Tag: ಚಾರ್ಜ್ ಶೀಟ್

  • ಸಂಸದ ತೇಜಸ್ವಿ ಸೂರ್ಯ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ

    ಸಂಸದ ತೇಜಸ್ವಿ ಸೂರ್ಯ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ

    ನವದೆಹಲಿ: ಸಂಸದ, ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಸೇರಿದಂತೆ 30 ಬಿಜೆಪಿ ಕಾರ್ಯಕರ್ತರ ವಿರುದ್ಧ ದೆಹಲಿ ಪೊಲೀಸರು ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ. ಸಾವಿರ ಪುಟಗಳ ಚಾರ್ಜ್‍ಶೀಟ್ ಸಲ್ಲಿಸಿರುವ ಪೊಲೀಸರು ಗುಂಪು ಕಟ್ಟಿಕೊಂಡು ಸಾರ್ವಜನಿಕ ಆಸ್ತಿ-ಪಾಸ್ತಿ ನಾಶ ಮಾಡಿರುವ ಆರೋಪ ಹೊರಿಸಲಾಗಿದೆ.

    ಚಾರ್ಜ್‍ಶೀಟ್ ನಲ್ಲಿ ಹಲವು ಐಪಿಸಿ ಸೆಕ್ಷನ್ ಗಳನ್ನು ಉಲ್ಲೇಖಿಸಲಾಗಿದೆ. ಪ್ರತಿಭಟನೆ ಹೆಸರಿನಲ್ಲಿ ಮುಖ್ಯಮಂತ್ರಿ ನಿವಾಸಕ್ಕೆ ಅಕ್ರಮ ಪ್ರವೇಶಕ್ಕೆ ಪ್ರಯತ್ನಪಡಲಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಲಾಗಿದೆ, ಸರ್ಕಾರಿ ಕೆಲಸಕ್ಕೆ ಅಡ್ಡಿ, ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿರುವುದು ಸೇರಿ ಕಾನೂನು ಸುವ್ಯವಸ್ಥೆ ಹಾಳುಗೆಡವಿದ ಆರೋಪಗಳನ್ನು ಮಾಡಲಾಗಿದೆ. ಇದನ್ನೂ ಓದಿ: ಸೀಮೆ ಹುಲ್ಲು ಕಜೆ ಬೆಟ್ಟದಲ್ಲಿ ಭಾರಿ ಸ್ಫೋಟ – ಗ್ರಾಮಸ್ಥರಲ್ಲಿ ಆತಂಕ

    ಅಲ್ಲದೇ ಪ್ರತಿಭಟನಾಕಾರರು ಒಂದು ಹಂತ ಅಲ್ಲದೇ, ಮೂರು ವಿಭಿನ್ನ ಭದ್ರತಾ ಪದರಗಳಲ್ಲಿ ಪೊಲೀಸರ ನಿರ್ದೇಶನಗಳನ್ನು ಉಲ್ಲಂಘಿಸಿದ್ದಾರೆ. ಸಿಎಂ ಮನೆಯಲ್ಲಿ ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ದೆಹಲಿ ಹೈಕೋರ್ಟ್ ನೀಡಿದ ನಿರ್ದೇಶನಗಳನ್ನು ಪ್ರತಿಭಟನಾಕಾರರು ಉಲ್ಲಂಘಿಸಿದ್ದಾರೆ ಎಂದು ಚಾರ್ಜ್‍ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

     

    ಕಾಶ್ಮೀರಿ ಫೈಲ್ಸ್ ಸಿನಿಮಾಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ನೀಡಿದ ಹೇಳಿಕೆಯನ್ನು ಖಂಡಿಸಿ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆ ಹೆಸರಿನಲ್ಲಿ ಅರವಿಂದ್ ಕೇಜ್ರಿವಾಲ್ ನಿವಾಸದೊಳಗೆ ಅಕ್ರಮ ಪ್ರವೇಶಕ್ಕೆ ಪ್ರಯತ್ನಪಟ್ಟ ಪ್ರತಿಭಟನಾಕಾರರು ಬ್ಯಾರಿಕೇಡ್ ಕೆಡವಿ ಗಲಭೆ ಎಬ್ಬಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿಗೆ ಯಾರಿಂದ ತೊಂದರೆ ಇದ್ಯೋ ಅವರ ನಿರ್ನಾಮಕ್ಕೆ ಯತ್ನ: ಡಿಕೆಶಿ

    ಬಿಜೆಪಿಗೆ ಯಾರಿಂದ ತೊಂದರೆ ಇದ್ಯೋ ಅವರ ನಿರ್ನಾಮಕ್ಕೆ ಯತ್ನ: ಡಿಕೆಶಿ

    ಬೆಂಗಳೂರು: ಬಿಜೆಪಿಗೆ ಯಾರಿಂದ ತೊಂದರೆಯಾಗುತ್ತಿದೆ, ಅಂತಹವರನ್ನು ನಿರ್ನಾಮ ಮಾಡುವ ಕೆಲಸ ನಡೆಯುತ್ತಿದೆ. ಒಂದೋ ಅವರೊಂದಿಗೆ ಹೋಗಬೇಕು ಇಲ್ಲವೇ ಅವರಿಗೆ ಶರಣಾಗಬೇಕು. ಚಾರ್ಜ್ ಶೀಟ್‌ನಿಂದ ಹೊಸದಾಗಿ ಏನೂ ಸೃಷ್ಟಿ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾಯಾಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.

    ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಸಿದೆ. ಈ ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಅವರು ನ್ಯಾಯ, ನೀತಿ, ಸತ್ಯ, ಧರ್ಮ, ಕಾನೂನು ಎಲ್ಲದರಲ್ಲೂ ನನಗೆ ನಂಬಿಕೆ ಇದೆ. ನಾನು ತಪ್ಪು ಮಾಡಿಲ್ಲ ಎಂಬುದು ನನಗೆ ಗೊತ್ತಿದೆ. ನಾನು ಇದನ್ನು ಎದುರಿಸುತ್ತೇನೆ ಎಂದರು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಆರೋಪ – ಡಿಕೆಶಿ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ

    ಚಾರ್ಜ್ ಶೀಟ್ ಫೈಲ್ ಮಾಡಿರುವ ಬಗ್ಗೆ ನನಗೆ ಮಾಧ್ಯಮದಿಂದ ತಿಳಿಯಿತು. ನನಗೆ ಅದರ ಕಾಪಿ ಇನ್ನೂ ಸಿಕ್ಕಿಲ್ಲ. ಸಾಮಾನ್ಯವಾಗಿ 6 ತಿಂಗಳಲ್ಲಿ ಚಾರ್ಜ್ ಶೀಟ್ ಫೈಲ್ ಮಾಡುತ್ತಾರೆ. ನನ್ನ ಮೇಲೆ ಬಹಳ ದೊಡ್ಡ ತನಿಖೆ ನಡೆದಿದೆ. ಆದರೆ ಅವರು ಹೊಸದಾಗಿ ಏನನ್ನೂ ಸೃಷ್ಟಿಸಲು ಸಾಧ್ಯವಿಲ್ಲ. ನನಗೆ ಅದರ ಕಾಪಿ ಬರಲಿ. ಸತ್ಯ, ಧರ್ಮ, ಕಾನೂನು ಇರುವ ದೇಶದಲ್ಲಿ ಇದನ್ನೆಲ್ಲಾ ಎದುರಿಸುತ್ತೇನೆ ಎಂದರು. ಇದನ್ನೂ ಓದಿ: ಬಿಜೆಪಿ ಸರ್ಕಾರಕ್ಕೆ 9 ತಿಂಗಳಷ್ಟೇ ಆಯಸ್ಸು: ಸಿಎಂ ಇಬ್ರಾಹಿಂ

    ನಾನೇನೂ ತಪ್ಪು ಮಾಡಿಲ್ಲ ಎನ್ನುವುದು ರಾಜ್ಯಕ್ಕೆ, ದೇಶಕ್ಕೆ ಗೊತ್ತಿದೆ. ಆದರೆ ಬಿಜೆಪಿಯವರು ನನ್ನ ಮೇಲೆ ರಾಜಕೀಯದ ಎಲ್ಲಾ ಅಸ್ತ್ರಗಳನ್ನೂ ಉಪಯೋಗಿಸುತ್ತಿದ್ದಾರೆ ಎಂದು ಆರೋಪಿಸಿದರು.

  • ಇಡಿ ಚಾರ್ಜ್‌ಶೀಟ್‌ ಸಲ್ಲಿಕೆಗೆ ನಾವು ಹೆದರುವುದಿಲ್ಲ: ಡಿ.ಕೆ.ಸುರೇಶ್

    ಇಡಿ ಚಾರ್ಜ್‌ಶೀಟ್‌ ಸಲ್ಲಿಕೆಗೆ ನಾವು ಹೆದರುವುದಿಲ್ಲ: ಡಿ.ಕೆ.ಸುರೇಶ್

    ಬೆಂಗಳೂರು: ಚಾರ್ಜ್‌ಶೀಟ್‌ ಸಲ್ಲಿಕೆಗೆ ನಾವು ಹೆದರುವ ಅಗತ್ಯವಿಲ್ಲ. ಚಾರ್ಜ್ ಶೀಟ್ ಸಲ್ಲಿಕೆ ಒಂದು ಕಾನೂನು ಪ್ರಕ್ರಿಯೆಯಷ್ಟೇ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು.

    ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಇಡಿ ಚಾರ್ಜ್‌ಶೀಟ್‌ ಸಲ್ಲಿಸಿದೆ. ಈ ಕುರಿತಂತೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್ ಅವರು, ಚಾರ್ಜ್‌ಶೀಟ್‌ ಸಲ್ಲಿಕೆಗೆ ನಾವು ಹೆದರುವ ಅಗತ್ಯವಿಲ್ಲ. ಚಾರ್ಜ್‌ಶೀಟ್‌ ಸಲ್ಲಿಕೆ ಒಂದು ಕಾನೂನು ಪ್ರಕ್ರಿಯೆ. ಚಾರ್ಜ್‌ಶೀಟ್‌ನಲ್ಲಿ ಏನಿದೆ ಅಂತಾ ನಮಗೂ ಗೊತ್ತಿಲ್ಲ. ನಿಮಗೂ ಗೊತ್ತಿಲ್ಲ. ನಮ್ಮ ವಕೀಲರ ಜೊತೆ ಚರ್ಚಿಸುತ್ತೇವೆ. ಚಾರ್ಜ್‌ಶೀಟ್‌ ಕಾಪಿ ನಾಳೆ ಅಥವಾ ಸೋಮವಾರ ಸಿಗಬಹುದು. ಸಿಕ್ಕ ನಂತರ ನಮ್ಮ ಕಾನೂನು ಹೋರಾಟ ಏನು ಎನ್ನುವುದನ್ನು ನಿರ್ಧರಿಸುತ್ತೇವೆ ಎಂದರು.

    ರಾಜಕೀಯ ಪ್ರೇರಿತವಾಗಿ ನಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ವಿರುದ್ಧ ನಮ್ಮ ಹೋರಾಟ ನಡೆಯುತ್ತಿರುತ್ತದೆ. ನಾವು ಹೆದರುವ ಪ್ರಶ್ನೆಯೇ ಇಲ್ಲ. ಏನೇ ಷಡ್ಯಂತ್ರ ಮಾಡಿದರೂ ನಾವು ಹೆದರಲ್ಲ. ನಾವು ಮಾನಸಿಕವಾಗಿ, ದೈಹಿಕವಾಗಿ ಎಲ್ಲ ರೀತಿಯಲ್ಲಿ ಪ್ರಕರಣ ಎದುರಿಸಲು ಸಿದ್ಧರಾಗಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಆರೋಪ – ಡಿಕೆಶಿ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಕೆ

    ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಬಳಿಕ ಸ್ವಾಯತ್ತ ಸಂಸ್ಥೆಗಳು ಕೈಕಟ್ಟಿ ಕುಳಿತಿವೆ. ಐಟಿ, ಸಿಬಿಐ, ಇಡಿ ಮಾಧ್ಯಮಗಳು ತಮ್ಮ ಸ್ವಂತ ಇಚ್ಛಾಶಕ್ತಿಯಿಂದ ಕೆಲಸ ಮಾಡುತ್ತಿಲ್ಲ. ನ್ಯಾಯಾಲಗಳ ಮೇಲೂ ಒತ್ತಡವಿದೆ. ವಿರೋಧ ಪಕ್ಷವಾಗಿ ನಾವು ಇವರಿಂದ ನ್ಯಾಯ ನಿರೀಕ್ಷೆ ಮಾಡಲು ಸಾಧ್ಯವಾಗುತ್ತಾ? ಏನು ಚಾರ್ಜ್‌ಶೀಟ್‌ ಹಾಕಿದ್ದಾರೆ, ಅದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ. ಬಿಜೆಪಿಯ ಏನೇ ತಂತ್ರ, ಒಳಸಂಚು ಮಾಡಿದರೂ ನಾವು ಅದರ ವಿರುದ್ಧ ಸಂಪೂರ್ಣ ಹೋರಾಟ ಮಾಡುತ್ತೇವೆ. ಏನೋ ಆಗಿಬಿಡುತ್ತದೆ ಅಂತಾ ನಾವು ಹೆದರಿಕೊಂಡಿಲ್ಲ. ವಿಚಾರಣೆ 4 ವರ್ಷದಿಂದ ನಡೆಯುತ್ತಿದೆ ಇನ್ನು ನಡೆಯಲಿ ಎಂದು ಹೇಳಿದರು.

    ಬಂಧನವಾದ 180 ದಿನದಲ್ಲಿ ಅಂದರೆ 6 ತಿಂಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಆಗಬೇಕಿತ್ತು. ಆದರೆ 2-3 ವರ್ಷದ ನಂತರ ಸಲ್ಲಿಕೆ ಮಾಡಿದ್ದಾರೆ. ಶರ್ಮಾ, ಸಚಿನ್ ನಾರಾಯಣ್, ಡಿಕೆಶಿ ನಿವಾಸದಲ್ಲಿ ಸಿಕ್ಕ ಹಣದ ಮೇಲೆ ಕೇಸು ನಡೆಯುತ್ತಿತ್ತು. ಚಾರ್ಜ್ ಶೀಟ್ ನಲ್ಲಿ ಏನಿದೆ ನೋಡಿ ತೀರ್ಮಾನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಶಾಲಾ ಬಸ್ ಹರಿದು ಬಾಲಕಿ ಸಾವು

  • ಲಂಚ ಬೇಡಿಕೆ ಇಟ್ಟ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲು

    ಲಂಚ ಬೇಡಿಕೆ ಇಟ್ಟ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲು

    ಬೆಂಗಳೂರು: ಚಾರ್ಜ್ ಶೀಟ್ ಹಾಕಲು ಲಂಚಕ್ಕೆ ಬೇಡಿಕೆ ಇಟ್ಟ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಎಫ್‌ಐಆರ್ ದಾಖಲಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಇನ್ಸ್ ಪೆಕ್ಟರ್ ಜಯರಾಜ್ ಹಾಗೂ ಎಎಸ್‌ಐ ಶಿವಕುಮಾರ್ ಆರೋಪಿಗಳು. ಜಯರಾಜ್ ಈ ಹಿಂದೆ ಕೆಆರ್ ಪುರಂ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದರು. ಸದ್ಯ ಸಿಐಡಿಯಲ್ಲಿ ಇನ್ಸ್ ಪೆಕ್ಟರ್ ಜಯರಾಜ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

    ಕೌಟುಂಬಿಕ ಕಲಹದಲ್ಲಿ ಪತಿ ವಿರುದ್ಧ ಪತ್ನಿ ದೂರು ದಾಖಲಿಸಿದ್ದರು. ಪತ್ನಿಯ ದೂರಿನನ್ವಯ ಗಂಡ ಸಂಜು ರಾಜನ್‌ನನ್ನು ಕೆಆರ್ ಪುರಂ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಬಳಿಕ ಜಾಮೀನು ಪಡೆದು ಸಂಜು ರಾಜನ್ ಜೈಲಿನಿಂದ ಬಿಡುಗಡೆಯಾಗಿದ್ದರು.

    ಈ ಹಿನ್ನೆಲೆಯಲ್ಲಿ ಪ್ರತಿವಾರ ಠಾಣೆಗೆ ಆಗಮಿಸಿ ಸಹಿ ಮಾಡಲು 500 ರಿಂದ 10 ಸಾವಿರದವರಗೆ ಪೊಲೀಸರು ಲಂಚ ಪಡೆಯುತ್ತಿದ್ದರು. ಬೇಗ ಚಾರ್ಜ್ ಶೀಟ್ ಮಾಡಲು 80 ಸಾವಿರ ರೂ. ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ವಾಜಪೇಯಿ ಜನ್ಮ ದಿನಾಚರಣೆ ಆಚರಿಸಿದ ರಮೇಶ್ ಜಾರಕಿಹೊಳಿ

    MONEY

    ಸಕ್ಷಮ ಪ್ರಾಧಿಕಾರದ ಅನುಮತಿ ಮೇರೆಗೆ ಇನ್ಸ್ಪೆಕ್ಟರ್ ಜಯರಾಜ್ ಹಾಗೂ ಎಎಸ್‌ಐ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿ ಎಸಿಬಿ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಶ್ರೀಮಂತ ಬೇಡ, ಕಷ್ಟದಲ್ಲಿರುವವನ ಜೊತೆ ಡೇಟಿಂಗ್ ಮಾಡಲು ಇಷ್ಟ: ಹರ್ನಾಜ್ ಸಂಧು

  • ಯುವರಾಜ್ ಸ್ವಾಮಿ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ- ಪ್ರಮುಖ ಸಚಿವರ ಬಯೋಡೆಟಾ, ಲೆಟರ್ ಹೆಡ್ ಪತ್ತೆ

    ಯುವರಾಜ್ ಸ್ವಾಮಿ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ- ಪ್ರಮುಖ ಸಚಿವರ ಬಯೋಡೆಟಾ, ಲೆಟರ್ ಹೆಡ್ ಪತ್ತೆ

    ಬೆಂಗಳೂರು: ಯುವರಾಜ್ ಸ್ವಾಮಿ ವಿರುದ್ಧ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದು, ಪ್ರಮುಖ ಸಚಿವರ ಬಯೋಡೆಟಾ ಹಾಗೂ ಲೆಟರ್‍ಹೆಡ್ ಪತ್ತೆಯಾಗಿವೆ. ಅಲ್ಲದೆ ಆರೋಪಿ ಹೇಗೆ ವಂಚನೆ ಮಾಡಿದ್ದಾನೆ ಎಂಬುದರ ವಿವರವನ್ನು ಸಹ ಇದರಲ್ಲಿ ತಿಳಿಸಲಾಗಿದೆ.

    ಸಿಸಿಬಿ ಪೊಲೀಸರು ಯುವರಾಜ್ ಮನೆಯ ಮೇಲೆ ದಾಳಿ ಮಾಡಿದ್ದ ವೇಳೆ ಬರೋಬ್ಬರಿ 89ಕ್ಕೂ ಹೆಚ್ಚು ದಾಖಲೆಗಳನ್ನು ಸೀಜ್ ಮಾಡಿದ್ದರು. ಯುವರಾಜ್ ನ ಪರ್ಸನಲ್ ಹಾಗೂ ಬ್ಯಾಂಕ್, ಆಸ್ತಿ ದಾಖಲೆಗಳು ಪತ್ತೆಯಾಗಿದ್ದವು. ಅಲ್ಲದೆ ಇದೇ ಸಂದರ್ಭದಲ್ಲಿ ಅನೇಕ ಗಣ್ಯರಿಗೆ ಸಂಬಂಧಿಸಿದ ದಾಖಲೆಗಳನ್ನು ಸಹ ಸೀಜ್ ಮಾಡಲಾಗಿತ್ತು. ಇದೀಗ ಎಲ್ಲ ಪಿನ್ ಟು ಪಿನ್ ದಾಖಲೆಗಳನ್ನು ಪೊಲೀಸರು ಚಾರ್ಜ್ ಶೀಟ್‍ನಲ್ಲಿ ಉಲ್ಲೇಖಿಸಿದ್ದಾರೆ.

    ಪ್ರಮುಖ ದಾಖಲೆಗಳು
    ಚಾರ್ಜ್ ಶೀಟ್ ನಲ್ಲಿ ಹೇಳಿರುವ ಕೆಲವು ಪ್ರಮುಖ ದಾಖಲೆಗಳ ಲಭ್ಯವಾಗಿದ್ದು, ಇದರಲ್ಲಿ ಸಚಿವ ಮುರಗೇಶ್ ನಿರಾಣಿ ಲೇಟರ್ ಹೆಡ್ ಮತ್ತು ಬಯೋಡೆಟಾ, ಪ್ರಮೋದ್ ಮಧ್ವರಾಜ್ ಲೇಟರ್ ಹೆಡ್, ಬಯೋಡೆಟಾ, ಉಮೇಶ್ ಕತ್ತಿಯವರ ಲೇಟರ್ ಹೆಡ್, ಬಯೋಡೆಟಾ ಹಾಗೂ ಸಚಿವ ಶ್ರೀರಾಮುಲು ಅವರಿಗೆ ಸೇರಿದ ಕೆಲ ದಾಖಲೆಗಳನ್ನು ಸಹ ಸೀಜ್ ಮಾಡಲಾಗಿದೆ. ಮುತ್ತಪ್ಪ ರೈಗೆ ಸೆಕ್ಯೂರಿಟಿ ಕೋರಿ ಶ್ರೀರಾಮುಲು ಹೆಸರಲ್ಲಿ ಪತ್ರ ಬರೆದಿರುವುದು ಸಹ ಸಿಕ್ಕಿದೆ. ಶ್ರೀರಾಮುಲು ಅವರ ಲೇಟರ್ ಹೆಡ್ ನಲ್ಲಿ ಗೃಹ ಇಲಾಖೆಗೆ ಪತ್ರ ಬರೆಯಲಾಗಿದೆ.

    ಬಿಜೆಪಿ ಪಕ್ಷದ ಹೆಸರಿನ ಅನೇಕ ಲೇಟರ್ ಹೆಡ್ ಸಮೇತ ಪತ್ರಗಳು, ಉಪಚುನಾವಣೆಗೆ ವಸಂತ್ ಬೆಳವಾಯಿ ಟಿಕೆಟ್ ಕೋರಿಕೆ ಪತ್ರ. ಟಿ.ಶ್ಯಾಮ್ ಭಟ್ ವಯಕ್ತಿಕ ಸೇವಾ ವಿವರ ಇರುವ ದಾಖಲೆಗಳು, ನಿವೃತ್ತ ಜಡ್ಜ್ ಇಂದ್ರಕಲಾ ಅವರ ಪರ್ಸನಲ್ ಪ್ರೋಫೈಲ್ ಗಳು ಲಭ್ಯವಾಗಿವೆ. 9 ಮಂದಿ ಸಾಕ್ಷಿಗಳ ಸಮೇತ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದು, ಯುವರಾಜ್ ಸ್ವಾಮಿ ವಿರುದ್ಧ ಐಪಿಸಿ ಸೆಕ್ಷನ್ 420, 504, 506 ಅಡಿ ಚಾರ್ಜ್ ಸಲ್ಲಿಸಲಾಗಿದೆ. ಮಾಡಿದ ಕೃತ್ಯವನ್ನು ಯುವರಾಜ್ ಸ್ವಾಮಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.

    ಕೇಸ್ ನಂಬರ್ 12/2021 ಜ್ಞಾನಭಾರತಿ ಪೊಲೀಸ್ ಠಾಣೆ:
    ಎಇಇ ಹುದ್ದೆ ಕೊಡಿಸುವುದಾಗಿ ರಾಜಾಜಿನಗರ ನಿವಾಸಿ ಜಿ.ನರಸಿಂಹ ಮೂರ್ತಿಯವರಿಗೆ ಲಕ್ಷಾಂತರ ಹಣ ಪಡೆದು ವಂಚನೆ ಮಾಡಲಾಗಿದೆ. ವಾಪಸ್ ಹಣ ಕೇಳಿದಾಗ ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾನೆ. ನೀನು ಕೊಟ್ಟ ಹಣದಿಂದಲೇ ನಿನ್ನ ಕೊಲೆಗೆ ಸುಪಾರಿ ಕೊಡುತ್ತೇನೆ. ನಿನ್ನ ಹಣದಿಂದಲೇ ರೌಡಿಗಳಿಂದ ನಿನ್ನನ್ನು ಕೊಲ್ಲಿಸುತ್ತೇನೆ ಎಂದು ಯುವರಾಜ್ ಸ್ವಾಮಿ ದೂರುದಾರರಿಗೆ ಜೀವ ಬೆದರಿಕೆ ಹಾಕಿದ್ದಾನೆ.

    ಕೇಸ್ ನಲ್ಲಿ ಯುವರಾಜ್ ಮೇಲೆ ಬಂದಿದ್ದ ಆರೋಪ:
    ರಾಜಾಜಿನಗರ ಡಾಕ್ಟರ್ ನರಸಿಂಹ ಸ್ವಾಮಿಯ ಪುತ್ರ ರವೀಂದ್ರ ಎಂ.ಟೆಕ್ ಮುಗಿಸಿದ್ದ. ಅವರಿಗೆ ಲೋಕೇಶ್ ಎಂಬಾತನ ಮೂಲಕ ಈ ಯುವರಾಜ್ ಪರಿಚಯವಾಗಿದ್ದನಂತೆ. ಆದರಂತೆ ಅಕ್ಟೋಬರ್ 20, 2019 ರಲ್ಲಿ ಭೇಟಿಯಾಗಿ, ನಾನು ಆರ್‍ಎಸ್‍ಎಸ್ ಮುಖಂಡ, ಬಿಜೆಪಿ ಮುಖಂಡರು ನನಗೆ ಪರಿಚಯ ಅದರಲ್ಲೂ ಕೇಂದ್ರದ ನಾಯಕರು ಪರಿಚಯ ಎಂದು ಹೇಳಿದ್ದನಂತೆ. ನಾನು ನನಗೆ ಗೊತ್ತಿರುವ ಮಂತ್ರಿಯ ಬಳಿ ಮಾತನಾಡಿ ಎಇಇ ಕೆಲಸ ಕೊಡಿಸುವುದಾಗಿ ಹೇಳಿದ್ದನಂತೆ. ಇದಕ್ಕಾಗಿ 75 ಲಕ್ಷ ರೂ. ಲಂಚ ಕೇಳಿದ್ದನಂತೆ. ಅದನ್ನು ಕ್ಯಾಶ್ ಮೂಲಕವೇ ಕೊಡಬೇಕು ಅಂದಿದ್ದ. ಇದಕ್ಕೆ ಒಪ್ಪಿ 30 ಲಕ್ಷ ರೂ.ಗಳನ್ನು ನೀಡಿದ್ದಾರೆ. ಖುದ್ದು ಯುವರಾಜ್ ಮನೆಗೆ ಹೋಗಿ ಆತನಿಗೆ ಹಣವನ್ನ ನೀಡಿದ್ದಾರೆ. ಆದರೆ ಈ ವರೆಗೆ ಆತ ಕೆಲಸ ಕೊಡಿಸಿಲ್ಲ. ಹಣವನ್ನೂ ವಾಪಸ್ ನೀಡಿಲ್ಲವಂತೆ. ಈ ಬಗ್ಗೆ ಕೇಳಲು ಹೋದಾಗ ಜೀವ ಬೆದರಿಕೆ ಹಾಕಿದ್ದಾನೆ. ನೀನು ಕೊಟ್ಟಿರುವ ಹಣವನ್ನು ರೌಡಿಗಳಿಗೆ ಕೊಟ್ಟು ಸುಪಾರಿ ನೀಡುತ್ತೇನೆ. ನೀನು ಕೊಟ್ಟ ಹಣದಿಂದಲೇ ನಿನ್ನನ್ನು ಕೊಲ್ಲಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾನಂತೆ.

    ಯುವರಾಜ್ ಸ್ವಾಮಿಯಿಂದ ತಪ್ಪೊಪ್ಪಿಗೆ:
    2019ರ ಮಾರ್ಚ್ ನಲ್ಲಿ ಏರ್‍ಪೋರ್ಟ್ ನಲ್ಲಿ ಡ್ರೈವರ್ ಆಗಿ ಕೆಲಸ ಮಾಡುವ ಲೋಕೇಶ್ ಕಾರನ್ನು ಬುಕ್ ಮಾಡಿಕೊಂಡಿದ್ದೆ. ಈ ವೇಳೆ ಆತನ ಜೊತೆ ಪರಿಚಯವಾಗಿ ನಂತರ ಆತನ ಮೂಲಕ ಪಿಕ್ ಅಪ್ ಡ್ರಾಪ್ ಮಾಡಿಸಿಕೊಳ್ಳುತ್ತಿದೆ. 2019 ರಲ್ಲಿ ಆತನ ಮೂಲಕ ನರಸಿಂಹಸ್ವಾಮಿ ಅವರು ತಮ್ಮ ಮಗನಿಗೆ ಎಇಇ ಕೆಲಸ ಕೊಡಿಸಿ ಎಂದು ಬಂದಿದ್ದು ನಿಜ. ಈ ಬಗ್ಗೆ ನನ್ನ ಮನೆಯ ನೆಲಮಡಿಯಲ್ಲಿ ಕುಳಿತು ಮಾತನಾಡಿ, 75 ಲಕ್ಷ ಹಣವನ್ನು ಕ್ಯಾಶ್ ಕೇಳಿದ್ದೆ. ಅದಕ್ಕೆ ಒಪ್ಪಿದ ಅವರು, 30 ಲಕ್ಷ ಹಣವನ್ನು ಕ್ಯಾಶ್‍ನಲ್ಲಿ ಕೊಟ್ಟಿದ್ದರು. ಅದನ್ನು ನನ್ನ ಮತ್ತು ಕುಟುಂಬದ ಖರ್ಚಿಗಾಗಿ ಬಳಸಿಕೊಂಡಿದ್ದೇನೆ. ಅವರಿಗೆ ಇಲ್ಲಿತನಕ ಯಾವುದೇ ಕಲಸವನ್ನು ಸಹ ಕೊಡಿಸಿಲ್ಲ. ಕೇಳಲು ಬಂದಾಗಿ ಜೀವ ಬೆದರಿಕೆ ಹಾಕಿದ್ದು ನಿಜ. ಜಾಮೀನು ಪಡೆದು ಹೊರ ಬಂದ ತಕ್ಷಣ ಹಣ ವಾಪಸ್ ನೀಡುತ್ತೇನೆ ಎಂದಿದ್ದಾನೆ.

    ಕೇಸ್ ನಂಬರ್ 38/2020 ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆ:
    ತನ್ನ ಬಳಿ ಕೆಲಸ ಮಾಡುತ್ತಿದ್ದ ಡ್ರೈವರ್ ಗೂ ಯುವರಾಜ್ ವಂಚಿಸಿದ್ದು, ಅಮಾಯಕ ಕೆಲಸಗಾರನ ಬ್ಯಾಂಕ್ ಅಕೌಂಟ್ ನ್ನು ದುರ್ಬಳಕೆ ಮಾಡಿಕೊಂಡು, ತಾನು ವಂಚಿಸಿ ಪಡೆದ ಹಣವನ್ನು ಡೆಪಾಸಿಟ್ ಮಾಡುತ್ತಿದ್ದ. ಐಟಿ ಇಲಾಖೆಯಿಂದ ಬಂದ ನೊಟೀಸ್ ನೋಡಿ ಡ್ರೈವರ್ ಗಾಬರಿಯಾಗಿದ್ದ. ಈ ಕುರಿತು ಯುವರಾಜ್ ನ ಪ್ರಶ್ನೆ ಮಾಡಿದಾಗ ಹೊಡೆದು ಮನೆಯಿಂದ ಆಚೆ ಹಾಕಿದ್ದ.

    ಕೇಸ್ ನಂಬರ್ 40/2020 ಸೆನ್ ಪೊಲೀಸ್ ಠಾಣೆ:
    ಕೆಎಸ್‍ಆರ್‍ಟಿಸಿ ಅಧ್ಯಕ್ಷ ಹುದ್ದೆ ಕೊಡಿಸುವುದಾಗಿ ಹೇಳಿ ರೈತ ಹಾಗೂ ಉದ್ಯಮಿ ಸುಧೀಂದ್ರ ರೆಡ್ಡಿಗೆ 1 ಕೋಟಿ ರೂಪಾಯಿ ಉಂಡೆನಾಮ ಹಾಕಿದ್ದಾನೆ. ಬರೋಬ್ಬರಿ 1 ಕೋಟಿ ರೂ.ಗಳನ್ನು ಪಡೆದು ಸ್ವಾಮಿ ವಂಚಿಸಿದ್ದಾನೆ. ಚೆಕ್ ಮೂಲಕ ಯುವರಾಜ್ ಸ್ವಾಮಿ ಹಣ ಪಡೆದಿದ್ದು, ಬಿಜೆಪಿ ಕಾರ್ಯಕರ್ತ ಮಧುರಾಜ್ ಜೊತೆ ಬಂದು ವಂಚನೆ ಮಾಡಿದ್ದಾನೆ. 10 ದಿನಗಳಲ್ಲಿ ಹುದ್ದೆ ಕೊಡಿಸುವುದಾಗಿ ಹೇಳಿ ಹಣ ಪಡೆದು ಮೋಸ ಮಾಡಿದ್ದಾರೆ. ಈ ಕುರಿತು ಯುವರಾಜ್ ಮತ್ತು ಮಧುರಾಜ್ ವಿರುದ್ಧ ಸೆನ್ ಠಾಣೆ ಪೊಲೀಸರು ಕೇಸ್ ದಾಖಲಿಸಿದ್ದಾರೆ.

    ಮೇ 2020ರಲ್ಲಿ ಬಿಜೆಪಿ ಕಾರ್ಯಕರ್ತ ಮಧುರಾಜ್ ಜೊತೆಯಲ್ಲಿ ಯುವರಾಜ್ ನ ಕರೆದುಕೊಂಡು ಸುಧೀಂದ್ರ ರೆಡ್ಡಿ ಮನೆಗೆ ಹೋಗಿದ್ದನಂತೆ. ನಿಮಗೆ ಕೆಎಸ್‍ಆರ್‍ಟಿ ಅಧ್ಯಕ್ಷ ಹುದ್ದೆ ಕೊಡಿಸುತ್ತೇನೆ ಎಂದು ನಂಬಿಸಿದ್ದರಂತೆ. ಅದಕ್ಕಾಗಿ 1 ಕೋಟಿ ಹಣವನ್ನು ಪಡೆದು, ಹುದ್ದೆ ಕೊಡಿಸದೇ ವಂಚನೆ ಮಾಡಿದ್ದಾನಂತೆ. ಬಳಿಕ ಮೊದಲು ಪೋನ್ ರಿಸಿವ್ ಮಾಡದೇ ತಪ್ಪಿಸಿಕೊಳ್ಳುತ್ತಿದ್ದನಂತೆ. ನಂತರ ನಿನಗೆ ಹಣ ವಾಪಸ್ ಕೊಡಲ್ಲ. ಹಣ ಕೇಳಿದರೆ ನಿನಗೊಂದು ಗತಿ ಕಾಣಿಸುತ್ತೆನೆಂದು ಬೆದರಿಕೆ. ಈ ಬಗ್ಗೆ ಯಾರ ಬಳಿಯಾದರೂ ಚರ್ಚೆ ಮಾಡಿದರೆ ಹುಷಾರ್ ಎಂದು ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.

    ನನಗೆ ಗೋವಿಂದರಾಜನಗರದ ಬಿಜೆಪಿ ಕಾರ್ಯಕರ್ತ ಮಧುರಾಜ್ ಮೂಲಕ ಸುಧೀಂದ್ರ ರೆಡ್ಡಿ 2020ರ ಮೇ ತಿಂಗಳಲ್ಲಿ ಪರಿಚಯವಾದರು. ಅವರಿಗೆ ಕೆಎಸ್‍ಆರ್‍ಟಿಸಿ ಅಧ್ಯಕ್ಷ ಹುದ್ದೆ ಕೊಡಿಸುವುದಾಗಿ ನಾನು ಹೇಳಿದ್ದು ನಿಜ. ಅದಕ್ಕೆ ಅವರ ಬ್ಯಾಂಕ್ ಖಾತೆಯಿಂದ ಹಾಗೂ ಕ್ಯಾಷ್ ಮೂಲಕ 1 ಕೋಟಿ ರೂಪಾಯಿ ಪಡೆದುಕೊಂಡಿದ್ದೇನೆ. ಆದರೆ ಅವರಿಗೆ ನಾನು ಕೆಲಸವನ್ನು ಕೊಡಿಸಿಲ್ಲ. ಅವರಿಂದ ಪಡೆದ ಹಣವನ್ನು ನನ್ನ ಮನೆಯಲ್ಲಿ ಇಟ್ಟಾಗ 26 ಲಕ್ಷ ರೂ.ಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಉಳಿದ ಹಣವನ್ನು ಕಾಡುಕೊತ್ತನಹಳ್ಳಿ ಗ್ರಾಮದ ತೋಟದ ಮನೆಯ ಬೆಡ್ ರೂಂ ನ ಬೀರುವಿನಲ್ಲಿ ಇಟ್ಟಿದ್ದೇನೆ. ನೀವು ಕರೆದುಕೊಂಡು ಹೋದರೆ ಅದನ್ನು ನೀಡುತ್ತೇನೆ. ಮತ್ತಷ್ಟು ಹಣವನ್ನು ಕಾರುಗಳ ಖರೀದಿಗೆ ಬಳಸಿಕೊಂಡಿದ್ದೇನೆ ಎಂದು ಯುವರಾಜ್ ಹೇಳಿದ್ದಾನೆ.

  • ವಿಸ್ಟ್ರಾನ್ ಕಂಪನಿ ದಾಂಧಲೆ ಪ್ರಕರಣ- 11 ಸಾವಿರ ಪುಟದ ಪಂಚನಾಮೆ ಸಲ್ಲಿಕೆ

    ವಿಸ್ಟ್ರಾನ್ ಕಂಪನಿ ದಾಂಧಲೆ ಪ್ರಕರಣ- 11 ಸಾವಿರ ಪುಟದ ಪಂಚನಾಮೆ ಸಲ್ಲಿಕೆ

    ಕೋಲಾರ: ಪ್ರತಿಷ್ಟಿತ ಬಹುರಾಷ್ಟ್ರೀಯ ವಿಸ್ಟ್ರಾನ್ ಕಂಪನಿಯಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 11 ಸಾವಿರ ಪುಟಗಳ ಚಾರ್ಜ್ ಶೀಟ್‍ನ್ನ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. 7 ಸಾವಿರ ಕಾರ್ಮಿಕರನ್ನ ಆರೋಪಿಗಳನ್ನಾಗಿ ಪರಿಗಣಿಸಿರುವ ವೇಮಗಲ್ ಪೊಲೀಸರು 170 ಆರೋಪಿಗಳನ್ನ ಬಂಧಿಸಿದ್ದರು, 30 ಜನರನ್ನ ನ್ಯಾಯಾಲಯಕ್ಕೆ ಒಪ್ಪಿಸಿದ್ದು, ನಾಲ್ವರು ಷರತ್ತುಬದ್ದ ಜಾಮೀನು ಪಡೆದಿದ್ದಾರೆ ಎಂದು ಕೋಲಾರದಲ್ಲಿ ಎಸ್ಪಿ ಕಾರ್ತಿಕ್ ರೆಡ್ಡಿ ಅವರು ತಿಳಿಸಿದರು.

    ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಹೋಂಡಾ ಕಂಪನಿಗೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಭೇಟಿ ನೀಡಿದ್ದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಸ್ಟ್ರಾನ್ ದಾಂಧಲೆ ಪ್ರಕರಣಕ್ಕೆ ಸಂಭಂದಿಸಿದಂತೆ ಇಬ್ಬರು ಎಎಸ್ಪಿಗಳು ತನಿಖೆ ನಡೆಸಿದ್ದು, ಹನ್ನೊಂದು ಸಾವಿರ ಪುಟಗಳ ಚಾರ್ಜ್ ಶೀಟ್‍ನ್ನ ನ್ಯಾಯಾಲಯಕ್ಕೆ ಸಲ್ಲಿಸಿರುವುದಾಗಿ ಹೇಳಿದರು. ಇನ್ನು ವಿಸ್ಟ್ರಾನ್ ದಾಂಧಲೆ ಪ್ರಕರಣದ ತನಿಖೆಯಲ್ಲಿ ಕಂಡು ಬಂದಂತೆ ವೇತನ, ಓಟಿ ವೇತನ ಸೇರಿದಂತೆ ಹಾಜರಾತಿ ಸಿಸ್ಟಮ್‍ನಲ್ಲಿ ಸಮಸ್ಯೆ ಇದ್ದ ಪರಿಣಾಮ, ಸಡೆನ್ ಪ್ರಿಪೇರ್ ನಿಂದಾಗಿ ಕಂಪನಿಯಲ್ಲಿ ಗಲಾಟೆ ಆಗಲು ಕಾರಣವಾಗಿದೆ ಎಂದರು. ಇದನ್ನೂ ಓದಿ: ವಿಸ್ಟ್ರಾನ್ ಕಂಪನಿಯಲ್ಲಿ ಮರು ನೇಮಕಾತಿ ಶುರು- ಕೆಲಸ ಪಡೆಯಲು ಏನೆಲ್ಲ ಮಾಡಬೇಕು?

    ಅಲ್ಲದೆ ಹೊರಗಿನವರು ಸೇರಿದಂತೆ ಯಾವುದೇ ಬಾಹ್ಯ ಬೆಂಬಲದಿಂದ ದಾಂಧಲೆ ನಡೆದಿಲ್ಲ. ಯಾವುದೇ ಕುಮ್ಮಕ್ಕು ಇಲ್ಲ ಎನ್ನುವುದು ನಮ್ಮ ತನಿಖೆಯಿಂದ ಕಂಡುಬಂದಿದೆ ಎಂದು ತಿಳಿಸಿದರು. ಇನ್ನೂ ಡಿಸೆಂಬರ್ 12 ರಂದು ವಿಸ್ಟ್ರಾನ್ ಕಂಪನಿಯಲ್ಲಿ ದಾಂದಲೆ ನಡೆದಿತ್ತು, ಈ ಸಂಬಂಧ ವೇಮಗಲ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು. ಇದನ್ನೂ ಓದಿ: ಐಫೋನ್ ಫ್ಯಾಕ್ಟರಿಯಲ್ಲಿ ದಾಂಧಲೆ – ಭಾರತ ವಿಸ್ಟ್ರಾನ್ ಕಂಪನಿ ಉಪಾಧ್ಯಕ್ಷನ ತಲೆದಂಡ

  • ಡ್ರಗ್ಸ್ ಪ್ರಕರಣ – ಎನ್‍ಡಿಪಿಎಸ್ ಕೋರ್ಟಿಗೆ 2,900 ಪುಟಗಳ ಚಾರ್ಜ್‍ಶೀಟ್ ಸಲ್ಲಿಕೆ

    ಡ್ರಗ್ಸ್ ಪ್ರಕರಣ – ಎನ್‍ಡಿಪಿಎಸ್ ಕೋರ್ಟಿಗೆ 2,900 ಪುಟಗಳ ಚಾರ್ಜ್‍ಶೀಟ್ ಸಲ್ಲಿಕೆ

    – ರಾಗಿಣಿ ವಿರುದ್ಧದ ಚಾರ್ಜ್‍ಶೀಟ್‍ನಲ್ಲಿ ಏನಿದೆ..?

    ಬೆಂಗಳೂರು: ಇಡೀ ಚಿತ್ರರಂಗವನ್ನೇ ಬೆಚ್ಚಿ ಬೀಳಿಸಿದ್ದ ಡ್ರಗ್ಸ್ ಪ್ರಕರಣ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದೆ.

    ಹೌದು. ಸ್ಯಾಂಡಲ್‍ವುಡ್ ಡ್ರಗ್ ಕೇಸ್ ಸಂಬಂಧ ಇದೀಗ ಚಾರ್ಜ್‍ಶೀಟ್ ಸಲ್ಲಿಕೆಯಾಗಿದೆ. ಸಿಸಿಬಿ ಅಧಿಕಾರಿಗಳು ಎನ್‍ಡಿಪಿಎಸ್ ಕೋರ್ಟಿಗೆ 2,900 ಪುಟಗಳ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದಾರೆ. ನಟಿ ರಾಗಿಣಿ, ಸಂಜನಾ ಸೇರಿ 25 ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆಯಾಗಿದೆ.

    180 ಸಾಕ್ಷಿಗಳ ಹೇಳಿಕೆ ದಾಖಲಿಸಿರುವ ಸಿಸಿಬಿ ಅಧಿಕಾರಿಗಳು, ಕಾಟನ್ ಪೇಟೆ ಪೊಲೀಸರ ಮೂಲಕ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳ ಹೆಸರೂ ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖ ಮಾಡಲಾಗಿದೆ.

    ಚಾರ್ಜ್‍ಶೀಟ್‍ನಲ್ಲಿ ಏನಿದೆ..?
    2019ರ ಮೇ 26ರಂದು ನಟಿ ರಾಗಿಣಿ ಹುಟ್ಟುಹಬ್ಬದ ಪಾರ್ಟಿ ಮಾಡಿದ್ದರು. ಇಂಡಿಯನ್ ಎಕ್ಸ್‍ಪ್ರೆಸ್ ಬಳಿಯ ಹೋಟೆಲ್‍ನಲ್ಲಿ ರವಿಶಂಕರ್ ಜೊತೆ ಪಾರ್ಟಿ ಮಾಡಿರುವ ಹಾಗೂ ಎಕ್ಸ್ಪ್ರೆಸ್ಸಿ ಮಾತ್ರೆಗಳ ಸೇವನೆ ಮಾಡುವುದರ ಜೊತೆ ಹಂಚಿಕೆ ಮಾಡಿರುವುದರ ಬಗ್ಗೆ ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಲಾಗಿದೆ.

    2020ರ ಜುಲೈ 5ರಂದು ಯಲಹಂಕದ ಲೇರೂಮಾ ಹೋಟೆಲ್‍ನಲ್ಲಿ ಪಾರ್ಟಿ, ಆರೋಪಿಗಳ ಜೊತೆ ಡ್ರಗ್ಸ್ ಸೇವನೆ ಮಾಡಿದ್ದಾರೆ. 2020 ಜನವರಿಯಿಂದ ಆಗಸ್ಟ್‍ವರೆಗೂ ಲೂಮ್ ಪೆಪೆ ಸಾಂಬಾಗೆ ಫೋನ್ ಮಾಡಿ ಡ್ರಗ್ಸ್ ಖರೀದಿ ಮಾಡಿದ್ದಾರೆ. ನೈಜೀರಿಯಾದ ಪ್ರಜೆಯಿಂದ ರಾಗಿಣಿ ಡ್ರಗ್ಸ್ ಪಡೆದಿರುವ ಮಾಹಿತಿ ಇದ್ದು, ಇತರೆ ಆರೋಪಿಗಳಿಗೆ ವಾಟ್ಸಾಪ್ ಮೂಲಕ ಮಾದಕ ವಸ್ತು ಕೇಳಿರುವುದು ಐ ಫೋನ್, 11 ಪ್ರೋ ಮ್ಯಾಕ್ಸ್ ಮೊಬೈಲ್ ರಿಟ್ರೀವ್ ಮಾಡಿದಾಗ ಮಾಹಿತಿ ಬಹಿರಂಗವಾಗಿದೆ ಎಂಬುದನ್ನು ಉಲ್ಲೇಖಿಸಲಾಗಿದೆ.

    ಗೆಳೆಯ ರವಿಶಂಕರ್ ಜೊತೆಯಲ್ಲಿ ರಾಗಿಣಿ ಡ್ರಗ್ಸ್ ಡೀಲ್ ಬಗ್ಗೆ ಮಾತನಾಡಿದ್ದಾರೆ. ಮನೆ ರೇಡ್ ವೇಳೆ ಪತ್ತೆಯಾಗಿದ್ದ ಗಾಂಜಾ ತುಂಬಿದ್ದ ಸಿಗರೇಟ್ ಬಗ್ಗೆಯೂ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ. ಅಲ್ಲದೆ ಚಾರ್ಜ್ ಶೀಟ್ ನ 70ನೇ ಪುಟದಲ್ಲಿ ರಾಗಿಣಿ ಅವರು ನೈಜೀರಿಯಾ ಪ್ರಜೆ ಜೊತೆ ಡ್ರಗ್ಸ್ ಪಡೆಯುವ ಬಗ್ಗೆ ಚಾಟಿಂಗ್ ಮಾಡಿದ್ದಾರೆ. ಇತ್ತ ಗೆಳೆಯ ರವಿಶಂಕರ್ ಜೊತೆಯಲ್ಲಿ ನಟಿ ರಾಗಿಣಿ ಡ್ರಗ್ಸ್ ಡೀಲ್ ಬಗ್ಗೆ ಏನ್ ಮಾತನಾಡಿದ್ದಾರೆ ಅನ್ನೋದನ್ನು ಕೂಡ ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಅಲ್ಲದೆ 69 ನೇ ಪೇಜ್‍ನಲ್ಲಿ 2018ರ ಡಿಸೆಂಬರ್ 8ರಂದು ಡ್ರಗ್ಸ್ ಬಗ್ಗೆ ರವಿಶಂಕರ್ ಪತ್ನಿ, ನಟಿ ರಾಗಿಣಿ ವಿರುದ್ಧ ಮಾಡಿರುವ ಚಾಟಿಂಗ್ ಕೂಡ ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ.

  • ಮಂಗ್ಳೂರು ಏರ್‌ಪೋರ್ಟಿನಲ್ಲಿ ಇಟ್ಟಿದ್ದ ಬ್ಯಾಗ್‍ನಲ್ಲಿದ್ದಿದ್ದು ನಿಜವಾದ ಸ್ಫೋಟಕ!

    ಮಂಗ್ಳೂರು ಏರ್‌ಪೋರ್ಟಿನಲ್ಲಿ ಇಟ್ಟಿದ್ದ ಬ್ಯಾಗ್‍ನಲ್ಲಿದ್ದಿದ್ದು ನಿಜವಾದ ಸ್ಫೋಟಕ!

    – ಆದಿತ್ಯರಾವ್ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ

    ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಆದಿತ್ಯರಾವ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

    ಮಂಗಳೂರಿನ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಆರೋಪಿ ಆದಿತ್ಯರಾವ್ ವಿರುದ್ಧ ಸ್ಥಳೀಯ ಪೋಲಿಸರ ವಿಶೇಷ ತನಿಖಾ ತಂಡ 700 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. ಚಾರ್ಜ್‍ಶೀಟ್‍ನಲ್ಲಿ ಹಲವು ಪ್ರಮುಖ ಅಂಶಗಳನ್ನು ಉಲ್ಲೇಖ ಮಾಡಲಾಗಿದ್ದು, ಆರೋಪಿ ಇಟ್ಟಿದ್ದ ಬ್ಯಾಗ್ ನಲ್ಲಿ ಇದ್ದದ್ದು ನಿಜವಾದ ಸ್ಫೋಟಕವಾಗಿದೆ. ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಆದಿತ್ಯರಾವ್ ಬಾಂಬ್ ಇಟ್ಟಿದ್ದ ಎಂದು ತಿಳಿಸಲಾಗಿದೆ.

    ಅಲ್ಲದೆ ಅಮೋನಿಯಂ ನೈಟ್ರೇಟ್, ಸ್ಫೋಟದ ತೀವ್ರತೆ ಹೆಚ್ಚಿಸಲು ಕಬ್ಬಿಣದ ಮೊಳೆ ಅಳವಡಿಸಲಾಗಿತ್ತು. ಉದ್ದೇಶಪೂರ್ವಕವಾಗಿ ಒಂದು ವೈಯರ್ ಸಂಪರ್ಕಿಸದೆ ಆರೋಪಿ ಹಾಗೆಯೇ ಬಿಟ್ಟಿದ್ದ. ಇದು ನಿಜವಾದ ಸ್ಫೋಟಕ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲೂ ಸಾಬೀತಾಗಿದೆ. ಆರೋಪಿ ವಿರುದ್ಧ ಯು.ಎ.ಪಿ.ಎ ಅಡಿ ಪ್ರಕರಣ ದಾಖಲಿಸಿ ಈ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ.

    ಏನಿದು ಪ್ರಕರಣ?:
    2020ರ ಜನವರಿ 20ರಂದು ಮಂಗಳೂರು ಏರ್ ಪೋರ್ಟ್‍ನಲ್ಲಿ ಬಾಂಬ್ ಪತ್ತೆಯಾಗಿದ್ದು, ಈ ವಿಚಾರ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ಈ ಬೆನ್ನಲ್ಲೆ ಎಲ್ಲಾ ವಿಮಾನ ನಿಲ್ಧಾನದಲ್ಲೂ ಹೈಅಲರ್ಟ್ ಘೋಷಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಆರೋಪಿ ಆದಿತ್ಯರಾವ್ ನಢರವಾಗಿ ಬೆಂಗಳೂರಿಗೆ ಬಂದು ಪೊಲೀಸ್ ಮಹಾನಿರ್ದೇಶಕಿ ನೀಲಮಣಿರಾಜು ಅವರ ಕಚೇರಿಗೆ ತೆರಳಿ ಶರಣಾಗಿದ್ದನು. ಅಲ್ಲದೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಾನೇ ಬಾಂಬ್ ಇಟ್ಟಿರುವುದಾಗಿ ಬಾಯ್ಬಿಟ್ಟಿದ್ದನು.

  • ಪಿ.ಚಿದಂಬರಂ, ಪುತ್ರ ಕಾರ್ತಿ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ

    ಪಿ.ಚಿದಂಬರಂ, ಪುತ್ರ ಕಾರ್ತಿ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ

    ನವದೆಹಲಿ: ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಕಾರ್ತಿ ಚಿದಂಬರಂ ವಿರುದ್ಧದ ಐಎನ್‍ಎಕ್ಸ್ ಮೀಡಿಯಾ ಭಷ್ಟಾಚಾರ ಪ್ರಕರಣದ ಚಾರ್ಜ್ ಶೀಟ್‍ನ್ನು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಸಲ್ಲಿಸಿದೆ.

    ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಎದುರು ಜಾರಿ ನಿರ್ದೇಶನಾಲಯ ಪಾಸ್‍ವರ್ಡ್ ಆಧಾರಿತ ಇ-ಚಾರ್ಜ್‍ಶೀಟ್ ನ್ನು ಸಲ್ಲಿಕೆ ಮಾಡಿದೆ. ಲಾಕ್‍ಡೌನ್ ಹಿನ್ನೆಲೆಯಲ್ಲಿ ನ್ಯಾಯಾಲಯದ ಕಾರ್ಯಗಳು ಸ್ಥಗಿತಗೊಂಡಿವೆ. ನ್ಯಾಯಾಲಾಯ ಆರಂಭವಾದ ಕೂಡಲೇ ಆರೋಪ ಪಟ್ಟಿಯನ್ನು ದಾಖಲೆಗಳಲ್ಲಿ ಸಲ್ಲಿಸುವಂತೆ ಸೂಚಿಸಿದೆ. ಆರೋಪ ಪಟ್ಟಿಯಲ್ಲಿ ಪಿ.ಚಿದಂಬರಂ, ಪುತ್ರ ಕಾರ್ತಿ ಚಿದಂಬರಂ, ಚಾರ್ಟೆಟ್ ಅಕೌಂಟಂಟ್ ಎಸ್.ಎಸ್. ಭಾಸ್ಕರರಾಮನ್ ಸೇರಿದಂತೆ ಹಲವರ ಹೆಸರುಗಳಿವೆ ಎಂದು ವರದಿಯಾಗಿದೆ.

    2019 ಆಗಸ್ಟ್ 21ರಂದು ಐಎನ್‍ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಪಿ.ಚಿದಂಬರಂ ಸಿಬಿಐನಿಂದ ಬಂಧನಕ್ಕೊಳಕ್ಕಾಗಿದ್ದರು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಕ್ಟೋಬರ್ 16ರಂದು ಚಿದಂಬರಂ ಅವರನ್ನ ಬಂಧಿಸಿತ್ತು. ಸುಪ್ರೀಂಕೋರ್ಟ್ 2019 ಅಕ್ಟೋಬರ್ 22ರಂದು ಸಿಬಿಐ ಸಲ್ಲಿಸಿದ್ದ ಪ್ರಕರಣದಲ್ಲಿ ಜಾಮೀನು ನೀಡಿತ್ತು. ಡಿಸೆಂಬರ್ 4ರಂದು ಇಡಿ ಪ್ರಕರಣದಲ್ಲಿ ಜಾಮೀನು ಪಡೆದು ಪಿ.ಚಿದಂಬರಂ ಹೊರ ಬಂದಿದ್ದಾರೆ.

  • ಆರೋಪಿಯ ಕಿರುಕುಳಕ್ಕೆ ಬೇಸತ್ತು ಮಧು ಪತ್ತಾರ್ ಆತ್ಮಹತ್ಯೆ – ಸಿಐಡಿಯಿಂದ ಚಾರ್ಜ್ ಶೀಟ್ ಸಲ್ಲಿಕೆ

    ಆರೋಪಿಯ ಕಿರುಕುಳಕ್ಕೆ ಬೇಸತ್ತು ಮಧು ಪತ್ತಾರ್ ಆತ್ಮಹತ್ಯೆ – ಸಿಐಡಿಯಿಂದ ಚಾರ್ಜ್ ಶೀಟ್ ಸಲ್ಲಿಕೆ

    ರಾಯಚೂರು: ಭಾರೀ ಸಂಚಲನ ಮೂಡಿಸಿದ್ದ ರಾಯಚೂರು ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವು ಪ್ರಕರಣದಲ್ಲಿ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಆರೋಪಿ ಸುದರ್ಶನ್ ಯಾದವ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

    ಆರೋಪಿ ಯುವತಿಗೆ ಕಿರುಕುಳ ಹಾಗೂ ಆತ್ಮಹತ್ಯೆಗೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ್ದಾನೆ ಎಂದು ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಸುಮಾರು ಒಂದು ಸಾವಿರ ಪುಟಗಳ ದೋಷಾರೋಪಣೆ ಪಟ್ಟಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ, ಕಿರುಕುಳ, ಅಡ್ಡಗಟ್ಟಿ ಹಲ್ಲೆ ಮಾಡಿದ್ದ ಎಂದು ಆರೋಪಗಳಿವೆ. ಸುಮಾರು 60 ಸಾಕ್ಷಿ, 45 ದಾಖಲೆಗಳನ್ನ ರಾಯಚೂರಿನ 3 ನೇ ಹೆಚ್ಚುವರಿ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಸಿಐಡಿ ಪೊಲೀಸರು ಸಲ್ಲಿಸಿದ್ದಾರೆ.

    ವಿದ್ಯಾರ್ಥಿನಿ ಶವ ಕೆಲದಿನಗಳಾದ ಮೇಲೆ ಪತ್ತೆಯಾದ ಹಿನ್ನೆಲೆ ಕಪ್ಪುಬಣ್ಣಕ್ಕೆ ತಿರುಗಿದೆ, ಯಾವುದೇ ಸುಟ್ಟಗಾಯಗಳಿಲ್ಲದಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದೆ ಎನ್ನುವ ಮಾಹಿತಿಯನ್ನ ಸಿಐಡಿ ನ್ಯಾಯಾಲಯಕ್ಕೆ ನೀಡಿದೆ. ಆರೋಪಿ ಸುದರ್ಶನ್ ಕಳೆದ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾನೆ.

    ಪಿಯುಸಿಯಲ್ಲಿ ಸಹಪಾಠಿಯಾಗಿದ್ದ ಮಧು ಹಾಗೂ ಸುದರ್ಶನ ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದ್ರೆ ಮಧು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಕೆಲ ತಿಂಗಳಿಂದ ಸುದರ್ಶನ್ ಮಧು ನಡವಳಿಕೆ ಬಗ್ಗೆ ಸಂಶಯಪಟ್ಟು ಕಿರುಕುಳ ಕೊಡುತ್ತಿದ್ದನು. ಇದರಿಂದ ವಿದ್ಯಾರ್ಥಿನಿ ನೊಂದಿದ್ದಳು. ಹೀಗಾಗಿ ಆರೋಪಿಯಿಂದ ಮಧು ಅಂತರ ಕಾಯ್ದುಕೊಂಡಿದ್ದಳು.

    ಕಳೆದ ಏ.13ರಂದು ಮಧು ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದಾಗ ದಾರಿ ಮಧ್ಯೆ ಸುದರ್ಶನ್ ಆಕೆಯ ಜೊತೆ ಜಗಳವಾಡಿದ್ದನು. ಆಗ ಸಾರ್ವಜನಿಕರು ಜಗಳ ಬಿಡಿಸಿ ಕಳುಹಿಸಿದ್ದರು. ಆ ಬಳಿಕ ಅಲ್ಲಿಂದ ಮಧು ನೇರವಾಗಿ ತಾನು ಓದುತ್ತಿದ್ದ ನವೋದಯ ಕಾಲೇಜಿನ ಆವರಣಕ್ಕೆ ಹೋಗಿದ್ದಳು. ಆದರೆ ಮಧುವನ್ನು ಹಿಂಬಾಲಿಸಿಕೊಂಡು ಬಂದಿದ್ದ ಆರೋಪಿ ಕಾಲೇಜಿನ ಆವರಣದ ಪಾರ್ಕಿಂಗ್‍ನಲ್ಲಿ ಆಕೆಯ ದ್ವಿಚಕ್ರ ವಾಹನದ ಕೀ ಮತ್ತು ಮೊಬೈಲ್ ಕಸಿದುಕೊಂಡಿದ್ದನು. ನೀನು ನನ್ನನ್ನೇ ಪ್ರೀತಿಸಬೇಕು, ಇಲ್ಲದಿದ್ದರೆ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೆದರಿಸಿದ್ದನು. ಸುದರ್ಶನ್ ಕಿರುಕುಳದಿಂದ ಬೇಸತ್ತ ಮಧು ನೇರವಾಗಿ ಕಾಲೇಜು ಆವರಣದಿಂದ ನಿರ್ಜನ ಪ್ರದೇಶಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.