Tag: ಚೀನಾ ಪ್ರಜೆ

  • 100 ಕೋಟಿ ಸ್ಕ್ಯಾಮ್: ದೆಹಲಿಯಲ್ಲಿ ಚೀನಾ ಪ್ರಜೆ ಅರೆಸ್ಟ್

    100 ಕೋಟಿ ಸ್ಕ್ಯಾಮ್: ದೆಹಲಿಯಲ್ಲಿ ಚೀನಾ ಪ್ರಜೆ ಅರೆಸ್ಟ್

    ನವದೆಹಲಿ: 100 ಕೋಟಿ ರೂ. ಮೊತ್ತದ ಬೃಹತ್ ಸೈಬರ್ ವಂಚನೆ (Cyber Fraud) ಪ್ರಕರಣದಲ್ಲಿ ಭಾಗಿಯಾಗಿರುವ ಚೀನಾ ಪ್ರಜೆ ಫಾಂಗ್ ಚೆಂಜಿನ್‌ನನ್ನು ದೆಹಲಿಯಲ್ಲಿ ಇಂದು (ಮಂಗಳವಾರ) ಸೈಬರ್ ಸೆಲ್ ಪೊಲೀಸರು ಬಂಧಿಸಿದ್ದಾರೆ.

    ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಫಾಂಗ್ ಚೆಂಜಿನ್ ವಾಟ್ಸಾಪ್ ಗ್ರೂಪ್‌ಗಳ ಮೂಲಕ ಆನ್‌ಲೈನ್ ಸ್ಟಾಕ್ ಟ್ರೇಡಿಂಗ್ ಹಗರಣಗಳಲ್ಲಿ ಭಾಗಿಯಾಗಿದ್ದ. ಸಂತ್ರಸ್ತರಲ್ಲಿ ಒಬ್ಬರಾದ ಸುರೇಶ್ ಕೋಳಿಚಿಯಿಲ್ ಅಚ್ಯುತನ್ ಅವರು ಸೈಬರ್ ಕ್ರೈಂ (Cyber Crime) ಪೋರ್ಟಲ್‌ನಲ್ಲಿ 43.5 ಲಕ್ಷ ರೂ. ವಂಚಿಸಿದ್ದಾನೆ ಎಂದು ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ದೂರಿನ ಪ್ರಕಾರ, ಅವರನ್ನು ವಂಚನೆಯ ಷೇರು ಮಾರುಕಟ್ಟೆಯ ತರಬೇತಿ ಅವಧಿಗಳಿಗೆ ಆಮಿಷವೊಡ್ಡಲಾಯಿತು. ನಂತರ ಹಣವನ್ನು ಹಲವಾರು ವಹಿವಾಟುಗಳಲ್ಲಿ ಹೂಡಿಕೆ ಮಾಡುವಂತೆ ಹೇಳಿ ವಂಚನೆ ಎಸಗಲಾಗಿದೆ. ನಂತರ ಈ ಹಣವನ್ನು ವಂಚಕರು ನಿಯಂತ್ರಿಸಲ್ಪಡುವ ಹಲವು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಯಿತು ಎಂದು ಹೇಳಿದ್ದಾರೆ. ಇದನ್ನೂ ಓದಿ: ವಕ್ಫ್‌ ಬೋರ್ಡ್‌ ರಾಕ್ಷಸನನ್ನ ಮೋದಿ ಸಂಹಾರ ಮಾಡ್ತಾರೆ: ಆರ್.‌ ಅಶೋಕ್‌

    ಏಪ್ರಿಲ್‌ನಲ್ಲಿ 1.25 ಲಕ್ಷ ರೂ. ವಂಚನೆ ಮಾಡಲಾಗಿದೆ. ರಾಷ್ಟ್ರ ರಾಜಧಾನಿಯ ಮುಂಡ್ಕಾದಲ್ಲಿರುವ ಮಹಾಲಕ್ಷ್ಮಿ ಟ್ರೇಡರ್ಸ್ ಹೆಸರಿನಲ್ಲಿ ಬ್ಯಾಂಕ್ ಖಾತೆ ಇತ್ತು. ಅಪರಾಧಕ್ಕೆ ಸಂಬಂಧಿಸಿದ ಮೊಬೈಲ್ ಫೋನ್ ಕೂಡ ಪತ್ತೆಯಾಗಿದೆ. ಇದು ಆರೋಪಿ ಚೆಂಜಿನ್‌ನನ್ನು ಗುರುತಿಸಲು ಸಹಾಯವಾಯಿತು. ಆರೋಪಿಗಳು ದೆಹಲಿಯ ಸಫ್ದರ್‌ಜಂಗ್ ಎನ್‌ಕ್ಲೇವ್‌ನಲ್ಲಿ ವಾಸವಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಂಗ್ಳೂರು | ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ – ಯುವತಿ ಸಜೀವ ದಹನ

    ಅಪರಾಧಗಳನ್ನು ನಡೆಸಲು ಬಳಸಲಾದ ಫೋನ್‌ನಲ್ಲಿ ಚೆಂಜಿನ್ ಮತ್ತು ಅವನ ಸಹಚರರ ನಡುವೆ ವಾಟ್ಸಾಪ್ ಸಂಭಾಷಣೆಗಳು ಸೇರಿದಂತೆ ಹಲವಾರು ಸಾಕ್ಷಿಗಳು ಸಿಕ್ಕಿದೆ. ಈ ಸಾಕ್ಷಿ ಮೇರೆಗೆ ಆತನನ್ನು ಬಂಧಿಸಲಾಗಿದೆ. ಆರೋಪಿಯು ವಂಚನೆಗೆ ಬಳಸಲಾದ ಮೊಬೈಲ್ ಸಂಖ್ಯೆಗೆ ರೀಚಾರ್ಜ್ ಮಾಡುವಂತೆ ತನ್ನ ಸಹಾಯಕನಿಗೆ ಸೂಚಿಸಿದ್ದಾನೆ. ಸೈಬರ್ ಕ್ರೈಮ್ ಪೋರ್ಟಲ್‌ನಲ್ಲಿ ಕನಿಷ್ಠ 17 ದೂರುಗಳನ್ನು ದಾಖಲಿಸಲಾಗಿದೆ. ಎಲ್ಲವೂ ಒಂದೇ ಬ್ಯಾಂಕ್ ಖಾತೆಗೆ ಲಿಂಕ್ ಮಾಡಲಾಗಿದೆ. ದೂರುಗಳ ಪ್ರಕಾರ, 100 ಕೋಟಿ ರೂ. ವಂಚನೆಯಾಗಿದೆ ಎಂದು ಹೇಳಲಾಗಿದೆ. ಹೆಚ್ಚಿನ ತನಿಖೆಯಿಂದ ಆಂಧ್ರಪ್ರದೇಶ (Andhra Pradesh) ಮತ್ತು ಉತ್ತರ ಪ್ರದೇಶದಲ್ಲಿ (Uttar Pradesh) ಸೈಬರ್ ಕ್ರೈಮ್ ಮತ್ತು ಮನಿ ಲಾಂಡರಿಂಗ್ ಒಳಗೊಂಡತೆ ಇತರ ಎರಡು ಮಹತ್ವದ ವಂಚನೆ ಪ್ರಕರಣಗಳಿಗೂ ಫಾಂಗ್ ಚೆಂಜಿನ್‌ಗೂ ಸಂಬಂಧವಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಡಿಸಿಪಿ ಶಹದಾರ, ಪ್ರಶಾಂತ್ ಗೌತಮ್ ತಿಳಿಸಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಭುಗಿಲೆದ್ದ ವಕ್ಫ್‌ ಆಸ್ತಿ ವಿವಾದ – ಅಶೋಕ್‌ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ

  • ಸಮುದ್ರದ ಮಧ್ಯದಲ್ಲಿ ಚೀನಾ ಪ್ರಜೆ ರಕ್ಷಿಸಿದ ಭಾರತೀಯ ಕೋಸ್ಟ್‌ ಗಾರ್ಡ್‌ – ಧನ್ಯವಾದ ತಿಳಿಸಿದ ಚೀನಾ

    ಸಮುದ್ರದ ಮಧ್ಯದಲ್ಲಿ ಚೀನಾ ಪ್ರಜೆ ರಕ್ಷಿಸಿದ ಭಾರತೀಯ ಕೋಸ್ಟ್‌ ಗಾರ್ಡ್‌ – ಧನ್ಯವಾದ ತಿಳಿಸಿದ ಚೀನಾ

    ನವದೆಹಲಿ: ಮುಂಬೈನ ಅರೇಬಿಯನ್‌ ಸಮುದ್ರದಲ್ಲಿ ಚೀನಾ ಪ್ರಜೆಯನ್ನು (Chines Citizen) ಭಾರತೀಯ ಕೋಸ್ಟ್‌ ಗಾರ್ಡ್‌ (Indian Coast Guard) ಸಿಬ್ಬಂದಿ ರಕ್ಷಿಸಿದ್ದಾರೆ. ಭಾರತೀಯ ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಕಾರ್ಯಕ್ಕೆ ಚೀನಾ ಧನ್ಯವಾದ ತಿಳಿಸಿದೆ.

    ಮುಂಬೈನ ಮಾರಿಟೈಮ್ ಪಾರುಗಾಣಿಕಾ ಸಮನ್ವಯ ಕೇಂದ್ರಕ್ಕೆ ಸದಸ್ಯ ಯಿನ್ ವೈಗ್ಯಾಂಗ್ ಅವರಿಗೆ ಹೃದಯಾಘಾತವಾಗಿದೆ ಮತ್ತು ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ ಎಂದು ಮಾಹಿತಿ ಲಭಿಸಿತ್ತು. ಚೀನಾದಿಂದ ಯುಎಇಗೆ ತೆರಳುತ್ತಿದ್ದ ಹಡಗಿನೊಂದಿಗೆ ತ್ವರಿತವಾಗಿ ಸಂವಹನ ನಡೆಸಲಾಯಿತು. ಇದನ್ನೂ ಓದಿ: ಸಿಮ್‌ ಕಾರ್ಡ್‌ ಡೀಲರ್‌ಗಳ ಪೊಲೀಸ್‌ ಪರಿಶೀಲನೆ ಕಡ್ಡಾಯ

    ತ್ವರಿತ ಸ್ಥಳಾಂತರಿಸುವಿಕೆ ಮತ್ತು ವೈದ್ಯಕೀಯ ನಿರ್ವಹಣೆಗಾಗಿ ಕ್ರಮಕೈಗೊಳ್ಳಲಾಯಿತು. ನಂತರ ತುರ್ತು ಚಿಕಿತ್ಸೆಯನ್ನು ನೀಡಲಾಯಿತು. ರೋಗಿಯನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಹಡಗಿನ ಏಜೆಂಟ್‌ಗೆ ಸ್ಥಳಾಂತರಿಸಲಾಯಿತು.

    ತುರ್ತು ವೈದ್ಯಕೀಯ ನೆರವಿನ ಅಗತ್ಯವಿದ್ದ ಚೀನಾದ ಪ್ರಜೆಯನ್ನು ರಕ್ಷಿಸಿದ ಭಾರತೀಯ ಕೋಸ್ಟ್‌ ಗಾರ್ಡ್‌ ಕಾರ್ಯಕ್ಕೆ ಚೀನಾ ರಾಯಭಾರ ಕಚೇರಿ ಮೆಚ್ಚುಗೆ ವ್ಯಕ್ತಪಡಿಸಿದೆ. ಇದನ್ನೂ ಓದಿ: ಮುಸ್ಲಿಮರು ಮೊದಲು ಹಿಂದುಗಳಾಗಿದ್ದರು, ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು: ಗುಲಾಂ ನಬಿ ಆಜಾದ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]