Tag: ಚಿತ್ರರಂಗ

  • ಚಿತ್ರರಂಗದ ಸಮಸ್ಯೆಗೆ ಪರಿಹಾರ ಕೊಡುವಂತೆ ಮನವಿ ಮಾಡಿದ್ದೇವೆ: ಶಿವಣ್ಣ

    ಚಿತ್ರರಂಗದ ಸಮಸ್ಯೆಗೆ ಪರಿಹಾರ ಕೊಡುವಂತೆ ಮನವಿ ಮಾಡಿದ್ದೇವೆ: ಶಿವಣ್ಣ

    – ಡಿಸಿಎಂ ಅಶ್ವಥ್ ನಾರಾಯಣ್ ಜೊತೆ ಚರ್ಚೆ ನಡೆಸಿದ ಟಗರು

    ಬೆಂಗಳೂರು: ಕೊರೊನಾ ವೈರಸ್ ಕಾರಣದಿಂದ ಚಿತ್ರರಂಗಕ್ಕೆ ಬಹಳ ನಷ್ಟವಾಗಿದೆ. ಇದರ ಬಗ್ಗೆ ನಟ ಶಿವರಾಜ್‍ಕುಮಾರ್ ಅವರು ಡಿಸಿಎಂ ಅಶ್ವಥ್ ನಾರಾಯಣ್ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ.

    ಇಂದು ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಶ್ವಥ್ ನಾರಾಯಣ್ ಅವರ ನಿವಾಸಕ್ಕೆ ಬಂದ ಶಿವಣ್ಣ, ಚಿತ್ರರಂಗದ ಹಲವಾರು ತೊಂದರೆಗಳ ಬಗ್ಗೆ ಡಿಸಿಎಂ ಅವರ ಜೊತೆ ಚರ್ಚೆ ಮಾಡಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಚಿತ್ರರಂಗದ ಕೆಲಸ ಸ್ಥಗಿತವಾಗಿದೆ. ದೇಶದಲ್ಲಿ ಇದೇ ಪರಿಸ್ಥಿತಿ ಆಗಿದೆ. ಚಿತ್ರರಂಗಕ್ಕೆ ಇದರಿಂದ ಸಮಸ್ಯೆ ಆಗಿದೆ. ಈ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಹೇಳಿದರು.

    ಚಿತ್ರರಂಗದ ಎಲ್ಲ ವಿಭಾಗಕ್ಕೂ ಸಮಸ್ಯೆ ಆಗಿದೆ. ಇದನ್ನ ಸರ್ಕಾರದ ಗಮನಕ್ಕೆ ತಂದಿದ್ದೇವೆ. ಸೀರಿಯಲ್, ಡ್ರಾಮಾ, ಫಿಲ್ಮ್ ಎಲ್ಲರಿಗೂ ಸಮಸ್ಯೆ ಆಗಿದೆ. ಸಬ್ಸಿಡಿ, ಚಿತ್ರೀಕರಣಕ್ಕೆ ಅವಕಾಶ ಸೇರಿದಂತೆ ಎಲ್ಲಾದರ ಬಗ್ಗೆ ಚರ್ಚೆ ಮಾಡಿದ್ದೇವೆ. ಇವತ್ತು ಡಿಸಿಎಂ ಭೇಟಿಯಾಗಿ ಸಮಸ್ಯೆ ಹೇಳಿಕೊಂಡಿದ್ದೇವೆ. ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಶಾಶ್ವತ ಪರಿಹಾರಕ್ಕೆ ಮನವಿ ಮಾಡಿದ್ದೇವೆ. ಡಿಸಿಎಂ ಜೊತೆ ರಾಯರವಾರ ಗುರುವಾರ ಮಾತಾಡಿ ಖುಷಿಯಾಗಿದೆ ಎಂದು ಶಿವಣ್ಣ ತಿಳಿಸಿದ್ದಾರೆ.

    ಅಮೆಜಾನ್ ನಿಂದ ನಮಗೆ ಹೊಡೆತ ಏನಿಲ್ಲ. ಅದರಿಂದಲೂ ಹಣ ಬರುತ್ತಿದೆ. ಡಬ್ಬಿಂಗ್ ಸಮಸ್ಯೆ ಅಲ್ಲ. ಕನ್ನಡ ಚಿತ್ರ ಎಲ್ಲ ಕಡೆ ಗೆಲ್ಲುತ್ತಿದೆ. ನೆಟ್ ಫ್ಲಿಕ್ಸ್, ಅಮೆಜಾನ್‍ನಿಂದ ನಿರ್ಮಾಪಕರಕರಿಗೆ ಸಹಕಾರ ಆಗುತ್ತಿದೆ. ಆದರೆ ಥೀಯೇಟರ್ ಕೊಡಲು ಆಗುವುದಿಲ್ಲ. ಈ ಬಗ್ಗೆ ನಾವು ಗಮನ ಹರಿಸಬೇಕು. ಚಿತ್ರ ಪ್ರದರ್ಶನಕ್ಕೆ ನಾವು ಬೇಡಿಕೆ ಇಟ್ಟಿಲ್ಲ. ಕೊರೊನಾ ಕಡಿಮೆ ಆದ ಮೇಲೆ ಎಲ್ಲವೂ ಪ್ರಾರಂಭ ಆಗುತ್ತೆ. ಚಿತ್ರರಂಗದ ಸಮಸ್ಯೆಗೆ ಪರಿಹಾರ ಕೊಡುವಂತೆ ಮನವಿ ಮಾಡಿದ್ದೇವೆ. ಪ್ಯಾಕೇಜ್ ಅನ್ನೋದಕ್ಕಿಂತ ಸಮಸ್ಯೆ ಪರಿಹಾರ ಆಗಬೇಕು. ಈ ನಿಟ್ಟಿನಲ್ಲಿ ಮನವಿ ಮಾಡಿದ್ದೇವೆ ಎಂದು ಶಿವಣ್ಣ ಹೇಳಿದ್ದಾರೆ.

  • ಸಂಕಷ್ಟದಲ್ಲಿ ಕನ್ನಡ ಚಿತ್ರರಂಗ – ಶಿವಣ್ಣ ಮನೆಯಲ್ಲಿ ಇಂದು ಸಭೆ

    ಸಂಕಷ್ಟದಲ್ಲಿ ಕನ್ನಡ ಚಿತ್ರರಂಗ – ಶಿವಣ್ಣ ಮನೆಯಲ್ಲಿ ಇಂದು ಸಭೆ

    ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಸ್ಯಾಂಡಲ್‍ವುಡ್‍ನ ಕಾರ್ಮಿಕರ ಬಗ್ಗೆ ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಮನೆಯಲ್ಲಿ ಸಭೆ ನಡೆಯಲಿದೆ.

    ಶಿವಣ್ಣನ ಮನೆಯಲ್ಲೇ ಸಭೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಸ್ಯಾಂಡಲ್‍ವುಡ್‍ನ ಸಮಸ್ಯೆಗಳ ಕುರಿತು ಚರ್ಚಿಸಲಾಗುತ್ತಿದೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಅದರ ಸಂಸ್ಥೆಗಳು ಸಭೆಯಲ್ಲಿ ಭಾಗಿಯಾಗಲಿವೆ. ಇಂದು ಮಧ್ಯಾಹ್ನ ಸುಮಾರು 12:30ಕ್ಕೆ ನಾಗವಾರದ ಶಿವರಾಜ್ ಕುಮಾರ್ ಮನೆಯಲ್ಲಿ ಮಹತ್ವದ ಸಭೆ ನಡೆಯಲಿದೆ.

    ಕೊರೊನಾದಿಂದ ಕಳೆದ ನಾಲ್ಕು ತಿಂಗಳಿಂದ ಚಿತ್ರರಂಗ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಇತ್ತ ಸರ್ಕಾರ ಎಲ್ಲಾ ವರ್ಗಕ್ಕೂ ಪ್ಯಾಕೇಜ್ ಘೋಷಿಸಿದೆ. ಆದರೆ ಚಿತ್ರರಂಗಕ್ಕೆ ಯಾವುದೇ ಪ್ಯಾಕೇಜ್ ಫೋಷಣೆ ಮಾಡಿಲ್ಲ. ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದರ ಬಗ್ಗೆ ಅಸಮಾಧಾನ ಇದೆ. ಹೀಗಾಗಿ ಸಭೆಯಲ್ಲಿ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

    ಶಿವಣ್ಣನ ಮನೆಯಲ್ಲಿ ಸಭೆ ನಡೆದ ನಂತರ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸರ್ಕಾರದ ಮುಂದೆ ತಮ್ಮ ಬೇಡಿಕೆಯನ್ನಿಡುವ ಸಾಧ್ಯತೆ ಇದೆ. ಸಭೆಯಲ್ಲಿ ಕಲಾವಿದರು, ತಂತ್ರಜ್ಞರು, ನಿರ್ಮಾಪಕರು, ಚಿತ್ರಮಂದಿರದ ಮಾಲೀಕರು ಮತ್ತು ವಾಣಿಜ್ಯ ಮಂಡಳಿಯ ಅಧ್ಯಕ್ಷರು ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

  • ಹಿರಿಯ ನಟರೊಬ್ಬರ ಜೀವ ಕಾಪಾಡಿದ ಪ್ರಕಾಶ್ ರಾಜ್

    ಹಿರಿಯ ನಟರೊಬ್ಬರ ಜೀವ ಕಾಪಾಡಿದ ಪ್ರಕಾಶ್ ರಾಜ್

    ಹೈದರಾಬಾದ್: ಪಂಚ ಭಾಷಾ ನಟ ಪ್ರಕಾಶ್ ರಾಜ್ ತಮ್ಮ ಅದ್ಭುತವಾದ ಅಭಿನಯ ಮಾತ್ರವಲ್ಲ ಸಾಮಾಜಿಕ ಕಳಕಳಿ, ಬರವಣಿಗೆ, ಮಾತುಗಾರಿಕೆಯಿಂದಲೂ ಖ್ಯಾತಿ ಗಳಿಸಿದವರು. ಆದರೆ ಇತ್ತೀಚೆಗೆ ಅವರು ಮಾಡಿದ ಸಹಾಯದಿಂದ ಒಬ್ಬರು ಹಿರಿಯ ನಟರ ಜೀವ ಉಳಿದಿದೆ.

    ಕೇವಲ ಚಿತ್ರರಂಗ ಮಾತ್ರವಲ್ಲದೇ ರಾಜಕೀಯದಲ್ಲೂ ಆಸಕ್ತಿಯುಳ್ಳ ಪ್ರಕಾಶ್ ರಾಜ್ ಚುನಾವಣೆಗೂ ಸ್ಪರ್ಧಿಸಿದ್ದರು. ಅಷ್ಟೇ ಅಲ್ಲದೆ ಕಲಾವಿದರ ಅಭಿವೃದ್ಧಿ, ಭದ್ರತೆ ಕುರಿತು ಕೂಡ ಪ್ರಕಾಶ್ ರಾಜ್ ಅವರಿಗೆ ಕಾಳಜಿ ಹೆಚ್ಚಾಗಿದ್ದು, ಇದೇ ಕಾಳಜಿಯಿಂದ ಇಂದು ಹಿರಿಯ ನಟರೊಬ್ಬರ ಜೀವ ಉಳಿದಿದೆ. ಈ ಬಗ್ಗೆ ತೆಲುಗು ನಟ ರಾಜ ರವೀಂದ್ರ ಅವರು ಪ್ರಕಾಶ್ ರಾಜ್ ಅವರ ಒಳ್ಳೆತನದ ಬಗ್ಗೆ ಸಂದರ್ಶನವೊಂದರಲ್ಲಿ ಬಿಚ್ಚಿಟ್ಟಿದ್ದಾರೆ.

    ಆತ್ಮಹತ್ಯೆ ನಿರ್ಣಯ ಮಾಡಿದ್ದ ತೆಲುಗು ಚಿತ್ರರಂಗದ ಹಿರಿಯ ನಟರೊಬ್ಬರ ಜೀವವನ್ನ ಪ್ರಕಾಶ್ ರಾಜ್ ಹೇಗೆ ಉಳಿಸಿದರು ಅನ್ನೋದನ್ನ ರಾಜ ರವೀಂದ್ರ ವಿವರಿಸಿದ್ದಾರೆ. ಹಿರಿಯ ನಟ ಸುಮಾರು 50 ಲಕ್ಷ ಸಾಲ ಮಾಡಿಕೊಡ್ಡಿದ್ದರು. ಸಾಲ ಮರುಪಾವತಿ ಮಾಡಲಾಗದೆ ಸಾಲದ ಸುಳಿಯಲ್ಲಿ ಸಿಲುಕಿ ಒದ್ದಾಡಿದ್ದರು. ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದುಬಿಟ್ಟಿದ್ದರು. ಆದರೆ ಈ ವಿಷಯ ತಿಳಿದ ಪ್ರಕಾಶ್ ರಾಜ್ ಅವರು ಅವರಿಗೆ ಹಣ ಸಹಾಯ ಮಾಡಿ ನೆರವಾಗಿದ್ದಾರೆ. ಒಂದು ಜೀವ ಉಳಿಸಿದ್ದಾರೆ ಎಂದು ತಿಳಿಸಿದ್ದಾರೆ.

    ಹಿರಿಯ ನಟನ ಕಷ್ಟದ ಬಗ್ಗೆ ತಿಳಿದ ತಕ್ಷಣ ಪ್ರಕಾಶ್ ಅವರು ನನಗೆ ಕರೆ ಮಾಡಿ, ಆ ಹಿರಿಯ ನಟರನ್ನು ಕರೆತರುವಂತೆ ಹೇಳಿದರು. ಪ್ರಕಾಶ್ ಅವರ ಬಳಿ ಹಿರಿಯ ನಟರನ್ನು ಕರೆದುಕೊಂಡು ಹೋದಾಗ ಕಷ್ಟವನ್ನೆಲ್ಲಾ ಕೇಳಿ ಅವರಿಗೆ 50 ಲಕ್ಷ ರೂ. ಹಣ ಸಹಾಯ ಮಾಡಿದರು. ಜೊತೆಗೆ ಅವರಿಗೆ ಧೈರ್ಯ ತುಂಬಿ ನಿಮ್ಮ ಕಷ್ಟಕ್ಕೆ ನಾನು ಸಹಾಯ ಮಾಡುತ್ತೇನೆ ಎಂದು ಹೇಳಿ ಕಳುಹಿಸಿದರು ಎಂದು ರಾಜ ರವೀಂದ್ರ ಅವರು ಹೇಳಿದ್ದಾರೆ.

    ಪ್ರಕಾಶ್ ರಾಜ್ ಅವರು ನೀಡಿದ ಹಣದಿಂದ ತಮ್ಮ ಸಾಲವನ್ನು ತೀರಿಸಿಕೊಂಡ ಹಿರಿಯ ನಟ ಈಗ ಆರಾಮಾಗಿದ್ದಾರೆ. ಆದರೆ ಇಷ್ಟು ದಿನವಾದರೂ ಕೊಟ್ಟ ಹಣವನ್ನು ಮಾತ್ರ ಪ್ರಕಾಶ್ ಅವರು ಹಿಂಪಡೆದಿಲ್ಲ ಎಂದು ರಾಜ ರವೀಂದ್ರ ಅವರು ಹೇಳಿದರು. ಪ್ರಕಾಶ್ ರಾಜ್ ತಮ್ಮ ಸಿಟ್ಟಿನ ವರ್ತನೆಯಿಂದ ಕೆಲ ಬಾರಿ ತೆಲುಗು ಸಿನಿರಂಗದಿಂದ ಬಹಿಷ್ಕಾರ ಅನುಭವಿಸಿದ್ದಾರೆ. ಆದರೆ ಆ ಸಿಟ್ಟಿನ ಸ್ವಭಾವದ ಮನಸ್ಸಿನಲ್ಲೂ ಪ್ರೀತಿ, ಇತರರಿಗೆ ಸಹಾಯ ಮಾಡುವ ಗುಣ ಇರೋದು ನಿಜಕ್ಕೂ ಮೆಚ್ಚಬೇಕಾದ ಸಂಗತಿ.

  • ಚಿತ್ರರಂಗದಲ್ಲಿ 15 ವರ್ಷ ಪೂರೈಸಿದ ಅನುಷ್ಕಾ ಶೆಟ್ಟಿ

    ಚಿತ್ರರಂಗದಲ್ಲಿ 15 ವರ್ಷ ಪೂರೈಸಿದ ಅನುಷ್ಕಾ ಶೆಟ್ಟಿ

    ಹೈದರಾಬಾದ್: ಬಾಹುಬಲಿ ಬೆಡಗಿ, ಸ್ವೀಟಿ ಅನುಷ್ಕಾ ಶೆಟ್ಟಿ ಅವರು ಚಿತ್ರರಂಗದಲ್ಲಿ 15 ವರ್ಷಗಳನ್ನು ಪೂರೈಸಿದ್ದಾರೆ. 2005ರಲ್ಲಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಅನುಷ್ಕಾ ಈಗಲೂ ಬಹುಬೇಡಿಕೆಯ ನಟಿಯಾಗಿ ತಮ್ಮ ಸಿನಿ ಪಯಣ ಮುಂದುವರಿಸುತ್ತಿದ್ದಾರೆ.

    ಇತ್ತೀಚೆಗೆ ಅನುಷ್ಕಾ ಅವರು ಸಿನಿಮಾ ರಂಗದಲ್ಲಿ 15 ವರ್ಷ ಪೂರೈಸಿದ ಸಂಭ್ರಮವನ್ನು ಆಚರಿಸಲು ಅದ್ದೂರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಎಸ್.ಎಸ್ ರಾಜಮೌಳಿ, ಪುರಿ ಜಗನ್ನಾಥ್, ಸುರೇಶ್ ಬಾಬು, ನಟಿ ಮತ್ತು ನಿರ್ಮಾಪಕಿ ಚಾರ್ಮಿ ಕೌರ್ ಸೇರಿದಂತೆ ಸಾಕಷ್ಟು ಗಣ್ಯರು ಭಾಗಿಯಾಗಿ, ಅನುಷ್ಕಾಗೆ ಶುಭಕೋರಿದ್ದರು. ಈ ವೇಳೆ ಅನುಷ್ಕಾ ಸಂತಸ ವ್ಯಕ್ತಪಡಿಸಿದ್ದರು. ಅಭಿಮಾನಿಗಳು ಇಷ್ಟು ವರ್ಷಗಳಿಂದ ತಮ್ಮ ಮೇಲೆ ತೋರಿದ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದ ತಿಳಿಸಿದ್ದಾರೆ.

    ನನ್ನ 15 ವರ್ಷಗಳ ಈ ಕಠಿಣ ಶ್ರಮ ಉದ್ಯಮದ ಉಳಿದ ಕಲಾವಿದರಿಗೆ ಹೋಲಿಸಿದರೆ ಏನು ಅಲ್ಲ ಎಂಬುದು ನನ್ನ ಭಾವನೆ. ನಾನು ಅಭಿನಯಿಸಿರುವ ಪ್ರತಿಯೊಂದು ಸಿನಿಮಾವೂ, ನಿಶಬ್ದಂವರೆಗೂ ಸಿನಿಮಾವರೆಗೂ ನಾನು ಅನುಭವಿಸಿದ ಎಲ್ಲಾ ಪಾತ್ರ ಅನುಭವಗಳು ನನ್ನನ್ನು ಇಲ್ಲಿಯವರೆಗೆ ಕರೆತಂದಿದೆ ಎಂದು ಅನುಷ್ಕಾ ಖುಷಿಯನ್ನು ಹಂಚಿಕೊಂಡಿದ್ದಾರೆ.

    https://www.instagram.com/p/B9tXfJAnkFx/

    ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅನುಷ್ಕಾ “15 ವರ್ಷದ ನನ್ನ ಸಿನಿ ಪಯಣವನ್ನು ಸಂಭ್ರಮ #TeamASF (ಅನುಷ್ಕಾ ಶೆಟ್ಟಿ ಅಭಿಮಾನಿ ಬಳಗ) ಜೊತೆ ಆಚರಣೆ, ನೀವು ತೋರಿದ ಪ್ರೀತಿ ಮತ್ತು ಬೆಂಬಲಕ್ಕೆ ತುಂಬಾ ಧನ್ಯವಾದಗಳು ಎಂದು ಬರೆದುಕೊಂಡು, ಅಭಿಮಾನಿಗಳ ಜೊತೆ ತಾವು ಇರುವ ಫೋಟೋವನ್ನು ಅನುಷ್ಕಾ ಪೋಸ್ಟ್ ಮಾಡಿದ್ದಾರೆ.

    ಸದ್ಯ ಅನುಷ್ಕಾ ಶೆಟ್ಟಿ ‘ನಿಶಬ್ದಂ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಸದ್ಯದಲ್ಲೇ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಹೇಮಂತ್ ಮಧುಕರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಈಗಾಗಲೆ ಟೀಸರ್ ಮತ್ತು ಪೋಸ್ಟರ್‍ಗಳ ಮೂಲಕ ಸಿನಿಮಾ ಬಹಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಸ್ವೀಟಿ ಹೊಸ ಚಿತ್ರದಲ್ಲಿ ಹೇಗೆ ಮೋಡಿ ಮಾಡಲಿದ್ದಾರೆ ಎಂದು ನೋಡಲು ಅಭಿಮಾನಿಗಳು ಕಾತುರದಿಂದ ಕಾದ ಕುಳಿತಿದ್ದಾರೆ.

  • ಚಿತ್ರರಂಗದ ಕೆಲವರ ಬಗ್ಗೆ ಸಿದ್ದುಗೆ ದೂರು ಹೇಳಿದ ಟೆನ್ನಿಸ್ ಕೃಷ್ಣ

    ಚಿತ್ರರಂಗದ ಕೆಲವರ ಬಗ್ಗೆ ಸಿದ್ದುಗೆ ದೂರು ಹೇಳಿದ ಟೆನ್ನಿಸ್ ಕೃಷ್ಣ

    ಮೈಸೂರು: ಕನ್ನಡದ ಹಿರಿಯ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ, ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಚಿತ್ರರಂಗದಲ್ಲಿರುವ ಎರಡು ಬಣಗಳ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ.

    ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಟೆನ್ನಿಸ್ ಕೃಷ್ಣ ಚಿತ್ರರಂಗದ ಸದ್ಯದ ಪರಿಸ್ಥಿತಿಯನ್ನು ವಿವರಿಸಿದರು. ಸಿದ್ದು ಭೇಟಿ ಬಳಿಕ ಮಾತನಾಡಿದ ಅವರ, ಇಷ್ಟು ದಿನ ನಾನು ಸಿನಿಮಾದಲ್ಲಿ ಬ್ಯುಸಿಯಿದ್ದೆ. ಹಾಗಾಗಿ ಎಲ್ಲಿಯೂ ಕಾಣಿಸಿಕೊಳ್ಳುವುದಿಲ್ಲ. ಈಗ ಪಕ್ಕದ ರೋಡಿನಲ್ಲಿ ಶೂಟಿಂಗ್ ನಡೆಯುತ್ತಿತ್ತು. ಹಾಗಾಗಿ ನಾನು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ. ಎಷ್ಟೋ ಬಾರಿ ಅವರು ನನಗೆ ಕರೆದುಕೊಂಡು ಬಂದು ಊಟ ಮಾಡಿಸಿದ್ದಾರೆ ಎಂದರು.

    ಇದೇ ವೇಳೆ, ಈ ನಡುವೆ ಜನ ಸಿನಿಮಾ ನೋಡುವುದು ಕಡಿಮೆ ಆಗಿದೆ. ಒಳ್ಳೆಯ ಸಿನಿಮಾ ಬರುತ್ತೆ, ಜನರು ಅದನ್ನು ನೋಡಿ ಪ್ರೋತ್ಸಾಹಿಸಬೇಕು. ಇತ್ತೀಚಿನ ದಿನಗಳಲ್ಲಿ ಹಿರಿಯ ಕಲಾವಿದರಿಗೆ ಸಿನಿಮಾ ಅವಕಾಶಗಳು ಕಡಿಮೆ ಆಗುತ್ತಿದೆ. ಈ ಮೊದಲು ನಾನು ಮಾಧ್ಯಮಗಳಲ್ಲಿ ಈ ಬಗ್ಗೆ ಮಾತನಾಡಿದ್ದೆ. ಹಾಗಾಗಿ ಈಗ ಹಿರಿಯ ನಟರಿಗೆ ಅವಕಾಶ ಸಿಗುತ್ತಿದೆ. ತುಂಬಾ ಜನ ಈ ಬಗ್ಗೆ ಮಾತನಾಡಲು ಹೆದರುಕೊಳ್ಳುತ್ತಿದ್ದರು. ನಾನು ಎಷ್ಟು ದಿನ ಕಾಯಲಿ ಎಂದು ಮಾತನಾಡಿದೆ, ಮಾತನಾಡಿದಕ್ಕೆ ಅವಕಾಶ ಸಿಕ್ತು ಎಂದರು.

    ನನಗೆ ಈಗ ಅನ್ನ ಇದೆ. ನಾನು ಈಗಲೂ ಉತ್ತರ ಕರ್ನಾಟಕಕ್ಕೆ ಹೋಗಿ ನಾಟಕದಲ್ಲಿ ಪಾತ್ರ ಮಾಡಿದ್ರೆ, 35 ಅಡಿ ಕಟೌಟ್ ಹಾಕುತ್ತಾರೆ. ನಾಟಕದಲ್ಲಿ ಪಾತ್ರ ಮಾಡಿದರೆ ನನಗೆ ಅನ್ನ ಸಿಗುತ್ತೆ. ಆದರೆ ಅಭಿಮಾನಿಗಳು ನೀವು ಯಾವಾಗ ಸಿನಿಮಾ ಮಾಡುತ್ತೀರಾ ಎಂದು ಕೇಳುತ್ತಿದ್ದಾರೆ. ಚಿತ್ರರಂಗದಲ್ಲಿ ಪ್ರತ್ಯೇಕ ಗುಂಪೊಂದು ಇದನ್ನು ನಿಯಂತ್ರಿಸುತ್ತಿತ್ತು. ಈಗ ಆ ಗುಂಪು ಒಡೆದು ಹೋಗಿದೆ. ಹಾಗಾಗಿ ನಮಗೆ ಅವಕಾಶಗಳು ಸಿಗುತ್ತಿದೆ ಎಂದು ಟೆನ್ನಿಸ್ ಕೃಷ್ಣ ಹೇಳಿದ್ದಾರೆ.

    ಅಲ್ಲದೆ ಸಿದ್ದರಾಮಯ್ಯ ಅವರ ಮಾತನ್ನು ಚಿತ್ರರಂಗದ ಹಲವರು ಕೇಳುತ್ತಾರೆ. ಹಾಗಾಗಿ ಸಿದ್ದರಾಮಯ್ಯ ಭೇಟಿಗೆ ಬಂದಿದ್ದೆ ಎಂದು ತಿಳಿಸಿದರು.

  • ಚಿತ್ರರಂಗಕ್ಕೆ ಗುಡ್ ಬೈ ಹೇಳಲು ಸಮಂತಾ ನಿರ್ಧಾರ

    ಚಿತ್ರರಂಗಕ್ಕೆ ಗುಡ್ ಬೈ ಹೇಳಲು ಸಮಂತಾ ನಿರ್ಧಾರ

    ಹೈದರಾಬಾದ್: ಟಾಲಿವುಡ್ ನಟಿ ಸಮಂತಾ ಅಕ್ಕಿನೇನಿ ಎರಡು ವರ್ಷಗಳ ನಂತರ ಚಿತ್ರರಂಗಕ್ಕೆ ಗುಡ್ ಬೈ ಹೇಳಲು ಈಗಲೇ ನಿರ್ಧಾರ ತೆಗೆದುಕೊಂಡಿದ್ದಾರೆ.

    ಇತ್ತೀಚೆಗೆ ಸಮಂತಾ ತಮ್ಮ ‘ಜಾನು’ ಚಿತ್ರದ ಪ್ರಮೋಶನ್‍ನಲ್ಲಿ ಬ್ಯುಸಿಯಾಗಿದ್ದರು. ಈ ವೇಳೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನಾನು ಇನ್ನು ಎರಡು ಅಥವಾ ಮೂರು ವರ್ಷಗಳ ಕಾಲ ಚಿತ್ರದಲ್ಲಿ ನಟಿಸುತ್ತೇನೆ. ಅದಾದ ಬಳಿಕ ಚಿತ್ರರಂಗಕ್ಕೆ ಗುಡ್‍ಬೈ ಹೇಳುತ್ತೇನೆ ಎಂದು ಹೇಳಿದ್ದಾರೆ.

    ನಟರಿಗೆ ಹೋಲಿಸಿದರೆ ನಟಿಯರ ವೃತ್ತಿಜೀವನದ ಅವಧಿ ಸಾಮಾನ್ಯವಾಗಿ ಕಡಿಮೆ ಇರುತ್ತದೆ. ನನಗೆ ಮದುವೆಯಾಗಿದ್ದು, ನಾನು ಈಗ ನನ್ನ ಕುಟುಂಬದ ಕಡೆ ಗಮನ ಕೊಡಬೇಕಿದೆ. ಹಾಗಾಗಿ ಇನ್ನು ಎರಡು ಅಥವಾ ಮೂರು ವರ್ಷಗಳ ಕಾಲ ಚಿತ್ರಗಳಲ್ಲಿ ನಟಿಸುತ್ತೇನೆ. ಈ ಎರಡು ವರ್ಷದಲ್ಲಿ ನನ್ನ ಜೀವನದಲ್ಲಿ ಯಾವಾಗಲೂ ನೆನಪಾಗುವ ಸಿನಿಮಾವೊಂದನ್ನು ಮಾಡಬೇಕಿದೆ ಎಂದು ತಿಳಿಸಿದ್ದರು.

    ಫೆಬ್ರವರಿ 7ರಂದು ಅಂದರೆ ಇಂದು ಜಾನು ಚಿತ್ರ ಬಿಡುಗಡೆ ಆಗಿದ್ದು, ಸಮಂತಾಗೆ ನಾಯಕನಾಗಿ ಶರ್ವಾನಂದ್ ನಟಿಸಿದ್ದಾರೆ. ತಮಿಳಿನ ’96’ ಚಿತ್ರವನ್ನು ತೆಲುಗಿನಲ್ಲಿ ರಿಮೇಕ್ ಮಾಡಲಾಗಿದೆ. ಈ ಚಿತ್ರವನ್ನು ಸಿ. ಪ್ರೇಮ್ ಕುಮಾರ್ ನಿರ್ದೇಶಿಸಿದ್ದು, ದಿಲ್ ರಾಜು ನಿರ್ಮಿಸಿದ್ದಾರೆ. ಜಾನು ಚಿತ್ರ ಹೊರತುಪಡಿಸಿದರೆ ಸಮಂತಾ ‘ದಿ ಫ್ಯಾಮಿಲಿ ಮ್ಯಾನ್’ ಎಂಬ ವೆಬ್ ಸೀರಿಸ್‍ನಲ್ಲಿ ನಟಿಸುತ್ತಿದ್ದಾರೆ.

    ಸಮಂತಾ ಅವರು 2017, ಅಕ್ಟೋಬರ್ ತಿಂಗಳಲ್ಲಿ ನಟ ನಾಗಚೈತನ್ಯ ಅವರ ಜೊತೆ ಗೋವಾದಲ್ಲಿ ಡೆಸ್ಟಿನೇಶನ್ ವೆಡ್ಡಿಂಗ್ ಆಗಿದ್ದರು. ಮೊದಲು ಇಬ್ಬರು ಹಿಂದೂ ಸಂಪ್ರದಾಯದಂತೆ ಮದುವೆಯಾಗಿ ನಂತರ ಕ್ರೈಸ್ತ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

  • ಪ್ರೈವೇಟ್  ಫೋಟೋ ಲೀಕ್ – ಮೋದಿಗೆ ಬೆದರಿಕೆ ಹಾಕಿದ್ದ ಗಾಯಕಿ ಚಿತ್ರರಂಗ ಬಿಡಲು ನಿರ್ಧಾರ

    ಪ್ರೈವೇಟ್ ಫೋಟೋ ಲೀಕ್ – ಮೋದಿಗೆ ಬೆದರಿಕೆ ಹಾಕಿದ್ದ ಗಾಯಕಿ ಚಿತ್ರರಂಗ ಬಿಡಲು ನಿರ್ಧಾರ

    ಇಸ್ಲಾಮಾಬಾದ್: ಪಾಕಿಸ್ತಾನ ಗಾಯಕಿ ರಬಿ ಫಿರ್ಜಾದಾ ಪ್ರೈವೇಟ್ ಫೋಟೋ ಲೀಕ್ ಆಗುತ್ತಿದ್ದಂತೆ ಚಿತ್ರರಂಗ ಬಿಡಲು ನಿರ್ಧರಿಸಿದ್ದೇನೆ ಎಂದು ಸೋಮವಾರ ಟ್ವೀಟ್ ಮಾಡಿದ್ದಾಳೆ.

    ರಬಿ ಪಿರ್ಜಾದಾ ತಮ್ಮ ಟ್ವಿಟ್ಟರಿನಲ್ಲಿ, “ನಾನು ರಬಿ ಫಿರ್ಜಾದಾ ಶೋಗಳನ್ನು ತ್ಯಜಿಸುತ್ತಿದ್ದೇನೆ. ಅಲ್ಲಾ ನನ್ನ ಎಲ್ಲಾ ಪಾಪಗಳನ್ನು ಕ್ಷಮಿಸಲಿ ಮತ್ತು ನನ್ನ ಪರವಾಗಿ ಜನರನ್ನು ನಿಲ್ಲುವಂತೆ ಮಾಡಲಿ” ಎಂದು ಟ್ವೀಟ್ ಮಾಡಿದ್ದಾಳೆ.

    ಕಳೆದ ವಾರ ಸಾಮಾಜಿಕ ಜಾಲತಾಣಗಳಲ್ಲಿ ರಬಿಯ ಪ್ರೈವೇಟ್ ಫೋಟೋಗಳು ಲೀಕ್ ಆಗಿತ್ತು. ಫೋಟೋ ಲೀಕ್ ಆಗಿ ವೈರಲ್ ಆಗುತ್ತಿದ್ದಂತೆ ಜನರು ಆಕೆಯನ್ನು ಟ್ರೋಲ್ ಮಾಡಲು ಶುರು ಮಾಡಿದ್ದರು. ವರದಿಗಳ ಪ್ರಕಾರ, ಈ ಬಗ್ಗೆ ರಬಿ ಫೆಡೆರಲ್ ಇನ್‌ವೆಸ್ಟಿಗೇಶನ್ ಏಜೆನ್ಸಿಗೆ ದೂರು ನೀಡಿದ್ದಾಳೆ ಎನ್ನಲಾಗಿದೆ.

    ಸೆಪ್ಟೆಂಬರ್ ತಿಂಗಳಿನಲ್ಲಿ ರಬಿ ಲಹೋರ್‌ನಲ್ಲಿರುವ ತನ್ನ ಬ್ಯೂಟಿ ಪಾರ್ಲರ್ ನಲ್ಲಿ ಹೆಬ್ಬಾವು ಮತ್ತು ಮೊಸಳೆ ಜೊತೆ ವಿಡಿಯೋ ಮಾಡಿ ಮೋದಿಗೆ ನಿಂದಿಸಿದ್ದಳು. ಆ ವಿಡಿಯೋ ವೈರಲ್ ಆಗುತ್ತಿದ್ದಂತೆ ರಬಿ ಫಿರ್ಜಾದಾವಿರುದ್ಧ ದೂರು ದಾಖಲಾಗಿತ್ತು.

    ಹೆಬ್ಬಾವು ಮತ್ತು ಮೊಸಳೆಯನ್ನು ಹಿಡಿದು ವಿಡಿಯೋ ಮಾಡಿದ್ದ ರಬಿ, ನಾನು ಕಾಶ್ಮೀರಿ ಮಹಿಳೆ, ಭಾರತಕ್ಕಾಗಿ ನಾವು ಹಾವುಗಳೊಂದಿಗೆ ಸಿದ್ಧವಾಗಿದ್ದೇವೆ. ಈ ಉಡುಗೊರೆಗಳು ನಿಜಕ್ಕೂ ಮೋದಿಯವರಿಗೆ. ನೀವು ಕಾಶ್ಮೀರಿಗಳಿಗೆ ತೊಂದರೆ ನೀಡುತ್ತಿದ್ದೀರಿ. ಆದ್ದರಿಂದ ನಾನು ನಿಮಗಾಗಿ ಈ ವಿಶೇಷ ಉಡುಗೊರೆಯನ್ನು ಸಿದ್ಧಪಡಿಸಿದ್ದೇನೆ. ನೀವು ನರಕದಲ್ಲಿ ಸಾಯಲು ಸಿದ್ಧರಾಗಿ. ನನ್ನ ಸ್ನೇಹಿತರು ನರಕದಲ್ಲಿ ನಿಮ್ಮ ಜೊತೆ ಹಬ್ಬವನ್ನು ಮಾಡುತ್ತಾರೆ ಎಂದು ಹೇಳಿ ನಾಲಿಗೆ ಹರಿಬಿಟ್ಟಿದ್ದಳು.

    ಇದಾದ ತನ್ನ ಟ್ವಿಟ್ಟರ್ ಖಾತೆಯಲ್ಲಿ ಆತ್ಮಹತ್ಯೆ ಬಾಂಬರ್ ರೀತಿಯಲ್ಲಿ ಉಡುಪು ಧರಿಸಿರುವ ಫಿರ್ಜಾದಾ, `ಮೋದಿ ಹಿಟ್ಲರ್’ ಹಾಗೂ `ಕಾಶ್ಮೀರದ ಭೇಟಿ’ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಳು.

    ಈ ಫೋಟೋ ಹಂಚಿಕೊಳ್ಳುತ್ತಿದಂತೆ ಹಲವು ನೆಟ್ಟಿಗರು ಗಾಯಕಿಯನ್ನು ಟ್ರೋಲ್ ಮಾಡಿ ಟೀಕೆ ಮಾಡಲು ಆರಂಭಿಸಿದ್ದರು. ಅಲ್ಲದೇ ಪಾಕಿಸ್ತಾನದ ಹಲವು ಮಂದಿ ಗಾಯಕಿ ವಿರುದ್ಧವೇ ಕಿಡಿಕಾರಿದ್ದು, ಗಾಯಕಿಯ ಈ ನಡೆ ಪಾಕಿಸ್ತಾನದ ವಿರುದ್ಧ ವಿಶ್ವ ಸಮುದಾಯಕ್ಕೆ ಋಣಾತ್ಮಕ ಭಾವನೆ ಮೂಡಲು ಕಾರಣವಾಗುತ್ತದೆ ಎಂದು ದೂರಿದ್ದಾರೆ.

    ಇತ್ತ ಭಾರತೀಯ ನೆಟ್ಟಿಗರು ಗಾಯಕಿಯ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿ ಖುಷಿ ವ್ಯಕ್ತಪಡಿಸಿದ್ದರು. ಅಲ್ಲದೇ ಪೋಸ್ಟನ್ನು ಮತ್ತಷ್ಟು ವೈರಲ್ ಮಾಡಿ ಗಾಯಕಿಯ ಕಾಲೆಳೆಯುತ್ತಿದ್ದರು. ವಾವ್..! ನೀವು ಈ ಉಡುಗೆಯಲ್ಲಿ ಅದ್ಭುತವಾಗಿ ಕಾಣುತ್ತಿದ್ದು, ಪಾಕಿಸ್ತಾನಿ ಸಾಂಪ್ರದಾಯಕ ಉಡುಪು ಧರಿಸಿದಕ್ಕೆ ಧನ್ಯವಾದ. ಪಾಕ್ ರಾಷ್ಟ್ರೀಯ ಉಡುಗೆಯಲ್ಲಿ ಬಹಳ ಸುಂದರವಾಗಿ ಕಾಣುತ್ತಿದ್ದೀರಿ ಎಂದು ಕಾಲೆಳೆದಿದ್ದರು.

  • ಚಿತ್ರರಂಗ ಖಾನ್‍ಗಳದ್ದಲ್ಲ- ಮೋದಿ ವಿರುದ್ಧ ಜಗ್ಗೇಶ್ ಗರಂ

    ಚಿತ್ರರಂಗ ಖಾನ್‍ಗಳದ್ದಲ್ಲ- ಮೋದಿ ವಿರುದ್ಧ ಜಗ್ಗೇಶ್ ಗರಂ

    ಬೆಂಗಳೂರು: ದಕ್ಷಿಣ ಭಾರತದ ಚಿತ್ರರಂಗವನ್ನು ಕಡೆಗಣಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನವರಸ ನಾಯಕ ಜಗ್ಗೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಇತ್ತೀಚೆಗೆ ಮೋದಿ ಅವರು ಮಹಾತ್ಮ ಗಾಂಧಿ ಅವರ 150ನೇ ಜನ್ಮ ದಿನದ ಅಂಗವಾಗಿ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ಚಿತ್ರರಂಗದವರ ಸಹಕಾರ ಬೇಕು ಎಂದು ಬಾಲಿವುಡ್ ಮಂದಿಯ ಜೊತೆ ಸಂವಾದ ಕಾರ್ಯಕ್ರಮ ನಡೆಸಿದ್ದರು. ಈಗ ಈ ವಿಚಾರದಲ್ಲಿ ದಕ್ಷಿಣ ಭಾರತದ ಚಿತ್ರರಂಗವನ್ನು ಕಡೆಗಣಿಸಿದ ಮೋದಿ ವಿರುದ್ಧ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

    ಈ ವಿಚಾರದಲ್ಲಿ ಇಂದು ಬೆಳಗ್ಗೆ ಎರಡು ಟ್ವೀಟ್ ಮಾಡಿರುವ ಜಗ್ಗೇಶ್, ಕನ್ನಡಿಗರು ಇಂದು ಬಹುತೇಕ ಪರಭಾಷೆಗಳ ಸ್ಟಾರ್ ಗಳಿಗೆ ಚಪ್ಪಾಳೆ ಹೊಡೆದ ತಪ್ಪಿಗೆ ನಾವು ಕನ್ನಡಿಗರು ದಾರಿತಪ್ಪಿದವರಂತೆ ಆಗಿದ್ದೇವೆ. ನರೇಂದ್ರ ಮೋದಿ ಜೀ ಉತ್ತರ ಭಾರತದ ನಟ-ನಟಿಯರಿಗಿಂತ ನಾವು ಯಾವುದರಲ್ಲೂ ಕಮ್ಮಿ ಇಲ್ಲ. ಕಲಾರಂಗಕ್ಕೆ ಶಾರೂಖ್, ಅಮೀರ್ ಒಡೆಯರಲ್ಲ. ನಮ್ಮ ಕನ್ನಡದ ಕಲಿಗಳು ಅನೇಕರಿದ್ದಾರೆ. ನಿಮ್ಮ ಭಾವನೆ ಗೌರವಿಸುತ್ತೇನೆ ಜೈಹಿಂದ್ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನು ಓದಿ: ಗಾಂಧೀಜಿ ಆದರ್ಶಗಳನ್ನು ಜನಪ್ರಿಯಗೊಳಿಸಲು ಬಾಲಿವುಡ್ ಮಂದಿಗೆ ಮೋದಿ ಮಣೆ

    ಇದರ ಜೊತೆಗೆ ಇನ್ನೊಂದು ಟ್ವೀಟ್ ಮಾಡಿರುವ ಅವರು, ಇಂದು ಕರ್ನಾಟಕದಲ್ಲಿ ಹೆಚ್ಚು ತೆರಿಗೆ ಸಂಗ್ರಹ ಕನ್ನಡದ ನೆಲ ಚಿತ್ರರಂಗದಿಂದ ನಟರಿಂದ ಆಗುತ್ತಿದೆ ನೆನಪಿಡಿ. ಈ ದೇಶದ ಚಿತ್ರರಂಗ ಬಹುಭಾಷಾ ಭಾವನೆಯಿಂದ ಉಳಿದಿದೆ ವಿನಃ ಹಿಂದಿ ಚಿತ್ರರಂಗದಿಂದ ಅಲ್ಲ. ರಾಷ್ಟ್ರಕ್ಕೆ ಈ ವಿಷಯ ಮನವರಿಕೆ ಮಾಡುವ ಕನ್ನಡ ಮನಸ್ಸುಗಳು ಇಲ್ಲವೆ ಎಂದು ಪ್ರಶ್ನಿಸಿದ್ದಾರೆ. ತುಂಬಾ ದುಃಖವಾಯಿತು ಖಾನ್ ಗಳಲ್ಲ ಚಿತ್ರರಂಗ ಎಂದು ಟ್ವೀಟ್ ಮಾಡಿದ್ದಾರೆ.

    https://www.instagram.com/p/B3z0Yy6FWV4/?utm_source=ig_embed&utm_campaign=dlfix

    ಕೇವಲ ಬಾಲಿವುಡ್ ನಟ-ನಟಿಯರ ಜೊತೆ ಸಂವಾದ ನಡೆಸಿದ್ದಕ್ಕೆ ಮೆಗಾಸ್ಟಾರ್ ಚಿರಂಜೀವಿ ಅವರ ಸೊಸೆ, ನಟ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ ಕೂಡ ಬೇಸರ ವ್ಯಕ್ತಪಡಿಸಿದ್ದರು. ”ಪ್ರೀತಿಯ ನರೇಂದ್ರ ಮೋದಿಜೀ ನಾವು ದಕ್ಷಿಣ ಭಾರತದವರು. ನಿಮ್ಮನ್ನು ನಾವು ಪ್ರಧಾನಿಯನ್ನಾಗಿ ಪಡೆದಿದ್ದಕ್ಕಾಗಿ ಹೆಮ್ಮೆ ಪಡುತ್ತೇವೆ. ಪ್ರಮುಖ ಮತ್ತು ಸಾಂಸ್ಕೃತಿಕ ವ್ಯಕ್ತಿಗಳು ಬರೀ ಹಿಂದಿ ಚಿತ್ರರಂಗಕ್ಕೆ ಮಾತ್ರ ಸೀಮಿತವೇ. ದಕ್ಷಿಣ ಭಾರತವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ. ಇಲ್ಲಿ ನನ್ನ ಭಾವನೆಗಳನ್ನು ಮಾತ್ರ ನೋವಿನಿಂದ ವ್ಯಕಪಡಿಸುತ್ತಿದ್ದೇನೆ. ಹೀಗಾಗಿ ನೀವು ನನ್ನ ಅಭಿಪ್ರಾಯವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳಲಿದ್ದೀರಿ ಎಂದು ಭಾವಿಸುತ್ತೇನೆ” ಎಂದು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದರು.

  • ನಾನು ಸಿಕ್ಕಾಪಟ್ಟೆ ಕುಡಿಯುತ್ತಿದ್ದೆ, ವಿಸ್ಕಿ ವ್ಯಸನಿಯಾಗಿದ್ದೆ: ಶ್ರುತಿ ಹಾಸನ್

    ನಾನು ಸಿಕ್ಕಾಪಟ್ಟೆ ಕುಡಿಯುತ್ತಿದ್ದೆ, ವಿಸ್ಕಿ ವ್ಯಸನಿಯಾಗಿದ್ದೆ: ಶ್ರುತಿ ಹಾಸನ್

    ಚೆನ್ನೈ: ಕಾಲಿವುಡ್ ನಟಿ ಶ್ರುತಿ ಹಾಸನ್ ಅವರು ಎರಡು ವರ್ಷ ಸಿಕ್ಕಾಪಟ್ಟೆ ಕುಡಿಯುತ್ತಿದ್ದೆ ಎಂಬ ಹೇಳಿಕೆ ನೀಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.

    ಶ್ರುತಿ ಹಾಸನ್ ಅವರಿಗೆ ಆರೋಗ್ಯ ಸರಿಯಿಲ್ಲ, ಹೀಗಾಗಿ ಅವರು ಚಿತ್ರರಂಗದಿಂದ ದೂರ ಉಳಿದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ಈ ಬಗ್ಗೆ ಮಾತನಾಡಿದ ಶ್ರುತಿ, “ನಾನು ಸಿಕ್ಕಾಪಟ್ಟೆ ಕುಡಿಯುತ್ತಿದ್ದೆ. ಹೀಗಾಗಿ ಆರೋಗ್ಯ ಕೈಕೊಟ್ಟಿತ್ತು” ಎಂದು ಸ್ಪಷ್ಟನೆ ನೀಡಿದ್ದಾರೆ. ಶ್ರುತಿ ಅವರ ಈ ಹೇಳಿಕೆ ಈಗ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ.

    ಟಾಲಿವುಡ್ ನಟಿ ಮಂಚು ಲಕ್ಷ್ಮಿ ಖಾಸಗಿ ವಾಹಿನಿಯಲ್ಲಿ ಕಾರ್ಯಕ್ರಮವೊಂದನ್ನು ನಡೆಸಿಕೊಡುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಶ್ರುತಿ ಭಾಗವಹಿಸಿ, “ನಾನು ವಿಸ್ಕಿ ಬಾಟಲಿಗೆ ವ್ಯಸನಿಯಾಗಿದ್ದೆ. ಎರಡು ವರ್ಷ ಸಿಕ್ಕಾಪಟ್ಟೆ ಕುಡಿಯುತ್ತಿದ್ದೆ. ಹೀಗಾಗಿ ನಾನು ಅನಾರೋಗ್ಯದಿಂದ ಬಳಲುತ್ತಿದ್ದೆ. ಆದರೆ ಈಗ ಎಲ್ಲವನ್ನು ನಿಲ್ಲಿಸಲು ನಿರ್ಧರಿಸಿದ್ದೇನೆ. ಜೊತೆಗೆ ನನ್ನ ಜೀವನದಲ್ಲಿ ಹೊಸ ಬದಲಾವಣೆಯಾಗಿದೆ” ಎಂದು ಹೇಳಿದ್ದಾರೆ.

    ನಾನು ಅನಾರೋಗ್ಯದಿಂದ ಬಳಲುತ್ತಿದ್ದದ್ದು ಯಾರಿಗೂ ತಿಳಿದಿಲ್ಲ. ಇದು ನನ್ನ ವೈಯಕ್ತಿಕ ವಿಷಯವಾಗಿದ್ದರಿಂದ ಎಂದು ನನ್ನ ಸ್ನೇಹಿತರಿಗೂ ಹೇಳಿಲ್ಲ. ಕೊನೆಗೆ ನಾನು ಚಿಕಿತ್ಸೆಗೆ ಪಡೆದು ಅನಾರೋಗ್ಯದಿಂದ ಚೇತರಿಸಿಕೊಳ್ಳಲು ತುಂಬಾ ಸಮಯ ಬೇಕಾಯಿತು. ಇದರಿಂದ ನಾನು ಸಿನಿಮಾಗಳಿಂದ ದೂರವಾದೆ. ಸದ್ಯಕ್ಕೆ ವೃತ್ತಿ ಬದುಕಿನ ಕಡೆಗೆ ದೃಷ್ಟಿ ಹರಿಸಿದ್ದೇನೆ ಎಂದು ಹೇಳಿದ್ದಾರೆ

    ಶ್ರುತಿ ಹಾಸನ್ ಕೊನೆಯದಾಗಿ `ಕಾಟಮರಾಯುಡು’ ಸಿನಿಮಾದಲ್ಲಿ ನಟಿಸಿದ್ದರು. ಈಗ ನಟ ರವಿತೇಜ ಸಿನಿಮಾ ಮೂಲಕ ರೀ-ಎಂಟ್ರಿ ಕೊಡುತ್ತಿದ್ದಾರೆ. ಇದೇ ವೇಳೆ ತಮ್ಮ ಗೆಳೆಯ ಮೈಕೇಲ್ ಕೋರ್ಸೆಲ್ ಜೊತೆಗಿನ ಸಂಬಂಧ ಮುರಿದುಬಿದ್ದ ಬಗ್ಗೆಯೂ ಮಾತನಾಡಿದ್ದಾರೆ.

  • ಹಿಂದೂ ನಟಿಯರು ಝೈರಾಳಿಂದ ಸ್ಫೂರ್ತಿ ಪಡೆಯಬೇಕು: ಸ್ವಾಮಿ ಚಕ್ರಪಾಣಿ

    ಹಿಂದೂ ನಟಿಯರು ಝೈರಾಳಿಂದ ಸ್ಫೂರ್ತಿ ಪಡೆಯಬೇಕು: ಸ್ವಾಮಿ ಚಕ್ರಪಾಣಿ

    ಮುಂಬೈ: ಭಾನುವಾರವಷ್ಟೇ ಬಾಲಿವುಡ್ ದಂಗಲ್ ಬೆಡಗಿ ಝೈರಾ ವಾಸಿಂ ಚಿತ್ರರಂಗಕ್ಕೆ ವಿದಾಯ ಹೇಳಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅಖಿಲ ಭಾರತೀಯ ಹಿಂದೂ ಮಹಾಸಭಾದ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಅವರು ಝೈರಾ ಪರವಾಗಿ ಬ್ಯಾಟ್ ಬೀಸಿದ್ದು, ಹಿಂದೂ ನಟಿಯರು ಆಕೆಯಿಂದ ಸ್ಫೂರ್ತಿ ಪಡೆಯಲಿ ಎಂದು ತಿಳಿಸಿದ್ದಾರೆ.

    ನಾನು ಚಿತ್ರರಂಗದಲ್ಲಿ ಸಕ್ರಿಯವಾಗಿ ಇದ್ದರೆ ಅದೂ ನನ್ನ ಧರ್ಮಕ್ಕೆ ಮತ್ತು ಆದರ ನಿಯಮಗಳಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ನಟಿ ಝೈರಾ ಚಿತ್ರರಂಗದಿಂದ ದೂರ ಸರಿಯುತ್ತಿದ್ದೇನೆ ಎಂದು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಾಕಿಕೊಂಡಿದ್ದರು. ಈ ವಿಚಾರವಾಗಿ ಝೈರಾ ಅವರಿಗೆ ಸಪೋರ್ಟ್ ಮಾಡಿ ಟ್ವೀಟ್ ಮಾಡಿರುವ ಸ್ವಾಮಿ ಅವರು ಝೈರಾ ಅವರನ್ನು ನೋಡಿ ಹಿಂದೂ ಧರ್ಮದ ನಟಿಯರು ಕೂಡ ಸ್ಫೂರ್ತಿ ಪಡೆಯಬೇಕು ಎಂದು ಟ್ವೀಟ್ ಮಾಡಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಸ್ವಾಮಿ ಅವರು, “ನಟಿ ಝೈರಾ ಅವರು ಧರ್ಮದ ವಿಚಾರವಾಗಿ ಚಿತ್ರರಂಗದಿಂದ ಹಿಂದೆ ಸರಿಯುವ ನಿರ್ಧಾರ ಶ್ಲಾಘನೀಯ. ಇವರನ್ನು ನೋಡಿ ಹಿಂದೂ ನಟಿಯರು ಕೂಡ ಸ್ಫೂರ್ತಿ ಪಡೆಯಬೇಕು ಎಂದು ಟ್ವೀಟ್ ಮಾಡಿದ್ದಾರೆ. ನಟಿ ಝೈರಾ ಅವರು ತನ್ನ ಧಾರ್ಮಿಕ ನಂಬಿಕೆಗಳಿಗೆ ಚಿತ್ರರಂಗ ಅಡ್ಡಿಯಾಗುತ್ತಿದೆ ಎಂದು ನಟನಾ ಕ್ಷೇತ್ರ ತೊರೆಯುವುದಾಗಿ ಸ್ಪಷ್ಟಪಡಿಸಿದ್ದಾರೆ.

    https://www.instagram.com/p/BzUBXYrlsml/?utm_source=ig_embed

    ಝೈರಾ ಪೋಸ್ಟ್‍ನಲ್ಲಿ ಏನಿದೆ?
    5 ವರ್ಷದ ಮೊದಲು ನಾನು ಒಂದು ನಿರ್ಧಾರ ಮಾಡಿದೆ. ಆ ನಿರ್ಧಾರ ನನ್ನ ಜೀವನವನ್ನೇ ಬದಲಾಯಿಸಿದೆ. ನಾನು ಬಾಲಿವುಡ್‍ಗೆ ಹೆಜ್ಜೆ ಇಟ್ಟಾಗ ನನಗೆ ಪಾಪುಲ್ಯಾರಿಟಿಯ ರಸ್ತೆಯನ್ನು ತೆರೆಯಿತು. ನಿಧಾನವಾಗಿ ನಾನು ಯುವ ಜನತೆಗೆ ರೋಲ್ ಮಾಡಲ್ ಆಗಿ ಕಾಣಲಾರಂಭಿಸಿದೆ. ಬಾಲಿವುಡ್‍ಗೆ ಬಂದು 5 ವರ್ಷ ಆಗಿದೆ. ಆದರೆ ನನ್ನ ಕೆಲಸದಲ್ಲಿ ನನಗೆ ಖುಷಿಯಿಲ್ಲ ಎಂದು ಹೇಳಲು ಇಷ್ಟಪಡುತ್ತೇನೆ. ನಾನು ಇಲ್ಲಿ ಫಿಟ್ ಆಗಿದ್ದೇನೆ ಆದರೆ ನಾನು ಇಲ್ಲಿಯವಳಲ್ಲ. ನಟಿ ಆಗುವ ಕಾರಣದಿಂದ ನಾನು ನನ್ನ ಇಸ್ಲಾಂ ಧರ್ಮದಿಂದ ದೂರವಾಗುತ್ತಿದ್ದೇನೆ. ಹಾಗಾಗಿ ನಾನು ಚಿತ್ರರಂಗದಿಂದ ನನ್ನ ಸಂಬಂಧವನ್ನು ಮುರಿಯುತ್ತಿದ್ದೇನೆ. ನಾನು ಯೋಚಿಸಿಯೇ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.

    ಝೈರಾ ಕೇವಲ ಎರಡೇ ಚಿತ್ರದ ಮೂಲಕ ಬಾಲಿವುಡ್‍ನಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದರು. ಝೈರಾ ಮಿ. ಪರ್ಫೆಕ್ಟ್ ಎಂದೇ ಖ್ಯಾತರಾಗಿರುವ ನಟ ಅಮೀರ್ ಖಾನ್ ಜೊತೆ ದಂಗಲ್ ಎಂಬ ಚಿತ್ರದಲ್ಲಿ ಮಹಿಳಾ ಪೈಲ್ವಾನ್ ಗೀತಾ ಪೋಗಾಟ್‍ನ ಬಾಲ್ಯದ ಪಾತ್ರವನ್ನು ನಿರ್ವಹಿಸಿದ್ದರು. ಈ ಚಿತ್ರ 2016ರಲ್ಲಿ ಬಿಡುಗಡೆ ಆಗಿತ್ತು. ಹಾಗೂ ಸೀಕ್ರೆಟ್ ಸೂಪರ್ ಸ್ಟಾರ್ ಚಿತ್ರದಲ್ಲಿ ನಟಿಸಿದ್ದರು. ಈ ಎರಡು ಚಿತ್ರಗಳು ಬಾಕ್ಸ್ ಆಫೀಸ್‍ನಲ್ಲಿ ಸದ್ದು ಮಾಡಿದ್ದವು.