Tag: ಚಿತಾಗಾರ

  • ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಶೆಟ್ಟರ್, ಜೋಶಿ ಭೂಮಿ ಪೂಜೆ

    ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಶೆಟ್ಟರ್, ಜೋಶಿ ಭೂಮಿ ಪೂಜೆ

    ಹುಬ್ಬಳ್ಳಿ: ನಗರದ ವಿದ್ಯಾನಗರ ಸನ್ಮಾಶನದಲ್ಲಿ ನಿರ್ಮಿಸಲಾಗುತ್ತಿರುವ ವಿದ್ಯುತ್ ಚಿತಾಗಾರದ ಭೂಮಿ ಪೂಜೆಯನ್ನು ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ನೆರವೇರಿಸಿದರು.

    ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಕೆನರಾ ಬ್ಯಾಂಕ್‍ನ ಸಾಮಾಜಿಕ ಹೊಣೆಗಾರಿಕಾ ನಿಧಿಯಡಿ ವಿದ್ಯಾನಗರ ಸ್ಮಶಾನದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ, 11 ಲಕ್ಷ ವೆಚ್ಚದ ಫ್ರೀಜರ್ ಬಾಕ್ಸ್‍ಗಳನ್ನು ಒದಗಿಸಲಾಗುತ್ತಿದೆ. ಕಾಮಗಾರಿಯನ್ನು ಧಾರವಾಡದ ನಿರ್ಮಿತಿ ಅನುಷ್ಠಾನಗೊಳಿಸುತ್ತಿದೆ. ಆಗಸ್ಪ್ 31ರ ಒಳಗಾಗಿ ನಿರ್ಮಾಣಕ್ಕೆ ಗಡುವು ನೀಡಲಾಗಿದೆ ಎಂದರು.

    ನಗರದ ಮಂಟೂರು ಹರಿಶ್ಚಂದ್ರ ಸನ್ಮಾಶನದಲ್ಲಿ ಸ್ಮಾರ್ಟ್ ಸಿಟಿ ಅನುದಾನ ಅಡಿ 2.60 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ವಿದ್ಯುತ್ ಚಿತಾಗರದ ಕಾಮಗಾರಿ ಪ್ರಗತಿಯಲ್ಲಿದೆ. ಹೆಗ್ಗೇರಿ ಸ್ಮಶಾನದಲ್ಲಿ 1.20 ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಶೀಘ್ರವಾಗಿ ಕಾಮಗಾರಿ ಆರಂಭಿಸಲಾಗುತ್ತಿದೆ. ಅಲ್ಲದೆ ಆನಂದ ನಗರ ಸನ್ಮಾಶನದಲ್ಲಿ 74 ಲಕ್ಷ ವೆಚ್ಚದಲ್ಲಿ ಗ್ಯಾಸ್ ಆಧಾರಿತ ಚಿತಾಗರ ನಿರ್ಮಾಣದ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಧಾರವಾಡ ಹೊಸ ಯಲ್ಲಾಪುರ ಸ್ಮಶಾನದಲ್ಲಿ 4.40 ಲಕ್ಷ ವೆಚ್ಚದಲ್ಲಿ ಗ್ಯಾಸ್ ಕ್ರಿಮೇಷನ್ ಚೆಂಬರ್ ಅಳವಡಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಮಾಹಿತಿ ನೀಡಿದರು.

    ಈ ಸಂದರ್ಭದಲ್ಲಿ ಶಾಸಕ ಅರವಿಂದ ಬೆಲ್ಲದ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

  • ಚಿತಾಗಾರ ಸಿಬ್ಬಂದಿ ನೆರವಿಗೆ ಬಂದ ನಟಿ ರಾಗಿಣಿ

    ಚಿತಾಗಾರ ಸಿಬ್ಬಂದಿ ನೆರವಿಗೆ ಬಂದ ನಟಿ ರಾಗಿಣಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿ ಸದ್ಯ ತಾವು ಮಾಡುತ್ತಿರುವ ಸಮಾಜ ಸೇವೆಯಿಂದ ಸುದ್ದಿಯಾಗುತ್ತಿದ್ದಾರೆ. ಮನೆಯಿಲ್ಲದವರಿಗೆ, ಪೊಲೀಸರಿಗೆ, ಚಿತಾಗಾರದಲ್ಲಿ ಕೆಲಸ ಮಾಡುತ್ತಿರುವವರಿಗೆ ಊಟ ನೀಡುವ ಮೂಲಕವಾಗಿ ಕೊರೊನಾ ಸಂದರ್ಭದಲ್ಲಿ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ.

     

    View this post on Instagram

     

    A post shared by Ragini dwivedi (@rraginidwivedi)

    ನಿರಾಶ್ರಿತರು ಹಾಗೂ ಬಂದೋಬಸ್ತ್​ನಲ್ಲಿದ್ದ ಪೊಲೀಸರಿಗೆ ಆಹಾರದ ಪೊಟ್ಟಣಗಳನ್ನು ನೀಡಿದ್ದ ರಾಗಿಣಿ ಚಿತಾಗಾರ ಹಾಗೂ ರುದ್ರಭೂಮಿಯ ಕೆಲಸಗಾರರಿಗೆ ದಿನಸಿ ಕಿಟ್ ಹಂಚಿದ್ದಾರೆ. ರಾಗಿಣಿ ದ್ವಿವೇದಿ ಕಳೆದ ಲಾಕ್‍ಡೌನ್‍ನಲ್ಲೂ ನಿರಾಶ್ರಿತರಿಗೆ ಹಾಗೂ ಬಡವರಿಗೆ ದಿನಸಿ ಹಾಗೂ ಆಹಾರ ನೀಡುವ ಮೂಲಕ ನೆರವಾಗಿದ್ದರು. ಈಗಲೂ ಸಹ ನಟಿ ರಾಗಿಣಿ ಈ ಕೆಲಸವನ್ನು ಮುಂದುವರೆಸಿದ್ದಾರೆ.

     

    View this post on Instagram

     

    A post shared by Ragini dwivedi (@rraginidwivedi)

    ಮಾಸ್ಕ್ ಹಾಗೂ ಗ್ಲೌಸ್ ಧರಿಸಿ ಸ್ಮಶಾನಕ್ಕೆ ಭೇಟಿ ಕೊಟ್ಟು ಅಲ್ಲಿ ಕೆಲಸ ಮಾಡುವವರಿಗೆ ದಿನಸಿ ಕಿಟ್ ವಿತರಿಸಿದ್ದಾರೆ. ಒಂದು ತಿಂಗಳಿಗೆ ಆಗುವಷ್ಟು ದಿನಸಿಯನ್ನು ಚಿತಾಗಾರದಲ್ಲಿ ಕೆಲಸ ಮಾಡುವವರಿಗೆ ನೀಡಿದ್ದಾರೆ. ಸರ್ವಜ್ಞನಗರದ ಕಲ್ಲಹಳ್ಳಿ ರುದ್ರಭೂಮಿಗೆ ತೆರಳಿ ಅಲ್ಲಿ ನೆಲೆಸಿರುವ ಗುಂಡಿ ಅಗೆಯುವ ಕಾರ್ಮಿಕರು ಹಾಗೂ ಕುಟುಂಬದ ಮಹಿಳೆಯರನ್ನು ಭೇಟಿ ಮಾಡಿದ್ದಾರೆ ರಾಗಿಣಿ. ನಿರಾಶ್ರಿತರು ಹಾಗೂ ಬಂದೋಬಸ್ತ್​ನಲ್ಲಿದ್ದ ಪೊಲೀಸರಿಗೆ ಆಹಾರದ ಪೊಟ್ಟಣಗಳನ್ನು ನೀಡಿದ್ದಾರೆ.

     

    View this post on Instagram

     

    A post shared by Ragini dwivedi (@rraginidwivedi)

    ನನ್ನ ಪ್ರಕಾರ ಚಿತಾಗಾರದಲ್ಲಿ ಕೆಲಸ ಮಾಡುವವರೇ ಗ್ರೇಟ್ ಕೊರೊನಾ ವಾರಿಯರ್ಸ್ ಇವರ ಕೆಲಸದ ಹಿಂದಿರುವ ನೋವನ್ನ ಯಾರೂ ಪರಿಗಣಿಸುವಿದೇ ಇಲ್ಲ. ಹಾಗೇ ಇವರಲ್ಲಿ ಅದೆಷ್ಟೋ ಜನರಿಗೆ ಸಂಬಳ ಹಾಗೂ ಊಟ ಕೂಡ ಸಿಗುತ್ತಿಲ್ಲ. ನಮ್ಮ ಕೈಲಾದಷ್ಟು ಅವರ ಒಂದು ತಿಂಗಳಿಗೆ ಆಗುಷ್ಟು ರೇಷನ್ ಸಹಾಯ ಮಾಡಿದ್ದೇವೆ. ಕಳೆದ ನಾಲ್ಕು ಪೀಳಿಗೆಯಿಂದಲೂ ಈ ಚಿತಾಗಾರದಲ್ಲಿ ಕೆಲಸ ಮಾಡುತ್ತಾ ಹೊರ ಜಗತ್ತನ್ನು ನೋಡದೇ ಇರುವ ಓರ್ವ ಮಹಿಳೆಯನ್ನು ಬೇಟಿ ಮಾಡಿದೆ. ಖುಷಿ ಆಯ್ತು. ಇವರಿಂದ ನಾವು ದಿನಾ ಕಲಿಯುವುದು ಬಹಳಷ್ಟಿದೆ ಎಂದು ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Ragini dwivedi (@rraginidwivedi)

    ರಾಗಿಣಿ ಕೊರೊನಾ ಸಮಯದಲ್ಲಿ ಮಾಡುತ್ತಿರುವ ಈ ಸಹಾಯಕ್ಕೆ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಗಿಣಿ ತಾವು ಮಾಡುತ್ತಿರುವ ಸಹಾಯವನ್ನು ಮುಮದುವರೆಸಿದ್ದಾರೆ. ತಮ್ಮ ಕೈಲಾದಷ್ಟು ಸಹಾಯವನ್ನು ಮಾಡುವಲ್ಲಿ ರಾಗಿಣಿ ತೊಡಗಿಸಿಕೊಂಡಿದ್ದಾರೆ.

     

    View this post on Instagram

     

    A post shared by Ragini dwivedi (@rraginidwivedi)

  • ಕೊರೊನಾದಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆ ಚಿತಾಗಾರ ಮೀಸಲು – ಅಂತ್ಯಕ್ರಿಯೆಯ ವೆಚ್ಚ ಭರಿಸಲಿರೋ ಬಿಬಿಎಂಪಿ

    ಕೊರೊನಾದಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆ ಚಿತಾಗಾರ ಮೀಸಲು – ಅಂತ್ಯಕ್ರಿಯೆಯ ವೆಚ್ಚ ಭರಿಸಲಿರೋ ಬಿಬಿಎಂಪಿ

    ಬೆಂಗಳೂರು: ಕೊರೊನಾದಿಂದ ಮತ್ತು ನಾನ್ ಕೋವಿಡ್‍ನಿಂದ ಮೃತಪಟ್ಟವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿತ್ತು. ಇದರಿಂದ ನಗರದಲ್ಲಿರುವ ಚಿತಾಗಾರದ ಬಳಿ ಜನರು, ಅಂಬುಲೆನ್ಸ್ ಸಾಲಾಗಿ ನಿಲ್ಲುತ್ತಿದ್ದವು. ಇದರಿಂದ ಬಿಬಿಎಂಪಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಗಳ ಶವಸಂಸ್ಕಾರಕ್ಕೆ ವಿದ್ಯುತ್ ಚಿತಾಗಾರಗಳನ್ನು ಮೀಸಲು ಮಾಡಿದೆ.

    ಬಿಬಿಎಂಪಿ ವಿಶೇಷ ಆಯುಕ್ತ ರಣದೀಪ್ ಈ ಆದೇಶ ಹೊರಡಿಸಿದ್ದು, ಇಂದಿನಿಂದಲೇ ಆದೇಶ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. ವಿದ್ಯುತ್ ಚಿತಾಗಾರಗಳ ಮೀಸಲು ಜೊತೆಗೆ ಕೋವಿಡ್‍ನಿಂದ ಮೃತಪಟ್ಟವರ ಉಚಿತ ಶವ ಸಂಸ್ಕಾರಕ್ಕೂ ಬಿಬಿಎಂಪಿ ಆಯುಕ್ತ ಆದೇಶ ನೀಡಿದ್ದಾರೆ.

    ಆರ್.ಆರ್.ನಗರದ ಕೆಂಗೇರಿ ಚಿತಾಗಾರ, ಯಲಹಂಕದ ಮೇಡಿ ಅಗ್ರಹಾರ ಚಿತಾಗಾರ, ಬೊಮ್ಮನಹಳ್ಳಿ ಕಡ್ಲು ಚಿತಾಗಾರ ಮತ್ತು ಮಹಾದೇವಪುರ ಪುತ್ತೂರು ಚಿತಾಗಾರ ಈ ನಾಲ್ಕು ವಿದ್ಯುತ್ ಚಿತಾಗಾರಗಳನ್ನು ನಗರದಲ್ಲಿ ಬಿಬಿಎಂಪಿ ಮೀಸಲಿಟ್ಟಿದೆ. ಸಾಮಾನ್ಯ ಸಾವು ಹಾಗೂ ಕೊರೊನಾದಿಂದ ಮೃತಪಟ್ಟವರ ಶವ ಸಂಸ್ಕಾರದಿಂದ ಸಾಲು ಹೆಚ್ಚಾಗುತ್ತಿತ್ತು. ಹೀಗಾಗಿ ವಿದ್ಯುತ್ ಚಿತಾಗಾರಗಳಲ್ಲಿ ಆಗುತ್ತಿದ್ದ ಒತ್ತಡ ಕಡಿಮೆಗೊಳಿಸಲು ಚಿತಾಗಾರಗಳ ಮೀಸಲು ಮಾಡಲಾಗಿದೆ ಎಂದು ರಣದೀಪ್ ತಿಳಿಸಿದ್ದಾರೆ.

    ಇನ್ನೂ ಶವ ಸಂಸ್ಕಾರಕ್ಕೆ ನೀಡಲಾಗುವ ಪ್ರೋತ್ಸಾಹ ಧನವನ್ನು ಕೂಡ ಬಿಬಿಎಂಪಿ ಭರಿಸಲಿದೆ. ಸ್ಥಳೀಯವಾಗಿ ಚಟ್ಟ, ಮಡಕೆ, ದಹನ ಪ್ರಕ್ರಿಯೆಗೆ ಆಗುವ ಎಲ್ಲ ವೆಚ್ಚವನ್ನು ಬಿಬಿಎಂಪಿ ಭರಿಸಲಿದೆ. ಅಲ್ಲದೇ ಬಿಬಿಎಂಪಿ ಕೋವಿಡ್‍ನಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆ ದರ ನಿಗದಿ ಮಾಡಲಾಗಿದೆ.

    ದಹನ ಶುಲ್ಕ 250, ಚಟ್ಟ 900, ಬೂದಿ ಪಾತ್ರೆ 100, ದಹನ ಕ್ರಿಯೆ ಸಿಬ್ಬಂದಿ ಪ್ರೋತ್ಸಾಹ ದರ 500 ರೂಪಾಯಿಯನ್ನು ನಿಗದಿ ಮಾಡಲಾಗಿದೆ. ಒಟ್ಟಾರೆ ಪ್ರತಿ ಶವ ಸಂಸ್ಕಾರಕ್ಕೆ ಒಟ್ಟು 1,750 ರೂಪಾಯಿಯನ್ನು ಬಿಬಿಎಂಪಿ ಭರಿಸಲಿದೆ. ಈ ಆದೇಶ ಇಂದಿನಿಂದಲೇ ಜಾರಿಯಾಗಲಿದೆ ಎಂದು ವಿಶೇಷ ಆಯುಕ್ತ ರಣದೀಪ್ ಆದೇಶ ಹೊರಡಿಸಿದ್ದಾರೆ.

  • ಚಿತಾಗಾರದ ಮುಂದೆ ಸಾಲು ಸಾಲು ಅಂಬುಲೆನ್ಸ್ ಕ್ಯೂ

    ಚಿತಾಗಾರದ ಮುಂದೆ ಸಾಲು ಸಾಲು ಅಂಬುಲೆನ್ಸ್ ಕ್ಯೂ

    ಬೆಂಗಳೂರು: ದಿನೇ ದಿನೇ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದೇ ರೀತಿ ಸಾವಿನ ಸಂಖ್ಯೆ ಕೂಡ ಅಧಿಕವಾಗುತ್ತಿದೆ. ಪರಿಣಾಮ ಚಿತಾಗಾರದ ಮುಂದೆ ಸಾಲು ಸಾಲು ಅಂಬುನೆಲ್ಸ್ ಕ್ಯೂ ನಿಂತಿವೆ.

    ಹೆಬ್ಬಾಳ ಚಿತಾಗಾರದ ಮುಂದೆ ಅಂಬುಲೆನ್ಸ್‌ಗಳು ಕ್ಯೂ ನಿಂತಿವೆ. ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿತಾಗಾರದ ಮುಂದೆ ಕ್ಯೂ ನಿಲ್ಲುವಂತಹ ಪರಿಸ್ಥಿತಿ ಬಂದಿದೆ. ಇದುವರೆಗೂ ಬೆಂಗಳೂರಿನಲ್ಲಿ ಕೊರೊನಾದಿಂದ 833 ಮಂದಿ ಸಾವನ್ನಪ್ಪಿದ್ದಾರೆ.

    ಒಬ್ಬ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲು ಸುಮಾರು ಒಂದು ಗಂಟೆ ಕಾಲ ಸಮಯಬೇಕು. ಹೀಗಾಗಿ ಒಂದು ಶವ ಸುಡುವುದಕ್ಕೆ ನಾಲ್ಕೈದು ಗಂಟೆ ಪಿಪಿಇ ಕಿಟ್ ಧರಿಸಬೇಕು ಎಂದು ಸಾರ್ವಜನಿಕರು ತಮ್ಮ ಅಳಲನ್ನು ಹೇಳಿಕೊಂಡಿದ್ದಾರೆ. ಹೆಬ್ಬಾಳ ಚಿತಾಗಾರಾದೊಳಗೆ ಕೋವಿಡ್‍ನಿಂದ ಮೃತಪಟ್ಟಿರುವ ಶವದ ಜೊತೆ ಅಂಬುಲೆನ್ಸ್ ಸಾಲಾಗಿ ನಿಂತಿವೆ.

    ಶುಕ್ರವಾರ 5,007 ಮಂದಿಗೆ ಸೋಂಕು ಬಂದಿದ್ದು, ಒಂದೇ ದಿನ 110 ಮಂದಿ ಮೃತಪಟ್ಟಿದ್ದಾರೆ. ಅದರಲ್ಲೂ ನಿನ್ನೆ ಬೆಂಗಳೂರು 2,267 ಮಂದಿಗೆ ಸೋಂಕು ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 85,870ಕ್ಕೆ ಏರಿಕೆಯಾಗಿದೆ. ಈ ಪೈಕಿ 52,791 ಸಕ್ರಿಯ ಪ್ರಕರಣಗಳಿದ್ದರೆ, 31,347 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 1, 774 ಮಂದಿ ಮೃತಪಟ್ಟಿದ್ದು, 611 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  • ಚಿತಾಗಾರಗಳ ಮುಂದೆ ಅಂಬುಲೆನ್ಸ್‌ಗಳು ಕ್ಯೂ

    ಚಿತಾಗಾರಗಳ ಮುಂದೆ ಅಂಬುಲೆನ್ಸ್‌ಗಳು ಕ್ಯೂ

    ಬೆಂಗಳೂರು: ದಿನೇ ದಿನೇ ಕೊರೊನಾ ಮತ್ತು ನಾನ್ ಕೋವಿಡ್ ವ್ಯಕ್ತಿಗಳ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಿತಾಗಾರಗಳ ಮುಂದೆ ಸಾಲು ಸಾಲಾಗಿ ಅಂಬುಲೆನ್ಸ್‌ಗಳು ಕ್ಯೂ ನಿಂತಿವೆ.

    ಚಾಮರಾಜಪೇಟೆ, ಬನಶಂಕರಿ ಮತ್ತು ಹೆಬ್ಬಾಳ ವಿದ್ಯುತ್ ಚಿತಾಗಾರದ ಮುಂದೆ ಅಂಬುಲೆನ್ಸ್ ಮತ್ತು ಜನರು ಸಾಲಾಗಿ ಕ್ಯೂ ನಿಂತಿದ್ದಾರೆ. ಕೋವಿಡ್ ಮತ್ತು ನಾನ್ ಕೋವಿಡ್ ವ್ಯಕ್ತಿಗಳ ಸಾವಿನ ಸಂಖ್ಯೆ ಜಾಸ್ತಿ ಆಗುತ್ತಿದೆ. ಇತ್ತ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡಲು ಸಮಯ ಬೇಕಾಗುತ್ತೆ. ಹೀಗಾಗಿ ಮೃತ ದೇಹವನ್ನು ಸಂಬಂಧಿಕರು ಅಂಬುಲೆನ್ಸ್‌ನಲ್ಲಿ ತಂದು ವಿದ್ಯುತ್ ಚಿತಾಗಾರದ ಮುಂದೆ ನಿಲ್ಲಿಸಲಾಗಿದೆ.

    ಇತ್ತ ಚಿತಾಗಾರದಲ್ಲಿ ಸಿಬ್ಬಂದಿ ಕಡಿಮೆ ಇದ್ದಾರೆ. ಹೀಗಾಗಿ ಅಂತ್ಯಕ್ರಿಯೆ ಮಾಡಲು ತಡವಾಗುತ್ತಿದೆ. ಆದ್ದರಿಂದ ಸಂಬಂಧಿಕರು ಚಿತಾಗಾರದ ಮುಂದೆ, ರಸ್ತೆ ಪಕ್ಕದಲ್ಲಿಯೇ ಮೃತದೇಹವನ್ನು ಇಟ್ಟುಕೊಂಡು ಅಂತ್ಯಕ್ರಿಯೆಗಾಗಿ ಕಾಯುತ್ತಿದ್ದಾರೆ. ಹೆಬ್ಬಾಳ ಚಿತಾಗಾರದಲ್ಲಿ ಕೊರೊನಾ ರೋಗಿಗಳ ಅಂತ್ಯಸಂಸ್ಕಾರಕ್ಕೆ ಸರತಿ ಸಾಲಿನಲ್ಲಿ ಕಾಯಲಾಗುತ್ತಿದೆ. ಪಿಪಿಇ ಕಿಟ್ ಧರಿಸಿ ಸಿಬ್ಬಂದಿ ಕುಟುಂಬಸ್ಥರು ಕಾಯುತ್ತಿದ್ದಾರೆ.

    ಈಗಾಗಲೇ ಬಿಬಿಎಂಪಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಮಾಡಲು ಪ್ರತ್ಯೇಕ ವಿದ್ಯುತ್ ಚಿತಾಗಾರ ಮಾಡಲು ಸಿದ್ಧತೆ ನಡೆಸುತ್ತಿದೆ. ಜೊತೆಗೆ ಚಿತಾಗಾರದಲ್ಲಿ ಸಿಬ್ಬಂದಿ ಹೆಚ್ಚಿಸುವ ಸಾಧ್ಯತೆ ಕೂಡ ಇದೆ.