Tag: ಚಾರ್ಜಿಂಗ್

  • ಮೊಬೈಲ್ ಚಾರ್ಜ್‍ಗಿಟ್ಟು ಮಾತು- ಮಹಿಳೆ ಸಾವು

    ಮೊಬೈಲ್ ಚಾರ್ಜ್‍ಗಿಟ್ಟು ಮಾತು- ಮಹಿಳೆ ಸಾವು

    ಚೆನ್ನೈ: ಚಾರ್ಜ್‍ಗೆ ಇಟ್ಟು ಮೊಬೈಲ್‍ನಲ್ಲಿ (Mobile) ಮಾತನಾಡುತ್ತಿದ್ದ ಸಂದರ್ಭದಲ್ಲಿ ಸ್ಫೋಟಗೊಂಡು ಮಹಿಳೆ ಪ್ರಾಣಬಿಟ್ಟ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ (Tamilnadu) ನಡೆದಿದೆ.

    ಕೊಕಿಲಾಂಪಾಲ್ (33) ಮೃತ ಮಹಿಳೆ. ತಂಜಾವೂರು ಜಿಲ್ಲೆಯ ಪಾಪನಾಶಂ ಬಳಿಯಿರುವ ವಿಶಿಷ್ಟರಾಜಪುರಂ ಮೂಲದ ಈಕೆಗೆ ಮದುವೆಯಾಗಿದ್ದು, ಓರ್ವ ಗಂಡು ಮಗನಿದ್ದಾನೆ. ಪತಿ ಪ್ರಭಾಕರನ್ ಅನಾರೋಗ್ಯ ಕಾರಣದಿಂದ ಕೆಲವು ವರ್ಷಗಳ ಹಿಂದೆಯೇ ಮೃತಪಟ್ಟಿದ್ದಾನೆ.

    ಗಂಡ ಮೃತಪಟ್ಟ ಬಳಿಕ ಕೋಕಿಲಾಂಪಾಲ್ ಜೀವನ ನಡೆಸಲು ಮೇಲಕಾಪಿಸ್ಥಳದಲ್ಲಿ ವಾಚ್ ಮತ್ತು ಸೆಲ್ ಫೋನ್ ರಿಪೇರಿ ಅಂಗಡಿ ನಡೆಸುತ್ತಿದ್ದಳು. ಬುಧವಾರ ಮಧ್ಯಾಹ್ನ ಸೆಲ್ ಫೋನ್ ಚಾರ್ಜ್ ಮಾಡುವಾಗ ಕಿವಿಯಲ್ಲಿ ಹೆಡ್ ಫೋನ್ ಹಾಕಿಕೊಂಡು ಮಾತನಾಡುತ್ತಿದ್ದಳು. ಆಗ ಅನಿರೀಕ್ಷಿತವಾಗಿ ಮೊಬೈಲ್ ಸ್ಫೋಟಗೊಂಡಿದೆ. ಪರಿಣಾಮ ಕೋಕಿಲಾಂಪಲ್ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಅಲ್ಲದೆ ಅಂಗಡಿಯಲ್ಲಿದ್ದ ಸಾಮಗ್ರಿಗಳು ಕೂಡ ಬೆಂಕಿಗೆ ಆಹುತಿಯಾಗಿವೆ. ಇದನ್ನೂ ಓದಿ: ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ

    ಸದ್ಯ ಈ ಸಂಬಂಧ ಕೋಕಿಲಂಪಾಲ್ ತಂದೆ ಕಪಿಸ್ತಲಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಲೆಕ್ಟ್ರಿಕ್ ರಿಕ್ಷಾ ಚಾರ್ಜಿಂಗ್ ವೇಳೆ ವಿದ್ಯುತ್ ಶಾಕ್ – ವ್ಯಕ್ತಿ ಸಾವು

    ಎಲೆಕ್ಟ್ರಿಕ್ ರಿಕ್ಷಾ ಚಾರ್ಜಿಂಗ್ ವೇಳೆ ವಿದ್ಯುತ್ ಶಾಕ್ – ವ್ಯಕ್ತಿ ಸಾವು

    ನವದೆಹಲಿ: ಎಲೆಕ್ಟ್ರಿಕ್ ರಿಕ್ಷಾವನ್ನು ಚಾರ್ಜ್ ಮಾಡುವ ವೇಳೆ 34 ವರ್ಷದ ಮೆಕ್ಯಾನಿಕ್ ವಿದ್ಯುತ್ ಶಾಕ್‍ನಿಂದ ಸಾವನ್ನಪ್ಪಿರುವ ಘಟನೆ ದೆಹಲಿಯ ನಿಹಾಲ್ ವಿಹಾರ್‌ನಲ್ಲಿ ನಡೆದಿದೆ.

    ಮೃತ ವ್ಯಕ್ತಿಯನ್ನು ವಿಕಾಸ್ ಪುರಿಯ ಇಂದಿರಾ ಕ್ಯಾಂಪ್ ನಿವಾಸಿ ಧರ್ಮೇಂದರ್ ಎಂದು ಗುರುತಿಸಲಾಗಿದ್ದು, ಇವರು ಗ್ಯಾರೇಜ್‍ನಲ್ಲಿ ಇ-ರಿಕ್ಷಾವನ್ನು ಚಾರ್ಜಿಂಗ್ ಮಾಡುವ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಕೈದಿಗಳಿಂದ ಮೊಬೈಲ್ ಬಳಕೆ – ಟೈಲ್ಸ್, ಗೋಡೆ ಕೊರೆದು ಬಚ್ಚಿಟ್ಟಿದ್ದ 19 ಫೋನ್ ವಶಕ್ಕೆ

    crime

    ಧರಾಮೇಂದರ್ ಅವರು ಇ-ರಿಕ್ಷಾವನ್ನು ಚಾರ್ಜ್ ಮಾಡುವ ವೇಳೆ ವಿದ್ಯುತ್ ಶಾಕ್ ತಗುಲಿದೆ. ನಂತರ ತಕ್ಷಣ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 20 ಲಕ್ಷ ರೂ. ಸಾಲ ತೀರಿಸ್ಲಿಲ್ಲ ಅಂತ ಉದ್ಯಮಿಯನ್ನು ಕಿಡ್ನ್ಯಾಪ್ ಮಾಡಿ ಹೊಡೆದ್ರು

    ಇದೀಗ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಪೊಲೀಸರು ಗ್ಯಾರೇಜ್ ಆವರಣವನ್ನು ಸೀಲ್ ಮಾಡಿದ್ದಾರೆ. ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವ್ಯಕ್ತಿ ಮೃತದೇಹವನ್ನು ಅವರ ತಂದೆಗೆ ಹಸ್ತಾಂತರಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಅಂತಿಮ ವರದಿಗಾಗಿ ಸದ್ಯ ಕಾಯಲಾಗುತ್ತಿದೆ. ಈ ನಡುವೆ ಪೊಲೀಸರು ಎಫ್‍ಐಆರ್ ಪ್ರತಿಯನ್ನು ಮೃತರ ಸಂಬಂಧಿಕರಿಗೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಾರ್ಜಿಂಗ್ ವೇಳೆ ಬೆಂಕಿ ಹೊತ್ತಿಕೊಂಡ 7 ಎಲೆಕ್ಟ್ರಿಕಲ್ ಬೈಕ್

    ಚಾರ್ಜಿಂಗ್ ವೇಳೆ ಬೆಂಕಿ ಹೊತ್ತಿಕೊಂಡ 7 ಎಲೆಕ್ಟ್ರಿಕಲ್ ಬೈಕ್

    ಮುಂಬೈ: ಶೋರೂಮ್‍ನಲ್ಲಿ ಎಲೆಕ್ಟ್ರಿಕಲ್ ಬೈಕ್‍ಗಳನ್ನು ಚಾರ್ಚಿಂಗ್ ಮಾಡುತ್ತಿದ್ದ ವೇಳೆ ಔಟ್‍ಲೆಟ್‍ನಲ್ಲಿ ಬೆಂಕಿ ಕಾಣಿಸಿಕೊಂಡು 7 ಎಲೆಕ್ಟ್ರಿಕಲ್ ಬೈಕ್‍ಗಳು ಸುಟ್ಟು ಕರಕಲಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

    ಸೋಮವಾರ ಸಂಜೆ ಪುಣೆಯ ಗಂಗಾಧಾಮ್ ಪ್ರದೇಶದ ಬಳಿ ಇರುವ ಇ-ಬೈಕ್ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದನ್ನೂ ಓದಿ: NEET ಪರೀಕ್ಷಾರ್ಥಿಗಳಿಗೆ ಒಳಉಡುಪು ತೆಗೆಯಲು ಒತ್ತಾಯ- ತನಿಖೆ ಆರಂಭಿಸಿದ ಪೊಲೀಸರು

    ಈ ಬಗ್ಗೆ ಮಾತನಾಡಿದ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು, ಬೈಕ್‍ಗಳಿಗೆ ಪ್ಲಗ್ ಹಾಕಿ ಚಾರ್ಚಿಂಗ್ ಮಾಡುವ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿ ಬೈಕ್‍ಗಳಿಗೆ ಬೆಂಕಿ ಹೊತ್ತಿಕೊಂಡಿರಬಹುದು. ಆದರೆ ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣವೇನು ಎಂಬುವುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತನ್ನ ಪ್ರಾಣ ಅರ್ಪಿಸಲು ಸಿದ್ಧವೆಂದು ಭಯೋತ್ಪಾದನಾ ಗುಂಪಿಗೆ ಬೆಂಬಲ ಸೂಚಿಸಿದ್ದ ವಿದ್ಯಾರ್ಥಿ ಅರೆಸ್ಟ್

    ಈ ಘಟನೆ ಕುರಿತಂತೆ ನಮಗೆ ರಾತ್ರಿ 8 ಗಂಟೆ ಸುಮಾರಿಗೆ ಕರೆ ಬಂದಿದ್ದು, ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ, ಬೆಂಕಿಯನ್ನು ನಂದಿಸಲಾಗಿದೆ ಎಂದು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಮುನ್ನ ಮಾರ್ಚ್‍ನಲ್ಲಿಯೂ ಪುಣೆಯಲ್ಲಿ ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗೆ ಬೆಂಕಿ ಹತ್ತಿಕೊಂಡಿತ್ತು. ಹೀಗಾಗಿ ಓಲಾ ಎಲೆಕ್ಟ್ರಿಕ್ ಕಂಪನಿಯು ಪರಿಶೀಲನೆ ನಡೆಸಲು 1,441 ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಹಿಂಪಡೆದಿತ್ತು.

    Live Tv
    [brid partner=56869869 player=32851 video=960834 autoplay=true]

  • ವಿದ್ಯುತ್ ಚಾಲಿತ ವಾಹನಕ್ಕೆ ಬೆಸ್ಕಾಂನಿಂದ ಚಾರ್ಜಿಂಗ್ ಕೇಂದ್ರ ಸ್ಥಾಪನೆ

    ವಿದ್ಯುತ್ ಚಾಲಿತ ವಾಹನಕ್ಕೆ ಬೆಸ್ಕಾಂನಿಂದ ಚಾರ್ಜಿಂಗ್ ಕೇಂದ್ರ ಸ್ಥಾಪನೆ

    ಬೆಂಗಳೂರು: ಬೆಸ್ಕಾಂ ವತಿಯಿಂದ ವಿದ್ಯುತ್ ಚಾಲಿತ ವಾಹನ ಚಾರ್ಜಿಂಗ್ ಕೇಂದ್ರದ ಸ್ಥಾಪನೆ ಮತ್ತು ಬಳಕೆ ಬಗ್ಗೆ ಒಂದು ದಿನದ ಕಾರ್ಯಗಾರ ಆಯೋಜನೆ ಮಾಡಲಾಯಿತು. ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಚಾಲನೆ ನೀಡಿದರು.

    ಕಾರ್ಯಕ್ರಮದ ಬಗ್ಗೆ ಬೆಸ್ಕಾಂ ಎಂಡಿ ರಾಜೇಂದ್ರ ಚೋಳನ್ ಮಾತನಾಡಿ, ನಗರದಲ್ಲಿ ಈಗಾಗಲೇ ವಿದ್ಯುತ್ ಚಾಲಿತ ವಾಹನಗಳ ಸಂಖ್ಯೆ ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಹಲವು ಕಡೆ ಚಾರ್ಚಿಂಗ್ ಬ್ಯಾಂಕ್ ಗಳನ್ನು ತೆರೆಯಲಾಗಿದೆ. ಅಲ್ಲದೆ ಹೆಚ್ಚುತ್ತಿರುವ ವಿದ್ಯುತ್ ಚಾಲಿತ ವಾಹನಗಳಿಗಾಗಿ ಹೊಸ ಕೇಂದ್ರಗಳನ್ನ ತೆರೆಯುವ ನಿಟ್ಟಿನಲ್ಲಿ ಹಲವು ಮಾಲ್ ಗಳು, ಅಪಾರ್ಟ್ಮೆಂಟ್ ಗಳು, ಪಾರ್ಕಿಂಗ್ ಗಳಲ್ಲಿ ಚಾರ್ಜಿಂಗ್ ಪಾಯಿಂಟ್ ನಿರ್ಮಿಸಲು ಕಾರ್ಯಗಾರದಲ್ಲಿ ಮಾಹಿತಿ ನೀಡಲಾಗಿದೆ ಎಂದರು. ಇದನ್ನೂ ಓದಿ: ವಿದ್ಯುತ್ ಚಾಲಿತ ವಾಹನ ಬಳಕೆ ಮಾಡಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗುತ್ತೆ: ನಾರಾಯಣ ಗೌಡ

    ಬೆಸ್ಕಾಂ ವತಿಯಿಂದ ವಿದ್ಯುತ್ ವಾಲಿತ ವಾಹನ ಚಾರ್ಜಿಂಗ್ ಕೇಂದ್ರದ ಸ್ಥಾಪನೆ ಮತ್ತು ಬಳಕೆ ಬಗ್ಗೆ ಇವತ್ತಿನ ಕಾರ್ಯಗಾರದಲ್ಲಿ ಬೆಸ್ಕಾಂ ಸಿಬ್ಬಂದಿ, ಅಧಿಕಾರಿಗಳು ಸೇರಿದಂತೆ ಮಾಲ್, ಅಪಾರ್ಟ್ಮೆಂಟ್ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿ ಮಾಹಿತಿ ನೀಡಲಾಗಿದೆ ಮುಂದಿನ ದಿನಗಳಲ್ಲಿ ವಿದ್ಯುತ್ ಚಾಲಿತ ಗಾಡಿಗಳ ಚಾರ್ಚಿಂಗ್ ವ್ಯವಸ್ಥೆ ಸುಲಭವಾಗಲಿದೆ ಎಂದು ಮಾಹಿತಿ ಹಂಚಿಕೊಂಡರು.

    ಕಾರ್ಯಕ್ರಮದಲ್ಲಿ ಹಲವು ಹಿರಿಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಇದನ್ನೂ ಓದಿ: ಮೂರು ಗಂಟೆ ರನ್‍ವೇನಲ್ಲೇ ನಿಂತ ವಿಮಾನ- ಪ್ರಯಾಣಿಕರು ಕಂಗಾಲು

  • ಬೇರೆ ಕಂಪನಿ ಚಾರ್ಜರ್‌ನಲ್ಲಿ ಚಾರ್ಚ್ ಮಾಡುವಾಗ ಮೊಬೈಲ್ ಬ್ಲಾಸ್ಟ್

    ಬೇರೆ ಕಂಪನಿ ಚಾರ್ಜರ್‌ನಲ್ಲಿ ಚಾರ್ಚ್ ಮಾಡುವಾಗ ಮೊಬೈಲ್ ಬ್ಲಾಸ್ಟ್

    – ಮನೆಯಲ್ಲಿಯ ಟಿವಿ, ವಾಷಿಂಗ್ ಮಿಷನ್, ಫ್ರಿಜ್ ಬೆಂಕಿಗಾಹುತಿ

    ಆನೇಕಲ್: ಬೇರೆ ಕಂಪನಿಯ ಚಾರ್ಜರ್ ನಲ್ಲಿ ಮೊಬೈಲ್ ಚಾರ್ಜಿಂಗ್ ಹಾಕಿದ್ದ ವೇಳೆ ಸ್ಫೋಟಗೊಂಡ ಘಟನೆ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದಲ್ಲಿ ನಡೆದಿದೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ಬೆಲೆಬಾಳುವ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

    ಪಟ್ಟಣದ ವಿನಾಯಕ ನಗರದ ನಿವಾಸಿ ಚಂದ್ರಶೇಖರ್ ಅವರ ಮನೆಯಲ್ಲಿ ಘಟನೆ ನಡೆದಿದ್ದು, ಸಂಜೆ ಚಂದ್ರಶೇಖರ್ ಅವರ ಮಗ ರೆಡ್ಮಿ ಎಂಐ ಮೊಬೈಲ್ ಅನ್ನು ಚಾರ್ಜಿಂಗ್ ಹಾಕಿ ಶೌಚಾಲಯಕ್ಕೆ ಹೋಗಿ ಬರುವಷ್ಟರಲ್ಲಿ ಮೊಬೈಲ್ ಸ್ಫೋಟಗೊಂಡಿದೆ. ಪರಿಣಾಮ ಕ್ಷಣಾರ್ಧದಲ್ಲಿ ಮನೆಯ ತುಂಬೆಲ್ಲಾ ಬೆಂಕಿ ಆವರಿಸಿಕೊಂಡಿದೆ. ಕೂಡಲೇ ಎಚ್ಚೆತ್ತಾ ಮನೆಯವರು ಹೊರಗೆ ಓಡಿ ಬಂದಿದ್ದು ಬಾರಿ ಅನಾಹುತ ತಪ್ಪಿದೆ.

    ದೊಡ್ಡ ಮಟ್ಟದಲ್ಲಿ ಮನೆಯ ತುಂಬೆಲ್ಲಾ ಆವರಿಸಿಕೊಂಡ ಬೆಂಕಿಯು ಮನೆಯಲ್ಲಿದ್ದ ಬೆಲೆ ಬಾಳುವ ಟಿವಿ, ವಾಷಿಂಗ್ ಮಿಷನ್, ಫ್ರಿಜ್ ಸೇರಿದಂತೆ ಸಾಕಷ್ಟು ವಸ್ತುಗಳು ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಆನೇಕಲ್ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಹೆಡ್‍ಫೋನ್ ಓವರ್ ಹೀಟಾಗಿ ಬಾಲಕ ಸಾವು!

    ಹೆಡ್‍ಫೋನ್ ಓವರ್ ಹೀಟಾಗಿ ಬಾಲಕ ಸಾವು!

    ಕೌಲಾಲಂಪುರ್: ಚಾರ್ಜಿಗೆ ಹಾಕಿದ ಹೆಡ್‍ಫೋನ್ ಓವರ್ ಹೀಟಾಗಿ ಶಾಕ್ ಹೊಡೆದು 16 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಮಲೇಷ್ಯಾದ ರೇಂಬು ಪ್ರದೇಶದಲ್ಲಿ ನಡೆದಿದೆ.

    ಸೋಮವಾರ ರಾತ್ರಿ ವೇಳೆ ಬಾಲಕ ತನ್ನ ರೂಂನಲ್ಲಿ ಬ್ಲೂಟೂತ್ ವಯರ್‌ಲೆಸ್ ಹೆಡ್‍ಫೋನ್‍ನನ್ನು ಚಾರ್ಜಿಗೆ ಹಾಕಿಕೊಂಡು ಬಳಸುತ್ತಿದ್ದ. ಆಗ ಹೆಡ್‍ಫೋನ್ ಓವರ್ ಹೀಟಾದ ಪರಿಣಾಮ ಶಾಕ್ ಹೊಡೆದು ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

    ರಾತ್ರಿ ಸುಮಾರು 12.45 ರ ಹೊತ್ತಿಗೆ ಬಾಲಕ ಮೃತಪಟ್ಟಿದ್ದಾನೆ. ಬೆಳಗ್ಗೆ ತಾಯಿ ಕೆಲಸಕ್ಕೆ ಹೋಗುವಾಗ ಮಗ ನೆಲದ ಮೇಲೆ ಮಲಗಿದ್ದನ್ನು ನೋಡಿ ಆತ ನಿದ್ರೆ ಮಾಡುತ್ತಿದ್ದಾನೆ ಎಂದು ಸುಮ್ಮನಾಗಿದ್ದಾರೆ. ನಂತರ ಮಧ್ಯಾಹ್ನದ ವೇಳೆಗೆ ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸಾಗಿದ್ದಾರೆ. ಈ ವೇಳೆ ಮಗನನ್ನು ಎಬ್ಬಿಸಲು ರೂಂಗೆ ಹೋದಾಗ ಆತ ಮೃತ ಪಟ್ಟಿರುವ ಸಂಗತಿ ತಾಯಿಗೆ ತಿಳಿದಿದೆ.

    ಬಾಲಕನ ದೇಹದ ಮೇಲೆ ಯಾವುದೇ ಸುಟ್ಟ ಗಾಯಗಳಾಗಲಿ, ಗುರುತುಗಳಾಗಲಿ ಆಗಿರಲಿಲ್ಲ. ಆದರೆ ಬಾಲಕನ ಎಡಕಿವಿಯಲ್ಲಿ ರಕ್ತದ ಕಲೆಗಳನ್ನು ಕಂಡು ತಕ್ಷಣ ಪೊಲೀಸರಿಗೆ ತಾಯಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶಿಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ಫಲಿತಾಂಶದಲ್ಲಿ ಬಾಲಕ ಹೆಡ್‍ಫೋನ್ ಓವರ್ ಹೀಟಾದ ಪರಿಣಾಮ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿರುವುದು ಸ್ಪಷ್ಟವಾಗಿದೆ.

    ಈ ಹಿಂದೆ 2018 ರ ಜೂನ್ ತಿಂಗಳಲ್ಲಿ ಮಲೇಷ್ಯಾದಲ್ಲಿ ಚಾರ್ಜಿಗೆ ಹಾಕಿದ್ದ ವೇಳೆ ಓವರ್ ಹೀಟಾದ ಬ್ಲಾಕ್‍ಬೆರ್ರಿ ಹಾಗೂ ಹುವಾವೇ ಸ್ಮಾರ್ಟ್‍ಫೋನ್‍ಗಳು ಬ್ಲಾಸ್ಟ್ ಆಗಿತ್ತು. ಒಡಿಶಾದಲ್ಲಿ ಇದೇ ವರ್ಷ ಮಾರ್ಚ್ ತಿಂಗಳಲ್ಲಿ ಚಾರ್ಜಿಗೆ ಹಾಕಿದ್ದ ನೋಕಿಯಾ 5233 ಫೋನ್ ಸ್ಫೋಟಗೊಂಡು ವ್ಯಕ್ತಿಯೋರ್ವ ತೀವ್ರ ಗಾಯಗೊಂಡಿದ್ದನು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮೊಬೈಲ್ ಸ್ಫೋಟಗೊಂಡು ಸಿಇಒ ಸ್ಥಳದಲ್ಲೇ ಸಾವು!

    ಮೊಬೈಲ್ ಸ್ಫೋಟಗೊಂಡು ಸಿಇಒ ಸ್ಥಳದಲ್ಲೇ ಸಾವು!

    ಕೌಲಾಲಾಂಪುರ: ಚಾರ್ಜ್ ಇಟ್ಟಿದ್ದ ವೇಳೆ ಮೊಬೈಲ್ ಸ್ಫೋಟಗೊಂಡು ಮಲೇಷಿಯಾದ ಕ್ರಾಡಲ್ ಫಂಡ್ ಕಂಪೆನಿಯ ಕಾರ್ಯನಿರ್ವಹಣಾಧಿಕಾರಿ(ಸಿಇಒ) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ನಜೀರ್ ಹಸನ್(45) ಮೃತಪಟ್ಟ ಸಿಇಒ. ಎಂದಿನಂತೆ ಮನೆಯಲ್ಲಿ ಚಾರ್ಜ್ ಗೆ ಇಟ್ಟು ಮಲಗಿದ್ದಾಗ ಮೊಬೈಲ್ ಸ್ಫೋಟಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ವರದಿಗಳ ಪ್ರಕಾರ ನಜೀರ್ ಹಸನ್‍ರವರು ತಮ್ಮ ಎರಡು ಸ್ಮಾರ್ಟ್‍ಫೋನ್‍ಗಳನ್ನು ರಾತ್ರಿ ಮಲಗುವ ವೇಳೆ ತಮ್ಮ ಹಾಸಿಗೆಯ ಪಕ್ಕದಲ್ಲೇ ಚಾರ್ಜ್‍ಗೆ ಇಟ್ಟಿದ್ದಾರೆ. ಈ ವೇಳೆ ಇದರಲ್ಲಿ ಒಂದು ಫೋನ್ ಸ್ಫೋಟಗೊಂಡು ಕೊಠಡಿ ತುಂಬಾ ಬೆಂಕಿ ಆವರಿಸಿಕೊಂಡು ಉಸಿರಾಡಲು ಸಾಧ್ಯವಾಗದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

    ಘಟನೆ ಕುರಿತು ಪ್ರತಿಕ್ರಿಯಿಸಿದ ಸಂಬಂಧಿಗಳು, ಹಸನ್‍ರವರು ಬ್ಲಾಕ್ ಬೆರ್ರಿ ಮತ್ತು ಹುವಾವೇ ಕಂಪನಿಯ ಎರಡು ಫೋನ್‍ಗಳನ್ನು ಬಳಸುತ್ತಿದ್ದರು. ಮೊಬೈಲ್ ಸ್ಫೋಟಗೊಂಡು ತಲೆಗೆ ಗಂಭೀರಗಾಯವಾಗಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಸ್ಫೋಟಗೊಂಡಿರುವ ಮೊಬೈಲ್‍ನಲ್ಲಿ ಯಾವ ಫೋನ್ ಸ್ಫೋಟಗೊಂಡಿದೆ ಎಂಬುದು ತಿಳಿದು ಬಂದಿಲ್ಲ, ಹಸನ್‍ರವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಹೊಂದಿದ್ದು, ಕೆಲಸದ ನಿಮಿತ್ತ ಅವರಿಂದ ದೂರವಾಗಿದ್ದರು ಎಂದು ತಿಳಿಸಿದ್ದಾರೆ.

    ಪ್ರಕರಣ ಕುರಿತು ಹೇಳಿಕೆ ನೀಡಿದ ಮಲೇಷಿಯಾ ಪೊಲೀಸರು, ವ್ಯಕ್ತಿ ಮೊಬೈಲ್ ಚಾರ್ಜಿಂಗ್ ಇಟ್ಟಿದ್ದ ವೇಳೆ ಸ್ಫೋಟಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಮೊಬೈಲ್ ಸ್ಫೋಟದಿಂದ ಉಂಟಾದ ಹೊಗೆಯಿಂದಾಗಿ ಉಸಿರಾಡಲು ಸಾಧ್ಯವಾಗದೇ ಮೃತಪಟ್ಟಿದ್ದಾರೆ ಎಂದು ವರದಿ ಬಂದಿದೆ ಎಂದು ಹೇಳಿದ್ದಾರೆ.