Tag: ಚಿಕಿತ್ಸೆ

  • ನಲಿಯುತ್ತಾ ಆಡಬೇಕಿದ್ದ ಕಂದನಿಗೆ ಬ್ಲಡ್ ಕ್ಯಾನ್ಸರ್- ಚಿಕಿತ್ಸೆಗೆ ಬೇಕಿದೆ ಸಹಾಯ

    ನಲಿಯುತ್ತಾ ಆಡಬೇಕಿದ್ದ ಕಂದನಿಗೆ ಬ್ಲಡ್ ಕ್ಯಾನ್ಸರ್- ಚಿಕಿತ್ಸೆಗೆ ಬೇಕಿದೆ ಸಹಾಯ

    ವಿಜಯಪುರ: ಎಲ್ಲ ಮಕ್ಕಳಂತೆ ಕಲಿಯುತ್ತಾ, ನಲಿಯುತ್ತಾ ಆಡಬೇಕಿದ್ದ ಮಗನಿಗೆ ಬ್ಲಡ್ ಕ್ಯಾನ್ಸರ್ ರೋಗ ಬಂದು ಮನೆಯಲ್ಲಿ ಕೂರುವಂತೆ ಮಾಡಿದೆ. ಇರುವ ಓರ್ವ ಮಗನನ್ನು ಬದುಕಿಸಿಕೊಳ್ಳಲು ಬಡ ಪೋಷಕರು ಶಕ್ತಿಮೀರಿ ಪ್ರಯತ್ನ ಮಾಡ್ತಾಯಿದ್ದಾರೆ.

    ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕಡಕೋಳ ಗ್ರಾಮದ ಮೀನಪ್ಪ ಮಾದರ ಮತ್ತು ಲಗಮವ್ವ ಎಂಬವರ ಮಗ ಮಡಿವಾಳಪ್ಪ ಬ್ಲಡ್ ಕ್ಯಾನ್ಸರ್‍ನಿಂದ ಬಳಲುತ್ತಿದ್ದಾನೆ. ಮೂರನೇ ತರಗತಿ ವರೆಗೂ ಚೆನ್ನಾಗಿಯೇ ಇದ್ದ ಮಡಿವಾಳಪ್ಪ ಏಕಾಏಕಿ ಒಂದು ದಿನ ಅಸ್ವಸ್ಥನಾಗಿದ್ದಾನೆ. ಆಗ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಬೆಂಗಳೂರು ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದಾರೆ. ಕಿದ್ವಾಯಿ ಆಸ್ಪತ್ರೆಯಲ್ಲಿ ಮಡಿವಾಳಪ್ಪನನ್ನು ಪರೀಕ್ಷಿಸಿದಾಗ ಬ್ಲಡ್ ಕ್ಯಾನ್ಸರ್ ಇರುವುದು ತಿಳಿದಿದೆ.

    ನಾಲ್ಕು ತಿಂಗಳು ಚಿಕಿತ್ಸೆ ನೀಡಿದರೆ ಮಡಿವಾಳಪ್ಪ ಆರೋಗ್ಯ ಸರಿ ಹೋಗುವುದಾಗಿ ವೈದ್ಯರು ತಿಳಿಸಿದ್ದಾರೆ. ಕಿದ್ವಾಯಿ ಆಸ್ಪತ್ರೆಯಲ್ಲಿ ಸಿಗದ ಕೆಲ ಔಷಧಿಗಳನ್ನು ಹೊರಗಡೆಯಿಂದ ತರಬೇಕಾಗುತ್ತದೆ. ಆದ್ರೆ ತೀವ್ರ ಬಡ ಕುಟುಂಬವಾದ ಕಾರಣ ಇವರ ಹತ್ತಿರ ಹೊರಗಿನಿಂದ ಔಷದಿಯನ್ನು ತರಲು ಆಗುತ್ತಿಲ್ಲ. ಈಗ ಅಲ್ಲಿ ಇಲ್ಲಿ ಸಾಲ ಮಾಡಿ ಒಂದು ತಿಂಗಳು ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ ಮುಂದಿನ ಚಿಕಿತ್ಸೆಗೆ ಹಣವಿಲ್ಲದೆ ಪರದಾಡುತ್ತಿದ್ದಾರೆ.

    ಯಾರಾದರು ಸಹಾಯ ಮಾಡಿದ್ದಲ್ಲಿ ಒಂದು ಸಣ್ಣ ಜೀವ ಬದುಕಿಕೊಳ್ಳುತ್ತದೆ. ಈಗ ಸಹಾಯ ಹಸ್ತಕ್ಕಾಗಿ ಮಡಿವಾಳಪ್ಪ ಮತ್ತು ಕುಟುಂಬಸ್ಥರು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದ ಮೊರೆ ಬಂದಿದ್ದಾರೆ.

    https://www.youtube.com/watch?v=91rZJHXOods

  • ಅಂಬುಲೆನ್ಸ್ ನೀಡದ್ದಕ್ಕೆ ಮಗುವಿನ ಶವ ಹೊತ್ತು ಸೈಕಲ್‍ನಲ್ಲೇ ಪ್ರಯಾಣ

    ಅಂಬುಲೆನ್ಸ್ ನೀಡದ್ದಕ್ಕೆ ಮಗುವಿನ ಶವ ಹೊತ್ತು ಸೈಕಲ್‍ನಲ್ಲೇ ಪ್ರಯಾಣ

    ಲಕ್ನೋ: ಆಸ್ಪತ್ರೆಯವರು ಅಂಬುಲೆನ್ಸ್ ನೀಡದ ಕಾರಣ ಸಹೋದರನ 7 ತಿಂಗಳ ಮಗುವಿನ ಮೃತದೇಹವನ್ನ ಹೆಗಲ ಮೇಲೆ ಹಾಕಿಕೊಂಡು ಚಿಕ್ಕಪ್ಪ ಸೈಕಲ್ ತುಳಿದುಕೊಂಡು ಹೋದ ದಾರುಣ ಘಟನೆ ಉತ್ತರಪ್ರದೇಶದ ಕೌಸಂಬಿಯಲ್ಲಿ ನಡೆದಿದೆ.

    ಜಿಲ್ಲಾಸ್ಪತ್ರೆಯಲ್ಲಿ ಮಗು ದಾಖಲಿಸಿದ ಅಪ್ಪ, ಹಣ ಹೊಂದಿಸಲು ಅಲಹಾಬಾದ್‍ಗೆ ಹೋಗಿದ್ದರು. ಈ ವೇಳೆ ಮಗು ಮೃತಪಟ್ಟಿದ್ದು ಚಿಕ್ಕಪ್ಪ ಬ್ರಿಜ್‍ಮೋಹನ್ ಆಸ್ಪತ್ರೆಯಲ್ಲಿದ್ದರು. ಶವ ಸಾಗಿಸಲು ಅಂಬುಲೆನ್ಸ್ ಡ್ರೈವರ್‍ಗೆ ಹಲವು ಬಾರಿ ಕೇಳಿದ್ರೂ ಆತ ಬರೋಕೆ ನಿರಾಕರಿಸಿದ್ದಕ್ಕೆ ಸೈಕಲ್‍ನಲ್ಲೇ ಶವ ಸಾಗಿಸಿದ್ದಾರೆ.

    ಘಟನೆ ಬಗ್ಗೆ ಡ್ಯೂಟಿ ಡಾಕ್ಟರ್ ಹಾಗೂ ಅಂಬುಲೆನ್ಸ್ ಡ್ರೈವರ್ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ತನಿಖೆ ನಡೆಸೋದಾಗಿ ಮುಖ್ಯ ವೈದ್ಯಾಧಿಕಾರಿ ತಿಳಿಸಿದ್ದಾರೆ.

    ಅಂಬುಲೆನ್ಸ್ ನಿಡದೇ ಇರೋ ಕಾರಣಕ್ಕೆ ಇಂಥ ಘಟನೆಗಳು ದೇಶದಲ್ಲಿ ಈ ಹಿಂದೆಯೂ ನಡೆದಿತ್ತು. ಒಡಿಶಾದ ಮಾಂಝಿ ತನ್ನ ಪತ್ನಿಯ ಶವ ಹೊತ್ತು 10 ಕಿ.ಮೀಟರ್ ನಡೆದಿದ್ದರೆ, ಅಸ್ಸಾಂನ ಸಿಎಂ ಕ್ಷೇತ್ರದಲ್ಲೇ ಶವವನ್ನ ಸೈಕಲ್‍ನಲ್ಲಿ ಸಾಗಿಸಲಾಗಿತ್ತು. ಕೆಲ ದಿನಗಳ ಹಿಂದೆ ಬಿಹಾರದಲ್ಲೂ ಮೃತ ಪತ್ನಿ ಶವವನ್ನ ಗಂಡ ಬೈಕ್‍ನಲ್ಲಿ ಸಾಗಿಸಿದ್ದ.

     

    https://youtu.be/O4XoCO_SpmI

  • ಬಡವರಿಗಾಗಿ ವಿನ್ಯಾಸಗೊಂಡಿದೆ ಬೈಕ್ ಅಂಬುಲೆನ್ಸ್!

    ಬಡವರಿಗಾಗಿ ವಿನ್ಯಾಸಗೊಂಡಿದೆ ಬೈಕ್ ಅಂಬುಲೆನ್ಸ್!

    ಹೈದರಾಬಾದ್: ಗ್ರಾಮೀಣ ಪ್ರದೇಶದಲ್ಲಿ ಸಾಮಾನ್ಯ ಅವಶ್ಯಕತೆಗಳಾದ ನೀರು, ಬಟ್ಟೆ, ವಸತಿಯೇ ಇರುವುದಿಲ್ಲ. ಅಂತಹದರಲ್ಲಿ ರಸ್ತೆಗಳು, ಆಸ್ಪತ್ರೆಗಳು ಎಲ್ಲಿ ಇರಬೇಕು. ಇಂತಹ ವಿಷಯನ್ನು ಮನಗೊಂಡು ವ್ಯಕ್ತಿಯೊಬ್ಬರು ಬೈಕ್ ಅಂಬುಲೆನ್ಸ್ ವಿನ್ಯಾಸಗೊಳಿಸಿದ್ದಾರೆ.

    ಹೈದರಾಬಾದಿನ ಮಹಮ್ಮದ್ ಶಾರೋಝ್ ಖಾನ್ ಎಂಬುವವರು ಬೈಕ್‍  ಅಂಬುಲೆನ್ಸ್ ತಯಾರಿಸಿದ್ದಾರೆ.

    ಯಾಕೆ ಈ ಅಂಬುಲೆನ್ಸ್ ತಯಾರಿಸಿದ್ದೀರಿ ಎಂದು ಕೇಳಿದ್ದಕ್ಕೆ, ನಾನು ಬೈಕ್, ಕಾರ್ ಮತ್ತು ಸ್ಕೂಟರ್‍ಗಳಂತಹ ವಾಹನಗಳನ್ನು ವಿನ್ಯಾಸಗೊಳಿಸುತ್ತಿದ್ದೆ. ಹಾಗಾಗಿ ಗ್ರಾಮೀಣ ಪ್ರದೇಶದಲ್ಲಿನ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಬೈಕಿನಿಂದ ಆಂಬುಲೆನ್ಸ್ ತಯಾರಿಸಬಾರದು ಯಾಕೆ ಎಂದು ಯೋಚಿಸಿ, ಈ ವಿಶೇಷ ಅಂಬುಲೆನ್ಸ್ ತಯಾರಿಸಿದೆ ಎಂದು ಹೇಳಿದರು.

    ಅಂಬುಲೆನ್ಸ್ ನಲ್ಲಿ ಏನಿದೆ?
    ಸಾಮಾನ್ಯವಾಗಿ ಅಂಬುಲೆನ್ಸ್ ಒದಗಿಸುವ ಎಲ್ಲಾ ಸೌಲಭ್ಯಗಳನ್ನು ಮಿನಿ ಅಂಬುಲೆನ್ಸ್ ಒದಗಿಸುತ್ತದೆ. ಆಮ್ಲಜನಕದ ಸಿಲಿಂಡರ್, ಹಾಸಿಗೆ, ಚಿಕ್ಕ ಫ್ಯಾನ್, ಫಸ್ಟ್ ಎಡ್ ಬಾಕ್ಸ್, ಸ್ಟ್ರೇಚರ್‍ನ್ನು ಒಳಗೊಂಡಿದೆ. ಸರ್ಕಾರದಿಂದ ಅನುಮತಿ ಪಡೆದ ನಂತರ ಮಾರುಕಟ್ಟೆಗೆ ಪರಿಚಯಿಸಲು ಮಹಮ್ಮದ್ ತೀರ್ಮಾನಿಸಿದ್ದಾರೆ.

     

  • ಭಾರತದಲ್ಲಿ ಪಾಕ್ ಮಗುವಿನ ಚಿಕಿತ್ಸೆಗೆ ಸುಷ್ಮಾ ನೆರವು

    ಭಾರತದಲ್ಲಿ ಪಾಕ್ ಮಗುವಿನ ಚಿಕಿತ್ಸೆಗೆ ಸುಷ್ಮಾ ನೆರವು

    ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಹಾಯದಿಂದಾಗಿ ಪಾಕಿಸ್ತಾನದ ಮೂಲದ ಕುಟುಂಬವೊಂದು ಮಗನ ಚಿಕಿತ್ಸೆಗೆ ಭಾರತಕ್ಕೆ ಆಗಮಿಸಿದೆ.

    ನಾಲ್ಕು ತಿಂಗಳ ಬಾಲಕ ರೋಹನ್ ಹೃದಯದಲ್ಲಿ ರಂಧ್ರ ಇರುವ ಹಿನ್ನೆಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕು ಎಂದು ವೈದ್ಯರು ಹೇಳಿದ್ದರು. ಹಾಗೆ ದೆಹಲಿಯಲ್ಲಿರುವ ನೋಯ್ಡಾದ ಜೆಪಿ ಆಸ್ಪತ್ರೆಯಲ್ಲಿ ರೋಹನ್‍ಗೆ ಚಿಕಿತ್ಸೆ ನೀಡುವುದು ಉತ್ತಮ ಎಂದು ವೈದ್ಯರು ಸಲಹೆ ನೀಡಿದ್ದರು.

    ಭಾರತ ಮತ್ತು ಪಾಕ್ ಸಂಬಂಧ ಸರಿ ಇಲ್ಲದಿರುವುದರಿಂದ ರೋಹನ್ ಪೋಷಕರಿಗೆ ವೈದ್ಯಕೀಯ ವೀಸಾ ಸಿಕ್ಕರಲಿಲ್ಲ. ಹಾಗಾಗಿ ರೋಹನ್ ತಂದೆ ಕನ್ವಾಲ್ ಸಾಧಿಕ್ ಭಾರತ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಸಂಪರ್ಕಿಸಿ, ವೈದ್ಯಕೀಯ ವೀಸಾ ಕೊಡಿಸುವಂತೆ ಮನವಿ ಮಾಡಿಕೊಂಡರು. ಸಾಧಿಕ್ ಮನವಿಗೆ ಸ್ವಂದಿಸಿ ರೋಹನ್ ಪೋಷಕರಿಗೆ ವೀಸಾ ದೊರಕಿಸುವಂತೆ ಮಾಡಿದ್ದರು.

    ಪೋಷಕರು ಮತ್ತು ರೋಹನ್ ಸೇರಿ ಸೋಮವಾರ ಸಂಜೆ ನೋಯ್ಡಾ ಜೆಪಿ ಆಸ್ಪತ್ರೆಗೆ ಬಂದಿದ್ದಾರೆ. ಈ ಆಸ್ಪತ್ರೆ ರೋಹನ್‍ಗೆ ಚಿಕಿತ್ಸೆ ಕೊಡಿಸಲು ಮುಂದಾಗಿದೆ.

  • ಗಾಯಗೊಂಡು ಕೆರೆಯಲ್ಲಿ ನರಳಾಡುತ್ತಿದ್ದ ಆನೆಯ ರಕ್ಷಣೆ

    ಗಾಯಗೊಂಡು ಕೆರೆಯಲ್ಲಿ ನರಳಾಡುತ್ತಿದ್ದ ಆನೆಯ ರಕ್ಷಣೆ

    ಕೊಡಗು: ಗಾಯಗೊಂಡು ಕೆರೆಯಲ್ಲಿ ನರಳಾಡುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

    ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳೆಲೆ ಸಮೀಪದ ವಲ್ಲೂರು ಗ್ರಾಮದ ಕಾಡಂಚಿನ ಕೆರೆಯಲ್ಲಿ ಗಾಯಗೊಂಡಿತ್ತು. ಆನೆ ಕಳೆದ ಎರಡು ತಿಂಗಳಿನಿಂದ ಗಾಯಗೊಂಡು ಕೆರೆಯ ದಡದಲ್ಲಿಯೇ ವಾಸ್ತವ್ಯ ಹೂಡಿತ್ತು. ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗು ಪಶು ವೈದ್ಯರ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಲಾಗಿತ್ತು.

    ಕಾಡಾನೆಯನ್ನು ರಕ್ಷಿಸಲು ಅಭಿಮನ್ಯು. ಕೃಷ್ಣ, ಭೀಮ, ಗೋಪಾಲಕೃಷ್ಣ ಮತ್ತು ದ್ರೋಣ ಎಂಬ ಐದು ಸಾಕಾನೆಗಳನ್ನು ಕಾರ್ಯಚಾರಣೆಯಲ್ಲಿ ಬಳಸಿಕೊಳ್ಳಲಾಗಿತ್ತು. ಅನೆಯ ಕಾಲಿನ ಬಲ ಭಾಗದ ತೊಡೆಯಲ್ಲಿ ದೊಡ್ಡ ಗಾಯವಾಗಿದ್ದು, ಗಾಯದಿಂದ ಹುಳುಗಳು ಉದುರುತ್ತಿದವು ಹಾಗು ಬೆನ್ನಿನ ಭಾಗದಲ್ಲಿಯೂ ಸಹ ಗಾಯಗಳಾಗಿವೆ. ಪಶುವೈದ್ಯಾಧಿಕಾರಿಗಳು ಆನೆಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆನೆ ಸಂಪೂರ್ಣ ಗುಣಮುಖವಾದ ನಂತರ ನಾಗರಹೊಳೆ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

  • ಹೆರಿಗೆ ನೋವಿನಲ್ಲಿದ್ದ ಗರ್ಭಿಣಿಯನ್ನ ಆಸ್ಪತ್ರೆಗೆ ದಾಖಲಿಸಿಕೊಳ್ಳದ ಸಿಬ್ಬಂದಿ

    ಹೆರಿಗೆ ನೋವಿನಲ್ಲಿದ್ದ ಗರ್ಭಿಣಿಯನ್ನ ಆಸ್ಪತ್ರೆಗೆ ದಾಖಲಿಸಿಕೊಳ್ಳದ ಸಿಬ್ಬಂದಿ

    ಉಡುಪಿ: ತುಂಬು ಗರ್ಭಿಣಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳದ ಅಮಾನವೀಯ ಘಟನೆ ಉಡುಪಿಯಲ್ಲಿ ನಡೆದಿದೆ.

    ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದ ಆಶಾ ಎಂಬ ಮಹಿಳೆಗೆ ಭಾನುವಾರ ತಡರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಆಶಾ ಅವರನ್ನು ಆಟೋ ಮೂಲಕ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದ್ರೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲ ಎಂಬ ಉತ್ತರ ಸಿಬ್ಬಂದಿಯಿಂದ ಬಂದಿದೆ. ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಂತ ಬಿಟ್ಟಿ ಸಲಹೆ ಕೊಟ್ಟಿದ್ದಾರೆ.

    ಕೊನೆಗೆ ಆಶಾ ಅವರನ್ನು ಅದೇ ಆಟೋದಲ್ಲಿ ಕುಂದಾಪುರದ ಶ್ರೀದೇವಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯ್ತು. ಆಸ್ಪತ್ರೆ ಸೇರಿದ 10 ನಿಮಿಷಕ್ಕೆ ಆಶಾ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಕೊಳ್ಳದ ಬಗ್ಗೆ ಸೋಮವಾರ ಆಶಾ ಅವರ ಕುಟುಂಬಸ್ಥರು ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಲಿಖಿತ ದೂರು ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯ ಬೇಜಾವಬ್ದಾರಿ ಮತ್ತು ಅವ್ಯವಸ್ಥೆಯ ಕುರಿತು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಸಾಂತ್ವಾನ ಕೇಂದ್ರದ ಸಿಬ್ಬಂದಿ ಆಸ್ಪತ್ರೆಗೆ ಭೇಟಿ ಕೊಟ್ಟು ಆಶಾ ಅವರ ಯೋಗಕ್ಷೇಮ ವಿಚಾರಿಸಿಕೊಂಡಿದ್ದಾರೆ.

    ವೈದ್ಯರು ಆಸ್ಪತ್ರೆಯಲ್ಲಿ 24 ಗಂಟೆ ಇರಬೇಕು. 108 ಗೆ ಕರೆ ಮಾಡಿದರೆ ಅದೂ ಬರಲಿಲ್ಲ. ತುಂಬು ಗರ್ಭಿಣಿಯರನ್ನು ಮೊದಲು ದಾಖಲು ಮಾಡಿಕೊಳ್ಳಬೇಕು. ನಂತರ ಕೂಡಲೇ ವೈದ್ಯರನ್ನು ಕರೆಸಬೇಕು. ಒಬ್ಬ ವೈದ್ಯರು ರಜೆಯಲ್ಲಿದ್ದರೆ, ಇನ್ನೊಬ್ಬರು ವೈದ್ಯರು ಆಸ್ಪತ್ರೆಯಲ್ಲಿ ಇರಲೇಬೇಕು. ಡಾ. ರೋಹಿಣಿ ಮತ್ತು ಡಾ. ಉದಯ ಶಂಕರ್ ಗೆ ದೂರಿನ ಪ್ರತಿಯನ್ನು ರವಾನೆ ಮಾಡಿದ್ದೇನೆ. ನರ್ಸ್‍ಗಳದ್ದೂ ಇದರಲ್ಲಿ ಬೇಜವಾಬ್ದಾರಿಯಿದೆ. ಬಡವರಿಗೆ ಇರುವ ಸರ್ಕಾರಿ ಆಸ್ಪತ್ರೆಯಲ್ಲಿ ಹೀಗೆ ಆದ್ರೆ ಹೇಗೆ ಎಂದು ಕುಂದಾಪುರದ ಮಹಿಳಾ ಸಾಂತ್ವಾನ ಕೇಂದ್ರದ ಮುಖ್ಯಸ್ಥೆ ರಾಧಾ ದಾಸ್ ಪ್ರಶ್ನೆ ಮಾಡಿದ್ದಾರೆ.

     

  • ಕಡುಬಡತನದಲ್ಲಿರೋ ಯಾದಗಿರಿ ದಂಪತಿಗೆ ತಮ್ಮ ಮಗನ ಮುಖ ಸರಿಪಡಿಸಲು ಬೇಕಿದೆ ಸಹಾಯ

    ಕಡುಬಡತನದಲ್ಲಿರೋ ಯಾದಗಿರಿ ದಂಪತಿಗೆ ತಮ್ಮ ಮಗನ ಮುಖ ಸರಿಪಡಿಸಲು ಬೇಕಿದೆ ಸಹಾಯ

    ಯಾದಗಿರಿ: ಆ ಮಗುವಿಗೆ ತನ್ನ ಕೈತುತ್ತು ತಿನ್ನುವಾಸೆ. ಆದ್ರೆ ತಾಯಿಯ ಆಸರೆ ಇಲ್ಲದೆ ಮಗುವಿಗೆ ಬದಕಲು ಆಗುತ್ತಿಲ್ಲ. ಪುಟ್ಟ ಮಗುವಿನ ಕನಸು ತನ್ನ ಗೆಳೆಯ ಜೊತೆ ಎಲ್ಲರಂತೆ ಆಟವಾಡಿ ಬೆಳೆದು ದೂಡ್ಡವನಾಗಬೇಕು ಅಂತಾ ಆಸೆ. ಆದ್ರೆ ಆ ಮಗುವಿನ ರೂಪವು ವಿಕೃತವಾಗಿರುವುದರಿಂದ ಯಾರು ಹತ್ರ ಸೇರಿಸಿಕೊಳ್ಳೊದಿಲ್ಲ. ಆ ಮಗುವಿಗೆ ಚಿಕಿತ್ಸೆ ನೀಡಿಸಲು ಹಣವಿಲ್ಲದೆ ಒದ್ದಾಡುತ್ತಿರುವ ಕುಟುಂಬದವರ ಕಣ್ಣೀರಿನ ಕಥೆ ಇದಾಗಿದೆ.

    ಹೌದು. ಯಾದಗಿರಿ ತಾಲೂಕಿನ ಮುದ್ನಾಳ ಗ್ರಾಮದಲ್ಲಿರುವ ಹಳ್ಯಪ್ಪ-ಕಾಶಮ್ಮ ದಂಪತಿಗೆ ಮೂರು ಜನ ಗಂಡು ಮಕ್ಕಳು. ಅದರಲ್ಲಿ ಮೊದಲನೆಯ ಮಗ ರಾಘವೆಂದ್ರನಿಗೆ ಪಿಡ್ಸ್ ಕಾಯಿಲೆಯಿತ್ತು. ಈ ವೇಳೆ ಆಸ್ಪತ್ರೆಗೆ ತೋರಿಸಿ ವಾಸಿ ಮಾಡಿಸುವಷ್ಟರಲ್ಲಿ ಮೂರನೆ ಮಗನಾದ ಜಯಂತಕುಮಾರ ಒಂಬತ್ತು ತಿಂಗಳ ಮಗುವಿದ್ದಾಗ ಒಲೆಗೆ ಬಿದ್ದ ಪರಿಣಾಮ ಕೈಗಳು ಸುಟ್ಟು ವಿಕೃತವಾಗಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಹಣವಿಲ್ಲದೆ ಪೋಷಕರು ದಾನಿಗಳಿಗೆ ಸಹಾಯ ಮಾಡುವಂತೆ ಬೇಡಿಕೊಳ್ಳುತ್ತಿದ್ದಾರೆ.

    ಹಳ್ಳೆಪ್ಪನು ದಿನ ಕಲ್ಲು ಒಡೆದು 300 ರೂಪಾಯಿ ಸಂಪಾದಿಸಿದ ಹಣದಿಂದ ಕುಟುಂಬದ ಹೊಟ್ಟೆ ಮಾತ್ರ ತುಂಬುತ್ತೆ. ಆದ್ರೆ ಮಗುವಿನ ವಿಕೃತವಾಗಿರುವ ಮುಖವನ್ನು ಸುಂದರ ರೂಪಕ್ಕೆ ತರಲು ಸಾಕಷ್ಟು ಹಣ ಬೇಕಾಗುತ್ತೆ ಅಂತ ವೈದ್ಯರು ಹೇಳಿದ್ದಾರೆ. ರಾಯಚೂರು, ಕಲಬುರಗಿ ಜಿಲ್ಲೆಯಲ್ಲಿರುವ ಆಸ್ಪತ್ರೆಗಳಿಗೆ ತಮ್ಮ ಬಳಿ ಇದ್ದ ಹಣದಲ್ಲಿ ಜಯಂತನಿಗೆ ಪೋಷಕರು ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ ಹಣವಿಲ್ಲದ ಕಾರಣ ಇನ್ನೂ ಹೆಚ್ಚಿನ ಚಿಕಿತ್ಸೆಗೆ ಪೋಷಕರು ಚಿಂತಿಸುವಂತಾಗಿದೆ. ಮಗುವಿನ ಮುಖವನ್ನು ಸುಂದರ ರೂಪಕ್ಕೆ ತರಲು ಸಾಕಷ್ಟು ಹಣ ಬೇಕಾಗುತ್ತೆ. ಈ ಹಣ ಹೊಂದಿಸಲು ಕಷ್ಟವಾಗಿದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆ ವೆಚ್ಚ ಭರಿಸಲು ಪೋಷಕರು ಪಬ್ಲಿಕ್ ಟವಿಯ ಮೊರೆಬಂದಿದ್ದಾರೆ.

    ಓದು ಬರಹ ಬಾರದ ಪೋಷಕರಿಗೆ ತಮ್ಮ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸುವ ಆಸೆಯೂ ಅವರದ್ದು. ಆದ್ರೆ ಇತ್ತ ಬಡತನದಲ್ಲಿ ಹುಟ್ಟಿರುವ ಮಗುವಿಗೆ ತನಗೆ ಏನಾಗಿದೆ ಅನ್ನೊದು ಅರಿವು ಸಹ ಇಲ್ಲ. ಆಟ ಆಡಲೆಂದು ಮಕ್ಕಳ ಜೊತೆ ಬೆರೆಯಲು ಮುಂದಾದಾಗ ಮಗುವಿನ ವಿಕೃತವಾಗಿರುವ ಮುಖವನ್ನು ನೋಡಿ ಬೇರೆ ಮಕ್ಕಳು ದೂರಹೋಗುತ್ತಿವೆ. ಒಟ್ಟಿನಲ್ಲಿ ತನ್ನ ಮಗನಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ಹಳ್ಯಪ್ಪನ ಕೈಯಲ್ಲಿ ಹಣವಿಲ್ಲದ ಕಾರಣ ದಂಪತಿ ದಾನಿಗಳತ್ತ ಮುಖಮಾಡಿದ್ದಾರೆ.

     

  • 17 ವರ್ಷಗಳಿಂದ ಬಿಸ್ಕೆಟ್, ಗಂಜಿ ತಿನ್ನೋ ಯುವತಿಯ ಚಿಕಿತ್ಸೆಗೆ ಬೇಕಿದೆ ಸಹಾಯ

    17 ವರ್ಷಗಳಿಂದ ಬಿಸ್ಕೆಟ್, ಗಂಜಿ ತಿನ್ನೋ ಯುವತಿಯ ಚಿಕಿತ್ಸೆಗೆ ಬೇಕಿದೆ ಸಹಾಯ

    ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದ ನಿವಾಸಿ ಸಿದ್ದವ್ವ ಶೆರೆವಾಡರಿಗೆ ಹುಟ್ಟಿದಾಗಿನಿಂದ ಒಂದು ತೊಂದರೆ ಇದೆ. ಅದೇನಪ್ಪಾ ಅಂದ್ರೇ, ಅವರಿಗೆ ಬಾಯಿನೇ ಬಿಡಲು ಆಗಲ್ಲ. ಹೀಗಾಗಿ ಅವರು ಗಂಜಿ ಹಾಗೂ ಬಿಸ್ಕೆಟ್ ಬಿಟ್ಟು ಏನೂ ತಿನ್ನೊಲ್ಲ. ಸದ್ಯ ಅವರ ಬಾಯಿಯ ಶಸ್ತ್ರ ಚಿಕಿತ್ಸೆ ಮಾಡಿಸಿದ್ರೆ, ತಿನ್ನಬಹುದು ಹಾಗೂ ಮಾತನಾಡೊದು ಸಾಧ್ಯ ಎಂದು ವೈದ್ಯರು ಹೇಳಿದ್ದಾರೆ. ಹೀಗಾಗಿ ಇದೀಗ ಈ ಯುವತಿಯ ಕುಟುಂಬ ಸಹಾಯಕ್ಕಾಗಿ ಪಬ್ಲಿಕ್ ಟಿವಿಯ ಮೊರೆ ಬಂದಿದೆ.

    ಹೌದು. 17 ವರ್ಷ ವಯಸ್ಸಿನ ಸಿದ್ದವ್ವ ಶೆರೆವಾಡ ಬಾಯಿ ತೆರೆಯೋಕೆ ಆಗದೇ ಅದೇಷ್ಟು ಒದ್ದಾಟ ನಡೆಸಿದ್ದಾರೆ. ನೀರು ಕುಡಿಯಲು ಕೂಡಾ ಪರದಾಡುತ್ತಾರೆ. ಇನ್ನು ಹುಟ್ಟಿದಾಗಿನಿಂದ ಇವರು ಅನ್ನ, ರೊಟ್ಟಿಯಂಥ ಪದಾರ್ಥಗಳನ್ನು ತಿಂದಿಲ್ಲ. ಕೇವಲ ಗಂಜಿ, ಪುಡಿ ಮಾಡಿದ ಬಿಸ್ಕೆಟ್ ಮಾತ್ರ ತಿನ್ನೊಕೆ ಇವರಿಗೆ ಆಗತ್ತೆ. ಇದು ಇವರ ವೈಯಕ್ತಿಕ ಸಮಸ್ಯೆಯಾದ್ರೆ, ಇನ್ನೊಂದು ಕಡೆ ಇವರದ್ದು ಕಿತ್ತು ತಿನ್ನುವ ಬಡತನದ ಕುಟುಂಬ.

    ಕಳೆದ 5 ವರ್ಷಗಳ ಹಿಂದೆ, ಯುವತಿಯ ತಂದೆ ಬಸಪ್ಪ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಇನ್ನು ಮನೆಯಲ್ಲಿ ತಾಯಿಯೊಬ್ಬಳೇ ಕೂಲಿ-ನಾಲಿ ಮಾಡಿ ಮೂರು ಮಕ್ಕಳನ್ನ ಸಾಕಬೇಕು. ಸಿದ್ದವ್ವಳ ತಂಗಿ ಶಾಲೆ ಕಲಿಯುತಿದ್ರೆ, ಅಣ್ಣ ಕಾಲೇಜಿಗೆ ಹೋಗ್ತಾರೆ. ಸಿದ್ದವ್ವ ಕೂಡಾ ಬಾಯಿ ತೆರೆಯೊಕೆ ಆಗದೇ ಇದ್ರೂ ಎಸ್‍ಎಸ್‍ಎಲ್‍ಸಿ ಮುಗಿಸಿದ್ದಾರೆ. ಆದರೆ ಇವರ ಬಾಯಿ ಶಸ್ತ್ರ ಚಿಕಿತ್ಸೆಗೆ ಹಣ ಇಲ್ಲದೇ 17 ವರ್ಷಗಳಿಂದ ಇದೇ ರೀತಿ ಬಿಸ್ಕೆಟ್ ಹಾಗೂ ಗಂಜಿಯ ಮೇಲೆ ಜೀವನ ಸಾಗಿಸುತ್ತಿದ್ದಾರೆ.

    ಮಗಳ ಸ್ಥಿಯಿಂದ ಕಂಗೆಟ್ಟ ತಾಯಿ ಬಾಯಿ ಶಸ್ತ್ರ ಚಿಕಿತ್ಸೆ ಮಾಡಿಸಲೆಂದು ಬೆಂಗಳೂರು, ಬೆಳಗಾವಿ ಸೇರಿದಂತೆ ಹಲವು ಆಸ್ಪತ್ರೆಗೆ ಅಲೆದಾಡಿದ್ದಾರೆ. ಆದ್ರೆ ಮಗಳ ಚಿಕಿತ್ಸೆ ಸಾಧ್ಯವಿಲ್ಲ ಅಂತಾ ವೈದ್ಯರ ಉತ್ತರ. ಕೊನೆಗೆ ಧಾರವಾಡದ ಎಸ್‍ಡಿಎಂ ಆಸ್ಪತ್ರೆಯಲ್ಲಿ ಬಾಯಿ ಶಸ್ತ್ರ ಚಿಕಿತ್ಸೆ ಬಗ್ಗೆ ಕೇಳಿದಾಗ ಅಲ್ಲಿನ ವೈದ್ಯರು ಶಸ್ತ್ರಚಿಕಿತ್ಸೆ ಮಾಡ್ತೀವಿ ಅಂತಾ ಹೇಳಿದಾಗ ತಾಯಿಗೆ ಸ್ವಲ್ಪ ನಿಟ್ಟುಸಿರು ಬಿಟ್ಟಂತಾಗಿದೆ. ಆದರೆ ಅದಕ್ಕೆ ಹಣ ಬೇಕಲ್ಲ.

    ಹೇಗಾದ್ರು ಮಾಡಿ ಹಣದ ಸಹಾಯವಾದ್ರೆ ಮಗಳಿಗೆ ಹೊಸ ಜೀವನ ಸಿಗುತ್ತೆ ಅನ್ನೊದು ತಾಯಿಯ ಆಸೆ. ಸಿದ್ದವ್ವಳಿಗೆ ಕೂಡಾ ಮುಂದೆ ಕಲಿಬೇಕು ಅನ್ನೋ ಆಸೆಯೂ ಇದೆ. ಯುವಕರು ಬಾಯಿ ನೋಡಿ ಚುಡಾಯಿಸಿದ್ದಕ್ಕೆ ಬೇಸರಗೊಂಡು ಕಾಲೇಜ್ ಮೆಟ್ಟಿಲು ಕುಡಾ ಏರಲಿಲ್ಲ ಸಿದ್ದವ್ವ. ಸದ್ಯ 1 ಲಕ್ಷ ರೂಪಾಯಿ ಇದ್ರೆ ಇವಳು ಬಾಯಿ ಬಿಚ್ಚಿ ಮಾತನಾಡಬಹುದು ಹಾಗೂ ಬೇಕಾದ್ದನ್ನು ತಿನ್ನಬಹುದು. ಹೀಗಾಗಿ ಪಬ್ಲಿಕ್ ಟಿವಿ ಮೊರೆ ಬಂದಿರುವ ಈ ಕುಟುಂಬ, ಸಹಾಯಕ್ಕೆ ಮನವಿ ಮಾಡುತ್ತಿದೆ.

    https://www.youtube.com/watch?v=ltAvEyRpenQ

  • ಎತ್ತಿನಗಾಡಿಗೆ ಮಿನಿ ಬಸ್ ಡಿಕ್ಕಿ- ಓರ್ವನಿಗೆ ಗಂಭೀರ ಗಾಯ, ಚಿಕಿತ್ಸೆ ಸಿಗದೆ ನರಳಾಡುತ್ತಿರುವ ಎತ್ತುಗಳು

    ಎತ್ತಿನಗಾಡಿಗೆ ಮಿನಿ ಬಸ್ ಡಿಕ್ಕಿ- ಓರ್ವನಿಗೆ ಗಂಭೀರ ಗಾಯ, ಚಿಕಿತ್ಸೆ ಸಿಗದೆ ನರಳಾಡುತ್ತಿರುವ ಎತ್ತುಗಳು

    ಮಂಡ್ಯ: ಎತ್ತಿನಗಾಡಿ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡ ಎತ್ತುಗಳು ರಸ್ತೆಯಲ್ಲಿ ನರಳಾಡುತ್ತಿರುವ ಮನಕಲಕುವ ಘಟನೆ ಮಂಡ್ಯದಲ್ಲಿ ನಡೆದಿದೆ.

    ಮಂಡ್ಯ ತಾಲೂಕಿನ ಪಣಕನಹಳ್ಳಿ ಬಳಿ ಇಂದು ಬೆಳಗ್ಗೆ ಮಿನಿ ಬಸ್ ಮತ್ತು ಎತ್ತಿನಗಾಡಿ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎತ್ತಿನಗಾಡಿ ಮಾಲೀಕ ಹೊಳಲು ಗ್ರಾಮದ ಕೃಷ್ಣ ಗಾಯಗೊಂಡಿದ್ದಾರೆ. ಮೈಸೂರಿನ ಇಲವಾಲ ಮೂಲದವರು ಬೀಗರ ಊಟಕ್ಕೆಂದು ಹೊಳಲಿನ ದೇವಸ್ಥಾನಕ್ಕೆಂದು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

    ಸ್ಥಳದಲ್ಲಿದ್ದ ಜನರು ಗಾಯಾಳು ಕೃಷ್ಣ ಅವ್ರನ್ನ ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲು ರವಾನಿಸಿದ್ರು. ಆದ್ರೆ ಎತ್ತುಗಳನ್ನು ಕರೆದುಕೊಂಡು ಹೋಗಲು ವಾಹನದ ಸೌಲಭ್ಯ ಇಲ್ಲದ ಹಿನ್ನೆಲೆಯಲ್ಲಿ ಎತ್ತುಗಳು ಅಲ್ಲಿಯೇ ನರಳುವಂತಾಗಿದೆ. ಘಟನೆ ಸಂಬಂಧ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    https://www.youtube.com/watch?v=OxCoWc2NcIY

     

  • ಎಂಡೋಸಲ್ಫಾನ್ ನಿಂದ ಬಳಲುತ್ತಿರುವ ಮೂವರು ಮಕ್ಕಳನ್ನು ಸಲಹುವ ದಂಪತಿಗೆ ಬೇಕಿದೆ ಸಹಾಯ

    ಎಂಡೋಸಲ್ಫಾನ್ ನಿಂದ ಬಳಲುತ್ತಿರುವ ಮೂವರು ಮಕ್ಕಳನ್ನು ಸಲಹುವ ದಂಪತಿಗೆ ಬೇಕಿದೆ ಸಹಾಯ

    ಕಾರವಾರ: ಮುಪ್ಪು ಆವರಿಸಿದಾಗ ಮಕ್ಕಳು ತಮ್ಮ ಆಸರೆಗೆ ಇರಬೇಕು ಎಂದು ಪ್ರತಿಯೊಬ್ಬ ಹೆತ್ತವರು ಬಯಸುತ್ತಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಲಗೇರಿ ಗ್ರಾಮದಲ್ಲಿರುವ ಕುಟುಂಬದಲ್ಲಿ ಬೆಳೆದು ನಿಂತ ಮೂವರು ಮಕ್ಕಳನ್ನ ಕಡು ಬಡತನದ ಮುಪ್ಪಿನಲ್ಲೂ ಪೊಷಕರೇ ನೋಡಿಕೊಳ್ಳಬೇಕಾದ ಸ್ಥಿತಿಯಿದೆ. ಎಂಡೋಸಲ್ಫಾನ್ ನಿಂದಾಗಿ ಮೂವರು ಮಕ್ಕಳಿಗೆ ಬುದ್ದಿಮಾಂದ್ಯತೆ ಆವರಿಸಿದ್ದು ಈ ಕುಟುಂಬದ ಬೆಳಕನ್ನೇ ಕಿತ್ತುಕೊಂಡಿದೆ.

    ಕಿತ್ತು ತಿನ್ನುವ ಬಡತನದ ಸ್ಥಿತಿಯಲ್ಲೂ ತನ್ನ ಮೂವರು ಮಕ್ಕಳನ್ನು ಸಾಕಿ ಸಲುಹುತ್ತಿರುವ 52 ವರ್ಷದ ತಾಯಿ ವತ್ಸಲಾ. ತಂದೆ ಚಂದ್ರಕಾಂತ್ ಲಕ್ಷ್ಣಣ್ ಶೇಟ್ ವಯಸ್ಸು 60. ವತ್ಸಲಾ ಮತ್ತು ಚಂದ್ರಕಾಂತ್ ದಂಪತಿ ತಮ್ಮ ಮೂವರು ಮಕ್ಕಳಾದ ನಾಗರಾಜ್, ಹೇಮಲತಾ, ಜಗದೀಶ್ ಎಂಬುವವರೊಂದಿಗೆ ವಾಸವಾಗಿದ್ದಾರೆ. ಇನ್ನು ಈ ಕುಟುಂಬ ಜೀವನೋಪಯಾಕ್ಕಾಗಿ ಕೂಲಿ ಕೆಲಸವನ್ನು ನಂಬಿಕೊಂಡಿದೆ. ಲಕ್ಷ್ಮಣ್ ಅವರು ಚೀರೆಕಲ್ಲು ಕೋರೆಯಲ್ಲಿ ಕಲ್ಲು ಕೀಳುವ ಕೆಲಸ ಮಾಡಿದರೆ, ವತ್ಸಲಾ ಸಹ ಮಕ್ಕಳ ಆರೈಕೆ ಜೊತೆ ಕೂಲಿ ಕೆಲಸ ಮಾಡುತ್ತಾರೆ.

    ಈ ಕುಟುಂಬಕ್ಕೆ ಇರಲು ಸಹ ಒಂದು ಸ್ವಂತ ಮನೆಯಿಲ್ಲ. ಅರಣ್ಯ ಒತ್ತುವರಿ ಪ್ರದೇಶದಲ್ಲಿ ಚಿಕ್ಕ ಗೂಡನ್ನ ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಈ ದಂಪತಿಗೆ ಮೊದಲು ಒಂದು ಗಂಡುಮಗುವಿನ ಜನನವಾಯ್ತು. ಆದ್ರೆ ಆ ಮಗು ಎಂಡೋಸಲ್ಫಾನ್ ನಿಂದ ಬುದ್ದಿಮಾಂದ್ಯತೆಯಿಂದ ಹುಟ್ಟಿರುವುದನ್ನ ವೈದ್ಯರು ತಿಳಿಸಿದ್ರು. ಹೀಗಾಗಿ ಒಂದರ ಮೇಲಂತೆ ಮೂರು ಮಕ್ಕಳು ಜನಿಸಿದ್ರೂ ಎಲ್ಲಾ ಮಕ್ಕಳೂ ಬುದ್ದಿಮಾಂದ್ಯರಿದ್ದು ಇದರಲ್ಲಿ 31 ವರ್ಷದ ಹೇಮಲತಾ ಹಾಗೂ 29 ವರ್ಷದ ಜಗದೀಶ್ ಬುದ್ದಿಮಾಂದ್ಯತೆಯ ಜೊತೆಯಲ್ಲಿ ಇರುಳುಗಣ್ಣಿನ ಸಮಸ್ಯೆ ಯಿಂದ ಬಳಲಿದ್ರೆ 33 ವರ್ಷದ ಹಿರಿಯ ಮಗ ನಾಗರಾಜ್ ಬುದ್ದಿಮಾಂದ್ಯತೆಯನ್ನ ಹೊಂದಿದ್ದು ಇವರನ್ನ ನೋಡಿಕೊಳ್ಳುವ ಹೊಣೆಭಾರ ವತ್ಸಲಾ ಮೇಲಿದೆ.

    ವಯೋಸಹಜ ಅನಾರೋಗ್ಯ: ಒಂದರ ನಂತರ ಹುಟ್ಟಿದ ಮೂರು ಮಕ್ಕಳೂ ಸಹ ಎಂಡೋಸಲ್ಫಾನ್ ಕಾಯಿಲೆಯಿಂದ ಬಳಲುತ್ತಿದ್ದರೆ, ಮನೆಯ ಯಜಮಾನ ಚಂದ್ರಕಾಂತ್ ಚಿಕ್ಕ ಅಪಘಾತದಲ್ಲಿ ಕೈಗೆ ಪೆಟ್ಟಾಗಿ ರಾಡನ್ನ ಹಾಕಿಸಿಕೊಳ್ಳಬೇಕಾಯ್ತು, ಇನ್ನು ಸರ್ಕಾರ ಚೀರೇಕಲ್ಲಿನ ಗಣಿಗಾರಿಕೆ ನಿಷೇಧಿಸಿದ್ದರಿಂದ ಇರುವ ಕೆಲಸವೂ ಇಲ್ಲದಂತಾಗಿದೆ. ಜೊತೆಯಲ್ಲಿ ಇಬ್ಬರಿಗೂ ವಯೋಸಹಜತೆಯಿಂದಾಗಿ ಆರೋಗ್ಯ ಹದಗೆಟ್ಟಿದ್ದು ಇಬ್ಬರೂ ಕೆಲಸ ಮಾಡಲು ಸಾಧ್ಯವಾಗದೇ ಮನೆಯಲ್ಲಿರುವಂತೆ ಮಾಡಿದೆ. ಒಂದು ಕಡೆ ಬೆಳದು ನಿಂತ ಈ ಮಕ್ಕಳ ಪೋಷಣೆ ಇನ್ನೊಂದೆಡೆ ತಮ್ಮ ನಂತರ ಇವರ ಪಾಲನೆಯ ಚಿಂತೆ ಹೀಗೆ ಎಂದು ಚಂದ್ರಕಾಂತ್ ಮತ್ತು ವತ್ಸಲಾ ದಂಪತಿ ಚಿಂತೆಯಲ್ಲಿದ್ದಾರೆ.

    ಹುಸಿ ಭರವಸೆ: ಇವರಿಗೆ ಸ್ಥಳೀಯ ಶಾಸಕರಿಂದ ಹಿಡಿದು ಕೆಲವು ರಾಜಕಾರಣಿಗಳು ಸಹಾಯ ಮಾಡುವ ಭರವಸೆ ನೀಡಿದ್ರು. ಆದ್ರೆ ಕೇವಲ ಪ್ರಚಾರಕ್ಕೆ ಇವರನ್ನ ಬಳಸಿಕೊಂಡು ನಂತರ ಯಾವ ಸಹಾಯವನ್ನೂ ಮಾಡಲಿಲ್ಲ. ಇನ್ನು ಕೂಲಿ ಕೆಲಸ ಮಾಡುತಿದ್ದ ಇವರಿಗೆ ಆರೋಗ್ಯ ಹದಗೆಟ್ಟು ಜೀವನ ನೆಡೆಸದಷ್ಟು ಸಂಕಷ್ಟ ಎದುರಾಗಿದೆ. ಜೊತೆಯಲ್ಲಿ ಜೀವನ ಸಾಗಿಸಲು ಇದ್ದ ಮನೆಕೂಡ ಶಿಥಿಲಾವಸ್ಥೆ ತಲುಪಿದ್ದು ಆಗಲೋ ಈಗಲೂ ಬೀಳುವ ಸ್ಥಿತಿಯಲ್ಲಿದೆ.

    ಪುಟ್ಟ ಅಂಗಡಿಯ ಕನಸು: ಮೂರು ಮಕ್ಕಳ ವೈದ್ಯಕೀಯ ವೆಚ್ಚ ನೋಡಿಕೊಲ್ಳಲು ಕಷ್ಟವಾಗುತಿದ್ದು, ಸರ್ಕಾರದಿಂದ ಬರುತ್ತಿರುವ ಸಹಾಯ ಹಣವೂ ಸಾಲುತಿಲ್ಲ. ತಮ್ಮ ಆರೋಗ್ಯ ಹದಗೆಡುತ್ತಿರುವುದರಿಂದ ಮೂರು ಮಕ್ಕಳ ಮುಂದಿನ ಭವಿಷ್ಯದ ಚಿಂತೆ ಇವರನ್ನ ಕಾಡುತ್ತಿದೆ. ಊರಿನಲ್ಲಿ ಚಿಕ್ಕದೊಂದು ಅಂಗಡಿ ಇಟ್ಟು ಮಕ್ಕಳ ಭವಿಷ್ಯ ರೂಪಿಸುವುದರ ಜೊತೆ ತಮ್ಮ ಬದುಕು ಕಟ್ಟಿಕೊಳ್ಳು ಹಂಬಲ ಈ ದಂಪತಿಯದು. ಹೀಗಾಗಿ ಬೆಳಕು ಕಾರ್ಯಕ್ರಮದ ಮೂಲಕ ಆರ್ಥಿಕ ಸಹಾಯ ಬಯಸಿದ್ದಾರೆ. ಇನ್ನು ಇದೇ ಊರಿನ ವೆಂಕಟರಮಣ ವೈದ್ಯ ಎಂಬುವವರು ಇವರ ಸಹಾಯಕ್ಕೆ ಬಂದಿದ್ದು ಅಂಗಡಿ ನೆಡೆಸಲು ಜಾಗವನ್ನು ಒದಗಿಸಿಕೊಡುವ ಭರವಸೆ ನೀಡಿದ್ದಲ್ಲದೇ ಗ್ರಾಮ ಪಂಚಾಯ್ತಿಯಿಂದ ಮನೆ ಕಟ್ಟಿಸಿಕೊಡುವ ಪ್ರಯತ್ನದಲ್ಲಿದ್ದಾರೆ.

    ಆರೋಗ್ಯ ಸರಿಯಿಲ್ಲದ ಕಾರಣ ಕೂಲಿ ಕೆಲಸ ಕಷ್ಟಸಾಧ್ಯ. ಹೀಗಾಗಿ ಚಿಕ್ಕದೊಂದು ಅಂಗಡಿ ಇಟ್ಟುಕೊಂಡರೆ ಕುಳಿತಲ್ಲಿ ಕೆಲಸ ಮಾಡಿಕೊಳ್ಳಬಹುದು. ಜೊತೆಯಲ್ಲಿ ಮಕ್ಕಳನ್ನೂ ಇದರಲ್ಲಿ ತೊಡಗಿಸಿಕೊಂಡು ಕ್ರೀಯಾ ಶೀಲರಾಗಿರುವಂತೆ ನೋಡಿಕೊಂಡು ಬದುಕು ರೂಪಿಸಿಕೊಳ್ಳುವ ಆಸೆಯಿದೆ.