ಮೃತ ಮಗುವನ್ನು ಚಿಕ್ಕೂಡ ಗ್ರಾಮದ ರಾಜಪ್ಪ ಮತ್ತು ದಿವ್ಯ ದಂಪತಿಯ 2 ವರ್ಷದ 11 ತಿಂಗಳ ನಿರ್ವಾಣ ಕುಮಾರ್ ಎಂದು ಗುರುತಿಸಲಾಗಿದೆ.
5 ದಿನಗಳಿಂದ ಮಗು ತೀವ್ರ ಜ್ವರದಿಂದ ಬಳಲುತ್ತಿತ್ತು. ಚಿಕಿತ್ಸೆಗಾಗಿ ಮಗುವನ್ನು ಜಿಲ್ಲೆಯ ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ (Sarji Hospital Shivamogga) ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕವು ಸ್ವಲ್ಪವೂ ಚೇತರಿಕೆ ಕಾಣದೇ ಮಗು ಸಾವನ್ನಪ್ಪಿದೆ. ಗ್ರಾಮದಲ್ಲಿ ಸ್ವಚ್ಚತೆ ಇಲ್ಲದಿರುವುದರಿಂದ ಡೆಂಗ್ಯೂಗೆ ಕಾರಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಇದನ್ನೂ ಓದಿ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್ – ಇಂದು ಮಾಜಿ ಸಚಿವ ನಾಗೇಂದ್ರ ಜಾಮೀನು ಭವಿಷ್ಯ
ದಾವಣಗೆರೆ: ಸತತ ಮಳೆಗೆ ಗೋಡೆ ಕುಸಿದು ವೃದ್ಧ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಗಿರಿ (Channagiri) ತಾಲೂಕಿನ ಸಂತೆಬೆನ್ನೂರಿನಲ್ಲಿ (Santhebennur) ನಡೆದಿದೆ.
ಮೃತ ವೃದ್ಧನನ್ನು ಸಂತೆಬೆನ್ನೂರು ನಿವಾಸಿ ಕುಳಗಟ್ಟೆ ಬಸವರಾಜಪ್ಪ (81) ಎಂದು ಗುರುತಿಸಲಾಗಿದೆ. ಪುಷ್ಕರಣಿ ಬೀದಿಯಲ್ಲಿದ್ದ ಮನೆಯಲ್ಲಿ ಗೋಡೆ ಕುಸಿದು ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ಇನ್ನೂ ರಿಟ್ರೀವ್ ಆಗಿಲ್ಲ ದರ್ಶನ್, ಪವಿತ್ರಾಗೌಡ ಮೊಬೈಲ್!
ರಾತ್ರಿ ಸತತ ಮಳೆ ಸುರಿಯುತ್ತಿದ್ದು, ಗೋಡೆ ಒಂದು ಕಡೆ ವಾಲುತ್ತಿತ್ತು. ಈ ವೇಳೆ ಮನೆಯಲ್ಲಿದ್ದ ಬಸವರಾಜಪ್ಪ, ಆತನ ಮಗ ಹಾಗೂ ಸೊಸೆ ಮನೆಯಿಂದ ಹೊರಬರಲು ಯತ್ನಿಸಿದ್ದಾರೆ. ಆತನ ಮಗ ಹಾಗೂ ಸೊಸೆ ಮನೆಯಿಂದ ಹೊರಗೆ ಬಂದಿದ್ದಾರೆ. ಆದರೆ ಮನೆಯಿಂದ ಹೊರಬರುವ ಪ್ರಯತ್ನದಲ್ಲಿದ್ದ ವೃದ್ಧ ಬಸವರಾಜಪ್ಪನ ಮೇಲೆ ಗೋಡೆ ಕುಸಿದಿದೆ. ಗೋಡೆ ಕುಸಿದು ತೀವ್ರ ಗಾಯಗೊಂಡು ಸಾವನ್ನಪ್ಪಿದ್ದಾರೆ.
ದಾವಣಗೆರೆ: ಡಿಕೆ ಶಿವಕುಮಾರ್ (DK Shivakumar) ಅವರು ಈ ಅವಧಿಯಲ್ಲಿ ಮುಖ್ಯಮಂತ್ರಿಯಾಗುವುದು (Chief Minister) ನಿಶ್ಚಿತ. ನಮ್ಮ ನಾಯಕ ಡಿಕೆಶಿ ಪರ 70 ಮಂದಿ ಶಾಸಕರ ಬೆಂಬಲವಿದೆ ಎಂದು ಚೆನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ (Shivaganga Basavaraj) ಬಾಂಬ್ ಸಿಡಿಸಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಅದು ಒಂದು ವರ್ಷದಲ್ಲಿ ಆಗಬಹುದು ಅಥವಾ ಎರಡು ವರ್ಷದ ಒಳಗೆ ಆಗಬಹುದು. ಒಟ್ಟಿನಲ್ಲಿ ಶಿವಕುಮಾರ್ ಅವರು ಸಿಎಂ ಆಗೇ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾನು ಡಿಕೆಶಿ ಪರವಾಗಿ ಯಾವಾಗಲು ನಿಲ್ಲುತ್ತೇನೆ. ನನ್ನಂತೆ ಪ್ರಥಮ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ 70 ಮಂದಿಯೂ ಅವರ ಪರವಾಗಿ ಇದ್ದೇವೆ. ನಾವೆಲ್ಲ ಗೆಲ್ಲಲು ಅವರ ಸಂಘಟನೆ ಕಾರಣವಾಗಿದೆ. ಈ ಕಾರಣಕ್ಕೆ ಯಾವ ಸಂದರ್ಭದಲ್ಲೂ ಕೂಡ ಅವರ ಪರವಾಗಿ ನಾವು ಇದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತವನ್ನು ಕಟ್ಟಲು ಯುವಜನರು ವಾರಕ್ಕೆ 70 ಗಂಟೆ ದುಡಿಯಬೇಕು: ನಾರಾಯಣ ಮೂರ್ತಿ
ವಯಸ್ಸಿನಲ್ಲಿ ಶಾಸಕರ ಮಧ್ಯೆ ಏರುಪೇರು ಇರಬಹುದು. ಆದರೆ ಪ್ರಥಮ ಬಾರಿಗೆ ಆಯ್ಕೆಯಾದವರೆಲ್ಲ ಅವರ ಪರವಾಗಿದ್ದೇವೆ. ನೂರಕ್ಕೆ ನೂರರಷ್ಟು ನಾವು ಡಿಕೆಶಿಯವರ ಪರವಾಗಿ ಇದ್ದೇವೆ. ನಾಳೆ ಅವರು ಏನು ಹೇಳುತ್ತಾರೋ ಅ ನಿರ್ಧಾರಕ್ಕೆ ನಾವು ಇದ್ದೇವೆ ಎಂದರು.
ಕೆಲವರು ಅವರವರ ಅಭಿಪ್ರಾಯ ಹೇಳುತ್ತಾರೆ. ಆದರೆ ಕೊನೆಯದಾಗಿ ಹೈಕಮಾಂಡ್ ಅಂತಿಮ ತೀರ್ಮಾನ ಮಾಡುತ್ತದೆ. ಶಿವಕುಮಾರ್ ಅವರಿಗೆ ಜಾತಿ ಅಧಾರದ ಮೇಲೆ ಹುದ್ದೆ ನೀಡಿಲ್ಲ. ಅವರ ಸಂಘಟನೆ, ಪರಿಶ್ರಮ ನೋಡಿ ಅವರಿಗೆ ಡಿಸಿಎಂ ಹುದ್ದೆ ಕೊಟ್ಟಿದ್ದಾರೆ. ಜಾತಿಗೆ ಒಂದು ಡಿಸಿಎಂ ಸ್ಥಾನ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಎರಡು ವರ್ಷದ ನಂತರ ಹೊಸಬರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವುದು ಸರಿ ಇದೆ. ಆದವರೇ ಸಚಿವರಾದರೆ ಉಳಿದವರು ಏನ್ ಆಗಬೇಕು. ಅದ್ದರಿಂದ ಎರಡೂವರೆ ವರ್ಷಕ್ಕೆ ಸಚಿವ ಸ್ಥಾನ ಬದಲಾವಣೆ ಮಾಡುವುದು ಉತ್ತಮ. ನಾನು ಕೂಡ ಸನ್ಯಾಸಿ ಅಲ್ಲ ಸಚಿವ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ ಎಂದರು.
ಮೊದಲ ಬಾರಿ ಶಾಸಕನಾಗಿ ಆಯ್ಕೆಯಾದ ಶಿವಗಂಗಾ ಬಸವರಾಜ್ ಅವರು ಶಿವಕುಮಾರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಸುದ್ದಿಯಾಗಿದ್ದರು. ಹಸಿರು ಶಾಲು ಧರಿಸಿ ಬಂದಿದ್ದ ಅವರು ಭಗವಂತ ಮತ್ತು ನನ್ನ ಆರಾಧ್ಯ ದೈವ ಡಿಕೆ ಶಿವಕುಮಾರ್ ಸಾಹೇಬರ ಮೇಲೆ ಪ್ರಮಾಣ ಮಾಡುತ್ತೇನೆ ಎಂದು ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದರು.
ದಾವಣಗೆರೆ: ಕೊಲ್ಲಾಪುರದಿಂದ ಕೊಡಗಿನ ವಿರಾಜಪೇಟೆಗೆ ಕಾರಿನಲ್ಲಿ ತೆರಳುತ್ತಿದ್ದ ಉದ್ಯಮಿಯ ಕಾರನ್ನು ಕಳ್ಳರು ಅಡ್ಡಗಟ್ಟಿ 95 ಲಕ್ಷ ರೂ. ದರೋಡೆ ಮಾಡಿರುವ ಘಟನೆ ಚನ್ನಗಿರಿಯಲ್ಲಿ ನಡೆದಿದೆ.
ದುಬೈನಲ್ಲಿ ತೈಲ ವ್ಯಾಪಾರ ಮಾಡುತ್ತಿರುವ ನಬೀಲ್ಕೆ ಎಂಬವವರ ಕುಟುಂಬ ಕಾರಿನಲ್ಲಿ ಪ್ರಯಾಣ ಮಾಡುತ್ತಿತ್ತು. ಈ ವೇಳೆ ಚನ್ನಗಿರಿ (Channagiri) ತಾಲ್ಲೂಕಿನ ಬೀರೂರು ರಾಜ್ಯ ಹೆದ್ದಾರಿಯಲ್ಲಿನ ಬುಕ್ಕಾಂಬುದಿ ಕೆರೆ ಬಳಿ ದರೋಡೆಕೋರರು ಕಾರನ್ನು ಅಡ್ಡಗಟ್ಟಿ 95 ಲಕ್ಷ ರೂ. ನಗದನ್ನು ದೋಚಿ ಪರಾರಿಯಾಗಿದ್ದಾರೆ. ಘಟನೆ ಜೂ. 18ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ತಹಶೀಲ್ದಾರ್ ಮನೆ ಮೇಲೆ ಮುಂದುವರೆದ ʼಲೋಕಾʼ ದಾಳಿ – ಬಗೆದಷ್ಟು ಸಿಗುತ್ತಿದೆ ಕೋಟಿಗಟ್ಟಲೇ ಆಸ್ತಿ
ಮಹಾರಾಷ್ಟ್ರದ (Maharashtra) ಕೊಲ್ಲಾಪುರ ಜಿಲ್ಲೆಯ ಸಾನೆ ಗುರೂಜಿ ಪಟ್ಟಣದಲ್ಲಿ ನಬೀಲ್ಕೆಯವರ ಕುಟುಂಬ ಚಿನ್ನಾಭರಣದ ಅಂಗಡಿ ನಡೆಸುತ್ತಿತ್ತು. ಅಲ್ಲಿದ್ದ ಚಿನ್ನವನ್ನು ಮಾರಾಟ ಮಾಡಿ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಅಂಗಡಿ ತೆರೆಯಲು ಹಣದೊಂದಿಗೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನೀಲೇಶ್ ಹಾಗೂ ಅಭಿಜಿತ್ ಬುರುತ್ತಿದ್ದಾಗ ಈ ಘಟನೆ ನಡೆದಿದೆ. 10 ರಿಂದ 15 ಜನ ದರೋಡೆಕೋರರ ತಂಡ ಬುಕ್ಕಾಂಬುದಿ ಕೆರೆ ಬಳಿ ಕಾರನ್ನು ಅಡ್ಡಗಟ್ಟಿ, ಪಿಸ್ತೂಲ್ ತೋರಿಸಿ ಹಣ ದೋಚಿ ಪರಾರಿಯಾಗಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ ಕಾರಿನಲ್ಲಿದ್ದ ನೀಲೇಶ್ ಹಾಗೂ ಅಭಿಜಿತ್ನನ್ನು ಕರೆದುಕೊಂಡು ಹೋಗಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ.