Tag: ಚಿದಾನಂದ್ ಸವದಿ

  • ನಾನೇ ಕಣ್ಣಾರೆ ನೋಡಿದ್ದೀನಿ, ಚಿದಾನಂದ್ ಸವದಿಯೇ ಡ್ರೈವರ್ ಸೀಟ್‍ನಲ್ಲಿ ಕುಳಿತಿದ್ರು: ಪ್ರತ್ಯಕ್ಷದರ್ಶಿ

    ನಾನೇ ಕಣ್ಣಾರೆ ನೋಡಿದ್ದೀನಿ, ಚಿದಾನಂದ್ ಸವದಿಯೇ ಡ್ರೈವರ್ ಸೀಟ್‍ನಲ್ಲಿ ಕುಳಿತಿದ್ರು: ಪ್ರತ್ಯಕ್ಷದರ್ಶಿ

    – ಕಾಲರ್ ಪಟ್ಟಿ ಹಿಡಿದು ವೀಡಿಯೋ ಡಿಲೀಟ್ ಮಾಡಿಸಿದ್ರು

    ಬಾಗಲಕೋಟೆ: ಡಿಸಿಎಂ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ್ ಸವದಿ ಕಾರ್ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಅಪಘಾತದ ವೇಳೆ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿ ಹಣಮಂತ ದೊಡ್ಡಮನಿ, ಚಿದಾನಂದ್ ಸವದಿಯೇ ಡ್ರೈವರ್ ಸೀಟ್‍ನಲ್ಲಿ ಕುಳಿತಿದ್ರು ಎಂದು ಹೇಳಿದ್ದಾರೆ.

    ಹಣಮಂತ ದೊಡ್ಡಮನಿ ಹೇಳಿದ್ದೇನು?:
    ಆ್ಯಕ್ಸಿಡೆಂಟ್ ಆದ ಕೂಡಲೇ ರಸ್ತೆಗೆ ಓಡಿ ಹೋದಿವಿ. ಆದ್ರೆ ಕಾರ್ ನಲ್ಲಿದ್ದವರು ಯಾರು ಅಂತ ನಮಗೆ ಗೊತ್ತಿರಲಿಲ್ಲ. ಕಾರ್ ನಲ್ಲಿದ್ದವರು ಎಸ್ಕೇಪ್ ಆಗೋದಕ್ಕೆ ಮುಂದಾದಾಗ ಟೈರ್ ಹವಾ ಬಿಡುತ್ತಿದ್ದಂತೆ ಮತ್ತೊಂದು ವ್ಯಾನ್ ತರಿಸಿದರು. ಯಾಕೆ, ಏನಾಯ್ತು ಎಂದು ಕೇಳಲು ಹೋದಾಗ, ಡ್ರೈವರ್ ಸೀಟ್‍ನಿಂದ ಹೊರ ಬಂದ ಒಬ್ಬ, ನಾನು ಡಿಸಿಎಂ ಲಕ್ಷ್ಮಣ ಸವದಿ ಮಗ, ನನಗೆ ಮುಂದೆ ತುಂಬಾ ಕೆಲಸ ಇದೆ. ಅವನಿಗೆ ಸಣ್ಣ ಗಾಯವಾಗಿದೆ ಅಷ್ಟೇ, ಏನೂ ಆಗಿಲ್ಲ. ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಂತ ನಮಗೆ ಅವಾಜ್ ಹಾಕಿದರು. ಆ ವ್ಯಕ್ತಿ ಹೇಳಿದಾಗಲೇ ನಮಗೆ ಆತ ಲಕ್ಷ್ಮಣ ಸವದಿ ಮಗ ಅನ್ನೋದು ಗುತ್ತಾಯ್ತು.

    ಕಾರ್ ನಲ್ಲಿದ್ದವರು ನಮಗೆ ಅವಾಜ್ ಹಾಕಿ ಎಸ್ಕೇಪ್ ಆಗಲು ಮುಂದಾದ್ರು. ಕಾರ್ ನಿಂದ ಹೊರ ಬರುತ್ತಲೇ ನಂಬರ್ ಪ್ಲೇಟ್ ತೆಗೆದರು. ನಮ್ಮ ಊರಿನ ಜನರಿಗೆ ಫೋನ್ ಮಾಡಿದೆ. ವಿಷಯ ತಿಳಿಯುತ್ತಲೇ ಏಳೆಂಟು ಜನ ಬಂದರು. ಅದರಲ್ಲಿ ನಮ್ಮೂರಿನ ಒಬ್ಬ ಹುಡುಗ ವೀಡಿಯೋ ಮಾಡಿದ. ಅದಕ್ಕೆ ಕೋಪಗೊಂಡ ಚಿದಾನಂದ್ ಸವದಿ, ಆತನ ಕೊರಳ ಪಟ್ಟಿ ಹಿಡಿದು ಏಟು ಕೊಟ್ಟು ಮೊಬೈಲ್ ನಲ್ಲಿದ್ದ ವೀಡಿಯೋ ಡಿಲೀಟ್ ಮಾಡಿದ್ರು.

    ನಾವೇ ಅಂಬುಲೆನ್ಸ್ ಗೆ ಕರೆ ಮಾಡಿದ್ದೀವಿ. ಗಾಯಾಳು ವ್ಯಕ್ತಿಯನ್ನ ಅಂಬುಲೆನ್ಸ್ ಗೆ ಹಾಕುತ್ತಿರುವಾಗ ಚಿದಾನಂದ್ ಸವದಿ ಮತ್ತು ಅವರ ಗೆಳೆಯರು ಮತ್ತೊಂದು ಕಾರ್ ನಲ್ಲಿ ಎಸ್ಕೇಪ್ ಆದ್ರು. ಇವತ್ತು ಬೆಳಗ್ಗೆ ಚಿದಾನಂದ್ ಸವದಿ ನೀಡಿರುವ ಹೇಳಿಕೆ ನೂರಕ್ಕೆ ನೂರರಷ್ಟು ಸುಳ್ಳು ಎಂದು ಹಣಮಂತ ದೊಡ್ಡಮನಿ ಹೇಳುತ್ತಾರೆ. ಇದನ್ನೂ ಓದಿ: ಚಿದಾನಂದ ಸವದಿ ಕಾರು ಚಾಲನೆ ಮಾಡ್ತಿರಲಿಲ್ಲ: ಎಸ್‍ಪಿ ಲೋಕೇಶ್ ಜಗಲಾಸರ್ 

    ಚಿದಾನಂದ್ ಸವದಿ ಹೇಳಿದ್ದೇನು?:
    ಅಂಜನಾದ್ರಿ ಬೆಟ್ಟದಿಂದ ಹಿಂದಿರುಗುವಾಗ ಹೈವೇಯಲ್ಲಿ ಅಪಘಾತವಾಯ್ತು. ಒಟ್ಟು ಎರಡು ಕಾರ್ ಗಳಲ್ಲಿ 10 ಜನ ಅಂಜನಾದ್ರಿಗೆ ಹೋಗಿದ್ದೀವಿ. ನನ್ನ ಕಾರ್ ಸುಮಾರು 30 ಕಿಲೋ ಮೀಟರ್ ದೂರ ಇತ್ತು. ಹಿಂದಿನಿಂದ ಬರುತ್ತಿದ್ದ ನನ್ನ ಕಾರ್ ಅಪಘಾತಕ್ಕೆ ಒಳಗಾಗಿದ್ದು, ಅದರಲ್ಲಿ ಸ್ನೇಹಿತರಿದ್ದರು. ನಮ್ಮ ಚಾಲಕನೇ ಕಾರ್ ಡ್ರೈವ್ ಮಾಡುತ್ತಿದ್ದನು. ಅಪಘಾತವಾದ ಕೂಡಲೇ ಚಾಲಕ ನನಗೆ ಫೋನ್ ಮಾಡಿದರು. ಆಗ ಕೂಡಲೇ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಯ್ತು. ಹಾಗೆಯೇ ಸ್ಥಳೀಯ ಪೊಲೀಸ್ ಠಾಣೆಗೆ ಮಾತನಾಡಿದ್ದೇನೆ. ನಮ್ಮ ಸ್ನೇಹಿತರಿಬ್ಬರಿಗೆ ಆಸ್ಪತ್ರೆ ವೆಚ್ಚ ನೀಡುವದಾಗಿ ಹೇಳಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಬೈಕ್ ಅಡ್ಡ ಬಂದಿದ್ದಕ್ಕೆ ಕಾರ್ ಡಿಕ್ಕಿ ಆಯ್ತು: ಚಿದಾನಂದ್ ಸವದಿ

    ನನ್ನ ವಿರುದ್ಧ ಕೇಳಿ ಬಂದಿರುವ ಎಲ್ಲ ಆರೋಪಗಳು ಸುಳ್ಳು. ಯಾರ ಕೊರಳ ಪಟ್ಟಿಯನ್ನು ನಾವು ಹಿಡಿದಿಲ್ಲ. ಯಾರಿಗೂ ಅವಾಜ್ ಹಾಕಿಲ್ಲ. ಕುಟುಂಬಸ್ಥರ ನಂಬರ್ ಇರಲಿಲ್ಲ ಹಾಗಾಗಿ ಯಾರನ್ನೂ ಸಂಪರ್ಕಿಸಿಲ್ಲ. ಆದ್ರೆ ಕೂಡಲೇ ಕುಟುಂಬಸ್ಥರನ್ನು ಭೇಟಿಯಾಗುತ್ತೇನೆ. ಡ್ರೈವರ್ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಸದ್ಯ ಅಥಣಿಯಲ್ಲಿದ್ದಾನೆ. ಪೊಲೀಸರ ಮುಂದೆ ಹಾಜರಾಗ್ತಾನೆ. ದೇವರಾಣೆ, ನನ್ನ ವಿರುದ್ಧ ಕೇಳಿ ಬಂದ ಎಲ್ಲ ಆರೋಪಗಳು ಶುದ್ಧ ಸುಳ್ಳು ಎಂದು ಪಬ್ಲಿಕ್ ಟಿವಿಗೆ ಬೆಳಗ್ಗೆ ಸ್ಪಷ್ಟನೆ ನೀಡಿದ್ದರು. ಇದನ್ನೂ ಓದಿ: ಕಾರ್ ಪ್ಲೇಟ್ ನಂಬರ್ ಅವರೇ ಕಲ್ಲಿನಿಂದ ಜಜ್ಜಿದ್ರು, ಫೋಟೋ ತೆಗೆದವರನ್ನ ನಿಂದಿಸಿ ಅವಾಜ್ ಹಾಕಿದ್ರು

  • ಡಿಸಿಎಂ ಮಗ ಅಂದಾಗ ಇಂತಹ ಊಹಾಪೋಹಗಳೆಲ್ಲ ಸಹಜ: ಲಕ್ಷ್ಮಣ್ ಸವದಿ

    ಡಿಸಿಎಂ ಮಗ ಅಂದಾಗ ಇಂತಹ ಊಹಾಪೋಹಗಳೆಲ್ಲ ಸಹಜ: ಲಕ್ಷ್ಮಣ್ ಸವದಿ

    ಬೆಂಗಳೂರು: ಡಿಸಿಎಂ ಮಗನ ಕಾರ್ ಅಪಘಾತಕ್ಕೊಳಗಾಗಿದೆ ಅಂದಾಗ ಇಂತಹ ಊಹಾಪೋಹಗಳೆಲ್ಲ ಸಹಜ. ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಪುತ್ರನಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದೇನೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.

    ಪುತ್ರ ಚಿದಾನಂದ್ ಮತ್ತು ಆತನ ಸ್ನೇಹಿತರು ಅಂಜನಾದ್ರಿ ಬೆಟ್ಟದಿಂದ ಹಿಂದಿರುಗುವ ವೇಳೆ ಅಪಘಾತ ನಡೆದಿದೆ. ಚಿದಾನಂದ್ ಫಾರ್ಚೂನರ್ ಕಾರ್ ನಲ್ಲಿ ಪ್ರಯಾಣಿಸುತ್ತಿದ್ರು. ಹಿಂದಿನಿಂದ ಬರುತ್ತಿದ್ದ ಇನ್ನೊಂದು ಕಾರ್ ನಲ್ಲಿ ಗೆಳೆಯರು ಬರುತ್ತಿದ್ರು. ಗೆಳೆಯರಿದ್ದ ಕಾರ್ ಅಪಘಾತವಾಗಿದೆ. ಆಕ್ಸಿಡೆಂಟ್ ಆಗ್ತಿದ್ದಂತೆ ಗೆಳೆಯರು ಫೋನ್ ಮಾಡಿದ್ದರಿಂದ ಚಿದಾನಂದ್ ವಾಪಸ್ಸು ಹೋಗಿದ್ದಾನೆ. ಅವನೇ ಅಂಬ್ಯುಲೆನ್ಸ್ ಗೆ ಫೋನ್ ಮಾಡಿ ಆಸ್ಪತ್ರೆ ಸೇರಿಸಿ ಮನೆಗೆ ಹೋಗಿದ್ದಾನೆ. ರಾತ್ರಿ ಬೈಕ್ ಸವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿಸಿದರು.

    ರಾತ್ರಿ ಸಾವು ಆಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಣಮಂತು ನಮ್ಮ ಖಾಯಂ ಡ್ರೈವರ್. ಮಗನ ಕಾರ್ ನಮ್ಮ ಚಾಲಕನೇ ಚಲಾಯಿಸುತ್ತಿದ್ದನು. ಡಿಸಿಎಂ ಮಗ ಅಥವಾ ವಿನಿಸ್ಟರ್ ಪುತ್ರ ಅಂದಾಗ ಈ ರೀತಿ ಊಹಾಪೋಹಗಳೆಲ್ಲ ಸಹಜ ಎಂದು ಹೇಳುವ ಮೂಲಕ ಎಲ್ಲ ಆರೋಪಗಳನ್ನು ಉಪ ಮುಖ್ಯಮಂತ್ರಿಗಳು ತಳ್ಳಿ ಹಾಕಿದರು.

    ಮನೆಯ ಹಿರಿಯನನ್ನು ಆ ಕುಟುಂಬ ಕಳೆದುಕೊಂಡಿದೆ. ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಪರಿಹಾರ ಕೊಡುವುದು ನಮ್ಮ ಧರ್ಮ. ಫೋನ್ ನಲ್ಲಿ ಮಾತನಾಡೋದು ಸೂಕ್ತವಲ್ಲ. ನಾನೇ ಖುದ್ದಾಗಿ ಗ್ರಾಮಕ್ಕೆ ತೆರಳಿ ಮೃತ ವ್ಯಕ್ತಿಯ ಕುಟುಂಬಸ್ಥರಿಗೆ ಸಾಂತ್ವಾನ ಹೇಳುತ್ತೇನೆ ಅಂದ್ರು. ಇದನ್ನೂ ಓದಿ: ಕಾರ್ ಪ್ಲೇಟ್ ನಂಬರ್ ಅವರೇ ಕಲ್ಲಿನಿಂದ ಜಜ್ಜಿದ್ರು, ಫೋಟೋ ತೆಗೆದವರನ್ನ ನಿಂದಿಸಿ ಅವಾಜ್ ಹಾಕಿದ್ರು

    ಏನಿದು ಪ್ರಕರಣ?:
    ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ್ ಕಾರ್ ಅಪಘಾತಕ್ಕೆ ಒಳಗಾಗಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಚಿತ್ರದುರ್ಗ-ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಕೊಡ್ಲೆಪ್ಪ ಬೋಳಿ ಮೃತ ಬೈಕ್ ಸವಾರ. ಕುಡ್ಲೆಪ್ಪ ಹೊಲದಿಂದ ಮನೆಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಕಾರ್ ಡಿಕ್ಕಿಯಾಗುತ್ತಿದ್ದಂತೆ ಕೂಡ್ಲೆಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕೂಡ್ಲೆಪ್ಪ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬೈಕ್ ಅಡ್ಡ ಬಂದಿದ್ದಕ್ಕೆ ಕಾರ್ ಡಿಕ್ಕಿ ಆಯ್ತು: ಚಿದಾನಂದ್ ಸವದಿ

    ಆರೋಪಗಳೆಲ್ಲ ಸುಳ್ಳು:
    ನನ್ನ ವಿರುದ್ಧ ಕೇಳಿ ಬಂದಿರುವ ಎಲ್ಲ ಆರೋಪಗಳು ಸುಳ್ಳು. ಯಾರ ಕೊರಳ ಪಟ್ಟಿಯನ್ನು ನಾವು ಹಿಡಿದಿಲ್ಲ. ಯಾರಿಗೂ ಅವಾಜ್ ಹಾಕಿಲ್ಲ. ಕುಟುಂಬಸ್ಥರ ನಂಬರ್ ಇರಲಿಲ್ಲ ಹಾಗಾಗಿ ಯಾರನ್ನೂ ಸಂಪರ್ಕಿಸಿಲ್ಲ. ಆದ್ರೆ ಕೂಡಲೇ ಕುಟುಂಬಸ್ಥರನ್ನು ಭೇಟಿಯಾಗುತ್ತೇನೆ. ಡ್ರೈವರ್ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಸದ್ಯ ಅಥಣಿಯಲ್ಲಿದ್ದಾನೆ. ಪೊಲೀಸರ ಮುಂದೆ ಹಾಜರಾಗ್ತಾನೆ. ದೇವರಾಣೆ, ನನ್ನ ವಿರುದ್ಧ ಕೇಳಿ ಬಂದ ಎಲ್ಲ ಆರೋಪಗಳು ಶುದ್ಧ ಸುಳ್ಳು.

  • “ಕಾರ್ ಪ್ಲೇಟ್ ನಂಬರ್ ಅವರೇ ಕಲ್ಲಿನಿಂದ ಜಜ್ಜಿದ್ರು, ಫೋಟೋ ತೆಗೆದವರನ್ನ ನಿಂದಿಸಿ ಅವಾಜ್ ಹಾಕಿದ್ರು”

    “ಕಾರ್ ಪ್ಲೇಟ್ ನಂಬರ್ ಅವರೇ ಕಲ್ಲಿನಿಂದ ಜಜ್ಜಿದ್ರು, ಫೋಟೋ ತೆಗೆದವರನ್ನ ನಿಂದಿಸಿ ಅವಾಜ್ ಹಾಕಿದ್ರು”

    ಬಾಗಲಕೋಟೆ: ಬೈಕ್‍ಗೆ ಡಿಕ್ಕಿ ಹೊಡೆದ ಕಾರ್ ನಂಬರ್ ಪ್ಲೇಟ್ ಅವರೇ ಜಜ್ಜಿದ್ರು. ಅಲ್ಲಿಯ ಒಬ್ಬ ಫೋಟೋ ತೆಗೆದಿದ್ದಕ್ಕೆ ನಿಂದಿಸಿ ಅವಾಜ್ ಹಾಕಿದರು. ಕೊನೆಗೆ ಬಲವಂತವಾಗಿ ಮೊಬೈಲ್ ನಲ್ಲಿಯ ಫೋಟೋ ಡಿಲೀಟ್ ಮಾಡಿದರು ಎಂದು ಅಪಘಾತದಲ್ಲಿ ಮೃತ ಕೂಡ್ಲೆಪ್ಪ ಅವರ ಸಂಬಂಧಿ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮೃತ ಕೂಡ್ಲೆಪ್ಪ ಅಳಿಯ ಎಂ.ಎಸ್.ಬಳಬಟ್ಟಿ, ಪ್ರತಿದಿನದಂತೆ ಹೊಲಕ್ಕೆ ಹೋಗಿ, ಸಂಜೆ ಸುಮಾರು ಐದರಿಂದ ಆರು ಗಂಟೆಗೆ ಮನೆಗೆ ವಾಪಸ್ ಬರುತ್ತಿರುವಾಗ ಅಪಘಾತ ಆಗಿದೆ. ತಲೆ ಮತ್ತು ಸೊಂಟಕ್ಕೆ ಬಲವಾದ ಏಟು ಬಿದ್ದಿತ್ತು. ಕೂಡಲೇ ಅಂಬುಲೆನ್ಸ್ ಮೂಲಕ ಬಾಗಲಕೋಟೆಗೆ ಕರೆ ತಂದು ಆಸ್ಪತ್ರೆಗೆ ದಾಖಲಿಸಲಾಯ್ತು. ತದನಂತರ ಸ್ಕ್ಯಾನ್‍ಗೆ ಕರೆದುಕೊಂಡು ಹೋಗುವಷ್ಟರಲ್ಲಿ ಸಾವನ್ನಪ್ಪಿದ್ರು.

    ಅಪಘಾತ ಆಗುತ್ತಲೇ ಇಬ್ಬರು ಎಸ್ಕೇಪ್ ಆದ್ರು. ಚಿದಾನಂದ್ ಸೇರಿದಂತೆ ಮೂವರು ಸ್ಥಳದಲ್ಲಿದ್ರು. ಅಲ್ಲಿಯ ಒಬ್ಬ ಹುಡುಗ ಫೋಟೋ ಕ್ಲಿಕ್ ಮಾಡಿದ್ದಕ್ಕೆ ಕೋಪಗೊಂಡ ಚಿದಾನಂದ್ ಸವದಿ, ನಾನು ಡಿಸಿಎಂ ಮಗ ಅಂತ ಅವಾಜ್ ಹಾಕಿದರು. ಬಲವಂತವಾಗಿ ಮೊಬೈಲ್ ಕಿತ್ಕೊಂಡು ಫೋಟೋ ಡಿಲೀಟ್ ಮಾಡಿದರು. ಸ್ಥಳದಲ್ಲಿ ಹೆಚ್ಚು ಜನ ಸೇರುತ್ತಿದ್ದಂತೆ ಪೊಲೀಸರು ಬಂದರು. ಪೊಲೀಸರು ಬರುತ್ತಿದ್ದಂತೆ ಚಿದಾನಂದ್ ಸವದಿ ಮತ್ತು ಗೆಳೆಯರು ಎಸ್ಕೇಪ್ ಆದ್ರು.

    ಪೊಲೀಸರ ಮುಂದೆ ಕಾರ್ ನಲ್ಲಿ ಚಿದಾನಂದ್ ಇದ್ರು ಹೇಳಿದ್ದೀವಿ. ಆದ್ರೆ ಈಗ ಅವರು ಕಾರ್ ನಲ್ಲಿ ನಾನಿರಲ್ಲ ಅಂತ ಹೇಳ್ತಿದ್ದಾರೆ. ಮೌಖಿಕವಾಗಿ ದೂರು ಸಲ್ಲಿಸುವಾಗಲೇ ನಮ್ಮ ಕುಟುಂಬ ಚಿದಾನಂದ್ ಹೆಸರನ್ನೇ ಹೇಳಿದ್ದೀವಿ. ಇಷ್ಟೆಲ್ಲ ಘಟನೆ ನಡೆದ್ರೂ ಸವದಿ ಅವರ ಪುತ್ರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವಾನ ಹೇಳುವ ಸೌಜನ್ಯ ಸಹ ತೋರಿಸಲಿಲ್ಲ ಎಂದು ಆಕ್ರೋಶ ಹೊರಹಾಕಿದರು.  ಇದನ್ನೂ ಓದಿ: ಬೈಕ್ ಅಡ್ಡ ಬಂದಿದ್ದಕ್ಕೆ ಕಾರ್ ಡಿಕ್ಕಿ ಆಯ್ತು: ಚಿದಾನಂದ್ ಸವದಿ

  • ಬೈಕ್ ಅಡ್ಡ ಬಂದಿದ್ದಕ್ಕೆ ಕಾರ್ ಡಿಕ್ಕಿ ಆಯ್ತು: ಚಿದಾನಂದ್ ಸವದಿ

    ಬೈಕ್ ಅಡ್ಡ ಬಂದಿದ್ದಕ್ಕೆ ಕಾರ್ ಡಿಕ್ಕಿ ಆಯ್ತು: ಚಿದಾನಂದ್ ಸವದಿ

    – ಕಾರ್ ಚಾಲಕ ಪೊಲೀಸ್ ಠಾಣೆಗೆ ಹೋಗ್ತಾನೆ

    ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿ ನಡೆದ ಅಪಘಾತದ ಕುರಿತು ಡಿಸಿಎಂ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ್ ಸವದಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಡನ್ ಆಗಿ ಬೈಕ್ ಅಡ್ಡ ಬಂದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.

    ಅಂಜನಾದ್ರಿ ಬೆಟ್ಟದಿಂದ ಹಿಂದಿರುಗುವಾಗ ಹೈವೇಯಲ್ಲಿ ಅಪಘಾತವಾಯ್ತು. ಒಟ್ಟು ಎರಡು ಕಾರ್ ಗಳಲ್ಲಿ 10 ಜನ ಅಂಜನಾದ್ರಿಗೆ ಹೋಗಿದ್ದೀವಿ. ನನ್ನ ಕಾರ್ ಸುಮಾರು 30 ಕಿಲೋ ಮೀಟರ್ ದೂರ ಇತ್ತು. ಹಿಂದಿನಿಂದ ಬರುತ್ತಿದ್ದ ನನ್ನ ಕಾರ್ ಅಪಘಾತಕ್ಕೆ ಒಳಗಾಗಿದ್ದು, ಅದರಲ್ಲಿ ಸ್ನೇಹಿತರಿದ್ದರು. ನಮ್ಮ ಚಾಲಕನೇ ಕಾರ್ ಡ್ರೈವ್ ಮಾಡುತ್ತಿದ್ದನು.

    ಅಪಘಾತವಾದ ಕೂಡಲೇ ಚಾಲಕ ನನಗೆ ಫೋನ್ ಮಾಡಿದರು. ಆಗ ಕೂಡಲೇ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಯ್ತು. ಹಾಗೆಯೇ ಸ್ಥಳೀಯ ಪೊಲೀಸ್ ಠಾಣೆಗೆ ಮಾತನಾಡಿದ್ದೇನೆ. ನಮ್ಮ ಸ್ನೇಹಿತರಿಬ್ಬರಿಗೆ ಆಸ್ಪತ್ರೆ ವೆಚ್ಚ ನೀಡುವದಾಗಿ ಹೇಳಿದ್ದೇನೆ ಎಂದು ಹೇಳಿದರು.

    ದೇವರಾಣೆ ಎಲ್ಲ ಸುಳ್ಳು:
    ನನ್ನ ವಿರುದ್ಧ ಕೇಳಿ ಬಂದಿರುವ ಎಲ್ಲ ಆರೋಪಗಳು ಸುಳ್ಳು. ಯಾರ ಕೊರಳ ಪಟ್ಟಿಯನ್ನು ನಾವು ಹಿಡಿದಿಲ್ಲ. ಯಾರಿಗೂ ಅವಾಜ್ ಹಾಕಿಲ್ಲ. ಕುಟುಂಬಸ್ಥರ ನಂಬರ್ ಇರಲಿಲ್ಲ ಹಾಗಾಗಿ ಯಾರನ್ನೂ ಸಂಪರ್ಕಿಸಿಲ್ಲ. ಆದ್ರೆ ಕೂಡಲೇ ಕುಟುಂಬಸ್ಥರನ್ನು ಭೇಟಿಯಾಗುತ್ತೇನೆ. ಡ್ರೈವರ್ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಸದ್ಯ ಅಥಣಿಯಲ್ಲಿದ್ದಾನೆ. ಪೊಲೀಸರ ಮುಂದೆ ಹಾಜರಾಗ್ತಾನೆ. ದೇವರಾಣೆ, ನನ್ನ ವಿರುದ್ಧ ಕೇಳಿ ಬಂದ ಎಲ್ಲ ಆರೋಪಗಳು ಶುದ್ಧ ಸುಳ್ಳು.

    ಅಪಘಾತ ನಡೆದಿದ್ದು ಎಲ್ಲಿ? ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಚಿತ್ರದುರ್ಗ-ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಕೊಡ್ಲೆಪ್ಪ ಬೋಳಿ ಮೃತ ಬೈಕ್ ಸವಾರ. ಕುಡ್ಲೆಪ್ಪ ಹೊಲದಿಂದ ಮನೆಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಕಾರ್ ಡಿಕ್ಕಿಯಾಗುತ್ತಿದ್ದಂತೆ ಕೂಡ್ಲೆಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕೂಡ್ಲೆಪ್ಪ ಸಾವನ್ನಪ್ಪಿದ್ದಾರೆ.

    ಬೈಕ್‍ಗೆ ಕಾರ್ ಡಿಕ್ಕಿಯಾಗುತ್ತಿದ್ದಂತೆ ಡಿಸಿಎಂ ಪುತ್ರ ಚಿದಾನಂದ್ ನಂಬರ್ ಪ್ಲೇಟ್ ಕಲ್ಲಿನಿಂದ ಜಜ್ಜಿದರು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತವಾದ ಸ್ಥಳೀಯರು ಚಿದಾನಂದ್ ಸವದಿಯನ್ನು ಕೆಲಹೊತ್ತು ಹಿಡಿದಿಟ್ಟಿದ್ದರು. ಈ ವೇಳೆ ನಾನು ಡಿಸಿಎಂ ಲಕ್ಷ್ಮಣ್ ಸವದಿ ಮಗ ಅಂತ ಅವಾಜ್ ಹಾಕಿರುವ ಬಗ್ಗೆ ಸ್ಥಳೀಯರು ಹೇಳುತ್ತಿದ್ದಾರೆ.

  • ಬೈಕ್‍ಗೆ ಡಿಕ್ಕಿ ಹೊಡೆದ ಲಕ್ಷ್ಮಣ್ ಸವದಿ ಪುತ್ರನ ಕಾರ್- ಸವಾರ ಸಾವು

    ಬೈಕ್‍ಗೆ ಡಿಕ್ಕಿ ಹೊಡೆದ ಲಕ್ಷ್ಮಣ್ ಸವದಿ ಪುತ್ರನ ಕಾರ್- ಸವಾರ ಸಾವು

    – ‘ನಾನು ಡಿಸಿಎಂ ಮಗ’ ಸ್ಥಳೀಯರಿಗೆ ಅವಾಜ್

    ಬಾಗಲಕೋಟೆ: ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ್ ಕಾರ್ ಅಪಘಾತಕ್ಕೆ ಒಳಗಾಗಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಚಿತ್ರದುರ್ಗ-ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.

    ಕೊಡ್ಲೆಪ್ಪ ಬೋಳಿ ಮೃತ ಬೈಕ್ ಸವಾರ. ಕುಡ್ಲೆಪ್ಪ ಹೊಲದಿಂದ ಮನೆಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಕಾರ್ ಡಿಕ್ಕಿಯಾಗುತ್ತಿದ್ದಂತೆ ಕೂಡ್ಲೆಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕೂಡ್ಲೆಪ್ಪ ಸಾವನ್ನಪ್ಪಿದ್ದಾರೆ.

    ಬೈಕ್‍ಗೆ ಕಾರ್ ಡಿಕ್ಕಿಯಾಗುತ್ತಿದ್ದಂತೆ ಡಿಸಿಎಂ ಪುತ್ರ ಚಿದಾನಂದ್ ನಂಬರ್ ಪ್ಲೇಟ್ ಕಲ್ಲಿನಿಂದ ಜಜ್ಜಿದರು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತವಾದ ಸ್ಥಳೀಯರು ಚಿದಾನಂದ್ ಸವದಿಯನ್ನು ಕೆಲಹೊತ್ತು ಹಿಡಿದಿಟ್ಟಿದ್ದರು. ಈ ವೇಳೆ ನಾನು ಡಿಸಿಎಂ ಲಕ್ಷ್ಮಣ್ ಸವದಿ ಮಗ ಅಂತ ಅವಾಜ್ ಹಾಕಿರುವ ಬಗ್ಗೆ ಸ್ಥಳೀಯರು ಹೇಳುತ್ತಿದ್ದಾರೆ.