ಕಿಂತ ಇನ್ನೇನು ಹೇಳೋಕೆ ಆಗುತ್ತೆ. ಚುನಾವಣೆ ಬಂದಿದೆ ಅಂತಾ ಹೀಗೆ ಹೇಳ್ತಾರೆ. ಆದರೆ ಹೆಚ್‌ಡಿಕೆಗೆ ಕಾಂಗ್ರೆಸ್ ನಿಂದ ಯಾವುದೇ ಅಡಚಣೆ ಆಗಿರಲಿಲ್ಲ, ಅದರ ಚರ್ಚೆಗೆ ಇದು ಸಂದರ್ಭವೂ ಅಲ್ಲ ಎಂದು ಚಲುವರಾಯಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತವರು ಜಿಲ್ಲೆಯಲ್ಲೇ ಸಿದ್ದರಾಮಯ್ಯಗೆ ಭಾರೀ ಅಪಮಾನ!

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಹಿಳಾ ದಿನಾಚರಣೆ ದಿನ ಜೆಡಿಎಸ್, ಕಾಂಗ್ರೆಸ್ ಬೆಂಬಲಿಗರಿಂದ ಪ್ರತ್ಯೇಕ ಅಶ್ಲೀಲ ನೃತ್ಯ

    ಮಹಿಳಾ ದಿನಾಚರಣೆ ದಿನ ಜೆಡಿಎಸ್, ಕಾಂಗ್ರೆಸ್ ಬೆಂಬಲಿಗರಿಂದ ಪ್ರತ್ಯೇಕ ಅಶ್ಲೀಲ ನೃತ್ಯ

    ಮಂಡ್ಯ: ವಿಶ್ವ ಮಹಿಳೆಯರ ದಿನದಂದೇ ಮಧ್ಯರಾತ್ರಿವರೆಗೆ ತುಂಡು ಬಟ್ಟೆ ಧರಿಸಿರುವ ಹುಡುಗಿಯರನ್ನು ಕರೆತಂದು ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ಬೆಂಬಲಿಗರು ಮಂಡ್ಯ ಜಿಲ್ಲೆಯ ನಾಗಮಂಗಲ ಕ್ಷೇತ್ರದಲ್ಲಿ ಅಶ್ಲೀಲ ನೃತ್ಯ ಮಾಡಿಸಿದ್ದಾರೆ.

    ನಾಗಮಂಗಲ ತಾಲೂಕಿನ ತೊಳಸಿ ಕೊಂಬರಿ ಗೇಟ್ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಪ್ರಯುಕ್ತ ಜೆಡಿಎಸ್ ಶಾಸಕ ಸುರೇಶ್‍ಗೌಡ ಹಾಗೂ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಬೆಂಬಲಿಗರು ಪ್ರತ್ಯೇಕವಾಗಿ ಆರ್ಕೇಸ್ಟ್ರಾ ಆಯೋಜನೆ ಮಾಡಿದ್ದರು. ಈ ವೇಳೆ ಎರಡು ಪಕ್ಷದ ಬೆಂಬಲಿಗರು ತುಂಡು ಬಟ್ಟೆ ಧರಿಸಿರುವ ಹುಡುಗಿಯರನ್ನು ಕರೆಸಿ ಹಸಿ-ಬಿಸಿಯಾಗಿ ನೃತ್ಯ ಮಾಡಿಸಿದ್ದಾರೆ. ಇದನ್ನೂ ಓದಿ: ಗ್ರಾಮದೇವತೆ ಹಬ್ಬದಲ್ಲಿ ಅಶ್ಲೀಲ ನೃತ್ಯ – ಕೈ ಬೆಂಬಲಿಗರ ವಿರುದ್ಧ ಆಕ್ರೋಶ

    ಕಾಂಗ್ರೆಸ್ ಬೆಂಬಲಿಗರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಸಭ್ಯ ನೃತ್ಯ ಬೆಳಗ್ಗೆ ವೈರಲ್ ಆಗಿತ್ತು. ಇದೀಗ ಜೆಡಿಎಸ್ ಬೆಂಬಲಿಗರು ಆಯೋಜಿಸಿದ್ದ ಅಶ್ಲೀಲ ಮಾದರಿ ನೃತ್ಯ ಬಿಡುಗಡೆಯಾಗಿದೆ. ರಾಜಕೀಯ ಲಾಭಕ್ಕಾಗಿ ಎಲ್ಲದಕ್ಕೂ ಜೈ ಅನ್ನುವ ಈ ರಾಜಕೀಯ ಪಕ್ಷಗಳು, ವಿಶ್ವ ಮಹಿಳಾ ದಿನದಂದೇ ಅಶ್ಲೀಲ ಮಾದರಿ ಡ್ಯಾನ್ಸ್ ಮಾಡಿಸಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಯುವಕರ ಓಲೈಕೆಗೆ ಹೀಗೆ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿಗರು ಮಾಡುತ್ತಿದ್ದಾರೆ. ಇದನ್ನೂ ಓದಿ: ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ಡೀಲ್ ಮಾಡ್ತಿದ್ದ ಬೆಂಗಳೂರಿನ ಲವರ್ಸ್ ಬಂಧನ

    ಗ್ರಾಮ ದೇವತೆ ಹಬ್ಬಕ್ಕೆ ಬೇರೆಡೆಯಿಂದ ಹುಡುಗಿಯರನ್ನ ಕರೆಸಿ ಆರ್ಕೆಸ್ಟ್ರಾ ಆಯೋಜನೆ ಮಾಡಿದ್ದರು. ಗ್ರಾಮ ದೇವತೆ ಹಬ್ಬದ ಪ್ರಯುಕ್ತ ಗ್ರಾಮದಲ್ಲಿಯೇ ಆಯೋಜನೆ ಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಮಧ್ಯರಾತ್ರಿ ಅರೆಬರೆ ಬಟ್ಟೆ ತೊಟ್ಟು ಮಾದಕ ನೃತ್ಯ ಮಾಡಿ ಗ್ರಾಮದ ಯುವಕರನ್ನು ಹುಡುಗಿಯರು ಹುಚ್ಚೆಬ್ಬಿಸಿದ್ದು, ಹಾಲಿ-ಮಾಜಿ ಶಾಸಕರ ಬೆಂಬಲಿಗರಿಂದ ಪ್ರತ್ಯೇಕ ಆರ್ಕೆಸ್ಟ್ರಾ ಆಯೋಜನೆ ಮಾಡಿದ್ದಾರೆ.

    ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಎನ್. ಚಲುವರಾಯಸ್ವಾಮಿ, ಜೆಡಿಎಸ್ ಪಕ್ಷದ ಶಾಸಕ ಸುರೇಶ್ ಗೌಡ ಬೆಂಬಲಿಗರು ಪ್ರತ್ಯೇಕವಾಗಿ ಪ್ರತ್ಯೇಕ ವೇದಿಕೆಯಲ್ಲಿ ಸನ್ಮಾನ ಮಾಡಿ ನಂತರ ಅವರಿಬ್ಬರೂ ತೆರಳಿದ ನಂತರ ಈ ರೀತಿ ನೃತ್ಯ ನಡೆಸಲಾಗಿದೆ. ವಿಶ್ವ ಮಹಿಳಾ ದಿನಾಚರಣೆ ದಿನವೇ ಪಡ್ಡೆ ಹುಡುಗಿಯರನ್ನು ಕರೆಸಿ ಮಧ್ಯರಾತ್ರಿವರೆಗೂ ಕುಣಿಸಿದ್ದಕ್ಕೆ ಸಾರ್ವಜನಿಕರು ಕಿಡಿಕಾರಿದ್ದಾರೆ.

  • ಗ್ರಾಮದೇವತೆ ಹಬ್ಬದಲ್ಲಿ ಅಶ್ಲೀಲ ನೃತ್ಯ – ಕೈ ಬೆಂಬಲಿಗರ ವಿರುದ್ಧ ಆಕ್ರೋಶ

    ಗ್ರಾಮದೇವತೆ ಹಬ್ಬದಲ್ಲಿ ಅಶ್ಲೀಲ ನೃತ್ಯ – ಕೈ ಬೆಂಬಲಿಗರ ವಿರುದ್ಧ ಆಕ್ರೋಶ

    – ವೇದಿಕೆ ಮೇಲೆ ಬಾಲಕನನ್ನು ಕರೆ ತಂದ ಡ್ಯಾನ್ಸರ್‌ಗಳು

    – ಗ್ರಾಮದಲ್ಲಿ ಕಾಂಗ್ರೆಸ್, ಜೆಡಿಎಸ್‍ನಿಂದ ರಸಮಂಜರಿ ಕಾರ್ಯಕ್ರಮ

    ಮಂಡ್ಯ: ಚುನಾವಣೆ ಅಖಾಡ ಹತ್ತಿರ ಆಗುತ್ತಿದ್ದ ಹಾಗೆ ಮತದಾರರನ್ನು ಸೆಳೆಯಲು ರಾಜಕೀಯ ಮುಖಂಡರು ಒಂದೆಲ್ಲಾ ಒಂದು ಗಿಮಿಕ್‍ಗಳನ್ನು ಮಾಡುತ್ತಾನೆ ಇರುತ್ತಾರೆ. ಇದೀಗ ಅಂತಹದೇ ಒಂದು ಗಿಮಿಕ್ ಮಾಡಲು ಹೋಗಿ ಕಾಂಗ್ರೆಸ್ ಮುಖಂಡನ ಬೆಂಬಲಿಗರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

    ನಾಗಮಂಗಲ ತಾಲೂಕಿನ ತೊಳಸಿಕೊಂಬರಿ ಗ್ರಾಮದ ಗ್ರಾಮದೇವತೆ ಹಬ್ಬದ ಅಂಗವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್‍ನ ಎರಡು ಗುಂಪು ಪ್ರತ್ಯೇಕವಾಗಿ ವೇದಿಕೆ ನಿರ್ಮಾಣ ಮಾಡಿ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಒಂದು ಗುಂಪು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಮತ್ತೊಂದು ಗುಂಪು ಶಾಸಕ ಸುರೇಶ್‍ಗೌಡರನ್ನು ಕರೆಸಿ ವೇದಿಕೆಯ ಮೇಲೆ ಸನ್ಮಾನ ಮಾಡಿ ವೇದಿಕೆ ಮೇಲೆ ಭಾಷಣ ಮಾಡಿಸಿದ್ದರು. ಇದನ್ನೂ ಓದಿ: ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ಡೀಲ್ ಮಾಡ್ತಿದ್ದ ಬೆಂಗಳೂರಿನ ಲವರ್ಸ್ ಬಂಧನ

    ಇದಾದ ಬಳಿಕ ಸುರೇಶ್‍ಗೌಡ ಬೆಂಬಲಿಗರು ವೇದಿಕೆಯ ಮೇಲೆ ಒಂದಷ್ಟು ನೃತ್ಯ ಕಾರ್ಯಕ್ರಮವನ್ನು ನಡೆಸಿದರು. ಇನ್ನೊಂದು ಕಡೆ ಇದೇ ಊರಿನಲ್ಲಿ ಚಲುವರಾಯಸ್ವಾಮಿ ಬೆಂಬಲಿಗರು ಸಹ ನೃತ್ಯ ಕಾರ್ಯಕ್ರಮ ಮಾಡಿದ್ದರು. ಆದರೆ ಚಲುವರಾಯಸ್ವಾಮಿ ಬೆಂಬಲಿಗರು ಮಾಡಿಸಿದ ಈ ನೃತ್ಯ ಕಾರ್ಯಕ್ರಮದಲ್ಲಿ ಡ್ಯಾನ್ಸರ್‍ಗಳು ಅರೆಬರೆ ಬಟ್ಟೆ ಧರಿಸಿ ನೃತ್ಯ ಮಾಡಿದ್ದರು. ಈ ವೇಳೆ ಬಾಲಕನೊಬ್ಬನನ್ನು ಡ್ಯಾನ್ಸರ್‍ಗಳು ವೇದಿಕೆಯ ಮೇಲೆ ಕರೆತಂದು ಅಶ್ಲೀಲವಾಗಿ ನಡೆದುಕೊಂಡಿದ್ದಾರೆ. ಅಲ್ಲದೇ ನೃತ್ಯಗಾರ್ತಿಯರು ಇಡೀ ಕಾರ್ಯಕ್ರಮ ಉದ್ದಕ್ಕೂ ಅಶ್ಲೀಲವಾಗಿ ನಡೆದುಕೊಂಡಿದ್ದು, ಸಭ್ಯಸ್ಥರು ತಲೆ ತಗ್ಗಿಸುವ ರೀತಿಯಲ್ಲಿ ವರ್ತನೆ ಮಾಡಿದ್ದಾರೆ. ಇದನ್ನೂ ಓದಿ : ಮಹಿಳಾ ದಿನಾಚರಣೆಗಾಗಿ ವಿಶೇಷ ಪೋಸ್ಟರ್ ರಿಲೀಸ್ ಮಾಡಿದ ಕೆಜಿಎಫ್ 2 ತಂಡ

    ಚಲುವರಾಯಸ್ವಾಮಿ ಬೆಂಬಲಿಗರು ಈ ರೀತಿ ಕಾರ್ಯಕ್ರಮ ನಡೆಸಿದ್ದರಿಂದ ಮಂಡ್ಯ ಜಿಲ್ಲೆಯ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಈ ಹಿಂದೆ 2004ರಲ್ಲಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ನಾಗಮಂಗಲ ತಾಲೂಕಿನ ದೇವಾಲಪುರ ಗ್ರಾಮದಲ್ಲಿ ಚುನಾವಣೆ ಪೂರ್ವದಲ್ಲಿ ಇದೇ ರೀತಿಯ ಕಾರ್ಯಕ್ರಮ ನಡೆಸಿದ್ದರು. ಇದಾದ ಬಳಿಕ ಸಾರ್ವಜನಿಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರ ಜೊತೆಗೆ ಆ ಚುನಾವಣೆಯಲ್ಲಿ ಶಿವರಾಮೇಗೌಡ ಸೋಲು ಕಂಡಿದ್ದರು. ಇದೀಗ ಅದೇ ಹಾದಿಯನ್ನು ಚಲುವರಾಯಸ್ವಾಮಿ ಬೆಂಬಲಿಗರು ಹಿಡಿದಿರುವುದು ಜನರ ಆಕ್ರೋಶಕ್ಕೆ ಕಾರಣವಾಗುತ್ತಿದೆ.

    ಒಟ್ಟಾರೆ ಗ್ರಾಮದೇವತೆ ಹಬ್ಬದ ನೆಪದಲ್ಲಿ ಈ ರೀತಿಯ ಅಶ್ಲೀಲ ಕಾರ್ಯಕ್ರಮವನ್ನು ಆಯೋಜಿಸಿರುವುದು ಸಕ್ಕರೆ ನಾಡಿನ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಚಲುವರಾಯಸ್ವಾಮಿ ಬೆಂಬಲಿಗರ ಈ ವರ್ತನೆ ವಿರುದ್ಧ ಹಾಗೂ ಚಲುವರಾಯಸ್ವಾಮಿ ವಿರುದ್ಧ ಸದ್ಯ ನಾಗಮಂಗಲದ ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರುತ್ತಿದ್ದಾರೆ.

  • ಹೊಸ ಯೋಚನೆಗಳು ಬಜೆಟ್‌ನಲ್ಲಿ ಇಲ್ಲ: ಚಲುವರಾಯಸ್ವಾಮಿ

    ಹೊಸ ಯೋಚನೆಗಳು ಬಜೆಟ್‌ನಲ್ಲಿ ಇಲ್ಲ: ಚಲುವರಾಯಸ್ವಾಮಿ

    ಮಂಡ್ಯ: ರಾಜ್ಯಸರ್ಕಾರದ ಬಜೆಟ್ ನೀರಸ ಬಜೆಟ್ ಆಗಿದ್ದು, ಯಾವುದೇ ಹೊಸ ಯೋಚನೆಗಳು, ಆಲೋಚನೆಗಳು ಇದರಲ್ಲಿ ಕಾಣುತ್ತಿಲ್ಲ ಎಂದು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಕಿಡಿಕಾರಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಇಂದಿನ ಬಜೆಟ್ ಮೇಲೆ ರೈತರು ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು. ಆದರೆ ಅವೆಲ್ಲವೂ ಈ ಸರ್ಕಾರ ಹುಸಿಗೊಳಿಸಿದೆ. ಮಂಡ್ಯ ಜಿಲ್ಲೆಗೆ ಈ ಬಜೆಟ್‍ನಿಂದ ಯಾವುದೇ ರೀತಿಯಾದ ಉಪಯೋಗವಾಗಿಲ್ಲ ಎಂದು ಟೀಕಿಸಿದರು.

    ಮೈಸೂರು ಸಕ್ಕರೆ ಕಾರ್ಖಾನೆಗೆ ನೀಡಿರುವ 50 ಕೋಟಿ ರೂ. ಅನುದಾನ ಸಾಲದು, ಮುಖ್ಯಮಂತ್ರಿಗಳು ಇದರ ಬಗ್ಗೆ ಪರಾಮರ್ಶಿಸಿ ಅನುದಾನವನ್ನು ಹೆಚ್ಚಿಸಬೇಕು. ರೈತರ ಆರ್ಥಿಕ ಪರಿಸ್ಥಿತಿ ಹಾಗೂ ಜೀವನಮಟ್ಟವನ್ನು ಸುಧಾರಿಸವಂತಹ ಯಾವುದೇ ಯೋಜನೆಗಳನ್ನೂ ಘೋಷಿಸದೇ ಇರುವುದು ನಿರಾಸೆ ತಂದಿದೆ. ಬೆಂಬಲ ಬೆಲೆ ಬಗ್ಗೆಯೂ ಯಾವುದೇ ಪ್ರಸ್ತಾಪ ಮಾಡಿಲ್ಲ. ನಮ್ಮದು ರೈತಪರ ಸರ್ಕಾರ ಎಂದು ಹೇಳಿದರೆ ಸಾಲದು ಅದರಂತೆ ನಡೆಯಬೇಕು ಎಂದು ವಾಗ್ದಾಳಿ ನಡೆಸಿದರು.  ಇದನ್ನೂ ಓದಿ: ಸರ್ವ ವ್ಯಾಪಿ ಸರ್ವ ಸ್ಪರ್ಶಿ ಬಜೆಟ್: ಆರ್. ಅಶೋಕ್

    ಹವಾಮಾನ ವೈಪರೀತ್ಯ, ಅತಿವೃಷ್ಟಿ, ಅನಾವೃಷ್ಟಿಗಳಂತಹ ಸಂದರ್ಭದಲ್ಲಿ ಬೆಳೆ ನಷ್ಟಕ್ಕೆ ಒಳಗಾಗುವ ರೈತರಿಗೆ ಕೆಲವು ಸಂದರ್ಭದಲ್ಲಿ ತಾವು ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗುವುದಿಲ್ಲ. ಹೀಗೆ ಬೆಲೆ ಕುಸಿತವಾದ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸಬೇಕು. ಇದಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಣೆ ಮಾಡಬೇಕು. ಹೀಗಾಗಿ ಸರ್ಕಾರ ಬೆಂಬಲ ಬೆಲೆಗೆ ಹಣವನ್ನು ಘೋಷಣೆ ಮಾಡಬೇಕಿದೆ. ಅಲ್ಲದೆ ಪ್ರಾಕೃತಿಕ ವಿಕೋಪಗಳಿಗೆ ಸಂಬಂಧಪಟ್ಟಂತೆ ನಡೆಯುವ ಅವಘಡಗಳಿಗೆ ನಿಧಿ ಸ್ಥಾಪನೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಬಜೆಟ್ ಮೇಲಿನ ಚರ್ಚೆಯ ಸಂದರ್ಭದಲ್ಲಿ ಆದರೂ ಗಮನ ಹರಿಸಲಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಬರೀ ಪುಸ್ತಕದ ಲೆಕ್ಕಾಚಾರದ ಜೊಳ್ಳು ಬಜೆಟ್: ಶರವಣ

  • ಬಿಜೆಪಿ, ಜೆಡಿಎಸ್‍ನಿಂದ ಕಾಂಗ್ರೆಸ್‍ಗೆ ಸಾಕಷ್ಟು ಶಾಸಕರು ಬರ್ತಾರೆ: ಚಲುವರಾಯಸ್ವಾಮಿ

    ಬಿಜೆಪಿ, ಜೆಡಿಎಸ್‍ನಿಂದ ಕಾಂಗ್ರೆಸ್‍ಗೆ ಸಾಕಷ್ಟು ಶಾಸಕರು ಬರ್ತಾರೆ: ಚಲುವರಾಯಸ್ವಾಮಿ

    ಚಾಮರಾಜನಗರ: ಬಿಜೆಪಿ, ಜೆಡಿಎಸ್‍ನಿಂದ ಕಾಂಗ್ರೆಸ್‍ಗೆ ಸಾಕಷ್ಟು ಜನ ಶಾಸಕರು ಬರಲಿದ್ದಾರೆ, ಅವರ ಸೇರ್ಪಡೆಗೆ ಸಮಯ ನಿಗದಿಯಾಗಿಲ್ಲ ರಾಜ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ಸಾಕಷ್ಟು ಬದಲಾವಣೆಗಳಾಗಲಿವೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

    BJP - CONGRESS

    ಚಾಮರಾಜನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಕಾಂಗ್ರೆಸ್ ಪರ್ವ ಆರಂಭವಾಗಿದೆ, ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಇದರ ಮುನ್ಸೂಚನೆ ಸಿಕ್ಕಿದ್ದು ಬೇರೆ ಬೇರೆ ಪಕ್ಷಗಳ ಸಾಕಷ್ಟು ಮಂದಿ ನಾಯಕರು ಕಾಂಗ್ರೆಸ್ ಪರ ಒಲವು ತೋರುತ್ತಿದ್ದಾರೆ ಎಂದರು. ಇದನ್ನೂ ಓದಿ: ರಾಜ್ಯಗಳಲ್ಲಿ ಹಿಜಬ್‌ ವಿವಾದ – ಹೈಕೋರ್ಟ್‌ಗಳ ತೀರ್ಪುಗಳೇನು? ಇಲ್ಲಿದೆ ಮಾಹಿತಿ

    ಇದೀಗ ಮಂಡ್ಯದಲ್ಲೂ ಬದಲಾವಣೆಯ ಗಾಳಿ ಬೀಸುತ್ತಿದೆ. ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಸೋತು ಶಕ್ತಿಯೇ ಇಲ್ಲವಾಗಿದ್ದ ಕಾಂಗ್ರೆಸ್ ಈಗ ವಿಧಾನಪರಿಷತ್ ಚುನಾವಣೆಯಲ್ಲಿ ಗೆದ್ದಿದ್ದು ಬದಲಾವಣೆ ಮುನ್ಸೂಚನೆಯಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ರಾಜಧಾನಿಗೂ ಕಾಲಿಟ್ಟ ಹಿಜಬ್ ವಿವಾದ – ಹಿಜಬ್ ತೆಗೆಯುವಂತೆ ಮಕ್ಕಳಿಗೆ ಶಿಕ್ಷಕರಿಂದ ಒತ್ತಾಯ

  • ಹಿಜಬ್ ವಿವಾದದಿಂದ ಅನಾಹುತವಾದ್ರೆ, ಸಿಎಂ ಆಂಡ್ ಟೀಂ ಹೊಣೆ ಹೊರಬೇಕಾಗುತ್ತೆ: ಚಲುವರಾಯಸ್ವಾಮಿ

    ಹಿಜಬ್ ವಿವಾದದಿಂದ ಅನಾಹುತವಾದ್ರೆ, ಸಿಎಂ ಆಂಡ್ ಟೀಂ ಹೊಣೆ ಹೊರಬೇಕಾಗುತ್ತೆ: ಚಲುವರಾಯಸ್ವಾಮಿ

    ಚಾಮರಾಜನಗರ: ರಾಜ್ಯದಲ್ಲಿ ಹಿಜಬ್ ವಿವಾದದಿಂದ ಅನಾಹುತಗಳಾದರೆ ಸಿಎಂ ಬೊಮ್ಮಾಯಿ ಅಂಡ್ ಟೀಂ ಹೊಣೆ ಹೊರಬೇಕಾಗುತ್ತದೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

    ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ಡಿಜಿಟಲ್ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ತಪ್ಪು ನಡೆಯಿಂದ ಹಿಜಬ್ ವಿವಾದ ಭುಗಿಲೆದ್ದಿದೆ. ಸೂಕ್ತ ಸಮಯದಲ್ಲಿ ಸರಿಯಾದ ತೀರ್ಮಾನ ಕೈಗೊಂಡಿದ್ದರೆ ಪರಿಸ್ಥಿತಿ ಇಷ್ಟೊಂದು ವಿಕೋಪಕ್ಕೆ ಹೋಗುತ್ತಿರಲಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಕುರಿತಾಗಿ ಕುರಾನ್‍ನಲ್ಲಿ ಯಾವುದೇ ಉಲ್ಲೇಖ ಕಾಣುವುದಿಲ್ಲ : ಮೊಹಮ್ಮದ್ ಖಾನ್

    ಹಿಜಾಬ್ ವಿವಾದದಲ್ಲಿ ಕಾಂಗ್ರೆಸ್ ಪಾತ್ರ ಇದೆ ಎಂಬ ಆರೋಪವನ್ನು ತಳ್ಳಿಹಾಕಿದ ಅವರು ಬಿಜೆಪಿ, ಆರ್‌ಎಸ್‌ಎಸ್‌, ಎಬಿವಿಪಿ ಮತ್ತಿತರ ಸಂಘ ಪರಿವಾರದ ಸಂಘಟನೆಯ ಪ್ರಚೋದನೆಯೇ ಇದಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷ ಇದರ ಹೊಣೆಹೊರಬೇಕು. ರಾಜ್ಯ ಬಿಜೆಪಿ ಸರ್ಕಾರ ತನ್ನ ವೈಫಲ್ಯ ಮುಚ್ಚಿ ಹಾಕಲು, ಜನರ ಗಮನ ಬೇರೆಡೆ ಸೆಳೆಯಲು ಈ ವಿವಾದ ಸೃಷ್ಟಿಸಿದೆ ಎಂದಿದ್ದಾರೆ. ಇದನ್ನೂ ಓದಿ:  ರಾಜ್ಯಗಳಲ್ಲಿ ಹಿಜಬ್‌ ವಿವಾದ – ಹೈಕೋರ್ಟ್‌ಗಳ ತೀರ್ಪುಗಳೇನು? ಇಲ್ಲಿದೆ ಮಾಹಿತಿ

    ಮಂಡ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಗೆ ಕಾಂಗ್ರೆಸ್ ನಾಯಕರ ಸನ್ಮಾನ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‍ಗೂ ಅದಕ್ಕೂ ಸಂಬಂಧವಿಲ್ಲ. ಪಕ್ಷದ ಶಾಸಕಾಂಗ ನಾಯಕರಾಗಲಿ, ಕೆಪಿಸಿಸಿ ಅಧ್ಯಕ್ಷರಾಗಲಿ ಸನ್ಮಾನ ಮಾಡಿಲ್ಲ, ಕಾಂಗ್ರೆಸ್‍ನಲ್ಲಿ ಗುರುತಿಸಿಕೊಂಡ ಕೆಲವರು ವೈಯಕ್ತಿಕ ಸನ್ಮಾನ ಮಾಡಿದ್ದಾರೆ. ಸನ್ಮಾನ ಮಾಡುವವರನ್ನು ನಾವು ತಡೆಯಲಾಗುವುದಿಲ್ಲ ಎಂದು ಹೇಳಿದ್ದಾರೆ.

  • ಕಾಂಗ್ರೆಸ್ ಉಸಿರು ನಿಲ್ಲಿಸುತ್ತೇನೆ ಎಂದಿದ್ದ ಬಿಎಸ್‍ವೈಗೆ ಉತ್ತರ ಸಿಕ್ಕಿದೆ: ಚಲುವರಾಯಸ್ವಾಮಿ

    ಕಾಂಗ್ರೆಸ್ ಉಸಿರು ನಿಲ್ಲಿಸುತ್ತೇನೆ ಎಂದಿದ್ದ ಬಿಎಸ್‍ವೈಗೆ ಉತ್ತರ ಸಿಕ್ಕಿದೆ: ಚಲುವರಾಯಸ್ವಾಮಿ

    ಮಂಡ್ಯ: ಕಾಂಗ್ರೆಸ್ ಉಸಿರು ನಿಲ್ಲಿಸುತ್ತೇನೆ ಎಂದಿದ್ದ ಬಿಎಸ್‍ವೈಗೆ ಈ ಚುನಾವಣೆ ಉತ್ತರ ನೀಡಿದೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಹೇಳಿದರು.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷ ಮಂಡ್ಯ ಕಾಂಗ್ರೆಸ್‍ಗೆ ಕರಾಳವಾಗಿತ್ತು. ಪಂಚಾಯಿತಿಯಲ್ಲೂ ಸಹ ಜೆಡಿಎಸ್‍ಗಿಂತಲೂ ನಾವು ಕಡಿಮೆ ಇದ್ದೆವು. ಎಂಎಲ್‍ಸಿ ಚುನಾವಣೆಯಲ್ಲಿ ಪಕ್ಷಾತೀತವಾಗಿ ಕಾಂಗ್ರೆಸ್ ಬೆಂಬಲಿಸಿದ್ದಾರೆ. ದಿನೇಶ್ ಗೂಳಿಗೌಡರ ಗೆಲುವು ನಮ್ಮ ಒಗ್ಗಟ್ಟಿನ ಫಲಿತಾಂಶ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಪತ್ನಿಯ ಸಾವಿನ ಸುದ್ದಿ ತಿಳಿದು ನೇಣಿಗೆ ಶರಣಾದ ಪತಿ

    ನಮಗೆ ಯಾವುದೇ ಅಧಿಕಾರ ಇಲ್ಲದ ಸಮಯದಲ್ಲಿ ಮತದಾರರು ನಮ್ಮ ಕೈಹಿಡಿದಿದ್ದಾರೆ. ಇದು ಮಂಡ್ಯ ಜಿಲ್ಲೆಯ ಸ್ವಾಭಿಮಾನದ ಗೆಲುವಾಗಿದೆ. ಈ ಗೆಲುವು ಪ್ರಥಮ ಹೆಜ್ಜೆ, ಇದನ್ನು ಜವಬ್ದಾರಿಯನ್ನಾಗಿ ತೆಗೆದುಕೊಂಡಿದ್ದೇವೆ. ಬಿಜೆಪಿ, ಜೆಡಿಎಸ್ ರೈತ ಸಂಘದ ಸದಸ್ಯರು ನಮ್ಮನ್ನ ಬೆಂಬಲಿಸಿದ್ದಾರೆ ಅವರಿಗೆಲ್ಲ ಕೃತಜ್ಞತೆ ಎಂದು ನುಡಿದರು. ಇದನ್ನೂ ಓದಿ: ಅಭ್ಯರ್ಥಿ ರವಿ ಮದ್ದು ಗುಂಡೇಟು ತಿಂದವ್ರೆ: ಡಿಕೆಶಿ

    ಎಲ್ಲರೂ ಒಟ್ಟಾಗಿ ಜೆಡಿಎಸ್ ಸೋಲಿಸಿದ್ದು ತಪ್ಪಾ? ರಾಜ್ಯದಲ್ಲಿ ಬಿಜೆಪಿಗೆ ಸಹಕರಿಸುತ್ತೇವೆ ಎಂದು ಜೆಡಿಎಸ್ ನಾಯಕರು ಹೇಳಿದ್ದರು. ನಾವು ಎಲ್ಲೂ ಯಾರನ್ನು ಬೆಂಬಲ ಕೇಳಿರಲಿಲ್ಲ. ಬಿಜೆಪಿಯಲ್ಲೂ ಕೆಲವರು ನಮ್ಮ ಅಣ್ಣ ತಮ್ಮಂದಿರು ನಮಗೆ ಸಹಕರಿಸಿದ್ದಾರೆ ಅವರಿಗೆ ಧನ್ಯವಾದ ಎಂದರು.

  • ಇಬ್ಬರನ್ನ ಜಗಳಕ್ಕೆ ಬಿಟ್ಟು ಸೇಫ್ ಆದಂತಿದೆ: ಸುಮಲತಾ, ಹೆಚ್‍ಡಿಕೆ ಸಮರಕ್ಕೆ ಚಲುವರಾಯಸ್ವಾಮಿ ಪ್ರತಿಕ್ರಿಯೆ

    ಇಬ್ಬರನ್ನ ಜಗಳಕ್ಕೆ ಬಿಟ್ಟು ಸೇಫ್ ಆದಂತಿದೆ: ಸುಮಲತಾ, ಹೆಚ್‍ಡಿಕೆ ಸಮರಕ್ಕೆ ಚಲುವರಾಯಸ್ವಾಮಿ ಪ್ರತಿಕ್ರಿಯೆ

    ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಂಸದೆ ಸುಮಾಲತಾ ನಡುವಿನ ಗಲಾಟೆ ಬಗ್ಗೆ ಮಾಜಿ ಸಚಿವ ಚಲುವರಾಯಸ್ವಾಮಿ ಬೇಸರ ಹೊರಹಾಕಿದ್ದು, ಸರ್ಕಾರದಿಂದ ಮಾಡಬೇಕಾದ ಕೆಲಸವನ್ನು ರಸ್ತೆಯಲ್ಲಿ ಬೀದಿಜಗಳ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಮಂಡ್ಯ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಚರ್ಚಿಸಿದ ನಂತರ ಮಾತನಾಡಿದ ಅವರು, ಸುಮಲತಾ ಮತ್ತು ಕುಮಾರಸ್ವಾಮಿ ಟಾಕ್‍ಫೈಟ್ ಬಗ್ಗೆ ಮಾತನಾಡಬಾರದು ಎಂದು ತೀರ್ಮಾನಿದ್ದೇನೆ. ಒಂದು ಕಡೆ ಮಾಜಿ ಮುಖ್ಯಮಂತ್ರಿ ಟೀಂ. ಮತ್ತೊಂದು ಕಡೆ ಸಂಸದರು. ಯಾವ ಉದ್ದೇಶದಿಂದ ಇವರು ಫೈಟ್ ಮಾಡುತ್ತಿದ್ದಾರೆ ನನಗೆ ಅರ್ಥ ಆಗುತ್ತಿಲ್ಲ. ಸರ್ಕಾರದಿಂದ ಮಾಡಬೇಕಾದ ಕೆಲಸವನ್ನು ರೋಡಲ್ಲಿ ಬೀದಿಜಗಳ ಮಾಡಿಕೊಂಡಿದ್ದಾರೆ. ರೈತರು ಕೋವಿಡ್‍ನಿಂದ ತತ್ತರಿಸಿ ಹೋಗಿದ್ದಾರೆ. ಆರ್ಥಿಕ ಅವ್ಯವಸ್ಥೆ ಆಗಿದೆ. ಶುಗರ್ ಫ್ಯಾಕ್ಟರಿ ನಿಂತಿದೆ. ಮನ್ಮುಲ್ ಹಗರಣ ಆಗಿದೆ. ನೀರನ್ನು ಸರಿಯಾಗಿ ಕೊಡದೆ ರೈತರ ಬೆಳೆ ಹಾನಿಯಾಗಿದೆ. ಈ ರೀತಿಯ ನೂರಾರು ಸಮಸ್ಯೆ ಇದೆ. ಈ ಸಮಯದಲ್ಲಿ ವೈಯಕ್ತಿಕ ಪ್ರತಿಷ್ಟೆ ಮಾಡಿಕೊಂಡು ಹೋಗುವುದು ನಮ್ಮ ಜಿಲ್ಲೆಯ ಹಿತದಿಂದ ಒಳ್ಳೆಯದಲ್ಲ ಎಂದರು.

    ಎಲ್ಲ ಸಮಸ್ಯೆಗೂ ಪರಿಹಾರ ಇವರ ಕಿತ್ತಾಟ ಎಂಬ ರೀತಿ ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇವರಿಬ್ಬರನ್ನು ಬೀದಿಗೆ ಬಿಟ್ಟು ನಾವು ಸೇಫಾಗಿರಬಹುದು. ರೈತರ ಸಮಸ್ಯೆ ಪರಿಹರಿಸಲು ಸ್ವಲ್ಪ ಸಮಯ ಸಿಗಲಿದೆ ಎಂದು ಸರ್ಕಾರ ಸುಮ್ಮನಿರುವಂತಿದೆ. ಇಲ್ಲಿ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ.

    ಕೆಆರ್‍ಎಸ್ ಅಣೆಕಟ್ಟೆಗೆ ಸಮಸ್ಯೆ ಇರುವ ಬಗ್ಗೆ, 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸುವ ಬಗ್ಗೆ ಹಿಂದಿನಿಂದಲೂ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು. ಈ ಜಗಳದಿಂದ ಅವರು ಜಿಲ್ಲೆಯ ರೈತರ ಪರ ಇಲ್ಲ ಎಂಬುದು ಎದ್ದು ಕಾಣುತ್ತಿದೆ ಎಂದು ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ.

  • ಜೀವ ಮಣ್ಣಿಗೆ ಹೋಗುವವರೆಗೂ ಮಂಡ್ಯ ಜಿಲ್ಲೆಗೆ ಬರ್ತೀನಿ: ಹೆಚ್‍ಡಿಕೆ

    ಜೀವ ಮಣ್ಣಿಗೆ ಹೋಗುವವರೆಗೂ ಮಂಡ್ಯ ಜಿಲ್ಲೆಗೆ ಬರ್ತೀನಿ: ಹೆಚ್‍ಡಿಕೆ

    ಮಂಡ್ಯ: ನನಗೆ ಗೌರವ ಕೊಟ್ಟಿರುವ ಲಕ್ಷಾಂತರ ಜನ ಮಂಡ್ಯ ಜಿಲ್ಲೆಯಲ್ಲಿದ್ದಾರೆ. ಹೀಗಾಗಿ ಜೀವ ಮಣ್ಣಿಗೆ ಹೋಗುವವರೆಗೂ ಮಂಡ್ಯ ಜಿಲ್ಲೆಗೆ ಬರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

    ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನ್‍ಮುಲ್ ಹಗರಣ ಮುಚ್ಚಿಹಾಕಲು ದೇವೇಗೌಡರು, ಕುಮಾರಸ್ವಾಮಿ ಸಿಎಂ ಜೊತೆ ಮಾತನಾಡಿದ್ದಾರೆ ಅನ್ನೋ ವಿಚಾರಕ್ಕೆ ಪ್ರತಿಕ್ರಿಯಿಸಿದರು. ನಿನ್ನೆ ಮಾಜಿ ಸಚಿವ ಚೆಲುವನಾರಾಯಣಸ್ವಾಮಿ ಮಾಡಿದ ಆರೋಪಕ್ಕೆ ಎಚ್‍ಡಿಕೆ ತಿರುಗೇಟು ನೀಡಿದ ಹೆಚ್‍ಡಿಕೆ, ಹೌದು ನಾನು, ದೇವೇಗೌಡರು ಸಿಎಂ ಜೊತೆ ಮಾತನಾಡಿದ್ದೇವೆ. ನೀವು ಯಾವ ತನಿಖೆಯಾದರೂ ಮಾಡಿಕೊಳ್ಳಿ.  ಹಗರಣ ಬಯಲಿಗೆಳೆದ ಆ ಡಳಿತ ಮಂಡಳಿ ವಿರುದ್ಧವೇ ಕ್ರಮ ಯಾಕೆ ಎಂದು ಸಿಎಂಗೆ ಹೇಳಿದ್ದೇವೆ. ನನ್ನ ಬಡ್ಡಿ ಮಗ ಎನ್ನುತ್ತಾರಲ್ಲ, ಅವರು ನಮಗೆ ಬಡ್ಡಿ ಕೊ ಡುವುದಿರಲಿ ನಾನು ಕೊಟ್ಟ ಅಸಲೇ ವಾಪಸ್ ಕೊಟ್ಟಿಲ್ಲ ಎಂದು ಗರಂ ಆದರು.

    ನಾನೇ ಸಿಎಂಗೆ ಹೇಳಿ ಟೈಂ ನಿಗದಿ ಮಾಡ್ತೀನಿ. ಈ ವಯಸ್ಸಿನಲ್ಲಿ ಮಾದೇಗೌಡರು ಯಾಕೆ ಆ ಮಾಹಾನುಭಾವನೇ ಕರೆದುಕೊಂಡು ಹೋಗಲಿ. ಹಗರಣ ಹೊರತಂದಿದ್ದೇ ಈ ಆಡಳಿತ ಮಂಡಳಿ. ಇವರಿಗೆ ಮಾನ ಮರ್ಯಾದೆ ಇದ್ದರೆ ಹಗರಣದ ತನಿಖೆ ನಡೆಸೋ ಬಗ್ಗೆ ಮಾತನಾಡಲಿ. ಇವರ ಅಪ್ಪಣೆ ತಗೊಂಡು ನಾನು ಮಂಡ್ಯಕ್ಕೆ ಬರಬೇಕಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಶಾಸಕ ಪರಮೇಶ್ವರ್ ನಾಯ್ಕ್ ಸೋದರನಿಂದ ವೃದ್ಧನ ಮೇಲೆ ಹಲ್ಲೆಗೆ ಯತ್ನ

    ನನ್ನ ಜನ ಬಡವರಿದ್ದಾರೆ, ಈ ಜಿಲ್ಲೆಯ ಜನ ಋಣ ಹೊರಿಸಿದ್ದಾರೆ. ನನಗೆ ಗೌರವ ಕೊಟ್ಟಿರುವ ಲಕ್ಷಾಂತರ ಜನ ಇಲ್ಲಿದ್ದಾರೆ. ಜೀವ ಮಣ್ಣಿಗೋಗೊವರೆಗೂ ಮಂಡ್ಯ ಜಿಲ್ಲೆಗೆ ಬರ್ತೀನಿ. ಮಾತನಾಡುವಾಗ ಎಚ್ಚರಿಕೆ ಇರಲಿ. ಏನ್ ಇವರ ಋಣ ತಿಂದಿದ್ದವಾ, ಹಲ್ಲು ಹಿಡಿದು ಮಾತನಾಡಲಿ. ಸೋತು ಮನೆಯಲ್ಲಿ ಮಲಗಿದ್ದಾಗ ಎಂಪಿ ಮಾಡಿದೆ. ಸ್ವಂತ ದುಡಿಮೆಯಲ್ಲಿ ಪಾರ್ಲಿಮೆಂಟ್ ಗೆ ಹೋಗಿದ್ರಾ ಇವರು ಎಂದು ಚಲುವರಾಯಸ್ವಾಮಿ ವಿರುದ್ಧ ಏಕವಚನದಲ್ಲಿಯೇ ಹೆಚ್‍ಡಿಕೆ ವಾಗ್ದಾಳಿ ನಡೆಸಿದರು.

    ಇದೇ ವೇಳೆ ದಲಿತರಿಗೆ ಸಿಎಂ ಹುದ್ದೆ ತಪ್ಪಿಸಿದ್ದು ಸಿದ್ದರಾಮಯ್ಯ ಎಂದು ವಾಗ್ದಾಳಿ ನಡೆಸಿದ ಹೆಚ್‍ಡಿಕೆ, ದಲಿತರನ್ನು ಸಿಎಂ ಮಾಡಬೇಕು ಎಂದು ಈವರೆಗೆ ಕಾಂಗ್ರೆಸ್ ನವರಿಗೆ ಗೊತ್ತಿರಲಿಲ್ವ…? ಸ್ವಾತಂತ್ರ್ಯ ಬಂದ ಬಳಿಕ 60 ವರ್ಷ ರಾಜ್ಯ ಆಳಿದಾಗ ಗೊತ್ತಾಗಲಿಲ್ವ. ಈಗ ದಲಿತರ ಹೆಸರು ಬರ್ತಿದೆಯಾ? ದಲಿತರು ಸಿಎಂ ಆಗೋದನ್ನು ನಾನು ತಪ್ಪಿಸಲಿಲ್ಲ. ದಲಿತರನ್ನು ಸಿಎಂ ಆಗುವುದನ್ನು ತಪ್ಪಿಸಿದ್ದೇ ಈಗ ಮತ್ತೆ ಸಿಎಂ ಆಗಬೇಕು ಎಂದು ಹೇಳಿಕೊಳ್ಳುತ್ತಿದ್ದಾರಲ್ಲ ಅವರು. ಯಾರೂ ಮಾಡದೇ ಇರುವ ಸಾಧನೆ ಮಾಡಿ, ನಾನಿದ್ದರೇ ಕಾಂಗ್ರೆಸ್ ಅಂತ ಹೇಳ್ತಾರಲ್ಲ. 130 ಸೀಟಿನಲ್ಲಿ ಮುಖ್ಯಮಂತ್ರಿಯಾಗಿ 78ಕ್ಕೆ ಬಂದರಲ್ಲ ಅವರು ದಲಿತ ಸಿಎಂ ಆಗೋದನ್ನು ತಪ್ಪಿಸಿದ್ದು ಹೇಳಿಕೆ. ದಲಿತರು ಸಿಎಂ ಆಗೋದನ್ನು ತಪ್ಪಿಸಿದ್ದೇ ಸಿದ್ದರಾಮಯ್ಯ ಎಂದು ಹೆಸರೇಳದೇ ಹೆಚ್‍ಡಿಕೆ ವಾಗ್ದಾಳಿ ನಡೆಸಿದರು.

  • ನನ್ನ ಮಗನಂತೆ ನಿಖಿಲ್ ಎಂದಿದ್ದ ಚಲುವರಾಯಸ್ವಾಮಿ ಇಂದು ಮಾತಾಡಲೇ ಇಲ್ಲ

    ನನ್ನ ಮಗನಂತೆ ನಿಖಿಲ್ ಎಂದಿದ್ದ ಚಲುವರಾಯಸ್ವಾಮಿ ಇಂದು ಮಾತಾಡಲೇ ಇಲ್ಲ

    ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನನ್ನ ಮಗನಿದ್ದಂತೆ ಎಂದು ಹೇಳಿದ್ದ ಮಾಜಿ ಸಚಿವ ಚಲುವರಾಯಸ್ವಾಮಿ ಇಂದು ಎದುರು ಬದುರಾದರೂ ಒಬ್ಬರಿಗೊಬ್ಬರು ಮಾತನಾಡಿಸಲೇ ಇಲ್ಲ.

    ಲೋಕಸಭಾ ಚುನಾವಣೆ ವೇಳೆ ಬದ್ಧವೈರಿಗಳಾಗಿ ಬದಲಾಗಿರುವ ನಿಖಿಲ್ ಮತ್ತು ಚಲುವರಾಯಸ್ವಾಮಿ ಇಂದು ಕೆ.ಆರ್ ಪೇಟೆ ಮಿನಿ ವಿಧಾನಸೌಧದಲ್ಲಿ ಮುಖಾಮುಖಿ ಆದರು. ಕಾರಿಡಾರ್ ನಲ್ಲಿ ಇಬ್ಬರೂ ಇದ್ದರು. ಚಲುವರಾಯಸ್ವಾಮಿ ನಡೆದುಕೊಂಡು ಬರುತ್ತಿದ್ದರೆ, ನಿಖಿಲ್ ಆ ಕಡೆ ಮುಖ ತಿರುಗಿಸಿದರು. ಚಲುವರಾಯಸ್ವಾಮಿಯೂ ಮಾತಾಡಿಸಲು ಹೋಗಲಿಲ್ಲ. ಈ ಮೂಲಕ ವೈರತ್ವ ಕಡಿಮೆ ಆಗಿಲ್ಲ ಅನ್ನೋದನ್ನ ಸಾಬೀತುಪಡಿಸಿದ್ರು.

    ನಿಖಿಲ್ ಮಗನಿದ್ದಂತೆ:
    ಜೆಡಿಎಸ್ ಅನರ್ಹ ಶಾಸಕ ನಾರಾಯಣ ಗೌಡರ ಬಳಿಕ ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೆ.ಆರ್ ಪೇಟೆ ಉಪಚುನಾವಣೆ ಹೊಸ್ತಿಲಲ್ಲಿ ಮತ್ತೆ ನಿಖಿಲ್ ಕುಮಾರಸ್ವಾಮಿ ಅವರ ಸೋಲಿನ ಪರಾಮರ್ಶೆ ಮಾಡಿದ್ದರು.

    ನಿಖಿಲ್ ಒಳ್ಳೆಯ ಹುಡುಗ. ರಾಜಕಾರಣ ಮಾಡುವುದಕ್ಕೆ ಇನ್ನೂ ಸಮಯ ಇತ್ತು. ದೊಡ್ಡದಾಗಿ ಮೀಸೆ ತಿರುಗಿಸಿ ಕರೆತಂದು ಸೋಲಿಸಿದರು. ನಿಖಿಲ್ ಎಲ್ಲೋ ಒಂದು ಕಡೆ ರಾಜಕಾರಣ ಮಾಡುಕೊಳ್ಳುತ್ತಿದ್ದರು. ಅವರನ್ನು ಕರೆತಂದು ಸೋಲಿಸಿದರು. ಸಿ.ಎಸ್ ಪುಟ್ಟರಾಜು ಅವರೇ ಚುನಾವಣೆಯ ಜವಾಬ್ದಾರಿ ತೆಗೆದುಕೊಂಡಿದ್ದರು ಎಂದು ಹೇಳುವ ಮೂಲಕ ಪರೋಕ್ಷವಾಗಿ ನಿಖಿಲ್ ಸೋಲಿಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಕಾರಣ ಎಂದು ಆರೋಪಿಸಿದ್ದರು.

    ನನಗೂ ಕುಮಾರಸ್ವಾಮಿಗೂ ವೈರತ್ವ ಇದೆ. ಹಾಗಂತ ನಿಖಿಲ್ ಜೊತೆಗೂ ವೈರತ್ವ ಕಟ್ಟಿಕೊಳ್ಳೋದಕ್ಕೆ ಆಗುತ್ತಾ. ಅವನೂ ನನ್ನ ಮಗ ಇದ್ದಂಗೆ. ಸಿ.ಎಸ್ ಪುಟ್ಟರಾಜು ಮಂಡ್ಯ ಜಿಲ್ಲೆಯ ಪ್ರಶ್ನಾತೀತ ನಾಯಕರಾಗಿದ್ದಾರೆ. ರಾಜ್ಯಕ್ಕೆ ದೇವೇಗೌಡರು ಇದ್ದಂತೆ ಮಂಡ್ಯಕ್ಕೆ ಸಿ.ಎಸ್.ಪುಟ್ಟರಾಜು ಇದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬುದ್ಧಿ ಕಲಿಸಿಲ್ವಾ? ಹಾಗೆ ನಾರಾಯಣಗೌಡರಿಗೂ ಜನ ಬುದ್ಧಿ ಕಲಿಸುತ್ತಾರೆ ಎಂದು ಹೇಳಿದ್ದರು.