Tag: ಚಿಯಾನ್‌ ವಿಕ್ರಮ್‌

  • ತಮಿಳಿನತ್ತ ಕನ್ನಡದ ನಟ- ಚಿಯಾನ್ ವಿಕ್ರಮ್ ಸಿನಿಮಾದಲ್ಲಿ ರಮೇಶ್ ಇಂದಿರಾ

    ತಮಿಳಿನತ್ತ ಕನ್ನಡದ ನಟ- ಚಿಯಾನ್ ವಿಕ್ರಮ್ ಸಿನಿಮಾದಲ್ಲಿ ರಮೇಶ್ ಇಂದಿರಾ

    ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradaache Ello) ಸಿನಿಮಾದಲ್ಲಿ ‘ಲವ್ ಯೂ ಮನು’ ಎನ್ನುತ್ತಾ ಭಯ ಹುಟ್ಟಿಸಿದ್ದ ರಮೇಶ್ ಇಂದಿರಾ (Ramesh Indira) ಇದೀಗ ತಮಿಳಿನತ್ತ ಮುಖ ಮಾಡಿದ್ದಾರೆ. ಸ್ಟಾರ್ ನಟ ಚಿಯಾನ್ ವಿಕ್ರಮ್ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಇದನ್ನೂ ಓದಿ:ಕೆಜಿಎಫ್ ಕ್ವೀನ್ ಬ್ಯಾಕ್ ಟು ರಾಕ್- ಫ್ಯಾನ್ಸ್‌ಗೆ ಗುಡ್ ನ್ಯೂಸ್

    ನಿರ್ದೇಶಕನಾಗಿ ಸೈ ಎನಿಸಿಕೊಂಡಿದ್ದ ರಮೇಶ್ ಇಂದಿರಾ ಹಿರಿತೆರೆಯಲ್ಲಿ ಖಳನಟನಾಗಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಡಾಲಿ ನಟನೆಯ ‘ಕೋಟಿ’ ಸಿನಿಮಾದಲ್ಲೂ ಅವರು ನಟಿಸಿದ್ದರು. ಈಗ ಕಾಲಿವುಡ್‌ನಲ್ಲಿ ಅವರಿಗೆ ಬಂಪರ್ ಅವಕಾಶ ಸಿಕ್ಕಿದೆ. ಸಿಕ್ಕಿರೋ ಅವಕಾಶವನ್ನು ಅವರು ಸದುಪಯೋಗಪಡಿಸಿಕೊಂಡಿದ್ದಾರೆ. ಚಿಯಾನ್ ವಿಕ್ರಮ್ ನಟನೆಯ ‘ವೀರ ಧೀರ ಶೂರನ್’ ಸಿನಿಮಾದಲ್ಲಿ ಪವರ್‌ಫುಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

    ಸದ್ಯ ಈಗಾಗಲೇ ರಿಲೀಸ್ ಆಗಿರೋ ಚಿತ್ರದ ಟ್ರೈಲರ್‌ನಲ್ಲಿ ರಮೇಶ್ ಇಂದಿರಾ ಕಾಣಿಸಿಕೊಂಡಿದ್ದಾರೆ. ಆದರೆ ಅವರ ಪಾತ್ರ ಹೇಗಿದೆ ಎಂಬುದಕ್ಕೆ ಮಾ.27ರಂದು ಉತ್ತರ ಸಿಗಲಿದೆ. ಚಿಯಾನ್ ವಿಕ್ರಮ್ ಜೊತೆ ರಮೇಶ್ ತೆರೆಹಂಚಿಕೊಂಡಿದ್ದಾರೆ ಎಂದರೆ ಇಲ್ಲಿನೋ ಹೊಸತನವಿದೆ ಎಂಬುದು ಅಭಿಮಾನಿಗಳ ಲೆಕ್ಕಚಾರ. ಹಾಗಾಗಿ ಸಿನಿಮಾ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ.

    ವಿಕ್ರಮ್ ನಟನೆಯ ‘ವೀರ ಧೀರ ಶೂರನ್’ ಚಿತ್ರವು ಮಾ.27ರಂದು ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ. ವಿಕ್ರಮ್‌ಗೆ ನಾಯಕಿಯಾಗಿ ದುಶ್ರಾ ವಿಜಯನ್ ನಟಿಸಿದ್ದಾರೆ.

  • ನಾನು ಭೂಮಿಯ ಮೇಲಿನ ಅದೃಷ್ಟ ವ್ಯಕ್ತಿ: ವಿಕ್ರಮ್ ಭೇಟಿಯಾದ ಡಿವೈನ್ ಸ್ಟಾರ್

    ನಾನು ಭೂಮಿಯ ಮೇಲಿನ ಅದೃಷ್ಟ ವ್ಯಕ್ತಿ: ವಿಕ್ರಮ್ ಭೇಟಿಯಾದ ಡಿವೈನ್ ಸ್ಟಾರ್

    ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಅವರು ಕಾಲಿವುಡ್ (Kollywood) ಸ್ಟಾರ್ ನಟ ಚಿಯಾನ್ ವಿಕ್ರಮ್‌ರನ್ನು (Chiyaan Vikram) ಭೇಟಿಯಾಗಿದ್ದಾರೆ. 24 ವರ್ಷಗಳ ಕಾಯುವಿಕೆಯ ನಂತರ ವಿಕ್ರಮ್ ಅವರನ್ನು ಭೇಟಿಯಾದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ರಿಷಬ್ ಸಂಭ್ರಮಿಸಿದ್ದಾರೆ.

    ನಟನಾಗುವಾಗ ನನ್ನ ಪ್ರಯಾಣದಲ್ಲಿ, ವಿಕ್ರಮ್ ಸರ್ ಯಾವಾಗಲೂ ನನಗೆ ಸ್ಫೂರ್ತಿಯಾಗಿದ್ದರು. 24 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಇಂದು ವಿಕ್ರಮ್ ಅವರನ್ನು ಭೇಟಿಯಾದೆ. ಹೀಗಾಗಿ ಭೂಮಿಯ ಮೇಲಿನ ಅದೃಷ್ಟಶಾಲಿ ವ್ಯಕ್ತಿ ಎಂದು ಭಾವಿಸುತ್ತೇನೆ. ನನ್ನಂತಹ ನಟರನ್ನು ಪ್ರೇರೇಪಿಸಿದ್ದಕ್ಕಾಗಿ ಧನ್ಯವಾದಗಳು, ‘ತಂಗಲಾನ್’ ಸಿನಿಮಾಗೆ ಶುಭ ಹಾರೈಸುತ್ತೇನೆ ಎಂದು ರಿಷಬ್ ಶೆಟ್ಟಿ ಬರೆದುಕೊಂಡಿದ್ದಾರೆ.

     

    View this post on Instagram

     

    A post shared by Rishab Shetty (@rishabshettyofficial)

    ಅಂದಹಾಗೆ, ವಿಕ್ರಮ್ ನಟನೆಯ ‘ತಂಗಲಾನ್’ (Thangalaan) ಚಿತ್ರ ಇದೇ ಆ.15ರಂದು ರಿಲೀಸ್‌ಗೆ ಸಿದ್ಧವಾಗಿದೆ. ಹಾಗಾಗಿ ಪ್ರಚಾರಕ್ಕಾಗಿ ಬೆಂಗಳೂರಿಗೆ ವಿಕ್ರಮ್ ಭೇಟಿ ನೀಡಿದ್ದರು. ಇದೀಗ ಮುಂಬೈ ಮತ್ತು ಕೊಚ್ಚಿಗೆ ಚಿತ್ರತಂಡ ತೆರಳಲಿದೆ.

    ಇನ್ನೂ ಕುಂದಾಪುರದಲ್ಲಿ ‘ಕಾಂತಾರ ಪಾರ್ಟ್ 1’ ಸಿನಿಮಾ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಇದೇ ವರ್ಷ ಡಿಸೆಂಬರ್‌ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

  • ವಯನಾಡು ಭೂಕುಸಿತ ದುರಂತ: ಆರ್ಥಿಕ ನೆರವು ನೀಡಿದ ರಶ್ಮಿಕಾ, ಸೂರ್ಯ, ಮಮ್ಮುಟ್ಟಿ

    ವಯನಾಡು ಭೂಕುಸಿತ ದುರಂತ: ಆರ್ಥಿಕ ನೆರವು ನೀಡಿದ ರಶ್ಮಿಕಾ, ಸೂರ್ಯ, ಮಮ್ಮುಟ್ಟಿ

    ಕೇರಳದ ವಯನಾಡಿನಲ್ಲಿ (Wayanad Landslides) ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸತ್ತವರ ಸಂಖ್ಯೆ ಈಗ 300 ದಾಟಿದೆ. ಈ ಭೀಕರ ದುರಂತದಲ್ಲಿ ಮನೆಯನ್ನು, ಕುಟುಂಬಸ್ಥರನ್ನು ಕಳೆದುಕೊಂಡು ಹಲವರು ಸಂಕಷ್ಟದಲ್ಲಿದ್ದಾರೆ. ಅವರ ಸಹಾಯಕ್ಕೆ ಸಿನಿಮಾ ನಟ, ನಟಿಯರು ಮುಂದಾಗಿದ್ದಾರೆ.

    ವಯನಾಡು ಭೂಕುಸಿತ ದುರಂತದಲ್ಲಿ ಸಂಕಷ್ಟದಲ್ಲಿರುವರಿಗೆ ನೆರವಾಗಲು ಲಕ್ಷ ಲಕ್ಷ ಹಣವನ್ನು ಕೇರಳದ ಸಿಎಂ ಫಂಡ್‌ಗೆ ಸೌತ್ ನಟ, ನಟಿಯರು ದೇಣಿಗೆ ನೀಡಿದ್ದಾರೆ. ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ, ತಮಿಳು ನಟ ಸೂರ್ಯ, ಚಿಯಾನ್ ವಿಕ್ರಮ್, ಮಮ್ಮುಟ್ಟಿ, ದುಲ್ಕರ್ ಸಲ್ಮಾನ್, ಫಹಾದ್ ಫಾಸಿಲ್ ಸೇರಿದಂತೆ ಅನೇಕರು ನೆರವಿಗೆ ಬಂದಿದ್ದಾರೆ.

    ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕಾರ್ಯವೊಂದಕ್ಕಾಗಿ ಅತಿಥಿಯಾಗಿ ಕೇರಳಕ್ಕೆ ಆಗಮಿಸಿದ್ದರು. ಆಗ ಅವರನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಅವರ ಪ್ರೀತಿ ನೋಡಿ ನಟಿ ಧನ್ಯವಾದ ತಿಳಿಸಿದ್ದರು. ಇದೀಗ ಕೇರಳದಲ್ಲಿ ಆಗಿರುವ ಭೂಕುಸಿತ ದುರಂತ ಕಂಡು ಅಲ್ಲಿನ ಸಿಎಂ ಫಂಡ್‌ಗೆ ನಟಿ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ನಟಿಯ ನಡೆಗೆ ಅಭಿಮಾನಿಗಳು ಭೇಷ್ ಎಂದಿದ್ದಾರೆ.

    ತಮಿಳಿನ ಸ್ಟಾರ್ ನಟ ಚಿಯಾನ್ ವಿಕ್ರಮ್ (Chiyan Vikram), ಕೇರಳದ ಸಿಎಂ ಫಂಡ್‌ಗೆ 20 ಲಕ್ಷ ರೂ. ದೇಣಿಗೆ ನೀಡುವ ಮೂಲಕ ನೆರವಾಗಿದ್ದಾರೆ. ಸೂರ್ಯ (Suriya) ಮತ್ತು ಜ್ಯೋತಿಕಾ ದಂಪತಿ, ನಟ ಕಾರ್ತಿ (Karthi) ಜಂಟಿಯಾಗಿ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

    ಸ್ಟಾರ್ ನಟ ಮಮ್ಮುಟ್ಟಿ ಮತ್ತು ಪುತ್ರ ದುಲ್ಕರ್ ಸಲ್ಮಾನ್ ಜೊತೆಯಾಗಿ 35 ಲಕ್ಷ ರೂ. ಸಿಎಂ ಪರಿಹಾರ ನಿಧಿಗೆ ನೀಡಿದ್ದಾರೆ. ಫಹಾದ್ ಫಾಸಿಲ್, ನಜ್ರಿಯಾ ಜೋಡಿ 25 ಲಕ್ಷ ರೂ. ದೇಣಿಗೆ ನೀಡಿ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

  • ಕರ್ನಾಟಕದ ಚಿನ್ನದ ನೆಲದ ಕಥೆ ಹೇಳ್ತಿದ್ದಾರೆ ತಮಿಳಿನ ಖ್ಯಾತ ಡೈರೆಕ್ಟಕ್ ಪಾ.ರಂಜಿತ್

    ಕರ್ನಾಟಕದ ಚಿನ್ನದ ನೆಲದ ಕಥೆ ಹೇಳ್ತಿದ್ದಾರೆ ತಮಿಳಿನ ಖ್ಯಾತ ಡೈರೆಕ್ಟಕ್ ಪಾ.ರಂಜಿತ್

    ಜನಿಕಾಂತ್ ಸೇರಿದಂತೆ ಹಲವು ಸ್ಟಾರ್ ನಟರುಗಳಿಗೆ ಸಿನಿಮಾ ಮಾಡಿರುವ ಖ್ಯಾಥ ನಿರ್ದೇಶಕ ಪಾ.ರಂಜಿತ್ (Pa. Ranjith) ಕನ್ನಡಿಗರ ತಲೆಗೆ ಹುಳು ಬಿಟ್ಟುಕೊಳ್ಳುವಂತಹ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ. ತಾವು ತಮಿಳು ನಿರ್ದೇಶಕರಾದರೂ, ಕನ್ನಡ ಸಿನಿಮಾ ರಂಗವನ್ನು ಜಗತ್ತಿಗೆ ಪರಿಚಯಿಸಿದ ‘ಕೆಜಿಎಫ್’ ಸಿನಿಮಾದ ಅಸಲಿ ಕಥೆಯನ್ನೂ ಅವರು ಬಿಚ್ಚಿಟ್ಟಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿ ಬಂದ ಕೆಜಿಎಫ್ ಸಿನಿಮಾ ಅದೊಂದು ಕಾಲ್ಪನಿಕ ಕಥೆಯನ್ನು ಹೊಂದಿತ್ತು. ತಾವು ಕೆಜಿಎಫ್ ನ ಅಸಲಿ ಕಥೆಯನ್ನು ಹೇಳಲು ಹೊರಟಿದ್ದಾರೆ.

    ಕೆಜಿಎಫ್ (KGF) ಸಿನಿಮಾ ಬರುವ ಮುಂಚೆಯೇ ಅವರು ಕೆಜಿಎಫ್ ನೆಲದ ಕರುಣಾಜನಕ ನೈಜ ಕಥೆಯನ್ನು ಸಿನಿಮಾ ಮಾಡಲು ಹೊರಟಿದ್ದರಂತೆ. ಆದರೆ, ಕನ್ನಡದ ಕೆಜಿಎಫ್ ಸಿನಿಮಾ ಬಂದಿದ್ದರಿಂದ ಅದನ್ನು ಮುಂದೆಹಾಕಿದ್ದರಂತೆ. ಈ ವಿಷಯವನ್ನು ಸ್ವತಃ ರಂಜಿತ್ ಅವರೇ ಈ ಹಿಂದೆ ಕಾನ್ ಫೆಸ್ಟಿವೆಲ್ ನಲ್ಲಿ ಹೇಳಿದ್ದರುಇ. ಅಲ್ಲದೇ, ಕೆಜಿಎಫ್ ಸಿನಿಮಾದ ಪಾತ್ರಗಳು ಕಾಲ್ಪನಿಕವಾಗಿದ್ದವು. ರಂಜಿತ್ ಮಾಡಿರುವ ಕಥೆಯಲ್ಲಿ ಬಹುತೇಕ ಪಾತ್ರಗಳು ಆ ನೆಲದಲ್ಲಿ ಜೀವಿಸಿದ್ದವು ಎಂದಿದ್ದಾರೆ.

     

    ಚಿಯಾನ್ ವಿಕ್ರಮ್ (Chian Vikram) ಈ ಸಿನಿಮಾದ ಹೀರೋ. ಸಿನಿಮಾಗೆ ನಿರ್ದೇಶಕರು ಹೆಸರು ಇಟ್ಟಿದ್ದು ತಂಗಳಾನ್. ಈಗಾಗಲೇ ರಿಲೀಸ್ ಆಗಿರುವ ಫಸ್ಟ್ ಲುಕ್ ಮತ್ತು ಮಾಹಿತಿಗಳು ವೈರಲ್ ಆಗಿವೆ. ಈ ಸಿನಿಮಾದಲ್ಲಿ ಕೆಜಿಎಫ್ ಹುಟ್ಟಿದ್ದು ಹೇಗೆ? ಚಿನ್ನಕ್ಕಾಗಿ ಬ್ರಿಟಿಷರು ಹೂಡಿದ್ದ ಆಟವೇನು? ಈ ನೆಲದಲ್ಲಿ ತಮಿಳಿಗರ ಪಾತ್ರ ಏನಾಗಿತ್ತು? ಹೀಗೆ ಹಲವು ಸಂಗತಿಗಳನ್ನು ಚಿತ್ರದಲ್ಲಿ ತೋರಿಸಲಿದ್ದಾರಂತೆ. ಕನ್ನಡಿಗರಿಗಿಂತಲೂ ತಮಿಳಿಗರನ್ನು ಕರೆತಂದು ಈ ಚಿನ್ನದ ಗಣಿಯಲ್ಲಿ ಬಿಡುತ್ತಿದ್ದರಂತೆ ಬ್ರಿಟಿಷರು. ಪ್ರಮುಖವಾಗಿ ಕಥೆಯನ್ನು ಅವರು ಹೇಳಲಿದ್ದಾರಂತೆ.

  • Chiyaan 62: ಸಂಭಾವನೆ ದುಪ್ಪಟ್ಟು ಮಾಡಿಕೊಂಡ ಚಿಯಾನ್‌ ವಿಕ್ರಮ್‌

    Chiyaan 62: ಸಂಭಾವನೆ ದುಪ್ಪಟ್ಟು ಮಾಡಿಕೊಂಡ ಚಿಯಾನ್‌ ವಿಕ್ರಮ್‌

    ಸೌತ್‌ನ ಸೂಪರ್ ಸ್ಟಾರ್ ಚಿಯಾನ್ ವಿಕ್ರಮ್‌ಗೆ ವಯಸ್ಸು 58 ವರ್ಷ ಆಗಿದ್ರೂ ಚಿರಯುವಕನಂತೆಯೇ ಇದ್ದಾರೆ. ಸಿನಿಮಾದಿಂದ ಸಿನಿಮಾಗೆ ಹೊಸ ಬದಲಾವಣೆಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಹೀಗಿರುವಾಗ ಚಿಯಾನ್ ತಮ್ಮ ಸಂಭಾವನೆ ದುಪ್ಪಟ್ಟು ಮಾಡಿಕೊಳ್ಳುವ ಮೂಲಕ ಸುದ್ದಿಯಲ್ಲಿದ್ದಾರೆ.

     

    View this post on Instagram

     

    A post shared by Vikram (@the_real_chiyaan)

    ‘ಪೊನ್ನಿಯನ್ ಸೆಲ್ವನ್ 2’ ಸಕ್ಸಸ್ ಬಳಿಕ ಚಿಯಾನ್ ಮತ್ತೆ ತಮ್ಮ ಸಂಭಾವನೆಯನ್ನ ಡಬಲ್‌ ಮಾಡಿಕೊಂಡಿದ್ದಾರೆ. ಒಂದು ಸಿನಿಮಾಗೆ ಚಿಯಾನ್ 25 ಕೋಟಿ ರೂಪಾಯಿ ಚಾರ್ಜ್ ಮಾಡುತ್ತಿದ್ದರು. ಈಗ ಏಕಾಏಕಿ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ. ಮುಂಬರುವ ಚಿಯಾನ್‌ 62ನೇ ಚಿತ್ರಕ್ಕೆ 50 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ನಿರ್ಮಾಪಕ ಅರುಣ್‌ ಕುಮಾರ್‌ ನಿರ್ಮಾಣದ ಚಿತ್ರಕ್ಕೆ 50 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದೇ ಚಿಯಾನ್‌ ಬಗ್ಗೆ ಗುಸು ಗುಸು ಶುರುವಾಗಿದೆ.

    ಮಣಿರತ್ನಂ ನಿರ್ದೇಶನದ ‘ಪೊನ್ನಿಯನ್ ಸೆಲ್ವನ್ 2’ ಚಿತ್ರದ ಯಶಸ್ಸಿನ ಬಳಿಕ ತಂಗಳನ್ ಚಿತ್ರ ಮತ್ತು ಚಿಯಾನ್‌ 62ನೇ ಸಿನಿಮಾದತ್ತ ಗಮನ ನೀಡುತ್ತಿದ್ದಾರೆ. ಹೀಗಿರುವಾಗ ‘ತಂಗಳನ್‌’ ತನ್ನ ಪಾತ್ರಕ್ಕಾಗಿ ಮತ್ತೆ ಲುಕ್ ಬದಲಿಸಿಕೊಂಡಿದ್ದಾರೆ. ಹೊಸ ಶೇಡ್‌ನಲ್ಲಿ ನಟ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ:ನಾಗಚೈತನ್ಯ ಜೊತೆ ಮತ್ತೆ ಒಂದಾಗುವ ಮುನ್ಸೂಚನೆ ಕೊಟ್ರಾ ಸಮಂತಾ

    ‘ತಂಗಳನ್’ ಸಿನಿಮಾದ ಶೂಟಿಂಗ್ ಕೋಲಾರದ ಗಣಿ ಕೆಜಿಎಫ್‌ನಲ್ಲಿ ನಡೆದಿದ್ದು, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸ ನಡೆಯುತ್ತಿದೆ. ಈ ಸಿನಿಮಾಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ.

  • ರಜನಿಕಾಂತ್‌ಗೆ ವಿಲನ್‌ ಆಗಿ ಅಬ್ಬರಿಸಲಿದ್ದಾರೆ ಚಿಯಾನ್ ವಿಕ್ರಮ್

    ರಜನಿಕಾಂತ್‌ಗೆ ವಿಲನ್‌ ಆಗಿ ಅಬ್ಬರಿಸಲಿದ್ದಾರೆ ಚಿಯಾನ್ ವಿಕ್ರಮ್

    ‘ಪೊನ್ನಿಯನ್ ಸೆಲ್ವನ್ 2′ (Ponniyin Selvan 2) ಸಿನಿಮಾ ಸಕ್ಸಸ್ ನಂತರ ಚಿಯಾನ್ ವಿಕ್ರಮ್‌ಗೆ (Chiyan Vikram) ಬೇಡಿಕೆ ಹೆಚ್ಚಾಗಿದೆ. ಇದೀಗ ವಿಕ್ರಮ್‌ಗೆ ಮತ್ತೊಂದು ಬಂಪರ್ ಅವಕಾಶವೊಂದು ಸಿಕ್ಕಿದೆ. ರಜನಿಕಾಂತ್‌ಗೆ (Rajanikanth) ಮುಂದೆ ಚಿಯಾನ್ ವಿಕ್ರಮ್ ನಟಿಸುವ ಅವಕಾಶ ಬಾಚಿಕೊಂಡಿದ್ದಾರೆ. ಅದಕ್ಕಾಗಿ ಭರ್ಜರಿ ಸಂಭಾವನೆ ಕೂಡ ಪಡೆದುಕೊಂಡಿದ್ದಾರೆ.

    ಎಂತಹ ಸೂಪರ್ ಸ್ಟಾರ್ ಆಗಿದ್ರೂ ವಿಲನ್ ಖಡಕ್ ಆಗಿದ್ರೇನೇ ಹೀರೋಗೂ ಒಂದು ತೂಕ. ಕಾಲಿವುಡ್ ಸೂಪರ್ ಸ್ಟಾರ್ ತಲೈವಾ ಮುಂದೆ ಅಬ್ಬರಿಸಲು ಸ್ಟಾರ್ ನಟನಿಗೆ ಮಣೆ ಹಾಕಿದ್ದಾರೆ. ರಜನಿ 170ನೇ ಚಿತ್ರಕ್ಕೆ ಚಿಯಾನ್ ವಿಕ್ರಮ್ ಎಂಟ್ರಿ ಕೊಡುತ್ತಿದ್ದಾರೆ. ತಲೈವಾಗೆ ವಿಲನ್ ಆಗಿ ಖಡಕ್ ಆಗಿ ನಟಿಸಲಿದ್ದಾರೆ.

    ವಿಕ್ರಮ್ ಅವರು ಕಾಲಿವುಡ್‌ನ ಬೇಡಿಕೆಯ ಹೀರೋ. ವೃತ್ತಿ ಜೀವನದಲ್ಲಿ ಅವರು ಹಲವು ಡಿಫರೆಂಟ್ ರೋಲ್‌ಗಳನ್ನು ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಹಾಗಾಗಿ ವಿಲನ್ (Villain) ಪಾತ್ರ ಮಾಡಲು ತಲೈವಾ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅದಕ್ಕಾಗಿ 50 ಕೋಟಿ ರೂಪಾಯಿ ಪೇಮೆಂಟ್ ಪಡೆದಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ:ಆರ್‌ಸಿಬಿ ಗೆಲುವಿಗೆ ಸಂಭ್ರಮಿಸಿದ ರಿಷಬ್ ಶೆಟ್ಟಿ ಪುತ್ರಿ

    ‘ತಲೈವರ್ 170’ನೇ ಚಿತ್ರಕ್ಕೆ ಟಿಜಿ ಜ್ಞಾನವೇಲ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಲೈಕಾ ಪ್ರೊಡಕ್ಷನ್ (Lyca Productions)  ಬಂಡವಾಳ ಹೂಡುತ್ತಿದೆ. ತಮಿಳುನಾಡಿನಲ್ಲಿ ಹಲವು ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಿಸಿದ ಖ್ಯಾತಿ ಲೈಕಾ ಈಗ ರಜನಿಕಾಂತ್ 170ನೇ ಚಿತ್ರ ನಿರ್ಮಾಣ¨ ಮಾಡ್ತಿದ್ದಾರೆ.

  • ಪಕ್ಕೆಲುಬು ಮುರಿದುಕೊಂಡ ವಿಕ್ರಮ್ : ಶಸ್ತ್ರ ಚಿಕಿತ್ಸೆಗೆ ಸೂಚಿಸಿದ ವೈದ್ಯರು

    ಪಕ್ಕೆಲುಬು ಮುರಿದುಕೊಂಡ ವಿಕ್ರಮ್ : ಶಸ್ತ್ರ ಚಿಕಿತ್ಸೆಗೆ ಸೂಚಿಸಿದ ವೈದ್ಯರು

    ಮಿಳಿನ ಸ್ಟಾರ್ ನಟ ಚಿಯಾನ್ ವಿಕ್ರಮ್ (Chiyaan Vikram) ನಿನ್ನೆಯಷ್ಟೇ ಸಾಹಸ ಸನ್ನಿವೇಶದ ರಿಹರ್ಸಲ್ ವೇಳೆ ಪಕ್ಕೆಲುಬು (Ribs) ಮುರಿದುಕೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆಯಿಂದ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಶಸ್ತ್ರ ಚಿಕಿತ್ಸೆ (Surgery) ಮಾಡಿಸಿಕೊಳ್ಳುವಂತೆ ಸೂಚಿಸಿದ್ದಾರೆ ಎಂದು ವರದಿ ಆಗಿದೆ.

    ‘ಪೊನ್ನಿಯಿನ್ ಸೆಲ್ವನ್ 2’ (Ponniyin Selvan 2) ಸಿನಿಮಾದ ಪ್ರಚಾರ ಮುಗಿಸಿ ಮತ್ತೆ ಹೊಸ ಸಿನಿಮಾದ ಚಿತ್ರೀಕರಣಕ್ಕೆ ವಿಕ್ರಮ್ ರೆಡಿಯಾಗುತ್ತಿದ್ದರು. ಸದ್ಯ ಅವರು ‘ತಂಗಲಾನ್’ (Thangalaan Film) ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಸಿನಿಮಾದ ರಿಹರ್ಸಲ್ ವೇಳೆ ಬಿದ್ದು ವಿಕ್ರಮ್ ಪಕ್ಕೆಲುಬಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ನಟಿ ಮೇಘನಾ ರಾಜ್ ಹುಟ್ಟು ಹಬ್ಬಕ್ಕೆ ತತ್ಸಮ ತದ್ಭವ ಪೋಸ್ಟರ್ ರಿಲೀಸ್

    ‘ತಂಗಲಾನ್’ ಸಿನಿಮಾದ ರಿಹರ್ಸಲ್ ವೇಳೆ ವಿಕ್ರಮ್‌ಗೆ ಗಾಯಗಳಾಗಿರೋದ್ರಿಂದ ಶೂಟಿಂಗ್ ನಿಲ್ಲಿಸಲಾಗಿದೆ. ಅವರು ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕೆ ಮತ್ತೆ ಶೂಟಿಂಗ್ ಶುರುವಾಗುತ್ತದೆ. ಈ ಹಿಂದೆ ಕೂಡ ಇದೇ ಸಿನಿಮಾ ಸೆಟ್‌ನಲ್ಲಿ ವಿಕ್ರಮ್‌ಗೆ ಪೆಟ್ಟಾಗಿ ಕೆಲವು ದಿನಗಳ ಕಾಲ ಶೂಟಿಂಗ್ ನಿಂತಿತ್ತು. ಇದರಿಂದ ವಿಕ್ರಮ್ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ವಿಕ್ರಮ್ ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಪ್ರಸ್ತುತ ವಿಕ್ರಮ್‌ಗೆ ಆಸ್ಪತ್ರೆಯಲ್ಲೇ ಇದ್ದಾರೆ.

    ಕೋಲಾರ ಚಿನ್ನದ ಗಣಿಯ ಕಾರ್ಮಿಕರ ಸುತ್ತಾ ‘ತಂಗಲಾನ್’ ಸಿನಿಮಾ ಮೂಡಿ ಬರ್ತಿದೆ. ನಿರ್ದೇಶಕ ಪಾ.ರಂಜಿತ್ ಕೋಲಾರದಲ್ಲಿ ನಡೆದ ನಿಜವಾದ ಘಟನೆಗಳನ್ನು ಆಧರಿಸಿ, ಆ ಬಗ್ಗೆ ಸಂಶೋಧನೆ ನಡೆಸಿ ಸಿನಿಮಾ ಮಾಡುತ್ತಿರುವುದಾಗಿ ಹೇಳಿದ್ದಾರೆ. ನೂರು ವರ್ಷಗಳ ಹಿಂದೆ ಅಲ್ಲಿನ ಗಣಿ ಕಾರ್ಮಿಕರ ಪರಿಸ್ಥಿತಿ ಹೇಗಿತ್ತು ಎನ್ನುವುದರ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ.

  • ‘ತಂಗಲಾನ್’ ರಿಹರ್ಸಲ್ ವೇಳೆ ವಿಕ್ರಮ್‌ಗೆ ಗಾಯ- ಶೂಟಿಂಗ್ ಸ್ಥಗಿತ

    ‘ತಂಗಲಾನ್’ ರಿಹರ್ಸಲ್ ವೇಳೆ ವಿಕ್ರಮ್‌ಗೆ ಗಾಯ- ಶೂಟಿಂಗ್ ಸ್ಥಗಿತ

    ಕ್ಷಿಣ ಭಾರತದ ಸ್ಟಾರ್ ನಟ ಚಿಯಾನ್ ವಿಕ್ರಮ್ (Chiyaan Vikram) ಅವರು ‘ಪೊನ್ನಿಯಿನ್ ಸೆಲ್ವನ್ 2’ (Ponniyin Selvan 2) ಸಿನಿಮಾ ಪ್ರಚಾರ ಮುಗಿಸಿ ಮತ್ತೆ ಹೊಸ ಸಿನಿಮಾದ ಚಿತ್ರೀಕರಣಕ್ಕೆ ಹಾಜರಾಗಿದ್ದರು. ‘ತಂಗಲಾನ್’ (Thangalaan Film) ರಿಹರ್ಸಲ್ ವೇಳೆ ಬಿದ್ದು ವಿಕ್ರಮ್ ಪಕ್ಕೆಲುಬಿಗೆ ಪೆಟ್ಟಾಗಿದೆ. ಕೂಡಲೇ ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ.

    ‘ತಂಗಲಾನ್’ ಸಿನಿಮಾದ ರಿಹರ್ಸಲ್ ವೇಳೆ ವಿಕ್ರಮ್‌ಗೆ ಗಾಯಗಳಾಗಿರೋದ್ರಿಂದ ಶೂಟಿಂಗ್ ನಿಲ್ಲಿಸಲಾಗಿದೆ. ಅವರು ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕೆ ಮತ್ತೆ ಶೂಟಿಂಗ್ ಶುರುವಾಗುತ್ತದೆ. ಈ ಹಿಂದೆ ಕೂಡ ಇದೇ ಸಿನಿಮಾ ಸೆಟ್‌ನಲ್ಲಿ ವಿಕ್ರಮ್‌ಗೆ ಪೆಟ್ಟಾಗಿ ಕೆಲವು ದಿನಗಳ ಕಾಲ ಶೂಟಿಂಗ್ ನಿಂತಿತ್ತು. ಇದರಿಂದ ವಿಕ್ರಮ್ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ವಿಕ್ರಮ್ ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಪ್ರಸ್ತುತ ವಿಕ್ರಮ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗಿದೆ ಎಂದು ಹೇಳಲಾಗುತ್ತಿದೆ.

    ಕೋಲಾರ ಚಿನ್ನದ ಗಣಿಯ ಕಾರ್ಮಿಕರ ಸುತ್ತಾ ‘ತಂಗಲಾನ್’ ಸಿನಿಮಾ ಮೂಡಿ ಬರ್ತಿದೆ. ನಿರ್ದೇಶಕ ಪಾ.ರಂಜಿತ್ ಕೋಲಾರದಲ್ಲಿ ನಡೆದ ನಿಜವಾದ ಘಟನೆಗಳನ್ನು ಆಧರಿಸಿ, ಆ ಬಗ್ಗೆ ಸಂಶೋಧನೆ ನಡೆಸಿ ಸಿನಿಮಾ ಮಾಡುತ್ತಿರುವುದಾಗಿ ಹೇಳಿದ್ದಾರೆ. ನೂರು ವರ್ಷಗಳ ಹಿಂದೆ ಅಲ್ಲಿನ ಗಣಿ ಕಾರ್ಮಿಕರ ಪರಿಸ್ಥಿತಿ ಹೇಗಿತ್ತು ಎನ್ನುವುದರ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ.

  • ‘ಪೊನ್ನಿಯಿನ್ ಸೆಲ್ವನ್-2’ ಸಿನಿಮಾದ ಮತ್ತೊಂದು ಹಾಡು ರಿಲೀಸ್

    ‘ಪೊನ್ನಿಯಿನ್ ಸೆಲ್ವನ್-2’ ಸಿನಿಮಾದ ಮತ್ತೊಂದು ಹಾಡು ರಿಲೀಸ್

    ಖ್ಯಾತ ನಿರ್ದೇಶಕ ಮಣಿರತ್ನಂ (Mani Ratnam) ಡ್ರೀಮ್ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ ‘ಪೊನ್ನಿಯಿನ್ ಸೆಲ್ವನ್-2 (Ponniyin Selvan 2) ಬಿಡುಗಡೆಗೆ ರೆಡಿಯಾಗಿದೆ. ಏಪ್ರಿಲ್ 28ಕ್ಕೆ ಸಿನಿಮಾ ವರ್ಲ್ಡ್ ವೈಡ್ ಅದ್ದೂರಿಯಾಗಿ ತೆರೆ ಕಾಣುತ್ತಿದೆ. ಈಗಾಗಲೇ ಟೀಸರ್ ಮೂಲಕ ಸೀಕ್ವೆಲ್ 2 ಮೋಡಿ ಮಾಡಲು ಶುರುವಿಟ್ಟಿದೆ. ಇದೀಗ ಚಿತ್ರತಂಡ ಚಿತ್ರದ ಮೊದಲ ಸಾಂಗ್ ‘ಕಿರುನಗೆ’ ಹಾಡಿನ ಲಿರಿಕಲ್ ವೀಡಿಯೋ ಬಿಡುಗಡೆ ಮಾಡಿದೆ.

    ಮ್ಯೂಸಿಕ್ ಮಾಂತ್ರಿಕ ಎ.ಆರ್.ರೆಹಮಾನ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ‘ಕಿರುನಗೆ’ ಹಾಡಿಗೆ ಜಯಂತ್ ಕಾಯ್ಕಿಣಿ ಚೆಂದದ ಸಾಲುಗಳನ್ನು ಪೋಣಿಸಿದ್ದು, ಗಾಯಕಿ ರಕ್ಷಿತಾ ಸುರೇಶ್ ಇಂಪಾದ ದನಿಯಾಗಿದ್ದಾರೆ. ಕಿರುನಗೆ  ಮೆಲೋಡಿ ಹಾಡು ಬಿಡುಗಡೆಯಾಗಿ ಕೇಳುಗರ ಮನ  ಸೆಳೆಯುತ್ತಿದೆ.  ಇದನ್ನೂ ಓದಿ: ಸೆಕ್ಸ್ ಸಿಂಬಲ್ ಅಂತ ಕರೆದರೆ ಬೇಸರವಿಲ್ಲ ಎಂದ ನಟಿ ಮಲೈಕಾ

    ಲೈಕಾ ಪ್ರೊಡಕ್ಷನ್ಸ್ ಮತ್ತು ಮದ್ರಾಸ್ ಟಾಕೀಸ್ ಬ್ಯಾನರ್ ನಡಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಸ್ಟಾರ್ ತಾರಾಬಳಗವಿರುವ ಸಿನಿಮಾ ‘ಪೊನ್ನಿಯಿನ್ ಸೆಲ್ವನ್ -2’. ಕಾರ್ತಿ (Karthi), ಐಶ್ವರ್ಯಾ ರೈ (Aishwarya Rai), ಚಿಯಾನ್ ವಿಕ್ರಮ್, ಜಯಂ ರವಿ, ತ್ರಿಶಾ, ಶರತ್ ಕುಮಾರ್, ಪ್ರಕಾಶ್ ರಾಜ್ ದಿಗ್ಗಜ ಕಲಾವಿದರ ಸಮಾಗಮ ಚಿತ್ರದಲ್ಲಿದೆ. ಮಣಿರತ್ನಂ ನಿರ್ದೇಶನ ಒಂದು ಶಕ್ತಿಯಾದ್ರೆ, ಎ.ಆರ್.ರೆಹಮಾನ್ ಮ್ಯೂಸಿಕ್, ರವಿವರ್ಮನ್ ಕ್ಯಾಮೆರಾ ವರ್ಕ್, ಸ್ಟಾರ್ ಹಾಗೂ ಅನುಭವಿ ಕಲಾವಿದರ ನಟನೆ, ಅದ್ದೂರಿ ಮೇಕಿಂಗ್ ಎಲ್ಲವೂ ಸೀಕ್ವೆಲ್ 2 ಮೇಲೆ ನಿರೀಕ್ಷೆ ಹೆಚ್ಚಿಸಿದೆ.

    ಲೇಖಕ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕಲ್ಕಿ ಕೃಷ್ಣಮೂರ್ತಿ ಬರೆದ ಕಾದಂಬರಿ ‘ಪೊನ್ನಿಯಿನ್ ಸೆಲ್ವನ್’ ಆಧಾರಿತ ಚಿತ್ರವಿದು. ಸೆಪ್ಟೆಂಬರ್ 30ರಲ್ಲಿ ತೆರೆಕಂಡ ಮೊದಲ ಸೀಕ್ವೆಲ್ ಅಭೂತಪೂರ್ವ ರೆಸ್ಪಾನ್ಸ್ ಪಡೆದುಕೊಂಡಿತ್ತು. ಇದೀಗ ಆ ಗೆಲುವಿನ ಸಂಭ್ರಮದಲ್ಲೇ ಎರಡನೇ ಸೀಕ್ವೆಲ್ ರೆಕಾರ್ಡ್ ಕ್ರಿಯೇಟ್ ಮಾಡಲು ರೆಡಿಯಾಗಿದೆ.  ಏಪ್ರಿಲ್ 28ಕ್ಕೆ ‘ಪೊನ್ನಿಯಿನ್ ಸೆಲ್ವನ್’ ಸೀಕ್ವೆಲ್ 2 ತೆರೆ ಮೇಲೆ ಮ್ಯಾಜಿಕ್ ಸೃಷ್ಟಿಸಲು ಬರಲಿದೆ.

  • ‘ಪೊನ್ನಿಯಿನ್ ಸೆಲ್ವನ್-2’ ತಮಿಳು, ಹಿಂದಿ ಆವೃತ್ತಿ ಬಿಡುಗಡೆ

    ‘ಪೊನ್ನಿಯಿನ್ ಸೆಲ್ವನ್-2’ ತಮಿಳು, ಹಿಂದಿ ಆವೃತ್ತಿ ಬಿಡುಗಡೆ

    ಮ್ಯಾಕ್ಸ್ ಕಾರ್ಪೊರೇಷನ್ ಮತ್ತು ಲೈಕಾ ಪ್ರೊಡಕ್ಷನ್ಸ್ ದಕ್ಷಿಣ ಭಾರತದ ಬಹು ನಿರೀಕ್ಷಿತ ಚಿತ್ರ ‘ಪೊನ್ನಿಯಿನ್ ಸೆಲ್ವನ್-2’ (Ponniyin Selvan 2) ತಮಿಳು ಹಾಗೂ ಹಿಂದಿ ಆವೃತ್ತಿ ಐಮ್ಯಾಕ್ಸ್ ನಲ್ಲಿ ಬಿಡುಗಡೆಯಾಗುತ್ತಿರುವುದನ್ನು ಖಾತ್ರಿ ಪಡಿಸಿದೆ. ತಮಿಳು ಚಿತ್ರರಂಗದ ಬಿಗ್ ಪ್ರಾಜೆಕ್ಟ್ ಹಾಗೂ ಸ್ಟಾರ್ ತಾರಾಗಣವನ್ನೊಳಗೊಂಡ ‘ಪೊನ್ನಿಯಿನ್ ಸೆಲ್ವನ್-2’ ಏಪ್ರಿಲ್ 28ರಂದು ಬಿಡುಗಡೆಯಾಗುತ್ತಿದ್ದು, ಭಾರತದಾದ್ಯಂತ ಚಿತ್ರದ ತಮಿಳು ಹಾಗೂ ಹಿಂದಿ ಆವೃತ್ತಿ ಐಮ್ಯಾಕ್ಸ್ ಥಿಯೇಟರ್ ಗಳಲ್ಲಿ ಬಿಡುಗಡೆಯಾಗುತ್ತಿದೆ.

    ಖ್ಯಾತ ನಿರ್ದೇಶಕ ಮಣಿರತ್ನಂ (Mani Ratnam) ಡ್ರೀಮ್ ಪ್ರಾಜೆಕ್ಟ್ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ. ಕಾರ್ತಿ (Karthi), ಐಶ್ವರ್ಯಾ ರೈ (Aishwarya Rai), ಚಿಯಾನ್ ವಿಕ್ರಮ್ (Chiyan Vikram), ಜಯಂ ರವಿ, ತ್ರಿಶಾ, ಶರತ್ ಕುಮಾರ್, ಪ್ರಕಾಶ್ ರಾಜ್ ರಂತಹ ದಿಗ್ಗಜ ಕಲಾವಿದರ ಸಮಾಗಮವಿರುವ ಈ ಚಿತ್ರ ಪ್ರೇಕ್ಷಕ ಮಹಾಶಯರಿಂದಲೂ ಬಹುಪರಾಕ್ ಪಡೆದುಕೊಂಡಿತ್ತು. ಸೀಕ್ವಲ್ 2 ಏಪ್ರಿಲ್ 28ರಂದು ಮನರಂಜನೆ ನೀಡಲು ಸಜ್ಜಾಗಿದೆ. ಪ್ಯಾನ್ ಇಂಡಿಯಾ ಚಿತ್ರದ ತಮಿಳು ಹಾಗೂ ಹಿಂದಿ ಸೀಕ್ವೆಲ್ ಐಮ್ಯಾಕ್ಸ್ ನಲ್ಲಿ ಬಿಡುಗಡೆಯಾಗುತ್ತಿದೆ. ಇದನ್ನೂ ಓದಿ:ಥೈಲ್ಯಾಂಡ್‌ನಲ್ಲಿ ನಟಿ ಸೋನು ಜೊತೆ ನೇಹಾ ಗೌಡ ಮೋಜು- ಮಸ್ತಿ

    ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ಪ್ರಖ್ಯಾತಿ ಗಳಿಸಿರುವ ಲೈಕಾ ಸ್ಟುಡಿಯೋ ತಮಿಳು ಚಿತ್ರರಂಗದ ಬಿಗ್ ಬಜೆಟ್ ಸಿನಿಮಾಗಳಾದ ‘ಐ’, ‘ರೋಬೋಟ್ 2.0’ ಹಾಗೂ ‘ಪೊನ್ನಿಯಿನ್ ಸೆಲ್ವನ್- 1’ ನಿರ್ಮಾಣ ಮಾಡಿದೆ. ಇದೀಗ ‘ಪೊನ್ನಿಯಿನ್ ಸೆಲ್ವನ್- 2’ ಕೂಡ ಇದೇ ಸಂಸ್ಥೆಯಡಿ ನಿರ್ಮಾಣವಾಗಿ ತೆರೆ ಕಾಣುತ್ತಿದೆ. ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಸಂಗೀತ ನಿರ್ದೇಶನ, ರವಿವರ್ಮನ್ ಛಾಯಾಗ್ರಹಣ, ಶ್ರೀಕರ್ ಪ್ರಸಾದ್ ಸಂಕಲನ ಚಿತ್ರಕ್ಕಿದೆ. ಸಾಕಷ್ಟು ನಿರೀಕ್ಷೆ ಕ್ರಿಯೇಟ್ ಮಾಡಿರುವ ‘ಪೊನ್ನಿಯಿನ್ ಸೆಲ್ವನ್- 2’ ಏಪ್ರಿಲ್ 28ರಂದು ಬಿಡುಗಡೆಯಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k