Tag: ಚೆಲುವರಾಯಸ್ವಾಮಿ

  • ಬೆಂಬಲ ಬೆಲೆಗಿಂತಲೂ ಕಡಿಮೆ ದರಕ್ಕೆ ದಲ್ಲಾಳಿಗಳಿಗೆ ಭತ್ತ ಮಾರಾಟ – ಖರೀದಿ ಕೇಂದ್ರ ತೆರೆಯದ್ದಕ್ಕೆ ಅಶೋಕ್‌ ಆಕ್ರೋಶ

    ಬೆಂಬಲ ಬೆಲೆಗಿಂತಲೂ ಕಡಿಮೆ ದರಕ್ಕೆ ದಲ್ಲಾಳಿಗಳಿಗೆ ಭತ್ತ ಮಾರಾಟ – ಖರೀದಿ ಕೇಂದ್ರ ತೆರೆಯದ್ದಕ್ಕೆ ಅಶೋಕ್‌ ಆಕ್ರೋಶ

    – ಕರ್ನಾಟಕದಲ್ಲಿರೋದು ದರಿದ್ರ ಸರ್ಕಾರ
    – ಕೃಷಿ ಸಚಿವರ ತವರು ಜಿಲ್ಲೆಯ ರೈತರಿಗೆ ಅನ್ಯಾಯ

    ಬೆಂಗಳೂರು: ಮಂಡ್ಯದಲ್ಲಿ (Mandya) ಭತ್ತದ ಖರೀದಿ ಕೇಂದ್ರಗಳು ತೆರೆಯದ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಅಶೋಕ್ (Ashok) ಕಿಡಿಕಾರಿದ್ದಾರೆ. ಎಕ್ಸ್‌ನಲ್ಲಿ ಸರ್ಕಾರದ ವಿರುದ್ದ ಕಿಡಿಕಾರಿದ ಅಶೋಕ್ ಕಾಂಗ್ರೆಸ್ (Congress) ಸರ್ಕಾರ ದರಿದ್ರ ಸರ್ಕಾರ ಅಂತ ವಾಗ್ದಾಳಿ ನಡೆಸಿದ್ದಾರೆ.

    ಅಶೋಕ್ ಪೋಸ್ಟ್‌ನಲ್ಲಿ ಏನಿದೆ?
    ಈ ದರಿದ್ರ ಕಾಂಗ್ರೆಸ್ ಸರ್ಕಾರದಲ್ಲಿ ಒಬ್ಬರು ಕುರ್ಚಿ ಉಳಿಸಿಕೊಳ್ಳಲು ತಂತ್ರ ಹೆಣೆಯುತ್ತಿದ್ದರೆ, ಇನ್ನೊಬ್ಬರು ಕುರ್ಚಿ ಕಿತ್ತುಕೊಳ್ಳಲು ಕತ್ತಿ ಮಸಿಯುತ್ತಿದ್ದಾರೆ. ಇವರಿಬ್ಬರ ನಡುವೆ ಆತಂತ್ರವಾಗಿರುವ ಮಂತ್ರಿಗಳು ಅವರವರ ಅಸ್ತಿತ್ವ ಉಳಿಸಿಕೊಳ್ಳಲು ಡಿನ್ನರ್ ಮೀಟಿಂಗ್, ಸೀಕ್ರೆಟ್ ಸಭೆ ಮಾಡಿ ಕಾಲಹರಣ ಮಾಡುತ್ತಿದ್ದಾರೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಇವೆಲ್ಲದರ ನಡುವೆ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ರೈತರ ಕಷ್ಟ ಕೇಳಲು ಸರ್ಕಾರವೇ ಇಲ್ಲದಂತಾಗಿದೆ.

    ಮಂಡ್ಯದಲ್ಲಿ ಭತ್ತ ಖರೀದಿ ಕೇಂದ್ರಗಳು ಆರಂಭವಾಗದ ಕಾರಣ ರೈತರು ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಭತ್ತದ ದಲ್ಲಾಳಿಗಳಿಗೆ ಮಾರಾಟ ಮಾಡುವ ಅನಿವಾರ್ಯತೆ ಎದುರಾಗಿದೆ. ಕ್ವಿಂಟಾಲ್ ಭತ್ತಕ್ಕೆ 3,000 ರೂ. ಬೆಂಬಲ ಬೆಲೆ ನಿಗದಿಯಾಗಿದ್ದರೂ ಸರ್ಕಾರ ಭತ್ತ ಖರೀದಿ ಕೇಂದ್ರಗಳು ತೆರೆಯದ ಕಾರಣ ದಲ್ಲಾಳಿಗಳಿಗೆ 1,800 ರೂ. – 2,000 ರೂ. ಮಾರಿ ನಷ್ಟ ಅನುಭವಿಸುತ್ತಿದ್ದಾರೆ. ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ತವರು ಜಿಲ್ಲೆಯಲ್ಲೇ ಈ ಗತಿ ಆದರೆ ಇನ್ನು ಬೇರೆ ಜಿಲ್ಲೆಗಳ ಗತಿ ಏನಾಗಿರಬಹುದು ಎನ್ನುವುದನ್ನ ಹೇಳಬೇಕಿಲ್ಲ. ಇದನ್ನೂ ಓದಿ: ತಂದೆಯನ್ನೇ ಹತ್ಯೆಗೈದು ಹೃದಯಾಘಾತದ ಕತೆಕಟ್ಟಿದ್ದ ಮಗ ಅರೆಸ್ಟ್

    ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾದ ತೊಗರಿ ಬೆಲೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದ್ದು, ಸರಕಾರ ಯಾವಾಗ ತೊಗರಿ ಖರೀದಿ ಕೇಂದ್ರ ತೆರೆಯಲಿದೆ ಎಂದು ರೈತರು ಕಾತರದಿಂದ ಎದುರು ನೋಡುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಈ ಬಾರಿ ತೇವಾಂಶ ಕಡಿಮೆಯಿಂದ 1.82 ಲಕ್ಷ ಹೆಕ್ಟೇರ್‌ ತೊಗರಿ ಬೆಳೆ ಹಾನಿಯಾಗಿದೆ ಎಂದು ಸರಕಾರಿ ದಾಖಲೆಗಳೇ ಹೇಳುತ್ತವೆ. ಆದರೆ ಇದುವರೆಗೂ ರಾಜ್ಯ ಸರಕಾರ ಪರಿಹಾರದ ಮಾತೇ ಆಡಿಲ್ಲ. ಜಿಲ್ಲೆಯ ಉಸ್ತುವಾರಿ ಸಚಿವರು ಕೂಡ ಚಕಾರ ಎತ್ತುತ್ತಿಲ್ಲ. ಒಟ್ಟಿನಲ್ಲಿ ಈ ರೈತ ವಿರೋಧಿ ಸಿಎಂ ಸಿದ್ದರಾಮಯ್ಯ ಸರ್ಕಾರ ತೊಲಗುವವರೆಗೂ ನಾಡಿನ ಅನ್ನದಾತರಿಗೆ ನೆಮ್ಮದಿಯಿಲ್ಲ ಅಂತ ಅಶೋಕ್ ಕಿಡಿಕಾರಿದ್ದಾರೆ‌.

     

  • ಉಪ ಚುನಾವಣೆ | ಚನ್ನಪಟ್ಟಣಕ್ಕೆ ಸಚಿವ ಚೆಲುವರಾಯಸ್ವಾಮಿ ಉಸ್ತುವಾರಿ

    ಉಪ ಚುನಾವಣೆ | ಚನ್ನಪಟ್ಟಣಕ್ಕೆ ಸಚಿವ ಚೆಲುವರಾಯಸ್ವಾಮಿ ಉಸ್ತುವಾರಿ

    – ಸಂಡೂರಿಗೆ ಜಮೀರ್‌, ಶಿಗ್ಗಾಂವಿಗೆ ಈಶ್ವರ್‌ ಖಂಡ್ರೆ ಉಸ್ತುವಾರಿ

    ಬೆಂಗಳೂರು: ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ (Channapatna) ಮೂರು ಕ್ಷೇತ್ರಗಳನ್ನು ಗೆಲ್ಲಲು ತಯಾರಿ ಮಾಡಿಕೊಳ್ಳುವ ಬಗ್ಗೆ ಚರ್ಚೆಯಾಗಿದ್ದು, ಮೂರು ಕ್ಷೇತ್ರಗಳಿಗೆ ಉಸ್ತುವಾರಿ ನೇಮಕ ಮಾಡಲಾಗಿದೆ ಎಂದು ಸಚಿವ ಚೆಲುವರಾಯ ಸ್ವಾಮಿ (Cheluvarayaswamy) ಹೇಳಿದ್ದಾರೆ.

    ಕರ್ನಾಟಕದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆ, ಜಾತಿ ಜನಗಣತಿ, ಮೀಸಲಾತಿ ವಿಚಾರ ಸೇರಿ ಹಲವು ವಿಷಯಗಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಕಾವೇರಿ ನಿವಾಸದಲ್ಲಿ ಸಭೆ ನಡೆಸಲಾಗುತ್ತಿದೆ. ಸಭೆಗೆ ಸಚಿವರಾದ ಡಿ.ಕೆ.ಶಿವಕುಮಾರ್, ಬೈರತಿ ಸುರೇಶ್, ಪ್ರೀಯಾಂಕ್ ಖರ್ಗೆ, ಜಮೀರ್ ಅಹಮದ್, ಶರಣ ಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್, ಎಂ.ಸಿ ಸುಧಾಕರ್, ದಿನೇಶ್ ಗುಂಡೂರಾವ್, ಎಸ್.ಎಸ್ ಮಲ್ಲಿಕಾರ್ಜುನ್, ಚಲುವರಾಯಸ್ವಾಮಿ, ರಾಮಲಿಂಗಾ ರೆಡ್ಡಿ ಸೇರಿ ಹಲವರು ಪಾಲ್ಗೊಂಡಿದ್ದರು.

    ಸಭೆಯ ಬಳಿಕ ಸಚಿವ ಚೆಲುವರಾಯಸ್ವಾಮಿ ಮಾತನಾಡಿ, ಬೈ ಎಲೆಕ್ಷನ್ ಬಗ್ಗೆ ಚರ್ಚಿಸಲಾಗಿದೆ. 3 ಕ್ಷೇತ್ರಗಳನ್ನ ಗೆಲ್ಲಲು ತಯಾರಿ ಮಾಡಿಕೊಳ್ಳುವ ಬಗ್ಗೆ ಚರ್ಚೆಯಾಗಿದೆ. ಚನ್ನಪಟ್ಟಣ ನನಗೆ ಉಸ್ತುವಾರಿ ನೀಡಿದ್ದಾರೆ. ಇನ್ನುಳಿದಂತೆ ಸಂಡೂರು ಕ್ಷೇತ್ರದ ಉಸ್ತುವಾರಿ ಸಚಿವ ಜಮೀರ್‌ಗೆ ಹಾಗೂ ಶಿಗ್ಗಾಂವಿ ಕ್ಷೇತ್ರದ ಉಸ್ತುವಾರಿಯನ್ನು ಸಚಿವ ಈಶ್ವರ್ ಖಂಡ್ರೆಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

    ನಮ್ಮ ಅಭ್ಯರ್ಥಿಗಳ ಪಟ್ಟಿ ಮಂಗಳವಾರ ದೆಹಲಿಗೆ ಕಳಿಸಿಕೊಡಲಾಗುತ್ತೆ. ಮಂಗಳವಾರ (ಅ.21) ಸಂಜೆ ಅಭ್ಯರ್ಥಿಗಳ ಹೆಸರು ಫೈನಲ್‌ ಆಗಬಹುದು. ಸಂಡೂರು ವಿಧಾನಸಭಾ ಕ್ಷೇತ್ರದಿಂದ ತುಕಾರಾಮ್ ಕುಟುಂಬಕ್ಕೆ ಕೊಡುವುದರ ಬಗ್ಗೆ ಅಂತಿಮವಾಗಿದೆ. ಚನ್ನಪಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರದ ಬಗ್ಗೆ ಚರ್ಚಿಸಿ ದೆಹಲಿಗೆ ಪಟ್ಟಿ ಕಳಿಸಲಾಗುತ್ತೆ. ಚನ್ನಪಟ್ಟಣ ಅಭ್ಯರ್ಥಿ ಯಾರು ಅನ್ನೋದರ ಬಗ್ಗೆ ನಿಮಗೂ ಗೋತ್ತು ನಮಗೂ ಗೋತ್ತು ಹೈಕಮಾಂಡ್‌ ಅಂತಿಮ ತೀರ್ಮಾನ ಮಾಡಲಿದೆ ಎಂದು ಹೇಳಿದ್ದರೆ.

  • ಪೂರ್ವಜನ್ಮದ ಪುಣ್ಯದಿಂದ ಮಂತ್ರಿ ಆಗಿದ್ದೇವೆ – ಸಚಿವ ಚೆಲುವರಾಯಸ್ವಾಮಿ

    ಪೂರ್ವಜನ್ಮದ ಪುಣ್ಯದಿಂದ ಮಂತ್ರಿ ಆಗಿದ್ದೇವೆ – ಸಚಿವ ಚೆಲುವರಾಯಸ್ವಾಮಿ

    – ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಡಬಾರದು ಎಂದು ತೀರ್ಮಾನಿಸಿದ್ದೇನೆ ಎಂದ ಸಚಿವ

    ಹಾಸನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಹೇಳಿಕೆಗೆ ಪ್ರತಿಕ್ರಿಯೆ ಕೊಡಬಾರದು ಎಂದು ತೀರ್ಮಾನಿಸಿದ್ದೇನೆ. ಸತ್ಯ ಇದ್ದರೆ ಪ್ರತಿಕ್ರಿಯಿಸುವುದು ಒಳ್ಳೆಯದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ (Chaluvarayaswamy) ಹೇಳಿದ್ದಾರೆ.

    ಚನ್ನರಾಯಪಟ್ಟಣದಲ್ಲಿ ಮಾಜಿ ಎಂಎಲ್‌ಸಿ ಎಂ.ಎ.ಗೋಪಾಲಸ್ವಾಮಿ ಅವರ ಹುಟ್ಟು ಹಬ್ಬದ ಅಂಗವಾಗಿ ಏರ್ಪಡಿಸಿದ್ದ ಆಲ್ ಇಂಡಿಯಾ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸತ್ಯ ಇಲ್ಲದಿದ್ದಾಗ ನಾವೂ ಅವರ ತರಹ ಆಗಿಬಿಡ್ತೀವಿ. ಇಲ್ಲದಿದ್ದರೆ ಚೆಲುವರಾಯಸ್ವಾಮೀನೂ, ಕುಮಾರಸ್ವಾಮಿ ತರಹ ಆಗೋದ್ನಲ್ಲಾ ಅಂತಾರೆ ಜನ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಹಾಸನದಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ- ವಾಹನ ಸವಾರರ ಪರದಾಟ

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿ, ಮಂತ್ರಿ ಆಗೋದು ಅಪರೂಪ. ಪೂರ್ವಜನ್ಮದ ಪುಣ್ಯದಿಂದ ಆಗಿದ್ದೇವೆ. ಅವರು ಎರಡು ಜನ ಗೆದ್ದು ಮಂತ್ರಿಯಾಗಿದ್ದಾರೆ. ಅವರಿಗೆ ಸಾಕಷ್ಟು ಕೆಲಸ ಇರುತ್ತೆ. ರಾಷ್ಟ್ರದಲ್ಲಿ ಮಂತ್ರಿಯಾಗಿರುವವರು ಶನಿವಾರ, ಭಾನುವಾರ ಇಲ್ಲಿಗೆ ಬಂದು ಬರೀ ಬಯ್ಯುವುದರಿಂದ ಅರ್ಥ ಇರದು ಎಂದು ಕುಟುಕಿದರು. ಸಿದ್ದರಾಮಯ್ಯ ಅವರು ಆರ್ಡಿನರಿ ಲೀಡರ್ ಅಲ್ಲ. ಸಣ್ಣಪುಟ್ಟ ವ್ಯತ್ಯಾಸ ಅಥವಾ ಯಾರೋ ಮಾಡಿದ ನಿರ್ಧಾರಕ್ಕೆ ಅವರನ್ನೇ ಹೊಣೆ ಮಾಡುವುದು ಅಪರಾಧ. ಕುಮಾರಸ್ವಾಮಿ ಹದಿನಾಲ್ಕು ತಿಂಗಳು ಸಿಎಂ ಆಗಿದ್ದಾಗ ಏನು ಮಾಡಿದ್ರು ಒಮ್ಮೆ ತಿರುಗಿ ನೋಡಲಿ ಎಂದರು. ಇದನ್ನೂ ಓದಿ: ಮಾಡಿರುವ ತಪ್ಪುಗಳು, ಹಗರಣವನ್ನು ಹೊರ ತೆಗೆಯುತ್ತೇವೆಂದು ಬಿಜೆಪಿಯವರಿಗೆ ಭಯ – ಜಿ. ಪರಮೇಶ್ವರ್

    ನಮ್ಮ ಸರ್ಕಾರ ಬಂದು 14 ತಿಂಗಳಾಗಿವೆ. ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಸೇರಿ ಹಲವು ಕೆಲಸ ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡರು. ಕೆಲವರನ್ನು ನೆಗ್ಲೆಟ್ ಮಾಡುವುದು ಅನಿವಾರ್ಯ. ನಮ್ಮ ಜೊತೆಯಲ್ಲಿರುವವರು ನಾವು ತಪ್ಪು ಮಾಡಿದ್ರೂ, ಒಳ್ಳೆಯದನ್ನೂ ಹೇಳಿದ್ರೂ ಚೆಪ್ಪಾಳೆ ಹೊಡೀತಾರೆ, ಹಾಗಾಗಿ ಕುಮಾರಸ್ವಾಮಿಗೆ ಖುಷಿ ಆಗಿದೆ ಎಂದರು. ಇದನ್ನೂ ಓದಿ: Bengaluru Rains | ಎಲೆಕ್ಟ್ರಾನಿಕ್ ಸಿಟಿ ಮತ್ತೆ ಜಲಾವೃತ – ಸಣ್ಣ ಮಳೆಗೆ ತತ್ತರಿಸಿದ ಐಟಿಬಿಟಿ ಮಂದಿ

    ಕುಮಾರಸ್ವಾಮಿ, ಯಡಿಯೂರಪ್ಪ (B S Yediyurappa), ಬೊಮ್ಮಾಯಿ ಮೂರು ಜನ ಮುಖ್ಯಮಂತ್ರಿ ಆಗಿದ್ರು, ಅವರು ಕೊಟ್ಟ ಕಾರ್ಯಕ್ರಮದಿಂದ ರೊಚ್ಚಿಗೆದ್ದು ಜನ ಅವರನ್ನು ತಿರಸ್ಕರಿಸಿ ನಮಗೆ 136 ಜನ ಗೆಲ್ಲಿಸಿ ಕೊಟ್ಟಿದ್ದಾರೆ. 30 ವರ್ಷದಲ್ಲಿ 115 ಶಾಸಕರು ಒಂದೇ ಪಕ್ಷದಿಂದ ಆಯ್ಕೆಯಾಗಿಲ್ಲ. ನಾವು 136 ಜನ ಗೆದ್ದಿದ್ದರೂ ಸರ್ಕಾರ ತೆಗೆಯಲು ಒದ್ದಾಡುತ್ತಿದ್ದಾರೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ನಮ್ಮ ಮೆಟ್ರೋದಿಂದ ಮತ್ತೊಂದು ಗುಡ್‌ನ್ಯೂಸ್ – ಹೊಸ ವರ್ಷದಿಂದ್ಲೇ ಎಲೆಕ್ಟ್ರಾನಿಕ್ ಸಿಟಿಗೆ ಮೆಟ್ರೋ ರೈಲು!

    ಜಾತಿಗಣತಿ ಜಾರಿ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar) ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೆಲ ಸತ್ಯನಾ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತನಾಡುವುದು ಕಷ್ಟ. ಸಮಯ ನೋಡಿ ಮಾತಾಡಬೇಕು. ಜಾತಿ ಗಣತಿ ವರದಿ ಜಾರಿಯಿಂದ ಆಗಬಾರದ್ದು ಏನೂ ಆಗಲ್ಲ. ಒಕ್ಕಲಿಗರು, ಲಿಂಗಾಯತರು ಜಾರಿ ಮಾಡುವುದು ಬೇಡ ಎಂದು ಅರ್ಜಿ ಕೊಟ್ಟಿದ್ದಾರೆ. ಆದರೆ ನನ್ನ ಪ್ರಕಾರ ಯಾರಿಗೂ ಅನ್ಯಾಯ ಆಗಲ್ಲ. ವರದಿ ಕ್ಯಾಬಿನೆಟ್‌ನಲ್ಲಿ ಸಲ್ಲಿಕೆ ಆಗುತ್ತೆ. ಅಲ್ಲಿ ಚರ್ಚೆ ಆಗುತ್ತೆ. ಅಂತಿಮವಾಗಿ ಸಿಎಂ ಪಕ್ಷ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಯಾವ ಸಮಾಜಕ್ಕೂ ಅನ್ಯಾಯ ಆಗುವ ಅವಕಾಶ ಆಗಲ್ಲ ಎಂದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೇಸ್ ಅರೆಬಿಯನ್ ನೈಟ್ಸ್ ಕಥೆಯಂತಿದೆ: ದರ್ಶನ್ ಪರ ಸಿ.ವಿ ನಾಗೇಶ್ ವಾದ ಹೇಗಿತ್ತು?

  • ಇಂದು ನಾಗಮಂಗಲಕ್ಕೆ ಹೆಚ್‌ಡಿಕೆ ಭೇಟಿ – ನೊಂದವರಿಗೆ ಧನ ಸಹಾಯ

    ಇಂದು ನಾಗಮಂಗಲಕ್ಕೆ ಹೆಚ್‌ಡಿಕೆ ಭೇಟಿ – ನೊಂದವರಿಗೆ ಧನ ಸಹಾಯ

    ಮಂಡ್ಯ: ನಾಗಮಂಗಲ ಗಲಭೆ ಪ್ರಕರಣ (Nagamangala Violence) ಹಿನ್ನೆಲೆ ಇಂದು (ಸೆ.19) ಜಿಲ್ಲೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H D Kumarswamy) ಭೇಟಿ ನೀಡಲಿದ್ದು, ನೊಂದ ಕುಟುಂಬಗಳಿಗೆ ಧನ ಸಹಾಯ ಮಾಡಲು ಮುಂದಾಗಿದ್ದಾರೆ.

    ನಾಗಮಂಗಲದಲ್ಲಿ (Nagamangala) ನಡೆದ ಗಲಭೆಯಿಂದಾಗಿ ಹಲವು ಬದುಕು ಬೀದಿಗೆ ಬಂದಿದೆ. ಈ ಸಂಬಂಧ ಸಚಿವ ಚೆಲುವರಾಯಸ್ವಾಮಿ (Cheluvarayaswamy) ಹಾನಿಗೊಳಗಾದವರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವುದರ ಜೊತೆಗೆ ವೈಯಕ್ತಿಕವಾಗಿಯೂ ಪರಿಹಾರ ಕೊಡುವುದಾಗಿಯೂ ತಿಳಿಸಿದ್ದಾರೆ. ಇತ್ತ ಕಡೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತಲ್ಲಿ ಹೇಳುವುದು ಬೇಡ ಮಾಡಿತೋರಿಸಬೇಕೆಂದು, ತಮ್ಮ ಸ್ವಂತ ಹಣದಲ್ಲಿ ನೊಂದ ಕುಟುಂಬಗಳಿಗೆ ಧನ ಸಹಾಯ ಮಾಡಲು ಮುಂದಾಗಿದ್ದಾರೆ. ಈ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಇದನ್ನೂ ಓದಿ: ಬಿಗ್ ಬಾಸ್‌ಗೆ ಹೋಗ್ತಾರಾ ಅವಳಿ ಸಹೋದರಿಯರು?- ಸ್ಪಷ್ಟನೆ ನೀಡಿದ ಅದ್ವಿತಿ ಶೆಟ್ಟಿ

    ಗಲಭೆಯಿಂದಾಗಿ ಹಲವು ಅಂಗಡಿಗಳು ಸುಟ್ಟು ಕರಕಲಾಗಿದ್ದು, ಇದರಿಂದ ಮಾಲೀಕರ ಬದುಕು ಬೀದಿಗೆ ಬಂದಂತಾಗಿದೆ. ಹೀಗಾಗಿ ಸಚಿವ ಚಲುವರಾಯಸ್ವಾಮಿ ಗಲಭೆಯಾದ ಮಾರನೇ ದಿನವೇ ಹಾನಿಗೆ ಒಳಗಾದವರಿಗೆ ಸರ್ಕಾರದಿಂದ ಪರಿಹಾರ ನೀಡುವುದರ ಜೊತೆ ವೈಯಕ್ತಿಕವಾಗಿಯೂ ಪರಿಹಾರ ನೀಡುವ ಭರವಸೆ ನೀಡಿದ್ದರು. ಇತ್ತ ಘಟನೆಯಾದ ಒಂದು ದಿನದ ಬಳಿಕ ನಾಗಮಂಗಲಕ್ಕೆ ಭೇಟಿ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾನಿಗೊಳಗಾದ ಸ್ಥಳಗಳಿಗೆ ತೆರಳಿ ಬಳಿಕ ಸಂಬಂಧಪಟ್ಟವರಿಗೆ ತಮ್ಮ ಕೈಲಾದಷ್ಟು ಆರ್ಥಿಕ ಸಹಾಯ ಮಾಡಿದ್ದಾರೆ.

    ಇದೀಗ ಮತ್ತೆ ಹೆಚ್.ಡಿ ಕುಮಾರಸ್ವಾಮಿ ಎರಡನೇ ಬಾರಿಗೆ ಆರ್ಥಿಕ ಸಹಾಯ ಮಾಡಲು ಮುಂದಾಗಿದ್ದಾರೆ. ಇಂದು (ಸೆ.19) ಸಂಜೆ 5:30ಕ್ಕೆ ನಾಗಮಂಗಲದ ಬದ್ರಿಕೊಪ್ಪಲು ಗ್ರಾಮಕ್ಕೆ ಭೇಟಿ ನೀಡಲಿರುವ ಕುಮಾರಸ್ವಾಮಿ, ಆ ಗ್ರಾಮದಲ್ಲಿ ಗಲಭೆ ಸಂಬಂಧ ಜೈಲು ಸೇರಿರುವವರ ಹಾಗೂ ಪೊಲೀಸರಿಗೆ ಹೆದರಿ ಊರು ಬಿಟ್ಟಿರುವವರ ಕುಟುಂಬಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಆ ಕುಟುಂಬಸ್ಥರಿಗೆ ಆರ್ಥಿಕ ಸಹಾಯ ಮಾಡಿ ಧೈರ್ಯ ತುಂಬಲಿದ್ದಾರೆ. ಈ ಮೂಲಕ ನೊಂದ ಜನರ ಕಣ್ಣೀರು ಒರೆಸಲು ಹೆಚ್‌ಡಿಕೆ ಮುಂದಾಗಿದ್ದಾರೆ.ಇದನ್ನೂ ಓದಿ: 2040ಕ್ಕೆ ಮಾನವ ಸಹಿತ ಚಂದ್ರಯಾನ – 2,104 ಕೋಟಿ ಅನುದಾನಕ್ಕೆ ಕೇಂದ್ರ ಅಸ್ತು

    ಜಿಲ್ಲಾಡಳಿತ ಈಗಷ್ಟೇ ಹಾನಿಯಾಗಿರುವ ಪ್ರಮಾಣವನ್ನು ಅಂದಾಜಿಸಲಾಗಿದೆ. ಇನ್ನೂ ಸಚಿವ ಚೆಲುವರಾಯಸ್ವಾಮಿ ವೈಯಕ್ತಿಕ ಪರಿಹಾರವನ್ನು ನೀಡಿಲ್ಲ. ಈ ಮಧ್ಯೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪರಿಹಾರವನ್ನು ನೀಡುವ ಮೂಲಕ ರಾಜ್ಯ ಸರ್ಕಾರ ಹಾಗೂ ಸಚಿವ ಚಲುವರಾಯಸ್ವಾಮಿಯನ್ನು ಓವರ್ ಟೇಕ್ ಮಾಡುವ ಮೂಲಕ ಜನರ ಕಣ್ಣೀರು ಒರೆಸಲು ಮುಂದಾಗಿದ್ದಾರೆ.

  • ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತೆ ಎಂದಿದ್ದ ಚಲುವರಾಯಸ್ವಾಮಿ ವೀಡಿಯೋ ವೈರಲ್

    ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತೆ ಎಂದಿದ್ದ ಚಲುವರಾಯಸ್ವಾಮಿ ವೀಡಿಯೋ ವೈರಲ್

    ಮಂಡ್ಯ: ಶತಾಯ ಗತಾಯ ಮಂಡ್ಯದಲ್ಲಿ ಕುಮಾರಸ್ವಾಮಿ (HD Kumaraswamy) ಅವರನ್ನು ಮಣಿಸಬೇಕೆಂದು ತೊಡೆ ತಟ್ಟಿದ್ದ ಮಂಡ್ಯ ಕೈ ನಾಯಕರಿಗೆ ಇದೀಗ ತೀವ್ರ ಮುಖಭಂಗವಾಗಿದೆ. ಒಂದು ವೇಳೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (Star Chandru) ಸೋತರೆ ಮುಂದೆ ಕ್ಯಾಬಿನೆಟ್‌ನಲ್ಲಿ ಮಾತಾಡಲು ಆಗದೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕನಾಗಿ ಇರಬೇಕಾಗುತ್ತೆ ಎಂದು ಸಚಿವ ಚಲುವರಾಯಸ್ವಾಮಿ ಬಹಿರಂಗವಾಗಿ ಹೇಳಿದ್ದರು. ಇದೀಗ ಆ ಹೇಳಿಕೆಯನ್ನು‌ ಜೆಡಿಎಸ್ ಕಾರ್ಯಕರ್ತರು ಟ್ರೋಲ್ ಮಾಡಲು ಆರಂಭಿಸಿದ್ದಾರೆ.

    ಪ್ರತಿ ಚುನಾವಣೆಯಲ್ಲೂ ತಮ್ಮ ಅಭ್ಯರ್ಥಿ ಗೆಲುವಿನ ವಿಚಾರದಲ್ಲಿ ನಾಯಕರು ತಮ್ಮ ಮಾತಿನಲ್ಲೆ ಪಂದ್ಯವನ್ನು ಕಟ್ಟಿಕೊಳ್ಳುತ್ತಾರೆ.‌ ಅದೇ ರೀತಿ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಕದನದಲ್ಲೂ ಹಲವು ಪ್ರಸಂಗಗಳು ಜರುಗಿವೆ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿಯನ್ನು ಸೋಲಿಸಲೇಬೇಕೆಂದು ಸಚಿವ ಚಲುವರಾಯಸ್ವಾಮಿ ಹಾದಿಯಾಗಿ ಮಂಡ್ಯ ಜಿಲ್ಲೆಯ ಕೈ ನಾಯಕರು ಹಾಗೂ ಮುಖಂಡರು ತೊಡೆ ತಟ್ಟಿದ್ರು. ಇದಲ್ಲದೇ ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹಾಗೂ ಮಂಡ್ಯದ ಘಟಾನುಘಟಿ ನಾಯಕರು ಹೆಚ್‌ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಗೆಲ್ಲಿಸೋ ನಿಟ್ಟಿನಲ್ಲಿ ಸಚಿವ ಚಲುವರಾಯಸ್ವಾಮಿ ಹಾಗೂ ಮಂಡ್ಯ ಜಿಲ್ಲೆಯ ಕೈ ಶಾಸಕರು ಟೊಂಕಕಟ್ಟಿ ನಿಂತಿದ್ರು.‌ ಆದರೆ ಇದೀಗ ಮಂಡ್ಯದಲ್ಲಿ‌ ಹೆಚ್.ಡಿ.ಕುಮಾರಸ್ವಾಮಿ ಅವರು ಯಾರೂ ಊಹೆ ಮಾಡದ ರೀತಿಯಲ್ಲಿ 2,84,620 ಮತಗಳ‌ ಲೀಡ್ ತೆಗೆದುಕೊಂಡು ಅಭೂತಪೂರ್ವ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಕುಮಾರಸ್ವಾಮಿ ವಿರುದ್ಧ ತೊಡೆ ತಟ್ಟಿದ್ದ ಕೈ ನಾಯಕರಿಗೆ ತೀವ್ರ ಮುಖ ಭಂಗವಾಗಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ- ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಆಗ್ರಹ

    ವೈರಲ್‌ ಹೇಳಿಕೆಯಲ್ಲಿ ಏನಿದೆ..?: ನಾಗಮಂಗಲದಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಚಲುವರಾಯಸ್ವಾಮಿಯವರು (Chaluvarayaswamy) ಒಂದು‌ ವೇಳೆ ಸ್ಟಾರ್ ಚಂದ್ರು ಸೋತರೆ ನನಗೆ ಕೆಲಸ ಮಾಡಲು‌ ಮನಸ್ಸು ಬರಲ್ಲ. ನಾನು ಕ್ಯಾಬಿನೇಟ್‌ನಲ್ಲಿ ಟೇಬಲ್ ಕುಟ್ಟಿ ಮಾತಾಡೋಕೆ ಆಗಲ್ಲ, ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಶಾಸಕನಾಗಿ ಕೆಲಸ ಮಾಡಬೇಕಾಗುತ್ತದೆ. ಲೋಕಸಭಾ ಚುನಾವಣೆಯಲ್ಲಿ ಸ್ಟಾರ್ ಚಂದ್ರು ಸೋತರೆ ನಾನು ಅಳುವುದಿಲ್ಲ, ಬೇಜಾರ್ ಮಾಡಿಕೊಳ್ಳಲ್ಲ. ನಾನು ಯಾರ ಕೈಗೂ ಸಿಗಲ್ಲ ಎರಡು ತಿಂಗಳು ಯಾರ ಕೈಗೂ ಸಿಗದೇ ಪ್ರವಾಸಕ್ಕೆ ಹೋಗ್ತೀನಿ. ಬಳಿಕ ಫೋನ್ ನಂಬರ್ ಸ್ವೀಚ್ ಆಫ್ ಮಾಡಿಕೊಂಡು ರಾಜಕೀಯ ನಿವೃತ್ತಿ ಘೋಷಣೆ ಮಾಡಿ ನೆಮ್ಮದಿಯಾಗಿ ಇರಬೇಕಾಗುತ್ತೆ ಎಂಬ ಮಾತುಗಳನ್ನು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

    ಅಂದು ಚಲುವರಾಯಸ್ವಾಮಿ ಬಹಿರಂಗ ಸಮಾವೇಶದಲ್ಲಿ ಹೇಳಿದ್ದ ಮಾತನ್ನು ಇದೀಗ ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಕಾರ್ಯಕರ್ತರು ಹರಿಬಿಡುವ ಮೂಲಕ ಈಗ ಚಲುವರಾಯಸ್ವಾಮಿ ಏನ್ ಮಾಡ್ತಾರೆ ಎಂದು ಕೇಳ್ತಾ ಇದ್ದಾರೆ. ಇದಕ್ಕೆ ಚಲುವರಾಯಸ್ವಾಮಿ ಏನ್ ಕೌಂಟರ್ ಕೊಡ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

  • ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಬಂದ ಕಾರಣ ತಿಳಿಸಿದ ನಟ ದರ್ಶನ್

    ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಬಂದ ಕಾರಣ ತಿಳಿಸಿದ ನಟ ದರ್ಶನ್

    ದಾ ಅಮ್ಮ (ಸುಮಲತಾ ಅಂಬರೀಶ್) ನ ಪರವಾಗಿ ಇರುತ್ತೇನೆ ಎಂದು ಹೇಳುತ್ತಾ ಬಂದಿದ್ದ ನಟ ದರ್ಶನ್, ಏಕಾಏಕಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ ಇಳಿದಿದ್ದ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಸುಮಲತಾ ಅಂಬರೀಶ್ ಬಿಜೆಪಿ ಸೇರಿಕೊಂಡಿದ್ದರೂ, ದರ್ಶನ್ ಕಾಂಗ್ರೆಸ್ ಪರವಾಗಿ ಮತಯಾಚನೆ ಮಾಡಿದ್ದು ಅನುಮಾನಕ್ಕೆ ಕಾರಣವಾಗಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.

    ಇಂದು ಮಂಡ್ಯ ಲೋಕಸಭಾ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಪ್ರಚಾರದಲ್ಲಿ ಭಾಗಿಯಾಗಿದ್ದ ದರ್ಶನ್, ತಾನು ಚಂದ್ರು ಅವರ ಪರವಾಗಿ ಯಾಕೆ ಮತ ಪ್ರಚಾರ ಮಾಡುತ್ತಿದ್ದೇನೆ ಎನ್ನುವುದನ್ನು ಸ್ಪಷ್ಟ ಪಡಿಸಿದರು. ಈ ಹಿಂದೆ ಸುಮಲತಾ ಅಂಬರೀಶ್ ಅವರು ಪಕ್ಷೇತರರಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಸಚಿವ ಚೆಲುವರಾಯ ಸ್ವಾಮಿ ಅವರು ಸಾಕಷ್ಟು ಸಹಾಯ ಮಾಡಿದ್ದರಂತೆ. ಅದರ ಋಣ ತೀರಿಸಲು ಬಂದಿರುವುದಾಗಿ ಇಂದು ದರ್ಶನ್ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

    ತಾವು ಬಿಜೆಪಿಗೆ ಬಂದರೂ, ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ದರ್ಶನ್ ಪ್ರಚಾರ ಮಾಡುತ್ತಿರುವುದರ ಬಗ್ಗೆ ಸ್ವತಃ ಸುಮಲತಾ ಅಂಬರೀಶ್ ಅವರೇ ಸ್ಪಷ್ಟನೆ ನೀಡಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ‘ದರ್ಶನ್ ಯಾರ ಪರ ಪ್ರಚಾರ ಮಾಡಬೇಕು, ಮಾಡಬಾರದು ಎನ್ನುವುದನ್ನು ನಾನು ನಿರ್ಧರಿಸೋಕೆ ಆಗಲ್ಲ. ಅದು ಅವರ ವೈಯಕ್ತಿಕ’ ಎಂದು ಹೇಳುವ ಮೂಲಕ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದರು.

     

    ಸದ್ಯ ದರ್ಶನ್ ಮಂಡ್ಯ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚರಿಸಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಕೈಗೆ ಸರ್ಜರಿ ಆಗಿದ್ದರೂ, ಅದನ್ನು ಲೆಕ್ಕಿಸದೇ ಮತಯಾಚನೆ ಮಾಡುತ್ತಿದ್ದಾರೆ. ಜೊತೆಗೆ ಡಿ.ಕೆ ಸುರೇಶ್ ಪರವೂ ಪ್ರಚಾರಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ.

  • 15 ಪತ್ರ ಬರೆದರೂ ಕೇಂದ್ರ ಸರ್ಕಾರ ಬರ ಪರಿಹಾರಕ್ಕೆ ಹಣ ಬಿಡುಗಡೆ ಮಾಡುತ್ತಿಲ್ಲ- ಚೆಲುವರಾಯಸ್ವಾಮಿ

    15 ಪತ್ರ ಬರೆದರೂ ಕೇಂದ್ರ ಸರ್ಕಾರ ಬರ ಪರಿಹಾರಕ್ಕೆ ಹಣ ಬಿಡುಗಡೆ ಮಾಡುತ್ತಿಲ್ಲ- ಚೆಲುವರಾಯಸ್ವಾಮಿ

    ಬೆಂಗಳೂರು: ಕೇಂದ್ರ ಸರ್ಕಾರಕ್ಕೆ 15 ಪತ್ರ ಬರೆದರೂ ಬರ ಪರಿಹಾರಕ್ಕೆ ಇದೂವರೆಗೂ ಹಣ ಬಿಡುಗಡೆ ಮಾಡಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ (Cheluvarayaswamy) ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು.

    ವಿಧಾನ ಪರಿಷತ್ (Vidhan Parishad) ‌ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್‌ (JDS) ಶರವಣ ತೋಟಗಾರಿಕೆ ಬೆಲೆ ನಷ್ಟ ಮತ್ತು ಪರಿಹಾರದ ಬಗ್ಗೆ ಪ್ರಶ್ನೆ ಕೇಳಿದರು. ಇದನ್ನೂ ಓದಿ: ಕೇಂದ್ರ ಸರ್ಕಾರ ಪ್ರಚಾರಕ್ಕಾಗಿ ಭಾರತ್ ರೈಸ್ ಕೊಡ್ತಿದೆ – ಮುನಿಯಪ್ಪ ಕಿಡಿ

     

    ಇದಕ್ಕೆ ಉತ್ತರ ನೀಡಿದ ಚೆಲುವರಾಯಸ್ವಾಮಿ, ರಾಜ್ಯದಲ್ಲಿ ತೀವ್ರ ಬರಗಾಲದಿಂದ (Drought) 5,11,208 ಹೆಕ್ಟೇರ್ ತೋಟಗಾರಿಕೆ ಬೆಳೆ ನಷ್ಟವಾಗಿದೆ. ಕೇಂದ್ರಕ್ಕೆ ಪರಿಹಾರಕ್ಕಾಗಿ ಪತ್ರ ಬರೆದು 5 ತಿಂಗಳು ಆಗಿದೆ. ಈವರೆಗೂ ಕೇಂದ್ರ ಸರ್ಕಾರ (Union Government) ಪರಿಹಾರ ಹಣ ಬಿಡುಗಡೆ ಮಾಡಿಲ್ಲ. ಈವರೆಗೂ 15 ಪತ್ರ ಕೇಂದ್ರಕ್ಕೆ ಬರೆಯಲಾಗಿದೆ. ಸಿಎಂ ಅವರು ಪ್ರಧಾನಿ, ಅಮಿತ್ ಶಾ ಅವರಿಗೆ ಮನವಿ ಮಾಡಿದರೂ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸಚಿವ ಅಮಿತ್ ಶಾ ಸಭೆ ಮಾಡುತ್ತೇನೆ ಎಂದರೂ ಸಭೆ ಮಾಡಿಲ್ಲ. ಕೇಂದ್ರದ ಬರ ಅಧ್ಯಯನ ತಂಡವೇ ವರದಿ ಕೊಟ್ಟರೂ ಕೇಂದ್ರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಪರೀಕ್ಷೆ ವೇಳೆ ಲೋಡ್ ಶೆಡ್ಡಿಂಗ್ – ಸೋಲಾರ್ ಬೀದಿ ದೀಪದ ಕೆಳಗೆ ಓದುತ್ತಿದ್ದಾರೆ ವಿದ್ಯಾರ್ಥಿನಿಯರು

    ನಾವು ಗ್ಯಾರಂಟಿ ಯೋಜನೆಗಳಿಂದ ಹಣ ಇಲ್ಲ ಎಂದು ಎಲ್ಲೂ ಹೇಳಿಲ್ಲ.ಕೇಂದ್ರ ಸರ್ಕಾರ ಪರಿಹಾರ ಕೊಡದೇ ಹೋದರೂ ರಾಜ್ಯ ಸರ್ಕಾರ 2 ಸಾವಿರ ಪರಿಹಾರ ಹಣ ಕೊಡಲಾಗುತ್ತಿದೆ. ಇಲ್ಲಿಯವರೆಗೆ 30,24,795 ರೈತರಿಗೆ 573.28 ಕೋಟಿ ಪರಿಹಾರ ನೀಡಲಾಗಿದೆ. ಕೇಂದ್ರ ಸರ್ಕಾರದ ನಿರೀಕ್ಷೆಯಲ್ಲಿ ಇದ್ದೇವೆ.ಪರಿಹಾರ ಬಂದ ಕೂಡಲೇ ರೈತರಿಗೆ ಪರಿಹಾರ ಬಿಡುಗಡೆ ಮಾಡ್ತೀವಿ ಅಂತ ತಿಳಿಸಿದರು.

     

  • ಕುಮಾರಸ್ವಾಮಿ-ಅಶೋಕ್‌ರಿಂದ ಮಂಡ್ಯದಲ್ಲಿ ಬೆಂಕಿ ಹಚ್ಚಲು ಸಾಧ್ಯವಿಲ್ಲ: ಚೆಲುವರಾಯಸ್ವಾಮಿ

    ಕುಮಾರಸ್ವಾಮಿ-ಅಶೋಕ್‌ರಿಂದ ಮಂಡ್ಯದಲ್ಲಿ ಬೆಂಕಿ ಹಚ್ಚಲು ಸಾಧ್ಯವಿಲ್ಲ: ಚೆಲುವರಾಯಸ್ವಾಮಿ

    – ಸುಮಲತಾ ಬಿಜೆಪಿಯಿಂದ ಟಿಕೆಟ್‌ ಪಡೆಯೋಕೆ ಪರವಾಗಿ ಮಾತಾಡ್ತಿದ್ದಾರೆ ಎಂದ ಸಚಿವ

    ಬೆಂಗಳೂರು: ಬಿಜೆಪಿ-ಜೆಡಿಎಸ್‌ನವರು ಮಂಡ್ಯಕ್ಕೆ ಬೆಂಕಿ ಹಚ್ಚೋ ಪ್ರಯತ್ನ ಮಾಡ್ತಿದ್ದಾರೆ. ಆದರೆ ಮಂಡ್ಯದಲ್ಲಿ ಬೆಂಕಿ ಹಚ್ಚೋಕೆ ಸಾಧ್ಯವಿಲ್ಲ ಅಂತ ಸಚಿವ ಚೆಲುವರಾಯಸ್ವಾಮಿ (Chaluvaraya Swamy) ತಿರುಗೇಟು ನೀಡಿದ್ದಾರೆ.

    ಕೆರಗೋಡು ಹನುಮಧ್ವಜ ವಿವಾದ (Hanuman Flag Controversy) ಘಟನೆ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾವು ಹಿಂದೂ ವಿರೋಧಿ ಅಲ್ಲ, ಯಾವುದೇ ಧ್ವಜದ ವಿರೋಧಿಗಳೂ ಅಲ್ಲ. ಪಂಚಾಯತಿಯಲ್ಲಿ ರಾಷ್ಟ್ರ ಧ್ವಜ, ನಾಡ ಧ್ವಜಕ್ಕೆ ಅನುಮತಿ ಕೊಟ್ಟಿದ್ದರು, ಆದ್ರೆ ಬೇರೆ ಧ್ವಜ ಹಾರಿಸಿದ್ದಾರೆ. ಪಂಚಾಯತಿಯಲ್ಲಿ ನಿರ್ಣಯವನ್ನ ವಜಾ ಮಾಡಿದ್ದಾರೆ. ಜ.26ರಂದು ರಾಷ್ಟ್ರಧ್ವಜ ಹಾರಿಸಿ ಸಂಜೆ ಇಳಿಸಿದ್ದಾರೆ. ಮಂಡ್ಯದಲ್ಲಿ ಅನೇಕ ಜನರು ಶಾಂತಿ ಹಾಳುಮಾಡೋಕೆ ಬರೋದು ಬೇಡ, ಮಂಡ್ಯದ ನೆಮ್ಮದಿ ಹಾಳು ಮಾಡಬೇಡಿ ಅಂತ ಕೇಳಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಗ್ರಾಮದ ಮುಖಂಡರೊಂದಿಗೆ ಮಾತುಕತೆ ನಡೆಸಲು ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

    ಬಿಜೆಪಿ-ಜೆಡಿಎಸ್ ಅವರು ಜನರನ್ನ ಪ್ರವೋಕ್ ಮಾಡ್ತಿದ್ದಾರೆ. ಕುಮಾರಸ್ವಾಮಿ (HD Kumaraswamy) ಮತ್ತು ಅಶೋಕ್ (R Ashok) ತೀಟೆ ಮಾಡೋಕೆ ಹೋಗ್ತಿದ್ದಾರೆ. ಮಂಡ್ಯದಲ್ಲಿ ಇದು ನಡೆಯಲ್ಲ. ಬಂದ್ ಬೇಡ ಅಂತ ಜನರೇ ಮನವಿ ಮಾಡಿದ್ದಾರೆ. ಮಂಡ್ಯಕ್ಕೆ ಬೆಂಕಿ ಹಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ ಅಂತ ಕುಮಾರಸ್ವಾಮಿ, ಅಶೋಕ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೆರಗೋಡು ಹನುಮ ಧ್ವಜ ತೆರವಿಗೆ ಆಕ್ರೋಶ- ಮಂಡ್ಯದಲ್ಲಿ ಕಲ್ಲು ತೂರಾಟ, ಲಾಠಿಚಾರ್ಜ್

    ತಾಲೂಕು ಪಂಚಾಯ್ತಿ ಇಒ, ದಾಖಲಾತಿ ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ. ಗೊಂದಲಗಳು ಆದಾಗ EO ದಾಖಲಾತಿ ತೆಗೆದುಕೊಂಡು ಹೋಗಿದ್ದಾರೆ. ಅವರು ತಮ್ಮ ಕಚೇರಿಗೇ ದಾಖಲಾತಿ ಪುಸ್ತಕ ತೆಗೆದುಕೊಂಡು ಹೋಗಿದ್ದಾರೆ, ಮನೆಗೆ ತೆಗೆದುಕೊಂಡು ಹೋಗಿಲ್ಲ ಎಂದು ಸಿಟ್ಟಾಗಿ ಹಾರಿಕೆ ಉತ್ತರ ನೀಡಿದ್ದಾರೆ. ಇದನ್ನೂ ಓದಿ: ಜಾತಿ, ಧರ್ಮಗಳ ನಡುವೆ ಕಿತ್ತಾಟ ನಡೆಯುವಂತಹ ವಾತಾವರಣ ಸೃಷ್ಟಿಸಿರೋದು ಬೇಸರ: ಸುಮಲತಾ

    ಕೆರಗೋಡು ಘಟನೆ ಒಬ್ಬ ವ್ಯಕ್ತಿಯ ಪ್ರತಿಷ್ಠೆಗೆ ಆಗ್ತಿದೆ ಎಂಬ ಸಂಸದೆ ಸುಮಲತಾರ ಹೇಳಿಕೆ ವಿಚಾರಕ್ಕೆ ‌ಪ್ರತಿಕ್ರಿಯಿಸಿ, ಸುಮಲತಾ ಅವರು ಮಂಡ್ಯ ಜನರಿಗೆ ಸಲಹೆ ಮಾಡೋದು ಬೇಡ. ಬಿಜೆಪಿಯಿಂದ ಟಿಕೆಟ್ ಪಡೆಯೋಕೆ ಬಿಜೆಪಿ ಪರವಾಗಿ ಮಾತಾಡ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಕೆರಗೋಡಿನಲ್ಲಿ ತಾರಕಕ್ಕೇರಿದ ಹನುಮ ಧ್ವಜ ಸಂಘರ್ಷ- ಫೆ.9ಕ್ಕೆ ಮಂಡ್ಯ ಬಂದ್‍ಗೆ ಕರೆ

    ದೇವೇಗೌಡರಿಂದ ಬೆಳೆದು ದೇವೇಗೌಡರ ವಿರುದ್ಧ ಮಾತಾಡೋದು ಸರಿಯಲ್ಲ ಎಂಬ ಪುಟ್ಟರಾಜು ಹೇಳಿಕೆಗೆ ಉತ್ತರಿಸಿದ ಸಚಿವರು, ನನ್ನ ಇತಿಹಾಸವನ್ನ ಅವನು ಓದೋಕೆ ಹೇಳಿ ಮೊದಲು. ನಾನು ಹೇಗೆ ಬಂದೆ ಅಂತ ಅವನು ತಿಳಿದುಕೊಳ್ಳಲಿ. ಮಂಡ್ಯಕ್ಕೆ ದೇವೇಗೌಡರ ಕೊಡುಗೆ ಏನು? ದೇವೇಗೌಡರಿಗೆ ಮಂಡ್ಯದ ಕೊಡುಗೆ ಏನು? ಅಂತ ತಿಳಿದುಕೊಳ್ಳಲಿ ಎಂದು ಪುಟ್ಟರಾಜು ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

  • ರಾಜ್ಯ ಸರ್ಕಾರದ ಬರ ಪರಿಹಾರಕ್ಕೆ ಇನ್ನೆರಡು ದಿನಗಳಲ್ಲಿ ಮಾನದಂಡ ಬಿಡುಗಡೆ: ಚೆಲುವರಾಯಸ್ವಾಮಿ

    ರಾಜ್ಯ ಸರ್ಕಾರದ ಬರ ಪರಿಹಾರಕ್ಕೆ ಇನ್ನೆರಡು ದಿನಗಳಲ್ಲಿ ಮಾನದಂಡ ಬಿಡುಗಡೆ: ಚೆಲುವರಾಯಸ್ವಾಮಿ

    ಬೆಂಗಳೂರು/ಬೆಳಗಾವಿ: ರಾಜ್ಯ ಸರ್ಕಾರ ನೀಡಿರುವ 2 ಸಾವಿರ ರೂ. ಬರ ಪರಿಹಾರ (Drought Relief) ತಾತ್ಕಾಲಿಕ. ಇನ್ನೆರಡು ದಿನಗಳಲ್ಲಿ 2 ಸಾವಿರ ಪರಿಹಾರಕ್ಕೆ ಮಾರ್ಗಸೂಚಿ ಪ್ರಕಟ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ (Chaluvaraya Swamy) ತಿಳಿಸಿದ್ದಾರೆ.

    ವಿಧಾನ ಪರಿಷತ್ (VidhanaParishad) ಕಲಾಪ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಶರಣಗೌಡ ಬಯ್ಯಪುರ ಪರಿಹಾರದ ಬಗ್ಗೆ ಪ್ರಶ್ನೆ ಕೇಳಿದರು. ಪರಿಹಾರ ಪಡೆಯಲು ನಿಯಮ ಏನು? ಎಕರೆಗೆ ಪರಿಹಾರವೋ, ಕುಂಟೆಗೆ ಪರಿಹಾರವೋ ಅಂತ ಪ್ರಶ್ನೆ ಮಾಡಿದರು.

    ಇದಕ್ಕೆ ಉತ್ತರ ನೀಡಿದ ಸಚಿವ ಚೆಲುವರಾಯಸ್ವಾಮಿ, ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಸೆಪ್ಟೆಂಬರ್ 22ಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರ ಸರ್ಕಾರ ಈವರೆಗೂ ಪರಿಹಾರ ಬಿಡುಗಡೆ ಮಾಡಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ 2 ಸಾವಿರ ತಾತ್ಕಾಲಿಕ ಪರಿಹಾರ ರೈತರಿಗೆ ಘೋಷಣೆ ಮಾಡಲಾಗಿದೆ. 2 ಸಾವಿರಕ್ಕೆ ಮಾನದಂಡಗಳೇನು ಅಂತ ಇಂದು ಅಥವಾ ನಾಳೆ ಬಿಡುಗಡೆ ಮಾಡ್ತೀವಿ ಎಂದರು.

    ಎಷ್ಟು ಎಕರೆ, ಯಾರಿಗೆ ಪರಿಹಾರ? ಅನ್ನೋದರ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡ್ತೀವಿ. 1 ಹೆಕ್ಟೇರ್ ಗೆ 2 ಸಾವಿರ ಪರಿಹಾರ ಕೊಡ್ತೀವಿ. 10 ಗುಂಟೆಗೆ 10 ಗುಂಟೆ ಮಾನದಂಡದಲ್ಲಿ ಪರಿಹಾರ ಕೊಡ್ತೀವಿ. ಪರಿಹಾರಕ್ಕೆ ಮಾನದಂಡ ಬಿಡುಗಡೆ ಮಾಡ್ತೀವಿ ಅಂತ ತಿಳಿಸಿದರು. ಇದನ್ನೂ ಓದಿ: ಅರ್ಜುನನ ಸಾವಿನ ರಹಸ್ಯ ಬಿಚ್ಚಿಟ್ಟ ಮಾವುತನ ಬಾಮೈದಾ- ಮತ್ತೊಂದು ಆಡಿಯೋ ವೈರಲ್

  • ನನ್ನ ಕುಟುಂಬದ ಆಸ್ತಿ ತನಿಖೆ ಮಾಡಿಸಲಿ: ಚೆಲುವರಾಯಸ್ವಾಮಿಗೆ ಕುಮಾರಸ್ವಾಮಿ ಸವಾಲ್

    ನನ್ನ ಕುಟುಂಬದ ಆಸ್ತಿ ತನಿಖೆ ಮಾಡಿಸಲಿ: ಚೆಲುವರಾಯಸ್ವಾಮಿಗೆ ಕುಮಾರಸ್ವಾಮಿ ಸವಾಲ್

    ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಇದೆ. ನನ್ನ ಆಸ್ತಿಯನ್ನು (Property) ತನಿಖೆ (Investigation) ಮಾಡಿಸಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಹೆಸರು ಹೇಳದೆ ಪರೋಕ್ಷವಾಗಿ ಸಚಿವ ಚೆಲುವರಾಯಸ್ವಾಮಿಗೆ (N. Chaluvaraya Swamy) ಸವಾಲ್ ಹಾಕಿದ್ದಾರೆ.

    ಕುಮಾರಸ್ವಾಮಿ ಆಸ್ತಿ ತನಿಖೆ ಮಾಡಿಸಿ ಎಂಬ ಚೆಲುವರಾಯಸ್ವಾಮಿ ಹೇಳಿಕೆಗೆ ತಿರುಗೇಟು ಕೊಟ್ಟ ಅವರು, ನನ್ನ ಸ್ನೇಹಿತರೊಬ್ಬರು, ನನ್ನ ಆಸ್ತಿ ತನಿಖೆ ಮಾಡುವ ಭಯಕ್ಕೆ ಬಿಜೆಪಿ ಜೊತೆ ಹೋಗಿದ್ದಾರೆ ಎಂದು ಹೇಳಿದ್ದಾರೆ. ಈಗ ತನಿಖೆ ಮಾಡಿ ಎಂದು ಹೇಳುತ್ತಿದ್ದಾರೆ. ನಾನು ಈಗಲೂ ಸಿದ್ಧ. ನನ್ನ ಆಸ್ತಿ ತನಿಖೆ ಮಾಡಿಸಿ. ನಿಮ್ಮದೆ ಸರ್ಕಾರ ಇದೆ. ಸಿಎಂಗೆ ಹೇಳಿ ಯಾವ ತನಿಖೆ ಬೇಕೋ ಮಾಡಿಸಿ ಎಂದರು. ಇದನ್ನೂ ಓದಿ: ಐದು ಹೆಸರು ಎಂದರೆ ವರ್ಗ ಏನಯ್ಯ – ಮಗನ ವೈರಲ್ ವೀಡಿಯೋಗೆ ಸಿಎಂ ಪ್ರತಿಕ್ರಿಯೆ

    ನನ್ನ ಆಸ್ತಿ ತನಿಖೆ ಆಗಲಿ. ಅದರ ಜೊತೆ ಮಾಕಳಿ ಗ್ರಾಮದ ಮೂರೂವರೆ ಎಕರೆ ಕೆರೆ ಜಾಗ ಸರ್ವೆ ನಂಬರ್ 13 ಕೆರೆನೇ ಮಾಯ ಆಗಿದೆ. ಆ ಕೆರೆ ಜಾಗ ನಾನು ನುಂಗಿ ಹಾಕಿದ್ದೀನಾ? ಆ ಕೆರೆ ನುಂಗಿ ಹಾಕಿದ್ದು ಯಾರು? ಇದು ತನಿಖೆ ಆಗಲಿ ಅಂತ ಚೆಲುವರಾಯಸ್ವಾಮಿ ವಿರುದ್ಧ ಕುಮಾರಸ್ವಾಮಿ ಬಾಂಬ್ ಸಿಡಿಸಿದರು. ಇದನ್ನೂ ಓದಿ: ಮಾಜಿ ಎಂಎಲ್‌ಎ ರಾಜಕೀಯವಾಗಿ ಭಾಗಿಯಾಗೋದು ಅಪರಾಧವಲ್ಲ: ಯತೀಂದ್ರ ಪರ ಚಲುವರಾಯಸ್ವಾಮಿ ಬ್ಯಾಟಿಂಗ್

    1962ರಲ್ಲಿ ದೇವೇಗೌಡರು ರಾಜಕೀಯಕ್ಕೆ ಬಂದರು. ಒಬ್ಬರು ಕಾರ್ಪೋರೇಟರ್, ಜಿಲ್ಲಾ ಪಂಚಾಯತಿ ಸದಸ್ಯ ಮಾಡಿರೋ ಹಣ ನಾನು ಮಾಡಿಲ್ಲ. ನಾನು ಸಿನಿಮಾದಲ್ಲಿ ದುಡಿದು 45 ಎಕರೆ ಜಾಗ ತೆಗೆದುಕೊಂಡಿದ್ದೇನೆ. ನನ್ನ ಜೊತೆ 24 ಗಂಟೆ ಇದ್ದವರೇ ಇವರು. ಬಲಗೈನಲ್ಲಿ ತೆಗೆದುಕೊಂಡು ಎಡಗೈನಲ್ಲಿ ದಾನ ಮಾಡಿದ್ದೇನೆ. ರಾಜಕೀಯಕ್ಕೆ ನಾನು ಹಣ ಮಾಡಿಲ್ಲ. ಪಕ್ಷ ಉಳಿಸೋಕೆ ನಾನು ಮಾಡಿದ್ದೇನೆ. ನಾನು ಇವರ ರೀತಿ ದುಡ್ಡು ಮಾಡಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಡಿಕೆಶಿಯನ್ನು ಸಿಎಂ ಮಾಡ್ತೀವಿ ಅಂತ ಕುಮಾರಸ್ವಾಮಿ ಹೇಳಿದ್ದರೆ ನಾವು ಖಂಡಿತಾ ಬರುತ್ತಿದ್ದೆವು: ಎಸ್‌ಟಿಎಸ್

    ನಾನು 100% ಶುದ್ಧ ಇಲ್ಲ. ಇವತ್ತಿನ ರಾಜಕೀಯ ಅಧಿಕಾರ ದುಡ್ಡು ಇಲ್ಲದೆ ನಡೆಯಲ್ಲ. ಇದನ್ನು ಓಪನ್ ಆಗಿ ಹೇಳಿದ್ದೇನೆ. ಆದರೆ ಇವರ ರೀತಿ ಸರ್ಕಾರದ ಆದೇಶ ಮಾರಾಟಕ್ಕೆ ಇಟ್ಟಿಲ್ಲ. ಚುನಾವಣೆ ಬಂದಾಗ ನಾನು ಭಿಕ್ಷೆ ಬೇಡಿದ್ದೇನೆ. ಆದರೆ ನಾನು ಅಧಿಕಾರ ದುರ್ಬಳಕೆ ಮಾಡಿಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಲಂಚಕ್ಕೆ ಶಾಸಕರ ಪ್ರೋತ್ಸಾಹ? – ಶರಣು ಸಲಗರ್ ಆಡಿಯೋ ವೈರಲ್