Tag: ಚಿನ್ನದ ಬಿಸ್ಕತ್

  • ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸಿ ಚಿನ್ನ ಕಳವು – ನಾಲ್ವರ ಬಂಧನ

    ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸಿ ಚಿನ್ನ ಕಳವು – ನಾಲ್ವರ ಬಂಧನ

    ಹೈದರಾಬಾದ್: ಆದಾಯ ತೆರಿಗೆ ಅಧಿಕಾರಿಗಳಂತೆ (Income Tax Officer) ವೇಷ ಧರಿಸಿ ಹೈದರಾಬಾದ್‌ನ (Hyderabad) ಅಂಗಡಿಯೊಂದರಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್‌ಗಳನ್ನು (Gold Biscuit) ಕದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ರೆಹಮಾನ್ ಗಫೂರ್ ಅಥರ್, ಜಾಕಿರ್ ಗನಿ ಅಥರ್, ಪ್ರವೀಣ್ ಯಾದವ್ ಹಾಗೂ ಆಕಾಶ್ ಅರುಣ್ ಎಂದು ಗುರುತಿಸಲಾಗಿದೆ. ಆರೋಪಿಗಳು ಸೇರಿದಂತೆ 8ರಿಂದ 10 ಜನರಿದ್ದ ತಂಡವು ಮೇ 27ರಂದು ಹೈದರಾಬಾದ್‌ನ ಮೋಂಡಾ ಮಾರ್ಕೆಟ್‌ನಲ್ಲಿರುವ ಸಿದ್ದಿವಿನಾಯಕ ಎಂಬ ಅಂಗಡಿಯಿಂದ ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸಿ 60 ಲಕ್ಷ ರೂ. ಮೌಲ್ಯದ 17 ಚಿನ್ನದ ಬಿಸ್ಕತ್‌ಗಳನ್ನು ಕಳವು ಮಾಡಿದ್ದಾರೆ. ಇದನ್ನೂ ಓದಿ: ಒಂದೇ ವಾರದಲ್ಲಿ 2,000 ರೂ. ನೋಟುಗಳ 14,000 ಕೋಟಿ ಡೆಪಾಸಿಟ್: SBI

    ಬಂಧಿತ ಆರೋಪಿಗಳಿಂದ 7 ಚಿನ್ನದ ಬಿಸ್ಕತ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇತರ ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಪಶ್ಚಾತ್ತಾಪವಿಲ್ಲ, ನನ್ನ ತಿರಸ್ಕರಿಸಿದ್ದಕ್ಕೆ ಆಕೆಯನ್ನು ಕೊಂದೆ- ತಪ್ಪೊಪ್ಪಿಕೊಂಡ ಸಾಹಿಲ್

  • ವಿಮಾನ ನಿಲ್ದಾಣದ ಕಸದ ಬುಟ್ಟಿಯಲ್ಲಿ ಸಿಕ್ತು 34 ಲಕ್ಷ ಮೌಲ್ಯದ ಚಿನ್ನದ ಬಿಸ್ಕತ್

    ವಿಮಾನ ನಿಲ್ದಾಣದ ಕಸದ ಬುಟ್ಟಿಯಲ್ಲಿ ಸಿಕ್ತು 34 ಲಕ್ಷ ಮೌಲ್ಯದ ಚಿನ್ನದ ಬಿಸ್ಕತ್

    ಲಕ್ನೋ: ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸದ ಬುಟ್ಟಿಯಲ್ಲಿ ಲಕ್ಷಾಂತರ ಮೌಲ್ಯ ಬೆಲೆ ಬಾಳುವ 6 ಚಿನ್ನದ ಬಿಸ್ಕತ್ ಪತ್ತೆ ಆಗಿದೆ.

    ಉತ್ತರಪ್ರದೇಶದ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ 6 ಚಿನ್ನದ ಬಿಸ್ಕತ್‍ಗಳ ಬೆಲೆಯೂ ಒಟ್ಟಾರೆಯಾಗಿ 36.60 ಲಕ್ಷ ರೂ.ಗಳಾಗಿವೆ. 6 ಚಿನ್ನದ ಬಾರ್‌ಗಳನ್ನು ಕಪ್ಪು ಟೇಪ್‍ನಿಂದ ಸುತ್ತಿರುವ ಪ್ಲಾಸ್ಟಿಕ್‍ನಲ್ಲಿ ಅಡಗಿಸಿಟ್ಟಿದ್ದರು. ನಂತರ ಇದನ್ನು ವಿಮಾನ ನಿಲ್ದಾಣದ ಕಸದ ಬುಟ್ಟಿಗೆ ಎಸೆಯಲಾಗಿತ್ತು.

    ಇದನ್ನು ನೋಡಿದ ಅಧಿಕಾರಿಗಳು ಚಿನ್ನದ ಬಿಸ್ಕತ್‍ನ್ನು ಜಪ್ತಿ ಮಾಡಲಾಗಿದ್ದು, ಕಸದ ಬುಟ್ಟಿಯಲ್ಲಿ ಚಿನ್ನ ಹೇಗೆ ಬಂತು. ಯಾರು ತಂದರು ಎಂಬ ಬಗ್ಗೆ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ದುಬೈನಿಂದ ಬಂದ ಕೆಲವು ಪ್ರಯಾಣಿಕರನ್ನು ವಿಚಾರಣೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಅಲ್ಲಿರುವ ಸಿಬ್ಬಂದಿಯನ್ನು ತನಿಖೆ ನಡೆಸುತ್ತಿದ್ದಾರೆ. ಆದರೂ ಈವರೆಗೂ ಆ ಚಿನ್ನದ ಬಿಸ್ಕತ್ ಯಾರದ್ದು ಎನ್ನುವುದು ಪತ್ತೆ ಆಗಿಲ್ಲ. ಇದನ್ನೂ ಓದಿ: ಡಿಕೆಶಿ ಕೈಎತ್ತಿದ ಬಳಿಕ ಕುಮಾರಸ್ವಾಮಿ ಅಬ್ಬೇಪಾರಿ ಆಗಿ ಬೀದಿಗೆ ಬಂದ್ರು, ಸಿದ್ದರಾಮಯ್ಯಗೂ ಇದೇ ಗತಿ: ಆರ್. ಅಶೋಕ್

    Live Tv
    [brid partner=56869869 player=32851 video=960834 autoplay=true]

  • ಮಂಗ್ಳೂರು ವಿಮಾನ ನಿಲ್ದಾಣದ ಟಾಯ್ಲೆಟ್ ನಲ್ಲಿ 34 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕೆಟ್ ಪತ್ತೆ!

    ಮಂಗ್ಳೂರು ವಿಮಾನ ನಿಲ್ದಾಣದ ಟಾಯ್ಲೆಟ್ ನಲ್ಲಿ 34 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕೆಟ್ ಪತ್ತೆ!

    ಮಂಗಳೂರು: ಇಲ್ಲಿನ ವಿಮಾನ ನಿಲ್ದಾಣದ ಟಾಯ್ಲೆಟ್ ನಲ್ಲಿ ಚಿನ್ನದ ಬಿಸ್ಕೆಟ್ ಪತ್ತೆಯಾಗಿದೆ. 34 ಲಕ್ಷ ಮೌಲ್ಯದ 1 ಕೆಜಿ 100 ಗ್ರಾಮ್ ತೂಕದ 10 ಚಿನ್ನದ ಗಟ್ಟಿಯನ್ನ ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ದುಬೈನಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಟಾಯ್ಲೆಟ್‍ನಲ್ಲಿ ಚಿನ್ನದ ಬಿಸ್ಕಟ್ ಇರುವ ಪ್ಯಾಕೆಟ್ ಎಸೆದುಹೋಗಿದ್ದಾನೆ ಎಂದು ಹೇಳಲಾಗಿದೆ. ಟಾಯ್ಲೆಟ್ ಕ್ಲೀನಿಂಗ್ ವೇಳೆ ಸಂಶಯದಲ್ಲಿ ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ.

    ಆರೋಪಿ ಬಗ್ಗೆ ಇನ್ನೂ ಗುರುತು ಸಿಕ್ಕಿಲ್ಲ. ಸದ್ಯ ಡಿಆರ್‍ಐ ಅಧಿಕಾರಿಗಳು ಚಿನ್ನದ ಬಿಸ್ಕೆಟ್ ವಶಕ್ಕೆ ಪಡೆದಿದ್ದಾರೆ.

     

  • ಅ.25ರಂದು ವಿಧಾನಸೌಧದ ವಜ್ರಮಹೋತ್ಸವ: ಪರಿಷತ್ ಸದಸ್ಯ, ಶಾಸಕ, ಸಿಬ್ಬಂದಿಗಳಿಗೆ ಭರ್ಜರಿ ಗಿಫ್ಟ್

    ಅ.25ರಂದು ವಿಧಾನಸೌಧದ ವಜ್ರಮಹೋತ್ಸವ: ಪರಿಷತ್ ಸದಸ್ಯ, ಶಾಸಕ, ಸಿಬ್ಬಂದಿಗಳಿಗೆ ಭರ್ಜರಿ ಗಿಫ್ಟ್

    ಬೆಂಗಳೂರು: ವಿಧಾನಸೌಧ ವಜ್ರಮಹೋತ್ಸವವು ಅಕ್ಟೋಬರ್ 25 ರಂದು ನಡೆಯಲಿದ್ದು, ಇದರ ಸವಿನೆನಪಿಗಾಗಿ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಚಿನ್ನದ ಬಿಸ್ಕತ್ ಹಾಗೂ ಸಿಬ್ಬಂದಿಗಳಿಗೆ ಬೆಳ್ಳಿತಟ್ಟೆ ನೀಡಲು ನಿರ್ಧರಿಸಿದೆ.

    ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನಡೆಸುತ್ತಿರುವ ಎರಡು ದಿನಗಳ ವಜ್ರಮಹೋತ್ಸವ ಸಮಾರಂಭದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟ ಸಚಿವರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

    ವಿಧಾನಸೌಧ ವಜ್ರಮಹೋತ್ಸವ ಸಮಾರಂಭಕ್ಕಾಗಿ ಒಟ್ಟು 27 ಕೋಟಿ ರೂ. ವೆಚ್ಚದಲ್ಲಿ 300 ಶಾಸಕರಿಗೆ ಹಾಗೂ ಪರಿಷತ್ ಸದಸ್ಯರಿಗೆ 50,000 ಮೌಲ್ಯದ ಚಿನ್ನದ ಬಿಸ್ಕತ್ ನೀಡಲು ನಿರ್ಧರಿಸಿದೆ.

    ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಬೆಂಗಳೂರಿನಲ್ಲಿ ಸಾವು ನೋವು ಸಂಭವಿಸಿರುವಾಗ 27 ಕೋಟಿ ಖರ್ಚು ಮಾಡುವುದು ಸರಿಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

    ಇನ್ನು ಯಾರು, ಯಾವ ಕಾರಣಕ್ಕೆ ಖರ್ಚು ಮಾಡುತ್ತಿದ್ದಾರೆ ಎಂಬುದನ್ನು ಹೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.

    27 ಕೋಟಿ ರೂ. ಖರ್ಚಿನ ಲೆಕ್ಕಾಚಾರ ಇಂತಿದೆ: