Tag: ಚಿದಾನಂದಮೂರ್ತಿ

  • ಪ್ರಶಸ್ತಿ ಸ್ವೀಕರಿಸುವ ಮುನ್ನವೇ ಪಯಣ ಮುಗಿಸಿದ ಚಿಮೂ

    ಪ್ರಶಸ್ತಿ ಸ್ವೀಕರಿಸುವ ಮುನ್ನವೇ ಪಯಣ ಮುಗಿಸಿದ ಚಿಮೂ

    ಬೆಂಗಳೂರು: 2018ನೇ ಸಾಲಿನ ಡಾ. ಎಂ.ಎಂ ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ ಸ್ವೀಕರಿಸಿ, ಖುಷಿ ಪಡುವ ಮೊದಲೇ ರಾಜ್ಯ ಕಂಡ ಶ್ರೇಷ್ಠ ಸಂಶೋಧಕ, ಚಿಂತಕ, ಸಾಹಿತಿ ಡಾ.ಎಂ. ಚಿದಾನಂದಮೂರ್ತಿ ನಮ್ಮನ್ನ ಅಗಲಿದ್ದಾರೆ.

    ಚಿದಾನಂದಮೂರ್ತಿ ಅವರು 2018ನೇ ಸಾಲಿನ ಡಾ. ಎಂ.ಎಂ ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಫೆಬ್ರವರಿ 11ರಂದು ಪ್ರಶಸ್ತಿ ಸಮಾರಂಭ ನಿಗದಿಯಾಗಿತ್ತು. 15 ದಿನಗಳ ಹಿಂದೆಯೇ ಈ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಜನವರಿ 8ರಂದು ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಸಲು ಸಿದ್ಧತೆ ನಡೆಸಲಾಗಿತ್ತು. ಆಮಂತ್ರಣ ಪತ್ರಿಕೆಯನ್ನು ಕೂಡ ಮುದ್ರಣಕ್ಕೆ ಕಳುಹಿಸಲಾಗಿತ್ತು. ಆದರೆ ಅಂದು ಭಾರತ್ ಬಂದ್ ಇತ್ತು. ಹೀಗಾಗಿ ಕಾರ್ಯಕ್ರಮವನ್ನ ಕೊನೆಯ ಹಂತದಲ್ಲಿ ಮುಂದೂಡಲಾಗಿತ್ತು.

    ಈ ಕಾರ್ಯಕ್ರಮವನ್ನ ಫೆಬ್ರವರಿ 11ರಂದು ನಿಗದಿ ಮಾಡಲಾಗಿತ್ತು. ಆದರೆ ಇದೀಗ ಪ್ರಶಸ್ತಿ ಪಡೆಯಲು ಚಿಮೂ ಅವರೇ ಇಲ್ಲವಾಗಿದ್ದಾರೆ. ಈ ಪ್ರಶಸ್ತಿಯು 75 ಸಾವಿರ ನಗದು, ಫಲಕ, ಸ್ಮರಣಿಕೆ ಒಳಗೊಂಡಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿಟಿ ರವಿ ಅವರು ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರಧಾನ ಮಾಡುತ್ತಿದ್ದರು. ಆದರೆ ವಿಧಿಯ ಆಟ ಬಲ್ಲವರ‍್ಯಾರು ಎನ್ನುವಂತೆ ಪ್ರಶಸ್ತಿ ಸ್ವೀಕರಿಸುವ ಮುನ್ನವೇ ಚಿದಾನಂದಮೂರ್ತಿ ಅವರು ತಮ್ಮ ಪಯಣ ಮುಗಿಸಿದ್ದಾರೆ.

    ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನಕ್ಕೆ ದೊಡ್ಡ ದನಿಯಾಗಿ ದುಡಿದಿದ್ದ, ತಮ್ಮ ಸಂಶೋಧನೆಗಳ ಮೂಲಕ ಇತಿಹಾಸದ ಪಾಠ ಮಾಡಿದ್ದ ಚಿಮೂ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ವೀರಶೈವ ಸಮುದಾಯಕ್ಕೆ ಸೇರಿದ್ದರೂ ಯಾವುದೇ ವಿಧಿವಿಧಾನಗಳಿಲ್ಲದೇ ಸಂಶೋಧಕ ಡಾ.ಎಂ ಚಿದಾನಂದ ಮೂರ್ತಿ ಅವರ ಅಂತ್ಯಸಂಸ್ಕಾರ ಮಾಡಲಾಗಿದೆ. ತಮ್ಮ ಅಂತ್ಯಸಂಸ್ಕಾರವನ್ನು ವಿದ್ಯುತ್ ಚಿತಾಗಾರದಲ್ಲೇ ಮಾಡಬೇಕು ಅನ್ನೊದು ಚಿದಾನಂದಮೂರ್ತಿ ಅವರ ಆಸೆಯಾಗಿತ್ತು. ಹೀಗಾಗಿ ತಂದೆಯ ಆಸೆಯನ್ನ ಪುತ್ರ ವಿನಯ್ ಕುಮಾರ್ ಚಾಚೂ ತಪ್ಪದೇ ಪಾಲಿಸಿ, ಪ್ರೀತಿಯ ಅಪ್ಪನ ಹಣೆಗೆ ಮುತ್ತಿಟ್ಟು ಬೀಳ್ಕೊಟ್ಟರು. ಅಂತ್ಯಸಂಸ್ಕಾರ ಮಾಡುವ ಮುನ್ನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ವಿ.ಸೋಮಣ್ಣ, ಶಾಸಕ ಮುನಿರತ್ನ ಸೇರಿದಂತೆ ಹಲವು ಗಣ್ಯರು ಸಾಹಿತಿಯ ಅಂತಿಮ ದರ್ಶನ ಪಡೆದರು.

    ಚಿದಾನಂದಮೂರ್ತಿ ಅವರ ಅಭಿಮಾನಿಗಳು, ಸಂಬಂಧಿಕರು ಅಂತಿಮ ದರ್ಶನ ಪಡೆದರು. ತದನಂತರ ಸರ್ಕಾರಿ ಗೌರವಗಳನ್ನು ಅರ್ಪಿಸಲಾಯಿತು. ಅಂತ್ಯಸಂಸ್ಕಾರ ಮಾಡುವ ವೇಳೆಯಲ್ಲಿ ಚಿದಾನಂದಮೂರ್ತಿ ಅವರು ಅಮರರಾಗಲಿ, ಸಿರಿಗನ್ನಡಂ ಗೆಲ್ಗೆ ಘೋಷಣೆಗಳನ್ನು ಅಭಿಮಾನಿಗಳು ಕೂಗಿದರು.

  • ಚಿದಾನಂದ ಮೂರ್ತಿ ನಿಧನಕ್ಕೆ ಸುರೇಶ್ ಕುಮಾರ್ ಸಂತಾಪ

    ಚಿದಾನಂದ ಮೂರ್ತಿ ನಿಧನಕ್ಕೆ ಸುರೇಶ್ ಕುಮಾರ್ ಸಂತಾಪ

    ಬೆಂಗಳೂರು: ಹಿರಿಯ ಸಂಶೋಧಕ ಡಾ. ಎಂ. ಚಿದಾನಂದಮೂರ್ತಿ ಅವರ ನಿಧನಕ್ಕೆ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ನಾಡಿನ ಹಿರಿಯ ಸಾಹಿತಿ, ಇತಿಹಾಸಜ್ಞ, ಹೋರಾಟಗಾರ, ವಿಶೇಷವಾಗಿ ಹಂಪೆಯ ಜೊತೆ ಬಹಳ ಆಪ್ತತೆ ಬೆಳೆಸಿಕೊಂಡಿದ್ದ, ಕನ್ನಡ ನಾಡಿನ ನೆಲ-ಜಲ-ಭಾಷೆ-ಸಂಸ್ಕೃತಿಯ ಕಾವಲುಗಾರನ ರೀತಿ ತನ್ನ ಜೀವನವನ್ನೇ ಮುಡುಪಾಗಿಟ್ಟ  ಚಿದಾನಂದಮೂರ್ತಿಗಳು ಇನ್ನಿಲ್ಲ ಎಂಬ ಸುದ್ದಿ ಕೇಳಿ ಆಘಾತವಾಗಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಖ್ಯಾತ ಸಾಹಿತಿ ಡಾ. ಎಂ ಚಿದಾನಂದಮೂರ್ತಿ ಇನ್ನಿಲ್ಲ

    ಅವರ ಆತ್ಮಕ್ಕೆ ಸದ್ಗತಿ ದೊರಕಲಿ. ಎಂದು ಸಚಿವ ಸುರೇಶ್ ಕುಮಾರ್ ಚಿದಾನಂದಮೂರ್ತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

  • ಮನೆಗೆ ಭೇಟಿ ನೀಡಿದ ಶಾಗೆ ಚಿದಾನಂದ ಮೂರ್ತಿ ನೀಡಿದ್ರು 5 ಸಲಹೆ

    ಮನೆಗೆ ಭೇಟಿ ನೀಡಿದ ಶಾಗೆ ಚಿದಾನಂದ ಮೂರ್ತಿ ನೀಡಿದ್ರು 5 ಸಲಹೆ

    ಬೆಂಗಳೂರು: ನಗರಕ್ಕೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಸಾಹಿತಿ ಚಿದಾನಂದ ಮೂರ್ತಿ ಅವರನ್ನು ಭೇಟಿಯಾಗಿದ್ದಾರೆ.

    ಹಿರಿಯ ಸಂಶೋಧಕ ಡಾ ಚಿದಾನಂದ ಮೂರ್ತಿ ಅವರನ್ನು ಭೇಟಿಯಾದ ಶಾ ಮುಂದೆ ಬಿಜೆಪಿ ಪ್ರಣಾಳಿಕೆಗೆ ರಚನೆ ಸಂಬಂಧ ಸಲಹೆ ನೀಡುವಂತೆ ಕೇಳಿಕೊಂಡಿದ್ದಾರೆ.

    ಅಮಿತ್ ಶಾ ಭೇಟಿಗೂ ಮುನ್ನ ಪಬ್ಲಿಕ್ ಟಿವಿ ಜೊತೆ ಚಿದಾನಂದ ಮೂರ್ತಿ ಮಾತನಾಡಿದ್ದರು. ಈ ವೇಳೆ ನಾನು ಶಾ ಅವರಿಗೆ ಏನು ಸಲಹೆ ನೀಡತ್ತೇನೆ ಎನ್ನುವುದನ್ನು ತಿಳಿಸಿದ್ದರು.

    ಸಾಹಿತಿ ಚಿಮೂ ಹೇಳಿದ್ದೇನು?
    1. ವೀರಶೈವ ಹಾಗೂ ಲಿಂಗಾಯಿತ ಎರಡೂ ಒಂದೇ. ಹೀಗಾಗಿ, ಪ್ರತ್ಯೇಕ ಲಿಂಗಾಯತ ಧರ್ಮ ಬೇಡ ಹಾಗೂ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಕವಡೆ ಕಾಸಿನ ಕಿಮ್ಮತ್ತು ನೀಡಬಾರದು.

    2. ಕಾವೇರಿ ವಿಚಾರದಲ್ಲಿ ಕನ್ನಡಿಗರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಗಡಿ ವಿವಾದದಿಂದಾಗಿ ಮಹಾರಾಷ್ಟ್ರವೂ ಪದೇ ಪದೇ ಕರ್ನಾಟಕದ ಜೊತೆ ತಗಾದೆ ತೆಗೆಯುತ್ತಿದೆ. ಕರ್ನಾಟಕ ಬೆಳಗಾವಿಗೆ ಸೇರುತ್ತದೆ ಎನ್ನುವ ಭರವಸೆ ಇದೆ. ಕೇಂದ್ರ ಸರ್ಕಾರ ಕರ್ನಾಟಕದ ವಾದವನ್ನು ಸರಿಯಾಗಿ ಪರಿಶೀಲಿಸಬೇಕು.

    3. ಆಂಗ್ಲರು ಬಿಟ್ಟು ಹೋಗಿರುವ `ಇಂಡಿಯಾ’ ಎನ್ನುವ ಪದ ಕೈಬಿಟ್ಟು `ಭಾರತ್’ ಎನ್ನುವ ಪದ ಬಳಕೆ ಮಾಡಬೇಕು. ಸಂವಿಧಾನದಲ್ಲಿರುವ ಇಂಡಿಯಾ ಪದವನ್ನು ಕೂಡ ತೆಗೆಯಬೇಕು. ಇಂಡಿಯಾ ಎಂದು ಬರೆದಿರುವ ಕಡೆ ಭಾರತ್ ಎಂದು ಬರೆಯಬೇಕು. ದೇಶದಲ್ಲಿ ಮಾತೃಭಾಷಾ ಮಾಧ್ಯಮ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಬೇಕು.

    4. ಒಬ್ಬ ಹಿಂದೂ ಉತ್ತಮ ಹಿಂದೂವಾಗಿ ಬದುಕಬೇಕು, ಒಬ್ಬ ಮುಸ್ಲಿಮ್ ಉತ್ತಮ ಮುಸ್ಲಿಮನಾಗಿ ಬದುಕಬೇಕು, ಒಬ್ಬ ಕ್ರಿಶ್ಚಿಯನ್ ಉತ್ತಮ ಕ್ರಿಶ್ಚಿಯನ್ ಆಗಿ ಬದುಕಬೇಕು. ಆದರೆ, ಮತಾಂತರ ಸಲ್ಲದು. ದೇಶದಲ್ಲಿ ಹಿಂದೂ ಧರ್ಮದವರನ್ನು ಮತಾಂತರ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು.

    5. ಬಿಜೆಪಿ ಮೇಲ್ವರ್ಗದವರ ಪಕ್ಷ ಎಂದು ಗುರುತಿಸಿಕೊಂಡಿದೆ. ಇದು ಬದಲಾಗಬೇಕು. ಸ್ವಲ್ಪ ಮಟ್ಟಿಗೆ ಭಾರತೀಯ ಸಂಸ್ಕೃತಿಯನ್ನು ಉಳಿಸುತ್ತಿರುವ ಪಕ್ಷ ಬಿಜೆಪಿಯಾಗಿದೆ. ಹೀಗಾಗಿ, ದಲಿತರನ್ನು ನಿರ್ಲಕ್ಷಿಸದೆ, ಅವರ ಅಭಿವೃದ್ಧಿಗೆ ಕೆಲಸ ಮಾಡಬೇಕು. ರೈತರಿಗೆ ಸಕಾಲದಲ್ಲಿ ಸೂಕ್ತ ಸೌಲಭ್ಯಗಳನ್ನು ಒದಗಿಸಬೇಕು