Tag: ಚಿಹ್ನೆ

  • ಶಿವಸೇನೆ ಹೆಸರು ಚಿಹ್ನೆಗಾಗಿ ಫೈಟ್ – ಬುಧವಾರ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

    ಶಿವಸೇನೆ ಹೆಸರು ಚಿಹ್ನೆಗಾಗಿ ಫೈಟ್ – ಬುಧವಾರ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

    ನವದೆಹಲಿ: ಶಿವಸೇನೆ (Shiv Sena) ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಮಹಾರಾಷ್ಟ್ರದ (Maharashtra) ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಬಣಕ್ಕೆ ನೀಡಿದ ಕೇಂದ್ರ ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿ ಮಾಜಿ ಸಿಎಂ ಉದ್ದವ್ ಠಾಕ್ರೆ (Uddhav Thackeray) ಸಲ್ಲಿಸಿರುವ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ (Supreme Court) ಹೇಳಿದೆ.

    ತುರ್ತು ವಿಚಾರಣೆ ನಡೆಸುವಂತೆ ಠಾಕ್ರೆ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಪೀಠದ ಮುಂದೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಬುಧವಾರ ಮಧ್ಯಾಹ್ನ 3:30 ಕ್ಕೆ ಪ್ರಕರಣದ ವಿಚಾರಣೆ ನಡೆಸುವುದಾಗಿ ಭರವಸೆ ನೀಡಿದೆ.

    ಪಕ್ಷದ ಹೆಸರು ಮತ್ತು ಬಿಲ್ಲು ಬಾಣದ ಚಿಹ್ನೆಯನ್ನು ನೀಡಲು ಶಾಸಕಾಂಗ ಬಲವನ್ನು ಕೇಂದ್ರ ಚುನಾವಣಾ ಆಯೋಗ ಪರಿಗಣಿಸಿದೆ. ಆದರೆ ಇದು ಸಂಘಟನೆ ವಿಭಾಗದ ಪರೀಕ್ಷೆಯ ಮೂಲಕ ತೆಗೆದುಕೊಳ್ಳಬೇಕಿತ್ತು. ಆಯೋಗದ ನಿರ್ಧಾರ ಸರಿಯಾಗಿಲ್ಲ ಎಂದು ಉದ್ದವ್ ಠಾಕ್ರೆ ಅರ್ಜಿಯಲ್ಲಿ ವಾದಿಸಿದ್ದಾರೆ. ಇದನ್ನೂ ಓದಿ: ಮರಾಠಾ ಮತಗಳ ಓಲೈಕೆಯಲ್ಲಿ ಕನ್ನಡ ಮಹನೀಯರ ಮರೆತರಾ ಬೆಳಗಾವಿ ರಾಜಕಾರಣಿಗಳು?

    ಇದಕ್ಕೆ ಪ್ರತ್ಯುತ್ತರ ನೀಡಿರುವ ಆಯೋಗ ಎರಡೂ ಬಣಗಳಿಂದ ಸಂಘಟನಾ ವಿಭಾಗದಲ್ಲಿ ಸಂಖ್ಯಾತ್ಮಕ ಬಹುಮತದ ಆಯಾ ಹಕ್ಕುಗಳು ತೃಪ್ತಿಕರವಾಗಿಲ್ಲ. ಸಾಂಸ್ಥಿಕ ವಿಭಾಗದ ಪರೀಕ್ಷೆಯನ್ನು ಅನ್ವಯಿಸಲು ಪ್ರಯತ್ನಿಸಿದರೂ, ಪಕ್ಷದ ಇತ್ತೀಚಿನ ಸಂವಿಧಾನವು ದಾಖಲೆಯಲ್ಲಿ ಇಲ್ಲದ ಕಾರಣ ಯಾವುದೇ ತೃಪ್ತಿಕರ ತೀರ್ಮಾನಕ್ಕೆ ಬರಲು ಸಾಧ್ಯವಾಗಲಿಲ್ಲ ಎಂದು ಹೇಳಿದೆ.

    ಮಹಾರಾಷ್ಟ್ರ ವಿಧಾನಸಭೆಯಲ್ಲಿ ಠಾಕ್ರೆ ಬಣದ 15 ಶಾಸಕರಿದ್ದು, ಶಿಂಧೆ ಬಣದಲ್ಲಿ 40 ಶಾಸಕರಿದ್ದಾರೆ. ಲೋಕಸಭೆಯಲ್ಲೂ 18 ಸಂಸದರ ಪೈಕಿ 13 ಮಂದಿ ಶಿಂಧೆ ಬಣದ ಬೆಂಬಲಕ್ಕೆ ನಿಂತಿದ್ದರೆ. 5 ಮಂದಿ ಮಾತ್ರ ಠಾಕ್ರೆ ಬಣಕ್ಕೆ ಬೆಂಬಲ ಸೂಚಿಸಿದ್ದಾರೆ. ಈ ಸಂಖ್ಯೆಗಳನ್ನು ಆಧರಿಸಿ ಚುನಾವಣಾ ಆಯೋಗ ಶಿಂಧೆ ಬಣಕ್ಕೆ ಶಿವಸೇನೆ ಪಕ್ಷದ ಗುರುತು ನೀಡಿದೆ. ಇದನ್ನೂ ಓದಿ: ಇಬ್ಬರು ಮಹಿಳಾ ಅಧಿಕಾರಿಗಳಿಗೆ ಸರ್ಕಾರದಿಂದ ಖಡಕ್ ಸೂಚನೆ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಸತಿ ಕಟ್ಟಡಗಳ ಮೇಲೆ ಎಕ್ಸ್ ಗುರುತಿನ ಚಿಹ್ನೆ- ಕಟ್ಟಡ ತೊರೆಯುವಂತೆ ಅಧಿಕಾರಿಗಳ ಸೂಚನೆ

    ವಸತಿ ಕಟ್ಟಡಗಳ ಮೇಲೆ ಎಕ್ಸ್ ಗುರುತಿನ ಚಿಹ್ನೆ- ಕಟ್ಟಡ ತೊರೆಯುವಂತೆ ಅಧಿಕಾರಿಗಳ ಸೂಚನೆ

    ಕೀವ್: ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮುಂದುವರಿದಿದ್ದು, ಅಲ್ಲಿ ವಾಸವಾಗಿರುವ ಜನರ ಪರಿಸ್ಥಿತಿ ಹದಗೆಟ್ಟಿದೆ. ಉಕ್ರೇನ್ ಸೈನ್ಯವನ್ನು ಗುರಿಯಾಗಿಸಿ ರಷ್ಯಾ ಪಡೆಗಳು ದಾಳಿ ನಡೆಸಲು ಮುಂದಾಗಿದ್ದರು. ಆದರೆ ಈಗ ನಾಗರಿಕರನ್ನು ಗುರಿಯಾಗಿಸಿಕೊಂಡಿದೆ. ಸಾರ್ವಜನಿಕರು ವಾಸಿಸುವ ವಸತಿ ಪ್ರದೇಶಗಳನ್ನೂ ಗುರಿಯಾಗಿಸಿಕೊಂಡಿದ್ದಾರೆ. ವಸತಿ ಕಟ್ಟಡಗಳ ಮೇಲೆ ಎಕ್ಸ್ ಗುರುತಿನ ಚಿಹ್ನೆಯನ್ನು ಹಾಕಲಾಗಿದ್ದು, ಕೂಡಲೇ ಆ ಕಟ್ಟಡಗಳ ತೊರೆಯುವಂತೆ ಜನತೆಗೆ ಅಧಿಕಾರಿಗಳ ಸೂಚನೆ ನೀಡಿದ್ದಾರೆ.

    ಉಕ್ರೇನ್‍ನಲ್ಲಿ ವಸತಿ ಪ್ರದೇಶಗಳಲ್ಲಿ ಕೆಲವು ಕೆಂಪು ಗುರುತುಗಳು ಕಾಣುತ್ತಿದೆ. ದಾಳಿಗಳನ್ನು ನಡೆಸಲು ರಷ್ಯಾದ ಪಡೆಗಳು ಈ ಚಿಹ್ನೆಗಳನ್ನು ಬಳಸಿದವು ಎಂದು ಕೆಲವರು ಹೇಳುತ್ತಿದ್ದಾರೆ. ಹೀಗಾಗಿ ಕಟ್ಟಡದ ಮೇಲ್ಭಾಗದಲ್ಲಿ x ಚಿಹ್ನೆಗಳ ಆಕಾರದಲ್ಲಿ ಗುರುತುಗಳು ಕಾಣುತ್ತಿದೆ. ಅದರಲ್ಲೂ ಅವು ಕೆಂಪು ಬಣ್ಣದಲ್ಲಿರುವುದು ಎಲ್ಲರನ್ನೂ ಬೆಚ್ಚಿ ಬೀಳಿಸುವಂತಿದೆ. ಈ ಚಿಹ್ನೆಗಳನ್ನ ಯಾರು ಬರೆದರು ಎಂಬುದು ಅನಮಾನಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಟ್ರ್ಯಾಕ್ಟರ್ ಬಳಸಿ ರಷ್ಯಾದ ಮಿಲಿಟರಿ ಟ್ಯಾಂಕ್ ಹೊತ್ತೊಯ್ದ ರೈತ

    ಕೆಂಪು ಬಣ್ಣದ ಚಿಹ್ನೆಗಳು ಇದ್ದಕ್ಕಿದ್ದಂತೆ ಬೆಳಕಿಗೆ ಬಂದಿರುವುದರಿಂದ ಉಕ್ರೇನಿಯನ್ ಅಧಿಕಾರಿಗಳು ಗಾಬರಿಗೊಂಡಿದ್ದಾರೆ. ವಸತಿ ಗೃಹಗಳ ಮೇಲ್ಭಾಗದಲ್ಲಿ ಕೆಂಪು ಗುರುತುಗಳಿದ್ದರೆ, ಕಟ್ಟಡದ ನಿವಾಸಿಗಳನ್ನು ತಕ್ಷಣವೇ ಸ್ಥಳಾಂತರಿಸಲು ಆದೇಶಿಸಲಾಗಿದೆ. ಉಕ್ರೇನ್ ಅಧಿಕಾರಿಗಳು ತಮ್ಮ ಕಟ್ಟಡಗಳನ್ನು ಕೂಡಲೆ ಪರಿಶೀಲಿಸುವಂತೆ ಮತ್ತು x ಗುರುತು ಕಂಡು ಬಂದರೆ ಆ ಕಟ್ಟಡವನ್ನ ತೊರೆಯುವಂತೆ ತಿಳಿಸಿದ್ದೇವೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ.

  • ಬೆಂಗಾಲಿ ಸ್ವೀಟ್‍ಗಳ ಮೇಲೆ ರಾಜಕೀಯ ಚಿಹ್ನೆ

    ಬೆಂಗಾಲಿ ಸ್ವೀಟ್‍ಗಳ ಮೇಲೆ ರಾಜಕೀಯ ಚಿಹ್ನೆ

    ಕೋಲ್ಕತ್ತಾ: ಬಂಗಾಳದಲ್ಲಿ ಚುನಾವಣೆ ದಿನಾಂಕ ಹತ್ತಿರ ಬರುತ್ತಿದ್ದಂತೆಯೇ ಎಲ್ಲೆಲ್ಲೂ ರಾಜಕೀಯವೇ ರಾರಾಜಿಸುತ್ತಿದೆ. ಇತ್ತೀಚೆಗೆ ಕ್ರಿಕೆಟಿಗ ಮನೋಜ್ ತಿವಾರಿ ಅವರ ಜಾಕೆಟ್ ಮೇಲೆ, ಅಗ್ನಿಮಿತ್ರ ಪಾಲ್ ಅವರ ಡಿಸೈನರ್ ಸೀರೆಗಳ ಕಮಲದ ಚಿಹ್ನೆ ಇತ್ತು. ಇದೀಗ ಸ್ವೀಟ್ ಅಂಗಡಿಯ ಮಾಲೀಕ ಸಂದೇಶ್ ಸರದಿ.

    ಕೋಲ್ಕತ್ತಾದ ಬಲರಾಮ್ ಮುಲ್ಲಿಕ್ ರಾಧರಮನ್ ಮುಲ್ಲಿಕ್ ಸ್ವೀಟ್‍ಗಳ ಮೇಲೆ ರಾಜಕೀಯ ಪಕ್ಷದ ಚಿಹ್ನೆಗಳನ್ನು ರಚಿಸುವ ಮೂಲಕ ಮತದಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ.

    ರಾಜಕೀಯದ ಪ್ರಮುಖ ಪಕ್ಷಗಳ ಚಿಹ್ನೆ ಸೇರಿದಂತೆ ಕಾಂಗ್ರೆಸ್, ಭಾರತೀಯ ಜನತಾ ಪಕ್ಷದ ಚಿಹ್ನೆ ಜೊತೆಗೆ ಜೈ ಶ್ರೀ ರಾಮ್ ಮತ್ತು ಖೇಲಾ ಹೋಬ್ ಎಂಬ ಎರಡು ಪದಗಳನ್ನು ಸ್ವೀಟ್‍ಗಳ ಮೇಲೆ ರಚಿಸಿದ್ದಾರೆ. ಇದೀಗ ಈ ಸ್ವೀಟ್‍ಗಳು ಸೋಶಿಯಲ್ ಮೀಡಿಯಾದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದೆ.

    ಈ ಕುರಿತಂತೆ ಮಾತನಾಡಿದ ಸ್ವೀಟ್ ಹೌಸ್ ವ್ಯವಸ್ಥಾಪಕ ನಿರ್ದೇಶಕ ಸುದೀಪ್ ಮಲ್ಲಿಕ್, ವರ್ಷದ ಬಹುದೊಡ್ಡ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ನಾವು ಚುನಾವಣೆಯ ಸಂಬಂಧಪಟ್ಟಂತೆ ಸ್ವೀಟ್‍ಗಳನ್ನು ತಯಾರಿ ಮಾಡುತ್ತಿದ್ದು, ಈ ಸ್ವೀಟ್‍ಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಖೇಲಾ ಹೋಬ್ ಮತ್ತು ಜೈ ಶ್ರೀ ರಾಮ್ ಎಂದು ಪದವನ್ನು ರಚಿಸಿರುವ ಸ್ವೀಟ್‍ಗಳಂತೂ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿಹೋಗಿದೆ ಎಂದು ಹೇಳಿದ್ದಾರೆ.

    ಸದ್ಯ ಈ ಸ್ವೀಟ್‍ಗಳು ಗ್ರಾಹಕರ ಗಮನ ಸೆಳೆಯುತ್ತಿದ್ದು, ಗ್ರಾಹಕರು ರಾಜಕೀಯ ಚಿಹ್ನೆಗಳುಳ್ಳ ಸ್ವೀಟ್‍ಗಳನ್ನು ಖರೀದಿಸಲು ಪ್ರಾರಂಭಿಸಿದ್ದಾರೆ ಎಂದು ತಿಳಿಸಿದರು.

  • ಪಕ್ಷೇತರ ಅಭ್ಯರ್ಥಿಗೆ ಚಪ್ಪಲಿ ಗುರುತು- ಗೊಂದಲದಲ್ಲಿ ಚುನಾವಣಾ ಸಿಬ್ಬಂದಿ!

    ಪಕ್ಷೇತರ ಅಭ್ಯರ್ಥಿಗೆ ಚಪ್ಪಲಿ ಗುರುತು- ಗೊಂದಲದಲ್ಲಿ ಚುನಾವಣಾ ಸಿಬ್ಬಂದಿ!

    ಕೊಪ್ಪಳ: 2ನೇ ಹಂತದ ಚುನಾವಣೆಗೆ ಇನ್ನೂ ಕೇವಲ ಒಂದು ದಿನ ಬಾಕಿ ಇರಬೇಕಾದರೆ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಸಿಬ್ಬಂದಿ ಗೊಂದಲದಲ್ಲಿದ್ದಾರೆ.

    ಹೌದು. ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ 14 ಜನ ಕಣದಲ್ಲಿದ್ದಾರೆ. ಆದರೆ ಒಬ್ಬ ಪಕ್ಷೇತರ ಅಭ್ಯರ್ಥಿಯ ಚಿಹ್ನೆ ಚಪ್ಪಲಿ ಗುರುತು ಇರುವುದರಿಂದ ಚುನಾವಣಾ ಸಿಬ್ಬಂದಿ ಚಪ್ಪಲಿ ಹಾಕಬೇಕಾ ಬೇಡವಾ ಎನ್ನುವ ಚಿಂತನೆಯಲ್ಲಿ ಇದ್ದಾರೆ.

    ಚುನಾವಣಾ ಆಯೋಗದ ಪ್ರಕಾರ ಮತಗಟ್ಟೆಯಿಂದ 100 ಮೀಟರ್ ವರೆಗೂ ಎಲ್ಲಿಯೂ ಅಭ್ಯರ್ಥಿಯ ಚಿಹ್ನೆ ಕಾಣುವಂತಿಲ್ಲ. ಆದರೆ ಪಕ್ಷೇತರ ಅಭ್ಯರ್ಥಿ ಪ.ಯ ಗಣೇಶ್ ಅವರ ಚಿಹ್ನೆ ಚಪ್ಪಲಿ ಇರುವುದರಿಂದ ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಅವರೇ ಇದಕ್ಕೆ ಏನು ಮಾಡೋದು ಎಂದು ಯೋಚನೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

    ಸಿಬ್ಬಂದಿ ವಿಚಾರವಿರಲಿ ಮತಗಟ್ಟೆಗೆ ಮತ ಹಾಕಲು ಬರುವ ಮತದಾರರು ಚಪ್ಪಲಿ ಹಾಕಿಕೊಳ್ಳಬೇಕಾ ಅಥವಾ ಬಿಟ್ಟು ಬರಬೇಕಾ ಎನ್ನುವುದು ಇದೀಗ ಕೊಪ್ಪಳದಲ್ಲಿ ಜನರು ಚರ್ಚೆ ಮಾಡುವಂತಾಗಿದೆ.

  • ಮಂಡ್ಯ ಚುನಾವಣೆಯಲ್ಲಿ ‘ಕಹಳೆ’ ಊದಲಿದ್ದಾರೆ ಸುಮಲತಾ!

    ಮಂಡ್ಯ ಚುನಾವಣೆಯಲ್ಲಿ ‘ಕಹಳೆ’ ಊದಲಿದ್ದಾರೆ ಸುಮಲತಾ!

    ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮಂಡ್ಯ ಚುನಾವಣೆಯಲ್ಲಿ ‘ಕಹಳೆ’ ಊದಲಿದ್ದಾರೆ. ಚುನಾವಣಾ ಆಯೋಗ ಸುಮಲತಾ ಅವರಿಗೆ ಕಹಳೆ ಊದುತ್ತಿರುವ ರೈತನ ಚಿಹ್ನೆಯನ್ನು ನೀಡಿದೆ.

    ಕಬ್ಬಿನ ಗದ್ದೆ ಮುಂದೆ ರೈತ, ತೆಂಗಿನ ತೋಟ, ಕಹಳೆ ಊದುತ್ತಿರುವ ರೈತನ ಚಿಹ್ನೆಗಳನ್ನು ಸುಮಲತಾ ಅವರು ಆಯ್ಕೆ ಮಾಡಿಕೊಂಡಿದ್ದರು. ಈಗ ಆಯೋಗ ಸುಮಲತಾ ಅವರು ಕೇಳಿದ್ದ ಕಹಳೆ ಊದುತ್ತಿರುವ ರೈತನ ಚಿತ್ರವನ್ನು ನೀಡಿದೆ.

    ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಹೆಸರಿನ 4 ಮಂದಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸುಮಲತಾ ಅಂಬರೀಶ್, ಕೆಆರ್ ಪೇಟೆ ತಾಲೂಕಿನ ಗೊರವಿ ಗ್ರಾಮದ ಎಂ.ಸುಮಲತಾ, ರಾಮನಗರ ಜಿಲ್ಲೆಯ ಕನಕಪುರದ ಪಿ.ಸುಮಲತಾ ಮತ್ತು ಶ್ರೀರಂಗಪಟ್ಟಣ ತಾಲೂಕಿನ ಟಿಎಂ ಹೊಸೂರು ಗ್ರಾಮದ ಸುಮಲತಾ ಎಂಬವರು ನಾಮಪತ್ರ ಸಲ್ಲಿಸಿದ್ದಾರೆ.

    ಮತದಾರರಲ್ಲಿ ಗೊಂದಲ ಸೃಷ್ಟಿ ಮಾಡಲು ಸುಮಲತಾ ಎಂಬ ಹೆಸರಿನ ಮಹಿಳೆಯರನ್ನು ಕಣಕ್ಕಿಳಿಸಲಾಗಿದೆ ಎಂಬ ಮಾತುಗಳು ಮಂಡ್ಯದಲ್ಲಿ ಕೇಳಿಬರತೊಡಗಿವೆ. ಇದರಿಂದ ಸುಮಲತಾ ಅಂಬರೀಶ್ ಅವರಿಗೆ ಬೀಳುವ ಮತಗಳನ್ನು ವಿಭಜನೆಯಾಗಿ, ಅವರನ್ನು ಚುನಾವಣೆಯಲ್ಲಿ ಸೋಲಿಸಲು ಈ ತಂತ್ರ ಮಾಡಲಾಗಿದೆ ಎನ್ನಲಾಗುತ್ತಿದೆ.

  • ಚಿಹ್ನೆ ಆಯ್ಕೆಯಲ್ಲಿ ದಳಪತಿಗಳಿಗೆ ರೆಬೆಲ್ ಸುಮಲತಾ ಸೆಡ್ಡು!

    ಚಿಹ್ನೆ ಆಯ್ಕೆಯಲ್ಲಿ ದಳಪತಿಗಳಿಗೆ ರೆಬೆಲ್ ಸುಮಲತಾ ಸೆಡ್ಡು!

    ಮಂಡ್ಯ: ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಸುಮಲತಾ ಅಂಬರೀಶ್ ಚಿಹ್ನೆ ಆಯ್ಕೆಯಲ್ಲಿ ದಳಪತಿಗಳಿಗೆ ಶಾಕ್ ನೀಡಿದ್ದಾರೆ. ರೈತರು ಇರುವ ಮೂರು ಚಿಹ್ನೆಗಳಲ್ಲಿ ಒಂದನ್ನು ನೀಡುತ್ತೇವೆ ಆಯೋಗಕ್ಕೆ ಸುಮಲತಾ ಅಂಬರೀಶ್ ಮನವಿ ಮಾಡಿಕೊಂಡಿದ್ದಾರೆ.

    ಈಗಾಗಲೇ ನಾಲ್ಕು ನಾಮಪತ್ರ ಸಲ್ಲಿಸಿರುವ ಸುಮಲತಾ ಅಂಬರೀಶ್ ರೈತ ಪರವಾದ ಮೂರು ಚಿಹ್ನೆಗಳಿಗೆ ಬೇಡಿಕೆ ಇಟ್ಟಿದ್ದಾರೆ. ಕಬ್ಬಿನ ಗದ್ದೆ ಮುಂದೆ ರೈತ, ತೆಂಗಿನ ತೋಟ, ಕಹಳೆ ಊದುತ್ತಿರುವ ರೈತ ಚಿಹ್ನೆಗಳನ್ನು ಸುಮಲತಾ ಅವರು ಆಯ್ಕೆ ಮಾಡಿಕೊಂಡಿದ್ದಾರೆ.

    ರಾಜ್ಯದಲ್ಲಿ ಪ್ರತಿದಿನ ಸದ್ದು ಮಾಡುತ್ತಿರುವ ಮಂಡ್ಯ ಕ್ಷೇತ್ರ ಒಂದೇ ಹೆಸರಿನ ನಾಲ್ಕು ಅಭ್ಯರ್ಥಿಗಳ ಹೆಸರಿನಿಂದ ಸುದ್ದಿ ಆಗುತ್ತಿದೆ. ಮಂಡ್ಯ ಕ್ಷೇತ್ರದಲ್ಲಿ ಈ ಬಾರಿ ಸುಮಲತಾ ಹೆಸರಿನ 4 ಮಂದಿ ಸ್ಪರ್ಧೆ ಮಾಡುತ್ತಿದ್ದಾರೆ. ಸುಮಲತಾ ಅಂಬರೀಶ್, ಕೆಆರ್ ಪೇಟೆ ತಾಲೂಕಿನ ಗೊರವಿ ಗ್ರಾಮದ ಎಂ.ಸುಮಲತಾ, ರಾಮನಗರ ಜಿಲ್ಲೆಯ ಕನಕಪುರದ ಪಿ.ಸುಮಲತಾ ಮತ್ತು ಶ್ರೀರಂಗಪಟ್ಟಣ ತಾಲೂಕಿನ ಟಿಎಂ ಹೊಸೂರು ಗ್ರಾಮದ ಸುಮಲತಾ ಎಂಬವರು ನಾಮಪತ್ರ ಸಲ್ಲಿಸಿದ್ದಾರೆ.

    ಮತದಾರರಲ್ಲಿ ಗೊಂದಲ ಸೃಷ್ಟಿ ಮಾಡೋಕೆ ಸುಮಲತಾ ಎಂಬ ಹೆಸರಿನ ಮೂರು ಮಂದಿಯನ್ನು ಕಣಕ್ಕಿಳಿಸಲಾಗಿದೆ ಎಂಬ ಮಾತುಗಳು ಮಂಡ್ಯದಲ್ಲಿ ಕೇಳಬರತೊಡಗಿವೆ. ಇದರಿಂದ ಸುಮಲತಾ ಅಂಬರೀಶ್ ಅವರಿಗೆ ಬೀಳುವ ಮತಗಳನ್ನು ವಿಭಜನೆಯಾಗಿ, ಅವರನ್ನು ಚುನಾವಣೆಯಲ್ಲಿ ಸೋಲಿಸಲು ಈ ತಂತ್ರ ಮಾಡಲಾಗಿದೆ ಎನ್ನಲಾಗುತ್ತಿದೆ.

  • ಕೊನೆಗೂ ಹುಚ್ಚ ವೆಂಕಟ್ ಗೆ `ಎಕ್ಕಡ’ ದಯಪಾಲಿಸಿದ ಚುನಾವಣಾ ಆಯೋಗ!

    ಕೊನೆಗೂ ಹುಚ್ಚ ವೆಂಕಟ್ ಗೆ `ಎಕ್ಕಡ’ ದಯಪಾಲಿಸಿದ ಚುನಾವಣಾ ಆಯೋಗ!

    ಬೆಂಗಳೂರು: ನನ್ ಮಗಂದ್ ನನ್ ಎಕ್ಕಡ ಅಂತಾ ತಲೆ ತುಂಬಾ ಇರುವ ಕೂದಲನ್ನು ಕೆದರಿಸಿ ಕೆದರಿಸಿ ಹೇಳುವ ಹುಚ್ಚಾ ವೆಂಕಟ್ ಗೆ ಕೊನೆಗೂ ಚುನಾವಣಾ ಆಯೋಗ ಎಕ್ಕಡವನ್ನು ದಯಪಾಲಿಸಿದೆ.

    ನಟ, ನಿರ್ದೇಶಕ ಹುಚ್ಚ ವೆಂಕಟ್ ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಎಲ್ಲಾ ಪಕ್ಷದವರು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈಗಾಗಲೇ ಚುನಾವಣೆ ಪ್ರಚಾರವನ್ನು ಶುರು ಮಾಡಿದ್ದಾರೆ.

    ಹುಚ್ಚ ವೆಂಕಟ್ ಆರ್ ಆರ್ ನಗರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಚುನಾವಣೆ ಆಯೋಗವು ಅಭ್ಯರ್ಥಿಗಳ ಗುರುತನ್ನ, ಚಿಹ್ನೆಯನ್ನು ಘೋಷಣೆ ಮಾಡಿದೆ. ಆದರೆ ನಿಮ್ಮಪ್ಪನ ಚಪ್ಪಲಿ ಸೈಜ್ ಗೊತ್ತಾ, ಅಪ್ಪಂಗೆ ಯಾವತ್ತಾದ್ದರೂ ಚಪ್ಪಲಿ ಕೊಡಿಸಿದ್ದೀರಾ ಅಂತಾ ಪದೇ ಪದೇ ಟಿವಿಯೆದುರು ಕುಂತಾಗ ಸೆಂಟಿಮೆಂಟ್ ಡೈಲಾಗ್ ಹೇಳುವ ವೆಂಕಟ್ ಗೆ ಚಿಹ್ನೆಯಾಗಿ ಎಕ್ಕಡವೆ ತನ್ನ ಗುರುತಾಗಿ ಸಿಕ್ಕಿದೆ.

    ಎಕ್ಕಡನಾ ಕಾಡಿಬೇಡಿ ವೆಂಕಟ್ ಪಡೆದುಕೊಂಡರೋ ಅಥವಾ ಚುನಾವಣಾಧಿಕಾರಿಗಳೇ ವೆಂಕಟ್ ಎಕ್ಕಡಾ ಡೈಲಾಗ್ ಗೆ ಫಿದಾ ಆಗಿ ಇದೇ ಚಿಹ್ನೆ ಕೊಟ್ಟರೋ ಗೊತ್ತಿಲ್ಲ. ಆದರೆ ಎಕ್ಕಡದೊಂದಿಗೆ ಕಣಕ್ಕಿಳಿದಿರುವ ವೆಂಕಟ್ ಆರ್ ಆರ್ ನಗರದಲ್ಲಿ ತಮ್ಮ ಅದೃಷ್ಟವನ್ನು ಪರೀಕ್ಷಿಸಲಿದ್ದಾರೆ.

  • ನಟ ಉಪೇಂದ್ರ ಕೆಪಿಜೆಪಿ ಪಕ್ಷದ ಅಧಿಕೃತ ಚಿಹ್ನೆ ಘೋಷಣೆ

    ನಟ ಉಪೇಂದ್ರ ಕೆಪಿಜೆಪಿ ಪಕ್ಷದ ಅಧಿಕೃತ ಚಿಹ್ನೆ ಘೋಷಣೆ

    ಹುಬ್ಬಳ್ಳಿ: ನಟ ಉಪೇಂದ್ರ ತಮ್ಮ `ಪ್ರಜಾಕೀಯ’ (ಕೆಪಿಜೆಪಿ) ಪಕ್ಷದ ಅಧಿಕೃತ ಚಿಹ್ನೆ “ಆಟೋ ರಿಕ್ಷಾ” ಎಂದು ಘೋಷಣೆ ಮಾಡಿದ್ದಾರೆ.

    ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಆಟೋ ರಿಕ್ಷಾ ಪಕ್ಷದ ಚಿಹ್ನೆಯಾಗಿ ಸಿಕ್ಕಿರುವುದು ಅತ್ಯಂತ ಸಂತೋಷವಾಗಿದೆ. ಕನ್ನಡ ಅಭಿಮಾನಿಗಳ ನೆಚ್ಚಿನ ನಟ ಶಂಕರ್ ನಾಗ್ ಸರ್ ಅವರಿಗೆ ಇದನ್ನು ಅರ್ಪಣೆ ಮಾಡುತ್ತೇನೆ. ಶಂಕರ್ ನಾಗ್ ಅವರು ಹಲವು ಕನಸುಗಳನ್ನು ಹೊಂದಿದ್ದರು. ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ, ಭಾರತಕ್ಕೆ ಮೆಟ್ರೋ ರೈಲು, ಬಡವರಿಗೆ ಕಡಿಮೆ ದರದಲ್ಲಿ ಮನೆ ನಿರ್ಮಾಣ ಮಾಡುವಂತಹ ಹಲವು ಯೊಜನೆಗಳನ್ನು ಹೊಂದಿದ್ದರು. ಅವರ ಆಟೋ ರಾಜ ಸಿನಿಮಾ ಮೂಲಕ ಎಲ್ಲರಿಗೂ ಪ್ರೇರಣೆ, ಅವರ ಚಿಂತನೆಗಳಿಂದ ಸ್ಫೂರ್ತಿ ಪಡೆದು ನಾನು ಖಾಕಿ ಬಟ್ಟೆ ಧರಿಸಿ, ಪಕ್ಷ ಸ್ಥಾಪನೆ ಮಾಡಿದೆ ಎಂದು ಹೇಳಿದರು.

    ಇನ್ನು ಪಕ್ಷದ ಚಿಹ್ನೆಯ ಕುರಿತು ವಿವರಣೆ ನೀಡಿದ ಅವರು, ಆಟೋ ಎಂಬ ಪದಕ್ಕೆ ವಿಶಾಲ ಅರ್ಥವಿದೆ. ನಮಗೇ ನಾಯಕರು ಬೇಡ, ಕಾರ್ಮಿಕರು ಬೇಕು ಎಂಬ ಹಿನ್ನೆಲೆಯಲ್ಲಿ ಖಾಕಿ ಧರಿಸಿ ಕೆಪಿಜಿಪಿ ಪಕ್ಷ ಸಂಘಟನೆ ಮಾಡಿದ್ದೇವೆ. ಆಟೋ ಎಂಬ ಪದ ಮಿಷನ್, ಆಟೋಮೆಟಿಕ್ ಆಂದರೆ ಸ್ವಯಂ ಚಾಲಿತವಾದದ್ದು ಎಂಬ ಅರ್ಥ ಹೊಂದಿದೆ. ಸರ್ಕಾರವು ಹಾಗೆಯೇ ಕಾರ್ಯ ನಿರ್ವಹಿಸಬೇಕು. ಒಂದು ದೊಡ್ಡ ಕಾಪೋರೇಟ್ ಸಂಸ್ಥೆ ಹೇಗೆ ಭ್ರಷ್ಟಚಾರ ಮುಕ್ತವಾಗಿ ನಡೆಯುತ್ತದೆ. ಅಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ. ಆದರೆ ಕೋಟ್ಯಾಂತರ ಹಣ, ಬಜೆಟ್ ಹೊಂದಿದ್ದರೂ ಸರ್ಕಾರದಲ್ಲಿ ಭ್ರಷ್ಟಚಾರ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಮಾಡುವ ನಾಯಕರು ಬೇಡ. ಜನರ ಸಂಪರ್ಕದಲ್ಲಿರುವ ಸೇವಕರು ಬೇಕಾಗಿದ್ದಾರೆ. ಪ್ರಜಾಕೀಯದ ಮೂಲಕ ಆಡಳಿತದಲ್ಲಿ ಪರದರ್ಶಕತೆ ತರುವುದು ನಮ್ಮ ಉದ್ದೇಶವಾಗಿದೆ. ಆದೇ ರೀತಿ ಸರ್ಕಾರವು ಭ್ರಷ್ಟಚಾರ ಮುಕ್ತವಾಗಿ ನಡೆಯಬೇಕು ಎಂದರು.

    ರಾಜಕೀಯದಲ್ಲಿ ಹಣ, ಜಾತಿ, ಜನರ ಮನೋಭಾವನೆ ವಿಷಯಗಳನ್ನು ಇಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ. ದೇಶದ ಪ್ರತಿಯೊಬ್ಬ ಪ್ರಜೆಯೂ ಬದಲಾಗಬೇಕಿದೆ. ಅದರಿಂದಲೇ ಪ್ರಜಾಕೀಯ ಎಂಬ ವೇದಿಕೆ ಸೃಷ್ಟಿಯಾಗಿದೆ. ಪ್ರತಿಯೊಬ್ಬರಲ್ಲೂ ಹಲವಾರು ಯೋಜನೆ, ಚಿಂತನೆಗಳು ಇರುತ್ತವೆ. ಅವುಗಳನ್ನು ನಮಗೆ ತಿಳಿಸಿ, ನಮ್ಮ ಜೊತೆ ಕೈ ಜೋಡಿಸಿ ಎಂದು ಮನವಿ ಮಾಡಿದರು.

    ಚುನಾವಣೆಯಲ್ಲಿ ವಿಷಯಾಧಾರಿತವಾದ ಅಂಶಗಳ ಮೇಲೆ ಚರ್ಚೆ ನಡೆದು, ಅವುಗಳ ಮೇಲೆ ಮತದಾನ ಮಾಡುವ ನಿರ್ಣಯ ಮಾಡಬೇಕಿದೆ. ತಂತ್ರಜ್ಞಾನವನ್ನು ಬಳಸಿ ಪ್ರತಿಯೊಂದು ಕಾರ್ಯವನ್ನ ಪರದರ್ಶಕವಾಗಿ ಮಾಡಬಹುದು. ಪ್ರತಿ ಸರ್ಕಾರಿ ಅಧಿಕಾರಿಯ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯಬಹುದು. ಸಮಸ್ಯೆಗಳ ಕುರಿತು ಚರ್ಚೆ ಮಾಡುವ ಬದಲು ಅವುಗಳಿಗೆ ಪರಿಹಾರ ಹುಡುಕುವ ಕಾರ್ಯ ನಡೆಯಬೇಕಿದೆ. ಪಕ್ಷ ಪ್ರಣಾಳಿಕೆಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು. ಅವುಗಳ ಕುರಿತು ವಿಸ್ತಾರ ಚರ್ಚೆ ಮಾಡಲಾಗುತ್ತದೆ. ನಾನು ಸಾಮಾನ್ಯ ಪ್ರಜೆಯಾಗಿ ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

     

  • ನಾಗರ ಹಾವಿನ ತಲೆಯ ಮೇಲೆ ಹಾರುವ ಗರುಡನ ಚಿತ್ರ

    ನಾಗರ ಹಾವಿನ ತಲೆಯ ಮೇಲೆ ಹಾರುವ ಗರುಡನ ಚಿತ್ರ

    ಕಾರವಾರ: ನಾಗರ ಹಾವಿನ ತಲೆಯ ಮೇಲೆ ಗರುಡನ ಚಿತ್ರ ಮೂಡಿರುವ ಅಪರೂಪದ ಹಾವೊಂದು ಕಾರವಾರ ತಾಲೂಕಿನ ಆವರ್ಸಾದ ಸಚಿನ್ ನಾಯ್ಕ ರವರ ಮನೆಯಲ್ಲಿ ಪ್ರತ್ಯಕ್ಷವಾಗುವ ಮೂಲಕ ಜನರ ಕುತೂಹಲಕ್ಕೆ ಕಾರಣವಾಗಿದೆ.

    ತನ್ನ ಹೆಡೆಯ ಮೇಲೆ ಕನ್ನಡಕದ ಆಕಾರದ ಚಿಹ್ನೆಯ ಜೊತೆಗೆ ಅದರ ಮೇಲ್ಭಾಗದಲ್ಲಿ ಹಾರುತ್ತಿರುವ ಗರುಡನಂತಹ ಚಿಹ್ನೆ ಮೂಡಿದೆ. ಸಾಮಾನ್ಯವಾಗಿ ನಾಗರ ಹಾವಿನ ಹೆಡೆಯ ಮೇಲೆ ಕನ್ನಡಕದಂತೆ ರೇಖೆಗಳು ಮೂಡಿರುತ್ತದೆ. ಇಲ್ಲವೇ ಹೆಡೆಯ ಭಾಗದಲ್ಲಿ ಎರಡು ಕಪ್ಪು ಮಚ್ಚೆಯಂತೆ ಆಕೃತಿ ಮೂಡುವುದು ಸಾಮಾನ್ಯವಾಗಿರುತ್ತದೆ.

    ಇವೆಲ್ಲವನ್ನೂ ಹೊರತುಪಡಿಸಿ ಹೆಡೆಯ ಮೇಲೆ ಗರುಡನ ಆಕೃತಿ ಮೂಡಿರುವ ಈ ನಾಗರಹಾವು ಬಲು ಅಪರೂಪದ್ದಾಗಿದೆ. ಇನ್ನು ಮನೆಗೆ ಆಗಮಿಸಿದ್ದ ಈ ವಿಶೇಷ ನಾಗರಹಾವನ್ನು ಉರಗ ತಜ್ಞ ಮಹೇಶ್ ನಾಯ್ಕ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.

     

  • ಶಶಿಕಲಾ, ಸೆಲ್ವಂ ಬಣಗಳಿಗೆ ಶಾಕ್ – ಎಐಎಡಿಎಂಕೆಯ ಚಿನ್ಹೆ ತಡೆ ಹಿಡಿದ ಚುನಾವಣಾ ಆಯೋಗ

    ಶಶಿಕಲಾ, ಸೆಲ್ವಂ ಬಣಗಳಿಗೆ ಶಾಕ್ – ಎಐಎಡಿಎಂಕೆಯ ಚಿನ್ಹೆ ತಡೆ ಹಿಡಿದ ಚುನಾವಣಾ ಆಯೋಗ

    – ಜಯಲಲಿತಾ ಕ್ಷೇತ್ರದ ಉಪಸಮರಕ್ಕೆ ಎರಡೆಲೆ ಇಲ್ಲ

    ಚೆನ್ನೈ: ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ನಿಧನದಿಂದ ತೆರವಾಗಿರೋ ಚೆನ್ನೈನ ಆರ್‍ಕೆ ನಗರದ ಉಪಚುನಾವಣೆಯಲ್ಲಿ ಎಐಎಡಿಎಂಕೆ ಪಕ್ಷ ಮಾನ್ಯತೆಯನ್ನೇ ಕಳೆದುಕೊಂಡಿದೆ.

    ಎಐಎಡಿಎಂಕೆ ಪಕ್ಷದ ಚಿಹ್ನೆ ತಮಗೆ ನೀಡುವಂತೆ ಶಶಿಕಲಾ ಬಣ ಹಾಗೂ ಪನ್ನೀರ್ ಸೆಲ್ವಂ ಬಣ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿತ್ತು. ಆದ್ರೆ ಆರ್‍ಕೆ ನಗರದ ಉಪಚುನಾವಣೆಯಲ್ಲಿ ಎರಡೂ ಬಣಕ್ಕೂ ಎಐಎಡಿಎಂಕೆ ಪಕ್ಷದ ಎರಡು ಎಲೆಯ ಚಿಹ್ನೆಯನ್ನು ಕೊಡಲು ಚುನಾವಣಾ ಆಯೋಗ ನಿರಾಕರಿಸಿದೆ. ಅಲ್ಲದೆ ಎಐಎಡಿಎಂಕೆ ಪಕ್ಷದ ವಿಸ್ತøತ ಹೆಸರನ್ನು ಚುನಾವಣೆಯಲ್ಲಿ ಬಳಸುವಂತಿಲ್ಲ ಎಂದು ಹೇಳಿದೆ.

    ಸದ್ಯ ಪಕ್ಷದ ಚಿಹ್ನೆಯನ್ನ ಚುನಾವಣಾ ಆಯೋಗ ತಡೆ ಹಿಡಿದಿದೆ. ಹೀಗಾಗಿ ಆರ್‍ಕೆ ನಗರ ಚುನಾವಣೆಯಲ್ಲಿ ಶಶಿಕಲಾ ಬಣದ ಅಭ್ಯರ್ಥಿ ಟಿಟಿವಿ ದಿನಕರನ್ ಹಾಗೂ ಸೆಲ್ವಂ ಬಣದ ಅಭ್ಯರ್ಥಿ ಮಧುಸೂದನನ್ ಬೇರೆ ಚಿಹ್ನೆಯಲ್ಲಿ ಸ್ಪರ್ಧಿಸಬೇಕಾದ ಅನಿವಾರ್ಯತೆ ಎದುರಾಗಿದೆ.

    ಏಪ್ರಿಲ್ 12ರಂದು ಆರ್‍ಕೆ ನಗರ ಕ್ಷೇತ್ರದ ಉಪಚುನಾವಣೆ ನಡೆಯಲಿದೆ.