Tag: ಚಿಪ್ಪು ಹಂದಿ

  • ಪುರುಷತ್ವ ಹೆಚ್ಚಿಸುವ ಔಷಧಕ್ಕಾಗಿ ಚೀನಾಗೆ ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ಅರೆಸ್ಟ್

    ಪುರುಷತ್ವ ಹೆಚ್ಚಿಸುವ ಔಷಧಕ್ಕಾಗಿ ಚೀನಾಗೆ ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ಅರೆಸ್ಟ್

    ಬೆಳಗಾವಿ: ಅಕ್ರಮವಾಗಿ ಚೀನಾಗೆ (China) ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ಖೆಡ್ಡಾಗೆ ಬೀಳಿಸಿರುವ ಭರ್ಜರಿ ಕಾರ್ಯಾಚರಣೆ ಜಿಲ್ಲೆಯ ಖಾನಾಪುರ (Khanapur) ಅರಣ್ಯದಲ್ಲಿ ನಡೆದಿದೆ.

    ಭರ್ಜರಿ ಕಾರ್ಯಾಚರಣೆ ನಡೆಸಿದ ಅರಣ್ಯ ಅಧಿಕಾರಿಗಳು ಜೀವಂತ ಒಂದು ಚಿಪ್ಪು ಹಂದಿ, ಇಬ್ಬರು ಆರೋಪಿಗಳು ಅರೆಸ್ಟ್ ಮಾಡಿದ್ದಾರೆ.ಇದನ್ನೂ ಓದಿ: ಈ ಮೈಸೂರು ದಸರಾದ ಗಜಪಡೆ – ಅಭಿಮನ್ಯು & ಟೀಂ ಬಗ್ಗೆ ಇಲ್ಲಿದೆ ಫುಲ್‌ ಡಿಟೇಲ್ಸ್‌

    ನಾಲ್ಕು ಜನ ಆರೋಪಿಗಳು ರೈಲು ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವಾಗ ಕಂಡು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರು ವರ್ಷದ ನಾಲ್ಕೂವರೆ ಕೆಜಿ ತೂಕದ ಜೀವಂತ ಚಿಪ್ಪು ಹಂದಿಯನ್ನು ಅಧಿಕಾರಗಳು ವಶಕ್ಕೆ ಪಡೆದಿದ್ದಾರೆ.

    ಖಾನಾಪುರ ಉಪ ವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರಗಿ ಮಾತನಾಡಿ, ಚಿಪ್ಪು ಹಂದಿಯನ್ನು ಪುರುಷತ್ವ ಹೆಚ್ಚಿಸುವ ಔಷಧ ತಯಾರಿಕೆಗಾಗಿ ಬಳಸಲಾಗುತ್ತದೆ. ಇದಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬಲು ಬೇಡಿಕೆ ಇದೆ. ಖಾನಾಪುರದಿಂದ ಚೀನಾವರೆಗೂ ಚಿಪ್ಪು ಹಂದಿಯನ್ನು ಸಾಗಾಟ ಮಾಡುತ್ತಿದ್ದು, ಸಾಗಾಟ ಜಾಲವನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದರು.

    ಖಾನಾಪುರದಿಂದ ಕಾರವಾರಕ್ಕೆ (Karwar) ಕಳಿಸಿ ಅಲ್ಲಿಂದ ಬೋಟ್ ಮೂಲಕ ಕೋಲ್ಕತ್ತಾಗೆ (Kolkatta) ಸಾಗಿಸುತ್ತಾರೆ. ಬಳಿಕ ಹಡಗಿನಲ್ಲಿ ಚೀನಾಕ್ಕೆ ಸಾಗಾಟ ಮಾಡುತ್ತಿದ್ದರು. ಸದ್ಯ ಚಿಪ್ಪು ಹಂದಿ ಸಾಗಾಟ ತಂಡದ ಶೋಧಕ್ಕಾಗಿ ಅಧಿಕಾರಿಗಳು ಬೆನ್ನು ಬಿದ್ದಿದ್ದಾರೆ. ಒಂದು ಪ್ರತ್ಯೇಕ ತಂಡ ರಚಸಿ ಕಳ್ಳಸಾಕಾಣೆ ತಂಡದ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ನವರಾತ್ರಿ ವಿಶೇಷ – 1 | ಕೋಲ್ಕತ್ತಾದ ಕುರ್ಮಾತುಲಿ ಪಾರ್ಕ್‌ ದುರ್ಗಾ ಪೆಂಡಾಲ್‌ ಮಹತ್ವದ ನಿಮಗೆ ಗೊತ್ತೆ?

  • ಚಿಪ್ಪು ಹಂದಿಗಳ ಮಾರಾಟಕ್ಕೆ ಯತ್ನ ನಾಲ್ವರ ಬಂಧನ

    ಚಿಪ್ಪು ಹಂದಿಗಳ ಮಾರಾಟಕ್ಕೆ ಯತ್ನ ನಾಲ್ವರ ಬಂಧನ

    ಮಡಿಕೇರಿ: ಅಳಿವಿನಂಚಿನಲ್ಲಿರುವ ಚಿಪ್ಪು ಹಂದಿಗಳ ಮಾರಾಟಕ್ಕೆ ಯತ್ನ ನಡೆಸಿದ ನಾಲ್ವರನ್ನು ಪೊಲೀಸರು ಬಂಧಿಸಿರುವ ಘಟನೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.

    ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅಳಿವಿನಂಚಿನಲ್ಲಿರುವ ಚಿಪ್ಪು ಹಂದಿಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ರಾಜೇಶ್, ಕರಿಯ, ಸೂರ್ಯ, ಕೃಷ್ಣ ಬಂಧಿತ ಆರೋಪಿಗಳು. ಇದನ್ನೂ ಓದಿ: ಇನ್‍ಸ್ಟಾದಲ್ಲಿ ಆರಂಭ ಬೀದಿಯಲ್ಲಿ ಮಾರಾಮಾರಿ – ರಸ್ತೆಯಲ್ಲೇ ವಿದ್ಯಾರ್ಥಿನಿಯರ ಗ್ಯಾಂಗ್‍ವಾರ್ 

    ಹೆದ್ದಾರಿ ಬದಿಯಲ್ಲಿ ಅಕ್ರಮವಾಗಿ ಚಿಪ್ಪು ಹಂದಿಗಳನ್ನು ಮಾರಾಟ ಮಾಡಲು ಆರೋಪಿಗಳು ಯತ್ನಿಸಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಐಡಿ ಪೊಲೀಸ್ ಅರಣ್ಯ ಘಟಕ ಸಿಬ್ಬಂದಿಗಳು ಚಿಪ್ಪುಹಂದಿ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್ ಚಂದ್ರ ನಿರ್ದೇಶನದಲ್ಲಿ ಮಡಿಕೇರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮಾಡಿದ್ದಾರೆ. ಇವರ ಜೊತೆಗೆ ಅರಣ್ಯ ಸಂಚಾರಿ ದಳದ ಪಿಎಸ್‍ಐ ಸಿ.ಯು.ಸವಿ, ಹೆಡ್‍ಕಾನ್ಸ್‌ಟೇಬಲ್‍ಗಳಾದ ಶೇಖರ್, ರಾಜೇಶ್, ಯೋಗೇಶ್, ಮತ್ತು ಕಾನ್ಸ್‌ಟೇಬಲ್‍ಗಳಾದ ಸ್ವಾಮಿ, ಮಂಜುನಾಥ್ ಹಾಜರಿದ್ದರು. ಇದನ್ನೂ ಓದಿ: ಕುಡಿದು ಡ್ಯಾನ್ಸ್ ಮಾಡುತ್ತ ಮೈಮರೆತ ವರ – ಬೇರೆಯವರನ್ನ ಮದುವೆಯಾದ ವಧು 

  • ಚಾಮರಾಜನಗರದಲ್ಲಿ ಅಪರೂಪದ ಚಿಪ್ಪು ಹಂದಿ ರಕ್ಷಣೆ

    ಚಾಮರಾಜನಗರದಲ್ಲಿ ಅಪರೂಪದ ಚಿಪ್ಪು ಹಂದಿ ರಕ್ಷಣೆ

    ಚಾಮರಾಜನಗರ: ಜಿಲ್ಲೆಯಲ್ಲಿ ಅಪರೂಪದ ಚಿಪ್ಪುಹಂದಿ ಕಾಣಿಸಿಕೊಂಡಿದ್ದು, ಇದನ್ನು ಕಂಡ ಸ್ಥಳೀಯರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅರಣ್ಯ ಇಲಾಖೆ ಸಹಾಯದಿಂದ ರಕ್ಷಣೆ ಮಾಡಿದ್ದಾರೆ.

    ಚಾಮರಾಜನಗರ ತಾಲೂಕಿನ ಮಂಗಲ ಗ್ರಾಮದಲ್ಲಿ ಚಿಪ್ಪುಹಂದಿ ಪತ್ತೆಯಾಗಿದ್ದು, ರಕ್ಷಣೆ ಮಾಡಲಾಗಿದೆ. ಮಂಗಲ ಗ್ರಾಮದ ಮಹೇಶ್ ಅವರ ಬಾಳೆ ತೋಟದಲ್ಲಿ ಈ ಅಪರೂಪದ ಚಿಪ್ಪುಹಂದಿ ಕಾಣಿಸಿಕೊಂಡಿದ್ದು, ಇದನ್ನು ಕಂಡ ಸ್ಥಳೀಯರು ಒಂದು ಕ್ಷಣ ಆಶ್ಚರ್ಯಗೊಂಡಿದ್ದಾರೆ. ನಂತರ ಅದಕ್ಕೆ ಯಾವುದೇ ರೀತಿಯ ತೊಂದರೆ ನೀಡದೆ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ಹಿಡಿದು ಕೊಟ್ಟಿದ್ದಾರೆ.

    ಚಿಪ್ಪು ಹಂದಿ ಕಂಡ ತಕ್ಷಣ ತೋಟದ ಮಾಲೀಕ ಮಹೇಶ್ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ, ಅಪರೂಪರದ ಚಿಪ್ಪು ಹಂದಿಯನ್ನು ರಕ್ಷಣೆ ಮಾಡಿದ್ದಾರೆ. ಸೆರೆ ಹಿಡಿದ ಬಳಿಕ ಚಿಪ್ಪು ಹಂದಿಯನ್ನು ಕಾಡಿಗೆ ಬಿಟ್ಟಿದ್ದಾರೆ.

  • 20 ಕೆ.ಜಿ. ತೂಕದ ಚಿಪ್ಪು ಹಂದಿ ಪತ್ತೆ – ನಾಲ್ವರ ಬಂಧನ

    20 ಕೆ.ಜಿ. ತೂಕದ ಚಿಪ್ಪು ಹಂದಿ ಪತ್ತೆ – ನಾಲ್ವರ ಬಂಧನ

    ಚಿಕ್ಕಮಗಳೂರು: ತಾಲೂಕಿನ ಇಳೇಖಾನ್ ಗ್ರಾಮದಲ್ಲಿ ಚಿಪ್ಪು ಹಂದಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಕಾಫಿ ತೋಟದ ಮಾಲೀಕ ಮೋಹನ್, ರಾಜಶೇಖರ್, ಮಲ್ಲೇಶ್ ಮತ್ತು ಗಣೇಶ್ ಬಂಧಿತ ಆರೋಪಿಗಳು. ಚಿಕ್ಕಮಗಳೂರು ವಲಯ ಆರ್.ಎಫ್.ಓ ಶಿಲ್ಪಾ ನೇತೃತ್ವದಲ್ಲಿ ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಒಂದು ಜೀವಂತ ಚಿಪ್ಪು ಹಂದಿ, ಒಂದು ಬೈಕ್ ಮತ್ತು ಒಂದು ಓಮ್ನಿ ಕಾರನ್ನು ವಶಪಡಿಸಿಕೊಂಡಿದ್ದಾರೆ.

    20 ಕೆ.ಜಿ. ತೂಕದ ಚಿಪ್ಪು ಹಂದಿ ಇದಾಗಿದ್ದು, ಇಷ್ಟು ತೂಕದ ಚಿಪ್ಪು ಹಂದಿ ತುಂಬಾ ಅಪರೂಪವಾಗಿ ಕಂಡು ಬರುತ್ತವೆ ಎಂದು ಹೇಳಲಾಗುತ್ತಿದೆ. ಬಂಧಿತರು 40 ಲಕ್ಷ ಬೆಲೆ ಬಾಳುವ ಚಿಪ್ಪು ಹಂದಿಯನ್ನ ಬೇಟೆಯಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಬಳಿಕ ಖಚಿತ ಮಾಹಿತಿ ಮೇರೆಗೆ ಆರ್.ಎಫ್.ಓ ಶಿಲ್ಪಾ ದಾಳಿ ಮಾಡಿದ್ದಾರೆ

    ಈ ಚಿಪ್ಪು ಹಂದಿಗೆ ವಿದೇಶದಲ್ಲಿ ಭಾರೀ ಬೇಡಿಕೆ ಇದೆ. ಸದ್ಯಕ್ಕೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, 40 ಲಕ್ಷ ಬೆಲೆ ಬಾಳುವ ಜೀವಂತ ಚಿಪ್ಪು ಹಂದಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಿದೇಶಕ್ಕೆ ಚಿಪ್ಪು ಹಂದಿ ಸಾಗಾಟ ಯತ್ನ-ಇಬ್ಬರ ಬಂಧನ

    ವಿದೇಶಕ್ಕೆ ಚಿಪ್ಪು ಹಂದಿ ಸಾಗಾಟ ಯತ್ನ-ಇಬ್ಬರ ಬಂಧನ

    ಮೈಸೂರು: ವಿದೇಶಕ್ಕೆ ಚಿಪ್ಪು ಹಂದಿ ಸಾಗಿಸಲು ಪ್ಲಾನ್ ಮಾಡಿದ್ದ ಇಬ್ಬರನ್ನು ಸಿನಿಮೀಯ ಶೈಲಿಯಲ್ಲಿ ಮೈಸೂರಿನ ಅರಣ್ಯ ಸಂಚಾರದಳ ತಂಡ ಬಂಧಿಸಿದೆ.

    ಕನಕಪುರದ ಅನಿಲ್ ಕುಮಾರ್ (40) ಹಾಗೂ ಬೆಂಗಳೂರಿನ ಇನಾಯತ್ (36) ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಅರಣ್ಯ ಸಂಚಾರದಳದ ಡಿಸಿಎಫ್ ಪೂವಯ್ಯ ನೇತೃತ್ವದ ತಂಡ ಮಾರುವೇಷದಲ್ಲಿ ತೆರಳಿ ಆರೋಪಿಗಳನ್ನು ಮಂಡ್ಯ ಜಿಲ್ಲೆಯ ಹಲಗೂರು ಬಳಿ ಬಂಧಿಸಿದ್ದಾರೆ.

    ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಕಾರ್ ಹಾಗೂ ಜೀವಂತ ಚಿಪ್ಪುಹಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗದ ಬಳಿ ಚಿಪ್ಪುಹಂದಿ ಸೆರೆಹಿಡಿದಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಚಿಪ್ಪು ಹಂದಿ ಮನೆಯಲ್ಲಿದ್ದರೆ ಸಂಪತ್ತು ಹೆಚ್ಚಾಗುತ್ತದೆ ಎನ್ನುವ ನಂಬಿಕೆ ಹಾಗೂ ಚಿಪ್ಪು ಹಂದಿ ಮಾಂಸ, ವಿದೇಶಗಳಲ್ಲಿ ಬಹಳ ಬೇಡಿಕೆ ಹಿನ್ನಲೆ ವಿದೇಶಕ್ಕೆ ರವಾನಿಸಲು ಆರೋಪಿಗಳು ಪ್ಲಾನ್ ಮಾಡಿದ್ದರು ಎಂಬ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಫಿನಾಡಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 18.5 ಕೆಜಿ ತೂಕದ ಚಿಪ್ಪು ಹಂದಿ ಪತ್ತೆ

    ಕಾಫಿನಾಡಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 18.5 ಕೆಜಿ ತೂಕದ ಚಿಪ್ಪು ಹಂದಿ ಪತ್ತೆ

    ಚಿಕ್ಕಮಗಳೂರು: ಕಾಫಿನಾಡಿನ ಇತಿಹಾಸದಲ್ಲಿ ಇದೇ ಮೊದಲ ಬಾರಿ 18.5 ಕೆ.ಜಿ. ತೂಕದ ಎರಡು ಚಿಪ್ಪು ಹಂದಿ ಪತ್ತೆಯಾಗಿದೆ.

    ಸುಮಾರು ಎರಡರಿಂದ ಮೂರು ಲಕ್ಷ ಬೆಲೆಬಾಳುವ ಈ ಚಿಪ್ಪು ಹಂದಿಯನ್ನ ಬೇಟೆಯಾಡಿ ಬೇರೆಡೆ ಸಾಗಿಸಲು ಹೊಂಚು ಹಾಕುತ್ತಿದ್ದ ಇಬ್ಬರಲ್ಲಿ ಓರ್ವ ಆರೋಪಿಯನ್ನ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಅರಣ್ಯ ಸಿಬ್ಬಂದಿಗಳು ಬಂಧಿಸಿದ್ದಾರೆ.

    ಹಲಸೂರು ಮೀಸಲು ಅರಣ್ಯದಲ್ಲಿ ಪ್ರದೀಪ್ ಹಾಗೂ ಪ್ರಕಾಶ್ ಇಬ್ಬರು ಯುವಕರು ಎರಡು ಚಿಪ್ಪು ಹಂದಿಯನ್ನ ಬೇಟೆಯಾಡಿದ್ದರು. ಬೇಟೆಯ ಬಳಿಕ ಹಂದಿಯನ್ನ ಬೇರೆಡೆ ಸಾಗಿಸಲು ಹೊಂಚು ಹಾಕುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಬಾಳೆಹೊನ್ನೂರು ಎ.ಸಿ.ಎಫ್ ಲೋಹಿತ್ ಕುಮಾರ್, ಆರ್.ಎಫ್.ಓ ತನುಜಕುಮಾರ್ ಹಾಗೂ ಡಿ.ಆರ್.ಎಫ್.ಓ ಸುಂದ್ರೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಪ್ರದೀಪ್ ಎಂಬಾತನನ್ನ ಬಂಧಿಸಿ ಎರಡು ಚಿಪ್ಪು ಹಂದಿಯನ್ನ ರಕ್ಷಿಸಿದ್ದಾರೆ.

    ಬಂಧಿತ ಆರೋಪಿಯಿಂದ 18.5 ಕೆ.ಜಿ.ತೂಕದ ಗಂಡು ಮತ್ತು ಹೆಣ್ಣು ಚಿಪ್ಪು ಹಂದಿ ಹಾಗೂ ಒಂದು ಬೈಕ್ ವಶ ಪಡಿಸಿಕೊಳ್ಳಲಾಗಿದೆ. ಈ ದಾಳಿಯಲ್ಲಿ ಮತ್ತೋರ್ವ ಆರೋಪಿ ಪ್ರಕಾಶ್ ನಾಪತ್ತೆಯಾಗಿದ್ದು, ಅರಣ್ಯಾಧಿಕಾರಿಗಳು ಪ್ರಕಾಶ್‍ಗಾಗಿ ಬಲೆ ಬೀಸಿದ್ದಾರೆ. ಈ ಚಿಪ್ಪು ಹಂದಿಗೆ ವಿದೇಶದಲ್ಲಿ ಭಾರೀ ಬೇಡಿಕೆ ಇದೆ ಎಂದು ಹೇಳಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗ್ರಾಹಕರಂತೆ ವೇಷಹಾಕಿ ವನ್ಯಜೀವಿಗಳ ಬೇಟೆಗಾರರ ಬಂಧನ: 16.5 ಕೆ.ಜಿ. ಜಿಂಕೆಗಳ ಕೊಂಬು ವಶ

    ಗ್ರಾಹಕರಂತೆ ವೇಷಹಾಕಿ ವನ್ಯಜೀವಿಗಳ ಬೇಟೆಗಾರರ ಬಂಧನ: 16.5 ಕೆ.ಜಿ. ಜಿಂಕೆಗಳ ಕೊಂಬು ವಶ

    ಚಿಕ್ಕಮಗಳೂರು: ಸಿನಿಮೀಯ ರೀತಿಯಲ್ಲಿ ಗ್ರಾಹಕರಂತೆ ಹೋಗಿ, ಕಾಡು ಪ್ರಾಣಿಗಳನ್ನು ಬೇಟಿ ಆಡುತ್ತಿದ್ದ ಆರು ಜನರ ತಂಡವನ್ನು ತರೀಕೆರೆ ತಾಲೂಕಿನ ಲಕ್ಕವಳ್ಳಿ ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.

    ಭಾನುವಾರ ಮಾಹಿತಿ ದೊರೆತಿದ್ದು, ಶಿವಮೊಗ್ಗದ ಸತೀಶ್, ಗಾಜನೂರಿನ, ತರೀಕೆರೆ ತಾಲೂಕಿನ ಉಪ್ಪಾರ ಬಸವಣ ಹಳ್ಳಿಯ ಸಹೋದರರಾದ ರವಿ ಹಾಗೂ ಲಕ್ಷ್ಮಣ ಬಂಧಿತ ಆರೋಪಿಗಳಾಗಿದ್ದು, ಉಳಿದ ಇಬ್ಬರ ಬಗ್ಗೆ ಇನ್ನು ಮಾಹಿತಿ ದೊರೆತಿಲ್ಲ ಎಂದು ವಲಯ ಅರಣ್ಯಾಧಿಕಾರಿ ಕಾಂತರಾಜು ತಿಳಿಸಿದ್ದಾರೆ.

    ಸುಮಾರು ದಿನಗಳಿಂದ ಆರೋಪಿಗಳು ಜಾಲದ ಬಗ್ಗೆ ಮಾಹಿತಿ ದೊರೆತಿತ್ತು. ಆದರೆ ಬಂಧಿಸಲು ಸಾಧ್ಯವಾಗಿರಲಿಲ್ಲ. ಭಾನುವಾರ ಖಚಿತ ಮಾಹಿತಿ ದೊರೆಯಿತು. ಹೀಗಾಗಿ ಗ್ರಾಹಕರಂತೆ ಮಾರುವೇಷ ಹಾಕಿಕೊಂಡು ಅರಣ್ಯ ಇಲಾಖೆ ಪೊಲೀಸ್ ಸಿಬ್ಬಂದಿ ತಂಡ ದಾಳಿ ಮಾಡಿದ ಪರಿಣಾಮ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ ಎಂದು ಹೇಳಿದರು.

    ಬಂಧಿತ ಆರೋಪಿಗಳಿಂದ 4 ಕೆ.ಜಿ. ಆನೆದಂತ, 11 ಕೆ.ಜಿ. ಚಿಪ್ಪು ಹಂದಿಯ ಚಿಪ್ಪು, 16.5 ಕೆ.ಜಿ. ಜಿಂಕೆಗಳ ಕೊಂಬು ಹಾಗೂ 4.5 ಕೆ.ಜಿ. ಕಾಡು ಕೋಣಗಳ ಕೊಂಬುಗಳನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಹಿಂದೆ ದೊಡ್ಡ ಜಾಲವಿದೆ ಎನ್ನುವ ಶಂಕೆ ವ್ಯಕ್ತವಾಗಿದೆ.

    ಬಂಧಿತರು ಕಾಡು ಪ್ರಾಣಿಗಳ ದೇಹದ ಬೆಲೆಬಾಳುವ ವಸ್ತುಗಳನ್ನು ವಿದೇಶಕ್ಕೆ ಮಾರಾಟ ಮಾಡುತ್ತಿದ್ದರು. ಹೀಗಾಗಿ ಭದ್ರಾ ಹುಲಿ ಅಭಯಾರಣ್ಯ ಸೇರಿದಂತೆ ಮಲೆನಾಡು ಭಾಗದ ಕಾಡುಗಳಲ್ಲಿ ವನ್ಯಜೀವಿಗಳನ್ನ ಭೇಟಿಯಾಡುತ್ತಿದ್ದರು. ಅಲ್ಲದೇ ಅವರ ಬಳಿ ಇನ್ನು ಹೆಚ್ಚಿನ ಪ್ರಾಣಿಗಳ ಚರ್ಮ, ಕೊಂಬು, ಮೂಳೆ, ದಂತಗಳಿವೆ ಎನ್ನುವ ಸಂದೇಹ ವ್ಯಕ್ತವಾಗಿದ್ದು, ತನಿಖೆ ಪ್ರಾರಂಭಿಸಿದ್ದಾರೆ.

    ಆನೆ ದಂತಗಳನ್ನು ಏನು ಮಾಡುತ್ತಾರೆ?
    ಆನೆ ದಂತಗಳನ್ನು ಹಣ ಪಡೆದು ಮಾರಾಟ ಮಾಡುವುದುನ್ನು ಕಾನೂನಿನಲ್ಲಿ ನಿಷೇಧಿಸಲಾಗಿದೆ. ಹೀಗಾಗಿ ಅರಣ್ಯ ಇಲಾಖೆ ದಾಳಿ ವೇಳೆ ಸಿಕ್ಕಿದ ಆನೆ ದಂತಗಳನ್ನು ರಕ್ಷಣಾ ಇಲಾಖೆಗೆ ನೀಡುತ್ತದೆ. ಕೆಲವು ದಂತಗಳನ್ನು ಸಂಶೋಧನೆ ಮಾಡಲು ಶಿಕ್ಷಣ ಸಂಸ್ಥೆಗಳಿಗೆ ನೀಡುತ್ತದೆ. ಯಾರಿಗೂ ಮಾರಾಟ ಮಾಡಲು ಅನುಮತಿ ಇಲ್ಲದ ಕಾರಣ ದಂತಗಳನ್ನು ಸುಡಲಾಗುತ್ತದೆ.

  • ಆಗ್ನಿಶಾಮಕ ದಳ ಕಚೇರಿಗೆ ಬಂದ ಅಪರೂಪದ ಚಿಪ್ಪು ಹಂದಿ

    ಆಗ್ನಿಶಾಮಕ ದಳ ಕಚೇರಿಗೆ ಬಂದ ಅಪರೂಪದ ಚಿಪ್ಪು ಹಂದಿ

    ಕೋಲಾರ: ಬಂಗಾರಪೇಟೆ ಪಟ್ಟಣದ ಹೊರವಲಯದಲ್ಲಿರುವ ಅಗ್ನಿಶಾಮಕ ದಳದ ಕಚೇರಿಗೆ ಕಳೆದ ರಾತ್ರಿ ಚಿಪ್ಪು ಹಂದಿಯೊಂದು ಅತಿಥಿಯಾಗಿ ಬಂದು ಅಚ್ಚರಿ ಮೂಡಿಸಿತ್ತು.

    ಆರಂಭದಲ್ಲಿ ಸ್ಥಳೀಯರು ಈ ಪ್ರಾಣಿಯನ್ನು ನೋಡಿ ಅದರ ಮೇಲೆ ದಾಳಿಗೆ ಮುಂದಾಗಿದ್ದಾರೆ. ನಂತರ ಅದು ಅಪರೂಪದ ಪ್ರಾಣಿ ಪ್ರಬೇಧಕ್ಕೆ ಸೇರಿದ ಚಿಪ್ಪು ಹಂದಿ ಎಂದು ತಿಳಿದು ಬಂದಿದೆ.

    ಸ್ಥಳದಲ್ಲಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಅಪರೂಪದ ಪ್ರಾಣಿ ಚಿಪ್ಪು ಹಂದಿಯನ್ನು ರಕ್ಷಣೆ ಮಾಡಿದ್ದು, ಇಡೀ ರಾತ್ರಿ ಅಗ್ನಿಶಾಮಕ ದಳದ ಕಚೇರಿಯಲ್ಲೇ ಅದನ್ನು ಇರಿಸಿಕೊಂಡ ನಂತರ ಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.

    ಚಿಪ್ಪು ಹಂದಿ ದೊರೆತಿರುವ ಮಾಹಿತಿ ಪಡೆದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪ್ರಾಣಿ ರಕ್ಷಣಾ ಸಂಘಟನೆ ಸದಸ್ಯ ಮುರಳಿ ಅಪರೂಪದ ಪ್ರಾಣಿಯನ್ನು ಸುರಕ್ಷಿತವಾಗಿ ಬಂಗಾರಪೇಟೆ ಅರಣ್ಯಕ್ಕೆ ಬಿಟ್ಟಿದ್ದಾರೆ. ಈ ಅಪರೂಪದ ಪ್ರಾಣಿಯನ್ನ ಇರುವೆ ಭಕ್ಷಕ, ಚಿಪ್ಪು ಹಂದಿ, ಪ್ಯಾಂಗೋಲಿನ್ ಎಂಬ ಹೆಸರುಗಳಿಂದ ಕರೆಯುತ್ತಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

    ಕೋಲಾರ ಜಿಲ್ಲೆಯ ಪ್ರದೇಶದಲ್ಲಿ ಚಿಪ್ಪು ಹಂದಿ ಕಾಣಿಸಿಕೊಳ್ಳುವುದು ಅಪರೂಪದ ಸಂಗತಿಯಾಗಿದೆ. ಹಲವು ಔಷಧೀಯ ಗುಣಗಳು ಚಿಪ್ಪು ಹಂದಿಯಲ್ಲಿ ಇದೆ ಎಂದು ಹೇಳಲಾಗುತಿದ್ದು, ವಿದೇಶಗಳಲ್ಲಿ ಲಕ್ಷಾಂತರ ರೂಪಾಯಿ ಬೇಡಿಕೆ ಹೊಂದಿದೆ.