Tag: ಚಾರ್ಮಾಡಿ

  • ಸಕಲೇಶಪುರದಲ್ಲಿ ಗುಡ್ಡ ಕುಸಿತ, ಮಂಗ್ಳೂರು ಹೆದ್ದಾರಿ ಬಂದ್ – ಮಡಿಕೇರಿಯಿಂದ ತೆರಳುವಂತೆ ಮನವಿ

    ಸಕಲೇಶಪುರದಲ್ಲಿ ಗುಡ್ಡ ಕುಸಿತ, ಮಂಗ್ಳೂರು ಹೆದ್ದಾರಿ ಬಂದ್ – ಮಡಿಕೇರಿಯಿಂದ ತೆರಳುವಂತೆ ಮನವಿ

    ಹಾಸನ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕಲೇಶಪುರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಡ್ಡ ಕುಸಿತವಾಗಿದ್ದು ಸಂಚಾರ ಬಂದ್ ಆಗಿದೆ. ಪರಿಣಾಮ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸವಾರರು ಪರದಾಡುತ್ತಿದ್ದಾರೆ.

    ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸಕಲೇಶಪುರ ತಾಲೂಕಿನ ಎತ್ತಿನಹಳ್ಳದಲ್ಲಿ ರಸ್ತೆಮೇಲೆ ಮಣ್ಣಿನ ರಾಶಿ ಬಿದ್ದಿದೆ. ಹೀಗಾಗಿ ಮಡಿಕೇರಿ ಮಾರ್ಗದ ಮೂಲಕ ಮಂಗಳೂರಿಗೆ ತೆರಳುವಂತೆ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

    ಮಂಗಳೂರಿಗೆ ತೆರಳೋ ವಾಹನ ಮಾಲೀಕರು ಮಡಿಕೇರಿ ಮಾರ್ಗದ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಯಾಕೆಂದರೆ ರಸ್ತೆ ಮೇಲೆ ಬಿದ್ದಿರುವ ಮಣ್ಣು ತೆರವು ಮಾಡಲು ಸಾಕಷ್ಟು ಸಮಯ ಬೇಕು. ಈ ಹಿನ್ನೆಲೆಯಲ್ಲಿ ಬದಲಿ ಮಾರ್ಗದಲ್ಲಿ ಸಂಚರಿಸಲು ಪೊಲೀಸ್ ಇಲಾಖೆ ಮನವಿ ಮಾಡಿಕೊಂಡಿದೆ.

    ಇತ್ತ ಚಾರ್ಮಾಡಿ ಘಾಟಿಯಲ್ಲೂ ಗುಡ್ಡ ಕುಸಿತವಾಗಿದ್ದು ಇಲ್ಲೂ ಸಂಚಾರವನ್ನು ಬಂದ್ ಮಾಡಲಾಗಿದೆ. ಕಳೆದ ವರ್ಷ ಬಿದ್ದ ಭಾರೀ ಮಳೆಗೆ ಮಡಿಕೇರಿ ಸುಳ್ಯ ಮಧ್ಯೆ ಇರುವ ಸಂಪಾಜೆ ಘಾಟಿಯ ರಸ್ತೆ ಕೊಚ್ಚಿಕೊಂಡು ಹೋಗಿತ್ತು. ಹೀಗಾಗಿ ಹಲವು ತಿಂಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಈ ಬಾರಿಯ ಮಳೆಗೆ ರಸ್ತೆ ಬದಿಯಲ್ಲಿ ಹಾಕಲಾಗಿದ್ದ ಮರಳಿನ ದಿಬ್ಬಗಳು ಕೊಚ್ಚಿಕೊಂಡು ಹೋಗಿವೆ.

  • ಚಾರ್ಮಾಡಿ ಘಾಟ್‍ನಲ್ಲಿ 10 ಕಿಲೋ ಮೀಟರ್ ಟ್ರಾಫಿಕ್!

    ಚಾರ್ಮಾಡಿ ಘಾಟ್‍ನಲ್ಲಿ 10 ಕಿಲೋ ಮೀಟರ್ ಟ್ರಾಫಿಕ್!

    ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿ ಕೆಟ್ಟು ನಿಂತ ಪರಿಣಾಮ ಬೆಳಗ್ಗೆ 4 ಗಂಟಿಯಿಂದಲೂ ಟ್ರಾಫಿಕ್ ಜಾಮ್ ಉಂಟಾಗಿದೆ.

    ಚಾರ್ಮಾಡಿಯ 3ನೇ ತಿರುವಿನಿಂದ ವಾಹನಗಳು 10 ಕಿ.ಮೀ.ನಷ್ಟು ದೂರ ಸಾಲುಗಟ್ಟಿ ನಿಂತಿದ್ದು, ಪ್ರವಾಸಿಗರು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ. ಭಾರತ್ ಬಂದ್ ಹಾಗೂ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಎಲ್ಲರೂ ತಮ್ಮ ಊರಿಗೆ ತೆರಳುತ್ತಿದ್ದು, ಚಾರ್ಮಾಡಿ ಘಾಟ್ ನಲ್ಲಿ ವಾಹನ ದಟ್ಟಣೆ ಹೆಚ್ಚಳವಾಗಿದೆ.

    ಈ ಘಾಟ್ ಮಂಗಳೂರು-ಬೆಂಗಳೂರು-ಧರ್ಮಸ್ಥಳ ಸಂಪರ್ಕಿಸುತ್ತಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

    ಕೆಲ ದಿನಗಳ ಹಿಂದೆಯಷ್ಟೇ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತವಾದ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ವೇಳೆ ಚಾರ್ಮಾಡಿಯಲ್ಲೇ ಎಲ್ಲಾ ವಾಹನಗಳು ಚಲಿಸುತ್ತಿದ್ದವು. ಲಘು-ಘನ ಎನ್ನದೇ ಎಲ್ಲಾ ವಾಹನಗಳು ಇದೇ ಮಾರ್ಗವಾಗಿ ಬೆಂಗಳೂರು ಸೇರುತ್ತಿದ್ದವು. ಈ ಹಿನ್ನೆಲೆಯಲ್ಲಿ ಹಲವು ದಿನಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಹಾಗೂ ವಾಹನ ಸವಾರರು ನರಕಯಾತನೆ ಅನುಭವಿಸಿದ್ದರು. ಸದ್ಯ ಶಿರಾಡಿ ಘಾಟ್ ಓಪನ್ ಆಗಿದ್ದು, ಲಘುವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • #ConnectUsToMangalore ಕರಾವಳಿ ಸಂಪರ್ಕಕ್ಕೆ ಪರ್ಯಾಯ ಮಾರ್ಗ ಕಲ್ಪಿಸಿ

    #ConnectUsToMangalore ಕರಾವಳಿ ಸಂಪರ್ಕಕ್ಕೆ ಪರ್ಯಾಯ ಮಾರ್ಗ ಕಲ್ಪಿಸಿ

    ಬೆಂಗಳೂರು: ಕರಾವಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ಪರ್ಯಾಯ ರಸ್ತೆಗಳನ್ನು ಶೀಘ್ರವೇ ಅಭಿವೃದ್ಧಿ ಪಡಿಸುವಂತೆ ಬೇಡಿಕೆ ಇಟ್ಟು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ #ConnectUsToMangalore ಬಳಸಿ ಅಭಿಯಾನ ಆರಂಭಿಸಿದ್ದಾರೆ.

    ಶಿರಾಡಿ, ಸಂಪಾಜೆ ಘಾಟಿ ಬಂದ್ ಆಗಿರುವ ಕಾರಣ ಈಗ ವಾಹನಗಳು ಚಾರ್ಮಾಡಿ ಘಾಟಿ, ಕುದುರೆಮುಖ ರಸ್ತೆಯಲ್ಲಿ ಸಂಚರಿಸುತ್ತವೆ. ಚಾರ್ಮಾಡಿ ಘಾಟ್ ನಲ್ಲಿ ವಾಹನಗಳ ದಟ್ಟನೆ ಹೆಚ್ಚಾಗಿದ್ದು ಭಾರೀ ಟ್ರಾಫಿಕ್ ಜಾಮ್ ಆಗುತ್ತಿದೆ. ಹೀಗಾಗಿ ಈಗಾಗಲೇ ಇರುವ ಪರ್ಯಾಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಿ ಮುಂದೆ ನಡೆಯಬಹುದಾದ ಅನಾಹುತಗಳನ್ನು ತಪ್ಪಿಸಿ ಎಂದು ಸರ್ಕಾರದ ಪ್ರತಿನಿಧಿಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

    ಸುಳ್ಯ ಮತ್ತು ಕೊಡಗನ್ನು ಸಂಪರ್ಕಿಸಲು ಈಗಾಗಲೇ ಪರ್ಯಾಯ ರಸ್ತೆಗಳು ಇದೆ. ಆದರೆ ಈ ರಸ್ತೆಯಲ್ಲಿ ಸಂಚಾರ ದುಸ್ತರವಾಗಿದೆ. ಹೀಗಾಗಿ ಈ ರಸ್ತೆಗಳನ್ನೇ ಅಭಿವೃದ್ಧಿ ಪಡಿಸಿದರೆ ಈ ಸಮಸ್ಯೆಗೆ ಸ್ವಲ್ಪ ಮಟ್ಟಿನ ಪರಿಹಾರವನ್ನು ಕಂಡುಕೊಳ್ಳಬಹುದು ಎನ್ನುವ ಸಲಹೆಯನ್ನು ಜನ ನೀಡುತ್ತಿದ್ದಾರೆ. ಇದನ್ನೂ ಓದಿ: ಸರ್ಕಾರ ಮನಸ್ಸು ಮಾಡಿದ್ರೆ ಸುಳ್ಯ ಭಾಗದಿಂದ ಮಡಿಕೇರಿಗೆ ಸಂಪರ್ಕ ಕಲ್ಪಿಸಬಹುದು! ಸುಲಭ ರಸ್ತೆಗಳು ಎಲ್ಲಿವೆ? ಎಷ್ಟು ಕಿ.ಮೀ ಇದೆ?

    ಬೇಡಿಕೆ ಯಾಕೆ?
    1. ಕರಾವಳಿಯ ನಗರಗಳಾದ ಮಂಗಳೂರು, ಉಡುಪಿ ರಾಜ್ಯದ ಪ್ರಮುಖ ನಗರಗಳಾಗಿ ಬೆಳೆದಿವೆ. ವಿಮಾನ ಮತ್ತು ರೈಲು ಸಂಪರ್ಕ ಇದ್ದರೂ ಬಹಳಷ್ಟು ಜನ ಈಗಲೂ ರಸ್ತೆಯನ್ನೇ ಅವಲಂಬಿಸಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಅತಿ ಹೆಚ್ಚು ಸಂಖ್ಯೆಯಲ್ಲಿ ಕೆಎಸ್ಆರ್‌ಟಿಸಿ ವೋಲ್ವೋ, ರಾಜಹಂಸ ಬಸ್ಸುಗಳು ಈ ರಸ್ತೆಯಲ್ಲಿ ಸಂಚರಿಸುತ್ತಿವೆ. ಸರ್ಕಾರಿ ಬಸ್ಸಿಗೆ ಪೈಪೋಟಿ ಎನ್ನುವಂತೆ ಖಾಸಗಿ ಬಸ್ಸುಗಳು ಸಂಚರಿಸುತ್ತಿವೆ. ಅತಿ ಹೆಚ್ಚು ಆದಾಯ ತರುವ ಮಾರ್ಗಗಳು ಬಂದ್ ಆಗಿರುವ ಕಾರಣ ಸರ್ಕಾರದ ಜೊತೆ ಖಾಸಗಿ ಕಂಪೆನಿಗಳಿಗೂ ದಿನಕ್ಕೆ ಲಕ್ಷಾಂತರ ರೂ. ನಷ್ಟವಾಗುತ್ತಿದೆ.

    2. ಈ ಹಿಂದೆ ಚಾರ್ಮಾಡಿ ಘಾಟಿ ಮೂಲಕ ಮಂಗಳೂರನ್ನು ಬಸ್ಸಿನಲ್ಲಿ ಪ್ರಯಾಣಿಸಿದರೆ 8, 9 ಗಂಟೆಯಲ್ಲಿ ತಲುಪಬಹುದಾಗಿತ್ತು. ಆದರೆ ಈಗ ಬೆಂಗಳೂರಿನಿಂದ ರಾತ್ರಿ 8 ಗಂಟೆಗೆ ಹೊರಟರೂ ಮಂಗಳೂರನ್ನು 9 ಗಂಟೆಯಲ್ಲಿ ತಲುಪಬಹುದು ಎನ್ನುವ ಖಾತರಿ ಇಲ್ಲ. ಅದರಲ್ಲೂ ಅಪಘಾತ, ವಾಹನಗಳು ಪಲ್ಟಿಯಾದರೆ ದಿನಗಟ್ಟಲೇ ಈ ರಸ್ತೆಯಲ್ಲಿ ಸಂಚಾರ ಬಂದ್ ಆಗುತ್ತಿದೆ.

    3. ಘಾಟಿ ರಸ್ತೆಗಳು ಬಂದ್ ಆದರೆ ಜನರ ಪ್ರಯಾಣಕ್ಕೆ ಮಾತ್ರ ಹೊಡೆತ ಬೀಳುವುದಿಲ್ಲ. ವ್ಯಾಪಾರಿಗಳ ಮೇಲೂ ಭಾರೀ ಹೊಡೆತ ಬೀಳುತ್ತದೆ. ಉದಾಹರಣೆಗೆ ಸಂಪಾಜೆ ಘಾಟಿ ಬಂದ್ ಆಗಿರುವುದರಿಂದ ಮಡಿಕೇರಿ, ಸುಳ್ಯ, ಪುತ್ತೂರು ತಾಲೂಕಿನ ಹೋಟೆಲ್ ಹಣ್ಣಿನ ಅಂಗಡಿ, ಜ್ಯೂಸ್… ಇತ್ಯಾದಿಗಳನ್ನು ಮಾರಾಟ ಮಾಡುವ ವ್ಯಾಪಾರಿಗಳ ಮೇಲೂ ಪರಿಣಾಮ ಬೀರುತ್ತದೆ. ಮಳೆಗಾಲದಲ್ಲೂ ಹೇಗೂ ವ್ಯಾಪಾರ ಕಡಿಮೆ ಇರುತ್ತದೆ. ಬೇಸಿಗೆಯಲ್ಲಿ ರಸ್ತೆಗಳು ಬಂದ್ ಆದರೆ ಅವರ ಜೀವನೋಪಾಯಕ್ಕೂ ಕಷ್ಟವಾಗುತ್ತದೆ.

    4. ವ್ಯಾಪಾರಕ್ಕೆ ಕಡೆ ರಸ್ತೆ ಬಂದ್ ಹೊಡೆತ ಕೊಟ್ಟರೆ ಇನ್ನೊಂದು ಕಡೆ ಘಟ್ಟ ಪ್ರದೇಶಗಳಿಗೆ ಸರಕು ಸಾಗಣೆಕೆಗೂ ಕಷ್ಟವಾಗುತ್ತದೆ. ದೇಶದ 9ನೇ ಅತಿ ದೊಡ್ಡ ಬಂದರು ಎನ್ನುವ ಹೆಗ್ಗಳಿಕೆ ಮಂಗಳೂರು ಪಾತ್ರವಾಗಿದೆ. ಈ ಬಂದರಿಗೆ ರೈಲಿಗಿಂತ ಹೆಚ್ಚಾಗಿ ಸರಕುಗಳು ರಸ್ತೆಯ ಮೂಲಕವೇ ಬರುತ್ತಿದೆ. ಬಂದರಿನ ಜೊತೆಗೆ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್(ಎಂಆರ್‌ಪಿಎಲ್) ಘಟಕ ಮಂಗಳೂರಿನಲ್ಲಿದೆ. ಉದಾಹರಣೆಗೆ ಈಗ ಕೊಡಗು ಜಿಲ್ಲೆಗೆ ಎಂಆರ್‌ಪಿಎಲ್ ನಿಂದ ತೈಲವನ್ನು ಕಳುಹಿಸುವುದೇ ದುಸ್ತರವಾಗಿದೆ. ಸಂಪಾಜೆ ಘಾಟಿ ಮೂಲಕ ಮಡಿಕೇರಿಗೆ 120 ಕಿ.ಮೀ ಕ್ರಮಿಸಿ ಟ್ಯಾಂಕರ್ ತಲುಪುತ್ತಿದ್ದರೆ ಈಗ 250ಕ್ಕೂ ಹೆಚ್ಚು ಕಿ.ಮೀ ಕ್ರಮಿಸಬೇಕಿದೆ.

    5. ದಕ್ಷಿಣ ಕನ್ನಡದ ಪ್ರತಿ ತಾಲೂಕು, ಗ್ರಾಮಗಳಲ್ಲಿ ವಾರಕ್ಕೊಮ್ಮೆ ಸಂತೆ ನಡೆಯುತ್ತಿದೆ. ಘಟ್ಟ ಪ್ರದೇಶಗಳಲ್ಲಿ ಬೆಳೆದಿರುವ ತರಕಾರಿಗಳನ್ನು ರೈತರು ಇಲ್ಲಿ ತಂದು ಮಾರಾಟ ಮಾಡುತ್ತಾರೆ. ಈಗ ರಸ್ತೆ ಸಂಪರ್ಕವೇ ಬಂದ್ ಆಗಿದ್ದರಿಂದ ರೈತರ ವ್ಯಾಪಾರಕ್ಕೆ ಹೊಡೆತ ಬಿದ್ದಿದೆ.

    6. ಎರಡು ಘಾಟಿ ರಸ್ತೆಗಳಲ್ಲಿ ಸಂಚರಿಸುವ ವಾಹನಗಳು ಈಗ ಚಾರ್ಮಾಡಿ ಮೂಲಕವೇ ಸಂಚರಿಸುತ್ತಿದೆ. ಒಂದು ವೇಳೆ ವಾಹನಗಳ ಒತ್ತಡವನ್ನು ತಾಳಲಾರದೇ ಚಾರ್ಮಾಡಿಯ ರಸ್ತೆಯಲ್ಲೂ ಭೂ ಕುಸಿತವಾದರೆ ಸಂಪರ್ಕ ಮತ್ತಷ್ಟು ದುಸ್ತರವಾಗುತ್ತದೆ.

    7. ಈಗಾಗಲೇ ಇರುವ ರಸ್ತೆಯನ್ನು ಅಭಿವೃದ್ಧಿ ಪಡಿಸುವ ಸಂದರ್ಭದಲ್ಲಿ ಕೆಲವು ಕಡೆ ಮರಗಳನ್ನು ಕಡಿಯಬೇಕಾದಿತು. ಒಂದು ವೇಳೆ ಪರ್ಯಾಯ ರಸ್ತೆ ಇದ್ದು ಮತ್ತೊಂದು ರಸ್ತೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರೆ ಅದು ತಪ್ಪಾಗುತ್ತದೆ. ಆದರೆ ಇಲ್ಲಿ ಯಾವುದೇ ಪರ್ಯಾಯ ರಸ್ತೆ ಇಲ್ಲದೇ ಇರುವ ಕಾರಣ ಅರಣ್ಯನಾಶವಾಗುತ್ತದೆ ಎನ್ನುವ ಕಾರಣ ನೀಡಿದರೆ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ.

    8. ರಸ್ತೆ ಸಂಪರ್ಕ ಬಂದ್ ಆದರೆ ವಿಶೇಷವಾಗಿ ಜಿಲ್ಲೆಗಳ ಗಡಿಯಲ್ಲಿರುವ ಮಂದಿ ಬಹಳ ಕಷ್ಟವನ್ನು ಅನುಭವಿಸುತ್ತಾರೆ. ಉದಾಹರಣೆಗೆ ಸಂಪಾಜೆ, ಚೆಂಬು, ಪೆರಾಜೆ ಗ್ರಾಮದ ಜನತೆ ವಾಣಿಜ್ಯ ಕೆಲಸಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕನ್ನೇ ಅವಲಂಬಿಸಿದರೆ ಸರ್ಕಾರಿ ಕೆಲಸಕ್ಕೆ ಮಡಿಕೇರಿಗೆ ಹೋಗುವುದು ಅನಿವಾರ್ಯ. ಅದರಲ್ಲೂ ವಿದ್ಯಾರ್ಥಿಗಳಿಗೆ ಮತ್ತು ಪ್ರತಿನಿತ್ಯ ಉದ್ಯೋಗಕ್ಕೆ ತೆರಳುವ ಮಂದಿ ಪಾಡು ಹೇಳತೀರದಾಗಿದೆ.

    8. ಕೊನೆಯದಾಗಿ ಯಾವುದೇ ಅಭಿವೃದ್ಧಿ ಕೆಲಸ ನಡೆಯಬೇಕಾದರೆ ಅರಣ್ಯ ನಾಶವಾಗುತ್ತದೆ. ಅದರಲ್ಲೂ ರಸ್ತೆ ಸಂಪರ್ಕದಂತಹ ವಿಚಾರಗಳು ಬಂದಾಗ ಅನಿವಾರ್ಯವಾಗಿ ಮೊದಲ ಆದ್ಯತೆಯನ್ನು ರಸ್ತೆಗೆ ನೀಡಬೇಕಾಗುತ್ತದೆ. ಅರಣ್ಯನಾಶವನ್ನು ತಡೆಗಟ್ಟಬೇಕಾದರೆ ಮೊದಲು ಅರಣ್ಯ ಇಲಾಖೆಗೆ ಖಡಕ್ ಅಧಿಕಾರಿಗಳನ್ನು ನೇಮಿಸಿ ಟಿಂಬರ್ ಮಾಫಿಯಾವನ್ನು ತಡೆಗಟ್ಟಬೇಕು. ಟಿಂಬರ್ ಮಾಫಿಯಾ ನಡೆಯಬೇಕಾದರೆ ಗ್ರಾಮಸ್ಥರ ಸಾಥ್ ಇದ್ದೇ ಇರುತ್ತದೆ. ಹೇಗೆ ವ್ಯಕ್ತಿಗಳು ಖಾಸಗಿ ಆಸ್ತಿಯನ್ನು ರಕ್ಷಣೆ ಮಾಡುತ್ತಾರೋ ಅದೇ ರೀತಿಯಾಗಿ ಅರಣ್ಯವು ನನ್ನ ಆಸ್ತಿ. ಅದನ್ನು ನಾನು ರಕ್ಷಿಸುತ್ತೇನೆ ಎಂದು ಅರಣ್ಯದ ಬುಡದಲ್ಲಿರುವ ಜನ ಪಣ ತೊಡುವುದಿಲ್ಲವೋ ಅಲ್ಲಿಯವರೆಗೂ ಈ ಮಾಫಿಯಾವನ್ನು ತಡೆಗಟ್ಟಲು ಸಾಧ್ಯವಿಲ್ಲ.

     

     

     

    https://twitter.com/MeghanNaik/status/1032913383685799936

     

  • ಚಾರ್ಮಾಡಿಯಲ್ಲಿ ಸಂಚಾರ ಬಂದ್- ಕುದುರೆಮುಖ ಸಂಚಾರ ನಿರ್ಬಂಧ ತೆರವು

    ಚಾರ್ಮಾಡಿಯಲ್ಲಿ ಸಂಚಾರ ಬಂದ್- ಕುದುರೆಮುಖ ಸಂಚಾರ ನಿರ್ಬಂಧ ತೆರವು

    ಚಿಕ್ಕಮಗಳೂರು: ರಾತ್ರಿ ಒಂಬತ್ತು ಗಂಟೆಯಿಂದ ಬೆಳಗ್ಗೆ ಆರು ಗಂಟೆವರೆಗೆ ಸಂಚಾರಕ್ಕೆ ನಿರ್ಬಂಧವಿದ್ದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕುದುರೆಮುಖ ಮಾರ್ಗದಲ್ಲಿ ಇದೀಗ ರಾತ್ರಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

    ಶಿರಾಡಿ ಘಾಟ್ ಬಂದ್ ಆದ ಮೇಲೆ ಕಳೆದ 4 ತಿಂಗಳಿನಿಂದ ಕುದುರೆಮುಖದಿಂದ ಮಂಗಳೂರಿಗೆ ಹೋಗುವ ಭಾರೀ ವಾಹನಗಳು ಹಾಗೂ ಇತರೇ ವಾಹನಗಳು ಮಾರ್ಗದಲ್ಲಿ ರಾತ್ರಿ ಪಾಳಯದಲ್ಲೂ ಸಂಚರಿಸಲು ಸರ್ಕಾರ ಅನುವು ಮಾಡಿಕೊಟ್ಟಿತ್ತು. ಆದರೆ ಕುದುರೆಮುಖ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ 45 ನಿಮಿಷಗಳ ಕಾಲ ಸಮಯದ ಮಿತಿಯನ್ನು ಹೇರಲಾಗಿತ್ತು. ಅಷ್ಟರಲ್ಲಿ ವಾಹನಗಳು ಕುದುರೆಮುಖದಿಂದ ಮಂಗಳೂರಿನ ಗಡಿ ಮುಟ್ಟಬೇಕಿತ್ತು.

    ಈಗ ಚಾರ್ಮಾಡಿಯಲ್ಲಿ ಸಮಸ್ಯೆ ಆಗಿರುವ 45 ನಿಮಿಷಗಳವರೆಗಿನ ನಿರ್ಬಂಧವನ್ನು ತೆರೆಯಲಾಗಿದೆ. ದಿನದ 24 ಗಂಟೆಯೂ ಯಾವಾಗ ಬೇಕಾದರು, ಯಾವ ವಾಹನ ಬೇಕಾದರು ಈ ಮಾರ್ಗದಲ್ಲಿ ಯಾವುದೇ ಟೈಂ ಲಿಮಿಟ್ ಇಲ್ಲದೆ ಸಾಗಲು ಸರ್ಕಾರ ವ್ಯವಸ್ಥೆ ಕಲ್ಪಿಸಿದೆ. ಇದರಿಂದ ಚಿಕ್ಕಮಗಳೂರಿನಿಂದ ಮಂಗಳೂರಿಗೆ ಹೋಗಬೇಕಾದ ಪ್ರವಾಸಿಗರು ಮೂಡಿಗೆರೆ, ಕಳಸ ಮಾರ್ಗವಾಗಿ ಕುದುರೆಮುಖದಿಂದ ಮಂಗಳೂರು ತಲುಪಬಹುದು.

    ಕುದುರೆಮುಖ ರಸ್ತೆಯಲ್ಲಿ ಕಾಡು ಪ್ರಾಣಿಗಳ ಹತ್ಯೆ ನಡೆಯುತ್ತಿದ್ದ ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸರ್ಕಾರ 45 ನಿಮಿಷಗಳ ಕಾಲ ಸಮಯದ ಮಿತಿಯನ್ನು ವಿಧಿಸಿತ್ತು.

    ಇಂದು, ನಾಳೆ ಬಂದ್: ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟಿಯ 2ನೇ ತಿರುವಿನಲ್ಲಿ ಭೂಕುಸಿತ ಆಗಿದ್ದರಿಂದ ಎರಡೂ ಕಡೆಯಿಂದ ವಾಹನ ಸಂಚಾರ ಬಂದ್ ಆಗಿತ್ತು. ಈ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಎಲ್ಲಾ ವಾಹನಗಳು ಸುಮಾರು ಮೂರು ಕಿಮೀ ಉದ್ದಕ್ಕೆ ಸಾಲುಗಟ್ಟಿ ನಿಂತಲ್ಲಿಯೇ ಸಿಲುಕಿಕೊಂಡಿದ್ದವು. ಚಾರ್ಮಾಡಿ ಘಾಟ್ ಭೂಕುಸಿತ ಹಿನ್ನೆಲೆ ಸದ್ಯ ಕಾಮಗಾರಿ ಮುಂದುವರಿಕೆಗೆ ಅವಕಾಶ ಕೇಳಿದ ಅಧಿಕಾರಿಗಳು ಮತ್ತೆರಡು ದಿನ ಚಾರ್ಮಾಡಿ ಘಾಟ್ ಸಂಚಾರ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಬುಧವಾರ ಮತ್ತು ಗುರುವಾರ ಈ ರಸ್ತೆ ಬಂದ್ ಆಗಲಿದೆ.

    ಮಳೆಯಿಂದ ಮತ್ತಷ್ಟು ಮರ, ಗುಡ್ಡಗಳು ಕುಸಿದು ಬೀಳುವ ಸ್ಥಿತಿಯಲ್ಲಿವೆ. ಈ ಹಿನ್ನೆಲೆಯಲ್ಲಿ ನಮಗೆ 48 ಗಂಟೆಗೆ ಸಮಯ ಕೊಡಿ. ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲಾಡಳಿತದ ನೆರವಿಂದ ಎಲ್ಲವನ್ನೂ ತೆರವುಗೊಳಿಸ್ತೇವೆ ಎಂದು ಚಿಕ್ಕಮಗಳೂರು ಎಸ್‍ಪಿ ಅಣ್ಣಾಮಲೈ ಹೇಳಿದ್ದಾರೆ.

  • ಟ್ಯಾಕರ್ ನಿಂದ ಅನಿಲ ಸೋರಿಕೆ: ಮಂಗಳೂರು- ಚಾರ್ಮಾಡಿ ಸಂಚಾರ ಸ್ಥಗಿತ

    ಟ್ಯಾಕರ್ ನಿಂದ ಅನಿಲ ಸೋರಿಕೆ: ಮಂಗಳೂರು- ಚಾರ್ಮಾಡಿ ಸಂಚಾರ ಸ್ಥಗಿತ

    ಮಂಗಳೂರು: ಗ್ಯಾಸ್ ಟ್ಯಾಂಕರ್  ನಿಂದ ಇದ್ದಕ್ಕಿದ್ದಂತೆ ಗ್ಯಾಸ್ ಲೀಕ್ ಆದ ಘಟನೆ ಶುಕ್ರವಾರ ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಡಂತ್ಯಾರು ಬಳಿ ನಡೆದಿದೆ.

    ಟ್ಯಾಂಕರ್ ನ ಮೇಲ್ಭಾಗದಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸ್ಥಳಕ್ಕೆ ಅಗ್ನಿ ಶಾಮಕದಳದ ಅಧಿಕಾರಿಗಳು ದೌಡಾಯಿಸಿದ್ದು ನೀರು ಹಾರಿಸಿ ಅಗ್ನಿ ಅವಘಡವಾಗದಂತೆ ತಡೆದಿದ್ದಾರೆ. ಮುಂಜಾಗೃತಾ ಕ್ರಮವಾಗಿ ಮಂಗಳೂರು ಚಾರ್ಮಾಡಿ ನಡುವಿನ ಸಂಚಾರ ಸ್ಥಗಿತಗೊಳಿಸಲಾಗಿದೆ.

    ಒಂದು ಕಿಲೋ ಮೀಟರ್ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸ್ಥಳೀಯ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಶಿರಾಡಿ ಘಾಟ್ ದುರಸ್ತಿಯ ಹಿನ್ನಲೆಯಲ್ಲಿ ಹೆಚ್ಚಿನ ವಾಹನಗಳು ಚಾರ್ಮಾಡಿ ಮೂಲಕವೇ ಮಂಗಳೂರು ಬೆಂಗಳೂರಿಗೆ ಸಂಚರಿಸುತ್ತಿವೆ.

     

  • ಚಾರ್ಮಾಡಿಯಲ್ಲಿ ಗುಡ್ಡ ಕುಸಿತ- ಪ್ರವಾಸಿಗರಿಗೆ ಆತಂಕ

    ಚಾರ್ಮಾಡಿಯಲ್ಲಿ ಗುಡ್ಡ ಕುಸಿತ- ಪ್ರವಾಸಿಗರಿಗೆ ಆತಂಕ

    ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿಯಲ್ಲಿ ಸುರಿಯುತ್ತಿರೋ ಭಾರೀ ಮಳೆಯಿಂದಾಗಿ ಮೂಡಿಗೆರೆಯಿಂದ ಧರ್ಮಸ್ಥಳ, ಮಂಗಳೂರು, ಮಣಿಪಾಲ್‍ಗೆ ಸಂಪರ್ಕ ಕಲ್ಪಿಸೋ ಚಾರ್ಮಾಡಿಯಲ್ಲಿ ಗುಡ್ಡ ಕುಸಿದಿದೆ.

    ಅದೃಷ್ಟವತಾಶ್ ಘಟನೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಭಾನುವಾರ ಸಂಜೆ ಸುಮಾರು 5.30 ರಿಂದ 6 ಗಂಟೆಗೆ ಗುಡ್ಡ ಕುಸಿದಿದ್ದು ಪ್ರವಾಸಿಗರು ಆತಂಕಕ್ಕೀಡಾಗಿದ್ದಾರೆ. ಗುಡ್ಡ ಕುಸಿತದಿಂದಾಗಿ ಒಂದು ಗಂಟೆಗೂ ಅಧಿಕ ಕಾಲ ಸುಮಾರು ಎರಡು ಕಿ.ಮೀ.ನಷ್ಟು ದೂರ ಟ್ರಾಫಿಕ್ ಜಾಮ್ ಆಗಿತ್ತು. ಈ ಮಾರ್ಗ ಕಿರಿದಾದ ರಸ್ತೆಯಾಗಿರೋದ್ರಿಂದ ವಾಹನಗಳು ನಿಂತಲ್ಲೇ ನಿಂತಿದ್ವು. ಕೂಡಲೇ ಸ್ಥಳಕ್ಕಾಗಮಿಸಿದ ಬಣಕಲ್ ಪೊಲೀಸರು ಸಂಚಾರ ಸುಗಮಗೊಳಿಸಿದ್ದಾರೆ.

    ಇಲ್ಲಿ ವರ್ಷಪೂರ್ತಿ ಮಳೆ ಸುರಿಯುತ್ತಿದ್ದು, ಸದಾ ನೀರು ಹರಿಯೋದರಿಂದ ವಾಹನಸವಾರರು ಯಾವಾಗ, ಏನಾಗುತ್ತೆ ಎಂದು ಆತಂಕದಲ್ಲಿ ಸಂಚರಿಸುತ್ತಿದ್ದಾರೆ. ರಾತ್ರಿಯಾಗುತ್ತಿದ್ದಂತೆ ಮಂಗಳೂರಿನಿಂದ ಮರಳಿನ ಲಾರಿಗಳು ಎಗ್ಗಿಲ್ಲದೇ ಸಂಚರಿಸೋದರಿಂದ ಹೀಗೆ ಆಗ್ತಿದೆ. ಮೊನ್ನೆ ಸಂಜೆಯೂ ಬೆಟ್ಟ ಕುಸಿದಿದ್ದು, ನಿನ್ನೆ ಸಂಜೆಯೂ ಕುಸಿದಿದೆ. ಕೂಡಲೇ ಸರ್ಕಾರ ಹಾಗೂ ಜಿಲ್ಲಾಡಳಿತ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.