Tag: ಚಾಲನೆ

  • ಮೀನುಗಳಿಂದ ವಾಹನ ಚಾಲನೆ – ವೀಡಿಯೋ ವೈರಲ್

    ಮೀನುಗಳಿಂದ ವಾಹನ ಚಾಲನೆ – ವೀಡಿಯೋ ವೈರಲ್

    ಇಸ್ರೇಲ್: ಗೋಲ್ಡ್ ಫೀಶ್‍ಗಳಿಗೆ ವಿಜ್ಞಾನಿಗಳು ವಾಹನ ಚಾಲನೆ ಮಾಡುವ ತರಬೇತಿಯನ್ನು ಕೊಟ್ಟಿದ್ದಾರೆ. ಈ ವೀಡಿಯೋ ಸಖತ್ ವೈರಲ್ ಆಗಿದೆ.

    6 ಗೋಲ್ಡ್ ಫೀಶ್‍ಗಳಿಗೆ ವಾಹನ ಚಲಾಯಿಸುವ ತರಬೇತಿಯನ್ನು ವಿಜ್ಞಾನಿಗಳು ನೀಡಿದ್ದಾರೆ. ಮೀನುಗಳು ವಾಹನವನ್ನು ಚಲಾಯಿಸುವ ವೀಡಿಯೋವನ್ನು ವಿಜ್ಞಾನಿಗಳ ತಂಡ ಹಂಚಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ವಿಜ್ಞಾನಿಗಳು ಬಿಹೇವಿಯರಲ್ ಬ್ರೈನ್ ರಿಸರ್ಚ್ ಜರ್ನಲ್‍ನಲ್ಲಿ ಮೀನುಗಳು ಕೂಡ ವಾಹನವನ್ನು ನಿಯಂತ್ರಿಸುವುದನ್ನು ಕಲಿಯಬಹುದು ಎನ್ನುವ ಬಗ್ಗೆ ನಡೆಸಿದ ಸಂಶೋಧನೆಯ ವರದಿಯನ್ನು ಪ್ರಕಟಿಸಿದ್ದಾರೆ. ಇದನ್ನೂ ಓದಿ: ವಧು ಬೇಕಾಗಿದ್ದಾಳೆ- ರಸ್ತೆ ಬದಿ ಜಾಹೀರಾತು ಹಾಕಿದ ವರ

    ವೀಡಿಯೋದಲ್ಲಿ  ಏನಿದೆ?: ಮೀನು ವಾಹನ ಚಲಾಯಿಸುತ್ತಿರುವ ವೀಡಿಯೋದಲ್ಲಿ ಮೋಟಾರ್ ಅಳವಡಿಸಿದ ನಾಲ್ಕು ಚಕ್ರದ ವಾಹನವನ್ನು ಕಾಣಬಹುದು, ಚಕ್ರದ ಮೇಲೆ ಗ್ಲಾಸ್‍ನ ಟ್ಯಾಂಕನ್ನು ನಿಲ್ಲಿಸಿದ್ದಾರೆ. ಅದರಲ್ಲಿ ನೀರನ್ನು ಹಾಕಲಾಗಿದೆ. ನೀರಿನೊಳಗೆ ಗೋಲ್ಡ್ ಫೀಶ್‍ಗಳನ್ನು ಬಿಡಲಾಗಿದೆ. ಅದರಲ್ಲಿರುವ ಮೀನುಗಳು ತಮ್ಮ ಬಾಯಿಯ ಮೂಲಕ ಗ್ಲಾಸ್ ಟ್ಯಾಂಕ್ ಮುಟ್ಟುತ್ತವೆ. ಆಗ ವಾಹನವು ಚಲಿಸುತ್ತದೆ. ಇದನ್ನೂ ಓದಿ: ನನ್ನ ಹೆಸರು Kovid, ಆದ್ರೆ ನಾನು ವೈರಸ್ ಅಲ್ಲ: ಬೆಂಗಳೂರು ಉದ್ಯಮಿ

    ಮೀನುಗಳ ಚಲನೆಯನ್ನು ಪತ್ತೆಹಚ್ಚಲು ಕ್ಯಾಮೆರಾವನ್ನು ಅಳವಡಿಸಲಾಗಿದೆ. ಮೀನುಗಳು ಮೂರರಿಂದ ನಾಲ್ಕು ಮೀಟರ್ ಕೋಣೆಯಲ್ಲಿ ನ್ಯಾವಿಗೇಟ್ ಮಾಡುವುದನ್ನು ಮೊದಲು ಕಲಿತೆವು. ನಂತರ ಕೆಲವು ದಿನಗಳ ತರಬೇತಿಯ ಬಳಿಕ ಮೀನುಗಳು ಯಶಸ್ವಿಯಾಗಿವೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

  • ಬಸ್ ಅಪಘಾತದಲ್ಲಿ 22 ಮಂದಿ ಸಾವಿಗೆ ಕಾರಣನಾದ ಚಾಲಕನಿಗೆ 190 ವರ್ಷ ಜೈಲು ಶಿಕ್ಷೆ

    ಬಸ್ ಅಪಘಾತದಲ್ಲಿ 22 ಮಂದಿ ಸಾವಿಗೆ ಕಾರಣನಾದ ಚಾಲಕನಿಗೆ 190 ವರ್ಷ ಜೈಲು ಶಿಕ್ಷೆ

    ಭೋಪಾಲ್: 6 ವರ್ಷಗಳ ಹಿಂದೆ ನಡೆದಿದ್ದ ಬಸ್ ಅಪಘಾತದಲ್ಲಿ, 22 ಜನರ ಸಾವಿಗೆ ಕಾರಣನಾಗಿದ್ದ ಬಸ್ ಚಾಲಕನಿಗೆ ಮಧ್ಯಪ್ರದೇಶ ಸ್ಥಳೀಯ ವಿಶೇಷ ನ್ಯಾಯಾಲವು 190 ವರ್ಷ ಜೈಲು ಶಿಕ್ಷೆ ನೀಡಿದೆ.

    22 ಜನರ ಸಾವಿಗೆ ಕಾರಣವಾದ ಚಾಲಕ ಶಂಸುದ್ದೀನ್‍ಗೆ 190 ವರ್ಷ ಜೈಲು ಶಿಕ್ಷೆಯನ್ನು ಮಧ್ಯಪ್ರದೇಶ ಸ್ಥಳೀಯ ವಿಶೇಷ ನ್ಯಾಯಾಲಯ ವಿಧಿಸಿದೆ. 19 ಪ್ರತ್ಯೇಕ ಪ್ರಕರಗಳಲ್ಲಿ ತಲಾ 10 ವರ್ಷದಂತೆ ಈ ಸಜೆ ವಿಧಿಸಿ ಆದೇಶಿಸಿದೆ. ಈ ಎಲ್ಲ ಶಿಕ್ಷೆಗಳನ್ನೂ ಪ್ರತ್ಯೇಕವಾಗಿ ಅನುಭವಿಸಬೇಕು ಎಂದು ಕೋರ್ಟ್ ಆದೇಶಿಸಿರುವ ಕಾರಣ, ಚಾಲಕ ಶಂಸುದ್ದೀನ್ ತಲಾ 10 ವರ್ಷ 19 ಶಿಕ್ಷೆಗಳನ್ನು 190 ವರ್ಷಗಳ ಕಾಲ ಅನುಭವಿಸಬೇಕಾಗುತ್ತದೆ. ಹೀಗಾಗಿ ಒಂದರ್ಥದಲ್ಲಿ ಇದು ಸಾಯುವವರೆಗೂ ಜೈಲು ಶಿಕ್ಷೆ ಎನ್ನಬಹುದಾಗಿದೆ. ಬಸ್ ಮಾಲೀಕನಿಗೂ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಪಘಾತ ಪ್ರಕರಣಗಳಲ್ಲಿ ಬಹುಶಃ ಇಂಥ ಶಿಕ್ಷೆ ಇದೇ ಮೊದಲು ಎಂದು ಹೇಳಬಹುದಾಗಿದೆ. ಇದನ್ನೂ ಓದಿ: NEW YEAR ಬಾಡೂಟಕ್ಕೆ ಕುರಿ ಕದ್ದ ಎಎಸ್‌ಐ!

    ಏನಿದು ಪ್ರಕರಣ?: ಮೇ 4, 2015 ರಂದು ಖಾಸಗಿ ಬಸ್ ಚಾಲಕ ಶಂಸುದ್ದೀನ್ (47) ಅತಿ ವೇಗವಾಗಿ ಬಸ್ ಚಾಲನೆ ಮಾಡಿದ ಪರಿಣಾಮ, ನಾಲೆಗೆ ಬಸ್ ಬಿದ್ದು ಬೆಂಕಿ ಹೊತ್ತಿಕೊಂಡಿತ್ತು. ಬಸ್‍ನಲ್ಲಿದ್ದ 65 ಜನರಲ್ಲಿ 22 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು.

     

    ಅನೇಕರು ಗಾಯಗೊಂಡಿದ್ದರು. ಈ ಬಸ್‍ನಲ್ಲಿದ್ದ ತುರ್ತು ನಿರ್ಗಮನ ದ್ವಾರವನ್ನು ಸಹಾ ಕಬ್ಬಿಣದ ರಾಡ್‍ಗಳಿಂದ ಬಂದ್ ಮಾಡಿ ಹೆಚ್ಚುವರಿ ಸೀಟ್ ಅಳವಡಿಸಲಾಗಿತ್ತು. ಇದರಿಂದಾಗಿ ಜನರಿಗೆ ಬಸ್ಸಿನಿಂದ ಹೊರ ಬರುವುದು ಕಷ್ಟವಾಗಿತ್ತು. ಬಸ್ ಚಾಲಕ ಅತಿ ವೇಗವಾಗಿ ಬಸ್ ಚಾಲನೆ ಮಾಡಿದ್ದೆ ಈ ಅಪಘಾತಕ್ಕೆ ಕಾರಣವಾಗಿದೆ. ಬಸ್ಸಿನಲ್ಲಿ ಕೂಡಾ ಸಾಕಷ್ಟು ಸುರಕ್ಷತಾ ಲೋಪಗಳಿವೆ ಎಂದು ಪೊಲೀಸರು ನಿರ್ಲಕ್ಷ್ಯದ ಚಾಲನೆ ಎಂದು ಪ್ರಕರಣ ದಾಖಲಿಸಿದ್ದರು.

  • ಕಾರು ಚಲಾಯಿಸುತ್ತಾ ಡ್ರೈವರ್ ಸೀಟ್ ಅದಲು ಬದಲು ಮಾಡಿ ಹುಚ್ಚಾಟ

    ಕಾರು ಚಲಾಯಿಸುತ್ತಾ ಡ್ರೈವರ್ ಸೀಟ್ ಅದಲು ಬದಲು ಮಾಡಿ ಹುಚ್ಚಾಟ

    – ಯುವಕರಿಂದ ಡೇಂಜರಸ್ ಡ್ರೈವಿಂಗ್

    ವಿಜಯಪುರ: ಕಾರನ್ನು ವೇಗವಾಗಿ ಚಲಾಯಿಸುತ್ತಲೇ ಡ್ರೈವರ್ ಸೀಟ್ ಅದಲು ಬದಲು ಮಾಡಿ ಹುಚ್ಚು ಸಾಹಸ ಮಾಡಿದ ವಿಜಯಪುರದ ಯುವಕರ ಡೆಂಜರಸ್ ಡ್ರೈವಿಂಗ್ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಕಾರಲ್ಲಿ ಪ್ರವಾಸ ಹೊರಟ ವೇಳೆ ಯುವಕರ ಗುಂಪು ಹುಚ್ಚಾಟ ಮೆರೆದಿದೆ. ಕಾರು ವೇಗವಾಗಿ ಹೊರಟಿದ್ದ ವೇಳೆ ಈ ಹುಚ್ಚಾಟ ಮಾಡಿದ್ದಾರೆ. ಸ್ವಲ್ಪ ಹೆಚ್ಚು ಕಡಿಮೆಯಾಗಿದರೂ ಯುವಕರು ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುವುದರ ಜೊತೆಗೆ ಎದುರಿಗೆ ಬಂದವರ ಪ್ರಾಣಕ್ಕು ಕೂಡ ಕುತ್ತು ಬರುತ್ತಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋವನ್ನು ಅಮನ್ ರಾಠೋಡ ಅನ್ನೋ ಯುವಕ ಅಪ್ಲೋಡ್ ಮಾಡಿದ್ದಾನೆ.

    ವಿಜಯಪುರ ನಗರದ ವಿನಯ ಹುಲಸಗುಂದ ಹಾಗೂ ಮನೋಜ್ ಬಿರಾದಾರ್ ಎಂಬವರು ಕಾರ್ ಸೀಟ್ ಅದಲು ಬದಲು ಮಾಡಿದವರಾಗಿದ್ದು, ವಿನಯ ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ ಎಂದು ತಿಳಿದು ಬಂದಿದೆ. ಯುವಕರ ಈ ಹುಚ್ಚಾಟಕ್ಕೆ ಜಿಲ್ಲೆಯ ಜನರು ಕಿಡಿ ಕಾರಿದ್ದಾರೆ.

  • 90ರ ಇಳಿ ವಯಸ್ಸಿನಲ್ಲೂ ಕಾರು ಚಲಾಯಿಸಿ ಪ್ರಶಂಸೆಗೆ ಪಾತ್ರರಾದ ಅಜ್ಜಿ

    90ರ ಇಳಿ ವಯಸ್ಸಿನಲ್ಲೂ ಕಾರು ಚಲಾಯಿಸಿ ಪ್ರಶಂಸೆಗೆ ಪಾತ್ರರಾದ ಅಜ್ಜಿ

    ಮುಂಬೈ: 90ರ ವಯಸ್ಸಿನ ಅಜ್ಜಿ ತಾನು ಮಾಡಿರುವ ಒಂದು ಕೆಲಸದಿಂದ ಎಲ್ಲರ ಮನೆಮಾತಾಗಿದ್ದಾರೆ. ತನ್ನ ವೃದ್ಧಾಪ್ಯದ ವಯಸ್ಸಿನಲ್ಲಿಯೂ ಕಾರು ಓಡಿಸುವ ಮೂಲಕವಾಗಿ ಸುದ್ದಿಯಲ್ಲಿದ್ದಾರೆ.

    ಗಂಗಾಬಾಯ್ ಮಿರ್ಕುಟೆ (90)ರ ಅಜ್ಜಿ ಕಾರು ಚಾಯಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನೆಟ್ಟಿಗರು ಅವರ ಧೈರ್ಯ ಮತ್ತು ಈ ವಯಸ್ಸಿನಲ್ಲಿ ಅವರಿಗೆ ಇರುವ ಉತ್ಸಾಹವನ್ನು ಕಂಡು ಮೆಚ್ಚುಗೆ ಮತ್ತು ಪ್ರಶಂಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

    ಇಳಿಯವಸ್ಸಿನಲ್ಲಿ ಅವರಿಗೆ ಚಾಲನೆ ಪರವಾನಿಗೆ ದೊರೆಯುವುದು ಅನುಮಾನವಾಗಿದೆ. ಹಾಗಾಗಿ ಅವರ ಕುಟುಂಬ ಅವರಿಗೆ ಕಲಿಕಾ ಚಾಲನ ಪರವಾನಿಗೆ ಕೊಡಿಸುವ ನಿಟ್ಟಿನಲ್ಲಿನಲ್ಲಿದೆ. ಕುಟುಂಬಸ್ಥರು ಗಂಗಾಬಾಯ್ ಅಲ್ಲಿಯವರಿಗೆ ಪ್ರೋತ್ಸಾಹ ಕೆಲಸವನ್ನು ಮಾಡುತ್ತಿದ್ದಾರೆ.

    ಜೀವನದಲ್ಲಿ ಛಲ, ದೃಢವಿಶ್ವಾಸ ಮುಖ್ಯವಾಗಿದೆ ವಯಸ್ಸು ಅಲ್ಲ. ನನಗೆ ಕಾರು ಚಾಲನೆ ಕಲಿಯಬೇಕೆಂದಿತ್ತು. ಕೆಲ ವರ್ಷಗಳ ಹಿಂದೆ ನನ್ನ ಮೊಮ್ಮಗ ನನಗೆ ಕಾರು ಚಾಲನೆ ಕಲಿಸಿದನು. ಈಗಲೂ ವಿಶ್ವಾಸವಿದೆ ಕಾರು ಚಲಾಯಿಸಬಲ್ಲೆ. ನಾನು 1931 ರಲ್ಲಿ ಜನಿಸಿದ್ದೇನೆ ಮುಂದಿನ ಜೂನ್‍ಗೆ 90 ವರ್ಷ ಪೂರ್ಣಗೊಳ್ಳುತ್ತದೆ ಎಂದು ಗಂಗಾಬಾಯ್ ಹೇಳಿದ್ದಾರೆ.

     

    View this post on Instagram

     

    A post shared by Sakal News (@sakalmedia)

    ಗಂಗಾಬಾಯ್ ಮೊಮ್ಮಗ ವಿಕಾಸ್ ಬೋಯೊರ್ ಇತ್ತೀಚೆಗೆ ಹೊಸ ಕಾರನ್ನು ಖರೀದಿಸಿದ್ದರು. ಆಗ ಆಶೀರ್ವಾದ ಪಡೆಯಲು ಹೋಗಿದ್ದಾಗ ಅಜ್ಜಿ ನನ್ನ ಕಾರನ್ನು ಸ್ಪಲ್ಪ ದೂರದವರೆಗೆ ಚಲಾಯಿಸಿದ್ದರು. ಆ ವೀಡಿಯೋವನ್ನು ನಾನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದೆ. ಎಲ್ಲರೂ ನೋಡಿ ಅಜ್ಜಿಯ ಧೈರ್ಯವನ್ನು ಮೆಚ್ಚಿದ್ದಾರೆ ಎಂದು ಹೇಳಿದ್ದಾರೆ.

  • ಮಂಗಳೂರು ದಸರಾಕ್ಕೆ ವಿದ್ಯುಕ್ತ ಚಾಲನೆ ನೀಡಿದ ಕೊರೊನಾ ವಾರಿಯರ್

    ಮಂಗಳೂರು ದಸರಾಕ್ಕೆ ವಿದ್ಯುಕ್ತ ಚಾಲನೆ ನೀಡಿದ ಕೊರೊನಾ ವಾರಿಯರ್

    ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ದೊರೆಯಿತು.

    ಕೊರೊನಾ ವಾರಿಯರ್ ಎನ್.ಆರ್.ಐ ಫೋರಂನ ಮಾಜಿ ಉಪಾಧ್ಯಕ್ಷೆ, ಚಿಕ್ಕಮಗಳೂರು ಮೂಲದ ಡಾ.ಆರತಿ ಕೃಷ್ಣ ಈ ಬಾರಿಯ ಮಂಗಳೂರು ದಸರಾಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರದಲ್ಲಿ ಗಣಪತಿ, ಶಾರದಾ ಮಾತೆ, ನವದುರ್ಗೆಯರು ಹಾಗೂ ಆದಿಶಕ್ತಿಯ ಮಣ್ಣಿನ ಮೂರ್ತಿಗಳನ್ನು ಏಕಕಾಲದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.

    ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿಯವರ ಆಶಯದಂತೆ ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ನಮ್ಮ ದಸರಾ-ನಮ್ಮ ಸುರಕ್ಷೆ ಎಂಬ ಘೋಷ ವಾಕ್ಯದೊಂದಿಗೆ ಇಂದಿನಿಂದ 10 ದಿನಗಳ ಕಾಲ ನಡೆಯಲಿದೆ. ಅಕ್ಟೋಬರ್ 26 ರಂದು ದಸರಾ ವಿಸರ್ಜನಾ ಪೂಜೆ ನಡೆದು ಬಳಿಕ ಕ್ಷೇತ್ರದ ಆವರಣದಲ್ಲೇ ಮೂರ್ತಿಗಳ ಮೆರವಣಿಗೆ ನಡೆಸಿ ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜಿಸಲಾಗುವುದು.

  • ಸಂಚಾರಿ ಮಾಂಸ ಮಾರಾಟ ಮಳಿಗೆಗೆ ಸುರೇಶ್ ಇಟ್ನಾಳ್ ಚಾಲನೆ

    ಸಂಚಾರಿ ಮಾಂಸ ಮಾರಾಟ ಮಳಿಗೆಗೆ ಸುರೇಶ್ ಇಟ್ನಾಳ್ ಚಾಲನೆ

    – ಚಿಕನ್ 220, ಮಟನ್ 700 ದರ ನಿಗದಿ

    ಹುಬ್ಬಳ್ಳಿ: ಲಾಕ್‍ಡೌನ್ ಹಾಗೂ ರಂಜಾನ್ ಹಿನ್ನೆಲೆಯಲ್ಲಿ ಜನರಿಗೆ ಅನುಕೂಲವಾಗಲಿ ಎಂದು ಮಿಟ್ ಆನ್ ಮಿಲ್ಸ್ (ಮಾಂಸ ಮತ್ತು ಮಾಂಸದಿಂದ ತಯಾರಿಸಿದ ಖಾದ್ಯ ಪದಾರ್ಥಗಳ) ಸಂಚಾರಿ ಮಾರಾಟ ಮಳಿಗೆಗೆ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ್ ಪಾಲಿಕೆ ಆವರಣದಲ್ಲಿ ಚಾಲನೆ ನೀಡಿದರು.

    ಬಳಿಕ ಮಾತನಾಡಿದ ಅವರು, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದು, ಈ ವೇಳೆಯಲ್ಲಿ ಜನರು ಮನೆಯಿಂದ ಹೊರಬರದಂತೆ ಆದೇಶ ಹೊರಡಿಸಲಾಗಿದೆ. ಅಲ್ಲದೆ ಇದು ರಂಜಾನ್ ತಿಂಗಳ ಹಿನ್ನೆಲೆಯಲ್ಲಿ ಜನರ ಮಾಂಸಕ್ಕೆ ಬೇಡಿಕೆ ಹೆಚ್ಚಿದೆ. ಪರಿಣಾಮ ಅವರ ಪ್ರದೇಶದಲ್ಲಿಯೇ ಮಾಂಸ ಪದಾರ್ಥಗಳನ್ನು ಮುಟ್ಟಿಸುವ ಉದ್ದೇಶದಿಂದ ಮಾಂಸ ಮತ್ತು ಮಾಂಸದಿಂದ ತಯಾರಿಸಿದ ಖಾದ್ಯ ಪದಾರ್ಥಗಳ ಸಂಚಾರಿ ಮಾರಾಟ ಮಳಿಗೆಯನ್ನು ಪ್ರಾರಂಭಿಸಲಾಗಿದೆ ಎಂದರು.

    ಮಿಟ್ ಆನ್ ವಿಲ್ಸ್ ಮೊದಲ ಹಂತದಲ್ಲಿ ಹುಬ್ಬಳ್ಳಿಯ ಎಲ್ಲ ಪ್ರದೇಶಗಳಲ್ಲಿ ಜಾರಿಗೆ ತರಲಾಗಿದ್ದು, ಹಂತ ಹಂತವಾಗಿ ಧಾರವಾಡಕ್ಕೂ ವಿಸ್ತರಿಸಲಾಗುವುದು. ಇನ್ನೂ ಉತ್ತಮ ಗುಣಮಟ್ಟದ ಮಾಂಸವನ್ನು ಕೆಜಿ ಚಿಕನ್‍ಗೆ 220, ಕೆಜಿ ಮಟನ್‍ಗೆ 700 ರೂ. ನಿಗದಿ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ದರದಲ್ಲಿ ಇನ್ನಷ್ಟು ಕಡಿತಗೊಳಿಸಿ ಗ್ರಾಹಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಹೇಳಿದರು.

    ಡಾ. ಪ್ರಭು ಬಿರಾದಾರ ಮಾತನಾಡಿ, ಮಾಂಸವನ್ನು ಉಪಯೋಗ ಮಾಡುವುದರಿಂದ ರೋಗಿಗಳಿಗೆ ಇನ್ನಷ್ಟು ವಿಟಮಿನ್ ನೀಡಿ ರೋಗ ನಿರೋಧಕ ಶಕ್ತಿಯನ್ನು ಹೆಚ್ವಿಸುವುದು. ಹಾಗಾಗಿ ಸಾರ್ವಜನಿಕರು ಮಿಟ್ ಆನ್ ವಿಲ್ಸ್ ನ ಉಪಯೋಗ ಪಡೆದುಕೊಳ್ಳಬೇಕೆಂದರು. ಈ ಸಂದರ್ಭದಲ್ಲಿ ಡಾ. ರವಿ ಸಾಲಿಗೌಡರು, ಪಾಲಿಕೆ ಸಹಾಯಕ ಆಯುಕ್ತರು ಎಜೀಜ್ ದೇಸಾಯಿ, ಶ್ರೀಧರ್ ಸಾಮ್ರಾಣಿ ಸೇರಿದಂತೆ ಇತರರು ಇದ್ದರು.

  • ಶಿಕಾರಿಪುರದಲ್ಲಿ 1,100ಕೋಟಿ ರೂ. ಮೊತ್ತದ ಏತ ನೀರಾವರಿ ಯೋಜನೆಗಳಿಗೆ ಸಿಎಂ ಚಾಲನೆ

    ಶಿಕಾರಿಪುರದಲ್ಲಿ 1,100ಕೋಟಿ ರೂ. ಮೊತ್ತದ ಏತ ನೀರಾವರಿ ಯೋಜನೆಗಳಿಗೆ ಸಿಎಂ ಚಾಲನೆ

    ಶಿವಮೊಗ್ಗ: ರಾಜ್ಯದಲ್ಲಿ ಮುಂದಿನ 3 ವರ್ಷಗಳಲ್ಲಿ ಏತ ನೀರಾವರಿ ಮೂಲಕ ರಾಜ್ಯದ ಎಲ್ಲಾ ಕೆರೆಗಳನ್ನು ತುಂಬಿಸುವ ನೀರಾವರಿ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.

    ಶಿಕಾರಿಪುರದಲ್ಲಿ ಇಂದು 1,100 ಕೋಟಿ ರೂ. ಮೊತ್ತದ ಏತ ನೀರಾವರಿ ಯೋಜನೆ ಸೇರಿದಂತೆ ಒಟ್ಟು 1,277 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ನದಿಯ ನೀರನ್ನು ಏತ ನೀರಾವರಿ ಮೂಲಕ ಮೇಲೆತ್ತಿ, ಕೆರೆಗಳ ಮೂಲಕ ರೈತರ ಹೊಲಗಳನ್ನು ತುಂಬಿಸಲಾಗುವುದು. ಆವರ್ತ ನಿಧಿಯನ್ನು ತೆಗೆದಿರಿಸಿ, ರೈತರ ಉತ್ಪನ್ನಗಳಿಗೆ ಉತ್ತಮ ಬೆಂಬಲ ಬೆಲೆ ಒದಗಿಸಲಾಗುವುದು ಎಂದರು.

    ಪುರದಕೆರೆ ಸಮೀಪ ತುಂಗಭದ್ರಾ ನದಿಯಿಂದ ಏತ ನೀರಾವರಿ ಮೂಲಕ ಶಿಕಾರಿಪುರ ತಾಲೂಕಿನ ಉಡುಗಣಿ, ತಾಳಗುಂದ, ಹೊಸೂರು ಹೋಬಳಿ ಕೆರೆಗಳನ್ನು ತುಂಬಿಸುವ 850 ಕೋಟಿ ರೂ. ಯೋಜನೆಯಿಂದ 110 ಗ್ರಾಮಗಳ 186 ಕೆರೆಗಳನ್ನು ತುಂಬಿಸಲಾಗುತ್ತಿದೆ. ಇದೇ ರೀತಿ ಶಿವಮೊಗ್ಗ ಹೊಸಹಳ್ಳಿ ಸಮೀಪ ತುಂಗಾ ನದಿಯಿಂದ ಏತ ನೀರಾವರಿ ಮೂಲಕ ಶಿವಮೊಗ್ಗ ಗ್ರಾಮಾಂತರ ಕೆರೆಗಳಿಗೆ ಹಾಗೂ ಶಿಕಾರಿಪುರ ಅಂಜನಾಪುರ ಜಲಾಶಯಕ್ಕೆ ನೀರು ಒದಗಿಸುವ 250 ಕೋಟಿ ರೂ. ಮೊತ್ತದ ಏತ ನೀರಾವರಿ ಯೋಜನೆಯಿಂದ 50 ಗ್ರಾಮಗಳ 75 ಕೆರೆಗಳನ್ನು ತುಂಬಿಸಲಾಗುತ್ತಿದೆ. ಮುಂದಿನ ಒಂದು ವರ್ಷದಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಿಎಂ ಕಾರ್ಯಕ್ರಮದಲ್ಲಿಯೇ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಈ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರಗತಿಪರ ರೈತರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು. ರೈತರಿಗೆ ಸ್ಪಿಂಕ್ಲರ್, ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ಆಯುಷ್ಮಾನ್ ಆರೋಗ್ಯ ಕಾರ್ಡ್ ಸಹ ವಿತರಿಸಿದರು. ಜಿಲ್ಲೆಯ ಆಯ್ದ ಕೆರೆಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಹೂಳು ತೆಗೆಯುವ ಕರಾರು ಒಪ್ಪಂದಕ್ಕೆ ಈ ಸಂದರ್ಭದಲ್ಲಿ ಸಹಿ ಹಾಕಲಾಯಿತು. ಈ ಹೂಳನ್ನು ರೈತರು ತೆಗೆದುಕೊಂಡು ತಮ್ಮ ಹೊಲಗಳಿಗೆ ಹಾಕುವಂತೆ ಮುಖ್ಯಮಂತ್ರಿ ಕರೆ ನೀಡಿದರು.

    ಸಮಿತಿ ರಚನೆ: ಬೆಂಗಳೂರಿನಲ್ಲಿ ಒತ್ತುವರಿಯಾಗಿರುವ ಭೂಮಿಯನ್ನು ಗುರುತಿಸಲು ಸಮಿತಿ ರಚಿಸಲಾಗಿದೆ. ಒತ್ತುವರಿ ಜಮೀನು ವಶಪಡಿಸಿ ಹರಾಜು ಹಾಕಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಬಿ.ಸಿ.ಪಾಟೀಲ್, ಸಿ.ಟಿ.ರವಿ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಅಶೋಕ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ, ಆರ್.ಪ್ರಸನ್ನ ಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

  • ಮಂಡ್ಯ ರೈಲು ಚಾಲನೆ ವಿಚಾರದಲ್ಲಿ ಯಾವುದೇ ತಪ್ಪಾಗಿಲ್ಲ – ಸ್ಪಷ್ಟನೆ ನೀಡಿದ ಸುಮಲತಾ

    ಮಂಡ್ಯ ರೈಲು ಚಾಲನೆ ವಿಚಾರದಲ್ಲಿ ಯಾವುದೇ ತಪ್ಪಾಗಿಲ್ಲ – ಸ್ಪಷ್ಟನೆ ನೀಡಿದ ಸುಮಲತಾ

    ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರು ಗುರುವಾರ ಮಂಡ್ಯದ ರೈಲಿನಲ್ಲಿ ಮಹಿಳೆಯರಿಗಾಗಿ ಇದ್ದ ವಿಶೇಷ ಬೋಗಿಗಳಿಗೆ ಚಾಲನೆ ನೀಡುವಾಗ, ರೈಲನ್ನು ತಾವಿದ್ದ ಜಾಗಕ್ಕೆ ಕರೆಸಿಕೊಂಡಿದ್ದಾರೆ ಎಂದು ಆರೋಪಿಸಿ ಭಾರೀ ಚರ್ಚೆನಡೆದಿತ್ತು. ಈ ಬಗ್ಗೆ ಇಂದು ಸುಮಲತಾ ಅವರು ಪ್ರತಿಕ್ರಿಯಿಸಿ ಈ ಕಾರ್ಯಕ್ರಮದಲ್ಲಿ ಯಾವುದೇ ತಪ್ಪಾಗಿಲ್ಲ ಎಂದು ತಿಳಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ನನ್ನ ಬಗ್ಗೆ ವಿರೋಧ ಸುದ್ದಿಗಳು ಬರಬಾರದು ಎಂದು ನಾನು ಹೇಳೋದಿಲ್ಲ. ಆದರೆ ನಾನು ತಪ್ಪು ಮಾಡಿದ್ದನ್ನು ವಿರೋಧಿಸಿ ಬೇಸರವಿಲ್ಲ. ಆದರೆ ಗುರುವಾರ ಮಂಡ್ಯ ರೈಲು ಚಾಲನೆ ವಿಚಾರವಾಗಿ ಪ್ರಸಾರವಾದ ಸುದ್ದಿಯಿಂದ ನನಗೆ ಬೇಸರವಾಗಿದೆ ಎಂದು ತಿಳಿಸಿದರು.

    ನಿನ್ನೆ ನಾನು ರೈಲಿನ ಮಹಿಳಾ ಬೋಗಿಗಳಿಗೆ ಚಾಲನೆ ನೀಡುವಾಗ, ನಾನು ನಿಂತ ಸ್ಥಳದಲ್ಲೆ ಚಾಲನೆ ನೀಡಬೇಕು ಎಂದು ನಿಗದಿಯಾಗಿತ್ತು. ಅಧಿಕಾರಿಗಳು ಕೂಡ ರೈಲು ಇಲ್ಲಿಗೆ ಬಂದಾಗಲೇ ಚಾಲನೆ ನೀಡಬೇಕೆಂದು ತಿಳಿಸಿದ್ದರು. ಆ ಪ್ರಕಾರ ನಾನು ಆ ಸ್ಥಳದಲ್ಲಿಯೇ ನಿಂತಿದ್ದೆ. ರೈಲು ಅಲ್ಲಿಗೆ ಬಂದಮೇಲೆ ಚಾಲನೆ ಕೊಟ್ಟೆ ಎಂದು ಸ್ಪಷ್ಟಪಡಿಸಿದರು.

    ನಿಲ್ದಾಣಕ್ಕೆ ಆಗ ತಾನೇ ರೈಲು ಬಂದು ಸ್ವಲ್ಪ ದೂರ ನಿಂತಿತ್ತು. ರೈಲಿನಲ್ಲಿ ಇರುವ ಪ್ರಯಾಣಿಕರು ಇಳಿಯುವಾಗ ನೂಕುನುಗ್ಗಲು ಆಗಬಾರದು ಎಂದು ರೈಲಿನ ಲೊಕೋ ಪೈಲಟ್ ನಾವು ನಿಂತಿದ್ದ ಸ್ಥಳದಿಂದ ಸುಮಾರು 10 ಹೆಜ್ಜೆ ದೂರದಲ್ಲಿ ರೈಲು ನಿಲ್ಲಿಸಿದ್ದರು. ಆದರೆ ಕೊನೆ ಬೋಗಿಗಳಲ್ಲಿ ಇದ್ದ ಜನರು ಇಳಿಯುವ ಸ್ಥಳದಲ್ಲಿ ಪ್ಲಾಟ್‍ಫಾರ್ಮ್ ಇಲ್ಲದಿದ್ದ ಕಾರಣ, ಅಧಿಕಾರಿಗಳು ರೈಲನ್ನು ಮುಂದೆ ತರುವಂತೆ ಸೂಚಿಸಿದ್ದಕ್ಕೆ ರೈಲನ್ನು ಸ್ವಲ್ಪ ಮುಂದೆ ತರಲಾಯಿತು. ಆಗ ನಿಗದಿಯಾದ ಸ್ಥಳಕ್ಕೆ ರೈಲು ಬಂದಮೇಲೆ ನಾನು ಬೋಗಿಗಳಿಗೆ ಚಾಲನೆ ನೀಡಿದೆ ಅಷ್ಟೇ. ಇಲ್ಲಿ ಯಾವುದೇ ರೀತಿಯ ತಪ್ಪಾಗಿಲ್ಲ ಎಂದು ನಡೆದ ವಿಚಾರವನ್ನು ತಿಳಿಸಿದರು.

    ಗುರುವಾರ ಮಂಡ್ಯದ ರೈಲು ನಿಲ್ದಾಣದಲ್ಲಿ ಮೆಮೋ ರೈಲಿನ ಮಹಿಳಾ ವಿಶೇಷ ಬೋಗಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿ ಮಾತನಾಡಿದ್ದ ಅವರು, ಮೆಮು ರೈಲಿಗೆ ಅಳವಡಿಸಿದ ಮಹಿಳಾ ಮೀಸಲು ಬೋಗಿಗಳಿಗೆ ಚಾಲನೆ ನೀಡಿದ್ದು ತುಂಬಾ ಖುಷಿಯಾಗಿದೆ. ಇದು ಹೆಮ್ಮೆಯ ವಿಷಯ ನಾನು ಚುನಾವಣೆ ಸಮಯದಲ್ಲಿ ಪ್ರಚಾರ ಮಾಡುವ ವೇಳೆ ಜಿಲ್ಲೆಯ ಮಹಿಳೆಯರು ವಿಶೇಷ ಮಹಿಳಾ ಮೀಸಲು ಬೋಗಿಗಾಗಿ ಮನವಿ ಮಾಡಿದ್ದರು ಎಂದು ತಿಳಿಸಿದ್ದರು.

    ನಾನು ಈ ವಿಚಾರವಾಗಿ ರೈಲ್ವೆ ಸಚಿವರಾದ ಪಿಯುಷ್ ಗೋಯಲ್ ಹಾಗೂ ಸುರೇಶ್ ಅಂಗಡಿ ಅವರಲ್ಲಿ ಮನವಿ ಮಾಡಿದ್ದೆ. ನನ್ನ ಮನವಿಯಂತೆ ಮೆಮೋ ರೈಲಿಗೆ ಎರಡು ಬೋಗಿಗಳನ್ನು ಅಳವಡಿಸಲು ಅವಕಾಶ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಅವಶ್ಯಕತೆ ಇದ್ದರೆ ಹೆಚ್ಚಿನ ಬೋಗಿ ಅಳವಡಿಸಲಾಗುವುದು ಎಂದು ಹೇಳಿದರು.

    ಈ ಮೆಮೋ ರೈಲು ಬೆಂಗಳೂರು- ಮೈಸೂರು ಮಾರ್ಗವಾಗಿ ಸಂಚರಿಸುತ್ತದೆ. ರೈಲಿನಲ್ಲಿ ಮಹಿಳಾ ಬೋಗಿಯನ್ನು ಅಳವಡಿಸಲಾಗಿರಲಿಲ್ಲ. ಇದಕ್ಕಾಗಿ ಸುಮಲತಾ ಅವರು ಕೇಂದ್ರ ರೈಲ್ವೆ ಇಲಾಖೆಗೆ ಮನವಿ ಮಾಡಿದ್ದರು. ಈ ಬೋಗಿಯಲ್ಲಿ 80 ಆಸನಗಳಿದ್ದು, ಪ್ರತ್ಯೇಕ ಮಹಿಳಾ ಬೋಗಿ ಅಳವಡಿಕೆಯಿಂದ ನಿತ್ಯ ಬೆಂಗಳೂರಿಗೆ ತೆರಳುವ ಮಹಿಳಾ ಕಾರ್ಮಿಕರಿಗೆ ಅನುಕೂಲವಾಗಿಲಿದೆ.

  • ವಾಹನ ಚಾಲನೆ ವೇಳೆ ಜಾಗೃತರಾಗಿರಿ: ಅಭಿಮಾನಿಗಳಲ್ಲಿ ದಚ್ಚು ಮನವಿ

    ವಾಹನ ಚಾಲನೆ ವೇಳೆ ಜಾಗೃತರಾಗಿರಿ: ಅಭಿಮಾನಿಗಳಲ್ಲಿ ದಚ್ಚು ಮನವಿ

    ಬೆಂಗಳೂರು: ವಾಹನ ಚಾಲನೆ ವೇಳೆ ಜಾಗೃತರಾಗಿರಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ದಚ್ಚು ಮನವಿ ಮಾಡಿಕೊಂಡಿದ್ದಾರೆ.

    ಕಳೆದ ವರ್ಷ ಪುತ್ರ ವಿನೀಶ್ ಹುಟ್ಟುಹಬ್ಬದಂದು ಅಭಿಮಾನಿಯೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ. ಈ ಘಟನೆಯನ್ನು ನೆನೆದು ದಚ್ಚು ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.

    ಟ್ವೀಟ್ ಮಾಡಿರುವ ದರ್ಶನ್, ಅಭಿಮಾನಿಗಳಲ್ಲಿ ಕಳಕಳಿಯ ಮನವಿ. ವಾಹನವನ್ನು ಚಲಿಸುವಾಗ ದಯಮಾಡಿ ಅತಿ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ ಎಂದು ಬರೆದುಕೊಂಡಿದ್ದಾರೆ.

    ಕಳೆದ ವರ್ಷ ವಿನೀಶ್ ಹುಟ್ಟುಹಬ್ಬದ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಅಭಿಮಾನಿಯೊಬ್ಬ ಸಾವನಪ್ಪಿದ್ದನ್ನು ಇನ್ನೂ ಅರಗಿಸಿಕೊಳ್ಳಲಾಗುತ್ತಿಲ್ಲ. ದೂರದ ಸ್ಥಳಗಳಿಗೆ ಹೋಗುವಾಗ ದ್ವಿಚಕ್ರ ವಾಹನಗಳನ್ನು ಆದಷ್ಟು ಉಪಯೋಗಿಸಬೇಡಿ. ಈ ವರ್ಷವೂ ಹುಟ್ಟುಹಬ್ಬಕ್ಕೆ ಬರುವವರು ದಯಮಾಡಿ ಎಚ್ಚರಿಕೆ ವಹಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ಆಗಿದ್ದೇನು?:
    ಮಧುಗಿರಿಯ ಬೆಂಕಿಪುರದ ನಿವಾಸಿ ರಾಕೇಶ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಟ್ಟಾ ಅಭಿಯಾನಿಯಾಗಿದ್ದ. ಹೀಗಾಗಿ ತನ್ನ ಸ್ನೇಹಿತ ಕಾರ್ತಿಕ್ ಜೊತೆಗೆ ಬೈಕಿನಲ್ಲಿ ದರ್ಶನ್ ಪುತ್ರ ವಿನೀಶ್‍ಗೆ ಜನ್ಮದಿನದ ಶುಭಕೋರಲು ಬುಧವಾರ ಬೆಳಗ್ಗೆ ಬೆಂಗಳೂರಿಗೆ ಬಂದಿದ್ದ. ವಿನೀಶ್ ನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿ ಶುಭ ಕೋರಿದ್ದ ರಾಕೇಶ್ ಮತ್ತು ಕಾರ್ತಿಕ್ ಬೈಕಿನಲ್ಲಿ ಗ್ರಾಮಕ್ಕೆ ಮರಳುತ್ತಿದ್ದರು. ಕಾರ್ತಿಕ್ ಬೈಕ್ ಚಲಾಯಿಸುತ್ತಿದ್ದರೆ ರಾಕೇಶ್ ಹಿಂಬದಿಯಲ್ಲಿ ಕುಳಿತಿದ್ದ. ತುಮಕೂರು-ಕೊರಟಗೆರೆ ಮುಖ್ಯರಸ್ತೆಯ ಮುಗ್ಗೊಂಡನಹಳ್ಳಿ ಬಳಿ ಬೈಕ್ ಬರುತ್ತಿದ್ದಂತೆ, ಕಾರ್ತಿಕ್ ತಳ್ಳೋಗಾಡಿಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ ಹಿಂಬದಿಯಲ್ಲಿ ಕುಳಿತ್ತಿದ್ದ ರಾಕೇಶ್ ಬೈಕ್‍ನಿಂದ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದ. ಸವಾರ ಕಾರ್ತಿಕ್ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿತ್ತು.

    ಈ ಸುದ್ದಿ ಕೇಳಿ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ತನ್ನ ಅಭಿಮಾನಿಯ ಸಾವಿಗೆ ಸಂತಾಪ ಸೂಚಿಸಿದ್ದರು. ದರ್ಶನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ, “2018ರ ಅಕ್ಟೋಬರ್ 31ರಂದು ನಡೆದ ರಸ್ತೆ ಅಪಘಾತದಲ್ಲಿ ಅಭಿಮಾನಿಯೊಬ್ಬ ಸಾವನಪ್ಪಿದ್ದನ್ನು ಕೇಳಿ ತುಂಬಾ ಬೇಸರವಾಗಿದೆ. ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ. ಅಭಿಮಾನಿಗಳಲ್ಲಿ ಕಳಕಳಿಯ ಮನವಿ ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಎಂದೂ ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ. ದೂರದ ಸ್ಥಳಗಳಿಗೆ ಹೋಗುವಾಗ ದ್ವಿಚಕ್ರ ವಾಹನಗಳನ್ನು ಆದಷ್ಟು ಉಪಯೋಗಿಸಬೇಡಿ” ಎಂದು ಪೋಸ್ಟ್ ಮಾಡಿದ್ದರು.

  • ಸಚಿವರ ಆಗಮನಕ್ಕೆ ಮುನ್ನವೇ ಗಜ ಪಯಣಕ್ಕೆ ಪುಷ್ಪಾರ್ಚನೆ

    ಸಚಿವರ ಆಗಮನಕ್ಕೆ ಮುನ್ನವೇ ಗಜ ಪಯಣಕ್ಕೆ ಪುಷ್ಪಾರ್ಚನೆ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2019ರ ಗಜಪಯಣಕ್ಕೆ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿ ಅನೆಗಳಿಗೆ ಪೂಜೆ ಮಾಡಿ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಗಿದೆ.

    ಇಂದು ಈ ಗಜ ಪಡೆಯ ಸ್ವಾಗತಕ್ಕೆ ಡೊಳ್ಳು, ಕಂಸಾಳೆ ವಿವಿಧ ಜನಪದ ಕಲಾ ತಂಡಗಳ ಮೆರುಗು ತುಂಬಿದವು. ಇದರ ಜೊತೆಗೆ ಕಲಶ ಹೊತ್ತು ಮಹಿಳೆಯರಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಅರ್ಜುನ, ವಿಜಯ, ಅಭಿಮನ್ಯು, ವರಲಕ್ಷ್ಮಿ, ಧನಂಜಯ ಮತ್ತು ಈಶ್ವರ ಆನೆಗಳು ಮೈಸೂರಿಗೆ ಪ್ರಯಣ ಮಾಡಿದವು.

    ಮೊದಲ ತಂಡವಾಗಿ ಐದು ಅನೆಗಳು ಮೈಸೂರಿಗೆ ಪ್ರಯಾಣ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಮೈಸೂರಿನ ಕೆ.ಆರ್ ಕ್ಷೇತ್ರದ ಶಾಸಕ ರಾಮದಾಸ್ ಕೂಡ ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮಕ್ಕೆ ಬರಬೇಕಾದ ನೂತನ ಸಚಿವರಾದ ಆರ್. ಅಶೋಕ್ ಮತ್ತು ವಿ. ಸೋಮಣ್ಣ ಬರುವುದನ್ನು ಒಂದು ನಿಮಿಷವೂ ಕಾಯದೇ ಪುಷ್ಪಾರ್ಚನೆ ಮಾಡಿದ ಶಾಸಕ ಎಸ್.ಎ ರಾಮದಾಸ್, ಯಾರನ್ನು ಕಾಯುವ ಅವಶ್ಯಕತೆ ಇಲ್ಲ ಎಂದು ಅಧಿಕಾರಿಗಳಿಗೆ ಹೇಳಿ ಪುಷ್ಪಾರ್ಚನೆ ಮಾಡಿದರು.

    ಎಲ್ಲ ಕಾರ್ಯಕ್ರಮಗಳು ಮುಗಿದ ಮೇಲೆ ತಡವಾಗಿ ಬಂದ ಸಚಿವಾರದ ಆರ್. ಅಶೋಕ್ ಮತ್ತು ವಿ. ಸೋಮಣ್ಣ ಅವರು ಮತ್ತೊಮ್ಮೆ ಗಜಪಡೆಗೆ ಪುಷ್ಪಾರ್ಚನೆ ಮಾಡಿದರು.

    ಸಾಂಪ್ರದಾಯಿಕವಾಗಿ ಪ್ರತಿ ವರ್ಷ ಜಿಲ್ಲಾ ಉಸ್ತುವಾರಿ ಸಚಿವರು ಪೂಜೆ ಸಲ್ಲಿಸಿ, ಗಜಪಯಣಕ್ಕೆ ಚಾಲನೆ ನೀಡುತ್ತಿದ್ದರು. ಆದರೆ ಈ ಬಾರಿ ದಸರಾ ಗಜಪಯಣಕ್ಕೆ ಚಾಲನೆ ನೀಡುವ ವಿಚಾರಕ್ಕೆ ಗೊಂದಲ ಶುರುವಾಗಿತ್ತು. ಯಾಕೆಂದರೆ ಪ್ರತಿ ಬಾರಿ ದಸರಾ ಗಜಪಯಣಕ್ಕೆ ಉಸ್ತವಾರಿ ಸಚಿವರು ಚಾಲನೆ ನೀಡುತ್ತಿದ್ದರು. ಆದರೆ ಈ ಬಾರಿ ಜಿಲ್ಲೆಯಿಂದ ಯಾವ ನಾಯಕರು ಸಚಿವರಾಗಿಲ್ಲ. ಅಲ್ಲದೆ ಸ್ಥಳೀಯ ಶಾಸಕರ ಬಳಿ ಚಾಲನೆ ಕೊಡಿಸೋಣ ಎಂದರೆ ಶಾಸಕರು ಕೂಡ ಅನರ್ಹರಾಗಿದ್ದಾರೆ. ಹೀಗಾಗಿ ಗಜಪಯಣಕ್ಕೆ ಚಾಲನೆ ನೀಡುವವರು ಯಾರು ಎಂಬ ಗೊಂದಲ ಎದುರಾಗಿತ್ತು. ಆದರೆ ಶಾಸಕ ರಾಮದಾಸ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.