ಮಂಗಳೂರು: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ (Dharmasthala Case) ಅಸಲಿಯತ್ತು ಒಂದೊಂದಾಗಿಯೇ ಬಯಲಾಗುತ್ತಿದ್ದು, ಈಗ ಚಿನ್ನಯ್ಯ (Chinnayya) ತಂದಿದ್ದ ಬುರುಡೆ ಕೂಡ ಗಂಡಸಿನದ್ದು ಎಂಬ ವಿಚಾರ ಹೊರಬಿದ್ದಿದೆ.
ಎಸ್ಐಟಿ ತನಿಖೆ ವೇಳೆ 6ನೇ ಸ್ಪಾಟ್ನಲ್ಲಿ ಸಿಕ್ಕಿದ್ದು 35 ವರ್ಷ ಪುರುಷನ ಬುರುಡೆ. ಸ್ಪಾಟ್ ನಂ.11 ರಲ್ಲಿ ಬುರುಡೆಯೊಂದು ಭೂಮಿಯ ಮೇಲೆ ಪತ್ತೆಯಾಗಿತ್ತು. ಈ ಬುರುಡೆಯೂ ಪುರುಷನದ್ದು ಎಂದು ಸಾಬೀತಾಗಿದ್ದು, ಈ ಬುರುಡೆಯು ಒಂದು ವರ್ಷ ಮೂರು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯದ್ದು ಎಂದು ಶಂಕಿಸಲಾಗಿದೆ.
ಎಸ್ಐಟಿ ಅಧಿಕಾರಿಗಳು ಮೂರು ಬುರುಡೆಗೂ ಪ್ರತ್ಯೇಕ ಎಫ್ಐಆರ್ ದಾಖಲು ಮಾಡಿದ್ದಾರೆ.
ಮಂಗಳೂರು: ಹಣದ ಆಸೆಗಾಗಿ ಷಡ್ಯಂತ್ರಕ್ಕೆ ಒಳಗಾದೆ ಎಂದು ಚಿನ್ನಯ್ಯ (Chinnaiah) ಎಸ್ಐಟಿ (SIT) ಕಚೇರಿಯಲ್ಲೇ ನನ್ನ ಕಾಲಿಗೆ ಬಿದ್ದಿದ್ದ ಎಂದು ನೇತ್ರಾವತಿ ಸ್ನಾನಘಟ್ಟದ ಮಾಹಿತಿ ಕೇಂದ್ರದಲ್ಲಿ ಮೇಲ್ವಿಚಾರಕರಾಗಿದ್ದ ಸುಂದರ ಗೌಡ (Sundar Gowda) ಬಜಿಲ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನಾನು 1996ರಿಂದ 2000ದ ತನಕ ನೇತ್ರಾವತಿ ಸ್ನಾನ ಘಟ್ಟದ ಮಾಹಿತಿ ಕೇಂದ್ರದಲ್ಲಿ ಮೇಲ್ವಿಚಾರಕನಾಗಿದ್ದೆ. ಆ ಸಂದರ್ಭದಲ್ಲಿ ಚಿನ್ನಯ್ಯ, ಅಕ್ಕ, ಅಣ್ಣ, ಬಾವ, ಅತ್ತಿಗೆ ಎಲ್ಲರೂ ಶುಚಿತ್ವದ ಕೆಲಸ ಮಾಡುತ್ತಿದ್ದರು. ಶುಚಿತ್ವ ಕೆಲಸಕ್ಕೆಂದೇ ಆತನನ್ನು ನೇಮಕ ಮಾಡಿದ್ದು, ಅದನ್ನೇ ಮಾಡುತ್ತಿದ್ದ. ಚಿನ್ನಯ್ಯ ಹೇಳಿದ್ದು ಎಲ್ಲವೂ ಸತ್ಯಕ್ಕೆ ದೂರವಾದ ವಿಚಾರ. ಕ್ಷೇತ್ರದ ಹೆಸರು ಹಾಳು ಮಾಡಬೇಕು, ಷಡ್ಯಂತ್ರ ಮಾಡಬೇಕು ಎಂಬುದೇ ಆತನ ಉದ್ದೇಶವಾಗಿತ್ತು ಎಂದು ಕಿಡಿಕಾರಿದರು. ಇದನ್ನೂ ಓದಿ: ಎಸ್ಐಟಿ ತನಿಖೆಗೆ ವೀರೇಂದ್ರ ಹೆಗಡೆ ಸ್ವಾಗತ: ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು ಎಂದ ಸಿಎಂ
ನೇತ್ರಾವತಿ ನದಿಯಲ್ಲಿ ಶವ ತೇಲುತ್ತಾ ಬಂದರೆ ನಾವು ಅದನ್ನ ಹೂತು ಹಾಕುವ ಕೆಲಸ ಮಾಡೋದಿಲ್ಲ. ಏನಿದ್ರೂ ಪೊಲೀಸರಿಗೆ ತಿಳಿಸಿ ಆಸ್ಪತ್ರೆಗೆ ಸಾಗಿಸುತ್ತಿದ್ದೆವು. ಆತ ಮೃತದೇಹವನ್ನ ಕಾರಿಗೆ ಶಿಫ್ಟ್ ಮಾಡುವ, ಪೊಲೀಸರ ಜೊತೆ ಆಸ್ಪತ್ರೆಗೆ ಹೋಗುವ ಕೆಲಸ ಮಾಡುತ್ತಿದ್ದ. ಒಂದೇ ಒಂದು ಶವ ಹೂತಾಕುವ ಕೆಲಸ ಆತ ಮಾಡಿಲ್ಲ. ಎಸ್ಐಟಿ ಅಧಿಕಾರಿಗಳು ನನ್ನನ್ನು ಕರೆದಿದ್ದರು. ನಿಮ್ಮ ಮೇಲೆ ಆರೋಪಿ ಚಿನ್ನಯ್ಯ ಅಪವಾದ ಹಾಕಿದ್ದಾನೆ ಎಂದಿದ್ದರು. ಆತ ಶವ ಹೂತಿಟ್ಟ ವಿಚಾರದಲ್ಲಿ ನನ್ನ ಮೇಲೆ ಅಪವಾದ ಹಾಕಿದ್ದ. ಎರಡನೇ ಬಾರಿ ವಿಚಾರಣೆಗೆ ಚಿನ್ನಯ್ಯ ಹಾಗೂ ನನ್ನನ್ನು ಒಟ್ಟಿಗೆ ವಿಚಾರಣೆ ಮಾಡಿದ್ದರು. ವಿಚಾರಣೆ ವೇಳೆ ನಾನು ಷಡ್ಯಂತ್ರಕ್ಕೆ ಬಲಿಯಾಗಿದ್ದೇನೆ, ನಾನು ದುಡ್ಡಿನ ಆಸೆಗೆ ಇದೆಲ್ಲವನ್ನೂ ಮಾಡಿದ್ದು, ನನ್ನದು ತಪ್ಪಾಯ್ತು, ನನ್ನನ್ನು ಬಚಾವ್ ಮಾಡಿ ಎಂದು ಕಾಲಿಗೆ ಬಿದ್ದಿದ್ದ ಎಂದರು. ಇದನ್ನೂ ಓದಿ: ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ
ಎಲ್ಲ ಕೆಲಸ ಚೆನ್ನಾಗಿ ಮಾಡುತ್ತಿದ್ದ, ಆತನಿಗೆ ಎಲ್ಲವೂ ಕ್ಷೇತ್ರದಿಂದ ಕೊಡಲಾಗಿತ್ತು. ಊಟ, ವಸತಿ, ಸಂಬಳ ಎಲ್ಲವೂ ಆತನಿಗೆ ನೀಡಲಾಗುತ್ತಿತ್ತು. ಊರಿಗೆ ಹೋಗುವ ಖರ್ಚನ್ನು ಕೂಡ ಕ್ಷೇತ್ರ ನೀಡುತ್ತಿತ್ತು. ಕ್ಷೇತ್ರವನ್ನು ಮಲಿನ ಮಾಡಬೇಕು, ಪೂಜ್ಯರಿಗೆ ಕಳಂಕ ತರುವ ಉದ್ದೇಶದಿಂದ ಗ್ಯಾಂಗ್ ಮಾಡಿದ ಷಡ್ಯಂತ್ರಕ್ಕೆ ಆತ ಬಲಿಯಾಗಿದ್ದಾನೆ. ಈಗ ಸತ್ಯ ದರ್ಶನ ಹೊರಗೆ ಬರುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: Andhra Pradesh | ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು
ಬೆಂಗಳೂರು/ನವದೆಹಲಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ (Dharmasthala Mass Burials Case) ಸಂಬಂಧಿಸಿದಂತೆ ಬುರುಡೆ ಗ್ಯಾಂಗ್ನ ಮತ್ತೊಂದು ಮುಖವಾಡ ಕಳಚಿಬಿದ್ದಿದೆ. ಸುಪ್ರೀಂ ಕೋರ್ಟ್ನಲ್ಲಿ ಛೀಮಾರಿ ಹಾಕಿಸಿಕೊಂಡಿದ್ದ ಗ್ಯಾಂಗ್, ತಮಗಾದ ಹಿನ್ನಡೆಯನ್ನು ಮುಚ್ಚಿಟ್ಟು ದಕ್ಷಿಣ ಕನ್ನಡ (Dakshina Kannada) ಎಸ್ಪಿಗೆ ದೂರು ನೀಡಿದ್ದ ಸತ್ಯ ಈಗ ಬಟಾಬಯಲಾಗಿದೆ.
ಸುಪ್ರೀಂ (Supreme Court) ಆದೇಶವನ್ನ ಮುಚ್ಚಿಚ್ಚು ರಾಜ್ಯ ಸರ್ಕಾರವನ್ನೇ (Karnataka Government) ಈ ಬುರುಡೆ ಗ್ಯಾಂಗ್ ಯಾಮಾರಿಸಿತ್ತು. ಅರ್ಜಿ ವಜಾಗೊಂಡಿದ್ದರೂ ಎಸ್ಐಟಿ ರಚನೆ ಮಾಡಿಸಿಕೊಂಡು ತನಿಖೆ ಮಾಡಿಸಿತ್ತು ಅನ್ನೋ ರಹಸ್ಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಗಡಿಪಾರು ಆದೇಶ ಬಳಿಕ ತಿಮರೋಡಿ ಅಜ್ಞಾತ – ಇತ್ತ ಚಿನ್ನಯ್ಯನ 15, 16ನೇ ವಿಡಿಯೋ ರಿಲೀಸ್
ಸುಪ್ರೀಂ ಕೋರ್ಟ್ ಆದೇಶ ಮುಚ್ಚಿಟ್ಟು ಮೋಸ
ದಕ್ಷಿಣ ಕನ್ನಡ ಎಸ್ಪಿಗೆ ದೂರು ನೀಡುವುದಕ್ಕೆ ಮುನ್ನವೇ ಚಿನ್ನಯ್ಯನ ಮೂಲಕ ಬುರುಡೆ ಗ್ಯಾಂಗ್ ಸುಪ್ರೀಂ ಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಆದ್ರೆ ಮೇ 5ರಂದು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ, ನ್ಯಾ.ಸತೀಶ್ ಚಂದ್ರ ನೇತೃತ್ವದ ಪೀಠ ಅರ್ಜಿ ವಜಾ ಮಾಡಿತ್ತು. ಆದ್ರೂ ಇದನ್ನ ಮುಚ್ಚಿಟ್ಟು ಬುರುಡೆ ಗ್ಯಾಂಗ್ ಬೆಳ್ತಂಗಡಿ ಕೋರ್ಟ್ಗೆ ಅರ್ಜಿ ಸಲ್ಲಿಸಿ, ಎಸ್ಪಿಗೂ ದೂರು ನೀಡಲಾಗಿತ್ತು. ಇದನ್ನೂ ಓದಿ: ತಿಮರೋಡಿ ಬಳಿಗೆ ನಮ್ಮನ್ನ ಕರೆದುಕೊಂಡು ಹೋಗಿದ್ದೇ ಸೌಜನ್ಯ ಮಾವ: ಚಿನ್ನಯ್ಯನ 2ನೇ ಪತ್ನಿ ಬಾಂಬ್
ಎಸ್ಐಟಿ ರಚನೆ ಮಾಡುವಂತೆ ಅರ್ಜಿ ಸಲ್ಲಿಸಿದ್ದ ಗ್ಯಾಂಗ್
ಕಳೆದ ಏಪ್ರಿಲ್ 30 ರಂದು ಧರ್ಮಸ್ಥಳ ಪ್ರಕರಣದ ಕುರಿತು ಎಸ್ಐಟಿ ರಚನೆ ಮಾಡುವಂತೆ ಒತ್ತಾಯಿಸಿ ಬುರುಡೆ ಗ್ಯಾಂಗ್ ಅರ್ಜಿ ಸಲ್ಲಿಕೆ ಮಾಡಿತ್ತು. ಆದ್ರೆ ಮೇ 5ರಂದೇ ಸುಪ್ರೀಂ ಕೋರ್ಟ್ ಬುರುಡೆ ಗ್ಯಾಂಗ್ಗೆ ಛೀಮಾರಿ ಹಾಕಿ ಅರ್ಜಿ ವಜಾಗೊಳಿಸಿತ್ತು. ಇದರಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಕಾಣುತ್ತಿಲ್ಲ, ವೈಯಕ್ತಿಕ ಹಿತಾಸಕ್ತಿ ಕಾಣಿಸುತ್ತಿದೆ. ಇದು ಪೈಸಾ ಇಂಟರೆಸ್ಟ್ ಲಿಟಿಗೇಷನ್, ಪೊಲಿಟಿಕಲ್ ಇಂಟರೆಸ್ಟ್ ಲಿಟಿಗೇಷನ್, ಪ್ರೈವೇಟ್ ಇಂಟರೆಸ್ಟ್ ಲಿಟಿಗೇಷನ್ ಎಂದು ಬುರುಡೆ ಗ್ಯಾಂಗ್ಗೆ ತಪರಾಕಿ ಹಾಕಿತ್ತು. ನಾಚಿಕೆ ಮಾನಾ ಮರ್ಯಾದೆ ಎಲ್ಲವನ್ನೂ ಬಿಟ್ಟು ಬಂದು ದೂರು ನೀಡಿದ್ದೀರಿ ಎಂದು ಗ್ಯಾಂಗನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಸಾರಾಸಗಟಾಗಿ ಅರ್ಜಿಯನ್ನ ತಿರಸ್ಕರಿಸಿತ್ತು.
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ (Dharmasthala Mass Burials) ಪ್ರಕರಣ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಸರಣಿ ವೀಡಿಯೋಗಳನ್ನು ಬಿಡುಗಡೆ ಮಾಡುತ್ತಿರುವುದರ ನಡುವೆ, ಬುರುಡೆ ಚಿನ್ನಯ್ಯನನ್ನು (Mask Man Chinnaiah) ಇಂದು ಮತ್ತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್ಐಟಿ (SIT) ಹಾಜರುಪಡಿಸಲಿದೆ. ಈ ನಡುವೆ ಮಹೇಶ್ ಶೆಟ್ಟಿ ತಿಮರೋಡಿಗೆ ಪೊಲೀಸರು ಮೂರನೇ ನೋಟಿಸ್ ಸರ್ವ್ ಮಾಡಲು ಸಿದ್ಧತೆ ನಡೆಸಿದ್ದಾರೆ. ನಿರೀಕ್ಷಣಾ ಜಾಮೀನಿಗಾಗಿ ತಿಮರೋಡಿ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.
ಧರ್ಮಸ್ಥಳದ ಬುರುಡೆ ಗ್ಯಾಂಗ್ನ ಎಸ್ಐಟಿ ತನಿಖೆ ಸಾವಧಾನವಾಗಿ ಸಾಗಿದೆ. ಪಿನ್ ಟು ಪಿನ್ ಮಾಹಿತಿಗಳನ್ನು ಕಲೆ ಹಾಕುತ್ತಿರುವ ಪೊಲೀಸರು, ಬುರುಡೆ ಚಿನ್ನಯ್ಯನನ್ನು ಮತ್ತೆ ಕೋರ್ಟ್ಗೆ ಇಂದು ಹಾಜರುಪಡಿಸಲಿದ್ದಾರೆ. ಹೆಚ್ಚುವರಿ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ದಾಖಲಿಸುವ ಕಾರ್ಯ ನಡೆಯಲಿದೆ. ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನನ್ನು ಈಗಾಗಲೇ ಒಂದು ಬಾರಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲು ಕರೆ ತಂದಿದ್ದು, ಇಂದು ಹೇಳಿಕೆ ದಾಖಲಿಸಲು ನ್ಯಾಯಾಧೀಶರು ಅನುಮತಿ ನೀಡಿದ್ದರು. ಹೀಗಾಗಿ ಮತ್ತೆ ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ನನ್ನು ಕರೆ ತಂದು ಬೆಳ್ತಂಗಡಿ ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಇದನ್ನೂ ಓದಿ: ಚಿನ್ನದ ಮಾಂಗಲ್ಯ ಸರದ ಆಸೆಗೆ ಮಾವನ ಮಗಳ ಕೊಲೆ – ಸತ್ಯ ಹೊರಬರುತ್ತಿದ್ದಂತೆ ಆರೋಪಿ ಆತ್ಮಹತ್ಯೆ
ಇನ್ನು ಬುರುಡೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದ್ದು, ಬಂಗ್ಲೆಗುಡ್ಡ ತಲೆಬುರೆಡೆ, ಮೂಳೆಗಳು ಪತ್ತೆ ಕೇಸ್ ಎಸ್ಐಟಿ ತನಿಖೆ ಬದಲು ಸಿಐಡಿ ತನಿಖೆಗೆ ಹಸ್ತಾಂತರಿಸಲು ಸರ್ಕಾರ ಪ್ಲ್ಯಾನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಇದೇ ಗುರುವಾರ ರಾಜ್ಯ ಸರ್ಕಾರದಿಂದ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಶವಗಳ ಹೂತಿಟ್ಟ ಪ್ರಕರಣಗಳು ಮಾತ್ರ ಎಸ್ಐಟಿ ತನಿಖೆ ವ್ಯಾಪ್ತಿಯಲ್ಲಿ ಇರಲಿದೆ. ಷಡ್ಯಂತ್ರ ನಡೆದಿದೆ ಎಂದು ಕ್ರಿಮಿನಲ್ ಪಿತೂರಿ ನಡೆದಿರುವ ಬಗ್ಗೆ ಸರ್ಕಾರಕ್ಕೆ ಮೌಖಿಕ ವರದಿ ಕೊಟ್ಟಿದೆ ಎನ್ನಲಾಗಿದೆ. ಇನ್ನು ಎಸ್ಐಟಿ ಮಾಹಿತಿ ಮೇರೆಗೆ ಉಳಿದ ತನಿಖೆಯನ್ನ ಸಿಐಡಿಗೆ ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ವಿಚಾರಣೆಗೆ ಹಾಜರಾಗದ ವಿಜಯಲಕ್ಷ್ಮಿ – ಸಿ ರಿಪೋರ್ಟ್ ಸಲ್ಲಿಕೆಗೆ ಪೊಲೀಸರ ಚಿಂತನೆ
ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ತಪಾಸಣೆ ನಡೆಸಿದಾಗ ಪೊಲೀಸರು ತಲ್ವಾರ್ ಬಂದೂಕು ಸೇರಿದಂತೆ ಹಲವಾರು ವಸ್ತುಗಳು ವಶಕ್ಕೆ ಪಡೆದಿದ್ದರು. ಈ ವಿಚಾರಣೆಗೆ ಈಗಾಗಲೇ ಎರಡು ಬಾರಿ ನೋಟಿಸನ್ನು ಕೊಡಲಾಗಿದೆ. ಎರಡು ನೋಟಿಸ್ಗೆ ಕ್ಯಾರೇ ಎನ್ನದ ತಿಮರೋಡಿ ಬೇಲ್ಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಈ ನಡುವೆ ಪೊಲೀಸರು 3ನೇ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಮೂರನೇ ನೋಟಿಸ್ಗೆ ಉತ್ತರಿಸದಿದ್ದರೆ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarody) ಮತ್ತೆ ಬಂಧನವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ – 9 ಬಾರಿ ಚಾಕು ಇರಿದು ಲಿವ್ ಇನ್ ಗೆಳತಿಯ ಕೊಂದ ಪ್ರಿಯಕರ
– ಮುಂದೆ ತಾನಾಸಿ, ಚಿನ್ನಯ್ಯ ಅಕ್ಕನ ವಿಡಿಯೋ ಕೂಡ ವೈರಲ್ ಮಾಡ್ತಾರೆ; ಕಳವಳ
ಚಾಮರಾಜನಗರ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ (Dharmasthala Case) ಆರಂಭದಿಂದಲೂ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಶುಕ್ರವಾರ (ಸೆ.19) ಮಹೇಶ್ಶೆಟ್ಟಿ ತಿಮರೋಡಿ ಆರೋಪಿ ಚಿನ್ನಯ್ಯನ ಜೊತೆ ಮಾತನಾಡಿದ್ದ ಒಂದು ವರ್ಷದ ಹಿಂದಿನ ವಿಡಿಯೋವೊಂದು ರಿಲೀಸ್ ಆಗಿತ್ತು. ಇದಕ್ಕೆ ಸಂಬಂಧಿಸಿದಂತೆ ʻಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿರುವ ಚಿನ್ನಯ್ಯನ 2ನೇ ಪತ್ನಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಠಲ ಗೌಡನೇ ನಮ್ಮನ್ನ ತಿಮರೋಡಿ (Mahesh Shetty Thimarody) ಮನೆಗೆ ಕರೆದುಕೊಂಡು ಹೋಗಿದ್ದು ಅಂತ ಹೇಳಿದ್ದಾರೆ.
ʻಪಬ್ಲಿಕ್ ಟಿವಿʼ (Public TV) ಜೊತೆಗೆ ಮಾತನಾಡಿದ 2ನೇ ಪತ್ನಿ ಮಲ್ಲಿಕಾ, ವಿಠಲ ಗೌಡನೇ (Vittal Gowda) ನಮ್ಮನ್ನ ತಿಮರೋಡಿ ಬಳಿ ಕರೆದುಕೊಂಡು ಹೋಗಿದ್ದು. ನಾನು ಹೋದಾಗ ತಿಮರೋಡಿ ಮನೆ ಇದು ಅಂತ ಗೊತ್ತಿರಲಿಲ್ಲ. ಸ್ವಲ್ಪ ಕೆಲಸ ಉಂಟು ಅಂತ ವಿಠಲ ಕರೆದುಕೊಂಡ ಹೋದ. ಬುರುಡೆಯನ್ನು ತಮಿಳುನಾಡು, ಕೇರಳ, ಬೆಂಗಳೂರು, ದೆಹಲಿ ಅಂತ ಹೇಳ್ತಿದ್ದರು ಅಂತ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ವರ್ಷದ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಮಾತುಕತೆ – ಸ್ಫೋಟಕ ವಿಡಿಯೋ ರಿಲೀಸ್
ಸೌಜನ್ಯ ಮಾವ ಬುರುಡೆ ಎತ್ತಿಕೊಂಡು ಗಿರೀಶ್ ಮಟ್ಟಣ್ಣನವರ್ ಮನೆಯಲ್ಲಿ ಮಡಗಿದ್ದರಂತೆ. ತಿಮರೋಡಿ ಆವತ್ತು ಕೆಲಸದವರ ರೀತಿ ಇದ್ದರು. ಛೆಂಬರ್ ಕೆಲಸವಿದೆ ಬನ್ನಿ ಅಂತಾ ಕರೆದುಕೊಂಡು ಹೋಗಿ ತಿಮರೋಡಿ ಮನೆಯಲ್ಲಿ ಬಿಟ್ಟರು. ಅಲ್ಲಿ ಟೀ ಕುಡಿದ್ವಿ. ಮದ್ವೆ ಆಗಿ ಎಷ್ಟು ವರ್ಷ ಆಯ್ತಮ್ಮಾ ಅಂತ ಕೇಳಿದ್ರು, 4 ವರ್ಷ ಆಯ್ತು ಅಂತ ಹೇಳಿದ್ದೆ. ಒಟ್ಟಿನಲ್ಲಿ ಈ ಧರ್ಮಸ್ಥಳ ಬಗ್ಗೆ ಅಪಪ್ರಚಾರ ಮಾಡುವುದೇ ಈ ಗ್ಯಾಂಗ್ ಉದ್ದೇಶವಾಗಿತ್ತು. ಇದೀಗ ನಮ್ಮ ವಿಡಿಯೋ ವೈರಲ್ ಮಾಡಿದ್ದಾರೆ. ಮುಂದೆ ತಾನಾಸಿ ಹಾಗೂ ಚಿನ್ನಯ್ಯ (Chinnaiah) ಅಕ್ಕನ ವಿಡಿಯೋ ಕೂಡ ವೈರಲ್ ಮಾಡ್ತಾರೆ. ನನ್ನ ಗಂಡನನ್ನು ಈ ಪ್ರಕರಣದಲ್ಲಿ ಸಿಕ್ಕಿಸುವ ಪ್ಲ್ಯಾನ್ ಮಾಡಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ ಮಲ್ಲಿಕಾ.
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಆರಂಭದಿಂದಲೂ ಹೊಸ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಶುಕ್ರವಾರ (ಸೆ.19) ಮಹೇಶ್ಶೆಟ್ಟಿ ತಿಮರೋಡಿ ಆರೋಪಿ ಚಿನ್ನಯ್ಯನ ಜೊತೆ ಮಾತನಾಡಿದ್ದ ವಿಡಿಯೋವೊಂದನ್ನು ರಿಲೀಸ್ ಮಾಡಿದ್ದರು. ಇದೀಗ ಅದರ ಮುಂದುವರಿದ ಭಾಗ ಬಹಿರಂಗಗೊಂಡಿದೆ.
2 ವರ್ಷಗಳ ಹಿಂದೆ 2023ರ ಆಗಸ್ಟ್ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಚಿನ್ನಯ್ಯ ಭೇಟಿಯಾಗಿದ್ದ ವಿಡಿಯೋ ಇದ್ದಾಗಿದ್ದು, ಶುಕ್ರವಾರ ರಿಲೀಸ್ ಮಾಡಿದ್ದ ವಿಡಿಯೋದ ಮುಂದುವರಿದ ಭಾಗವಿದು. ವಿಡಿಯೋದಲ್ಲಿ ಆರೋಪಿ ಚಿನ್ನಯ್ಯ ಸ್ಟಾಟ್ ನಂ.17ರ ಬಗ್ಗೆ ಮಾತನಾಡಿದ್ದಾನೆ. ಗೊಮ್ಮಟ ಬೆಟ್ಟದಿಂದ ಬರುವ ಫಸ್ಟ್ ಟರ್ನ್ನಲ್ಲಿ ಏನಿಲ್ಲ ಅಂದ್ರೂ 70ಕ್ಕೂ ಹೆಚ್ಚು ಹೆಣ ಹೂತು ಹಾಕಿದ್ದೇನೆ. ಅದು ಸ್ಮಶಾನ ಅಲ್ಲ, ಬಸ್ ಸ್ಟ್ಯಾಂಡ್ನಿಂದ ತರಕಾರಿ ತೆಗೆದುಕೊಂಡು ಹೋಗುವ ಗಾಡಿಯಲ್ಲಿ ಹೆಣ ತಂದು ಹೂತು ಹಾಕುತ್ತಿದ್ದೆ. ಯಾವ ನೆಲ ಒಣಗಿರುತ್ತೋ ಅದನ್ನು ತೆಗೆದು ಹೂತು ಹಾಕುತ್ತಿದ್ದೆ. ಇನ್ನೂ ನೇತ್ರಾವತಿ ತೀರದಲ್ಲಿ ಹೆಣ ಹೂತುಹಾಕಿದ್ದಕ್ಕೆ ಲೆಕ್ಕವೇ ಇಲ್ಲ.ಇದನ್ನೂ ಓದಿ: ವರ್ಷದ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಮಾತುಕತೆ – ಸ್ಫೋಟಕ ವಿಡಿಯೋ ರಿಲೀಸ್
ಪ್ರಾಥಮಿಕ ಶಾಲೆಯ ಹಿಂಭಾಗದ ಭಟ್ರ ಮನೆಯ ಬಾವಿಯಲ್ಲಿ ಒಂದು ಹೆಣ ಸಿಕ್ಕಿತ್ತು. ಅಲ್ಲಿ ಏನಾಯ್ತು ಅಂತಾ ಗೊತ್ತಿಲ್ಲ. ನೇತ್ರಾವತಿಯಲ್ಲಿ ಒಂದು ಹೆಣ ತೆಗೆದಿದ್ದೆ. ಅದೇ ದಿನ ಪೊಲೀಸರು ನನಗೆ ಭಟ್ರ ಮನೆಗೆ ಕರೆದುಕೊಂಡು ಹೋದರು. ಅಲ್ಲಿ ಕೇಳಿದ್ರೆ ಹುಡುಗಿ ಫೇಲ್ ಆಗಿದ್ದಕ್ಕೆ ಬಾವಿಗೆ ಹಾರಿದ್ದಳು ಎಂದಿದ್ದರು. ನಾನು ಹೆಣ ಮೇಲೆ ಹಾಕಿ ವಾಪಾಸ್ ಬಂದೆ. ಜೊತೆಗೆ ಬಿಳಿ ಸೀರೆಯ ಕೇರಳ ಮೂಲದ ಹೆಂಗಸಿನ ಹೆಣವೊಂದನ್ನು ಹೂತು ಹಾಕಿದ್ದೇನೆ ಎಂದಿದ್ದಾನೆ.
ವಿಡಿಯೋದ ಮೊದಲ ಭಾಗದಲ್ಲೇನಿದೆ?
ಗುಂಡಿ ತೆಗೆದು ಹೆಣ ಹೂಳುತ್ತಿದ್ದೆ. ನೇತ್ರಾವತಿ ಸ್ನಾನಘಟ್ಟ ಸರ್ಕಾರಿ ಜಾಗ ಎಂದವರಿಗೆ ರಕ್ತ ಬರೋ ಹಾಗೆ ನನ್ನ ಹತ್ತಿರ ಹೊಡೆಸುತ್ತಿದ್ದರು. ಒಂದು ಹೆಣವನ್ನು ಹೂಳುವಾಗ ಡಾಕ್ಟರ್ ಬರದೇ ಕಾಂಪೌಂಡರ್ ಪೋಸ್ಟ್ ಮಾರ್ಟಮ್ ಮಾಡಿದ್ದ ಎಂದಿದ್ದಾನೆ.
ಸೌಜನ್ಯ ಅತ್ಯಾಚಾರ ಕೊಲೆ ವಿಚಾರ ನಾವು ಬೇರೆ ಕಡೆ ಮಾತನಾಡುತ್ತೇವೆ ಅಂತಾ ನಮ್ಮನ್ನು ಜಾಗ ಖಾಲಿ ಮಾಡಿಸಿದ್ರು. ಅಲ್ಲದೇ ಧರ್ಮಸ್ಥಳದವರು 3.5 ಲಕ್ಷ ರೂ. ಕೊಡಬೇಕಿತ್ತು. 500ರ ನೋಟಿನ 5 ಕಟ್ಟು ತಂದು ಅದರಲ್ಲಿ ಸ್ವಲ್ಪ ಮಾತ್ರ ಕೊಟ್ಟು ಜಾಗ ಖಾಲಿ ಮಾಡಿಸಿದ್ರು. ತುಂಬಾ ಅನ್ಯಾಯ ಮಾಡಿದ್ರು ಅಂತಾ ತಿಮರೋಡಿ ಬಳಿ ಚಿನ್ನಯ್ಯ ಹೇಳಿಕೊಂಡಿದ್ದ.ಇದನ್ನೂ ಓದಿ: ಬಂಗ್ಲೆಗುಡ್ಡದಲ್ಲಿ ಸಿಕ್ಕ ಐದು ತಲೆ ಬುರುಡೆ, ಮೂಳೆಗಳು ಪುರುಷರದ್ದು – ಇಂದು ಎರಡನೇ ದಿನದ ಶೋಧ ಕಾರ್ಯ
2 ವರ್ಷಗಳ ಹಿಂದೆಯೇ ಧರ್ಮಸ್ಥಳಕ್ಕೆ ಬಂದಿದ್ದ ಚಿನ್ನಯ್ಯ
ಇನ್ನೂ ಮ್ಯಾಜಿಸ್ಟ್ರೇಟ್ ಮುಂದೆ ತಪ್ಪೊಪ್ಪಿಗೆ ನೀಡಲು ಬಂದಿದ್ದ ಚಿನ್ನಯ್ಯನ ಸ್ಫೋಟಕ ಮಾಹಿತಿ ಬಹಿರಂಗ ಆಗಿದೆ. ಚಿನ್ನಯ್ಯ ಧರ್ಮಸ್ಥಳಕ್ಕೆ ತಿಂಗಳ ಹಿಂದಷ್ಟೇ ಬಂದಿಲ್ಲ. ಎರಡು ವರ್ಷದ ಹಿಂದೆಯೇ ಬಂದಿದ್ದ ಎನ್ನಲಾಗಿದೆ. ಇದಕ್ಕೆ ನಿರಂತರವಾಗಿ ಎರಡು ವರ್ಷದಿಂದ ಪ್ಲ್ಯಾನ್ ನಡೆಸಲಾಗಿತ್ತು ಅಂತ ಸ್ಪಷ್ಟವಾದ ಮಾಹಿತಿ ಸಿಕ್ಕಿದೆ. ಚಿನ್ನಯ್ಯ ಎರಡು ವರ್ಷದ ಹಿಂದೆ ಬಂದಿದ್ದಾನೆ ಅನ್ನೋದಕ್ಕೆ ಟೆಕ್ನಿಕಲ್ ಎವಿಡೆನ್ಸ್ ಜೊತೆಗೆ ಚಿನ್ನಯ್ಯ ತಪ್ಪೊಪ್ಪಿಗೆಯೂ ಸಹ ಪ್ರಕರಣಕ್ಕೆ ಬಲವಾದ ಸಾಕ್ಷ್ಯ ಸಿಕ್ಕಿದೆ.
ಅದೇ ಗ್ಯಾಂಗ್ ಜೊತೆಯಲ್ಲಿಯೇ ವಾಸವಿದ್ದ ಅನ್ನೋದು ತನಿಖೆಯಲ್ಲಿ ಬಹಿರಂಗ ಆಗಿದೆ. ಇತ್ತ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಸಿಕ್ಕ ಹಿನ್ನೆಲೆ ಬೆಳ್ತಂಗಡಿ ಪೊಲೀಸರು ನೋಟಿಸ್ ಕೊಟ್ಟಿದ್ದಾರೆ. ಮಹೇಶ್ ಶೆಟ್ಟಿ ಮನೆಯಲ್ಲಿ ಇಲ್ಲದ ಕಾರಣ ಉಜಿರೆಯ ಮನೆ ಗೋಡೆಗೆ ನೋಟಿಸ್ ಅಂಟಿಸಿ, ಸೆಪ್ಟೆಂಬರ್ 21ಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.
ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಲೈಸೆನ್ಸ್ ಹೊಂದಿದ್ದಾರೆಯೇ ಇಲ್ಲವೇ ಎಂಬುದನ್ನು ಬೆಳ್ತಂಗಡಿ ಪೊಲೀಸರು ಪರಿಶೀಲನೆ ಮಾಡ್ತಿದ್ದಾರೆ. ಲೈಸೆನ್ಸ್ ಇಲ್ಲ ಎಂಬುದು ಖಾತ್ರಿಯಾದ್ರೆ ತಿಮರೋಡಿ ಬಂಧಿಸುವ ಸಾಧ್ಯತೆ ಇದೆ. ಈ ಮಧ್ಯೆ ಎಸ್ಐಟಿ ಬುಲಾವ್ ಮೇರೆಗೆ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ವಕೀಲ ಕೇಶವ ಗೌಡ ಬೆಳಾಲು ವಿಚಾರಣೆಗೆ ಹಾಜರಾಗಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಪರ ಹಾಗೂ ಬುರುಡೆ ಕೇಸ್ ಬಗ್ಗೆ ಈ ಇಬ್ಬರು ಹಲವು ಹೇಳಿಕೆ ಕೊಟ್ಟಿದ್ದರು. ಹೀಗಾಗಿ ಇಬ್ಬರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.ಇದನ್ನೂ ಓದಿ: ಬಂಗ್ಲೆಗುಡ್ಡ ರಹಸ್ಯ | 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್, ವಾಕಿಂಗ್ ಸ್ಟಿಕ್ ಪತ್ತೆ
– ಬುರುಡೆ ಷಡ್ಯಂತ್ರದ ಹಿಂದಿನ ರಹಸ್ಯ ಬಯಲಾಯ್ತಾ..?
– 2 ವರ್ಷಗಳ ಹಿಂದೆಯೇ ಧರ್ಮಸ್ಥಳಕ್ಕೆ ಬಂದಿದ್ದ ಚಿನ್ನಯ್ಯ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ (Dharmasthala Case) ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆರೋಪಿ ಚಿನ್ನಯ್ಯ ಜೊತೆ ಮಹೇಶ್ಶೆಟ್ಟಿ ತಿಮರೋಡಿ (Mahesh Shetty thimarody) ಭೇಟಿಯಾದ ವಿಡಿಯೋ ಬಹಿರಂಗಗೊಂಡಿದೆ.
ತಿಮರೋಡಿ ಮನೆಯಲ್ಲಿ ವರ್ಷದ ಹಿಂದೆ ಭೇಟಿಯಾಗಿದ್ದ ವಿಡಿಯೋ ಇದಾಗಿದೆ. ತಿಮರೋಡಿ ಭೇಟಿ ವೇಳೆ ಹೆಣಗಳ ಹೂತ ಬಗ್ಗೆ ಚಿನ್ನಯ್ಯ (Chinnaiah) ಹೇಳಿದ್ದಾನೆ. ಗುಂಡಿ ತೆಗೆದು ಹೆಣ ಹೂಳುತ್ತಿದ್ದೆ. ನೇತ್ರಾವತಿ ಸ್ನಾನಘಟ್ಟ ಸರ್ಕಾರಿ ಜಾಗ ಎಂದವರಿಗೆ ರಕ್ತ ಬರೋ ಹಾಗೆ ನನ್ನ ಹತ್ತಿರ ಹೊಡೆಸುತ್ತಿದ್ದರು. ಒಂದು ಹೆಣವನ್ನು ಹೂಳುವಾಗ ಡಾಕ್ಟರ್ ಬರದೇ ಕಂಪೌಂಡರ್ ಪೋಸ್ಟ್ ಮಾರ್ಟಮ್ ಮಾಡಿದ್ದ ಎಂದಿದ್ದಾನೆ. ಇದನ್ನೂ ಓದಿ: ದಿಶಾ ಪಟಾನಿ ಮನೆ ಮುಂದೆ ಗುಂಡಿನ ದಾಳಿ – ಆರೋಪಿಗೆ ಗುಂಡೇಟು ನೀಡಿ ಬಂಧಿಸಿದ ಪೊಲೀಸರು
ಸೌಜನ್ಯ ಅತ್ಯಾಚಾರ ಕೊಲೆ ವಿಚಾರ ನಾವು ಬೇರೆ ಕಡೆ ಮಾತನಾಡುತ್ತೇವೆ ಅಂತಾ ನಮ್ಮನ್ನು ಜಾಗ ಖಾಲಿ ಮಾಡಿಸಿದ್ರು. ಅಲ್ಲದೇ ಧರ್ಮಸ್ಥಳದವರು 3.5 ಲಕ್ಷ ಹಣ ಕೊಡಬೇಕಿತ್ತು. 500ರ ನೋಟಿನ 5 ಕಟ್ಟು ತಂದು ಅದರಲ್ಲಿ ಸ್ವಲ್ಪ ಮಾತ್ರ ಕೊಟ್ಟು ಜಾಗ ಖಾಲಿ ಮಾಡಿಸಿದ್ರು. ತುಂಬಾ ಅನ್ಯಾಯ ಮಾಡಿದ್ರು ಅಂತಾ ತಿಮರೋಡಿ ಬಳಿ ಚಿನ್ನಯ್ಯ ಹೇಳಿಕೊಂಡಿದ್ದ. 2023ರ ಆಗಸ್ಟ್ನಲ್ಲಿ ಇಷ್ಟೆಲ್ಲ ಮಾತುಕತೆ ನಡೆದಿತ್ತು ಎಂಬ ಸತ್ಯವನ್ನು ವಿಡಿಯೋ ಬಯಲು ಮಾಡಿದೆ.
2 ವರ್ಷಗಳ ಹಿಂದೆಯೇ ಧರ್ಮಸ್ಥಳಕ್ಕೆ ಬಂದಿದ್ದ ಚಿನ್ನಯ್ಯ
ಇನ್ನೂ ಮ್ಯಾಜಿಸ್ಟ್ರೇಟ್ ಮುಂದೆ ತಪ್ಪೊಪ್ಪಿಗೆ ನೀಡಲು ಬಂದಿದ್ದ ಚಿನ್ನಯ್ಯನ ಬಳಿ ಸ್ಫೋಟಕ ಮಾಹಿತಿ ಬಹಿರಂಗ ಆಗಿದೆ. ಚಿನ್ನಯ್ಯ ಧರ್ಮಸ್ಥಳಕ್ಕೆ ತಿಂಗಳ ಹಿಂದಷ್ಟೇ ಬಂದಿಲ್ಲ. ಎರಡು ವರ್ಷದ ಹಿಂದೆಯೇ ಬಂದಿದ್ದ ಎನ್ನಲಾಗಿದೆ. ಇದಕ್ಕೆ ನಿರಂತರವಾಗಿ ಎರಡು ವರ್ಷದಿಂದ ಪ್ಲಾನ್ ನಡೆಸಲಾಗಿತ್ತು ಅಂತ ಸ್ಪಷ್ಟವಾದ ಮಾಹಿತಿ ಸಿಕ್ಕಿದೆ. ಚಿನ್ನಯ್ಯ ಎರಡು ವರ್ಷದ ಹಿಂದೆ ಬಂದಿದ್ದಾನೆ ಅನ್ನೋದಕ್ಕೆ ಟೆಕ್ನಿಕಲ್ ಎವಿಡೆನ್ಸ್ ಜೊತೆಗೆ ಚಿನ್ನಯ್ಯ ತಪ್ಪೊಪ್ಪಿಗೆಯೂ ಸಹ ಪ್ರಕರಣಕ್ಕೆ ಬಲವಾದ ಸಾಕ್ಷ್ಯ ಸಿಕ್ಕಿದೆ.
ಅದೇ ಗ್ಯಾಂಗ್ ಜೊತೆಯಲ್ಲಿಯೇ ವಾಸವಿದ್ದ ಅನ್ನೋದು ತನಿಖೆಯಲ್ಲಿ ಬಹಿರಂಗ ಆಗಿದೆ. ಇತ್ತ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಸಿಕ್ಕ ಹಿನ್ನೆಲೆ ಬೆಳ್ತಂಗಡಿ ಪೊಲೀಸರು ನೋಟಿಸ್ ಕೊಟ್ಟಿದ್ದಾರೆ. ಮಹೇಶ್ ಶೆಟ್ಟಿ ಮನೆಯಲ್ಲಿ ಇಲ್ಲದ ಕಾರಣ ಉಜಿರೆಯ ಮನೆ ಗೋಡೆಗೆ ನೋಟೀಸ್ ಅಂಟಿಸಿ, ಸೆಪ್ಟೆಂಬರ್ 21ಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಬಂಗ್ಲೆಗುಡ್ಡ ರಹಸ್ಯ | 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್, ವಾಕಿಂಗ್ ಸ್ಟಿಕ್ ಪತ್ತೆ
ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಲೈಸೆನ್ಸ್ ಹೊಂದಿದ್ದಾರೆಯೇ ಇಲ್ಲವೇ ಎಂಬುದನ್ನು ಬೆಳ್ತಂಗಡಿ ಪೊಲೀಸರು ಪರಿಶೀಲನೆ ಮಾಡ್ತಿದ್ದಾರೆ. ಲೈಸೆನ್ಸ್ ಇಲ್ಲ ಎಂಬುದು ಖಾತ್ರಿಯಾದ್ರೆ ತಿಮರೋಡಿ ಬಂಧಿಸುವ ಸಾಧ್ಯತೆ ಇದೆ. ಈ ಮಧ್ಯೆ ಎಸ್ಐಟಿ ಬುಲಾವ್ ಮೇರೆಗೆ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ವಕೀಲ ಕೇಶವ ಗೌಡ ಬೆಳಾಲು ವಿಚಾರಣೆಗೆ ಹಾಜರಾಗಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಪರ ಹಾಗೂ ಬುರುಡೆ ಕೇಸ್ ಬಗ್ಗೆ ಈ ಇಬ್ಬರು ಹಲವು ಹೇಳಿಕೆ ಕೊಟ್ಟಿದ್ದರು. ಹೀಗಾಗಿ ಇಬ್ಬರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಬಂಗ್ಲೆಗುಡ್ಡದಲ್ಲಿ ಸಿಕ್ಕ ಐದು ತಲೆ ಬುರುಡೆ, ಮೂಳೆಗಳು ಪುರುಷರದ್ದು – ಇಂದು ಎರಡನೇ ದಿನದ ಶೋಧ ಕಾರ್ಯ
ಮಂಗಳೂರು: ಧರ್ಮಸ್ಥಳ (Dharmasthala) ಬುರುಡೆ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನಿಗೆ (Chinnayya) ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಇಂದು ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಪೊಲೀಸರು (SIT Police) ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಕೋರ್ಟ್ ಚಿನ್ನಯ್ಯನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತು.
ಕೋರ್ಟ್ ಆದೇಶದ ಅನ್ವಯ 15 ದಿನಗಳ ಎಸ್ಐಟಿ ಕಸ್ಟಡಿಯಲ್ಲಿದ್ದ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿಗೆ (Shivamogga Jail) ಕಳುಹಿಸಲು ಪೊಲೀಸರು ಈಗ ಸಿದ್ಧತೆ ನಡೆಸುತ್ತಿದ್ದಾರೆ.
ಭದ್ರತಾ ದೃಷ್ಟಿಯಿಂದ ಆರೋಪಿ ಚಿನ್ನಯ್ಯನನ್ನು ಪೊಲೀಸರು ಮಂಗಳೂರಿನ ಬದಲು ಶಿವಮೊಗ್ಗ ಜೈಲಿಗೆ ಕಳುಹಿಸಲು ಮುಂದಾಗಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.
– ಕಾಡಿನಿಂದ ಬುರುಡೆ ತಂದಿದ್ದ ಒರಿಜಿನಲ್ ವಿಡಿಯೋ ಲಭ್ಯ
– ದೆಹಲಿ, ತಮಿಳುನಾಡು ಬೆಂಗಳೂರು ಬಳಿಕ ಧರ್ಮಸ್ಥಳ ಕೇಸ್ಗೆ ಕೇರಳ ಲಿಂಕ್
ಮಂಗಳೂರು: ಧರ್ಮಸ್ಥಳ (Dharmasthala) ವಿರುದ್ಧ ಹೂಡಿದ್ದ ಪಿತೂರಿಗಳು ಇಂಚಿಂಚೂ ಬಯಲಾಗುತ್ತಿದೆ. ಪ್ರಕರಣದ ಆರೋಪಿ ಚಿನ್ನಯ್ಯ ತಂದಿದ್ದ ಬುರುಡೆ ಎಲ್ಲಿಯದ್ದು? ಅನ್ನೋ ರಹಸ್ಯ ಬಹಿರಂಗಗೊಂಡಿದೆ. ಕಾಡಿನಿಂದ ಬುರುಡೆ ತಂದಿದ್ದ ಒರಿಜಿನಲ್ ವಿಡಿಯೋ ʻಪಬ್ಲಿಕ್ ಟಿವಿʼಗೆ (Public TV) ಲಭ್ಯವಾಗಿದೆ.
ಕಳೆದ ಜುಲೈ 11ರಂದೇ ಕೇರಳದ ಯೂಟ್ಯೂಬರ್ ಮನಾಫ್ (Kerala YouTuber Manaf) ಎಂಬಾತನ ಯುಟ್ಯೂಬ್ನಲ್ಲಿ ವಿಡಿಯೋ ಅಪ್ಲೋಡ್ ಆಗಿದೆ. ಈ ನಡುವೆ ಬಂಗ್ಲೆಗುಡ್ಡದಿಂದ ಬುರುಡೆ ತಂದಿರೋದಾಗಿ ತಿಮರೋಡಿ ಆಪ್ತ ಜಯಂತ್ ಹೇಳಿದ್ದ. ಕಾಡಿನಲ್ಲೇ ಈ ವಿಡಿಯೋ ಶೂಟ್ ಮಾಡಿ ಅಪ್ಲೋಡ್ ಮಾಡಲಾಗಿತ್ತು. ಮರಕ್ಕೆ ಸೀರೆ ಬಿಗಿದ ಸ್ಥಳದ ಪಕ್ಕದಲ್ಲಿ, ಭೂಮಿಯ ಮೇಲ್ಬಾಗದಲ್ಲೇ ಬುರುಡೆ ಪತ್ತೆಯಾಗಿತ್ತು. ಬಳಿಕ ಕತ್ತಿ ಮೂಲಕ ಬುರುಡೆ ಹೊರತೆಗೆಯಲಾಗಿತ್ತು ಈ ಎಲ್ಲಾ ದೃಶ್ಯಗಳನ್ನು ಚಿತ್ರೀಕರಿಸಿದ ವಿಡಿಯೋವನ್ನ ಮನಾಫ್ ತನ್ನ ಚಾನೆಲ್ನಲ್ಲಿ ಅಪ್ಲೋಡ್ ಮಾಡಿದ್ದ. ಆ ಬಳಿಕವೇ ಬುರುಡೆಯನ್ನ ಧರ್ಮಸ್ಥಳಕ್ಕೆ ತರಲಾಗಿತ್ತು. ಈ ಎಕ್ಸ್ಕ್ಲೂಸಿವ್ ವಿಡಿಯೋ ಈಗ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಸೌಜನ್ಯ ಕೇಸ್ಗೆ ಸಂಬಂಧಿಸಿದಂತೆ ಯಾವುದೇ ಪ್ರಶ್ನೆ ಕೇಳಲಿಲ್ಲ: ಉದಯ್ ಜೈನ್
ಕೇರಳದ ಯೂಟ್ಯೂಬರ್ಗೆ ನೋಟಿಸ್
ಇನ್ನೂ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಯೂಟ್ಯೂಬರ್ ಮನಾಫ್ಗೆ ವಿಶೇಷ ತನಿಖಾ ತಂಡ ನೋಟಿಸ್ ನೀಡಿದೆ. ಆರಂಭದಿಂದಲೂ ಧರ್ಮಸ್ಥಳಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕಥೆ ಕಟ್ಟಿದ್ದ ಮನಾಫ್, ಕೇರಳಕ್ಕೂ ʻಬುರುಡೆʼ ಕಥೆಯನ್ನ ಹಬ್ಬಿಸಿದ್ದ. ಧರ್ಮಸ್ಥಳದಲ್ಲಿ ನೂರಾರು ಹೆಣ್ಮಕ್ಕಳ ಮೇಲೆ ಅತ್ಯಾಚಾರ ಆಗಿದೆ, ಕೊಲೆ ಮಾಡಿ ಹೂಳಲಾಗಿದೆ ಎಂದು ಹಬ್ಬಿಸಿದ್ದ ಎಂದು ಎಸ್ಐಟಿ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಸಮೀರ್ ವಿಡಿಯೋ ವೈರಲ್ ಹಿಂದೆ ಭಾರಿ ಫಂಡಿಂಗ್ ಇದೆ; 308 ಟ್ರೋಲ್ ಪೇಜಸ್, 50-60 ಕಟೆಂಟ್ ಕ್ರಿಯೇಟರ್ಸ್ ಇದ್ದಾರೆ: ಸುಮಂತ್
ಯಾರು ಈ ಮನಾಫ್?
2024 ಜುಲೈ ತಿಂಗಳಲ್ಲಿ ಸುರಿದ ಭಾರಿ ಮಳೆಗೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬದಿಯ ಗುಡ್ಡ ಕುಸಿದಿತ್ತು. ಈ ದುರಂತದಲ್ಲಿ ಬರೋಬ್ಬರಿ 11 ಮಂದಿ ಮೃತಪಟ್ಟಿದ್ದರು. ಇದೇ ಘಟನೆಯಲ್ಲಿ ಲಾರಿ ಚಾಲಕ ಅರ್ಜುನ್ ಮೃತಪಟ್ಟಿದ್ದ. ಈ ಮನಾಫ್ ಅದೇ ಲಾರಿಯ ಮಾಲೀಕ ಹಾಗೂ ಕೇರಳ ಭಾಗದ ಯೂಟ್ಯೂಬರ್ ಕೂಡ. ಇದನ್ನೂ ಓದಿ: ಸಮೀರ್ ವಿಡಿಯೋದಲ್ಲಿ ಬಳಸಿದ್ದ ಒಂದು ಪದಕ್ಕೆ ಸಂಬಂಧಿಸಿದ್ದಂತೆ ಪೊಲೀಸರು ಜಪ್ತಿ ಮಾಡಿದ್ದಾರೆ: ಮಟ್ಟಣ್ಣನವರ್
* ಕೋರ್ಟ್ನಲ್ಲಿ 10-15 ದಿನ ಮತ್ತೆ ಕಸ್ಟಡಿಗೆ ಕೇಳುವ ಸಾಧ್ಯತೆ
ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ (Dharmasthala Case) ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯನ (Chinnayya) ಎಸ್ಐಟಿ ಕಸ್ಟಡಿ ಬುಧವಾರಕ್ಕೆ ಅಂತ್ಯ ಆಗಲಿದೆ. ನಾಳೆ ಚಿನ್ನಯ್ಯನನ್ನು ಕೋರ್ಟ್ಗೆ ಹಾಜರುಪಡಿಸಲಾಗುವುದು.
ಚಿನ್ನಯ್ಯ ಕಳೆದ 10 ದಿನಗಳಿಂದ ಎಸ್ಐಟಿ ಕಸ್ಟಡಿಯಲ್ಲಿದ್ದ. ನಾಳೆ ಆರೋಪಿಯನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಲಾಗುವುದು. ಚಿನ್ನಯ್ಯ ವಾಸವಿದ್ದ ಮಂಡ್ಯ-ತಮಿಳುನಾಡು ಸ್ಥಳ ಮಹಜರು ಬಾಕಿ ಇದೆ. ಹೀಗಾಗಿ, ಮತ್ತೆ 10 ರಿಂದ 15 ದಿನ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಇದನ್ನೂ ಓದಿ: ಧರ್ಮಸ್ಥಳ ಪರ ಬಿಜೆಪಿ `ಧರ್ಮ’ ಸಮರ – ಎನ್ಐಎ ತನಿಖೆಗೆ ವಹಿಸುವಂತೆ ಆಗ್ರಹ
ನಿನ್ನೆ ಕೂಡ ಸಂಜೆ 7 ಗಂಟೆ ಬಳಿಕ ಎಸ್ಐಟಿ ಸ್ಥಳ ಮಹಜರು ನಡೆಸಿತ್ತು. ಮತ್ತೆ ವಶಕ್ಕೆ ಪಡೆದು ಮಂಡ್ಯ-ತಮಿಳುನಾಡು ಭೇಟಿ ಸಾಧ್ಯತೆ ಇದೆ. ಇವತ್ತು ಚಿನ್ನಯ್ಯನನ್ನು ಮತ್ತಷ್ಟು ತೀವ್ರ ವಿಚಾರಣೆಗೆ ಒಳಪಡಿಸಲಿದೆ.
ಧರ್ಮಸ್ಥಳದ ಭಾಗದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯನ ವಿಚಾರಣೆ ನಡೆದಿತ್ತು. ಆತ ತೋರಿಸಿದ ಸ್ಥಳಗಳಲ್ಲಿ ಶವಗಳ ಉತ್ಖನನ ನಡೆದಿತ್ತು. ಎರಡು ಸ್ಥಳಗಳಲ್ಲಿ ಬಿಟ್ಟರೆ, ಇನ್ಯಾವ ಕಡೆಯೂ ಯಾವುದೇ ಕುರುಹು ದೊರೆಯಲಿಲ್ಲ. ಇದಾದ ಬಳಿಕ ಹೆಚ್ಚಿನ ವಿಚಾರಣೆಗೆ ಚಿನ್ನಯ್ಯನನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ ಪಿತೂರಿಗೆ ವಿದೇಶದಿಂದ ಫಂಡಿಂಗ್ – ಎನ್ಐಎ ತನಿಖೆಗೆ ಬಿವೈವಿ ಒತ್ತಾಯ