Tag: ಚಾಕಲೇಟ್

  • ಚಾಕೊಲೇಟ್‌ಗಾಗಿ ಹಣ ಕೇಳಿದ್ದಕ್ಕೆ 4 ವರ್ಷದ ಮಗಳನ್ನೇ ಕತ್ತು ಹಿಸುಕಿ ಕೊಂದ ತಂದೆ

    ಚಾಕೊಲೇಟ್‌ಗಾಗಿ ಹಣ ಕೇಳಿದ್ದಕ್ಕೆ 4 ವರ್ಷದ ಮಗಳನ್ನೇ ಕತ್ತು ಹಿಸುಕಿ ಕೊಂದ ತಂದೆ

    ಮುಂಬೈ: ಚಾಕೊಲೇಟ್‌ಗಾಗಿ ಹಣ ಕೇಳಿದ್ದಕ್ಕೆ ಕುಡಿದ ಮತ್ತಿನಲ್ಲಿ 4 ವರ್ಷದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ (Maharashtra) ಲಾತೂರ್ (Latur) ಜಿಲ್ಲೆಯ ಉದ್ವೀರ್ ತಾಲೂಕಿನ ಭೀಮಾ ತಾಂಡದಲ್ಲಿ ನಡೆದಿದೆ.

    ಆರೋಪಿಯನ್ನು ಬಾಲಾಜಿ ರಾಥೋಡ್ ಹಾಗೂ ಮೃತ ಬಾಲಕಿಯನ್ನು ಆರುಷಿ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿ ದಾಖಲೆ ಬರೆದ ಸಿದ್ದರಾಮಯ್ಯ

    ಪ್ರಾಥಮಿಕ ಮಾಹಿತಿ ಪ್ರಕಾರ, ಆರೋಪಿ ಬಾಲಾಜಿಗೆ ಕುಡಿತದ ಚಟವಿತ್ತು. ಹೀಗಾಗಿ ಪ್ರತಿದಿನ ಕುಡಿದು ಬಂದು ಹೆಂಡತಿಯೊಂದಿಗೆ ಜಗಳವಾಡುತ್ತಿದ್ದ. ಈತನ ಜಗಳದಿಂದ ಬೇಸತ್ತು ಮನೆ ಬಿಟ್ಟು ಹೋದ ಪತ್ನಿ, ತನ್ನ ತಂದೆಯೊಂದಿಗೆ ಇದ್ದಳು. ಕೊಲೆಯಾದ ದಿನ ಮಧ್ಯಾಹ್ನ ಮೃತ ಆರುಷಿ, ಚಾಕೊಲೇಟ್ ತೆಗೆದುಕೊಳ್ಳಲು ಹಣ ಕೇಳಿದ್ದಳು. ಅದೇ ಕೋಪದಿಂದ ಸೀರೆಯಿಂದ ಬಳಸಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

    ಈ ಕುರಿತು ಆರೋಪಿಯ ಪತ್ನಿ ವರ್ಷಾ ದೂರು ದಾಖಲಿಸಿದ್ದು, ಮರಣದಂಡನೆ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದ್ದಾರೆ. ಸದ್ಯ ದೂರಿನ ಮೇರೆಗೆ ಎಫ್‌ಐಆರ್ (FIR) ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.ಇದನ್ನೂ ಓದಿ: 60 ವರ್ಷದಿಂದ ಉಳುಮೆ ಮಾಡ್ತಿದ್ದ ರೈತನಿಗೆ ಶಾಕ್ – ತಹಶೀಲ್ದಾರ್ ಸಹಿ ನಕಲಿಸಿ, 8 ಎಕರೆ ಬೇರೆಯವ್ರ ಹೆಸರಿಗೆ ವರ್ಗ

  • ಚಾಕಲೇಟ್ ಆಮಿಷವೊಡ್ಡಿ 4ರ ಬಾಲಕಿ ಮೇಲೆ ಅತ್ಯಾಚಾರ

    ಚಾಕಲೇಟ್ ಆಮಿಷವೊಡ್ಡಿ 4ರ ಬಾಲಕಿ ಮೇಲೆ ಅತ್ಯಾಚಾರ

    ಲಕ್ನೋ: ಚಾಕಲೇಟ್ (Chocolate) ಕೊಡಿಸುವುದಾಗಿ ಆಮಿಷವೊಡ್ಡಿ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ (Rape) ಘಟನೆ ಉತ್ತರಪ್ರದೇಶದ (Uttar Pradesh) ಬರೇಲಿ ಜಿಲ್ಲೆಯಲ್ಲಿ ನಡೆದಿದೆ.

    ಉತ್ತರಪ್ರದೇಶದ ಬರೇಲಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿಯು ತನ್ನ ಸ್ನೇಹಿತರೊಂದಿಗೆ ಹೊರಗಡೆ ಆಡುತ್ತಿದ್ದಳು. ಈ ವೇಳೆ ಚಾಕಲೇಟ್ ಕೊಡುವ ನೆಪದಲ್ಲಿ 25 ವರ್ಷದ ಯುವಕ ಬಾಲಕಿಯನ್ನು ಕರೆದಿದ್ದಾನೆ. ಅದಾದ ಬಳಿಕ ಬಾಲಕಿಯನ್ನು ಆತ ಯಾರೂ ಇಲ್ಲದ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.

    ಘಟನೆ ವೇಳೆ ಅತ್ಯಾಚಾರ ಸಂತ್ರಸ್ತೆಯ ತಂದೆ ಗುತ್ತಿಗೆ ಕಾರ್ಮಿಕನಾಗಿದ್ದರಿಂದ ಕೆಲಸಕ್ಕೆ ಹೋಗಿದ್ದ ಹಾಗೂ ಆಕೆಯ ತಾಯಿ ಯಾವುದೋ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ಅದಾದ ಬಳಿಕ ತಾಯಿಯು ಮನೆಗೆ ಮರಳಿದಾಗ ಬಾಲಕಿ ನಾಪತ್ತೆ ಆಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಗಳನ್ನು ಮಹಿಳೆಯು ಹುಡುಕಲು ಪ್ರಾರಂಭಿಸಿದ್ದಾಳೆ. ಇದನ್ನೂ ಓದಿ: ರಾಜ್ಯ ರಾಜಕಾರಣಕ್ಕೆ ರಮ್ಯಾ ವಾಪಸ್‌ – ಬೆಂಗಳೂರಿನಿಂದ ಕಣಕ್ಕೆ?

    ಈ ವೇಳೆ ಮಹಿಳೆ ದೂರದಲ್ಲಿ ಮಗಳು ಅಳುತ್ತಿರುವುದನ್ನು ಕೇಳಿದ್ದಾಳೆ. ಈ ವೇಳೆ ಬಾಲಕಿಯು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಜೊತೆಗೆ ಕೃತ್ಯವೆಸಗಿದ ಬಳಿಕ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಬಾಲಕಿಯ ತಾಯಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ದರ್ಗಾ ಹೋಲುವ ಕಟ್ಟಡ – ತೆರವಿಗೆ ಸಂಸದ ಪತ್ರ

  • ಮಾಲ್‌ನಲ್ಲಿ ಚಾಕಲೇಟ್ ಕದ್ದ ವೀಡಿಯೋ ವೈರಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

    ಮಾಲ್‌ನಲ್ಲಿ ಚಾಕಲೇಟ್ ಕದ್ದ ವೀಡಿಯೋ ವೈರಲ್ ಆಗಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ

    ಕೋಲ್ಕತ್ತಾ: ಕಾಲೇಜು ಯುವತಿಯೊಬ್ಬಳು (Teen) ಮಾಲ್‌ವೊಂದರಲ್ಲಿ (Mall) ಚಾಕಲೇಟ್ (Chocolate) ಕದ್ದಿರುವ ವೀಡಿಯೋ ವೈರಲ್ ಆಗಿರುವುದಕ್ಕೆ ಮನನೊಂದು ಆತ್ಮಹತ್ಯೆಗೆ (Suicide) ಶರಣಾಗಿರುವ ದಾರುಣ ಘಟನೆ ಪಶ್ಚಿಮ ಬಂಗಾಳದ (West Bengal) ಅಲಿಪುರ್‌ದವಾರ್ ಜಿಲ್ಲೆಯಲ್ಲಿ ನಡೆದಿದೆ.

    ವರದಿಗಳ ಪ್ರಕಾರ ಯುವತಿ ಜೈಗಾಂವ್‌ನ ಶಾಪಿಂಗ್ ಮಾಲ್‌ನಲ್ಲಿ ಚಾಕಲೇಟ್ ಕದ್ದಿದ್ದಾಳೆ. ಯುವತಿಯ ಗಮನಕ್ಕೆ ಬಾರದಂತೆ ಅದರ ವೀಡಿಯೋವನ್ನು ಅಲ್ಲಿ ಕೆಲಸ ಮಾಡುವವರು ಚಿತ್ರೀಕರಿಸಿದ್ದಾರೆ. ಯುವತಿ ಚಾಕಲೇಟ್ ಕದ್ದ ಬಳಿಕ ಅಂಗಡಿ ಮಾಲೀಕರ ಕೈಯಲ್ಲಿ ಆಕೆ ಸಿಕ್ಕಿ ಬಿದ್ದಿದ್ದಾಳೆ. ಈ ವೇಳೆ ಆಕೆ ಕ್ಷಮೆಯನ್ನೂ ಕೇಳಿದ್ದಾಳೆ.

    ಬಳಿಕ ಆಕೆ ಚಾಕಲೇಟ್ ಕದ್ದಿರುವ ವೀಡಿಯೋವನ್ನು ಚಿತ್ರೀಕರಿಸಿರುವ ವಿಚಾರ ತಿಳಿದು, ಅದನ್ನು ಎಲ್ಲಿಯೂ ಹಂಚಿಕೊಳ್ಳದAತೆ ಮನವಿ ಮಾಡಿಕೊಂಡಿದ್ದಾಳೆ. ಆದರೆ ಬಳಿಕ ವೀಡಿಯೋ ಸ್ಥಳೀಯವಾಗಿ ವೈರಲ್ ಆಗಿದೆ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಬ್ರೇಕಪ್ ಮಾಡಿದಳೆಂದು ಗರ್ಲ್‍ಫ್ರೆಂಡ್ ಕೊಲೆಗೈದ ವಿವಾಹಿತ!

    ಈ ಬಗ್ಗೆ ಕಂಬನಿ ಹಾಕಿರುವ ಯುವತಿಯ ಕುಟುಂಬ, ಆಕೆ ತಪ್ಪು ಮಾಡಿದ್ದಾಳೆ ನಿಜ. ಆದರೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಬಳಿಕ ಅವಳು ಚಾಕಲೇಟ್‌ಗೆ ಪಾವತಿಯನ್ನೂ ಮಾಡಿದ್ದಾಳೆ. ಇದಾದ ಬಳಿಕವೂ ಆಕೆಯನ್ನು ನಿಂದಿಸಿದ್ದಾರೆ. ಇಷ್ಟು ಮಾತ್ರವಲ್ಲದೇ ಆಕೆಯ ವೀಡಿಯೋವನ್ನು ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಘಟನೆಯ ಬಳಿಕ ಆಕೆ ತುಂಬಾ ಒತ್ತಡದಲ್ಲಿದ್ದಳು. ಇದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆ ವೀಡಿಯೋವನ್ನು ಏಕೆ ವೈರಲ್ ಮಾಡಬೇಕಿತ್ತು? ಆತ್ಮಹತ್ಯೆ ಮಾಡಿಕೊಂಡಿರುವ ಮಗಳನ್ನು ಮತ್ತೆ ಬದುಕಿಸಲು ಸಾಧ್ಯವೆ? ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ಘಟನೆಯ ಬಳಿಕ ಕ್ರೋಧಗೊಂಡ ಜನರು ಸೋಮವಾರ ಶಾಪಿಂಗ್ ಮಾಲ್ ಮುಂದೆ ಜಮಾಯಿಸಿ, ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ. ಆದರೆ ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಘಟನೆಯ ಬಗ್ಗೆ ಶಾಪಿಂಗ್ ಮಾಲ್‌ನ ಅಧಿಕಾರಿಗಳೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಕಣ್ಣಾಮುಚ್ಚಾಲೆ ಆಡುವಾಗ ತಲೆಗೆ ಲಿಫ್ಟ್ ಬಡಿದು ಬಾಲಕಿ ಸಾವು

    Live Tv
    [brid partner=56869869 player=32851 video=960834 autoplay=true]

  • ಮಂತ್ರಿಗಾಗಿ ಕಾದು ಕುಳಿತ ರಮೇಶ್ ಜಾರಕಿಹೊಳಿಗೆ ಬಿಜೆಪಿಯವರು ಚಾಕಲೇಟ್ ತಿನ್ನಿಸುತ್ತಿದ್ದಾರೆ: ಸತೀಶ್ ಜಾರಕಿಹೊಳಿ ವ್ಯಂಗ್ಯ

    ಮಂತ್ರಿಗಾಗಿ ಕಾದು ಕುಳಿತ ರಮೇಶ್ ಜಾರಕಿಹೊಳಿಗೆ ಬಿಜೆಪಿಯವರು ಚಾಕಲೇಟ್ ತಿನ್ನಿಸುತ್ತಿದ್ದಾರೆ: ಸತೀಶ್ ಜಾರಕಿಹೊಳಿ ವ್ಯಂಗ್ಯ

    ಬೆಳಗಾವಿ: ಮಂತ್ರಿಗಾಗಿ ಕಾದು ಕುಳಿತ ರಮೇಶ್ ಜಾರಕಿಹೊಳಿ (Ramesh Jarakiholi) ಕಲ್ಲು ಹೊಡೆಯಬಾರದು ಅಂತಾ ಚಾಕಲೇಟ್ ತಿನ್ನಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಹೋದರ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarakiholi) ವ್ಯಂಗ್ಯವಾಡಿದ್ದಾರೆ.

    ಮುಂದಿನ ಚುನಾವಣೆಯಲ್ಲಿ ಬೆಳಗಾವಿ (Belgavi) ಜಿಲ್ಲೆಗೆ ರಮೇಶ್ ಜಾರಕಿಹೊಳಿ ನೇತೃತ್ವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಪಕ್ಷ ಕಟ್ಟಿದ ಯಡಿಯೂರಪ್ಪ ಅವರನ್ನೇ ಸೈಡ್ ಲೈನ್ ಮಾಡಿದ್ದಾರೆ. ಯಡಿಯೂರಪ್ಪನವರಿಗೆ (Yediyurappa) ನೇತೃತ್ವ ಕೊಡುತ್ತಿಲ್ಲ. ಇನ್ನೂ ರಮೇಶ್ ಜಾರಕಿಹೊಳಿ ಯಾವ ಲೆಕ್ಕ? ಬಿಜೆಪಿ (BJP) ನಾಯಕರು ರಮೇಶ್ ಜಾರಕಿಹೊಳಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ಮಂತ್ರಿಗಾಗಿ ಕಾದು ಕುಳಿತ ರಮೇಶ್ ಕಲ್ಲು ಎಸೆಯಬಾರದು ಅಂತಾ ಚಾಕಲೇಟ್ ತಿನ್ನಿಸುವ ಕೆಲಸ ಮಾಡುತ್ತಿದ್ದಾರೆ. ರಮೇಶ್ ಜಾಕಿಹೊಳಿ ಸಿಟ್ಟಾದರೆ ಏನಾದರೂ ಮಾಡಬಹುದು ಎಂಬ ಭಯ ಬಿಜೆಪಿ ನಾಯಕರಿಗೆ ಇದೆ. ಹಿಂದಿನ ಸರ್ಕಾರ ಕೆಡವಿದ ರಮೇಶ್ ಜಾರಕಿಹೊಳಿಗೆ ಈ ಸರ್ಕಾರ ಕೆಡುವುದು ದೊಡ್ಡ ಮಾತಲ್ಲ. ಒಂದು ಬಾರಿ ಬೈಪಾಸ್ ಸರ್ಜರಿ ಮಾಡಿದವನಿಗೆ ಎರಡನೇ ಬೈಪಾಸ್ ಸರ್ಜರಿ ಮಾಡುವುದು ದೊಡ್ಡ ಕೆಲಸವಲ್ಲ. ಹಾಗಾಗಿ ರಮೇಶ್ ಜಾರಕಿಹೊಳಿಗೆ ತಿಂಗಳಿಗೊಮ್ಮೆ ಚಾಕಲೇಟ್ ನೀಡುವ ಕೆಲಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ರಿಲಯನ್ಸ್ ಆಸ್ಪತ್ರೆಯನ್ನು ಸ್ಫೋಟಿಸುತ್ತೇನೆ- ಮುಖೇಶ್ ಅಂಬಾನಿ, ಕುಟುಂಬಸ್ಥರಿಗೆ ಜೀವ ಬೆದರಿಕೆ

    ಸಿಎಂ (BasavarajBommai) ಈಗಾಗಲೇ ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಮೂರು ಬಾರಿ ಮಾತನಾಡಿದ್ದಾರೆ. ಈಗ ಮತ್ತೆ ಈ ಕುರಿತಂತೆ ಬಿಜೆಪಿ ಹೈಕಮಾಂಡ್ ಭೇಟಿಗೆ ದೆಹಲಿಗೆ ಹೊರಟಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್ ಗುಜರಾತ್ ಚುನಾವಣೆಯಲ್ಲಿ (Gujrat Election) ಬ್ಯೂಸಿ ಆಗಿದ್ದಾರೆ. ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ಚುನಾವಣಾ ನಡೆಸುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರನ್ನು ನಮ್ಮ ನಾಯಕ ಅಂತಾ ಒಪ್ಪಿಕೊಂಡಿಲ್ಲ. ಇನ್ನೂ ರಮೇಶ್ ಜಾರಕಿಹೊಳಿ ಯಾವ ಲೆಕ್ಕ? ರಮೇಶ್ ಜಾರಕಿಹೊಳಿಗೆ ಆಗಾಗ ಏನಿದ್ದರೂ ಸಮಾಧಾನಕರ ಬಹುಮಾನ ಕೊಡುತ್ತಾರೆ. ಹೀಗಾಗಿ ರಮೇಶ್‍ಗೆ ಬಂದಾಗೊಮ್ಮೆ ಚಾಕಲೇಟ್ ಕೊಟ್ಟು ಹೋಗುತ್ತಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್ಸಿಗರ ಭಾರತ ಬಿಟ್ಟು ಓಡೋ ಯಾತ್ರೆ: ನಳೀನ್ ಕುಮಾರ್ ಕಟೀಲ್

    Live Tv
    [brid partner=56869869 player=32851 video=960834 autoplay=true]

  • ಶ್ರೀಲಂಕಾದಲ್ಲಿ ಚಾಕಲೇಟ್, ಪರ್ಫ್ಯೂಮ್, ಶ್ಯಾಂಪೂ ಸೇರಿ 300 ಆಮದು ಸರಕು ನಿಷೇಧ

    ಶ್ರೀಲಂಕಾದಲ್ಲಿ ಚಾಕಲೇಟ್, ಪರ್ಫ್ಯೂಮ್, ಶ್ಯಾಂಪೂ ಸೇರಿ 300 ಆಮದು ಸರಕು ನಿಷೇಧ

    ಕೊಲೊಂಬೋ: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾ ಇದೀಗ ನಗದು ಕೊರತೆಯನ್ನು ನಿಭಾಯಿಸಲು ಅಲ್ಲಿನ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಬರೊಬ್ಬರಿ 300 ಗ್ರಾಹಕ ವಸ್ತುಗಳ ಆಮದಿನ ಮೇಲೆ ನಿಷೇಧವನ್ನು ಹೇರಿದೆ.

    ಚಾಕಲೇಟ್, ಪರ್ಫ್ಯೂಮ್, ಹಾಗೂ ಶ್ಯಾಂಪೂ, ಮೆಕಪ್ ವಸ್ತು ಸೇರಿದಂತೆ 300 ಗ್ರಾಹಕ ವಸ್ತುಗಳ ಆಮದಿನ ಮೇಲೆ ನಿಷೇಧವನ್ನು ಹೇರಿದೆ ಎಂದು ಶ್ರೀಲಂಕಾ ಹಣಕಾಸು ಸಚಿವಾಲಯವು ಹೊರಡಿಸಿರುವ ವಿಶೇಷ ಅಧಿಸೂಚನೆಯಲ್ಲಿ ತಿಳಿಸಿದೆ. ಆ. 22ರ ಆಮದು ಮತ್ತು ರಫ್ತು ನಿಯಂತ್ರಣ ನಿಯಮಗಳ ಅಡಿಯಲ್ಲಿ ಗ್ರಾಹಕ ವಸ್ತುಗಳ ಮೇಲಿನ ಆಮದು ನಿಷೇಧವು ತಕ್ಷಣವೇ ಜಾರಿಗೆ ಬರಲಿದೆ. ಆದರೆ ಈ ಎಲ್ಲಾ ವಸ್ತುಗಳನ್ನು ಆ. 23ರ ಮೊದಲು ರಫ್ತು ಮಾಡಿ ಆ ವಸ್ತುವು ಸೆ. 14ರ ಮೊದಲು ದೇಶಕ್ಕೆ ಬಂದರೆ ಅವುಗಳನ್ನು ಮಾತ್ರ ಅನುಮತಿಸಲಾಗುವುದು ಎಂದು ಹೇಳಿದೆ. ಇದನ್ನೂ ಓದಿ: 10 ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಮೀಸಲಾತಿ ಪ್ರಕಟ – ನಿಮ್ಮ ನಗರಕ್ಕೆ ಯಾರು?

    ಶ್ರೀಲಂಕಾದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಅಲ್ಲಿನ ಜನರು ಅನೇಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಷ್ಟೇ ಅಲ್ಲದೇ ವಿದೇಶಿ ವಿನಿಮಯ ಬಿಕ್ಕಟ್ಟು ತೀವ್ರವಾಗಿದ್ದು, ಅಗತ್ಯ ವಸ್ತುಗಳ ಕೊರೆತೆಯನ್ನು ಉಂಟು ಮಾಡಿದೆ. ಈ ವರ್ಷ ಆರಂಭದಿಂದ ಶ್ರೀಲಂಕಾದ ಬೀದಿ ಬೀದಿಯಲ್ಲಿ ಬೃಹತ್ ಸಾರ್ವಜನಿಕ ಪ್ರತಿಭಟನೆಗಳು ನಡೆದಿದ್ದವು. ಅಷ್ಟೇ ಅಲ್ಲದೇ ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆ ದೇಶ ಬಿಟ್ಟು ಪಲಾಯನ ಮಾಡಿದ್ದರು. ಇದನ್ನೂ ಓದಿ: ದೇಶದ ಅತಿ ದೊಡ್ಡ ಆಸ್ಪತ್ರೆ ಉದ್ಘಾಟಿಸಿದ ಮೋದಿ

    Live Tv
    [brid partner=56869869 player=32851 video=960834 autoplay=true]

  • ಚಾಕಲೇಟ್ ಮೂಲಕ ‘ಶುಭ’ ಆರಂಭಿಸಿದ ಜಾತ್ರೆ ಟೀಂ!

    ಚಾಕಲೇಟ್ ಮೂಲಕ ‘ಶುಭ’ ಆರಂಭಿಸಿದ ಜಾತ್ರೆ ಟೀಂ!

    ನಿನ್ನೆ ಬಿಗ್‍ಬಾಸ್, ಮನೆಯ ಸದಸ್ಯರನ್ನು ಎರಡು ತಂಡಗಳಾಗಿ ವಿಭಜಿಸಿ ಇಬ್ಬರನ್ನು ನಾಯಕರಾಗಿ ಸುಚಿಸುವಂತೆ ಕ್ಯಾಪ್ಟನ್ ವಿಶ್ವನಾಥ್‍ಗೆ ಸೂಚಿಸಿದರು. ಅದರಂತೆ ವಿಶ್ವನಾಥ್ ದಿವ್ಯಾ ಉರುಡುಗ ಹಾಗೂ ಶುಭರನ್ನು ನಾಯಕರಾಗಿ ಆಯ್ಕೆ ಮಾಡಿದರು.

    ನಂತರ ದಿವ್ಯಾ ಉರುಡುಗ ತನ್ನ ತಂಡಕ್ಕೆ ಅರವಿಂದ್, ರಾಜೀವ್, ದಿವ್ಯಾ ಸುರೇಶ್, ಶಮಂತ್, ಶಂಕರ್‍ರನ್ನು ಆಯ್ಕೆ ಮಾಡಿಕೊಂಡು ತಂಡಕ್ಕೆ ‘ಅನುಬಂಧ’ ಎಂದು ಹೆಸರಿಟ್ಟರೆ, ಶುಭ ಪೂಂಜಾ, ಮಂಜು, ನಿಧಿ, ಪ್ರಶಾಂತ್, ವೈಷ್ಣವಿ, ರಘುರನ್ನು ಸೇರಿಸಿಕೊಂಡು ತಂಡಕ್ಕೆ ‘ಜಾತ್ರೆ’ ಎಂದು ಹೆಸರಿಡುತ್ತಾರೆ.

    ಬಳಿಕ ಎರಡು ತಂಡಕ್ಕೆ ಬಿಗ್‍ಬಾಸ್, ಗುಂಪು ಚಟುವಟಿಕೆಯನ್ನು ನೀಡುತ್ತಾರೆ. ಗಾರ್ಡನ್ ಏರಿಯದಲ್ಲಿ ಬಲೂನ್‍ಗಳನ್ನು ಇರಿಸಲಾಗಿದ್ದು, ಸದಸ್ಯರು ಬಲೂನ್‍ಗಳ ಮೇಲೆ ಕುಳಿತು ಹೊಡೆದು ಹಾಕಬೇಕು. ಆಗ ಬಲೂನ್‍ನಲ್ಲಿದ್ದ ಬೆಳ್ಳಿ ಹಾಗೂ ಚಿನ್ನದ ಚೀಟಿಗಳನ್ನು ಯಾವ ತಂಡ ಹೆಚ್ಚಾಗಿ ಸಂಗ್ರಹಿಸಿರುತ್ತಾರೋ ಅವರು ವಿಜೇತರಾಗಿರುತ್ತಾರೆ ಹಾಗೂ ಗೆದ್ದ ತಂಡಕ್ಕೆ ಬಹುಮಾನವಾಗಿ ಚಾಕಲೇಟ್ ನೀಡುವುದಾಗಿ ತಿಳಿಸಿರುತ್ತಾರೆ.

    ಅದರಂತೆ ಚಾಕಲೇಟ್ ತಿನ್ನುವ ಆಸೆಯಿಂದ ರೊಚ್ಚಿಗೆದ್ದ ಮನೆಮಂದಿ, ಒಂದು ಬಲೂನ್‍ನನ್ನು ಬಿಡದಂತೆ ಕುಳಿತು ಹೊಡೆದು ಹಾಕಿ ಚಿನ್ನದ ಹಾಗೂ ಬೆಳ್ಳಿಯ ಚೀಟಿಗಳನ್ನು ಸಂಗ್ರಹಿಸುತ್ತಾರೆ. ಈ ಟಾಸ್ಕ್‍ನಲ್ಲಿ ಶುಭ ಪೂಂಜಾರ ಜಾತ್ರೆ ಗ್ಯಾಂಗ್ 29 ಬಂಗಾರದ ಚೀಟಿಗಳನ್ನು ಸಂಗ್ರಹಿಸುವ ಮೂಲಕ ವಿಜೇತರಾಗುತ್ತಾರೆ. ಬಳಿಕ ಬಿಗ್‍ಬಾಸ್ ಜಾತ್ರೆ ತಂಡಕ್ಕೆ ಚಾಕಲೇಟ್ ಕಳುಹಿಸಿಕೊಡುತ್ತಾರೆ.

    ನಂತರ ಜಾತ್ರೆ ತಂಡದವರು ಎದುರಾಳಿ ತಂಡದವರಿಗೆ ಅಣುಕಿಸುತ್ತಾ ಚಾಕಲೇಟ್‍ನನ್ನು ಸವಿದು ಆನಂದಿಸುತ್ತಾರೆ. ಒಟ್ಟಾರೆ ಈ ವಾರದ ಟಾಸ್ಕ್ ಆರಂಭವಾಗುತ್ತಿದ್ದಂತೆಯೇ ಜಾತ್ರೆ ತಂಡ ಸಿಹಿ ತಿನ್ನುವ ಮೂಲಕ ನ್ಯೂ ಗೇಮ್ ಸ್ಟಾರ್ಟ್ ಮಾಡಿದ್ದಾರೆ. ಆದರೆ ಮುಂದೆ ಹೇಗೆ ಆಟ ಆಡುತ್ತಾರೆ ಎಂದು ಕಾದು ನೋಡಬೇಕಾಗಿದೆ.

  • ಗಂಟಲಲ್ಲಿ ಚಾಕಲೇಟ್ ಸಿಲುಕಿ ಬಾಲಕ ದುರ್ಮರಣ

    ಗಂಟಲಲ್ಲಿ ಚಾಕಲೇಟ್ ಸಿಲುಕಿ ಬಾಲಕ ದುರ್ಮರಣ

    ಮಂಗಳೂರು: ಗಂಟಲಲ್ಲಿ ಚಾಕಲೇಟ್ ಸಿಲುಕಿ ಮಗುವೊಂದು ಸಾವನ್ನಪ್ಪಿದ ಘಟನೆ ಮಂಗಳೂರಿನ ಸೋಮೇಶ್ವರದಲ್ಲಿ ನಡೆದಿದೆ.

    ಉಳ್ಳಾಲ ಸಮೀಪದ ಸೋಮೇಶ್ವರ ಗ್ರಾಮದ ಉಚ್ಚಿಲ ಗುಡ್ಡ ನಿವಾಸಿ ರಹೀಂ ಎಂಬವರ 8 ವರ್ಷದ ಮಗು ಪೈಝಾನ್ ಮೃತ ಬಾಲಕ. ಚಾಕಲೇಟ್ ತಿನ್ನುವಾಗ ಗಂಟಲಲ್ಲಿ ಸಿಲುಕಿಕೊಂಡಿದ್ದರಿಂದ ಉಸಿರು ತೆಗೆದುಕೊಳ್ಳಲು ಕಷ್ಟವಾಗಿದೆ.

    ಪೋಷಕರು ಬಾಲಕನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆದಲ್ಲಿಯೇ ಸಾವನ್ನಪ್ಪಿದ್ದಾನೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲಿ ಮುಟ್ಟಿದೆ.

  • ಚಪ್ಪಲಿಯನ್ನು ಚಪ್ಪರಿಸಿ ತಿಂದ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ

    ಚಪ್ಪಲಿಯನ್ನು ಚಪ್ಪರಿಸಿ ತಿಂದ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ

    ಮುಂಬೈ: ಬಾಲಿವುಡ್‍ನ ಹಾಟ್ ಸುಂದರಿ ಮಂಗಳೂರಿನ ಮಗಳು ಶಿಲ್ಪಾ ಶೆಟ್ಟಿ ಚಪ್ಪಲಿಯನ್ನು ಚಪ್ಪರಿಸಿ ತಿಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

    ಆರೇ ಶಿಲ್ಪಗೇ ಚಪ್ಪಲಿಯನ್ನು ತಿನ್ನುವಂತಹದ್ದು ಏನ್ ಆಗಿದೆ ಅಂತೀದಿದ್ದರಾ? ಶಿಲ್ಪ ತಿಂದಿರುವುದು ಚಪ್ಪಲಿಯನ್ನಲ್ಲ ಬದಲಿಗೆ ಚಪ್ಪಲಿ ಆಕಾರದಲ್ಲಿರುವ ಚಾಕಲೇಟ್ ಕೇಕ್ ಅನ್ನು ಸವಿದಿದ್ದಾರೆ. ಅವರು ಚಪ್ಪಲಿ ರೀತಿಯಲ್ಲಿರುವ ಚಾಕಲೇಟ್ ಕೇಕ್ ಅನ್ನು ತಿನ್ನುತಿರುವ ವಿಡಿಯೋವನ್ನು ಸ್ವತಃ ಅವರೇ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

    https://www.instagram.com/p/B8D3RUDBZ-A/

    ಯೋಗ ಮತ್ತು ಡಯೇಟ್ ಮಾಡಿ ಫಿಟ್ ಅಂಡ್ ಫೈನ್ ಆಗಿರುವ ಶಿಲ್ಪಾ ಅವರು ಚೆನ್ನಾಗಿ ತಿನ್ನುತ್ತಾರೆ. ಹಾಗಾಗಿ ಭಾನುವಾರ ವೀಕೆಂಡ್ ಎಂಜಾಯ್ ಮಾಡಿರುವ ಶಿಲ್ಪಾ ಶೆಟ್ಟಿ ಅವರು, ಚಪ್ಪಲಿ ರೀತಿಯಲ್ಲಿ ತಯಾರಾದ ಚಾಕಲೇಟ್ ಕೇಕ್ ಅನ್ನು ತಿಂದು ಅದನ್ನು ವಿಡಿಯೋ ಮಾಡಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಚಪ್ಪಲಿಯನ್ನು ತಿನ್ನುತ್ತೀರಾ? “ವಿಶೇಷ ಭಾನುವಾರ ವಿಶಿಷ್ಟ ಅಕಾರದ ಚಾಕಲೇಟ್ ಕೇಕ್‍ನೊಂದಿಗೆ” ಎಂದು ಬರೆದುಕೊಂಡಿದ್ದಾರೆ.

    ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಈ ವಿಡಿಯೋದಲ್ಲಿ ವಿಭಿನ್ನ ವಿಭಿನ್ನ ರೀತಿಯ ಚಾಕಲೇಟ್ ಕೇಕ್. ಆದರೆ ಇದು ಚಪ್ಪಲಿ ಆಕಾರದಲ್ಲಿರುವ ಚಾಕಲೇಟ್. ಇದಕ್ಕೆ ನಾನು ಚಪ್ಪಲಿಯನ್ನು ತಿನ್ನುತ್ತೀರಾ ಎಂದು ಪ್ರಶ್ನಿಸಿದ್ದೆ. ಇದನ್ನು ನಾವು ತಿನ್ನಬಹುದು. ತಿಂದು ನನಗೆ ಇಷ್ಟವಾಯಿತು ಎಂದು ಹೇಳಿ ಸಂಡೇ ಬೆಂಜ್ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

    ಕಳೆದ ತಿಂಗಳ 30 ರಂದು ತನ್ನ ಹುಟ್ಟೂರಿಗೆ ಬಂದಿದ್ದ ಶಿಲ್ಪಾ ಶೆಟ್ಟಿ ಅವರು, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಿ ದೇವಿಯ ದರ್ಶನ ಪಡೆದಿದ್ದರು. ಈ ವೇಳೆ ಮಾತನಾಡಿದ್ದ ಅವರು, ಕ್ಷೇತ್ರಕ್ಕೆ ಬರಬೇಕು ಎಂದು ತುಂಬಾ ಆಸೆ ಇತ್ತು. ಕಟೀಲು ದೇವರ ಅನುಗ್ರಹದಿಂದ ನಾನು ಇಷ್ಟೆಲ್ಲ ಸಾಧನೆ ಮಾಡಲು ಸಾಧ್ಯವಾಯಿತು. ಹಾಗಾಗಿ ಬ್ರಹ್ಮಕಲಶದ ಈ ಸಂದರ್ಭದಲ್ಲಿ ದೇವಿಗೆ ಪೂಜೆ ಸಲ್ಲಿಸಲು ಬಂದಿದ್ದೇನೆ ಎಂದು ತುಳುವಿನಲ್ಲಿ ಹೇಳಿದ್ದರು.

    ಈ ವೇಳೆ ಕಟೀಲು ಕ್ಷೇತ್ರದ ವತಿಯಿಂದ ನಟಿ ಶಿಲ್ಪಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಪಕ್ಕದಲ್ಲೇ ತನ್ನ ಮನೆಯಿರುವ ಶಿಲ್ಪಾ ಶೆಟ್ಟಿ ಅವರು ಕಟೀಲು ದುರ್ಗಾಪರಮೇಶ್ವರಿ ದೇವಿಯ ಪರಮ ಭಕ್ತೆಯಾಗಿದ್ದಾರೆ. ತನ್ನ ಹುಟ್ಟೂರಿಗೆ ಹಾಗೂ ಮಂಗಳೂರಿನ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬರುವಾಗ, ತಪ್ಪದೇ ಕಟೀಲು ಶ್ರೀ ದೇವಿಯ ದರ್ಶನ ಪಡೆಯುತ್ತಾರೆ. ಸದ್ಯ ಬಾಲಿವುಡ್‍ನಲ್ಲಿ ಬ್ಯುಸಿ ಇರುವ ಶಿಲ್ಪಾ ಎರಡು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶೆಟ್ಟಿ ನಟನೆಯ ನಿಕ್ಕಮ್ಮ ಮತ್ತು ಹಂಗಮಾ-2 ಸಿನಿಮಾಗಳು ಬಿಡುಗಡೆ ಸಿದ್ಧಗೊಳ್ಳುತ್ತಿವೆ.

  • ಚಾಕಲೇಟ್ ಹಂಚಿ ಮತದಾನ ಮಾಡಿದ ಅಜ್ಜಿ – ಚಾಕಲೇಟ್ ಹಿಂದೆ ಇದೆ ಕಥೆ

    ಚಾಕಲೇಟ್ ಹಂಚಿ ಮತದಾನ ಮಾಡಿದ ಅಜ್ಜಿ – ಚಾಕಲೇಟ್ ಹಿಂದೆ ಇದೆ ಕಥೆ

    ಚಿಕ್ಕಬಳ್ಳಾಪುರ: ಇಂದು 15 ಕ್ಷೇತ್ರಗಳಲ್ಲಿ ಉಪಚುನಾವಣೆ ಮತದಾನ ನಡೆಯುತ್ತಿದ್ದು, ಚಿಕ್ಕಬಳ್ಳಾಪುರ ನಗರದ ಮತಗಟ್ಟೆಯಲ್ಲಿ ಅಜ್ಜಿಯೊಬ್ಬರು ಚುನಾವಣಾ ಸಿಬ್ಬಂದಿಗೆ ಚಾಕಲೇಟ್ ನೀಡಿ ಬಳಿಕ ಮತದಾನ ಮಾಡಿದ್ದಾರೆ.

    ನಗರದ ಮತಗಟ್ಟೆ ಸಂಖ್ಯೆ 164ರಲ್ಲಿ ನಿವೃತ್ತ ಶಿಕ್ಷಕಿ ರಾಜಮ್ಮ(82) ಅವರು ಪ್ರತಿ ಬಾರಿ ಮತದಾನ ಮಾಡುವಾಗ ಸಿಬ್ಬಂದಿಗೆ ಚಾಕಲೇಟ್ ಕೊಟ್ಟು ಖುಷಿಪಡುತ್ತಾರೆ. ಮತದಾನಕ್ಕೆ ಬಂದಾಗ ಯಾಕೆ ಚಾಕಲೇಟ್ ಹಂಚುತ್ತೀರಾ ಎಂದು ಪ್ರಶ್ನಿಸಿದಾಗ, ಭದ್ರತಾ ನಿರತ ಪೊಲೀಸರು, ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗೆ ಚಾಕಲೇಟ್ ಹಂಚುವುದು ನನಗೆ ಅಭ್ಯಾಸವಾಗಿಬಿಟ್ಟಿದೆ. ಮತದಾನದ ದಿನ ಸಿಬ್ಬಂದಿ ಶ್ರಮಪಟ್ಟು ಕೆಲಸ ಮಾಡುತ್ತಾರೆ ಅವರಿಗೆ ಚಾಕಲೇಟ್ ಕೊಟ್ಟರೆ ನನಗೆ ಖುಷಿಯಾಗುತ್ತದೆ ಎಂದು ಉತ್ತರಿಸಿದರು. ಇದನ್ನೂ ಓದಿ: ಮಗನಿಗೆ ಮತಗಟ್ಟೆ ತೋರಿಸಿ ಬರ್ತ್ ಡೇ ಗಿಫ್ಟ್ ಕೊಟ್ಟ ಪೋಷಕರು

    ಹಿಂದೆ ನಾನು ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾಗ ಚುನಾವಣಾ ಕೆಲಸಕ್ಕೆ ಹೋಗುತ್ತಿದ್ದೆ. ಸಿಬ್ಬಂದಿ ಪಡುವ ಕಷ್ಟ ನನಗೂ ಗೊತ್ತು. ಅದಕ್ಕೆ ಪ್ರತಿ ಬಾರಿ ಮತದಾನಕ್ಕೆ ಬಂದಾಗಲೂ ಚಾಕಲೇಟ್ ಹಂಚುತ್ತೇನೆ ಎಂದು ರಾಜಮ್ಮ ಅವರು ತಿಳಿಸಿದರು. ಇದನ್ನೂ ಓದಿ: ವಾಸ್ತು ಪ್ರಕಾರ ಮತಯಂತ್ರ ತಿರುಗಿಸಿ ಮತ ಹಾಕಿದ ಜೆಡಿಎಸ್ ಅಭ್ಯರ್ಥಿ

    ಮತಗಟ್ಟೆಯಲ್ಲಿದ್ದ ಸಿಬ್ಬಂದಿಗೆ ರಾಜಮ್ಮ ಅವರು ಚಾಕಲೇಟ್ ಹಂಚಿರುವುದು ಎಲ್ಲರ ಗಮನ ಸೆಳೆದಿದ್ದು, ಸಿಬ್ಬಂದಿ ಕೂಡ ಖುಷಿಪಟ್ಟಿದ್ದಾರೆ. ಇಳಿ ವಯಸ್ಸಿನಲ್ಲೂ ರಾಜಮ್ಮ ಅವರು ತಪ್ಪದೇ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಲ್ಲದೆ ಪ್ರೀತಿಯಿಂದ ಸಿಬ್ಬಂದಿಗೆ ಚಾಕಲೇಟ್ ಹಂಚಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

  • ಚಾಕಲೇಟ್ ಆಸೆ ತೋರಿಸಿ ಅಪ್ರಾಪ್ತೆಯ ರೇಪ್ ಮಾಡಿ ಕೊಲೆಗೈದ ದುರುಳ

    ಚಾಕಲೇಟ್ ಆಸೆ ತೋರಿಸಿ ಅಪ್ರಾಪ್ತೆಯ ರೇಪ್ ಮಾಡಿ ಕೊಲೆಗೈದ ದುರುಳ

    ಕಲಬುರಗಿ: ಚಾಕಲೇಟ್ ಕೊಡಿಸುವುದಾಗಿ 8 ವರ್ಷದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರವೆಸಗಿ, ಬರ್ಬರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಯಾಕಾಪುರ ಗ್ರಾಮದಲ್ಲಿ ನಡೆದಿದೆ.

    ಯಾಕಾಪುರ ಗ್ರಾಮದ ಯಲ್ಲಪ್ಪ(35) ಕೃತ್ಯವೆಸೆಗಿದ ಕಾಮುಕ. ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ತನ್ನೊಡನೆ ಕರೆದುಕೊಂಡು ಹೋಗಿ ಕಾಮುಕ ಅತ್ಯಾಚಾರಗೈದಿದ್ದಾನೆ. ಬಳಿಕ ಬಾಲಕಿಯನ್ನು ಬರ್ಬರವಾಗಿ ಕೊಲೆ ಮಾಡಿ, ಶವವನ್ನು ಗ್ರಾಮದ ಹೊರವಲಯದಲ್ಲಿ ಬಿಸಾಡಿದ್ದಾನೆ. ಸೋಮವಾರ ಮಧ್ಯಾಹ್ನ ಶಾಲೆಗೆ ಹೋಗಿದ್ದ ಬಾಲಕಿ ಮನೆಗೆ ಮರಳದಿದ್ದಾಗ ಆತಂಕಗೊಂಡ ಪೋಷಕರು ಹಾಗೂ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: 6ರ ಬಾಲಕಿಯನ್ನು ಅತ್ಯಾಚಾರಗೈದು ಬೆಲ್ಟ್‌ನಿಂದ ಕತ್ತು ಹಿಸುಕಿ ಕೊಂದ ಕಾಮುಕರು

    ಆದರೆ ಸಂಜೆ ಸಮಯದಲ್ಲಿ ಯಲ್ಲಪ್ಪ ಜೊತೆ ಬಾಲಕಿ ಓಡಾಡುತ್ತಿರುವದನ್ನು ಕೆಲ ಗ್ರಾಮಸ್ಥರು ನೋಡಿದ್ದು, ಸಂಶಯದ ಮೇಲೆ ಯಲ್ಲಪ್ಪನನ್ನು ಸುಲೇಪೇಠ್ ಠಾಣೆಯ ಪೊಲೀಸರು ವಿಚಾರಿಸಿದ್ದಾಗ ಆರೋಪಿ ಅಸಲಿ ಸತ್ಯವನ್ನು ಬಾಯಿಬಿಟ್ಟಿದ್ದಾನೆ. ತಾನೇ ಅತ್ಯಾಚಾರಗೈದು, ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಪಶುವೈದ್ಯೆಯನ್ನು ಕೊಂದಂತೆ ನನ್ನ ಮಗನನ್ನು ಕೊಲ್ಲಿ – ಸಿಡಿದೆದ್ದ ಅತ್ಯಾಚಾರಿಯ ತಾಯಿ

    ಈ ಪ್ರಕರಣದಿಂದ ಮೃತ ಬಾಲಕಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆರೋಪಿ ವಿರುದ್ಧ ಸಿಟ್ಟಿಗೆದ್ದಿದ್ದು, ಸದ್ಯ ಇದರಿಂದ ಗ್ರಾಮದಲ್ಲಿ ಎರಡು ಕೋಮಿನ ಮಧ್ಯೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ಪೊಲೀಸರು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ. ಇದನ್ನೂ ಓದಿ: ಇಡ್ಲಿ ಆಸೆ ತೋರಿಸಿ 5ರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ವಿವಾಹಿತ

    ಹೈದರಾಬಾದ್‍ನಲ್ಲಿ ಪಶುವೈದ್ಯೆ ಮೇಲಿನ ಪೈಶಾಚಿಕ ಕೃತ್ಯಕ್ಕೆ ಇಡೀ ದೇಶವೇ ಆರೋಪಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಇತ್ತ ಕರ್ನಾಟಕದಲ್ಲಿಯೂ ಹೆಣ್ಣುಮಕ್ಕಳ ಮೇಲೆ ಕಾಮುಕರು ವಿಕೃತಿ ಮೆರೆಯುತ್ತಿರುವುದು ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ.