Tag: ಚೆನ್ನಮ್ಮ

  • ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೊನಾ ನೆಗೆಟಿವ್: ವೈದ್ಯರ ಸ್ಪಷ್ಟನೆ

    ಮಾಜಿ ಪ್ರಧಾನಿ ದೇವೇಗೌಡರಿಗೆ ಕೊರೊನಾ ನೆಗೆಟಿವ್: ವೈದ್ಯರ ಸ್ಪಷ್ಟನೆ

    – ಪತ್ನಿ ಚೆನ್ನಮ್ಮಗೆ ಮಾತ್ರ ಪಾಸಿಟಿವ್

    ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕೋವಿಡ್ ಆರ್‍ಟಿಪಿಸಿಆರ್ ಟೆಸ್ಟ್ ಫಲಿತಾಂಶ ನೆಗೆಟಿವ್ ಬಂದಿದೆ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ಅವರು ಸ್ಪಷ್ಟನೆ ನೀಡಿದ್ದಾರೆ.

    ಇಂದು ಬೆಳಗ್ಗೆ ನನಗೆ ಹಾಗೂ ಪತ್ನಿ ಚೆನ್ನಮ್ಮಗೆ ಕೋವಿಡ್ ಪಾಸಿಟಿವ್ ಎಂದು ಮಾಜಿ ಪ್ರಧಾನಿ ದೇವೇಗೌಡರು ಟ್ವೀಟ್ ಮಾಡಿದ್ದರು. ಜೊತೆಗೆ ನಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿಯನ್ನೂ ಮಾಡಿದ್ದರು.

    ಈ ಬಗ್ಗೆ ಸಂಜೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ವೈದ್ಯ ಡಾ. ಸುದರ್ಶನ್ ಬಲ್ಲಾಳ್, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಕೊರೊನಾ ನೆಗೆಟಿವ್ ಇದೆ. ಜ್ವರ ಇರುವುದಕ್ಕೆ ಮಾತ್ರ ಅಡ್ಮಿಟ್ ಆಗಿದ್ದಾರೆ. ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಮಾತ್ರ ಪಾಸಿಟಿವ್ ಇದೆ. ಮಣಿಪಾಲ್ ಆಸ್ಪತ್ರೆಯಲ್ಲೇ ಹೆಚ್‍ಡಿಡಿ, ಚೆನ್ನಮ್ಮ ಅವರಿಗೆ ಚಿಕಿತ್ಸೆ ನೀಡಲಾಗುವುದು. ಜ್ವರದಿಂದ ಬಳಲುತ್ತಿರುವ ಹೆಚ್‍ಡಿಡಿ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

    ದೇವೇಗೌಡರ ಆರ್ ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿದ್ದು, ಸಿಟಿ ಸ್ಕ್ಯಾನ್‍ನಲ್ಲಿ ಸ್ವಲ್ಪ ವ್ಯತ್ಯಾಸ ಇದೆ. ಸಿಟಿ ಸ್ಕ್ಯಾನಿಂಗ್‍ನಲ್ಲಿ ವ್ಯತ್ಯಾಸ ಕಂಡು ಬಂದಿರುವುದರಿಂದ ಕೋವಿಡ್ ಚಿಕಿತ್ಸೆ ಕೊಡಬೇಕಾಗುತ್ತದೆ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ.

    ಇದಕ್ಕೂ ಮುನ್ನ ದೇವೇಗೌಡರು ಹಾಗೂ ಚೆನ್ನಮ್ಮ ಅವರಿಗೆ ಪಾಸಿಟಿವ್ ಬಂದಿದೆ ಎಂಬ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಸಂಪರ್ಕದಲ್ಲಿದ್ದ ವ್ಯಕ್ತಿಗಳ ಮಾಹಿತಿ ಸಂಗ್ರಹಿಸಿದ್ದಾರೆ. ಪ್ರಾಥಮಿಕ ಸಂಪರ್ಕದಲ್ಲಿ ನಾಲ್ವರು, ದ್ವಿತೀಯ ಸಂಪರ್ಕದಲ್ಲಿ 21 ಜನರು ಇದ್ದು, ಒಟ್ಟು 25 ಜನರ ಗಂಟಲು ದ್ರವದ ಮಾದರಿಯನ್ನು ಪಾಲಿಕೆಯ ಆರೋಗ್ಯಾಧಿಕಾರಿಗಳು ಸಂಗ್ರಹಿಸಿದ್ದಾರೆ. ಇವರ ಟ್ರಾವೆಲ್ ಹಿಸ್ಟರಿ ದೆಹಲಿ ಎಂದು ತಿಳಿದು ಬಂದಿದೆ.

  • ತಾತ-ಅಜ್ಜಿಗೆ ವಿವಾಹ ವಾರ್ಷಿಕೋತ್ಸವಕ್ಕೆ ಶುಭ ಕೋರಿದ ನಿಖಿಲ್

    ತಾತ-ಅಜ್ಜಿಗೆ ವಿವಾಹ ವಾರ್ಷಿಕೋತ್ಸವಕ್ಕೆ ಶುಭ ಕೋರಿದ ನಿಖಿಲ್

    ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಮತ್ತು ಪತ್ನಿ ಚೆನ್ನಮ್ಮ ದಂಪತಿ ಇಂದು ತಮ್ಮ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ.

    ಎಚ್.ಡಿ.ದೇವೇಗೌಡರು ಮತ್ತು ಪತ್ನಿ ಚೆನ್ನಮ್ಮ ದಂಪತಿ ತಮ್ಮ 66ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಸೋಶಿಯಲ್ ಮೀಡಿಯಾದ ಮೂಲಕ ತಾತಾ-ಅಜ್ಜಿಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯನ್ನು ಕೋರಿದ್ದಾರೆ.

    “ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 66 ವಸಂತಗಳನ್ನು ಪೂರೈಸಿರುವ ನಾಡಿನ ಆದರ್ಶ ದಂಪತಿಗಳಾಗಿರುವ ಪ್ರೀತಿಯ ತಾತ ಎಚ್.ಡಿ.ದೇವೇಗೌಡರು ಹಾಗೂ ಅಜ್ಜಿ ಚೆನ್ಮಮ್ಮ ಅವರಿಗೆ ವಿವಾಹ ವಾರ್ಷಿಕೋತ್ಸವದ ಹಾರ್ದಿಕ ಶುಭಾಶಯಗಳು” ಎಂದು ನಿಖಿಲ್ ಟ್ವೀಟ್ ಮಾಡಿ ವಿಶ್ ಮಾಡಿದ್ದಾರೆ. ಜೊತೆಗೆ ತಾತ-ಅಜ್ಜಿಯ ಫೋಟೋವನ್ನು ಶೇರ್ ಮಾಡಿದ್ದಾರೆ.

    ಎಚ್.ಡಿ.ದೇವೇಗೌಡರು 1954 ರಲ್ಲಿ ಚೆನ್ನಮ್ಮರನ್ನು ವಿವಾಹವಾಗಿದ್ದಾರೆ. ಈ ದಂಪತಿಗೆ ನಾಲ್ವರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

    ಲಾಕ್‍ಡೌನ್ ನಡುವೆಯೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಏಪ್ರಿಲ್ 17 ರಂದು ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿನ ಎಚ್‍.ಡಿ ಕುಮಾರಸ್ವಾಮಿ ಫಾರ್ಮ್ ಹೌಸ್‍ನಲ್ಲಿ ನಟ ನಿಖಿಲ್, ರೇವತಿ ಅವರ ಜೊತೆ ಸಪ್ತಪದಿ ತುಳಿದಿದ್ದಾರೆ. ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ನಿಖಿಲ್ ಹಾಗೂ ರೇವತಿ ಮದುವೆಯಲ್ಲಿ ಎರಡು ಕುಟುಂಬದವರ ಮತ್ತು ಆಪ್ತರಷ್ಟೆ ಭಾಗಿಯಾಗಿದ್ದರು.

  • ಎಚ್‍ಡಿಕೆ ಬೇಸರ ಹೊರಹಾಕಿದ್ರೂ ಹೇಳಿಕೆ ಸಮರ್ಥಿಸಿಕೊಂಡ್ರು ಜಗದೀಶ್ ಶೆಟ್ಟರ್

    ಎಚ್‍ಡಿಕೆ ಬೇಸರ ಹೊರಹಾಕಿದ್ರೂ ಹೇಳಿಕೆ ಸಮರ್ಥಿಸಿಕೊಂಡ್ರು ಜಗದೀಶ್ ಶೆಟ್ಟರ್

    ಧಾರವಾಡ: ತಮ್ಮ ತಾಯಿಯ ಬಗ್ಗೆ ಮಾತನಾಡಿದ್ದಕ್ಕೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಬೇಸರ ಹೊರಹಾಕಿದ ಬಳಿಕವೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

    ಜಿಲ್ಲೆಯ ಅಣ್ಣಿಗೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಹೇಳಿದ್ದರಲ್ಲಿ ಏನೂ ತಪ್ಪಿಲ್ಲ. ದೇವೇಗೌಡರ ಕುಟುಂಬ ಸದಸ್ಯರು, ನೆಂಟರು ಎಲ್ಲರೂ ರಾಜಕೀಯದಲ್ಲಿದ್ದಾರೆ. ಇದು ಸಂತುಷ್ಟ ಕುಟುಂಬ ಆಗಬೇಕಾದರೆ ಚನ್ನಮ್ಮರನ್ನು ರಾಜ್ಯಸಭಾ ಸದಸ್ಯರನ್ನಾಗಿಸಬೇಕು ಎಂದು ಸಲಹೆ ಕೊಟ್ಟಿದೆ. ನಾನು ಹೀಗೆ ಹೇಳಿದ್ದು ನೋವಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರಂತೆ. ಆದರೆ ನಾನು ಹೇಳಿದ್ದರಲ್ಲಿ ತಪ್ಪೇನಿಲ್ಲ ಎಂದು ತಿಳಿಸಿದ್ದಾರೆ.

    ಯಾಕಂದ್ರೆ ನೀವು ಮುಖ್ಯಮಂತ್ರಿ, ನಿಮ್ಮ ಸಹೋದರ ಸಚಿವ ಇರೋವಾಗ ಮಕ್ಕಳನ್ನು ಸಂಸದರನ್ನಾಗಿ ಮಾಡೋಕೆ ಹೊರಟಿದ್ದೀರಿ. ಹೀಗಿರುವಾಗ ಚನ್ನಮ್ಮಾಜಿಯವರನ್ನು ರಾಜ್ಯಸಭಾ ಸದಸ್ಯರನ್ನು ಮಾಡುವಲ್ಲಿ ತಪ್ಪೇನಿದೆ. ಅದನ್ನು ಬೇರೆ ರೀತಿ ಅಪಾರ್ಥ ಮಾಡಿಕೊಳ್ಳೋದು ಬೇಡ ಎಂದು ಹೇಳಿದರು. ಇದನ್ನೂ ಓದಿ: ಜಗದೀಶ್ ಶೆಟ್ಟರ್ ಹೇಳಿಕೆ ನನಗೆ ನೋವುಂಟು ಮಾಡಿದೆ – ಎಚ್‍ಡಿಕೆ

    ನೋವು ಆಗುವ ರೀತಿಯಲ್ಲಿ ನಾನು ಹೇಳಿಲ್ಲ. ಒಳ್ಳೆ ರೀತಿಯಲ್ಲಿ ನನ್ನ ಹೇಳಿಕೆಯನ್ನು ತೆಗೆದುಕೊಳ್ಳಿ. ನಿಮ್ಮನ್ನು ಸಾಕಿ ಸಲಹಿದ ಅವರು ಕೂಡ ರಾಜ್ಯಸಭಾ ಮೆಂಬರ್ ಆಗ್ಲಿ ಎಂದು ಹೇಳಿದ್ದೇನೆ. ನಿಖಿಲ್, ಪ್ರಜ್ವಲ್ ಮನೆಗೆ ಹೋಗುತ್ತಾರೆ. ನಿಖಿಲ್ ಎಲ್ಲಿದ್ದೀಯಪ್ಪ ಎಂದು ಹುಡುಕಬೇಕಾಗುತ್ತದೆ. ನಾನು ಹಾಸಿಗೆ ಹಿಡಿಯುವವರೆಗೂ ರಾಜಕೀಯ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ. ಅವರ ಈ ಹೇಳಿಕೆಯನ್ನು ಕೇಳಿದ್ರೆ, ಇವರಿಗೆ ಅಧಿಕಾರದ ದಾಹ ಎಷ್ಟಿದೆ ಎಂಬುದು ಇದರಿಂದ ಅರ್ಥವಾಗುತ್ತದೆ ಎಂದು ಶೆಟ್ಟರ್ ವಾಗ್ದಾಳಿ ನಡೆಸಿದ್ರು.