Tag: ಚಿತ್ರರಂಗ

  • ಬಾಲಿವುಡ್ ತೊರೆದ ದಂಗಲ್ ಬೆಡಗಿ

    ಬಾಲಿವುಡ್ ತೊರೆದ ದಂಗಲ್ ಬೆಡಗಿ

    ಮುಂಬೈ: ಬಾಲಿವುಡ್ ದಂಗಲ್ ಬೆಡಗಿ ಝೈರಾ ವಾಸಿಂ ಚಿತ್ರರಂಗ ತೊರೆಯುವುದಾಗಿ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

    ಝೈರಾ ಎರಡೇ ಚಿತ್ರದ ಮೂಲಕ ಬಾಲಿವುಡ್‍ನಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದರು. ಝೈರಾ ಮಿ. ಪರ್ಫೆಕ್ಟ್ ಎಂದೇ ಖ್ಯಾತರಾಗಿರುವ ನಟ ಅಮೀರ್ ಖಾನ್ ಜೊತೆ ದಂಗಲ್ ಹಾಗೂ ಸೀಕ್ರೆಟ್ ಸೂಪರ್ ಸ್ಟಾರ್ ಚಿತ್ರದಲ್ಲಿ ನಟಿಸಿದ್ದರು. ಈ ಎರಡು ಚಿತ್ರಗಳು ಬಾಕ್ಸ್ ಆಫೀಸ್‍ನಲ್ಲಿ ಸದ್ದು ಮಾಡಿತ್ತು. ಈಗ ಝೈರಾ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಬಾಲಿವುಡ್ ತೊರೆಯುವುದಾಗಿ ಪೋಸ್ಟ್ ಮಾಡಿದ್ದಾರೆ.

    ಪೋಸ್ಟ್ ನಲ್ಲಿ ಏನಿದೆ?
    5 ವರ್ಷದ ಮೊದಲು ನಾನು ಒಂದು ನಿರ್ಧಾರ ಮಾಡಿದೆ. ಆ ನಿರ್ಧಾರ ನನ್ನ ಜೀವನವನ್ನೇ ಬದಲಾಯಿಸಿದೆ. ನಾನು ಬಾಲಿವುಡ್‍ಗೆ ಹೆಜ್ಜೆ ಇಟ್ಟಾಗ ನನಗೆ ಪಾಪುಲ್ಯಾರಿಟಿಯ ರಸ್ತೆಯನ್ನು ತೆರೆಯಿತು. ನಿಧಾನವಾಗಿ ನಾನು ಯುವ ಜನತೆಗೆ ರೋಲ್ ಮಾಡಲ್ ಆಗಿ ಕಾಣಲಾರಂಭಿಸಿದೆ. ಬಾಲಿವುಡ್‍ಗೆ ಬಂದು 5 ವರ್ಷ ಆಗಿದೆ. ಆದರೆ ನನ್ನ ಕೆಲಸದಲ್ಲಿ ನನಗೆ ಖುಷಿಯಿಲ್ಲ ಎಂದು ಹೇಳಲು ಇಷ್ಟಪಡುತ್ತೇನೆ. ನಾನು ಇಲ್ಲಿ ಫಿಟ್ ಆಗಿದ್ದೇನೆ ಆದ್ರೆ ನಾನು ಇಲ್ಲಿಯವಳಲ್ಲ. ನಟಿ ಆಗುವ ಕಾರಣದಿಂದ ನಾನು ನನ್ನ ಇಸ್ಲಾಂ ಧರ್ಮದಿಂದ ದೂರವಾಗುತ್ತಿದ್ದೇನೆ. ಹಾಗಾಗಿ ನಾನು ಚಿತ್ರರಂಗದಿಂದ ನನ್ನ ಸಂಬಂಧವನ್ನು ಮುರಿಯುತ್ತಿದ್ದೇನೆ. ನಾನು ಯೋಚಿಸಿಯೇ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.

    ಝೈರಾ ದಂಗಲ್ ಚಿತ್ರದಲ್ಲಿ ಅಮೀರ್ ಖಾನ್ ಅವರ ಮಗಳ ಪಾತ್ರವನ್ನು ನಿರ್ವಹಿಸಿದ್ದರು. ಈ ಚಿತ್ರದಲ್ಲಿ ಝೈರಾ ಮಹಿಳಾ ಪೈಲ್ವಾನ್ ಗೀತಾ ಪೋಗಾಟ್‍ನ ಬಾಲ್ಯದ ಪಾತ್ರವನ್ನು ನಿರ್ವಹಿಸಿದ್ದರು. ಈ ಚಿತ್ರ 2016ರಲ್ಲಿ ಬಿಡುಗಡೆ ಆಗಿತ್ತು.

     

    View this post on Instagram

     

    A post shared by Zaira Wasim (@zairawasim_) on

  • ಮದ್ವೆಯಾಗಲು ಚಿತ್ರರಂಗ ಬಿಡುತ್ತಿದ್ದಾರಾ ಅನುಷ್ಕಾ ಶೆಟ್ಟಿ?

    ಮದ್ವೆಯಾಗಲು ಚಿತ್ರರಂಗ ಬಿಡುತ್ತಿದ್ದಾರಾ ಅನುಷ್ಕಾ ಶೆಟ್ಟಿ?

    ಹೈದರಾಬಾದ್: ಟಾಲಿವುಡ್ ನಟಿ ಅನುಷ್ಕಾ ಶೆಟ್ಟಿ ಮದುವೆಯಾಗಲು ಚಿತ್ರರಂಗದಿಂದ ದೂರ ಹೋಗುತ್ತಿದ್ದಾರೆ ಎಂಬ ಮಾತುಗಳು ತೆಲುಗು ಇಂಡಸ್ಟ್ರಿಯಲ್ಲಿ ಹರಿದಾಡುತ್ತಿದೆ.

    ಅನುಷ್ಕಾ ಶೆಟ್ಟಿ ಸಿನಿಮಾ ಬಿಡುಗಡೆಯಾಗಿ ಒಂದು ವರ್ಷ ಆಗಿದೆ. ಅಲ್ಲದೇ ಅನುಷ್ಕಾ ಈಗ ಯಾವುದೇ ಚಿತ್ರದ ಚಿತ್ರೀಕರಣಕ್ಕೆ ಹೋಗುತ್ತಿಲ್ಲ ಹಾಗೂ ಯಾವುದೇ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ‘ಬಾಹುಬಲಿ ದಿ ಕನ್‍ಕ್ಲೂಷನ್’ ಸಿನಿಮಾ ನಂತರ ಅನುಷ್ಕಾ ‘ಭಾಗಮತಿ’ ಚಿತ್ರದಲ್ಲಿ ನಟಿಸಿದ್ದರು. ಆದಾದ ಬಳಿಕ ಅವರ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ.

    ಅನುಷ್ಕಾ ಶೆಟ್ಟಿ ಕುಟುಂಬದವರು ತಮ್ಮ ಮಗಳಿಗೆ ಮದುವೆ ಮಾಡಿಸಲು ನಿರ್ಧರಿಸಿದ್ದಾರೆ. ಅನುಷ್ಕಾ ಅವರ ಕುಟುಂಬದವರು ಈಗಾಗಲೇ ಮಗಳಿಗೆ ಹುಡುಗವನ್ನು ಹುಡುಕುವ ತಯಾರಿ ನಡೆಸುತ್ತಿದ್ದಾರೆ. ಅಲ್ಲದೇ ಅನುಷ್ಕಾ ತಮ್ಮ ಕುಟುಂಬದ ಜೊತೆ ಕೇದಾರನಾಥ್‍ನಲ್ಲಿ ಕೆಲವು ಶಾಸ್ತ್ರಗಳನ್ನು ಮಾಡಿದ್ದಾರೆ ಎನ್ನುವ ಮಾತುಗಳು ಈಗ ಕೇಳಿ ಬರುತ್ತಿದೆ.

    ಬಾಹುಬಲಿ ಖ್ಯಾತಿಯ ಪ್ರಭಾಸ್ ಜೊತೆ ಅನುಷ್ಕಾ ಪ್ರೀತಿಯಲ್ಲಿದ್ದಾರೆ ಎನ್ನುವ ಗಾಸಿಪ್ ಸುದ್ದಿಗಳು ಕೆಲ ವರ್ಷಗಳಿಂದ ಕೇಳಿ ಬರುತ್ತಿವೆ. ಅಲ್ಲದೇ ಅವರಿಬ್ಬರ ನಡವಳಿಕೆಯೂ ಸಹ ಅಭಿಮಾನಿಗಳಿಗೆ ಕುತೂಹಲ ಕೆರಳಿಸಿದೆ. ಆದರೆ ಇದಕ್ಕೆ ಸ್ಪಷ್ಟನೆ ನೀಡಿದ್ದ ಅವರು, ನಾವು ಒಳ್ಳೆಯ ಸ್ನೇಹಿತರು ಎಂದು ಅಭಿಮಾನಿಗಳಲ್ಲಿ ಹೇಳಿದ್ದರು.

    ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ನಡೆಸಿಕೊಡುವ `ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಪ್ರಭಾಸ್ ಅತಿಥಿಯಾಗಿ ಭಾಗವಹಿಸಿದ್ದರು. ಪ್ರಭಾಸ್ ಜೊತೆ ಬಾಹುಬಲಿ ಚಿತ್ರದ ನಿರ್ದೇಶಕ ರಾಜಮೌಳಿ ಹಾಗೂ ನಟ ರಾಣಾ ದಗ್ಗುಬಾಟಿ ಕೂಡ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ನಿರೂಪಕ ಕರಣ್ ಜೋಹರ್ ಅನುಷ್ಕಾ ಬಗ್ಗೆ ಮಾತನಾಡಿದ್ದರು. ಈ ವೇಳೆ ಪ್ರಭಾಸ್, “ನಾನು ಮತ್ತು ಅನುಷ್ಕಾ ಒಳ್ಳೆಯ ಗೆಳೆಯ-ಗೆಳತಿ ಅಷ್ಟೇ. ಆಕೆ ಜೊತೆ ನಾನು ಯಾವತ್ತೂ ಡೇಟಿಂಗ್ ಮಾಡಿಲ್ಲ. ಬಾಹುಬಲಿಯಲ್ಲಿ ಆಕೆ ನನಗೆ ತಾಯಿಯಾಗಿದ್ದಾಳೆ, ಪ್ರೇಯಸಿಯೂ ಆಗಿದ್ದಾಳೆ. ಈಗ ನೀವೇ ಹೇಳಿ ತಾಯಿಯನ್ನು ಯಾರಾದರೂ ಮದುವೆ ಆಗೋಕೆ ಸಾಧ್ಯನಾ? ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • `ಕುರುಕ್ಷೇತ್ರ’ ಸಿನಿಮಾ ಬಗ್ಗೆ ಮನಸ್ಸು ಬಿಚ್ಚಿ ಮಾತನಾಡಿದ ಚಾಲೆಂಜಿಂಗ್ ಸ್ಟಾರ್!

    `ಕುರುಕ್ಷೇತ್ರ’ ಸಿನಿಮಾ ಬಗ್ಗೆ ಮನಸ್ಸು ಬಿಚ್ಚಿ ಮಾತನಾಡಿದ ಚಾಲೆಂಜಿಂಗ್ ಸ್ಟಾರ್!

    ಬೆಂಗಳೂರು: ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ `ಮುನಿರತ್ನ ಕುರುಕ್ಷೇತ್ರ’ ಚಿತ್ರ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರದಲ್ಲಿ ದೊಡ್ಡ ತಾರಾಗಣವಿದ್ದು, ಜನರಲ್ಲಿ ಬಾರಿ ನಿರೀಕ್ಷೆ ಹುಟ್ಟಿಸಿದೆ.

    ಈ ಕುರಿತು ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಈ ಚಿತ್ರದಲ್ಲಿ ನಾನು ಯಾವುದೇ ಪರಕಾಯಪ್ರವೇಶ ಮಾಡಲಿಲ್ಲ. ಕ್ಯಾಮರಾ ಆನ್ ಮಾಡಿದ ತಕ್ಷಣ ಅಭಿನಯಿಸಿ ಕಟ್ ಎಂದ ತಕ್ಷಣ ಪಾತ್ರದಿಂದ ಹೊರಬರುತ್ತೇನೆ. ನಾನು ಒಬ್ಬ ರಂಗಭೂಮಿ ಕಲಾವಿದನಾಗಿದ್ದು, ನಿನಾಸಂ ಮಾಡಿದ್ದೇನೆ ಹಾಗೂ ಬೇಸಿಕ್ ಕಲಿತಿದ್ದೇನೆ. ಈಗಿನ ಕಾಲದ ಮಕ್ಕಳಿಗೆ ಕುರುಕ್ಷೇತ್ರ, ರಾಮಾಯಣ, ಮಹಾಭಾರತದ ಬಗ್ಗೆ ತಿಳಿದಿಲ್ಲ. ಅಷ್ಟೇ ಅಲ್ಲದೆ ನನ್ನ ಮಗನಿಗೂ ಇದರ ಬಗ್ಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

    ನಮ್ಮ ಕಾಲದಲ್ಲಿ ಮಹಾಭಾರತ, ರಾಮಾಯಣದ ಬಗ್ಗೆ ಓದಿದ್ದೇವೆ, ಕೇಳಿದ್ದೇವೆ. ಆದರೆ ಈಗಿನ ಕಾಲದ ಮಕ್ಕಳಿಗೆ ಬೇರೆ ರೀತಿಯ ಶಿಕ್ಷಣವಿದ್ದು, ಅವರಿಗೆ ಇದರ ಬಗ್ಗೆ ತಿಳಿದಿರುವುದಿಲ್ಲ. ನಮ್ಮ ಕಾಲದಲ್ಲಿ ಟಿಪ್ಪು ಸುಲ್ತಾನ್ ಯಾರು? ಅವರ ಕಥೆ ಏನು? ಎಂಬುದು ನಾವು ಕೇಳಿದ್ದೇವೆ ಹಾಗೂ ಟಿವಿಯಲ್ಲಿ ನೋಡಿದ್ದೇವೆ. ಆದರೆ ಈಗಿನ ಕಾಲದ ಮಕ್ಕಳಿಗೆ ಚೋಟಾ ಭೀಮ್ ಹಾಗೂ ಪೋಕಿಮಾನ್ ಕಥೆಗಳು ಮಾತ್ರ ಅವರಿಗೆ ಗೊತ್ತಿರೋದು. ಆ ಮಕ್ಕಳಿಗಾಗಿ ನಾವು ಈ ಸಿನಿಮಾ ಮಾಡುತ್ತಿದ್ದೇವೆ ಎಂದು ದರ್ಶನ್ ಈಗಿನ ಕಾಲದ ಮಕ್ಕಳ ಬಗ್ಗೆ ಹೇಳಿದ್ದಾರೆ.

    ಬೇರೆ ಚಿತ್ರರಂಗದವರು ಇಂಥ ಸಿನಿಮಾಗಳಿಗೆ ನಾವು 5-6 ವರ್ಷ ತೆಗೆದುಕೊಂಡಿದ್ದೇವೆ ಎಂದು ಹೇಳುತ್ತಾರೆ. ಆದರೆ ನಾವು ಮೇ ತಿಂಗಳಿನಿಂದ ಜನವರಿ 5 ರವರೆಗೂ ಕುರುಕ್ಷೇತ್ರ ಎಂಬ ದೊಡ್ಡ ಸಿನಿಮಾದ ಚಿತ್ರೀಕರಣ ಮಾಡಿದ್ದೇವೆ. ಈ ಸಿನಿಮಾನೇ ದೊಡ್ಡದು ಹಾಗೂ ಈ ಸಿನಿಮಾ ಮುಂದೆ ಯಾರೂ ದೊಡ್ಡವರಿಲ್ಲ. ಈ ಸಿನಿಮಾ 3ಡಿಯಲ್ಲಿದ್ದು, 3ಡಿನೇ ಈ ಸಿನಿಮಾದ ಟ್ರೀಟ್ ಹಾಗೂ 3ಡಿ ಎಫೆಕ್ಟ್ ನಲ್ಲಿ ಇದು ಮೊದಲ ಪೌರಾಣಿಕಾ ಸಿನಿಮಾ ಆಗಿದೆ ಅಂದ್ರು.

    ಇನ್ನು ಕಾಸ್ಟೂಮ್ಸ್ ನ ಬಗ್ಗೆ ಮಾತನಾಡಿದ ದರ್ಶನ್, ನಾನು 50 ರಿಂದ 60 ಕೆ.ಜಿ ತೂಕದ ಕಾಸ್ಟೂಮ್ಸ್ ಹಾಕುತ್ತಿದ್ದೇನೆ. ಇದರಿಂದ ನನ್ನ ತೂಕ ಹೆಚ್ಚಾಗುತ್ತಿದ್ದು, ಮತ್ತೆ ಕಡಿಮೆಯಾಗುತ್ತಿದೆ. ಕುರುಕ್ಷೇತ್ರ ಒಂದು ಒಳ್ಳೆಯ ಸಿನಿಮಾ ಆಗುತ್ತದೆ ಹಾಗೂ ಈಗಿನ ಕಾಲದ ಮಕ್ಕಳಿಗೆ ಮಹಾಭಾರತದ ಬಗ್ಗೆ ಅದರಲ್ಲೂ ಕುರುಕ್ಷೇತ್ರದ ಬಗ್ಗೆ ತಿಳಿದುಕೊಳ್ಳುತ್ತಾರೆ ಎಂದು ದುರ್ಯೋಧನ ಪಾತ್ರ ನಿರ್ವಹಿಸುತ್ತಿರೋ ದರ್ಶನ್ ತಿಳಿಸಿದ್ದಾರೆ.

    ಚಿತ್ರದಲ್ಲಿ ರೆಬಲ್ ಸ್ಟಾರ್ ಅಂಬರೀಶ್, ಕ್ರೇಜಿಸ್ಟಾರ್ ರವಿಚಂದ್ರನ್, ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ, ಡೈಲಾಗ್ ಕಿಂಗ್ ಸಾಯಿಕುಮಾರ್, ಶಶಿಕುಮಾರ್, ಆರ್ಮುಗಂ ಖ್ಯಾತಿಯ ರವಿಶಂಕರ್, ಶ್ರೀನಿವಾಸ್ ಮೂರ್ತಿ, ಸೋನು ಸೂದ್ ಹಾಗೂ ಪ್ರಣಯ ರಾಜ ಶ್ರೀನಾಥ್ ಕಾಣಿಸಿಕೊಳ್ಳಲಿದ್ದಾರೆ. ನೀರ್ ದೋಸೆ ಬೆಡಗಿ ಹರಿಪ್ರಿಯಾ, ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ಪವಿತ್ರಾ ಲೋಕೇಶ್ ಕೂಡ ಈ `ಕುರುಕ್ಷೇತ್ರ’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

    https://youtu.be/LZgauZ2OOaM

    https://www.youtube.com/watch?v=K_B9Pw7SXRM


     

  • ಮಹದಾಯಿಗಾಗಿ ಮೈಸೂರು ಬ್ಯಾಂಕ್ ಸರ್ಕಲ್‍ನಲ್ಲಿಂದು ವಾಟಾಳ್ ನಾಗರಾಜ್ ಕರಾಳ ದಿನಾಚರಣೆ

    ಮಹದಾಯಿಗಾಗಿ ಮೈಸೂರು ಬ್ಯಾಂಕ್ ಸರ್ಕಲ್‍ನಲ್ಲಿಂದು ವಾಟಾಳ್ ನಾಗರಾಜ್ ಕರಾಳ ದಿನಾಚರಣೆ

    ಬೆಂಗಳೂರು: ಮಹದಾಯಿಗಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮುಂದಾಳತ್ವದಲ್ಲಿ ಇಂದು ಮೈಸೂರು ಬ್ಯಾಂಕ್ ಸರ್ಕಲ್‍ನಲ್ಲಿ ಕರಾಳ ದಿನಾಚರಣೆ ನಡೆಯಲಿದೆ.

    ಇದರಲ್ಲಿ ಚಿತ್ರರಂಗದವರು ಕೂಡ ಪಾಲ್ಗೊಳ್ಳಲಿದ್ದಾರೆ. ಫಿಲಂ ಚೇಂಬರ್ ಅಧ್ಯಕ್ಷ ಸಾ.ರಾ. ಗೋವಿಂದು ಈ ಹೋರಾಟಕ್ಕೆ ಸಾಥ್ ಕೊಡಲಿದ್ದಾರೆ. ಮಹದಾಯಿ ವಿಚಾರದಲ್ಲಿ ರಾಜಕೀಯ ಖಂಡಿಸಿ ಈ ಹೋರಾಟ ನಡೆಯಲಿದೆ.

    ಮಹದಾಯಿ ವಿಚಾರದಲ್ಲಿ ಯಡಿಯೂರಪ್ಪ ಸೇರಿದಂತೆ ರಾಜಕಾರಣಿಗಳ ವಚನ ಭ್ರಷ್ಟತೆ ಖಂಡಿಸಿ ಬುಧವಾರ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯ್ತು. ಅದರಲ್ಲೂ ಬೆಂಗಳೂರಿನಲ್ಲಿ ರಾಜ್ಯಪಾಲರಿಗೆ ಮನವಿ ನೀಡೋಕೆ ಹೋದರೆ ಅಲ್ಲಿ ಅವಮಾನ ಆಯ್ತು. ಒಂದು ಕಡೆ ರಾಜಕಾರಣಿಗಳಿಂದ ಭರವಸೆ ಸಿಗಲಿಲ್ಲ. ಮತ್ತೊಂದು ಕಡೆ ರಾಜ್ಯದ ಪ್ರಥಮ ಪ್ರಜೆ ಭೇಟಿಗೆ ಅವಕಾಶ ಕೊಡಲಿಲ್ಲ.

    ಇದರಿಂದ ನಿರಾಶಿತರಾದ ಮಹದಾಯಿ ಹೋರಾಟಗಾರರು ರಾತ್ರಿಯೇ ತಮ್ಮ ಊರುಗಳತ್ತ ತೆರಳಿದ್ದು, ಕೆಲವರು ಈಗಲೂ ತೆರಳುತ್ತಿದ್ದಾರೆ. ಐದು ದಿನಗಳಿಂದ ಕೊರೆವ ಚಳಿಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸಿದ್ದ ರೈತರು ನಿರಾಸೆಯಿಂದಲೇ ಹೋಗುತ್ತಿದ್ದಾರೆ.

  • ಬೆಳೆಯಲು ಪ್ರತಿಭೆ ಬಳಸಿ, ವಾಮಮಾರ್ಗ ಬೇಡ: ಚೇತನ್‍ಗೆ ಜಗ್ಗೇಶ್ ಟಾಂಗ್

    ಬೆಳೆಯಲು ಪ್ರತಿಭೆ ಬಳಸಿ, ವಾಮಮಾರ್ಗ ಬೇಡ: ಚೇತನ್‍ಗೆ ಜಗ್ಗೇಶ್ ಟಾಂಗ್

    ಬೆಂಗಳೂರು: ನಗರದ ಮಲ್ಲೇಶ್ವರಂ ಬಿಜೆಪಿ ಕಚೇರಿ ಮುಂಭಾಗ ನಡೆಯುತ್ತಿರುವ ಮಹದಾಯಿ ಹೋರಾಟಗಾರರ ಪ್ರತಿಭಟನೆಗೆ ಬೆಂಬಲ ನೀಡಿ ಚಿತ್ರರಂಗದ ನಟರು ಹೋರಾಟಕ್ಕೆ ಕೊನೆಯವರೆಗೂ ಬೆಂಬಲ ನೀಡಬೇಕು ಎಂದು ಹೇಳಿದ್ದ ನಟ ಚೇತನ್ ಅವರ ಹೇಳಿಕೆಗೆ ನಟ ಜಗ್ಗೇಶ್ ಟ್ವೀಟ್ ಮಾಡಿ ಟಾಂಗ್ ನೀಡಿದ್ದಾರೆ.

    ಯಾಕೆ ಪಾಪ ಈತ ಹೀಗೆ. ಪ್ರತಿ ನಡೆಯು ತಮ್ಮ ಉದ್ದೇಶ ಜಾಣ ಪ್ರೇಕ್ಷಕರಿಗೆ ಅರಿವಾಗಿದೆ. ನಮ್ಮತನ ವೃದ್ಧಿಸಿಕೊಳ್ಳುವ ಜಾತ್ರೆಗಿಂತ ಹೃದಯ ದೇವರು ಜನಮೆಚ್ಚುವಂತೆ ಮಾಡುವ ಕಾರ್ಯ ಶ್ರೇಷ್ಠ. ಬಣ್ಣ ಹಚ್ಚಿ ಹುಲಿಯಾದ ನರಿ ಕಥೆ ಆಗಬಾರದು ಬದುಕು. ಅನೇಕ ಹಿರಿಯ ನಟರು ಬಾಳಿ ಒಳ್ಳೆ ಸಂದೇಶ ಕೊಟ್ಟ ರಂಗ ನಮ್ಮದು. ಬೆಳೆಯಲು ಪ್ರತಿಭೆ ಬಳಸಿ ವಾಮಮಾರ್ಗ ಬೇಡ ಎಂದು ಸಲಹೆ ನೀಡಿ ಟ್ವೀಟ್ ಮಾಡಿದ್ದಾರೆ.

    ಇಂದು ನಟ ಚೇತನ್ ಅವರು ಮಹದಾಯಿ ಹೋರಾಟಗಾರರ ಪ್ರತಿಭಟನೆಗೆ ಬೆಂಬಲ ನೀಡಿ ಮಾತನಾಡಿದ ವೇಳೆ ಮಹದಾಯಿ ಹೋರಾಟಕ್ಕೆ ಚಿತ್ರರಂಗದ ಹಿರಿಯರು ಕುಳಿತು ಏನು ಮಾಡಬಹುದು ಎಂಬುದರ ಬಗ್ಗೆ ಚರ್ಚೆ ಮಾಡಬೇಕು. ಎಷ್ಟೋ ವರ್ಷದ ಹಿಂದೆ ಉತ್ತರ ಕರ್ನಾಟಕ್ಕೆ ಹೋಗಿ ಹೋರಾಟದಲ್ಲಿ ಭಾಗಿಯಾಗಿದ್ದರು. ಅದು ಒಳ್ಳೆಯ ಕೆಲಸವೇ. ಆದರೆ ಹೋರಾಟ ಅಂದರೆ ಒಂದು ಕಡೆ ಹೋಗಿ ಕೈ ಆಡಿಸಿ ಮೆರವಣಿಗೆ ಮಾಡುವುದಲ್ಲ. ಹೋರಾಟ ಅಂದರೆ ಅದು ಬಗೆ ಹರಿಯುವವರೆಗೆ ಜನರ ಜೊತೆ ಇರಬೇಕು ಎಂದು ಹೇಳಿದ್ದರು. ಇದನ್ನೂ ಓದಿ:  ಮೂರು ಪಕ್ಷಗಳಿಗೆ ರಾಜಕೀಯ ಬೇಕಿದೆ, ರೈತರ ಬಗ್ಗೆ ಮೋದಿಗೆ ಕಾಳಜಿ ಇಲ್ಲ: ಚೇತನ್

    “ಲೇ ತಮ್ಮ ನೀನು ಕಲಾವಿದನೊ ಅಥವಾ..? ಹುಬ್ಬಳ್ಳಿಗೆ ಕನ್ನಡ ಚಿತ್ರರಂಗದವರು ಬರಿ ಕೈ ಬಿಸಿ ಮೆರವಣಿಗೆ ಮಾಡಿ ಚಪ್ಪಾಳೆ ಗಿಟ್ಟಿಸಿಕೊಳ್ಳುವುದಕ್ಕೆ ಹೋಗಿಲ್ಲಪ್ಪ. ರೈತರ ಪ್ರತಿಯೊಂದು ಕಷ್ಟ ದುಃಖಗಳಲ್ಲಿ ನಾವುಗಳು ಯಾವಾಗಲು ನಿಮ್ಮ ಜೊತೆ ಸದಾ ಇರುತ್ತವೆ ಎಂದು ಧೈರ್ಯ ತುಂಬಲು ಹೋಗಿದ್ದು ಸ್ವಾಮಿ” ಎಂದು ಮೇಘರಾಜ್24 ಎಂಬವರು ಟ್ವೀಟ್ ಮಾಡಿದ್ದರು. ಈ ಟ್ವೀಟನ್ನು ಮರು ಟ್ವೀಟ್ ಮಾಡಿ ಜಗ್ಗೇಶ್ ಈ ಮೇಲಿನಂತೆ ತಮ್ಮ ಅಭಿಪ್ರಾಯವನ್ನು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಹದಾಯಿಗಾಗಿ ಉತ್ತರ ಕರ್ನಾಟಕ ಬಂದ್: ಎಲ್ಲಿ ಬಂದ್? ಏನ್ ಇರುತ್ತೆ? ಏನ್ ಇರಲ್ಲ?

    https://www.youtube.com/watch?v=hzIeun7Lix8

     

     

  • ಟಾಪ್ ಸ್ಟಾರ್ ಗಳಿಗೆ ಸಂಭಾವನೆ ಕೊಡ್ತಿದ್ದ ನಿರ್ಮಾಪಕ ಈಗ ಫಿಲಂ ಚೇಂಬರ್ ಮೊರೆ ಹೋದ್ರು!

    ಟಾಪ್ ಸ್ಟಾರ್ ಗಳಿಗೆ ಸಂಭಾವನೆ ಕೊಡ್ತಿದ್ದ ನಿರ್ಮಾಪಕ ಈಗ ಫಿಲಂ ಚೇಂಬರ್ ಮೊರೆ ಹೋದ್ರು!

    ಬೆಂಗಳೂರು: ಕನ್ನಡದ ಮೊದಲ ಸಿನಿಮಾಸ್ಕೋಪ್ ಚಿತ್ರಕ್ಕೆ ಬಂಡವಾಳ ಹಾಕಿ ಚಿತ್ರರಂಗಕ್ಕಾಗಿ ದುಡಿದ ನಿರ್ಮಾಪಕನ ಕರುಣಾಜನಕ ಕಥೆ ಇದು. `ರವಿವರ್ಮನ ಕುಂಚದ ಕಲೆ ಬಲೆ ಸಕಾರವೋ’ ಈ ಹಾಡು ಯಾರಿಗೆ ಗೊತ್ತಿಲ್ಲ ಹೇಳಿ.

    ಸೊಸೆ ತಂದ ಸೌಭಾಗ್ಯ ಸಿನಿಮಾದ ಹೆಸರಾಂತ ನಿರ್ಮಾಪಕ ಎಸ್.ಡಿ ಅಂಕಲಗಿ ಅವರ ಈಗಿನ ಪರಿಸ್ಥಿತಿ ನೋಡಿದರೆ ಮನಕಲಕುತ್ತೆ. ಡಾ. ವಿಷ್ಣುವರ್ಧನ್, ಶಂಕರ್ ನಾಗ್, ಅನಂತನಾಗ್, ಶ್ರೀನಾಥ್, ಮಂಜುಳ, ಜಯಂತಿ, ವಜ್ರಮುನಿಯಂತ ಟಾಪ್ ಸ್ಟಾರ್‍ಗಳಿಗೆ ಸಂಭಾವನೆ ಕೊಟ್ಟ ಕೈಯಲ್ಲಿ ಈಗ ಬಿಡಿಗಾಸಿಲ್ಲ.

    8ಕ್ಕೂ ಹೆಚ್ಚು ಸೂಪರ್ ಹಿಟ್ ಸಂಸಾರಿಕ ಸಿನಿಮಾಗಳನ್ನ ಕೊಟ್ಟ ಅಂಕಲಗಿ ಇಂದು ಕಾಲು ಮುರಿದುಕೊಂಡು ಮೂಲೆ ಗುಂಪಾಗಿದ್ದಾರೆ. ಆಸ್ಪತ್ರೆ ಖರ್ಚಿಗೆ ಕಾಸಿಲ್ಲ, ಮಗ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಫಿಲಂ ಚೇಂಬರ್ ಮತ್ತು ನಿರ್ಮಾಪಕರ ಸಂಘದಿಂದ ಬಂದ ಸಹಾಯಧನ ಆಸ್ಪತ್ರೆ ಖರ್ಚಿಗೆ ಖಾಲಿಯಾಗಿದೆ. ಈಗ ನಿರ್ಮಾಪಕ ಎಸ್.ಡಿ ಅಂಕಲಗಿ ಕನ್ನಡ ಚಲನಚಿತ್ರ ಅಕಾಡೆಮಿಯ ಸಹಾಯಾಸ್ತದ ನಿರೀಕ್ಷೆಯಲ್ಲಿದ್ದಾರೆ.

  • 40ನೇ ಹುಟ್ಟುಹಬ್ಬ ಆಚರಿಸಿಕೊಂಡ ಜಗ್ಗುದಾದ: ಅಭಿಮಾನಿಗಳಿಂದ ಹಾಡು ಗಿಫ್ಟ್

    40ನೇ ಹುಟ್ಟುಹಬ್ಬ ಆಚರಿಸಿಕೊಂಡ ಜಗ್ಗುದಾದ: ಅಭಿಮಾನಿಗಳಿಂದ ಹಾಡು ಗಿಫ್ಟ್

    ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಾಕ್ಸಾಫೀಸ್ ಸುಲ್ತಾನ್ ಅಂತಾನೇ ಖ್ಯಾತಿ ಹೊಂದಿರೋ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್‍ಗೆ ಇಂದು 40ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಬೆಂಗಳೂರಿನ ರಾಜರಾಜೇಶ್ವರಿ ನಗರದ ತಮ್ಮ ನಿವಾಸದಲ್ಲಿ ಮಧ್ಯರಾತ್ರಿ ತಮ್ಮ ಅಭಿಮಾನಿಗಳ ಸಮುಖದಲ್ಲಿ ಕೇಕ್ ಕತ್ತಿರುಸುವ ಮೂಲಕ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡರು.

    ತಡ ರಾತ್ರಿ 2 ಗಂಟೆಯತನಕ ನೆಚ್ಚಿನ ನಟನಿಗೆ ಶುಭಾಶಯ ಕೊರಲು ಕೇಕ್ ಹಿಡಿದು ಬಾರಿ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಮನೆ ಹತ್ತಿರ ಧಾವಿಸಿ ಶುಭಾಶಯ ಕೋರಿದರು. ಅಲ್ಲದೇ ಪಟಾಕಿ ಸಿಡಿಸಿ ಸಂಭ್ರಮಿಸಿದರು. ತಡ ರಾತ್ರಿಯವರೆಗೂ ಅಭಿಮಾನಿಗಳು ಬಂದು ಶುಭಾಶಯ ಕೋರಿದ್ದೇ ನಾನು ಇಷ್ಟು ವರ್ಷ ಸಂಪಾದಿಸಿದ್ದು ಅಂತ ನಟ ದರ್ಶನ್ ಹೇಳಿದರು. ದರ್ಶನ್ ಮನೆಯ ಹತ್ತಿರ ಬರೀ ಬೆಂಗಳೂರಿನವರಷ್ಟೇ ಅಲ್ಲದೇ ಮೈಸೂರು ಶಿವಮೊಗ್ಗ ಯಾದಗಿರಿ ದಾವಣಗೆರೆ ಹಾಸನ ಜಿಲ್ಲೆಗಳಿಂದಲೂ ದರ್ಶನ್ಗೆ ಶುಭಾಶಯ ಕೊರಲು ಅವರ ಮನೆ ಹತ್ತಿರ ಬಂದಿದ್ದರು ಎನ್ನಲಾಗಿದೆ.

    ಹಾಡು ಉಡುಗೊರೆ: ಹುಟ್ಟುಹಬ್ಬದ ಸಂಭ್ರಮದಲ್ಲಿರೋ ಚಾಲೆಜಿಂಗ್ ಸ್ಟಾರ್ ದರ್ಶನ್ ಅವ್ರಿಗೆ ಹಾಡೊಂದು ಉಡುಗೊರೆಯಾಗಿ ನೀಡಿದ್ದಾರೆ. ಸಂಗೀತ ನಿರ್ದೇಶಕ ಸುಪ್ರೀತ್ ಗಾಂಧಾರ ಅಂಡ್ ಟೀಮ್ ಈ ಹಾಡು ರೆಡಿ ಮಾಡಿದ್ದಾರೆ. ಹಾಡಿಗೆ ಶ್ರೀರವಿ ಸಾಹಿತ್ಯ ಬರೆದಿದ್ದು, ಸಂಜೀತ್ ಹೆಗಡೆ ಕಂಠದಾನ ಮಾಡಿದ್ದಾರೆ. ದರ್ಶನ್ 40 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರೋ ಅಭಿಮಾನಿಗಳಿಗೆ ಈ ಹಾಡು ಮತ್ತಷ್ಟು ಕಿಕ್ ಕೊಡಲಿದೆ. ದರ್ಶನ್ ಅಭಿನಯಿಸಿರೋ ಬಹುತೇಕ ಸಿನಿಮಾದ ಟೈಟಲ್‍ಗಳನ್ನ ಹಾಡಿನಲ್ಲಿ ಬಳಸಲಾಗಿದ್ದು ಲಹರಿ ಮ್ಯೂಸಿಕ್ಸ್ ಸಂಸ್ಥೆ ಈ ಹಾಡನ್ನ ಮಾರುಕಟ್ಟೆಗೆ ತಂದಿದೆ.