Tag: ಚಿಕನ್ ಕರಿ

  • ಮಟನ್ ಕರಿ ಬದಲಿಗೆ ಚಿಕನ್ ಕರಿ ಡೆಲಿವರಿ – 20 ಸಾವಿರ ದಂಡ ಕಟ್ಟಿದ ರೆಸ್ಟೋರೆಂಟ್

    ಮಟನ್ ಕರಿ ಬದಲಿಗೆ ಚಿಕನ್ ಕರಿ ಡೆಲಿವರಿ – 20 ಸಾವಿರ ದಂಡ ಕಟ್ಟಿದ ರೆಸ್ಟೋರೆಂಟ್

    ಭೋಪಾಲ್: ಫುಡ್ ಡೆಲಿವರಿ ಆ್ಯಪ್‍ಗಳು ಜನರ ಬದುಕನ್ನು ಬಹಳ ಸುಲಭಗೊಳಿಸಿದೆ. ಆದರೆ ಕೆಲವೊಮ್ಮೆ ಇದೇ ಫುಡ್ ಡೆಲಿವರಿ ವಿಚಾರ ಜನರನ್ನು ಆತಂಕಕ್ಕೀಡು ಮಾಡುತ್ತದೆ. ಹೌದು ಇತ್ತೀಚೆಗಷ್ಟೇ ಮಧ್ಯಪ್ರದೇಶದ ಗ್ವಾಲಿಯರ್‍ನಲ್ಲಿರುವ ಜಿವಾಜಿ ಕ್ಲಬ್ ಎಂಬ ರೆಸ್ಟೋರೆಂಟ್ ಸಸ್ಯಾಹಾರಿ ಕುಟುಂಬಕ್ಕೆ ಮಟರ್ ಪನೀರ್ ಕಳುಹಿಸುವ ಬದಲಿಗೆ ಚಿಕನ್ ಕರಿ ಕಳುಹಿಸಿ 20,000ರೂ. ದಂಡ ಪಾವತಿಸಿದೆ.

    ವೃತ್ತಿಯಲ್ಲಿ ವಕೀಲರಾದ ಸಿದ್ಧಾರ್ಥ್ ಶ್ರೀವಾಸ್ತವ ಅವರು, ಫುಡ್ ಡೆಲಿವರಿ ಆ್ಯಪ್ ಮೂಲಕ ಮಟರ್ ಪನೀರ್ ಅನ್ನು ಆರ್ಡರ್ ಮಾಡಿದ್ದರು. ಆದರೆ ಚಿಕನ್ ಕರಿ ಬಂದಿರುವುದನ್ನು ನೋಡಿ ಅವರ ಕುಟುಂಬಸ್ಥರು ಸಾಕ್ ಆಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಮನೆಯವರು ಗ್ರಾಹಕರ ಪರಿಹಾರ ವೇದಿಕೆಗೆ ದೂರು ನೀಡಿದ್ದು, ರೆಸ್ಟೊರೆಂಟ್‍ಗೆ 20,000 ರೂ. ದಂಡ ವಿಧಿಸಲಾಗಿದೆ. ಇದನ್ನೂ ಓದಿ: ಜನಾಕ್ರೋಶಕ್ಕೆ ಮಣಿದ ಕೇಂದ್ರ – ಅಕ್ಕಿ, ಮೊಸರು ಸೇರಿದಂತೆ 14 ವಸ್ತುಗಳ ಮೇಲೆ ಜಿಎಸ್‍ಟಿ ವಿನಾಯಿತಿ

    ಈ ಘಟನೆಯು ನಮ್ಮ ಕುಟುಂಬಕ್ಕೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ನೋವನ್ನುಂಟು ಮಾಡಿದೆ. ಅಲ್ಲದೇ ಈ ವಿಚಾರವನ್ನು ಜಿವಾಜಿ ಕ್ಲಬ್‍ನ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿಲ್ಲ ಎಂದು ವಕೀಲರು ಆರೋಪಿಸಿದ್ದರು. ಹೀಗಾಗಿ ಗ್ರಾಹಕರ ವೇದಿಕೆಯಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ ಈ ಬಗ್ಗೆ ಕಾನೂನು ಹೋರಾಟ ನಡೆಸಿದ ಸಂದರ್ಭದಲ್ಲಿ ದೂರುದಾರರು ಮಾಡಿದ ವೆಚ್ಚವನ್ನು ಮರುಪಾವತಿಸಲು ಜಿವಾಜಿ ಕ್ಲಬ್ ನಿರ್ದೇಶನ ನೀಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮಸಾಲ ಎಂದು ಕೀಟನಾಶಕ ಮಿಕ್ಸ್ ಮಾಡಿದ ಅಜ್ಜಿ- ಚಿಕನ್ ಕರ್ರಿ ಸೇವಿಸಿ ಮೊಮ್ಮಕ್ಕಳು ಸಾವು

    ಮಸಾಲ ಎಂದು ಕೀಟನಾಶಕ ಮಿಕ್ಸ್ ಮಾಡಿದ ಅಜ್ಜಿ- ಚಿಕನ್ ಕರ್ರಿ ಸೇವಿಸಿ ಮೊಮ್ಮಕ್ಕಳು ಸಾವು

    – ಅಜ್ಜಿ ಮನೆಯಲ್ಲಿ ರಜಾದಿನಗಳನ್ನ ಕಳೆಯುತ್ತಿದ್ದ ಮಕ್ಕಳು
    – ಸಾವು, ಬದುಕಿನ ಮಧ್ಯೆ ಹೋರಾಡ್ತಿರೋ ಅಜ್ಜಿ

    ಹೈದರಾಬಾದ್: ಚಿಕನ್ ಮಸಾಲ ಎಂದು ಚಿಕನ್ ಕರ್ರಿಗೆ ಕೀಟನಾಶಕ ಮಿಕ್ಸ್ ಮಾಡಿದ್ದು, ಅದೇ ಆಹಾರವನ್ನು ಸೇವಿಸಿ ಮಕ್ಕಳಿಬ್ಬರು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ.

    ಮೃತರನ್ನು ರೋಹಿತ್ (11) ಮತ್ತು ಜೀವನ್ (8) ಎಂದು ಗುರುತಿಸಲಾಗಿದೆ. ಗುಡಿಪಾಲ ಮಂಡಲದ ಎ.ಎಲ್.ಪುರಂನಲ್ಲಿ ಈ ಘಟನೆ ನಡೆದಿದೆ. ಚಿತ್ತೂರು ಗ್ರಾಮೀಣ ಮಂಡಳಿಯ ಚೆರ್ಲೋಪಳ್ಳಿ ಗ್ರಾಮದ ರೋಹಿತ್ ಮತ್ತು ಜೀವನ ಇಬ್ಬರು ತಮ್ಮ ರಜಾದಿನಗಳನ್ನು ಎಎಲ್ ಪುರಂನಲ್ಲಿರುವ ತಮ್ಮ ಅಜ್ಜಿಯ ಮನೆಯಲ್ಲಿ ಕಳೆಯುತ್ತಿದ್ದರು.

    ಸೋಮವಾರ ಅಜ್ಜಿ ಗೋವಿಂದಮ್ಮ (70) ಚಿಕನ್ ಕರ್ರಿ ಮಾಡಿದ್ದಾರೆ. ಆದರೆ ಗೋವಿಂದಮ್ಮ ಚಿಕನ್ ಮಸಾಲ ಎಂದು ಕೊಂಡು ಕೀಟನಾಶಕಗಳನ್ನು ಚಿಕನ್ ಕರ್ರಿಗೆ ಬೆರೆಸಿ ಅಡುಗೆ ಮಾಡಿದ್ದರು. ಇದರ ಅರಿವೇ ಇಲ್ಲದೆ ಗೋವಿಂದಮ್ಮ ಪ್ರೀತಿಯಿಂದ ತಾನು ಮಾಡಿದ್ದ ಚಿಕನ್ ಕರ್ರಿಯನ್ನು ಮೊಮ್ಮಕ್ಕಳಿಗೆ ಬಡಿಸಿದ್ದಾರೆ.

    ಕೀಟನಾಶಕ ಮಿಕ್ಸ್ ಮಾಡಿದ್ದ ಆಹಾರ ಸೇವಿಸಿದ ಬಳಿಕ ಮಕ್ಕಳಿಬ್ಬರು ಪ್ರಜ್ಞೆ ತಪ್ಪಿದ್ದಾರೆ. ಅಜ್ಜಿಯೂ ಕೂಡ ಅದೇ ಊಟವನ್ನು ಮಾಡಿದ್ದು, ಅವರು ಕೂಡ ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ಚಿತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲಿಯೇ ರೋಹಿತ್ ಮತ್ತು ಜೀವನ್ ಮೃತಪಟ್ಟಿದ್ದಾರೆ.

    ಸದ್ಯಕ್ಕೆ ಅಜ್ಜಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಗ್ರಾಮಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.