Tag: ಚಾಮುಂಡಿಬೆಟ್ಟ

  • ನಾಳೆ ಮಧ್ಯಾಹ್ನದವರೆಗೆ ಚಾಮುಂಡಿ ಬೆಟ್ಟ ಪ್ರವೇಶ ನಿಷೇಧ – ರೋಹಿಣಿ ಸಿಂಧೂರಿ ಆದೇಶ

    ನಾಳೆ ಮಧ್ಯಾಹ್ನದವರೆಗೆ ಚಾಮುಂಡಿ ಬೆಟ್ಟ ಪ್ರವೇಶ ನಿಷೇಧ – ರೋಹಿಣಿ ಸಿಂಧೂರಿ ಆದೇಶ

    ಮೈಸೂರು: ಚಾಮುಂಡಿಬೆಟ್ಟದಲ್ಲಿ ರಥೋತ್ಸವ ಹಿನ್ನೆಲೆಯಲ್ಲಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧವನ್ನು ಹೇರಲಾಗಿದೆ.

    ಇಂದು ಸಂಜೆ 6 ಗಂಟೆಯಿಂದ ನಾಳೆ ಮಧ್ಯಾಹ್ನ 12 ಗಂಟೆವರೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸುವಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

    ಅಕ್ಟೋಬರ್ 29ರಂದು ನಡೆಯಲಿರುವ ಚಾಮುಂಡಿ ರಥೋತ್ಸವಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ. ದಸರಾ ಉತ್ಸವಕ್ಕೆ ಗ್ರಾಮಸ್ಥರು ಮತ್ತು ಅಧಿಕಾರಿಗಳಿಗೆ ಮಾತ್ರ ಪ್ರವೇಶ ವಿನಾಯಿತಿ ಇರುತ್ತದೆ. ಜನಸಮೂಹವನ್ನು ಒಳಗೊಂಡಂತೆ ನಡೆಯುತ್ತಿದ್ದ ದಸರಾ ರಥೋತ್ಸವ ಈ ಬಾರಿ ಭಕ್ತರಿಗೆ ಹೆಚ್ಚಿನ ಪ್ರಮಾಣದಲ್ಲಿ ಅವಕಾಶವಿಲ್ಲ. ಸಾಂಪ್ರದಾಯಿಕವಾಗಿ ಸರಳವಾಗಿ ಉತ್ಸವ ನಡೆಯಲಿದೆ.

    ಮೈಸೂರು ದಸರಾ ಪ್ರಮುಖ ಆಕರ್ಷಣೆ ಎಂದರೆ ಜಂಬೂ ಸವಾರಿ. ದೇಶ ಮಾತ್ರವಲ್ಲ, ವಿದೇಶಗಳಲ್ಲೂ ಕಣ್ಮನ ಸೆಳೆಯುತ್ತದೆ. ಜಂಬೂ ಸವಾರಿ ಇದೇ ಮೊದಲ ಬಾರಿಗೆ ಇಷ್ಟೊಂದು ಸರಳವಾಗಿ ನಡೆದಿದೆ. ಕೊರೊನಾದಿಂದ ಈ ಬಾರಿ ಮೈಸೂರು ದಸರಾ ಉತ್ಸವ ಸರಳವಾಗಿ ನಡೆದಿದೆ. ದಸರಾ ಹಬ್ಬ ಯಶಸ್ವಿಯಾಗಿ ನಡೆಯಲೆಂದು ರೋಹಿಣಿ ಸಿಂಧೂರಿ ಹರಕೆ ಹೊತ್ತಿದ್ದರು. ಈ ಹಿನ್ನೆಲೆಯಲ್ಲಿ ನವರಾತ್ರಿ ಒಂಬತ್ತನೇ ದಿನ ತಾವೇ ಸ್ವತಃ ರಥ ಎಳೆಯುವ ಮೂಲಕ ಹರಕೆ ತೀರಿಸಿದ್ದರು.

  • ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಯದುವೀರ್ ದಂಪತಿ

    ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಯದುವೀರ್ ದಂಪತಿ

    ಮೈಸೂರು: ಸೋಮವಾರದಿಂದ ಚಾಮುಂಡಿ ಬೆಟ್ಟದಲ್ಲಿನ ಚಾಮುಂಡೇಶ್ವರಿ ದೇವಿಯ ದರ್ಶನ ಆರಂಭವಾಗಿದೆ. ಹೀಗಾಗಿ ಇಂದು ಚಾಮುಂಡಿ ಬೆಟ್ಟದಲ್ಲಿ ಎರಡನೇ ದಿನದ ದರ್ಶನ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ರಾಜವಂಶಸ್ಥ ಯದುವೀರ್ ದಂಪತಿ ಭೇಟಿ ನೀಡಿದ್ದಾರೆ.

    ಸುಮಾರು 70 ದಿನಗಳ ನಂತರ ಯದುವೀರ್ ದಂಪತಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ನಂತರ ಯದುವೀರ್ ಮತ್ತು ಪತ್ನಿ ತ್ರಿಶಿಕಾ ಕುಮಾರಿ ದೇವಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಇದೇ ವೇಳೆ ಮಾತನಾಡಿದ ಯದುವೀರ್, ಲಾಕ್‍ಡೌನ್ ಸಂದರ್ಭದಲ್ಲಿ ನಮ್ಮ ಜೀವನದಲ್ಲಿ ತುಂಬಾ ಬದಲಾವಣೆಯಾಗಿದೆ. ಈಗ ಲಾಕ್‍ಡೌನ್ ಸಡಿಲಿಕೆಯಿಂದ ಎಲ್ಲ ದೇವಾಲಯಗಳು ಓಪನ್ ಆಗಿದೆ. ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿ ಕೊರೊನಾ ವಿರುದ್ಧ ಹೋರಾಟ ಮಾಡಬೇಕಿದೆ. ಎಲ್ಲರೂ ಸರಿಯಾಗಿ ಸರ್ಕಾರ ನಿಯಮ ಪಾಲಿಸಿ. ಕೊರೊನಾ ವಿರುದ್ಧ ಗೆಲ್ಲೋಣ ಎಂದು ಹೇಳಿದರು.

    ಆಷಾಢ ಪೂಜೆಯನ್ನು ದೊಡ್ಡ ಮಟ್ಟದಲ್ಲಿ ಮಾಡುವುದು ಕಷ್ಟವಾಗುತ್ತದೆ ಎಂಬುದು ನನ್ನ ಅಭಿಪ್ರಾಯ. ಇಲ್ಲಿನ ವಿಧಿ-ವಿಧಾನಗಳಿಗೆ ನಾವು ಮೊದಲು ಆದ್ಯತೆ ಕೊಡಬೇಕು. ಜೊತೆಗೆ ಜನರ ಆರೋಗ್ಯವೂ ನಮಗೆ ಮುಖ್ಯವಾಗಿದೆ. ಹೀಗಾಗಿ ಜನರ ಸುರಕ್ಷತೆಯನ್ನು ಕಾಪಾಡಿಕೊಂಡು ದೇವಸ್ಥಾನದ ವಿಧಿ-ವಿಧಾನಗಳನ್ನು ಅನುಸರಿಸುವುದು ಉತ್ತಮ ಎಂದು ಹೇಳಿದರು.

  • ‘ಇಂಥದ್ದನ್ನ ಸಹಿಸಬೇಕಾ ಹೇಳಿ’- ಟೀಕೆಯ ಬೆನ್ನಲ್ಲೇ ಚಾಮುಂಡಿ ಬೆಟ್ಟದ ರಥದ ಚಕ್ರಗಳ ಪೇಂಟಿಂಗ್ ಬದಲಾವಣೆ

    ‘ಇಂಥದ್ದನ್ನ ಸಹಿಸಬೇಕಾ ಹೇಳಿ’- ಟೀಕೆಯ ಬೆನ್ನಲ್ಲೇ ಚಾಮುಂಡಿ ಬೆಟ್ಟದ ರಥದ ಚಕ್ರಗಳ ಪೇಂಟಿಂಗ್ ಬದಲಾವಣೆ

    ಮೈಸೂರು: ಚಾಮುಂಡಿಬೆಟ್ಟದಲ್ಲಿ ರಥದ ಚಕ್ರಕ್ಕೆ ಆಕ್ಷೇಪರ್ಹ ಚಿತ್ರರಚನೆ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಪರ ವಿರೋಧದ ನಡುವೆ ರಥದ ಚಕ್ರಗಳ ಪೇಂಟಿಂಗ್ ಬದಲಾವಣೆ ಮಾಡಲಾಗಿದೆ.

    ಸಂಸದ ಪ್ರತಾಪ್ ಸಿಂಹ ಅವರು ಚಾಮುಂಡಿ ಬೆಟ್ಟದ ರಥ ಚಕ್ರಗಳಿಗೆ ಮಾಡಿದ್ದ ಪೇಂಟಿಂಗ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರ ಹಾಕಿದ್ದರು. ಈ ಕುರಿತು ಟ್ವೀಟ್ ಮಾಡಿದ್ದ ಸಂಸದರು, ಚಾಮುಂಡಿ ಬೆಟ್ಟದ ರಥದ ಚಕ್ರಗಳಿಗೆ ಮಾಡಿ ಪೇಂಟಿಂಗ್ ನೋಡಿ… ಇಂಥದ್ದನ್ನ ಸಹಿಸಬೇಕಾ ಹೇಳಿ ಎಂದು ಪ್ರಶ್ನಿಸಿದ್ದರು. ಬಳಿಕ ಮತ್ತೊಂದು ಟ್ವೀಟ್ ಮಾಡಿ, ನಿಮ್ಮ ಗಮನಕ್ಕೆ ಇರಲಿ ಅಂತ ಫೋಟೋ ಹಾಕಿದ್ದೇನೆ. ಪಾಠ ಕಲಿಸದೇ ಬಿಡಲ್ಲ ಎಂದು ಗುಡುಗಿದ್ದರು.

    ಚಿತ್ರದಲ್ಲಿ ಏನಿತ್ತು?:
    ಚಾಮುಂಡಿ ಬೆಟ್ಟದ ಮಹಾಬಲೇಶ್ವರ ರಥದ ಚಕ್ರಗಳಿಗೆ ಹಸಿರು ಬಣ್ಣದಿಂದ ಅರ್ಧ ಚಂದ್ರ ಹಾಗೂ ಅದರ ಮೇಲೊಂದು ನಕ್ಷದ ಬಿಂಬಿಸುವಂತಹ ಕಲಾಕೃತಿ ಬಿಡಿಸಲಾಗಿತ್ತು. ಇದಕ್ಕೆ ಸಂಸದ ಪ್ರತಾಪ್ ಸಿಂಹ ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ರಥದ ಚಕ್ರಗಳ ಮೇಲಿದ್ದ ಅರ್ಧ ಚಂದ್ರ ಹಾಗೂ ನಕ್ಷತ್ರದ ಬಿಂಬಿಸುವ ಕಲಾಕೃತಿಯನ್ನು ತೆಗೆದು ಹಾಕಲಾಗಿದೆ.

    ಆದರೆ ಸಂಸದರ ನಡೆಗೆ ಸಾರ್ವಜನಿಕ ವಲಯದಲ್ಲಿ ಪರ ವಿರೋಧ ವ್ಯಕ್ಯವಾಗಿತ್ತು. ಸಂಸದರೇ ಹೀಗೆ ಪ್ರಚೋದನಕಾರಿ ಪೋಸ್ಟ್ ಮಾಡಿದ್ದು ಸರಿಯೇ ಎಂದು ಕೆಲವರು ಪ್ರಶ್ನಿಸಿದ್ದರು. ಈ ವಿಚಾರ ಮುಜುರಾಯಿ ಇಲಾಖೆ ಅಧಿಕಾರಿಗಳ ಗಮನಕ್ಕೆ ಬರುತ್ತಿದ್ದಂತೆ ಪೇಟಿಂಗ್ ಬದಲಾವಣೆ ಮಾಡಿದ್ದಾರೆ.

  • ಬಜೆಟ್‍ನಲ್ಲಿ ಚಾಮುಂಡಿಗೆ ಚಿನ್ನದ ರಥ ಘೋಷಣೆ ಸಾಧ್ಯತೆ: ಸಚಿವ ಸೋಮಣ್ಣ

    ಬಜೆಟ್‍ನಲ್ಲಿ ಚಾಮುಂಡಿಗೆ ಚಿನ್ನದ ರಥ ಘೋಷಣೆ ಸಾಧ್ಯತೆ: ಸಚಿವ ಸೋಮಣ್ಣ

    – ನೆರೆ ಸಂತ್ರಸ್ತರಿಗೆ ಮನೆ ವಿತರಣೆ ವಿಚಾರಕ್ಕೆ ಸಚಿವರ ಪ್ರತಿಕ್ರಿಯೆ
    – ಕೃಷ್ಣನ ಲೆಕ್ಕ ಹೋಗಿ ರಾಮನ ಲೆಕ್ಕ ಮಾತ್ರ ಉಳಿದಿದೆ

    ಮೈಸೂರು: ಚಾಮುಂಡಿಬೆಟ್ಟದ ಚಾಮುಂಡಿ ತಾಯಿಗೆ ಚಿನ್ನದ ರಥ ನಿರ್ಮಾಣ ವಿಚಾರ ಈ ಬಾರಿಯ ಬಜೆಟ್‍ನಲ್ಲಿ ನಿರ್ಧಾರವಾಗುವ ವಿಶ್ವಾಸ ಇದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರೊಂದಿಗೆ ಮಾತನಾಡಿದ್ದೇನೆ. ಚಿನ್ನದ ರಥ ನಿರ್ಮಾಣ ಮಾಡುವುದಕ್ಕೆ ಬಜೆಟ್‍ನಲ್ಲಿ ಅನುದಾನ ಕೊಡಿಸುವ ಭರವಸೆಯನ್ನು ಅವರು ನೀಡಿದ್ದಾರೆ. ಸಪ್ತಪದಿ ಯೋಜನೆ ಅನುಷ್ಠಾನಕ್ಕೂ ನಮ್ಮ ಸರ್ಕಾರ ಸಿದ್ಧವಾಗಿದೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಯೋಜನೆ ಅನುಷ್ಠಾನಕ್ಕೆ ಜಿಲ್ಲಾಡಳಿತ ಕ್ರಮವಹಿಸಲಿದೆ ಎಂದರು.

    ಇನ್ನೊಂದು ತಿಂಗಳಲ್ಲಿ ಚಾಮುಂಡಿಬೆಟ್ಟ ಕಾಮಗಾರಿ ಪೂರ್ಣವಾಗಲಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಅಂಗಡಿ ಮಳಿಗೆ ನೀಡುತ್ತೇವೆ. ಶೌಚಾಲಯ ಸೇರಿದಂತೆ ಎಲ್ಲ ಮೂಲಭೂತ ವ್ಯವಸ್ಥೆ ಮಾಡುತ್ತೇವೆ. ಚಾಮುಂಡಿಬೆಟ್ಟದ ಸಮಗ್ರ ಅಭಿವೃದ್ಧಿ ಶ್ರಮ ಹಾಕಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

    ರಾಜ್ಯದ ನೆರೆ ಸಂತ್ರಸ್ತರಿಗೆ ಮನೆ ವಿತರಣೆ ವಿಚಾರದಲ್ಲಿ ಕೃಷ್ಣನ ಲೆಕ್ಕ ಹೋಗಿ ರಾಮನ ಲೆಕ್ಕ ಮಾತ್ರ ಉಳಿದಿದೆ. ರಾಜ್ಯದಲ್ಲಿ 3.5. ಲಕ್ಷ ಮನೆ ವಿತರಣೆಗೆ ಎಲ್ಲ ಸಿದ್ಧತೆ ನಡೆದಿದೆ. ಮೊದಲ ಹಂತದಲ್ಲಿ 15 ಲಕ್ಷ ಮನೆಗಳ ವಿತರಣೆ ಅರ್ಜಿ ಬಂದಿತ್ತು. ಆಧಾರ್, ಬಿಪಿಎಲ್, ಎಪಿಎಲ್ ಕಾರ್ಡುಗಳನ್ನ ಲಿಂಕ್ ಮಾಡಿದ್ವಿ. ಆ ನಂತರ 15 ಲಕ್ಷದಿಂದ 6 ಲಕ್ಷಕ್ಕೆ ಬಂತು. ಇದೀಗ 3.5 ಲಕ್ಷ ನಿಜವಾದ ಸಂತ್ರಸ್ತರಿಗೆ ಮನೆ ವಿತರಣೆ ಸಿದ್ಧತೆ ನಡೆದಿದೆ. ಜೂನ್ ಅಂತ್ಯದ ಒಳಗೆ ಎಲ್ಲರಿಗೂ ಮನೆ ವಿತರಣೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

    ಕಾಮಗಾರಿ ಪರಿಶೀಲನೆ:
    ಸಚಿವ ವಿ.ಸೋಮಣ್ಣ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಿದರು. ಬಳಿಕ ಚಾಮುಂಡಿಬೆಟ್ಟದಲ್ಲಿ ಜಿಲ್ಲಾಡಳಿತ ನಿರ್ಮಾಣ ಮಾಡುತ್ತಿರುವ ಅಂಗಡಿ ಮಳಿಗೆ ಕಾಮಗಾರಿ ಪರಿಶೀಲನೆ ಮಾಡಿದರು. ಬಹುಮಹಡಿ ಪಾರ್ಕಿಂಗ್ ಸಮೀಪದಲ್ಲೇ ಸಾಮೂಹಿಕ ಅಂಗಡಿ ಮಳಿಗೆ ನಿರ್ಮಾಣವಾಗುತ್ತಿದ್ದು, ಈ ಕಾಮಗಾರಿ ತುರ್ತಾಗಿ ಪೂರ್ಣಗೊಳಿಸುವಂತೆ ಸಚಿವರು ಸೂಚಿಸಿದರು. ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಪಾಲಿಕೆ ಆಯುಕ್ತರ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಯಿತು. ಇನ್ನೊಂದು ತಿಂಗಳಲ್ಲಿ ಕೆಲಸ ಮುಗಿಸುವಂತೆ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ.

  • ಬಂಡೀಪುರ ಆಯ್ತು, ಈಗ ಮೈಸೂರಿನ ಚಾಮುಂಡಿಬೆಟ್ಟದಲ್ಲೂ ಕಾಡ್ಗಿಚ್ಚು!

    ಬಂಡೀಪುರ ಆಯ್ತು, ಈಗ ಮೈಸೂರಿನ ಚಾಮುಂಡಿಬೆಟ್ಟದಲ್ಲೂ ಕಾಡ್ಗಿಚ್ಚು!

    ಮೈಸೂರು: ಕಳೆದ ಆರು ದಿನಗಳಿಂದ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಕಾಡ್ಗಿಚ್ಚು ತನ್ನ ರೌದ್ರಾವತಾರ ಮೆರೆಯುತ್ತಿರುವ ಬೆನ್ನಲ್ಲೇ ಈಗ ಮೈಸೂರಿನ ಚಾಮುಂಡಿ ಬೆಟ್ಟದಲ್ಲೂ ಕಾಡ್ಗಿಚ್ಚು ಕಾಣಿಸಿಕೊಂಡಿದೆ.

    ಜಿಲ್ಲೆಯ ರಿಂಗ್ ರಸ್ತೆಯ ಸಮೀಪವಿರುವ ಬಂಡಿಪಾಳ್ಯ ಗ್ರಾಮದ ಹತ್ತಿರದಲ್ಲಿರುವ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಆಕಸ್ಮಿಕ ಬೆಂಕಿಯಿಂದ ಅಪಾರ ಪ್ರಮಾಣದಲ್ಲಿ ಕಾಡು ನಾಶವಾಗಿದ್ದು, ಬೆಂಕಿಯನ್ನು ಆರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಇದರಿಂದ ಬಂಡಿಪಾಳ್ಯ ಗ್ರಾಮಕ್ಕೆ ಹೊಂದಿಕೊಂಡಿರುವ ಚಾಮುಂಡಿಬೆಟ್ಟದಲ್ಲೂ ಕೂಡ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಸುಮಾರು 1 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.

    ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನ ಪಡುತ್ತಿದ್ದರೂ ಕೂಡ ಬೆಂಕಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಗಾಳಿಯ ರಭಸಕ್ಕೆ ಬೆಂಕಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    https://www.youtube.com/watch?v=YyCqkT3m5EM

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾಡು ಸಮೃದ್ಧಿ ಆಗಿರೋ ಕಾರಣ ಅದ್ಧೂರಿ ದಸರಾ ಮಾಡೋಣ – ಸಿಎಂ

    ನಾಡು ಸಮೃದ್ಧಿ ಆಗಿರೋ ಕಾರಣ ಅದ್ಧೂರಿ ದಸರಾ ಮಾಡೋಣ – ಸಿಎಂ

    ಮೈಸೂರು: ರಾಜ್ಯ ಹಲವು ಡ್ಯಾಂಗಳು ಭರ್ತಿಯಾಗಿ ನಾಡು ಸಮೃದ್ಧಿಯಾಗಿದ್ದು, ಈ ಬಾರಿ ಅದ್ಧೂರಿ ದಸರಾ ಆಚರಣೆ ಮಾಡುವುದಾಗಿ ಸಿಎಂ ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ಹೇಳಿದ್ದಾರೆ.

    ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಸಿಎಂ ಹೆಚ್‍ಡಿಕೆ, ರಾಜ್ಯದ ಹಲವು ಜಲಾಶಯಗಳು ಭರ್ತಿಯಿಂದ ನಾಡು ಸಮೃದ್ಧಿಯಾಗಿದೆ. ಈ ಬಾರಿ ಉತ್ತಮ ಮಳೆ ಬಿದ್ದಿರುವುದರಿಂದ ವಿದ್ಯುತ್ ಸಮಸ್ಯೆಯೂ ನಿವಾರಣೆ ಆಗಿದೆ. 12 ವರ್ಷಗಳ ನಂತರ ಕೆಲ ಜಲಾಶಯಗಳಿಗೆ ನಾನೇ ಬಾಗಿನ ಅರ್ಪಣೆ ಮಾಡುತ್ತಿದ್ದೇನೆ. ಇದಕ್ಕೆಲ್ಲ ತಾಯಿ ಚಾಮುಂಡೇಶ್ವರಿಯ ಆಶಿರ್ವಾದ ಕಾರಣವಾಗಿದ್ದು, ನಾಡು ಸಮೃದ್ಧಿ ಆಗಿರೋ ಕಾರಣ ಅದ್ಧೂರಿ ದಸರಾ ಮಾಡುತ್ತೇವೆ. ನಾವು ಮಾಡುವ ದಸರಾ ಆಚರಣೆ ರಾಜ್ಯಕ್ಕೆ ಮಾದರಿಯಾಗುತ್ತದೆ. ಈ ಕುರಿತು ಈಗಾಗಲೇ ವಿಧಾನಸಭೆಯಲ್ಲಿ ಸಭೆ ಕರೆದು ಚರ್ಚೆ ನಡೆದಿದೆ ಎಂದು ಹೇಳಿದ್ದಾರೆ.

    ಆಷಾಢ ಮಾಸದ ಮೊದಲ ಶುಕ್ರವಾರ ಚಾಮುಂಡೇಶ್ವರಿ ಪೂಜೆ ಸಲ್ಲಿಸಿದ ಸಿಎಂ ರಾಜ್ಯದ ಅಭಿವೃದ್ಧಿಗೆ ಹಾಗೂ ರೈತರ ನೆಮ್ಮದಿಯ ಜೀವನಕ್ಕೆ ತಾಯಿಯಲ್ಲಿ ಪ್ರಾರ್ಥಿಸಿದ್ದೇನೆ. ಇಂದು ನನ್ನ ಜೊತೆ ಹಲವು ಸಚಿವರು ಜೊತೆಗಿದ್ದು ತಾಯಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯಗಳಿಗೆ ಬಾಗಿನ ಅರ್ಪಣೆ ಮಾಡುವ ಶುಭಕಾರ್ಯವನ್ನು ಇಟ್ಟುಕೊಂಡಿದ್ದೇವೆ. ಈ ಎಲ್ಲ ಕಾರಣದಿಂದ ಆಷಾಢ ಶುಕ್ರವಾರದಂದು ಪೂಜೆಗೆ ಬಂದಿದ್ದೇವೆ ಎಂದು ಹೇಳಿದರು.

    ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸಿಎಂ ಹೆಚ್‍ಡಿಕೆ ಹೇಳಿಕೆ ಆಷಾಢ ಮಾಸ, ಈ ಮಾಸದಲ್ಲಿ ಯಾವುದೇ ಶುಭಕಾರ್ಯಗಳನ್ನ ನಡೆಸೋದಿಲ್ಲ. ಆದರೆ ಇದೇ ಮಾಸದಲ್ಲಿ ದೇವರ ಆರಾಧನೆಯಿಂದ ಸಂಪೂರ್ಣ ಫಲ ಪ್ರಾಪ್ತಿಯಾಗುತ್ತದೆ ಎಂಬುದು ಆಸ್ತಿಕರ ನಂಬಿಕೆ. ಅದರಲ್ಲೂ ಆಷಾಢ ಮಾಸದಲ್ಲಿ ಶಕ್ತಿದೇವತೆಗಳ ಆರಾಧನೆಯಿಂದ ಕುಟುಂಬ ಸದಸ್ಯರ ಆರೋಗ್ಯ, ಐಶ್ವರ್ಯ ಸಂಪತ್ತು ಅಭಿವೃದ್ಧಿಯಾಗುತ್ತೆ ಅನ್ನೋದು ಭಕ್ತರ ನಂಬಿಕೆ. ಈ ನಂಬಿಕೆಯಿಂದಲೇ ನೂರಾರು ವರ್ಷಗಳಿಂದ ಮೈಸೂರಿನ ಅಧಿದೇವತೆಯಾದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಷಾಢ ಮಾಸದ ವಿಶೇಷ ಪೂಜಾ ಕೈಂಕರ್ಯಗಳನ್ನು ಆಯೋಜಿಸುತ್ತಾ ಬರಲಾಗಿದೆ.

  • ನಂದಿಬೆಟ್ಟ, ಚಾಮುಂಡಿಬೆಟ್ಟ, ಬೇಲೂರು, ಹಳೇಬೀಡಿಗೆ ಕೆಎಸ್‍ಟಿಡಿಸಿಯಿಂದ ಪ್ರವಾಸ ಆಯೋಜನೆ

    ನಂದಿಬೆಟ್ಟ, ಚಾಮುಂಡಿಬೆಟ್ಟ, ಬೇಲೂರು, ಹಳೇಬೀಡಿಗೆ ಕೆಎಸ್‍ಟಿಡಿಸಿಯಿಂದ ಪ್ರವಾಸ ಆಯೋಜನೆ

    ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಬೇಸಿಗೆ ರಜೆ ಹಿನ್ನೆಲೆಯಲ್ಲಿ ಎರಡು ವಿಶೇಷ ಪ್ರವಾಸವನ್ನು ಆಯೋಜಿಸಿದೆ.

    ರಾಜ್ಯಕ್ಕೆ ಭೇಟಿ ನೀಡುವ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರಿಗೆ ಕೈಗೆಟಕುವ ದರದಲ್ಲಿ ನಂದಿಬೆಟ್ಟ ಮತ್ತು ಮೈಸೂರು, ಹಾಸನ ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳಿಗೆ ಪ್ರವಾಸವನ್ನು ಆಯೋಜಿಸಿದೆ. ಏಪ್ರಿಲ್ 1ರಿಂದ ಪ್ರವಾಸಿಗರು ಇದರ ಸದುಪಯೋಗವನ್ನು ಪಡೆಯಬಹುದಾಗಿದೆ.

    1.ಬೆಂಗಳೂರು-ದೇವನಹಳ್ಳಿ-ನಂದಿಬೆಟ್ಟ ಪ್ರವಾಸ: ಒಂದು ದಿನದ ಪ್ರವಾಸವಾಗಿದ್ದು, ಪ್ರತಿ ಶನಿವಾರ ಹಾಗೂ ಭಾನುವಾರ ಈ ಪ್ರವಾಸವನ್ನು ಆಯೋಜಿಸಲಾಗುತ್ತಿದೆ. ಈ ಪ್ರವಾಸವು ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನ ಯಶವಂತಪುರ ಬಿಎಂಟಿಸಿ ಬಸ್ ನಿಲ್ದಾಣದಿಂದ ನಿರ್ಗಮಿಸಿ ದೇವನಹಳ್ಳಿ ಕೋಟೆ-ಮುದ್ದೇನಹಳ್ಳಿ ವಿಶ್ವೇಶ್ವರಯ್ಯ ಜನ್ಮಸ್ಥಳ-ನಂದಿಗ್ರಾಮದ ದೇವಸ್ಥಾನಗಳಿಗೆ ಭೇಟಿ ನೀಡಿ ಸಾಯಂಕಾಲ 5 ಗಂಟೆವರೆಗೆ ನಂದಿಬೆಟ್ಟದ ವೀಕ್ಷಣೆ ಮಾಡುವ ವ್ಯವಸ್ಥೆ ಇರುತ್ತದೆ. ಈ ಪ್ರವಾಸದ ದರವು ಪ್ರತಿಯೊಬ್ಬರಿಗೆ ಊಟದ ವ್ಯವಸ್ಥೆ ಸೇರಿ 700 ರೂ. ಆಗಿರುತ್ತದೆ.

    2.ಬೆಂಗಳೂರು-ಮೈಸೂರು-ಶ್ರವಣಬೆಳಗೊಳ-ಬೇಲೂರು-ಹಳೇಬೀಡು-ಬೆಳವಾಡಿ-ಪ್ರವಾಸ: ಇದು 2 ದಿನಗಳ ಪ್ರವಾಸವಾಗಿದ್ದು, ಮೊದಲನೆ ದಿನ ಬೆಳಿಗ್ಗೆ 6.30ಕ್ಕೆ ಬೆಂಗಳೂರಿನಿಂದ ಹೊರಟು ಶ್ರೀರಂಗಪಟ್ಟಣ-ಮೈಸೂರಿನ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ಕೆ.ಆರ್ ಸಾಗರ ವೀಕ್ಷಣೆ ಮತ್ತು ಕೆ.ಆರ್ ಸಾಗರದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಎರಡನೇ ದಿನ ಬೆಳಿಗ್ಗೆ ಕೆ.ಆರ್ ಸಾಗರದಿಂದ ಹೊರಟು ಶ್ರವಣಬೆಳಗೊಳ-ಬೇಲೂರು-ಹಳೇಬೀಡು-ಬೆಳವಾಡಿ ವೀರನಾರಾಯಣಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡುವ ವ್ಯವಸ್ಥೆ ಇದೆ. ಈ ಪ್ರವಾಸದ ದರವು ಊಟದ ವ್ಯವಸ್ಥೆ ಸೇರಿ ಪ್ರತಿಯೊಬ್ಬರಿಗೆ 1,900 ರೂ. ಆಗಿದೆ.

    ಪ್ರವಾಸಿಗರು ಇದೇ ರೀತಿ ಮುಂಬರುವ ಬೇಸಿಗೆ ರಜೆ ಹಿನ್ನೆಲೆಯಲ್ಲಿ ನಿಗಮದಿಂದ ಮೈಸೂರು-ಊಟಿ-ಕೊಡೆಕೆನಾಲ್-ಕೊಡಗಿನ ಪ್ರವಾಸಿ ಸ್ಥಳಗಳಿಗೆ ಬೇಡಿಕೆಗೆ ಅನುಗುಣವಾಗಿ ಪ್ರವಾಸಗಳನ್ನು ಆಯೋಜಿಸಲಾಗಿದೆ. ಪ್ರವಾಸಿಗರು ಇದರ ಸದುಪಯೋಗವನ್ನು ಪಡೆಯಲು, ಬುಕ್ಕಿಂಗ್ ಗಾಗಿ
    www.kstdc.co  ವೆಬ್ ಸೈಟ್ ಹಾಗೂ ದೂರವಾಣಿ ಸಂಖ್ಯೆ – 89706 50070, 080-43344334 ಸಂಪರ್ಕಿಸಬಹುದಾಗಿದೆ.

  • ಹಾಸನಾಂಬೆ, ಚಾಮುಂಡೇಶ್ವರಿ ಕಣ್ತುಂಬಿಕೊಳ್ಳಲು ಜನಸಾಗರ – ಚಾಮುಂಡಿ ಬೆಟ್ಟಕ್ಕೆ ತಲುಪಲು 4 ಕಿಮೀ ಉದ್ದ ವಾಹನಗಳ ಕ್ಯೂ!

    ಹಾಸನಾಂಬೆ, ಚಾಮುಂಡೇಶ್ವರಿ ಕಣ್ತುಂಬಿಕೊಳ್ಳಲು ಜನಸಾಗರ – ಚಾಮುಂಡಿ ಬೆಟ್ಟಕ್ಕೆ ತಲುಪಲು 4 ಕಿಮೀ ಉದ್ದ ವಾಹನಗಳ ಕ್ಯೂ!

    ಹಾಸನ/ಮೈಸೂರು: ಹಾಸನಾಂಬೆ ಹಾಗೂ ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನಕ್ಕಾಗಿ ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ಅಂತಿಮ ದಿನವಾಗಿದ್ದು ನಾಳೆ ಮಧ್ಯಾಹ್ನ 12 ಗಂಟೆಗೆ ಹಾಸನಾಂಬೆ ದೇಗುಲದ ಗರ್ಭಗುಡಿಯನ್ನು ಮುಚ್ಚಲಾಗುವುದು.

    ಇಂದು ಬೆಳಗ್ಗೆ 5 ರಿಂದ ಸಂಜೆ 5 ಮತ್ತು ರಾತ್ರಿ 9 ರಿಂದ ಶನಿವಾರ ಬೆಳಗ್ಗೆ 6 ಗಂಟೆವರೆಗೆ ಭಕ್ತರು ದೇವಿಯ ದರ್ಶನ ಪಡೆಯಬಹುದು. ಶನಿವಾರ ಮಧ್ಯಾಹ್ನ ವಿಶ್ವರೂಪ ದರ್ಶನ ನಂತರ ಗರ್ಭಗುಡಿಯ ಬಾಗಿಲು ಹಾಕಲಾಗುವುದು.

    ದೇವಿ ದರ್ಶನಕ್ಕೆ ಇಂದು ಕಡೇ ದಿನವಾಗಿರುವ ಹಿನ್ನೆಲೆಯಲ್ಲಿ ಜನಸಾಗರವೇ ದೇಗುಲಕ್ಕೆ ಹರಿದು ಬಂದಿದೆ. ಭಕ್ತರ ಸಾಮಾನ್ಯ ದರ್ಶನದ ಸಾಲು 2 ಕಿಲೋ ಮೀಟರ್ ಗೂ ಹೆಚ್ಚಿದೆ. ದೇವಿಯ ವಿಶೇಷ ದರ್ಶನದ 300 ರೂ. ಪಾಸ್ ಹಾಗೂ 1000 ರೂ. ಪಾಸ್ ಗೂ ಭಾರೀ ಬೇಡಿಕೆ ಇದೆ. ದೇವಿ ದರ್ಶನದ ಕೊನೆಯ ದಿನವಾದ ಇಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ, ಜೆಡಿಎಸ್ ಶಾಸಕ ಶರವಣ ದೇಗುಲಕ್ಕೆ ಭೇಟಿ ನೀಡಿದರು.

    File Photo

    ಅತ್ತ ಮೈಸೂರಿನಲ್ಲೂ ಚಾಮುಂಡೇಶ್ವರಿ ದರ್ಶನಕ್ಕೆ ಚಾಮುಂಡಿ ಬೆಟ್ಟಕ್ಕೆ ಜನಸಾಗರವೇ ಹರಿದು ಬಂದಿದೆ. ದೀಪಾವಳಿ ಹಬ್ಬದ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಆಷಾಢ ಶುಕ್ರವಾರವನ್ನೂ ಮೀರಿಸಿದ ಭಕ್ತ ಸಾಗರವೇ ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಿದೆ. ಸುಮಾರು 3 ಕಿಲೋ ಮೀಟರ್ ಗೂ ಉದ್ದಕ್ಕೆ ವಾಹನಗಳ ಸಾಲು ಜಮಾಯಿಸಿದ್ದು ವಾಹನ ದಟ್ಟಣೆಯನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಹಲವು ಗಂಟೆಗಳ ಕಾಲ ಸರದಿ ಸಾಲಲ್ಲಿ ನಿಂತು ಭಕ್ತರು ದೇವಿ ದರ್ಶನ ಪಡೆಯುತ್ತಿದ್ದಾರೆ.

     

  • ಚಾಮುಂಡಿ ಬೆಟ್ಟದಲ್ಲಿ ಮಹಾರಥೋತ್ಸವ- ರಥ ಎಳೆದ ಮಹಾರಾಜ ಯದುವೀರ್

    ಚಾಮುಂಡಿ ಬೆಟ್ಟದಲ್ಲಿ ಮಹಾರಥೋತ್ಸವ- ರಥ ಎಳೆದ ಮಹಾರಾಜ ಯದುವೀರ್

    ಮೈಸೂರು: ಚಾಮುಂಡಿಬೆಟ್ಟದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ದೇವಿಯ ಮಹಾರಥೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಇಂದು ಮುಂಜಾನೆಯೇ ಬೆಟ್ಟಕ್ಕೆ ಆಗಮಿಸಿ ತಾಯಿಗೆ ಪೂಜೆ ಸಲ್ಲಿಸಿ ಯದುವಂಶದ ರಾಜ ಯದುವೀರ್ ದೇವಿಯ ರಥವನ್ನು ಎಳೆಯುವ ಮೂಲಕ ಚಾಲನೆ ನೀಡಿದರು.

    ರಥೋತ್ಸವ ಬಳಿಕ ಮಾತನಾಡಿದ ರಾಜಮಾತೆ ಪ್ರಮೋದಾ ದೇವಿ, ಸುಸೂತ್ರವಾಗಿ ದಸರಾ ಆಚರಣೆ ನಂತರ ಚಾಮುಂಡಿಗೆ ಪೂಜೆ ಸಲ್ಲಿಸುವ ಸಲುವಾಗಿ ನಡೆಯುವ ರಥೋತ್ಸವ ಇದಾಗಿದೆ. ಈ ಬಾರಿ ದಸರಾ ಉತ್ಸವ ಯಾವುದೇ ಅಡ್ಡಿ ಆತಂಕಗಳಿಲ್ಲದೆ ನೆರವೇರಿದೆ. ಸಂಪ್ರದಾಯದಂತೆ ಇಂದು ಮಹಾರಥೋತ್ಸವಕ್ಕೆ ಚಾಲನೆ ನೀಡಿದ್ದೇವೆ. ಬೆಟ್ಟದಲ್ಲಿ ದೀಪೋತ್ಸವ ನಡೆದ ಮೇಲೆ ನಮ್ಮ ದಸರಾ ಸಮಾಪ್ತಿಯಾಗಲಿದೆ ಎಂದು ಹೇಳಿದರು.

    ಇನ್ನು ಈ ಬಾರಿ ದಸರಾಗೆ ಸಂಬಂಧಪಟ್ಟ ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿವೆ. ಹೀಗಾಗಿ ಚಾಮುಂಡಿಗೆ ಪೂಜೆ ಸಲ್ಲಿಸಿದ್ದೇವೆ. ತಾಯಿ ಚಾಮುಂಡಿ ಆಶೀರ್ವಾದ ಪಡೆಯಲು ಸಾವಿರಾರು ಭಕ್ತರು ರಥೋತ್ಸವದಲ್ಲಿ ಭಾಗಿಯಾಗುತ್ತಾರೆ. ಈ ಪೂಜೆಯ ಮೂಲಕ ರಾಜ್ಯದಲ್ಲಿ ಮಳೆ ಬೆಳೆಯಾಗಿ ರಾಜ್ಯದ ಜನರು ಉತ್ತಮವಾದ ಜೀವನ ನಡೆಸಲಿ ಎಂದರು.

    ಇನ್ನು ರಾಣಿ ತ್ರಿಷಿಕಾ ಸೀಮಂತ ಕಾರ್ಯದ ಬಗ್ಗೆ ಮಾತನಾಡಿದ ಪ್ರಮೋದಾ ದೇವಿ, ಸೀಮಂತ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ರಾಜಮನೆತದ ಸೀಮಂತ ಕಾರ್ಯದ ಬಗ್ಗೆ ಒಂದಷ್ಟು ಜನರು ತಪ್ಪಾಗಿ ಗ್ರಹಿಸಿಕೊಂಡಿದ್ದಾರೆ. ಸಂಪ್ರದಾಯಗಳ ಪ್ರಕಾರ ನಮ್ಮ ಮನೆಗಳಲ್ಲಿ ಸಾಮಾನ್ಯವಾಗಿ ಸೀಮಂತ ಕಾರ್ಯಕ್ರಮ ನಡೆಯುವುದಿಲ್ಲ. ಅದು ತೀರಾ ಖಾಸಗಿಯಾಗಿರುವುದರಿಂದ ಇಲ್ಲಿ ಆ ಬಗ್ಗೆ ಚರ್ಚೆ ಬೇಡ ಎಂದರು.

    ಬಳಿಕ ಮಾತನಾಡಿದ ರಾಜ ಯದುವೀರ್, ಈ ಬಾರಿ ದಸರಾ ಯಶಸ್ವಿಯಾಗಿ ಆಚರಣೆ ಮಾಡಲಾಗಿದ್ದು, ಎಲ್ಲಾ ಕಾರ್ಯಕ್ರಮಗಳು ಕೂಡ ಸಮಯಕ್ಕೆ ಸರಿಯಾಗಿ ನೇರವೇರಿವೆ. ಯಾವುದೇ ಅಡಚಣೆಗಳಿಲ್ಲದೇ ನೆರವೇರಿದೆ. ವಿಶ್ವವಿಖ್ಯಾತ ದಸರಾ ಸುಸೂತ್ರವಾಗಿ ನೆರವೇರಿದ್ದು ನಮಗೆ ಸಂತೋಷ ತಂದಿದೆ. ದಸರಾ ಬಳಿಕ ಚಾಮುಂಡಿ ಬೆಟ್ಟದಲ್ಲಿರುವ ದೇವಿಗೆ ರಥೋತ್ಸವದ ಮೂಲಕ ಗೌರವ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ರಥೋತ್ಸವಕ್ಕೆ ಚಾಲನೆ ನೀಡಿದ್ದೇವೆ ಎಂದರು.

    ಇನ್ನು ರಥೋತ್ಸವದಲ್ಲಿ ಭಾಗಿಯಾಗಿದ್ದ ಸಾವಿರಾರು ಭಕ್ತರು ರಥ ಚಲಿಸುತ್ತಿದ್ದಂತೆ ಹರ್ಷೋದ್ಗಾರದಿಂದ ಜೈಕಾರ ಹಾಕಿ ಸಂಭ್ರಮಿಸಿದರು. ಜೊತೆಗೆ ರಥ ದೇವಾಲಯದ ಸುತ್ತಾ ಒಂದು ಸುತ್ತು ಹಾಕಿತು. ಇದೇ ವೇಳೆ ರಥೋತ್ಸವ ಆರಂಭವಾಗುತ್ತಿದ್ದಂತೆ ಪೊಲೀಸರು 21 ಸುತ್ತು ಕುಶಾಲತೋಪು ಸಿಡಿಸಿ ಚಾಮುಂಡೇಶ್ವರಿಗೆ ಗೌರವ ಸಲ್ಲಿಸಿದರು.

  • ವಿಡಿಯೋ: ಚಾಮುಂಡಿಬೆಟ್ಟದಲ್ಲಿ ಭಕ್ತೆಯ ಮೇಲೆ ಏಕಾಏಕಿ ಎರಗಿದ ಮಂಗಗಳು

    ವಿಡಿಯೋ: ಚಾಮುಂಡಿಬೆಟ್ಟದಲ್ಲಿ ಭಕ್ತೆಯ ಮೇಲೆ ಏಕಾಏಕಿ ಎರಗಿದ ಮಂಗಗಳು

    ಮೈಸೂರು: ನಾಡ ಅಧಿದೇವತೆ ಚಾಮುಂಡಿಬೆಟ್ಟದಲ್ಲಿ ಬೆಟ್ಟಕ್ಕೆ ಬಂದಿದ್ದ ಭಕ್ತೆಯ ಮೇಲೆ ಮಂಗಗಳು ಏಕಾಏಕಿ ಎರಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಎರಡು ಮಂಗಗಳು ಮಹಿಳೆ ಮೇಲೆ ಹಲವಾರು ಬಾರಿ ಎರಗಿ ಮೈ ಪರಚಿವೆ. ಹೀಗಾಗಿ ಎಷ್ಟೇ ಕಿರುಚಿಕೊಂಡರು ಮಂಗಗಳು ಎರಗುವುದನ್ನು ಬಿಡಲಿಲ್ಲ. ಕಂಗಾಲಾಗಿ ಮಂಗಗಳಿಂದ ತಪ್ಪಿಸಿಕೊಳ್ಳಲು ಪರದಾಡುತ್ತಿದ್ದ ವೇಳೆ ಅಲ್ಲಿಯೇ ಇದ್ದ ಯುವಕನೊಬ್ಬ ಆಗಮಿಸಿ ಮಂಗಗಳನ್ನು ಓಡಿಸಿದ್ದಾರೆ.

    ಈ ದೃಶ್ಯಗಳನ್ನು ಅಲ್ಲೆ ಬೆಟ್ಟಕ್ಕೆ ಬಂದಿದ್ದ ಭಕ್ತರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

     

    https://youtu.be/DlKyhPAUC2s