Tag: ಚಿಕಿತ್ಸೆ

  • ಚಿಕಿತ್ಸೆಗೆಂದು ಕರ್ಕೊಂಡು ಬಂದು ಆಸ್ಪತ್ರೆಯಲ್ಲೇ ಯುವತಿಯ ರೇಪ್‌ ಮಾಡಿದ!

    ಚಿಕಿತ್ಸೆಗೆಂದು ಕರ್ಕೊಂಡು ಬಂದು ಆಸ್ಪತ್ರೆಯಲ್ಲೇ ಯುವತಿಯ ರೇಪ್‌ ಮಾಡಿದ!

    ಮಂಗಳೂರು: ಚಿಕಿತ್ಸೆಗೆಂದು ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಪರಿಚಯಸ್ಥನೇ ಆಸ್ಪತ್ರೆಯಲ್ಲಿ ನಿರಂತರ ಅತ್ಯಾಚಾರ ಎಸಗಿದ ಘಟನೆ ಮಂಗಳೂರಿನಲ್ಲಿ (Mangaluru) ನಡೆದಿದೆ.

    ಕೇರಳ (Kerala) ಮೂಲದ ಸಜಿತ್ ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೈಲ್ಸ್ ಗೆ ಚಿಕಿತ್ಸೆಗೆ ಯುವತಿಯನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಸಜಿತ್, ಚಿಕಿತ್ಸೆಯ ಬಳಿಕ ಆಸ್ಪತ್ರೆಯ ಕೊಠಡಿಯಲ್ಲಿದ್ದ ವೇಳೆ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದಾನೆ. ಬಳಿಕ ಆಕೆಯ ನಗ್ನ ಫೋಟೋಗಳನ್ನ ತೆಗೆದಿದ್ದು, ಬೆದರಿಕೆ ಹಾಕುತ್ತಿದ್ದ.

    ಆ ಬಳಿಕ ನಗ್ನ ಫೋಟೋ ಇದೆ ಎಂದು ಬೆದರಿಸಿ, ಆಕೆಯನ್ನು ಮಂಗಳೂರಿನ ಮಹಾರಾಜ ಹೋಟೇಲ್ ಗೆ ಕರೆಸಿಕೊಂಡು‌ ಅಲ್ಲಿನ ಕೊಠಡಿಯಲ್ಲಿ ಅತ್ಯಾಚಾರ ನಡೆಸಿದ್ದಾನೆ. ಅದಾದ ಬಳಿಕ ಯುವತಿ ಫುಡ್ ಫಾಯಿಸನ್ ಆಗಿ ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಾದಾಗ ಅಲ್ಲೂ ಕೊಠಡಿಯಲ್ಲಿ ಅತ್ಯಾಚಾರ ಮಾಡಿದ್ದಾನೆಂದು ಯುವತಿ‌ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು‌ ನೀಡಿದ್ದಾಳೆ.

    ಪ್ರಕರಣ ದಾಖಲಿಸಿಕೊಂಡ ಕದ್ರಿ ಪೊಲೀಸರು (Kadri Police) ಆರೋಪಿಯನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ವರ್ತೆ ಪಂಜುರ್ಲಿ ಅಭಯ ನಿಜವಾಯ್ತು- ಕೊಲೆ ಆರೋಪಿ ನ್ಯಾಯಾಲಯಕ್ಕೆ ಶರಣು!

  • ಯುರೋಪಿನಲ್ಲಿ ಐವರ ಸಾವಿಗೆ ಕಾರಣವಾಯ್ತು ಗಿಳಿ ಜ್ವರ- ಏನಿದು ಫೀವರ್‌, ಲಕ್ಷಣಗಳೇನು..?

    ಯುರೋಪಿನಲ್ಲಿ ಐವರ ಸಾವಿಗೆ ಕಾರಣವಾಯ್ತು ಗಿಳಿ ಜ್ವರ- ಏನಿದು ಫೀವರ್‌, ಲಕ್ಷಣಗಳೇನು..?

    ತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾಗುತ್ತಿದ್ದಂತೆಯೇ ಮನುಷ್ಯ ಒಂದಲ್ಲ ಒಂದು ರೀತಿಯಲ್ಲಿ ಅನಾರೋಗ್ಯಕ್ಕೀಡಾಗುತ್ತಿದ್ದಾನೆ. ಶೀತ, ಜ್ವರ ಹಾಗೂ ಕೆಮ್ಮು ಸಾಮಾನ್ಯವಾಗಿರುತ್ತದೆ. ಡೆಂಗ್ಯೂ, ಮಲೇರಿಯಾ, ಟೈಫಾಯ್ಡು, ಹಂದಿ ಜ್ವರ, ಕೊರೊನಾ ವೈರಸ್‌, ಹಕ್ಕಿ ಜ್ವರ ಕೇಳಿದ್ದೇವೆ. ಸದ್ಯ ಈ ಜ್ವರಗಳ ಜೊತೆ ಅಪರೂಪದಲ್ಲಿ ಅಪರೂಪದ ಗಿಳಿ ಜ್ವರವೂ ಸೇರಿಕೊಂಡಿದೆ.

    ಹೌದು. ಗಿಳಿ ಜ್ವರ ನಾವು ಹೊಸದಾಗಿ ಕೇಳಿಸಿಕೊಂಡ ಸೋಂಕಾದರೆ ಯುರೋಪ್‌ನಾದ್ಯಂತ (Europe) ಈ ವರ್ಷ ಐವರ ಸಾವಿಗೆ ಕಾರಣವಾಗಿದೆ. ಈ ಮೂಲಕ ಯೂರೋಪಿಯನ್ನರನ್ನು ಭಾರೀ ಆತಂಕಕ್ಕೆ ದೂಡಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಡೆನ್ಮಾರ್ಕ್‌ನಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ನೆದರ್‌ಲ್ಯಾಂಡ್‌ನಲ್ಲಿ ಓರ್ವ, ಮತ್ತು ಆಸ್ಟ್ರಿಯಾ, ಜರ್ಮನಿ ಮತ್ತು ಸ್ವೀಡನ್‌ನಾದ್ಯಂತ ಡಜನ್‌ಗಟ್ಟಲೆ ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಗಿದ್ರೆ ಏನಿದು ಗಿಳಿ ಜ್ವರ..?, ಇದರ ಲಕ್ಷಣಗಳೇನು..?, ಚಿಕಿತ್ಸೆ ಏನು ಎಂಬುದನ್ನು ನೋಡೋಣ.

    ಏನಿದು ಗಿಳಿ ಜ್ವರ?: ಈ ಜ್ವರವನ್ನು ಸಿಟ್ಟಾಕೋಸಿಸ್‌ ಎಂದೂ ಕರೆಯುತ್ತಾರೆ. ಇದು ಅಪರೂಪದ ಗಂಭೀರ ಸಮಸ್ಯೆ ಉಂಟು ಮಾಡುವ ವೈರಸ್‌ ಆಗಿದೆ. ಕ್ಲಮೈಡಿಯ ಸಿಟ್ಟಾಸಿ ಎಂಬ ಬ್ಯಾಕ್ಟೀರಿಯಾದಿಂದ ಇದು ಉಂಟಾಗುತ್ತದೆ. ಇದು ಪಕ್ಷಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ವಿಶೇಷವಾಗಿ ಗಿಳಿಗಳು, ಪಾರಿವಾಳಗಳು ಹಾಗೂ ಕೋಳಿಗಳ ಮೇಲೆ ಇದು ಪರಿಣಾಮ ಬೀರುತ್ತದೆ. ಈ ಬ್ಯಾಕ್ಟೀರಿಯಾವು ಗಾಳಿಯಿಂದ ಮನುಷ್ಯರಿಗೂ ಹರಡುತ್ತದೆ ಎಂಬುದಾಗಿ ವೈದ್ಯ ಮೂಲಗಳು ತಿಳಿಸಿವೆ.

    ಗಿಳಿ ಜ್ವರವನ್ನು ಅಪರೂಪದ ಕಾಯಿಲೆ ಎಂದು ಪರಿಗಣಿಸಲಾಗುತ್ತದೆ. ಕೆನಡಾದಲ್ಲಿ (Canada) ಮನುಷ್ಯರ ಮೇಲೆ ಗಿಳಿ ಜ್ವರ (Parrot Fever) ಅಷ್ಟಾಗಿ ಪರಿಣಾಮ ಬೀರಿಲ್ಲ. ಹೀಗಾಗಿ ರಾಷ್ಟ್ರೀಯವಾಗಿ ಸೂಚಿಸಬಹುದಾದ ರೋಗವಲ್ಲ ಎಂದು ಕೆನಡಾ ಆರೋಗ್ಯ ಸಂಸ್ಥೆ ತಿಳಿಸಿದೆ.

    ಗಿಳಿ ಜ್ವರ ಹೇಗೆ ಬರುತ್ತದೆ?: ಗಿಳಿ ಜ್ವರವು ಕ್ಲಮೈಡಿಯ ಸಿಟ್ಟಾಸಿ ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುವ ಬ್ಯಾಕ್ಟೀರಿಯಾದ ಸೋಂಕು. ಇದು ಸೋಂಕಿತ ಪಕ್ಷಿಗಳ ನೇರ ಸಂಪರ್ಕದ ಮೂಲಕ ಅಥವಾ ಅವುಗಳ ಹಿಕ್ಕೆಗಳು, ಗರಿಗಳು ಅಥವಾ ಉಸಿರಾಟದ ಸ್ರವಿಸುವಿಕೆಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವ ಅಥವಾ ಮೊದಲೇ ಅಸ್ತಿತ್ವದಲ್ಲಿರುವ ಉಸಿರಾಟದ ಪರಿಸ್ಥಿತಿಗಳನ್ನು ಹೊಂದಿರುವ ಜನರು ಈ ಸೋಂಕಿಗೆ ಹೆಚ್ಚು ಒಳಗಾಗುತ್ತಾರೆ.

    ಗಿಳಿ ಜ್ವರವು ಮುಖ್ಯವಾಗಿ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ. ಬಳಿಕ ವಿವಿಧ ಅಂಗಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಕೆನಡಿಯನ್ ಸೆಂಟರ್ ಫಾರ್ ಆಕ್ಯುಪೇಷನಲ್ ಹೆಲ್ತ್ ಅಂಡ್ ಸೇಫ್ಟಿ (CCOHS) ಹೇಳಿದೆ. ಅಪರೂಪದ ಸಂದರ್ಭದಲ್ಲಿ, ಯಕೃತ್ತಿನ ಉರಿಯೂತ, ಪೆರಿಕಾರ್ಡಿಯಮ್ (ಹೃದಯ ಕುಹರದ ಒಳಪದರ), ಮಯೋಕಾರ್ಡಿಯಂ (ಹೃದಯ ಸ್ನಾಯು) ಮತ್ತು ಮೆದುಳಿನ ಉರಿಯೂತ ವರದಿಯಾಗಿದೆ. ಸೋಂಕಿತ ಪ್ರಾಣಿಗಳನ್ನು ತಿನ್ನುವುದರಿಂದ ರೋಗವು ಹರಡುವುದಿಲ್ಲ ಎಂದು CCOHS ಹೇಳಿದೆ.

    ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಪ್ರಕಾರ, ಈ ಸೋಂಕು ಧೂಳಿನ ಕಣಗಳು, ನೀರಿನ ಹನಿಗಳ ಮೂಲಕ ಹಾಗೂ ಪಕ್ಷಿಗಳು ಮನುಷ್ಯರನ್ನು ಕಚ್ಚಿದಾಗಲೂ ಹರಡುತ್ತದೆ. ಇದಾದ ಕೆಲವು ದಿನಗಳ ಬಳಿಕ ರೋಗಲಕ್ಷಣಗಳು ಉಲ್ಬಣಗೊಳ್ಳುತ್ತಾ ಹೋಗುತ್ತದೆ.ಕ್ರಮೇಣ ಈ ಸೋಂಕಿನಿಂದ ನ್ಯುಮೋನಿಯಾ ಮತ್ತು ಹೃದಯ ರಕ್ತನಾಳಗಳ ಉರಿಯೂತ ಸಂಭವಿಸಬಹುದು. ಹೆಪಟೈಟಿಸ್ ಮತ್ತು ನರಸಂಬಂಧಿ ಸಮಸ್ಯೆ ಕೂಡ ಎದುರಾಗುವ ಸಾಧ್ಯತೆಗಳಿವೆ. ರೋಗ ಲಕ್ಷಣಗಳು ಕಂಡುಬಂದ ಕೂಡಲೇ ಸರಿಯಾದ ವೈದ್ಯಕೀಯ ನೆರವು ದೊರೆಯದಿದ್ದರೆ ಸಾವು ಸಂಭವಿಸುವ ಸಾಧ್ಯತೆಗಳಿವೆ.

    ಲಕ್ಷಣಗಳೇನು..?: ಸೋಂಕು ತಗುಲಿದ ಕೂಡಲೇ ಯಾವುದೇ ಲಕ್ಷಣಗಳು ಕಾಣಿಸಿಕೊಳ್ಳಲ್ಲ. 5 ರಿಂದ 14 ದಿನಗಳ ಬಳಿಕ ರೋಗ ಲಕ್ಷಣಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ. ವ್ಯಕ್ತಿಯು ಬ್ಯಾಕ್ಟೀರಿಯಾದ ಸಂಪರ್ಕಕ್ಕೆ ಬಂದಾಗ ಆತನಿಗೆ ಶೀತ, ಒಣ ಕೆಮ್ಮು, ವಾಂತಿ, ಭೇದಿ, ತಲೆನೋವು, ಸ್ನಾಯು ಸೆಳೆತ ಮತ್ತು ಆಯಾಸ ಹಾಗೂ ಜ್ವರದ ರೀತಿಯ ರೋಗಲಕ್ಷಣಗಳು ಕಂಡುಬರುತ್ತದೆ. ಸೌಮ್ಯವಾದ ಪ್ರಕರಣಗಳಲ್ಲಿ ಜ್ವರವು ಮೂರು ವಾರಗಳವರೆಗೆ ಅಥವಾ ಅದಕ್ಕಿಂತ ಹೆಚ್ಚು ಕಾಲ ಉಳಿಯಬಹುದು. ಇದು ನ್ಯುಮೋನಿಯಾ ಹಾಗೂ ಕೆಲವರಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡರೆ ಇನ್ನೂ ಕೆಲವರಲ್ಲಿ ಎದೆನೋವು ಕಾಣಿಸಿಕೊಳ್ಳುವ ಸಾಧ್ಯತೆಗಳು ಕೂಡ ಇವೆ.

    ಚಿಕಿತ್ಸೆ ಏನು?: ಸಾಮಾನ್ಯವಾಗಿ ಗಿಳಿ ಜ್ವರಕ್ಕೆ ಆಂಟಿಬಯೋಟಿಕ್‌ಗಳನ್ನು ನೀಡಲಾಗುತ್ತದೆ. ರೋಗ ಲಕ್ಷಣಗಳು ಹೆಚ್ಚಾದಂತೆ ಔಷಧಗಳೂ ಬೇರೆ ಬೇರೆಯಾಗುತ್ತಾ ಹೋಗುತ್ತದೆ. ಏಕೆಂದರೆ ರೋಗ ಲಕ್ಷಣಗಳು ತೀವ್ರಗೊಂಡಾಗ ನ್ಯುಮೋನಿಯಾ ಹಾಗೂ ಹೃದಯದ ರಕ್ತನಾಳಗಳ ಉರಿಯೂತ ಕೂಡಾ ಆಗಬಹುದು. ಹೆಪಟೈಟೀಸ್ ಹಾಗೂ ನರಗಳ ಸಮಸ್ಯೆ ಕೂಡ ಎದುರಾಗಬಹುದು. ಸೂಕ್ತ ಸಮಯದಲ್ಲಿ ವೈದ್ಯಕೀಯ ನೆರವು ಸಿಗದಿದ್ದರೆ ಸಾವನ್ನಪ್ಪುವ ಸಾಧ್ಯತೆಯೂ ಇದೆ.

    ಪಾರಾಗುವುದು ಹೇಗೆ?: ಗಿಳಿ ಜ್ವರವನ್ನು ತಡೆಗಟ್ಟಲು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಪಕ್ಷಿಗಳನ್ನು ನಿರ್ವಹಿಸುವಾಗ ಅಥವಾ ಪಕ್ಷಿಗಳು ಇರುವ ಪ್ರದೇಶಗಳಲ್ಲಿ ಕೆಲಸ ಮಾಡುವಾಗ ಉತ್ತಮ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು. ನೀವು ಪಕ್ಷಿಗಳು ಅಥವಾ ಅವುಗಳ ಪಂಜರಗಳನ್ನು ನಿರ್ವಹಿಸುವಾಗ, ನಿಮ್ಮ ಕೈಗಳನ್ನು ತೊಳೆದುಕೊಳ್ಳಿ ಮತ್ತು ಪಕ್ಷಿ ಪಂಜರಗಳನ್ನು ಸ್ವಚ್ಛಗೊಳಿಸುವಾಗ ಕೈಗೆ ಗ್ಲೌಸ್‌ಗಳು ಮತ್ತು ಮಖಕ್ಕೆ ಮಾಸ್ಕ್ ಧರಿಸುವುದು ಅತ್ಯಗತ್ಯ. ಅಲ್ಲದೆ ಅದರ ಅಪಾಯಗಳ ಬಗ್ಗೆ ನಿಮಗೆ ಮತ್ತು ಇತರರಿಗೆ ಶಿಕ್ಷಣ ನೀಡುವುದು ಮತ್ತು ಅಗತ್ಯವಿದ್ದರೆ ವೈದ್ಯಕೀಯ ಆರೈಕೆಯನ್ನು ಪಡೆಯುವುದು ಅತ್ಯಗತ್ಯ.

    ಯುರೋಪಿನಲ್ಲಿ ಏಕಾಏಕಿ ಸಂಭವಿಸುವ ಬಗ್ಗೆ ಹೇಳುವುದಾದರೆ WHO ಪ್ರಕಾರ, ಆಸ್ಟ್ರಿಯಾದಲ್ಲಿ ಹಿಂದಿನ 8 ವರ್ಷಗಳಲ್ಲಿ ವರ್ಷಕ್ಕೆ ಸರಾಸರಿ ಎರಡು ಪ್ರಕರಣಗಳಿಗೆ ಹೋಲಿಸಿದರೆ, 2023 ರಲ್ಲಿ 14 ಗಿಳಿ ಜ್ವರದ ಪ್ರಕರಣಗಳು ವರದಿಯಾಗಿವೆ. 2024 ರ ಮಾರ್ಚ್ 4 ರ ಹೊತ್ತಿಗೆ ದೇಶವು ನಾಲ್ಕು ಪ್ರಕರಣಗಳನ್ನು ವರದಿ ಮಾಡಿದೆ. ಡೆನ್ಮಾರ್ಕ್ 2023 ರ ಅಂತ್ಯದಿಂದ 2024 ರ ಜನವರಿ ಮಧ್ಯದವರೆಗೆ ಗಿಳಿ ಜ್ವರ ಪ್ರಕರಣಗಳಲ್ಲಿ ಹೆಚ್ಚಳವನ್ನು ವರದಿ ಮಾಡಿದೆ ಎಂದು WHO ಹೇಳಿದೆ. ಫೆಬ್ರವರಿ 27 ರ ಹೊತ್ತಿಗೆ 23 ವ್ಯಕ್ತಿಗಳು ರೋಗಕ್ಕೆ ತುತ್ತಾದರು. 17 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ 15 ಮಂದಿಗೆ ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ ಇದೆ. ಇನ್ನು ನಾಲ್ವರು ಸಾವನ್ನಪ್ಪಿದ್ದಾರೆ.

    2023ರ ಡಿಸೆಂಬರ್‌ನಲ್ಲಿ ಜರ್ಮನಿಯಲ್ಲಿ ಐವರಲ್ಲಿ ಗಿಳಿ ಜ್ವರ ದೃಢಪಟ್ಟಿತ್ತು. ಈ ಮೂಲಕ ಇದೇ ವರ್ಷ ಒಟ್ಟು 14 ಮಂದಿಯಲ್ಲಿ ಈ ಜ್ವರ ಕಾಣಿಸಿಕೊಂಡಿತ್ತು. 2024 ರ ಈ ಅವಧಿಯಲ್ಲಿ ಫೆಬ್ರವರಿ 20ರೊಳಗೆ ಮತ್ತೆ 5 ಪ್ರಕರಣಗಳು ವರದಿಯಾಗಿವೆ. 2023 ರ ನವೆಂಬರ್ ಕೊನೆಯಲ್ಲಿ ಮತ್ತು ಡಿಸೆಂಬರ್ ತಿಂಗಳ ಆರಂಭದಲ್ಲಿ ಸ್ವೀಡನ್ ನಲ್ಲಿಯೂ ಒಂದಷ್ಟು ಪ್ರಕರಣಗಳು ವರದಿಯಾಗಿವೆ. ನವೆಂಬರ್ ನಲ್ಲಿ 7 ಪ್ರಕರಣಗಳು ಮತ್ತು ಡಿಸೆಂಬರ್ ನಲ್ಲಿ 19 ಪ್ರಕರಣಗಳು ವರದಿಯಾಗಿವೆ. ಇದು ಹಿಂದಿನ ತಿಂಗಳುಗಳಲ್ಲಿ ಆಯಾ ತಿಂಗಳುಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆಯನ್ನು ದ್ವಿಗುಣಗೊಳಿಸುತ್ತದೆ. ಒಟ್ಟಿನಲ್ಲಿ ಯುರೋಪ್‌ನಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು WHO ಹೇಳಿದೆ.

  • ಮಗುವನ್ನು ನೆಲಕ್ಕೆ ಬಡಿದಿದ್ದ ತಂದೆ- ಚಿಕಿತ್ಸೆ ಫಲಿಸದೇ ಕಂದಮ್ಮ ಸಾವು

    ಮಗುವನ್ನು ನೆಲಕ್ಕೆ ಬಡಿದಿದ್ದ ತಂದೆ- ಚಿಕಿತ್ಸೆ ಫಲಿಸದೇ ಕಂದಮ್ಮ ಸಾವು

    ಧಾರವಾಡ: ತಂದೆಯಿಂದಲೇ ನೆಲಕ್ಕೆ ಎಸೆಯಲ್ಪಟ್ಟಿದ್ದ ಹೆಣ್ಣು ಮಗು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.

    ಶ್ರೇಯಾ (1 ವರ್ಷ) ಮೃತ ದುರ್ದೈವಿ ಕಂದಮ್ಮ. ಈಕೆಯನ್ನು ತಂದೆ ಶಂಭುಲಿಂಗಯ್ಯ ಕೊಲೆ ಮಾಡಿದ್ದಾನೆ. ಈತ ಧಾರವಾಡ (Dharwad) ತಾಲೂಕಿನ ಯಾದವಾಡ ಗ್ರಾಮದ ನಿವಾಸಿ. ಇದನ್ನೂ ಓದಿ: ಮಗು ಜೋರಾಗಿ ಅಳುತ್ತೆಂದು ನೆಲಕ್ಕೆ ಹೊಡೆದ ತಂದೆ!

    ಏನಿದು ಪ್ರಕರಣ: ನಾಲ್ಕು ವರ್ಷಗಳ ಹಿಂದೆ ಶಂಭಯ್ಯ ಮತ್ತು ಸವಿತಾ ಮದುವೆಯಾಗಿದ್ದರು. ಈ ದಂಪತಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದರು. ಮೊದಲನೇಯ ಗಂಡು ಮಗುವಿಗೆ ಮೂರು ವರ್ಷವಾಗಿದೆ. ಶಂಭಯ್ಯ ಧಾರವಾಡ ನಗರದಲ್ಲಿ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ನಿತ್ಯ ವಿಪರೀತವಾಗಿ ಕುಡಿಯುತ್ತಿದ್ದ ಶಂಭಯ್ಯ ಮಂಗಳವಾರ ತಡರಾತ್ರಿ ತನ್ನ ಮೇಲೆ ಹಲ್ಲೆ ಮಾಡಿ ಬಳಿಕ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎಂದು ಪತ್ನಿ ಸವಿತಾ ಮತ್ತು ಸಹೋದರ ಅಳಿಯ ಕಲ್ಲಯ್ಯ ನೋವು ತೋಡಿಕೊಂಡಿದ್ದಾರೆ.

    ಮಲಗುವಾಗ ಮಗು ಅಳುತ್ತೆ ಎಂಬ ಕಾರಣಕ್ಕೆ ಮಗುವನ್ನ ನೆಲಕ್ಕೆ ಎತ್ತಿ ಬಡಿದಿದ್ದಾನೆ. ಪರಿಣಾಮ ಮಗು ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕೂಡಲೇ ಆಕೆಯನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಇದೀಗ ಪುಟ್ಟ ಕಂದಮ್ಮ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.

    ಘಟನೆ ಸಂಬಂಧ ಕುಟುಂಬಸ್ಥರು ಪಾಪಿ ತಂದೆ ಶಂಭುಲಿಂಗಯ್ಯನ ವಿರುದ್ಧ ದೂರು ನೀಡಿದ್ದು, ಗರಗ ಠಾಣೆ ಪೆÇಲೀಸರು ಶಂಭುಲಿಂಗಯ್ಯನನ್ನು ವಶಕ್ಕೆ ಪಡೆದಿದ್ದಾರೆ. ಧಾರವಾಡ ಗರಗ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ‘ಮಿಂಟೋ’ ಆಸ್ಪತ್ರೆಯ ಕರ್ಮಕಾಂಡ – ಆಸ್ಪತ್ರೆಗೆ ಬೀಗ ಹಾಕಿ ರಸ್ತೆಯಲ್ಲೇ ರೋಗಿಗಳಿಗೆ ಚಿಕಿತ್ಸೆ

    ‘ಮಿಂಟೋ’ ಆಸ್ಪತ್ರೆಯ ಕರ್ಮಕಾಂಡ – ಆಸ್ಪತ್ರೆಗೆ ಬೀಗ ಹಾಕಿ ರಸ್ತೆಯಲ್ಲೇ ರೋಗಿಗಳಿಗೆ ಚಿಕಿತ್ಸೆ

    – ಊಟದ ಸಮಯ ಎಂದು ರೋಗಿಗಳನ್ನು ಹೊರಗಡೆ ಕಳುಹಿಸಿ ಆಸ್ಪತ್ರೆಗೆ ಬೀಗ

    ಬೆಂಗಳೂರು: ಇಲ್ಲಿನ ಮಿಂಟೋ ಆಸ್ಪತ್ರೆ (Minto Hospital) ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಾಗಿದೆ. ಆದರೆ ಈಗ ಊಟದ ಸಮಯ ಎಂದು ಆಸ್ಪತ್ರೆಗೆ ಬೀಗ ಹಾಕಿ ರಸ್ತೆಯಲ್ಲೇ ರೋಗಿಗಳಿಗೆ ಚಿಕಿತ್ಸೆ ನೀಡಿ ಅಮಾನವೀಯ ವರ್ತನೆ ತೋರಿದ್ದಾರೆ. ಇದರಿಂದ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಸಿಗದೆ ಆಸ್ಪತ್ರೆ ಮುಂಭಾಗ ರೋಗಿಗಳು ನರಳಾಡುತ್ತಿದ್ದಾರೆ.

    ರಾಜಧಾನಿ ಬೆಂಗಳೂರಿನಲ್ಲಿ (Bengaluru) ಇರುವ ಅತಿದೊಡ್ಡ ಕಣ್ಣಿನ ಆಸ್ಪತ್ರೆ (Eye Hospital) ಎಂದರೆ ಅದು ಮಿಂಟೋ ಆಸ್ಪತ್ರೆ. ಉಚಿತವಾಗಿ ಚಿಕಿತ್ಸೆ ಸಿಗುತ್ತದೆ ಎಂದು ದೂರದ ಊರುಗಳಿಂದ ಜನ ಬರುತ್ತಾರೆ. ಎಂತಹದ್ದೇ ಸಂದರ್ಭದಲ್ಲೂ ಆದರೂ ಸೂಕ್ತ ಸಮಯಕ್ಕೆ ಚಿಕಿತ್ಸೆ ಕೊಡುವುದು ಆಸ್ಪತ್ರೆಗಳ ಕರ್ತವ್ಯ. ಆದರೆ ಕೆ.ಆರ್ ಮಾರ್ಕೆಟ್ ಬಳಿಯ ಮಿಂಟೋ ಆಸ್ಪತ್ರೆಯಲ್ಲಿ ವೈದ್ಯರು ತಮ್ಮ ಕರ್ತವ್ಯವನ್ನು ಮರೆತು ಅಮಾನವೀಯವಾಗಿ ನಡೆದುಕೊಳ್ಳುತ್ತಿದ್ದಾರೆ. ವೈದ್ಯರು ಊಟ ಮಾಡುವ ಸಮಯ ಎಂದು ರೋಗಿಗಳನ್ನು ಹೊರಗಡೆ ಕಳುಹಿಸಿ ಆಸ್ಪತ್ರೆಗೆ ಬೀಗ ಹಾಕಿದ್ದಾರೆ. ಇದನ್ನೂ ಓದಿ: ಬಿಜೆಪಿಯಿಂದ 2, ಜೆಡಿಎಸ್‌ನಿಂದ 4 ಮಂದಿ ಕಾಂಗ್ರೆಸ್‌ಗೆ ಮತ ಹಾಕಲು ಸಿದ್ದರಿದ್ದಾರೆ: ಡಿಕೆಶಿ

    ಮಿಂಟೋ ಆಸ್ಪತ್ರೆಗೆ ಬೀಗ ಹಾಕಿದ ಸಮಯದಲ್ಲಿ ಸಂಜಯ್ ಗಾಂಧಿ ಆಸ್ಪತ್ರೆಯಿಂದ ಎಮರ್ಜೆನ್ಸಿ ಕೇಸ್ ಬಂದರೂ ಸಹ ಆಸ್ಪತ್ರೆಯ ಬೀಗ ತೆಗೆದು ಚಿಕಿತ್ಸೆ ಕೊಟ್ಟಿಲ್ಲ. ಬದಲಾಗಿ ಆಸ್ಪತ್ರೆ ಮುಂಭಾಗದ ರಸ್ತೆಯಲ್ಲಿಯೇ ಅಂಬುಲೆನ್ಸ್ ಒಳಗಡೆಯೇ ಚಿಕಿತ್ಸೆ ಕೊಟ್ಟಿದ್ದಾರೆ. ಆಸ್ಪತ್ರೆಗೆ ಬೀಗ ಹಾಕಿದ ಕಾರಣ ನೂರಾರು ರೋಗಿಗಳು ಆಸ್ಪತ್ರೆ ಮುಂಭಾಗ ಗೇಟ್ ಬಳಿ ಚಿಕಿತ್ಸೆಗಾಗಿ ಕಾಯುತ್ತಿದ್ದಾರೆ. ವೈದ್ಯರ ಬೇಜವಾಬ್ದಾರಿ ನಿರ್ಲಕ್ಷ್ಯಕ್ಕೆ ರೋಗಿಗಳು ನಲುಗಿ ಹೋಗಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆ: RSS ಹಿನ್ನೆಲೆಯುಳ್ಳ ಅಭ್ಯರ್ಥಿಗಳು ಬಿಜೆಪಿಯಿಂದ ಕಣಕ್ಕೆ?

    ಆಸ್ಪತ್ರೆಗೆ ಬೀಗ ಹಾಕಿರುವ ಕಾರಣ ನೂರಾರು ರೋಗಿಗಳು ಚಿಕಿತ್ಸೆಗಾಗಿ ಹಂಬಲಿಸುತ್ತಾ ಇದ್ದ ಹಿನ್ನೆಲೆಯಲ್ಲಿ ‘ಪಬ್ಲಿಕ್ ಟಿವಿ’ ವೈದ್ಯರ ನಿರ್ಲಕ್ಷ್ಯ, ಬೇಜವಾಬ್ದಾರಿತನವನ್ನು ಪ್ರಶ್ನೆ ಮಾಡಿದ ಬಳಿಕ ಗೇಟ್ ಓಪನ್ ಮಾಡಿ ರೋಗಿಗಳನ್ನು ಒಳಗಡೆ ಬಿಟ್ಟಿದ್ದಾರೆ. ಇನ್ನು ಈ ಕುರಿತು ರೋಗಿಗಳು ಹಾಗೂ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ. ರೋಗಿಗಳಿಗಿಂತ ಇವರಿಗೆ ಊಟನೇ ಹೆಚ್ಚಾಗಿದೆ. ಊಟದ ಸಮಯ ಎಂದು ಒಂದೂವರೆ ಗಂಟೆ ಆಸ್ಪತ್ರೆಗೆ ಬೀಗ ಹಾಕಿಕೊಂಡರೆ ಎಮರ್ಜೆನ್ಸಿ ಇರುವ ರೋಗಿಗಳ ಪರಿಸ್ಥಿತಿ ಏನಾಗಬೇಡ? ರಸ್ತೆಯಲ್ಲೇ ಚಿಕಿತ್ಸೆ ಕೊಡುತ್ತಿದ್ದಾರೆ. ಐಸಿಯು, ಬೆಡ್ ಬೇಡವೇ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಮ ಮಂದಿರಕ್ಕೆ 11 ಕೋಟಿ ದೇಣಿಗೆ ನೀಡಿದ್ದ ವಜ್ರ ಉದ್ಯಮಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್‌

    ಸರ್ಕಾರ ಮತ್ತು ವೈದ್ಯಕೀಯ ಶಿಕ್ಷಣ ನಿಜಕ್ಕೂ ಈ ಆಸ್ಪತ್ರೆ ಮೇಲೆ ನಿಗಾ ವಹಿಸಬೇಕಿದೆ. ಸುಸಜ್ಜಿತ ಕಟ್ಟಡ, ವೈದ್ಯಕೀಯ ಸೌಲಭ್ಯ ಇದ್ದರೂ ಈ ರೀತಿ ನಿರ್ಲಕ್ಷ್ಯ ಮಾಡಿ ಬೀಗ ಹಾಕಿ ರಸ್ತೆಯಲ್ಲೆ ಚಿಕಿತ್ಸೆ ಕೊಡೋದು ಎಷ್ಟು ಸರಿ? ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರು ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸುತ್ತಾರಾ ಎಂದು ಕಾದು ನೋಡಬೇಕಿದೆ. ಇದನ್ನೂ ಓದಿ: ರೈತರನ್ನು ಹಿಮ್ಮೆಟ್ಟಿಸಲು ʻಶಬ್ದಾಸ್ತ್ರʼ ಪ್ರಯೋಗ – ಇದು ಹೇಗೆ ಕೆಲಸ ಮಾಡುತ್ತೆ?

  • ಓವರ್ ಡೋಸ್ ಡ್ರಗ್: ಸಾವು ಬದುಕಿನ ಮಧ್ಯೆ ಪೋರ್ನ್ ಸ್ಟಾರ್ ಹೋರಾಟ

    ಓವರ್ ಡೋಸ್ ಡ್ರಗ್: ಸಾವು ಬದುಕಿನ ಮಧ್ಯೆ ಪೋರ್ನ್ ಸ್ಟಾರ್ ಹೋರಾಟ

    ಖ್ಯಾತ ಪೋರ್ನ್ ಸ್ಟಾರ್ ಎಮಿಲಿ ವಿಲ್ಸ್ (Emily Wills) ಸಾವು ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಹೋರಾಟ ನಡೆಸಿದ್ದಾರೆ. ಓವರ್ ಡೋಸ್  ಡ್ರಗ್ (Drugs) ನೀಡಿದ ಪರಿಣಾಮ ಅವರು ಪ್ರಜ್ಞೆ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಏಳು ನೂರಕ್ಕೂ ಹೆಚ್ಚು ಪೋರ್ನ್ ಸಿನಿಮಾಗಳಲ್ಲಿ ನಟಿಸಿರುವ ಎಮಿಲಿ, ಅತಿಯಾದ ಡ್ರಗ್ಸ್ ಕೂಡ ತೆಗೆದುಕೊಳ್ಳುತ್ತಿದ್ದರಂತೆ.

    ಪೋರ್ನ್ ಲೋಕದ ತಾರೆಯಾಗಿದ್ದ ಎಮಿಲಿ ಇತ್ತೀಚೆಗೆ ಡ್ರಗ್ ವ್ಯಸನಿಯಾದ ಕಾರಣದಿಂದಾಗಿ, ಡ್ರಗ್ ನಿಂದ ಮುಕ್ತಿ ಹೊಂದುವುದಕ್ಕಾಗಿ ಕ್ಯಾಲಿಪೋರ್ನಿಯಾದ ಮಾಲಿಬು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಂತೆ. ಈ ವೇಳೆಯಲ್ಲೇ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.

     

    ಔಷಧಿಯಲ್ಲಿ ಏರುಪೇರಾಗಿ ಎಮಿಲಿ ಇದೀಗ ತುರ್ತು ಘಟಕದಲ್ಲಿ ಚಿಕಿತ್ಸೆ (Treatment) ಪಡೆಯುತ್ತಿದ್ದು, ಆರೋಗ್ಯ ತೀರಾ ಹದಗೆಟ್ಟಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಎಮಿಲಿಯ ಆರೋಗ್ಯಕ್ಕಾಗಿ ಅವರು ಕುಟುಂಬ ಪ್ರಾರ್ಥಿಸಿದೆ.

  • ನಟಿ ಪೂನಂಗೆ ಫೈಬ್ರೊಮ್ಯಾಲ್ಜಿಯಾ ಕಾಯಿಲೆ: ಬಟ್ಟೆ ತೊಡಲು ಕಷ್ಟ ಎಂದ ನಟಿ

    ನಟಿ ಪೂನಂಗೆ ಫೈಬ್ರೊಮ್ಯಾಲ್ಜಿಯಾ ಕಾಯಿಲೆ: ಬಟ್ಟೆ ತೊಡಲು ಕಷ್ಟ ಎಂದ ನಟಿ

    ತಾವು ಮೂರು ವರ್ಷಗಳಿಂದ ಫೈಬ್ರೊಮ್ಯಾಲ್ಜಿಯಾ (Fibromyalgia) ಕಾಯಿಲೆಯಿಂದ ಬಳಲುತ್ತಿರುವುದಾಗಿ ನಟಿ, ರಾಜಕಾರಣಿ ಪೂನಂ ಕೌರ್ (Poonam Kaur) ಹೇಳಿಕೊಂಡಿದ್ದಾರೆ. ಮಾಧ್ಯಮವೊಂದರ ಸಂದರ್ಶನದಲ್ಲಿ ಈ ವಿಷಯವನ್ನು ಬಹಿರಂಗ ಪಡಿಸಿರುವ ಪೂನಂ ಕೌರ್, ಈ ಕಾಯಿಲೆಯಿಂದಾಗಿ ಬಟ್ಟೆ ಹಾಕಿಕೊಳ್ಳಲು ಕಷ್ಟ ಪಡುತ್ತಿದ್ದೇನೆ ಎಂದಿದ್ದಾರೆ.

    ಈ ಕಾಯಿಲೆಗೆ ತುತ್ತಾದವರ ಬದುಕು ನರಕ. ದೀರ್ಘಕಾಲದ ಅಸ್ವಸ್ಥತೆ, ಖಿನ್ನತೆ, ತಲೆ ನೋವು, ದೇಹದ ಸ್ನಾಯುಗಳು ಬಿಗಿಯಾಗಿ ನೋವು ಹೀಗೆ ನಾನಾ ರೀತಿಯ ಸಂಕಟವನ್ನು ಅನುಭವಿಸಬೇಕಾಗುತ್ತಿದೆ. ಮೂರು ವರ್ಷಗಳಿಂದ ನಾನು ಈ ಕಾಯಿಲೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

    ಫೈಬ್ರೊಮ್ಯಾಲ್ಜಿಯಾ ಕಾರಣದಿಂದಾಗಿ ಅವರು ಎರಡು ವರ್ಷಗಳ ಕಾಲ ಸಡಿಲವಾದ ಬಟ್ಟೆಗಳನ್ನು ಧರಿಸಿದ್ದಾರಂತೆ. ನಾಟಿ ವೈದ್ಯೆ ಡಾ.ಮಂತೇನ ಅವರ ಬಳಿ ಚಿಕಿತ್ಸೆ ಪಡೆಯುತ್ತಿರುವುದಾಗಿಯೂ ಅವರು ಮಾತನಾಡಿದ್ದಾರೆ.

     

    ಸಿನಿಮಾ ನಟನೆ, ರಾಜಕಾರಣ ಮತ್ತು ಸಮಾಜಮುಖಿ ಕೆಲಸಗಳ ಮೂಲಕ ಪೂನಂ ಕೌರ್ ಗುರುತಿಸಿಕೊಂಡಿದ್ದಾರೆ. ಕಾಯಿಲೆ ಕಾರಣದಿಂದಾಗಿ ಅವರು ಸಿನಿಮಾ ರಂಗದಿಂದ ಸ್ವಲ್ಪ ದಿನಗಳ ಕಾಲ ದೂರವೂ ಉಳಿದಿದ್ದರು.

  • ರಾವಣನ ಪಾತ್ರ ಮಾಡಿದ್ದ ಸೈಫ್ ಅಲಿಖಾನ್ ಗೆ ಅಪಘಾತ: ಆಸ್ಪತ್ರೆಗೆ ದಾಖಲು

    ರಾವಣನ ಪಾತ್ರ ಮಾಡಿದ್ದ ಸೈಫ್ ಅಲಿಖಾನ್ ಗೆ ಅಪಘಾತ: ಆಸ್ಪತ್ರೆಗೆ ದಾಖಲು

    ಬಾಲಿವುಡ್ ನ ಖ್ಯಾತ ನಟ ಸೈಫ್ ಅಲಿಖಾನ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ಇದೆ. ಸದ್ಯ ಅವರು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ಆಗಿದೆ.

    ಸೈಫ್ ಅವರ ಮೊಣಕಾಲಿಗೆ ಗಂಭೀರ ಗಾಯವಾಗಿ, ಭುಜದ ಮೂಳೆ ಕೂಡ ಮುರಿದಿದೆ ಎಂದು ಹೇಳಲಾಗುತ್ತಿದೆ. ಗಂಭೀರವಾಗಿಯೇ ಗಾಯವಾಗಿದ್ದರಿಂದ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ಸಾಧ್ಯತೆ ಇದೆಯಂತೆ. ಗಾಯಗೊಂಡಿದ್ದಕ್ಕೆ ಕಾರಣ ತಿಳಿದು ಬಂದಿಲ್ಲವಾದರೂ, ಪತ್ನಿ ಕರೀನಾ ಕಪೂರ್ ಸದ್ಯ ಆಸ್ಪತ್ರೆಯಲ್ಲಿ ಜೊತೆಯಲ್ಲೇ ಇದ್ದಾರೆ.

     

    ಶೂಟಿಂಗ್ ಸ್ಥಳದಲ್ಲಿ ಇಂಥದ್ದೊಂದು ಗಾಯವಾಗಿದೆಯಾ ಅಥವಾ ಜಿಮ್ ನಲ್ಲಿ ಏನಾದರೂ ಹೊಡೆತ ಬಿದ್ದಿದೆಯಾ ಎನ್ನುವ ಪ್ರಶ್ನೆ ಎದುರಾಗಿದ್ದು, ಈ ಕುರಿತಂತೆ ಅವರ ಕುಟುಂಬವೇ ಪ್ರತಿಕ್ರಿಯೆ ನೀಡಬೇಕಿದೆ. ಈ ಹಿಂದೆ ರಾವಣನ ಪಾತ್ರ ಮಾಡಿದ್ದ ಸೈಫ್ ಅಲಿಖಾನ್ ಗೆ ರಾಮಮಂದಿರ ಉದ್ಘಾಟನೆ ದಿನವೇ ಅಪಘಾತವಾಗಿದ್ದು, ಕಾಕತಾಳೀಯ.

  • ಶೂಟಿಂಗ್ ವೇಳೆ ಅವಘಡ: ಮಂಡ್ಯ ರಮೇಶ್ ಗೆ ತೀವ್ರ ಗಾಯ

    ಶೂಟಿಂಗ್ ವೇಳೆ ಅವಘಡ: ಮಂಡ್ಯ ರಮೇಶ್ ಗೆ ತೀವ್ರ ಗಾಯ

    ಸಿನಿಮಾ ಹಾಗೂ ರಂಗಭೂಮಿ ನಟ ಮಂಡ್ಯ ರಮೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸೆ ಧಾರಾವಾಹಿ ಶೂಟಿಂಗ್ ವೇಳೆ ಅವಘಡ ನಡೆದಿದ್ದು, ಅವರಿಗೆ ತೀವ್ರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಕಾಲು ಜಾರಿ ಬಿದ್ದಿದ್ದಾರಂತೆ.

    ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಎರಡು ಆಪರೇಷನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಆಸೆ ಸೀರಿಯಲ್ ನಲ್ಲಿ ಮಂಡ್ಯ ರಮೇಶ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿಯ ದೃಶ್ಯದ ಚಿತ್ರೀಕರಣದಲ್ಲಿ ಇಂಥದ್ದೊಂದು ಅವಘಡ ಸಂಭವಿಸಿದೆ.

    ರಮೇಶ್ ಅರವಿಂದ್ ನಿರ್ಮಾಣದಲ್ಲಿ ಈ ಧಾರಾವಾಹಿ ಮೂಡಿ ಬರುತ್ತಿದ್ದು, ಭಾರೀ ನಿರೀಕ್ಷೆ ಮೂಡಿಸಿದ ಧಾರಾವಾಹಿ ಇದಾಗಿದೆ. ಸದ್ಯ ಚಿಕಿತ್ಸೆ ಪಡೆದಿರುವ ಮಂಡ್ಯ ರಮೇಶ್ ಅವರಿಗೆ ಒಂದು ತಿಂಗಳ ಕಾಲ ರೆಸ್ಟ್ ತಗೆದುಕೊಳ್ಳುವಂತೆ ವೈದ್ಯರು ತಿಳಿಸಿದ್ದಾರೆ. ಕಿರುತೆರೆ, ರಂಗಭೂಮಿ ಮತ್ತು ಸಿನಿಮಾದಲ್ಲಿ ಸಕ್ರೀಯರಾಗಿರುವ ಮಂಡ್ಯ ರಮೇಶ್ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

  • ‘ಬಿಗ್ ಬಾಸ್’ ಮನೆಯಲ್ಲಿ ಅವಘಡ: ಹೊರಕ್ಕೆ ಬಂದ ತನಿಷಾ

    ‘ಬಿಗ್ ಬಾಸ್’ ಮನೆಯಲ್ಲಿ ಅವಘಡ: ಹೊರಕ್ಕೆ ಬಂದ ತನಿಷಾ

    ಟಾಸ್ಕ್ ಆಡುತ್ತಿದ್ದಾಗ ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಅವಘಡ ಸಂಭವಿಸಿದೆ. ಈ ಕಾರಣದಿಂದಾಗಿ ಸ್ಟ್ರಾಂಗ್ ಕಂಟೆಸ್ಟೆಂಟ್ ಆಗಿರುವ ತನಿಷಾ ಕುಪ್ಪಂಡ (Tanisha Kuppanda) ಮನೆಯಿಂದ ಹೊರ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಟಾಸ್ಕ್ ಆಡುವಾಗ ಅವರಿಗೆ ಬಲವಾದ ಪೆಟ್ಟು ಬಿದ್ದಿದ್ದು, ಚಿಕಿತ್ಸೆಗಾಗಿ (Treatment) ಅವರನ್ನು ಮನೆಯಿಂದ ಕಳುಹಿಸಲಾಗಿದೆ ಎನ್ನುವ ಮಾಹಿತಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಬಿಗ್ ಬಾಸ್ ಆಟದಲ್ಲಿ ಎಂದಿನಂತೆ ಟಾಸ್ಕ್ ಆಡಲು ಎರಡು ತಂಡಗಳಾಗಿ ವಿಂಗಡಿಸಿದ್ದರು. ಮನೆಯವರ ವೋಟ್ ಮೇರೆಗೆ ಡ್ರೋನ್ ಪ್ರತಾಪ್ ಮತ್ತು ಮೈಕಲ್ ಅವರನ್ನ ಕ್ಯಾಪ್ಟನ್ ಆಗಿ ಕಣಕ್ಕೆ ಬಿಡಲಾಯಿತು. ಎರಡು ಟೀಮ್‌ನ ಜಟಾಪಟಿ ನಂತರ ಗೆದ್ದಿರುವ ತಂಡ ಕ್ಯಾಪ್ಟನ್ ರೇಸ್‌ಗೆ ಕಾಲಿಡಲಿದ್ದಾರೆ ಎಂದು ಹೇಳಲಾಗಿತ್ತು

    ಡ್ರೋನ್ ತಂಡದಲ್ಲಿ ಪವಿ, ತುಕಾಲಿ, ನಮ್ರತಾ, ವರ್ತೂರು, ಸಿರಿ, ಆಟ ಆಡಿದ್ರೆ, ಮೈಕಲ್ ಟೀಮ್‌ನಲ್ಲಿ ತನಿಷಾ, ವಿನಯ್, ಸ್ನೇಹಿತ್, ಸಂಗೀತಾ, ಅವಿನಾಶ್ ಶೆಟ್ಟಿ ತಂಡವಾಗಿ ರೂಪುಗೊಂಡಿದ್ದಾರೆ. ಎರಡು ತಂಡ ಟಾಸ್ಕ್ವೊಂದರಲ್ಲಿ ಆಟ ಆಡುವಾಗ ತನಿಷಾ ಕಾಲಿಗೆ ಪೆಟ್ಟಾಗಿದ್ದು, ತುಂಬಾ ನೋವಿನಿಂದ ಒದ್ದಾಡಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗೆ ಕಳುಹಿಸಲಾಗಿದೆ.

    ಬಿಗ್ ಬಾಸ್ ಟೀಮ್ ಕಡೆಯಿಂದ ಬಂದು ತನಿಷಾ ಅವರನ್ನು ಚಿಕಿತ್ಸೆಗಾಗಿ ಹೊರ ಕರೆದುಕೊಂಡು ಹೋಗಿದ್ದಾರೆ. ಸಣ್ಣ ಪುಟ್ಟ ಏಟಾಗಿದ್ದರೆ ಆದಷ್ಟು ಬೇಗ ಬಿಗ್ ಬಾಸ್‌ಗೆ ಬರಲಿದ್ದಾರೆ. ಹೆಚ್ಚಿನ ಚಿಕಿತ್ಸೆ ಬೇಕಿದ್ರೆ ಮತ್ತೆ ಬಿಗ್ ಬಾಸ್‌ಗೆ ಬರೋದು ಅನುಮಾನವೇ ಸರಿ ಎಂದು ಹೇಳಲಾಗುತ್ತಿದೆ.

    ದೊಡ್ಮನೆಗೆ ಕಾಲಿಟ್ಟ ಮೊದಲ ದಿನದಿಂದಲೂ ಗಟ್ಟಿ ಸ್ಪರ್ಧಿಯಾಗಿ ತನಿಷಾ ಸೆಡ್ಡು ಹೊಡೆದಿದ್ದಾರೆ. ಎದುರಾಳಿಗೆ ಮಸ್ತ್ ಠಕ್ಕರ್ ಕೊಟ್ಟಿದ್ದಾರೆ. ಸದ್ಯ ತನಿಷಾ ಮನೆಯಿಂದ ಹೊರಹೋಗಿರೋದು ಬಿಗ್ ಬಾಸ್ ಮನೆಮಂದಿಗೂ ಬೇಸರ ಮೂಡಿಸಿದೆ. ತಮ್ಮ ನೆಚ್ಚಿನ ನಟಿಯು ಬೇಗ ಗುಣಮುಖರಾಗಿ ಮತ್ತೆ ಬಿಗ್ ಬಾಸ್ ಮನೆಗೆ ಬರಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

  • ಧರೆಗುರುಳಿದ್ದ 2,000 ವರ್ಷದ ಹುಣಸೆ ಮರ – ಚಿಕಿತ್ಸೆ ಬಳಿಕ ಮರುಜೀವ

    ಧರೆಗುರುಳಿದ್ದ 2,000 ವರ್ಷದ ಹುಣಸೆ ಮರ – ಚಿಕಿತ್ಸೆ ಬಳಿಕ ಮರುಜೀವ

    ಹಾವೇರಿ: ಅನಾರೋಗ್ಯಕ್ಕೆ ತುತ್ತಾದರೆ ಮನುಷ್ಯ, ಪ್ರಾಣಿಗಳಿಗೆ ಚಿಕಿತ್ಸೆ ನೀಡಿ ಗುಣಪಡಿಸಬಹುದು. ಆದರೆ ನೆಲಕ್ಕುರುಳಿದ 2,000 ವರ್ಷ ಹಳೆಯ ಮರಕ್ಕೆ (Tree) ಚಿಕಿತ್ಸೆ ನೀಡಿ ಮತ್ತೆ ಮೊದಲಿದ್ದ ಜಾಗದಲ್ಲಿ ಈಗ ನೆಡಲಾಗಿರುವ ಅಪರೂಪದ ಘಟನೆ ನಡೆದಿದೆ.

    ಬರೋಬ್ಬರಿ 2,000 ವರ್ಷದ ಹುಣಸೆ ಮರ (Tamarind Tree) ಧರೆಗುರುಳಿ, 4 ತಿಂಗಳ ನಂತರ ಮತ್ತೆ ಚಿಗುರಿದೆ. ಇದು ಹಾವೇರಿ (Haveri) ಜಿಲ್ಲೆಯ ಸವಣೂರು (Savanuru) ಪಟ್ಟಣದ ಕಲ್ಮಠದ (Kalmata) ಆವರಣದಲ್ಲಿ ಕಂಡುಬರೋ ದೊಡ್ಡಹುಣಸೆ. ಈ ಮರ 2,000 ವರ್ಷದಷ್ಟು ಹಳೆಯದು. ಇಲ್ಲೇ ಇರುವ ಅತ್ಯಂತ ಹಳೆಯ 3 ಮರಗಳ ಪೈಕಿ ಈ ಮರ ಜುಲೈ 7 ರಂದು ಮಳೆ-ಗಾಳಿ ಹಾಗೂ ಫಂಗಸ್ ಕಾಣಿಸಿಕೊಂಡ ಹಿನ್ನೆಲೆ ಬೇರು ಸಮೇತ ನೆಲಕ್ಕುರುಳಿತ್ತು.

    ಘೋರಕನಾಥ ತಪಸ್ವಿಗಳು ಈ 3 ಮರಗಳನ್ನು ನೆಟ್ಟಿದ್ದರು ಎಂದು ಹೇಳಲಾಗುತ್ತದೆ. 18 ಮೀ. ಎತ್ತರ, 12 ಮೀ. ಅಗಲವಾಗಿದ್ದ ಈ ಮರ ಬೀಳುತ್ತಿದ್ದಂತೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದರು. ಸತತ 1 ವಾರ ಕಾರ್ಯಾಚರಣೆ ನಡೆಸಿ ದೊಡ್ಡಹುಣಸೆ ಮರವನ್ನು ಮರುಸ್ಥಾಪನೆ ಮಾಡಲಾಗಿತ್ತು. ಈಗ 4 ತಿಂಗಳ ನಂತರ ಮರಕ್ಕೆ ಮರುಜನ್ಮ ಸಿಕ್ಕಿದೆ. ದೊಡ್ಡಹುಣಸೆ ಮರವು ಮೊದಲಿನಂತೆ ಚಿಗುರೊಡೆಯುತ್ತಿದೆ. ಸಣ್ಣದಾಗಿ ರಂಬೆ, ಕೊಂಬೆಗಳು ಚಿಗುರುತ್ತಿವೆ. ಇದರಿಂದ ಕಲ್ಮಠ ಶ್ರೀಗಳಾದ ಚನ್ನಬಸವ ಸ್ವಾಮೀಜಿ ಖಷಿಯಾಗಿದ್ದಾರೆ. ಇದನ್ನೂ ಓದಿ: ಕಳಚಿ ಬಿದ್ದ ರೇಡಿಯೋ ಕಾಲರ್ – ತೆರಿಗೆ ಹಣ ಪೋಲಾಗುತ್ತಿದೆಂದು ಸ್ಥಳೀಯರ ಆಕ್ರೋಶ

    ಮರದ ಬುಡದಲ್ಲಿ ಬೇರುಗಳಲ್ಲಿ ಫಂಗಸ್ ಆಗಿ ಸಂಪೂರ್ಣವಾಗಿ ಕೊಳೆತ ಪರಿಣಾಮ ಮರ ಬಿದ್ದಿತ್ತು. ಮರದ ಬುಡದಲ್ಲಿ ಕೊಳೆತ ಭಾಗವನ್ನು ಸ್ವಚ್ಛ ಮಾಡಿ, ರಾಸಾಯನಿಕಗಳನ್ನು ಸಿಂಪಡಣೆ ಮಾಡಲಾಗಿತ್ತು. ಭೂಮಿಯಲ್ಲಿ ತೋಡಿರುವ ಗುಂಡಿಯಲ್ಲಿಯೂ ರಾಸಾಯನಿಕಗಳನ್ನು ಹಾಕಲಾಗಿದೆ. ಮರದ ಟೊಂಗೆಗಳನ್ನು ಕತ್ತರಿಸಿ, ಸಗಣಿಯನ್ನು ಸಿಂಪಡಣೆ ಮಾಡಿ ಟ್ರೀಟ್‌ಮೆಂಟ್ ಮಾಡಲಾಗಿತ್ತು. ಇದೆಲ್ಲದರ ಬಳಿಕ ಬೃಹತ್ ಗಾತ್ರದ ಕ್ರೇನ್ ಹಾಗೂ ಜೆಸಿಬಿಗಳನ್ನು ಬಳಸಿಕೊಂಡು ಮರವನ್ನು ಅದೇ ಸ್ಥಳದಲ್ಲಿ ನೆಡಲಾಗಿತ್ತು. 2,000 ವರ್ಷ ಐತಿಹಾಸಿಕ ಹಿನ್ನೆಲೆಯುಳ್ಳ ಮರವನ್ನು ಮರುಸ್ಥಾಪನೆ ಮಾಡಲಾಗಿತ್ತು. ಈಗ ದೊಡ್ಡಹುಣಸೆ ಮರ ಚಿಗುರಿಕೊಂಡಿದೆ. ಈ ಮರವನ್ನು ನೋಡಲು ಸುತ್ತಮುತ್ತಲಿನ ಪ್ರವಾಸಿಗರು ಸ್ಥಳಕ್ಕೆ ಆಗಮಿಸುತ್ತಿದ್ದಾರೆ.

    ಒಟ್ಟಿನಲ್ಲಿ ಮಠದ ಶ್ರೀಗಳು, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳ ತಂಡದ ಸತತ ಪರಿಶ್ರಮದಿಂದ 2,000 ವರ್ಷದ ಮರಕ್ಕೆ ಮರುಜೀವ ಸಿಕ್ಕಿದೆ. ಪುನಃಜನ್ಮ ಕಂಡ ದೊಡ್ಡಹುಣಸೆ ಮರವನ್ನು ನೋಡಲು ನೂರಾರು ಜನರು ಆಗಮಿಸುತ್ತಿದ್ದಾರೆ. ಇದನ್ನೂ ಓದಿ: ಡಿಸೆಂಬರ್ 4ರಿಂದ ಚಳಿಗಾಲದ ಸಂಸತ್ ಅಧಿವೇಶನ ಆರಂಭ