Tag: ಚಾಲನೆ

  • ಅಹಿತಕರ ಘಟನೆ ನಡೆಯದಿರಲೆಂದು ಗಣೇಶ ಮೂರ್ತಿ ವಿಸರ್ಜನೆಯ ಟ್ರ್ಯಾಕ್ಟರ್ ಚಲಾಯಿಸಿದ ಜಿಲ್ಲಾಧಿಕಾರಿ

    ಅಹಿತಕರ ಘಟನೆ ನಡೆಯದಿರಲೆಂದು ಗಣೇಶ ಮೂರ್ತಿ ವಿಸರ್ಜನೆಯ ಟ್ರ್ಯಾಕ್ಟರ್ ಚಲಾಯಿಸಿದ ಜಿಲ್ಲಾಧಿಕಾರಿ

    ದಾವಣಗೆರೆ: ಗಣಪತಿ ವಿಸರ್ಜನೆ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದೆಂದು ದಾವಣಗೆರೆ ಜಿಲ್ಲಾಧಿಕಾರಿ ರಮೇಶ್ ಅವರು ಸ್ವತಃ ಗಣೇಶ ಮೂರ್ತಿಯನ್ನು ಮೆರವಣಿಗೆ ಮಾಡಲು ಸಿದ್ಧಪಡಿಸಿದ್ದ ಟ್ರ್ಯಾಕ್ಟರನ್ನು ಚಲಾಯಿಸಿದ್ದಾರೆ.

    ಶ್ರೀ ವರಸಿದ್ಧಿ ವಿನಾಯಕ ಸೇವಾ ಸಮಿತಿ ವಿನೋಭನಗರದಲ್ಲಿ ಆಯೋಜಿಸಿದ್ದ ಗಣೇಶ ವಿಸರ್ಜನೆ ವೇಳೆ ನಗರದಲ್ಲಿ ಕೋಮು ಗಲಭೆ ಆಗಬಹುದೆಂಬ ನಿಟ್ಟಿನಲ್ಲಿ ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿತ್ತು. ಪ್ರತಿವರ್ಷ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ರವರು ಟ್ರ್ಯಾಕ್ಟರ್ ಚಲಾಯಿಸುತ್ತಿದ್ದರು. ಆದರೆ ಈ ವರ್ಷ ಅವರ ಅನುಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ಟ್ರ್ಯಾಕ್ಟರ್ ಚಲಾಯಿಸಿದ್ದಾರೆ.

    ನಗರದ ಪ್ರಮುಖ ಬೀದಿಗಳಲ್ಲಿ ಗಣೇಶ ಮೂರ್ತಿ ಮೆರವಣಿಗೆ ನಡೆದಿದ್ದು, ಈ ವೇಳೆ ಯುವಕರು ಡಿಜೆ ಏರ್ಪಡಿಸಿ ಸಖತ್ ಸ್ಟೆಪ್ ಹಾಕಿದರು. ಮೆರವಣಿಗೆ ಆರಂಭವಾದ ಸ್ಥಳದಿಂದ ಗಣೇಶ ಮೂರ್ತಿ ವಿಸರ್ಜನ ಸ್ಥಳದವರೆಗೂ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದರು. ನಗರದ ಪ್ರಮುಖ ಸ್ಥಳಗಳು ಸೇರಿದಂತೆ ಕೆಲವು ಪ್ರಮುಖ ಪ್ರದೇಶಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಪೊಲೀಸ್ ಮುನ್ನೆಚ್ಚರಿಕೆ ಕ್ರಮದಿಂದ ಯಾವುದೇ ಅಹಿತರಕರ ಘಟನೆ ನಡೆಯದೆ ಈ ಬಾರಿ ಗಣಪತಿ ವಿಸರ್ಜನೆ ನಡೆಯಿತು. ಕಾನೂನು ಸುವ್ಯವಸ್ಥೆ ಕಾಪಾಡಲು ಸ್ವತಃ ಜಿಲ್ಲಾಧಿಕಾರಿಗಳೇ ಜನರ ನಡುವೆ ಬಂದ ನಡೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎನ್‍ಟಿಆರ್ ಕುಟುಂಬಕ್ಕೆ ನಲ್ಗೊಂಡ ಮಾರ್ಗ ಶಾಪವೇ?

    ಎನ್‍ಟಿಆರ್ ಕುಟುಂಬಕ್ಕೆ ನಲ್ಗೊಂಡ ಮಾರ್ಗ ಶಾಪವೇ?

    ಹೈದರಾಬಾದ್: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಎನ್‍ಟಿ ರಾಮರಾವ್ ಕುಟುಂಬಕ್ಕೆ ನಲ್ಗೊಂಡ ಹೆದ್ದಾರಿ ಮಾರ್ಗ ಶಾಪವೇ ಎನ್ನುವ ಚರ್ಚೆ ಈಗ ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿದೆ. ಕುಟುಂಬದ ಮೂವರು ಸದಸ್ಯರಿಗೂ ಇದೇ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದರಿಂದ ಈ ಪ್ರಶ್ನೆ ಮತ್ತೆ ಎದ್ದಿದೆ.

    ಇಂದು ನಡೆದ ಅಪಘಾತದಲ್ಲಿ ನಟ ಹರಿಕೃಷ್ಣ ಸಾವನ್ನಪ್ಪಿದ್ದು, ಎನ್‍ಟಿಆರ್ ಕುಟುಂಬಸ್ಥರು ಸೇರಿದಂತೆ ಅಭಿಮಾನಿಗಳಿಗೆ ತೀವ್ರ ಅಘಾತವನ್ನುಂಟು ಮಾಡಿದೆ.

    ಮಾಜಿ ಸಿಎಂ, ನಟ ಎನ್‍ಟಿಆರ್ ಸೇರಿದಂತೆ ಇಡೀ ಕುಟುಂಬ ಸದಸ್ಯರಿಗೆ ಕಾರು ಚಾಲನೆಯ ಕುರಿತು ಹೆಚ್ಚಿನ ಆಸಕ್ತಿ ಇದ್ದು, ನಟರಾಗಿದ್ದ ಎನ್‍ಟಿಆರ್ ರಾಜಕೀಯ ಪ್ರವೇಶ ಮಾಡಿ `ಚೈತನ್ಯ ಯಾತ್ರೆ’ ಆರಂಭಿಸಿದ ವೇಳೆ ಸ್ವತಃ ಎನ್‍ಟಿಆರ್ ಪುತ್ರ ಹರಿಕೃಷ್ಣ ಅವರೇ ಯಾತ್ರೆಯ ವಾಹನ ಚಲಾಯಿಸಿ ಶಕ್ತಿ ತುಂಬಿದ್ದರು. ಅಲ್ಲದೇ ತಂದೆ ಸಿನಿಮಾ ಚಿತ್ರೀಕರಣಕ್ಕೆ ತೆರಳುವ ವೇಳೆಯೂ ಅವರೇ ಕಾರು ಚಲಾಯಿಸುತ್ತಿದ್ದರು.

    ಆದರೆ ಇಂದು ನಡೆದ ಅಪಘಾತ ಮತ್ತೆ ಎನ್‍ಟಿಆರ್ ಕುಟುಂಬಸ್ಥರನ್ನು ಶೋಕ ಸಾಗರದಲ್ಲಿ ಮುಳುಗುವಂತೆ ಮಾಡಿದೆ. 2009 ರಲ್ಲಿಯೂ ಸಹ ನಲ್ಗೊಂಡ ಜಿಲ್ಲೆಯ ಮಾರ್ಗದಲ್ಲೇ ಹರಿಕೃಷ್ಣ ಮಗ ಜೂನಿಯರ್ ಎನ್‍ಟಿಆರ್ ಅಪಘಾತದಲ್ಲಿ ಗಾಯಗೊಂಡಿದ್ದರು. ಅಲ್ಲದೇ 4 ವರ್ಷಗಳ ಹಿಂದೆ ಹರಿಕೃಷ್ಣ ಮಗ ಜಾನಕಿರಾಮ್ ಕೂಡ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಸದ್ಯ ಈ ಘಟನೆಗಳಿಂದ ಎನ್‍ಟಿಆಆರ್ ಅಭಿಮಾನಿಗಳು ಸಹ ಶಾಕ್ ಗೆ ಒಳಗಾಗಿದ್ದು, ನಲ್ಗೊಂಡ ಮಾರ್ಗವೇ ಶಾಪವಾಗಿದೆಯೇ ಎನ್ನುವ ಪ್ರಶ್ನೆಯನ್ನು ಇಟ್ಟು ಅಭಿಮಾನಿಗಳು ಚರ್ಚೆ ನಡೆಸುತ್ತಿದ್ದಾರೆ. ಇದನ್ನು ಓದಿ: ಡ್ರೈವರಿಂದ ಸ್ಟಾರ್ ವರೆಗೂ ಎಲ್ಲರನ್ನೂ ಒಂದೇ ರೀತಿಯಾಗಿ ನೋಡ್ತಿದ್ರು: ಹರಿಕೃಷ್ಣ ಬಗ್ಗೆ ರವಿಶಂಕರ್ ಮಾತು

    https://twitter.com/Mohansainikpuri/status/1034651482979590144

    ಅಪಘಾತದಲ್ಲಿ ಹರಿಕೃಷ್ಣ ಸಾವನ್ನಪ್ಪಿರುವ ಸುದ್ದಿ ಹೊರಬೀಳುತ್ತಿದಂತೆ ಪುತ್ರರಾದ ನಟ ಜೂ.ಎನ್‍ಟಿಆರ್, ಕಲ್ಯಾಣ ರಾಮ್ ಹಾಗೂ ಕುಟುಂಸ್ಥರು ಆಸ್ಪತ್ರೆಗೆ ಆಗಮಿಸಿದ್ದಾರೆ. ಅಲ್ಲದೇ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಕೂಡ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಆಸ್ಪತ್ರೆಗೆ ಧಾವಿಸಿದ್ದಾರೆ. ಹರಿಕೃಷ್ಣ ಅವರ ಸಾವಿಗೆ ಟಾಲಿವುಡ್ ಕಲಾವಿದರು ಸೇರಿದಂತೆ ಸ್ಯಾಂಡಲ್‍ವುಡ್‍ನ ಹಲವು ನಟರು ಸಂತಾಪ ಸೂಚಿಸಿದ್ದಾರೆ. ಇದನ್ನು ಓದಿ: ತೆಲಂಗಾಣದ ನಲ್ಗೊಂಡ ಬಳಿ ಅಪಘಾತ – ಜ್ಯೂನಿಯರ್ NTR ತಂದೆ ನಂದಮೂರಿ ಹರಿಕೃಷ್ಣ ದುರ್ಮರಣ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಈಜಿಪುರದಿಂದ ಮಡಿಕೇರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಚಾಲಕ ವಶ

    ಈಜಿಪುರದಿಂದ ಮಡಿಕೇರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಚಾಲಕ ವಶ

    ಬೆಂಗಳೂರು: ಕಂಠಪೂರ್ತಿ ಕುಡಿದು ಸೈರನ್ ಹಾಕೊಂಡು ತಮಗೆ ತೋಚಿದಂತೆ ಓಡಾಡೋ ಆಂಬುಲೆನ್ಸ್ ಚಾಲಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದೇ ವಾರದಲ್ಲಿ ರಾತ್ರಿ ಡ್ರಿಂಕ್ ಅಂಡ್ ಡ್ರೈವ್ ತಡೆ ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ಆಂಬುಲೆನ್ಸ್ ಚಾಲಕ ಸಿಕ್ಕಿಬಿದ್ದಿದ್ದಾನೆ.

    ಕೆ.ಆರ್. ಪುರಂನ ಸತ್ಯಸಾಯಿ ಅರ್ಥೋಪೆಡಿಕ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್‍ಗೆ ಸೇರಿದ ಆಂಬುಲೆನ್ಸ್ ಚಾಲಕ ಮಹೇಶ್ ಎಂದು ಗುರುತಿಸಲಾಗಿದ್ದು, ಈತ ಈಜಿಪುರದಿಂದ ರೋಗಿಯನ್ನು ಆಂಬುಲೆನ್ಸ್ ನಲ್ಲಿ ಮಡಿಕೇರಿಗೆ ಕರೆದೊಯ್ಯುತ್ತಿದ್ದ. ಈ ಸಂದರ್ಭದಲ್ಲಿ ಬೆಂಗಳೂರಿಗೆ ಬರುವಾಗ ಬಿಡದಿ ಬಳಿ ಕುಡಿದು ಸೈರನ್ ಬಳಸಿಕೊಂಡು ಚಾಲನೆ ಮಾಡುತ್ತಿದ್ದನು.

    ಹಲಸೂರು ಗೇಟ್ ಮಾರ್ಗದಲ್ಲಿ ಇನ್ಸ್‍ಪೆಕ್ಟರ್ ಮಹಮ್ಮದ್ ಆಂಬುಲೆನ್ಸ್ ಅನ್ನು ತಡೆದು ತಪಾಸಣೆ ನಡೆಸಿದಾಗ ಚಾಲಕನ ಕುಡಿದಿರುವುದು ತಿಳಿದಿದೆ. ನಂತರ ಪೊಲೀಸರು ಆಂಬುಲೆನ್ಸ್ ಅನ್ನು ವಶಕ್ಕೆ ಪಡೆದು ಚಾಲಕ ಮಹೇಶ್‍ಗೆ ದಂಡ ಹಾಕಿದ್ದಾರೆ.