Tag: ಚಾಮುಂಡೇಶ್ವರಿ ಬೆಟ್ಟ

  • ಮೈಸೂರಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ – ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಸಾಗರ

    ಮೈಸೂರಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ – ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಸಾಗರ

    – ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ

    ಮೈಸೂರು: ನಗರದಲ್ಲಿ ಆಷಾಢ ಶುಕ್ರವಾರ (Ashada Shukravara) ಸಂಭ್ರಮ ಮನೆ ಮಾಡಿದೆ. ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ (Chamundeshwari Hills) ಅಪಾರ ಸಂಖ್ಯೆಯಲ್ಲಿ ಭಕ್ತಸಾಗರ ಹರಿದುಬಂದಿದೆ.

    ಚಾಮುಂಡೇಶ್ವರಿಗೆ ಲಕ್ಷ್ಮಿ ಅಲಂಕಾರ ಮಾಡಲಾಗಿದೆ. ದೇವಾಲಯವನ್ನ ವಿಶೇಷ ಹೂಗಳಿಂದ ಅಲಂಕರಿಸಲಾಗಿದೆ. ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆದರು. ಇದನ್ನೂ ಓದಿ: ಘಟಪ್ರಭಾ ತಟದಲ್ಲಿ ಪ್ರವಾಹ ಭೀತಿ – ಮುಧೋಳ ತಾಲೂಕಿನ ಸೇತುವೆ ಜಲಾವೃತ ಸಾಧ್ಯತೆ

    ಈ ಬಾರಿ 300 ರೂ., 2000 ರೂ. ಟಿಕೆಟ್ ಹಾಗೂ ಧರ್ಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 2000 ರೂ. ಟಿಕೆಟ್‌ಗೆ ಪ್ರಸಾದ ಕಿಟ್ ಸಹ ನೀಡಲಾಗುವುದು. ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ನಿರ್ಬಂಧ ಆಗಿದೆ.

    ಲಲಿತ್ ಮಹಲ್ ಹೆಲಿಪ್ಯಾಡ್‌ನಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಮೆಟ್ಟಿಲು ಮೂಲಕ ಬರುವ ಭಕ್ತರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಬರುವ ನಿರೀಕ್ಷೆ ಇದೆ. ಇದನ್ನೂ ಓದಿ: 1 ಲಕ್ಷ ಕ್ಯೂಸೆಕ್‌ ಒಳ ಹರಿವು – ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ

    ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಹಾಗೂ ಪುತ್ರ ಸೂರಜ್‌ ರೇವಣ್ಣ ಅವರು ಸಹ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ.

  • ಟಿಕೆಟ್ ವಂಚಿತ ಶಾಸಕ ರಾಮದಾಸ್‌ರನ್ನು ತಬ್ಬಿ ಬೆನ್ನು ತಟ್ಟಿದ ಅಮಿತ್ ಶಾ

    ಟಿಕೆಟ್ ವಂಚಿತ ಶಾಸಕ ರಾಮದಾಸ್‌ರನ್ನು ತಬ್ಬಿ ಬೆನ್ನು ತಟ್ಟಿದ ಅಮಿತ್ ಶಾ

    ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಚಾರ ಕಾರ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮೈಸೂರಿಗೆ (Mysuru) ಆಗಮಿಸಿದ್ದಾರೆ. ಈ ವೇಳೆ ಕೃಷ್ಣರಾಜೇಂದ್ರ ಕ್ಷೇತ್ರದ ಟಿಕೆಟ್ ವಂಚಿತರಾಗಿರುವ ಎಸ್‌ಎ ರಾಮದಾಸ್ (SA Ramadas) ಅವರನ್ನು ಅಮಿತ್ ಶಾ ಬಾಚಿ ತಬ್ಬಿ, ಬೆನ್ನು ತಟ್ಟಿದ್ದಾರೆ.

     

    ಅಮಿತ್ ಶಾ ಆಗಮಿಸುತ್ತಲೇ ಅವರ ಕಾಲಿಗೆ ನಮಸ್ಕರಿಸಿ ರಾಮದಾಸ್ ಸ್ವಾಗತಿಸಿದರು. ಈ ವೇಳೆ ಅಮಿತ್ ಶಾ ಅವರನ್ನು ಬಾಚಿ ತಬ್ಬಿ, ಬೆನ್ನು ತಟ್ಟಿದ್ದಾರೆ. ಈ ಬಗ್ಗೆ ತಿಳಿಸಿರುವ ರಾಮದಾಸ್, ನಾನು ಆರೋಗ್ಯದ ಸಮಸ್ಯೆಯ ಹಿನ್ನೆಲೆ ಆಸ್ಪತ್ರೆಯಲ್ಲಿದ್ದೆ. ರಾಷ್ಟ್ರೀಯ ನಾಯಕರು ಬಂದಾಗ ನಾನು ಸ್ವಾಗತ ಕೋರುವುದು ನನ್ನ ಜವಾಬ್ದಾರಿ. ಏರ್‌ಪೋರ್ಟ್‌ನಲ್ಲಿ ಇಳಿದಾಗ ಅಮಿತ್ ಶಾ ಅವರು ಬಹಳ ಆತ್ಮೀಯವಾಗಿ ಅಪ್ಪುಗೆ ನೀಡಿ ಮಾತನಾಡಿಸಿದರು. ರಾಮದಾಸ್ ಜಿ ಬಹುತ್ ಅಚ್ಚಾ ನಿರ್ಲಿಯಾ ಅಂತಾ ತಬ್ಬಿ ನಗು ಸೂಸಿದರು. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ರಾಮದಾಸ್ ಸಂತಸ ವ್ಯಕ್ತಪಡಿಸಿದರು.

    ನಾನು ಯಾವತ್ತೂ ಭರವಸೆ ಬೇಕು ಎಂದು ಕೇಳಿದವನಲ್ಲ. ಇದು ಇವತ್ತಿನ ಸಂಬಂಧ ಅಲ್ಲ. 25 ವರ್ಷ ಹಳೆಯ ಸಂಬಂಧ. ಅದನ್ನು ಮಾತಿನಲ್ಲಿ ಹೇಳುವ ಅವಶ್ಯಕತೆ ಇಲ್ಲ. ಅವರು ನನ್ನ ನಿರ್ಣಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನನಗೆ ಅಷ್ಟೇ ಸಾಕು. ನಾನು ಕೂಡ ಇಷ್ಟು ಆತ್ಮೀಯತೆಯನ್ನು ನಿರೀಕ್ಷೆ ಮಾಡಿರಲಿಲ್ಲ. ಮೋದಿಯವರು ಬೆನ್ನು ತಟ್ಟಿದಾಗಲೂ ನಾನು ನಿರೀಕ್ಷೆ ಮಾಡಿರಲಿಲ್ಲ. ಮೋದಿಯವರು ಆತ್ಮೀಯವಾಗಿ ಮಾತನಾಡಿಸಿದಾಗಲೂ ಕೂಡ ನಮ್ಮ 25 ವರ್ಷದ ಸಂಬಂಧವನ್ನು ಎಲ್ಲೂ ಹೊರಗೆ ಬಾರದಂತೆ ನೋಡಿಕೊಂಡಿದ್ದೆ. ಇಂದು ನನ್ನ ನಿರ್ಧಾರಕ್ಕೆ ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.

    ಟಿಕೆಟ್ ಕೈ ತಪ್ಪಿದ ವೇಳೆ ನನ್ನ ಮುಂದೆ 2 ಆಯ್ಕೆಗಳಿತ್ತು. ಸ್ವಾತಂತ್ರವಾಗಿ ನಿಂತು ಗೆಲ್ಲುವ ಅವಕಾಶ ಇದ್ದ ಸಂದರ್ಭದಲ್ಲಿ ನಾನು ಎಂಎಲ್‌ಎ ಆಗಬೇಕಾ? ಅಥವಾ ವಿಶ್ವಾನಾಯಕರ ಸಂಬಂಧ ಉಳಿಸಿಕೊಳ್ಳಬೇಕ? ಎಂಬ ಆಯ್ಕೆಗಳಿತ್ತು. ಕೇವಲ ಎಂಎಲ್‌ಎಗಾಗಿ ಆ ಬಾಂಧವ್ಯ ಕಳೆದುಕೊಳ್ಳೋದು ಬೇಡ ಎಂದು ನಾನು ಕಾರ್ಯಕರ್ತರ ಮನವೊಲಿಸಿ ಉಳಿಯುವ ಕೆಲಸ ಮಾಡಿದ್ದೇನೆ. ನನಗೆ ಟಿಕೆಟ್ ಯಾಕೆ ಕೈ ತಪ್ಪಿದೆ ಎನ್ನುವುದು ಈಗಲೂ ಗೊತ್ತಿಲ್ಲ. ಇದು ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ ಎಂದು ರಾಮದಾಸ್ ವಿಷಾದ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿಯಿಂದ ಜನರ ಭಾವನೆ ಕೆರಳಿಸುವ ಯತ್ನ: ಸಿದ್ದು ಪರ ಬ್ಯಾಟ್ ಬೀಸಿದ ಸವದಿ

    ಅಮಿತ್ ಶಾ ಸೋಮವಾರ ಮೈಸೂರು ಏರ್‌ಪೋರ್ಟ್‌ನಿಂದ ನೇರವಾಗಿ ರಸ್ತೆ ಮೂಲಕ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ಅರ್ಧ ಗಂಟೆಗಳ ಕಾಲ ಚಾಮುಂಡಿ ಬೆಟ್ಟದಲ್ಲಿ ಮಹಾಮಂಗಳಾರತಿ ಸೇರಿದಂತೆ ದೇವಿಯ ಪೂಜೆಯಲ್ಲಿ ಭಾಗಿಯಾದರು. ಅಮಿತ್ ಶಾಗೆ ರಾಮದಾಸ್ ಹಾಗೂ ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದರು.

    ಕೆಆರ್ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಬಳಿಕ ರಾಮದಾಸ್ ಫುಲ್ ಸೈಲೆಂಟ್ ಆಗಿದ್ದರು. ಶ್ರೀವತ್ಸ ಪರವಾಗಿ ನಾಮಪತ್ರ ಸಲ್ಲಿಕೆ ವೇಳೆ ಭಾಗಿಯಾಗಿ ಬಳಿಕ ತಣ್ಣಗಾಗಿದ್ದ ರಾಮದಾಸ್ 2 ದಿನದ ಹಿಂದೆ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಕೆಆರ್ ಕ್ಷೇತ್ರದ ಕಾರ್ಯಕರ್ತರ ಸಭೆಗೂ ಗೈರಾಗಿದ್ದರು. ಬಳಿಕ ಪಕ್ಷದ ಪ್ರಚಾರ ಕಾರ್ಯದಲ್ಲೂ ಹೆಚ್ಚಾಗಿ ರಾಮದಾಸ್ ಕಾಣಿಸಿಕೊಂಡಿರಲಿಲ್ಲ. ಇದೀಗ ಅಮಿತ್ ಶಾ ಮೈಸೂರಿಗೆ ಬಂದಿರುವ ಹಿನ್ನೆಲೆ ಅವರು ಖುದ್ದು ಹಾಜರಾಗಿ ಏರ್‌ಪೋರ್ಟ್ನಲ್ಲೇ ಶಾ ಅವರನ್ನು ಬರಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಈ ಸಲ ಕಪ್ ನಮ್ದೆ: ಶೆಟ್ಟರ್‌ಗೆ ಪ್ರಹ್ಲಾದ್ ಜೋಶಿ ಟಾಂಗ್

  • ರೈತನ ಮಗಳನ್ನು ಗುರುತಿಸಿ ಪ್ರಧಾನಿ ಮೋದಿ ಕೃಷಿ ಖಾತೆ ನೀಡಿದ್ದಾರೆ: ಶೋಭಾ ಕರಂದ್ಲಾಜೆ

    ರೈತನ ಮಗಳನ್ನು ಗುರುತಿಸಿ ಪ್ರಧಾನಿ ಮೋದಿ ಕೃಷಿ ಖಾತೆ ನೀಡಿದ್ದಾರೆ: ಶೋಭಾ ಕರಂದ್ಲಾಜೆ

    – ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಿದ ಕೇಂದ್ರ ಸಚಿವೆ

    ಮೈಸೂರು: ಪ್ರಧಾನಿ ಮೋದಿ ದೇಶದ ರೈತನ ಮಗಳನ್ನು ಗುರುತಿಸಿ ಕೃಷಿ ಖಾತೆ ನೀಡಿದ್ದಾರೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

    ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಶೋಭಾ ಕರಂದ್ಲಾಜೆ, ಚಾಮುಂಡಿ ತಾಯಿ ದರ್ಶನ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಹಳ್ಳಿಯಲ್ಲಿ ನಾನು ಓದುವಾಗ ವಿದ್ಯುತ್, ರಸ್ತೆ ಇರಲಿಲ್ಲ. ಅಂತಹ ಹಳ್ಳಿಯಿಂದ ಬಂದವಳಿಗೆ ಕೃಷಿ ಖಾತೆ ಕೊಟ್ಟು ಕೆಲಸ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ. ನಾವು ದೇಶದ ಶೇಕಡ 80ರಷ್ಟು ರೈತರ ಹಿತ ಕಾಯಬೇಕಿದೆ. ರೈತರು ಬೇರೆ ಕೆಲಸಗಳಿಗೆ ಹೋಗದೆ ಕೃಷಿಯಲ್ಲೇ ಉಳಿಯುವಂತೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆಯಿಂದ ಕಾರ್ಯಯೋಜನೆ ರೂಪಿಸುತ್ತೇನೆ ಎಂದು ತಿಳಿಸಿದರು.

    ನಾನು ಪ್ರತಿ ವರ್ಷ ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟದ ಮೆಟ್ಟಿಲುಗಳನ್ನು ಹತ್ತುತ್ತಿದ್ದೆ. ಈ ವರ್ಷ ಸಚಿವರೆಲ್ಲ ದೆಹಲಿಯಲ್ಲೇ ಇರಬೇಕು ಎಂಬ ಆದೇಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಆಷಾಢಕ್ಕೆ ಬರಲು ಸಾಧ್ಯ ಆಗಿರಲಿಲ್ಲ. ಮುಂದೆ ನವರಾತ್ರಿಗೆ ಬಂದು ಮೆಟ್ಟಿಲು ಹತ್ತುತ್ತೇನೆ. ತಾಯಿ ಚಾಮುಂಡೇಶ್ವರಿ ನನಗೆ ಎಲ್ಲ ಬಗೆಯ ಶಕ್ತಿ ತುಂಬಿದ್ದಾಳೆ. ನಾನು ಮೊದಲು ಮೈಸೂರಿಗೆ ಬಂದಾಗ ದಸರಾ ಆಚರಣೆ ಮಾಡೋದು ಗೊತ್ತಿಲ್ಲ ಎಲ್ಲರೂ ಗೇಲಿ ಮಾಡಿದ್ದರು. ಆದರೆ ತಾಯಿ ಕೃಪೆಯಿಂದ ಅದನ್ನು ಮಾಡಿ ತೋರಿಸಿದ್ದೇನೆ ಎಂದರು.

  • ರಥೋತ್ಸವಕ್ಕೂ ಕೋವಿಡ್ ಕರಿನೆರಳು – ದೊಡ್ಡ ರಥದ ಬದಲು ಚಿಕ್ಕ ತೇರಿನಲ್ಲಿ ಮೆರವಣಿಗೆ

    ರಥೋತ್ಸವಕ್ಕೂ ಕೋವಿಡ್ ಕರಿನೆರಳು – ದೊಡ್ಡ ರಥದ ಬದಲು ಚಿಕ್ಕ ತೇರಿನಲ್ಲಿ ಮೆರವಣಿಗೆ

    ಮೈಸೂರು: ಚಾಮುಂಡೇಶ್ವರಿ ರಥೋತ್ಸವಕ್ಕೂ ಕೋವಿಡ್ ಕರಿನೆರಳು ಬಿದ್ದಿದೆ. ದೊಡ್ಡ ರಥದ ಬದಲು ಚಿಕ್ಕ ತೇರಿನಲ್ಲಿ ಮೆರವಣಿಗೆ ಸಾಗಿದೆ. ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‍ರಿಂದ ರಥ ಎಳೆದು ಚಾಲನೆ ನೀಡಿದ್ದು, ಚಾಮುಂಡೇಶ್ವರಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಗಿದೆ.

    ದಸರಾ ಮುಗಿದ ಬಳಿಕ ಮಹಾರಾಜರು ಜಾತ್ರೆ ಆಯೋಜನೆ ಮೂಲಕ ಭಕ್ತರಿಗೆ ಚಾಮುಂಡಿ ದರ್ಶನದ ವ್ಯವಸ್ಥೆ ಮಾಡಿದ್ದರು. ಇತಿಹಾಸದಲ್ಲೇ ಮೊದಲ ಬಾರಿಗೆ ಜನರಿಲ್ಲದ ಜಾತ್ರೆ ಇದಾಗಿದೆ. ರಥೋತ್ಸವದ ಸಂಭ್ರಮ, ಸಡಗರವನ್ನು ಮಹಾಮಾರಿ ಕಸಿದುಕೊಂಡಿದೆ. ದೊಡ್ಡ ರಥ ಶೆಡ್‍ನಲ್ಲೇ ಉಳಿದಿದ್ದು, ಚಿಕ್ಕ ತೇರಿಗೆ ಸಿಂಪಲ್ ಹೂವಿನ ಅಲಂಕಾರ ಮಾಡಲಾಗಿದೆ.

    ಇದೇ ವೇಳೆ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯದುವೀರ್, ಜಗತ್ತಿಗೆ ಕಾಡುತ್ತಿರುವ ಕೊರೊನಾ ನಿವಾರಣೆ ಆಗಲಿ. ನಾಡಿಗೆ ಹಾಗೂ ಜನತೆಗೆ ಶುಭವಾಗಲಿ ಎಂದು ಪ್ರಾರ್ಥನೆ ಮಾಡಿದ್ದೇವೆ. ದಸರಾ ನಂತರ ಚಾಮುಂಡಿ ರಥೋತ್ಸವ ಮಾಡಿದ್ದೇವೆ. ಅರಮನೆ ಸಂಪ್ರದಾಯದಂತೆ ರಥೋತ್ಸವ ನೆರವೇರಿದೆ. ಈ ಕಷ್ಟದ ಸಮಯದಲ್ಲಿ ರಥೋತ್ಸವವನ್ನು ಸರಳವಾಗಿ ಮಾಡಿದ್ದೇವೆ ಎಂದರು.

    ಪ್ರಧಾನ ಅರ್ಚಕ ಡಾ.ಶಶಿಶೇಖರ್ ದಿಕ್ಷೀತ್ ಮಾತನಾಡಿ, ಸಾಂಪ್ರದಾಯಿಕವಾಗಿ ಚಾಮುಂಡೇಶ್ವರಿ ರಥೋತ್ಸವ ನೆರವೇರಿದೆ. ಸಾಂಪ್ರದಾಯಕ್ಕೆ ಧಕ್ಕೆ ಬಾರದಂತೆ ರಥೋತ್ಸವ ನಡೆಸಿದ್ದೇವೆ. ಈ ಬಾರಿ ತೆಪ್ಪೋತ್ಸವ ಇರೋದಿಲ್ಲ. ರಾಜ್ಯದ ಎಲ್ಲಿಯೂ ರಥೋತ್ಸವ ನಡೆದಿಲ್ಲ. ನಮ್ಮಲ್ಲಿ ಸರಳವಾಗಿ ರಥೋತ್ಸವ ನಡೆಯಲು ಅವಕಾಶ ನೀಡಲಾಗಿದೆ. ಜಿಲ್ಲಾಡಳಿತ ಸಹಕಾರಕ್ಕೆ ನಾವು ಧನ್ಯವಾದ ಹೇಳುತ್ತೇವೆ. ಈ ಬಾರಿ ತೆಪ್ಪೋತ್ಸವ ಇರೋದಿಲ್ಲ. ಹೀಗಾಗಿ ಭಕ್ತರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.

    ರಥೋತ್ಸವದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್ ಹಾಗೂ ಎಲ್.ನಾಗೇಂದ್ರ ಭಾಗಿಯಾಗಿದ್ದರು.