Tag: ಚಿರು ಸರ್ಜಾ

  • ಆ್ಯಕ್ಷನ್ ಪ್ರಿನ್ಸ್ ಬರ್ತ್‌ಡೇಯಂದು ರಿಲೀಸ್ ಆಗಲಿದೆ ಚಿರು ಸರ್ಜಾ ನಟನೆಯ ಕೊನೆಯ ಸಿನಿಮಾ

    ಆ್ಯಕ್ಷನ್ ಪ್ರಿನ್ಸ್ ಬರ್ತ್‌ಡೇಯಂದು ರಿಲೀಸ್ ಆಗಲಿದೆ ಚಿರು ಸರ್ಜಾ ನಟನೆಯ ಕೊನೆಯ ಸಿನಿಮಾ

    ನ್ನಡ ಚಿತ್ರರಂಗದ ಯುವ ಸಾಮ್ರಾಟ್ ಚಿರು ಸರ್ಜಾ (Chiranjeevi Sarja) ಅವರು ನಿಧನರಾಗಿ 3 ವರ್ಷವಾಗಿದೆ. ಅವರ ಅಗಲಿಕೆಯ ನೋವು ಸರ್ಜಾ ಕುಟುಂಬ ಮತ್ತು ಫ್ಯಾನ್ಸ್‌ಗೆ ಇನ್ನೂ ಕಾಡ್ತಿದೆ. ಹೀಗಿರುವಾಗ ಚಿರು ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಹೀರೋ ಧ್ರುವ ಸರ್ಜಾ (Dhruva Sarja) ಹುಟ್ಟುಹಬ್ಬದಂದು (Birthday) ಚಿರು ಸರ್ಜಾ ನಟಿಸಿದ ಕೊನೆಯ ಸಿನಿಮಾ ರಾಜಮಾರ್ತಾಂಡ ಸಿನಿಮಾ ಬೆಳ್ಳಿತೆರೆಗೆ ಅಪ್ಪಳಿಸುತ್ತಿದೆ.

    ಅಕ್ಟೋಬರ್ 6ರಂದು ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹುಟ್ಟುಹಬ್ಬವಿದೆ. ತಮ್ಮನ ಹುಟ್ಟುಹಬ್ಬಂದು ಅಣ್ಣನ ಕೊನೆಯ ಸಿನಿಮಾ ಬಿಡುಗಡೆಗೆ ಸಿದ್ಧತೆಗಳು ನಡೆಯುತ್ತಿವೆ. ಚಿರಂಜೀವಿ ಸರ್ಜಾ ಕೊನೆಯ ಸಿನಿಮಾ ‘ರಾಜಮಾರ್ತಾಂಡ’ ಅಕ್ಟೋಬರ್ 6ರಂದು ಬಿಡುಗಡೆ ಮಾಡುವುದಕ್ಕೆ ನಿರ್ಮಾಪಕ ಹಾಗೂ ನಿರ್ದೇಶಕರು ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ:ಇಂಟರ್‌ನೆಟ್ ಬೆಂಕಿ ಹಚ್ಚಿದ ಸಂಯುಕ್ತಾ ಹೆಗ್ಡೆ ಬಿಕಿನಿ ಫೋಟೋಸ್

    ಚಿರಂಜೀವಿ ಸರ್ಜಾ ಅಗಲುವ ಮುನ್ನ ‘ರಾಜಮಾರ್ತಾಂಡ’ ಸಿನಿಮಾದಲ್ಲಿ ನಟಿಸುತ್ತಿದ್ದರು. ಈ ಸಿನಿಮಾ ಶೂಟಿಂಗ್ ಮುಕ್ತಾಯವಾಗಿದ್ದರೂ, ಇನ್ನೂ ಪೋಸ್ಟ್ ಪ್ರೊಡಕ್ಷನ್ ಕೆಲಸ ಬಾಕಿಯಿತ್ತು. ಅಲ್ಲದೆ ಡಬ್ಬಿಂಗ್ ಕೂಡ ಆಗಿರಲಿಲ್ಲ. ಚಿರು ಅಗಲಿದ ಬಳಿಕ ಉಳಿಸಿ ಹೋದ ಕೆಲಸಗಳನ್ನು ತಾನು ಪೂರ್ಣಗೊಳಿಸುವುದಾಗಿ ಧ್ರುವ ಹೇಳಿದ್ದರು. ಅದರಂತೆಯೇ ಚಿರು ದೃಶ್ಯಗಳಿಗೆ ಧ್ರುವ ಸರ್ಜಾ ಡಬ್ಬಿಂಗ್ ಮಾಡಿಕೊಟ್ಟಿದ್ದರು. ಇದನ್ನೂ ಓದಿ:ಇಂಟರ್‌ನೆಟ್ ಬೆಂಕಿ ಹಚ್ಚಿದ ಸಂಯುಕ್ತಾ ಹೆಗ್ಡೆ ಬಿಕಿನಿ ಫೋಟೋಸ್

    ‘ರಾಜಮಾರ್ತಾಂಡ’ (Rajamartanda) ಒಂದು ಮಾಸ್ ಸಿನಿಮಾ. ಚಿರಂಜೀವಿ ಸರ್ಜಾ ಈ ಸಿನಿಮಾ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಧ್ರುವ ಸರ್ಜಾ ಧ್ವನಿಯಲ್ಲಿ ಚಿರು ನಟನೆಯನ್ನು ಕಣ್ತುಂಬಿಕೊಳ್ಳುವ ಅವಕಾಶ ಈಗ ಅಭಿಮಾನಿಗಳ ಪಾಲಿಗೆ ಒಲಿದು ಬಂದಿದೆ. ಚಿರುಗೆ ನಾಯಕಿಯರಾಗಿ ದೀಪ್ತಿ ಸಾತಿ, ಮೇಘಶ್ರೀ ನಟಿಸಿದ್ದಾರೆ.

    ಈ ಸಿನಿಮಾದ ಮೂಲಕ ಚಿರು ಸರ್ಜಾ- ಮೇಘನಾ ರಾಜ್ (Meghana Raj) ಪುತ್ರ ರಾಯನ್ (Rayan) ಕೂಡ ಪರಿಚಯ ಆಗುತ್ತಿದ್ದಾರೆ. ಈ ಬಗ್ಗೆ ನಟಿ ಮೇಘನಾ ಅವರೇ ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿರು ಕೊನೆಯ ಸಿನಿಮಾದಲ್ಲಿ ರಾಯನ್- ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮೇಘನಾ ರಾಜ್

    ಚಿರು ಕೊನೆಯ ಸಿನಿಮಾದಲ್ಲಿ ರಾಯನ್- ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮೇಘನಾ ರಾಜ್

    ‘ತತ್ಸಮ ತದ್ಭವ’ (Tatsama Tadbhava) ಸಿನಿಮಾ ಮೂಲಕ ನಟಿ ಮೇಘನಾ ರಾಜ್ (Meghana Raj) ಅವರು ಕಮ್‌ಬ್ಯಾಕ್ ಆಗಿದ್ದಾರೆ. ಚಿತ್ರದ ಮೊದಲ ಟೀಸರ್‌ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ. ಇದರ ನಡುವೆ ಇತ್ತೀಚಿನ ಸಂದರ್ಶನದಲ್ಲಿ ಮೇಘನಾ ರಾಜ್ ಅವರು ಅಚ್ಚರಿಯ ಮಾಹಿತಿಯೊಂದನ್ನ ಬಿಚ್ಚಿಟ್ಟಿದ್ದಾರೆ. ಪತಿ ಚಿರು ಕೊನೆಯ ಸಿನಿಮಾದಲ್ಲಿ ರಾಯನ್ ರಾಜ್‌ ಸರ್ಜಾ ನಟಿಸಿದ್ದಾರಾ? ಎಂಬುದರ ಬಗ್ಗೆ ನಟಿ ಮಾತಾಡಿದ್ದಾರೆ.

    ಮೇಘನಾ ರಾಜ್ ಅವರು ಎಂದೂ ಕಾಣಿಸಿಕೊಂಡಿರದ ಪಾತ್ರದಲ್ಲಿ ‘ತತ್ಸಮ ತದ್ಭವ’ ಸಿನಿಮಾದಲ್ಲಿ ನಟಿಸಿದ್ದಾರೆ. ಕಮ್ ಬ್ಯಾಕ್ ಸಿನಿಮಾ ಆಗಿರೋ ಕಾರಣ, ಸಿನಿಮಾ ಬಗ್ಗೆ ತುಂಬಾನೇ ಹೈಪ್ ಕ್ರಿಯೇಟ್ ಮಾಡಿದೆ. ಇದರ ಪತಿ ಚಿರು ಸರ್ಜಾ ನಟನೆಯ ‘ರಾಜ ಮಾರ್ತಾಂಡ’ ಸಿನಿಮಾ ಯಾಕೆ ತಡವಾಗುತ್ತಿದೆ ಎಂದು ನಟಿ ಹೇಳಿದ್ದಾರೆ.

    ಪತಿ ಚಿರಂಜೀವಿ ಸರ್ಜಾ (Chiranjeevi Sarja) ಅವರು ಕೊನೆದಾಗಿ ನಟಿಸಿರುವ ಸಿನಿಮಾ ‘ರಾಜ ಮಾರ್ತಾಂಡ’ (Raja Marthanda) ಚಿತ್ರ. ಸರ್ಜಾ ಫ್ಯಾಮಿಲಿ ಭಾವನಾತ್ಮಕವಾಗಿ ಹತ್ತಿರವಾಗಿದೆ. ಧ್ರುವ ಸರ್ಜಾ ಚಿರು ಪಾತ್ರಕ್ಕೆ ಧ್ವನಿಯಾಗಿದ್ರೆ, ಪುತ್ರ ರಾಯನ್ ರಾಜ್ ಸರ್ಜಾ ಈ ಸಿನಿಮಾದ ಭಾಗವಾಗಿದ್ದಾರೆ. ರಾಯನ್ ಕೂಡ ತಂದೆಯ ಸಿನಿಮಾ ಮೂಲಕ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಗ್ಗೆ ಮೇಘನಾ ರಾಜ್ ಅವರು ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ:ಮನೀಷ್ ಮಲ್ಹೋತ್ರಾ ನಿರ್ದೇಶನದಲ್ಲಿ ಮೀನಾ ಕುಮಾರಿ ಬಯೋಪಿಕ್- ಕೃತಿ ಸನೋನ್ ನಾಯಕಿ?

    ಚಿರು- ಧ್ರುವಗೆ ಇಬ್ಬರ ಬಾಂಡಿಂಗ್ ತುಂಬಾನೇ ಚೆನ್ನಾಗಿತ್ತು. ಡಬ್ಬಿಂಗ್ ಮಾಡುವಾಗ ಧ್ರುವಗೆ ಸೀನ್ ನೋಡಿ ಡಬ್ ಮಾಡೋಕೆ ಕಷ್ಟವಾಗಿದೆ. ಸಿನಿಮಾ ಚೆನ್ನಾಗಿ ಬರಬೇಕು ಎಂಬ ಕಾರಣಕ್ಕೆ ಸಮಯ ತೆಗೆದುಕೊಂಡು ಕೆಲಸ ಮಾಡಿದ್ದಾರೆ.  ಧ್ರುವ ಸರ್ಜಾ ಇನ್ನೂ ಎಳಸು ಅಷ್ಟು ಶಕ್ತಿ ಇಲ್ಲ. ರಾಯನ್- ಅವನಿಗೂ ವ್ಯತ್ಯಾಸವಿಲ್ಲ ಎಂದು ಮೇಘನಾ ರಾಜ್ ಹೇಳಿದ್ದಾರೆ. ಸಿನಿಮಾ ಪ್ರಚಾರದಿಂದ ಹಿಡಿದು ರಿಲೀಸ್‌ ಆಗುವವರೆಗೂ ನನ್ನದು ಮತ್ತು ನನ್ನ ಕುಟುಂಬದ ಬೆಂಬಲವಿರುತ್ತದೆ ಎಂದು ಹೇಳಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಮೋಷನಲ್ ನಿಂದನೆ ಬಗ್ಗೆ ಮೌನ ಮುರಿದ ಮೇಘನಾ ರಾಜ್

    ಎಮೋಷನಲ್ ನಿಂದನೆ ಬಗ್ಗೆ ಮೌನ ಮುರಿದ ಮೇಘನಾ ರಾಜ್

    ಸ್ಯಾಂಡಲ್‌ವುಡ್ (Sandalwood) ನಟಿ ಮೇಘನಾ ರಾಜ್ (Meghana Raj) `ತತ್ಸಮ ತದ್ಭವ’ ಚಿತ್ರದ ಮೂಲಕ ಕಮ್‌ಬ್ಯಾಕ್ ಮಾಡ್ತಿದ್ದಾರೆ. ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಈ ಚಿತ್ರದ ಮೂಲಕ ಸಮಾಜಕ್ಕೆ ಒಂದೊಳ್ಳೆಯ ಸಂದೇಶ ಕೊಡಲು ಬರುತ್ತಿದ್ದಾರೆ. ಹಾಗೆಯೇ ತಮ್ಮ ಎಮೋಷನಲ್ ಜರ್ನಿಯ ಬಗ್ಗೆ ನಟಿ ಮಾತನಾಡಿದ್ದಾರೆ. ಹೆಣ್ಣು ಮಕ್ಕಳಿಗಿರುವ ಸಮಾಜದ ಚೌಕಟ್ಟು ಅವರ ದೃಷ್ಟಿಕೋನದ ಬಗ್ಗೆ ಮೇಘನಾ ಮೌನ ಮುರಿದಿದ್ದಾರೆ.

    ಸಮಾಜದಲ್ಲಿ ಹೆಣ್ಣು ಹೀಗೆಯೇ ಇರಬೇಕು. ಇಂತಹ ಕೆಲಸಗಳನ್ನೇ ಮಾಡಬೇಕು ಎಂದೆಲ್ಲಾ ನಿರೀಕ್ಷೆ ಮಾಡುತ್ತಿದ್ದರು. ಅದರಿಂದ ನನಗೆ ತುಂಬಾ ಹಿಂಸೆ ಆಗುತ್ತಿತ್ತು. ನನ್ನ ಪ್ರಕಾರ ದೇಶದಲ್ಲಿ ಅತಿ ದೊಡ್ಡ ನಿಂದನೆ ಅಂದ್ರೆ ಅದು ಭಾವನಾತ್ಮಕ ನಿಂದನೆ ಎನ್ನಬಹುದು. ನನ್ನ ಭಾವನೆಗಳನ್ನು ವ್ಯಕ್ತ ಪಡಿಸುವುದಕ್ಕೆ ತುಂಬಾ ಇಷ್ಟ ಪಡುವ ವ್ಯಕ್ತಿನಾನು ಅದು ಹೇಗೆ ಇರಲಿ ನಾನು ವ್ಯಕ್ತಪಡಿಸುವೆ. ಆದರೆ ತುಂಬಾ ಭಾವನೆಗಳನ್ನು ಹಿಡಿದಿಟ್ಟಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು ಹಾಗೆ ಆಗಬಾರದು ಎಂದು ಮೇಘನಾ ರಾಜ್ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

    ನಾವು ನಮ್ಮಂತೆಯೇ ಸಮಾಜದ ಮುಂದೆ ಇರುವುದಕ್ಕೆ ಅದೆಷ್ಟೋ ಹೆಣ್ಣು ಮಕ್ಕಳು ಹೆದರಿಕೊಳ್ಳುತ್ತಾರೆ. ಕಾರಣ ಜನರು ನಮ್ಮನ್ನು ಜಡ್ಜ್ ಮಾಡುತ್ತಾರೆ ಎಂದು. ನನ್ನ ನಿಜವಾದ ಭಾವನೆಗಳನ್ನು ತೋರಿಸಿಕೊಂಡರೆ ನಮ್ಮನ್ನು ತಪ್ಪಾಗಿ ನೋಡುತ್ತಾರೆ ಎನ್ನುವ ಭಾವನೆ ಮೂಡುತ್ತದೆ. ಪುರುಷರಿಗೆ ಹೋಲಿಸಿಕೊಂಡರೆ ನಾವು ತುಂಬಾನೇ ಕಂಟ್ರೋಲ್ ಮಾಡುತ್ತೀವಿ ಎಂದು ಮೇಘನಾ ಹೇಳಿದ್ದಾರೆ. ಇದನ್ನೂ ಓದಿ: ಕಿಚ್ಚ ಸುದೀಪ್ ನಟನೆಯ ಹೊಸ ಸಿನಿಮಾ ಏಪ್ರಿಲ್ ನಲ್ಲಿ ಘೋಷಣೆ

    ಕಳೆದ 30 ವರ್ಷಗಳಲ್ಲಿ ಪುರುಷ ಪ್ರಧಾನ ಸಿನಿಮಾಗಳು ಹೆಚ್ಚಾಗಿದೆ. ಈಗ ಟ್ರೆಂಡ್ ಬದಲಾಗಿದೆ. ಮಹಿಳಾ ಪ್ರಧಾನ ಸಿನಿಮಾಗಳು ಬರುತ್ತಿವೆ. ನಾನು ಚಿತ್ರರಂಗಕ್ಕೆ ಕಾಲಿಟ್ಟಾಗ 13 ವರ್ಷ ಹುಡುಗಿ. ನಾಯಕಿಯರಿಗೆ ಹೆಚ್ಚ ಸಮಯ ಇರುವುದಿಲ್ಲ ಎಂದು ಈಗಲೂ ಹಾಗೆ ಯೋಚನೆ ಮಾಡಬಾರದು. ಸಿನಿಮಾ ಅಂದ್ರೆ ಬರೀ ಗ್ಲಾಮರ್ ಅಲ್ಲ ಅದಕ್ಕೂ ಮೀರಿದ ಕಲೆಯದು. ಬಾಲಿವುಡ್‌ನಲ್ಲಿ 40 ವರ್ಷದವರು ಇಂದಿಗೂ ನಾಯಕಿಯರು ನಟಿಸುತ್ತಾರೆ. ಜನರು ಯೋಚಿಸುವ ರೀತಿ ಬದಲಾಗಬೇಕು ಎಂದು ನಟಿ ಮೇಘನಾ ಮಾತನಾಡಿದ್ದಾರೆ.

    `ತತ್ಸಮ ತದ್ಭವ’ (Tatsama Tadbhava) ಚಿತ್ರವನ್ನು ಪನ್ನಗಾಭರಣ ನಿರ್ಮಾಣ ಮಾಡ್ತಿದ್ದಾರೆ. ಮೇಘನಾ ರಾಜ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಅರವಿಂದ್ ಅಯ್ಯರ್, ಮಹತಿ ಭಟ್, ಟಿ.ಎಸ್ ನಾಗಾಭರಣ, ರಾಜಶ್ರೀ, ಬಾಲಾಜಿ ಮನೋಹರ್ ಸೇರಿದಂತೆ ಹಲವರು ನಟಿಸಿದ್ದಾರೆ.

  • ಚಿರು ಸಿನಿಮಾ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ

    ಚಿರು ಸಿನಿಮಾ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ

    ನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಚಿರು ಸರ್ಜಾ 2020ರಲ್ಲಿ ಅಗಲಿದ್ದರು. ಅವರು ನಟಿಸಿರುವ ಕೊನೆಯ ಸಿನಿಮಾ `ರಾಜಮಾರ್ತಾಂಡ’ (Rajamarthanda) ಮುಂದಿನ ವರ್ಷ ತೆರೆಗೆ ಅಪ್ಪಳಿಸಲಿದೆ. ಚಿರು ಕೊನೆ ಚಿತ್ರಕ್ಕೆ ಡಬ್ಬಿಂಗ್ ಮಾಡುವ ಮೂಲಕ ಧ್ರುವ ಸರ್ಜಾ (Druva sarja) ಸಾಥ್ ನೀಡಿದ್ದಾರೆ. ಚಿರು ನಟಿಸಿರುವ ಸಿನಿಮಾ ಮೇಲೆ ಧ್ರುವಾಗಿರುವ ಪ್ರೀತಿ, ಕಮೀಟ್‌ಮೆಂಟ್ ಬಗ್ಗೆ ಪ್ರಥಮ್ ಮಾತನಾಡಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ತಿಳಿಸಿದ್ದಾರೆ. ಚಿರು ಸಿನಿಮಾ ಬಗ್ಗೆ ಧ್ರುವಾ ಸರ್ಜಾ  ಮೌನ ಮುರಿದಿದ್ದಾರೆ.

    ಚಿರು ಕಡೆಯ ಸಿನಿಮಾ `ರಾಜಮಾರ್ತಾಂಡ’ ನೋಡಲು ಅಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ. ಹೀಗಿರುವಾಗ ಚಿರು ನಿಧನದ ಮುನ್ನ ಈ ಚಿತ್ರ ಕಂಪ್ಲೀಟ್ ಆಗಿತ್ತು. ಚಿರು ಪಾತ್ರದ ಡಬ್ಬಿಂಗ್ ಒಂದೇ ಬಾಕಿಯಿತ್ತು. ಅದರ ಜವಾಬ್ದಾರಿಯನ್ನ ಧ್ರುವ ಸರ್ಜಾ ಹೊತ್ತಿದ್ದಾರೆ. ಅಣ್ಣನ ಸಿನಿಮಾವೆಂದು ಪ್ರೀತಿಯಿಂದ ಡಬ್ಬಿಂಗ್ ಮಾಡಿ ಕೊಡ್ತಿದ್ದಾರೆ. ಈ ಬಗ್ಗೆ ಪ್ರಥಮ್ ಕೂಡ ಬಾಯ್ಬಿಟ್ಟಿದ್ದಾರೆ. ಇದನ್ನೂ ಓದಿ: ನನ್ನ- ಮಹೇಶ್ ಬಾಬು ನಡುವಿನ ಜಗಳಕ್ಕೆ ಕಾರಣ ಯಾರು ಎಂದು ಬಿಚ್ಚಿಟ್ಟ ನಮ್ರತಾ ಶಿರೋಡ್ಕರ್

    ನಿನ್ನೆ ಚಿರಂಜೀವಿ ಸರ್ಜಾ ಅಣ್ಣವ್ರ `ರಾಜಮಾರ್ತಾಂಡ’ ಸಿನಿಮಾ ಡಬ್ಬಿಂಗ್ ಟೈಂ ಇದು. ಮಧ್ಯಾಹ್ನ ಊಟಕ್ಕೆ ಬನ್ನಿ ಸಿಗೋಣ ಅಂತ ಹೇಳಿದವರು ಡಬ್ಬಿಂಗ್ ಥಿಯೇಟರ್‌ನಿಂದ ಹೊರ ಬಂದಾಗ ರಾತ್ರಿ 7ಗಂಟೆ ಆಗಿತ್ತು. ಡಬ್ಬಿಂಗ್ ಮುಗೀತಾ ಎಂದು ಕೇಳಿದಕ್ಕೆ ನಮ್ ಹೀರೋ ಧ್ರುವ ಸರ್ಜಾ ಹೇಳಿದಿಷ್ಟು. ಇಲ್ಲ ಇನ್ನೊಂದೆರಡು ದಿನ ಇದೆ ಮಾಡಿ ಮುಗಿಸುತ್ತೀನಿ. ಅಣ್ಣ ಇಲ್ಲ ಅಂದಾಗ ಹೇಗೇಗೋ ಮಾಡೋಕಾಗಲ್ಲ.ಕೆಲಸ ಒಪ್ಪಿಕೊಂಡ ಮೇಲೆ ಚೆನ್ನಾಗಿ ಮಾಡ್ಬೇಕು ಬ್ರೋ, ಲೇಟಾದ್ರೂ ನೀಟಾಗಿ ಮಾಡೋಣ ಅಂದಿದ್ದರು ಪ್ರತಿ ದೃಶ್ಯಕ್ಕೂ ಜೀವ ತುಂಬಿದ್ದಕ್ಕೆ ಸಾಕ್ಷಿಯಾಗಿತ್ತು. ಮೂವರು ಹಿರಿಯರನ್ನು ಧ್ರುವ ಅವ್ರಿಗೆ ಪರಿಚಯ ಮಾಡೋಣ ಅಂತ ಕರೆದುಕೊಂಡು ಹೋಗಿದ್ದೆ. ಅದ್ರಲ್ಲಿ ಒಬ್ಬರು ಹಿರಿಯರು ಹೇಳಿದ್ದಿಷ್ಟು. ಪ್ರಥಮ್, ಧ್ರುವ ಸರ್ಜಾ ಅವ್ರು ಒಬ್ಬ ಗೆದ್ದರೆ ಕನಿಷ್ಟ ಸಾವಿರ ಜನ ನೆಮ್ಮದಿಯಾಗಿ ಊಟ ಮಾಡುತ್ತಾರೆ ಅಂತ. ಹೀಗಾಗಿ ನಮ್ಮ ಮೀಟಿಂಗ್ ಇನ್ನೊಂದು ದಿನಕ್ಕೆ ಪೋಸ್ಟ್ ಪೋನ್ ಆಯ್ತು. ಈ ಸ್ಪೆಷಲ್ ಅರ್ಪಣೆ ಚಿರು ಅಣ್ಣನಿಗೆ ಧ್ರುವ ಅವರಿಂದ’ ಎಂದು ಒಳ್ಳೆ ಹುಡುಗ ಪ್ರಥಮ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಪ್ರಥಮ್ ಪೋಸ್ಟ್ ನೋಡಿದ ಬಳಿಕ ಅಭಿಮಾನಿಗಳು, ಅಣ್ಣ ಚಿರು ಮೇಲೆ ಧ್ರುವಾಗಿರುವ ಪ್ರೀತಿ ಕಂಡು ಫಿದಾ ಆಗಿದ್ದಾರೆ. ಸದ್ಯ ಈ ಪೋಸ್ಟ್ ಸಖತ್ ಸದ್ದು ಮಾಡ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಮಹಾರಾಣಿ ಧಿರಿಸಿನಲ್ಲಿ ಮೇಘನಾ ಫುಲ್ ಮಿಂಚಿಂಗ್

    ಮಹಾರಾಣಿ ಧಿರಿಸಿನಲ್ಲಿ ಮೇಘನಾ ಫುಲ್ ಮಿಂಚಿಂಗ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ, ಸರ್ಜಾ ಕುಟುಂಬದ ಸೊಸೆಯಾಗಿರುವ ಮೇಘನಾ ರಾಜ್ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ನಾಳೆ ಚಿರು ಸರ್ಜಾ ಹುಟ್ಟುಹಬ್ಬದ ಹಿನ್ನಲೆ ಪತಿಯ ಸವಿನೆನೆಪಿನಾರ್ಥಕವಾಗಿ ಒಂದು ಫೋಟೋಶೂಟ್ ಮಾಡಿಸಿದ್ದಾರೆ.

    ರಾಜ ರಾಣಿ ಥೀಮ್‍ನಲ್ಲಿ ಮಾಡಿರುವ ಹೊಸ ಫೋಟೋಶೂಟ್ ಇದಾಗಿದೆ. ರಾಜ ವಿಧಿವಶರಾದ ಬಳಿಕ ರಾಣಿ, ಮಗನಿಗೆ ಆ ರಾಜನ ಬಗ್ಗೆ ತಿಳಿಸುವ ಥೀಮ್ ಅನ್ನು ಫೋಟೋಶೂಟ್ ಒಳಗೊಂಡಿದೆ. ರಾಜನ ನಿಧನದ ಬಳಿಕ ರಾಣಿ ತನ್ನ ಸಾಮ್ರಾಜ್ಯವನ್ನು ಹೇಗೆ ಸಮರ್ಥವಾಗಿ ಮುನ್ನಡೆಸುತ್ತಾಳೆ ಎಂಬ ಥೀಮ್‍ನಲ್ಲಿ ಮೇಘನಾ ಕಾಣಿಸಿಕೊಂಡಿದ್ದಾರೆ.

    ಚಿರಂಜೀವಿ ಸರ್ಜಾ ಫೋಟೋ ಪೇಂಟಿಂಗ್ ಮಾಡುತ್ತಿರುವ ಮೇಘನಾ ರಾಜ್ ರಾಣಿಯಂತೆ ಕಾಣಿಸುತ್ತಿದ್ದಾರೆ. ಮೇಘನಾ ಮಗ ರಾಯನ್ ಸರ್ಜಾ ಈ ಫೋಟೋಗಳಲ್ಲಿ ಕಾಣಿಸಿಕೊಂಡಿಲ್ಲ. ಫೋಟೋಶೂಟ್ ಥೀಮ್ ತುಂಬಾ ಚೆನ್ನಾಗಿದೆ. ಮಧುರಾ ರೆಡ್ಡಿ ಅವರ ಕಾನ್ಸೆಪ್ಟ್‍ನಲ್ಲಿ ಎಎಂ ಸ್ಟುಡಿಯೋ ಜೊತೆ ಸೇರಿ ಈ ಹೊಸ ಫೋಟೋಶೂಟ್ ಮಾಡಲಾಗಿದೆ. ನಾಳೆ ಚಿರು ಹುಟ್ಟುಹಬ್ಬವಾಗಿದ್ದು, ಮೇಘನಾ ರಾಜ್ ಅವರ ಹೊಸ ಸಿನಿಮಾ ಕೂಡ ಲಾಂಚ್ ಆಗಲಿದೆ. 2 ವರ್ಷಗಳ ಬಳಿಕ ಮತ್ತೆ ಬಿಗ್ ಸ್ಕ್ರೀನ್‍ಗೆ ಮೇಘನಾ ರಾಜ್ ಮರಳಲಿದ್ದಾರೆ. ಇದನ್ನೂ ಓದಿ: 16 ಕೆ.ಜಿ ಚಿನ್ನದ ಸೀರೆ ಉಡಿಸಿ ಮಹಾಲಕ್ಷ್ಮಿ ದೇವಿಗೆ ಅಲಂಕಾರ

    ಒಟ್ಟಿನಲ್ಲಿ ಮೇಘನಾ ಅವರಿಗೆ ಈ ಅಕ್ಟೋಬರ್ ತಿಂಗಳು ತುಂಬಾ ವಿಶೇಷವಾಗಿದೆ ಎಂದು ಹೇಳಿದರೆ ತಪ್ಪಾಗಲಾರದು. ಮಗ ರಾಯನ್ ರಜ್ ಸರ್ಜಾರ ಮತ್ತು ಪತಿ ಚಿರಂಜೀವಿ ಸರ್ಜಾ ಒಂದೆ ತಿಂಗಳಿನಲ್ಲಿ ಜನಿಸಿದ್ದಾರೆ. ಈ ಕುಟುಂಬದಲ್ಲಿ ಚಿರು ಜೊತೆಗೆ ಇಲ್ಲ ಎನ್ನುವ ದುಃಖ ಇದೆ. ಚಿರುವ ಅವರ ಸವಿನೆನೆಪನ್ನು ವಿಶೇಷವಾಗಿಸಲು ಮೇಘನಾ ರಾಜ, ರಾಣಿ ಕಾನ್ಸೆಪ್ಟ್‍ನಲ್ಲಿ ಜೀವನದ ಕಥೆ ಹೇಳುವ ಪ್ರಯತ್ನ ತುಂಬಾ ವಿಭಿನ್ನವಾಗಿದೆ. ಮೇಘನಾ ಮುದ್ದು ಮಗ ರಾಯಜ್ ರಾಜ್ ಆರೈಕೆಯಲ್ಲಿ ತೊಡಗಿಕೊಂಡಿದ್ದರು. ಇದೀಗ ಅವರು ತೆರೆ ಮೇಲೆ ಬಂದು ಅಭಿಮಾನಿಗಳನ್ನು ರಂಜಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ:  ಗೊಂಬೆಗಳ ಮಧ್ಯೆ ಪುಟ್ಟ ಗೊಂಬೆಯಂತೆ ಕುಳಿತ ರಾಯನ್

  • ಚಿರು ಫೋಟೋ ಇರುವ ಜಾಕೆಟ್ ತೊಟ್ಟ ಪನ್ನಗಾಭರಣ – ಅಭಿಮಾನಿಗಳಿಂದ ಮೆಚ್ಚುಗೆ

    ಚಿರು ಫೋಟೋ ಇರುವ ಜಾಕೆಟ್ ತೊಟ್ಟ ಪನ್ನಗಾಭರಣ – ಅಭಿಮಾನಿಗಳಿಂದ ಮೆಚ್ಚುಗೆ

    ಬೆಂಗಳೂರು: ಪನ್ನಗಾಭರಣ ಚಿರು ಸರ್ಜಾ ಫೋಟೋ ಇರುವ ಜಾಕೆಟ್ ಧರಿಸಿ ಸೈಮಾ ಅವಾರ್ಡ್‍ನಲ್ಲಿ ಕಾಣಿಸಿಕೊಂಡಿರುವುದು ಸ್ಯಾಂಡಲ್‍ವುಡ್‍ನಲ್ಲಿ ಸಖತ್ ಸುದ್ದಿಯಾಗಿದೆ.

    ಇಂದು ನನ್ನ ಪ್ರೀತಿಯ ಗೆಳೆಯನ ಫೋಟೋ ಇರುವ ಬಟ್ಟೆಯನ್ನು ಧರಿಸಿದ್ದೇನೆ, ಸ್ನೇಹಿತ ನನ್ನ ಅದೃಷ್ಟ ಎಂದು ಬರೆದುಕೊಂಡ ಪನ್ನಗಭರಣ ಸೈಮಾ ಅವಾರ್ಡ್‍ನಲ್ಲಿ ತೆಗೆದಿರುವ ಕೆಲವು ಫೋಟೋವನ್ನು ಹಂಚಿಕೊಂಡಿದ್ದರು. ಈ ಪೋಸ್ಟ್ ನೋಡಿದ ಅಭಿಮಾನಿಗಳು ಮೆಚ್ಚುಗೆಯನ್ನು ಸೂಚಿಸಿ ನೀವು ನಿಜವಾದ ಸ್ನೇಹಿತರು, ಉತ್ತಮ ಗೆಳೆಯರು, ನಿಮ್ಮ ಅಂತಹ ಸ್ನೇಹಿತರು ಇರಲು ಸಾಧ್ಯವೇ ಇಲ್ಲ ಎಂದು ಕಮೆಂಟ್ ಮಾಡುತ್ತಾ ಇಬ್ಬರ ನಡುವೆ ಇರುವ ಸ್ನೇಹವನ್ನು ಹಾಡಿಹೊಗಳಿದ್ದಾರೆ. ಇದನ್ನೂ ಓದಿ:  ಕುಡಿಯುವ ನೀರಿಗಾಗಿ ಮಸೀದಿಗೆ ಹೋಗಿದ್ದಕ್ಕೆ ಒತ್ತೆಯಾಳು

     

    View this post on Instagram

     

    A post shared by Pannaga Bharana (@pannagabharana)

    ಅಂತಿಮವಾಗಿ ಅದೃಷ್ಟ ಮತ್ತು ಶಕ್ತಿ ನಮ್ಮ ಕಡೆ ಇತ್ತು. ಫ್ರೆಂಚ್ ಬಿರಿಯಾನಿ ಸಿನಿಮಾಗೆ ಅತ್ಯುತ್ತಮ ನಿರ್ದೇಶಕ 2020 ಅವಾರ್ಡ್ ಸಿಕ್ಕಿದೆ. ಕನಸು ನನಸಾಯಿತು. ನನ್ನ ಇಡೀ ಚಿತ್ರತಂಡ, ಸಿಬ್ಬಂದಿಗೆ ಧನ್ಯವಾದಗಳು. ನನ್ನ ತಂಡದ ಬಗ್ಗೆ ತುಂಬಾ ಹೆಮ್ಮೆ ಇದೆ ಎಂದು ಬರೆದುಕೊಂಡು ಅವಾರ್ಡ್ ಬಂದಿರುವ ಸಂತೋಷವನ್ನು ಪನ್ನಗಾಭರಣ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ದಸರಾ ತಾಲೀಮು ವೇಳೆ ಅರಮನೆ ಬಳಿ ಆನೆ ರಂಪಾಟ

     

    View this post on Instagram

     

    A post shared by Pannaga Bharana (@pannagabharana)

    ಚಿರಂಜೀವಿ ಸರ್ಜಾ ಹಾಗೂ ನಿರ್ದೇಶಕ ಪನ್ನಗಾಭರಣ ತುಂಬಾನೇ ಆಪ್ತರಾಗಿದ್ದರು. ಅವರ ನಡುವೆ ಒಳ್ಳೆಯ ಗೆಳೆತನ ಬೆಳೆದಿತ್ತು. ಚಿರು ಅಕಾಲಿಕ ಮರಣ ಹೊಂದಿದರು. ಇದು ಅನೇಕರಿಗೆ ಬೇಸರ ಮೂಡಿಸಿತ್ತು. ಪನ್ನಗಾಭರಣ ಅವರು ತುಂಬಾನೇ ನೊಂದುಕೊಂಡರು. ಈಗ ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಪನ್ನಗಾಭರಣ ಅವರು ಚಿರು ಸರ್ಜಾ ಫೋಟೋ ಇರುವ ಜಾಕೆಟ್ ಧರಿಸಿ ಕಾಣಿಸಿಕೊಂಡಿದ್ದಾರೆ.

     

    View this post on Instagram

     

    A post shared by Pannaga Bharana (@pannagabharana)

    ದಕ್ಷಿಣ ಭಾರತದ ಸಿನಿಮಾ ಚಿತ್ರರಂಗದಲ್ಲಿನ ಸಿನಿಮಾಗಳಿಗೆ ಸೈಮಾ  ಅವಾರ್ಡ್ಸ್ ನೀಡಲಾಗುತ್ತದೆ. ಇತ್ತೀಚೆಗೆ ಈ ಕಾರ್ಯಕ್ರಮ ನಡೆದಿದೆ. ರಕ್ಷಿತ್ ಶೆಟ್ಟಿ, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್ ಸೇರಿ ಸಾಕಷ್ಟು ಸ್ಯಾಂಡಲ್‍ವುಡ್‍ನ ನಟ, ನಟಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಪನ್ನಗಾಭರಣ ಅವರು ತೊಟ್ಟಿರುವ ಬಟ್ಟೆ ಮೇಲೆ  ಇರುವ ಚಿರು ಫೋಟೋ ಎಲ್ಲರ ಗಮನ ಸೆಳೆದಿದೆ.

  • ಇಂದು ಚಿರಂಜೀವಿ ಸರ್ಜಾ ಪುಣ್ಯಸ್ಮರಣೆ- ಕುಟುಂಬಸ್ಥರಿಂದ ಪೂಜೆ

    ಇಂದು ಚಿರಂಜೀವಿ ಸರ್ಜಾ ಪುಣ್ಯಸ್ಮರಣೆ- ಕುಟುಂಬಸ್ಥರಿಂದ ಪೂಜೆ

    ಬೆಂಗಳೂರು: ಸ್ಯಾಂಡಲ್‍ವುಡ್ ಯುವ ಸಾಮ್ರಾಟ್ ಚಿರು ಸರ್ಜಾ ಅಗಲಿಕೆಗೆ ಒಂದು ವರ್ಷವಾಗಿದೆ. ಚಿರು ಸರ್ಜಾ ಪುಣ್ಯ ಸ್ಮರಣಾರ್ಥಕವಾಗಿ ಕುಟುಂಬಸ್ಥರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

    ಚಿರು ಸರ್ಜಾ ಕಳೆದ ವರ್ಷ ಜೂನ್ 7 ರಂದು ಚಿರು ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದ ಚಿರು ಸರ್ಜಾ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಂದ ದೂರವಾಗಿದ್ದಾರೆ. ಅವರು ನಮ್ಮನ್ನು ಅಗಲಿ ಸರಿಸುಮಾರು ಒಂದು ವರ್ಷವಾಗಿದೆ. ಚಿರು ಸರ್ಜಾ ಪುಣ್ಯ ಸ್ಮರಣಾರ್ಥಕವಾಗಿ ಇಂದು ಕುಟುಂಬಸ್ಥರು ಪೂಜೆ ಮಾಡಿದ್ದಾರೆ. ಇದನ್ನೂ ಓದಿ: ಅಪ್ಪ ಚಿರುವನ್ನು ಗುರುತಿಸುತ್ತಿರೋ ನನ್ನ ಮಗನನ್ನು ನೋಡಲು ಹೆಮ್ಮೆಯಾಗ್ತಿದೆ: ಮೇಘನಾ

     

    View this post on Instagram

     

    A post shared by Meghana Raj Sarja (@megsraj)

    ಕನಕಪುರ ರಸ್ತೆಯ ನಲಗುಳಿ ಬಳಿ ಸಹೋದರ ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ಅಂತ್ಯ ಕ್ರಿಯೆ ಮಾಡಲಾಗಿದೆ. ಇಂದು ಧ್ರುವ ಸರ್ಜಾ ಕುಟುಂಬ ಹಾಗೂ ಚಿರು ಪತ್ನಿ ಮೇಘನಾ ಕುಟುಂಬ ಸ್ಥಳಕ್ಕೆ ಆಗಮಿಸಿ ಪೂಜೆ ಸಲ್ಲಿಸಲಿದ್ದಾರೆ. ಚಿರು ಅಗಲಿಕೆಯ ನೋವಲ್ಲಿ ಕುಟುಂಬ ಜೂನಿಯರ್ ಚಿರುವಿನ ನಗುವನ್ನು ನೋಡುತ್ತಾ ಒಂದು ವರ್ಷ ಕಳೆದಿದೆ. ಧ್ರುವ ಸರ್ಜಾ, ಮೇಘನಾ ಪುತ್ರ ಹಾಗೂ ಸುಂದರ್ ರಾಜ್, ಪ್ರಮಿಳಾ ಜೋಷಾಯ್ ಹಾಗೂ ಚಿರು ಕುಟುಂಬಸ್ಥರು ಕನಕಪುರ ರಸ್ತೆಯ ಕಗ್ಗಲಿಪುರದ ನೆಲಗುಳಿಯ ಬೃಂದಾವನ ಫಾರ್ಮ್ ಹೌಸ್‍ನಲ್ಲಿರುವ ಚಿರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ರಾಧಿಕಾ ಪಂಡಿತ್

    ಚಿರಂಜೀವಿ ಸರ್ಜಾ ನಿಧನರಾದಾಗಿನಿಂದಲೂ ಮೇಘನಾ ರಾಜ್ ಮತ್ತು ಅವರ ಕುಟುಂಬ ಜ್ಯೂನಿಯರ್ ಸರ್ಜಾ ಅವರನ್ನು ನೋಡುತ್ತಾ ಸ್ಟ್ರಾಂಗ್ ಆಗಿ ನಗುಮಖದಿಂದಲೇ ಇತ್ತು. ತಮ್ಮ ಪುಟ್ಟ ಮಗನ ಸಂತೋಷದ ಫೋಟೋಗಳನ್ನು ಮತ್ತು ಚಿರಂಜೀವಿ ಅವರ ನೆನಪುಗಳನ್ನು ಮೇಘನಾ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡುತ್ತಿರುತ್ತಾರೆ. ಇದೀಗ ಚಿರಂಜೀವಿ ಸರ್ಜಾ ಅವರು ನಮ್ಮನ್ನು ಅಗಲಿ ಒಂದು ವರ್ಷ ಆಗಿರುವ ನೆನಪಿಗೆ ಇಬ್ಬರು ಒಟ್ಟಿಗೆ ಇರುವ ಸುಂದರವಾದ ಕ್ಯಾಂಡಿಡ್ ಫೋಟೋವನ್ನು ಹಂಚಿಕೊಂಡಿದ್ದು, “ಯುಎಸ್ ಮೈನ್” ಎಂದು ಶೀರ್ಷಿಕೆ ನೀಡಿದ್ದಾರೆ. ಇದನ್ನೂ ಓದಿ: ನೀನು ದೇವರಮನೆಗೆ ಹೋಗಿ ವರುಷವಾಯ್ತು: ಮೇಘನಾ ರಾಜ್ ಸರ್ಜಾ

    ಕನ್ನಡ ಚಲನಚಿತ್ರೋದ್ಯಮದ ಅತ್ಯಂತ ಪ್ರೀತಿಯ ನಟರಲ್ಲಿ ಒಬ್ಬರಾದ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ 2020ರ ಜೂನ್ 7ರಂದು ನಿಧನರಾದರು. ಚಿರಂಜೀವಿ ಸರ್ಜಾ ನಿಧನಕ್ಕೆ ಅವರ ಕುಟುಂಬ ಮಾತ್ರವಲ್ಲದೇ ಅವರ ಅಭಿಮಾನಿ ಬಳಗವೇ ಕಣ್ಣೀರು ಹಾಕಿತ್ತು. ಚಿರು ಅಣ್ಣ ಪ್ರೀತಿಯಲ್ಲಿ ಗುಣವಂತ, ನಗುವಿನಲ್ಲಿ ಶ್ರೀಮಂತ ಅಭಿಮಾನಿಗಳ ಮನಸ್ಸಲ್ಲಿ ಎಂದಿಗೂ ಜೀವಂತ ಮಿಸ್ ಯು ಚಿರು ಅಣ್ಣ ಎಂದೆಲ್ಲಾ ಅಭಿಮಾನಿಗಳು ಮೇಘನಾ ಶೇರ್ ಮಾಡಿರುವ ಫೋಟೋಗಳಿಗೆ ಕಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಚಿರುವಿನ ಕೊನೆಯ ದಿನ ನಡೆದಿದ್ದು ಏನು? – ಬಹಿರಂಗ ಪಡಿಸಿದ ಮೇಘನಾ

  • ನಾಳೆ ಮೇಘನಾ ರಾಜ್ ಮನೆಯಲ್ಲಿ ಶುಭ ಕಾರ್ಯ

    ನಾಳೆ ಮೇಘನಾ ರಾಜ್ ಮನೆಯಲ್ಲಿ ಶುಭ ಕಾರ್ಯ

    ಬೆಂಗಳೂರು: ಚಿರು ಸರ್ಜಾ ಅವರನ್ನು ಕಳೆದುಕೊಂಡು ದುಖಃದಲ್ಲಿರುವ ಕುಟುಂಬಕ್ಕೆ ಕಿರುನಗೆ ಬಂದಿರುವುದು ಚಿರುನ ಪುಟ್ಟ ಕಂದಮ್ಮನಿಂದ. ಮೇಘನಾ ಮತ್ತು ಚಿರುನ ಮುದ್ದು ಮಗುವಿನ ಜನನದಿಂದ ಕುಟುಂಬಸ್ಥರಲ್ಲಿ ಸಂತೋಷ ಮನೆ ಮಾಡಿದೆ.

    ಮೇಘನಾ ರಾಜ್ ಕಳೆದ ತಿಂಗಳ ಅಕ್ಟೋಬರ್ 22ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದೀಗ 20 ದಿನಗಳ ಬಳಿಕ ಮೇಘನಾ ಮನೆಯಲ್ಲಿ ತೊಟ್ಟಿಲ ಶಾಸ್ತ್ರದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

    ನಾಳೆ ನವೆಂಬರ್ 12ರಂದು ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಮೇಘನಾ ರಾಜ್ ಮುದ್ದಾದ ಮಗುವಿಗೆ ತೊಟ್ಟಿಲ ಶಾಸ್ತ್ರ ಸಮಾರಂಭ ನಡೆಯಲಿದೆ. ಸರಿಯಾಗಿ 20 ದಿನಗಳಿಗೆ ಮೇಘನಾ ರಾಜ್ ಅವರ ಮುದ್ದು ಕಂದಮ್ಮನ ತೊಟ್ಟಿಲ ಶಾಸ್ತ್ರ ಮಾಡಲು ಎರಡೂ ಕುಟುಂಬದವರು ನಿರ್ಧರಿಸಿದ್ದಾರೆ.

    ತೀರ ಖಾಸಗಿಯಾಗಿ ನಡೆಯುವ ತೊಟ್ಟಿಲ ಶಾಸ್ತ್ರದ ಸಂಭ್ರಮದಲ್ಲಿ ಮೇಘನಾ ರಾಜ್ ಕುಟುಂಬ ಮತ್ತು ಸರ್ಜಾ ಕುಟುಂಬದವರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಅಣ್ಣನ ಮಗುವಿಗಾಗಿ ಧ್ರುವ 10 ಲಕ್ಷದ ವೆಚ್ಚದಲ್ಲಿ ಮಗು ಹುಟ್ಟುವ ಮೊದಲೇ ಬೆಳ್ಳಿ ತೊಟ್ಟಿಲು ಮಾಡಿಸಿದ್ದಾರೆ.

    ವಿಶೇಷ ಎಂದರೆ ಮೇಘನಾ ಮಗನಿಗೆ ಏನೆಂದು ಹೆಸರಿಡಲಿದ್ದಾರೆ ಎನ್ನುವುದು ಕುತೂಹಲ ಆಭಿಮಾನಿಗಳಲ್ಲಿ ಮೂಡಿಸಿದೆ. ಈಗಾಗಲೇ ಅನೇಕರು ಹಲವು ಹೆಸರುಗಳಿಂದ ಪ್ರೀತಿಯಿಂದ ಕರೆಯುತ್ತಿದ್ದಾರೆ. ಗಜಕೇಸರಿ ಯೋಗದಲ್ಲಿ ಜನಿಸಿದ ಮಗುವಿಗೆ ದೇವರ ಹೆಸರನ್ನಿಡುತ್ತಾರಾ? ಚಿರಂಜೀವಿ ನೆನಪು ಸೂಚಿಸೋ ನಾಮಧೇಯ ಇಡಲಾಗುತ್ತದೆಯೇ? ಇಲ್ಲವೇ ಚಿರು ಮೇಘನಾ ಇಬ್ಬರ ಪ್ರೀತಿಯ ಕುಡಿಯಾಗಿರೋದ್ರಿಂದ ಇಬ್ಬರ ಹೆಸರಿನ ಅಕ್ಷರವನ್ನೂ ಸೇರಿಸಿ ಸುಂದರ ಹೆಸರು ಕೂಡಿ ಬರುತ್ತದೆಯೇ? ಎಂಬ ಕುತೂಹಲ ಎಲ್ಲರಿಗೂ ಇದೆ. ಈ ಸುದ್ದಿ ಓದಿ:ಜೂನಿಯರ್ ಚಿರುಗೆ ಬೆಳ್ಳಿ ತೊಟ್ಟಿಲು, ಚಿನ್ನದ ಬಟ್ಟಲು ಖರೀದಿಸಿದ ಧ್ರುವ ಸರ್ಜಾ

  • ಚಿರು ಸರ್ಜಾ ಈಗ ಸಖತ್ ಬ್ಯುಸಿ

    ಚಿರು ಸರ್ಜಾ ಈಗ ಸಖತ್ ಬ್ಯುಸಿ

    ಬೆಂಗಳೂರು: ಬಹುಶಃ ಕನ್ನಡ ಚಿತ್ರರಂಗದ ಬೇರಾವ ಸ್ಟಾರ್ ಗಳೂ ಇಲ್ಲದಷ್ಟು ಬ್ಯುಸಿ ಇರೋ ನಟ ಅಂದರೆ ಅದು ಚಿರಂಜೀವಿ ಸರ್ಜಾ. ಈಗಷ್ಟೇ ಸಿಂಗ ಸಿನಿಮಾದ ಹಾಡಿಗಾಗಿ ಬ್ಯಾಂಕಾಕ್ ಗೆ ಹೋಗಿ ಬಂದಿದ್ದಾರೆ. ರಾಜಮಾರ್ತಾಂಡ, ರಣಮ್, ಆಧ್ಯ, ಜುಗಾರಿ ಕ್ರಾಸ್ ಮತ್ತು ಖಾಕಿ ಸದ್ಯ ಚಿರು ನಟಿಸುತ್ತಿರುವ ಚಿತ್ರಗಳು. ಬ್ಯಾಕ್ ಟು ಬ್ಯಾಕ್ ಕಾಲ್ ಶೀಟ್ ಗಳನ್ನು ಕೊಟ್ಟು ಒಂದು ದಿನ ಕೂಡಾ ಪುರುಸೊತ್ತಿಲ್ಲದೆ ಚಿರು ಸಿನಿಮಾ ಚಿತ್ರೀಕರಣಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈಗಾಗಲೇ ಅನೌನ್ಸ್ ಆಗಿ ಚಿತ್ರೀಕರಣಗೊಳ್ಳುತ್ತಿರುವ ಸಿನಿಮಾಗಳೇ ಆರಕ್ಕಿಂತಾ ಹೆಚ್ಚಿವೆ. ಇದರ ಜೊತೆಗೆ ಧೈರ್ಯಂ ಖ್ಯಾತಿಯ ಶಿವ ತೇಜಸ್ ನಿರ್ದೇಶನದ ಸಿನಿಮಾ ಮತ್ತು ಅನಿಲ್ ಮಂಡ್ಯ ನಿರ್ದೇಶನದ ಚಿತ್ರಗಳೂ ಕ್ಯೂನಲ್ಲಿ ನಿಂತಿವೆ.

    ಸಾಲದೆಂಬಂತೆ ತರುಣ್ ಶಿವಪ್ಪ ನಿರ್ಮಾಣದ ಸಿನಿಮಾ ಕೂಡಾ ಆರಂಭಗೊಳ್ಳಲಿದೆ. ಇಷ್ಟು ಸಿನಿಮಾಗಳಲ್ಲಿ ಯಾವುದು ಮೊದಲು ಚಿತ್ರೀಕರಣ ಪೂರೈಸಿ, ಬಿಡುಗಡೆಗೆ ತಯಾರಾಗುತ್ತದೋ ಗೊತ್ತಿಲ್ಲ. ಈ ನಡುವೆ ಶಿವತೇಜಸ್ ಮತ್ತು ಅನಿಲ್ ಮಂಡ್ಯ ಸ್ಕ್ರಿಪ್ಟ್ ಕೆಲಸಗಳನ್ನೆಲ್ಲಾ ಮುಗಿಸಿ ಚಿರು ಡೇಟ್ಸ್ ಗಾಗಿ ಕಾದು ಕುಳಿತಿದ್ದಾರೆ. ಈ ಇಬ್ಬರ ಸಿನಿಮಾಗಳಲ್ಲಿ ಯಾವುದು ಮೊದಲು ಮುಹೂರ್ತ ಆಚರಿಸಿಕೊಳ್ಳುತ್ತದೋ ಎನ್ನುವ ಕುತೂಹಲ ಎಲ್ಲರದ್ದಾಗಿದೆ.

    ಚಿರು ಇಷ್ಟೊಂದು ಸಿನಿಮಾಗಳನ್ನು ಒಟ್ಟೊಟ್ಟಿಗೇ ಒಪ್ಪಿಕೊಂಡು ಬ್ಯುಸಿಯಾಗಿರೋದರ ನಡುವೆಯೇ ತಮ್ಮ ಪತ್ನಿ ಮೇಘನಾರಾಜ್ ಜೊತೆ ಹತ್ತು ದಿನಗಳ ಕಾಲ ಸ್ವಿಜರ್ ಲೆಂಡ್ ಟ್ರಿಪ್ಪಿಗೆ ಹೋಗಲು ಕೂಡಾ ಟೈಮು ಮಾಡಿಕೊಂಡಿದ್ದಾರೆ. ಇದೇ ತಿಂಗಳ ಮೂರನೇ ವಾರದ ಹೊತ್ತಿಗೆ ಚಿರು ದಂಪತಿ ಫಾರಿನ್ ಟ್ರಿಪ್ಪಿಗೆ ತೆರಳಲಿದೆ.

    ಒಟ್ಟಾರೆ ಚಿರು ಬ್ಯುಸಿಯಾಗಿರೋ ರೀತಿಯನ್ನು ನೋಡಿದರೆ ಮದುವೆಯಾದ ಮೇಲೆ ಅವರ ನಸೀಬು ಬದಲಾದಂತೆ ಕಾಣುತ್ತಿದೆ. ಯಾಕೆಂದರೆ, ವರ್ಷಕ್ಕೆ ಒಂದೋ ಎರಡೋ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದ ಚಿರು ಕೈಲೀಗ ಮುಕ್ಕಾಲು ಡಜನ್ ಸಿನಿಮಾಗಳಿವೆ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv