Tag: ಚೀಟಿ

  • 2ನೇ ಪತ್ನಿಯನ್ನ ಬಿಟ್ಟು ಪೇದೆಯಿಂದ ಚೀಟಿ ಹೆಸ್ರಲ್ಲಿ ಕೋಟ್ಯಂತರ ರೂ. ವಂಚನೆ

    2ನೇ ಪತ್ನಿಯನ್ನ ಬಿಟ್ಟು ಪೇದೆಯಿಂದ ಚೀಟಿ ಹೆಸ್ರಲ್ಲಿ ಕೋಟ್ಯಂತರ ರೂ. ವಂಚನೆ

    -ಕಂಡೋರ ಹಣದಿಂದ ಬೆಂಗ್ಳೂರಲ್ಲಿ ಬಂಗ್ಲೆ, ಶಿರಾದಲ್ಲಿ ಜಮೀನು ಖರೀದಿ

    ತುಮಕೂರು: ಪೊಲೀಸ್ ಪೇದೆಯೊಬ್ಬ ತನ್ನ ಎರಡನೇ ಪತ್ನಿ ಹೆಸರಲ್ಲಿ ಚೀಟಿ ವ್ಯವಹಾರ ನಡೆಸಿ ಕೋಟ್ಯಂತರ ರೂ. ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.

    ಜಿಲ್ಲೆಯ ಕುಣಿಗಲ್ ಠಾಣೆಯ ಪೇದೆ ಚಂದ್ರಶೇಖರ್ ಮೇಲೆ ಈ ಆರೋಪ ಕೇಳಿ ಬಂದಿದೆ. ಚಂದ್ರಶೇಖರ್ ತನ್ನ ಎರಡನೇ ಪತ್ನಿಯನ್ನು ಬಿಟ್ಟು ಬೆಂಗಳೂರಿನ ಕಾಮಾಕ್ಷಿ ಪಾಳ್ಯದಲ್ಲಿ ಚೀಟಿ ನಡೆಸಿದ್ದಾನೆ. ಬೆಂಗಳೂರಿನ ನೂರಾರು ಜನರಿಂದ ಕೋಟ್ಯಂತರ ರೂ. ಸಂಗ್ರಹಿಸಿದ್ದಾನೆ. ಚೀಟಿ ನಡೆಯುವ ದಿನ ಸ್ವತಃ ಚಂದ್ರಶೇಖರನೇ ಬಂದು ಮಧ್ಯಸ್ಥಿಕೆ ವಹಿಸುತ್ತಿದ್ದನಂತೆ. ಆದರೆ ಈಗ ಚೀಟಿ ಅವಧಿ ಮುಗಿಯುತ್ತಿದ್ದಂತೆ ಪತ್ನಿ ಕಣ್ಮರೆಯಾಗಿದ್ದಾಳೆ. ಸುಮಾರು 6 ಕೋಟಿ ರೂ. ಹೆಚ್ಚು ಹಣ ತೆಗೆದುಕೊಂಡು ನಾಪತ್ತೆಯಾಗಿದ್ದಾಳೆ ಎಂದು ಹಣ ಕಳೆದುಕೊಂಡವರು ಆರೋಪಿಸಿದ್ದಾರೆ.

    ಚೀಟಿ ಹಣದಿಂದ ಪೇದೆ ಚಂದ್ರಶೇಖರ್ ಬೆಂಗಳೂರಲ್ಲಿ ಭವ್ಯಬಂಗಲೆ ಕಟ್ಟಿ, ಶಿರಾದಲ್ಲಿ ಜಮೀನು ಖರೀದಿಸಿದ್ದಾನೆ. ಈಗ ಚೀಟಿ ಹಣ ಕೊಡಿ ಅಂದರೆ ನಾನ್ಯಾಕೆ ಕೊಡಲಿ. ಆಕೆ ನನ್ನ ಹೆಂಡತಿ ಅಲ್ಲ ಅಂತಾ ಉಲ್ಟಾ ಹೊಡೆದಿದ್ದಾನೆ. ಯಾರೂ ದೂರು ಕೊಟ್ಟರು, ಹೆಚ್ಚಂದರೆ ನನ್ನ ಕೆಲಸ ಹೋಗಬಹುದು ಅಷ್ಟೆ ಅಥವಾ ಒಂದೆರಡು ತಿಂಗಳು ಜೈಲಾಗಬಹುದು. ನಾನಂತು ಈಗ ಸೆಟಲ್ ಆಗಿದ್ದೀನಿ ಅಂತಾ ಚಂದ್ರಶೇಖರ್ ಹೇಳುತ್ತಿದ್ದಾನೆ ಎಂದು ಹಣ ಕಳೆದುಕೊಂಡ ಕುಮಾರ್ ತಿಳಿಸಿದ್ದಾರೆ.

    ಪೇದೆ ಚಂದ್ರಶೇಖರ್ ಹಾಗೂ ಆತನ ಪತ್ನಿ ಮೇಘನಾ ವಿರುದ್ಧ ಕಾಮಾಕ್ಷಿ ಪಾಳ್ಯದಲ್ಲಿ ದೂರು ದಾಖಲಾಗಿ ಒಂದು ತಿಂಗಳಾಗಿದೆ. ಆದರೂ ಕಾಮಾಕ್ಷಿಪಾಳ್ಯ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಮೋಸಮಾಡಿದ ಚಂದ್ರಶೇಖರನನ್ನು ಕರೆದು ವಿಚಾರಣೆಯನ್ನೂ ಮಾಡದೇ ತಮ್ಮ ಸಿಬ್ಬಂದಿಯ ರಕ್ಷಣೆಗೆ ನಿಂತಿದ್ದಾರೆ ಎಂದು ಸಾರ್ವಜನಿಕರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚೀಟಿ ವ್ಯವಹಾರದಲ್ಲಿ ಲಕ್ಷ-ಲಕ್ಷ ಮೋಸ- ತಲೆಮರೆಸಿಕೊಂಡಿದ್ದ ವಂಚಕಿಗೆ ಬಿತ್ತು ಗೂಸಾ

    ಚೀಟಿ ವ್ಯವಹಾರದಲ್ಲಿ ಲಕ್ಷ-ಲಕ್ಷ ಮೋಸ- ತಲೆಮರೆಸಿಕೊಂಡಿದ್ದ ವಂಚಕಿಗೆ ಬಿತ್ತು ಗೂಸಾ

    ಬೆಂಗಳೂರು: ಚೀಟಿ ವ್ಯವಹಾರದಲ್ಲಿ ಲಕ್ಷ-ಲಕ್ಷ ಹಣ ಪಡೆದು ಮೋಸ ಮಾಡಿ 15 ದಿನದಿಂದ ತಲೆಮರೆಸಿಕೊಂಡಿದ್ದ ವಂಚಕಿಯನ್ನು ಹಿಡಿದು ಚೆನ್ನಾಗಿ ಥಳಿಸಿದ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.

    ರಾಜರಾಜೇಶ್ವರಿ ನಗರದ ರತ್ನಮ್ಮ ಎಂಬಾಕೆ ಸುಮಾರು 50 ಕ್ಕೂ ಹೆಚ್ಚು ಮಂದಿ ಬಳಿ ಚೀಟಿ ಕಟ್ಟಿಸಿಕೊಂಡು ಹಣ ನೀಡದೇ ವಂಚಿಸಿದ್ದಳು. ಪ್ರತಿನಿತ್ಯ ಚೀಟಿ ಕಟ್ಟಿರುವ ಮಂದಿ ಹಣ ನೀಡುವಂತೆ ಒತ್ತಾಯಿಸಿ ರಾತ್ರಿ ಮನೆ ಬಳಿ ಜಮಾಯಿಸಿ ರತ್ನಮ್ಮಳಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

    ಕಳೆದ ಹದಿನೈದು ದಿನಗಳಿಂದ ತಲೆ ಮರೆಸಿಕೊಂಡಿದ್ದ ರತ್ನಮ್ಮ, ಶನಿವಾರ ದೀಢಿರ್ ಮನೆಗೆ ಬಂದು ಸೇರಿಕೊಂಡಿದ್ದಳು. ಈ ವಿಚಾರ ತಿಳಿದ ವಂಚನೆಗೊಳಗಾದವರು ರಾತ್ರಿ ಮನೆ ಬಳಿ ಬಂದು ರತ್ನಮ್ಮಳನ್ನ ಹೊರಗೆ ಕರೆದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

    ಮನೆ ಬಳಿ ಗಲಾಟೆ ಹೆಚ್ಚಾಗುತ್ತಿದ್ದಂತೆ ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸದ್ಯ ಮೋಸ ಹೋದವರೆಲ್ಲರು ಸೇರಿಕೊಂಡು ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಸೂಕ್ತ ಕ್ರಮ ಜರುಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಹದನೈದು ವರ್ಷದಿಂದ ಚೀಟಿ ವ್ಯವಹಾರ ಮಾಡ್ತಿದ್ದ ರತ್ನಮ್ಮ, ಕೆಲ ದಿನಗಳಿಂದ ಚೀಟಿ ಹಣ ವಾಪಸ್ ನೀಡದೇ ಮೋಸ ಮಾಡ್ತಿದ್ಲು. ಹಣ ಕೇಳಿದ್ರೆ ಹೆಸರು ಬರೆದಿಟ್ಟು ನೇಣು ಹಾಕಿಕೊಳ್ಳುವುದಾಗಿ ಬೆದರಿಸುತ್ತಿದ್ದಳು ಅಂತಾ ವಂಚನೆಗೊಳಗಾದವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

    https://www.youtube.com/watch?v=TIhVzpxkS84&feature=youtu.be