Tag: ಚುನಾವಣೆ ಪ್ರಚಾರ

  • ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ, ಮತಭಿಕ್ಷೆ ನೀಡಿ: ಹೆಚ್‍ಡಿಡಿ

    ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ, ಮತಭಿಕ್ಷೆ ನೀಡಿ: ಹೆಚ್‍ಡಿಡಿ

    ವಿಜಯಪುರ: ನಾನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ನನ್ನ ಜೀವನದ ಕೊನೆಯ ಘಟ್ಟದಲ್ಲಿದ್ದೇನೆ. ಹಾಗಾಗಿ ಮತಭೀಕ್ಷೆ ನೀಡಿ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತದಾರರಲ್ಲಿ ಮನವಿ ಮಾಡಿದ್ದಾರೆ.

    HDD

    ಬೈ ಎಲೆಕ್ಷನ್ ಕಣ ರಂಗೇರಿದೆ. ಸಿಂದಗಿಯನ್ನು ಉಳಿಸಿಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು, ಮತದಾರರ ಮೇಲೆ ಈಗ ಭಾವನಾತ್ಮಕ ಅಸ್ತ್ರ ಪ್ರಯೋಗ ಮಾಡಿದ್ದಾರೆ. ಇದನ್ನೂ ಓದಿ: ಹೆಬ್ಬೆಟ್‌ ಗಿರಾಕಿ ಮೋದಿ ಎಂದ ಕೆಪಿಸಿಸಿ ಐಟಿ ಸೆಲ್‌ ವಿರುದ್ಧ ಡಿಕೆಶಿ ಗರಂ

    HDD

    ಸೋಮವಾರ ವಿಜಯಪುರಕ್ಕೆ ಭೇಟಿ ನೀಡಿ, ಜೆಡಿಎಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡಿದ ಅವರು, ನಾನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ಈಗಾಗಲೇ 89 ವರ್ಷ ಆಗಿದೆ. ನಾನು ಜೀವನದ ಕೊನೆ ಘಟ್ಟದಲ್ಲಿದ್ದೇನೆ. ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಆಡಳಿತಕ್ಕೆ ಬರಬೇಕು. ಅದನ್ನು ನೋಡಬೇಕು. ಅದಕ್ಕಾಗಿ ನಾನು ಮತ ಭಿಕ್ಷೆ ಕೇಳುತ್ತಿದ್ದೇನೆ. ದಯಾಮಾಡಿ ಜೆಡಿಎಸ್ ಪಕ್ಷವನ್ನು ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ರೈತರಿಗೆ ಸಿಹಿಸುದ್ದಿ – ರಸಗೊಬ್ಬರ ಸಬ್ಸಿಡಿ ಭಾರೀ ಏರಿಕೆ

  • ವೇದಿಕೆಯ ಮೇಲೆ ಕುಸಿದ ಸಿಎಂ ವಿಜಯ್ ರೂಪಾನಿ

    ವೇದಿಕೆಯ ಮೇಲೆ ಕುಸಿದ ಸಿಎಂ ವಿಜಯ್ ರೂಪಾನಿ

    ಅಹಮದಾಬಾದ್: ಚುನಾವಣೆ ಪ್ರಚಾರದ ವೇಳೆ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದಾಗಲೇ ಗುಜರಾತ್ ಸಿಎಂ ವಿಜಯ್ ರೂಪಾನಿ ಕುಸಿದಿದ್ದಾರೆ. ಭಾನುವಾರ ವಡೋದರಾದ ನಿಜಾಮಪುರನಲ್ಲಿ ಮುಖ್ಯಮಂತ್ರಿಗಳು ಎಲೆಕ್ಷನ್ ಕ್ಯಾಂಪನ್ ನಲ್ಲಿ ಭಾಗಿಯಾಗಿದ್ದ ವೇಳೆ ಈ ಘಟನೆ ಸಂಭವಿಸಿದೆ.

    ಸಿಎಂ ಕುಸಿಯುತ್ತಿದ್ದಂತೆ ಅಧಿಕಾರಿಗಳು ಕಾರ್ಯಕ್ರಮವನ್ನ ರದ್ದುಗೊಳಿಸಿ, ವೇದಿಕೆಯಲ್ಲಿಯೇ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳನ್ನ ಅಹಮಾದಾಬಾದ್ ಗೆ ಶಿಫ್ಟ್ ಮಾಡಲಾಗಿದೆ. ಸಿಎಂ ಅವರ ವೈದ್ಯಕೀಯ ವರದಿ ಬಂದಿದ್ದು, ಗಾಬರಿಯಾಗುವಂತಿದಿಲ್ಲ. ಇಸಿಜಿ, ಸಿಟಿ ಸ್ಕ್ಯಾನ್ ಸೇರಿದಂತೆ ಎಲ್ಲ ವೈದ್ಯಕೀಯ ಪರೀಕ್ಷೆಗಳನ್ನ ನಡೆಸಲಾಗಿದ್ದು, ಸಿಎಂ ಆರೋಗ್ಯವಾಗಿದ್ದಾರೆ. 24 ಗಂಟೆ ವೈದ್ಯರ ನಿಗಾದಲ್ಲಿ ಇರಿಸಲಾಗಿದೆ ಎಂದು ಯು.ಎನ್. ಆಸ್ಪತ್ರೆಯ ಡಾಕ್ಟರ್ ಆರ್.ಕೆ.ಪಟೇಲ್ ಮಾಹಿತಿ ನೀಡಿದ್ದಾರೆ.

    ವಡೋದರಾದ ನಿಜಾಮಪುರನಲ್ಲಿ ಮೂರನೇ ಬಾರಿ ಚುನಾವಣೆ ಪ್ರಚಾರ ನಡೆಸುತ್ತಿದ್ದರು. ವೇದಿಕೆ ಮೇಲೆ ಮತದಾರರನ್ನು ಉದ್ದೇಶಿಸಿ ಮತನಾಡುವಾಗ ಸಿಎಂ ದಿಢೀರ್ ಕುಸಿದರು. ಚುನಾವಣೆ ಹಿನ್ನೆಲೆ ನಿರಂತರ ಪ್ರಚಾರದಲ್ಲಿ ತೊಡಗಿಕೊಂಡಿರುವ ಸಿಎಂ ಕಳೆದ ಎರಡು ದಿನಗಳಿಂದ ಸರಿಯಾಗಿ ವಿಶ್ರಾಂತಿ ಸಹ ಪಡೆದುಕೊಂಡಿರಲಿಲ್ಲ. ಈ ಹಿನ್ನೆಲೆ ಕಡಿಮೆ ರಕ್ತದೊತ್ತಡದಿಂದಾಗಿ ಕುಸಿದಿದ್ದಾರೆ ಎಂದು ವರದಿಯಾಗಿದೆ.

    ವಡೋದರ ಸೇರಿದಂತೆ 6 ಮಹಾನಗರ ಪಾಲಿಕೆಗಳಲ್ಲಿ ಫೆಬ್ರವರಿ 21ರಂದು ಚುನಾವಣೆ ನಡೆಯಲಿದೆ. ಇತ್ತ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಸಿಎಂ ಆರೋಗ್ಯ ವಿಚಾರಿಸಿದ್ದಾರೆ ಡಿಸಿಎಂ ನಿತಿನ್ ಪಟೇಲ್ ಹೇಳಿದ್ದಾರೆ.

  • ಕೊರೊನಾ ಸಂಕಷ್ಟ ಕಾಲದಲ್ಲಿ ಚುನಾವಣಾ ತಾಲೀಮು- ಬದಲಾಯ್ತು ಪ್ರಚಾರ ತಂತ್ರ

    ಕೊರೊನಾ ಸಂಕಷ್ಟ ಕಾಲದಲ್ಲಿ ಚುನಾವಣಾ ತಾಲೀಮು- ಬದಲಾಯ್ತು ಪ್ರಚಾರ ತಂತ್ರ

    ಕೋಲ್ಕತ್ತಾ: ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸಂಕಷ್ಟದ ನಡುವೆ ಚುನಾವಣಾ ತಾಲೀಮು ಆರಂಭವಾಗಿದ್ದು, ಬೃಹತ್ ವರ್ಚುವಲ್ ಚುನಾವಣಾ ರ‍್ಯಾಲಿಗಳು ನಡೆಸುವ ಬಗ್ಗೆ ಚಿಂತನೆಗಳು ಶುರುವಾಗಿದೆ.

    ಆಡಳಿತ ಪಕ್ಷ ತೃಣಮೂಲ ಕಾಂಗ್ರೆಸ್ ಜುಲೈ 21ರಂದು ಪ್ರತಿವರ್ಷ ಹುತಾತ್ಮರ ದಿನಾಚರಣೆ ಆಚರಿಸುತ್ತಿದ್ದು, ಅಂದು ಬೃಹತ್ ಸಮಾವೇಶ ನಡೆಸಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಸಂಕಷ್ಟ ಹಿನ್ನೆಲೆ ವರ್ಚುವಲ್ ತಂತ್ರಜ್ಞಾನದ ಮೂಲಕವೇ ಹುತಾತ್ಮರ ದಿನಾಚರಣೆ ಆಚರಿಸಲು ತಿರ್ಮಾನಿಸಿದೆ. ಅದೇ ಕಾರ್ಯಕ್ರಮದಲ್ಲಿ 2021ರ ವಿಧಾನಸಭೆ ಚುನಾವಣೆ ಪ್ರಚಾರಕ್ಕೂ ಚಾಲನೆ ಸಿಗಲಿದೆ ಎನ್ನಲಾಗಿದೆ.

    ಜುಲೈ 21ರಂದು ಮಧ್ಯಾಹ್ನ ಒಂದು ಗಂಟೆಗೆ ಪ್ರತಿ ಬೂತ್ ಮಟ್ಟದಲ್ಲಿ 30 ಕಾರ್ಯಕರ್ತರು ಸೇರಿ ಧ್ವಜ ಹಾರಿಸುವ ಮೂಲಕ ಹುತಾತ್ಮರ ಗೌರವ ಸಲ್ಲಿಸಬೇಕು ಎಂದು ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ. ಬಳಿಕ ಎರಡು ಗಂಟೆಯಿಂದ ಮೂರು ಗಂಟೆವರೆಗೂ ಸಿಎಂ ಮಮತಾ ಬ್ಯಾನರ್ಜಿ ಮಾತನಾಡಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 80 ಸಾವಿರ ಬೂತ್‍ಗಳಿದ್ದು ಸುಮಾರು 2.5 ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

    ಈಗಾಗಲೇ ಬಿಜೆಪಿ ಸಕ್ರಿಯವಾಗಿ ಕ್ಯಾಂಪೇನ್ ಆರಂಭಿಸಿದೆ. ಇತ್ತಿಚೇಗೆ ಗೃಹ ಸಚಿವ ಅಮಿತ್ ಶಾ ವಿಡಿಯೋ ಕಾನ್ಫರೆನ್ಸ್ ಮೂಲಕ ಜನ ಸಂವಾದ ಹೆಸರಿನಲ್ಲಿ ವರ್ಚುವಲ್ ರ‍್ಯಾಲಿ ನಡೆಸಿದ್ದರು. ಈ ಡಿಜಿಟಲ್ ರ‍್ಯಾಲಿಗಾಗಿ ಪಶ್ಚಿಮ ಬಂಗಾಳದ ಪ್ರಮುಖ ಸ್ಥಳಗಳಲ್ಲಿ 70,000 ಟೆಲಿವಿಷನ್ ಸೆಟ್‍ಗಳನ್ನು ಹಾಕುವ ಮೂಲಕ ಲಕ್ಷಾಂತರ ಜನರು ಭಾಷಣ ಕೇಳಲು ಅನುವು ಮಾಡಿಕೊಡಲಾಗಿತ್ತು.

    ಈ ವರ್ಷದ ಕೊನೆಯಲ್ಲಿ ಬಿಹಾರ ವಿಧಾನಸಭೆಗೂ ಚುನಾವಣೆ ನಡೆಯಲಿದ್ದು, ಇತಿಹಾಸದಲ್ಲಿ ಮೊದಲ ಬಾರಿಗೆ ವರ್ಚುವಲ್ ರ‍್ಯಾಲಿಗಳು ಅತಿಹೆಚ್ಚು ಪ್ರಾಮುಖ್ಯತೆ ಪಡೆದುಕೊಳ್ಳುವ ಸಾಧ್ಯತೆಗಳಿದೆ ಎನ್ನಲಾಗಿದೆ. ಇದಕ್ಕಾಗಿ ರಾಜಕೀಯ ಪಕ್ಷಗಳು ಪೂರ್ವ ತಯಾರಿ ಆರಂಭಿಸಿವೆ.

  • ಮಂಗಳಮುಖಿಯರ ಆಶೀರ್ವಾದ ಪಡೆದ ಪ್ರಜ್ವಲ್ ರೇವಣ್ಣ!

    ಮಂಗಳಮುಖಿಯರ ಆಶೀರ್ವಾದ ಪಡೆದ ಪ್ರಜ್ವಲ್ ರೇವಣ್ಣ!

    ಹಾಸನ: ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಚುನಾವಣಾ ಪ್ರಚಾರಕ್ಕೆ ಮನೆಯಿಂದ ಹೊರಡುವ ಮುನ್ನ ಮಂಗಳಮುಖಿಯರ ಆಶೀರ್ವಾದ ಪಡೆದಿದ್ದಾರೆ.

    ಹೊಳೇನರಸೀಪುರ ಪಟ್ಟಣದಲ್ಲಿರುವ ಸಚಿವ ಹೆಚ್.ಡಿ.ರೇವಣ್ಣನವರ ಮನೆಯಲ್ಲಿ ಪ್ರಜ್ವಲ್‍ಗೆ ವಿಶೇಷವಾಗಿ ಮಂಗಳಮುಖಿಯರು ಆಶೀರ್ವಾದ ಮಾಡಿದ್ದಾರೆ. ಪ್ರಜ್ವಲ್ ಅವರಿಗೆ ಆರತಿ ಎತ್ತಿ, ದೃಷ್ಟಿ ತೆಗೆದು ತಮ್ಮ ಜೋಳಿಗೆಯಿಂದ ಒಂದು ರೂಪಾಯಿ ಮಂಗಳಮುಖಿಯರು ಕೊಟ್ಟು ಒಳ್ಳೆಯದಾಗಲಿ ಎಂದು ದೇವೇಗೌಡರ ಮೊಮ್ಮಗನಿಗೆ ಆಶೀರ್ವದಿಸಿದ್ದಾರೆ.

    ಮಂಗಳಮುಖಿಯರು ಆಶೀರ್ವಾದ ಮಾಡಿದ್ದಕ್ಕೆ ಐನೂರು ರೂಪಾಯಿ ಕೊಟ್ಟು ಒಂದು ರೂಪಾಯಿಯನ್ನು ಪ್ರಜ್ವಲ್ ವಾಪಸ್ ಪಡೆದುಕೊಂಡರು. ಈ ವೇಳೆ ಪ್ರಜ್ವಲ್ ಅವರ ತಾಯಿ ಕೂಡ ಮಗನೊಂದಿಗೆ ಮಂಗಳಮುಖಿಯರ ಆಶೀರ್ವಾದ ಪಡೆದುಕೊಂಡರು.

    ಲೋಕಸಭೆ ಚುನಾವಣೆಗೆ ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅವರು ಸ್ಪರ್ಧಿಸುವ ಸಾಧ್ಯತೆಯಿದ್ದು, ಇಂದಿನಿಂದ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪ್ರಜ್ವಲ್ ಅವರು, ನನಗೆ ಇನ್ನೂ ಹಾಸನದಿಂದ ಚುನಾವಣೆಗೆ ಸೀಟು ಖಚಿತವಾಗಿಲ್ಲ. ಆದ್ರೆ ಕಳೆದ 3 ತಿಂಗಳಿಂದ ಪಕ್ಷದ ಕಾರ್ಯಕರ್ತರು ಜೆಡಿಎಸ್ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ನನಗೆ ಸೀಟು ಸಿಗದಿದ್ದರೂ ನಾನು ಪಕ್ಷದ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಹುಲ್ ಗಾಂಧಿಯನ್ನ ‘ಪಪ್ಪು’ ಅಂತಾ ಕರೆದು ಪೇಚಿಗೆ ಸಿಲುಕಿದ ಬಿಜೆಪಿ ಸಂಸದ

    ರಾಹುಲ್ ಗಾಂಧಿಯನ್ನ ‘ಪಪ್ಪು’ ಅಂತಾ ಕರೆದು ಪೇಚಿಗೆ ಸಿಲುಕಿದ ಬಿಜೆಪಿ ಸಂಸದ

    ಜೈಪುರ: ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ಬಿಸಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬಿಜೆಪಿ ಸಂಸದರೊಬ್ಬರು ಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ‘ಪಪ್ಪು’ ಎಂದು ಕರೆಯುವ ಮೂಲಕ ಪೇಚಿಗೆ ಸಿಲುಕಿದ್ದಾರೆ. ಮಹಿಳೆ ಸಂಸದರನ್ನು ಪ್ರಶ್ನೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಸುರೇಂದ್ರನಗರ ಕ್ಷೇತ್ರದ ಬಿಜೆಪಿ ಸಂಸದ ದೇವಜಿ ಭಾಯಿ ಅವರು ಚುನಾವಣೆ ಪ್ರಚಾರದಲ್ಲಿ ರಾಹುಲ್ ಗಾಂಧಿ ಅವರನ್ನು ‘ಪಪ್ಪು’ ಎಂದು ಕರೆದಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದಾಗ, ದೇವಜಿ ಭಾಯಿ ವಾರ್ಡ್ 36ರಲ್ಲಿ ಕಾರ್ಯಕರ್ತರೊಂದಿಗೆ ಬೈಠಕ್ ಮಾಡುತ್ತಿದ್ದರು.

    ಈ ವೇಳೆ ಅಲ್ಲಿಗೆ ಬಂದ ಸೀತಾ ದಾಮೋರ್, ನಗರದ ರಸ್ತೆಗಳೆಲ್ಲ ಗುಂಡಿಗಳಿಂದ ತುಂಬಿಕೊಂಡಿವೆ. ರಸ್ತೆ ಕಾಮಗಾರಿ ಕಷ್ಟವಾದ್ರೆ ಕನಿಷ್ಠ ಗುಂಡಿಗಳನ್ನಾದರು ಮುಚ್ಚಿ ಎಂದು ಮನವಿ ಮಾಡಿಕೊಂಡರು. ಬೈಠಕ್ ನಲ್ಲಿ ಕಾಣಿಸಿಕೊಂಡ ಮಹಿಳೆ ಯಾರು ಅಂತಾ ತಿಳಿಯದೇ ಸಂಸದರು ಆಪ್ತರ ಬಳಿ ಯಾರು ಆಕೆ ಎಂದು ಪ್ರಶ್ನೆ ಮಾಡಿದ್ದಾರೆ. ಆಪ್ತರೊಬ್ಬರು ಅವರು ಕಾಂಗ್ರೆಸ್ ಕೌನ್ಸಿಲರ್ ಅಂತಾ ಪರಿಚಯ ಮಾಡಿಸಿಕೊಟ್ಟಿದ್ದಾರೆ.

    ಮಹಿಳೆ ಕಾಂಗ್ರೆಸ್ ನವರು ಅಂತ ತಿಳಿಯುತ್ತಲೇ, ಕೋಪಗೊಂಡ ಸಂಸದರು `ನಿಮ್ಮ ಪಪ್ಪುಗೆ ಹೇಳಿ ಗುಂಡಿ ಮುಚ್ತಾರೆ’ ಎಂದು ವ್ಯಂಗ್ಯವಾಡಿದ್ದಾರೆ. ತಮ್ಮ ಪಕ್ಷದ ಅಧ್ಯಕ್ಷರನ್ನು ವ್ಯಂಗ್ಯ ಮಾಡಿದಾಗ ಸೀತಾ ದಾಮೋರ, ಓರ್ವ ಸಂಸದರಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡೋದು ಸರಿ ಅಲ್ಲ. ಪಪ್ಪು ಎಂದು ಹೇಗೆ ಹೇಳಿದ್ರಿ ಎಂದು ಪ್ರಶ್ನೆ ಮಾಡಿದ್ರಿ ಅಂತಾ ಆಕ್ರೋಶ ಹೊರಹಾಕಿದರು.

    ದೇವಜಿ ಭಾಯಿ ಎಲ್ಲರೂ ಪಪ್ಪು ಅಂತಾ ಕರೆಯುತ್ತಾರೆ. ಹಾಗಾಗಿ ನಾನು ಪಪ್ಪು ಎಂದು ಕರೆದೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇಬ್ಬರ ನಡುವಿನ ವಾಗ್ವಾದ ಜೋರಾಗುತ್ತಿದ್ದಂತೆ ಸ್ಥಳದಲ್ಲಿ ಬಿಜೆಪಿ ಕಾರ್ಯಕರ್ತೆ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಕೂಗಲು ಆರಂಭಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.

    ಘಟನೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸೀತಾ ದಾಮೋರ, ಸಂಸದರಾಗಿ ಈ ರೀತಿ ಮಾತನಾಡೋದು ಸರಿ ಅಲ್ಲ. ಘಟನೆ ಬಳಿಕ ದೇವಜಿ ಭಾಯಿ ತಮ್ಮ ಹೇಳಿಕೆ ನನ್ನಲ್ಲಿ ಕ್ಷಮೆ ಕೇಳಿದ್ದಾರೆ ಎಂದು ತಿಳಿಸಿದ್ದಾರೆ.

    https://www.youtube.com/watch?v=dX7CemLTQhE

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುದೀಪ್ ರಾಜಕೀಯ ಅಖಾಡಕ್ಕೆ ಇಳಿಯೋದು ಪಕ್ಕಾ- ಚುನಾವಣೆಯಲ್ಲಿ ಮಾತ್ರ ಸ್ಪರ್ಧೆ ಮಾಡಲ್ಲ!

    ಸುದೀಪ್ ರಾಜಕೀಯ ಅಖಾಡಕ್ಕೆ ಇಳಿಯೋದು ಪಕ್ಕಾ- ಚುನಾವಣೆಯಲ್ಲಿ ಮಾತ್ರ ಸ್ಪರ್ಧೆ ಮಾಡಲ್ಲ!

    ಬೆಂಗಳೂರು: ಸ್ಯಾಂಡಲ್‍ವುಡ್ ಮಾಣಿಕ್ಯ ಸುದೀಪ್ ರಾಜಕೀಯ ಅಖಾಡಕ್ಕೆ ಇಳಿಯುವುದು ಹೆಚ್ಚು ಕಡಿಮೆ ಪಕ್ಕಾ ಆಗಿದೆ. ಹೀಗೆಂದ ಕೂಡಲೇ ಯಾವ ಕ್ಷೇತ್ರ? ಯಾವ ಪಕ್ಷ? ಎಂದು ಪ್ರಶ್ನೆ ಕೇಳಿದ್ರೆ ನಿಮಗೆ ಉತ್ತರ ಸಿಗಲ್ಲ. ಸುದೀಪ್ ಚುನವಾಣೆಗೆ ಸ್ಪರ್ಧೆ ಮಾಡದೇ ಜೆಡಿಎಸ್ ಅಭ್ಯರ್ಥಿಗಳ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಅಂತಾ ಹೇಳಲಾಗುತ್ತಿದೆ.

    ಮಾಜಿ ಸಿಎಂ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ವೇಳೆ ಕಿಚ್ಚ ಭೇಟಿಯಾಗಿದ್ರು. ಈ ವೇಳೆ ಸುದೀಪ್ ನಾನು ಚುನಾವಣೆಗೆ ಸ್ಪರ್ಧೆ ಮಾಡಲ್ಲ. ಆದ್ರೆ ಪ್ರಚಾರ ಮಾಡುವ ಮನಸ್ಸಿದೆ ಅಂತಾ ಹೇಳಿದ್ದಾರೆ. ನಾಯಕ ಸಮುದಾಯದ ಮತಗಳನ್ನು ಸೆಳೆಯೋಕೆ ಕಿಚ್ಚನನ್ನು ಬಳಸಿಕೊಳ್ಳೋಕೆ ಜೆಡಿಎಸ್ ಕೂಡ ಒಳಗೊಳಗೇ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಹೇಳಲಾಗ್ತಿದೆ.

    ಚಿತ್ರದುರ್ಗ, ಚಳ್ಳಕೆರೆ, ಬಳ್ಳಾರಿಯ ಸುತ್ತಮುತ್ತ ಭಾಗಗಳಲ್ಲಿ ಜೆಡಿಎಸ್ ಪರವಾಗಿ ಸುದೀಪ್ ಪ್ರಚಾರ ಮಾಡುವ ಸಾಧ್ಯತೆಗಳಿವೆ. ಕುಮಾರಸ್ವಾಮಿ ಅವರ ಹುಟ್ಟು ಹಬ್ಬದಂದು ಸುದೀಪ್ ಖುದ್ದು ತಾವೇ ಅಡುಗೆ ಮಾಡಿ, ಉಣಬಡಿಸಿದ್ದರು. ಅಂದು ಇಬ್ಬರೂ ಸುದೀರ್ಘ 2 ಗಂಟೆಗಳ ಕಾಲ ಮಾತುಕತೆ ನಡೆಸಿದ್ದರು.

  • ಎತ್ತಿನ ಗಾಡಿ ಏರಿ ಗುಜರಾತ್ ನಲ್ಲಿ ರಾಹುಲ್ ಗಾಂಧಿ ಪ್ರಚಾರ

    ಎತ್ತಿನ ಗಾಡಿ ಏರಿ ಗುಜರಾತ್ ನಲ್ಲಿ ರಾಹುಲ್ ಗಾಂಧಿ ಪ್ರಚಾರ

    ಗಾಂಧಿನಗರ: ಗುಜರಾತ್ ಸೌರಷ್ಟ್ರದಲ್ಲಿ ತೆರೆದ ವಾಹನದಲ್ಲಿ ಪ್ರಚಾರ ಮಾಡಲು ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಎತ್ತಿನ ಗಾಡಿ ಏರಿ ಪ್ರಚಾರ ಆರಂಭಿಸಿದ್ದಾರೆ.

    ವಿಧಾನಸಭಾ ಚುನಾವಣೆ ಪ್ರಯುಕ್ತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಇಂದಿನಿಂದ ಮೂರು ದಿನಗಳ ಕಾಲ ಗುಜರಾತ್‍ನಲ್ಲಿ ಪ್ರಚಾರ ನಡೆಸಲಿದ್ದಾರೆ. ಆದರೆ ಪೊಲೀಸರು ರಸ್ತೆಯಲ್ಲಿ ತೆರೆದ ವಾಹನದಲ್ಲಿ ಪ್ರಚಾರ ಮಾಡಲು ಅನುಮತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಎತ್ತಿನ ಗಾಡಿ ಏರಿ ಪ್ರಚಾರ ಕಾರ್ಯ ಆರಂಭಿಸಿದರು.

    ದ್ವಾರಕದ ದೇವಾಲಯದಲ್ಲಿ ರಾಹುಲ್ ಗಾಂಧಿ ಪ್ರಾರ್ಥನೆ ಸಲ್ಲಿಸಿದರು. ದ್ವಾರಕ, ಜಾಮ್‍ನಗರ, ಮೋರ್ಬಿ, ರಾಜ್‍ಕೋಟ್ ಮತ್ತು ಸುರೇಂದ್ರನಗರ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಪ್ರಚಾರವನ್ನು ಮಾಡಲಿದ್ದಾರೆ.

    ಗುಜರಾತ್ ವಿಧಾನಸಭೆಯ ಒಟ್ಟು 182 ಸ್ಥಾನಗಳ ಪೈಕಿ 56 ಸ್ಥಾನಗಳು ಸೌರಾಷ್ಟ್ರದಲ್ಲಿದೆ. ಇಲ್ಲಿ ಪಟೇಲ್ ಸಮುದಾಯದವರು ಪ್ರಬಲರಾಗಿದ್ದು, ಈ ಮತಗಳನ್ನು ಸೆಳೆಯಲು ರಾಹುಲ್ ಗಾಂಧಿ ಇಲ್ಲಿಂದಲೇ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ ಎಂದು ಹೇಳಲಾಗಿದೆ.

    ಆಗಸ್ಟ್‍ನಲ್ಲಿ ನಡೆದ ಗುಜರಾತ್ ರಾಜ್ಯಸಭಾ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಅವರ ರಾಜಕೀಯ ಸಲಹೆಗಾರ ಅಹ್ಮದ್ ಪಟೇಲ್ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ ಎಂದು ಮೊದಲು ನಿರೀಕ್ಷೆ ಮಾಡಲಾಗಿತ್ತಾದರೂ ಕೊನೆಯಲ್ಲಿ ಭಾರೀ ಕಷ್ಟದಿಂದ ಗೆಲುವು ಸಾಧಿಸಿದ್ದರು. ಹಿರಿಯ ನಾಯಕ ಶಂಕರ್ ಸಿಂಗ್ ವಘೇಲಾ ರಾಜೀನಾಮೆ ಜೊತೆ 14 ಮಂದಿ ಶಾಸಕರು ಕಾಂಗ್ರೆಸ್ ಗೆ ಗುಡ್‍ಬೈ ಹೇಳಿದ್ದರು.

    ಮಂಗಳವಾರ ಬೆಳಗ್ಗೆ ರಾಹುಲ್ ಗಾಂಧಿ ತಂಕಾರಾ ಮತ್ತು ವಂಕಾನರ್‍ನಿಂದ ರಾಜ್‍ಕೋಟಾಗೆ ಹೋಗುತ್ತಾರೆ. ಅಲ್ಲಿ ವ್ಯಾಪಾರಿಗಳನ್ನು ಭೇಟಿ ಮಾಡಿ ಹೊಸದಾಗಿ ಜಾರಿಯಾದ ಜಿಎಸ್‍ಟಿ, ಕಳೆದ ನವೆಂಬರ್‍ನಿಂದ ಹಣ್ಣು, ತರಕಾರಿಗಳ ಬೆಲೆ ಏರಿಳಿತ ಇತರೆ ಸಮಸ್ಯೆಗಳ ಬಗ್ಗೆ ಕುರಿತು ಚರ್ಚಿಸಲಿದ್ದಾರೆ.

    ಕೊನೆಯ ದಿನದಂದು ಸುರೇಂದ್ರನಗರದಲ್ಲಿರುವ ಎರಡು ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ. ಮೊದಲು ಚೋಟೈಲ್‍ನಲ್ಲಿರುವ ಬೆಟ್ಟದ ದೇವಸ್ಥಾನ ಮತ್ತು ಎರಡನೆದಾಗಿ ಕಾಗ್ವಾಡದಲ್ಲಿರುವ ಖೊಡಾಲ್ಧಾಮ್ ದೇವಸ್ಥಾನಕ್ಕೆ ತೆರಳುತ್ತಾರೆ. ಇದು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಪ್ರಭಾವಶಾಲಿಯಾದ ದೇವರಾಗಿದೆ.

    ಮೂರು ದಶಕಗಳ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಹಿರಿಯ ನಾಯಕರು ಮೂರು ದಿನಗಳ ಕಾಲ ಗುಜರಾತ್ ನಲ್ಲಿ ತಡೆರಹಿತ ಪ್ರಚಾರವನ್ನು ನಡೆಸುತ್ತಿದ್ದಾರೆ. 1881ರಲ್ಲಿ ದಿವಂಗತ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಅವರು ಗುಜರಾತ್‍ನಲ್ಲಿ ಎರಡು ದಿನಗಳ ಕಾಲ ಪ್ರಚಾರ ನಡೆಸಿದ್ದರು ಎಂದು ಪಕ್ಷದ ವಕ್ತಾರ ಶಕ್ತಿ ಸಿಂಗ್ ಗೊಹಿಲ್ ಹೇಳಿದ್ದಾರೆ.