Tag: ಚೆಕ್ ಪೋಸ್ಟ್

  • ಬಾಗಲಕೋಟೆಯಲ್ಲಿ ಮೂರು ಚೆಕ್ ಪೋಸ್ಟ್ – ಸರ್ಕಾರಿ, ಖಾಸಗಿ ವಾಹನಗಳಲ್ಲಿ ಬರುವವರ ತಪಾಸಣೆ

    ಬಾಗಲಕೋಟೆಯಲ್ಲಿ ಮೂರು ಚೆಕ್ ಪೋಸ್ಟ್ – ಸರ್ಕಾರಿ, ಖಾಸಗಿ ವಾಹನಗಳಲ್ಲಿ ಬರುವವರ ತಪಾಸಣೆ

    ಬಾಗಲಕೋಟೆ: ಕೊರೊನಾ ಭೀತಿ ಹಿನ್ನೆಲೆ ಬಾಗಲಕೋಟೆ ಜಿಲ್ಲೆಯ ಮೂರು ಕಡೆಗಳಲ್ಲಿ ಜಿಲ್ಲಾಡಳಿತ ಚೆಕ್ ಪೋಸ್ಟ್ ತೆರೆಯುವ ಮೂಲಕ ಪ್ರಯಾಣಿಕರಿಗೆ ಸ್ಕ್ರೀನಿಂಗ್ ಮಾಡುತ್ತಿದೆ.

    ಜಿಲ್ಲೆಯ ಇಳಕಲ್ ತಾಲೂಕಿನ ಗುಗ್ಗಲಮರಿ, ಮುಧೋಳ ತಾಲೂಕಿನ ಲೋಕಾಪುರ, ಬಾದಾಮಿ ತಾಲೂಕಿನ ಕುಳಗೇರಿ ಬಳಿಯಲ್ಲಿ ಜಿಲ್ಲಾಡಳಿತ ಚೆಕ್ ಪೋಸ್ಟ್‌ಗಳನ್ನು ತೆರೆದಿದೆ. ಶನಿವಾರ ರಾತ್ರಿಯಿಂದಲೇ ಈ ಚೆಕ್ ಪೋಸ್ಟ್‌ಗಳು ಕಾರ್ಯನಿರ್ವಹಿಸುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಗೆ ಬರುವ ಪ್ರತಿಯೊಬ್ಬರನ್ನು ಸ್ಕ್ರೀನಿಂಗ್ ಮಾಡಲಾಗುತ್ತಿದೆ.

    ಇಳಕಲ್ ತಾಲೂಕಿನ ಗುಗ್ಗಲಮರಿ ಚೆಕ್ ಪೋಸ್ಟ್‌ನಲ್ಲಿ ಶನಿವಾರ ರಾತ್ರಿಯಿಂದ ಬೆಳಿಗ್ಗೆಯವರೆಗೆ 65 ಪ್ರಯಾಣಿಕರ ಸ್ಕ್ರೀನಿಂಗ್ ಮಾಡಲಾಗಿದೆ. ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಬರುವ ಪ್ರತಿ ಬಸ್ ಪ್ರಯಾಣಿಕರನ್ನು ಸ್ಕ್ರೀನಿಂಗ್ ಮಾಡಲಾಗಿದೆ. ಕೆಎಸ್‌ಆರ್‌ಟಿಸಿ ಸೇರಿ ಎಲ್ಲಾ ಖಾಸಗಿ ವಾಹನಗಳ ತಪಾಸಣೆ ಕೂಡಾ ಮಾಡಲಾಗುತ್ತಿದೆ.

    ಮಕ್ಕಳು, ಮಹಿಳೆಯರು ಸೇರಿ ಬಸ್‍ನಲ್ಲಿದ್ದ ಪ್ರತಿಯೊಬ್ಬರನ್ನು ಸ್ಕ್ರೀನಿಂಗ್‍ಗೆ ಒಳಪಡಿಸಲಾಗುತ್ತಿದೆ. ಪ್ರತಿಯೊಂದು ಚೆಕ್ ಪೋಸ್ಟ್‌ಗಳಿಗೂ ಆಯಾ ತಾಲೂಕಿನ ವೈದ್ಯಾಧಿಕಾರಿಗಳು, ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ವೈದ್ಯರು, ನರ್ಸ್‍ಗಳನ್ನು ನಿಯೋಜನೆ ಮಾಡಲಾಗಿದೆ.

  • ಬೇರಂಬಾಡಿ ಬಳಿ ಸ್ಯಾಟಲೈಟ್ ಬಳಕೆ ಪತ್ತೆ – ಚೆಕ್ ಪೋಸ್ಟ್‌ಗಳಲ್ಲಿ ತೀವ್ರ ಕಟ್ಟೆಚ್ಚರ

    ಬೇರಂಬಾಡಿ ಬಳಿ ಸ್ಯಾಟಲೈಟ್ ಬಳಕೆ ಪತ್ತೆ – ಚೆಕ್ ಪೋಸ್ಟ್‌ಗಳಲ್ಲಿ ತೀವ್ರ ಕಟ್ಟೆಚ್ಚರ

    ಚಾಮರಾಜನಗರ: ಕೇರಳದಲ್ಲಿ ನಾಲ್ವರು ನಕ್ಸಲರ ಹತ್ಯೆ ಹಿನ್ನೆಲೆಯಲ್ಲಿ ಚಾಮರಾಜನಗರದ ಗಡಿಭಾಗದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

    ಗಡಿಭಾಗದ ಬಂಡೀಪುರ ಅರಣ್ಯಕ್ಕೆ ನಕ್ಸಲರು ನುಸುಳುವ ಸಾಧ್ಯತೆಗಳಿರುವುದರಿಂದ ಕರ್ನಾಟಕ ಕೇರಳ ಗಡಿಭಾಗದ ಮೂಲೆಹೊಳೆ ಹಾಗೂ ಕರ್ನಾಟಕ ತಮಿಳುನಾಡು ಗಡಿಭಾಗದ ಕೆಕ್ಕನಹಳ್ಳ ಬಳಿ ನಕ್ಸಲ್ ನಿಗ್ರಹದಳ ಹಾಗೂ ಜಿಲ್ಲಾ ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಪೊಲೀಸರಿಂದ ಗುಂಡಿನ ದಾಳಿ – ಮೂವರು ಮಾವೋವಾದಿಗಳು ಹತ್ಯೆ

    ನಕ್ಸಲ್ ನಿಗ್ರಹದಳದ ಜೊತೆಗೆ ಜಿಲ್ಲಾ ಪೊಲೀಸ್‍ನ 10 ಮಂದಿ ಕಮಾಂಡೋಗಳನ್ನು ಕಾರ್ಯಾಚರಣೆಗೆ ನಿಯೋಜನೆ ಮಾಡಲಾಗಿದ್ದು, ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈ ಮಧ್ಯೆ ಗುಂಡ್ಲುಪೇಟೆ ತಾಲೂಕು ಗಡಿಭಾಗದ ಬೇರಂಬಾಡ ಬಳಿ ಸ್ಯಾಟಲೈಟ್ ಫೋನ್ ಬಳಕೆ ಆಗಿರುವುದು ಕಂಡು ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಎಸ್‍ಪಿ ಆನಂದಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಮಾವೋವಾದಿಗಳ ಹತ್ಯೆ – ಚಿಕ್ಕಮಗಳೂರಿನ ಇಬ್ಬರು ಸಾವು

    ಸ್ಯಾಟಲೈಟ್ ಫೋನ್ ಅನ್ನು ನಕ್ಸಲರು ಬಳಸಿದ್ದಾರೋ ಅಥವಾ ಬೇರೆ ಯಾರಾದರು ಬಳಸಿದ್ದಾರೋ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಇದೂವರೆಗೆ ನಕ್ಸಲರ ಚಟುವಟಿಕೆ ಕಂಡು ಬಂದಿಲ್ಲ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ನಕ್ಸಲರ ಜೊತೆಗೆ ಗಿರಿಜನರು ಕೈ ಜೋಡಿಸದಂತೆ ಮನವಿ ಮಾಡಲಾಗಿದೆ. ಗಿರಿಜನ ಯುವಕರಿಗೆ ಉದ್ಯೋಗಾವಾಕಾಶ ಕಲ್ಪಿಸಲು ಚಿಂತನೆ ನಡೆಸಲಾಗಿದೆ ಎಂದು ಆನಂದಕುಮಾರ್ ಹೇಳಿದ್ದಾರೆ.

  • ಜೇಬಿಗೆ ದುಡ್ಡು ಇಟ್ಟರೆ ನೋ ಚೆಕ್ಕಿಂಗ್ – ಕೋಳಿ, ತರಕಾರಿ, ಅಕ್ಕಿ ರೂಪದಲ್ಲಿ ಪೊಲೀಸರಿಂದ ವಸೂಲಿ

    ಜೇಬಿಗೆ ದುಡ್ಡು ಇಟ್ಟರೆ ನೋ ಚೆಕ್ಕಿಂಗ್ – ಕೋಳಿ, ತರಕಾರಿ, ಅಕ್ಕಿ ರೂಪದಲ್ಲಿ ಪೊಲೀಸರಿಂದ ವಸೂಲಿ

    ಮೈಸೂರು: ಎಚ್.ಡಿ ಕೋಟೆಯ ಅಂತರಸಂತೆ ಉಪಠಾಣೆಯ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಸೂಲಿ ದಂಧೆಗೆ ಇಳಿದಿದ್ದಾರೆ. ಕರ್ನಾಟಕ ಭಾಗದಿಂದ ಕೇರಳಕ್ಕೆ ಸಾಗುವ ಹಾಗೂ ಕೇರಳದಿಂದ ಕರ್ನಾಟಕಕ್ಕೆ ಸಾಗುವ ವಾಹನಗಳೇ ಚೆಕ್ ಪೋಸ್ಟ್ ನಲ್ಲಿರುವ ಪೊಲೀಸರ ಟಾರ್ಗೆಟ್ ಆಗಿದೆ.

    ವಾಹನದಲ್ಲಿ ಏನ್ ಸಾಗಿಸಿದರೂ ಪೊಲೀಸರು ತಪಾಸಣೆ ಮಾಡುವುದಿಲ್ಲ. ಅವರು ಕುಳಿತ್ತಿದ್ದ ಸ್ಥಳಕ್ಕೆ ಹೋಗಿ ನೂರು ಅಥವಾ ಐನೂರು ರೂ. ಕೊಡಬೇಕು. ಅಷ್ಟೇ ಅಲ್ಲದೆ, ವಾಹನಗಳಲ್ಲಿ ಕೋಳಿ ಸಾಗಿಸುತ್ತಿದ್ದರೆ, ಅದನ್ನು ಪೊಲೀಸರು ವಸೂಲಿ ರೂಪದಲ್ಲಿ ಪಡೆದುಕೊಳ್ಳುತ್ತಾರೆ.

    ಕೋಳಿ ಅಲ್ಲದೆ ತರಕಾರಿ, ಅಕ್ಕಿಯನ್ನು ಕೂಡ ವಸೂಲಿ ರೂಪದಲ್ಲಿ ಪಡೆಯುತ್ತಾರೆ. ಚೆಕ್ ಪೋಸ್ಟ್ ನಲ್ಲಿ ಪೊಲೀಸರ ಈ ವಸೂಲಿ ದಂಧೆ ಕ್ಯಾಮೆರಾದಲ್ಲಿ ಸೆರೆಯಾಗಿದೆ.

  • ಮಂಡ್ಯದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.60 ಲಕ್ಷ ರೂ. ವಶ

    ಮಂಡ್ಯದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.60 ಲಕ್ಷ ರೂ. ವಶ

    ಮಂಡ್ಯ: ಅಕ್ರಮವಾಗಿ ಸಾಗಿಸುತ್ತಿದ್ದ 2,60,500 ರೂಪಾಯಿ ಹಣವನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

    ನಾಗಮಂಗಲ ತಾಲೂಕಿನ ಬೆಂಗಳೂರು-ಮಂಗಳೂರು ಹೆದ್ದಾರಿಯ ಕದಬಹಳ್ಳಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ಹಣ ಸಿಕ್ಕಿದೆ. ಉಡುಪಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರನ್ನು ತಪಾಸಣೆ ನಡೆಸಿದಾಗ ಹಣ ಪತ್ತೆಯಾಗಿದ್ದು, ಚುನಾವಣಾ ಅಧಿಕಾರಿಗಳು ಆ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಗುರುವಾರ ಮತದಾನ ಇರುವುದರಿಂದ ಚುನಾವಣಾ ಅಧಿಕಾರಿಗಳು ಮಂಡ್ಯ ಜಿಲ್ಲೆಯಲ್ಲಿ ಹದ್ದಿನ ಕಣ್ಣನ್ನು ಇಟ್ಟಿದ್ದಾರೆ. ಮಂಡ್ಯದಲ್ಲಿ ಅಕ್ರಮ ಕಡಿವಾಣಕ್ಕೆ ಐಟಿ ಹಾಗೂ ಚುನಾವಣಾಧಿಕಾರಿಗಳು ಚಕ್ರವ್ಯೂಹ ರಚಿಸಿದ್ದಾರೆ. ಸುಮಾರು 50 ಕಡೆಗಳಲ್ಲಿ ಐಟಿ ತಂಡ ಸಿಸಿಟಿವಿ ಅಳವಡಿಸಿದ್ದು, ಮಂಗಳವಾರ ರಾತ್ರಿಯೇ ಐಟಿ ಅಧಿಕಾರಿಗಳ ತಂಡ ಮಂಡ್ಯಕ್ಕೆ ಶಿಫ್ಟ್ ಆಗಿದೆ.

    ಒಟ್ಟು 15ಕ್ಕೂ ಹೆಚ್ಚು ಕೇಂದ್ರಗಳ ಮೇಲೆ ಐಟಿ ತಂಡ ಹದ್ದಿನ ಕಣ್ಣನ್ನು ಇಟ್ಟಿದೆ. ತೋಟದ ಮನೆ, ಸಿನಿಮಾ ಥಿಯೇಟರ್, ರೈಸ್ ಮಿಲ್, ಸಾ ಮಿಲ್, ಕಲ್ಯಾಣ ಮಂಟಪಗಳು, ಗೋಡೌನ್‍ಗಳು, ನಿರ್ಮಾಣ ಹಂತದ ಕಟ್ಟಡಗಳು, ಅಕ್ರಮ ಹಣ ಸಾಗಾಣಿಗೆ, ಹಂಚಿಕೆ ನಡೆಯುವ ಜಾಗಗಗಳ ಗುರುತಿಗೆ ಐಟಿ ಮಾಸ್ಟರ್ ಪ್ಲಾನ್ ಮಾಡಿದೆ. ಚುನಾವಣಾ ವೀಕ್ಷಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಮಂಡ್ಯಕ್ಕೆ ಶಿಫ್ಟ್ ಆಗಿದ್ದಾರೆ.

  • ಕೊಡಗಿನಲ್ಲಿ 28 ಲಕ್ಷ ಮೌಲ್ಯದ ಮದ್ಯ, 6.31 ಲಕ್ಷ ರೂ. ನಗದು ವಶ

    ಕೊಡಗಿನಲ್ಲಿ 28 ಲಕ್ಷ ಮೌಲ್ಯದ ಮದ್ಯ, 6.31 ಲಕ್ಷ ರೂ. ನಗದು ವಶ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕಡೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.31 ಲಕ್ಷ ರೂ. ನಗದು ಮತ್ತು 28 ಲಕ್ಷ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ.

    ಕೊಡಗು ಅಬಕಾರಿ ಇಲಾಖೆಯೂ ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ಮಹಾರಾಷ್ಟ್ರದ ಮದ್ಯ ವಶ ಪಡಿಸಿಕೊಂಡಿದ್ದಾರೆ. ಮೈಸೂರಿಂದ ವಯನಾಡಿಗೆ ಲಾರಿಯಲ್ಲಿ ಮದ್ಯವನ್ನು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಆಧಾರದ ಮೇರೆಗೆ ಕೊಡಗು ಜಿಲ್ಲೆಯ ಪೆರುಂಬಾಡಿ ಬಳಿ ಕೊಡಗು ಅಬಕಾರಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಮದ್ಯ ಪತ್ತೆಯಾಗಿದೆ.

    28 ಲಕ್ಷ ಮೌಲ್ಯದ ಮದ್ಯ, ಲಾರಿ ಮತ್ತು ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕುಶಾಲನಗರದಲ್ಲಿ ಕೇರಳ ನೋಂದಣಿಯ ಜೀಪ್‍ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6 ಲಕ್ಷ ನಗದು ಪತ್ತೆಯಾಗಿದೆ.

    ಕೊಪ್ಪ ಚುನಾವಣಾ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ನಡೆಸುವಾಗ ಈ ಹಣ ಪತ್ತೆಯಾಗಿದೆ. ಕೇರಳ ಮೂಲದ ಜೀವನ್ ಹಾಗೂ ಸಂತೋಷ್ ಬಳಿ ಹಣ ಪತ್ತೆಯಾಗಿದೆ. ಸದ್ಯಕ್ಕೆ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಫ್ಲೈಯಿಂಗ್ ಸ್ಕ್ವಾಡ್ ಅವರು 6,31,050 ರೂಪಾಯಿ ವಶಕ್ಕೆ ಪಡೆದುಕೊಂಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಉಪ ವಿಭಾಗಾಧಿಕಾರಿ ಜವರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಬಿಸಿಲಿನಿಂದ ಹೈರಾಣಾದ ಚುನಾವಣಾ ಸಿಬ್ಬಂದಿ ನೆರವಿಗೆ ಬಂದ ಜಿಲ್ಲಾಡಳಿತ

    ಬಿಸಿಲಿನಿಂದ ಹೈರಾಣಾದ ಚುನಾವಣಾ ಸಿಬ್ಬಂದಿ ನೆರವಿಗೆ ಬಂದ ಜಿಲ್ಲಾಡಳಿತ

    – ವಿಶೇಷ ವ್ಯವಸ್ಥೆ ಕಲ್ಪಿಸಿದ ಜಿಲ್ಲಾಧಿಕಾರಿಗೆ ಶ್ಲಾಘನೆ

    ಬಳ್ಳಾರಿ: ಜಿಲ್ಲೆಯಲ್ಲಿ ಬೇಸಿಗೆ ಆರಂಭದಲ್ಲೆ ಬಿಸಿಲಿನ ತಾಪ ಬಲುಜೋರಾಗಿದೆ. ಚುನಾವಣಾ ಸಿಬ್ಬಂದಿ ಸಾಕಪ್ಪ ಸಾಕು ಈ ಬಿಸಿಲು ಎಂದಿದ್ದಾರೆ. ಹೀಗಾಗಿಯೇ ಬಿಸಿಲಿನ ತಾಪ ತಪ್ಪಿಸಿಕೊಳ್ಳಲು ಸಿಬ್ಬಂದಿಗೆ ಜಿಲ್ಲಾಡಳಿತ ವಿಶೇಷ ವ್ಯವಸ್ಥೆ ಮಾಡಿದೆ.

    ಈಗ ಎಲ್ಲೆಡೆ ದಿನೇ ದಿನೇ ಚುನಾವಣೆ ಬಿಸಿ ಏರುತ್ತಿದೆ. ಆದ್ರೆ ಬಳ್ಳಾರಿಯಲ್ಲಿ ಮಾತ್ರ ಚುನಾವಣಾ ಬಿಸಿಗಿಂತಲೂ ಬಿಸಿಲಿನ ಬಿಸಿ ಜೋರಾಗುತ್ತಿದೆ. ಬಿಸಿಲಿನ ಬೇಗೆಗೆ ಹಗಲಿರುಳು ಕೆಲಸ ಮಾಡೋ ಚುನಾವಣಾ ಸಿಬ್ಬಂದಿ ಹೈರಾಣಾಗಿ ಹೋಗಿದ್ದಾರೆ. ಸೂರ್ಯನ ಪ್ರಪಾತ ಕಂಡು ಸಾಕಪ್ಪ ಸಾಕು ಈ ಬಿಸಿಲು ಬೇಗೆ ಅಂತಿದ್ದಾರೆ. ಆದ್ರೆ ಬಿಸಿಲಿನ ಬೇಗೆಯಿಂದ ಕಂಗೆಟ್ಟಿರುವ ಚುನಾವಣಾ ಸಿಬ್ಬಂದಿಗೆ ಬಳ್ಳಾರಿ ಜಿಲ್ಲಾಡಳಿತ ಎಲ್ಲ ಚೆಕ್‍ಪೊಸ್ಟ್ ಗಳಿಗೆ ಏರ್ ಕೂಲರ್ ವ್ಯವಸ್ಥೆ ಕಲ್ಪಿಸುವ ಮೂಲಕ ಸಿಬ್ಬಂದಿಯ ನೆರವಿಗೆ ಧಾವಿಸಿದೆ ಎಂದು ಕರ್ತವ್ಯ ನಿರತ ಪೊಲೀಸ್ ಪೇದೆ ಮುದುಕಯ್ಯ ತಿಳಿಸಿದ್ದಾರೆ.

    ಬಳ್ಳಾರಿ ಜಿಲ್ಲೆಯಲ್ಲಿ ಸದ್ಯ 40 ಡಿಗ್ರಿ ಸೆಲ್ಸಿಯಸ್ ಬಿಸಿಲಿನ ತಾಪವಿದೆ. ಹಗಲು ಹೊತ್ತಿನಲ್ಲಿ ಹೊರಬರಲಾಗದಷ್ಟು ಬಿಸಿಲಿನ ಬೇಗೆ ಹೆಚ್ಚಳವಾಗಿರುವುದರಿಂದ ಚೆಕ್‍ಪೊಸ್ಟ್ ಗಳಲ್ಲಿ ಚುನಾವಣಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲು ಹೈರಣಾಗಿ ಹೋಗಿದ್ದಾರೆ. ಹೀಗಾಗಿ ಬಳ್ಳಾರಿ ಜಿಲ್ಲಾಧಿಕಾರಿ ರಾಮಪ್ರಸಾದ್ ಮನೋಹರ್ ವಿಶೇಷ ಕಾಳಜಿ ತೆಗೆದುಕೊಳ್ಳುವ ಮೂಲಕ ಎಲ್ಲ ಚೆಕ್‍ಪೊಸ್ಟ್ ಗಳಿಗೆ ಏರ್ ಕೂಲರ್ ಹಾಗೂ ತಣ್ಣೀರಿನ ಗಡಿಗೆಗಳ ವ್ಯವಸ್ಥೆ ಕಲ್ಪಿಸಿದ್ದಾರೆ. ಜಿಲ್ಲಾಡಳಿತದ ಈ ವ್ಯವಸ್ಥೆಯಿಂದ ಬಿಸಿಲಿನ ಬೇಗೆ ತಪ್ಪಿಸಿಕೊಳ್ಳಲು ಅನೂಕೂಲವಾಗಿದೆ ಎಂದು ಕರ್ತವ್ಯನಿರತ ಚುನಾವಣಾ ಸಿಬ್ಬಂದಿ ರಾಜಶೇಖರ್ ಹೇಳುತ್ತಾರೆ.

    ಹಗಲು ರಾತ್ರಿಯೆನ್ನದೆ ಚೆಕ್‍ಪೊಸ್ಟ್ ಗಳಲ್ಲಿ ಕರ್ತವ್ಯನಿರ್ವಹಿಸುವ ಸಿಬ್ಬಂದಿಗೆ ಜಿಲ್ಲಾಡಳಿತ ಏರ್ ಕೂಲರ್ ವ್ಯವಸ್ಥೆ ಮಾಡಿರುವುದರಿಂದ ಸಿಬ್ಬಂದಿಗೆ ಖುಷಿ ತಂದಿದೆ. ಹೀಗಾಗಿ ಬಳ್ಳಾರಿ ಜಿಲ್ಲಾಡಳಿತದ ಈ ಕಾರ್ಯಕ್ಕೆ ಚುನಾವಣಾ ಸಿಬ್ಬಂದಿ ಶಾಘ್ಲನೆ ವ್ಯಕ್ತಪಡಿಸುವ ಮೂಲಕ ಹುರುಪಿನಿಂದ ಚುನಾವಣಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.

  • ಚೆಕ್ ಪೋಸ್ಟ್ ಮೇಲೆ ಪೆಟ್ರೋಲ್ ಬಾಂಬ್ – ಚಿಕ್ಕಮಗ್ಳೂರು, ಉಡುಪಿಯಲ್ಲಿ ಹೈ ಅಲರ್ಟ್

    ಚೆಕ್ ಪೋಸ್ಟ್ ಮೇಲೆ ಪೆಟ್ರೋಲ್ ಬಾಂಬ್ – ಚಿಕ್ಕಮಗ್ಳೂರು, ಉಡುಪಿಯಲ್ಲಿ ಹೈ ಅಲರ್ಟ್

    ಚಿಕ್ಕಮಗಳೂರು: ಕುದುರೆಮುಖದ ಬಸರೀಕಲ್ ಚೆಕ್ ಪೋಸ್ಟ್ ಪೆಟ್ರೋಲ್ ಬಾಂಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ತೀವ್ರಗೊಂಡಿದ್ದು, ಚಿಕ್ಕಮಗಳೂರು – ಉಡುಪಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

    ದಾಳಿ ಹಿಂದೆ ನಕ್ಸಲ್ ಬೆಂಬಲಿಗರ ಕೃತ್ಯದ ಶಂಕೆ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ದಳ (ಎಎನ್‍ಎಫ್) ದಿಂದ ಈ ಕೂಂಬಿಂಗ್ ಕಾರ್ಯ ಚುರುಕುಗೊಂಡಿದೆ. ಕೇರಳದ ನಕ್ಸಲರು ಮಲೆನಾಡಲ್ಲಿ ಸಕ್ರಿಯವಾಗಿರುವ ಶಂಕೆ ವ್ಯಕ್ತವಾಗಿದ್ದು, ಹೀಗಾಗಿ ಚಿಕ್ಕಮಗಳೂರು- ಉಡುಪಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆಯಾಗಿದೆ.

    ಬಸರೀಕಲ್, ಸಂಸೆ ಮೆಣಸಿನಹಾಡ್ಯ, ಗುಳ್ಯ ಸೇರಿದಂತೆ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ನಕ್ಸಲ್ ಚಟುವಟಿಕೆ, ಸಮಸ್ಯೆಗಳ ಬಗ್ಗೆ ಗ್ರಾಮಸ್ಥರೊಂದಿಗೆ ಎಎನ್‍ಎಫ್ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ.

    ಭಾನುವಾರ ಏನಾಯ್ತು..?
    ಕಚೇರಿಯ ಮೇಲೆ ಭಾನುವಾರ ಬೆಳಗ್ಗಿನ ಜಾವ 3.30ಕ್ಕೆ ಅರಣ್ಯ ಇಲಾಖೆಯ ದಾಳಿ ಮಾಡಿದ್ದರಿಂದ ಕತ್ತಲಿನಲ್ಲಿ ದುಷ್ಕರ್ಮಿಗಳು ಕಾಣಲಿಲ್ಲ. ಸುಮಾರು 6 ಪೆಟ್ರೋಲ್ ಬಾಂಬ್ ಗಳನ್ನು ದುಷ್ಕರ್ಮಿಗಳು ಕಚೇರಿಯ ಮೇಲೆ ಎಸೆದಿದ್ದಾರೆ. ಪರಿಣಾಮ ಕೆಲ ಪೆಟ್ರೋಲ್ ಬಾಂಬ್‍ಗಳು ಕಚೇರಿಯ ಕಿಟಕಿಗೆ ತಗುಲಿದ್ದು, ಅಲ್ಲಿದ್ದ ರಿಜಿಸ್ಟರ್ ಪುಸ್ತಕಕ್ಕೆ ಬೆಂಕಿ ತಗುಲಿತ್ತು. ಅದೃಷ್ಟವಶಾತ್ ಈ ವೇಳೆ ಎಲ್ಲ ಸಿಬ್ಬಂದಿ ಕಚೇರಿಯ ಒಳಗೆ ಇದ್ದಿದ್ದರಿಂದ ಯಾವುದೇ ಸಾವು, ನೋವು ಸಂಭವಿಸಿರಲಿಲ್ಲ.

    ದುಷ್ಕರ್ಮಿಗಳು ಖಾಲಿ ಬಾಟಲಿಗೆ ಮರಳು ಹಾಗೂ ಸೀಮೆಎಣ್ಣೆ ತುಂಬಿ ಬೆಂಕಿ ಹಚ್ಚಿ ಎಸೆದಿದ್ದಾರೆ. ಬಾಟಲ್‍ಗಳು ಒಡೆದಿದ್ದು, ಒಟ್ಟು ಆರು ಪೆಟ್ರೋಲ್ ಬಾಂಬ್ ಎಸೆದಿರುವುದು ಪತ್ತೆಯಾಗಿತ್ತು. ಅಷ್ಟೇ ಅಲ್ಲದೆ ಯೋಜಿತವಾಗಿ, ಚೆಕ್‍ಪೋಸ್ಟ್ ಕಚೇರಿಯ ಸಮೀಪದ ಮರದ ಕೆಳಗೆ ನಿಂತು ಕೃತ್ಯವನ್ನು ಎಸಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚುನಾವಣಾ ಆಯೋಗದಿಂದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸಂಕಷ್ಟ!

    ಚುನಾವಣಾ ಆಯೋಗದಿಂದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸಂಕಷ್ಟ!

    ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸಹೋದರರ ವಿರುದ್ಧ ಈ ಹಿಂದೆ ಆಂಬುಲೆನ್ಸ್ ನಲ್ಲಿ ಹಣ ಸಾಗಾಟ ಮಾಡಿದ ಆರೋಪ ಕೇಳಿ ಬಂದಿತ್ತು. ಹೀಗಾಗಿಯೇ ಈ ಬಾರಿಯ ಚುನಾವಣೆಯಲ್ಲಿ ಚುನಾವಣಾ ಆಯೋಗ ರೆಡ್ಡಿ- ರಾಮುಲು ನಡೆಯ ಮೇಲೆ ಹದ್ದಿನ ಕಣ್ಣಿಟ್ಟಿದೆ.

    ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀರಾಮುಲು ಅವರನ್ನು ಗೆಲ್ಲಿಸುವ ಸಂಪೂರ್ಣ ಹೊಣೆ ಹೊತ್ತಿರುವ ಜನಾರ್ದನ ರೆಡ್ಡಿ, ಚುನಾವಣೆಯಲ್ಲಿ ಅಕ್ರಮ ಮಾಡದಂತೆ ಚುನಾವಣಾ ಆಯೋಗ ಬಿಗಿ ಬಂದೋಬಸ್ತ್ ಕೈಗೊಂಡಿದೆ. ಇದಕ್ಕಾಗಿಯೇ ರೆಡ್ಡಿ ವಾಸವಿರುವ ಮೊಳಕಾಲ್ಮೂರು ತಾಲೂಕಿನ ಮೇಗಲಹಟ್ಟಿ ಮನೆಯ ಮುಂದೆಯೇ ಇದೀಗ ಚೆಕ್ ಪೋಸ್ಟ್ ನಿರ್ಮಿಸಿದೆ.

    ಈ ಮೂಲಕ ಜನಾರ್ದನ ರೆಡ್ಡಿ ಮನೆಗೆ ಬಂದು ಹೋಗುವ ಎಲ್ಲ ವಾಹನಗಳನ್ನು ಚುನಾವಣಾಧಿಕಾರಿಗಳು ತೀವ್ರ ತಪಾಸಣೆಗೆ ಒಳಪಡಿಸುತ್ತಿದ್ದಾರೆ. ಅಲ್ಲದೇ ರೆಡ್ಡಿ ಮನೆಗೆ ಬಂದೂ ಹೋಗುವ ವ್ಯಕ್ತಿಗಳ ಮೇಲೂ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ಅಕ್ರಮ ನಡೆಯದಂತೆ ಮುಂಜಾಗ್ರತೆ ವಹಿಸುತ್ತಿದ್ದಾರೆ.

    ಸದ್ಯ ರೆಡ್ಡಿಗೆ ಇದೀಗ ಮನೆಯ ಮುಂದೆಯೇ ಚೆಕ್ ಪೋಸ್ಟ್ ನಿರ್ಮಿಸಿರುವುದು ದೊಡ್ಡ ತಲೆನೋವಾಗಿ ಪರಿಗಣಿಸಿದೆ.

     

  • ಚೆಕ್ ಪೋಸ್ಟ್ ಪೊಲೀಸರಿಂದ ಆಟೋ ಚಾಲಕನಿಗೆ ಥಳಿತ

    ಚೆಕ್ ಪೋಸ್ಟ್ ಪೊಲೀಸರಿಂದ ಆಟೋ ಚಾಲಕನಿಗೆ ಥಳಿತ

    ರಾಯಚೂರು: ಚುನಾವಣೆ ಹಿನ್ನೆಲೆ ರಾಯಚೂರಿನಲ್ಲಿ ತೆರೆಯಲಾದ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರ ದರ್ಬಾರ್ ಜೋರಾಗಿದೆ. ನಗರದ ಆಶ್ರಯ ಕಾಲೋನಿಯ ಚೆಕ್ ಪೋಸ್ಟ್ ನಲ್ಲಿ ಹಣ ನೀಡದಿದ್ದಕ್ಕೆ ಪೊಲೀಸರು ಥಳಿಸಿರುವ ಘಟನೆ ನಡೆದಿದೆ.

    ಚೆಕ್ ಪೋಸ್ಟ್ ಪೊಲೀಸರು ಪ್ರತಿ ವಾಹನವನ್ನು ತಪಾಸಣೆ ಮಾಡುತ್ತಿದ್ದರು. ಡಿಸೇಲ್, ಪೆಟ್ರೋಲ್ ತೆಗೆದುಕೊಂಡು ಆಟೋದಲ್ಲಿ ಬಂದಿದ್ದ ರಂಗಪ್ಪನಿಗೆ ಕೆನ್ನೆ ಹಾಗೂ ಬೆನ್ನಿನ ಮೇಲೆ ರಕ್ತ ಬರುವಂತೆ ಹೊಡೆದಿದ್ದಾರೆ ಅಂತಾ ಆರೋಪಿಸಲಾಗಿದೆ.

    ಡಿಸೇಲ್, ಪೆಟ್ರೋಲ್ ತೆಗೆದುಕೊಂಡು ಆಟೋದಲ್ಲಿ ರಾಯಚೂರಿನಿಂದ ಚಂದ್ರಬಂಡಾ ಗ್ರಾಮಕ್ಕೆ ಹೋಗುತ್ತಿದ್ದೆವು. ಚೆಕ್ ಪೋಸ್ಟ್ ಬಳಿ ಪೊಲೀಸರು ನಮ್ಮ ವಾಹನವನ್ನು ಚೆಕ್ ಮಾಡಿದರು. ಎರಡು ಬಿಲ್ ಇತ್ತು ಒಂದು ಬಿಲ್ ಇರಲಿಲ್ಲ. ಆ ಒಂದು ಬಿಲ್ ಅನ್ನು ತೆಗೆದುಕೊಂಡು ಬರಲು ಹೇಳಿದರು. ಹಣ ಇಟ್ಟಿದ್ದೀರಾ ಎಂದು ಕೇಳಿದರು ಇಲ್ಲ ಎಂದೆವು. ಜೇಬಿನಲ್ಲಿ 3000 ರೂ. ಇತ್ತು. ಮಾರ್ಕೆಟ್ ಯಾರ್ಡ್ ಠಾಣೆ ಹೆಡ್ ಕಾನ್ಸ್‍ಟೇಬಲ್ ರಾಜಪ್ಪ ಜೇಬಿಗೆ ಕೈ ಹಾಕಿದರು. ಕೆನ್ನೆ ಹಾಗೂ ಬೆನ್ನಿನ ಮೇಲೆ ಹೊಡೆದರು. ರಾಜಪ್ಪ ಈ ಹಿಂದೆಯೂ ಹಣ ಕೇಳಿದ್ದ ಎಂದು ರಂಗಪ್ಪನ ಅಣ್ಣ ಆರೋಪ ಮಾಡಿದರು.

     

    ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಗಾಯಾಳು ರಂಗಪ್ಪ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಕಿಶೋರ್ ಬಾಬು ಅವರಿಗೆ ದೂರು ನೀಡಿದ್ದಾ ರೆ. ರಾಜಪ್ಪ ಈ ಹಿಂದೆಯೂ ಹಣ ಕೇಳಿದ್ದ, ಈ ಬಾರಿಯೂ ಹಣ ನೀಡದ್ದಕ್ಕೆ ಥಳಿಸಿದ್ದಾನೆ ಅಂತ ಗಾಯಾಳು ರಂಗಪ್ಪ ಆರೋಪಿಸಿದ್ದಾರೆ.